Waqf Board: ಜಾಮಾ ಮಸೀದಿ ಸೇರಿ ವಕ್ಫ್‌ ಬೋರ್ಡ್‌ಗೆ ಕಾಂಗ್ರೆಸ್‌ ನೀಡಿದ 123 ಆಸ್ತಿ ಸ್ವಾಧೀನಕ್ಕೆ ಕೇಂದ್ರ ಸರ್ಕಾರ ನಿರ್ಧಾರ! - Vistara News

ದೇಶ

Waqf Board: ಜಾಮಾ ಮಸೀದಿ ಸೇರಿ ವಕ್ಫ್‌ ಬೋರ್ಡ್‌ಗೆ ಕಾಂಗ್ರೆಸ್‌ ನೀಡಿದ 123 ಆಸ್ತಿ ಸ್ವಾಧೀನಕ್ಕೆ ಕೇಂದ್ರ ಸರ್ಕಾರ ನಿರ್ಧಾರ!

Waqf Board: ಕೇಂದ್ರ ಸರ್ಕಾರವು ದೆಹಲಿಯ ಜಾಮಾ ಮಸೀದಿ ಸೇರಿ ವಕ್ಫ್‌ ಮಂಡಳಿಯ 123 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ತೀರ್ಮಾನಿಸಿದೆ. ಇದಕ್ಕಾಗಿ ವಕ್ಫ್‌ ಮಂಡಳಿಗೆ ನೋಟಿಸ್‌ ಕೂಡ ಜಾರಿಗೊಳಿಸಿದೆ.

VISTARANEWS.COM


on

Delhi Jama Masjid
ದೆಹಲಿಯಲ್ಲಿರುವ ಜಾಮಾ ಮಸೀದಿ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಡಾ.ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿದ್ದಾಗ ದೆಹಲಿಯ ಜಾಮಾ ಮಸೀದಿ (Jama Masjid) ಸೇರಿ ವಕ್ಫ್‌ ಮಂಡಳಿಗೆ (Waqf Board) ನೀಡಿದ್ದ 123 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. 123 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ವಕ್ಫ್‌ ಮಂಡಳಿಗೆ ನೋಟಿಸ್‌ ಜಾರಿ ಮಾಡಿದೆ. ಹಾಗಾಗಿ, ಕೆಲವೇ ದಿನಗಳಲ್ಲಿ ವಕ್ಫ್‌ ಆಸ್ತಿಗಳು ಕೇಂದ್ರ ಸರ್ಕಾರದ ಪಾಲಾಗಲಿವೆ ಎನ್ನಲಾಗುತ್ತಿದೆ.

ವಕ್ಫ್‌ ಮಂಡಳಿ ವಶದಲ್ಲಿರುವ ಮಸೀದಿಗಳು, ದರ್ಗಾ ಹಾಗೂ ಸ್ಮಶಾನಗಳ ಆಸ್ತಿಯನ್ನು ವಶಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ಕಳೆದ ಫೆಬ್ರವರಿಯಲ್ಲಿಯೇ ತೀರ್ಮಾನಿಸಿದೆ. ಇಬ್ಬರು ಸದಸ್ಯರ ಸಮಿತಿ ವರದಿ ಆಧಾರದ ಮೇಲೆ ವಕ್ಫ್‌ ಮಂಡಳಿ ಆಸ್ತಿಯನ್ನು ವಶಪಡಿಸಿಕೊಳ್ಳಲು ತೀರ್ಮಾನಿಸಿತ್ತು. ಈಗ ಕೇಂದ್ರ ನಗರಾಭಿವೃದ್ಧಿ ಸಚಿವಾಲಯವು ಆಗಸ್ಟ್‌ 30ರಂದು ವಕ್ಫ್‌ ಮಂಡಳಿಗೆ ನೋಟಿಸ್‌ ಜಾರಿ ಮಾಡಿದೆ.

ಸಚಿವಾಲಯದ ಭೂಮಿ ಮತ್ತು ಅಭಿವೃದ್ಧಿ ಕಚೇರಿಯು (L&DO) ನಿವೃತ್ತ ನ್ಯಾಯಮೂರ್ತಿ ಎಸ್‌.ಪಿ. ಗರ್ಗ್‌ ಅವರ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ವಕ್ಫ್‌ ಮಂಡಳಿ ಆಸ್ತಿಗಳ ಡಿನೋಟಿಫಿಕೇಶನ್‌ಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ವರದಿ ಸಲ್ಲಿಸಿತ್ತು. ಹಾಗೆಯೇ, 123 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ವಕ್ಫ್‌ ಮಂಡಳಿಯಿಂದ ಯಾವುದೇ ಆಕ್ಷೇಪಣೆ ಸಲ್ಲಿಕೆಯಾಗಿಲ್ಲ ಎಂದು ಕೂಡ ತಿಳಿಸಿತ್ತು.

ಇದನ್ನೂ ಓದಿ: Waqf Property | ದೇಶದ್ರೋಹಿಗಳಿಂದ ವಕ್ಫ್‌ ಆಸ್ತಿ ಎಂಜಾಯ್‌, ಸದನದಲ್ಲಿ ಶಾಸಕ ಯತ್ನಾಳ್‌ ಆರೋಪ

ಸಮಿತಿಯ ವರದಿ ಹಾಗೂ ಆಕ್ಷೇಪಣೆ ಇಲ್ಲದ ಹಿನ್ನೆಲೆಯಲ್ಲಿ ಕೇಂದ್ರ ನಗರಾಭಿವೃದ್ಧಿ ಸಚಿವಾಲಯವು ನೋಟಿಸ್‌ ಜಾರಿಗೊಳಿಸಿದೆ ಎಂದು ತಿಳಿದುಬಂದಿದೆ. ಆದಾಗ್ಯೂ, 123 ಆಸ್ತಿಗಳಲ್ಲಿ ಭೌತಿಕ ತಪಾಸಣೆ ಮಾಡಬಹುದು ಎಂದು ಕೂಡ ದೆಹಲಿ ಹೈಕೋರ್ಟ್‌ ಆದೇಶಿಸಿದೆ. ಅಲ್ಲದೆ, ಆಪ್‌ ಶಾಸಕ, ಮಂಡಳಿ ಚೇರ್ಮನ್‌ ಅಮಾನತುಲ್ಲಾ ಖಾನ್‌ ಅವರು ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Lok Sabha Election: ನಾಲ್ಕನೇ ಹಂತದಲ್ಲಿ ಶೇ.62.31ರಷ್ಟು ಮತದಾನ; ಬಂಗಾಳದಲ್ಲಿ ಹೆಚ್ಚು

Lok Sabha Election: ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿತ್ತು. ಈಗ ನಾಲ್ಕನೇ ಹಂತದಲ್ಲಿ ಶೇ.62ರಷ್ಟು ಮತದಾನ ದಾಖಲಾಗಿದೆ.

VISTARANEWS.COM


on

Lok Sabha Election
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದಲ್ಲಿ ಶೇ.62.31ರಷ್ಟು ಮತದಾನ (Voter Turnout) ದಾಖಲಾಗಿದೆ. 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಮತದಾನ ಆರಂಭವಾಗಿದ್ದು, ಬಿಸಿಲನ್ನೂ ಲೆಕ್ಕಿಸದೆ ಜನ ಮತದಾನ ಮಾಡಿದರು. ಕೆಲವು ಕಡೆ ಹೊರತುಪಡಿಸಿ ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ನಡೆಯಿತು.

ಯಾವ ರಾಜ್ಯದಲ್ಲಿ ಎಷ್ಟು ಮತದಾನ?

ಸಂಜೆ 5 ಗಂಟೆ ಸುಮಾರಿಗೆ ಆಂಧ್ರಪ್ರದೇಶದಲ್ಲಿ ಶೇ.68.04, ಬಿಹಾರ ಶೇ.54.14, ಜಮ್ಮು ಮತ್ತು ಕಾಶ್ಮೀರ ಶೇ.35.75, ಜಾರ್ಖಂಡ್ ಶೇ.63.14, ಮಧ್ಯಪ್ರದೇಶ ಶೇ.68.01, ಮಹಾರಾಷ್ಟ್ರ ಶೇ.52.49, ಒಡಿಶಾ ಶೇ.62.96, ತೆಲಂಗಾಣ ಶೇ.61.16, ಉತ್ತರ ಪ್ರದೇಶ ಶೇ.56.35, ಪಶ್ಚಿಮ ಬಂಗಾಳದಲ್ಲಿ ಶೇ.75.66ರಷ್ಟು ಮತದಾನ ದಾಖಲಾಗಿದೆ. ದೇಶದ ಹಲವೆಡೆ ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿತ್ತು.

ನಾಲ್ಕನೇ ಹಂತದಲ್ಲಿ ಆಂಧ್ರಪ್ರದೇಶದ 25, ಬಿಹಾರ 5, ಜಮ್ಮು-ಕಾಶ್ಮೀರ 1, ಜಾರ್ಖಂಡ್ 4, ಮಧ್ಯಪ್ರದೇಶ 8, ಮಹಾರಾಷ್ಟ್ರ 11, ಒಡಿಶಾ 4, ತೆಲಂಗಾಣ 17, ಉತ್ತರ ಪ್ರದೇಶ 13 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಐದನೇ ಹಂತದ ಮತದಾನವು ಮೇ 20ರಂದು ನಡೆಯಲಿದೆ. ಜೂನ್‌ 1ರಂದು ಕೊನೆಯ ಅಥವಾ ಏಳನೇ ಹಂತದ ಮತದಾನ ನಡೆಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಇಂದು ದೇಶಾದ್ಯಂತ ಒಟ್ಟು 96 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು, ಎನ್‌ಡಿಎ ಒಟ್ಟು 97 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕೇವಲ ಎರಡು ಕ್ಷೇತ್ರಗಳಲ್ಲಿ ಮಾತ್ರ ಆಂತರಿಕ ಬಿಕ್ಕಟ್ಟು ಎದುರಿಸುತ್ತಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದ ಒಂದೊಂದು ಕ್ಷೇತ್ರಗಳಲ್ಲಿ ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ(ಅಠಾವಳೆ) ಪಕ್ಷ ಮಿತ್ರ ಪಕ್ಷ ತೆಲುಗು ದೇಶಂ ಪಾರ್ಟಿ ಮತ್ತು ಬಿಜೆಪಿ ವಿರುದ್ಧ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಮೈತ್ರಿಕೂಟಕ್ಕೆ ಸವಾಲೊಡ್ಡಿದೆ. ಇನ್ನು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಎನ್‌ಡಿಎ ಮೈತ್ರಿಕೂಟ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.

ಇನ್ನು ಈ ಹಂತದಲ್ಲಿ ಮತ್ತೊಂದು ಆಸಕ್ತಿಕರ ವಿಚಾರವೇನೆಂದರೆ ಎನ್‌ಡಿಎ ಮೈತ್ರಿಕೂಟದಲ್ಲಿ ಬಿಜೆಪಿ ಅತಿ ದೊಡ್ಡ ಪಾಲುದಾರ ಪಕ್ಷವಾಗಿದ್ದು, ಕಳೆದ ಹಂತಗಳಿಗೆ ಹೋಲಿಸಿದರೆ ಈ ಬಾರಿ ಅತ್ಯಂತ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಆಂಧ್ರಪ್ರದೇಶದಲ್ಲಿ ಬಿಜೆಪಿ ಒಟ್ಟು 25ಕ್ಷೇತ್ರಗಳಲ್ಲಿ 17 ಕ್ಷೇತ್ರಗಳನ್ನು ಮಿತ್ರ ಪಕ್ಷ ಟಿಡಿಪಿಗೆ ಬಿಟ್ಟುಕೊಟ್ಟಿದೆ. ಇನ್ನು ಎನ್‌ಡಿಎ ಯ ಇತರೆ ಸದಸ್ಯ ಪಕ್ಷಗಳು ಈ ಹಂತದಲ್ಲಿ ಮೂರು ಅಥವಾ ಅದಕ್ಕಿಂತಲೂ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಇದೇ ರೀತಿಯ ಸೀಟು ಹಂಚಿಕೆಯನ್ನು ಐದನೇ ಮತ್ತು ಏಳನೇ ಹಂತದಲ್ಲಿ ಚುನಾವಣೆ ಎದುರಿಸುತ್ತಿರುವ ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ಕಾಣಬಹುದಾಗಿದೆ.

ಇದನ್ನೂ ಓದಿ: Madhavi Latha: ಮತಗಟ್ಟೆಯಲ್ಲಿ ಮುಸ್ಲಿಂ ಮಹಿಳೆಯರ ಬುರ್ಖಾ ತೆಗೆಸಿ ಐಡಿ ಕಾರ್ಡ್‌ ಚೆಕ್‌ ಮಾಡಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ!

Continue Reading

ದೇಶ

Mumbai Rain: ಮಹಾಮಳೆಗೆ ಮುಂಬೈ ತತ್ತರ; ಸೋಶಿಯಲ್‌ ಮೀಡಿಯಾದಲ್ಲಿ ಮೀಮ್ಸ್‌ ಹವಾ!

Mumbai Rain:ಮಧ್ಯಾಹ್ನ 3 ಗಂಟೆ ಹೊತ್ತಿಗೇ ವಾತಾವರಣದಲ್ಲಿ ಉಂಟಾದ ದಿಢೀರ್ ಬದಲಾವಣೆ ಉಂಟಾಗಿತ್ತು. ದ್ವಿಚಕ್ರ ವಾಹನಗಳಲ್ಲಿ ಕುಳಿತು ಸಾಗುತ್ತಿದ್ದ ಜನರು ಭಾರೀ ಗಾಳಿ, ಮಳೆಯಿಂದಾಗಿ ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಿ ರಕ್ಷಣೆಗಾಗಿ ಅಂಗಡಿ ಮುಂಗಟ್ಟುಗಳತ್ತ ಓಡಿದರು. ಮುಂಬೈ ನಗರದ ಘಾಟ್‌ಕೋಪರ್, ಬಾಂದ್ರಾ, ಕುರ್ಲಾ, ಧಾರಾವಿ ಪ್ರದೇಶಗಳಲ್ಲಿ ಭಾರೀ ಮಳೆ ಆಗಿದೆ. ಕ್ಷಣಾರ್ಧದಲ್ಲಿ ಸಂಚಾರದಲ್ಲಿ ಭಾರೀ ಅವ್ಯವಸ್ಥೆ ಉಂಟಾಗಿತ್ತು. ಮುಂಬೈ ನಗರ ಮಾತ್ರವಲ್ಲ, ಮಹಾರಾಷ್ಟ್ರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಬಿರುಗಾಳಿಯ ಮುನ್ನೆಚ್ಚರಿಕೆ ನೀಡಲಾಗಿದೆ.

VISTARANEWS.COM


on

Mumbai Rain
Koo

ನವದೆಹಲಿ: ಭಾರತದ ವಾಣಿಜ್ಯ ರಾಜಧಾನಿ ಮುಂಬೈ(Mumbai rain) ಮಹಾ ನಗರ ಈ ವರ್ಷದ ಮೊದಲ ಮಳೆಗೆ(Rain) ಸಾಕ್ಷಿಯಾಗಿದೆ. ಭಾರೀ ಪ್ರಮಾಣದ ಧೂಳಿನ ಸಹಿತ ಗಾಳಿಯ ಬೀಸಿದ್ದು, ಎಲ್ಲೆಡೆ ವಿಡಿಯೋ ವೈರಲ್‌(Viral Video) ಆಗಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಮುಂಬೈ ಮಹಾ ನಗರದಲ್ಲಿ ಕತ್ತಲು ಆವರಿಸಿತ್ತು. ಹಲವು ತಿಂಗಳಿಂದ ಬಿಸಿಲ ಬೇಗೆಗೆ ಬೇಸತ್ತಿದ್ದ ಮುಂಬೈ ಜನರಿಗೆ ಮೊದಲ ಮಳೆ ರಿಲೀಫ್‌ ಕೊಟ್ಟಿದೆ.

ಇನ್ನು ಮಧ್ಯಾಹ್ನ 3 ಗಂಟೆ ಹೊತ್ತಿಗೇ ವಾತಾವರಣದಲ್ಲಿ ಉಂಟಾದ ದಿಢೀರ್ ಬದಲಾವಣೆ ಉಂಟಾಗಿತ್ತು. ದ್ವಿಚಕ್ರ ವಾಹನಗಳಲ್ಲಿ ಕುಳಿತು ಸಾಗುತ್ತಿದ್ದ ಜನರು ಭಾರೀ ಗಾಳಿ, ಮಳೆಯಿಂದಾಗಿ ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಿ ರಕ್ಷಣೆಗಾಗಿ ಅಂಗಡಿ ಮುಂಗಟ್ಟುಗಳತ್ತ ಓಡಿದರು. ಮುಂಬೈ ನಗರದ ಘಾಟ್‌ಕೋಪರ್, ಬಾಂದ್ರಾ, ಕುರ್ಲಾ, ಧಾರಾವಿ ಪ್ರದೇಶಗಳಲ್ಲಿ ಭಾರೀ ಮಳೆ ಆಗಿದೆ. ಕ್ಷಣಾರ್ಧದಲ್ಲಿ ಸಂಚಾರದಲ್ಲಿ ಭಾರೀ ಅವ್ಯವಸ್ಥೆ ಉಂಟಾಗಿತ್ತು. ಮುಂಬೈ ನಗರ ಮಾತ್ರವಲ್ಲ, ಮಹಾರಾಷ್ಟ್ರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಬಿರುಗಾಳಿಯ ಮುನ್ನೆಚ್ಚರಿಕೆ ನೀಡಲಾಗಿದೆ. ಥಾಣೆ, ಪಾಲ್‌ಘರ್, ರಾಯ್‌ಗಢ ಸೇರಿದಂತೆ ಹಲವೆಡೆ ಭಾರೀ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ.

ವಿಮಾನ ಸಂಚಾರದಲ್ಲಿ ವ್ಯತ್ಯಯ

ಮುಂಬೈ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಲ್ಯಾಂಡಿಂಗ್ ಹಾಗೂ ಟೇಕಾಫ್‌ಗೆ ಭಾರೀ ಅಡ್ಡಿ ಉಂಟಾಗಿದೆ. ದೇಶದ ಅತ್ಯಂತ ಹೆಚ್ಚು ಚಟುವಟಿಕೆಯಿಂದ ಕೂಡಿರುವ ಈ ವಿಮಾನ ನಿಲ್ದಾಣದಲ್ಲಿ ವಿಮಾನಯಾನವನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಯ್ತು. ಮುಂಬೈ ಮಹಾ ನಗರಕ್ಕೆ ಆಗಮಿಸುವ ಹಾಗೂ ನಿರ್ಗಮಿಸುವ ವಿಮಾನಗಳ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ.

ಸೋಶಿಯಲ್‌ ಮೀಡಿಯಾಗಳಲ್ಲಿ ಮೀಮ್ಸ್‌ ಹವಾ

ಇನ್ನು ಈ ಭಾರೀ ಗಾಳಿಮಳೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಮೀಮ್ಸ್‌ ಆಗಿ ಹರಿದಾಡುತ್ತಿದೆ. ಮುಂಬೈನಲ್ಲಿ ಅಪರೂಪದ ದೃಶ್ಯ ಎಂದು ನೆಟ್ಟಿಗರು ಹೊಗಳಿದ್ದಾರೆ. ಹಾಲಿವುಡ್‌ ಬ್ಲಾಕ್‌ ಬ್ಲಾಸ್ಟರ್‌ ಸಿನಿಮಾಗಳಿಗಿಂತ ಇದು ಕಡಿಮೆ ಇಲ್ಲ ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿ: Gold Heist Case: ಬಹುಕೋಟಿ ಚಿನ್ನ, ವಿದೇಶಿ ಕರೆನ್ಸಿ ದರೋಡೆ; ಭಾರತೀಯ ಮೂಲದ ವ್ಯಕ್ತಿ ಲಾಕ್‌!

Continue Reading

ದೇಶ

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Modi Roadshow Live: ನಾಳೆ ಬೆಳಿಗ್ಗೆ 11:40ಕ್ಕೆ ಪ್ರಧಾನಿ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮುನ್ನ ಕಾಶಿಯ ಕಾಲ ಭೈರವ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಯ ಮುಹೂರ್ತವು ಹಿಂದೂ ಪಂಚಾಂಗದ ಪ್ರಕಾರ ʼಅಭಿಜಿತ್ ಮಹೂರ್ತ’ವಾಗಿದ್ದು, ʼಆನಂದ ಯೋಗ’ದ ಅಡಿಯಲ್ಲಿ ಬರುತ್ತಿದ್ದು ಅತ್ಯಂತ ಮಂಗಳಕರ ಅವಧಿ ಎನ್ನಲಾಗಿದೆ. ಇದಕ್ಕೂ ಮೊದಲು ಅವರು ಸೋಮವಾರವೇ ಮೋದಿ ಅವರು ವಾರಾಣಸಿಯಲ್ಲಿ ರೋಡ್‌ ಶೋ ಮೂಲಕ ಅಲೆ ಸೃಷ್ಟಿಸಿದ್ದಾರೆ.

VISTARANEWS.COM


on

Modi Roadshow Live
Koo

ವಾರಾಣಸಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಶತಾಯ ಗತಾಯ ಹ್ಯಾಟ್ರಿಕ್‌ ಸಾಧಿಸುವ ಉತ್ಸಾಹದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮ್ಮ ಲೋಕಸಭೆ ಕ್ಷೇತ್ರವಾದ ವಾರಾಣಸಿಯಲ್ಲಿ ಬೃಹತ್‌ ರೋಡ್‌ ಶೋ (Modi Roadshow Live) ಕೈಗೊಂಡಿದ್ದಾರೆ. ಬನಾರಸ್‌ ಹಿಂದು ವಿಶ್ವವಿದ್ಯಾಲಯದ ಗೇಟ್‌ನಿಂದ ರೋಡ್‌ ಶೋ ಆರಂಭವಾಗದ್ದು, ಕಾಶಿ ವಿಶ್ವನಾಥ ಧಾಮದ ಗೇಟ್ ಸಂಖ್ಯೆ 4ರಲ್ಲಿ ರೋಡ್‌ ಶೋ ಮುಕ್ತಾಯಗೊಳ್ಳಲಿದೆ. ಮೋದಿ ಅವರನ್ನು ಕಣ್ತುಂಬಿಕೊಳ್ಳಲು ರಸ್ತೆಯುದ್ದಕ್ಕೂ ಸಾವಿರಾರು ಜನ ನೆರೆದಿದ್ದಾರೆ. ಮೋದಿ ಅವರಿಗೆ ಸಿಎಂ ಯೋಗಿ ಆದಿತ್ಯನಾಥ್‌ ಅವರು ಕೂಡ ಸಾಥ್‌ ನೀಡಿದ್ದಾರೆ.

ವಾರಣಾಸಿ ಲೋಕಸಭಾ ಕ್ಷೇತ್ರದ ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು, ಕಾಶಿ ನಿವಾಸಿಗಳು, ಕ್ರೀಡಾಪಟುಗಳು, ಕಲಾವಿದರು ಮತ್ತು ಸ್ಥಳೀಯರು ರೋಡ್‌ಶೋನ ಭಾಗವಾಗಿದ್ದಾರೆ. ಮಹಿಳೆಯರ ಸಾಂಸ್ಕೃತಿಕ ನೃತ್ಯ, ಜೈ ಶ್ರೀರಾಮ್‌ ಎಂಬ ಘೋಷಣೆಗಳು ಸಾಮಾನ್ಯ ಎಂಬಂತಾಗಿದೆ. ನರೇಂದ್ರ ಮೋದಿ ಪರವೂ ಜನ ಘೋಷಣೆಗಳನ್ನು ಮೊಳಗಿಸಿದ್ದಾರೆ. ರೋಡ್‌ ಶೋ ಹಿನ್ನೆಲೆಯಲ್ಲಿ ವಾರಾಣಸಿಯಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ಮರಾಠಿ, ಗುಜರಾತಿ, ಬೆಂಗಾಲಿ, ಮಾಹೇಶ್ವರಿ, ಮಾರ್ವಾಡಿ, ತಮಿಳು ಮತ್ತು ಪಂಜಾಬಿ ಸಮುದಾಯಗಳ ಗುಂಪುಗಳು ಪ್ರಧಾನಿ ಮೋದಿಯನ್ನು ತಮ್ಮ ಸಾಂಪ್ರದಾಯಿಕ ಉಡುಗೆಯಲ್ಲಿ ಸ್ವಾಗತಿಸಿವೆ. ಸುಮಾರು ಐದು ಕಿಲೋಮೀಟರ್ ಉದ್ದದ ರೋಡ್ ಶೋ ಮಿನಿ ಇಂಡಿಯಾ ಮತ್ತು ಉತ್ತರ ಪ್ರದೇಶದ ಸಂಸ್ಕೃತಿಗಳ ಒಂದು ನೋಟವನ್ನು ನೀಡಿದೆ.

ಮಂಗಳವಾರ (ಮೇ 14) ಬೆಳಗ್ಗೆ 11:40ಕ್ಕೆ ಪ್ರಧಾನಿ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮುನ್ನ ಕಾಶಿಯ ಕಾಲ ಭೈರವ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಯ ಮುಹೂರ್ತವು ಹಿಂದೂ ಪಂಚಾಂಗದ ಪ್ರಕಾರ ʼಅಭಿಜಿತ್ ಮಹೂರ್ತ’ವಾಗಿದ್ದು, ʼಆನಂದ ಯೋಗ’ದ ಅಡಿಯಲ್ಲಿ ಬರುತ್ತಿದ್ದು ಅತ್ಯಂತ ಮಂಗಳಕರ ಅವಧಿ ಎನ್ನಲಾಗಿದೆ. ನಾಮಪತ್ರ ಸಲ್ಲಿಕೆಗೂ ಮುನ್ನವೇ ಅವರು ರೋಡ್‌ ಶೋ ನಡೆಸಿ ಜನರ ಗಮನ ಸೆಳೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಒಕ್ಕೂಟ ಅಭ್ಯರ್ಥಿಯಾಗಿ ಅಜಯ್ ರೈ ಕಣದಲ್ಲಿದ್ದಾರೆ. ಅಜಯ್ ರೈ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಕಳೆದ ಎರಡು ಬಾರಿಯೂ ಮೋದಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಪ್ರಧಾನಿ ಮೋದಿಯವರ ಗೆಲುವಿನ ಅಂತರವನ್ನು 7 ಲಕ್ಷಕ್ಕೂ ಮೀರಿ ಹೆಚ್ಚಿಸುವ ಗುರಿಯನ್ನು ಬಿಜೆಪಿ ಹೊಂದಿದೆ. 2019ರಲ್ಲಿ 64% ಮತ ಹಂಚಿಕೆಯೊಂದಿಗೆ ಮೋದಿಯವರು 4.8 ಲಕ್ಷ ಅಂತದಲ್ಲಿ ಗೆಲುವು ಸಾಧಿಸಿದ್ದರು. 2014ರಲ್ಲಿ ಅವರು 3.7 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು.

ಇದನ್ನೂ ಓದಿ: PM Narendra Modi: “ಪಾಕ್‌ ಬಳೆ ತೊಡದಿದ್ದರೆ ನಾವು ತೊಡಿಸುತ್ತೇವೆ….” ಪಿಎಂ ಮೋದಿ ಗುಡುಗು

Continue Reading

ದೇಶ

Viral Video: ಜೊತೆಗಿದ್ದ ಬೆಂಬಲಿಗನನ್ನೇ ವೇದಿಕೆಯಿಂದ ತಳ್ಳಿದ ಲಾಲೂ ಪುತ್ರ; ಎಲ್ಲೆಡೆ ಭಾರೀ ಖಂಡನೆ

Viral Video:ಇಂದು ನಾಮಪತ್ರ ಸಲ್ಲಿಸಿದ್ದ ಮೀಸಾ ತಮ್ಮ ಸಹೋದರ ತೇಜ್‌ ಪ್ರತಾಪ್‌ ಜೊತೆಗೆ ವೇದಿಕೆಗೆ ಆಗಮಿಸಿದ್ದರು. ಈ ವೇಳೆ ಹಸಿರು ಕ್ಯಾಪ್‌ ಧರಿಸಿದ ಅನೇಕ ಕಾರ್ಯಕರ್ತರು ಅವರನ್ನು ಸುತ್ತುವರಿದರು. ಆಗ ಕೋಪಗೊಂಡ ತೇಜ್‌ ಪ್ರತಾಪ್‌ ಯಾದವ್‌, ತನ್ನ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯನ್ನು ತಳ್ಳಿ ಬೀಳಿಸಿದ್ದಾರೆ. ತಕ್ಷಣ ಅಲ್ಲಿದ್ದ ಜನ ಆತನನ್ನು ವೇದಿಕೆಯಿಂದ ಕರೆದೊಯ್ದಿದ್ದಾರೆ. ಪಕ್ಕದಲ್ಲೇ ಇದ್ದ ಮೀಸಾ , ತೇಜ್‌ ಪ್ರತಾಪ್‌ನನ್ನು ಸಮಾಧಾನಪಡಿಸಿದರು.

VISTARANEWS.COM


on

Viral Video
Koo

ನವದೆಹಲಿ: ರಾಷ್ಟ್ರೀಯ ಜನತಾ ದಳ(RJD) ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌(Lalu Prasad Yadav) ಪುತ್ರ ತೇಜ್‌ ಪ್ರತಾಪ್‌ ಯಾದವ್‌(Tej Pratap Yadav) ಮತ್ತೆ ವಿವಾದಕ್ಕೀಡಾಗುವ ಮೂಲಕ ಸುದ್ದಿಯಲ್ಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ(Lok Sabha Election 2024)ಪಾಟಲೀಪುರದಿಂದ ಕಣಕ್ಕಿಳಿಸಿರುವ ಸಹೋದರಿ ಮೀಸಾ ಭಾರತಿ ಪರ ಪ್ರಚಾರಕ್ಕೆಂದು ಆಗಮಿಸಿದ್ದ ತೇಜ್‌ ಪ್ರತಾಪ್‌ ಯಾದವ್‌ ಜೊತೆಗಿದ್ದ ಬೆಂಬಲಿಗನನ್ನು ವೇದಿಕೆಯಿಂದ ತಳ್ಳುವ ಮೂಲಕ ದರ್ಪ ಮೆರೆದಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದ್ದು, ಹಲವರಿಂದ ಖಂಡನೆ ವ್ಯಕ್ತವಾಗಿದೆ.

ವಿಡಿಯೋದಲ್ಲಿ ಏನಿದೆ?

ಇಂದು ನಾಮಪತ್ರ ಸಲ್ಲಿಸಿದ್ದ ಮೀಸಾ ತಮ್ಮ ಸಹೋದರ ತೇಜ್‌ ಪ್ರತಾಪ್‌ ಜೊತೆಗೆ ವೇದಿಕೆಗೆ ಆಗಮಿಸಿದ್ದರು. ಈ ವೇಳೆ ಹಸಿರು ಕ್ಯಾಪ್‌ ಧರಿಸಿದ ಅನೇಕ ಕಾರ್ಯಕರ್ತರು ಅವರನ್ನು ಸುತ್ತುವರಿದರು. ಆಗ ಕೋಪಗೊಂಡ ತೇಜ್‌ ಪ್ರತಾಪ್‌ ಯಾದವ್‌, ತನ್ನ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯನ್ನು ತಳ್ಳಿ ಬೀಳಿಸಿದ್ದಾರೆ. ತಕ್ಷಣ ಅಲ್ಲಿದ್ದ ಜನ ಆತನನ್ನು ವೇದಿಕೆಯಿಂದ ಕರೆದೊಯ್ದಿದ್ದಾರೆ. ಪಕ್ಕದಲ್ಲೇ ಇದ್ದ ಮೀಸಾ , ತೇಜ್‌ ಪ್ರತಾಪ್‌ನನ್ನು ಸಮಾಧಾನಪಡಿಸಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಅನೇಕರು ಖಂಡನೆ ವ್ಯಕ್ತಪಡಿಸಿದ್ದಾರೆ. ತೇಜ್‌ ಪ್ರತಾಪ್‌ ವರ್ತನೆಗೆ ಖಂಡನೆ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಪ್ರೀತಿ ಗಾಂಧಿ, ತೇಜ್‌ ಪ್ರತಾಪ್‌ ಯಾವುದಕ್ಕೂ ಅರ್ಹನಲ್ಲ. ಸ್ವಪಕ್ಷ ಕಾರ್ಯಕರ್ತನ ಮೇಲೆಯೇ ಬಹಳ ಕ್ರೂರವಾಗಿ ಹಲ್ಲೆ ಮಾಡುತ್ತಾರೆ. ಇದು ಮಾತು ಮತ್ತು ಕೃತಿಗಿರುವ ವ್ಯತ್ಯಾಸ ಎಂದು ಕಿಡಿ ಕಾರಿದ್ದಾರೆ.

ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯಲ್ಲೂ ಇಂತಹದ್ದೇ ಒಂದು ಘಟನೆ ನಡೆದಿದ್ದು, ತೆನಾಲಿ ಮತಗಟ್ಟೆಯಲ್ಲಿ ಮತ ಚಾಲಾಯಿಸಲೆಂದು ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ಅಭ್ಯರ್ಥಿ, ತೆನಾಲಿ ಕ್ಷೇತ್ರದ ಶಾಸಕ ಅನ್ನಬತುನಿ ಶಿವಕುಮಾರ್ ಎಂಬುವವರು ಕಪಾಳಮೋಕ್ಷ ಮಾಡಿದ್ದಾರೆ. ಶಾಸಕ ಶಿವಕುಮಾರ್ ಇಂದು ಮತದಾನಕ್ಕೆಂದು ಮತಗಟ್ಟೆಗೆ ಆಗಮಿಸಿದ್ದರು. ಈ ವೇಳೆ ನೂರಾರು ಜನ ಸಾಲಿನಲ್ಲಿ ನಿಂತಿದ್ದರೂ ಅದನು ಲೆಕ್ಕಿಸದೇ ಸಾಲು ತಪ್ಪಿಸಿ ನೇರವಾಗಿ ಮತಗಟ್ಟೆಯೊಳಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಈ ವೇಳೆ ಇದನ್ನು ಕಂಡ ಮತದಾರನೊಬ್ಬ ಶಾಸಕರ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸಾಲಿನಲ್ಲೇ ನಿಂತು ಮತ ಚಲಾಯಿಸುವಂತೆ ಆತ ಒತ್ತಾಯಿಸಿದ್ದ. ಇದರಿಂದ ಆಕ್ರೋಶಗೊಂಡ ಶಾಸಕ ಶಿವಕುಮಾರ್ ನೋಡ ನೋಡುತ್ತಲೇ ಪ್ರಶ್ನಿಸಿದ ಮತದಾರನ ಕಪಾಳಕ್ಕೆ ಹೊಡೆದಿದ್ದಾರೆ.

ಇದನ್ನೂ ಓದಿ:Viral Video: ವಂದೇ ಭಾರತ್ ರೈಲಿನಡಿ ಸಿಲುಕಿದರೂ ಹಸು ಪ್ರಾಣಾಪಾಯದಿಂದ ಪಾರಾಗಿದ್ದು ಹೇಗೆ?

ಏಟು ಬೀಳುತ್ತಿದ್ದಂತೆ ಮತದಾರನೂ ತಿರುಗಿ ಶಾಸಕನ ಕಪಾಳಕ್ಕೆ ಹೊಡೆದಿದ್ದಾನೆ. ಇದರ ಬೆನ್ನಲ್ಲೇ ಶಿವಕುಮಾರ್ ಜೊತೆಗಿದ್ದ ಆತನ ಬೆಂಬಲಿಗರು ಹಿಂದೆ ಮುಂದೆ ನೋಡದೆ ಮತದಾರನ ಮೇಲೆ ಮುಗಿಬಿದ್ದು ಸಾಮೂಹಿಕ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಮತದಾರನನ್ನು ಹೊರಗೆ ಎಳೆದೊಯ್ದಿದ್ದಾರೆ. ಈ ವೇಳೆ ಭದ್ರತೆಗೆ ನಿಯೋಜಿಸಿದ್ದ ಪೊಲೀಸರು ಮಧ್ಯ ಪ್ರವೇಶಿಸಿ ಗಲಾಟೆ ನಿಯಂತ್ರಿಸಿದ್ದಾರೆ. ಸ್ಥಳದಲ್ಲಿ ಕೆಲಹೊತ್ತು ಭಾರೀ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.

Continue Reading
Advertisement
MS Dhoni
ಕ್ರೀಡೆ7 mins ago

MS Dhoni : ಧೋನಿಗೆ ದೇವಸ್ಥಾನ; ಸಿಎಸ್​​ಕೆ ತಂಡದ ಮಾಜಿ ಆಟಗಾರ ಅಭಿಮಾನದ ನುಡಿ

HD Revanna Bail Revanna will not leave the country condition imposed by the court
ಕ್ರೈಂ13 mins ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Lok Sabha Election
ದೇಶ17 mins ago

Lok Sabha Election: ನಾಲ್ಕನೇ ಹಂತದಲ್ಲಿ ಶೇ.62.31ರಷ್ಟು ಮತದಾನ; ಬಂಗಾಳದಲ್ಲಿ ಹೆಚ್ಚು

Mumbai Rain
ದೇಶ19 mins ago

Mumbai Rain: ಮಹಾಮಳೆಗೆ ಮುಂಬೈ ತತ್ತರ; ಸೋಶಿಯಲ್‌ ಮೀಡಿಯಾದಲ್ಲಿ ಮೀಮ್ಸ್‌ ಹವಾ!

Prajwal Revanna case HD Revanna finally gets bail What was the argument like
ಕ್ರೈಂ28 mins ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Ujjaini Marulasiddeshwara Temple
ವಿಜಯನಗರ36 mins ago

Ujjaini Marulasiddeshwara Jatre: ಸಾಮಾಜಿಕ ಸೌಹಾರ್ದತೆ ಸಾರುವ ಶ್ರೀ ಉಜ್ಜಯಿನಿ ಮರುಳಸಿದ್ಧೇಶ್ವರ ಜಾತ್ರಾ ಮಹೋತ್ಸವ

Summer Fashion
ಲೈಫ್‌ಸ್ಟೈಲ್38 mins ago

Summer Fashion: ನೇಲ್‌ ಆರ್ಟ್‌ನಲ್ಲಿ ಟ್ರೆಂಡಿಯಾದ ಸನ್‌ ಕಲರ್‌ ಶೇಡ್ಸ್‌

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ43 mins ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Prajwal Revanna Case Revanna bail plea SPP wants a copy of the court verdict Nagesh said you have to read it yourself
ಕ್ರೈಂ1 hour ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಕೋರ್ಟ್‌ ತೀರ್ಪಿನ ಪ್ರತಿ ಬೇಕೆಂದ SPP; ನೀವೇ ಓದ್ಕೋಬೇಕು ಅಂದ್ರು ನಾಗೇಶ್‌!

Moringa Leaves Health Benefits
ಆರೋಗ್ಯ1 hour ago

Moringa Leaves Health Benefits: ನುಗ್ಗೆ ಸೊಪ್ಪು ಏಕೆ ತಿನ್ನಬೇಕು? ಏನಿದೆ ಇದರಲ್ಲಿ ವಿಶೇಷ ಗುಣ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Bail Revanna will not leave the country condition imposed by the court
ಕ್ರೈಂ13 mins ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Prajwal Revanna case HD Revanna finally gets bail What was the argument like
ಕ್ರೈಂ28 mins ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ43 mins ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ1 hour ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ2 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ8 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ13 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ14 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 day ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಟ್ರೆಂಡಿಂಗ್‌