Cheetah deaths: ಚೀತಾಗಳಿಗೆ ಮೃತ್ಯು ಕುಣಿಕೆಯಾಯಿತೇ ರೇಡಿಯೋ ಕಾಲರ್? - Vistara News

ದೇಶ

Cheetah deaths: ಚೀತಾಗಳಿಗೆ ಮೃತ್ಯು ಕುಣಿಕೆಯಾಯಿತೇ ರೇಡಿಯೋ ಕಾಲರ್?

ಇದುವರೆಗೆ ಭಾರತಕ್ಕೆ ತಂದಿರುವ 20 ಚೀತಾಗಳಲ್ಲಿ 8 ಚೀತಾಗಳು (Cheetah deaths) ಸತ್ತಿವೆ. ಇವುಗಳಲ್ಲಿ ಮೂರು, ಮಾರ್ಚ್‌ನಲ್ಲಿ ಜನಿಸಿದ ಮರಿಗಳು. ಈ ಸಾವುಗಳಲ್ಲಿ ಕೆಲವು ಹೃದಯವೈಫಲ್ಯ, ಲೈಂಗಿಕ ಕ್ರಿಯೆಯ ವೇಳೆ ಉಂಟಾದ ಗಾಯ, ಒತ್ತಡ ಇತ್ಯಾದಿ ಅನಿವಾರ್ಯ ಸಂಗತಿಗಳಿಂದ ಆಗಿವೆ.

VISTARANEWS.COM


on

project cheetah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಭೋಪಾಲ್:‌ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ವನ್ಯಜೀವಿ ಅರಣ್ಯದಲ್ಲಿ (Kuno national park) ಒಂದರ ನಂತರ ಒಂದರಂತೆ ಆಗುತ್ತಿರುವ ಚೀತಾಗಳ ಸಾವು (Cheetah deaths) , ಅವುಗಳಿಗೆ ಅಳವಡಿಸಿದ ರೇಡಿಯೋ ಕಾಲರ್‌ಗಳಿಂದಲೇ ಆಗುತ್ತಿರಬಹುದು ಎಂದು ತಜ್ಞರು ಅನುಮಾನಿಸಿದ್ದಾರೆ.

ಇದುವರೆಗೆ ಭಾರತಕ್ಕೆ ತಂದಿರುವ 20 ಚೀತಾಗಳಲ್ಲಿ 8 ಚೀತಾಗಳು ಸತ್ತಿವೆ. ಇವುಗಳಲ್ಲಿ ಮೂರು, ಮಾರ್ಚ್‌ನಲ್ಲಿ ಜನಿಸಿದ ಮರಿಗಳು. ಈ ಸಾವುಗಳಲ್ಲಿ ಕೆಲವು ಹೃದಯವೈಫಲ್ಯ, ಲೈಂಗಿಕ ಕ್ರಿಯೆಯ ವೇಳೆ ಉಂಟಾದ ಗಾಯ, ಒತ್ತಡ ಇತ್ಯಾದಿ ಅನಿವಾರ್ಯ ಸಂಗತಿಗಳಿಂದ ಆಗಿವೆ.

ಆದರೆ ಕಳೆದ ವಾರ ಸಂಭವಿಸಿದ ಎರಡು ಚೀತಾಗಳ ಮರಣಕ್ಕೆ ಅವುಗಳಿಗೆ ಅಳವಡಿಸಿದ ರೇಡಿಯೋ ಕಾಲರ್‌ ಕಾರಣ ಆಗಿರಬಹುದು ಎಂದು ತಜ್ಞರು ಅನುಮಾನಿಸುತ್ತಿದ್ದಾರೆ. ಇವುಗಳ ಚಲನವಲನದ ಮೇಲೆ ನಿಗಾ ಇಟ್ಟು ರಕ್ಷಿಸುವುದಕ್ಕಾಗಿಯೇ ರೇಡಿಯೋ ಕಾಲರ್‌ ಅಳವಡಿಸಲಾಗಿದೆ. ಆದರೆ ಇವುಗಳಿಂದ ಚೀತಾಗಳ ಕುತ್ತಿಗೆ ಸುತ್ತ ಗಾಯವಾಗಿ ಹುಣ್ಣಾಗಿದ್ದು, ಅದರಿಂದ ಹುಳುಗಳಾಗಿ ಚೀತಾಗಳು ಬವಣೆ ಅನುಭವಿಸಿ ಸತ್ತಿವೆ ಎಂದು ಹೇಳಲಾಗಿದೆ.

ಆದರೆ ಈ ತರ್ಕವನ್ನು ಪರಿಸರ ಮತ್ತು ಅರಣ್ಯ ಇಲಾಖೆ ಬಲವಾಗಿ ಅಲ್ಲಗಳೆದಿದೆ. ಎಲ್ಲ ಚೀತಾಗಳು ನೈಸರ್ಗಿಕ ಕಾರಣಗಳಿಂದಾಗಿ ಸತ್ತಿವೆ. ರೇಡಿಯೋ ಕಾಲರ್‌ ಕಾರಣ ಎನ್ನುವ ಮಾತು ನಿರಾಧಾರ ಎಂದು ಇಲಾಖೆ ಹೇಳಿದೆ. ʼʼಚೀತಾಗಳು ಯಾತನಾದಾಯಕ ಆಘಾತದಿಂದ ಸತ್ತಿವೆʼʼ ಎಂದು ಇಲಾಖೆಯ ಸಹಾಯಕ ಸಚಿವ ಅಶ್ವಿನಿ ಕುಮಾರ್‌ ಚೌಬೆ ಅವರು ರಾಜ್ಯಸಭೆಯಲ್ಲಿ ತಿಳಿಸಿದ್ದರು.

ಭಾರತದ ತೇವಾಂಶಭರಿತ ಮಳೆಗಾಲದಲ್ಲಿ ಇಂಥ ಗಾಯಗಳು ಹುಲಿ- ಚಿರತೆಯಂಥ ದೊಡ್ಡ ಬೆಕ್ಕಿನ ಜಾತಿಯ ಪ್ರಾಣಿಗಳಲ್ಲಿ ಕಂಡುಬರುವುದು ಸಾಮಾನ್ಯ. ತೇವಾಂಶದ ಕಾರಣದಿಂದ ರೇಡಿಯೋ ಕಾಲರ್‌ ಧರಿಸಿದ ಪ್ರಾಣಿ ಕತ್ತಿನ ಸುತ್ತ ತುರಿಸಿಕೊಳ್ಳುತ್ತದೆ. ಅದು ಗಾಯವಾಗುತ್ತದೆ. ಚೀತಾಗಳು ಎದುರಿಸುತ್ತಿರುವ ಮೊದಲ ಭಾರತದ ಮಳೆಗಾಲ ಇದಾಗಿದೆ. ಆಫ್ರಿಕದಂಥ ಒಣಭೂಮಿಯಿಂದ ಬಂದ ಅವುಗಳಿಗೆ ಇಲ್ಲಿನ ಮಾನ್ಸೂನ್‌ನ ಒದ್ದೆ ವಾತಾವರಣ ಇನ್ನಷ್ಟೇ ಅಭ್ಯಾಸವಾಗಬೇಕಿದೆ.

ಕತ್ತಿನ ಸುತ್ತ ಚೀತಾಗಳ ತುಪ್ಪಳ ದಪ್ಪವಾಗಿದೆ. ಒದ್ದೆ ಹವಾಮಾನದಲ್ಲಿ ಇದು ಮೃದುವಾಗಿ, ತುರಿಕೆಯಾಗುವುದು ಸಾಧ್ಯ. ತುರಿಕೆಯಿಂದ ಚರ್ಮ ಬಿರಿದರೆ, ನೊಣಗಳು ಆ ಗಾಯದಲ್ಲಿ ಮೊಟ್ಟೆ ಇಟ್ಟು ಕ್ರಿಮಿಗಳು ಸೃಷ್ಟಿಯಾಗುತ್ತವೆ. ಬ್ಯಾಕ್ಟೀರಿಯಾಗಳು ದಾಳಿ ಮಾಡಿ, ಸೆಪ್ಟಿಸೇಮಿಯಾ ಕಾಣಿಸಿಕೊಳ್ಳುತ್ತದೆ. ಇದು ಸಾವಿಗೆ ಕಾರಣವಾಗಬಹುದು ಎಂದು ತಜ್ಞರು ಹೇಳಿದ್ದಾರೆ.

ಎಂಟು ಚೀತಾಗಳನ್ನು ನಮೀಬಿಯಾದಿಂದ, 12ನ್ನು ದಕ್ಷಿಣ ಆಫ್ರಿಕಾದಿಂದ ತರಿಸಿಕೊಳ್ಳಲಾಗಿತ್ತು. ಮಾರ್ಚ್‌ನಲ್ಲಿ ಇಲ್ಲಿ ಜನಿಸಿದ ಮರಿಗಳಲ್ಲಿ ಮೂರು ಅಪೌಷ್ಟಿಕತೆ, ನಿರ್ಜಲೀಕರಣದಿಂದ ಸತ್ತಿದ್ದವು. ಇತ್ತೀಚೆಗಿನ ಮೂರು ಚೀತಾಗಳ ಸಾವಿಗೆ ರೇಡಿಯೋ ಕಾಲರ್‌ ಕಾರಣವಿರಬಹುದು ಎಂದು ತಜ್ಞರು ಶಂಕಿಸಿದ್ದು, ಇತರ ಚೀತಾಗಳನ್ನು ಉಳಿಸಿಕೊಳ್ಳಲು ಕ್ಷಿಪ್ರವಾಗಿ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಕುನೊ ಅರಣ್ಯದಲ್ಲಿ ಮುಕ್ತವಾಗಿ ತಿರುಗಾಡಲು ಬಿಟ್ಟಿದ್ದ 5 ಚೀತಾಗಳನ್ನು ಮತ್ತೆ ಅವುಗಳ ಸುರಕ್ಷಿತ ಆವರಣಕ್ಕೆ ತಂದು, ಅವುಗಳ ರೇಡಿಯೋ ಕಾಲರ್‌ ಕಳಚಿಬಿಡಲಾಗಿದೆ.

ಇದನ್ನೂ ಓದಿ: Cheetah Dies: ಕುನೊದಲ್ಲಿ 8ನೇ ಚೀತಾ ಸಾವು; ಕೇಂದ್ರದ ಯೋಜನೆಗೆ ಹಿನ್ನಡೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ದೇಶ

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

VISTARANEWS.COM


on

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಹಿಂಸಾಚಾರ ಭುಗಿಲೆದ್ದಿದೆ. ಸಿಎಂ ರೇಸ್‌‌ನಲ್ಲಿರೋ ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌‌ ಹತ್ಯೆ ಆಗಿದೆ. ಆದ್ರೆ, ದುಷ್ಕರ್ಮಿಗಳ ಟಾರ್ಗೆಟ್‌‌‌‌‌ ಇದಿದ್ದು, ಸುವೇಂದು ಅಧಿಕಾರಿ, ಚಂದ್ರನಾಥ್‌ ಸುವೇಂದು‌ ಅವರ ಕಾರಿನಲ್ಲೇ ಮನೆಗೆ ಹೋಗ್ತಿದ್ದಾಗ ದುಷ್ಕಿರ್ಮಿಗಳು ಅಡ್ಡಗಟ್ಟಿ ಪಿಸ್ತೂಲ್‌‌ನಿಂದ ಶೂಟೌಟ್‌‌‌‌ ಮಾಡಿ ಕೊಲೆ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಆಗ್ಬೇಕೆಂದು ಕಣ್ಣೀರು ಹಾಕುತ್ತಲೆ ಸುವೇಂದು ಅಧಿಕಾರಿ ಗುಡುಗಿದ್ದಾರೆ. ಇದೆಲ್ಲದರ ಮಧ್ಯೆ ಪಶ್ಚಿಮ ಬಂಗಾಳದ ಗದ್ದುಗೆ ಯಾರು ಏರ್ತಾರೆ ಅನ್ನೋ ಕುತೂಹಲಕ್ಕೆ ನಾಳೆ ಬ್ರೇಕ್‌ ಬೀಳಲಿದೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಸಹ ವೀಕ್ಷಕ ಒಡಿಶಾದ ಮುಖ್ಯಮಂತ್ರಿ ಮೋಹನ್ ಮಾಝಿ ನೇತೃತ್ವದಲ್ಲಿ ನಾಳೆ ಸಂಜೆ 4 ಗಂಟೆಗೆ ನೂತನ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಸಭೆಯಲ್ಲೇ ಪಶ್ಚಿಮ ಬಂಗಾಳದ ಸಿಎಂ ಯಾರಾಗಬೇಕು ಅನ್ನೋದು ಫೈನಲ್‌ ಆಗಲಿದೆ.
ಇವತ್ತಿಗೆ ಮಮತಾ ಬ್ಯಾನರ್ಜಿ ಆಡಳಿತಾವಧಿ ಮುಕ್ತಾಯಗೊಂಡಿದೆ. ಮೇ 9ರಂದು ನೂತನ ಮುಖ್ಯಮಂತ್ರಿ ಮತ್ತು ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಸುವೇಂದು ಅಧಿಕಾರಿಯವರ ಜನಪ್ರಿಯತೆಯೋ ಅಥವಾ ದಿಲೀಪ್ ಘೋಷ್, ಸಮಿಕ್ ಭಟ್ಟಾಚಾರ್ಯ ಅವರ ಸಂಘಟನಾ ನಿಷ್ಠೆಯೋ? ಹೈಕಮಾಂಡ್ ಯಾರಿಗೆ ಮನ್ನಣೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

Continue Reading

ರಾಜಕೀಯ

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

VISTARANEWS.COM


on

ತಮಿಳುನಾಡು ರಾಜಕೀಯ ಕ್ಷಣಕ್ಷಣಕ್ಕೂ ರೋಚಕ ತಿರುವು ಪಡೆಯುತ್ತಿದೆ. ವಿಜಯ್‌ ಪ್ರಮಾಣವಚನಕ್ಕೆ ಗವರ್ನರ್‌ ಎರಡನೇ ಸಲವೂ ಬ್ರೇಕ್‌ ಹಾಕಿದ್ದಾರೆ. ೧೧೮ ಶಾಸಕರ ಬೆಂಬಲದ ಪತ್ರ ತನ್ನಿ, ಅಲ್ಲಿಯವರೆಗೆ ಉಳಿದ ಯಾವ ಪಕ್ಷಕ್ಕೂ ಪ್ರಮಾಣವಚನಕ್ಕೆ ಆಹ್ವಾನಿಸುವುದಿಲ್ಲ ಎಂದು ಗವರ್ನರ್‌ ರಾಜೇಂದ್ರ ಅರ್ಲೇಕರ್‌ ಟಿವಿಕೆ ಮುಖ್ಯಸ್ಥ ವಿಜಯ್‌ಗೆ ಸೂಚಿಸಿದ್ದಾರೆ.
ಈ ಮಧ್ಯೆ, ಟಿವಿಕೆ ಪಕ್ಷ ಬೆಂಬಲಕ್ಕಾಗಿ ವಿಸಿಕೆಯನ್ನು ಸಂಪರ್ಕಿಸಿದೆ. ಸಿಪಿಐ ಮತ್ತು ಸಿಪಿಎಂ ಪಕ್ಷಗಳನ್ನೂ ವಿಜಯ್‌ ಮಾತುಕತೆ ನಡೆಸುತ್ತಿದ್ದಾರೆ. ವಿಸಿಕೆ, ಸಿಪಿಐ ಮತ್ತು ಸಿಪಿಎಂ ತಲಾ ಇಬ್ಬರು ಶಾಸಕರನ್ನು ಹೊಂದಿದೆ. ಮೂರೂ ಪಕ್ಷಗಳು ಇದುವರೆಗೆ ವಿಜಯ್‌ಗೆ ಅಧಿಕೃತ ಬೆಂಬಲ ಘೋಷಿಸಿಲ್ಲ.
ಮತ್ತೊಂದು ಕಡೆ, ಚೆನ್ನೈನಲ್ಲಿ ವಿಜಯ್‌ ಬೆಂಬಲಿಗರ ಜಮಾವಣೆ ಏರುತ್ತಿದೆ. ರಾಜ್ಯಪಾಲರ ನಡೆಯಿಂದ ಆಕ್ರೋಶಗೊಂಡಿರುವ ಟಿವಿಕೆ ನಾಯಕರು ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. ಪ್ರಮಾಣ ವಚನ ಸ್ವೀಕರಿಸಲು ವಿಜಯ್‌ಗೆ ಆಹ್ವಾನ ನೀಡುವಂತೆ ರಾಜ್ಯಪಾಲರಿಗೆ ಸೂಚಿಸಬೇಕು ಎಂದು ರಾಷ್ಟ್ರಪತಿಗೆ ಇ-ಮೇಲ್‌ ರವಾನಿಸಿದ್ದಾರೆ

Continue Reading

ಕ್ರೈಂ

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

VISTARANEWS.COM


on

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನವಾಣೆ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಹಿಂಸಾಚಾರ ಜೋರಾಗಿತ್ತು. ಇದೀಗ ರಕ್ತದೋಕುಳಿಯೇ ಹರಿದಿದೆ. ಬಿಜೆಪಿ ನಾಯಕ ಹಾಗೂ ಸಿಎಂ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.


ಕಾರಿನಲ್ಲಿ ಮನೆಗೆ ಮರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗಾಡಿ ಅಡ್ಡಗಟ್ಟಿ, ಗುಂಡಿನ ದಾಳಿ ಮಾಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಒಬ್ಬ ವ್ಯಕ್ತಿ ಕಾರಿನ ಕಿಟಕಿಯ ಹತ್ತಿರ ಬಂದು ಚಂದ್ರನಾಥ್ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ರಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈಗ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಹತ್ಯೆ ಕೇಸ್‌ ಟ್ವಿಸ್ಟ್‌ ಪಡೆದುಕೊಂಡಿದೆ. ಅಸಲಿಗೆ ಸುವೇಂದು ಅಧಿಕಾರಿ ಕೊಲೆಗೆ ಟಾರ್ಗೆಟ್‌‌ , ಮಾಡಲಾಗಿತ್ತು ಎನ್ನಲಾಗಿದ್ದು, ಅದು ಮಿಸ್‌‌ ಆಗಿ ಸುವೇಂದು ಆಪ್ತನ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ದುಷ್ಕರ್ಮಿಗಳು ಆಸ್ಟ್ರಿಯಾ ಮೂಲದ ಗ್ಲಾಕ್‌ ಪಿಸ್ತೂಲ್‌ ಬಳಸಿ ಶೂಟ್‌ ಮಾಡಿದ್ದಾರೆ.

Continue Reading

ಕ್ರೈಂ

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

VISTARANEWS.COM


on

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನವಾಣೆ ಫಲಿತಾಂಶ ಹೊರಬೀಳ್ತಿದ್ದಂತೆ ಹಿಂಸಾಚಾರ ಜೋರಾಗಿತ್ತು. ಇದೀಗ ರಕ್ತದೋಕುಳಿಯೇ ಹರಿದಿದೆ. ಬಿಜೆಪಿ ನಾಯಕ ಹಾಗೂ ಸಿಎಂ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.


ಕಾರಿನಲ್ಲಿ ಮನೆಗೆ ಮರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಗುಂಡಿನ ದಾಳಿ ಮಾಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಒಬ್ಬ ವ್ಯಕ್ತಿ ಕಾರಿನ ಕಿಟಕಿಯ ಹತ್ತಿರ ಬಂದು ಚಂದ್ರನಾಥ್ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ರಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಆದ್ರೀಗ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಹತ್ಯೆ ಕೇಸ್‌ ಟ್ವಿಸ್ಟ್‌ ಪಡೆದುಕೊಂಡಿದೆ. ಸುವೇಂದು ಅಧಿಕಾರಿ ಕೊಲೆಗೆ ಟಾರ್ಗೆಟ್‌‌ , ಮಾಡಲಾಗಿತ್ತು ಎನ್ನಲಾಗಿದ್ದು, ಮಿಸ್‌‌ ಆಗಿ ಆಪ್ತನ ಹತ್ಯೆ ಮಾಡಿದ್ದಾರೆ. ದುಷ್ಕರ್ಮಿಗಳು ಆಸ್ಟ್ರಿಯಾ ಮೂಲದ ಗ್ಲಾಕ್‌ ಪಿಸ್ತೂಲ್‌ ಬಳಸಿ ಶೂಟೌಟ್‌‌ ಮಾಡಿದ್ದಾರೆ.

Continue Reading
Advertisement
ದೇಶ57 minutes ago

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

ರಾಜಕೀಯ1 hour ago

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

ರಾಜಕೀಯ4 hours ago

ತಮಿಳುನಾಡು ರಾಜಕೀಯಕ್ಕೆ ರೋಚಕ ಟ್ವಿಸ್ಟ್‌, ದಳಪತಿ ಪ್ರಮಾಣವಚನಕ್ಕೆ ಬ್ರೇಕ್‌, ಡಿಎಂಕೆ-ಎಐಎಡಿಎಂಕೆ ಮೈತ್ರಿ ಸಾಧ್ಯತೆ

ಕ್ರೈಂ5 hours ago

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

ಕ್ರೈಂ5 hours ago

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

Latest1 day ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

Latest1 day ago

ದಳಪತಿʼ ಪಟ್ಟಾಭಿಷೇಕಕ್ಕೆ ಕ್ಷಣಗಣನೆ : ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

Latest2 days ago

ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವುದಿಲ್ಲ ಎಂದಿದ್ದೇಕೆ ಮಮತಾ ಬ್ಯಾನರ್ಜಿ?

Latest2 days ago

ಬಿಜೆಪಿ ಬಂಗಾಳ ಗೆದ್ದಾಯ್ತು, ಸಿಎಂ ರೇಸ್‌ನಲ್ಲಿ ಯಾರು?

Latest2 days ago

ತಮಿಳುನಾಡು: ಬಹುಮತ ಪಡೆಯಲು ದಳಪತಿ ಮುಂದಿರುವ ತಂತ್ರಗಳೇನು?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌