ದೆಹಲಿ ಲಿಕ್ಕರ್​ ಹಗರಣ: ತೆಲಂಗಾಣ ಸಿಎಂ ಕೆಸಿಆರ್​ ಪುತ್ರಿ ಕವಿತಾರನ್ನು ವಿಚಾರಣೆಗೆ ಒಳಪಡಿಸಿದ ಸಿಬಿಐ Vistara News

ದೇಶ

ದೆಹಲಿ ಲಿಕ್ಕರ್​ ಹಗರಣ: ತೆಲಂಗಾಣ ಸಿಎಂ ಕೆಸಿಆರ್​ ಪುತ್ರಿ ಕವಿತಾರನ್ನು ವಿಚಾರಣೆಗೆ ಒಳಪಡಿಸಿದ ಸಿಬಿಐ

ದೆಹಲಿ ಅಬಕಾರಿ ಅಕ್ರಮ ಪ್ರಕರಣದಡಿ ಕೆ. ಕವಿತಾರನ್ನು ಸಿಬಿಐ ಅಧಿಕಾರಿಗಳು ಇಂದು ವಿಚಾರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅವರ ಮನೆ ಬಳಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.

VISTARANEWS.COM


on

K kavitha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ದೆಹಲಿ ಅಬಕಾರಿ ನೀತಿ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದಡಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ ಪುತ್ರಿ, ವಿಧಾನ ಪರಿಷತ್​ ಸದಸ್ಯೆ ಕೆ.ಕವಿತಾ ಕಲ್ವಕುಂಟ್ಲ ಅವರನ್ನು ಇಂದು ಸಿಬಿಐ ವಿಚಾರಣೆಗೆ ಒಳಪಡಿಸಿದೆ. ತೆಲಂಗಾಣದ ಬಂಜಾರಾ ಹಿಲ್ಸ್​​ನಲ್ಲಿರುವ ಕವಿತಾ ಮನೆಯಲ್ಲೇ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದರು.

ದೆಹಲಿಯಲ್ಲಿ ನೂತನ ಅಬಕಾರಿ ನೀತಿ ಜಾರಿ ಮಾಡುವ ವೇಳೆ ಲೈಸೆನ್ಸ್​ ಕೊಡುವ ವಿಚಾರದಲ್ಲಿ ದೊಡ್ಡಮಟ್ಟದ ಹಗರಣ ಆಗಿದೆ. ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಸಿಬಿಐ ತನಿಖೆ ನಡೆಸುತ್ತಿದೆ. ಇ.ಡಿ.ಕೂಡ ದಾಳಿ ನಡೆಸಿ, ಹಲವರನ್ನು ವಿಚಾರಣೆಗೆ ಒಳಪಡಿಸಿದೆ. ದೆಹಲಿ ಅಬಕಾರಿ ನೀತಿ ಅಕ್ರಮದಲ್ಲಿ ಪ್ರಮುಖ ಆರೋಪಿ ಅಲ್ಲಿನ ಉಪಮುಖ್ಯಮಂತ್ರಿ, ಅಬಕಾರಿ ಇಲಾಖೆ ಉಸ್ತುವಾರಿ ಹೊತ್ತಿದ್ದ ಮನೀಶ್​ ಸಿಸೋಡಿಯಾ ಎಂದು ಸಿಬಿಐ ಎಫ್​ಐಆರ್​ನಲ್ಲಿ ದಾಖಲಿಸಿದೆ. ಸಿಸೋಡಿಯಾ ಆಪ್ತರು, ಕೆಲವು ಲಿಕ್ಕರ್ ಉದ್ಯಮಿಗಳು ಸೇರಿ ಇದುವರೆಗೆ ಆರು ಜನರನ್ನು ತನಿಖಾದಳಗಳು ಬಂಧಿಸಿವೆ. ಹೀಗೆ ಅಬಕಾರಿ ನೀತಿ ಅಕ್ರಮಕ್ಕೆ ಸಂಬಂಧಪಟ್ಟು ಹಲವರನ್ನು ವಿಚಾರಣೆಗೆ ಒಳಪಡಿಸಿದಾಗ, ಪ್ರಸ್ತುತ ಹಗರಣದಲ್ಲಿ ಕೆ.ಕವಿತಾ ಪಾತ್ರವೂ ಇದೆ ಎಂಬುದಕ್ಕೆ ಪೂರಕವಾದ ಅಂಶಗಳು ಬೆಳಕಿಗೆ ಬಂದಿದ್ದರಿಂದ ಅವರನ್ನೂ ವಿಚಾರಣೆ ನಡೆಸಲಾಗಿದೆ.

ಡಿಸೆಂಬರ್​ 3ರಂದು ಕವಿತಾ ಅವರಿಗೆ ಸಿಬಿಐ ಸಮನ್ಸ್ ನೀಡಿ, ಡಿ.6ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಕವಿತಾ ತಾವು ಹೈದರಾಬಾದ್​​ನಲ್ಲಿರುವ ತಮ್ಮ ಮನೆಯಲ್ಲೇ ವಿಚಾರಣೆಗೆ ಒಳಪಡುವುದಾಗಿ ಹೇಳಿದ್ದರು. ಹಾಗೇ, 6ನೇ ತಾರೀಖಿನಂದೇ ಹಾಜರಾಗುತ್ತೇನೆ ಎಂದೂ ಒಪ್ಪಿಕೊಂಡಿದ್ದರು. ಆದರೆ ನಂತರ ಸಿಬಿಐಗೆ ಇ-ಮೇಲ್​ ಮಾಡಿದ್ದ ಕವಿತಾ, ‘ಡಿ.6ರಂದು ವಿಚಾರಣೆಗೆ ಲಭ್ಯವಿರಲು ಸಾಧ್ಯವಾಗುತ್ತಿಲ್ಲ. ನಾನು ಡಿ. 11, 12, 14 ಮತ್ತು 15ರಂದು ಹೈದರಾಬಾದ್​​ನ ನನ್ನ ನಿವಾಸದಲ್ಲಿಯೇ ಇರುತ್ತೇನೆ. ಆಗ ವಿಚಾರಣೆ ನಡೆಸಿ’ ಎಂದು ಮನವಿ ಮಾಡಿದ್ದರು. ಹೀಗಾಗಿ ಸಿಬಿಐ ಇಂದು ವಿಚಾರಣೆ ಕೈಗೆತ್ತಿಕೊಂಡಿದೆ.

ಕವಿತಾ ಮನೆ ಎದುರು ಬಿಗಿ ಭದ್ರತೆ
ದೆಹಲಿ ಅಬಕಾರಿ ಅಕ್ರಮ ಪ್ರಕರಣದಡಿ ಕೆ. ಕವಿತಾರನ್ನು ಸಿಬಿಐ ಅಧಿಕಾರಿಗಳು ಇಂದು ವಿಚಾರಣೆ ನಡೆಸುತ್ತಿರುವ ವಿಷಯ ಗೊತ್ತಾಗುತ್ತಿದ್ದಂತೆ, ಅವರ ಬೆಂಬಲಿಗರು, ಪಕ್ಷದ ಕಾರ್ಯಕರ್ತರೆಲ್ಲ ಸೇರಿ ದೊಡ್ಡದೊಡ್ಡ ಪೋಸ್ಟರ್​ಗಳನ್ನು ಹಾಕಿದ್ದರು. ‘ಹೋರಾಟಗಾರನ ಪುತ್ರಿ ಇದಕ್ಕೆಲ್ಲ ಹೆದರುವುದಿಲ್ಲ’, ‘ನಾವೆಲ್ಲರೂ ಕವಿತಕ್ಕಾರೊಂದಿಗೆ ಇದ್ದೇವೆ’ ಎಂಬ ಸಾಲುಗಳನ್ನು ಪೋಸ್ಟರ್​ಗಳ ಮೇಲೆ ಬರೆಯಲಾಗಿದೆ. ಹಾಗೇ, ಕೆ. ಕವಿತಾ ಮನೆಯ ಬಳಿ ಬಿಗಿ ಭದ್ರತೆಯನ್ನೂ ಕಲ್ಪಿಸಲಾಗಿದೆ. ಈ ಮಧ್ಯೆ ಕವಿತಾ ಅವರೂ ತಮ್ಮ ಬೆಂಬಲಿಗರಲ್ಲಿ ಮನವಿ ಮಾಡಿ ‘ನಾನು ವಿಚಾರಣೆಗೆ ಸಂಪೂರ್ಣವಾಗಿ ಸಹಕರಿಸುತ್ತೇನೆ. ಈ ವೇಳೆ ನನ್ನ ಮನೆ ಬಳಿ ಯಾರೂ ಬಂದು ಗುಂಪುಗೂಡಬೇಡಿ’ ಎಂದು ಹೇಳಿದ್ದರು.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಕೆ.ಕವಿತಾ ಇಡಿ ಕಣ್ಗಾವಲಿನಲ್ಲಿಯೂ ಇದ್ದಾರೆ. ಮುಖ್ಯ ಆರೋಪಿ ಎನ್ನಿಸಿರುವ ಮನೀಶ್​ ಸಿಸೋಡಿಯಾ ಮತ್ತು ಕವಿತಾ ಮಧ್ಯೆ ಹಲವು ಬಾರಿ ದೂರವಾಣಿ ಮಾತುಕತೆ ನಡೆದಿರುವ ವಿಷಯ ಇಡಿ ತನಿಖೆ ವೇಳೆ ಗೊತ್ತಾಗಿದೆ. ಹೀಗಾಗಿ ತನಿಖಾ ದಳಗಳು ಕೆಸಿಆರ್​ ಪುತ್ರಿಯನ್ನೂ ತನಿಖೆಗೆ ಗುರಿಮಾಡುತ್ತಿವೆ.

ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ ಅಕ್ರಮ ಪ್ರಕರಣ; ತೆಲಂಗಾಣ ಮುಖ್ಯಮಂತ್ರಿ ಪುತ್ರಿ ಕೆ.ಕವಿತಾರಿಗೆ ಸಿಬಿಐ ಸಮನ್ಸ್​​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

Live News

Election Results 2023 Live: ಕೆಲವೇ ಕ್ಷಣಗಳಲ್ಲಿ 4 ರಾಜ್ಯಗಳ ಚುನಾವಣೆ ಫಲಿತಾಂಶ; ಇಲ್ಲಿದೆ ಕ್ಷಣಕ್ಷಣದ ಅಪ್‌ಡೇಟ್ಸ್

Election Results 2023 Live: ಕೆಲವೇ ಗಂಟೆಗಳಲ್ಲಿ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಲೋಕಸಭೆ ಚುನಾವಣೆಗೆ ಈ ರಾಜ್ಯಗಳ ಫಲಿತಾಂಶವು ಮುನ್ನುಡಿ ಎಂದೇ ಹೇಳಲಾಗುತ್ತಿದೆ. ಹಾಗಾಗಿ, ಎಲ್ಲರ ಗಮನವೀಗ ಫಲಿತಾಂಶದ ಮೇಲಿದೆ.

VISTARANEWS.COM


on

Assembly Election Results 2023
Koo

ನವದೆಹಲಿ: ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ರಾಜಸ್ಥಾನದಲ್ಲಿ ಚುನಾವಣೆ ಫಲಿತಾಂಶದ (Assembly Elections 2023) ಕಾವು ಜಾಸ್ತಿಯಾಗಿದೆ. ನಾಲ್ಕೂ ರಾಜ್ಯಗಳಲ್ಲಿ ಮತ ಎಣಿಕೆಗೆ ಚುನಾವಣೆ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ರಾಜ್ಯಗಳಲ್ಲಿ ಅಧಿಕಾರದ ಗದ್ದುಗೆ ಏರಲು ಇದುವರೆಗೆ ಹತ್ತಾರು ಕಸರತ್ತು ನಡೆಸಿದ್ದ ಪಕ್ಷಗಳ ಅಭ್ಯರ್ಥಿಗಳು, ನಾಯಕರು, ಸಾರ್ವಜನಿಕರು ಕೂಡ ಫಲಿತಾಂಶದತ್ತ ಚಿತ್ತ ಹರಿಸಿದ್ದಾರೆ. ಲೋಕಸಭೆ ಚುನಾವಣೆ ದೃಷ್ಟಿಯಿಂದಲೂ ಫಲಿತಾಂಶ ಪ್ರಾಮುಖ್ಯ ಪಡೆದಿದೆ. ನಾಲ್ಕೂ ರಾಜ್ಯಗಳ ಚುನಾವಣೆ ಫಲಿತಾಂಶದ ಕ್ಷಣಕ್ಷಣದ ಮಾಹಿತಿ (Election Results 2023 Live) ಇಲ್ಲಿ ಲಭ್ಯವಾಗಲಿದೆ.

Continue Reading

ಕಿರುತೆರೆ/ಒಟಿಟಿ

Kapil Sharma: 6 ವರ್ಷದ ಮುನಿಸು ಮರೆತು ಒಂದಾದ ಕಪಿಲ್‌ ಶರ್ಮಾ, ಸುನಿಲ್‌ ಗ್ರೋವರ್;‌ ಬರ್ತಿದೆ ಶೋ!

Kapil Sharma: ಆರು ವರ್ಷಗಳ ಹಿಂದೆ ಕಪಿಲ್‌ ಶರ್ಮಾ ಹಾಗೂ ಸುನಿಲ್‌ ಗ್ರೋವರ್‌ ಜಗಳವಾಡಿಕೊಂಡಿದ್ದರು. ಇದಾದ ಬಳಿಕ ಸುನಿಲ್‌ ಗ್ರೋವರ್‌ ಅವರು ಕಪಿಲ್‌ ಶರ್ಮಾ ಶೋನಿಂದ ದೂರ ಉಳಿದಿದ್ದರು. ಈಗ ಜೋಡಿ ಒಂದಾಗಿದೆ.

VISTARANEWS.COM


on

Kapil Sharma And Sunil Grover
Koo

ಮುಂಬೈ: ಹಾಸ್ಯ, ಮನರಂಜನೆಯ ರಸದೌತಣ ನೀಡುವ ದಿ ಕಪಿಲ್‌ ಶರ್ಮಾ ಶೋ (The Kapil Sharma Show) ಮೂಲಕ ದೇಶದ ಮನೆಮಾತಾಗಿರುವ ಕಪಿಲ್‌ ಶರ್ಮಾ (Kapil Sharma) ಹಾಗೂ ಸುನಿಲ್‌ ಗ್ರೋವರ್‌ (Sunil Grover) ಮತ್ತೆ ಒಂದಾಗಿದ್ದಾರೆ. ಹೌದು, ಆರು ವರ್ಷದ ಮುನಿಸು, ವದಂತಿ, ಸ್ಪಷ್ಟನೆ ಬಳಿಕ ಇಬ್ಬರೂ ಒಂದಾಗಿದ್ದಾರೆ. ನೆಟ್‌ಫ್ಲಿಕ್ಸ್‌ ಕಾಮಿಡಿ ಶೋ (Netflix Show) ಪ್ರೋಮೊ ಬಿಡುಗಡೆ ಮಾಡಿರುವ ಕಪಿಲ್‌ ಶರ್ಮಾ, ಸುನಿಲ್‌ ಗ್ರೋವರ್‌ ಜತೆ ಕಾಣಿಸಿಕೊಂಡಿದ್ದಾರೆ. ಆ ಮೂಲಕ ಆರು ವರ್ಷದ ಬಳಿಕ ಇಬ್ಬರು ಹಾಸ್ಯ ಕಲಾವಿದರು ಮುನಿಸು ಮರೆತು ಒಂದಾದಂತಾಗಿದೆ.

ಪ್ರೋಮೊದಲ್ಲಿ ಮೊದಲು ಕಪಿಲ್‌ ಶರ್ಮಾ ಕಾಣಿಸಿಕೊಂಡಿದ್ದಾರೆ. “ಹಾಯ್‌ ಗೆಳೆಯರೆ, ನಾನು ಕಪಿಲ್‌ ಶರ್ಮಾ. ಶೀಘ್ರದಲ್ಲೇ ಹೊಸ ಶೋ ಹೊತ್ತು ನಿಮ್ಮೆದುರು ಬರುತ್ತೇನೆ” ಎಂದು ಕಪಿಲ್‌ ಶರ್ಮಾ ಹೇಳುತ್ತಾರೆ. ಆಗ ಸುನಿಲ್‌ ಗ್ರೋವರ್‌, “ನಾನು ಕೂಡ ನೆಟ್‌ಫ್ಲಿಕ್ಸ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ” ಎಂದಿದ್ದಾರೆ. ಆಗ ಕಪಿಲ್‌ ಶರ್ಮಾ, “ಸರಿ ಹಾಗಾದರೆ, ಇಬ್ಬರೂ ಬರೋಣ, 190ಕ್ಕೂ ಅಧಿಕ ದೇಶಗಳಿಗೆ ಬರೋಣ” ಎಂದಿದ್ದಾರೆ. ಹಾಗೆಯೇ ಇಬ್ಬರ ನಡುವಿನ ಸಂಭಾಷಣೆ ಮುಂದುವರಿಯುತ್ತದೆ.

ಇದೇ ವೇಳೆ ವಿಡಿಯೊ ಫ್ರೇಮ್‌ನಲ್ಲಿ ಹಾಸ್ಯ ಕಲಾವಿದರಾದ ರಾಜೀವ್‌, ಕಿಕು, ಕೃಷ್ಣಾ ಹಾಗೂ ನಟಿ ಅರ್ಚನಾ ಪೂರನ್‌ ಸಿಂಗ್‌ ಅವರು ಕೂಡ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ, ಕಾಮಿಡಿ ನೈಟ್ಸ್‌ ವಿತ್‌ ಕಪಿಲ್‌, ದಿ ಕಪಿಲ್‌ ಶರ್ಮಾ ಶೋ ಮೂಲಕವೇ ದೇಶದ ಮನೆಮಾತಾಗಿರುವ ಕಲಾವಿದರು ನೆಟ್‌ಫ್ಲಿಕ್ಸ್‌ ಶೋನಲ್ಲಿ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ, ಕಪಿಲ್‌ ಶರ್ಮಾ ಹಾಗೂ ಸುನಿಲ್‌ ಗ್ರೋವರ್‌ ಅವರು ಒಂದಾಗಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ದಿ ಕಪಿಲ್‌ ಶರ್ಮಾ ಶೋನಲ್ಲಿ ಸುನೀಲ್‌ ಗ್ರೋವರ್‌ ಅವರು ಮಾಡುತ್ತಿದ್ದ “ಡಾ ಮಶೂರ್‌ ಗುಲಾಟಿ” ಪಾತ್ರವು ಮನೆಮಾತಾಗಿತ್ತು.

ಇದನ್ನೂ ಓದಿ: ನಾರಾಯಣಮೂರ್ತಿ ಬಸ್‌ ಕಂಡಕ್ಟರ್ ಹೈ ಕ್ಯಾ?‌ ಭೇಟಿ ಕುರಿತು ಕಪಿಲ್‌ ಶರ್ಮಾ ಶೋನಲ್ಲಿ ಸುಧಾಮೂರ್ತಿ ಹೇಳಿದ್ದೇನು?

ಇಬ್ಬರ ಮಧ್ಯೆ ಏಕೆ ಜಗಳ?

ಕಪಿಲ್‌ ಶರ್ಮಾ ಹಾಗೂ ಸುನಿಲ್‌ ಗ್ರೋವರ್‌ ಅವರ ಮಧ್ಯೆ 2017ರಲ್ಲಿ ಭಿನ್ನಾಭಿಪ್ರಾಯ ಮೂಡಿತ್ತು. ಆಸ್ಟ್ರೇಲಿಯಾದಲ್ಲಿ ಶೋ ಮುಗಿಸಿ, ಮುಂಬೈಗೆ ಆಗಮಿಸುವಾಗ ವಿಮಾನದಲ್ಲಿಯೇ ಕಪಿಲ್‌ ಶರ್ಮಾ ಅವರು ಸುನಿಲ್‌ ಗ್ರೋವರ್‌ ಅವರಿಗೆ ಬೈದಿದ್ದರು. ಇದಾದ ಬಳಿಕ ಇಬ್ಬರೂ ವಾಗ್ವಾದ ನಡೆಸಿದ್ದರು ಎಂಬ ಮಾತುಗಳು ಕೇಳಿಬಂದಿದ್ದವು. ನಂತರ ಸುನಿಲ್‌ ಗ್ರೋವರ್‌ ಅವರು ದಿ ಕಪಿಲ್‌ ಶರ್ಮಾ ಶೋ ತೊರೆದಿದ್ದರು. ಜಗಳದ ಕುರಿತು ಸ್ಪಷ್ಟನೆ ನೀಡಿದ್ದ ಕಪಿಲ್‌ ಶರ್ಮಾ, “ನಾನು ಎಂದಿಗೂ ಸುನಿಲ್‌ ಗ್ರೋವರ್‌ ಜತೆ ಜಗಳ ಆಡಿಲ್ಲ, ಬೈದಿಲ್ಲ. ನಾನು ಅದ್ಭುತ ವ್ಯಕ್ತಿಗಳ ಜತೆ ಕೆಲಸ ಮಾಡಲು ಬಯಸುತ್ತೇನೆ. ಅವರಲ್ಲಿ ಸುನಿಲ್‌ ಗ್ರೋವರ್‌ ಕೂಡ ಒಬ್ಬರು” ಎಂದು ಹೇಳಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಆರೋಗ್ಯ

Heart Attack: ಹೃದಯಾಘಾತಕ್ಕೆ 6 ತಿಂಗಳಲ್ಲಿ 1,052 ಜನ ಬಲಿ; 80% ಮಂದಿ 11-25 ವರ್ಷದವರೇ!

Heart Attack: ಗುಜರಾತ್‌ನಲ್ಲಿ ಕಳೆದ ಆರು ತಿಂಗಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲೂ, ಹೃದಯಾಘಾತಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕರೇ ಬಲಿಯಾಗುತ್ತಿರುವುದು ಆತಂಕ ಹೆಚ್ಚಿಸಿದೆ.

VISTARANEWS.COM


on

Heart Attack
Koo

ಗಾಂಧಿನಗರ: ದೇಶದಲ್ಲಿ ಕೊರೊನಾ ಬಿಕ್ಕಟ್ಟಿನ ನಂತರದಲ್ಲಿ ಹೃದಯಾಘಾತ ಪ್ರಕರಣಗಳ (Heart Attack) ಸಂಖ್ಯೆ ಗಣನೀಯವಾಗಿ ಜಾಸ್ತಿಯಾಗಿದೆ. ಅದರಲ್ಲೂ, ಯುವಕರೇ ಹೆಚ್ಚು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾದವರು, ಐಸಿಯುನಲ್ಲಿ ಚಿಕಿತ್ಸೆ ಪಡೆದವರಿಗೇ ಹೆಚ್ಚಿನ ಪ್ರಮಾಣದಲ್ಲಿ ಹೃದಯಾಘಾತ ಆಗುತ್ತಿದೆ ಎಂದು ವರದಿಗಳು ತಿಳಿಸಿವೆ. ಇನ್ನು, ಹೃದಯಾಘಾತ ಹೆಚ್ಚಾಗಲು ಕೊರೊನಾ ನಿರೋಧಕ ಲಸಿಕೆಯೇ ಕಾರಣ ಎನ್ನಲಾಗುತ್ತಿದೆ. ಇದರ ಬೆನ್ನಲ್ಲೇ, ಕಳೆದ ಆರು ತಿಂಗಳಲ್ಲಿ ಗುಜರಾತ್‌ನಲ್ಲಿ ಹೃದಯಾಘಾತದಿಂದ 1,052 ಜನ ಮೃತಪಟ್ಟಿದ್ದಾರೆ ಎಂದು ಸರ್ಕಾರವೇ ತಿಳಿಸಿದೆ. ಇದರಿಂದಾಗಿ ರಾಜ್ಯಾದ್ಯಂತ ಆತಂಕ ಮನೆಮಾಡಿದೆ.

“ಕಳೆದ ಆರು ತಿಂಗಳಲ್ಲಿ ಹೃದಯಾಘಾತದಿಂದ 1,052 ಜನ ಮೃತಪಟ್ಟಿದ್ದಾರೆ. ಇವರಲ್ಲಿ ಶೇ.80ರಷ್ಟು ಮಂದಿ 11-25 ವರ್ಷದವರೇ ಆಗಿದ್ದಾರೆ. ಇದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ಹಾಗಾಗಿ, ಎರಡು ಲಕ್ಷ ಶಾಲಾ ಶಿಕ್ಷಕರು ಹಾಗೂ ಕಾಲೇಜುಗಳ ಪ್ರೊಫೆಸರ್‌ಗಳಿಗೆ ಹೃದಯಾಘಾತ ಉಂಟಾದಾಗ ತಕ್ಷಣೆ ಮಾಡುವ ಕಾರ್ಡಿಯೋಪಲ್ಮನರಿ ರಿಸಸಿಟೇಷನ್‌ (CPR) ಪ್ರಕ್ರಿಯೆಯ ಕುರಿತು ತರಬೇತಿ ನೀಡಲಾಗಿದೆ” ಎಂದು ರಾಜ್ಯ ಶಿಕ್ಷಣ ಸಚಿವ ಕುಬೇರ್‌ ದಿಂಡೋರ್‌ ಮಾಹಿತಿ ನೀಡಿದ್ದಾರೆ.

Heart Attack

“ಯುವಕರು, ಅದರಲ್ಲೂ ಶಾಲೆ, ಕಾಲೇಜುಗಳ ಯುವಕರಿಗೆ ಹೃದಯಾಘಾತ ಉಂಟಾಗಿದೆ. ಕ್ರಿಕೆಟ್‌ ಆಡುವಾಗ, ಗರ್ಬಾ ಸಾಂಪ್ರದಾಯಿಕ ನೃತ್ಯ ಮಾಡುವಾಗ ಹೆಚ್ಚಿನ ಜನರಿಗೆ ಹೃದಯಾಘಾತ ಉಂಟಾಗಿದೆ. ಆರು ತಿಂಗಳಲ್ಲಿ ನಿತ್ಯ ಸರಾಸರಿ 173 ಜನ ಹೃದಯಾಘಾತ ಉಂಟಾಗಿ ಆಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ. ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಜನರಿಗೆ ಅನುಕೂಲವಾಗುವ, ಹೃದಯಾಘಾತ ಪ್ರಕರಣಗಳನ್ನು ತಡೆಯಲು ಹತ್ತಾರು ಕ್ರಮ ತೆಗೆದುಕೊಳ್ಳಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Cholesterol: ಕೊಲೆಸ್ಟೆರಾಲ್‌ ನಿಜಕ್ಕೂ ಕೆಟ್ಟದ್ದೇ? ಇದಕ್ಕೂ ಹೃದಯಾಘಾತಕ್ಕೂ ನೇರಾನೇರ ಸಂಬಂಧ ಇದೆಯೇ?

ಕಠಿಣ ಕೆಲಸ ಮಾಡದಂತೆ ಕೇಂದ್ರ ಸೂಚನೆ

“ಕೊರೊನಾ ಸೋಂಕು ತಗುಲಿ, ಐಸಿಯುನಲ್ಲಿ ಚಿಕಿತ್ಸೆ ಪಡೆಯುವುದು ಸೇರಿ ಆರೋಗ್ಯ ಸ್ಥಿತಿ ಗಂಭೀರವಾಗಿ, ಬದುಕಿ ಬಂದವರು ಯಾವುದೇ ಕಾರಣಕ್ಕೂ ಹೆಚ್ಚು ಕೆಲಸ ಮಾಡಬಾರದು. ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ICMR) ಅಧ್ಯಯನ ವರದಿ ಪ್ರಕಾರ, ಹೃದಯಾಘಾತದ ಭೀತಿ ಇರುವ ಕಾರಣ ಒಂದಷ್ಟು ಸಮಯದವರೆಗೆ ಕೊರೊನಾ ಸೋಂಕಿತರು ಹೆಚ್ಚು ಸಮಯದವರೆಗೆ ಅಥವಾ ಹೆಚ್ಚು ಭಾರ ಹೊರುವ ಕೆಲಸ ಮಾಡಬಾರದು. ಒಂದು ವರ್ಷ ಅಥವಾ ಎರಡು ವರ್ಷಗಳವರೆಗೆ ಇಂತಹ ವ್ಯಕ್ತಿಗಳು ಅತಿಯಾದ ವ್ಯಾಯಾಮ, ಜಿಮ್‌ನಲ್ಲಿ ವರ್ಕೌಟ್‌ ಕೂಡ ಮಾಡಬಾರದು” ಎಂದು ಅಧ್ಯಯನ ವರದಿ ಉಲ್ಲೇಖಿಸಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಂಡಾವೀಯ ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

BY Vijayendra: ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿ ನಡ್ಡಾ ಭೇಟಿಯಾದ ವಿಜಯೇಂದ್ರ; ಏನೇನು ಚರ್ಚೆ?

BY Vijayendra: ಜೆ.ಪಿ. ನಡ್ಡಾ ಅವರ ಜನ್ಮದಿನದಂದೇ ಬಿ.ವೈ. ವಿಜಯೇಂದ್ರ ಅವರು ಭೇಟಿಯಾಗಿದ್ದಾರೆ. ಇದೇ ವೇಳೆ ಅವರು ಜೆ.ಪಿ. ನಡ್ಡಾ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದರು.

VISTARANEWS.COM


on

JP Nadda And BY Vijayendra
Koo

ನವದೆಹಲಿ/ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಬಿ.ವೈ.ವಿಜಯೇಂದ್ರ (BY Vijayendra) ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (JP Nadda) ಅವರನ್ನು ಭೇಟಿಯಾಗಿದ್ದಾರೆ. ಅದರಲ್ಲೂ, ಜೆ.ಪಿ. ನಡ್ಡಾ ಅವರ ಜನ್ಮದಿನದಂದೇ ಬಿ.ವೈ. ವಿಜಯೇಂದ್ರ ಅವರು ಭೇಟಿಯಾಗಿದ್ದು, ಇದೇ ವೇಳೆ ರಾಜ್ಯದ ಹಲವು ವಿಚಾರಗಳ ಕುರಿತು ಚರ್ಚಿಸಲಾಗಿದೆ. ಹಾಗೆಯೇ, ನಡ್ಡಾ ಅವರಿಗೆ ವಿಜಯೇಂದ್ರ ಅವರು ಜನ್ಮದಿನದ ಶುಭಾಶಯಗಳನ್ನೂ ತಿಳಿಸಿದ್ದಾರೆ.

ಜೆ.ಪಿ. ನಡ್ಡಾ ಅವರನ್ನು ಭೇಟಿಯಾದ ಬಳಿಕ ಬಿ.ವೈ.ವಿಜಯೇಂದ್ರ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಗೂ ಫೋಟೊಗಳನ್ನು ಹಂಚಿಕೊಂಡಿದ್ದಾರೆ. “ಪಕ್ಷದ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸಿದ ತರುವಾಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರ ಜನ್ಮದಿನವಾದ ಇಂದೇ (ಡಿಸೆಂಬರ್‌ 2) ಅವರನ್ನು ಭೇಟಿಯಾಗಿ ಕೃತಜ್ಞತೆ ಸಮರ್ಪಿಸಿದೆ. ಆಶೀರ್ವಾದ ಪಡೆದು, ಶುಭಾಶಯ ಕೋರುವ ಅಪೂರ್ವ ಸಂದರ್ಭ ಒದಗಿ ಬಂದದ್ದು ಧನ್ಯತೆಯ ಭಾವ ಮೂಡಿಸಿತು” ಎಂದು ವಿಜಯೇಂದ್ರ ಬರೆದುಕೊಂಡಿದ್ದಾರೆ.

“ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಯುವ ಪೀಳಿಗೆಯನ್ನು ಉತ್ತೇಜಿಸುತ್ತಿರುವ ನಡ್ಡಾ ಅವರು ನನ್ನ ಬಗ್ಗೆ ಇರಿಸಿರುವ ಅಚಲ ನಂಬಿಕೆಯ ನುಡಿಗಳು ಇಂದು ನನ್ನಲ್ಲಿ ಅದಮ್ಯ ಆತ್ಮ ವಿಶ್ವಾಸದ ಉತ್ಸಾಹ ಮೂಡಿಸುವುದರೊಂದಿಗೆ, ಬಹು ದೊಡ್ಡ ಹೊಣೆಗಾರಿಕೆಯನ್ನೂ ನೆನಪಿಸಿತು. ವರಿಷ್ಠರು ಇರಿಸಿರುವ ನಿರೀಕ್ಷೆಯ ಗುರಿ ತಲುಪುವುದೇ ನನ್ನ ಮಹಾ ಸಂಕಲ್ಪವಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ್‌ ಜೋಶಿ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್‌ ಜಿ.ವಿ. ಅವರು ಉಪಸ್ಥಿತರಿದ್ದರು” ಎಂದು ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Shivamogga News: ಶಿಕಾರಿಪುರದ ಕಾಂಗ್ರೆಸ್ ಪುಡಾರಿಗಳ ಆರ್ಭಟ ಶೀಘ್ರವೇ ನಿಲ್ಲಲಿದೆ: ಬಿ.ವೈ. ವಿಜಯೇಂದ್ರ‌

ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಹೈಕಮಾಂಡ್‌ ನವೆಂಬರ್‌ 10ರಂದು ಆಯ್ಕೆ ಮಾಡಿದ್ದು, ನವೆಂಬರ್‌ 15ರಂದು ಬಿ.ವೈ.ವಿಜಯೇಂದ್ರ ಅವರು ಪದಗ್ರಹಣ ಮಾಡಿದ್ದಾರೆ. ರಾಜ್ಯಾಧ್ಯಕ್ಷರಾದ ಬಳಿಕ ವಿಜಯೇಂದ್ರ ಅವರು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಹಿರಿಯ ನಾಯಕರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಇದರ ಬೆನ್ನಲ್ಲೇ, ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಸಜ್ಜಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Girl Child
ಕರ್ನಾಟಕ12 mins ago

ವಿಸ್ತಾರ ಸಂಪಾದಕೀಯ: ಭ್ರೂಣ ಹತ್ಯೆ ಜಾಲ ಆಘಾತಕಾರಿ

Dina Bhavihsya
ಪ್ರಮುಖ ಸುದ್ದಿ42 mins ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Sphoorti Salu
ಸುವಚನ1 hour ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Assembly Election Results 2023
Live News6 hours ago

Election Results 2023 Live: ಕೆಲವೇ ಕ್ಷಣಗಳಲ್ಲಿ 4 ರಾಜ್ಯಗಳ ಚುನಾವಣೆ ಫಲಿತಾಂಶ; ಇಲ್ಲಿದೆ ಕ್ಷಣಕ್ಷಣದ ಅಪ್‌ಡೇಟ್ಸ್

Kapil Sharma And Sunil Grover
ಕಿರುತೆರೆ/ಒಟಿಟಿ6 hours ago

Kapil Sharma: 6 ವರ್ಷದ ಮುನಿಸು ಮರೆತು ಒಂದಾದ ಕಪಿಲ್‌ ಶರ್ಮಾ, ಸುನಿಲ್‌ ಗ್ರೋವರ್;‌ ಬರ್ತಿದೆ ಶೋ!

women seriously injured
ಕರ್ನಾಟಕ6 hours ago

Kalaburagi News: ಕೆಂಡ ಹಾಯುವಾಗ ಆಯತಪ್ಪಿ ಬಿದ್ದು ಮೂವರು ಮಹಿಳೆಯರಿಗೆ ಗಂಭೀರ ಗಾಯ

Bangalore Bulls
ಕ್ರೀಡೆ7 hours ago

Pro Kabaddi : ಗುಜರಾತ್​ ತಂಡಕ್ಕೆ ಸೆಡ್ಡು ಹೊಡೆಯುವುದೇ ಬುಲ್ಸ್​

Heart Attack
ಆರೋಗ್ಯ7 hours ago

Heart Attack: ಹೃದಯಾಘಾತಕ್ಕೆ 6 ತಿಂಗಳಲ್ಲಿ 1,052 ಜನ ಬಲಿ; 80% ಮಂದಿ 11-25 ವರ್ಷದವರೇ!

Pro Kabaddi Day 1
ಕ್ರೀಡೆ7 hours ago

Pro Kabaddi: ಮೊದಲ ದಿನ ಗುಜರಾತ್​, ಮುಂಬಾ ತಂಡಕ್ಕೆ ಗೆಲುವು

States economy
ಕರ್ನಾಟಕ7 hours ago

ರಾಜ್ಯದ ಆರ್ಥಿಕತೆ ವೃದ್ಧಿಸಲು ವಾರ್ಷಿಕ 1.4 ಲಕ್ಷ ಕೋಟಿ ಹೂಡಿಕೆಯ ಗುರಿ ನಿಗದಿ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Dina Bhavihsya
ಪ್ರಮುಖ ಸುದ್ದಿ42 mins ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ13 hours ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ2 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ2 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ3 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ3 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ5 days ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

ಟ್ರೆಂಡಿಂಗ್‌