Mallikarjun Kharge: ಇಂಡಿಯಾ ಒಕ್ಕೂಟದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ - Vistara News

ದೇಶ

Mallikarjun Kharge: ಇಂಡಿಯಾ ಒಕ್ಕೂಟದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

Mallikarjun Kharge: ಇಂಡಿಯಾ ಒಕ್ಕೂಟದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನೇ ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇವರೇ ಪ್ರಧಾನಿ ಅಭ್ಯರ್ಥಿ ಆಗಲಿದ್ದಾರೆ ಎನ್ನಲಾಗುತ್ತಿದೆ.

VISTARANEWS.COM


on

Mallikarjun Kharge
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಶತಾಯ ಗತಾಯ ಬಿಜೆಪಿಯನ್ನು ಸೋಲಿಸುವ ದೃಷ್ಟಿಯಿಂದ ಪ್ರತಿಪಕ್ಷಗಳು ಒಗ್ಗೂಡಿ ರಚಿಸಿರುವ ಇಂಡಿಯಾ ಒಕ್ಕೂಟದ (India Bloc) ಅಧ್ಯಕ್ಷರಾಗಿ ಎಐಸಿಸಿ ಅಧ್ಯಕ್ಷರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ (Mallikarjun Kharge_ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ವರ್ಚ್ಯುವಲ್‌ ಮೂಲಕ ಶನಿವಾರ ಮಧ್ಯಾಹ್ನ (ಜನವರಿ 13) ಇಂಡಿಯಾ ಒಕ್ಕೂಟದ ಸಭೆ ನಡೆದಿದ್ದು, ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂಡಿಯಾ ಒಕ್ಕೂಟದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಂಚಾಲಕ ಹುದ್ದೆ ತಿರಸ್ಕರಿಸಿದ ನಿತೀಶ್‌ ಕುಮಾರ್‌

ಬಿಹಾರ ಮುಖ್ಯಮಂತ್ರಿ, ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್‌ ಅವರು ಇಂಡಿಯಾ ಒಕ್ಕೂಟದ ಸಂಚಾಲಕ ಹುದ್ದೆಯನ್ನು ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ. ನಿತೀಶ್‌ ಕುಮಾರ್‌ ಅವರೇ ಸಂಚಾಲಕರಾಗಬೇಕು ಎಂದು ಸಭೆಯಲ್ಲಿ ಒಕ್ಕೊರಲಿನ ಒತ್ತಾಯ ಕೇಳಿಬಂದಿತು. ಆದರೆ, ಇದನ್ನು ನಯವಾಗಿಯೇ ತಿರಸ್ಕರಿಸಿದ ನಿತೀಶ್‌ ಕುಮಾರ್‌, ಕಾಂಗ್ರೆಸ್‌ ನಾಯಕರೇ ಈ ಜವಾಬ್ದಾರಿ ಹೊತ್ತುಕೊಳ್ಳಲಿ ಎಂಬುದಾಗಿ ಸಭೆಯಲ್ಲಿ ಭಾವಹಿಸಿದ ಜೆಡಿಯು ನಾಯಕ ಸಂಜಯ್‌ ಝಾ ಮಾಹಿತಿ ನೀಡಿದ್ದಾರೆ.

ಮಮತಾ, ಅಖಿಲೇಶ್‌ ಗೈರು

ಲೋಕಸಭೆ ಚುನಾವಣೆಯ ಸೀಟು ಹಂಚಿಕೆ ಹಾಗೂ ಸಂಚಾಲಕರನ್ನು ಆಯ್ಕೆ ಮಾಡುವ ದೃಷ್ಟಿಯಿಂದ ಇಂಡಿಯಾ ಒಕ್ಕೂಟದ ಸಭೆ ಮಹತ್ವ ಪಡೆದಿದ್ದರೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರು ಗೈರಾದರು. ಕಾಂಗ್ರೆಸ್‌ ಜತೆ ಮಮತಾ ಬ್ಯಾನರ್ಜಿ ಅವರು ಸೀಟು ಹಂಚಿಕೆ ವಿಷಯದಲ್ಲಿ ಬಿಕ್ಕಟ್ಟು ಉಂಟಾದ ಕಾರಣ ಅವರು ಗೈರಾದರು ಎಂದು ತಿಳಿದುಬಂದಿದೆ. ಇನ್ನು ಕೆಲ ತಿಂಗಳ ಹಿಂದಷ್ಟೇ ನಡೆದ ಪಂಚ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ಕುರಿತು ಕಾಂಗ್ರೆಸ್‌ ಜತೆ ಸಮಾಜವಾದಿ ಪಕ್ಷವು ಮುನಿಸಿಕೊಂಡಿದೆ. ಇದೇ ಕಾರಣಕ್ಕೆ ಅಖಿಲೇಶ್‌ ಯಾದವ್‌ ಅವರು ಗೈರಾದರು ಎನ್ನಲಾಗಿದೆ.

ಇದನ್ನೂ ಓದಿ: Congress Karnataka: ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ ಖಡಕ್‌ ವಾರ್ನಿಂಗ್

ಪ್ರಧಾನಿ ಅಭ್ಯರ್ಥಿಯ ಘೋಷಣೆ?

ಒಂದೆಡೆ ಬಿಜೆಪಿಯು ಲೋಕಸಭೆ ಚುನಾವಣೆಗೆ ಸಿದ್ಧವಾಗಿದೆ. ರಾಮಮಂದಿರ ವಿಷಯವೇ ಬಿಜೆಪಿಗೆ ಭಾರಿ ಪ್ಲಸ್‌ ಪಾಯಿಂಟ್‌ ಆಗಲಿದೆ. ಇದರ ಬೆನ್ನಲ್ಲೇ, ಇಂಡಿಯಾ ಒಕ್ಕೂಟ ಕೂಡ ಪ್ರಧಾನಿ ಅಭ್ಯರ್ಥಿಯನ್ನು ಘೋಷಣೆ ಮಾಡುತ್ತದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ, ಮಲ್ಲಿಕಾರ್ಜುನ ಖರ್ಗೆ ಅವರನ್ನೇ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆದರೆ, ಚುನಾವಣೆ ಫಲಿತಾಂಶದ ಬಳಿಕವೇ ಪ್ರಧಾನಿಯ ಆಯ್ಕೆ ಎಂಬ ಮಾತುಗಳನ್ನಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Tata Motors: Tata Ace EV 1000 ಬಿಡುಗಡೆ ಮಾಡಿದ ಟಾಟಾ ಮೋಟರ್ಸ್‌; ಏನಿದರ ವಿಶೇಷತೆ? ದರ ಎಷ್ಟು?

Tata Motors: ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್ ಹೊಚ್ಚ ಹೊಸದಾದ ಏಸ್ ಇವಿ 1000 (Ace EV 1000) ಯನ್ನು ಬಿಡುಗಡೆ ಮಾಡಿದ್ದು, ಈ ಮೂಲಕ ತನ್ನ ಇ-ಕಾರ್ಗೊ ಸಾರಿಗೆ ಪರಿಹಾರಗಳನ್ನು ಇನ್ನಷ್ಟು ಬಲಪಡಿಸಿಕೊಂಡಿದೆ. ಇದು ಶೂನ್ಯ ಮಾಲಿನ್ಯ ಹೊರಹೊಮ್ಮುವ ಮಿನಿ ಟ್ರಕ್ ಆಗಿದೆ.

VISTARANEWS.COM


on

New Tata Ace EV 1000 launched by Tata Motors
Koo

ಬೆಂಗಳೂರು: ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್ (Tata Motors) ಹೊಚ್ಚ ಹೊಸದಾದ ಏಸ್ ಇವಿ 1000 (Ace EV 1000) ಬಿಡುಗಡೆ ಮಾಡಿದ್ದು, ಈ ಮೂಲಕ ತನ್ನ ಇ-ಕಾರ್ಗೊ ಸಾರಿಗೆ ಪರಿಹಾರಗಳನ್ನು ಇನ್ನಷ್ಟು ಬಲಪಡಿಸಿಕೊಂಡಿದೆ. ಕಟ್ಟಕಡೆಯ ಮೈಲು ತಲುಪಲು ಪೂರಕವಾಗಿ ಈ ವಾಹನವನ್ನು ಕ್ರಾಂತಿಕಾರಕವಾಗಿ ಅಭಿವೃದ್ಧಿಪಡಿಸಲಾಗಿದೆ.

ಏಸ್ ಇವಿ ವಿಶೇಷತೆ ಏನು?

ಹೊಸದಾದ ಏಸ್ ಇವಿ ವಾಹನವು ಶೂನ್ಯ ಮಾಲಿನ್ಯ ಹೊರಹೊಮ್ಮುವ ಮಿನಿ ಟ್ರಕ್ ಆಗಿದ್ದು, 1 ಟನ್‌ವರೆಗೆ ಪೇಲೋಡ್ ಅನ್ನು ಹೊತ್ತೊಯ್ಯುವ ಸಾಮರ್ಥ್ಯವನ್ನು ಹೊಂದಿದೆ. ಒಂದು ಬಾರಿ ಚಾರ್ಜ್ ಮಾಡಿದರೆ 161 ಕಿಲೋಮೀಟರ್‌ವರೆಗೆ ಕ್ರಮಿಸಬಲ್ಲದು. ತನ್ನ ಗ್ರಾಹಕರಿಂದ ಅತ್ಯಮೂಲ್ಯವಾದ ಸಲಹೆಗಳನ್ನು ಪಡೆದುಕೊಂಡು ಅದಕ್ಕೆ ತಕ್ಕಂತೆ ಈ ಏಸ್ ಇವಿಯನ್ನು ಅಭಿವೃದ್ಧಿಪಡಿಸಲಾಗಿದೆ. ಈ ಹೊಸ ಶ್ರೇಣಿಯ ವಾಹನವು ಎಫ್ಎಂಸಿಜಿ, ಬೇವರೇಜಸ್, ಪೇಂಟ್ಸ್ & ಲ್ಯೂಬ್ರಿಕೆಂಟ್ಸ್, ಎಲ್‌ಪಿಜಿ & ಡೈರಿ ಉತ್ಪನ್ನಗಳ ಸಾಗಣೆ ಅಗತ್ಯತೆಗಳನ್ನು ಪೂರೈಸಲಿದೆ.

ಇದನ್ನೂ ಓದಿ: UGCET 2024: ಯುಜಿಸಿಇಟಿ ಅರ್ಜಿ ತಿದ್ದುಪಡಿಗೆ ಅಂತಿಮ ಅವಕಾಶ ನೀಡಿದ ಕೆಇಎ; ಕೊನೆಯ ದಿನಾಂಕ ಯಾವಾಗ?

ದೇಶಾದ್ಯಂತ 150ಕ್ಕೂ ಹೆಚ್ಚು ಎಲೆಕ್ಟ್ರಿಕ್ ವೆಹಿಕಲ್ ಸಪೋರ್ಟ್ ಸೆಂಟರ್‌ಗಳ ಬೆಂಬಲದೊಂದಿಗೆ ಈ ಏಸ್ ಇವಿ ವಾಹನವು ಅತ್ಯಾಧುನಿಕ, ಸುಧಾರಿತ ಬ್ಯಾಟರಿ ಮ್ಯಾನೇಜ್ಮೆಂಟ್ ಸಿಸ್ಟಂ, ಫ್ಲೀಟ್ ಎಡ್ಜ್ ಟೆಲಿಮ್ಯಾಟಿಕ್ಸ್ ಸಿಸ್ಟಂ ಮತ್ತು ಅತ್ಯುತ್ತಮ ಸಾಮರ್ಥ್ಯವನ್ನು ಹೊಂದಿದ ವಾಹನವಾಗಿದೆ.

ಟಾಟಾ ಸಮೂಹ ಸಂಸ್ಥೆಗಳ ಅಂಗವಾಗಿರುವ Tata UniEVerse ಅಗಾಧವಾದ ಸಾಮರ್ಥ್ಯಗಳನ್ನು ಬಳಸಿಕೊಂಡು ಈ ಏಸ್ ಇವಿಯನ್ನು ಸಿದ್ಧಪಡಿಸಲಾಗಿದೆ. ಗ್ರಾಹಕರಿಗೆ ಸಮಗ್ರ ಇ-ಕಾರ್ಗೊ ಮೊಬಿಲಿಟಿ ಪರಿಹಾರವನ್ನು ನೀಡಲು ದೇಶದ ಪ್ರಮುಖ ಹಣಕಾಸು ಸಂಸ್ಥೆಗಳ ಪಾಲುದಾರಿಕೆಯನ್ನೂ ಸಹ ಹೊಂದಲಾಗಿದೆ. ಇದು ಬಹುಮುಖ ಕಾರ್ಗೊ ಡೆಕ್‌ಗಳೊಂದಿಗೆ ಲಭ್ಯವಿದೆ ಮತ್ತು ದೇಶಾದ್ಯಂತ ಎಲ್ಲಾ ಟಾಟಾ ಮೋಟರ್ಸ್ ವಾಣಿಜ್ಯ ವಾಹನಗಳ ಡೀಲರ್ ಶಿಪ್‌ಗಳಲ್ಲಿ ಮಾರಾಟವಾಗಲಿದೆ. ಇದರ ಬೆಲೆ ಸುಮಾರು 9 ಲಕ್ಷ ರೂ. ಆಗುತ್ತದೆ.

ಇದನ್ನೂ ಓದಿ: Money Guide: ಭಾರತದಲ್ಲಿಯೂ ಆರಂಭವಾಯ್ತು ಬಹು ನಿರೀಕ್ಷಿತ ಗೂಗಲ್ ವ್ಯಾಲೆಟ್‌; ಇದು ಗೂಗಲ್‌ ಪೇಗಿಂತ ಹೇಗೆ ಭಿನ್ನ?

ಟಾಟಾ ಮೋಟರ್ಸ್ ವಾಣಿಜ್ಯ ವಾಹನಗಳ ಎಸ್‌ಸಿವಿ & ಪಿಯು ವಿಭಾಗದ ಉಪಾಧ್ಯಕ್ಷ & ಬ್ಯುಸಿನೆಸ್ ಹೆಡ್ ವಿನಯ್ ಪಾಠಕ್ ಈ ಕುರಿತು ಮಾತನಾಡಿ, ಕಳೆದ ಎರಡು ವರ್ಷಗಳಲ್ಲಿ ನಮ್ಮ ಏಸ್ ಇವಿ ಗ್ರಾಹಕರು ಸರಿಸಾಟಿಯಿಲ್ಲದ ಅನುಭವವನ್ನು ಪಡೆಯುವ ಮೂಲಕ ಅತ್ಯಮೂಲ್ಯ ಪ್ರಯೋಜನಗಳನ್ನು ಪಡೆದುಕೊಂಡಿದ್ದಾರೆ. ಇದೇ ವೇಳೆ ಅವರು ಲಾಭವನ್ನು ಮತ್ತು ಸುಸ್ಥಿರತೆಯನ್ನು ಪಡೆದುಕೊಂಡಿದ್ದಾರೆ. ಕ್ರಾಂತಿಕಾರಕ ಶೂನ್ಯ ಮಾಲಿನ್ಯದ ಕಟ್ಟಕಡೆಯ ಸಾರಿಗೆ ಪರಿಹಾರಗಳ ರಾಯಭಾರಿಗಳಾಗಿ ಈ ಗ್ರಾಹಕರು ಹೊರಹೊಮ್ಮಿದ್ದಾರೆ.

ಇದೀಗ ಏಸ್ ಇವಿ 1000 ಬಿಡುಗಡೆಯೊಂದಿಗೆ ಗ್ರಾಹಕರಿಗೆ ಸುಧಾರಿತ ಅನುಭವವನ್ನು ನೀಡುತ್ತಿದ್ದೇವೆ. ಈ ಮೂಲಕ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುವುದರೊಂದಿಗೆ ಆರ್ಥಿಕತೆಯನ್ನು ಸುಧಾರಣೆ ಮಾಡಲಾಗುತ್ತಿದೆ. ಏಸ್ ಇವಿ 1000 ಉತ್ಕೃಷ್ಟ ಮೌಲ್ಯ ಮತ್ತು ಕಡಿಮೆ ವೆಚ್ಚದ ಮಾಲೀಕತ್ವವನ್ನು ನೀಡುವ ಮೂಲಕ ಹಸಿರು ಭವಿಷ್ಯಕ್ಕೆ ಕೊಡುಗೆ ನೀಡಲಿದೆ ಎಂಬ ವಿಶ್ವಾಸ ನಮ್ಮದಾಗಿದೆ ಎಂದು ತಿಳಿಸಿದ್ದಾರೆ.

ಏಸ್ ಇವಿಯು EVOGEN ಪವರ್ ಟ್ರೇನ್‌ನಿಂದ ಚಾಲಿತವಾಗಿದ್ದು, ಇದು 7 ವರ್ಷಗಳ ಬ್ಯಾಟರಿ ವಾರಂಟಿ ಮತ್ತು 5 ವರ್ಷದ ಸಮಗ್ರ ನಿರ್ವಹಣೆ ಪ್ಯಾಕೇಜ್‌ನೊಂದಿಗೆ ಸರಿಸಾಟಿಯಿಲ್ಲದ ಚಾಲನಾ ಅನುಭವವನ್ನು ನೀಡುತ್ತದೆ. ಇದು ಚಾಲನಾ ಶ್ರೇಣಿಯನ್ನು ಹೆಚ್ಚಿಸಲು ಸುಧಾರಿತ ಬ್ಯಾಟರಿ ಕೂಲಿಂಗ್ ಸಿಸ್ಟಂ ಮತ್ತು ಪುನರುತ್ಪಾದಕ ಬ್ರೇಕಿಂಗ್ ಸಿಸ್ಟಂನೊಂದಿಗೆ ಸುರಕ್ಷಿತ, ಎಲ್ಲಾ ಹವಾಮಾನ ಕಾರ್ಯಾಚರಣೆಗಳನ್ನು ನೀಡುತ್ತದೆ.

ಇದನ್ನೂ ಓದಿ: IPL 2024 : ಆರ್​ಸಿಬಿಯ ಪ್ಲೇಆಫ್​ ಚಾನ್ಸ್​ ಇದೆಯೇ? ಇಲ್ಲಿದೆ ನೋಡಿ ಲೆಕ್ಕಾಚಾರ

ಇದು ಹೆಚ್ಚಿನ ಸಮಯಕ್ಕಾಗಿ ನಿಯಮಿತ ಮತ್ತು ವೇಗದ ಚಾರ್ಜಿಂಗ್ ಸಾಮರ್ಥ್ಯಗಳನ್ನು ಹೊಂದಿದೆ. ಇದು 27kW (36hp) ಮೋಟರ್ ನಿಂದ 130Nm ಪೀಕ್ ಟಾರ್ಕ್ ನೊಂದಿಗೆ ಚಾಲಿತವಾಗಿದೆ. ಬೆಸ್ಟ್-ಇನ್-ಕ್ಲಾಸ್ ಪಿಕಪ್ ಮತ್ತು ಗ್ರೇಡ್ ಸಾಮರ್ಥ್ಯವನ್ನು ಖಚಿತಪಡಿಸಿಕೊಳ್ಳಲು ಸಂಪೂರ್ಣವಾಗಿ ಲೋಡ್ ಮಾಡಲಾದ ಪರಿಸ್ಥಿತಿಗಳಲ್ಲಿ ಸುಲಭವಾಗಿ ಸಾಗಲು ಅನುವು ಮಾಡಿಕೊಡುತ್ತದೆ ಎಂದು ತಿಳಿಸಿದೆ.

Continue Reading

Latest

Brij Bhushan : ಡಬ್ಲ್ಯುಎಫ್​ಐ ಮಾಜಿ ಅಧ್ಯಕ್ಷ ಬ್ರಿಜ್​ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಲು ಕೋರ್ಟ್​ ಆದೇಶ

VISTARANEWS.COM


on

Brij Bhushan
Koo

ನವದೆಹಲಿ: ಕುಸ್ತಿ ಒಕ್ಕೂಟದ ಅಡಿಯಲ್ಲಿ ತರಬೇತಿ ಪಡೆಯುತ್ತಿರುವ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಲು ದೆಹಲಿ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ. ಮಹಿಳೆಯರ ಘನತೆಗೆ ಧಕ್ಕೆ ತಂದ ಅಪರಾಧವನ್ನೂ ಬಿಜೆಪಿ ನಾಯಕನ ಮೇಲೆ ಹೊರಿಸಲಾಗಿದ್ದು ಎಲ್ಲ ಆರೋಪಗಳ ಮೇಲೆ ಕೇಸು ದಾಖಲಿಸುವಂತೆ ಹೇಳಿದೆ.

2023ರಲ್ಲಿ ಬ್ರಿಜ್ ಭೂಷಣ್ ವಿರುದ್ಧ ಕುಸ್ತಿಪಟುಗಳು ಎರಡು ಬಾರಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಪೊಲೀಸರು ಜೂನ್ 15 ರಂದು ಬ್ರಿಜ್ ಭೂಷಣ್ ಶರಣ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354, 354 (ಎ), 354 (ಡಿ) ಅಡಿಯಲ್ಲಿ ಚಾರ್ಚ್​ಶೀಟ್​ ಸಲ್ಲಿಸಲಾಗಿದೆ. ಈ ಗಂಭೀರ ಆರೋಪಗಳ ನಡುವೆ, ಬ್ರಿಜ್ ಭೂಷಣ್ ಅವರಿಗೆ ಕೈಸರ್ಗಂಜ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಟ್ಟಿಲ್ಲ. ಆದರೆ, ಬಿಜೆಪಿ ವರಿಷ್ಠರು ಅವರ ಪುತ್ರ ಕರಣ್ ಭೂಷಣ್ ಸಿಂಗ್ ಅವರ ಉಮೇದುವಾರಿಕೆಗೆ ಅವಕಾಶ ನೀಡಿದೆ.

ಇದನ್ನೂ ಓದಿ: MS Dhoni : ಧೋನಿಯ ಗಾಯದ ಗುಮಾನಿಗೆ ಸ್ಪಷ್ಟತೆ ನೀಡಿದ ಕೋಚ್ ಫ್ಲೆಮಿಂಗ್​

ಆರು ಕುಸ್ತಿಪಟುಗಳ ದೂರುಗಳನ್ನು ಆಧರಿಸಿ ದೆಹಲಿ ಪೊಲೀಸರು ಚಾರ್ಜ್​​ಶೀಟ್​ ಸಲ್ಲಿಸಿದೆ. ಬ್ರಿಜ್ ಭೂಷಣ್ ಅವರನ್ನು “ಲೈಂಗಿಕ ಕಿರುಕುಳ, ಕಿರುಕುಳ ಮತ್ತು ಹಿಂಬಾಲಿಸುವ ಅಪರಾಧಗಳಿಗಾಗಿ ವಿಚಾರಣೆಗೆ ಒಳಪಡಿಸಬೇಕು ಮತ್ತು ಶಿಕ್ಷಿಸಬೇಕು” ಎಂದು ಹೇಳಿದೆ. ಆಗಿನ ಡಬ್ಲ್ಯುಎಫ್ಐ ಅಧ್ಯಕ್ಷರ “ದೈಹಿಕವಾಗಿ ತಪ್ಪು ನಡತೆ” ಯನ್ನು ಸಹ ನೋಡಿದ್ದೇವೆ ಎಂದು ಸಾಕ್ಷಿಗಳು ಉಲ್ಲೇಖಿಸಿವೆ ಎಂದು ಚಾರ್ಜ್​ಶೀಟ್​​ನಲ್ಲಿ ತಿಳಿಸಲಾಗಿದೆ.

ಕುಸ್ತಿಪಟುಗಳ ದೂರಿನ ಆಧಾರದ ಮೇಲೆ ಬ್ರಿಜ್ ಭೂಷಣ್ ವಿರುದ್ಧ ಎರಡು ಎಫ್ಐಆರ್ ದಾಖಲಿಸಲಾಗಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಒಂದು ಪ್ರಕರಣ ದಾಖಲಾಗಿದ್ದು, ಅಪ್ರಾಪ್ತ ವಯಸ್ಸಿನ ಮಹಿಳಾ ಕುಸ್ತಿಪಟುವಿನ ಈ ಪ್ರಕರಣವನ್ನು ರದ್ದು ಮಾಡುವಂತೆ ಕೋರಲಾಗಿದೆ.

ಕುಸ್ತಿಪಟುಗಳು ದಾಖಲಿಸಿದ ಎಫ್ಐಆರ್​ ಪ್ರಕಾರ, ತನಿಖೆ ಪೂರ್ಣಗೊಳಿಸಲಾಗಿದೆ. ಆರೋಪಿ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಐಪಿಸಿಯ ಸೆಕ್ಷನ್ 354, 354 ಎ, 354 ಡಿ ಮತ್ತು ಐಪಿಸಿಯ ಸೆಕ್ಷನ್ 109, 354, 354 ಎ ಮತ್ತು 506 ರ ಅಡಿಯಲ್ಲಿ ಆರೋಪಿ ವಿನೋದ್ ತೋಮರ್ (ಕುಸ್ತಿ ಒಕ್ಕೂಟದ ಅಂದಿನ ಸಹಾಯಕ ಕಾರ್ಯದರ್ಶಿ) ವಿರುದ್ಧ ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ ಚಾರ್ಜ್​ಶೀಟ್​ ಸಲ್ಲಿಸುತ್ತಿದ್ದೇವೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

ದೇಶ

Sanatan Sanstha: ದಾಭೋಲ್ಕರ್‌ ಹತ್ಯೆ ಪ್ರಕರಣದಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು: ಚೇತನ್ ರಾಜಹಂಸ

Sanatan Sanstha: ಡಾ. ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಸನಾತನದ ಸಾಧಕರು ನಿರ್ದೋಷಿಗಳೆಂದು ಸಾಬೀತಾಗಿದೆ. ಸನಾತನ ಸಂಸ್ಥೆಯನ್ನು ಕೇಸರಿ ಭಯೋತ್ಪಾದಕ ಎಂದು ತೋರಿಸಿ ನಿರ್ಬಂಧಿಸುವ ಷಡ್ಯಂತ್ರ ವಿಫಲವಾಗಿದೆ ಎಂದು ಸನಾತನ ಸಂಸ್ಥೆ ವಕ್ತಾರ ಚೇತನ್ ರಾಜಹಂಸ ತಿಳಿಸಿದ್ದಾರೆ.

VISTARANEWS.COM


on

Sanatan Sanstha
ಪುಣೆಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಸನಾತನ ಸಂಸ್ಥೆ ವಕ್ತಾರ ಚೇತನ್ ರಾಜಹಂಸ ಮಾತನಾಡಿದರು.
Koo

ಪುಣೆ: ವಿಚಾರವಾದಿ ಡಾ. ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯ ನೀಡಿದ ತೀರ್ಪನ್ನು ನಾವು ಗೌರವಿಸುತ್ತೇವೆ. ಈ ತೀರ್ಪಿನ ಪ್ರಕಾರ ಸನಾತನದ ಸಾಧಕರು ನಿರ್ದೋಷಿಗಳೆಂದು ಸಾಬೀತಾಗಿದೆ. ಈ ಮೂಲಕ ಸನಾತನ ಸಂಸ್ಥೆಯನ್ನು ಹಿಂದು ಭಯೋತ್ಪಾದಕ ಎಂದು ಸಾಬೀತುಪಡಿಸುವ ‘ಅರ್ಬನ್ ನಕ್ಸಲೀಯರ’ ಸಂಚು ವಿಫಲವಾಗಿದೆ ಎಂದು ಸನಾತನ ಸಂಸ್ಥೆ (Sanatan Sanstha) ವಕ್ತಾರ ಚೇತನ್ ರಾಜಹಂಸ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಪುಣೆ ಸಿ.ಬಿ.ಐ. ವಿಶೇಷ ನ್ಯಾಯಾಲಯವು ಸನಾತನ ಸಂಸ್ಥೆಯ ಸಾಧಕ ವಿಕ್ರಮ್ ಭಾವೆ ಮತ್ತು ಹಿಂದು ಜನಜಾಗೃತಿ ಸಮಿತಿಗೆ ಸಂಬಂಧಿಸಿದ ಡಾ. ವೀರೇಂದ್ರ ಸಿಂಹ ತಾವಡೆ ಇವರನ್ನು ನಿರ್ದೋಷಿಗಳೆಂದು ಮುಕ್ತಗೊಳಿಸಿದೆ, ಜತೆಗೆ ಹಿಂದು ವಿಧಿಜ್ಞ ಪರಿಷತ್ತಿನ ನ್ಯಾಯವಾದಿ ಸಂಜೀವ ಪುನಾಳೇಕರ್ ಅವರನ್ನು ಸಹ ನಿರ್ದೋಷಿಯೆಂದು ಖುಲಾಸೆಗೊಳಿಸಿದೆ. ಈ ಅಪರಾಧದಲ್ಲಿ ಸೇರಿಸಿದ್ದ `ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದ ಯುಎಪಿಎ ಕಾಯ್ದೆಯನ್ನು’ ಸಹ ರದ್ದುಗೊಳಿಸಲಾಗಿದೆ. ಈ ಕಾಯ್ದೆಯನ್ನು ಹಾಕಿ ಸನಾತನ ಸಂಸ್ಥೆಯನ್ನು ಕೇಸರಿ ಭಯೋತ್ಪಾದಕ ಎಂದು ತೋರಿಸಿ ನಿರ್ಬಂಧಿಸುವ ಷಡ್ಯಂತ್ರ ರಚಿಸಲಾಗಿತ್ತು, ಈ ಷಡ್ಯಂತ್ರವೂ ಈಗ ವಿಫಲವಾಗಿದೆ ಎಂದು ಹೇಳಿದ್ದಾರೆ.

ಈ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಹಿಂದುತ್ವವಾದಿಗಳಾದ ಸಚಿನ್ ಅಂದುರೆ ಮತ್ತು ಶರದ ಕಳಸ್ಕರ್ ಅವರು ಸನಾತನ ಸಂಸ್ಥೆ ಜತೆ ನೇರವಾಗಿ ಸಂಬಂಧ ಹೊಂದಿಲ್ಲದಿದ್ದರೂ ಅಥವಾ ಸನಾತನ ಸಂಸ್ಥೆಯ ಪದಾಧಿಕಾರಿಗಳಲ್ಲದಿದ್ದರೂ, ಅವರನ್ನೂ ಈ ಪ್ರಕರಣದಲ್ಲಿ ಸಿಲುಕಿಸಿರುವ ಸಾಧ್ಯತೆಯದೆ ಎಂದು ನಮಗೆ ಅನಿಸುತ್ತಿದೆ. ಹಾಗಾಗಿ ಈ ಪ್ರಕರಣದ ವಕೀಲರು ಹೇಗೆ ಇಂದು ಇತರರನ್ನು ನಿರಪರಾಧಿಯೆಂದು ಮುಕ್ತಗೊಳಿಸಿದರೋ ಅದೇ ರೀತಿ ಈ ಪ್ರಕರಣವನ್ನು ಉಚ್ಚ ನ್ಯಾಯಾಲಯಕ್ಕೆ ಕೊಂಡೊಯ್ದು ಅವರನ್ನು ನಿರಪರಾಧಿಯೆಂದು ಮುಕ್ತಗೊಳಿಸಲು ಹೋರಾಟ ನಡೆಸುವುದಾಗಿ ಘೋಷಿಸಿದರು.

ಮುಂಬೈ ಉಚ್ಚ ನ್ಯಾಯಾಲಯದಲ್ಲಿ ಸಚಿನ್ ಅಂದುರೆ ಮತ್ತು ಶರದ ಕಳಸ್ಕರ್ ಅವರನ್ನು ನಿರಪರಾಧಿಯೆಂದು ಮುಕ್ತಗೊಳಿಸಲಾಗುವುದು ಎಂಬ ವಿಶ್ವಾಸ ನಮಗಿದೆ. ಈ ಪ್ರಕರಣದ ದೋಷಾರೋಪ ಪತ್ರದಲ್ಲಿ ತನಿಖಾ ಸಂಸ್ಥೆಗಳು ವಿಭಿನ್ನ ಮತ್ತು ನಿರಂತರವಾಗಿ ಬದಲಾಗುತ್ತಿರುವ ಪಾತ್ರಗಳನ್ನು ಮಂಡಿಸಿದೆ. ಅಷ್ಟೇ ಅಲ್ಲ ಆರೋಪಿಗಳ ಪತ್ತೆಗೆ ‘ಪ್ಲಾಂಚೆಟ್’ ಮಾಧ್ಯಮದಿಂದ ಸನಾತನ ಸಂಸ್ಥೆಯು ದೋಷಿಯೆಂದು ಹೇಳಿಸಿಕೊಳ್ಳಲಾಗಿತ್ತು. ಅನಂತರ ಸನಾತನ ಸಂಸ್ಥೆಯ ವಿನಯ್ ಪವಾರ್ ಮತ್ತು ಸಾರಂಗ್ ಅಕೋಲ್ಕರ್ ಅವರನ್ನು ಮೊದಲಿಗೆ ಹಂತಕರು ಎಂದು ಗುರುತಿಸಲಾಯಿತು. ಅದಕ್ಕೂ ಮೊದಲು ಈ ಹಿಂದೆ ಪಿಸ್ತೂಲ್ ವಶಪಡಿಸಿಕೊಂಡ ಮನೀಷ ನಾಗೋರಿ ಮತ್ತು ವಿಕಾಸ ಖಂಡೇಲ್ವಾಲ್ ಅವರಿಗೂ ಕ್ಲೀನ್ ಚಿಟ್ ನೀಡಲಾಗಿತ್ತು. ಅನಂತರ ಸಚಿನ್ ಅಂದುರೆ ಮತ್ತು ಶರದ ಕಳಸ್ಕರ್ ಕೊಲೆಯಲ್ಲಿ ಭಾಗಿಯಾಗಿದ್ದರು ಎಂದು ಮಂಡಿಸಿತು ಎಂದು ಮಾಹಿತಿ ನೀಡಿದ್ದಾರೆ.

ಪುಣೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಎಡದಿಂದ ಹಿಂದು ಜನಜಾಗೃತಿ ಸಮಿತಿಯ ಸುನೀಲ್ ಘನವಟ, ಸನಾತನ ಸಂಸ್ಥೆಯ ವಕ್ತಾರರಾದ ಅಭಯ ವರ್ತಕ ಮತ್ತು ಸನಾತನ ಸಂಸ್ಥೆಯ ಚೈತನ್ಯ ತಾಗಡೆ ಇದ್ದರು.

ಈ ಪ್ರಕರಣದಲ್ಲಿ ಸಾಕ್ಷಿಗಳ ಪಾತ್ರವೇ ಸಂದೇಹಾಸ್ಪದವಾಗಿತ್ತು. ಅವರು ಈ ಹಿಂದೆ ವಿನಯ ಪವಾರ್ ಮತ್ತು ಅಕೋಲ್ಕರ್ ಇವರನ್ನೂ ಹಂತಕರು ಎಂದು ಗುರುತಿಸಿದ್ದರು. ಅಂಧಶ್ರದ್ಧಾ ನಿರ್ಮೂಲನಾ ಸಮಿತಿಯ (ಅಂನಿಸ) ಕಾರ್ಯಕರ್ತರು ತಮ್ಮನ್ನು ಭೇಟಿಯಾಗಲು ಬಂದಿದ್ದು, ಅವರ ಜತೆ ಊಟ ಮಾಡುತ್ತಿದ್ದೆ ಎಂದೂ ಅವರು ನ್ಯಾಯಾಲಯಕ್ಕೆ ತಿಳಿಸಿದ್ದರು. ಸಾಕ್ಷಿಗಳ ಈ ಕೃತಿಯಿಂದ ಅವರ ಮೇಲೆ ಅಂನಿ.ಸ ಒತ್ತಡವಿತ್ತೇ ಎಂಬ ಪ್ರಶ್ನೆ ಮೂಡಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Reservation Row: ಎಸ್‌ಸಿ / ಎಸ್‌ಟಿ ಮೀಸಲಾತಿಗೆ ನೆಹರೂ ವಿರೋಧ ವ್ಯಕ್ತಪಡಿಸಿದ್ದರು: ಸಾಕ್ಷಿ ಸಮೇತ ಬಹಿರಂಗಪಡಿಸಿದ ಬಿಜೆಪಿ

ಈ ಪ್ರಕರಣದಲ್ಲಿ ಕೇವಲ ಅಂ.ನಿ.ಸ ದವರಿಗೆ ಸಾಕ್ಷಿದಾರರೊಂದಿಗೆ ಸಂಬಂಧವಿತ್ತೆಂಬುದಷ್ಟೇ ಅಲ್ಲದೇ ಡಾ. ದಾಭೋಲ್ಕರ್ ಕುಟುಂಬ ತನಿಖಾ ಸಂಸ್ಥೆಗಳ ಮೇಲೆ ಒತ್ತಡ ಹೇರಿತ್ತು ಎಂಬುದು ಸಿದ್ಧವಾಯಿತು. ಅದರ ಪರಿಣಾಮವಾಗಿ ಸನಾತನ ಸಂಸ್ಥೆಯ ಮೇಲೆ ಪೂರ್ವಗ್ರಹಪೀಡಿತವಾಗಿ ತನಿಖೆ ನಡೆಯಿತು. ಕಳೆದ 11 ವರ್ಷಗಳಲ್ಲಿ ಸನಾತನದ 1600 ಸಾಧಕರ ವಿಚಾರಣೆ ನಡೆಸಲಾಗಿದೆ. ಸನಾತನದ ಆಶ್ರಮಗಳ ಮೇಲೆ ದಾಳಿ ಮಾಡಲಾಯಿತು. ಈ ಪ್ರಕರಣದ ಮಾಸ್ಟರ್ ಮೈಂಡ್ ಪತ್ತೆ ಹಚ್ಚುವ ಹೆಸರಿನಲ್ಲಿ ಖಟ್ಲೆಯನ್ನು ತಡೆಹಿಡಿಯಲಾಯಿತು. ಸಿಬಿಐ ತನ್ನ ದೋಷಾರೋಪಪತ್ರದಲ್ಲಿ `ಸನಾತನ ಸಂಸ್ಥೆಯ ಎಲ್ಲ ಪದಾಧಿಕಾರಿಗಳನ್ನು ವಿಚಾರಣೆಗೊಳಪಡಿಸಿದ್ದು, ಯಾರೂ ತಪ್ಪಿತಸ್ಥರಲ್ಲ’ ಎಂದು ನಮೂದಿಸಿದೆ. ಇದು 11 ವರ್ಷಗಳ ನಂತರ ಸನಾತನ ಸಂಸ್ಥೆಗೆ ತಡವಾಗಿ ದೊರಕಿದ ನ್ಯಾಯವಾಗಿದೆ ಎಂದು ಹೇಳಿದ್ದಾರೆ.

Continue Reading

ದೇಶ

ಪಿತ್ರೋಡಾ ‘ಸಂಪತ್ತು ಹಂಚಿಕೆ’ ಹೇಳಿಕೆ, ಮಣಿಶಂಕರ್‌ ಅಯ್ಯರ್‌ ಪಾಕ್‌ ಪ್ರೇಮ; ಕಾಂಗ್ರೆಸ್‌ಗೆ ಈಗ ತೀವ್ರ ಫಜೀತಿ!

ಸಂಪತ್ತಿನ ಹಂಚಿಕೆ ಕುರಿತು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ, ಪಾಕಿಸ್ತಾನದ ಕುರಿತು ಪಕ್ಷದ ನಾಯಕ ಮಣಿಶಂಕರ್‌ ಅಯ್ಯರ್‌ ಅವರು ನೀಡಿರುವ ಹೇಳಿಕೆಗಳು ಕಾಂಗ್ರೆಸ್‌ಗೆ ಭಾರಿ ಮುಜುಗರ ತಂದಿವೆ. ಇಬ್ಬರೂ ನಾಯಕರ ವಿರುದ್ಧ ಸಾರ್ವಜನಿಕವಾಗಿಯೂ ಆಕ್ರೋಶ ವ್ಯಕ್ತವಾಗುತ್ತದೆ. ಹಾಗಾಗಿ, ಕಾಂಗ್ರೆಸ್‌ ಪಕ್ಷವು ಇಬ್ಬರ ಹೇಳಿಕೆಗಳಿಂದಲೂ ಅಂತರ ಕಾಪಾಡಿಕೊಳ್ಳುವ ಮೂಲಕ ಮುಜುಗರದಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದೆ.

VISTARANEWS.COM


on

Sam Pitroda
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹಿಡಿದು, ಸ್ಥಳೀಯ ಪಕ್ಷದ ನಾಯಕನವರೆಗೆ ಭಾಷಣಗಳು, ಹೇಳಿಕೆಗಳು, ಆರೋಪ, ಟೀಕೆ, ವ್ಯಂಗ್ಯಗಳು ಮೊನಚಾಗಿವೆ. ಆದರೆ, ಕಾಂಗ್ರೆಸ್‌ನ ಕೆಲ ನಾಯಕರು ನೀಡುತ್ತಿರುವ ಹೇಳಿಕೆಗಳು ಆ ಪಕ್ಷಕ್ಕೇ ಮುಳುವಾಗುತ್ತಿವೆ. ಸಂಪತ್ತಿನ ಹಂಚಿಕೆ ಕುರಿತು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ, ಪಾಕಿಸ್ತಾನದ ಕುರಿತು ಪಕ್ಷದ ನಾಯಕ ಮಣಿಶಂಕರ್‌ ಅಯ್ಯರ್‌ (Mani Shankar Aiyar) ಅವರು ನೀಡಿರುವ ಹೇಳಿಕೆಗಳು ಕಾಂಗ್ರೆಸ್‌ಗೆ ಭಾರಿ ಮುಜುಗರ ತಂದಿವೆ. ಇದೇ ಕಾರಣಕ್ಕಾಗಿ, ಇಬ್ಬರೂ ನಾಯಕರ ಹೇಳಿಕೆಗಳಿಂದ ಕಾಂಗ್ರೆಸ್‌ ಅಂತರ ಕಾಪಾಡಿಕೊಂಡಿದೆ.

ಸ್ಯಾಮ್‌ ಪಿತ್ರೋಡಾ ಅವಾಂತರಗಳು

“ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ದೇಶದ ಜನರ ಸಂಪತ್ತನ್ನು ಕಸಿದು, ಹಂಚಿಕೆ ಮಾಡುತ್ತದೆ. ಮಹಿಳೆಯರ ಮಂಗಳಸೂತ್ರಕ್ಕೆ ಕೈ ಹಾಕುತ್ತದೆ” ಎಂಬುದಾಗಿ ನರೇಂದ್ರ ಮೋದಿ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸುವ ಭರದಲ್ಲಿ, ಸ್ಯಾಮ್‌ ಪಿತ್ರೋಡಾ ಅವರು ಅಮೆರಿಕದ ಉದಾಹರಣೆ ಕೊಟ್ಟರು. “ಅಮೆರಿಕದಲ್ಲಿ ಪಿತ್ರಾರ್ಜಿತ ತೆರಿಗೆ ಇದೆ. ಅಪ್ಪನ ಆಸ್ತಿಯಲ್ಲಿ ಶೇ.55ರಷ್ಟು ಆಸ್ತಿಯನ್ನು ಸರ್ಕಾರಕ್ಕೆ ಕೊಡಬೇಕು” ಎಂಬುದಾಗಿ ಹೇಳಿದ್ದು ವಿವಾದಕ್ಕೆ ಕಾರಣವಾಯಿತು.

“ಅಮೆರಿಕದಲ್ಲಿ ಪಿತ್ರಾರ್ಜಿತ ತೆರಿಗೆ ಇದೆ. ಒಬ್ಬನು 100 ಮಿಲಿಯನ್ USD ಮೌಲ್ಯದ ಸಂಪತ್ತನ್ನು ಹೊಂದಿದ್ದರೆ ಅವನು ಸತ್ತಾಗ ಕೇವಲ 45 ಪ್ರತಿಶತವನ್ನು ತನ್ನ ಮಕ್ಕಳಿಗೆ ವರ್ಗಾಯಿಸಬಹುದು. 55 ಪ್ರತಿಶತವನ್ನು ಸರ್ಕಾರವು ಹೊಂದುತ್ತದೆ. ಅದು ಆಸಕ್ತಿದಾಯಕ ಕಾನೂನು. ನಿಮ್ಮ ಪೀಳಿಗೆಯಲ್ಲಿ ನೀವು ಸಂಪತ್ತನ್ನು ಸಂಪಾದಿಸಿದ್ದೀರಿ. ಮತ್ತು ನೀವು ಈಗ ಹೋಗುವಾಗ, ನಿಮ್ಮ ಸಂಪತ್ತನ್ನು ಸಾರ್ವಜನಿಕರಿಗೆ ಬಿಡಬೇಕು. ಎಲ್ಲವನ್ನೂ ಅಲ್ಲ, ಅದರಲ್ಲಿ ಅರ್ಧದಷ್ಟು, ಇದು ನ್ಯಾಯೋಚಿತವಾಗಿದೆ” ಎಂದು ಪಿತ್ರೋಡಾ ಹೇಳಿದ್ದರು. ಇನ್ನು, ಅವರು ದಕ್ಷಿಣ ಭಾರತೀಯರು ಆಫ್ರಿಕಾದವರಂತೆ ಇದ್ದಾರೆ ಎಂದು ವರ್ಣ ಭೇದದ ಹೇಳಿಕೆಗಳಿಂದಾಗಿ ಅವರು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು.

ಮಣಿಶಂಕರ್‌ ಅಯ್ಯರ್‌ ಪಾಕ್‌ ಪ್ರೇಮ

ಸದಾ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿರುವ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌ ಅವರೀಗ ಪಾಕಿಸ್ತಾನದ ಪರವಾಗಿ ಮಾತನಾಡಿದ್ದಾರೆ. ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದು ಅವರು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕಾಗಿ, ಮಣಿಶಂಕರ್‌ ಅಯ್ಯರ್‌ ಅವರ ಹೇಳಿಕೆಯಿಂದ ಕಾಂಗ್ರೆಸ್‌ ಅಂತರ ಕಾಪಾಡಿಕೊಂಡಿದೆ.

“ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ಭಾರತ ಕೇವಲ ವಿಶ್ವಗುರು ಎಂದು ಹೇಳುತ್ತಾ ಇದ್ದರೆ ಸಾಲದು ನೆರೆಯ ರಾಷ್ಟ್ರ ಪಾಕಿಸ್ತಾನದ ಜತೆ ಮೊದಲು ಶಾಂತಿಯುತ ಮಾತುಕತೆ ನಡೆಸಬೇಕು. ಯಾವಾಗಲೂ ಕೈಯಲ್ಲಿ ಬಂದೂಕು ಹಿಡಿದು ಸುತ್ತಾಡಿದರೆ ಯಾವ ಕೆಲಸವೂ ಆಗಲ್ಲ, ಯಾವ ಪರಿಹಾರವೂ ಸಿಗಲ್ಲ. ಅದು ಕೇವಲ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಅಷ್ಟೇ. ಪಾಕಿಸ್ತಾನ ಕೂಡ ಸಾರ್ವಭೌಮ ರಾಷ್ಟ್ರ ಮತ್ತು ಅದಕ್ಕೆ ಅದರದ್ದೇ ಆದ ಗೌರವ ಇದೆ. ಒಂದು ವೇಳೆ ಅಲ್ಲಿ ತಲೆಕೆಟ್ಟ ಮನುಷ್ಯ ಅಧಿಕಾರಕ್ಕೆ ಬಂದರೆ, ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ” ಎಂದು ಅಯ್ಯರ್‌ ಹೇಳಿದ್ದಾರೆ.

ಇದನ್ನೂ ಓದಿ: Sam Pitroda: ಭಾರತೀಯರ ಬಣ್ಣದ ಕುರಿತು ಮಾತಾಡಿದ ಸ್ಯಾಮ್‌ ಪಿತ್ರೋಡಾ ತಲೆದಂಡ; ಕಾಂಗ್ರೆಸ್‌ ಸ್ಥಾನಕ್ಕೆ ರಾಜೀನಾಮೆ!

Continue Reading
Advertisement
Xiaomi Smart Phone
ಗ್ಯಾಜೆಟ್ಸ್4 mins ago

Xiaomi Smart Phone: ವರ್ಷಾಂತ್ಯಕ್ಕೆ ಬರಲಿದೆ ಶಿಯೊಮಿಯ ಫೋಲ್ಡಿಂಗ್​ ಫೋನ್​ಗಳು; ಇಲ್ಲಿದೆ ಸಂಪೂರ್ಣ ವಿವರ

Rahul Dravid
Latest13 mins ago

Rahul Dravid : ವಿಶ್ವ ಕಪ್​ ಬಳಿಕ ದ್ರಾವಿಡ್​ ಭಾರತದ ಕೋಚ್ ಅಗಿರುವುದಿಲ್ಲ; ಮುಂದೆ ಯಾರು?

karnataka Weather Forecast
ಮಳೆ14 mins ago

Karnataka Weather : ಬಿರುಗಾಳಿ ಸಹಿತ ಭಾರಿ ಮಳೆ; ಸಿಡಿಲು ಬಡಿದು ಮಹಿಳೆ ಸೇರಿ ಶ್ವಾನ ಸಾವು‌, ಮತ್ತೊಬ್ಬ ಗಂಭೀರ

Mango Facepack
ಫ್ಯಾಷನ್16 mins ago

Mango Facepack: ಆಕರ್ಷಕ ತ್ವಚೆಗಾಗಿ ಸೀಸನ್‌ ಮ್ಯಾಂಗೋ ಫೇಸ್‌ಪ್ಯಾಕ್‌

Manisha Koirala
ಸಿನಿಮಾ17 mins ago

Manisha Koirala: ಕ್ಯಾನ್ಸರ್‌ ವಿರುದ್ಧ ಹೋರಾಡಿದ್ದು ಹೇಗೆ? ಅನುಭವ ಹಂಚಿಕೊಂಡ ಮನೀಶಾ ಕೊಯಿರಾಲ

New Tata Ace EV 1000 launched by Tata Motors
ವಾಣಿಜ್ಯ24 mins ago

Tata Motors: Tata Ace EV 1000 ಬಿಡುಗಡೆ ಮಾಡಿದ ಟಾಟಾ ಮೋಟರ್ಸ್‌; ಏನಿದರ ವಿಶೇಷತೆ? ದರ ಎಷ್ಟು?

Brij Bhushan
Latest30 mins ago

Brij Bhushan : ಡಬ್ಲ್ಯುಎಫ್​ಐ ಮಾಜಿ ಅಧ್ಯಕ್ಷ ಬ್ರಿಜ್​ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಲು ಕೋರ್ಟ್​ ಆದೇಶ

Dates Benefits
ಆರೋಗ್ಯ31 mins ago

Dates Benefits: ಲೈಂಗಿಕ ಶಕ್ತಿ ಹೆಚ್ಚಿಸಿಕೊಳ್ಳಬೇಕೆ? ದಿನಕ್ಕೊಂದು ಖರ್ಜೂರ ತಿಂದರೆ ಸಾಕು!

Sanatan Sanstha
ದೇಶ41 mins ago

Sanatan Sanstha: ದಾಭೋಲ್ಕರ್‌ ಹತ್ಯೆ ಪ್ರಕರಣದಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು: ಚೇತನ್ ರಾಜಹಂಸ

Prajwal Revanna Case Revanna bail plea to be heard on Monday What is SIT argument
ಕ್ರೈಂ49 mins ago

Prajwal Revanna Case: ಸೋಮವಾರ ರೇವಣ್ಣ ಜಾಮೀನು ಅರ್ಜಿ ವಿಚಾರಣೆ: SIT ವಾದ ಏನು? ವಕೀಲ ನಾಗೇಶ್‌ ಕೌಂಟರ್‌ ಏನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ5 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ6 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ7 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ14 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ21 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ22 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ23 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌