Site icon Vistara News

Cancer Disease : ಆತಂಕಕಾರಿ ವರದಿ; ಕ್ಯಾನ್ಸರ್​​ ರಾಜಧಾನಿಯಾಗಿದೆ ಭಾರತ

Cancer Disease

ನವದೆಹಲಿ: ಕ್ಯಾನ್ಸರ್ ಮಾರಕ ರೋಗ ಲಕ್ಷಣವಾಗಿದ್ದು, ಸುಧಾರಿತ ಚಿಕಿತ್ಸಾ ವಿಧಾನಗಳ ಹೊರತಾಗಿಯೂ ಕ್ಯಾನ್ಸರ್ ಪೀಡಿತರು (Cancer Disease) ಹಾಗೂ ಅವರ ಅವಲಂಬಿತರ ಜೀವನ ದುಸ್ತರವಾಗುತ್ತದೆ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ. ಹೀಗಾಗಿ ಕ್ಯಾನ್ಸರ್​ ಕುರಿತು ದೊಡ್ಡ ಮಟ್ಟದ ಜಾಗೃತಿಗಳು ಭಾರತದಲ್ಲಿ ನಡೆಯುತ್ತಿವೆ. ಆದಾಗ್ಯೂ ಭಾರತದಲ್ಲಿ ಕ್ಯಾನ್ಸರ್​ಗಳ ಪತ್ತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದು ಎಷ್ಟರ ಮಟ್ಟಿಗೆ ಎಂದರೆ ಕ್ಯಾನ್ಸರ್ ಪತ್ತೆಯಾಗುವ ಪ್ರಮಾಣ ಅಪಾಯದ ಮಟ್ಟ ಮೀರಿದೆ. ಇತ್ತೀಚಿನ ವರದಿಯೊಂದರ ಪ್ರಕಾರ ಭಾರತ ಕ್ಯಾನ್ಸರ್​ನ ರಾಜಧಾನಿಯಾಗಿ ಪರಿವರ್ತನೆಗೊಂಡಿದೆ.

2024 ರ ವಿಶ್ವ ಆರೋಗ್ಯ ದಿನದಂದು ಬಿಡುಗಡೆಯಾದ ಅಪೊಲೊ ಆಸ್ಪತ್ರೆಗಳ ‘ಹೆಲ್ತ್ ಆಫ್ ನೇಷನ್’ ವರದಿಯ 4 ನೇ ಆವೃತ್ತಿಯು ಭಾರತವನ್ನು “ವಿಶ್ವದ ಕ್ಯಾನ್ಸರ್ ರಾಜಧಾನಿ” ಎಂದು ಕರೆದಿದೆ.

ವರದಿಯ ಪ್ರಕಾರ, ಮೂವರು ಭಾರತೀಯರಲ್ಲಿ ಒಬ್ಬರು ಪೂರ್ವ ಮಧುಮೇಹದಿಂದ ಬಳಲುತ್ತಿದ್ದಾರೆ, ಮೂವರಲ್ಲಿ ಇಬ್ಬರು ಪೂರ್ವ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. 10ರಲ್ಲಿ ಒಬ್ಬರು ಖಿನ್ನತೆಗೆ ಒಳಗಾಗಿದ್ದಾರೆ. ಕ್ಯಾನ್ಸರ್, ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯರಕ್ತನಾಳದ ಕಾಯಿಲೆಗಳು ಮತ್ತು ಮಾನಸಿಕ ಆರೋಗ್ಯ ಅಸ್ವಸ್ಥತೆಗಳು ನಿರ್ಣಾಯಕ ಮಟ್ಟ ತಲುಪಿದೆ. ಇದು ರಾಷ್ಟ್ರದ ಆರೋಗ್ಯದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ.

ಏರುತ್ತಿದೆ ಕ್ಯಾನ್ಸರ್​ ಪ್ರಮಾಣ

ಕ್ಯಾನ್ಸರ್ ಪ್ರಕರಣಗಳ ಉಲ್ಬಣವು ಭಾರತದಲ್ಲಿ ಮಿತಿಮೀರಿದೆ ಮತ್ತು “ವಿಶ್ವದ ಕ್ಯಾನ್ಸರ್ ರಾಜಧಾನಿ” ಎಂಬ ಬಿರುದು ಬರುವಂತೆ ಮಾಡಿದೆ ಎಂಬುದೇ ಆತಂಕಕಾರಿ. ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್ ಅಂಡಾಶಯದ ಕ್ಯಾನ್ಸರ್ ಭಾರತದಲ್ಲಿ ಪತ್ತೆಯಾಗುವ ಸಾಮಾನ್ಯ ಕ್ಯಾನ್ಸರ್. ಪುರುಷರಲ್ಲಿ, ಶ್ವಾಸಕೋಶದ ಕ್ಯಾನ್ಸರ್, ಬಾಯಿಯ ಕ್ಯಾನ್ಸರ್ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಿವೆ.

ಇತರ ದೇಶಗಳಿಗೆ ಹೋಲಿಸಿದರೆ, ಭಾರತದಲ್ಲಿ ಕ್ಯಾನ್ಸರ್ ವಕ್ಕರಿಸಿಕೊಳ್ಳುತ್ತದೆ. ಸ್ತನ ಕ್ಯಾನ್ಸರ್ ರೋಗನಿರ್ಣಯಕ್ಕೆ ಸರಾಸರಿ 52 ವರ್ಷ, ಶ್ವಾಸಕೋಶದ ಕ್ಯಾನ್ಸರ್​ಗೆ ಸರಾಸರಿ 54 ವರ್ಷವಾಗಿದೆ. ಆದರೆ, ಯುಎಸ್, ಯುಕೆ ಮತ್ತು ಚೀನಾದಲ್ಲಿ ರೋಗನಿರ್ಣಯದ ವಯಸ್ಸು 60 ಮತ್ತು 70 ವರ್ಸದ ಆಸುಪಾಸಿನಲ್ಲಿದೆ. ವರದಿಯ ಪ್ರಕಾರ, ಕ್ಯಾನ್ಸರ್ ವಿರುದ್ಧದ ಭಾರತದ ಹೋರಾಟದಲ್ಲಿ ಗಮನಾರ್ಹ ಅಡಚಣೆಯೆಂದರೆ ಅದರ ಅಸಮರ್ಪಕ ತಪಾಸಣೆ. ಇದು ಜಾಗತಿಕ ಮಾನದಂಡಗಳಿಗಿಂತ ಬಹಳ ಕಡಿಮೆಯಾಗಿದೆ.

ಇದನ್ನೂ ಓದಿ: Beef Samosa: ಗೋಮಾಂಸ ಬೆರೆತ ಸಮೋಸಾ ಮಾರಾಟ; 6 ಮಂದಿಯ ಬಂಧನ

ಕಾರಣವೇನು?

ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಸಾಮಾನ್ಯ ಜೀವಕೋಶಗಳು ಬಹು-ಹಂತದ ಪ್ರಕ್ರಿಯೆಯ ಮೂಲಕ ಗೆಡ್ಡೆಯ ಕೋಶಗಳಾಗಿ ರೂಪಾಂತರಗೊಳ್ಳುವುದರಿಂದ ಕ್ಯಾನ್ಸರ್ ಬೆಳೆಯುತ್ತದೆ. ಸಾಮಾನ್ಯವಾಗಿ ಕ್ಯಾನ್ಸರ್ ತನ್ನ ಪೂರ್ವ ಸ್ಥಿತಿಯಿಂದ ಮಾರಣಾಂತಿಕವಾಗಿ ಮುಂದುವರಿಯುತ್ತದೆ. ಈ ಬದಲಾವಣೆಗಳು ವ್ಯಕ್ತಿಯ ಆನುವಂಶಿಕ ರಚನೆ ಮತ್ತು ಬಾಹ್ಯ ಅಂಶಗಳಿಂದ ಉಂಟಾಗುತ್ತದೆ.

ತಡೆ ಹೇಗೆ?

ವರದಿಯ ಪ್ರಮುಖ ಅಂಶಗಳು ಇವು

ಕ್ರಮ ಅಗತ್ಯ


ವರದಿಯು ನಿಯಮಿತ ಆರೋಗ್ಯ ತಪಾಸಣೆಯ ಮಹತ್ವವನ್ನು ಎತ್ತಿ ತೋರಿಸಿದೆ. ರಕ್ತದೊತ್ತಡ ಮತ್ತು ಬಾಡಿ ಮಾಸ್ ಇಂಡೆಕ್ಸ್ ಮಟ್ಟಗಳ ಬಗ್ಗೆ ನಿಗಾ ಇಡುವ ಮೂಲಕ ಹೃದಯ ಸಂಬಂಧಿತ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಬೇಕು ಎಂದು ಹೇಳಿದೆ. ಆರೋಗ್ಯ ತಪಾಸಣೆಯ ಪ್ರಾಮುಖ್ಯತೆಯ ಬಗ್ಗೆ ಜಾಗೃತಿ ಹೆಚ್ಚಾಗಬೇಕು ಎಂದು ಹೇಳಿದೆ.

ಅಪೊಲೊ ಆಸ್ಪತ್ರೆಯ ಉಪಾಧ್ಯಕ್ಷೆ ಡಾ.ಪ್ರೀತಾ ರೆಡ್ಡಿ ಮಾತನಾಡಿ, ಆರೋಗ್ಯ ಪರಿಸರ ವ್ಯವಸ್ಥೆ ಗಾಗಿ ರಾಷ್ಟ್ರವು ಒಗ್ಗೂಡಬೇಕು ಮತ್ತು ಏಕೀಕೃತ ದೃಷ್ಟಿಕೋನ ಹೊಂದಿರಬೇಕು. ಇದರಿಂದ ನಾವು ಎನ್​ಸಿಡಿಗಳನ್ನು ನಿಜವಾದ ಅರ್ಥದಲ್ಲಿ ಎದುರಿಸಬಹುದು. ಕ್ಯಾನ್ಸರ್, ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಸ್ಥೂಲಕಾಯತೆಯ ಹೆಚ್ಚುತ್ತಿರುವ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು, ತಡೆಗಟ್ಟಲು ಮತ್ತು ಹಿಮ್ಮೆಟ್ಟಿಸಲು ತಕ್ಷಣದ ಕ್ರಮಗಳಾಗಬೇಕು ಎಂದು ಹೇಳಿದ್ದಾರೆ.

ಅಪೊಲೊ ಆಸ್ಪತ್ರೆಗಳ ಅಧ್ಯಕ್ಷ ಮತ್ತು ಸಿಇಒ ಡಾ.ಮಧು ಶಶಿಧರ್ ಮಾತನಾಡಿ. ಆರೋಗ್ಯ ರಕ್ಷಣೆಗಾಗಿ ರೋಗ ಪತ್ತೆ ಹೆಚ್ಚಬೇಕು. ರೋಗನಿರ್ಣಯದ ನಿಖರತೆ ಮತ್ತು ರೋಗಿ ಕೇಂದ್ರಿತ ಚಿಕಿತ್ಸಾ ವಿಧಾನಗಳನ್ನು ಹೆಚ್ಚಿಸಲು ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು ಎಂದು ಹೇಳಿದ್ದಾರೆ.

Exit mobile version