9 Saal 9 Sawaal: 9 ವರ್ಷದ ಬಿಜೆಪಿ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್​ ಕೇಳಿದ 9 ಪ್ರಶ್ನೆಗಳು ಯಾವವು?; ’ಏಕೆ’ಗಳ ಸುರಿಮಳೆ! Vistara News
Connect with us

ದೇಶ

9 Saal 9 Sawaal: 9 ವರ್ಷದ ಬಿಜೆಪಿ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್​ ಕೇಳಿದ 9 ಪ್ರಶ್ನೆಗಳು ಯಾವವು?; ’ಏಕೆ’ಗಳ ಸುರಿಮಳೆ!

9 saal 9 sawaal ಎಂಬ ಕೈಪಿಡಿಯನ್ನು ಇಂದು ಕಾಂಗ್ರೆಸ್​ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮತ್ತು ಇತರ ನಾಯಕರು ಬಿಡುಗಡೆಗೊಳಿಸಿದರು.

VISTARANEWS.COM


on

Congress release 9 Saal 9 Sawal Document Over 9 Years Of PM Modi Government
Koo

ಪ್ರಧಾನಿ ನರೇಂದ್ರ ಮೋದಿ (PM Modi) ನೇತೃತ್ವದ ಕೇಂದ್ರ ಸರ್ಕಾರಕ್ಕೆ 9 ವರ್ಷ ತುಂಬಿತು (9 Years Of PM Modi Government). ಕೇಂದ್ರದಲ್ಲಿ ಬಿಜೆಪಿ ಆಡಳಿತ ಹಿಡಿದು ಇದೀಗ 9ವರ್ಷಗಳಾದ ಬೆನ್ನಲ್ಲೇ ಬಿಜೆಪಿಗೆ, ಪ್ರಧಾನಿ ನರೇಂದ್ರ ಮೋದಿಯವರಿಗೆ ಕಾಂಗ್ರೆಸ್​ 9 ಪ್ರಶ್ನೆಗಳನ್ನು ಕೇಳಿದೆ. ಅದಕ್ಕೆ ಸಂಬಂಧಪಟ್ಟಂತೆ ‘9 ವರ್ಷಗಳು..9 ಪ್ರಶ್ನೆಗಳು (9 saal 9 sawaal)’ ಎಂಬ ಕೈಪಿಡಿಯನ್ನು ಇಂದು ಕಾಂಗ್ರೆಸ್​ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮತ್ತು ಇತರ ನಾಯಕರು ಬಿಡುಗಡೆಗೊಳಿಸಿದರು.

ಕೇಂದ್ರದಲ್ಲಿ ಬಿಜೆಪಿ ಆಡಳಿತ ಹಿಡಿದು 9ವರ್ಷಗಳಾದವು ಎಂದು ಬೀಗುತ್ತಿದೆ. ಆದರೆ ಇದೇ ಹೊತ್ತಲ್ಲಿ ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿಯವರು ಕೇಂದ್ರ ಸರ್ಕಾರಕ್ಕೆ 9 ಪ್ರಶ್ನೆಗಳನ್ನು ಕೇಳಿದ್ದಾರೆ. ಆ ಪ್ರಶ್ನೆಗಳನ್ನು ಅವರು ಭಾರತ್ ಜೋಡೋ ಯಾತ್ರೆಗೂ ಮುನ್ನ, ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಅಷ್ಟೇ ಅಲ್ಲ, ಭಾರತ್​ ಜೋಡೋ ಯಾತ್ರೆ ಮುಗಿದು ಇವತ್ತಿನವರೆಗೂ ನಿರಂತರವಾಗಿ ಕೇಳುತ್ತಲೇ ಇದ್ದಾರೆ. ಆದರೆ ಅದಕ್ಕೆ ಇಂದಿನವರೆಗೆ ಉತ್ತರಿಸಲಿಲ್ಲ. ಇನ್ನಾದರೂ ಪ್ರಧಾನಿ ಮೋದಿಯವರು ಮೌನ ಮುರಿಯಬೇಕು. ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಬೇಕು’ ಎಂದು ಜೈರಾಮ್ ರಮೇಶ್ ಅವರು ಇಂದು ಕೈಪಿಡಿ ಬಿಡುಗಡೆ ವೇಳೆ ಹೇಳಿದ್ದಾರೆ. ಹಾಗೇ, ಆ 9 ಪ್ರಶ್ನೆಗಳು ಯಾವವು ಎಂಬುದನ್ನು ಟ್ವೀಟ್ ಮಾಡಿ ತಿಳಿಸಿದ್ದಾರೆ.

ಬಿಜೆಪಿಗೆ ಕಾಂಗ್ರೆಸ್ ಕೇಳಿದ 9ಪ್ರಶ್ನೆಗಳು ಯಾವವು?

1. ಆರ್ಥಿಕತೆ: ಭಾರತದಲ್ಲಿ ನಿರುದ್ಯೋಗ ಮತ್ತು ಹಣದುಬ್ಬರ ಸಮಸ್ಯೆಗಳು ಗಗನಕ್ಕೇರುತ್ತಿವೆ ಯಾಕೆ? ಇಲ್ಲಿ ಬಡವರು ಬಡವರಾಗಿ, ಶ್ರೀಮಂತರು ಶ್ರೀಮಂತಾರಿಗೇ ಉಳಿಯುತ್ತಿದ್ದಾರೆ ಯಾಕೆ? ದೇಶದಲ್ಲಿ ಆರ್ಥಿಕ ಅಸಮಾನತೆ ಈ ಪರಿ ಹೆಚ್ಚುತ್ತಿರುವಾಗಲೂ ಸಾರ್ವಜನಿಕ ಆಸ್ತಿಗಳನ್ನು ಪ್ರಧಾನಿ ಮೋದಿಯವರ ಸ್ನೇಹಿತರಿಗೇ ಯಾಕೆ ಮಾರಾಟ ಮಾಡಲಾಗುತ್ತಿದೆ.

2. ಕೃಷಿ ಮತ್ತು ರೈತರು: ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರೈತರಿಗೆ ನೀಡಿದ್ದ ಭರವಸೆಗಳನ್ನು ಯಾಕೆ ಈಡೇರಿಸಿಲ್ಲ? ಅವರೊಂದಿಗೆ ಮಾಡಿಕೊಂಡ ಒಪ್ಪಂದಗಳನ್ನು ಯಾಕೆ ಮಾನ್ಯ ಮಾಡಿಲ್ಲ? ಕನಿಷ್ಠ ಬೆಂಬಲ ಬೆಲೆಯನ್ನು ಇನ್ನೂ ಯಾಕೆ ಕಾನೂನು ಪ್ರಕಾರ ಖಾತರಿ ಪಡಿಸಿಲ್ಲ ಮತ್ತು 9ವರ್ಷಗಳಾದರೂ ರೈತರ ಆದಾಯ ಏಕೆ ದ್ವಿಗುಣಗೊಂಡಿಲ್ಲ?

3. ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತ: ನಿಮ್ಮ ಸ್ನೇಹಿತ ಅದಾನಿಯವರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ, ಸಾಮಾನ್ಯ ಜನರು ಕಷ್ಟಪಟ್ಟು ದುಡಿದು ಸಂಪಾದಿಸಿ ಎಲ್​ಐಸಿ ಮತ್ತು ಎಸ್​ಬಿಐನಲ್ಲಿ ಉಳಿತಾಯ ಮಾಡಿರುವ ಹಣಕ್ಕೆ ಏಕೆ ಅಪಾಯ ತಂದೊಡ್ಡುತ್ತೀರಿ? ಕಳ್ಳರು ಪರಾರಿಯಾಗಲು ಏಕೆ ಅವಕಾಶ ಮಾಡಿಕೊಡುತ್ತೀರಿ? ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಮಿತಿಮೀರಿದ ಭ್ರಷ್ಟಾಚಾರ ಇದ್ದರೂ ನೀವ್ಯಾಕೆ ಸುಮ್ಮನೆ ಇದ್ದೀರಿ? ಮತ್ತು ಭಾರತೀಯರನ್ನೇಕೆ ಸಂಕಷ್ಟಕ್ಕೆ ದೂಡುತ್ತಿದ್ದೀರಿ?

4. ಚೀನಾ ಮತ್ತು ರಾಷ್ಟ್ರೀಯ ಭದ್ರತೆ: ಚೀನಾ ಭಾರತದ ಭೂಭಾಗವನ್ನು ಅತಿಕ್ರಮಣ ಮಾಡಿಲ್ಲ ಎಂದು ಪ್ರಧಾನಿ ಮೋದಿಯವರು 2020ರಲ್ಲಿ ಹೇಳಿದ್ದಾರೆ. ಈ ಮೂಲಕ ಚೀನಾಕ್ಕೆ ಕ್ಲೀನ್​ ಚಿಟ್ ಕೊಟ್ಟಿದ್ದಾರೆ. ಇಷ್ಟಾದ ಮೇಲೆ ಕೂಡ ಚೀನಾದವರು ಏಕೆ ಭಾರತದ ಭೂಪ್ರದೇಶವನ್ನು ಅತಿಕ್ರಮಣ ಮಾಡುತ್ತಿದ್ದಾರೆ? ಚೀನಾದೊಂದಿಗೆ ಭಾರತ 18 ಸುತ್ತಿನ ಸಭೆ ನಡೆಸಿದ ಬಳಿಕವೂ ಆ ದೇಶದ ಸೈನಿಕರು ಭಾರತದ ಭೂಭಾಗವನ್ನು ಬಿಟ್ಟುಕೊಡಲು ಒಪ್ಪಿತ್ತಿಲ್ಲ ಯಾಕೆ? ಅಷ್ಟೇ ಅಲ್ಲ, ಅವರ ಆಕ್ರಮಣವನ್ನು ಮುಂದುವರಿಸುತ್ತಿದ್ದಾರೇಕೆ?
(ಗಲ್ವಾನ್ ಸಂಘರ್ಷ ನಡೆದ ಬಳಿಕ ಚೀನಾ ಲಡಾಖ್​ ಗಡಿಯಲ್ಲಿ ಭಾರತದ ಭೂಭಾಗ ಅತಿಕ್ರಮಿಸಿದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಮಾತನಾಡಿದ್ದ ಪ್ರಧಾನಿ ಮೋದಿ, ಚೀನಾ ಭಾರತದ ಯಾವುದೇ ಪ್ರದೇಶವನ್ನು ಅತಿಕ್ರಮಿಸಿಕೊಂಡಿಲ್ಲ ಎಂದಿದ್ದರು. ಚೀನಾ ಈಗ ಎಲ್ಲ ಗಡಿಗಳಲ್ಲೂ ಉಪಟಳ ಕೊಡುತ್ತಿದೆ. ಗಡಿಗೆ ಸಮೀಪವೇ ಹಳ್ಳಿಗಳನ್ನು ನಿರ್ಮಾಣ ಮಾಡುತ್ತಿದೆ. ಭಾರತದ ಸೈನಿಕರಿಗೆ ತೊಂದರೆ ಕೊಡುತ್ತಿದೆ. ಅದನ್ನೇ ಉಲ್ಲೇಖಿಸಿ ಕಾಂಗ್ರೆಸ್ ಈ ಪ್ರಶ್ನೆ ಕೇಳಿದೆ.

5. ಸಾಮಾಜಿಕ ಸಾಮರಸ್ಯ: ಚುನಾವಣೆಗಳಲ್ಲಿ ಗೆಲ್ಲುವುದಕ್ಕೋಸ್ಕರ ದೇಶಾದ್ಯಂತ ಉದ್ದೇಶಪೂರ್ವಕವಾಗಿಯೇ ದ್ವೇಷಯುಕ್ತ ರಾಜಕೀಯ ಮಾಡುತ್ತಿದ್ದೀರಲ್ಲ, ಈ ಮೂಲಕ ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುತ್ತೀದ್ದೀರಲ್ಲ ಯಾಕೆ?

6. ಸಾಮಾಜಿಕ ನ್ಯಾಯ: ಮಹಿಳೆಯರು, ದಲಿತರು, ಎಸ್​ಸಿ/ಎಸ್​ಟಿ (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ), ಒಬಿಸಿ (ಇತರೆ ಹಿಂದುಳಿದ ವರ್ಗ) ಮತ್ತು ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿದ್ದರೂ ಯಾಕೆ ಮೌನವಹಿಸಿದ್ದೀರಿ? ಜಾತಿ ಆಧಾರಿತ ಜನಗಣತಿ ಬೇಡಿಕೆಯನ್ನೇಕೆ ಗಣನೆಗೆ ತೆಗೆದುಕೊಳ್ಳುತ್ತಿಲ್ಲ?

7. ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆ: 9ವರ್ಷಗಳಲ್ಲಿ ನಮ್ಮ ಸಂವಿಧಾನದ ಮೌಲ್ಯಗಳನ್ನು ಕುಂದಿಸಿದ್ದೀರಿ, ಪ್ರಜಾಪ್ರಭುತ್ವದ ಸಂಸ್ಥೆಗಳನ್ನು ದುರ್ಬಲಗೊಳಿಸಿದ್ದೀರಿ, ಏಕೆ? ಪ್ರತಿಪಕ್ಷಗಳು ಮತ್ತು ವಿಪಕ್ಷಗಳ ರಾಜಕಾರಣಿಗಳ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿರುವುದೇಕೆ? ಚುನಾಯಿತ ಸರ್ಕಾರಗಳನ್ನು ಪತನಗೊಳಿಸಲು ದೊಡ್ಡಮಟ್ಟದಲ್ಲಿ ಹಣ ಬಲವನ್ನು ಪ್ರಯೋಗ ಮಾಡುತ್ತಿರುವುದು ಕಾರಣವೇನು?

8. ಅಭಿವೃದ್ಧಿ ಯೋಜನೆಗಳು: ಬಡವರು, ನಿರ್ಗತಿಕರು, ಬುಡಕಟ್ಟು ಜನಾಂಗಕ್ಕೆ ಬಜೆಟ್​​ನಲ್ಲಿ ಹಣವನ್ನು ಕಡಿತಗೊಳಿಸುವ ಮತ್ತು ಹಲವು ನಿರ್ಬಂಧಿತ ನಿಯಮಗಳನ್ನು ಹಾಕುವ ಮೂಲಕ ಅವರ ಅಭಿವೃದ್ಧಿ ಯೋಜನೆಗಳನ್ನು ದುರ್ಬಲಗೊಳಿಸಿದ್ದೇಕೆ?

9. ಕೊವಿಡ್ 19 ಅಸಮರ್ಪಕ ನಿರ್ವಹಣೆ: ಕೊವಿಡ್ 19 ಸಾಂಕ್ರಾಮಿಕ ರೋಗದಿಂದ ಪ್ರಾಣ ಕಳೆದುಕೊಂಡ 40 ಲಕ್ಷ ಜನರ ಕುಟುಂಬಗಳಿಗೆ ಕೇಂದ್ರ ಸರ್ಕಾರ ಪರಿಹಾರ ನೀಡಲು ನಿರಾಕರಿಸುತ್ತಿರುವುದು ಯಾಕೆ? ಕೊರೊನಾ ಕಾಲಿಟ್ಟಾಗ ಏಕಾಏಕಿ ಲಾಕ್​ಡೌನ್​ ಹೇರಿ, ಸಾವಿರಾರು ವಲಸೆ ಕಾರ್ಮಿಕರು ಕೆಲಸವಿದಲ್ಲದೆ ತಮ್ಮ ಮನೆಗಳಿಗೆ ವಾಪಸ್ ಆಗುವಂತೆ ಮಾಡಿದ್ದಲ್ಲದೆ, ಅವರಿಗೆ ಯಾವುದೇ ನೆರವು ನೀಡದೆ ಇರುವುದೇಕೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕ್ರೈಂ

Apsara Murder: ಪತ್ನಿ ಇದ್ದರೂ ಅರ್ಚಕನಿಗೆ ಬೇಕು ಲವ್ವರ್;‌ ಆಕೆ ಮದುವೆಯಾಗು ಎಂದಿದ್ದಕ್ಕೆ ಆದ ಕಿಲ್ಲರ್

Apsara Murder: ತೆಲಂಗಾಣದ ಸರೂರ್‌ ನಗರದಲ್ಲಿ ಅರ್ಚಕನೊಬ್ಬ ಈಗಾಗಲೇ ಮದುವೆಯಾಗಿದ್ದರೂ ಮತ್ತೊಬ್ಬ ಮಹಿಳೆಯ ಸಹವಾಸ ಮಾಡಿದ್ದಾನೆ. ಪ್ರೀತಿಸುತ್ತಿದ್ದೀಯ, ಮದುವೆಯಾಗು ಎಂದು ಮಹಿಳೆ ಒತ್ತಾಯ ಮಾಡಿದ್ದಕ್ಕೆ ಪ್ರೇಯಸಿಯನ್ನೇ ಅರ್ಚಕ ಕೊಂದಿದ್ದಾನೆ.

VISTARANEWS.COM


on

Edited by

Apsara Murder In Hyderabad
ಅರ್ಚಕನಿಂದ ಹತ್ಯೆಗೀಡಾದ ಅಪ್ಸರಾ.
Koo

ಹೈದರಾಬಾದ್:‌ ಮನೆಯಲ್ಲೊಬ್ಬಳು ಮಡದಿ ಇದ್ದರೂ ಲವ್ವರ್‌ ಇರಬೇಕು ಎಂಬ ಅರ್ಚಕನೊಬ್ಬನ ಶೋಕಿಗಾಗಿ ತೆಲಂಗಾಣದಲ್ಲಿ 30 ವರ್ಷದ ಮಹಿಳೆಯೊಬ್ಬರ (Apsara Murder) ಜೀವವೇ ಬಲಿಯಾಗಿದೆ. ಹೌದು, ಶಂಷಾಬಾದ್‌ ಜಿಲ್ಲೆಯ ಸರೂರ್‌ನಗರದಲ್ಲಿ ಅರ್ಚಕನು ತನ್ನ ಗರ್ಲ್‌ಫ್ರೆಂಡ್‌ಅನ್ನು ಮದುವೆಯಾಗಬೇಕಾಗುತ್ತದೆ ಎಂದು ಆಕೆಯನ್ನು ಕೊಂದು, ದೇಹವನ್ನು ಚರಂಡಿ ಗುಂಡಿಗೆ (Manhole) ಎಸೆದಿದ್ದಾನೆ.

ಸರೂರ್‌ ನಗರದ ದೇವಾಲಯದಲ್ಲಿ ಅರ್ಚಕನಾಗಿರುವ ವೆಂಕಟ ಸೂರ್ಯ ಸಾಯಿ ಕೃಷ್ಣನಿಗೆ ಈಗಾಗಲೇ ಮದುವೆಯಾಗಿದೆ. ಮದುವೆ, ಸಂಸಾರ ಎಂದು ಸುಮ್ಮನಿರದ ಈತನು ಅಪ್ಸರಾ ಎಂಬ ಮಹಿಳೆಯ ಜತೆ ಸಂಬಂಧ ಬೆಳೆಸಿದ್ದಾನೆ. ಇಬ್ಬರ ಪ್ರೀತಿ ಗಾಢವಾದ ಮೇಲೆ ನನ್ನನ್ನು ಮದುವೆಯಾಗು ಎಂದು ಅಪ್ಸರಾ ಪಟ್ಟು ಹಿಡಿದಿದ್ದಾರೆ. ಈಗಾಗಲೇ ಮದುವೆಯಾದ ಕಾರಣ ಮತ್ತೊಂದು ಮದುವೆಯಾಗಲು ಒಪ್ಪದ ವೆಂಕಟಸೂರ್ಯ ಸಾಯಿ ಕೃಷ್ಣ, ಆಕೆಯನ್ನು ಕೊಂದು, ಚರಂಡಿಯ ಗುಂಡಿಯಲ್ಲಿ ಎಸೆದಿದ್ದಾನೆ.

ಗೋಶಾಲೆಗೆ ಭೇಟಿ ನೀಡುವ ನೆಪದಲ್ಲಿ ಕೊಲೆ

ಗೋಶಾಲೆಗೆ ಭೇಟಿ ನೀಡೋಣ ಎಂದು ವೆಂಕಟಸೂರ್ಯ ಸಾಯಿ ಕೃಷ್ಣ,ನು ಅಪ್ಸರಾ ಅವರನ್ನು ಕರೆಸಿದ್ದಾನೆ. ವೆಂಕಟೇಶ್ವರ ಕಾಲೋನಿ ನಿವಾಸಿಯಾದ ಅಪ್ಸರಾ, ವೆಂಕಟಸೂರ್ಯ ಸಾಯಿ ಕೃಷ್ಣನ ಮಾತು ಕೇಳಿ ಸುಲ್ತಾನ್‌ಪಳ್ಳಿಯಲ್ಲಿರುವ ಗೋಶಾಲೆಗೆ ಹೋಗಿದ್ದಾರೆ. ಇದೇ ವೇಳೆ, ನರ್ಕುಡಾ ಗ್ರಾಮದ ಹೊರವಲಯದಲ್ಲಿ ವೆಂಕಟಸೂರ್ಯ ಸಾಯಿ ಕೃಷ್ಣನು ಅಪ್ಸರಾ ತಲೆಮೇಲೆ ಬಂಡೆಗಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಬಳಿಕ ಶವವನ್ನು ಚರಂಡಿ ಗುಂಡಿಯಲ್ಲಿ ಎಸೆದಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Murder Case: ಕೋಪದಿಂದ ಅಜ್ಜಿಯ ಕೊಲೆ ಮಾಡಿದ, ಹೆಣ ಕಾರಿನಲ್ಲಿ ಇಟ್ಟುಕೊಂಡು ಮಿಸ್ಸಿಂಗ್‌ ಕಂಪ್ಲೇಂಟ್‌ ನೀಡಿದ!

ಜೂನ್‌ 3ರಿಂದ ಅಪ್ಸರಾ ಕಾಣೆಯಾದ ಕಾರಣ ಅವರ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಬಳಿಕ ಪೊಲೀಸರು ತನಿಖೆ ನಡೆಸಿದ್ದು, ಅಪ್ಸರಾ ಕಾಲ್‌ ರೆಕಾರ್ಡ್ಸ್‌ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ವೆಂಕಟಸೂರ್ಯ ಸಾಯಿ ಕೃಷ್ಣನನ್ನು ಬಂಧಿಸಿದ್ದಾರೆ. ಬಂಧಿಸಿದ ಬಳಿಕ ಅರ್ಚಕನು ತಾನು ನಡೆಸಿದ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ. ಮದುವೆಯಾಗು ಎಂಬುದಾಗಿ ಅಪ್ಸರಾ ಪೀಡಿಸಿದ ಕಾರಣ ಕೊಲೆ ಮಾಡಿದೆ ಎಂಬುದಾಗಿ ವೆಂಕಟಸೂರ್ಯ ಸಾಯಿ ಕೃಷ್ಣ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಇನ್ನು ಚರಂಡಿಯಲ್ಲಿ ಬಿದ್ದಿರುವ ಶವವನ್ನು ಹೊರತೆಗೆಯಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ, ಮಹಿಳೆಯೊಬ್ಬರು ಕಾಣೆಯಾದ ಪ್ರಕರಣವು ಆಕೆಯ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಮದುವೆಯಾದರೂ ಮತ್ತೊಬ್ಬ ಮಹಿಳೆಯ ಸಹವಾಸ ಮಾಡುವ ಜತೆಗೆ ಆಕೆಯನ್ನು ಕೊಲೆಗೈದ ಅರ್ಚಕನು ಕಂಬಿ ಎಣಿಸುತ್ತಿದ್ದಾನೆ.

Continue Reading

ತಂತ್ರಜ್ಞಾನ

Aadhaar Services: ಆನ್‌ಲೈನ್ ಮೂಲಕ ಆಧಾರ್ ‘ಲಾಕ್’ ಮತ್ತು ‘ಅನ್‌ಲಾಕ್’ ಮಾಡುವುದು ಹೇಗೆ?

Aadhaar Services: ಸರ್ಕಾರಿ ಸೇವೆಗಳನ್ನು ಪಡೆಯಲು, ವಿಳಾಸ ಮತ್ತು ಗುರುತು ದೃಢೀಕರಣಕ್ಕೆ ಆಧಾರ್ ಅತ್ಯಗತ್ಯ ಸರ್ಕಾರಿ ಗುರುತಿನ ಪತ್ರವಾಗಿದೆ.

VISTARANEWS.COM


on

Edited by

Lock and unlock of aadhar services through online
Koo

ಬೆಂಗಳೂರು: ಕರ್ನಾಟಕದಲ್ಲಿ ಈಗ ಗ್ಯಾರಂಟಿಗಳ ಭರಾಟೆ. ಈ ಗ್ಯಾರಂಟಿ ಸೇವೆಗಳನ್ನು ಪಡೆಯಲು ಇತರ ಅಧಿಕೃತ ದಾಖಲೆಗಳ ಜತೆಗೆ ಆಧಾರ್ ಕೂಡ ಕಡ್ಡಾಯವಾಗಿಬೇಕು. ಹಾಗಾಗಿ, ಆಧಾರ್ ಮಾಡಿಸಿಕೊಳ್ಳಲು ಜನರು ಮುಗಿ ಬೀಳುತ್ತಿರುವ ವರದಿಗಳಾಗುತ್ತಿವೆ. ಗ್ಯಾರಂಟಿ ಮಾತ್ರವಲ್ಲದೇ ಕೇಂದ್ರವಾಗಲೀ, ರಾಜ್ಯ ಸರ್ಕಾರದ ಸೇವೆಗಳನ್ನು ಪಡೆಯಲು, ನಿಮ್ಮ ಅಧಿಕೃತ ವಿಳಾಸವನ್ನು ದೃಢೀಕರಿಸಲು ಈ ಆಧಾರ್ (Aadhaar Services) ಬೇಕೇ ಬೇಕು. ಆದರೆ, ಆಧಾರ್ ಮಾಹಿತಿ ಕಳುವಾದರೆ ಎಂಬ ಆತಂಕ ಇದ್ದೇ ಇರುತ್ತದೆ. ಬಳಕೆದಾರರಿಗೆ ಅಂಥದೊಂದು ಅನುಮಾನ ಮೂಡಿದರೆ, ನಿಮ್ಮ ಆಧಾರ್ ಸೇವೆಯನ್ನು ಲಾಕ್ (Lock) ಮಾಡಬಹುದು, ಅಗತ್ಯ ಎನಿಸಿದಾಗಿ ಮತ್ತೆ ಅನ್‌ಲಾಕ್ (Unlock) ಮಾಡಬಹುದು. ಅಂಥದೊಂದು ಅವಕಾಶವನ್ನು ಯುಐಡಿಎಐ ನೀಡಿದೆ.

ಬಳಕೆದಾರರ ಆಧಾರ್ ಸಂಖ್ಯೆಯ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ನಿವಾಸಿಗಳಿಗೆ ನಿಯಂತ್ರಣವನ್ನು ಒದಗಿಸಲು ಆಧಾರ್ ಸಂಖ್ಯೆಗಳನ್ನು ಲಾಕ್ ಮಾಡಲು ಮತ್ತು ಅನ್ಲಾಕ್ ಮಾಡಲು ಯುಐಡಿಎಐ ವ್ಯವಸ್ಥೆಯನ್ನು ಒದಗಿಸಿದೆ. ಬಳಕೆದಾರರು ಯುಐಡಿಎಐ ಜಾಲತಾಣ (www.myaadhaar.uidai.gov.in) ಅಥವಾ ಎಂಆಧಾರ್ (mAadhaar) ಆ್ಯಪ್ ಮೂಲಕ ಆಧಾರ್ ಲಾಕ್ ಮಾಡಬಹುದಾಗಿದೆ.

ಆಧಾರ್ ಹೇಗೆ ಲಾಕ್ ಮಾಡುವುದು?

ಎಸ್ಸೆಮ್ಮೆಸ್ ಮೂಲಕ: GVID ಟೈಪ್ ಮಾಡಿ ನಿಮ್ಮ ನಾಲ್ಕು ಅಥಾ ಎಂಟು ಅಂಕಿಗಳ ಯುಐಡಿ ನಂಬರ್ ಟೈಪ್ ಮಾಡಿ ಮತ್ತು ಅದನ್ನು 1947ಕೆ ಸೆಂಡ್ ಮಾಡಿದೆ. ಉದಾಹರಣೆ: GVID 7893 SMS to 1947

ವೆಬ್‌ಸೈಟ್ ಮೂಲಕ: ಯುಐಡಿಎಐ ವೆಬ್‌ಸೈಟ್ (https://resident.uidai.gov.in/aadhaar-lockunlock)ಗೆ ಭೇಟಿ ನೀಡಿ. ಹೋಮ್‌ಪುಟದಲ್ಲಿರುವ ಮೈ ಆಧಾರ್ ಸೆಕ್ಷನ್‌ನಲ್ಲಿರುವ ಲಾಕ್ ಆಧಾರ್ (Lock Aadhaar) ಮೇಲೆ ಕ್ಲಿಕ್ ಮಾಡಿ. ಬಳಿಕ ಯುಐಡಿ ಲಾಕ್ ಆಪ್ಷನ್ ಸೆಲೆಕ್ಟ್ ಮಾಡಿ. ಯುಐಡಿ ನಂಬರ್, ಹೆಸರು ಇತ್ಯಾದಿ ಮಾಹಿತಿಯನ್ನು ನಮೂದಿಸಿ. ಸೆಂಡ್ ಸೆಕ್ಯೂರಿಟಿ ಮೇಲೆ ಕ್ಲಿಕ್ ಮಾಡಿ. ನಿಮ್ಮ ಮೊಬೈಲ್ ನಂಬರ್‌ಗೆ ಬರುವ ಸೆಕ್ಯೂರಿಟಿ ಕೋಡ್ ಎಂಟರ್ ಮಾಡಿ. ಆಗ ನಿಮ್ಮ ಆಧಾರ್ ಯಶಸ್ವಿಯಾಗಿ ಲಾಕ್ ಆಗುತ್ತದೆ.

ಆಧಾರ್ ಅನ್‌ಲಾಕ್ ಮಾಡುವುದು ಹೇಗೆ?

ಎಸ್ಸೆಮ್ಮೆಸ್ ಮೂಲಕ: RVID ಅಂತಾ ಟೈಪ್ ಮಾಡಿ ಸ್ಪೇಸ್ ಬಿಟ್ಟು ನಾಲ್ಕು ಅಥವಾ 8 ಅಂಕಿಗಳ ಯುಐಡಿ ನಂಬರ್ ಟೈಪ್ ಮಾಡಿ, 1947 ನಂಬರ್‌ಗೆ ಸೆಂಡ್ ಮಾಡಿ.

ಇದನ್ನೂ ಓದಿ: Aadhaar card : ಆಧಾರ್‌ ಜತೆ ನಿಮ್ಮ ಇ-ಮೇಲ್‌, ಮೊಬೈಲ್‌ ಲಿಂಕ್‌ ಆಗಿದೆಯೇ ? ಹೀಗೆ ಖಾತರಿಪಡಿಸಿಕೊಳ್ಳಿ

ವೆಬ್‌ಸೈಟ್ ಮೂಲಕ ಹೀಗೆ ಮಾಡಿ: ಇಲ್ಲಿ ಕೂಡ ಸೇನ್ ಲಾಕ್ ಮಾಡುವ ಪ್ರಕ್ರಿಯೇ ಫಾಲೋ ಮಾಡಬೇಕು. ಮೊದಲಿಗೆ ಯುಐಡಿಎಐಗೆ ಹೋಗಿ. ಬಳಿಕ ಅನ್‌ಲಾಕ್ ಆಯ್ಕೆಯ ಸೆಲೆಕ್ಟ ಮಾಡಿ. ಹೊಸ ವಿಐಡಿ ಮತ್ತುಸೆಕ್ಯೂರಿಟಿ ಕೋಡ್ ಎಂಟರ್ ಮಾಡಿ. ಸೆಂಡ್ ಒಟಿಪಿ ಬಟನ್ ಮೇಲೆ ಕ್ಲಿಕ್ ಮಾಡಿ. ನಿಮ್ಮ ಮೊಬೈಲ್ ಸಂಖ್ಯೆಗೆ ಬರುವ ಒಟಿಪಿಯನ್ನು ನಮೂದಿಸಿ. ಆಗ ನಿಮ್ಮ ಆಧಾರ್ ನಂಬರ್ ಯಶಸ್ವಿಯಾಗಿ ಅನ್‌ಲಾಕ್ ಆಗುತ್ತದೆ.

ತಂತ್ರಜ್ಞಾನದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ದೇಶ

17 ವರ್ಷದ ಹೆಣ್ಣುಮಕ್ಕಳು ಮಗು ಹೆರುವ ಕಾಲವಿತ್ತು; ರೇಪ್‌ ಸಂತ್ರಸ್ತೆಯ ಗರ್ಭಪಾತ ಬೇಡವೆಂದ ಹೈಕೋರ್ಟ್

Viral News: ಅತ್ಯಾಚಾರಕ್ಕೀಡಾದ ಬಾಲಕಿಯು ಈಗ ಗರ್ಭ ಧರಿಸಿದ್ದು, ಆಕೆಯ ವಯಸ್ಸನ್ನು ಪರಿಗಣಿಸಿ ನ್ಯಾಯಾಲಯವು ವೈದ್ಯಕೀಯ ಗರ್ಭಪಾತಕ್ಕೆ ಅನುಮತಿ ನೀಡಬೇಕು ಎಂದು ಅರ್ಜಿ ಸಲ್ಲಿಸಲಾಗಿದೆ. ಆದರೆ, ಇದಕ್ಕೆ ಗುಜರಾತ್‌ ಹೈಕೋರ್ಟ್‌ ನಿರಾಕರಿಸಿದೆ.

VISTARANEWS.COM


on

Edited by

Gujarat High Court On Termination Of Pregnancy
Koo

ಗಾಂಧಿನಗರ: 17 ವರ್ಷದ ಬಾಲಕಿಯ ಗರ್ಭಪಾತಕ್ಕೆ ಅನುಮತಿ ನೋಡಲು ಗುಜರಾತ್‌ ಹೈಕೋರ್ಟ್‌ ನಿರಾಕರಿಸಿದೆ. ಅತ್ಯಾಚಾರ ಸಂತ್ರಸ್ತೆ ಗರ್ಭ ಧರಿಸಿ ಈಗ ತಿಂಗಳಾಗಿದೆ. ಆಕೆಯ ಗರ್ಭಪಾತಕ್ಕೆ ಕೋರಿ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್‌ ತಳ್ಳಿಹಾಕಿದೆ. ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯವು, “ಮೊದಲೆಲ್ಲ 17 ವರ್ಷದ ಹೆಣ್ಣುಮಕ್ಕಳು ಮಕ್ಕಳನ್ನು ಹೆರುತ್ತಿದ್ದರು, 14-15 ವರ್ಷಕ್ಕೆ ಮದುವೆಯಾಗುತ್ತಿದ್ದರು. ಇದೆಲ್ಲ ತಿಳಿಯಲು (Viral News) ಮನುಸ್ಮೃತಿ ಓದಿ” ಎಂದು ಕೂಡ ಹೇಳಿದೆ.

ಅತ್ಯಾಚಾರ ಸಂತ್ರಸ್ತೆಯ ವಯಸ್ಸನ್ನು ಪರಿಗಣಿಸಿ, ಆಕೆಗೆ ವೈದ್ಯಕೀಯ ಗರ್ಭಪಾತಕ್ಕೆ ಅನುಮತಿ ನೀಡಬೇಕು ಎಂದು ಸಂತ್ರಸ್ತ ಬಾಲಕಿಯ ತಂದೆಯು ಅರ್ಜಿ ಸಲ್ಲಿಸಿದ್ದರು. “ಹಿಂದಿನ ಕಾಲದಲ್ಲಿ 18 ವರ್ಷ ತುಂಬುವ ಮೊದಲೇ ಹೆಣ್ಣುಮಕ್ಕಳು ಮದುವೆಯಾಗಿ, ಮಕ್ಕಳನ್ನು ಹೆರುತ್ತಿದ್ದರು ಎಂಬುದು ಗೊತ್ತಿರಲಿ. ಇದನ್ನು ನೀವು ಓದಿಲ್ಲವೆಂದರೆ, ಮನುಸ್ಮೃತಿ ಓದಿ ತಿಳಿದುಕೊಳ್ಳಿ” ಎಂದು ನ್ಯಾಯಮೂರ್ತಿ ಸಮೀರ್‌ ಜೆ ದಾವೆ ಹೇಳಿದರು.

ಸಂತ್ರಸ್ತೆಯ ತಂದೆ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಸಿಕಂದರ್‌ ಸೈಯದ್‌, “ಆಗಸ್ಟ್‌ 18ರಂದು ಬಾಲಕಿಯು ಮಗು ಹೆರುವ ಸಾಧ್ಯತೆ ಇದೆ. ವೈದ್ಯರು ಡೇಟ್‌ ಕೊಟ್ಟಿದ್ದಾರೆ. ಆಕೆಯ ವಯಸ್ಸನ್ನು ಪರಿಗಣಿಸಿ ಗರ್ಭಪಾತಕ್ಕೆ ಅನುಮತಿ ನೀಡಬೇಕು” ಎಂದು ವಾದ ಮಂಡಿಸಿದರು. ಆದರೆ, ನ್ಯಾಯಾಲಯವು, “ಬಾಲಕಿ ಹಾಗೂ ಮಗು ಆರೋಗ್ಯವಾಗಿದ್ದರೆ ಗರ್ಭಪಾತಕ್ಕೆ ಅನುಮತಿ ನೀಡುವುದಿಲ್ಲ” ಎಂದು ಸ್ಪಷ್ಟಪಡಿಸಿತು. ಹಾಗೆಯೇ, ಬಾಲಕಿಯ ವೈದ್ಯಕೀಯ ಪರೀಕ್ಷೆಗೆ ಆದೇಶಿಸಿತು.

ಇದನ್ನೂ ಓದಿ: Video Viral: ಚಾಮರಾಜನಗರದಲ್ಲಿ ಹಾವುಗಳ ಮಿಲನ; ಗಂಟೆಗೂ ಹೆಚ್ಚು ಸರಸ ಸಲ್ಲಾಪ! ವೈರಲ್‌ ಆಯ್ತು ವಿಡಿಯೊ

ರಾಜಕೋಟ್‌ನಲ್ಲಿರುವ ಸಿವಿಲ್‌ ಆಸ್ಪತ್ರೆಯ ಮೆಡಿಕಲ್‌ ಸೂಪರಿಂಟೆಂಡೆಂಟ್‌ ಅವರು ಬಾಲಕಿ ಹಾಗೂ ಆಕೆಯ ಹೊಟ್ಟೆಯಲ್ಲಿರುವ ಮಗುವಿನ ವೈದ್ಯಕೀಯ ತಪಾಸಣೆಯನ್ನು ತುರ್ತಾಗಿ ಮಾಡಬೇಕು ಎಂದು ಗುಜರಾತ್‌ ಹೈಕೋರ್ಟ್‌ ನಿರ್ದೇಶನ ನೀಡಿದೆ. ವೈದ್ಯಕೀಯ ವರದಿಯನ್ನು ಆಧರಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ ನ್ಯಾಯಾಲಯವು, ಜೂನ್‌ 15ಕ್ಕೆ ವಿಚಾರಣೆ ಮುಂದೂಡಿದೆ.

ಸಹೋದರನಿಂದಲೇ ಗರ್ಭ ಧರಿಸಿದ 15 ವರ್ಷದ ಬಾಲಕಿಯ ಗರ್ಭಪಾತಕ್ಕೆ ಕೆಲ ದಿನಗಳ ಹಿಂದೆ ಕೇರಳ ಹೈಕೋರ್ಟ್‌ ಅನುಮತಿ ನೀಡಿತ್ತು. ಗರ್ಭಪಾತ ಮಾಡಿಸಲು ಅನುಮತಿ ಕೋರಿ ಬಾಲಕಿಯ ತಂದೆ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ್ದ ಏಕ ಸದಸ್ಯ ಪೀಠದ ನ್ಯಾ. ಜಿಯಾದ್‌ ರೆಹಮಾನ್‌ ಅವರು ಗರ್ಭಪಾತ ಮಾಡಿಸಲು ಅನುಮತಿ ನೀಡಿದ್ದರು.

“ಗರ್ಭಪಾತಕ್ಕೆ ಅನುಮತಿ ನೀಡದೆ ಹೋದರೆ ಸಾಮಾಜಿಕ ವ್ಯವಸ್ಥೆ ಹಾಗೂ ಬಾಲಕಿಯ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ, ಗರ್ಭಪಾತಕ್ಕೆ ಅನುಮತಿ ನೀಡಲಾಗಿದೆ” ಎಂದು ಸ್ಪಷ್ಟಪಡಿಸಿತು. ವೈದ್ಯಕೀಯ ಮಂಡಳಿಯು ಗರ್ಭಪಾತದ ಕುರಿತು ವರದಿ ಸಲ್ಲಿಸಿತ್ತು. 15 ವರ್ಷದ ಬಾಲಕಿಗೆ ಗರ್ಭಪಾತಕ್ಕೆ ಅನುಮತಿ ನೀಡದಿದ್ದರೆ ಸಾಮಾಜಿಕ ವ್ಯವಸ್ಥೆ ಹಾಗೂ ಆಕೆಯ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಹಾಗಾಗಿ, ಗರ್ಭಪಾತಕ್ಕೆ ಅನುಮತಿ ಸಿಕ್ಕಿತ್ತು.

Continue Reading

ಕರ್ನಾಟಕ

Nirmala Sitharaman: ಬೆಂಗ್ಳೂರಲ್ಲಿ ಸದ್ದಿಲ್ಲದೆ ನಡೆಯಿತು ವಿತ್ತ ಸಚಿವೆ ನಿರ್ಮಲಾ ಪುತ್ರಿಯ ಮದ್ವೆ! ಆಶೀರ್ವದಿಸಿದ ಅದಮಾರು ಶ್ರೀಗಳು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರ ಪುತ್ರಿ ಪರಕಾಲ ಅವರು ಗುರುವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸರಳವಾಗಿ ವಿವಾಹ ಕಾರ್ಯಕ್ರಮ ನಡೆಸಲಾಗಿದೆ.

VISTARANEWS.COM


on

Edited by

Nirmala Sitharaman daughter wedding
Koo

ಬೆಂಗಳೂರು: ಈಗೆಲ್ಲ ಮದುವೆ ಎನ್ನುವುದೇ ಆಡಂಬರ. ಅದರಲ್ಲೂ ಸಮಾಜದಲ್ಲಿ ಒಂದು ಉನ್ನತ ಸ್ಥಾನದಲ್ಲಿ ಇದ್ದುಬಿಟ್ಟರಂತೂ ಕೇಳುವುದೇ ಬೇಡ. ಕೋಟಿ ಕೋಟಿ ಹಣ ಸುರಿದು ಅದ್ಧೂರಿ ಮದುವೆ ಮಾಡಿಬಿಡುತ್ತಾರೆ. ಆದರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಮಾತ್ರ ಈ ಐಷಾರಾಮಿ ರೂಢಿಯನ್ನು ಮುರಿದು, ತಮ್ಮ ಮಗಳಿಗೆ ಮದುವೆ (Marriage) ಮಾಡಿಸಿದ್ದಾರೆ.

ನಿರ್ಮಲಾ ಸೀತಾರಾಮನ್‌ ಅವರ ಮಗಳು ಪರಕಾಲ ವಂಗಮಾಯಿ ಅವರು ಪ್ರತೀಕ್‌ ಅವರ ಜತೆ ಗುರುವಾರ ವಿವಾಹವಾಗಿದ್ದಾರೆ. ಬೆಂಗಳೂರಿನಲ್ಲಿರುವ ಖಾಸಗಿ ಹೋಟೆಲ್‌ ಒಂದರಲ್ಲಿ ವಿವಾಹ ಕಾರ್ಯಕ್ರಮ ಜರುಗಿದೆ. ಈ ವೇಳೆ ಹಾಜರಿದ್ದ ಉಡುಪಿಯ ಅದಮಾರು ಮಠದ ಶ್ರೀಗಳು ಹಾಜರಿದ್ದು, ವಧು-ವರರಿಗೆ ಆಶೀರ್ವಾದ ಮಾಡಿದ್ದಾರೆ. ಯಾವುದೇ ರಾಜಕಾರಣಿಯನ್ನು ಮದುವೆಗೆ ಆಮಂತ್ರಿಸದೆ ಕೆಲವೇ ಕೆಲವು ಬಂಧುಗಳು ಮತ್ತು ಆಪ್ತರ ಸಮ್ಮುಖದಲ್ಲಿ ವಿವಾಹ ಕಾರ್ಯಕ್ರಮ ನಡೆಸಲಾಗಿದೆ ಎಂದು ವರದಿಯಿದೆ.

ಇದನ್ನೂ ಓದಿ: Viral Video : ಗಡಿ ದಾಟಿ ಭಾರತಕ್ಕೆ ನುಗ್ಗಿದ ಬಾಂಗ್ಲಾ ಯೋಧರು! ಅಟ್ಟಾಟಿಸಿಕೊಂಡು ಒದ್ದೋಡಿಸಿದ ಹಳ್ಳಿಗರು
ಬ್ರಾಹ್ಮಣ ಕುಟುಂಬದವರಾಗಿರುವ ನಿರ್ಮಲಾ ಅವರು ಬ್ರಾಹ್ಮಣ ಸಂಪ್ರದಾಯದಂತೆಯೇ ಮಗಳ ಮದುವೆ ನೆರವೇರಿಸಿದ್ದಾರೆ. ಉಡುಪಿಯ ಅದಮಾರು ಮಠದ ಆಶೀರ್ವಾದ ಮತ್ತು ಸೂಚನೆಗಳಂತೆ ಮದುವೆ ನಡೆಸಲಾಗಿದೆ.

ಪರಕಾಲ ಅವರು ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಇಂಗ್ಲಿಷ್ ವಿಭಾಗದಿಂದ ಸ್ನಾತಕೋತ್ತರ ಪದವಿ ಮತ್ತು ನಾರ್ತ್ ವೆಸ್ಟರ್ನ್ ವಿಶ್ವವಿದ್ಯಾಲಯದ ಮೆಡಿಲ್ ಸ್ಕೂಲ್ ಆಫ್ ಜರ್ನಲಿಸಂನಿಂದ ಪತ್ರಿಕೋದ್ಯಮದಲ್ಲಿ ಎಂಎಸ್ ಪದವಿ ಪಡೆದಿದ್ದಾರೆ. ಸದ್ಯ ಮಿಂಟ್ ಲೌಂಜ್‌ನಲ್ಲಿ ವಿಶಿಷ್ಟ ಬರಹಗಾರರಾಗಿದ್ದಾರೆ. ಸಿಂಗಾಪುರ್ ಮ್ಯಾನೇಜ್‌ಮೆಂಟ್ ಸ್ಕೂಲ್‌ನಿಂದ ಪದವಿ ಪಡೆದಿರುವ ನಿರ್ಮಲಾ ಅವರ ಅಳಿಯ ಪ್ರತೀಕ್‌ ದೋಷಿ ಪ್ರಧಾನ ಮಂತ್ರಿ ಕಚೇರಿಯಲ್ಲಿ ವಿಶೇಷ ಕರ್ತವ್ಯದ ಅಧಿಕಾರಿಯಾಗಿದ್ದಾರೆ.

Continue Reading
Advertisement
Liquor Consumption of poor man
ಕರ್ನಾಟಕ11 mins ago

Liquor Consumption: ಬಡವನ ಕುಡಿತದ ವಾರ್ಷಿಕ ಲೆಕ್ಕಾಚಾರ ಇಲ್ಲಿದೆ! ದಿನಕ್ಕೆ ಆತನ ಸರಾಸರಿ ಖರ್ಚೆಷ್ಟು?

Anganawadi worker
ಕರ್ನಾಟಕ12 mins ago

Anganawadi worker: ತಂಗಿಗೆ ನನ್ನ ಕೆಲಸ ಕೊಡಿ ಎಂದು ತನ್ನ ಬದುಕಿಗೆ ದುರಂತ ಅಂತ್ಯ ಹಾಡಿದ ಅಂಗನವಾಡಿ ಕಾರ್ಯಕರ್ತೆ!

Apsara Murder In Hyderabad
ಕ್ರೈಂ14 mins ago

Apsara Murder: ಪತ್ನಿ ಇದ್ದರೂ ಅರ್ಚಕನಿಗೆ ಬೇಕು ಲವ್ವರ್;‌ ಆಕೆ ಮದುವೆಯಾಗು ಎಂದಿದ್ದಕ್ಕೆ ಆದ ಕಿಲ್ಲರ್

Siddaramaiah as a conductor imaginary photo
ಕರ್ನಾಟಕ23 mins ago

Congress Guarantee: ಪಾರ್ಟ್‌ ಟೈಂ ಬಸ್ ಕಂಡಕ್ಟರ್‌ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ!

Actress Nayanthara
South Cinema35 mins ago

Actress Nayanthara: ಅವಳಿ ಮಕ್ಕಳ ಜತೆ ಕ್ಯೂಟ್‌ ಆಗಿ ಫೋಟೊಶೂಟ್‌ ಮಾಡಿಸಿಕೊಂಡ ನಯನತಾರಾ!

rajeev sen and Charu Asopa divorce
ಕಿರುತೆರೆ36 mins ago

Celebrity Divorce: ಸಂಸಾರದಲ್ಲಿ ಬಿರುಕು, ಪತಿಯಿಂದ ದೂರವಾದ ಕಿರುತೆರೆ ನಟಿ

World Cup schedule
ಕ್ರಿಕೆಟ್41 mins ago

ICC World Cup 2023: ಏಕದಿನ ವಿಶ್ವಕಪ್‌ ವೇಳಾಪಟ್ಟಿ ಬಿಡುಗಡೆಗೆ ಮುಹೂರ್ತ ನಿಗದಿ

bhola shankar movie set
South Cinema43 mins ago

Chiranjeevi: ಅದ್ಧೂರಿಯಾಗಿದೆ ಭೋಲಾ ಶಂಕರ್‌ ಸೆಟ್‌; ಮತ್ತೊಮ್ಮೆ ಕ್ಯಾಬ್‌ ಡ್ರೈವರ್ ಪಾತ್ರದಲ್ಲಿ ಚಿರು

Darbar Movie Review
South Cinema47 mins ago

Darbar Movie Review: ಇದು ರಾಜಕಾರಣದ ʻದರ್ಬಾರ್‌ʼ, ಮತದಾರರ ಕಾರುಬಾರು!

western ghats in rain
ಪ್ರಮುಖ ಸುದ್ದಿ59 mins ago

Monsoon Travel: ಮಲೆನಾಡಿನ ಮಳೆಹಾಡಿನ ಹೊಸತನ! ರಾಜ್ಯದ ಈ ಟಾಪ್‌ 5 ತಾಣಗಳಿಗೆ ಮಳೆಯಲ್ಲೊಮ್ಮೆ ಭೇಟಿ ಕೊಡಿ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ13 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Cancellation of tenders for 108 ambulances and Dinesh Gundu rao
ಆರೋಗ್ಯ5 hours ago

Dinesh Gundu Rao: ಬಿಜೆಪಿ ಅವಧಿಯ 108 ಆಂಬ್ಯುಲೆನ್ಸ್‌, ಡಯಾಲಿಸಿಸ್‌ ಟೆಂಡರ್‌ ರದ್ದು; ಆರೋಗ್ಯ ಇಲಾಖೆಯಲ್ಲಿ ಮೇಜರ್‌ ಸರ್ಜರಿ

Meghalaya Villagers Chase Bangladesh soldiers
ದೇಶ6 hours ago

Viral Video : ಗಡಿ ದಾಟಿ ಭಾರತಕ್ಕೆ ನುಗ್ಗಿದ ಬಾಂಗ್ಲಾ ಯೋಧರು! ಅಟ್ಟಾಟಿಸಿಕೊಂಡು ಒದ್ದೋಡಿಸಿದ ಹಳ್ಳಿಗರು

snake mate in chamarajnagar 2
ಕರ್ನಾಟಕ6 hours ago

Video Viral: ಚಾಮರಾಜನಗರದಲ್ಲಿ ಹಾವುಗಳ ಮಿಲನ; ಗಂಟೆಗೂ ಹೆಚ್ಚು ಸರಸ ಸಲ್ಲಾಪ! ವೈರಲ್‌ ಆಯ್ತು ವಿಡಿಯೊ

Rain in mangalore
ಉಡುಪಿ7 hours ago

Rain News: ಬಿಪರ್‌ಜಾಯ್‌ ಸೈಕ್ಲೋನ್ ಎಫೆಕ್ಟ್‌; ಮಂಗಳೂರಲ್ಲಿ ಚಿಟಪಟ ಮಳೆ

Rain in koppal
ಉಡುಪಿ22 hours ago

Weather Report: ಕರಾವಳಿಯಲ್ಲಿ ಗುಡುಗಲಿರುವ ಮಳೆ; ಮಲೆನಾಡು, ಒಳನಾಡಲ್ಲಿ ಹೇಗಿರಲಿದೆ ಪ್ರಭಾವಳಿ

youths rescued in Kaveri river
ಕರ್ನಾಟಕ23 hours ago

Video Viral: ತಲಕಾಡಿನ ಕಾವೇರಿ ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವಕರ ರಕ್ಷಣೆ!

Elephant attack in muttunga wildlife sanctuary
ಕರ್ನಾಟಕ1 day ago

Viral Video: ವನ್ಯಧಾಮದಲ್ಲಿ ಮೂತ್ರಕ್ಕೆಂದು ಕಾಡಿಗೆ ಹೋದ; ಆನೆ ದಾಳಿಗೆ ಹೆದರಿ ಪ್ಯಾಂಟ್‌ ಹಿಡಿದು ಓಡೋಡಿ ಬಂದ!

abhishek ambareesh wedding Reception
ಕರ್ನಾಟಕ2 days ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

N Chaluvarayaswamy about Congress guarantee
ಕರ್ನಾಟಕ2 days ago

Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!

horoscope today love and horoscope
ಪ್ರಮುಖ ಸುದ್ದಿ3 days ago

Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!

ಟ್ರೆಂಡಿಂಗ್‌

error: Content is protected !!