LPG Subsidy: 'ಉಜ್ವಲ' ಫಲಾನುಭವಿಗಳಿಗೆ ಬಂಪರ್‌, ಪ್ರತಿ ಎಲ್‌ಪಿಜಿ ಸಿಲಿಂಡರ್‌ಗೆ ಸಿಗಲಿದೆ 200 ರೂ. ಸಬ್ಸಿಡಿ - Vistara News

ದೇಶ

LPG Subsidy: ‘ಉಜ್ವಲ’ ಫಲಾನುಭವಿಗಳಿಗೆ ಬಂಪರ್‌, ಪ್ರತಿ ಎಲ್‌ಪಿಜಿ ಸಿಲಿಂಡರ್‌ಗೆ ಸಿಗಲಿದೆ 200 ರೂ. ಸಬ್ಸಿಡಿ

LPG Subsidy: ಕೇಂದ್ರ ಸರ್ಕಾರದ ನಿರ್ಧಾರದಿಂದ 9.59 ಕೋಟಿ ಫಲಾನುಭವಿಗಳಿಗೆ ಸಬ್ಸಿಡಿಯ ನೆರವು ಸಿಗಲಿದೆ. ಸಬ್ಸಿಡಿಯನ್ನು ಕೇಂದ್ರ ಸರ್ಕಾರವು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಿದೆ.

VISTARANEWS.COM


on

LPG
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಕೇಂದ್ರ ಸರ್ಕಾರವು (Central Government) ಬಂಪರ್‌ ಕೊಡುಗೆ ನೀಡಿದೆ. ದೇಶಾದ್ಯಂತ ಉಜ್ವಲ ಯೋಜನೆ ಫಲಾನುಭವಿಗಳಿಗೆ 14.2 ಕೆ.ಜಿಯ ಪ್ರತಿ ಸಿಲಿಂಡರ್‌ಗೆ 200 ಸಬ್ಸಿಡಿ (LPG Subsidy) ನೀಡಲು ಕೇಂದ್ರ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ. ಮತ್ತೊಂದು ವರ್ಷದ ಅವಧಿಗೆ ದೇಶದ ಕೋಟ್ಯಂತರ ಜನರು ಸಬ್ಸಿಡಿಯ ಲಾಭ ಪಡೆಯಲಿದ್ದಾರೆ. ಅಡುಗೆ ಅನಿಲ ಸಿಲಿಂಡರ್‌ ಬೆಲೆಯೇರಿಕೆ ಕುರಿತು ಟೀಕೆಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.

ಉಜ್ವಲ ಯೋಜನೆಯ ಫಲಾನುಭವಿಗಳು ಒಂದು ವರ್ಷದಲ್ಲಿ ಖರೀದಿಸುವ ಗರಿಷ್ಠ 12 ಸಿಲಿಂಡರ್‌ಗಳಿಗೆ ತಲಾ 200 ರೂಪಾಯಿ ಸಬ್ಸಿಡಿ ಸಿಗಲಿದೆ. ದೇಶದಲ್ಲಿ 9.59 ಕೋಟಿ ಉಜ್ವಲ ಫಲಾನುಭವಿಗಳಿದ್ದು, ಡೈರೆಕ್ಟ್‌ ಬೆನಿಫಿಟ್‌ ಟ್ರಾನ್ಸ್‌ಫರ್‌ (DBT) ಅನ್ವಯ ನೇರವಾಗಿ ಫಲಾನುಭವಿಗಳ ಖಾತೆಗೆ ಸಬ್ಸಿಡಿ ಜಮೆಯಾಗಲಿದೆ. ಕೇಂದ್ರ ಸರ್ಕಾರದ ನಿರ್ಧಾರದಿಂದ 2023-24ನೇ ಸಾಲಿನಲ್ಲಿ 7,680 ಕೋಟಿ ರೂಪಾಯಿ ವ್ಯಯವಾಗಲಿದೆ.

‌ಕೇಂದ್ರ ಸಚಿವ ನಿತಿನ್‌ ಗಡ್ಕರಿ ಟ್ವೀಟ್

ಈಗಾಗಲೇ 2022ರ ಮೇ 22ರಿಂದ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL)ಗಳು ಸಬ್ಸಿಡಿಯನ್ನು ನೀಡುತ್ತಿವೆ. ಕೇಂದ್ರ ಸರ್ಕಾರವು ಸಬ್ಸಿಡಿಗಾಗಿ 2022-23ನೇ ಸಾಲಿನಲ್ಲಿ 6,100 ಕೋಟಿ ರೂಪಾಯಿ ವ್ಯಯಿಸಿದೆ.

ಕೇಂದ್ರ ಸರ್ಕಾರವು 2016ರ ಮೇ ತಿಂಗಳಲ್ಲಿ ಠೇವಣಿ ರಹಿತವಾಗಿ ಜನರಿಗೆ ಎಲ್‌ಪಿಜಿ ಸಂಪರ್ಕ ಕಲ್ಪಿಸುವ ದಿಸೆಯಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಜಾರಿಗೆ ತಂದಿದೆ. ಅದರಲ್ಲೂ, ಗ್ರಾಮೀಣ ಭಾಗಗಳಲ್ಲಿ ಎಲ್‌ಪಿಜಿ ಬಳಕೆ ಉತ್ತೇಜನಕ್ಕಾಗಿ ಯೋಜನೆ ಜಾರಿಗೊಳಿಸಲಾಗಿದೆ. ಯೋಜನೆ ಅಡಿಯಲ್ಲಿ ಜನ ಯಾವುದೇ ಠೇವಣಿ ಇಲ್ಲದೆ ಮನೆಗೆ ಅಡುಗೆ ಅನಿಲ ಸಂಪರ್ಕ ಪಡೆಯಬಹುದಾಗಿದೆ. ದೇಶದಲ್ಲಿ ಉಜ್ವಲ ಯೋಜನೆಯ ಫಲಾನುಭವಿಗಳ ಎಲ್‌ಪಿಜಿ ಬಳಕೆ ಶೇ.20ರಷ್ಟು ಏರಿಕೆಯಾಗಿದೆ.

ಇದನ್ನೂ ಓದಿ: Karnataka Budget 2023 : ನಿಮ್ಮಲ್ಲಿ ಕಿಸಾನ್‌ ಕಾರ್ಡ್‌ ಇದ್ಯಾ?; ಸಿಗುತ್ತೆ 10,000 ರೂ. ಹೆಚ್ಚುವರಿ ಸಬ್ಸಿಡಿ, ಬಡ್ಡಿರಹಿತ ಸಾಲ ಪ್ರಮಾಣ ಹೆಚ್ಚಳ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Rahul Gandhi: ಸಂಸತ್‌‌ನಲ್ಲಿ ವಕ್ಫ್ ಚರ್ಚೆ ವೇಳೆ ನಿದ್ದೆ ಮಾಡುತ್ತಿದ್ದ ರಾಹುಲ್ ಗಾಂಧಿ! ವಿಡಿಯೊ ವೈರಲ್

Rahul Gandhi: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸದನದಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಚರ್ಚೆ ನಡೆಯುತ್ತಿರುವಾಗ ನಿದ್ದೆಗೆ ಜಾರಿದ್ದಾರೆ. ಈ ಕುರಿತಾದ ಫೋಟೋಗಳು, ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಬಿಜೆಪಿ ಸಂಸದ ಗಿರಿರಾಜ್ ಸಿಂಗ್ ಅವರು ಚರ್ಚೆಯ ಸಮಯದಲ್ಲಿ ನಿದ್ರೆಗೆ ಜಾರಿದ ವಿರೋಧ ಪಕ್ಷದ ಸಂಸದರನ್ನು ಲೇವಡಿ ಮಾಡಿದ್ದಾರೆ.

VISTARANEWS.COM


on

Rahul Gandhi
Koo

ನವದೆಹಲಿ: ಸಂಸತ್‌ ಅಧಿವೇಶನ(Parliament Session)ದಲ್ಲಿ ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ಮೂಲಕ ಗಮನ ಸೆಳೆಯುವ ರಾಹುಲ್‌ ಗಾಂಧಿ(Rahul Gandhi) ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ನಿನ್ನೆ ಮಹತ್ವದ ವಕ್ಫ್‌ ತಿದ್ದುಪಡಿ ಮಸೂದೆ(Waqf Amendment Bill) ಮಂಡನೆಯಾಗುತ್ತಿದ್ದ ವೇಳೆ ರಾಹುಲ್‌ ಗಾಂಧಿ ನಿದ್ದೆಗೆ ಜಾರಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸದನದಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಚರ್ಚೆ ನಡೆಯುತ್ತಿರುವಾಗ ನಿದ್ದೆಗೆ ಜಾರಿದ್ದಾರೆ. ಈ ಕುರಿತಾದ ಫೋಟೋಗಳು, ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಬಿಜೆಪಿ ಸಂಸದ ಗಿರಿರಾಜ್ ಸಿಂಗ್ ಅವರು ಚರ್ಚೆಯ ಸಮಯದಲ್ಲಿ ನಿದ್ರೆಗೆ ಜಾರಿದ ವಿರೋಧ ಪಕ್ಷದ ಸಂಸದರನ್ನು ಲೇವಡಿ ಮಾಡಿದ್ದಾರೆ.

ಇನ್ನು ರಾಹುಲ್‌ ಮಾತ್ರವಲ್ಲದೇ ಪ್ರತಿಪಕ್ಷದ ಕೆಲವು ಸಂಸದರು ಮಹತ್ವದ ಚರ್ಚೆ ಸಂದರ್ಭದಲ್ಲಿ ನಿದ್ದೆಗೆ ಜಾರಿದ್ದಾರೆ. ವಿಡಿಯೋದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಮಾತನಾಡುತ್ತಿರುವುದು ಮತ್ತು ಬಿಜೆಪಿ ಸಂಸದ ಗಿರಿರಾಜ್ ಸಿಂಗ್ ಅವರ ಪಕ್ಕದಲ್ಲಿ ಕುಳಿತಿರುವುದನ್ನು ಕಾಣಬಹುದಾಗಿದೆ. ಕಿರಣ್ ರಿಜಿಜು ಮಾತನಾಡುತ್ತಿದ್ದಂತೆ ಕಾಂಗ್ರೆಸ್ ಸಂಸದರು ನಿದ್ದೆಗೆ ಜಾರಿರುವ ಬಗ್ಗೆ ಗಿರಿರಾಜ್ ಸಿಂಗ್ ತಿಳಿಸುತ್ತಾರೆ. ಕಿರಣ್ ರಿಜಿಜು ಪಕ್ಕದಲ್ಲಿ ಕುಳಿತಿರುವ ಬಿಜೆಪಿ ಸಂಸದರು ಭೂಪೇಂದ್ರ ಯಾದವ್ ಮತ್ತು ಜಿತೇಂದ್ರ ಸಿಂಗ್ ಸೇರಿದಂತೆ ನಿದ್ರಿಸುತ್ತಿರುವವರ ಕಡೆ ಕೈ ತೋರಿಸಿ ನಗುತ್ತಾರೆ. “ಅದಕ್ಕಾಗಿಯೇ ನಾನು ನಿಮಗೆ ನಿದ್ದೆ ಬರುವಂತೆ ಮಾಡುವುದರಿಂದ ಮಧ್ಯೆ ಮಾತನಾಡಬೇಡಿ ಅಥವಾ ಪದೇ ಪದೇ ಅಡ್ಡಿಪಡಿಸಬೇಡಿ ಎಂದು ಹೇಳುತ್ತೇನೆ” ಎಂದು ಕಿರಣ್ ರಿಜಿಜು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: Parliament Session: ವಕ್ಫ್ ತಿದ್ದುಪಡಿ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ ಕಳುಹಿಸಲು ಸರ್ಕಾರ ಪ್ರಸ್ತಾಪ

Continue Reading

ಕ್ರೀಡೆ

Vinesh Phogat: ವಿನೇಶ್​ರನ್ನು ಪ.ಬಂಗಾಳ ಸಿಎಂ ಮಾಡಿ; ಭಾರತ ರತ್ನ ಕೊಡಿ ಎಂದ ಟಿಎಂಸಿ ನಾಯಕನಿಗೆ ಸವಾಲ್!

Vinesh Phogat: ಒಲಿಂಪಿಕ್ ಅನರ್ಹತೆಯ ವಿರುದ್ಧ ವಿನೇಶ್ ಫೋಗಟ್ ಅವರು ಸಲ್ಲಿದ್ದ ಮನವಿಯನ್ನು ಗುರುವಾರ (ಆಗಸ್ಟ್ 8) ಆರ್ಬಿಟ್ರೇಷನ್ ನ್ಯಾಯಾಲಯವು (CAS) ವಿನೇಶ್ ಮನವಿಯನ್ನು ಸ್ವೀಕರಿಸಿತ್ತು. ಇಂದು (ಶುಕ್ರವಾರ) ಬೆಳಗ್ಗೆ 10 ಗಂಟೆಗೆ (ಭಾರತೀಯ ಕಾಲಮಾನ) ವಿಚಾರಣೆಗೆ ವಕೀಲರನ್ನು ನೇಮಿಸುವಂತೆ ಕೇಳಿದೆ.

VISTARANEWS.COM


on

Vinesh Phogat
Koo

ನವದೆಹಲಿ: ನಿಗದಿತ ತೂಕಕ್ಕಿಂತ ಅಧಿಕ ತೂಕ ಹೊಂದಿದ್ದ ಕಾರಣದಿಂದ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ( ಅನರ್ಹಗೊಂಡು ಪದಕ ಕಳೆದುಕೊಂಡ ಕುಸ್ತಿಪಟು ವಿನೇಶ್​ ಫೋಗಟ್(Vinesh Phogat) ಅವರಿಗೆ ‘ಭಾರತ ರತ್ನ’ ಅಥವಾ ರಾಷ್ಟ್ರಪತಿ ನಾಮನಿರ್ದೇಶಿತ ರಾಜ್ಯಸಭಾ ಸ್ಥಾನ ನೀಡಿ ಗೌರವಿಸುವಂತೆ ಒತ್ತಾಯಿಸಿದ್ದ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ(Abhishek Banerjee) ಅವರಿಗೆ ನೆಟ್ಟಿಗರು ಸವಾಲೊಂದನ್ನು ಹಾಕಿದ್ದಾರೆ. ಭಾರತ ರತ್ನ ನೀಡುವ ಮುನ್ನ ವಿನೇಶ್ ಅವರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಾಡಿ ಎಂದು ಹೇಳಿದ್ದಾರೆ.

ಮಹಿಳೆಯರ 50 ಕೆ.ಜಿ ಕುಸ್ತಿ ಸ್ಪರ್ಧೆಯಲ್ಲಿ ಫೈನಲ್‌ಗೆ ಪ್ರವೇಶಿಸಿದ್ದ ವಿನೇಶ್​, ಈ ಸಾಧನೆ ಮಾಡಿದ ಭಾರತದ ಮೊದಲ ಮಹಿಳಾ ಕುಸ್ತಿಪಟುವೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇನ್ನೇನು ಪದಕ ಗೆಲ್ಲುವ ನಿರೀಕ್ಷೆಯಲ್ಲಿದ್ದ ಅವರನ್ನು ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚಿರುವ ಕಾರಣ ಫೈನಲ್​ನಿಂದ ಅನರ್ಹಗೊಳಿಸಲಾಗಿತ್ತು. ಹೀಗಾಗಿ ಅವರು ಐತಿಹಾಸಿಕ ಪದಕವೊಂದನ್ನು ಗೆಲ್ಲುವ ಅವಕಾಶ ಕಳೆದುಕೊಂಡರು. ಪದಕ ಗೆಲ್ಲದಿದ್ದರೂ ಕೂಡ ವಿನೇಶ್​ ಸಾಧನೆಗೆ ಇಡೀ ದೇಶವಾಸಿಗಳು ಮೆಚ್ಚುಗೆ ಸೂಚಿಸಿದ್ದರು.

ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಕೂಡ ವಿನೇಶ್​ ಸಾಧನೆಯನ್ನು ಕೊಂಡಾಡಿದ್ದರು. ಜತೆಗೆ ವಿನೇಶ್​ ಅವರ ಅಸಾಮಾನ್ಯ ಪ್ರದರ್ಶನವನ್ನು ಗುರುತಿಸಿ ಅವರಿಗೆ ಭಾರತ ರತ್ನ ಅಥವಾ ರಾಷ್ಟ್ರಪತಿ ನಾಮನಿರ್ದೇಶಿತ ರಾಜ್ಯಸಭಾ ಸ್ಥಾನ ನೀಡಿ ಗೌರವಿಸಲು ಸರ್ಕಾರ ಹಾಗೂ ವಿಪಕ್ಷಗಳು ಒಮ್ಮತವನ್ನು ಕಂಡುಕೊಳ್ಳಬೇಕು. ಅವರು ಎದುರಿಸಿದ ಕಷ್ಟಗಳಿಗೆ ನಾವು ಕನಿಷ್ಠ ಪಕ್ಷ ಇಷ್ಟಾದರೂ ಮಾಡಬೇಕು ಎಂದು ಒತ್ತಾಯಿಸಿದ್ದರು.

ಅಭಿಷೇಕ್ ಬ್ಯಾನರ್ಜಿ ಅವರ ಈ ಹೇಳಿಕೆ ಕಂಡು ಅನೇಕ ನೆಟ್ಟಿಗರು ಅವರನ್ನು ಟ್ರೋಲ್​ ಮಾಡಿದ್ದಾರೆ. ಭಾರತ ರತ್ನವನ್ನು ಹೀಗೆ ಎಲ್ಲರಿಗೂ ನೀಡುತ್ತಾ ಹೋದರೆ ಆ ಪ್ರಶಸ್ತಿಗೆ ಯಾವುದೇ ಬೆಲೆ ಇರುವುದಿಲ್ಲ. ಅವರ ಸಾಧನೆ ಮೇಲೆ ನಿಮಗ ಅಪಾರ ಗೌರವ ಇದ್ದರೆ ನೀವು ಅವರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಾಡಿ ಎಂದು ಸವಾಲ್​ ಹಾಕಿದ್ದಾರೆ. ಇನ್ನು ಕೆಲವರು ನೋಬೆಲ್​ ಪ್ರಶಸ್ತಿ ನೀಡುವಂತೆ ಒತ್ತಾಯಿಸಿ ಎಂದು ಹೇಳಿದ್ದಾರೆ. ಹೀಗೆ ನಾನಾ ರೀತಿಯ ಕಮೆಂಟ್​ ಮೂಲಕ ಅಭಿಷೇಕ್ ಬ್ಯಾನರ್ಜಿ ಅವರನ್ನು ರೋಸ್ಟ್​ ಮಾಡಿದ್ದಾರೆ.

ಒಲಿಂಪಿಕ್ ಅನರ್ಹತೆಯ ವಿರುದ್ಧ ವಿನೇಶ್ ಫೋಗಟ್ ಅವರು ಸಲ್ಲಿದ್ದ ಮನವಿಯನ್ನು ಗುರುವಾರ (ಆಗಸ್ಟ್ 8) ಆರ್ಬಿಟ್ರೇಷನ್ ನ್ಯಾಯಾಲಯವು (CAS) ವಿನೇಶ್ ಮನವಿಯನ್ನು ಸ್ವೀಕರಿಸಿತ್ತು. ಇಂದು (ಶುಕ್ರವಾರ) ಬೆಳಗ್ಗೆ 10 ಗಂಟೆಗೆ (ಭಾರತೀಯ ಕಾಲಮಾನ) ವಿಚಾರಣೆಗೆ ವಕೀಲರನ್ನು ನೇಮಿಸುವಂತೆ ಕೇಳಿದೆ.

ವಿನೇಶ್‌ ಪೋಗಟ್‌ ಅವರನ್ನು ಪದಕ ಗೆದ್ದವರ ರೀತಿಯಲ್ಲಿ ಸಮ್ಮಾನಿಸಲಾಗುವುದು ಎಂದು ಹರಿಯಾಣ ಮುಖ್ಯಮಂತ್ರಿ ನಯಾಬ್‌ ಸಿಂಗ್‌ ಸೈನಿ ಅವರು ಹೇಳಿದ್ದಾರೆ. ಒಲಿಂಪಿಕ್‌ ಬೆಳ್ಳಿ ಗೆದ್ದವರಿಗೆ ನೀಡುವಷ್ಟು ಬಹುಮಾನವನ್ನು ವಿನೇಶ್‌ ಅವರಿಗೆ ನೀಡಲಾಗುವುದು. ಸರಕಾರದ ಕ್ರೀಡಾ ನೀತಿಯಂತೆ ಒಲಿಂಪಿಕ್‌ ಚಿನ್ನ ಗೆದ್ದವರಿಗೆ ಸರಕಾರ ಆರು ಕೋಟಿ ರೂ. ಬೆಳ್ಳಿಗೆ ನಾಲ್ಕು ಕೋಟಿ ರೂ. ಮತ್ತು ಕಂಚು ಪದಕ ವಿಜೇತರಿಗೆ 2.5 ಕೋಟಿ ರೂ. ನೀಡಲಿದೆ.

ನಮ್ಮ ಧೈರ್ಯಶಾಲಿ ಪುತ್ರಿ ವಿನೇಶ್‌ ಅದ್ಭುತ ನಿರ್ವಹಣೆ ನೀಡಿ ಫೈನಲಿಗೇರಿದ್ದರು. ಆದರೆ ಕೆಲವೊಂದು ಅನಿವಾರ್ಯ ಕಾರಣಗಳಿಂದಾಗಿ ಫೈನಲಿನಲ್ಲಿ ಸ್ಪರ್ದಿಸಲು ಅವರಿಗೆ ಸಾಧ್ಯವಾಗಲಿಲ್ಲ. ಆದರೆ ಅವರು ನಮಗೆಲ್ಲ ಚಾಂಪಿಯನ್‌ ಕುಸ್ತಿಪಟು ಆಗಿದ್ದಾರೆ. ಈ ಕಾರಣಕ್ಕಾಗಿ ನಮ್ಮ ಸರಕಾರವು ಅವರನ್ನು ಪದಕ ಗೆದ್ದವರ ರೀತಿಯಲ್ಲಿ ಸ್ವಾಗತ ಮತ್ತು ಸಮ್ಮಾನಿಸಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ.

Continue Reading

ಪ್ರಮುಖ ಸುದ್ದಿ

Vinesh Phogat: ಪ್ರಕಾಶ್‌ ರೈ ವಿರುದ್ಧ ಅಹಿಂಸಾ ಚೇತನ್‌ ಕಿಡಿ; ಮೋದಿ ಪರ ಬ್ಯಾಟಿಂಗ್ ಮಾಡಿ ʼರೈ ಅಜ್ಞಾನಿʼ ಎಂದ ನಟ

Vinesh Phogat: ʼಪ್ರಕಾಶ್ ರೈ ಒಳ್ಳೆಯ ನಟ, ಆದರೆ ಕೆಟ್ಟ ಹೋರಾಟಗಾರʼ ಎಂದು ಟ್ವೀಟ್‌ನಲ್ಲಿ ಚೇತನ್ ಬರೆದಿದ್ದಾರೆ. ಅವರ ಈ ಟ್ವೀಟ್‌ಗೆ ಕಾರಣವಾಗಿರುವುದು, ವಿನೇಶ್‌ ಫೋಗಟ್‌ ಅನರ್ಹತೆ ಕುರಿತು ಪ್ರಕಾಶ್‌ ರೈ ಮಾಡಿರುವ ಒಂದು ಪೋಸ್ಟ್.

VISTARANEWS.COM


on

vinesh phogat praksah raj ahimsa chetan
Koo

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ವಿರುದ್ಧ ಯಾವಾಗಲೂ ಕಿಡಿ ಕಾರುತ್ತಿದ್ದ ನಟ ಚೇತನ್‌ ಅಹಿಂಸಾ (Chetan Ahimsa), ಇದೀಗ ಮೋದಿಯವರ ಪರ ಸೋಶಿಯಲ್‌ ಮೀಡಿಯಾ (Social Media) ಪೋಸ್ಟ್‌ ಮಾಡಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಜೊತೆಗೆ, ವಿನೇಶ್‌ ಫೋಗಟ್‌ (Vinesh Phogat) ಪ್ರಕರಣದಲ್ಲಿ ಸಹನಟ ಪ್ರಕಾಶ್‌ ರೈ (Prakash raj) ನಿಲುವಿನ ವಿರುದ್ಧ ಕಿಡಿ ಕಾರಿದ್ದಾರೆ.

50 ಕಿಲೋಗಿಂತ 100 ಗ್ರಾಂ ತೂಕ ಹೆಚ್ಚಳವಾದ ಹಿನ್ನೆಲೆ ಪ್ಯಾರಿಸ್ ಒಲಿಂಪಿಕ್ಸ್‌-2024ರ ಫೈನಲ್‌ ಕುಸ್ತಿ ಪಂದ್ಯದಿಂದ ಹೊರ ಬಿದ್ದ ವಿನೇಶ್‌ ಫೋಗಟ್ ಪರ, ಮೋದಿ ವಿರುದ್ಧ ಪೋಸ್ಟ್‌ ಹಾಕಿದ್ದ ಪ್ರಕಾಶ್‌ ರೈ ನಡೆಯನ್ನು ಚೇತನ್‌ ಟೀಕಿಸಿದ್ದಾರೆ. ಅದರಲ್ಲೂ ಮೋದಿ ಪರ ನಿಂತ ಅಹಿಂಸಾ ಚೇತನ್​ ನಿಲುವು ನೋಡಿ ತುಂಬಾ ಮಂದಿ ಅಚ್ಚರಿಪಟ್ಟಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ನಿನ್ನೆ ಪ್ರಕಾಶ್​ ರಾಜ್​ ಕಾರ್ಟೂನ್​ ಶೇರ್ ಮಾಡಿಕೊಂಡಿದ್ದರು. ಇದರಲ್ಲಿ ಕುಸ್ತಿಪಟು ವಿನೇಶ್​ ಫೋಗಟ್ ಅವರು ನಿಂತಿರುವ ತೂಕದ ಯಂತ್ರದ ಮೇಲೆ ನಿಂತಿದ್ದು, ಅವರ ಹಿಂಭಾಗದಲ್ಲಿ ಮತ್ತೊಬ್ಬರು ಕಾಲಿನ ಒಂದು ಬೆರಳನ್ನಿಟ್ಟು 100 ಗ್ರಾಮ್ ತೂಕ ಹೆಚ್ಚಾಗುವಂತೆ ಮಾಡಿದ್ದಾರೆ. ಹಿಂದಿರುವ ವ್ಯಕ್ತಿ ಪ್ರಧಾನಿ ಮೋದಿ ಎಂದು ಚಿತ್ರ ಸೂಚಿಸುವಂತಿದೆ. ಮೋದಿಯೇ ವಿನೇಶ್ ಫೋಗಟ್ ಕುಸ್ತಿ ಚಿನ್ನದ ಪದಕದಿಂದ ವಂಚಿತರಾಗಲು ಕಾರಣವಾಗಿದ್ದಾರೆ ಎಂದು ಅರ್ಥ ಬರುವಂತೆ ಈ ಟ್ವೀಟ್ ಶೇರ್ ಮಾಡಿದ್ದರು.

ಇದಕ್ಕೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಅಹಿಂಸಾ ಚೇತನ್​ ಕಿಡಿಕಾರಿದ್ದಾರೆ. ʼವಿನೇಶ್ ಫೋಗಟ್ ಅನರ್ಹತೆಗೆ ಪ್ರಧಾನಿ ಮೋದಿ ಕಾರಣ ಎಂದು ಪ್ರಕಾಶ್ ರೈ ಪೋಸ್ಟ್ ಸಜೆಸ್ಟ್ ಮಾಡುತ್ತದೆ. ಇದು ಸಣ್ಣತನ. ಭಾರತದ ಎಲ್ಲಾ ಲಾಭಗಳಿಗೆ ಮೋದಿಯನ್ನು ಕುರುಡಾಗಿ ಹೊಗಳುವವರು ಹೇಗೆ ಅಜ್ಞಾನಿಗಳೋ, ಹಾಗೆಯೇ ಭಾರತದ ಎಲ್ಲಾ ಸಮಸ್ಯೆಗಳನ್ನು ಮೋದಿಯ ಮೇಲೆ ದೂಷಿಸುವ ರೈ ಅವರಂತಹವರೂ ಅಜ್ಞಾನಿಗಳಾಗಿದ್ದಾರೆ. ಪ್ರಕಾಶ್ ರೈ ಒಳ್ಳೆಯ ನಟ, ಆದರೆ ಕೆಟ್ಟ ಹೋರಾಟಗಾರʼ ಎಂದು ಟ್ವೀಟ್‌ನಲ್ಲಿ ಚೇತನ್ ಬರೆದಿದ್ದಾರೆ.

ಇಬ್ಬರು ನಟರ ಈ ಟ್ವೀಟ್ಟ್‌ಗಳು ಇದೀಗ ವೈರಲ್ ಆಗುತ್ತಿವೆ. ನೆಟ್ಟಿಗರು ಚೇತನ್ ಕಮೆಂಟ್​ಗೂ ಪರ-ವಿರೋಧ ಕಮೆಂಟ್ ಮಾಡುತ್ತಿದ್ದಾರೆ. ಪ್ರಕಾಶ್ ರಾಜ್​ ಕೆಟ್ಟ ಹೋರಾಟಗಾರ ಎನ್ನುವುದು ಸರಿಯಲ್ಲ ಎಂದಿದ್ದಾರೆ. ವಿನೇಶ್ ಫೋಗಟ್ ಅನರ್ಹತೆಗೆ ಪ್ರಕಾಶ್ ರಾಜ್ ಎಲ್ಲಿಯೂ ಮೋದಿ ಹೆಸರನ್ನು ಮೆನ್ಷನ್ ಮಾಡಿಲ್ಲ. ಆದರೆ ನೀವೇ ಮೋದಿ ಎಳೆದು ತಂದಿದ್ದೀರಿ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಕುಸ್ತಿ ಪಂದ್ಯಾಟದ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ 100 ಗ್ರಾಮ್‌ಗಳ ಹೆಚ್ಚುವರಿ ತೂಕದಿಂದಾಗಿ ಪ್ಯಾರಿಸ್ ಒಲಿಂಪಿಕ್‌ನಲ್ಲಿ ಕುಸ್ತಿಪಟು ವಿನೇಶ್ ಫೋಗಟ್‌ ಪದಕ ಗೆಲ್ಲುವ ಅವಕಾಶವನ್ನು ಕಳೆದುಕೊಂಡಿದ್ದರು. ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿದ್ದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯಲ್ಲಿ ತಮ್ಮ ಅರ್ಧ ವರ್ಷದ ತರಬೇತಿಯನ್ನು ಕಳೆದುಕೊಂಡಿದ್ದ ವಿನೇಶ್, ತಮಗೆ ದೊರಕಿದ್ದ ಅತ್ಯಲ್ಪ ಸಮಯದಲ್ಲಿಯೇ ತರಬೇತಿ ಪಡೆದುಕೊಂಡು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದರು. ಜೊತೆಗೆ ದೇಶಕ್ಕಾಗಿ ಪದಕ ಗೆಲ್ಲುವ ಮಹದಾಸೆ ಇರಿಸಿಕೊಂಡಿದ್ದರು.

ಇದನ್ನೂ ಓದಿ: Prakash Raj:‌ ವಿನೇಶ್‌ ಫೋಗಟ್‌ ಅನರ್ಹತೆಗೆ ಮೋದಿ ಕಾರಣ ಎಂಬಂತೆ ಪ್ರಕಾಶ್ ರಾಜ್‌ ಪೋಸ್ಟ್;‌ ಜನರಿಂದ ರೋಸ್ಟ್!

Continue Reading

ಕ್ರೀಡೆ

Neeraj Chopra: ನೀರಜ್‌ ಚೋಪ್ರಾ ಜಾವೆಲಿನ್‌ ಎಸೆತದಲ್ಲಿ ಭಾರತಕ್ಕೆ ಚಿನ್ನ ಮಿಸ್‌ ಆದದ್ದು ಹೇಗೆ? ಕೋಚ್‌ ಏನ್‌ ಹೇಳ್ತಾರೆ ನೋಡಿ

Neeraj Chopra: ಭಾರತೀಯ ಸೇನೆಯಲ್ಲಿ ನಾಯ್ಕ್ ಸುಬೇದಾರ್ ಆಗಿ ಕಾರ್ಯನಿರ್ವಹಿಸುತ್ತಿರುವ ಕಾಶೀನಾಥ್ ನಾಯ್ಕ್, ಮೂಲತಃ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಂಗಳೆ ಮೂಲದವರು. 2010ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಜಾವೆಲಿನ್‌ ಎಸೆತದಲ್ಲಿ ಕಾಶೀನಾಥ್ ನಾಯ್ಕ್ ಕಂಚಿನ ಪದಕ ಗೆದ್ದವರು.

VISTARANEWS.COM


on

neeraj chopra kashinath naik 1
ಕೋಚ್‌ ಕಾಶಿನಾಥ್‌ ನಾಯ್ಕ್‌ ಜೊತೆಗೆ ನೀರಜ್‌ ಚೋಪ್ರಾ
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ (Paris Olympics) ನಿನ್ನೆ ರಾತ್ರಿ ನಡೆದ ಜಾವೆಲಿನ್‌ ಎಸೆತ (Javelin throw) ಪಂದ್ಯದಲ್ಲಿ ಭಾರತಕ್ಕೆ ಬೆಳ್ಳಿಯ ಪದಕ (Silver medal) ಗೆದ್ದುಕೊಟ್ಟಿದ್ದಾರೆ ಬಂಗಾರದ ಹುಡುಗ ನೀರಜ್ ಚೋಪ್ರಾ (Neeraj Chopra). ಚಿನ್ನದ ಪದಕವನ್ನೇ ಗೆದ್ದು ತರುತ್ತಾರೆ ಎಂಬ ನಿರೀಕ್ಷೆಯಿತ್ತು. ಆದರೆ ಅದು ಕೈತಪ್ಪಿತು. ಯಾಕೆ ಹೀಗಾಯ್ತು? ಇದಕ್ಕೆ ನೀರಜ್ ಚೋಪ್ರಾ ಅವರ ಕೋಚ್‌ (Coach) ಕಾಶೀನಾಥ್ ನಾಯ್ಕ್ (Kashinath Naik) ನೀಡಿದ ಕಾರಣ ಇಲ್ಲಿದೆ.

ಭಾರತೀಯ ಸೇನೆಯಲ್ಲಿ ನಾಯ್ಕ್ ಸುಬೇದಾರ್ ಆಗಿ ಕಾರ್ಯನಿರ್ವಹಿಸುತ್ತಿರುವ ಕಾಶೀನಾಥ್ ನಾಯ್ಕ್, ಮೂಲತಃ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಂಗಳೆ ಮೂಲದವರು. 2010ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಜಾವೆಲಿನ್‌ ಎಸೆತದಲ್ಲಿ ಕಾಶೀನಾಥ್ ನಾಯ್ಕ್ ಕಂಚಿನ ಪದಕ ಗೆದ್ದವರು.

ʼನೀರಜ್ ಚೋಪ್ರಾ ಸತತ ಎರಡನೇ ಬಾರಿ ಒಲಿಂಪಿಕ್ಸ್ ಪದಕ ಗೆಲ್ಲುತ್ತಿರೋದಕ್ಕೆ ಸಂತಸವಾಗಿದೆ. ಆದರೆ ಈ ಬಾರಿ ಚಿನ್ನ ಗೆಲ್ಲೋದಕ್ಕೆ ಸಾಧ್ಯವಾಗಿಲ್ಲ ಅನ್ನೋ ಬೇಸರವೂ ಇದೆ. ನೀರಜ್ ಚೋಪ್ರಾ ಅತ್ಯುತ್ತಮ ಎಸೆತವನ್ನೇ ಎಸೆದಿದ್ದಾರೆ. ಆದರೆ ಪಾಕಿಸ್ತಾನದ ಅರ್ಷದ್ ನದೀಮ್ ಇನ್ನಷ್ಟು ಅತ್ಯುತ್ತಮ ಎಸೆತವನ್ನು ಎಸೆದಿದ್ದಾರೆ. ನೀರಜ್‌ ತನ್ನ ಮೊದಲ ಎಸೆತದಲ್ಲಿ ಪೌಲ್‌ ಆಗಿದ್ದು ಬೆಳ್ಳಿ ಪದಕ ಬರುವುದಕ್ಕೆ ಕಾರಣವಾಯಿತುʼ ಎಂದು ಕಾಶೀನಾಥ್‌ ವಿವರಿಸಿದ್ದಾರೆ.

ಕೋಚ್‌ ಕಾಶಿನಾಥ ನಾಯ್ಕ್‌

2022ರ ಕಾಮನ್ ವೇಲ್ತ್ ಗೇಮ್ಸ್ ಬಳಿಕ ಅರ್ಷದ್ ನದೀಮ್ ಗಾಯದ ಸಮಸ್ಯೆಗೊಳಗಾಗಿದ್ದರು. ಗಾಯದಿಂದ ವಾಪಸಾದ ಬಳಿಕವೂ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ಪ್ಯಾರಿಸ್ ಒಲಿಂಪಿಕ್ಸ್ ಅರ್ಹತಾ ಸುತ್ತಿನಲ್ಲಿಯೂ 88 ಮೀಟರ್ ಎಸೆದಿದ್ರು. ಆದ್ರೆ ನೀರಜ್ ತನ್ನ ಮೊದಲ ಎಸೆತದಲ್ಲಿ ಪೌಲ್ ಆಗಿದ್ದು ಅವರಿಗೆ ಧೈರ್ಯ ತುಂಬಿತು. ಒಂದು ವೇಳೆ ನೀರಜ್ ತನ್ನ ಮೊದಲ ಎಸೆತದಲ್ಲಿ 88, 89 ಮೀಟರ್ ಎಸೆದಿದ್ರೆ ಆತ ನರ್ವಸ್ ಆಗಿಬಿಡುತ್ತಿದ್ದ. ನೀರಜ್ ಮೊದಲ ಎಸೆತ ಫೌಲ್ ಆಗಿದ್ರಿಂದಲೇ ಆತನ ಆತ್ಮವಿಶ್ವಾಸ ಹೆಚ್ಚಾಯ್ತು ಎಂದು ಕಾಶೀನಾಥ್‌ ಹೇಳಿದ್ದಾರೆ.

ಯಾವಾಗಲೂ ನೀರಜ್ ತನ್ನ ಮೊದಲ ಎಸೆತದಲ್ಲಿ 88, 89 ಮೀಟರ್ ಎಸೆಯುತ್ತಿದ್ದ. ಆದರೆ ಈ ಬಾರಿ ಪೌಲ್ ಆಗಿದ್ದು ಅರ್ಷದ್ ನದೀಮ್‌ಗೆ ವರವಾಯ್ತು. ನದೀಮ್ ಒಲಿಂಪಿಕ್ಸ್ ರೆಕಾರ್ಡ್ಸ್ ಮಾಡುತ್ತಿದ್ದಂತೆ ನೀರಜ್ ನರ್ವಸ್ ಆಗಿಬಿಟ್ಟ. ಆದರೂ ನೀರಜ್ ತನ್ನ ಸಾಮರ್ಥ್ಯ ಮೀರಿ ಪ್ರಯತ್ನ ಮಾಡಿದ್ದಾನೆ. ಅಥ್ಲೆಟಿಕ್ಸ್‌ನಲ್ಲಿ ಸತತ ಎರಡನೇ ಪದಕ ಗೆದ್ದು ಸಾಧನೆ ಮಾಡಿದ್ದಾನೆ. ಇದು ನಿಜಕ್ಕೂ ದೊಡ್ಡ ಸಾಧನೆ ಎಂದು ತಮ್ಮ ಶಿಷ್ಯನನ್ನು ಕಾಶೀನಾಥ್ ನಾಯ್ಕ ಶ್ಲಾಘಿಸಿದ್ದಾರೆ.

ಪೌಲ್‌ ಮಾಡಿದ ನೀರಜ್

ನೀರಜ್​ ಚೋಪ್ರಾ ಅವರ ಮೊದಲ ಎಸೆತವೇ ಪೌಲ್​. ಹೀಗಾಗಿ ನಿರಾಸೆಯ ಆರಂಭವಾಯಿತು. ನಂತರದ ಎಸೆತದಲ್ಲಿ 89.45 ಮೀಟರ್ ದೂರ ಎಸೆದರು. ಅಲ್ಲದೆ ಆ ಬಳಿಕದ ನಾಲ್ಕು ಎಸೆತಗಳು ಪೌಲ್​ ಆದವು. ತಮ್ಮ ಎಸೆತಗಳು ನಿರೀಕ್ಷೆಯಷ್ಟು ದೂರ ಹೋಗದ ಕಾರಣ ನಂತರದ ಮೂರು ಬಾರಿ ಅವರು ಅಂತಿಮ ಲೈನ್ ಮೆಟ್ಟಿ ಸ್ವತಃ ಪೌಲ್ ಮಾಡಿದರು. ಅರ್ಷದ್​ 92. ಮೀಟರ್​ಗಿಂತಲೂ ದೂರ ಎಸೆದ ತಕ್ಷಣವೇ ಒತ್ತಡಕ್ಕೆ ಬಿದ್ದ ನೀರಜ್​ಗೆ ಚೇತರಿಸಿಕೊಳ್ಳುವುದಕ್ಕೆ ಸಾಧ್ಯವಾಗಲಿಲ್ಲ. ಆದರೆ, ಅರ್ಷದ್​ ತಮ್ಮ ಕೊನೇ ಎಸೆತವನ್ನೂ 91. 79 ಮೀಟರ್ ದೂರ ಎಸೆದರು. ಅಂದ ಹಾಗೆ ಪಾಕಿಸ್ತಾನಕ್ಕೆ 32 ವರ್ಷಗಳ ಬಳಿಕ ಒಲಿಂಪಿಕ್ಸ್​ನಲ್ಲಿ ಪದಕವೊಂದು ದೊರಕಿತು. ಅದೂ ಚಿನ್ನ!

ಇದನ್ನೂ ಓದಿ: Neeraj Chopra : ನೀರಜ್​ ಚೋಪ್ರಾಗೆ ರಜತ ಪದಕ; ಪಾಕಿಸ್ತಾನದ ನದೀಮ್​ಗೆ ಒಲಿಂಪಿಕ್​ ದಾಖಲೆಯ ಬಂಗಾರ

Continue Reading
Advertisement
Duniya Vijay Bheema Movie Release today
ಸ್ಯಾಂಡಲ್ ವುಡ್8 mins ago

Duniya Vijay: ರಾಜ್ಯಾದ್ಯಂತ `ಭೀಮ’ ಸಿನಿಮಾ ರಿಲೀಸ್; ಬ್ಲಾಕ್‌ ಕೋಬ್ರಾಗೆ ಭರ್ಜರಿ ವೆಲ್‌ಕಮ್‌ ಮಾಡಿದ ಫ್ಯಾನ್ಸ್‌!

gold rate today
ವಾಣಿಜ್ಯ12 mins ago

Gold Rate Today: ಸತತ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ; ಇಂದಿನ ದರ ಹೀಗಿದೆ

UGCET 2024
ಬೆಂಗಳೂರು18 mins ago

UGCET 2024: ಯುಜಿಸಿಇಟಿ ಮೊದಲ ಅಣಕು ಸೀಟು ಹಂಚಿಕೆ ಫಲಿತಾಂಶ ಇಂದು ಸಂಜೆ 6 ಗಂಟೆಗೆ ಪ್ರಕಟ

dengue fever death bangalore
ಬೆಂಗಳೂರು18 mins ago

Dengue Fever: ಡೆಂಗ್ಯುವಿಗೆ ಬೆಂಗಳೂರಿನಲ್ಲಿ ಹೆಡ್‌ ಕಾನ್ಸ್‌ಟೇಬಲ್‌ ಬಲಿ, 11ಕ್ಕೇರಿದ ಸಾವಿನ ಸಂಖ್ಯೆ

Paris Olympics
ಕ್ರೀಡೆ43 mins ago

Paris Olympics: ಚೊಚ್ಚಲ ಪ್ರಯತ್ನದಲ್ಲೇ ಒಲಿಂಪಿಕ್ಸ್​ ಪದಕ ಗೆಲ್ಲಲು ಸಜ್ಜಾದ ಅಮನ್‌ ಸೆಹ್ರಾವತ್‌

CM Siddaramaiah
ಪ್ರಮುಖ ಸುದ್ದಿ59 mins ago

CM Siddaramaiah: ಇಂದು ಮೈಸೂರಿನಲ್ಲಿ ಜನಾಂದೋಲನ ಸಮಾವೇಶ: ದೋಸ್ತಿಗಳ ವಿರುದ್ಧ ಅಬ್ಬರಿಸಲಿದೆ ಸಿದ್ದರಾಮಯ್ಯ ಪಡೆ, ʼಸಂಚುʼ ಕೃತಿ ಬಿಡುಗಡೆ

Kannada Serials TRP Demand increased for Ramachari serial Amritdhare is not even in the top 5
ಕಿರುತೆರೆ1 hour ago

Kannada Serials TRP: ʻರಾಮಾಚಾರಿʼ ಧಾರಾವಾಹಿಗೆ ಹೆಚ್ಚಾಯ್ತು ಡಿಮ್ಯಾಂಡ್‌; ಟಾಪ್‌ 5ನಲ್ಲೂ ಇಲ್ಲ ʻಅಮೃತಧಾರೆʼ!

Bangladesh Unrest
ವಿದೇಶ1 hour ago

Bangladesh Unrest: ಬಾಂಗ್ಲಾ ದಂಗೆ ಹಿಂದೆ ಇದ್ಯಾ ಪಾಕ್‌ ISI ಕೈವಾಡ? ಶೇಖ್‌ ಹಸೀನಾ ಪುತ್ರ ಹೇಳಿದಿಷ್ಟು!

Rahul Gandhi
ದೇಶ1 hour ago

Rahul Gandhi: ಸಂಸತ್‌‌ನಲ್ಲಿ ವಕ್ಫ್ ಚರ್ಚೆ ವೇಳೆ ನಿದ್ದೆ ಮಾಡುತ್ತಿದ್ದ ರಾಹುಲ್ ಗಾಂಧಿ! ವಿಡಿಯೊ ವೈರಲ್

Vinesh Phogat
ಕ್ರೀಡೆ1 hour ago

Vinesh Phogat: ವಿನೇಶ್​ರನ್ನು ಪ.ಬಂಗಾಳ ಸಿಎಂ ಮಾಡಿ; ಭಾರತ ರತ್ನ ಕೊಡಿ ಎಂದ ಟಿಎಂಸಿ ನಾಯಕನಿಗೆ ಸವಾಲ್!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ17 hours ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ19 hours ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ20 hours ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ5 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ6 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌