CBSE Board Exam: ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ - Vistara News

ದೇಶ

CBSE Board Exam: ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ

CBSE Board Exam: ಸಿಬಿಎಸ್‌ಇ 12ನೇ ತರಗತಿ ಪರೀಕ್ಷಾ ವೇಳಾಪಟ್ಟಿಯನ್ನು ತಯಾರಿಸುವಾಗ ಜೆಇಇ ಪರೀಕ್ಷೆಯನ್ನು ಗಮನದಲ್ಲಿಟ್ಟುಕೊಳ್ಳಲಾಗಿದೆ.

VISTARANEWS.COM


on

exam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು(CBSE) 10ನೇ ಮತ್ತು 12ನೇ ತರಗತಿ ಪರೀಕ್ಷಾ ವೇಳಾ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪೈಕಿ ಸೀನಿಯರ್ ಸ್ಕೂಲ್‌ ಸರ್ಟಿಫಿಕೇಟ್ ಪರೀಕ್ಷೆ (CBSE Board Exam Date Sheet 2024) ಅಂದರೆ 12ನೇ ತರಗತಿಯ ಪರೀಕ್ಷೆಯು (Classes CBSE 12th class) ಫೆಬ್ರವರಿ 15ರಿಂದ ಆರಂಭವಾಗಲಿದೆ. ಉದ್ಯಮಶೀಲತೆಯಿಂದ ಹಿಡಿದು ಕ್ಯಾಪಿಟಲ್ ಮಾರ್ಕೆಟ್ ಕಾರ್ಯಾಚರಣೆ, ಜೈವಿಕ ತಂತ್ರಜ್ಞಾನ, ನೃತ್ಯ ಪ್ರಕಾರಗಳು, ಹಿಂದಿ, ಇಂಗ್ಲಿಷ್ ಮತ್ತು ಹೆಚ್ಚಿನವುಗಳಂತಹ ವಿವಿಧ ವಿಷಯಗಳನ್ನುಈ ಪರೀಕ್ಷೆ ಒಳಗೊಂಡಿದೆ. ಇನ್ನು ಸಿಬಿಎಸ್‌ಇ 10ನೇ (Classes CBSE 10th class) ತರಗತಿ ಪರೀಕ್ಷೆಯ ಫೆಬ್ರವರಿ 19ರಿಂದ ಆರಂಭವಾಗಲಿದೆ. ಎಲ್ಲ ಪರೀಕ್ಷೆಗಳು ಬೆಳಗ್ಗೆ 10.30ಕ್ಕೆ ಶುರುವಾಗಲಿವೆ(CBSE Board Exam). ವೇಳಾ ಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

ಸಿಬಿಎಸ್ಇ 10ನೇ ತರಗತಿ ಎಕ್ಸಾಮ್ ವೇಳಾ ಪಟ್ಟಿ

ಸಿಬಿಎಸ್‌ಇ 10 ನೇ ತರಗತಿಗೆ ಮುಖ್ಯ ಪರೀಕ್ಷೆಗಳು 2024 ಫೆಬ್ರವರಿ 19 ರಂದು ಸಂಸ್ಕೃತ ವಿಷಯದೊಂದಿಗೆ ಪ್ರಾರಂಭವಾಗುತ್ತದೆ. ನಂತರ ಫೆಬ್ರವರಿ 21 ರಂದು ಹಿಂದಿ, ಫೆ.26ಕ್ಕೆ ಇಂಗ್ಲಿಷ್, ಮಾರ್ಚ್ 2ಕ್ಕೆ ವಿಜ್ಞಾನ, ಮಾ.4 ಹೋಮ್ ಸೈನ್ಸ್, ಮಾರ್ಚ್ 7ಕ್ಕೆ ಸಮಾಜ ವಿಜ್ಞಾನ ಹಾಗೂ ಮಾರ್ಚ್ 11 ಮತ್ತು 13ರಂದು ಕ್ರಮವಾಗಿ ಗಣಿತ ಮತ್ತು ಮಾಹಿತಿ ತಂತ್ರಜ್ಞಾನ ಪರೀಕ್ಷೆಗಳು ನಡೆಯಲಿವೆ.

ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ವೇಳಾಪಟ್ಟಿ

ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಯು 2024ರ ಫೆಬ್ರವರಿ 22ರಂದು ಇಂಗ್ಲಿಷ್ ವಿಷಯ ಪರೀಕ್ಷೆಯೊಂದಿಗೆ ಆರಂಭವಾಗುತ್ತದೆ. ನಂತರ, ಫೆ.27ಕ್ಕೆ ಕೆಮಿಸ್ಟ್ರಿ, ಮಾರ್ಚ್ 4ಕ್ಕೆ ಫಿಜಿಕ್ಸ್, ಮಾರ್ಚ್ 9ಕ್ಕೆ ಗಣಿತ, ಮಾ.12 ಫಿಜಿಕಲ್ ಎಜುಕೇಷನ್, ಮಾ.19ಕ್ಕೆ ಜೀವಶಾಸ್ತ್ರ ಮತ್ತು ಕೊನೆಯ ಪರೀಕ್ಷೆ ಕಂಪ್ಯೂಟರ್ ಸೈನ್ಸ್ ಏಪ್ರಿಲ್ 2ರಂದು ನಡೆಯಲಿದೆ.

ಸಿಬಿಎಸ್‌ಇ 12ನೇ ತರಗತಿ ಮಾನವಿಕ ವಿಷಯಗಳ ಪರೀಕ್ಷೆ

2024ರ ಫೆಬ್ರವರಿ 19ರಂದು ಹಿಂದಿ ಆಯ್ಕೆ ಮತ್ತು ಹಿಂದಿ ಕೋರ್‌ ಪತ್ರಿಕೆಗಳೊಂದಿಗೆ ಶುರುವಾಗುತ್ತವೆ. ಫೆ.22ಕ್ಕೆ ಇಂಗ್ಲಿಷ್ ಪರೀಕ್ಷೆಗಳು ನಡೆಯಲಿವೆ. ಮುಖ್ಯ ಮಾನವಿಕ ವಿಷಯಗಳಾದ ಭೂಗೋಳ ಶಾಸ್ತ್ರ(ಫೆ.29), ರಾಜ್ಯ ಶಾಸ್ತ್ರ(ಮಾ.22), ಅರ್ಥಶಾಸ್ತ್ರ(ಮಾ.18), ಇತಿಹಾಸ (ಮಾ.28) ಪರೀಕ್ಷೆಗಳು ಮಾರ್ಚ್ ತಿಂಗಳಲ್ಲಿ ನಡೆಯಲಿವೆ. ಸಮಾಜ ಶಾಸ್ತ್ರ ವಿಷಯ ಪರೀಕ್ಷೆಯು ಏಪ್ರಿಲ್ 1ರಂದು ನಡೆಯಲಿದೆ.

ವೇಳಾಪಟ್ಟಿಯನ್ನು ರೂಪಿಸುವಾಗ ಎರಡೂ ತರಗತಿಗಳಲ್ಲಿ ವಿದ್ಯಾರ್ಥಿಗಳು ಸಾಮಾನ್ಯವಾಗಿ ನೀಡುವ ವಿಷಯಗಳ ನಡುವೆ ಸಾಕಷ್ಟು ಸಮಯದ ಅಂತರವನ್ನು ನೀಡಲಾಗಿದೆ. 12ನೇ ತರಗತಿಯ ಪರೀಕ್ಷಾ ವೇಳಾ ಪಟ್ಟಿಯನ್ನು ಸಿದ್ಧಪಡಿಸುವಾಗ ಮಂಡಳಿಯು ಜೆಇಇ ಮುಖ್ಯನಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪರಿಗಣನೆಗೆ ತೆಗೆದುಕೊಂಡಿದೆ.

ಈ ಸುದ್ದಿಯನ್ನೂ ಓದಿ: ಸಿಬಿಎಸ್‌ಇ ಬೋರ್ಡ್‌ ಎಕ್ಸಾಂಗೆ ಘೋಷಿಸಿದ ಪ್ರಮುಖ ಬದಲಾವಣೆಗಳೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್‌ ಕೇಜ್ರಿವಾಲ್‌ ಅವರು ಸುದ್ದಿಗೋಷ್ಠಿ ನಡೆಸಿದರು. ಇದೇ ವೇಳೆ ಅವರು ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ನರೇಂದ್ರ ಮೋದಿ ಅವರೇನಾದರೂ ಮತ್ತೆ ಪ್ರಧಾನಿಯಾದರೆ, ಅಧಿಕಾರ ವಹಿಸಿಕೊಂಡ ಎರಡೇ ತಿಂಗಳಿಗೆ ಯೋಗಿ ಆದಿತ್ಯನಾಥ್‌ ಅವರ ಬದಲಿಗೆ ಬೇರೆಯವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಲಿದ್ದಾರೆ ಎಂದು ಆರೋಪಿಸಿದರು.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ (Delhi Excise Policy Case) ಜೈಲು ಪಾಲಾಗಿ, ಮಧ್ಯಂತರ ಜಾಮೀನು ಪಡೆದು ಹೊರಬಂದಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ನರೇಂದ್ರ ಮೋದಿ (Narendra Modi) ವಿರುದ್ಧ ವಾಗ್ದಾಳಿ ನಡೆಸಿದರು. “ಒಂದು ದೇಶ, ಒಬ್ಬ ನಾಯಕ ಎಂಬುದು ನರೇಂದ್ರ ಮೋದಿ ಅವರ ಮಿಷನ್‌ ಆಗಿದೆ. ಅವರೇನಾದರೂ ಮತ್ತೆ ಪ್ರಧಾನಿಯಾದರೆ, ಉತ್ತರ ಪ್ರದೇಶದ ಮುಖ್ಯಮಂತ್ರಿಯನ್ನು ಬದಲಿಸಲಿದ್ದಾರೆ” ಎಂದು ಜೈಲಿನಿಂದ ಬಿಡುಗಡೆಯಾದ ಬಳಿಕ ನಡೆಸಿದ ಮೊದಲ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

“ನರೇಂದ್ರ ಮೋದಿ ಅವರಿಗೆ ಬೇರೆಯವರು ಬೆಳೆಯುವುದು ಇಷ್ಟವಿಲ್ಲ. ದೇಶಕ್ಕೆ ಒಬ್ಬನೇ ನಾಯಕ ಬೇಕು, ಅದು ಅವರೇ ಆಗಿರಬೇಕು. ಈಗಾಗಲೇ ಎಲ್‌.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ, ಶಿವರಾಜ್‌ ಸಿಂಗ್‌ ಚೌಹಾಣ್‌, ವಸುಂಧರಾ ರಾಜೆ, ಮನೋಹರ ಲಾಲ್‌ ಖಟ್ಟರ್‌, ರಮಣ್‌ ಸಿಂಗ್‌ ಸೇರಿ ಹಲವು ನಾಯಕರ ರಾಜಕೀಯ ಜೀವನವನ್ನು ಮೋದಿ ಕೊನೆಗೊಳಿಸಿದ್ದಾರೆ. ಶೀಘ್ರದಲ್ಲೇ, ಯೋಗಿ ಆದಿತ್ಯನಾಥ್‌ ಅವರ ರಾಜಕೀಯ ಜೀವನವನ್ನೂ ಇವರು ಕೊನೆಗಾಣಿಸಲಿದ್ದಾರೆ” ಎಂದು ದೂರಿದರು.

“ನರೇಂದ್ರ ಮೋದಿ ಅವರೇನಾದರೂ ಮತ್ತೆ ಪ್ರಧಾನಿಯಾದರೆ, ಅಧಿಕಾರ ವಹಿಸಿಕೊಂಡ ಎರಡೇ ತಿಂಗಳಿಗೆ ಯೋಗಿ ಆದಿತ್ಯನಾಥ್‌ ಅವರ ಬದಲಿಗೆ ಬೇರೆಯವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಲಿದ್ದಾರೆ. ಆದರೆ, ನಮ್ಮ ದೇಶದ ಇತಿಹಾಸವೇ ಬೇರೆ ಇದೆ. ದೇಶದಲ್ಲಿ ಇದುವರೆಗೆ ಯಾರೆಲ್ಲ ಸರ್ವಾಧಿಕಾರ ಮಾಡಲು ಹೊರಟಿದ್ದರೋ, ಅವರನ್ನೆಲ್ಲ ಜನ ಮನೆಗೆ ಕಳುಹಿಸಿದ್ದಾರೆ. ಈಗ ಮತ್ತೆ ಸರ್ವಾಧಿಕಾರಿಗಳು ಪ್ರಜಾಪ್ರಭುತ್ವವನ್ನು ಕೊನೆಗಾಣಿಸಲು ಯತ್ನಿಸುತ್ತಿದ್ದಾರೆ. ಆದರೆ, ದೇಶದ 140 ಕೋಟಿ ಜನ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕು ಎಂಬುದೇ ನನ್ನ ಮನವಿಯಾಗಿದೆ” ಎಂದರು.

“ನಾನು ಮಾತ್ರವಲ್ಲ ಪ್ರತಿಪಕ್ಷಗಳ ಇನ್ನೂ ಹಲವು ನಾಯಕರನ್ನು ಅವರು ಜೈಲಿಗೆ ಕಳುಹಿಸಲಿದ್ದಾರೆ. ಆ ಮೂಲಕ ಅವರ ರಾಜಕೀಯ ಜೀವನವನ್ನು ಅಂತ್ಯಗೊಳಿಸಲಿದ್ದಾರೆ. ಈಗಾಗಲೇ ನಮ್ಮ ಪಕ್ಷದ ಸಚಿವರು, ಜಾರ್ಖಂಡ್‌ ಮುಖ್ಯಮಂತ್ರಿಯಾಗಿದ್ದ ಹೇಮಂತ್‌ ಸೊರೇನ್‌, ಟಿಎಂಸಿ ಸಚಿವರನ್ನು ಜೈಲಿಗೆ ಕಳುಹಿಸಲಾಗಿದೆ. ಹಾಗೇನಾದರೂ ಬಿಜೆಪಿಯೇ ಮತ್ತೆ ಗೆದ್ದರೆ, ಮಮತಾ ಬ್ಯಾನರ್ಜಿ, ಎಂ.ಕೆ.ಸ್ಟಾಲಿನ್‌, ಆರ್‌ಜೆಡಿಯ ತೇಜಸ್ವಿ ಯಾದವ್‌, ಕೇರಳ ಸಿಎಂ ಪಿಣರಾಯಿ ವಿಜಯನ್‌ ಸೇರಿ ಇನ್ನೂ ಹಲವರು ಜೈಲು ಸೇರಲಿದ್ದಾರೆ. ಕೆಲವರ ರಾಜಕೀಯ ಜೀವನ ಅಂತ್ಯಗೊಳಿಸಲು ತಮ್ಮದೇ ಪಕ್ಷದ ನಾಯಕರನ್ನು ಕೂಡ ಜೈಲಿಗೆ ಕಳುಹಿಸಲಿದ್ದಾರೆ” ಎಂದು ಗಂಭೀರ ಆರೋಪ ಮಾಡಿದರು.

ಇದನ್ನೂ ಓದಿ: Arvind Kejriwal: ಜೈಲಿನಿಂದ ಬಂದ ಕೇಜ್ರಿವಾಲ್‌ಗೆ ಆರತಿ ಬೆಳಗಿ, ಹೂ ಹಾರ ಹಾಕಿ ಸ್ವಾಗತಿಸಿದ ತಾಯಿ! ವಿಡಿಯೊ ನೋಡಿ

Continue Reading

ದೇಶ

Artificial Intelligence: 98 ವಿವಿಧ ಭಾಷೆಗಳಲ್ಲಿ ಹನುಮಾನ್‌ AI ತಂತ್ರಜ್ಞಾನ; ಏನಿದರ ವಿಶೇಷ?

Artificial Intelligence:ಹನುಮಾನ್ AI ಇನ್ನೂ ಡೆವಲಪಿಂಗ್‌ ಹಂತದಲ್ಲಿದ್ದು, ಇದರ ಹೊಸ ಆವೃತಿ ಶೀಘ್ರದಲ್ಲೇ ಬರಲಿದೆ. ಪ್ಲಾಟ್‌ಫಾರ್ಮ್ ತನ್ನ ಮೊದಲ ವರ್ಷದಲ್ಲಿ 200 ಮಿಲಿಯನ್ ಬಳಕೆದಾರರನ್ನು ತಲುಪುವ ಗುರಿಯನ್ನು ಹೊಂದಿದೆ. SML ಇಂಡಿಯಾ ಇದಕ್ಕಾಗಿ HP, NASSCOM ಮತ್ತು Yotta ನೊಂದಿಗೆ ಪಾಲುದಾರಿಕೆ ಹೊಂದಿದೆ.

VISTARANEWS.COM


on

Artificial Intelligence
Koo

ನವದೆಹಲಿ: ಭಾರತದಲ್ಲಿ ಇದೇ ಮೊದಲ ಬಾರಿಗೆ ಸುಮಾರು 98 ವಿವಿಧ ಭಾಷೆಗಳಲ್ಲಿ ಬಹುಭಾಷೆಯ ಎಐ ತಂತ್ರಜ್ಞಾನ(Artificial Intelligence) ಹನುಮಾನ್‌(Hanuman) ಅನ್ನು ಅನಾವರಣಗೊಳಿಸಿದೆ. 3AI ಹೋಲ್ಡಿಂಗ್‌ ಲಿಮಿಟೆಡ್‌(3AI Holding limited) ಮತ್ತು ಎಸ್‌ಎಂಎಲ್‌ ಭಾರತ ಜೊತೆಗೂಡಿಗೊಂಡು ಅನಾವರಣ ಮಾಡಿರುವ ಈ ಹನುಮಾನ್‌ AI ತಂತ್ರಜ್ಞಾನ 12 ಭಾರತೀಯ ಭಾಷೆಗಳಲ್ಲೂ ಲಭ್ಯವಿದೆ. ಈ ಹೊಸ ತಂತ್ರಜ್ಞಾನ ಎಲ್ಲಾ ಬಳಕೆದಾರರಿಗೆ ಲಭ್ಯವಿದ್ದು, ಮೊಬೈಲ್‌ ಫೋನ್‌ ಮೂಲಕ ನೀವು ನೋಂದಣಿ ಪಡೆಯಬಹುದಾಗಿದೆ. ಟೆಕ್ಸ್ಟ್‌ ಪ್ರತಿಕ್ರಿಯೆಗಳನ್ನು ಸೃಷ್ಟಿಸುವಷ್ಟಕ್ಕೆ ಮಾತ್ರ ಈ ತಂತ್ರಜ್ಞಾನ ಸದ್ಯಕ್ಕೆ ಸೀಮಿತವಾಗಿದೆ.

ಹನುಮಾನ್ AI ಇನ್ನೂ ಡೆವಲಪಿಂಗ್‌ ಹಂತದಲ್ಲಿದ್ದು, ಇದರ ಹೊಸ ಆವೃತಿ ಶೀಘ್ರದಲ್ಲೇ ಬರಲಿದೆ. ಪ್ಲಾಟ್‌ಫಾರ್ಮ್ ತನ್ನ ಮೊದಲ ವರ್ಷದಲ್ಲಿ 200 ಮಿಲಿಯನ್ ಬಳಕೆದಾರರನ್ನು ತಲುಪುವ ಗುರಿಯನ್ನು ಹೊಂದಿದೆ. SML ಇಂಡಿಯಾ ಇದಕ್ಕಾಗಿ HP, NASSCOM ಮತ್ತು Yotta ನೊಂದಿಗೆ ಪಾಲುದಾರಿಕೆ ಹೊಂದಿದೆ. ಯೊಟ್ಟಾ ಸಂಸ್ಥೆ GPU ಕ್ಲೌಡ್ ಮೂಲಸೌಕರ್ಯವನ್ನು ಒದಗಿಸುತ್ತದೆ, NASSCOM ಜೊತೆಗಿನ ಪಾಲುದಾರಿಕೆಯು AI ಸ್ಟಾರ್ಟ್‌ಅಪ್‌ಗಳನ್ನು ಬೆಂಬಲಿಸುವ ಮತ್ತು 3000 ಕಾಲೇಜುಗಳೊಂದಿಗೆ ತೊಡಗಿಸಿಕೊಳ್ಳುವ ಗುರಿಯನ್ನು ಹೊಂದಿದೆ. ಇಂಗ್ಲಿಷ್ ಮತ್ತು ತೆಲುಗು ನಡುವೆ ತಡೆರಹಿತ ಅನುವಾದಕ್ಕಾಗಿ ಕಂಪನಿಯು ತೆಲಂಗಾಣ ಸರ್ಕಾರ ಮತ್ತು ಆಡಳಿತ ಸುಧಾರಣೆಗಳು ಮತ್ತು ಸಾರ್ವಜನಿಕ ಕುಂದುಕೊರತೆಗಳ ಇಲಾಖೆ (DARPG) ಯೊಂದಿಗೆ ಸಹ ಸಹಯೋಗ ಮಾಡಿಕೊಂಡಿದೆ.

ಇದನ್ನೂ ಓದಿ:K.S. Rajanna: ಛಲಬಿಡದ ಸಾಧಕನಿಗೆ ಪದ್ಮಶ್ರೀ ಗರಿ; ಅಂಗವೈಕಲ್ಯ ಮೆಟ್ಟಿನಿಂತ ಕನ್ನಡಿಗನಿಗೆ ದೇಶದ ನಮನ- ವೀಡಿಯೋ ವೈರಲ್‌

ಈ ತಂತ್ರಜ್ಞಾನ ಪ್ರಸ್ತುತ 12 ಭಾರತೀಯ ಭಾಷೆಗಳಲ್ಲಿ ಮತ್ತು ಹಲವಾರು ಜಾಗತಿಕ ಭಾಷೆಗಳಲ್ಲಿ ಲಭ್ಯವಿದೆ. 3AI ಹೋಲ್ಡಿಂಗ್‌ನ ತಂತ್ರಜ್ಞಾನದಿಂದ ನಡೆಸಲ್ಪಡುವ ಪ್ಲಾಟ್‌ಫಾರ್ಮ್ ಸ್ಪಷ್ಟ, ಹೊಂದಾಣಿಕೆಯ ಒಳನೋಟಗಳನ್ನು ನೀಡುತ್ತದೆ ಮತ್ತು ಸಂಕೀರ್ಣ ಡೇಟಾವನ್ನು ಕೃತಕ ಬುದ್ದಿಮತ್ತೆ(AI) ಆಗಿ ಪರಿವರ್ತಿಸುತ್ತದೆ. ಆರೋಗ್ಯ, ಆಡಳಿತ, ಹಣಕಾಸು ಸೇವೆಗಳು ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಹನುಮಾನ್ AI ಪೂರೈಸುವ ಗುರಿಯನ್ನು ಹೊಂದಿದೆ. 3AI ಹೋಲ್ಡಿಂಗ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಅರ್ಜುನ್ ಪ್ರಸಾದ್ ಪ್ರತಿಕ್ರಿಯಿಸಿದ್ದು, AI ಅನ್ನು ಪ್ರತಿಯೊಬ್ಬ ಭಾರತೀಯನಿಗೂ ಪರಿಚಯಿಸುವುದೇ ನಮ್ಮ ಗುರಿ ಎಂದು ಹೇಳಿದ್ದಾರೆ.

ಕೃತಕ ಬುದ್ಧಿಮತ್ತೆ ಎಂದರೇನು?

ಸಾಮಾನ್ಯವಾಗಿ ಬುದ್ಧಿಮತ್ತೆಯನ್ನು ಮಾನವನ ಮಿದುಳಿನ ಸಾಮರ್ಥ್ಯ ಮತ್ತು ಅದರ ಕಾರ್ಯಾಚರಣೆಗಳಿಗೆ ಸಂಬಂಧಿಸಿ ವ್ಯಾಖ್ಯಾನಿಸಲಾಗಿದೆ. ಮೂಲಭೂತವಾಗಿ ಬುದ್ಧಿಮತ್ತೆಯನ್ನು ವ್ಯಕ್ತಿಯ ಅಥೆìçಸಿಕೊಳ್ಳುವ ಸಾಮರ್ಥಯವೆಂದೂ ಪರಿಗಣಿಸಲಾಗಿದೆ. ಬುದ್ಧಿಮತ್ತೆಯಲ್ಲಿ ಹಲವು ವಿಧಗಳಿವೆ. ವ್ಯಕ್ತಿಯಿಂದ ವ್ಯಕ್ತಿಗೆ ಅದು ಭಿನ್ನವಾಗಿದೆ. ಮಾನವ ಮಿದುಳಿನ ಬುದ್ಧಿಮತ್ತೆಯನ್ನು “ಸಾಮಾನ್ಯ ಬುದ್ಧಿಮತ್ತೆ’ (General intelligence) ಎನ್ನಲಾಗಿದೆ. ಇದು ದೇವರು ಮಾನವನಿಗೆ ನೀಡಿದ ವರವೂ ಹೌದು. ಕೃತಕ ಬುದ್ಧಿಮತ್ತೆಯ ಗುಣಲಕ್ಷಣ, ಸ್ವಭಾವ ಮತ್ತು ಕಾರ್ಯಚರಣೆಗಳು ಸಂಪೂರ್ಣವಾಗಿ ಭಿನ್ನವಾಗಿರುವುದು ಮಾತ್ರವಲ್ಲದೆ ಅದನ್ನು ಅರಗಿಸಿಕೊಳ್ಳಲು ಹರಸಾಹಸ ಪಡಬೇಕು. ತೀರಾ ಸರಳವಾಗಿ ಕೃತಕ ಬುದ್ಧಿಮತ್ತೆಯನ್ನು ಯಂತ್ರ ಕಲಿಕೆಗೆ (Machine Learning) ತತ್ಸಮಾನಗೊಳಿಸಲಾಗಿದೆ. ಕೃತಕ ಮಿದುಳಿನಿಂದ ನಿರ್ಮಿಸಿದ ಮಾನವ ಯಂತ್ರಗಳು ಮಾನವನ ಹಾಗೆ ಚಿಂತಿಸಿ, ಮಾನವ ರೀತಿಯ ಕಾರ್ಯ ಚಟುವಟಿಕೆಗಳನ್ನು ನಡೆಸುವುದನ್ನು ನೋಡಿದಾಗ ನಿಬ್ಬೆರಗಾಗುತ್ತೇವೆ.

Continue Reading

ದೇಶ

Navneet Rana: ಮೋದಿಯವರ ಸಿಂಹಗಳು, ರಾಮಭಕ್ತರು ಗಲ್ಲಿ ಗಲ್ಲಿಯಲ್ಲಿದ್ದಾರೆ ಹುಷಾರ್‌!- ಓವೈಸಿಗೆ ಮತ್ತೆ ನವನೀತ್‌ ರಾಣಾ ಟಾಂಗ್

Navneet Rana:15 ನಿಮಿಷಗಳ ಕಾಲ ಪೊಲೀಸ್‌ ಭದ್ರತೆ ತೆಗೆದರೆ ಓವೈಸಿ ಸಹೋದರರು ಎಲ್ಲಿಂದ ಬಂದರು ಎಲ್ಲಿಗೆ ಹೋದರು ಎಂಬುದೇ ತಿಳಿಯದಂತೆ ಮಾಡುತ್ತೇನೆ ಎಂದಿದ್ದ ನವನೀತ್‌ ರಾಣಾ, ಇದೀಗ ಮತ್ತೆ ಓವೈಸಿ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಓವೈಸಿ ಅವರು ತಮ್ಮ ನಿಯಂತ್ರಣದಲ್ಲಿ ತಾವಿದ್ದರೆ ಉತ್ತಮ. ಇಲ್ಲದಿದ್ದರೆ ಪ್ರಧಾನಿ ಮೋದಿಯವರ ಸಿಂಹಗಳು ಮತ್ತು ರಾಮ ಭಕ್ತರು ಗಲ್ಲಿ ಗಲ್ಲಿಯಲ್ಲಿ ತಿರುಗಾಡುತ್ತಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Navneet Rana
Koo

ಹೈದರಾಬಾದ್‌: ಬಿಜೆಪಿ ನಾಯಕಿ ನವನೀತ್‌ ರಾಣಾ(Navneet Rana) ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ(Asaduddin Owaisi) ನಡುವಿನ ವಾಕ್ಸಮರ ಮುಂದುವರೆದಿದೆ. 15 ನಿಮಿಷಗಳ ಕಾಲ ಪೊಲೀಸ್‌ ಭದ್ರತೆ ತೆಗೆದರೆ ಓವೈಸಿ ಸಹೋದರರು ಎಲ್ಲಿಂದ ಬಂದರು ಎಲ್ಲಿಗೆ ಹೋದರು ಎಂಬುದೇ ತಿಳಿಯದಂತೆ ಮಾಡುತ್ತೇನೆ ಎಂದಿದ್ದ ನವನೀತ್‌ ರಾಣಾ, ಇದೀಗ ಮತ್ತೆ ಓವೈಸಿ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಓವೈಸಿ ಅವರು ತಮ್ಮ ನಿಯಂತ್ರಣದಲ್ಲಿ ತಾವಿದ್ದರೆ ಉತ್ತಮ. ಇಲ್ಲದಿದ್ದರೆ ಪ್ರಧಾನಿ ಮೋದಿಯವರ ಸಿಂಹಗಳು ಮತ್ತು ರಾಮ ಭಕ್ತರು ಗಲ್ಲಿ ಗಲ್ಲಿಯಲ್ಲಿ ತಿರುಗಾಡುತ್ತಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ತಮ್ಮನನ್ನು ನಾನು ಮಾತ್ರ ನಿಯಂತ್ರಿಸಲು ಸಾಧ್ಯ. ಬೇರೆ ಯಾರಿಂದಲೂ ಸಾಧ್ಯವಿಲ್ಲ ಎಂದು ಹಿರಿಯ ಸಹೋದರ ಅಸಾದುದ್ದೀನ್‌ ಓವೈಸಿ ಹೇಳುತ್ತಿದ್ದಾರೆ. ಇದು ಒಳ್ಳೆಯ ವಿಚಾರ. ಇದು ನಿಮಗೆ ಅರ್ಥ ಆಗಿದ್ದು ಒಳ್ಳೆಯದ್ದಾಯಿತು. ಇಲ್ಲದಿದರೆ ರಾಮ ಭಕ್ತರು ಮತ್ತು ಮೋದಿಯವರ ಸಿಂಹಗಳು ತಿರುಗಾಡುತ್ತಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನೆ ಮೂಡಿಸಿದೆ.

‍ಘಟಾನುಘಟಿಗಳ ಸ್ಪರ್ಧೆಯ ಕಾರಣದಿಂದ ಹೈದರಾಬಾದ್‌ ಲೋಕಸಭಾ ಕ್ಷೇತ್ರ ಈ ಬಾರಿ ದೇಶದ ಗಮನ ಸೆಳೆದಿದೆ. ಇಲ್ಲಿ ಬಿಜೆಪಿಯ ಫೈರ್‌ ಬ್ರ್ಯಾಂಡ್‌ ಮಾಧವಿ ಲತಾ ಅವರು ಎಐಎಂಐಎಂ ಮುಖ್ಯಸ್ಥ, ಹಾಲಿ ಸಂಸದ ಅಸಾದುದ್ದೀನ್‌ ಓವೈಸಿ (Asaduddin Owaisi)  ವಿರುದ್ಧ ಕಣಕ್ಕಿಳಿದಿದ್ದಾರೆ. ಅಸಾದುದ್ದೀನ್‌ ಓವೈಸಿ ಅವರ ಸಹೋದರ ಈ ಅಕ್ಬರುದ್ದೀನ್ ಓವೈಸಿ ಅವರು 2013ರಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಿ, ʼʼ15 ನಿಮಿಷ ಪೊಲೀಸರನ್ನು ತೆರವುಗೊಳಿಸಿ ನೋಡಿ. 100 ಕೋಟಿ ಹಿಂದುಗಳಿಗೆ ನಾವು ಏನು ಎಂಬುದನ್ನು ತೋರಿಸುತ್ತೇವೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದು ದೇಶಾದ್ಯಂತ ಚರ್ಚೆ ಹುಟ್ಟು ಹಾಕಿತ್ತು.

ಇದಕ್ಕೆ ಪ್ರತಿಕ್ರಿಯೆ ನೀಡಿದ ನವನೀತ್‌ ರಾಣಾ ಈ 15 ಸೆಕೆಂಡ್‌ಗಳ ಹೇಳಿಕೆ ನೀಡಿದ್ದಾರೆ. ʼʼಅಸಾದುದ್ದೀನ್ ಓವೈಸಿ ಮತ್ತು ಅಕ್ಬರುದ್ದೀನ್ ಓವೈಸಿ ಅವರಿಬ್ಬರೂ ಅಣ್ಣ-ತಮ್ಮಂದಿರು ತಾನೇ. ಈ ಹಿಂದೆ ಅಕ್ಬುರುದ್ದೀನ್ ಓವೈಸಿ 15 ನಿಮಿಷ ಪೊಲೀಸರನ್ನು ತೆರವುಗೊಳಿಸಿದರೆ, ನಾವೇನೆಂದು ತೋರಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ನಾವು ಹೇಳುತ್ತೇವೆ. ನಮಗೆ 15 ನಿಮಿಷ ಬೇಡ, 15 ಸೆಕೆಂಡು ಸಾಕು. 15 ಸೆಕೆಂಡು ಕಾಲ ಪೊಲೀಸರನ್ನು ತೆರವುಗೊಳಿಸಿದರೂ ಸಾಕು, ಅಣ್ಣ ತಮ್ಮಂದಿರಿಬ್ಬರು ಎಲ್ಲಿಂದ ಬಂದಿದ್ದಾರೆ, ಎಲ್ಲಿಗೆ ಹೋದರು ಎಂಬುದೂ ತಿಳಿಯಬಾರದು. ಹಾಗೆ ಮಾಡುತ್ತೇವೆʼʼ ಎಂದು ಹೇಳಿದ್ದಾರೆ.

ಇದನ್ನೂ ಓದಿ: Akbar Nagar: ಉತ್ತರ ಪ್ರದೇಶದ ಅಕ್ಬರ್‌ ನಗರದ ಅಕ್ರಮ ಮನೆಗಳ ಧ್ವಂಸಕ್ಕೆ ಸುಪ್ರೀಂ ಕೋರ್ಟ್‌ ಅಸ್ತು!

ಇನ್ನು ಇದಕ್ಕೆ ಪ್ರತಿಕ್ರಿಯಿಸಿದ ಓವೈಸಿ ನಾನು ಇಲ್ಲೇ ನಿಂತಿದ್ದೇನೆ ಅದೇನು ಮಾಡುತ್ತೀರೋ ಮಾಡಿ ಎಂದು ಟಾಂಗ್‌ ಕೊಟ್ಟಿದ್ದರು. ಮಹಾರಾಷ್ಟ್ರದಿಂದ ಬಂದ ಎಂಪಿ ಸಾಹೇಬರು ಇಲ್ಲಿ ನಮ್ಮ ವಿರುದ್ಧ ಏನೇನೋ ಮಾತನಾಡುತ್ತಿದ್ದಾರೆ. ನನ್ನ ತಮ್ಮ ಅಕ್ಬರುದ್ದೀನ್‌ ಓವೈಸಿ ಪರಿಸ್ಥಿತಿಯನ್ನು ಅವನದ್ದೇ ರೀತಿಯಲ್ಲಿ ತಿಳಿಗೊಳಿಸಲು ಮುಂದಾಗಿದ್ದ. ಆದರೆ ನಾನೇ ಅವನನ್ನು ತಡೆದು ನಿಲ್ಲಿಸಿದೆ ಎಂದು ಹೇಳಿದ್ದರು.

Continue Reading

ದೇಶ

Arvind Kejriwal: ಜೈಲಿನಿಂದ ಬಂದ ಕೇಜ್ರಿವಾಲ್‌ಗೆ ಆರತಿ ಬೆಳಗಿ, ಹೂ ಹಾರ ಹಾಕಿ ಸ್ವಾಗತಿಸಿದ ತಾಯಿ! ವಿಡಿಯೊ ನೋಡಿ

Arvind Kejriwal: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಕೇಜ್ರಿವಾಲ್‌ ಅವರು ಜೈಲಿನಿಂದ ಹೊರಬರುತ್ತಲೇ ಆಪ್‌ ಕಾರ್ಯಕರ್ತರು ಜೈಕಾರ ಕೂಗಿ ಅವರನ್ನು ಸ್ವಾಗತಿಸಿದರು. ಜತೆಗೆ ತಾಯಿ ಅವರನ್ನು ಹೂ ಮಾಲೆ ಹಾಕಿ ಮನೆಯೊಳಗೆ ಬರಮಾಡಿಕೊಂಡರು. ಸದ್ಯ ಈ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Arvind Kejriwal
Koo

ನವದೆಹಲಿ: ದೆಹಲಿ ಅಬಕಾರಿ ನೀತಿ (Delhi Excise policy) ಹಗರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ (ED) ಬಂಧಿಸಲ್ಪಟ್ಟ ಆಮ್ ಆದ್ಮಿ ಪಕ್ಷದ (Aam Admi Party) ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಸುಪ್ರೀಂ ಕೋರ್ಟ್ (Supreme court) ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. ಏಳು ಹಂತದ ಲೋಕಸಭೆ ಚುನಾವಣೆಯ (Lok Sabha Election 2024) ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ರಿಲೀಫ್‌ ಸಿಕ್ಕಿದೆ. ಹೀಗಾಗಿ ಕೇಜ್ರಿವಾಲ್‌ ಅವರು ಜೈಲಿನಿಂದ ಹೊರಬರುತ್ತಲೇ ಆಪ್‌ ಕಾರ್ಯಕರ್ತರು ಜೈಕಾರ ಕೂಗಿ ಅವರನ್ನು ಸ್ವಾಗತಿಸಿದರು. ಜತೆಗೆ ತಾಯಿ ಅವರನ್ನು ಹೂ ಮಾಲೆ ಹಾಕಿ ಮನೆಯೊಳಗೆ ಬರಮಾಡಿಕೊಂಡರು. ಸದ್ಯ ಈ ವಿಡಿಯೊ ವೈರಲ್‌ ಆಗಿದೆ (Viral Video).

ತಿಹಾರ್‌ ಜೈಲಿನಿಂದ ಕೇಜ್ರಿವಾಲ್‌ ಶುಕ್ರವಾರ ಸಂಜೆ ಸುಮಾರು 7 ಗಂಟೆಗೆ ಹೊರ ಬಂದರು. ನೆರೆದಿದ್ದ ಸಾವಿರಾರು ಕಾರ್ಯಕರ್ತರು ಜಯಘೋಷದೊಂದಿಗೆ ಅವರನ್ನು ಸ್ವಾಗತಿಸಿದರು. ಕೇಜ್ರಿವಾಲ್‌ ಮನೆಗೆ ಆಗಮಿಸುತ್ತಿದ್ದಂತೆ ಆಪ್‌ ಸಂಸದ ಸಂಜಯ್‌ ಸಿಂಗ್‌ ಎದುರುಗೊಂಡರು. ಜತೆಗೆ ಅರವಿಂದ್ ಕೇಜ್ರಿವಾಲ್ ಅವರ ತಾಯಿ ಮತ್ತು ಪತ್ನಿ ಆರತಿ ಬೆಳಗಿ, ಹಾರ ಹಾಕಿ ಮನೆಗೆ ಸ್ವಾಗತಿಸಿದರು.

ಬಾಗಿಲ್ಲೇ ಕಾದು ನಿಂತಿದ್ದ ತಾಯಿ

ಮಗನ ಬರುವಿಕೆಗಾಗಿ ಕೇಜ್ರಿವಾಲ್‌ ಅವರ ತಾಯಿ ಮನೆ ಬಾಗಿಲ ಬಳಿಯಲ್ಲೇ ಹೂ ಹಾರ ಹಿಡಿದು ಕಾದು ನಿಂತಿದ್ದರು. ಸಂಬಂಧಿಕರು ಆರತಿ ಎತ್ತಿದರು. ಒಳ ಬರುತ್ತಲೇ ಕೇಜ್ರಿವಾಲ್‌ ತಮ್ಮ ತಾಯಿ, ತಂದೆಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದರು. ಕೇಜ್ರಿವಾಲ್ ಅವರ ತಂದೆ ಮಗನನ್ನು ತಬ್ಬಿಕೊಂಡರು. ಮಗನ ಬೆನ್ನನ್ನು ಆತ್ಮೀಯವಾಗಿ ತಟ್ಟಿದರು.

ದೇವಸ್ಥಾನಕ್ಕೆ ಭೇಟಿ ನೀಡಿದ ಕೇಜ್ರಿವಾಲ್‌

ಅರವಿಂದ್‌ ಕೇಜ್ರಿವಾಲ್‌ ಇಂದು (ಶನಿವಾರ) ದೆಹಲಿಯ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಲೋಕಸಭಾ ಚುನಾವಣೆಯ ಪ್ರಚಾರವನ್ನು ಪ್ರಾರಂಭಿಸಿದರು. ಈ ವೇಳೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಅವರೊಂದಿಗಿದ್ದರು.

ಷರತ್ತು ಅನ್ವಯ

ಜಾಮೀನು ನೀಡುವ ಮೊದಲು ನ್ಯಾಯಾಲಯ ಯಾವುದೇ ಕಡತಗಳಿಗೆ ಸಹಿ ಹಾಕಬಾರದು ಎಂಬುದು ಸೇರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಹಲವು ಷರತ್ತುಗಳನ್ನು ವಿಧಿಸಿದೆ. ಜೈಲಿನಿಂದ ಬಿಡುಗಡೆಯಾದ ಬಳಿಕ ಮಾತನಾಡಿದ ಕೇಜ್ರಿವಾಲ್‌, “ನಾನು ನಿಮಗೆಲ್ಲ ಧನ್ಯವಾದ ಹೇಳಲು ಬಯಸುತ್ತೇನೆ. ನೀವೆಲ್ಲರೂ ನನಗೆ ಆಶೀರ್ವಾದ ಮಾಡಿದ್ದೀರಿ. ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಿಗೂ ನಾನು ಧನ್ಯವಾದ ತಿಳಿಸುತ್ತೇನೆ. ಅವರಿಂದಾಗಿಯೇ ನಾನು ಈಗ ಜೈಲಿನಿಂದ ಬಿಡುಗಡೆಯಾಗಿದ್ದೇನೆ. ಸರ್ವಾಧಿಕಾರದಿಂದ ಪ್ರಜಾಪ್ರಭುತ್ವವನ್ನು ಉಳಿಸಲು ಎಲ್ಲರೂ ಹೋರಾಡೋಣ” ಎಂದು ಹೇಳಿದರು.

ಅಬಕಾರಿ ನೀತಿ ಪ್ರಕರಣವೇನು?

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ದೆಹಲಿ ಸರ್ಕಾರವು ನಗರದ ಪ್ರಮುಖ ಮದ್ಯದ ವ್ಯಾಪಾರವನ್ನು ಪರಿಷ್ಕರಿಸುವ ನೀತಿಯನ್ನು ರೂಪಿಸಿದ್ದು, ವ್ಯಾಪಾರಿಗಳಿಗೆ ಪರವಾನಗಿ ಶುಲ್ಕದ ಬದಲಾವಣೆ ಸೇರಿದಂತೆ ಹಲವು ಬದಲಾವಣೆ ಮಾಡಿತ್ತು. ಆದರೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಇದರಲ್ಲಿ ಅಕ್ರಮಗಳನ್ನು ಆರೋಪಿಸಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಕೋರಿದ್ದರು. ನಂತರ ನೀತಿಯನ್ನು ರದ್ದುಗೊಳಿಸಲಾಯಿತು.

ಸಿಬಿಐ ಮತ್ತು ಇಡಿ ಪ್ರಕಾರ, ಎಎಪಿ ನಾಯಕರು ಅಬಕಾರಿ ನೀತಿಯ ಅಡಿಯಲ್ಲಿ ಪರವಾನಗಿ ನೀಡಲು ರಾಜಕಾರಣಿಗಳು ಮತ್ತು ಮದ್ಯದ ಉದ್ಯಮಿಗಳ ಗುಂಪಿನಿಂದ ₹ 100 ಕೋಟಿ ಕಿಕ್‌ಬ್ಯಾಕ್‌ಗಳನ್ನು ಸ್ವೀಕರಿಸಿದ್ದಾರೆ. ಆರೋಪಪಟ್ಟಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದ್ದು, ಅಬಕಾರಿ ನೀತಿ ಪ್ರಕರಣದ ಎಲ್ಲಾ ಆರೋಪಿಗಳು ಅಬಕಾರಿ ನೀತಿಯನ್ನು ರೂಪಿಸಲು ದೆಹಲಿ ಸಿಎಂ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿತ್ತು. 

ಇದನ್ನೂ ಓದಿ: Arvind Kejriwal: ಜೂನ್‌ 1ರವರೆಗೆ ಕೇಜ್ರಿವಾಲ್‌ಗೆ ಜಾಮೀನು, ಮತದಾನ ಮುಗಿಯುವವರೆಗೆ ರಿಲೀಫ್‌

Continue Reading
Advertisement
IPL 2024
ಕ್ರೀಡೆ14 mins ago

IPL 2024 : ಗೆಲುವಿನ ನಡುವೆಯೂ ಬೇಸರ; ಶುಭ್​ಮನ್ ಗಿಲ್​ಗೆ 24 ಲಕ್ಷ ರೂಪಾಯಿ ದಂಡ

Arvind Kejriwal
ದೇಶ24 mins ago

ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

Hair Color Fashion
ಫೋಟೊ24 mins ago

Hair Color Fashion: ವೈರಲ್‌ ಆದ ಹೇರ್‌ ಕಲರ್ ಸ್ಟೈಲ್‌

Akshaya Tritiya
ಬೆಂಗಳೂರು41 mins ago

Akshaya Tritiya: ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಲ್ಲಿ ಬಾಲ ರಾಮನ ಬೆಳ್ಳಿ ವಿಗ್ರಹದ ಪೂಜೆ ಸಂಪನ್ನ

Rishabh Pant
ಕ್ರೀಡೆ42 mins ago

Rishabh Pant : 2024ರ ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

Pooja Hegde
ಸಿನಿಮಾ49 mins ago

Pooja Hegde: ಕಾರ್ಕಳದ ಕಣಜಾರು ದೇಗುಲಕ್ಕೆ ಭೇಟಿ ನೀಡಿದ ನಟಿ ಪೂಜಾ ಹೆಗ್ಡೆ

Road Accident in chikodi maharashtra
ಬೆಳಗಾವಿ1 hour ago

Road Accident : ಟೈರ್‌ ಸ್ಫೋಟಕ್ಕೆ ಕ್ರೂಸರ್ ವಾಹನ ಪಲ್ಟಿ; ಮೂವರು ಮಹಿಳೆಯರ ದುರ್ಮರಣ

HD Deve Gowda
ಕರ್ನಾಟಕ1 hour ago

ಮಗ ಜೈಲಿಗೆ, ಮೊಮ್ಮಗ ನಾಪತ್ತೆ; ದೇವೇಗೌಡರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಮಠಾಧೀಶರು

Artificial Intelligence
ದೇಶ1 hour ago

Artificial Intelligence: 98 ವಿವಿಧ ಭಾಷೆಗಳಲ್ಲಿ ಹನುಮಾನ್‌ AI ತಂತ್ರಜ್ಞಾನ; ಏನಿದರ ವಿಶೇಷ?

Book Release
ಬೆಂಗಳೂರು1 hour ago

Book Release: ಬೆಂಗಳೂರಿನಲ್ಲಿ ಮೇ 12ರಂದು ಡಾ.ಗಣಪತಿ ಭಟ್‌ ಅವರ ʼಕನ್ನಡದಲ್ಲಿ ಶ್ರೀ ಶಂಕರʼ ಪುಸ್ತಕ ಲೋಕಾರ್ಪಣೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ1 day ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ2 days ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಟ್ರೆಂಡಿಂಗ್‌