YouTube Channels: ದೇಶ ವಿರೋಧಿ ಚಟುವಟಿಕೆಗಳಿಗೆ ಬ್ರೇಕ್; 8 ಯುಟ್ಯೂಬ್‌ ಚಾನೆಲ್‌ ನಿಷೇಧಿಸಿದ ಕೇಂದ್ರ ಸರ್ಕಾರ Vistara News

ದೇಶ

YouTube Channels: ದೇಶ ವಿರೋಧಿ ಚಟುವಟಿಕೆಗಳಿಗೆ ಬ್ರೇಕ್; 8 ಯುಟ್ಯೂಬ್‌ ಚಾನೆಲ್‌ ನಿಷೇಧಿಸಿದ ಕೇಂದ್ರ ಸರ್ಕಾರ

YouTube Channels: ನಕಲಿ ಸುದ್ದಿಗಳನ್ನು ಹರಡುತ್ತಿದ್ದ, ಭಾರತದ ಪ್ರಜಾಪ್ರಭುತ್ವಕ್ಕೆ ಮಾರಕವಾದ ಕೃತ್ಯಗಳಲ್ಲಿ ತೊಡಗಿದ ಆರೋಪದಲ್ಲಿ ಎಂಟು ಯುಟ್ಯೂಬ್‌ ಚಾನೆಲ್‌ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಇವು ಕೋಟ್ಯಂತರ ಸಬ್‌ಸ್ಕ್ರೈಬರ್‌ಗಳನ್ನು ಹೊಂದಿದ್ದವು.

VISTARANEWS.COM


on

Modi Government Blocks YouTube Channels
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕೇಂದ್ರ ಸರ್ಕಾರವು ನಕಲಿ ಸುದ್ದಿಗಳನ್ನು ಹರಡುವ, ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಯುಟ್ಯೂಬ್‌ ಚಾನೆಲ್‌ ಹಾಗೂ ವೆಬ್‌ಸೈಟ್‌ಗಳ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ನಕಲಿ ಸುದ್ದಿ ಪ್ರಸಾರ, ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ 8 ಯುಟ್ಯೂಬ್‌ ಚಾನೆಲ್‌ಗಳನ್ನು (YouTube Channels) ಕೇಂದ್ರ ಸರ್ಕಾರ ನಿಷೇಧಿಸಿದೆ. ಆ ಮೂಲಕ ನಕಲಿ ಸುದ್ದಿ ಪ್ರಸಾರ ಮಾಡುವ ಇತರ ಯುಟ್ಯೂಬ್‌ ಚಾನೆಲ್‌ಗಳಿಗೂ ದಿಟ್ಟ ಸಂದೇಶ ರವಾನಿಸಿದೆ.

ಎಂಟೂ ಯುಟ್ಯೂಬ್‌ ಚಾನೆಲ್‌ಗಳು ಸೇರಿ ಒಟ್ಟು 2.3 ಕೋಟಿ ಸಬ್‌ಸ್ಕ್ರೈಬ್‌ಗಳನ್ನು ಹೊಂದಿದ್ದವು. ಆದರೆ, ಇವು ನಕಲಿ ಸುದ್ದಿ ಪ್ರಸಾರ ಮಾಡುತ್ತಿದ್ದ ಕಾರಣ ನಿಷೇಧಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಯಹಾ ಸಚ್‌ ದೇಖೊ (Yahan Sach Dekho), ಕ್ಯಾಪಿಟಲ್‌ ಟಿವಿ (Capital TV), ಕೆಪಿಎಸ್‌ ನ್ಯೂಸ್ (KPS News),‌ ಸರ್ಕಾರಿ ವ್ಲೋಗ್ (Sarkari Vlog),‌ ಅರ್ನ್‌ ಟೆಕ್‌ ಇಂಡಿಯಾ (Earn Tech India), ಎಸ್‌ಪಿಎನ್‌9 ನ್ಯೂಸ್ (SPN9 News),‌ ಎಜ್ಯುಕೇಶನಲ್‌ ದೋಸ್ತ್‌ (Educational Dost) ಹಾಗೂ ವರ್ಲ್ಡ್‌ ಬೆಸ್ಟ್‌ ನ್ಯೂಸ್ (World Best News)‌ ಯುಟ್ಯೂಬ್‌ ಚಾನೆಲ್‌ಗಳು ನಿಷೇಧಕ್ಕೊಳಗಾಗಿವೆ.

ವರ್ಲ್ಡ್‌ ಬೆಸ್ಟ್‌ ನ್ಯೂಸ್ 17 ಲಕ್ಷ ಸಬ್‌ಸ್ಕ್ರೈಬರ್‌ಗಳನ್ನು ಹೊಂದಿದ್ದು, 18 ಕೋಟಿ ವೀಕ್ಷಣೆ ಕಂಡಿದೆ. ಆದರೆ, ಇದು ಸೇನೆಯ ಕುರಿತು ತಪ್ಪು ಮಾಹಿತಿ ನೀಡುತ್ತಿತ್ತು. 34 ಲಕ್ಷ ಸಬ್‌ಸ್ಕ್ರೈಬರ್ಸ್‌ ಹಾಗೂ 23 ಕೋಟಿ ವೀಕ್ಷಣೆ ಕಂಡಿದ್ದ ಎಜುಕೇಷನಲ್‌ ದೋಸ್ತ್‌ ಚಾನೆಲ್‌ ಸರ್ಕಾರದ ಯೋಜನೆಗಳ ಕುರಿತು ಜನರ ದಾರಿ ತಪ್ಪಿಸುತ್ತಿತ್ತು. ಉಳಿದ ಚಾನೆಲ್‌ಗಳು ಕೂಡ ಚುನಾವಣೆ ಆಯೋಗ, ಚುನಾವಣೆ, ವಿದ್ಯುನ್ಮಾನ ಮತಯಂತ್ರ (EVM), ಪ್ರಧಾನಮಂತ್ರಿ, ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ, ಗ್ಯಾಸ್‌ ಸಿಲಿಂಡರ್‌ ಸೇರಿ ಹಲವು ವಿಷಯಗಳಲ್ಲಿ ಜನರ ದಾರಿ ತಪ್ಪಿಸುತ್ತಿವೆ ಎಂದು ಕೇಂದ್ರ ಸರ್ಕಾರ ಕಠಿಣ ಕ್ರಮ ತೆಗೆದುಕೊಂಡಿದೆ.

ಇದನ್ನೂ ಓದಿ: ವಿಸ್ತಾರ Explainer: ಮೋದಿ ಸರ್ಕಾರ ಲ್ಯಾಪ್‌ಟಾಪ್‌, ಕಂಪ್ಯೂಟರ್‌ ಆಮದು ನಿಷೇಧಿಸಿದ್ದೇಕೆ? ದರ ಹೆಚ್ಚಬಹುದಾ?

ಭಾರತದ ಭದ್ರತೆ, ಆಡಳಿತ, ವಿದೇಶಾಂಗ ವ್ಯವಹಾರ, ಧಾರ್ಮಿಕ ವಿಷಯಗಳು- ಹೀಗೆ ಹಲವು ಸೂಕ್ಷ್ಮ ವಿಷಯಗಳ ಬಗ್ಗೆ ತಪ್ಪು ಮಾಹಿತಿ ನೀಡುವುದಲ್ಲದೆ, ಕೋಮುಗಲಭೆ, ಸಂಘರ್ಷಕ್ಕೆ ಕಾರಣವಾಗುತ್ತಿದ್ದ ಎಲ್ಲ ಯೂಟ್ಯೂಬ್​ ಚಾನೆಲ್​ಗಳು, ವೆಬ್​ಸೈಟ್​ಗಳ ವಿರುದ್ಧ ಕೇಂದ್ರ ಸರ್ಕಾರವು, 2021ರ ಐಟಿ ನಿಯಮ (ಮಾಹಿತಿ ತಂತ್ರಜ್ಞಾನ-ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿಸಂಹಿತೆ) ಅಡಿಯಲ್ಲಿ ಕ್ರಮ ಕೈಗೊಳ್ಳುತ್ತಿದೆ. ಕೇಂದ್ರ ಸರ್ಕಾರ ಇತ್ತೀಚಿನ ವರ್ಷಗಳಲ್ಲಿ 150ಕ್ಕೂ ಅಧಿಕ ಯುಟ್ಯೂಬ್‌ ಚಾನೆಲ್‌ ಹಾಗೂ ವೆಬ್‌ಸೈಟ್‌ಗಳನ್ನು ಬ್ಲಾಕ್‌ ಮಾಡಿದೆ ಎಂದು ತಿಳಿದುಬಂದಿದೆ. ದೇಶದ ಸಾರ್ವಭೌಮತೆಗೆ ಧಕ್ಕೆ ತರುವ ವಿದೇಶಿ Appಗಳನ್ನೂ ಕೇಂದ್ರ ಸರ್ಕಾರ ನಿಷೇಧಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

ಮೂಲಸೌಕರ್ಯ ಒದಗಿಸದ ಮನೆಗಳು ಪೂರ್ಣಗೊಂಡ ಪಿಎಂಎವೈ ಮನೆಗಳಲ್ಲ!

PMAY Houses: ವಸತಿ ಮತ್ತು ನಗರ ವ್ಯವಹಾರಗಳ ಸ್ಥಾಯಿ ಸಮಿತಿಯು ಲೋಕಸಭೆಯಲ್ಲಿ ತನ್ನ ವರದಿಯನ್ನು ಮಂಡಿಸಿದ್ದು, ಹಲವು ಸುಧಾರಣೆಗಳಿಗೆ ಸೂಚಿಸಿದೆ.

VISTARANEWS.COM


on

Houses without infrastructure are not completed PMAY houses
Koo

ನವದೆಹಲಿ: ರಸ್ತೆಗಳು (Roads), ಒಳಚರಂಡಿ(sewerage), ನೀರು (Water) ಮತ್ತು ವಿದ್ಯುತ್ ಸಂಪರ್ಕಗಳಂಥ (electricity connections) ಮೂಲಭೂತ ಸೌಕರ್ಯಗಳನ್ನು (Basic Infrastructure) ಒದಗಿಸದೇ ಹೊರತು ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) ಅಡಿಯಲ್ಲಿ (PMAY Houses) ನಿರ್ಮಿಸಲಾದ ವಸತಿ ಮನೆಗಳನ್ನು ಪೂರ್ಣಗೊಂಡ ಮನೆಗಳೆಂದು ಕೇಂದ್ರ ಸರ್ಕಾರವು ಪರಿಗಣಿಸಬಾರದು ಎಂದು ವಸತಿ ಮತ್ತು ನಗರ ವ್ಯವಹಾರಗಳ ಸ್ಥಾಯಿ ಸಮಿತಿ ಹೇಳಿದೆ. ಈ ಸಮಿತಿಯು ಲೋಕಸಭೆಯಲ್ಲಿ ಮಂಡಿಸಿದ ವರದಿಯಲ್ಲಿ ಈ ಕುರಿತು ಸವಿಸ್ತಾರವಾಗಿ ತಿಳಿಸಲಾಗಿದೆ.

2015ರಲ್ಲಿ ಪ್ರಾರಂಭವಾದ ಪಿಎಂಎವೈ(ಯು) ಬಡತನವನ್ನು ನಿವಾರಿಸುವ ಗುರಿಯನ್ನು ಹೊಂದಿರುವ ಕೇಂದ್ರದ ಪ್ರಮುಖ ಯೋಜನೆಗಳಲ್ಲಿ ಒಂದಾಗಿದೆ ಮತ್ತು 2022 ರ ವೇಳೆಗೆ ಎಲ್ಲರಿಗೂ ವಸತಿ ಒದಗಿಸುವ ಉದ್ದೇಶವನ್ನು ಹೊಂದಿತ್ತು. ಬಾಕಿ ಉಳಿದಿರುವ ಯೋಜನೆಗಳ ನಡುವೆ, ಯೋಜನೆಯ ಗಡುವನ್ನು ನಂತರ ಡಿಸೆಂಬರ್ 2024 ಕ್ಕೆ ವಿಸ್ತರಿಸಲಾಗಿದೆ.

ಮನೆಯ ಅಗತ್ಯವಿರುವ “ಯಾರೂ” ಅವಕಾಶವಂಚಿತರಾಗಬಾರದು ಎಂದು ಖಚಿತಪಡಿಸಿಕೊಳ್ಳಲು, ಮುಂಗೇರ್‌ನ ಜೆಡಿಯು ಸಂಸದ ರಾಜೀವ್ ರಂಜನ್ ಸಿಂಗ್ ನೇತೃತ್ವದ ಸದನ ಸಮಿತಿಯು ಪಿಎಂಎವೈ (ಯು)ದ ಸಾಮಾಜಿಕ ಪರಿಣಾಮದ ಕುರಿತು ಅಧ್ಯಯನ ನಡೆಸುವಂತೆ ಕೇಂದ್ರ ಸರ್ಕಾರವನ್ನು ಕೇಳಿಕೊಂಡಿದೆ.

ಪಿಎಂಎವೈ ಮೂಲ ಉದ್ದೇಶವು ಎಲ್ಲರಿಗೂ ವಸತಿ ಒದಗಿಸುವುದು, ನಗರ ಪ್ರದೇಶಗಳಲ್ಲಿನ ವಸತಿ ಅಗತ್ಯಗಳಲ್ಲಿನ ಅಂತರವನ್ನು ಅಳೆಯಲು ಪ್ರಭಾವದ ಮೌಲ್ಯಮಾಪನ ಅಧ್ಯಯನವನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಸಮಿತಿಯು ತನ್ನ ವರದಿಯಲ್ಲಿ ಹೇಳಿದೆ.

ರಾಜ್ಯ ಮತ್ತು ಸ್ಥಳೀಯ ಸಂಸ್ಥೆಗಳ ಅನುದಾನವನ್ನು ಗಣನೆಗೆ ತೆಗೆದುಕೊಂಡ ನಂತರವೂ ಫಲಾನುಭವಿಗಳು ಇನ್ನೂ ಒಟ್ಟು ವೆಚ್ಚದ ಸುಮಾರು 60% ಅನ್ನು ಪಾವತಿಸಬೇಕಾಗುತ್ತದೆ ಎಂದು ಸಮಿತಿ ಹೇಳಿದೆ. ಈ ಫಲಾನುಭವಿಗಳಲ್ಲಿ ಹೆಚ್ಚಿನವರು ಸ್ಥಿರ ಆದಾಯವನ್ನು ಹೊಂದಿಲ್ಲದ ಕಾರಣ, ಅವರು ಬ್ಯಾಂಕ್‌ಗಳಿಂದ ಸಾಲ ಪಡೆಯಲು ಸಾಧ್ಯವಾಗುವುದಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಆದರೆ, 2024ರ ಡಿಸೆಂಬರ್ ವರೆಗೆ ಇದಕ್ಕಾಗಿ 1.5 ಲಕ್ಷ ರೂ. ಮೀರಿ ನಿಧಿಯನ್ನು ಹೆಚ್ಚಿಸುವುದಿಲ್ಲ ಹೇಳಿದೆ. ಕೇಂದ್ರದ ನೆರವು ನಿರ್ಮಾಣದ ವೆಚ್ಚವನ್ನು ಅವಲಂಬಿಸಿ ಬದಲಾಗಬೇಕು, ಇದು ಸ್ಥಳಾಕೃತಿ ಮತ್ತು ಇತರ ಅಂಶಗಳನ್ನು ಅವಲಂಬಿಸಿರುತ್ತದೆ ಎಂದು ಸಮಿತಿ ಹೇಳಿದೆ.

ಈ ಸುದ್ದಿಯನ್ನೂ ಓದಿ: ಪ್ರಧಾನಮಂತ್ರಿ ಆವಾಸ್ ಯೋಜನೆ ಮನೆ ನಿರ್ಮಾಣದಲ್ಲಿ ಗೋಲ್ಮಾಲ್​; ಇಡಿ ಅಧಿಕಾರಿಗಳಿಂದ ದಾಳಿ, ತೀವ್ರ ಶೋಧ

Continue Reading

ದೇಶ

ಈರುಳ್ಳಿ ರಫ್ತು ನಿಷೇಧ! ಎಥೆನಾಲ್‌ ಉತ್ಪಾದನೆಗೆ ಕಬ್ಬು ಬಳಸುವಂತಿಲ್ಲ

bars onion export: ಬರದ ಕಾರಣದಿಂದಾಗಿ ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಕುಂಠಿತವಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಬೆಲೆ ಏರಿಕೆಯನ್ನು ತಡೆಯಲು ಸರ್ಕಾರ ಕ್ರಮ ಕೈಗೊಂಡಿದೆ.

VISTARANEWS.COM


on

Central government bars onion export to curb inflation
Koo

ನವದೆಹಲಿ: ಬೆಲೆ ಏರಿಕೆಯನ್ನು (Price Rise) ತಡೆಯುವುದಕ್ಕಾಗಿ ಕೇಂದ್ರ ಸರ್ಕಾರವು (Central Government) ಶುಕ್ರವಾರ ಹಲವು ಕ್ರಮಗಳನ್ನು ಘೋಷಣೆ ಮಾಡಿದ್ದು, ಈ ಪೈಕಿ ಈರುಳ್ಳಿ ರಫ್ತು ಮೇಲೆ ನಿಷೇಧ ಹೇರಿದೆ(bars onion export). ಜತೆಗೆ, ಎಥೆನಾಲ್‌ ತಯಾರಿಕೆಗಾಗಿ ಕಬ್ಬು ಬಳಕೆಯನ್ನು ತಡೆಯಲಾಗುತ್ತಿದೆ. ಅನಗತ್ಯವಾಗಿ ಗೋಧಿ ದಾಸ್ತಾನು ಮಾಡಿಕೊಳ್ಳುವ ವ್ಯಾಪಾರಿಗಳ ವಿರುದ್ಧ ಬಿಗಿಯಾದ ನಿಯಂತ್ರಣಗಳನ್ನು ವಿಧಿಸಲಾಗುತ್ತಿದೆ.

ಕೆಲವು ರಾಜ್ಯಗಳಲ್ಲಿ ಬರ ಹಾಗೂ ಬೇಸಿಗೆ ಮಳೆಯಿಂದಾಗಿ ಸಕ್ಕರೆ, ಬೇಳೆ ಕಾಳುಗಳು ಸೇರಿದಂತೆ ಹಲವು ಆಹಾರ ಧಾನ್ಯಗಳ ಉತ್ಪಾದನೆ ಕುಂಠಿತವಾಗಿದೆ. ಈ ಹಿನ್ನೆಲೆಯಲ್ಲೇ ಕೇಂದ್ರ ಸರ್ಕಾರವು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಕಬ್ಬಿನ ಉತ್ಪಾದನೆಯಲ್ಲಿ ತೀವ್ರ ಕುಸಿತದ ನಿರೀಕ್ಷೆ ಇರುವುದರಿಂದ ಸರ್ಕಾರವು ಕಬ್ಬಿನ ರಸವನ್ನು ಪೆಟ್ರೋಲ್‌ನೊಂದಿಗೆ ಬೆರೆಸಿದ ಎಥೆನಾಲ್ ಉತ್ಪಾದನೆ ಮಾಡುವುದನ್ನು ನಿರ್ಬಂಧಿಸಿದೆ ಎಂದು ಆಹಾರ ಕಾರ್ಯದರ್ಶಿ ಸಂಜೀವ್ ಚೋಪ್ರಾ ಹೇಳಿದ್ದಾರೆ.

ಎಥೆನಾಲ್ ತಯಾರಿಕೆಗಾಗಿ ಕಬ್ಬಿನ ರಸದ ಮಾರಾಟವನ್ನು ನಿಲ್ಲಿಸುವ ನಿರ್ಧಾರವು 2025-26ರ ವೇಳೆಗೆ ಪೆಟ್ರೋಲ್‌ನೊಂದಿಗೆ 20% ಎಥೆನಾಲ್ ಮಿಶ್ರಣವನ್ನು ಸಾಧಿಸುವ ಭಾರತದ ಮಹತ್ವಾಕಾಂಕ್ಷೆಯ ಒತ್ತಡದ ಮೇಲೆ ಪರಿಣಾಮ ಬೀರುವುದಿಲ್ಲ, ಇದನ್ನು ಇ20 ಎಂದು ಕರೆಯಲಾಗುತ್ತದೆ ಎಂದು ಪೆಟ್ರೋಲಿಯಂ ಕಾರ್ಯದರ್ಶಿ ಪಂಕಜ್ ಜೈನ್ ಹೇಳಿದ್ದಾರೆ.

ಈ ನಿಷೇಧವು ತಾತ್ಕಾಲಿಕವಾಗಿದೆ ಮತ್ತು ಪರಿಸ್ಥಿತಿಯು ಸುಧಾರಿಸಿದ ಬಳಿಕ ನೀತಿಯನ್ನು ಮರುಮಾಪನ ಮಾಡಲಾಗುವುದು. ಎಥೆನಾಲ್-ಬ್ಲೆಂಡಿಂಗ್ ಪ್ರೋಗ್ರಾಂ ಮತ್ತು ಗ್ಲೋಬಲ್ ಜೈವಿಕ ಇಂಧನ ಒಕ್ಕೂಟ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಬೇಡಿಕೆಗಳನ್ನು ಪೂರೈಸುವುದನ್ನು ಖಚಿತಪಡಿಸಿಕೊಳ್ಳಲು ನಾವು ಸಂಪೂರ್ಣ ಯೋಜನೆಯನ್ನು ಹೊಂದಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ದೇಶದ ಸುಮಾರು 25% ಎಥೆನಾಲ್ ಅನ್ನು ಕಬ್ಬಿನ ರಸದಿಂದ ತಯಾರಿಸಲಾಗುತ್ತದೆ, ಆದರೆ ಇನ್ನೊಂದು 50% ಮೊಲಾಸಸ್‌ನಿಂದ ಉತ್ಪಾದಿಸಲಾಗುತ್ತದೆ. ಆದರೆ ಉಳಿದವು ಅಕ್ಕಿ ಮತ್ತು ಜೋಳದಂತಹ ಧಾನ್ಯಗಳಿಂದ ತಯಾರಿಸಲಾಗುತ್ತದೆ.

ಚಿಲ್ಲರೆ ಹಣದುಬ್ಬರವು ಹೆಚ್ಚಾಗುವ ನಿರೀಕ್ಷೆಯಿದೆ, ಮೂರು ತಿಂಗಳ ಕಾಲ ಇಳಿಮುಖವಾದ ನಂತರ ಹೆಚ್ಚಿನ ಆಹಾರ ಬೆಲೆಗಳಿಂದ ಅದು ಮತ್ತೆ ಹೆಚ್ಚಾಗಬಹುದು. ಈರುಳ್ಳಿ, ಟೊಮ್ಯಾಟೊ ಮತ್ತು ಬೇಳೆಕಾಳುಗಳಂತಹ ತರಕಾರಿಗಳು ಬೆಲೆ ಏರಿಕೆಗೆ ಕಾರಣವಾಗಿವೆ ಎಂದು ವಿಶ್ಲೇಷಕರು ಹೇಳಿದ್ದಾರೆ. ಚಿಲ್ಲರೆ ಹಣದುಬ್ಬರವು ಅಕ್ಟೋಬರ್‌ನಲ್ಲಿ 4.87% ಆಗಿತ್ತು, ಇದು ನಾಲ್ಕು ತಿಂಗಳ ಕನಿಷ್ಠವಾಗಿದೆ.

ಈ ಸುದ್ದಿಯನ್ನೂ ಓದಿ: Retail Inflation: ಶೇ.4.87ಕ್ಕೆ ಇಳಿಕೆಯಾದ ಚಿಲ್ಲರೆ ಹಣದುಬ್ಬರ!

Continue Reading

ದೇಶ

ಬಿಜೆಪಿಗೆ ಮತ ಹಾಕಿದ್ದಕ್ಕೆ ಮುಸ್ಲಿಂ ಮಹಿಳೆಗೆ ಮನೆಯವರಿಂದಲೇ ಹಲ್ಲೆ!

Muslim Woman: ಇತ್ತೀಚೆಗಷ್ಟೇ ಮುಕ್ತಾಯವಾದ ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 163 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯ ಸಾಧಿಸಿದೆ.

VISTARANEWS.COM


on

Muslim woman beaten up for voting bjp
Koo

ಭೋಪಾಲ್: ವಿಧಾನಸಭೆ ಚುನಾವಣೆಯಲ್ಲಿ (Assembly Election 2023) ಭಾರತೀಯ ಜನತಾ ಪಾರ್ಟಿಗೆ (BJP Party) ಮತ ಹಾಕಿದ್ದಕ್ಕಾಗಿ ಮನೆಯಿಂದವರಿಂದಲೇ ಹಲ್ಲೆಗೊಳಗಾಗಿದ್ದ ಮುಸ್ಲಿಮ್ ಮಹಿಳೆ (Muslim woman beaten) ಸಮೀನಾ ಬಿ ತನ್ನ ಇಬ್ಬರು ಮಕ್ಕಳೊಂದಿಗೆ ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿ, ರಕ್ಷಣೆ ಕೋರಿದರು. ಈ ಘಟನೆಯ ಕುರಿತು ತಿಳಿದು ಬಂದ ಬಳಿಕ, ಮುಸ್ಲಿಮ್ ಮಹಿಳೆಯನ್ನು ಭೇಟಿ ಮಾಡಲು ಶಿವರಾಜ್ ಸಿಂಗ್ ಚೌಹಾಣ್ ಮುಂದಾಗಿದ್ದರು. ಅಂತಿಮಾಗಿ ಅವರನ್ನು ಶುಕ್ರವಾರ ಭೇಟಿಯಾದರು.

ಮುಖ್ಯಮಂತ್ರಿಗಳು ಅವರಿಗೆ ಸುರಕ್ಷತೆ ಮತ್ತು ಭದ್ರತೆಯ ಭರವಸೆ ನೀಡಿದರು ಎಂದು ಮೂಲಗಳು ತಿಳಿಸಿವೆ. ತಮ್ಮ ಮಕ್ಕಳ ಬಗ್ಗೆ ಅವರು ತೋರಿದ ಕಾಳಜಿಯಿಂದ ಮತ್ತೊಮ್ಮೆ ಬಿಜೆಪಿಗೆ ಮತ ಹಾಕುವುದಾಗಿ ಸಮೀನಾ ಬಿ ಮುಖ್ಯಮಂತ್ರಿಗೆ ತಿಳಿಸಿದ್ದಾರೆ.

ನಾನು ಬಿಜೆಪಿಗೆ ಮತ ಹಾಕಿದ್ದೇನೆ ಎಂದು ತಿಳಿದ ನನ್ನ ಗಂಡನ ಸಹೋದರ ಜಾವೇದ್ ನನ್ನ ಮೇಲೆ ಹಲ್ಲೆ ನಡೆಸಿದರು. ಸಹೋದರ ಶಿವರಾಜ್ ಸಿಂಗ್ ಚೌಹಾಣ್ ಅವರ ಪಕ್ಷಕ್ಕೆ ನಾನು ಏಕೆ ಮತ ಹಾಕಿದ್ದೇನೆ ಎಂದು ಅವರು ಕೇಳಿದರು ಎಂದು ಇಬ್ಬರು ಮಕ್ಕಳ ತಾಯಿ ಹೇಳಿದ್ದಾರೆ.

ಶಿವರಾಜ್ ಸಿಂಗ್ ಚೌಹಾಣ್ ಅವರ ಜತೆಗಿನ ಭೇಟಿ ಚೆನ್ನಾಗಿತ್ತು ಎಂದು ಹೇಳಿದ ಸಮೀನಾ ಬಿ, ಭಯ್ಯಾ(ಚೌಹಾಣ್) ಅವರು ನನ್ನ ಮತ್ತು ಮಕ್ಕಳ ಸುರಕ್ಷತೆಯ ಭರವಸೆ ನೀಡಿದ್ದಾರೆ. ನನಗೆ ಸರಿಸಿದ್ದಕ್ಕಾಗಿ ನಾನು ವೋಟ್ ಮಾಡಿ್ದದೇನೆ. ಸಂವಿಧಾನವು ಅವರವರ ಆಯ್ಕೆಯಂತೆ ಮತ ಹಾಕಲು ಹಕ್ಕು ನೀಡಿದೆ ಎಂದು ಹೇಳಿದರು. ಚೌಹಾಮ್ ಅವರು ಎಂದಿಗೂ ತಪ್ಪು ಮಾಡಿಲ್ಲ. ಹಾಗಾಗಿ ನಾನು ಅವರಿಗೆ ಮತ ಹಾಕಿದ್ದೇನೆ ಎಂದು ಸಮೀನಾ ಬಿ ಹೇಳಿದರು.

ಚೌಹಾಣ್ ಅವರು ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. “ಲಾಡ್ಲಿ ಬೆಹೆನಾ” ದಂತಹ ಯೋಜನೆಗಳ ಮೂಲಕ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಗೆಲುವು ತಂದುಕೊಟ್ಟರು. ಆದಾಗ್ಯೂ, ಭಾರತೀಯ ಜನತಾ ಪಾರ್ಟಿಯ ಹೊಸ ಮುಖಗಳಿಗೆ ಈ ಬಾರಿ ಮುಖ್ಯಮಂತ್ರಿ ಪಟ್ಟ ಕಟ್ಟಲು ಯೋಜನೆ ಹಾಕಿಕೊಂಡಿದ್ದರು, ಶಿವರಾಜ್ ಸಿಂಗ್ ಚೌಹಾಣ್ ಅವರು ಮತ್ತೆ ಮುಖ್ಯಮಂತ್ರಿಯಾಗುವುದು ಅನುಮಾನ ಎಂದು ಹೇಳಲಾಗುತ್ತಿದೆ.

230 ಸ್ಥಾನಗಳ ಮಧ್ಯ ಪ್ರದೇಶಗ ವಿಧಾನಸಭೆಯಲ್ಲಿ ಭಾರತೀಯ ಜನತಾ ಪಾರ್ಟಿಯ 163 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯ ಸಾಧಿಸಿದೆ. ಹಾಗಿದ್ದೂ, ತಾನು ಪಕ್ಷದ ಕಾಲಾಳು ಆಗಿದ್ದು, ಮುಖ್ಯಮಂತ್ರಿಯ ಹುದ್ದೆಯ ರೇಸ್‌ನಲ್ಲಿ ತಾವಿಲ್ಲ ಎಂದು ಶಿವರಾಜ್ ಸಿಂಗ್ ಚೌಹಾಣ್ ಅವರು ಹೇಳಿದ್ದಾರೆ. ಅಲ್ಲದೇ, 2024ರ ಚುನಾವಣೆಯಲ್ಲಿ ಬಿಜೆಪಿ ಮಧ್ಯ ಪ್ರದೇಶದ 29 ಸ್ಥಾನಗಳನ್ನು ಗೆದ್ದುಕೊಡುವ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: Madhya Pradesh: 2 ವರ್ಷದ ಹಿಂದೆ ಕೋವಿಡ್‌ನಿಂದ ಸತ್ತ ವ್ಯಕ್ತಿ, ಜೀವಂತವಾಗಿ ಪ್ರತ್ಯಕ್ಷ! ಮುಂದೆ ಏನಾಯ್ತು?

Continue Reading

ಕೋರ್ಟ್

ವೈವಾಹಿಕ ‘ಅತ್ಯಾಚಾರ ಅಪರಾಧವಲ್ಲ’ ಎಂದ ಅಲಹಾಬಾದ್ ಹೈಕೋರ್ಟ್

Marital Rape: ಭಾರತದಲ್ಲಿ ವೈವಾಹಿಕ ಅತ್ಯಾಚಾರವನ್ನು ಅಪರಾಧ ಎಂದು ಇನ್ನೂ ಪರಿಗಣಿಸುತ್ತಿಲ್ಲ ಎಂದು ಹೈಕೋರ್ಟ್ ಹೇಳಿದೆ.

VISTARANEWS.COM


on

Marital Rape is no offence Says Allahabad High Court
Koo

ಅಲಹಾಬಾದ್: ಪತ್ನಿಯು 18 ವರ್ಷಕ್ಕಿಂತ ಮೇಲ್ಪಟ್ಟಿದ್ದರೆ (wife is 18 or above) ಭಾರತೀಯ ದಂಡ ಸಂಹಿತೆ (IPC) ಅಡಿಯಲ್ಲಿ ವೈವಾಹಿಕ ಅತ್ಯಾಚಾರವನ್ನು ಅಪರಾಧವೆಂದು ಪರಿಗಣಿಸಲಾಗುವುದಿಲ್ಲ (Marital Rape in offence) ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ(Allahabad High Court). ತನ್ನ ಹೆಂಡತಿಯಿಂದ ಅಸ್ವಾಭಾವಿಕ ಅಪರಾಧ ಆರೋಪವನ್ನು ಎದುರಿಸುತ್ತಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿದ ನ್ಯಾಯಾಲಯವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿತು.

ಈ ಪ್ರಕರಣದ ಆರೋಪಿಗಳಿಗೆ ಐಪಿಸಿಯ ಸೆಕ್ಷನ್ 377 ರ ಅಡಿಯಲ್ಲಿ ಶಿಕ್ಷೆ ವಿಧಿಸಲಾಗುವುದಿಲ್ಲ ಎಂದು ಪ್ರತಿಪಾದಿಸಿದ ನ್ಯಾಯಮೂರ್ತಿ ರಾಮ್ ಮನೋಹರ್ ನಾರಾಯಣ ಮಿಶ್ರಾ ಅವರ ಪೀಠವು ಈ ದೇಶದಲ್ಲಿ ವೈವಾಹಿಕ ಅತ್ಯಾಚಾರವನ್ನು ಇನ್ನೂ ಅಪರಾಧವೆಂದು ಪರಿಗಣಿಸಲಾಗಿಲ್ಲ ಎಂದು ಹೇಳಿದೆ.

ವೈವಾಹಿಕ ಅತ್ಯಾಚಾರವನ್ನು ಕ್ರಿಮಿನಲ್‌ಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳು ಇನ್ನೂ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿಯಿರುವುದರಿಂದ, ಪತ್ನಿ 18 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರಾಗಿದ್ದಾಗ ವೈವಾಹಿಕ ಅತ್ಯಾಚಾರಕ್ಕೆ ಯಾವುದೇ ಕ್ರಿಮಿನಲ್ ದಂಡನೆ ಇಲ್ಲ ಎಂದು ಹೈಕೋರ್ಟ್ ಹೇಳಿದೆ.

ವೈವಾಹಿಕ ಸಂಬಂಧದಲ್ಲಿ ವೈವಾಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ, ಐಪಿಸಿ ಸೆಕ್ಷನ್ 377ರ ಪ್ರಕಾರ ಯಾವುದೇ ಶಿಕ್ಷೆ ಇಲ್ಲ ಎಂಬ ಮಧ್ಯ ಪ್ರದೇಶ ಹೈಕೋರ್ಟ್ ಅಭಿಪ್ರಾಯವನ್ನು ಅಲಹಾಬಾದ್ ಹೈಕೋರ್ಟ್, ಈ ಪ್ರಕರಣದಲ್ಲಿ ಗಮನಿಸಿದೆ.

ತಮ್ಮ ವಿರುದ್ಧ ಪತಿ ಅಸ್ವಾಭಾವಿಕ ಅಪರಾಧ ಎಸಗುತ್ತಿದ್ದಾರೆಂದು ಆರೋಪಿಸಿ ಮಹಿಳೆ ನ್ಯಾಯಾಲಯದ ಮೊರೆ ಹೋಗಿದ್ದಳು. ಆಕೆ, ಕೋರ್ಟ್‌ಗೆ ಸಲ್ಲಿಸಿದ ಮನವಿಯಲ್ಲಿ ತಮ್ಮ ವಿವಾಹ ನಿಂದನೀಯ ಸಂಬಂಧವಾಗಿದೆ. ಗಂಡ ತನ್ನನ್ನು ಮೌಖಿಕ ಮತ್ತು ದೈಹಿಕವಾಗಿ ಹಿಂಸಿಸುತ್ತಿದ್ದಾರೆ. ಅಲ್ಲದೇ ಗುದ ಸಂಭೋಗದಂಥ ಅಸ್ವಾಭಾವಿಕ ಕ್ರಿಯೆಗೆ ಒತ್ತಾಯಿಸುವ ಮೂಲಕ ಲೌಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿದ್ದರು.

ಪತಿ ಅಥವಾ ಪತಿಯ ಸಂಬಂಧಿಕರಿಂದ ಕ್ರೌರ್ಯಕ್ಕೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ (498-A) ಮತ್ತು ಸ್ವಯಂಪ್ರೇರಣೆಯಿಂದ ನೋವುಂಟುಮಾಡುವ (IPC 323) ಆರೋಪಕ್ಕಾಗಿ ಪತಿಯನ್ನು ದೋಷಿ ಎಂದು ಸ್ಥಳೀಯ ನ್ಯಾಯಾಲಯವು, ಸೆಕ್ಷನ್ 377 ರ ಅಡಿಯಲ್ಲಿ ದಾಖಲಾದ ಆರೋಪದಿಂದ ಅವರನ್ನು ಖುಲಾಸೆಗೊಳಿಸಿದೆ.

ವೈವಾಹಿಕ ಅತ್ಯಾಚಾರವನ್ನು ಅಪರಾಧ ಎಂದು ಪರಿಗಣಿಸಿ ಕೋರಿ ದಾಖಲಾಗಿರುವ ಅರ್ಜಿಗಳನ್ನ ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ವರ್ಷದ ಆರಂಭದಲ್ಲಿ ಹೇಳಿತ್ತು. ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಿಸುವುದು “ಸಾಮಾಜಿಕ ಪರಿಣಾಮಗಳನ್ನು” ಹೊಂದಿರುತ್ತದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿತ್ತು.

ಈ ಸುದ್ದಿಯನ್ನೂ ಓದಿ: ಲಿವ್- ಇನ್ ರಿಲೇಷನ್‌ಶಿಪ್ ಟೈಮ್ ಪಾಸ್ ಸಂಬಂಧ! ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯ

Continue Reading
Advertisement
Dina Bhavishya
ಪ್ರಮುಖ ಸುದ್ದಿ32 mins ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

Sphoorti Salu
ಸುವಚನ32 mins ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

HD Kumaraswamy
ಕರ್ನಾಟಕ6 hours ago

HD Kumaraswamy: ಕಲ್ಲಡ್ಕ ಪ್ರಭಾಕರ ಭಟ್ ಗುಣಗಾನ ಮಾಡಿದ ಎಚ್‌ಡಿಕೆ; ಶ್ರೀರಾಮ ಶಾಲೆ ಕ್ರೀಡೋತ್ಸವದಲ್ಲಿ ಭಾಗಿ

Car accident
ಕರ್ನಾಟಕ6 hours ago

Car Accident: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ನಾಲ್ವರ ದುರ್ಮರಣ

Houses without infrastructure are not completed PMAY houses
ದೇಶ6 hours ago

ಮೂಲಸೌಕರ್ಯ ಒದಗಿಸದ ಮನೆಗಳು ಪೂರ್ಣಗೊಂಡ ಪಿಎಂಎವೈ ಮನೆಗಳಲ್ಲ!

UP Yoddhas vs Telugu Titans
ಕ್ರೀಡೆ6 hours ago

Pro Kabaddi: ಯೋಧಾಸ್​ ಆರ್ಭಟಕ್ಕೆ ಮುಳುಗಿದ ತೆಲುಗು ಟೈಟಾನ್ಸ್‌

Central government bars onion export to curb inflation
ದೇಶ7 hours ago

ಈರುಳ್ಳಿ ರಫ್ತು ನಿಷೇಧ! ಎಥೆನಾಲ್‌ ಉತ್ಪಾದನೆಗೆ ಕಬ್ಬು ಬಳಸುವಂತಿಲ್ಲ

Nat Sciver-Brunt celebrates dismissing Harmanpreet Kaur
ಕ್ರಿಕೆಟ್7 hours ago

INDW vs ENGW: ಹೀನಾಯವಾಗಿ ಸೋತು ಸರಣಿ ಕಳೆದುಕೊಂಡ ಭಾರತ ಮಹಿಳಾ ತಂಡ

Farmers Protest
ಕರ್ನಾಟಕ7 hours ago

Farmers Protest: ಸ್ವಾಮೀಜಿಗಳ ಸಂಧಾನ ಯಶಸ್ವಿ; ಕಿತ್ತೂರಲ್ಲಿ ಪ್ರತಿಭಟನೆ ಹಿಂಪಡೆದ 9 ಹಳ್ಳಿ ರೈತರು

Muslim woman beaten up for voting bjp
ದೇಶ7 hours ago

ಬಿಜೆಪಿಗೆ ಮತ ಹಾಕಿದ್ದಕ್ಕೆ ಮುಸ್ಲಿಂ ಮಹಿಳೆಗೆ ಮನೆಯವರಿಂದಲೇ ಹಲ್ಲೆ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Dina Bhavishya
ಪ್ರಮುಖ ಸುದ್ದಿ32 mins ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ1 day ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema1 day ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema1 day ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema1 day ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ2 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ2 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ2 days ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ3 days ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

ಟ್ರೆಂಡಿಂಗ್‌