3 ದಿನ ಸಿಎಂ ಬೊಮ್ಮಾಯಿ ಚಂಡೀಗಢ ಪ್ರವಾಸ: ಜಿಎಸ್‌ಟಿ ಮಧ್ಯಂತರ ವರದಿ ಸಲ್ಲಿಕೆ ಸಾಧ್ಯತೆ - Vistara News

ದೇಶ

3 ದಿನ ಸಿಎಂ ಬೊಮ್ಮಾಯಿ ಚಂಡೀಗಢ ಪ್ರವಾಸ: ಜಿಎಸ್‌ಟಿ ಮಧ್ಯಂತರ ವರದಿ ಸಲ್ಲಿಕೆ ಸಾಧ್ಯತೆ

ಚಂಡೀಗಢದಲ್ಲಿ ಎರಡು ದಿನ ನಡೆಯುವ ಸಭೆಯಲ್ಲಿ ಜಿಎಸ್‌ಟಿ ವ್ಯಾಪ್ತಿಯ ವಿವಿಧ ಸರಕು ಮತ್ತು ಸೇವೆಗಳ ಕುರಿತು ಮಹತ್ವದ ಚರ್ಚೆ ನಡೆಯಲಿದೆ.

VISTARANEWS.COM


on

ಸಿಎಂ ಬೊಮ್ಮಾಯಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆಯ(ಜಿಎಸ್‌ಟಿ) ಸಚಿವರ ಗುಂಪಿನ ಸಭೆಯಲ್ಲಿ ಭಾಗವಹಿಸಲು ಸಿಎಂ ಬಸವರಾಜ ಬೊಮ್ಮಾಯಿ ಸೋಮವಾರ ಸಂಜೆ ಚಂಡೀಗಢಕ್ಕೆ ಪ್ರಯಾಣಿಸಿದರು. ಜಿಎಸ್‌ಟಿಗೆ ಒಳಪಡುವ ಉತ್ಪನ್ನಗಳು ಹಾಗೂ ಸೇವೆಗಳ ದರ ನಿಗದಿ (Rate Rationalization) ಕುರಿತು ರಚಿಸಲಾಗಿರುವ ಸಚಿವರ ಗುಂಪಿನ ಸಂಚಾಲಕರೂ ಆಗಿರುವ ಸಿಎಂ ಬೊಮ್ಮಾಯಿ, ಎರಡು ದಿನಗಳ ಈ ಸಭೆಯಲ್ಲಿ ಮಧ್ಯಂತರ ವರದಿಯನ್ನು ಸಲ್ಲಿಸುವ ಸಾಧ್ಯತೆಯಿದೆ.

2021ರ ಸೆಪ್ಟೆಂಬರ್‌ನಲ್ಲಿ ಈ ಸಮಿತಿಯನ್ನು ರಚನೆ ಮಾಡಲಾಗಿತ್ತು. ಸಮಿತಿಗೆ ಸಿಎಂ ಬೊಮ್ಮಾಯಿ ಸಂಚಾಲಕರಾದರೆ, ಬಿಹಾರ, ಗೋವಾ, ಕೇರಳ, ರಾಜಸ್ಥಾನ, ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದ ತಲಾ ಒಬ್ಬರು ಸಚಿವರನ್ನು ಸದಸ್ಯರನ್ನಾಗಿ ನೇಮಿಸಲಾಗಿತ್ತು.

ಸಮಿತಿಗೆ ಮುಖ್ಯವಾಗಿ ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿರುವ ಸರಕು ಮತ್ತು ಸೇವೆಗಳನ್ನು ಗುರುತಿಸಿ ಅವುಗಳನ್ನು ತೆರಿಗೆ ವ್ಯಾಪ್ತಿಗೆ ತರುವುದು, ಈಗಾಗಲೆ ಮಂಡಳಿ ನಿರ್ಧಾರ ಕೈಗೊಂಡ ಉತ್ಪನ್ನ ಮತ್ತು ಸೇವೆಗಳನ್ನು ಹೊರತುಪಡಿಸಿ ತೆರಿಗೆ ಸ್ವರೂಪದ ಪುನರ್ವಿಮರ್ಷೆ, ಸದ್ಯದ ತೆರಿಗೆ ಸ್ಲಾಬ್‌ಗಳ ಪರಿಶೀಲನೆ ಹಾಗೂ ಬದಲಾವಣೆಗೆ ಶಿಫಾರಸು ಮಾಡುವ ಕಾರ್ಯವನ್ನು ವಹಿಸಲಾಗಿತ್ತು. ತಕ್ಷಣವೇ ಕೈಗೊಳ್ಳಬೇಕಾದ ಕ್ರಮಗಳ ಜತೆಗೆ, ದೂರಗಾಮಿಯಾಗಿ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಅದಕ್ಕೆ ಅವಶ್ಯಕ ಮಾರ್ಗಸೂಚಿಯನ್ನೂ ಸಮಿತಿ ಸೂಚಿಸಬಹುದು. ಸಮಿತಿ ಎರಡು ತಿಂಗಳಲ್ಲಿ ಪೂರ್ಣ ವರದಿ ಸಲ್ಲಿಸಬೇಕಿದ್ದು, ನಡುವೆ ಮಧ್ಯಂತರ ವರದಿ ಸಲ್ಲಿಸಬಹುದು ಎಂದು ತಿಳಿಸಲಾಗಿತ್ತು.

ಸಮಿತಿಯು ಈಗಾಗಲೆ ಮೂರು ಸಭೆಗಳನ್ನು ನಡೆಸಿದೆ. ಇನ್ನೂ ಪೂರ್ಣ ವರದಿ ಸಿದ್ಧವಾಗಿಲ್ಲ. ಈ ನಡುವೆ ಚಂಡೀಗಢದಲ್ಲಿ ಜೂನ್‌ 28 ಹಾಗೂ 29 ರಂದು ಸಭೆ ನಡೆಯಲಿದೆ. ಈ ಸಭೆಯಲ್ಲಿ ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಸಲ್ಲಿಸಲಿದ್ದಾರೆ. ಈ ಕುರಿತು ಸುದೀರ್ಘ ಚರ್ಚೆಗಳು ನಡೆಯಲಿವೆ ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಪ್ರಮುಖವಾಗಿ ಜಿಎಸ್‌ಟಿ ಪರಿಹಾರ ಈ ವರ್ಷ ಅಂತ್ಯಗೊಳ್ಳಲಿದ್ದು, ಅದರ ಬಗ್ಗೆ ಚರ್ಚೆ ಮಾಡಿ ಅಂತಿಮ ತೀರ್ಮಾನಕ್ಕೆ ಬರಲಾಗುವುದರ ಬಗ್ಗೆ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಜೂನ್ 30ರ ಬೆಳಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಕರ್ನಾಟಕಕ್ಕೆ ವಾಪಸಾಗಲಿದ್ದಾರೆ.

ಇದನ್ನೂ ಓದಿ | GST ಮಂಡಳಿ ಸಭೆ ಜೂನ್‌ 28-29ಕ್ಕೆ, ಕುದುರೆ ರೇಸ್, ಆನ್‌ಲೈನ್‌ ಗೇಮಿಂಗ್‌ಗೆ 28% ಜಿಎಸ್‌ಟಿ ನಿರೀಕ್ಷೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Toyota Kirloskar Motor: ಟೊಯೊಟಾ ರುಮಿಯಾನ್‌ G-AT ಬುಕ್ಕಿಂಗ್‌ ಶುರು! ಏನಿದರ ವಿಶೇಷ?

Toyota Kirloskar Motor: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಟೊಯೊಟಾ ರುಮಿಯಾನ್ G-AT ನೂತನ ಗ್ರೇಡ್ ಅನ್ನು ಪರಿಚಯಿಸಿದ್ದು, 1.5-ಲೀಟರ್ ಸೀರಿಸ್ ಪೆಟ್ರೋಲ್ ಎಂಜಿನ್‌ನೊಂದಿಗೆ 6-ಸ್ಪೀಡ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್‌ನಿಂದ ನಿಯಂತ್ರಿಸಲ್ಪಡುತ್ತದೆ. ನಿಯೋ ಡ್ರೈವ್ (ಐಎಸ್‌ಜಿ) ತಂತ್ರಜ್ಞಾನವನ್ನು ಒಳಗೊಂಡಿದೆ.

VISTARANEWS.COM


on

Toyota Kirloskar Motor Introduces New G-AT Grade of Toyota Rumion
Koo

ಬೆಂಗಳೂರು: ಟೊಯೊಟಾ ರುಮಿಯಾನ್‌ನ G-AT ಹೊಸ ಸರಣಿಯ ಅಧಿಕೃತ ಬುಕ್ಕಿಂಗ್ ಆರಂಭಿಸಿರುವ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor) ಬೆಲೆಯನ್ನು ಇಂದು ಘೋಷಿಸಿದ್ದು, ಹೊಸದಾಗಿ ಬಿಡುಗಡೆಯಾದ G-AT ವೇರಿಯಂಟ್‌ ಸರಿಸಾಟಿಯಿಲ್ಲದ ಸ್ಪೇಸ್ ಮತ್ತು ಕಂಫರ್ಟ್‌, ಅತ್ಯುತ್ತಮ ಇಂಧನ ದಕ್ಷತೆ, ಸ್ಟೈಲಿಶ್ ಮತ್ತು ಪ್ರೀಮಿಯಂ ಎಕ್ಸ್‌ಟೀರಿಯರ್ ಡಿಸೈನ್‌ ಒಳಗೊಂಡಿದೆ.

ಟಿಕೆಎಂನ ಇತ್ತೀಚಿನ ಆಫರ್ ಬೆಲೆಯು 13 ಲಕ್ಷ ರೂ. ಗಳ ಆಕರ್ಷಕ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿದೆ. ಡೆಲಿವರಿ ಮೇ 5 ರಿಂದ ಪ್ರಾರಂಭವಾಗುವ ನಿರೀಕ್ಷೆಯಿದ್ದು, ಗ್ರಾಹಕರು ಯಾವುದೇ ಅಧಿಕೃತ ಡೀಲರ್‌ಶಿಪ್‌ಗಳಲ್ಲಿ ಅಥವಾ ಆನ್‌ಲೈನ್‌ನಲ್ಲಿ 11 ಸಾವಿರ ರೂ. ಬುಕಿಂಗ್ ಶುಲ್ಕದೊಂದಿಗೆ ವಾಹನವನ್ನು ಬುಕ್ ಮಾಡಬಹುದಾಗಿದೆ.

ಇದನ್ನೂ ಓದಿ: Labour Day 2024: ಕಾರ್ಮಿಕ ದಿನಾಚರಣೆ ಸಂದರ್ಭದಲ್ಲಿ ಉದ್ಯೋಗಿಗಳಿಗೆ ಉಪಯುಕ್ತ ಹಣಕಾಸು ಟಿಪ್ಸ್‌ ಇಲ್ಲಿದೆ

ಟೊಯೊಟಾ ರುಮಿಯಾನ್ G-AT ವೇರಿಯಂಟ್ 1.5-ಲೀಟರ್ ಸೀರಿಸ್ ಪೆಟ್ರೋಲ್ ಎಂಜಿನ್‌ನೊಂದಿಗೆ 6-ಸ್ಪೀಡ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್‌ನಿಂದ ನಿಯಂತ್ರಿಸಲ್ಪಡುತ್ತದೆ. ನಿಯೋ ಡ್ರೈವ್ (ಐಎಸ್‌ಜಿ) ತಂತ್ರಜ್ಞಾನವನ್ನು ಒಳಗೊಂಡಿದೆ. ಪೆಟ್ರೋಲ್ ಗ್ರೇಡ್ 75.8 ಕಿಲೋವ್ಯಾಟ್ @ 6000 rpm ಪವರ್ ಮತ್ತು 136.8 Nm @ 4400 ಆರ್‌ಪಿಎಂ ಟಾರ್ಕ್ ಅನ್ನು ಹೊಂದಿದೆ. ಸಿಎನ್‌ಜಿ ಗ್ರೇಡ್ 64.6 ಕಿಲೋವ್ಯಾಟ್ ಔಟ್‌ಪುಟ್ @ 5500 rpm ಮತ್ತು 121.5 Nm@4200 rpm ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಟೊಯೊಟಾ ರುಮಿಯಾನ್ ಈಗ ನಿಯೋ ಡ್ರೈವ್ MT ಏಳು ರೂಪಾಂತರಗಳಲ್ಲಿ ಲಭ್ಯವಿದೆ. ಎಸ್, ಜಿ ಮತ್ತು ವಿ ಗ್ರೇಡ್ ಮತ್ತು ನಿಯೋ ಡ್ರೈವ್ AT: ಎಸ್, ಜಿ ಮತ್ತು ವಿ ಗ್ರೇಡ್. ಇ-ಸಿಎನ್ ಜಿ: ಎಸ್ ಗ್ರೇಡ್ ಗ್ರಾಹಕರಿಗೆ ವ್ಯಾಪಕ ಶ್ರೇಣಿಯ ಆಯ್ಕೆಗಳನ್ನು ನೀಡುತ್ತದೆ.

G-AT ವೇರಿಯಂಟ್ ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಹೊಂದಿರುವ 17.78 ಸೆಂ.ಮೀ ಸ್ಮಾರ್ಟ್ ಪ್ಲೇ ಕ್ಯಾಸ್ಟ್ ಟಚ್ ಸ್ಕ್ರೀನ್ ಆಡಿಯೊ ಸಿಸ್ಟಮ್ ಸೇರಿದಂತೆ ಸುಧಾರಿತ ತಂತ್ರಜ್ಞಾನವನ್ನು ಒಳಗೊಂಡಿದೆ. ಟೊಯೊಟಾ i-Connect ಹೊಂದಿರುವ ಇದು ಹವಾಮಾನ, ಲಾಕ್ / ಅನ್ಲಾಕ್, ಹಜಾರ್ಡ್ ಲೈಟ್ಸ್ ಸೇರಿದಂತೆ ಅನೇಕ ಸಂಪರ್ಕಿತ ವೈಶಿಷ್ಟ್ಯಗಳಿಗಾಗಿ ರಿಮೋಟ್ ಕಂಟ್ರೋಲ್ ಅನ್ನು ನೀಡುತ್ತದೆ. ಟೊಯೊಟಾ ರುಮಿಯಾನ್ ಡ್ಯುಯಲ್ ಫ್ರಂಟ್ ಏರ್ ಬ್ಯಾಗ್ಸ್, ಇಬಿಡಿಯೊಂದಿಗೆ ಎಬಿಎಸ್, ಹಿಲ್ ಹೋಲ್ಡ್, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ (ಇಎಸ್ ಪಿ) ಸೇರಿದಂತೆ ಹಲವು ಸುಧಾರಿತ ಸುರಕ್ಷತಾ ವೈಶಿಷ್ಟ್ಯಗಳೊಂದಿಗೆ ತನ್ನ ಮಾಲೀಕರ ಸುರಕ್ಷತೆಗೆ ಆದ್ಯತೆ ನೀಡುತ್ತದೆ.

ಇದನ್ನೂ ಓದಿ: IPL 2024: ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದ ಕುಲ್​ದೀಪ್, ನರೈನ್

ಈ ಕುರಿತು ಟಿಕೆಎಂನ ಸೇಲ್ಸ್ ಅಂಡ್ ಸ್ಟ್ರಾಟಜಿಕ್ ಮಾರ್ಕೆಟಿಂಗ್ ನ ಉಪಾಧ್ಯಕ್ಷ ಶಬರಿ ಮನೋಹರ್ ಮಾತನಾಡಿ, ಟೊಯೊಟಾ ರುಮಿಯಾನ್ ಸೀರಿಸ್‌ಗೆ ಹೊಸ ಗ್ರೆಡ್ ಸೇರ್ಪಡೆಯನ್ನು ಘೋಷಿಸಲು ನಾವು ಉತ್ಸುಕರಾಗಿದ್ದೇವೆ, ಇದರಿಂದಾಗಿ ಗ್ರಾಹಕರಿಗೆ ಅವರ ಚಲನಶೀಲತೆ ಅಗತ್ಯತೆಗಳು ಮತ್ತು ಅವಶ್ಯಕತೆಗಳ ಆಧಾರದ ಮೇಲೆ ವ್ಯಾಪಕ ಆಯ್ಕೆಗಳನ್ನು ನೀಡುತ್ತದೆ. G-AT ವೇರಿಯಂಟ್‌ನ ಬುಕಿಂಗ್ ಈಗ ತೆರೆದಿದೆ. ಆಗಸ್ಟ್ 23ರಲ್ಲಿ ಬಿಡುಗಡೆಯಾದಾಗಿನಿಂದ ಟೊಯೊಟಾ ರುಮಿಯಾನ್ ಗ್ರಾಹಕರಲ್ಲಿ ಹೆಚ್ಚಿನ ಉತ್ಸಾಹವನ್ನು ಸೃಷ್ಟಿಸಿದೆ. ಇದು ಹೆಚ್ಚಿನ ಎನ್‌ಕ್ವೈರಿ ಮತ್ತು ಆರೋಗ್ಯಕರ ಬುಕಿಂಗ್‌ಗೆ ಕಾರಣವಾಗಿದೆ. ನಮ್ಮ ಮೌಲ್ಯಯುತ ಗ್ರಾಹಕರು ತೋರಿಸಿದ ಪ್ರೀತಿ ಮತ್ತು ನಂಬಿಕೆಯನ್ನು ನಾವು ತುಂಬು ಹೃದಯದಿಂದ ಪ್ರಶಂಸಿಸುತ್ತೇವೆ ಎಂದು ತಿಳಿಸಿದ್ದಾರೆ.

ಟೊಯೊಟಾ MPV ಸಿಗ್ನೇಚರ್ ಫ್ರಂಟ್ ಗ್ರಿಲ್, ಕ್ರೋಮ್ ಫಿನಿಶ್‌ನೊಂದಿಗೆ ಫ್ರಂಟ್ ಬಂಪರ್, ಬ್ಯಾಕ್ ಡೋರ್ ಕ್ರೋಮ್ ಡಿಸೈನ್ ನೊಂದಿಗೆ ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಹೊಂದಿದೆ. ಅತ್ಯಾಧುನಿಕ ಡ್ಯುಯಲ್ ಟೋನ್ ಅಲಾಯ್ ವೀಲ್ಸ್, ದೃಢವಾದ ಗುಣಲಕ್ಷಣಗಳೊಂದಿಗೆ ರಫ್ ಲುಕ್‌ಗಾಗಿ ರುಮಿಯನ್ ಸ್ಟೈಲಿಶ್ ಮತ್ತು ಪ್ರೀಮಿಯಂ ಎಕ್ಸ್‌ಟೀರಿಯರ್ ಡಿಸೈನ್ ಅನ್ನು ಹೊಂದಿದೆ. ಐಷಾರಾಮಿ ಒಳಾಂಗಣವು ಮರದ ಫಿನಿಶ್ ಡ್ಯಾಶ್ ಬೋರ್ಡ್ ಮತ್ತು ಡೋರ್ ಟ್ರಿಮ್‌ಗಳೊಂದಿಗೆ ಪ್ರೀಮಿಯಂ ಡ್ಯುಯಲ್-ಟೋನ್, ಪ್ರೀಮಿಯಂ ಡ್ಯುಯಲ್-ಟೋನ್ ಒಳಾಂಗಣ ಮತ್ತು ಅನುಕೂಲಕರ ಸೌಲಭ್ಯಗಳನ್ನು ನೀಡುತ್ತದೆ.

ಇದನ್ನೂ ಓದಿ: Maoists killed: ಭದ್ರತಾ ಪಡೆಗಳ ಜತೆ ಗುಂಡಿನ ಚಕಮಕಿ, ಏಳು ಮಾವೋವಾದಿಗಳು ಫಿನಿಶ್

ಟೊಯೊಟಾ ರುಮಿಯಾನ್ ಅತ್ಯುನ್ನತ ಸುರಕ್ಷತಾ ಮಾನದಂಡಗಳನ್ನು ಸಹ ನೋಡುತ್ತದೆ. ಇದು ಡ್ಯುಯಲ್ ಫ್ರಂಟ್ ಏರ್ ಬ್ಯಾಗ್‌ಗಳು, ಇಬಿಡಿಯೊಂದಿಗೆ ಎಬಿಎಸ್ ಮತ್ತು ಬ್ರೇಕ್ ಅಸಿಸ್ಟ್, ಎಂಜಿನ್ ಇಮೊಬೈಲೈಜರ್, ಇಎಸ್‌ಪಿ, ಹಿಲ್ ಹೋಲ್ಡ್ ಅಸಿಸ್ಟ್ ಮತ್ತು ಐಎಸ್ ಒ ಫಿಕ್ಸ್ ಚೈಲ್ಡ್ ಸೀಟ್ ಆಂಕೋರೇಜ್‌ಗಳೊಂದಿಗೆ ಬಿಡುಗಡೆಯಾಗುತ್ತಿದೆ. ಪ್ರಿಟೆನ್ಷನರ್‌ಗಳು ಮತ್ತು ಫೋರ್ಸ್ ಲಿಮಿಟರ್‌ಗಳೊಂದಿಗೆ ಫ್ರಂಟ್ ಸೀಟ್ ಬೆಲ್ಟ್‌ಗಳು, ಎಲ್ಲಾ ಸೀಟ್‌ಗಳಿಗೆ ಸೀಟ್ ಬೆಲ್ಟ್ ರಿಮೈಂಡರ್ ಮತ್ತು ಹೈಸ್ಪೀಡ್ ಅಲರ್ಟ್ ಸಿಸ್ಟಮ್ ಹೊಂದಿದೆ.

Continue Reading

ದೇಶ

Covishield Vaccine: ಕೋವಿಡ್‌ ಲಸಿಕೆಯಿಂದ ಬರುತ್ತೆ ರಕ್ತ ಹೆಪ್ಪುಗಟ್ಟೋ ಕಾಯಿಲೆ! ವಿವರ ನಿಮಗೆ ತಿಳಿದಿರಲಿ

Covishield Vaccine: ಕೋವಿಶೀಲ್ಡ್, ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯ ಅಭಿವೃದ್ಧಿಪಡಿಸಿದ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ತಯಾರಿಸಲ್ಪಟ್ಟ ಲಸಿಕೆ. ನ್ಯಾಯಾಲಯದ ದಾಖಲೆಗಳ ಪ್ರಕಾರ ಅಪರೂಪದ ಸಂದರ್ಭಗಳಲ್ಲಿ ಅದು ಟಿಟಿಎಸ್‌ ಸ್ಥಿತಿಗೆ ಕಾರಣವಾಗಬಹುದು. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಈ ಲಸಿಕೆಯನ್ನು ಭಾರತದಾದ್ಯಂತ ವ್ಯಾಪಕವಾಗಿ ನೀಡಲಾಗಿದೆ.

VISTARANEWS.COM


on

covishield vaccine
Koo

ಹೊಸದಿಲ್ಲಿ: ಬ್ರಿಟಿಷ್ ಔಷಧೀಯ ದೈತ್ಯ ಕಂಪನಿ ಅಸ್ಟ್ರಾಜೆನೆಕಾ (AstraZeneca), ತನ್ನ ಕೋವಿಡ್-19 (Covid 19) ಲಸಿಕೆ ಕೋವಿಶೀಲ್ಡ್ (Covishield Vaccine)‌ ಇದು ಥ್ರಂಬೋಸಿಸ್ ವಿಥ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (Thrombosis with Thrombocytopenia Syndrome – TTS) ಎಂಬ ಅಪರೂಪದ ಅಡ್ಡ ಪರಿಣಾಮವನ್ನು ಉಂಟುಮಾಡಬಹುದು ಎಂದು ಒಪ್ಪಿಕೊಂಡಿದೆ. ಕಂಪನಿಯ ವಿರುದ್ಧ ದಾಖಲಾಗಿರುವ ಒಂದು ಮೊಕದ್ದಮೆಯ ಸಂದರ್ಭದಲ್ಲಿ ಇದನ್ನು ಒಪ್ಪಿಕೊಳ್ಳಲಾಗಿದೆ.

ಈ ಮೊಕದ್ದಮೆಯಲ್ಲಿ ಲಸಿಕೆಗೆ ಸಂಬಂಧಿಸಿ ಗಂಭೀರ ದೈಹಿಕ ಹಾನಿ ಮತ್ತು ಸಾವುಗಳನ್ನು ಆರೋಪಿಸಲಾಗಿದೆ. ಕೋವಿಶೀಲ್ಡ್, ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯ ಅಭಿವೃದ್ಧಿಪಡಿಸಿದ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ತಯಾರಿಸಲ್ಪಟ್ಟ ಲಸಿಕೆ. ನ್ಯಾಯಾಲಯದ ದಾಖಲೆಗಳ ಪ್ರಕಾರ ಅಪರೂಪದ ಸಂದರ್ಭಗಳಲ್ಲಿ ಅದು ಟಿಟಿಎಸ್‌ ಸ್ಥಿತಿಗೆ ಕಾರಣವಾಗಬಹುದು. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಈ ಲಸಿಕೆಯನ್ನು ಭಾರತದಾದ್ಯಂತ ವ್ಯಾಪಕವಾಗಿ ನೀಡಲಾಗಿದೆ.

ಟಿಟಿಎಸ್ ಎಂದರೇನು?

ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಜೊತೆಗಿನ ಥ್ರಂಬೋಸಿಸ್ ಅಪರೂಪದ ಸ್ಥಿತಿಯಾಗಿದ್ದು, ದೇಹದಲ್ಲಿನ ಅಸಾಮಾನ್ಯ ಸ್ಥಳಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಉಂಟಾಗುತ್ತದೆ. ರಕ್ತದಲ್ಲಿನ ಪ್ಲೇಟ್‌ಲೆಟ್‌ಗಳ ಸಂಖ್ಯೆಯು ಕಡಿಮೆಯಾಗುತ್ತದೆ. ಪ್ಲೇಟ್‌ಲೆಟ್‌ಗಳು ರಕ್ತ ಹೆಪ್ಪುಗಟ್ಟಲು ಸಹಾಯ ಮಾಡುವ ಸಣ್ಣ ಕೋಶಗಳು. ಆದ್ದರಿಂದ ಅವು ತುಂಬಾ ಕಡಿಮೆ ಇರುವುದು ಅಪಾಯಕಾರಿ.

ಅಡೆನೊವೈರಲ್ ವೆಕ್ಟರ್ COVID-19 ಲಸಿಕೆಗಳನ್ನು ಪಡೆದ ಜನರಲ್ಲಿ ಈ ಸ್ಥಿತಿಯನ್ನು ಗಮನಿಸಲಾಗಿದೆ. ಉದಾಹರಣೆಗೆ Vaxzevria, Covishield (AstraZeneca) ಮತ್ತು Johnson & Johnson/Janssen COVID-19 ಲಸಿಕೆ ಪಡೆದವರಲ್ಲಿ. ದೇಹದ ರೋಗನಿರೋಧಕ ವ್ಯವಸ್ಥೆಯು ಲಸಿಕೆಗೆ ಪ್ರತಿಕ್ರಿಯಿಸಿ, ರಕ್ತದ ಹೆಪ್ಪುಗಟ್ಟುವಿಕೆಯಲ್ಲಿ ಒಳಗೊಂಡಿರುವ ಪ್ರೋಟೀನ್ ಮೇಲೆ ದಾಳಿ ಮಾಡುವ ಪ್ರತಿಕಾಯಗಳನ್ನು ತಯಾರಿಸುವುದರಿಂದ TTS ಸಂಭವಿಸುತ್ತದೆ.

TTS ಅನ್ನು 2 ಹಂತಗಳಾಗಿ ವರ್ಗೀಕರಿಸಲಾಗಿದೆ.

ಹಂತ 1

  • ಅಪರೂಪದ ರಕ್ತ ಹೆಪ್ಪುಗಟ್ಟುವಿಕೆ, ಮೆದುಳು ಅಥವಾ ಕರುಳಿನಲ್ಲಿ, ಕೆಲವೊಮ್ಮೆ ಕಾಲುಗಳು ಅಥವಾ ಶ್ವಾಸಕೋಶಗಳಲ್ಲಿ.
  • ಕಡಿಮೆ ಪ್ಲೇಟ್ಲೆಟ್ ಎಣಿಕೆ (ಪ್ರತಿ ಮೈಕ್ರೋಲೀಟರ್‌ಗೆ 150,000ಕ್ಕಿಂತ ಕಡಿಮೆ).
  • ಧನಾತ್ಮಕ PF4 ವಿರೋಧಿ ELISA ಪರೀಕ್ಷೆಗಳು ರೋಗನಿರ್ಣಯವನ್ನು ಖಚಿತಪಡಿಸಲು ಸಹಾಯ ಮಾಡುತ್ತದೆ.
  • ಹಂತ 1 ಪ್ರಕರಣಗಳು ಸಾಮಾನ್ಯವಾಗಿ ಹೆಚ್ಚು ತೀವ್ರವಾಗಿರುತ್ತವೆ ಮತ್ತು ಅಪಾಯಕಾರಿಯಾಗಿರುತ್ತವೆ.
  • ಇದು ಯುವ ಜನರಲ್ಲಿ ಹೆಚ್ಚು ಸಾಮಾನ್ಯವಾಗಿದೆ.

ಹಂತ 2

  • ಕಾಲುಗಳು ಅಥವಾ ಶ್ವಾಸಕೋಶಗಳಲ್ಲಿರುವಂತೆ ಸಾಮಾನ್ಯ ರಕ್ತ ಹೆಪ್ಪುಗಟ್ಟುವಿಕೆ.
  • ಕಡಿಮೆ ಪ್ಲೇಟ್ಲೆಟ್ ಎಣಿಕೆ (ಪ್ರತಿ ಮೈಕ್ರೋಲೀಟರ್‌ಗೆ 150,000ಕ್ಕಿಂತ ಕಡಿಮೆ).
  • ರೋಗನಿರ್ಣಯಕ್ಕೆ ಧನಾತ್ಮಕ PF4 ELISA ಪರೀಕ್ಷೆ ಅಗತ್ಯ.

ರೋಗಲಕ್ಷಣಗಳು

TTSನ ಲಕ್ಷಣಗಳು ತೀವ್ರವಾದ ತಲೆನೋವು, ಹೊಟ್ಟೆ ನೋವು, ಕಾಲುಗಳಲ್ಲಿ ಊತ, ಉಸಿರಾಟದ ತೊಂದರೆ, ಚಿಂತನೆಯಲ್ಲಿ ಸಮಸ್ಯೆ, ದೇಹದ ಕಂಪನಗಳು. ಲಸಿಕೆ ಪಡೆದ ನಂತರ ಯಾರಲ್ಲಾದರೂ ಈ ಚಿಹ್ನೆಗಳು ಕಂಡುಬಂದರೆ ಅವರು ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು.

ಇದನ್ನೂ ಓದಿ: Covishield Vaccine: ಕೋವಿಶೀಲ್ಡ್‌ನಿಂದ ಅಡ್ಡ ಪರಿಣಾಮವಿದೆ ಎಂದು ಕೊನೆಗೂ ಒಪ್ಪಿಕೊಂಡ ತಯಾರಿಕೆ ಕಂಪನಿ ಅಸ್ಟ್ರಾಜೆನೆಕಾ

Continue Reading

ದೇಶ

Supreme Court: 14 ವರ್ಷದ ಬಾಲಕಿಯ ಗರ್ಭಪಾತಕ್ಕೆ ಅನುಮತಿ ನೀಡಿ, ಬಳಿಕ ನಿರ್ಧಾರ ವಾಪಸ್‌ ಪಡೆದ ಸುಪ್ರೀಂ

Supreme Court: ಅತ್ಯಾಚಾರ ಸಂತ್ರಸ್ತ ಬಾಲಕಿಯ ಗರ್ಭಪಾತಕ್ಕೆ ನೀಡಲಾಗಿದ್ದ ಆದೇಶವನ್ನು ಸುಪ್ರೀಂಕೋರ್ಟ್‌ ಹಿಂಪಡೆದಿದ್ದು, ಬಾಲಕಿಯ ಪೋಷಕರೂ ಕೂಡ ಕೋರ್ಟ್‌ ತೀರ್ಪಿಗೆ ತಲೆಬಾಗಿದ್ದಾರೆ

VISTARANEWS.COM


on

Supreme Court
Koo

ನವದೆಹಲಿ: ಅತ್ಯಾಚಾರ ಸಂತ್ರಸ್ತ ಬಾಲಕಿಯ ಗರ್ಭಪಾತ(abortion)ಕ್ಕೆ ನೀಡಲಾಗಿದ್ದ ಆದೇಶವನ್ನು ಸುಪ್ರೀಂಕೋರ್ಟ್‌(Supreme Court) ಹಿಂಪಡೆದಿದ್ದು, ಬಾಲಕಿಯ ಪೋಷಕರೂ ಕೂಡ ಕೋರ್ಟ್‌ ತೀರ್ಪಿಗೆ ತಲೆಬಾಗಿದ್ದಾರೆ. ತಮ್ಮ ಮಗಳಿಗೆ ಸುಸೂತ್ರವಾಗಿ ಹೆರಿಗೆಯಾಗುವವರೆಗೆ ಕಾಯುತ್ತೇವೆ ಎಂದು ಹೇಳಿದ್ದಾರೆ. ಗರ್ಭದಲ್ಲಿರುವ ಮಗುವಿನ ಹಿತದೃಷ್ಟಿಯಿಂದ ಈ ತೀರ್ಪು ನೀಡುವುದಾಗಿ ಕೋರ್ಟ್‌ ಹೇಳಿದೆ. ಅತ್ಯಾಚಾರಕ್ಕೆ ಒಳಗಾಗಿ ಸಂತ್ರಸ್ತ ಬಾಲಕಿ(Victim) 30 ವಾರಗಳ ಗರ್ಭಿಣಿ(30 weeks Pregnant) ಯಾಗಿದ್ದು, ಗರ್ಭಪಾತಕ್ಕೆ ಕೋರಿ ಬಾಲಕಿಯ ತಾಯಿ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ್ದ ಸುಪ್ರೀಂ ಕೋರ್ಟ್‌ ಮೊದಲಿಗೆ ಗರ್ಭಪಾತಕ್ಕೆ ಅನಮತಿ ನೀಡಿತ್ತು.

ಏನಿದು ಪ್ರಕರಣ?

ಮಹಾರಾಷ್ಟ್ರ ಮೂಲದ ಈ ಬಾಲಕಿ ನಿಗೂಢವಾಗಿ ಕಾಣೆಯಾಗಿದ್ದಳು. ಈ ಬಗ್ಗೆ ಆಕೆ ತಾಯಿ ನೀಡಿದ ದೂರಿನ ಮೇರೆಗೆ ತನಿಖೆ ಆರಂಭಿಸಿದ್ದ ಪೊಲೀಸರಿಗೆ ಬಾಲಕಿ ರಾಜಸ್ಥಾನದಲ್ಲಿ ಗರ್ಭಿಣಿಯಾಗಿ ಪತ್ತೆಯಾಗಿದ್ದಳು. ನಂತರ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಆದರೆ ಮಹಿಳೆಯ ಗರ್ಭಾವಸ್ಥೆ 24 ವಾರಗಳು ದಾಟಿದ್ದರಿಂದ ಆಕೆಯ ಗರ್ಭಪಾತಕ್ಕೆ ಅವಕಾಶ ನೀಡಲು ಏ.4ರಂದು ಬಾಂಬೆ ಹೈಕೋರ್ಟ್‌ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಮಹಿಳೆಯ ತಾಯಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಸುಪ್ರೀಂ ಕೋರ್ಟ್‌ ಏನು ತೀರ್ಪು ಏನು?

ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿದ್ದ ಕೋರ್ಟ್‌, ವೈದ್ಯಕೀಯ ವರದಿಯ ಪ್ರಕಾರ ಯುವತಿಯ ಇಚ್ಛೆಗೆ ವಿರುದ್ಧ ಗರ್ಭಧಾರಣೆ ಮುಂದುವರೆಸುವುದು ಅಪಾಯಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ವಿಧಿ 142ರ ವಿಶೇಷ ಅಧಿಕಾರವನ್ನು ಬಳಸಿ ಆಕೆಯ ಗರ್ಭಪಾತಕ್ಕೆ ಮುಂಬೈನ ಸಿಯಾನ್‌ನಲ್ಲಿರುವ ಲೋಕಮಾನ್ಯ ತಿಲಕ್‌ ವೈದ್ಯಕೀಯ ಅಸ್ಪತ್ರೆಗೆ ನಿರ್ದೇಶಿಸಿತ್ತು. ಇದೀಗ ಮತ್ತೆ ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಇದ್ದ ನ್ಯಾಯಪೀಠ, ಗರ್ಭದಲ್ಲಿರುವ ಮಗುವಿನ ಹಿತಾಸಕ್ತಿಯನ್ನು ನೋಡಿಕೊಂಡು ಗರ್ಭಪಾತಕ್ಕೆ ನೀಡಲಾಗಿದ್ದ ಅನುಮತಿಯನ್ನು ವಾಪಾಸ್‌ ಪಡೆಯುತ್ತಿರುವುದಾಗಿ ತೀರ್ಪಿನಲ್ಲಿ ತಿಳಿಸಿದೆ. ಈ ವಿಷಯದಲ್ಲಿ ಪೀಠಕ್ಕೆ ಸಹಾಯ ಮಾಡಲು ಎಎಸ್‌ಜಿ ಐಶ್ವರ್ಯಾ ಭಾಟಿ ಕೂಡ ಹಾಜರಿದ್ದರು.  ಇನ್ನು ಈ ಬಗ್ಗೆ ಬಾಲಕಿಯ ತಾಯಿಯ ಜೊತೆ ವೈದ್ಯರು ಮಾತನಾಡಿದ್ದಾರೆ. ಒಟ್ಟಿನಲ್ಲಿ ಈ ವಿಚಾರದಲ್ಲಿ ವೈದ್ಯರ ತೀರ್ಮಾನ ಅಂತಿಮ. ಅವರ ಪ್ರಕಾರ ಯಾವುದು ಹೆಚ್ಚು ಸೂಕ್ತವೋ ಅದನೇ ಮಾಡುವುದು ಉತ್ತಮ. ಈ ಬಗ್ಗೆ ಮುಂದಿನ ತೀರ್ಮಾನ ವೈದ್ಯರಿಗೆ ಬಿಟ್ಟ ವಿಚಾರ ಎಂದಿದ್ದಾರೆ.

ಇದನ್ನೂ ಓದಿ:Vinay Gowda: ಮೂರು ಸಿನಿಮಾಗಳಿಗೆ ಸಹಿ ಮಾಡಿದ ʻಬಿಗ್‌ ಬಾಸ್‌ʼ ಖ್ಯಾತಿಯ ವಿನಯ್‌ ಗೌಡ!

ವೈದ್ಯರು ಹೇಳುವುದೇನು?

ಅತ್ಯಾಚಾರ ಸಂತ್ರಸ್ತ ಅಪ್ರಾಪ್ತ ಬಾಲಕಿ ಗರ್ಭಪಾತ ಮಾಡಿಸಿಕೊಳ್ಳುವಷ್ಟು ಮಾನಸಿಕ ಮತ್ತು ದೈಹಿಕ ಸಮರ್ಥಳಿಲ್ಲ. ಆಕೆಗೆ ಪ್ರಸ್ತುತ ಸನ್ನಿವೇಶದಲ್ಲಿ ಗರ್ಭಪಾತ ಮಾಡುವುದು ಹೆಚ್ಚು ಅಪಾಯಕಾರಿಯಾಗಿದೆ. ಅಲ್ಲದೇ ಆಕೆ ಮಾನಸಿಕವಾಗಿ ಯಾವುದೇ ಸಮಸ್ಯೆ ಹೊಂದಿಲ್ಲದೇ ಇರುವ ಕಾರಣ ಮಗುವಿನ ಜನ್ಮ ಕೊಡಬಹುದು ಎಂದು ವೈದ್ಯರು ಕೋರ್ಟ್‌ಗೆ ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Maoists killed: ಭದ್ರತಾ ಪಡೆಗಳ ಜತೆ ಗುಂಡಿನ ಚಕಮಕಿ, ಏಳು ಮಾವೋವಾದಿಗಳು ಫಿನಿಶ್

Maoists killed: ಹೆಚ್ಚಾಗಿ ನಕ್ಸಲೀಯರ ಓಡಾಟವಿರುವ ನಾರಾಯಣಪುರ-ಕಂಕೇರ್ ಗಡಿಯಲ್ಲಿರುವ ಅಬುಜ್ಮದ್ ಕಾಡಿನಲ್ಲಿ ಈ ಘರ್ಷಣೆ ನಡೆಯಿತು. ಅಲ್ಲಿ ಮೀಸಲು ಪೊಲೀಸ್ ಮಹಾನಿರ್ದೇಶನಾಲಯ (ಡಿಆರ್‌ಜಿ) ಮತ್ತು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಸಿಬ್ಬಂದಿ ಮಂಗಳವಾರ ಬೆಳಿಗ್ಗೆ ಶಂಕಿತ ಮಾವೋವಾದಿಗಳೊಂದಿಗೆ ಗುಂಡಿನ ಚಕಮಕಿ ನಡೆಸಿದರು.

VISTARANEWS.COM


on

maoists killed bastar
Koo

ಹೊಸದಿಲ್ಲಿ:‌ ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ (Security forces) ನಡೆದ ಗುಂಡಿನ ಚಕಮಕಿಯಲ್ಲಿ (encounter) ಕನಿಷ್ಠ ಏಳು ಮಾವೋವಾದಿಗಳು (Maoists killed) ಹತರಾಗಿದ್ದಾರೆ. ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯ ನಂತರ ಇಬ್ಬರು ಮಹಿಳಾ ಕಾರ್ಯಕರ್ತರು ಸೇರಿದಂತೆ ಏಳು ಮಾವೋವಾದಿಗಳ ಮೃತದೇಹಗಳು ಪತ್ತೆಯಾಗಿವೆ.

ಹೆಚ್ಚಾಗಿ ನಕ್ಸಲೀಯರ ಓಡಾಟವಿರುವ ನಾರಾಯಣಪುರ-ಕಂಕೇರ್ ಗಡಿಯಲ್ಲಿರುವ ಅಬುಜ್ಮದ್ ಕಾಡಿನಲ್ಲಿ ಈ ಘರ್ಷಣೆ ನಡೆಯಿತು. ಅಲ್ಲಿ ಮೀಸಲು ಪೊಲೀಸ್ ಮಹಾನಿರ್ದೇಶನಾಲಯ (ಡಿಆರ್‌ಜಿ) ಮತ್ತು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಸಿಬ್ಬಂದಿ ಮಂಗಳವಾರ ಬೆಳಿಗ್ಗೆ ಶಂಕಿತ ಮಾವೋವಾದಿಗಳೊಂದಿಗೆ ಗುಂಡಿನ ಚಕಮಕಿ ನಡೆಸಿದರು.

“ನಾರಾಯಣಪುರ-ಕಂಕೇರ್ ಗಡಿ ಪ್ರದೇಶದ ಅಬುಜ್ಮದ್‌ನಲ್ಲಿ ಇಂದು ಬೆಳಿಗ್ಗೆಯಿಂದ ಡಿಆರ್‌ಜಿ ಮತ್ತು ಎಸ್‌ಟಿಎಫ್ ಮತ್ತು ನಕ್ಸಲೀಯರ ನಡುವೆ ಎನ್‌ಕೌಂಟರ್ ನಡೆಯುತ್ತಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ. “ಎಲ್ಲಾ ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಎನ್‌ಕೌಂಟರ್ ಇನ್ನೂ ನಡೆಯುತ್ತಿದೆ. ಸಾವುನೋವುಗಳ ಅಂತಿಮ ಸಂಖ್ಯಯನ್ನು ಈಗ ಹೇಳಲು ಆಗದು” ಎಂದು ಅಧಿಕಾರಿ ತಿಳಿಸಿದ್ದಾರೆ.

ಇತ್ತೀಚೆಗೆ ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ 29 ಮಾವೋವಾದಿಗಳು ಹತರಾದ ಕೆಲವು ದಿನಗಳ ನಂತರ ಈ ಕಾರ್ಯಾಚರಣೆ ನಡೆದಿದೆ. ಅವರಲ್ಲಿ ಹಿರಿಯ ಮಾವೋವಾದಿ ನಾಯಕರಾದ ಶಂಕರ್ ರಾವ್ ಮತ್ತು ಲಲಿತಾ ಮೆರವಿ ಅವರ ತಲೆಯ ಮೇಲೆ ₹8 ಲಕ್ಷ ಬಹುಮಾನವನ್ನು ಘೋಷಿಸಲಾಗಿತ್ತು. ಇದಾದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ನಕ್ಸಲರನ್ನು ಹತ್ಯೆಗೈದ ಭದ್ರತಾ ಸಿಬ್ಬಂದಿಯನ್ನು ಅಭಿನಂದಿಸಿದ್ದು, ಸದ್ಯದಲ್ಲೇ ಛತ್ತೀಗಢ ಮತ್ತು ಭಾರತ ನಕ್ಸಲ್‌ ಮುಕ್ತವಾಗಲಿದೆ ಎಂದು ಹೇಳಿದ್ದರು.

ಛತ್ತೀಸ್‌ಗಢವು ಹಲವು ದಶಕಗಳಿಂದ ನಕ್ಸಲೈಟ್‌, ಮಾವೋವಾದಿಗಳ ಭೀತಿ ಎದುರಿಸುತ್ತಿದೆ. ವಿಶೇಷವಾಗಿ ಬಸ್ತಾರ್ ಪ್ರದೇಶವು ನಕ್ಸಲ್ ಚಟುವಟಿಕೆಗಳ ಕೇಂದ್ರ ಸ್ಥಾನವಾಗಿದೆ. ಇಲ್ಲಿ ಆಗಾಗ ಹಿಂಸಾಚಾರ ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್‌ ನಡೆಯುತ್ತಲೇ ಇರುತ್ತದೆ. ನಕ್ಸಲರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ.

ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸುವುದು, ಸ್ಥಳೀಯ ಅಭಿವೃದ್ಧಿಗೆ ಆದ್ಯತೆ ನೀಡುವುದು ಮತ್ತು ಶರಣಾಗುವ ನಕ್ಸಲರಿಗೆ ಪುನರ್ವಸತಿ ಕಲ್ಪಿಸುವುದು ಸೇರಿದಂತೆ ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದೆ. ಆದಾಗ್ಯೂ ಈ ಪ್ರಯತ್ನಗಳ ಹೊರತಾಗಿಯೂ ರಾಜ್ಯದಲ್ಲಿ ನಕ್ಸಲ್ ಹಾವಳಿ ಮುಂದುವರಿದಿದೆ.

ಇದನ್ನೂ ಓದಿ: Kanker Encounter: ಎನ್‌ಕೌಂಟರ್‌ನಲ್ಲಿ 29 ಮಾವೋವಾದಿಗಳ ಹತ್ಯೆಗೈದ ಭದ್ರತಾ ಪಡೆ

Continue Reading
Advertisement
America Shootout
ವಿದೇಶ4 mins ago

America Shootout: ಅಮೆರಿಕದಲ್ಲಿ ಮತ್ತೆ ಶೂಟೌಟ್‌; 4 ಪೊಲೀಸರು ಬಲಿ

Hassan Pen Drive Case does not work as a discharge petal says DK Shivakumar
ರಾಜಕೀಯ1 hour ago

Hassan Pen Drive Case: ಪೆನ್‌ ಡ್ರೈವ್‌ ಹೊರ ಬಿಡುವ ಚಿಲ್ಲರೆ ಕೆಲಸ ಮಾಡಲ್ಲ; ಅಸೆಂಬ್ಲಿಗೆ ಬರುವಂತೆ ಎಚ್‌ಡಿಕೆಗೆ ಡಿಕೆಶಿ ಸವಾಲು

Toyota Kirloskar Motor Introduces New G-AT Grade of Toyota Rumion
ದೇಶ1 hour ago

Toyota Kirloskar Motor: ಟೊಯೊಟಾ ರುಮಿಯಾನ್‌ G-AT ಬುಕ್ಕಿಂಗ್‌ ಶುರು! ಏನಿದರ ವಿಶೇಷ?

Rohit Sharma Birthday
ಕ್ರೀಡೆ1 hour ago

Rohit Sharma Birthday: ಬೌಲರ್​ ಆಗಿದ್ದ ರೋಹಿತ್​ ಹಿಟ್​ಮ್ಯಾನ್​ ಆಗಿದ್ದೇಗೆ?; ಕ್ರಿಕೆಟ್​ ಜರ್ನಿಯೇ ರೋಚಕ

covishield vaccine
ದೇಶ1 hour ago

Covishield Vaccine: ಕೋವಿಡ್‌ ಲಸಿಕೆಯಿಂದ ಬರುತ್ತೆ ರಕ್ತ ಹೆಪ್ಪುಗಟ್ಟೋ ಕಾಯಿಲೆ! ವಿವರ ನಿಮಗೆ ತಿಳಿದಿರಲಿ

Supreme Court
ದೇಶ1 hour ago

Supreme Court: 14 ವರ್ಷದ ಬಾಲಕಿಯ ಗರ್ಭಪಾತಕ್ಕೆ ಅನುಮತಿ ನೀಡಿ, ಬಳಿಕ ನಿರ್ಧಾರ ವಾಪಸ್‌ ಪಡೆದ ಸುಪ್ರೀಂ

Ballari City MLA Nara Bharat Reddy Election Campaign for Ballari Lok Sabha Constituency Congress Candidate E Tukaram
ಬಳ್ಳಾರಿ2 hours ago

Lok Sabha Election 2024: ಬಳ್ಳಾರಿಗೆ ಕೈಗಾರಿಕೆಗಳನ್ನು ತಂದ ಶ್ರೇಯಸ್ಸು ಕಾಂಗ್ರೆಸ್ ಪಕ್ಷದ್ದು: ನಾರಾ ಭರತ್ ರೆಡ್ಡಿ

maoists killed bastar
ಪ್ರಮುಖ ಸುದ್ದಿ2 hours ago

Maoists killed: ಭದ್ರತಾ ಪಡೆಗಳ ಜತೆ ಗುಂಡಿನ ಚಕಮಕಿ, ಏಳು ಮಾವೋವಾದಿಗಳು ಫಿನಿಶ್

Labour Day 2024
ಮನಿ ಗೈಡ್2 hours ago

Labour Day 2024: ಕಾರ್ಮಿಕ ದಿನಾಚರಣೆ ಸಂದರ್ಭದಲ್ಲಿ ಉದ್ಯೋಗಿಗಳಿಗೆ ಉಪಯುಕ್ತ ಹಣಕಾಸು ಟಿಪ್ಸ್‌ ಇಲ್ಲಿದೆ

Hassan Pen Drive Case will tell Rakesh Siddaramaiah died history says HD Kumaraswamy
ಕ್ರೈಂ2 hours ago

Hassan Pen Drive Case: ರಾಕೇಶ್‌ ಸಿದ್ದರಾಮಯ್ಯ ಸಾವಿನ ವೇಳೆ ಏನಾಗಿತ್ತು ಎಂದೂ ಹೇಳುತ್ತೇನೆ: ಎಚ್‌.ಡಿ. ಕುಮಾರಸ್ವಾಮಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ10 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌