ಎಂಪಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಮಲ್ ನಾಥ್‌ಗೆ ಸೂಚನೆ! - Vistara News

ದೇಶ

ಎಂಪಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಮಲ್ ನಾಥ್‌ಗೆ ಸೂಚನೆ!

Congress Party: ಐದು ರಾಜ್ಯಗಳ ಪೈಕಿ ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವು ಸೋತು ಭಾರೀ ನಿರಾಸೆಯನ್ನು ಅನುಭವಿಸಿದೆ.

VISTARANEWS.COM


on

Kamal Nath
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಗೆದ್ದೇ ಗೆಲ್ಲುತ್ತೇವೆ ಎಂಬ ಭಾರೀ ಆತ್ಮವಿಶ್ವಾಸವನ್ನು ಹೊಂದಿದ್ದ ಮಧ್ಯ ಪ್ರದೇಶದಲ್ಲಿ (Madhya Pradesh) ಕಾಂಗ್ರೆಸ್ ಪಕ್ಷಕ್ಕೆ ಭಾರತೀಯ ಜನತಾ ಪಾರ್ಟಿಯು (BJP Party) ಭಾರೀ ಹೊಡೆತವನ್ನು ನೀಡಿದೆ. ಅರ್ಥಾತ್, ಆಡಳಿತ ವಿರೋಧ ಅಲೆಯ ಮಧ್ಯೆಯೂ ಮಧ್ಯ ಪ್ರದೇಶದಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳುವುದರಲ್ಲಿ ಯಶಸ್ವಿಯಾಗಿದೆ. ಸೋಲು ಅನುಭವಿಸಿರುವ ಕಾಂಗ್ರೆಸ್ (Congress Party), ಮಧ್ಯಪ್ರದೇಶ ಕಾಂಗ್ರೆಸ್ ಘಟಕಕ್ಕೆ ರಾಜೀನಾಮೆ ನೀಡುವಂತೆ ಕಮಲ್ ನಾಥ್ (Kamal Nath) ಅವರಿಗೆ ಸೂಚಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಮಲ್ ನಾಥ್ ಅವರು ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿಯಾಗಿದ್ದರು.

ಹಲವು ಎಕ್ಸಿಟ್ ಪೋಲ್ಸ್‌ ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ತುರುಸಿನ ಸ್ಪರ್ಧೆಯನ್ನು ಊಹಿಸಿದ್ದವು. ಕೆಲವು ಸಮೀಕ್ಷೆಗಳು ಕಾಂಗ್ರೆಸ್‌ ಪಕ್ಷಕ್ಕೆ ಅಧಿಕಾರ ನೀಡಿದ್ದವು. ಆದರೆ, ಭಾನುವಾರ ಪ್ರಕಟವಾದ ಚುನಾವಣಾ ಫಲಿತಾಂಶವು ಮಾತ್ರ ಉಲ್ಟಾ ಆಗಿತ್ತು. ಭಾರತೀಯ ಜನತಾ ಪಾರ್ಟಿಯು ಕಳೆದ ಬಾರಿಗಿಂತಲೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯ ಸಾಧಿಸಿತ್ತು. 230 ಕ್ಷೇತ್ರಗಳಿರುವ ಮಧ್ಯ ಪ್ರದೇಶದಲ್ಲಿ ಬಿಜೆಪಿ 163 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್ ಪಾಲಿಗೆ ಕೇವಲ 66 ಕ್ಷೇತ್ರಗಳು ದೊರೆತವು. ಈ ಹಿನ್ನೆಲೆಯಲ್ಲಿ ಸೋಲಿನ ಹೊಣೆಯನ್ನು ಹೊತ್ತು, ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಮಲ್ ನಾಥ್ ಅವರಿಗೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.

ಬಿಜೆಪಿ ಗೆದ್ದಿದ್ದು ಹೇಗೆ?

ಪ್ರಧಾನಿ ನರೇಂದ್ರ ಮೋದಿ ಅವರ ಅಲೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ಮಧ್ಯಪ್ರದೇಶ ಬಿಜೆಪಿ ಯಶಸ್ವಿಯಾಗಿದೆ. “ಮೋದಿ ಮನದಲ್ಲಿ ಮಧ್ಯಪ್ರದೇಶ, ಮಧ್ಯಪ್ರದೇಶದ ಮನದಲ್ಲಿ ಮೋದಿ” ಎಂದು ಬಿಜೆಪಿ ಪ್ರಚಾರ ಮಾಡಿತು. ಇನ್ನು ನರೇಂದ್ರ ಮೋದಿ ಅವರು 14 ರ‍್ಯಾಲಿಗಳನ್ನು ನಡೆಸಿ, ಜನರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾದರು.

ಮಧ್ಯಪ್ರದೇಶದಲ್ಲಿ ಬಡ ಹೆಣ್ಣುಮಕ್ಕಳಿಗೆ ಮಾಸಿಕ 1 ಸಾವಿರ ರೂ. ಸಹಾಯ ಧನ ನೀಡುವುದೇ ಲಾಡ್ಲಿ ಬೆಹನಾ ಯೋಜನೆಯಾಗಿದೆ. ಕಾಂಗ್ರೆಸ್‌ ಉಚಿತ ಕೊಡುಗೆಗಳ ಘೋಷಣೆಯನ್ನು ಮೊದಲೇ ಅರಿತಿದ್ದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು 2023ರ ಮಾರ್ಚ್‌ನಲ್ಲಿಯೇ ಲಾಡ್ಲಿ ಬೆಹನಾ ಯೋಜನೆಯನ್ನು ಜಾರಿಗೆ ತಂದರು. ಯೋಜನೆ ಜಾರಿಗೆ ತಂದು, ಬಡ ಹೆಣ್ಣುಮಕ್ಕಳ ಖಾತೆಗಳಿಗೆ ಮಾಸಿಕ 1 ಸಾವಿರ ರೂ. ಜಮೆ ಮಾಡಿಸಿದರು. ಆ ಮೂಲಕ ಸರ್ಕಾರವು ಮಹಿಳೆಯರ ಪರ ಇದೆ ಎಂಬ ಸಂದೇಶ ರವಾನಿಸಿದರು.

ಮಧ್ಯಪ್ರದೇಶದಲ್ಲಿ ಡಬಲ್‌ ಎಂಜಿನ್‌ ಸರ್ಕಾರವು ಅಭಿವೃದ್ಧಿಗೆ ಕಾರಣವಾಗಿದೆ ಎಂದು ಬಿಜೆಪಿಯು ಪ್ರಚಾರದ ವೇಳೆ ಪ್ರಬಲವಾಗಿ ಜನರಿಗೆ ಮನವರಿಕೆ ಮಾಡಿದ್ದು ಕೂಡ ಗೆಲುವಿಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. ಕೇಂದ್ರ ಸರ್ಕಾರದ ಅನುದಾನ, ರಾಜ್ಯ ಸರ್ಕಾರದ ಅಭಿವೃದ್ಧಿ ಪರ ಆಡಳಿತದಿಂದ ಮಧ್ಯಪ್ರದೇಶ ಏಳಿಗೆ ಹೊಂದುತ್ತಿದೆ ಎಂದು ಬಿಜೆಪಿಯು ಪ್ರಚಾರ ಮಾಡಿದ್ದು ಸಹಕಾರಿಯಾಗಿದೆ ಎನ್ನಲಾಗಿದೆ.

ಮಧ್ಯಪ್ರದೇಶದಲ್ಲಿ ಬಿಜೆಪಿಯಂತೆ ಉತ್ತಮವಾಗಿ ಪ್ರಚಾರ ಮಾಡುವಲ್ಲಿ ಕಾಂಗ್ರೆಸ್‌ ವಿಫಲವಾಯಿತು. ಸಾಮಾಜಿಕ ಜಾಲತಾಣಗಳನ್ನೂ ಕಾಂಗ್ರೆಸ್‌ ಸಮರ್ಪಕವಾಗಿ ಬಳಸಿಕೊಳ್ಳಲಿಲ್ಲ. ಇನ್ನು ಬಿಜೆಪಿಯಂತೆ ಪ್ರಮುಖ ನಾಯಕರನ್ನು ಕರೆಸಿ ರ‍್ಯಾಲಿಗಳನ್ನು ಆಯೋಜಿಸದೆ ಇರುವುದು, ಕೊನೆಯ ಕ್ಷಣದಲ್ಲ ಪ್ರಚಾರ ಕೈಗೊಂಡಿದ್ದು, ಗ್ಯಾರಂಟಿ ಭರವಸೆಗಳನ್ನು ಜನರಿಗೆ ತಲುಪಿಸುವಲ್ಲಿ ಹಿನ್ನಡೆ ಅನುಭವಿಸಿದ್ದು ಬಿಜೆಪಿಗೆ ವರದಾನವಾಗಿದೆ.

ಮಧ್ಯಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಲು ಅಮಿತ್‌ ಶಾ ರೂಪಿಸಿದ ರಣತಂತ್ರವೂ ಗೆಲುವಿಗೆ ಕಾರಣವಾಗಿದೆ. 2022ರ ಮಧ್ಯ ಭಾಗದಿಂದಲೇ ರಾಜ್ಯದಲ್ಲಿ ಬಿಜೆಪಿಯು ಚುನಾವಣೆ ಸಿದ್ಧತೆ ನಡೆಸಿತು. ಅಮಿತ್‌ ಶಾ ಅವರು ಮುಖಂಡರು ಹಾಗೂ ಕಾರ್ಯಕರ್ತರ ಜತೆ ಸಭೆ ನಡೆಸಿ ಅವರನ್ನು ಹುರಿದುಂಬಿಸಿದರು. ಪ್ರಚಾರ ಕಾರ್ಯಕ್ಕೆ ಕ್ರಿಯಾಯೋಜನೆ ರೂಪಿಸಿಕೊಟ್ಟರು. ಇದರ ಫಲಿತಾಂಶ ಈಗ ಕಣ್ಣಮುಂದಿದೆ.

ಈ ಸುದ್ದಿಯನ್ನೂ ಓದಿ: Mizoram Election Results: ಎಂಎನ್‌ಎಫ್‌ಗೆ ಭಾರೀ ಸೋಲು, ಮಿಜೋರಾಂನಲ್ಲಿ ಇನ್ನು ಜೆಡ್‌ಪಿಎಂ ಆಡಳಿತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Rashmika Mandanna: ʻನಮೋʼ ಸಾಧನೆಗೆ ಕಿರಿಕ್‌ ಬ್ಯೂಟಿ ರಶ್ಮಿಕಾ ಕ್ಲೀನ್‌ ಬೋಲ್ಡ್‌!

Rashmika Mandanna: ವಾಣಿಜ್ಯ ನಗರಿ ಮುಂಬೈಯಲ್ಲಿ ದೇಶದ ಅತಿ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (Atal Setu) ಎಂದು ಕರೆಯಲಾಗುವ ‘ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್’ (Mumbai Trans Harbour Link-MTHL) ಅನ್ನು ಪ್ರಧಾನಿ ನರೇಂದ್ರ ಮೋದಿ ಜನವರಿಯಲ್ಲಿ ಲೋಕಾರ್ಪಣೆ ಮಾಡಿದ್ದರು. ಈ ಅಟಲ್‌ ಸೇತು ದೇಶದ ಅತೀ ದೊಡ್ಡ ಮತ್ತು ಜಗತ್ತಿನ 12ನೇ ಅತೀ ದೊಡ್ಡ ಸಮುದ್ರ ಸೇತುವೆ ಎನಿಸಿಕೊಂಡಿದೆ. ಈ ಸೇತುವೆಯನ್ನು ಈಗ ಸಾರ್ವಜನಿಕರು ನೋಡಬಹುದು. ಮುಂಬೈ ಅಟಲ್ ಸೇತುವೆ ಮಾರ್ಗಮಧ್ಯೆ ಪ್ರಯಾಣಿಸುತ್ತ ರಶ್ಮಿಕಾ ಮಾತನಾಡಿದರು.

VISTARANEWS.COM


on

Rashmika Mandanna Reacts To India Decade of Growth Amid Lok Sabha Polls
Koo

ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಯ 5ನೇ ಹಂತದ ಮತದಾನದ ಹೊಸ್ತಿಲಲ್ಲಿ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅಭಿವೃದ್ದಿಗೆ ಮತ ನೀಡಿ ಎಂದು ಹೇಳಿದ್ದಾರೆ. ಮುಂಬೈ ಅಟಲ್ ಸೇತುವೆ ಮಾರ್ಗಮಧ್ಯೆ ಪ್ರಯಾಣಿಸುತ್ತ ರಶ್ಮಿಕಾ ಮಾಧ್ಯಮದ ಜತೆ ಮಾತನಾಡಿದ್ದಾರೆ. ವಾಣಿಜ್ಯ ನಗರಿ ಮುಂಬೈಯಲ್ಲಿ ದೇಶದ ಅತಿ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (Atal Setu) ಎಂದು ಕರೆಯಲಾಗುವ ‘ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್’ (Mumbai Trans Harbour Link-MTHL) ಅನ್ನು ಪ್ರಧಾನಿ ನರೇಂದ್ರ ಮೋದಿ ಜನವರಿಯಲ್ಲಿ ಲೋಕಾರ್ಪಣೆ ಮಾಡಿದ್ದರು. ಈ ಅಟಲ್‌ ಸೇತು ದೇಶದ ಅತೀ ದೊಡ್ಡ ಮತ್ತು ಜಗತ್ತಿನ 12ನೇ ಅತೀ ದೊಡ್ಡ ಸಮುದ್ರ ಸೇತುವೆ ಎನಿಸಿಕೊಂಡಿದೆ. ಈ ಸೇತುವೆಯನ್ನು ಈಗ ಸಾರ್ವಜನಿಕರು ನೋಡಬಹುದು.

ಮುಂಬೈ ಅಟಲ್ ಸೇತುವೆ ಮಾರ್ಗಮಧ್ಯೆ ಪ್ರಯಾಣಿಸುತ್ತ ರಶ್ಮಿಕಾ ಮಾತನಾಡಿ “ಎರಡು ಗಂಟೆಗಳ ಪ್ರಯಾಣವನ್ನು 20 ನಿಮಿಷಗಳಲ್ಲಿ ಮಾಡಬಹುದು. ಹಾಗೆ, ನೀವು ಅದನ್ನು ನಂಬುವುದಿಲ್ಲ! ಈ ರೀತಿಯ ಏನಾದರೂ ಸಾಧ್ಯ ಎಂದು ಯಾರು ಭಾವಿಸಿದ್ದರು. ಮುಂಬೈಯಿಂದ ಮುಂಬೈಗೆ, ಗೋವಾದಿಂದ ಮುಂಬೈವರೆಗೆ ಹಾಗೂ ಬೆಂಗಳೂರುನಿಂದ ಮುಂಬೈವರೆಗೆ ಎಲ್ಲಾ ಪ್ರಯಾಣಗಳನ್ನು ತುಂಬಾ ಸುಲಭವಾಗಿ ಮಾಡಲಾಗಿದೆ. ಅದೂ ಕೂಡ ಅದ್ಭುತ ಮೂಲಸೌಕರ್ಯದೊಂದಿಗೆ ಇದು ನನಗೆ ಹೆಮ್ಮೆ ತರುತ್ತದೆ” ಎಂದು ರಶ್ಮಿಕಾ ಹೇಳಿದ್ದಾರೆ.

ಇದನ್ನೂ ಓದಿ: Rashmika Mandanna: ಸಲ್ಮಾನ್ ಖಾನ್ ಜತೆ ನ್ಯಾಷನಲ್‌ ಕ್ರಶ್‌ ರಶ್ಮಿಕಾ ರೊಮ್ಯಾನ್ಸ್‌!

ರಶ್ಮಿಕಾ ಮಾತು ಮುಂದುವರಿಸಿ ʻʻಕಳೆದ 10 ವರ್ಷಗಳಲ್ಲಿ ನಮ್ಮ ದೇಶದ ಅಭಿವೃದ್ಧಿ ಗಮನಿಸಿದರೆ ಇನ್ನು ತಡೆಯಲು ಸಾಧ್ಯವಿಲ್ಲ. “ಈಗ ಭಾರತ ಯಾವುದಕ್ಕೂ ನೋ ಎನ್ನುವುದಿಲ್ಲ. ನಮ್ಮ ದೇಶದ ಮೂಲಸೌಕರ್ಯ, ಯೋಜನೆ, ರಸ್ತೆ ಯೋಜನೆ ಅದ್ಭುತವಾಗಿದೆ. ಈಗ ಇದು ನಮ್ಮ ಸಮಯ ಎಂದು ನಾನು ಭಾವಿಸುತ್ತೇನೆ! ಏಳು ವರ್ಷಗಳಲ್ಲಿ 20 ಕಿ.ಮೀ ಸೇತುವೆ ನಿರ್ಮಾಣವಾಗಿದೆ. ಚೆನ್ನಾಗಿಯೂ ಇದೆ. ಇದನ್ನು ನೋಡಿ ನನಗೆ ಮಾತೇ ಬರುತ್ತಿಲ್ಲ” ಎಂದು ಹೇಳಿದರು.

ಸದ್ಯ ದೇಶದಲ್ಲಿ 2024ರ ಲೋಕಸಭೆ ಚುನಾವಣೆ ನಡೆಯುತ್ತಿದ್ದು, ಯುವ ಪೀಳಿಗೆ ಜವಾಬ್ದಾರಿಯುತವಾಗಿ ಮತ ಚಲಾಯಿಸುವಂತೆ ರಶ್ಮಿಕಾ ಮನವಿ ಮಾಡಿದ್ದಾರೆ, “ಯುವ ಪೀಳಿಗೆ – ಯುವ ಭಾರತ – ಅಂತಹ ವೇಗದಲ್ಲಿ ಬೆಳೆಯುತ್ತಿದೆ. ಭಾರತವು ಅತ್ಯಂತ ಬುದ್ಧಿವಂತ ದೇಶ ಎಂದು ಹೇಳಲು ಬಯಸುತ್ತೇನೆ! ಯುವ ಭಾರತೀಯರು ಮತ ಚಲಾಯಿಸಬೇಕು. ಜನರು ನಿಜವಾಗಿಯೂ ನೋಡುತ್ತಿದ್ದಾರೆ, ಜನರು ತುಂಬಾ ಜವಾಬ್ದಾರಿಯುತರಾಗಿದ್ದಾರೆ. ಅದರ ಬಗ್ಗೆ ತುಂಬಾ ಸ್ಮಾರ್ಟ್ ಆಗಿದ್ದಾರೆ. ಅವರು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ” ಎಂದು ರಶ್ಮಿಕಾ ಹೇಳಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ನಟಿಗೆ ಕೆಲವರು ಮೊದಲು ನೀವು ವೋಟ್‌ ಹಾಕಿ ಎಂದು ಕಮೆಂಟ್‌ ಮಾಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸಲ್ಮಾನ್ ಖಾನ್ (Salman Khan) ಅವರ ಹೊಸ ಪ್ರಾಜೆಕ್ಟ್ ʻಸಿಕಂದರ್ʼ ಸಿನಿಮಾದಲ್ಲಿ ನಾಯಕಿಯಾಗಿ ಮಿಂಚಲಿದ್ದಾರೆ. ಇದು ರಶ್ಮಿಕಾ ಅವರ ನಾಲ್ಕನೇ ಬಾಲಿವುಡ್ ಚಿತ್ರ. ಈ ಚಿತ್ರವನ್ನು ಎ.ಆರ್. ಮುರುಗದಾಸ್ ನಿರ್ದೇಶನ ಮಾಡುತ್ತಿದ್ದಾರೆ.ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

ರಶ್ಮಿಕಾ ಮುಂದೆ ಪುಷ್ಪಾ 2 ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಅಲ್ಲು ಅರ್ಜುನ್ ಮತ್ತು ಫಹಾದ್ ಫಾಸಿಲ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆಗಸ್ಟ್ 15ರಂದು ಸಿನಿಮಾ ಬಿಡುಗಡೆಯಾಗಲಿದೆ.

Continue Reading

ದೇಶ

Stone Pelting: ಉತ್ತರಪ್ರದೇಶದಲ್ಲಿ ಗುಂಪು ಘರ್ಷಣೆ; ಕಲ್ಲು ತೂರಾಟ, ಕೇಳಿಬಂತು ಗುಂಡಿನ ಸಪ್ಪಳ

Stone Pelting: ಲಕ್ನೋದ ಈಶ್ವರಿ ಖೇರಾ ಪ್ರದೆಶದಲ್ಲಿ ಈ ಘಟನೆ ನಡೆದಿದ್ದು, ಯುವಕರಿಬ್ಬರು ತಮ್ಮ ಐದು ವರ್ಷದ ಸಹೋದರನನ್ನು ಶಾಲೆಯಿಂದ ವಾಪಾಸ್‌ ಕರೆದೊಯ್ಯತ್ತಿರುವಾಗ ಅವರ ಸ್ಕೂಟರ್‌ ಕಾರೊಂದಕ್ಕೆ ಅಚಾನಕ್ಕಾಗಿ ಡಿಕ್ಕಿ ಹೊಡೆದಿತ್ತು. ಅಲ್ಲಿಂದ ಈ ಜಗಳ ಶುರುವಾಗಿತ್ತು. ಕಾರು ಮಾಲೀಕ ಹರ್ಷ್‌ ಉಪಾಧ್ಯಾಯ ಮತ್ತು ಆತನ ಸ್ನೇಹಿತರು ಸ್ಕೂಟರ್‌ನಲ್ಲಿದ್ದ ಇಬ್ಬರು ಬಾಲಕರನ್ನು ಚೆನ್ನಾಗಿ ಥಳಿಸಿದ್ದಾರೆ. ಬಳಿಕ ಅವರನ್ನು ಹರ್ಷ್‌ ಮತ್ತು ಆತನ ಸ್ನೇಹಿತರು ಮನೆವರೆಗೆ ಹಿಂಬಾಲಿಸಿಕೊಂಡು ಬಂದಿದ್ದರು.

VISTARANEWS.COM


on

Stone pelting
Koo

ಲಕ್ನೋ: ರಸ್ತೆಯಲ್ಲಿ ಆದ ಸಣ್ಣ ಜಗಳ ಇಡೀ ಒಂದು ಊರನ್ನೇ ಉದ್ವಿಗ್ನಗೊಳಿಸಿರುವ ಘಟನೆ ಉತ್ತರಪ್ರದೇಶದ(Uttar Pradesh) ಲಕ್ನೋದಲ್ಲಿ ನಡೆದಿದೆ. ಸಣ್ಣದೊಂದು ಜಗಳದ ಕಿಡಿ ಗುಂಪು ಘರ್ಷಣೆ(ಯಾಗಿ ಹೊತ್ತಿಕೊಂಡಿದ್ದು, ಜನ ಕಲ್ಲು ತೂರಾಟ(Stone Pelting) ನಡೆಸಿದ್ದಾರೆ. ಅಲ್ಲದೇ ಇದೇ ವೇಳೆ ವ್ಯಕ್ತಿಯೊಬ್ಬ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ. ಈ ಭೀಕರ ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದ್ದು, ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಹಲವರಿಗೆ ಗಂಭೀರ ಗಾಯಗಳಾಗಿವೆ.

ಘಟನೆ ವಿವರ:

ಲಕ್ನೋದ ಈಶ್ವರಿ ಖೇರಾ ಪ್ರದೆಶದಲ್ಲಿ ಈ ಘಟನೆ ನಡೆದಿದ್ದು, ಯುವಕರಿಬ್ಬರು ತಮ್ಮ ಐದು ವರ್ಷದ ಸಹೋದರನನ್ನು ಶಾಲೆಯಿಂದ ವಾಪಾಸ್‌ ಕರೆದೊಯ್ಯತ್ತಿರುವಾಗ ಅವರ ಸ್ಕೂಟರ್‌ ಕಾರೊಂದಕ್ಕೆ ಅಚಾನಕ್ಕಾಗಿ ಡಿಕ್ಕಿ ಹೊಡೆದಿತ್ತು. ಅಲ್ಲಿಂದ ಈ ಜಗಳ ಶುರುವಾಗಿತ್ತು. ಕಾರು ಮಾಲೀಕ ಹರ್ಷ್‌ ಉಪಾಧ್ಯಾಯ ಮತ್ತು ಆತನ ಸ್ನೇಹಿತರು ಸ್ಕೂಟರ್‌ನಲ್ಲಿದ್ದ ಇಬ್ಬರು ಬಾಲಕರನ್ನು ಚೆನ್ನಾಗಿ ಥಳಿಸಿದ್ದಾರೆ. ಬಳಿಕ ಅವರನ್ನು ಹರ್ಷ್‌ ಮತ್ತು ಆತನ ಸ್ನೇಹಿತರು ಮನೆವರೆಗೆ ಹಿಂಬಾಲಿಸಿಕೊಂಡು ಬಂದಿದ್ದರು.

ಅವರು ತಮ್ಮ ಮನೆ ಬಳಿ ತಲುಪುತ್ತಿದ್ದಂತೆ 40-50 ಜನರಿಗೆಕರೆ ಮಾಡಿ ಕರೆಸಿಕೊಂಡಿದ್ದರು. ಹಿಂಬಾಲಿಸಿಕೊಂಡು ಬಂದಿದ್ದ ಹರ್ಷ್‌ ಮತ್ತು ಆತನ ಸ್ನೇಹಿತರನ್ನು ಕಂಡ ಕೂಡಲೇ ಉದ್ರಿಕ್ತ ಗುಂಪು ಕಲ್ಲು ತೂರಾಟ ನಡೆಸಿದೆ. ಅಲ್ಲದೇ ಸಫಾರಿ ಸೂಟ್‌ ಧರಿಸಿದ್ದ ವ್ಯಕ್ತಿಯೊಬ್ಬ ನಾಲ್ಕು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಘಟನೆಯಲ್ಲಿ ಎರಡು ಕಾರುಗಳು ಸಂಪೂರ್ಣವಾಇ ಜಖಂ ಆಗಿದ್ದು, ಅನೇಕರು ಕಲ್ಲೇಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಇನ್ನು ಘಟನೆಗೆ ಸಂಬಂಧಿಸಿದಂತೆ ಆಧಿಕೃತವಾಗಿ ಯಾವುದೇ ದೂರು ದಾಖಲಾಗಿಲ್ಲ. ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ತಿಳಿಗೊಳಿಸಲಾಯಿತು. ಇನ್ನು ಗಾಳಿಯಲ್ಲಿ ಗುಂಡು ಹಾರಿಸಿದ ವ್ಯಕ್ತಿಯನ್ನು ಮೊದಲು ಅರೆಸ್ಟ್‌ ಮಾಡಲಾಗಿತ್ತು. ಇದೀಗ ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೆತ್ತಿಕೊಳ್ಳಲಾಗಿದೆ. ಸದ್ಯ ಪರಿಸ್ಥಿತಿ ಸುಧಾರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ದೇಶ

Crowd Funding: ಕಂದಮ್ಮನ ಚಿಕಿತ್ಸೆಗೆ ಹರಿದು ಬಂದ ನೆರವು; 3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

Crowd Funding: ರಾಜಸ್ಥಾನದ ಜೈಪುರದಲ್ಲಿ ಮಗುವಿನ ಚಿಕಿತ್ಸೆಗೆ ಸಾರ್ವಜನಿಕರು ಅಭೂತಪೂರ್ವಾಗಿ ಸ್ಪಂದಿಸಿದ್ದಾರೆ. ಸೊಂಟದ ಕೆಳಗೆ ಸಂಪೂರ್ಣ ಸ್ವಾಧೀನ ಕಳೆದುಕೊಂಡ ಮಗುವಿನ ಚಿಕಿತ್ಸೆಗಾಗಿ 17.5 ಕೋಟಿ ರೂ. ಬೇಕಾಗಿತ್ತು. ಸುಮಾರು 3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹವಾಗಿದ್ದು, ಮಗುವಿಗೆ ಚಿಕಿತ್ಸೆ ನೀಡಲಾಗಿದೆ. ಉಳಿದ ಮೊತ್ತವನ್ನು ವರ್ಷದೊಳಗೆ ಮೂರು ಕಂತಿಗಳಲ್ಲಿ ಪಾವತಿಸಬಹುದಾದ ಅವಕಾಶವಿದೆ. ಸದ್ಯ ಸಾರ್ವಜನಿಕರ ಮಾನವೀಯ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

VISTARANEWS.COM


on

Crowd Funding
Koo

ಜೈಪುರ: ಮಾನವೀಯತೆ ಇನ್ನೂ ಜೀವಂತ ಇದೆ ಎನ್ನುವುದಕ್ಕೆ ಇದೊಂದು ಉತ್ತಮ ಉದಾಹರಣೆ. ರಾಜಸ್ಥಾನದ 22 ತಿಂಗಳ ಮಗುವಿನ ಚಿಕಿತ್ಸೆಗೆ ಸ್ಪಂದಿಸಿದ ಅನೇಕರು ಭರಪೂರ ದೇಣಿಗೆ ನೀಡಿದ್ದಾರೆ. ಕ್ರಿಕೆಟ್‌ ಅಟಗಾರರಿಂದ ಹಿಡಿದು, ನಟರು, ತರಕಾರಿ ಮಾರುವವರು, ಬೀದಿಬದಿ ವ್ಯಾಪಾರಿಗಳು ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಸೊಂಟದ ಕೆಳಗೆ ಸಂಪೂರ್ಣ ಸ್ವಾಧೀನ ಕಳೆದುಕೊಂಡ ಮಗುವಿನ ಚಿಕಿತ್ಸೆಗಾಗಿ ಸುಮಾರು 17.5 ಕೋಟಿ ರೂ. ಮೊತ್ತದ ಇಂಜೆಕ್ಷನ್‌ ನೀಡಬೇಕಾಗಿದ್ದು, ಇದಕ್ಕಾಗಿ ಇವರೆಲ್ಲ ಒಂದಾಗಿದ್ದಾರೆ. ತಮ್ಮ ಕೈಲಾದ ಸಹಾಯ ಮಾಡಿ ಮಗುವಿನ ನೆರವಿಗೆ ಧಾವಿಸಿದ್ದಾರೆ (Crowd Funding).

ರಾಜಸ್ಥಾನದ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನರೇಶ್‌ ಶರ್ಮಾ ಅವರ ಪುತ್ರ ಹೃದಯಾಂಶ್‌ ಶರ್ಮಾ (22 ತಿಂಗಳು) ಅಪರೂಪದ ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (Spinal muscular atrophy) ಎಂಬ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈ ಕಾರಣದಿಂದ ಆತನ ಸೊಂಟದ ಕೆಳಭಾಗ ಸಂಪೂರ್ಣ ನಿಷ್ಕ್ರೀಯವಾಗಿತ್ತು. ಇದನ್ನು ವಾಸಿ ಮಾಡಲು, ಸಂಪೂರ್ಣ ಗುಣಮುಖನಾಗಲು ವಿಶ್ವದ ಅತ್ಯಂತ ದುಬಾರಿ ಔಷಧಿಗಳಲ್ಲಿ ಒಂದಾದ ಜೀನ್ ಥೆರಪಿ ಇಂಜೆಕ್ಷನ್‌ ಜೊಲ್ಗೆನ್ಸ್ಮಾ (Zolgensma)ದ ಸಿಂಗಲ್ ಡೋಸ್ ಪಡೆದುಕೊಳ್ಳಬೇಕು ಎಂದು ವೈದ್ಯರು ಸೂಚಿಸಿದ್ದರು. ಅತ್ಯಂತ ದುಬಾರಿಯಾದ ಇದರ ಬೆಲೆ ಅಂದಾಜು 17.5 ಕೋಟಿ ರೂ.

ದೇಣಿಗೆ ಸಂಗ್ರಹಕ್ಕೆ ಮುಂದಾದ ಪೊಲೀಸರು

ಇಷ್ಟೊಂದು ದುಬಾರಿ ಮೊತ್ತ ಭರಿಸಲು ನರೇಶ್‌ ಶರ್ಮಾ ಅವರ ಕುಟುಂಬಕ್ಕೆ ಸಾಧ್ಯವಿರಲಿಲ್ಲ. ಈ ಹಿನ್ನೆಲೆಯಲ್ಲಿ ನೆರವಿಗೆ ಧಾವಿಸಿದ ರಾಜಸ್ಥಾನ ಪೊಲೀಸರು ಸಾವರ್ಜನಿಕ ದೇಣಿಗೆ ಸಂಗ್ರಹಕ್ಕೆ ಮುಂದಾದರು. ಮಗುವಿಗೆ 2 ವರ್ಷ ತುಂಬುವ ಮೊದಲೇ ಈ ಚಿಕಿತ್ಸೆ ನಡೆಯಬೇಕಿರುವುದರಿಂದ ಪೊಲೀಸರು ಫೆಬ್ರವರಿಯಲ್ಲಿ ಕ್ರೌಡ್‌ ಫಡಿಂಗ್‌ ಅಭಿಯಾನ ಆರಂಭಿಸಿದರು. ಈ ಅಭಿಯಾನಕ್ಕೆ ಸೂಕ್ತ ಸ್ಪಂದನೆ ದೊರೆಯಿತು. ಸೆಲೆಬಿಟಿಗಳಾದ ಕ್ರಿಕೆಟಿಗ ದೀಪಕ್‌ ಚಹರ್‌ ಮತ್ತು ಬಾಲಿವುಡ್‌ ನಟ, ಬಹಭಾಷಾ ಕಲಾವಿದ ಸೋನು ಸೂದ್‌ ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಈ ವಿಚಾರವನ್ನು ಹಂಚಿಕೊಂಡು ನೆರವು ನೀಡಲು ಮನವಿ ಮಾಡಿದರು.

ಹರಿದು ಬಂದ ನೆರವು

ಬಳಿಕ ಜೈಪುರದ ವಿವಿಧ ಕಡೆಗಳಿಂದ ನೆರವು ಹರಿದು ಬರತೊಡಗಿತು. ಅಂಗಡಿಯವರು, ವಿದ್ಯಾರ್ಥಿಗಳು, ಗೃಹಣಿಯರು, ತರಕಾರಿ, ಹಣ್ಣು ಮಾರಾಟಗಾರರು, ಬೀದಿ ಬದಿ ವ್ಯಾಪಾರಿಗಳು ಹೀಗೆ ಎಲ್ಲರೂ ನೆರವಿನ ಹಸ್ತ ಚಾಚಿದರು. ವಿವಿಧ ಎನ್‌ಜಿಒಗಳು ಮತ್ತು ಸಂಸ್ಥೆಗಳು ಕೂಡ ಈ ಅಭಿಯಾನಕ್ಕೆ ಕೈ ಜೋಡಿಸಿದವು. ʼʼರಾಜಸ್ಥಾನದಲ್ಲಿ ಕ್ರೌಡ್‌ ಫಡಂಗ್‌ಗೆ ಈ ರೀತಿಯ ಸ್ಪಂದನೆ ದೊರೆಯುತ್ತಿರುವುದು ಇದು ಮೊದಲ ಬಾರಿʼʼ ಎಂದು ಅಭಿಯಾನದಲ್ಲಿ ತೊಡಗಿಸಿಕೊಂಡಿರುವವರು ಅಭಿಪ್ರಾಯಪಡುತ್ತಾರೆ.

3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

3 ತಿಂಗಳ ಅವಧಿಯಲ್ಲಿ ಸುಮಾರು 9 ಕೋಟಿ ರೂ. ಸಂಗ್ರಹವಾಗಿದೆ. ಇದೀಗ ಜೈಪುರದ ಜೆ.ಕೆ. ಲಾನ್‌ ಆಸ್ಪತ್ರೆಯಲ್ಲಿ ಹೃದಯಾಂಶ್‌ಗೆ ಇಂಜೆಕ್ಷನ್‌ ನೀಡಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಉಳಿದ ಮೊತ್ತವನ್ನು ವರ್ಷದೊಳಗೆ ಮೂರು ಕಂತಿಗಳಲ್ಲಿ ಪಾವತಿಸಬಹುದಾದ ಅವಕಾಶವಿದೆ ಎಂದು ಮೂಲಗಳು ತಿಳಿಸಿವೆ.

ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ ಎನ್ನುವುದು ಆನುವಂಶಿಕ ಅಸ್ವಸ್ಥತೆಯಾಗಿದ್ದು, ಇದರಲ್ಲಿ ಬೆನ್ನುಹುರಿ ಮತ್ತು ಮೆದುಳಿನ ಕಾಂಡದಲ್ಲಿನ ನರ ಕೋಶಗಳ ಕೊರತೆಯೊಂದಾಗಿ ವ್ಯಕ್ತಿಗೆ ಸ್ನಾಯುಗಳ ಚಲನೆಯನ್ನು ನಿಯಂತ್ರಿಸಲು ಸಾಧ್ಯವಾಗುವುದಿಲ್ಲ. ಇದು ಸ್ನಾಯು ದೌರ್ಬಲ್ಯಕ್ಕೆ ಕಾರಣವಾಗುತ್ತದೆ ಮತ್ತು ಕೈಕಾಲುಗಳ ಚಲನೆ ಮತ್ತು ಉಸಿರಾಟದ ಮೇಲೂ ಪರಿಣಾಮ ಬೀರುತ್ತದೆ. ಇದರ ಚಿಕಿತ್ಸೆಗಾಗಿ ಬಳಸುವ ಜೊಲ್ಗೆನ್ಸ್ಮಾ ಇಂಜೆಕ್ಷನ್‌ ಅನ್ನು ಸ್ವಿಸ್ ಫಾರ್ಮಾ ದೈತ್ಯ ನೊವಾರ್ಟಿಸ್ (Novartis) ತಯಾರಿಸುತ್ತದೆ.

ಇದನ್ನೂ ಓದಿ: kodagu News : ಒಮ್ಮಿಂದೊಮ್ಮೆಗೇ ಜೋರಾಯಿತು ನೋವು; ಆಂಬ್ಯುಲೆನ್ಸ್‌ನಲ್ಲೇ ಹೆರಿಗೆ ಮಾಡಿಸಿದ ಸ್ಟಾಫ್‌ ನರ್ಸ್‌

Continue Reading

ಪ್ರಮುಖ ಸುದ್ದಿ

M‌ine Lift Collapse: ತಾಮ್ರದ ಗಣಿಯೊಳಗೆ ಲಿಫ್ಟ್‌ ಕುಸಿದು 14 ಮಂದಿ ಪಾತಾಳದಲ್ಲಿ ಟ್ರ್ಯಾಪ್

M‌ine Lift Collapse: ಜಿಲ್ಲೆಯ ಕೋಲಿಹಾನ್ ಗಣಿಯಲ್ಲಿ ಸಿಬ್ಬಂದಿಯನ್ನು ಸಾಗಿಸಲು ಬಳಸಲಾಗುವ ಲಂಬವಾದ ಶಾಫ್ಟ್ ಕುಸಿದಿದೆ. ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಶಾಫ್ಟ್ ಕುಸಿದಿದ್ದು, ಸ್ವಲ್ಪ ಸಮಯದ ನಂತರ ಆಂಬ್ಯುಲೆನ್ಸ್ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ತುರ್ತು ಪರಿಸ್ಥಿತಿಗೆ ಸಿದ್ಧವಾಗಿವೆ. ಹಿಂದೂಸ್ತಾನ್ ಕಾಪರ್‌ ಅಧಿಕಾರಿಗಳು ನೂರಾರು ಮೀಟರ್ ಆಳದಲ್ಲಿ ಸಿಲುಕಿಕೊಂಡಿದ್ದಾರೆ.

VISTARANEWS.COM


on

copper mine lift collapse
Koo

ಜೈಪುರ: ರಾಜಸ್ಥಾನದ ನೀಮ್ ಕಾ ಥಾನಾ ಜಿಲ್ಲೆಯ ಕೋಲಿಹಾನ್ ತಾಮ್ರದ ಗಣಿಯಲ್ಲಿ (copper mine) ಲಿಫ್ಟ್ ಕುಸಿದು (M‌ine Lift Collapse) 14 ಮಂದಿ ಸಿಕ್ಕಿಬಿದ್ದಿದ್ದಾರೆ. ಇವರು ಪಿಎಸ್‌ಯು ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನ (Hindustan copper Ltd) 14 ಅಧಿಕಾರಿಗಳು ಹಾಗೂ ವಿಜಿಲೆನ್ಸ್ ತಂಡದ ಸದಸ್ಯರಾಗಿದ್ದಾರೆ. ಮಂಗಳವಾರ ರಾತ್ರಿ ರಕ್ಷಣಾ ಕಾರ್ಯಾಚರಣೆ (rescue Operation) ಆರಂಭವಾಗಿದ್ದು, ಘಟನೆಯಲ್ಲಿ (Mine tragedy) ಕೆಲ ಅಧಿಕಾರಿಗಳು ಗಾಯಗೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಸ್ಥಳಕ್ಕೆ ರಕ್ಷಣಾ ತಂಡ ತಲುಪಿದೆ ಎಂದು ನೀಮ್ ಕಾ ಥಾನಾ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಪ್ರವೀಣ್ ನಾಯಕ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಇಲ್ಲಿಯವರೆಗೆ, ಗಣಿ ಲಿಫ್ಟ್ ಕುಸಿತದಿಂದ ಯಾವುದೇ ಸಾವುಗಳು ವರದಿಯಾಗಿಲ್ಲ.

ಜಿಲ್ಲೆಯ ಕೋಲಿಹಾನ್ ಗಣಿಯಲ್ಲಿ ಸಿಬ್ಬಂದಿಯನ್ನು ಸಾಗಿಸಲು ಬಳಸಲಾಗುವ ಲಂಬವಾದ ಶಾಫ್ಟ್ ಕುಸಿದಿದೆ. ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಶಾಫ್ಟ್ ಕುಸಿದಿದ್ದು, ಸ್ವಲ್ಪ ಸಮಯದ ನಂತರ ಆಂಬ್ಯುಲೆನ್ಸ್ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ತುರ್ತು ಪರಿಸ್ಥಿತಿಗೆ ಸಿದ್ಧವಾಗಿವೆ. ಹಿಂದೂಸ್ತಾನ್ ಕಾಪರ್‌ ಅಧಿಕಾರಿಗಳು ನೂರಾರು ಮೀಟರ್ ಆಳದಲ್ಲಿ ಸಿಲುಕಿಕೊಂಡಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಘಟನೆ ವರದಿಯಾದ ಕೂಡಲೇ ಬಿಜೆಪಿ ಶಾಸಕ ಧರ್ಮಪಾಲ್ ಗುರ್ಜರ್ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು. “ರಕ್ಷಣಾ ತಂಡವು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದೆ. 6-7 ಆಂಬ್ಯುಲೆನ್ಸ್‌ಗಳು ಸಿದ್ಧವಾಗಿವೆ. ಇಡೀ ಆಡಳಿತ ಅಲರ್ಟ್ ಆಗಿದೆ. ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ. ಖಂಡಿತವಾಗಿಯೂ ಎಲ್ಲರೂ ಸುರಕ್ಷಿತವಾಗಿ ಹೊರಬರುತ್ತಾರೆ” ಎಂದು ಧರ್ಮಪಾಲ್ ಗುರ್ಜರ್ ಹೇಳಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಸರ್ಕಾರಿ ಸ್ವಾಮ್ಯದ ಈ ಕಂಪನಿಯ ಹಿರಿಯ ಅಧಿಕಾರಿಗಳೊಂದಿಗೆ ವಿಜಿಲೆನ್ಸ್ ತಂಡವು ಪರಿಶೀಲನೆಗಾಗಿ ಗಣಿ ಒಳಗೆ ಹೋದಾಗ ಈ ಘಟನೆ ಸಂಭವಿಸಿದೆ. ಅವರು ಮೇಲಕ್ಕೆ ಬರಲು ಮುಂದಾದಾಗ, ಶಾಫ್ಟ್ ಅಥವಾ ʼಪಂಜರ’ದ ಹಗ್ಗ ಮುರಿದು ಸುಮಾರು 14 ಜನರು ಕೆಳಗೆ ಸಿಲುಕಿಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ. ಲಿಫ್ಟ್ ಅನ್ನು ಹಸ್ತಚಾಲಿತವಾಗಿ ಚಲಿಸಲು ಮತ್ತು ಸಿಕ್ಕಿಬಿದ್ದ ಸಿಬ್ಬಂದಿಯನ್ನು ಹೊರತೆಗೆಯಲು ಪ್ರಯತ್ನಿಸಲಾಗುತ್ತಿದೆ.

ಇದನ್ನೂ ಓದಿ: Job Alert: ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿದೆ ಸುವರ್ಣಾವಕಾಶ; 168 ಹುದ್ದೆಗಳಿಗೆ ಐಟಿಐ, ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Continue Reading
Advertisement
woman murder case
ಕ್ರೈಂ2 mins ago

Murder Case: ಹುಬ್ಬಳ್ಳಿಯಲ್ಲಿ ಪಾಗಲ್‌ ಪ್ರೇಮಿಯಿಂದ ಮತ್ತೊಬ್ಬ ಯುವತಿಯ ಕೊಲೆ

Rashmika Mandanna Reacts To India Decade of Growth Amid Lok Sabha Polls
ಟಾಲಿವುಡ್20 mins ago

Rashmika Mandanna: ʻನಮೋʼ ಸಾಧನೆಗೆ ಕಿರಿಕ್‌ ಬ್ಯೂಟಿ ರಶ್ಮಿಕಾ ಕ್ಲೀನ್‌ ಬೋಲ್ಡ್‌!

Job Alert
ಉದ್ಯೋಗ31 mins ago

Job Alert: ಗಮನಿಸಿ; ಬಿಎಂಟಿಸಿಯ 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 18 ಕೊನೆಯ ದಿನ

viral video garbage bengaluru roads
ವೈರಲ್ ನ್ಯೂಸ್1 hour ago

Viral video: ʼಅಸಹ್ಯಕರ!ʼ ಬೆಂಗಳೂರಿನ ರಸ್ತೆಗಳ ಕಸದ ವಿಡಿಯೋ ಪೋಸ್ಟ್‌ ಮಾಡಿದ ಕಿರಣ್ ಮಜುಂದಾರ್ ಶಾ

Stone pelting
ದೇಶ1 hour ago

Stone Pelting: ಉತ್ತರಪ್ರದೇಶದಲ್ಲಿ ಗುಂಪು ಘರ್ಷಣೆ; ಕಲ್ಲು ತೂರಾಟ, ಕೇಳಿಬಂತು ಗುಂಡಿನ ಸಪ್ಪಳ

Crowd Funding
ದೇಶ1 hour ago

Crowd Funding: ಕಂದಮ್ಮನ ಚಿಕಿತ್ಸೆಗೆ ಹರಿದು ಬಂದ ನೆರವು; 3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

Prajwal Revanna Case
ಕರ್ನಾಟಕ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

copper mine lift collapse
ಪ್ರಮುಖ ಸುದ್ದಿ2 hours ago

M‌ine Lift Collapse: ತಾಮ್ರದ ಗಣಿಯೊಳಗೆ ಲಿಫ್ಟ್‌ ಕುಸಿದು 14 ಮಂದಿ ಪಾತಾಳದಲ್ಲಿ ಟ್ರ್ಯಾಪ್

Health Tips in Kannada
ಆರೋಗ್ಯ2 hours ago

Health Tips in Kannada: ಕುತ್ತಿಗೆ ನೋವಿನಿಂದ ಬಳಲುತ್ತಿದ್ದೀರಾ? ಈ ಸಂಗತಿ ತಿಳಿದುಕೊಂಡಿರಿ

Mango Juice Benefits
ಆರೋಗ್ಯ3 hours ago

Mango Juice Benefits: ತಾಜಾ ಮಾವಿನ ರಸ ಕುಡಿಯುವುದರಿಂದ ಎಷ್ಟೊಂದು ಪ್ರಯೋಜನ ಇದೆ ನೋಡಿ…

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ14 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202416 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202420 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ20 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು21 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌