Central Government has totally 155 lakh crore debt Says Nirmala Sitharaman ಒಟ್ಟು 155 ಲಕ್ಷ ಕೋಟಿ ರೂ. ಸಾಲ ಇದೆ ಎಂದ ಸೀತಾರಾಮನ್, ಮೋದಿ ಸರ್ಕಾರದಿಂದಲೇ 100 ಲಕ್ಷ ಕೋಟಿ ಸಾಲ? - Vistara News ಒಟ್ಟು 155 ಲಕ್ಷ ಕೋಟಿ ರೂ. ಸಾಲ ಇದೆ ಎಂದ ಸೀತಾರಾಮನ್, ಮೋದಿ ಸರ್ಕಾರದಿಂದಲೇ 100 ಲಕ್ಷ ಕೋಟಿ ಸಾಲ?

ದೇಶ

ಒಟ್ಟು 155 ಲಕ್ಷ ಕೋಟಿ ರೂ. ಸಾಲ ಇದೆ ಎಂದ ಸೀತಾರಾಮನ್, ಮೋದಿ ಸರ್ಕಾರದಿಂದಲೇ 100 ಲಕ್ಷ ಕೋಟಿ ಸಾಲ?

Nirmala Sitharaman: ಕೇಂದ್ರ ಸರ್ಕಾರ ಈವರೆಗೆ ಎಷ್ಟು ಸಾಲವನ್ನು ಮಾಡಿದೆ ಎಂಬ ಮಾಹಿತಿಯನ್ನು ಅಧಿಕೃತವಾಗಿ ಹಂಚಿಕೊಂಡಿದೆ. ಸಂಸದರೊಬ್ಬರು ಕೇಳಿದ ಪ್ರಶ್ನೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಸರ್ಕಾರವು ಈ ವರ್ಷದ ಮಾರ್ಚ್ ಹೊತ್ತಿಗೆ ಒಟ್ಟು 155 ಲಕ್ಷ ಕೋಟಿ ರೂ. ಸಾಲ ಮಾಡಿದೆ ಎಂದು ತಿಳಿಸಿದ್ದಾರೆ.

VISTARANEWS.COM


on

Central Government has totally 155 lakh crore debt Says Nirmala Sitharaman
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತ ಸರ್ಕಾರ (Indian Government) ಮಾಡಿರುವ ಒಟ್ಟು ಸಾಲ ಎಷ್ಟಾಗಿದೆ ಗೊತ್ತಾ? ಬರೋಬ್ಬರಿ 155.8 ಲಕ್ಷ ಕೋಟಿ ರೂಪಾಯಿ. ಅಂದರೆ, ನಮ್ಮ ಒಟ್ಟು ಜಿಡಿಪಿಯ ಶೇ.57.3ರಷ್ಟಾಗುತ್ತದೆ ಈ ಮೊತ್ತ! ಅಂದ ಹಾಗೆ, ಈ ಮಾಹಿತಿಯನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಸೋಮವಾರ ಲೋಕಸಭೆಗೆ ನೀಡಿದ್ದಾರೆ.

155.8 ಲಕ್ಷ ಕೋಟಿ ರೂಪಾಯಿ ಸಾಲದ ಪೈಕಿ ಬಾಹ್ಯ ಸಾಲದ ಮೊತ್ತ 7.03 ಲಕ್ಷ ಕೋಟಿ ರೂ. ಇದೆ. ಇದು ಜಿಡಿಪಿಯ ಶೇ.7.03ರಷ್ಟಾಗುತ್ತದೆ. ಕೇಂದ್ರ ಸರ್ಕಾರ ಈವರೆಗೆ ಮಾಡಿರುವ ಸಾಲ ಎಷ್ಟು, ಬಾಹ್ಯ ಸಾಲದ ಪ್ರಮಾಣ ಎಷ್ಟು, ಡಾಲರ್ ಮೌಲ್ಯ ಏರಿಕೆಯಿಂದಾಗಿ ಸಾಲದ ಮೇಲಾಗಿರುವ ಪರಿಣಾಮ ಹಾಗೂ ಸಾಲ ನಿಯಂತ್ರಣಕ್ಕೆ ಕೈಗೊಳ್ಳಲಾದ ಕ್ರಮಗಳು ಸೇರಿ ಇತ್ಯಾದಿ ಮಾಹಿತಿಯನ್ನು ಕೋರಿ ಸಂಸದ ನಾಮ ನಾಗೇಶ್ವರ್ ರಾವ್ ಅವರು ವಿತ್ತ ಸಚಿವಾಲಯದಿಂದ ಮಾಹಿತಿ ಕೋರಿದ್ದರು. ಈ ಪ್ರಶ್ನೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಗೆ ಉತ್ತರಿಸಿದ್ದಾರೆ.

2023 ಮಾರ್ಚ್ ಹೊತ್ತಿಗೆ ಕೇಂದ್ರ ಸರ್ಕಾರವು ಒಟ್ಟು 155.8 ಲಕ್ಷ ಕೋಟಿ ರೂ. ಸಾಲವನ್ನು ಹೊಂದಿದೆ. ವಿದೇಶಿಗಳಿಂದ 7.03 ಲಕ್ಷ ಕೋಟಿ ರೂ. ಹಣವನ್ನು ಸಾಲದ ರೂಪದಲ್ಲಿ ಪಡೆದುಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಒಟ್ಟು ಸಾಲದ ಪೈಕಿ ಬಾಹ್ಯ ಸಾಲದ ಪ್ರಮಾಣವು ಶೇ.4.5ರಷ್ಟಿದೆ. ಜಿಡಿಪಿಗೆ ಹೋಲಿಸಿದರೆ ಬಾಹ್ಯ ಸಾಲದ ಅನುಪಾತ ಶೇ.3ರಷ್ಟಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ. ಬಾಹ್ಯ ಸಾಲಗಳನ್ನು ಸಾಮಾನ್ಯವಾಗಿ ಬಹುಪಕ್ಷೀಯ ಮತ್ತು ದ್ವಿಪಕ್ಷೀಯ ಏಜೆನ್ಸಿಗಳು ಕಡಿಮೆ ಬಡ್ಡಿದರದಲ್ಲಿ ಒದಗಿಸುತ್ತವೆ. ಹಾಗಾಗಿ ಅಪಾಯ ಕಡಿಮೆ, ಸಾಲ ಸುರಕ್ಷಿತ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತವನ್ನು ನಿಯಂತ್ರಿಸಲು ಸರ್ಕಾರದೊಂದಿಗೆ ಸಮಾಲೋಚಿಸಿ ವಿದೇಶಿ ವಿನಿಮಯ ಸಂಗ್ರಹದ ಮೂಲವನ್ನು ವಿಸ್ತರಿಸಲು ರಿಸರ್ವ್ ಬ್ಯಾಂಕ್ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ಇದೇ ವೇಳೆ ತಿಳಿಸಿದ್ದಾರೆ.

ಇದನ್ನೂ ಓದಿ: Karnataka Budget 2023 : ನಿಮ್ಮಲ್ಲಿ ಕಿಸಾನ್‌ ಕಾರ್ಡ್‌ ಇದ್ಯಾ?; ಸಿಗುತ್ತೆ 10,000 ರೂ. ಹೆಚ್ಚುವರಿ ಸಬ್ಸಿಡಿ, ಬಡ್ಡಿರಹಿತ ಸಾಲ ಪ್ರಮಾಣ ಹೆಚ್ಚಳ

ಮೋದಿ ಸರ್ಕಾರದಿಂದಲೇ 100 ಲಕ್ಷ ಕೋಟಿ ರೂ. ಸಾಲ?

ಪ್ರಧಾನಿ ನರೇಂದ್ರ ಮೋದಿ ಆಡಳಿತದ ಈ ಎಂಟು ವರ್ಷಗಳಲ್ಲಿ ಸಾಲದ ಪ್ರಮಾಣ ಇನ್ನೂ ಹೆಚ್ಚಾಯಿತೇ? ಹೌದು ಇಂಥದೊಂದು ಪ್ರಶ್ನೆ ಕಾಡತೊಡಗಿದೆ. 2013-14ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಒಟ್ಟು ಸಾಲದ ಮೊತ್ತ 58 ಲಕ್ಷ ಕೋಟಿ ರೂ. ಇತ್ತು. ಅಂದರೆ, ಇದು ಜಿಡಿಪಿಯ ಶೇ.52ರಷ್ಟು. ಆದರೆ, 2022-23ರ ವಿತ್ತ ವರ್ಷದ ಮುಕ್ತಾಯದ ಹೊತ್ತಿಗೆ ಈ ಸಾಲದ ಪ್ರಮಾಣದ 155.8 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಇದು ಒಟ್ಟು ಜಿಡಿಪಿಯ ಶೇ.57.3ರಷ್ಟಾಗುತ್ತದೆ. ಅಂದರೆ, ಈ ಎಂಟು ವರ್ಷದ ಅವಧಿಯಲ್ಲಿ ಹೆಚ್ಚು ಕಡಿಮೆ 97 ಲಕ್ಷ ಕೋಟಿ ರೂ. ಸಾಲವನ್ನು ಮಾಡಲಾಗಿದೆ ಎಂಬ ಚರ್ಚೆಗಳು ಶುರುವಾಗಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಕಾಯಂ ಸ್ಥಾನ ನೀಡಿ ಎಂಬ ಮಸ್ಕ್‌ ಆಗ್ರಹಕ್ಕೆ ಅಮೆರಿಕವೂ ಸಾಥ್, ಶೀಘ್ರವೇ ಗುಡ್‌ ನ್ಯೂಸ್?

ವಿಶ್ವಸಂಸ್ಥೆಯು ನಿಯಮಗಳನ್ನು ಬದಲಿಸಬೇಕು. ಜಗತ್ತಿನಲ್ಲೇ ಭಾರತ ಜನಪ್ರಿಯ ದೇಶವಾದರೂ ಇದುವರೆಗೆ ಭದ್ರತಾ ಮಂಡಳಿಯಲ್ಲಿ ಕಾಯಂ ಸ್ಥಾನ ಸಿಗದಿರುವುದು ಅಸಂಬದ್ಧವಾಗಿದೆ. ಭಾರತ ಹಾಗೂ ಆಫ್ರಿಕಾಗೆ ಕಾಯಂ ಸದಸ್ಯತ್ವ ನೀಡಬೇಕು ಎಂದು ಕೆಲ ದಿನಗಳ ಹಿಂದಷ್ಟೇ ಎಲಾನ್‌ ಮಸ್ಕ್‌ ಅವರು ಆಗ್ರಹಿಸಿದ್ದರು. ಇದರ ಬೆನ್ನಲ್ಲೇ, ನಾವು ಕೂಡ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಸುಧಾರಣೆ ಬಯಸುತ್ತೇವೆ ಎಂದು ಅಮೆರಿಕ ಕೂಡ ಹೇಳಿದೆ. ಆ ಮೂಲಕ ಭಾರತದ ಪರವಾಗಿ ನಿಂತಿದೆ.

VISTARANEWS.COM


on

Modi Biden
Koo

ವಾಷಿಂಗ್ಟನ್:‌ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಮತ್ತೆ ಅಧಿಕಾರಕ್ಕೆ ಬಂದರೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ (UNSC) ಭಾರತಕ್ಕೆ ಕಾಯಂ ಸ್ಥಾನ (UN Permanent Seat) ಸಿಗಲು ಪ್ರಯತ್ನಿಸಲಾಗುವುದು ಎಂಬುದಾಗಿ ಕೆಲ ದಿನಗಳ ಹಿಂದಷ್ಟೇ ಬಿಜೆಪಿಯು ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಇನ್ನು, ಭಾರತಕ್ಕೆ ಕಾಯಂ ಸ್ಥಾನ ನೀಡಬೇಕು ಎಂದು ಟೆಸ್ಲಾ ಕಂಪನಿ ಮುಖ್ಯಸ್ಥ ಎಲಾನ್‌ ಮಸ್ಕ್‌ (Elon Musk) ಅವರೂ ಆಗ್ರಹಿಸಿದ್ದಾರೆ. ಇದರ ಬೆನ್ನಲ್ಲೇ, ಅಮೆರಿಕ ಕೂಡ ಭಾರತಕ್ಕೆ ಬೆಂಬಲ ಘೋಷಿಸಿದೆ. ಇದು ಈಗ ಜಾಗತಿಕ ಮಟ್ಟದಲ್ಲಿ ಮಹತ್ವ ಪಡೆದಿದೆ.

“ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಕಾಯಂ ಸ್ಥಾನ ನೀಡಬೇಕು ಎಂಬುದರ ಕುರಿತು ಅಮೆರಿಕ ಅಧ್ಯಕ್ಷರೇ ಭದ್ರತಾ ಮಂಡಳಿ ಸಭೆಯಲ್ಲಿ ಮಾತನಾಡಿದ್ದಾರೆ. ವಿಶ್ವಸಂಸ್ಥೆ ಕಾರ್ಯದರ್ಶಿಯವರ ಅಭಿಪ್ರಾಯವೂ ಇದೇ ಆಗಿದೆ. ಆದಾಗ್ಯೂ, ಅಮೆರಿಕವು ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಸುಧಾರಣೆ ತರಲು ಬಯಸುತ್ತದೆ. ನಾವು 21ನೇ ಶತಮಾನದಲ್ಲಿ ಬದುಕುತ್ತಿದ್ದು, ಸುಧಾರಣೆಯನ್ನು ಬಯಸುತ್ತೇವೆ” ಎಂದು ಅಮೆರಿಕ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮುಖ್ಯ ಉಪ ವಕ್ತಾರ ವೇದಾಂತ್‌ ಪಟೇಲ್‌ ಅವರು ಹೇಳಿದ್ದಾರೆ. ಹಾಗಾಗಿ, ಶೀಘ್ರದಲ್ಲೇ ಭಾರತಕ್ಕೆ ಕಾಯಂ ಸ್ಥಾನ ಸಿಕ್ಕರೂ ಅಚ್ಚರಿ ಇಲ್ಲ ಎಂದು ಹೇಳಲಾಗುತ್ತಿದೆ.

ಎಲಾನ್‌ ಮಸ್ಕ್‌ ಹೇಳಿದ್ದೇನು?

“ವಿಶ್ವಸಂಸ್ಥೆಯು ಬದಲಾವಣೆ ತರಲು ಹಿಂಜರಿಯುತ್ತಿದೆ. ವಿಶ್ವಸಂಸ್ಥೆಯ ಕಾಯಂ ಸದಸ್ಯತ್ವ ಪಡೆದಿರುವ ಬಲಿಷ್ಠ ರಾಷ್ಟ್ರಗಳು ತಾವು ಹೊಂದಿರುವ ಹೆಚ್ಚಿನ ಅಧಿಕಾರವನ್ನು ಬಳಸಿಕೊಳ್ಳಲು ಬಯಸುತ್ತಿವೆ. ಇದೇ ಕಾರಣಕ್ಕಾಗಿ ಆಫ್ರಿಕಾ ಹಾಗೂ ಭಾರತಕ್ಕೆ ಇದುವರೆಗೆ ಭದ್ರತಾ ಮಂಡಳಿಯಲ್ಲಿ ಕಾಯಂ ಸ್ಥಾನ ಸಿಕ್ಕಿಲ್ಲ. ಹಾಗಾಗಿ, ವಿಶ್ವಸಂಸ್ಥೆಯು ನಿಯಮಗಳನ್ನು ಬದಲಿಸಬೇಕು. ಜಗತ್ತಿನಲ್ಲೇ ಭಾರತ ಜನಪ್ರಿಯ ದೇಶವಾದರೂ ಇದುವರೆಗೆ ಭದ್ರತಾ ಮಂಡಳಿಯಲ್ಲಿ ಕಾಯಂ ಸ್ಥಾನ ಸಿಗದಿರುವುದು ಅಸಂಬದ್ಧವಾಗಿದೆ. ಭಾರತ ಹಾಗೂ ಆಫ್ರಿಕಾಗೆ ಕಾಯಂ ಸದಸ್ಯತ್ವ ನೀಡಬೇಕು” ಎಂದು ಎಲಾನ್‌ ಮಸ್ಕ್‌ ಅವರು ಕಳೆದ ಜನವರಿಯಲ್ಲಿ ಆಗ್ರಹಿಸಿದ್ದರು.

ವಿಶ್ವಸಂಸ್ಥೆ ಭದ್ರತಾ ಮಂಡಳಿಯು 5 ಕಾಯಂ ಹಾಗೂ 10 ಕಾಯಂ ಅಲ್ಲದ ಅಥವಾ ತಾತ್ಕಾಲಿಕವಾಗಿ ಸದಸ್ಯತ್ವ ಪಡೆದಿರುವ ರಾಷ್ಟ್ರಗಳನ್ನು ಹೊಂದಿದೆ. ಕಳೆದ 16 ವರ್ಷದಿಂದಲೂ ಭಾರತವು ತಾತ್ಕಾಲಿಕ ಸದಸ್ಯತ್ವ ಪಡೆದಿದೆ. ಅಮೆರಿಕ, ಬ್ರಿಟನ್‌, ರಷ್ಯಾ, ಫ್ರಾನ್ಸ್‌ ಹಾಗೂ ಚೀನಾ ಕಾಯಂ ಸದಸ್ಯತ್ವ ಪಡೆದಿವೆ. ಭಾರತಕ್ಕೆ ಕಾಯಂ ಸ್ಥಾನ ನೀಡಲು ಚೀನಾ ಮಾತ್ರ ವಿರೋಧಿಸುತ್ತಿದ್ದು, ಎಲ್ಲ ದೇಶಗಳು ಬೆಂಬಲಿಸುತ್ತಿವೆ. ಕಳೆದ ವರ್ಷದ ಡಿಸೆಂಬರ್‌ನಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.‌ ಜೈಶಂಕರ್‌ ಅವರೊಂದಿಗೆ ನಡೆದ ಸಭೆಯಲ್ಲಿ ರಷ್ಯಾ ವಿದೇಶಾಂಗ ವ್ಯವಹಾರಗಳ ಸಚಿವ ಸೆರ್ಗೆಯ್‌ ಲಾವ್ರೋವ್‌ ಅವರು ಕೂಡ ಭಾರತಕ್ಕೆ ಕಾಯಂ ಸದಸ್ಯತ್ವ ನೀಡಬೇಕು ಎಂದು ಆಗ್ರಹಿಸಿದ್ದರು.

ಇದನ್ನೂ ಓದಿ: PM Modi: ಅಮೆರಿಕ ಪತ್ರಿಕೆಗೆ ಮೋದಿ ಸಂದರ್ಶನ; ಮಂದಿರ, ಚೀನಾ ಸೇರಿ ಹಲವು ವಿಷಯಗಳ ಬಗ್ಗೆ ಹೇಳಿದ್ದಿಷ್ಟು!

Continue Reading

ದೇಶ

Ram Navami: ಬಂಗಾಳದಲ್ಲಿ ರಾಮನವಮಿ ಮೆರವಣಿಗೆ ವೇಳೆ ಸ್ಫೋಟ, ಹಿಂದುಗಳಿಗೆ ಕಲ್ಲೇಟು!

Ram Navami: ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ರಾಮನವಮಿ ಹಿನ್ನೆಲೆಯಲ್ಲಿ ಹಿಂದುಗಳು ಮೆರವಣಿಗೆ ನಡೆಸುತ್ತಿದ್ದರು. ಇದೇ ವೇಳೆ, ಮನೆಗಳ ಚಾವಣಿಗಳ ಮೇಲೆ ನಿಂತು ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ್ದಾರೆ. ಇದೇ ವೇಳೆ ಶಂಕಾಸ್ಪದವಾಗಿ ಸ್ಫೋಟವೊಂದು ಸಂಭವಿಸಿದೆ. ಇದರ ಬೆನ್ನಲ್ಲೇ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Ram Navami
Koo

ಕೋಲ್ಕೊತಾ: ಪಶ್ಚಿಮ ಬಂಗಾಳದಲ್ಲಿ (West Bengal) ಬುಧವಾರ (ಏಪ್ರಿಲ್‌ 17) ರಾಮನವಮಿ (Ram Navami) ಮೆರವಣಿಗೆ ವೇಳೆ ಸ್ಫೋಟ ಸಂಭವಿಸಿದ್ದು, ಮೆರವಣಿಗೆ ನಡೆಸುವವರ ಮೇಲೆ ಕಲ್ಲುತೂರಾಟವನ್ನೂ ನಡೆಸಲಾಗಿದೆ. ಇದರಿಂದ ಹಲವರು ಗಾಯಗೊಂಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಇನ್ನು ಶಂಕಾಸ್ಪದ ಸ್ಫೋಟ, ಕಲ್ಲುತೂರಾಟ ಸೇರಿ ಹಲವು ರೀತಿಯಲ್ಲಿ ಹಿಂಸಾಚಾರ ಭುಗಿಲೆದ್ದ ಕಾರಣ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್‌ ನಡೆಸಿದರು. ಅಶ್ರುವಾಯು ಮೂಲಕ ಜನರನ್ನು ಚದುರಿಸಲು ಯತ್ನಿಸಿದರು.

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿರುವ ಶಕ್ತಿಪುರ ಪ್ರದೇಶದಲ್ಲಿ ಸಾವಿರಾರು ಹಿಂದುಗಳು ರಾಮನವಮಿ ಮೆರವಣಿಗೆ ನಡೆಸುತ್ತಿದ್ದರು. ಆದರೆ, ಇದೇ ವೇಳೆ ಚಾವಣಿ ಮೇಲೆ ನಿಂತು ಒಂದಷ್ಟು ದುಷ್ಕರ್ಮಿಗಳು ಕಲ್ಲುತೂರಾಟ ಮಾಡಿದ್ದಾರೆ. ಮುಸ್ಲಿಮರೇ ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಕಲ್ಲು ತೂರಾಟ ನಡೆಸುತ್ತಲೇ ಹಿಂದುಗಳು ಕೂಡ ಆಕ್ರೋಶ ವ್ಯಕ್ತಪಡಿಸಿದರು. ಇವರು ಕೂಡ ಕಲ್ಲು ತೂರಾಟ ಮಾಡಿದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಹಿಂಸಾಚಾರದ ವೇಳೆ ಹಲವರು ಗಾಯಗೊಂಡಿದ್ದು, ಅವರನ್ನು ಮುರ್ಷಿದಾಬಾದ್‌ ಮೆಡಿಕಲ್‌ ಕಾಲೇಜು ಹಾಗೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಹಿಂಸಾಚಾರವನ್ನು ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಖಂಡಿಸಿದ್ದಾರೆ. “ಜಿಲ್ಲಾಡಳಿತದಿಂದ ಅನುಮತಿ ಪಡೆದೇ ರಾಮನವಮಿ ಮೆರವಣಿಗೆ ನಡೆಸಲಾಗುತ್ತಿತ್ತು. ಶಾಂತಿಯುತವಾಗಿಯೇ ಮೆರವಣಿಗೆ ನಡೆಸಲಾಗುತ್ತಿತ್ತು. ಆಗ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಆದರೆ, ಪೊಲೀಸರು ದುಷ್ಕರ್ಮಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ಬದಲು ರಾಮ ಭಕ್ತರ ಮೇಲೆಯೇ ಲಾಠಿ ಚಾರ್ಜ್‌ ಮಾಡಿದ್ದಾರೆ. ಆ ಮೂಲಕ ರಾಮನವಮಿ ಯಾತ್ರೆಯನ್ನು ಮೊಟಕುಗೊಳಿಸಿದ್ದಾರೆ” ಎಂಬುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷವೂ ಹಿಂಸಾಚಾರ ನಡೆದಿತ್ತು

ಪಶ್ಚಿಮ ಬಂಗಾಳದಲ್ಲಿ ಕಳೆದ ವರ್ಷವೂ ರಾಮನವಮಿ ಮೆರವಣಿಗೆ ವೇಳೆ ಕಲ್ಲತೂರಾಟ ನಡೆದಿತ್ತು. ಪಶ್ಚಿಮ ಬಂಗಾಳದ ಹೌರಾದಲ್ಲಿ ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಸುಮಾರು 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಕಲ್ಲು ತೂರಾಟ, ಅಂಗಡಿ-ಮುಂಗಟ್ಟುಗಳ ಮೇಲೆ ದಾಳಿ ಸೇರಿ ಹಲವು ರೀತಿಯಲ್ಲಿ ಹಿಂಸಾಚಾರ ನಡೆಸಲಾಗಿತ್ತು. ಶಿಬ್‌ಪುರವೊಂದರಲ್ಲಿಯೇ ಪೊಲೀಸರು 36 ಜನರನ್ನು ಬಂಧಿಸಿದ್ದರು. “ಸೂಕ್ಷ್ಮ ಪ್ರದೇಶಗಳಲ್ಲಿ ರಾಮನವಮಿ ಮೆರವಣಿಗೆ ನಡೆಸುವುದೇ ತಪ್ಪು” ಎಂದು ಸಿಎಂ ಮಮತಾ ಬ್ಯಾನರ್ಜಿ ಅವರು ಬಳಿಕ ಹೇಳಿದ್ದರು.

ಇದನ್ನೂ ಓದಿ: Bharat Jodo Nyay Yatra: ಬಂಗಾಳದಲ್ಲಿ ರಾಹುಲ್‌ ಗಾಂಧಿ ಸಂಚರಿಸುತ್ತಿದ್ದ ವಾಹನದ ಮೇಲೆ ಕಲ್ಲು ತೂರಾಟ

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಮತ್ತೆ ಮತಪತ್ರಗಳ ‘ಶಿಲಾಯುಗ’ಕ್ಕೆ ಹೋಗಲಾಗದು! ಆಧಾರರಹಿತವಾಗಿ ಮತಯಂತ್ರ ದೂಷಣೆ ಸರಿಯಲ್ಲ

ಇವಿಎಂಗಳನ್ನು ತಿದ್ದುವ, ತಿರುಚುವ ಕೆಲಸ ತಾಂತ್ರಿಕವಾಗಿ ಸಾಧ್ಯವಿಲ್ಲ ಎಂಬುದನ್ನು ತಜ್ಞರು ಸಾಕಷ್ಟು ಸಲ ಹೇಳಿದ್ದಾರೆ. ಸ್ವತಃ ಚುನಾವಣಾ ಆಯೋಗವೇ, ಇವಿಎಂಗಳನ್ನು ಹ್ಯಾಕ್ ಮಾಡಿ ತೋರಿಸುವಂತೆ ಮುಕ್ತ ಸವಾಲು ಎಸೆದಿತ್ತು. ಆದರೆ ಆರೋಪ ಮಾಡುತ್ತಿರುವ ಯಾರೂ ಈ ಸವಾಲನ್ನು ಸ್ವೀಕರಿಸುವ ಧೈರ್ಯ ತೋರಲಿಲ್ಲ. ಅಂದರೆ ಈ ಆರೋಪ ಮಾಡುತ್ತಿರುವವರಿಗೇ ತಮ್ಮ ಮಾತುಗಳ ಮೇಲೆ ನಂಬಿಕೆಯಿಲ್ಲ.

VISTARANEWS.COM


on

EVM
Koo

“ಇವಿಎಂಗಳನ್ನು ತಿರುಚದಿದ್ದರೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ 180 ಸೀಟುಗಳು ಕೂಡ ಬರುವುದಿಲ್ಲ” ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಹೇಳಿದ್ದಾರೆ. “ಯಾವ ಆಧಾರದ ಬಿಜೆಪಿ ನಾಯಕರು 400 ಸೀಟುಗಳನ್ನು ಗೆಲ್ಲುತ್ತೇವೆ ಎನ್ನುತ್ತಾರೆ? ಅವರೇನು ಜ್ಯೋತಿಷಿಗಳೇ? ಇದಕ್ಕೂ ಮೊದಲು ಬಿಜೆಪಿಯೇನು 400 ಕ್ಷೇತ್ರ ಗೆದ್ದಿಲ್ಲ. ಈಗ ಹೇಗೆ ಇಷ್ಟೊಂದು ವಿಶ್ವಾಸ ಬರುತ್ತದೆ? ದೇಶದಲ್ಲಿ ಮತಯಂತ್ರಗಳನ್ನು ತಿರುಚದೆ ಚುನಾವಣೆ ನಡೆದರೆ ಬಿಜೆಪಿಗೆ 180 ಸೀಟುಗಳು ಕೂಡ ಬರಲ್ಲ” ಎಂದಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಕಳೆದ ತಿಂಗಳಷ್ಟೇ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರೂ ಇವಿಎಂಗಳ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರು. “ವಿದ್ಯುನ್ಮಾನ ಮತಯಂತ್ರಗಳ ಆತ್ಮ ಹಾಗೂ ಸಮಗ್ರತೆಯನ್ನು ರಾಜನಿಗೆ (ಮೋದಿ) ವರ್ಗಾಯಿಸಲಾಗಿದೆ. ಇ.ಡಿ, ಸಿಬಿಐಗಳು ಕೂಡ ರಾಜನ ವಶವಾಗಿವೆ” ಎಂದು ರಾಹುಲ್‌ ಗಾಂಧಿ ಟೀಕಿಸಿದ್ದರು.

ಲೋಕಸಭೆ ಇರಲಿ, ಯಾವುದೇ ರಾಜ್ಯಗಳ ವಿಧಾನಸಭೆ ಚುನಾವಣೆ ಇರಲಿ, ಪ್ರತಿ ಬಾರಿ ಚುನಾವಣೆ ಘೋಷಣೆಯಾದಾಗಲೂ ವಿದ್ಯುನ್ಮಾನ ಮತಯಂತ್ರಗಳನ್ನು (EVM) ತಿರುಚಲಾಗುತ್ತದೆ ಎಂಬುದಾಗಿ ಕಾಂಗ್ರೆಸ್‌ ಸೇರಿ ಹಲವು ಪಕ್ಷಗಳು ಆರೋಪಿಸುತ್ತವೆ. ಎಲೆಕ್ಟ್ರಾನಿಕ್ ವೋಟಿಂಗ್ ಮೆಷೀನ್ ಬಂದ ಬಳಿಕ ಮತ ಎಣಿಕೆ ಪ್ರಕ್ರಿಯೆ ಸುಗಮಗೊಂಡಿದೆ. ಆದರೆ, ತಂತ್ರಜ್ಞಾನವನ್ನು ಸರ್ಕಾರ ತನ್ನ ಅನುಕೂಲಕ್ಕೆ ಬಳಸಿಕೊಳ್ಳುವ ಸಾಧ್ಯತೆ ಇದೆ ಎಂದು ಕಳೆದ 10 ವರ್ಷಗಳಿಂದಲೂ ವಿಪಕ್ಷಗಳು ಆರೋಪಿಸುತ್ತಿವೆ. ಇವಿಎಂ ಬದಲು ಹಳೆಯ ಬ್ಯಾಲಟ್ ಬಾಕ್ಸ್ ಮತದಾನ ಪದ್ಧತಿಯನ್ನೇ ವಾಪಸ್ ತರಬೇಕೆಂಬ ಒತ್ತಾಯಗಳು ಇವೆ.

ಇತ್ತೀಚೆಗೆ, ಇವಿಎಂ ಮೆಷೀನ್​ನಲ್ಲಿ ಹಾಕಲಾದ ಮತಗಳನ್ನು ವಿವಿಪ್ಯಾಟ್ ಸ್ಲಿಪ್​ಗಳ (VVPAT) ಮೂಲಕ ಪರಿಶೀಲನೆ ನಡೆಸುವಂತಹ ವ್ಯವಸ್ಥೆ ಆಗಬೇಕು ಎಂದು ಕೋರಿ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿಗಳು ಸಲ್ಲಿಕೆ ಆಗಿದ್ದವು. ಇದರ ವಿಚಾರಣೆ ನಡೆಸಿದ ನ್ಯಾಯಪೀಠ, ಹಿಂದಿನ ಬ್ಯಾಲಟ್ ವೋಟಿಂಗ್ ವಿಧಾನದ ಲೋಪವನ್ನು ಎತ್ತಿ ತೋರಿಸಿದೆ. “ಬ್ಯಾಲಟ್ ಪೇಪರ್ ಇದ್ದಾಗ ಏನಾಯಿತು ಎಂದು ನಮಗೆಲ್ಲಾ ಗೊತ್ತಿದೆ. ನಿಮಗೆ ಅದು ಮರೆತುಹೋಗಿರಬಹುದು, ಆದರೆ, ನಾವು ಮರೆತಿಲ್ಲ,’ ಎಂದು ನ್ಯಾಯಪೀಠದಲ್ಲಿದ್ದ ನ್ಯಾ| ಸಂಜೀವ್ ಖನ್ನ ಹೇಳಿದ್ದಾರೆ. ಯುರೋಪ್‌ನಲ್ಲಿ ಇರುವ ವ್ಯವಸ್ಥೆ ಭಾರತಕ್ಕೆ ಸರಿಹೊಂದಬೇಕಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಭಾರತದ ಜನಸಂಖ್ಯೆಗೂ, ಬ್ಯಾಲೆಟ್ ಪೇಪರ್ ಜಾರಿಯಲ್ಲಿರುವ ದೇಶಗಳ ಜನಸಂಖ್ಯೆಗೂ ಅಜಗಜಾಂತರ. ಇಲ್ಲಿ ಮತ್ತೆ ಮತಪತ್ರದ ವ್ಯವಸ್ಥೆ ಜಾರಿಗೆ ತಂದರೆ ನಾವು ಶಿಲಾಯುಗಕ್ಕೆ ಮರಳಿದಂತೆಯೇ ಸರಿ. ಮತಗಳನ್ನು ಎಣಿಸಲು ವಾರಗಳೇ ಬೇಕಾಗಬಹುದು. ಪ್ರಸ್ತುತ ವ್ಯವಸ್ಥೆಯಲ್ಲಿ ಅರ್ಧ ದಿನದಲ್ಲಿ ಇಡೀ ದೇಶದ ಫಲಿತಾಂಶ ತಿಳಿಯುತ್ತದೆ. ಮತಪತ್ರಗಳನ್ನು ಮುದ್ರಿಸುವ, ಸಂಗ್ರಹಿಸುವ, ಅವುಗಳನ್ನು ಸಾಗಿಸುವ, ರಕ್ಷಿಸುವ ಕೆಲಸ ಬಹಳ ಜಟಿಲ ಹಾಗೂ ತ್ರಾಸದಾಯಕ. ನ್ಯಾಯಾಲಯ ಹೇಳಿದಂತೆ, ಮತಪೆಟ್ಟಿಗೆಗಳ ಯುಗದಲ್ಲಿ ಮತಗಟ್ಟೆಗಳ ಲೂಟಿ ಹಾಗೂ ಅಕ್ರಮವೂ ವ್ಯಾಪಕವಾಗಿತ್ತು. ಇವಿಎಂಗಳಿಂದಾಗಿ ಅದೆಲ್ಲಕ್ಕೂ ತಡೆ ಬಿದ್ದಿದೆ. ಲಕ್ಷಾಂತರ ಮಂದಿಯ ಸಮಯ, ಶ್ರಮ, ಹಣಕಾಸು ಎಲ್ಲವನ್ನೂ ಇವು ಉಳಿಸಿವೆ.

ಇವಿಎಂಗಳನ್ನು ತಿದ್ದುವ, ತಿರುಚುವ ಕೆಲಸ ತಾಂತ್ರಿಕವಾಗಿ ಸಾಧ್ಯವಿಲ್ಲ ಎಂಬುದನ್ನು ತಜ್ಞರು ಸಾಕಷ್ಟು ಸಲ ಹೇಳಿದ್ದಾರೆ. ಸ್ವತಃ ಚುನಾವಣಾ ಆಯೋಗವೇ, ಇವಿಎಂಗಳನ್ನು ಹ್ಯಾಕ್ ಮಾಡಿ ತೋರಿಸುವಂತೆ ಮುಕ್ತ ಸವಾಲು ಎಸೆದಿತ್ತು. ಆದರೆ ಆರೋಪ ಮಾಡುತ್ತಿರುವ ಯಾರೂ ಈ ಸವಾಲನ್ನು ಸ್ವೀಕರಿಸುವ ಧೈರ್ಯ ತೋರಲಿಲ್ಲ. ಅಂದರೆ ಈ ಆರೋಪ ಮಾಡುತ್ತಿರುವವರಿಗೇ ತಮ್ಮ ಮಾತುಗಳ ಮೇಲೆ ನಂಬಿಕೆಯಿಲ್ಲ. ಚುನಾವಣೆ ಹತ್ತಿರ ಬಂದಾಗ, ಸೋಲುವ ಲಕ್ಷಣಗಳು ಕಂಡುಬಂದಾಗ, ಸೋತಾಗಲೆಲ್ಲ ಇವಿಎಂಗಳನ್ನು ದೂರುವುದು ಹೇಡಿತನದ ಲಕ್ಷಣ. ಅದು ಪ್ರಧಾನಿ ಮೋದಿಯವರೇ ಹೇಳಿದಂತೆ ” ಕುಣಿಯಲಾರದವರು ನೆಲ ಡೊಂಕು” ಅಂದಂತೆ.

ಇದನ್ನೂ ಓದಿ: Priyanka Vadra: ಇವಿಎಂ ತಿರುಚದಿದ್ದರೆ ಬಿಜೆಪಿಗೆ 180 ಸೀಟೂ ಬರಲ್ಲ ಎಂದ ಪ್ರಿಯಾಂಕಾ ವಾದ್ರಾ!

Continue Reading

ದೇಶ

DD News Logo: ರಾಮನವಮಿ ದಿನವೇ ಡಿಡಿ ನ್ಯೂಸ್‌ ಲೋಗೊ ಕೇಸರಿಮಯ; ತೀವ್ರವಾಯ್ತು ಚರ್ಚೆ!

DD News Logo: ಡಿಡಿ ನ್ಯೂಸ್‌ನ ಲೋಗೊವನ್ನು ಬದಲಾಯಿಸಲಾಗಿದೆ. ಕೆಂಪು ಬಣ್ಣದ ಬದಲು ಕೇಸರಿ ಬಣ್ಣದ ಲೋಗೊವನ್ನು ಡಿಡಿ ನ್ಯೂಸ್‌ ಚಾನೆಲ್‌ ಅನಾವರಣಗೊಳಿಸಿದೆ. ಹೊಸ ಲೋಗೊ ಬದಲಾಯಿಸುತ್ತಲೇ ಫೇಸ್‌ಬುಕ್‌, ಎಕ್ಸ್‌ ಸೇರಿ ಎಲ್ಲ ಜಾಲತಾಣಗಳಲ್ಲೂ ಹೊಸ ಲೋಗೊ ಕಾಣಿಸಿಕೊಂಡಿದೆ. ಜನರು ಕೂಡ ಹೊಸ ಲೋಗೊವನ್ನು ಶೇರ್‌ ಮಾಡಿಕೊಂಡಿದ್ದಾರೆ. ಇನ್ನೂ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

VISTARANEWS.COM


on

DD News Logo
Koo

ನವದೆಹಲಿ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ (Yogi Adityanath) ನೇತೃತ್ವದ ಸರ್ಕಾರವು ಶಾಲೆಗಳಿಗೆ ಕೇಸರಿ ಬಣ್ಣ ಬಳಿಸಿದಾಗ, ಹೊಸ ಸಂಸತ್‌ ಭವನದ ಆಸನಗಳು ಕೇಸರಿಮಯವಾಗಿದ್ದಾಗ ಟೀಕೆ, ಪರ-ವಿರೋಧ ಚರ್ಚೆಗಳು ನಡೆದಿದ್ದವು. ಈಗ ರಾಮನವಮಿ (Ram Navami) ದಿನವೇ ಕೇಂದ್ರ ಸರ್ಕಾರಿ ಪ್ರಾಯೋಜಿತ ಡಿಡಿ ನ್ಯೂಸ್‌ ಚಾನೆಲ್‌ನ (DD News Logo) ಲೋಗೊವನ್ನು ಕೇಸರಿಮಯವನ್ನಾಗಿ ಮಾಡಲಾಗಿದೆ. ಹೊಸ ಲೋಗೊ ಬಿಡುಗಡೆಯಾದ ಬೆನ್ನಲ್ಲೇ ಈಗ ಪರ-ವಿರೋಧ ಚರ್ಚೆಗಳು ಶುರುವಾಗಿವೆ.

“ನಮ್ಮ ಮೌಲ್ಯಗಳನ್ನು ಯಥಾವತ್ತಾಗಿ ಉಳಿಸಿಕೊಳ್ಳುತ್ತಲೇ ನಿಮ್ಮೆದುರು ಹೊಸ ಅವತಾರದೊಂದಿಗೆ ಬಂದಿದ್ದೇವೆ. ಎಂದಿನಂತೆ ಸುದ್ದಿಯ ಪಯಣಕ್ಕೆ ನೀವೂ ಸಜ್ಜಾಗಿ. ಹೊಸ ಡಿಡಿ ನ್ಯೂಸ್‌ನ ಅನುಭವವನ್ನೂ ನೀವೂ ಪಡೆಯಿರಿ. ವೇಗಕ್ಕಿಂತ ನಿಖರತೆಗೆ, ಪ್ರಸ್ತಾಪಗಳಿಗಿಂತ ವಾಸ್ತವಾಂಶಗಳಿಗೆ, ಸೂಕ್ಷ್ಮತೆಯ ಬಣ್ಣಕ್ಕಿಂತ ಸತ್ಯದ ಕಡೆಗೆ ನಾವಿದ್ದೇವೆ ಎಂಬುದನ್ನು ಧೈರ್ಯವಾಗಿ ಹೇಳುತ್ತೇವೆ. ಡಿಡಿ ನ್ಯೂಸ್-ಸತ್ಯದ ಭರವಸೆ” ಎಂಬುದಾಗಿ ಡಿಡಿ ನ್ಯೂಸ್‌ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹೊಸ ಲೋಗೊ ಕುರಿತು ವಿಡಿಯೊ ಸಮೇತ ಪೋಸ್ಟ್‌ ಮಾಡಲಾಗಿದೆ.

ಕಳೆದ ಹಲವು ವರ್ಷಗಳಿಂದ ಡಿಡಿ ನ್ಯೂಸ್‌ ಲೋಗೊ ಕೆಂಪು ಬಣ್ಣದಿಂದ ಕೂಡಿತ್ತು. ಆದರೀಗ, ಆ ಬಣ್ಣವನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಲಾಗಿದೆ. ಡಿಡಿ ನ್ಯೂಸ್‌ ಲೋಗದ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕೆಂಪು ಬಣ್ಣವನ್ನು ಮಾತ್ರ ಕೇಸರಿ ಬಣ್ಣಕ್ಕೆ ಬದಲಾಯಿಸಲಾಗಿದೆ. ಹೊಸ ಲೋಗೊ ಬದಲಾಯಿಸುತ್ತಲೇ ಫೇಸ್‌ಬುಕ್‌, ಎಕ್ಸ್‌ ಸೇರಿ ಎಲ್ಲ ಜಾಲತಾಣಗಳಲ್ಲೂ ಹೊಸ ಲೋಗೊ ಕಾಣಿಸಿಕೊಂಡಿದೆ. ಜನರು ಕೂಡ ಹೊಸ ಲೋಗೊವನ್ನು ಶೇರ್‌ ಮಾಡಿಕೊಂಡಿದ್ದಾರೆ.

ಪರ-ವಿರೋಧ ಚರ್ಚೆ

ಡಿಡಿ ನ್ಯೂಸ್‌ ಚಾನೆಲ್‌ನ ಲೋಗೊ ಬದಲಾಯಿಸಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. “ಹೊಸದಾದ, ಅದ್ಭುತ ಲೋಗೊದೊಂದಿಗೆ ಡಿಡಿ ನ್ಯೂಸ್‌ ಬಂದಿದೆ. ನಮ್ಮ ವಿಶ್ವಾಸ ಗಳಿಸಿರುವ ಡಿಡಿ ನ್ಯೂಸ್‌ ಇನ್ನಷ್ಟು ಏಳಿಗೆ ಹೊಂದಲಿ” ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. “ಗದ್ದಲದ ಸುದ್ದಿ ಜಗತ್ತಿನಲ್ಲಿ ವಾಸ್ತವ ತಿಳಿಸುವ ಡಿಡಿ ನ್ಯೂಸ್‌ ಹೊಸ ಲೋಗೊ, ಹೊಸ ಅವತಾರದ ಕುರಿತು ಉತ್ಸುಕನಾಗಿದ್ದೇನೆ” ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. ಇನ್ನು ಕೆಲವರು, “ಇದು ಕೂಡ ಗೋದಿ ಮೀಡಿಯಾ”, “ಸರ್ಕಾರದ ಸುದ್ದಿ ಚಾನೆಲ್‌ಗೂ ಏಕೆ ಕೇಸರಿ ಬಣ್ಣ” ಎಂಬುದಾಗಿ ಟೀಕಿಸಿದ್ದಾರೆ.

ಇದನ್ನೂ ಓದಿ: Modi Letter: ಸಾಮಾನ್ಯ ಎಲೆಕ್ಷನ್‌ ಅಲ್ಲ; ರಾಮನವಮಿ ದಿನವೇ ಎನ್‌ಡಿಎ ಅಭ್ಯರ್ಥಿಗಳಿಗೆ ಮೋದಿ ಪತ್ರ!

Continue Reading
Advertisement
Kannada New Movie nalkane ayama movie
ಸ್ಯಾಂಡಲ್ ವುಡ್13 mins ago

Kannada New Movie: ʻಮಾಸ್ಟರ್‌ ಆನಂದ್‌ʼ ಮಗಳ ಮೊದಲ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ!

MS Dhoni
ಕ್ರೀಡೆ14 mins ago

MS Dhoni: ಧೋನಿ ಐಪಿಎಲ್​ ನಿವೃತ್ತಿ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸುರೇಶ್​ ರೈನಾ

Modi Biden
ದೇಶ18 mins ago

ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಕಾಯಂ ಸ್ಥಾನ ನೀಡಿ ಎಂಬ ಮಸ್ಕ್‌ ಆಗ್ರಹಕ್ಕೆ ಅಮೆರಿಕವೂ ಸಾಥ್, ಶೀಘ್ರವೇ ಗುಡ್‌ ನ್ಯೂಸ್?

Veera Dheera Sooran Title Teaser OUT
ಕಾಲಿವುಡ್41 mins ago

Veera Dheera Sooran: ಚಿಯಾನ್ ವಿಕ್ರಮ್ 62ನೇ ಸಿನಿಮಾದ ಟೈಟಲ್‌ ಟೀಸರ್‌ ಔಟ್‌!

Lok Sabha Election 2024 by raghavendra pc gaddigoudar umesh jadhav
Lok Sabha Election 202442 mins ago

Lok Sabha Election 2024: ಇಂದು ಬಿವೈ ರಾಘವೇಂದ್ರ, ಗದ್ದಿಗೌಡರ್‌, ಉಮೇಶ್‌ ಜಾಧವ್ ನಾಮಪತ್ರ; ಬಿಜೆಪಿ ಶಕ್ತಿ ಪ್ರದರ್ಶನ

IPL 2024 Points Table
ಕ್ರೀಡೆ46 mins ago

IPL 2024 POINTS TABLE: ಗುಜರಾತ್​​ ಮಣಿಸಿ ಅಂಕಪಟ್ಟಿಯಲ್ಲಿ 3 ಸ್ಥಾನ ಜಿಗಿತ ಕಂಡ ಡೆಲ್ಲಿ

Ram Navami
ದೇಶ54 mins ago

Ram Navami: ಬಂಗಾಳದಲ್ಲಿ ರಾಮನವಮಿ ಮೆರವಣಿಗೆ ವೇಳೆ ಸ್ಫೋಟ, ಹಿಂದುಗಳಿಗೆ ಕಲ್ಲೇಟು!

twin children death
ಕ್ರೈಂ1 hour ago

Children Death: ಅವಳಿ ಮಕ್ಕಳಿಗೆ ಮೃತ್ಯುವಾದ ಐಸ್‌ಕ್ರೀಂ; ಸ್ಮೋಕ್‌ ಬಿಸ್ಕೆಟ್‌ ತಿಂದು ಮಗು ಆಸ್ಪತ್ರೆಪಾಲು

jai shree ram assault case
ಕ್ರೈಂ2 hours ago

Jai Shree Ram slogan: ರಾಮಭಕ್ತರ ಮೇಲೆ ಹಲ್ಲೆ ಮಾಡಿದ 4 ಮಂದಿಯ ಬಂಧನ, ಇಂದು ಬಿಜೆಪಿ ಪ್ರತಿಭಟನೆ

Karnataka Weather
ಕರ್ನಾಟಕ3 hours ago

Karnataka Weather: ಇಂದು ದಕ್ಷಿಣ ಕನ್ನಡ, ಬೆಳಗಾವಿ ಸೇರಿ ವಿವಿಧೆಡೆ ಗುಡುಗು, ಬಿರುಗಾಳಿ ಸಹಿತ ಮಳೆ!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ2 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ4 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ5 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ6 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ7 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌