Coronavirus | ಭಾರತದಲ್ಲಿ ಹೊಸ ರೂಪಾಂತರಿಯ ಅಲೆ ಬಾರದು: ವೈರಾಣುತಜ್ಞೆ ಅಭಯ - Vistara News

ಕೋವಿಡ್

Coronavirus | ಭಾರತದಲ್ಲಿ ಹೊಸ ರೂಪಾಂತರಿಯ ಅಲೆ ಬಾರದು: ವೈರಾಣುತಜ್ಞೆ ಅಭಯ

ಕೋವಿಡ್‌ ವೈರಸ್‌ನ ಹೊಸ ರೂಪಾಂತರಿಯಿಂದಾಗಿ ಭಾರತದಲ್ಲಿ ಯಾವುದೇ ಕೋವಿಡ್‌ ಅಲೆಯ ಆತಂಕ ಸದ್ಯಕ್ಕಿಲ್ಲ ಎಂದು ದೇಶದ ಖ್ಯಾತ ವೈರಾಣುತಜ್ಞೆ ಡಾ.ಗಗನ್‌ದೀಪ್‌ ಕಾಂಗ್‌ ಹೇಳಿದ್ದಾರೆ.

VISTARANEWS.COM


on

omicron variant gagandeep kang
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಕೋವಿಡ್‌ ವೈರಸ್‌ನ ಹೊಸ ರೂಪಾಂತರಿಯಿಂದಾಗಿ ಭಾರತದಲ್ಲಿ ಯಾವುದೇ ಕೋವಿಡ್‌ ಅಲೆಯ ಆತಂಕ ಕಂಡುಬರುತ್ತಿಲ್ಲ ಎಂದು ದೇಶದ ಖ್ಯಾತ ವೈರಾಣುತಜ್ಞೆ ಡಾ.ಗಗನ್‌ದೀಪ್‌ ಕಾಂಗ್‌ ಹೇಳಿದ್ದಾರೆ.

ಚೀನಾ ಹಾಗೂ ಇನ್ನಿತರ ಕೆಲವು ದೇಶಗಳಲ್ಲಿ ಹೊಸ ರೂಪಾಂತರಿಯಿಂದಾಗಿ ಹೊಸ ಅಲೆ ಉಂಟಾಗಿರುವುದು ನಿಜ. ಆದರೆ ಭಾರತದಲ್ಲಿ ಒಮಿಕ್ರಾನ್‌ XBB ಹಾಗೂ BF.7 ರೂಪಾಂತರಿಗಳು ಹಲವು ತಿಂಗಳುಗಳಿಂದ ಇವೆ. ಭಾರತದಲ್ಲಿ ಇವುಗಳ ಹಲವು ಪ್ರಕರಣಗಳಿದ್ದು, ಯಾವುದೇ ದಿಡೀರ್‌ ಅಲೆಗೆ ಎಡೆಮಾಡಿಕೊಟ್ಟಿಲ್ಲ. ಅತೀ ಸಾಂಕ್ರಾಮಿಕವಾದ ಯಾವುದೇ ರೂಪಾಂತರಿ ಇಲ್ಲಿ ಇಲ್ಲವಾದ್ದರಿಂದ, ಯಾವುದೇ ಅಲೆಯೇರಿಕೆಯ ಆತಂಕವಿಲ್ಲ ಎಂದು ಕಾಂಗ್‌ ಹೇಳಿದ್ದಾರೆ.

ಗಗನ್‌ದೀಪ್‌ ಕಾಂಗ್‌ ಅವರು ವೆಲ್ಲೂರಿನ ಕ್ರಿಶ್ಚಿಯನ್‌ ಮೆಡಿಕಲ್‌ ಕಾಲೇಜಿನ ಗ್ಯಾಸ್ಟ್ರೋಎಂಟಸ್ಟೈನಲ್‌ ವಿಜ್ಞಾನ ವಿಭಾಗದ ಪ್ರಾಧ್ಯಾಪಕಿ. ಇತರ ದೇಶಗಳಲ್ಲಿ ಹೊಸ ಅಲೆಗೆ ಕಾರಣವಾಗಿರುವ ಒಮಿಕ್ರಾನ್‌ XBB ಹಾಗೂ BF.7 ರೂಪಾಂತರಿಗಳು ಈಗಾಗಲೇ ಚಿತ್ರಿಸಲ್ಪಟ್ಟಂತೆ ʼರಾಕ್ಷಸʼ ರೂಪಾಂತರಿಗಳೇನಲ್ಲ. ಒಮಿಕ್ರಾನ್‌ನ ಇತರ ರೂಪಾಂತರಿಗಳಂತೆ ಅವು ಕೂಡ ಹರಡುವಂಥವು, ಆದರೆ ಡೆಲ್ಟಾದಂತೆ ಮಾರಕ ಅಸ್ವಸ್ಥತೆಗೆ ಕಾರಣವಾಗುವಂಥದಲ್ಲ ಎಂದವರು ಭರವಸೆ ನೀಡಿದ್ದಾರೆ.

ಇದನ್ನೂ ಓದಿ | coronavirus | ಒಮಿಕ್ರಾನ್ ಬಿಎಫ್.7ನಿಂದ ಭಾರತೀಯರಿಗೆ ಗಂಭೀರ ಅಪಾಯ ಇಲ್ಲ ಎಂದ ತಜ್ಞರು

ಈ ಬಗ್ಗೆ ಅವರು ಸರಣಿ ಸ್ವೀಟ್‌ಗಳ ಮೂಲಕ ಮಾಹಿತಿ ನೀಡಿದ್ದಾರೆ.

ಭಾರತಕ್ಕೆ ಆತಂಕವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಭಾರತದಲ್ಲಿ ಹೆಚ್ಚಿನ ಜನತೆ ಲಸಿಕೆ ಹಾಕಿಸಿಕೊಂಡಿದ್ದಾರೆ. ಮತ್ತು ಹೆಚ್ಚಿನ ಮಂದಿ 90%) ಈಗಾಗಲೇ ಕೋವಿಡ್‌ ಸೋಂಕಿಗೊಳಗಾಗಿ ಪ್ರತಿಕಾಯಗಳನ್ನು ಹೊಂದಿದ್ದಾರೆ. ಹೆಚ್ಚಿನವರು ಒಮಿಕ್ರಾನ್‌ ಅಲೆಯಲ್ಲಿ ಸೋಂಕಿತರಾಗಿದ್ದರಿಂದ ನಮ್ಮಲ್ಲಿ ಹೈಬ್ರಿಡ್‌ ಇಮ್ಯುನಿಟಿ ಸಾಧ್ಯವಾಗಿದೆ ಎಂದಿರುವ ಅವರು, ಏರ್‌ಪೋರ್ಟ್‌ಗಳಲ್ಲಿ ತಪಾಸನೆ ಹಾಗೂ ಪರೀಕ್ಷೆ ಹೆಚ್ಚಿಸಿರುವ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ.

ಇದನ್ನೂ ಓದಿ | Fact Check | ಕೋವಿಡ್ ಒಮಿಕ್ರಾನ್ ಎಕ್ಸ್‌ಬಿಬಿ ವೇರಿಯಂಟ್ ಇದೆಯೇ? ಆರೋಗ್ಯ ಇಲಾಖೆ ಹೇಳಿದ್ದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Mobile Side Effect: ಅತಿಯಾದ ಮೊಬೈಲ್ ಬಳಕೆ; ಮಕ್ಕಳು ಕಿವುಡರಾಗುತ್ತಿದ್ದಾರೆ!

ಮೊಬೈಲ್ ಫೋನ್‌ಗಳು, ಟ್ಯಾಬ್‌ಗಳು, ಗೇಮಿಂಗ್ ಸಾಧನಗಳು ಮತ್ತು ಪರದೆಯ ಬಳಕೆಯಂತಹ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳ ಬಳಕೆಯಿಂದಾಗಿ ಮಕ್ಕಳಲ್ಲಿ ವಿಳಂಬ ಚಟುವಟಿಕೆಗಳು ಮಾತ್ರವಲ್ಲದೇ 15 ರಿಂದ 30 ವರ್ಷದೊಳಗಿನವರಲ್ಲಿ ಶ್ರವಣ ದೋಷ ಹೆಚ್ಚಾಗಿ ಕಂಡು ಬರುತ್ತಿದೆ ಎಂಬುದು ಸಂಶೋಧನೆಯಿಂದ ತಿಳಿದು ಬಂದಿದೆ. ಈ ಕುರಿತು ನಡೆದ ಸಂಶೋಧನೆಯ ಮಾಹಿತಿ (Mobile Side Effect)ಇಲ್ಲಿದೆ.

VISTARANEWS.COM


on

By

Mobile Side Effect
Koo

ಕೋವಿಡ್ (covid) ಬಳಿಕ ಕಳೆದ ಮೂರು ನಾಲ್ಕು ವರ್ಷಗಳಿಂದ ಮಕ್ಕಳು (Mobile Side Effect) ತಡವಾಗಿ ಮಾತನಾಡುವ ಪ್ರಕರಣಗಳು, ಸೀಮಿತ ಭಾಷೆಯೊಂದಿಗೆ ಮತ್ತು ಸ್ವಲೀನತೆಯ (autism) ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದೆ. ಮೊಬೈಲ್ ಫೋನ್ ಗಳ (phone) ಸುದೀರ್ಘ ಬಳಕೆಯಿಂದ ಶ್ರವಣ ದೋಷ (Hearing Disorder) ಉಂಟಾಗುತ್ತದೆ ಎಂದು ಚಂಡೀಗಢ (Chandigarh) ಪಿಜಿಐನ (PGI) ಓಟೋಲರಿಂಗೋಲಜಿ ವಿಭಾಗದ ಪ್ರೊ. ಸಂಜಯ್ ಮುಂಜಾಲ್ ತಿಳಿಸಿದ್ದಾರೆ.


ಪಿಜಿಐನ ಓಟೋಲರಿಂಗೋಲಜಿ (ಇಎನ್‌ಟಿ) ವಿಭಾಗವು ಐಸಿಎಂಆರ್‌ಗೆ ಸಲ್ಲಿಸಿದ ಹೊಸ ಸಂಶೋಧನೆ ವರದಿಯಲ್ಲಿ ಮೊಬೈಲ್ ಫೋನ್‌ಗಳು, ಟ್ಯಾಬ್‌ಗಳು, ಗೇಮಿಂಗ್ ಸಾಧನಗಳು ಮತ್ತು ಪರದೆಯ ಬಳಕೆಯಂತಹ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳ ಬಳಕೆಯಿಂದಾಗಿ ಮಕ್ಕಳಲ್ಲಿ ವಿಳಂಬ ಚಟುವಟಿಕೆಗಳು ಮಾತ್ರವಲ್ಲದೇ 15 ರಿಂದ 30 ವರ್ಷದೊಳಗಿನವರಲ್ಲಿ ಶ್ರವಣ ದೋಷ ಹೆಚ್ಚಾಗಿ ಕಂಡು ಬರುತ್ತಿದೆ ಎಂದು ಹೇಳಿದೆ. ಕೋವಿಡ್ ಅನಂತರ ಮಕ್ಕಳಲ್ಲಿ ಏಕಮುಖ ಸಂವಹನ ಹೆಚ್ಚಾಗಿದೆ. ಮೊಬೈಲ್ ನಲ್ಲಿ ಆಟಗಳನ್ನು ಆಡುವುದು, ಫೋನ್‌ ಪರದೆಯನ್ನು ವೀಕ್ಷಿಸುವುದು, ಟ್ಯಾಬ್‌ಗಳಲ್ಲಿ ಏಕಮುಖ ಸಂವಹನ ನಡೆಸುವುದು ಅತ್ಯಧಿಕವಾಗಿದೆ. ಮಾತು ದ್ವಿಮುಖವಾಗಿರುತ್ತದೆ. ಇದನ್ನು ಮಕ್ಕಳಲ್ಲಿ ಅಭಿವೃದ್ಧಿಪಡಿಸುತ್ತಿಲ್ಲ ಎಂದು ತಿಳಿಸಿದರು.

ಮಕ್ಕಳಿಗೆ ಪ್ರಾರಂಭದ ಎರಡು ವರ್ಷಗಳಲ್ಲಿ ಸಾಕಷ್ಟು ಸಾಮಾಜಿಕ ಸಂವಹನದ ಅವಶ್ಯಕವಿರುತ್ತದೆ. ಆದರೆ ಈ ಸಂದರ್ಭದಲ್ಲಿ ಅವರು ತಮ್ಮದೇ ಆದ ಜಗತ್ತಿನಲ್ಲಿ ವಾಸಿಸುವುದು, ಕೇವಲ ನೋಡುವುದು ಮತ್ತು ಆಲಿಸುವುದನ್ನು ಮಾಡುತ್ತಾರೆ. ಆದರೆ ಗ್ಯಾಜೆಟ್ ಗಳು ಮೊದಲ ಎರಡು ವರ್ಷಗಳಲ್ಲಿ ಅಗತ್ಯವಿರುವ ಸಾಕಷ್ಟು ಪ್ರಚೋದನೆಯನ್ನು ಒದಗಿಸುವುದಿಲ್ಲ. ಅಂತಹ ಚಿಕ್ಕ ಮಕ್ಕಳು ಗಂಟೆಗಟ್ಟಲೆ ಗ್ಯಾಜೆಟ್‌ಗಳನ್ನು ಬಳಸುವುದರಿಂದ ಅದು ಅವರ ಮನಸ್ಸಿನ ಮೇಲೆ ಪರಿಣಾಮ ಬೀರುತ್ತಿದೆ ಎಂದರು.

ಕಳೆದ ಒಂದು ತಿಂಗಳಲ್ಲಿ ಆಟಿಸಂ ನ ಅನೇಕ ಪ್ರಕರಣಗಳು ಕಂಡು ಬರುತ್ತಿದೆ. ಮಕ್ಕಳ ಮತ್ತು ಮನೋವೈದ್ಯಕೀಯ ವಿಭಾಗಗಳಿಂದ ಪ್ರಾಥಮಿಕ ರೋಗನಿರ್ಣಯದ ಅನಂತರ ಮಕ್ಕಳನ್ನು ಆಟಿಸಂ ನ ವಿಭಾಗಕ್ಕೆ ಕಳುಹಿಸಲಾಗುತ್ತಿದೆ ಎನ್ನುತ್ತಾರೆ ಡಾ. ಮುಂಜಾಲ್ ಹೇಳಿದ್ದಾರೆ.


ಆಟಿಸಂನ ಚಿಹ್ನೆಗಳು ಹೆಚ್ಚುತ್ತಿರುವುದು ಯಾಕೆ?


ಪೋಷಕರು ಆಟಿಸಂನ ಚಿಹ್ನೆಗಳು ಮತ್ತು ರೋಗಲಕ್ಷಣಗಳ ಬಗ್ಗೆ ತಿಳಿದಿರಬೇಕು. ಮಕ್ಕಳಿಗೆ ಒಂದರಿಂದ ಆರು ವರ್ಷಗಳ ನಡುವಿನ ವಯಸ್ಸು ಅತ್ಯಂತ ಮುಖ್ಯವಾಗಿದೆ.‌ ಈ ವಯಸ್ಸಿನ ಮಕ್ಕಳು ಸಂವಾದಿಸಲು ಹೆಚ್ಚು ಸನ್ನೆ ಮತ್ತು ಚಿಹ್ನೆಗಳನ್ನು ಬಳಸುತ್ತಿದ್ದಾರೆ. ಅವರ ಭಾವನೆಗಳನ್ನು ವ್ಯಕ್ತಪಡಿಸಲು ಮೂಲಭೂತ ಅಗತ್ಯಗಳನ್ನು ಸನ್ನೆಗಳ ಮೂಲಕ ಪ್ರಯತ್ನಿಸುತ್ತಾರೆ. ಇವರಲ್ಲಿ ಭಾಷೆಯ ಬಳಕೆಯ ಕೊರತೆಯಿದೆ ಎಂದರು.

ಕಡಿಮೆ ಮಾನವ ಸಂವಹನ, ಅವಿಭಕ್ತ ಕುಟುಂಬ ವ್ಯವಸ್ಥೆಯ ವಿಘಟನೆ ಹೀಗೆ ಈಗಿನ ಸಮಸ್ಯೆಗಳು ಹಲವಾರು ಮಕ್ಕಳ ಸರಿಯಾದ ಬೆಳವಣಿಗೆಗೆ ಅಡ್ಡಿಯಾಗುತ್ತಿದೆ. ಮಕ್ಕಳು ಯಾವುದೇ ಗ್ಯಾಜೆಟ್‌ಗೆ ಒಂದು ಗಂಟೆಗಿಂತ ಹೆಚ್ಚು ಅಥವಾ ಕಡಿಮೆ ಕಾಲ ಒಡ್ಡಿಕೊಳ್ಳಬಾರದು ಎಂದು ನಮಗೆ ತಿಳಿದಿದೆ ಆದರೂ ಮಕ್ಕಳ ಮೇಲೆ ಅವುಗಳ ಪರಿಣಾಮವನ್ನು ಉಂಟು ಮಾಡುವುದನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ವಾಕ್ ಪ್ರಚೋದನೆ ಸೇರಿದಂತೆ ಹಲವಾರು ಚಿಕಿತ್ಸೆಗಳನ್ನು ನೀಡುತ್ತೇವೆ. ಇದಕ್ಕಾಗಿ ಪೂರ್ಣ ಪ್ರಮಾಣದ ಅಧ್ಯಯನವನ್ನು ಮಾಡಲು ಯೋಜಿಸುತ್ತಿದ್ದೇವೆ. ಈ ಕುರಿತು ಯೋಜನೆಯನ್ನು ಐಸಿಎಂಆರ್ ಗೆ ಸಲ್ಲಿಸಿದ್ದೇವೆ ಎಂದರು.

ಯಾರಲ್ಲಿ ಹೆಚ್ಚು?

ಇಲಾಖೆಯಲ್ಲಿ ಪ್ರತಿದಿನ ಎರಡು ಅಥವಾ ಮೂರು ಶ್ರವಣ ದೋಷದ ಪ್ರಕರಣಗಳು ಕಂಡುಬರುತ್ತಿವೆ. ಇವರಲ್ಲ 15ರಿಂದ 30 ವರ್ಷ ವಯಸ್ಸಿನವರು ಹೆಚ್ಚಾಗುತ್ತಿದ್ದಾರೆ. ಮೊಬೈಲ್ ಫೋನ್‌ಗಳಲ್ಲಿ ಹೆಚ್ಚು ಗಂಟೆಗಳ ಕಾಲ ಮಾತನಾಡುವುದು, ಹೆಡ್‌ಫೋನ್‌ಗಳ ಅತಿಯಾದ ಬಳಕೆ ಇದಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ಹೇಳಿದರು.
ಎರಡು ಗಂಟೆಗಳಿಗಿಂತ ಹೆಚ್ಚು ಕಾಲ ಮೊಬೈಲ್ ಫೋನ್ ಗಳನ್ನು ಬಳಕೆ ಮಾಡುವುದರಿಂದ ಶ್ರವಣದೋಷವು ಹೆಚ್ಚಾಗುತ್ತಿದೆ. ಈಗಾಗಲೇ ಸಾಕಷ್ಟು ಹಾನಿಯಾಗಿದೆ. ಶ್ರವಣ ಸಾಧನಗಳ ಮೇಲೆ ಅತಿಯಾದ ಅವಲಂಬನೆಯನ್ನು ತಡೆಯಬೇಕು ಎಂದು ಡಾ. ಮುಂಜಾಲ್ ವಿವರಿಸುತ್ತಾರೆ.


ಶ್ರವಣ ದೋಷಕ್ಕೆ ಕಾರಣ

ಹೆಡ್‌ಫೋನ್‌ಗಳ ಅತಿಯಾದ ದೈನಂದಿನ ಬಳಕೆಯು ಶ್ರವಣ ನಷ್ಟದ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಏಕೆಂದರೆ ಇದು ನೇರವಾದ ಧ್ವನಿಯಾಗಿದೆ ಮತ್ತು ನಮ್ಮ ಕಿವಿಗಳು 85 ಡೆಸಿಬಲ್‌ಗಳ (dB) ವರೆಗಿನ ಶಬ್ದಗಳನ್ನು ಮಾತ್ರ ಕೇಳಲು ವಿನ್ಯಾಸಗೊಳಿಸಲಾಗಿದೆ, ಆದರೆ ಇಯರ್‌ಫೋನ್‌ಗಳು ಅಥವಾ ಹೆಡ್‌ಫೋನ್‌ಗಳು ಇದಕ್ಕಿಂತ ಹೆಚ್ಚಿನ ಶಬ್ದಗಳನ್ನು ಹೊರಸೂಸುತ್ತವೆ.

ಇದನ್ನೂ ಓದಿ; Tips For Healthy Skin: ಕಡಲೆಹಿಟ್ಟೆಂಬ ಶತಮಾನಗಳ ಹಳೆಯ ಸೌಂದರ್ಯವರ್ಧಕ!

ಏನು ಮಾಡಬಹುದು ?

ಡೆಸಿಬಲ್ ಹೆಚ್ಚಾದರೆ, ಬಳಕೆಯನ್ನು ಕಡಿಮೆ ಮಾಡಬೇಕು. ಅಂದರೆ 90 ಡಿಬಿ ನಾಲ್ಕು ಗಂಟೆಗಳಿಗಿಂತ ಹೆಚ್ಚಿರಬಾರದು. ಎರಡು ಗಂಟೆಗೆ 95 ಡಿಬಿ ಮತ್ತು ಒಂದು ಗಂಟೆಗೆ 100 ಡಿಬಿ ಇರಬಾರದು. ಈಗಿನ ಪೀಳಿಗೆಯು ಚಿಕ್ಕ ವಯಸ್ಸಿನಿಂದಲೇ ಗ್ಯಾಜೆಟ್‌ಗಳಿಗೆ ಒಡ್ಡಿಕೊಳ್ಳುವುದರಿಂದ ಹಾನಿಯು ಆರಂಭಿಕ ಹಂತದಲ್ಲಿ ಕಂಡುಬರುತ್ತದೆ ಮತ್ತು ಮೊದಲ ಲಕ್ಷಣವೆಂದರೆ ಕಿವಿ ಅಥವಾ ಟಿನ್ನಿಟಸ್‌ನಲ್ಲಿ ರಿಂಗಿಂಗ್ ಶಬ್ದ. ದೀರ್ಘ ಕರೆಗಳನ್ನು ತಪ್ಪಿಸಿ, ಸ್ಪೀಕರ್ ಫೋನ್ ಬಳಸಿ. ದೀರ್ಘಾವಧಿಯವರೆಗೆ ಜೋರಾಗಿ ಧ್ವನಿಯಲ್ಲಿ ಸಂಗೀತವನ್ನು ಕೇಳಬೇಡಿ ಮತ್ತು ದೀರ್ಘಕಾಲದವರೆಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಿ, ಯಾವುದೇ ರೋಗಲಕ್ಷಣದ ಸಂದರ್ಭದಲ್ಲಿ ವೈದ್ಯರನ್ನು ಸಂಪರ್ಕಿಸಿ ಎನ್ನುತ್ತಾರೆ ಡಾ. ಮುಂಜಾಲ್ ತಿಳಿಸಿದ್ದಾರೆ.

Continue Reading

ದೇಶ

CoWIN Certificates: ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಔಟ್‌; ಕೇಂದ್ರ ಹೇಳೋದೇನು?

CoWIN Certificates: ಕೊರೋನಾ ಲಸಿಕೆ ಪ್ರಮಾಣಪತ್ರದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ತೆಗೆದುಹಾಕಿದೆ. ಈ ಹಿಂದೆ ಈ ಪ್ರಮಾಣಪತ್ರಗಳಲ್ಲಿ ಪ್ರಧಾನಿ ಮೋದಿ ಭಾವಚಿತ್ರದ ಜೊತೆಗೆ ಭಾರತ ಒಟ್ಟಾಗಿ ಕೋವಿಡ್‌-19ನನ್ನು ಸೋಲಿಸಲಿದೆ ಎಂಬ ಘೋಷವಾಕ್ಯ ಕಾಣಬಹುದಾಗಿತ್ತು. ಇದೀಗ ಅವರ ಭಾವಚಿತ್ರವನ್ನು ತೆಗೆದು ಹಾಕುವ ಮೂಲಕ ಆರೋಗ್ಯ ಇಲಾಖೆ ಮಹತ್ವದ ಬದಲಾವಣೆ ಮಾಡಿತ್ತು.

VISTARANEWS.COM


on

CoWin Certificates
Koo

ನವದೆಹಲಿ: ಕೋವಿಡ್‌-19(Covid-19) ಲಸಿಕೆಗೆ ನೀಡಲಾಗಿದ್ದ ಕೋವಿನ್‌ ಪ್ರಮಾಣಪತ್ರ(CoWIN Certificates)ಗಳಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ(Union Health Ministry) ಮಹತ್ವದ ಬದಲಾವಣೆಯೊಂದನ್ನು ಮಾಡಿದ್ದು, ಪ್ರಮಾಣಪತ್ರದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಭಾವಚಿತ್ರವನ್ನು ತೆಗೆದುಹಾಕಿದೆ. ಈ ಹಿಂದೆ ಈ ಪ್ರಮಾಣಪತ್ರಗಳಲ್ಲಿ ಪ್ರಧಾನಿ ಮೋದಿ ಭಾವಚಿತ್ರದ ಜೊತೆಗೆ ಭಾರತ ಒಟ್ಟಾಗಿ ಕೋವಿಡ್‌-19ನನ್ನು ಸೋಲಿಸಲಿದೆ ಎಂಬ ಘೋಷವಾಕ್ಯ ಕಾಣಬಹುದಾಗಿತ್ತು. ಇದೀಗ ಅವರ ಭಾವಚಿತ್ರವನ್ನು ತೆಗೆದು ಹಾಕುವ ಮೂಲಕ ಆರೋಗ್ಯ ಇಲಾಖೆ ಮಹತ್ವದ ಬದಲಾವಣೆ ಮಾಡಿತ್ತು.

ಈ ಮಹತ್ವದ ಬದಲಾವಣೆ ಬಗ್ಗೆ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಬಹಳ ಚರ್ಚೆ ಆಗುತ್ತಿದ್ದು, ಕೋವಿನ್‌ ಸರ್ಟಿಫಿಕೇಟ್‌ನಲ್ಲಿ ಪ್ರಧಾನಿ ಮೋದಿಯ ಭಾವಚಿತ್ರ ಮಾಯವಾಗಿದೆ. ಬೇಕಿದ್ದರೆ ಡೌನ್‌ಲೋಡ್‌ ಮಾಡಿ ಚೆಕ್‌ ಮಾಡಿ ಎಂದು ಎಕ್ಸ್‌ ಬಳಕೆದಾರ ಸಂದೀಪ್‌ ಹೇಳಿದ್ದಾರೆ. ಇನ್ನೊಬ್ಬ ಬಳಕೆದಾದ ಇರ್ಫಾನ್‌ ಅಲಿ ಟ್ವೀಟ್‌ ಮಾಡಿದ್ದು, ಹೌದು ಪ್ರಧಾನಿ ಮೋದಿ ಫೋಟೋ ಪ್ರಮಾಣ ಪತ್ರದಲ್ಲಿ ಇಲ್ಲ. ಅದರ ಬದಲು ಅಲ್ಲಿ ಕ್ಯೂ ಆರ್‌ ಕೋಡನ್ನು ಕಾಣಬಹುದಾಗಿದೆ. ಇನ್ನು ಈ ಹಿಂದೆಯೇ ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್‌, ಮಣಿಪುರ ಮತ್ತು ಗೋವಾದಲ್ಲಿ ಪ್ರಧಾನಿ ಮೋದಿಯ ಭಾವಚಿತ್ರವನ್ನು ಪ್ರಮಾಣಪತ್ರದಿಂದ ತೆಗೆದುಹಾಕಲಾಗಿತ್ತು. ಇನ್ನು ಈ ಬಗ್ಗೆ ಸ್ವತಃ ಆರೋಗ್ಯ ಇಲಾಖೆ ಪ್ರತಿಕ್ರಿಯಿಸಿದ್ದು, ಕೋವಿನ್‌ ಪ್ರಮಾಣಪತ್ರದಿಂದ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ತೆಗೆದು ಹಾಕಲಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಅವರ ಫೋಟೋ ತೆಗೆದುಹಾಕಲಾಗಿದೆ ಎಂದು ಸ್ಪಷ್ಟನೆ ನೀಡಿದೆ.

ಇನ್ನು ಮತ್ತೊಂದೆಡೆ ಬ್ರಿಟಿಷ್ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ (AstraZeneca) ತನ್ನ ಕೋವಿಡ್ ಲಸಿಕೆ ಕೋವಿಶೀಲ್ಡ್‌ ಅಪರೂಪವಾಗಿ ಅಡ್ಡ ಪರಿಣಾಮವನ್ನು ಉಂಟುಮಾಡಬಹುದು ಎಂದು ಒಪ್ಪಿಕೊಳ್ಳುವ ಮೂಲಕ ಜನರನ್ನು ಆತಂಕಕ್ಕೆ ತಳ್ಳಿತ್ತು. ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ, ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ಪ್ಲೇಟ್‌ಲೆಟ್ ಎಣಿಕೆಗೆ ಕಾರಣವಾಗುವ ಸ್ಥಿತಿಯನ್ನು ಉಂಟುಮಾಡಬಹುದು ಎಂದು ಲಸಿಕೆ ತಯಾರಕರು ನ್ಯಾಯಾಲಯದಲ್ಲಿ ಹೇಳಿದ್ದರು.

ಸಾಂಕ್ರಾಮಿಕ ಸಮಯದಲ್ಲಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಅಭಿವೃದ್ಧಿಪಡಿಸಲಾದ ಕೋವಿಶೀಲ್ಡ್ ಅನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿತು ಮತ್ತು ದೇಶದಲ್ಲಿ ವ್ಯಾಪಕವಾಗಿ ನೀಡುತ್ತಿದೆ. AstraZeneca ಯುಕೆಯಲ್ಲಿ ತನ್ನ ಲಸಿಕೆಯು ಹಲವಾರು ಪ್ರಕರಣಗಳಲ್ಲಿ ಸಾವುಗಳು ಮತ್ತು ತೀವ್ರ ಅಸ್ವಸ್ಥತೆಗೆ ಕಾರಣವಾಯಿತು ಎಂಬ ಆರೋಪದ ಮೇಲೆ ಕ್ಲಾಸ್ ಆಕ್ಷನ್ ಮೊಕದ್ದಮೆಯನ್ನು ಎದುರಿಸುತ್ತಿದೆ. ಯುಕೆ ಹೈಕೋರ್ಟ್‌ನಲ್ಲಿ 51 ಪ್ರಕರಣಗಳಲ್ಲಿ ಸಂತ್ರಸ್ತರು 100 ಮಿಲಿಯನ್ ಪೌಂಡ್‌ಗಳವರೆಗೆ ನಷ್ಟ ಪರಿಹಾರ ಬಯಸಿದ್ದಾರೆ.

ಇದನ್ನೂ ಓದಿ:Parineeti Chopra: ಪರಿಣಿತಿ ಚೋಪ್ರಾ ಪತಿ ಕಣ್ಣು ಕಳೆದುಕೊಳ್ಳುವ ಸಾಧ್ಯತೆ: ವೈದ್ಯರು ಹೇಳೋದೇನು?

ಇನ್ನು ಜನರನ್ನು ಆತಂಕಕ್ಕೀಡು ಮಾಡಿರುವ ಈ ವಿಚಾರದ ಬಗ್ಗೆ ಭಾರತದ ಹಿರಿಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞ, ಮಾಜಿ ICMR ವಿಜ್ಞಾನಿ ಡಾ. ರಾಮನ್ ಗಂಗಾಖೇಡ್ಕರ್ ಸ್ಪಷ್ಟನೆ ನೀಡಿದ್ದು, ಭಾರತದಲ್ಲಿ ಕೊರೊನಾ ವೈರಸ್‌ಎದುರಿಸಲು ಕೋವಿಶೀಲ್ಡ್‌ ಲಸಿಕೆ ತೆಗೆದುಕೊಂಡವರಲ್ಲಿ ರಕ್ತ ಹೆಪ್ಪುಗಟ್ಟುವ ಅಡ್ಡ ಪರಿಣಾಮದ ಅಪಾಯದ ಸಾಧ್ಯತೆಗಳು ತೀರಾ ಕಡಿಮೆ ಎಂದು ಹೇಳಿದ್ದಾರೆ. ಮೊದಲ ಡೋಸ್ ಅನ್ನು ಪಡೆದಾಗ ಅಡ್ಡ ಪರಿಣಾಮದ ರಿಸ್ಕ್‌ ಅತ್ಯಧಿಕವಾಗಿರುತ್ತದೆ. ಆದರೆ ಎರಡನೇ ಡೋಸ್‌ನೊಂದಿಗೆ ಕಡಿಮೆಯಾಗುತ್ತದೆ; ಮೂರನೆಯದರೊಂದಿಗೆ ಮತ್ತೂ ಕಡಿಮೆಯಾಗುತ್ತದೆ. ಅಡ್ಡ ಪರಿಣಾಮ ಸಂಭವಿಸುವುದಾದಲ್ಲಿ, ಲಸಿಕೆ ಪಡೆದ ಎರಡು ಮೂರು ತಿಂಗಳೊಳಗೆ ಕಾಣಿಸಿಕೊಳ್ಳುತ್ತದೆ” ಎಂದು ಗಂಗಾಖೇಡ್ಕರ್ ತಿಳಿಸಿದ್ದಾರೆ


Continue Reading

ಪ್ರಮುಖ ಸುದ್ದಿ

Covishield Vaccine: ಭಾರತದಲ್ಲಿ ಕೋವಿಶೀಲ್ಡ್‌ ಅಡ್ಡ ಪರಿಣಾಮದ ಅಪಾಯವಿಲ್ಲ: ಯಾಕೆ ಗೊತ್ತೆ?

Covishield Vaccine: ಕೋವಿಶೀಲ್ಡ್ ಅನ್ನು ಸ್ವೀಕರಿಸುವ 10 ಲಕ್ಷ ಜನರಲ್ಲಿ ಏಳರಿಂದ ಎಂಟು ವ್ಯಕ್ತಿಗಳು ಮಾತ್ರ ಥ್ರಂಬೋಸಿಸ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂದು ಕರೆಯಲ್ಪಡುವ ಅಪರೂಪದ ಅಡ್ಡ ಪರಿಣಾಮವನ್ನು ಅನುಭವಿಸುತ್ತಾರೆ. ಭಾರತದಲ್ಲಿ ಇದರ ಪ್ರಮಾಣ ಇನ್ನೂ ಕಡಿಮೆ ಎಂದು ತಜ್ಞರು ಹೇಳಿದ್ದಾರೆ.

VISTARANEWS.COM


on

Covishield vaccine india
Koo

ಹೊಸದಿಲ್ಲಿ: ಭಾರತದಲ್ಲಿ ಕೊರೊನಾ ವೈರಸ್‌ (Corona Virus) ಎದುರಿಸಲು ಕೋವಿಶೀಲ್ಡ್‌ ಲಸಿಕೆ (Covishield vaccine) ತೆಗೆದುಕೊಂಡವರಲ್ಲಿ ರಕ್ತ ಹೆಪ್ಪುಗಟ್ಟುವ (blood clotting) ಅಡ್ಡ ಪರಿಣಾಮದ (Side effects) ಅಪಾಯದ ಸಾಧ್ಯತೆಗಳು ತೀರಾ ಕಡಿಮೆ ಎಂದು ಭಾರತದ ಹಿರಿಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞ, ಮಾಜಿ ICMR ವಿಜ್ಞಾನಿ ಡಾ. ರಾಮನ್ ಗಂಗಾಖೇಡ್ಕರ್ ಹೇಳಿದ್ದಾರೆ.

ಕೋವಿಶೀಲ್ಡ್ ಅನ್ನು ಸ್ವೀಕರಿಸುವ 10 ಲಕ್ಷ ಜನರಲ್ಲಿ ಏಳರಿಂದ ಎಂಟು ವ್ಯಕ್ತಿಗಳು ಮಾತ್ರ ಥ್ರಂಬೋಸಿಸ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂದು ಕರೆಯಲ್ಪಡುವ ಅಪರೂಪದ ಅಡ್ಡ ಪರಿಣಾಮವನ್ನು ಅನುಭವಿಸುತ್ತಾರೆ. ಭಾರತದಲ್ಲಿ ಇದರ ಪ್ರಮಾಣ ಇನ್ನೂ ಕಡಿಮೆ ಎಂದವರು ತಿಳಿಸಿದ್ದಾರೆ. ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ ಅಡ್ಡ ಪರಿಣಾಮ ಕಾಣಿಸಿಕೊಳ್ಳಬಹುದು ಎಂದು ಮೊನ್ನೆ ಅದರ ತಯಾರಿಕಾ ಕಂಪನಿ ಅಸ್ಟ್ರಾಜೆನೆಕಾ ಯುಕೆ ನ್ಯಾಯಾಲಯದಲ್ಲಿ ಒಪ್ಪಿಕೊಂಡ ಬಳಿಕ ಈ ಬಗ್ಗೆ ಆತಂಕ ಮೂಡಿತ್ತು.

“ಮೊದಲ ಡೋಸ್ ಅನ್ನು ಪಡೆದಾಗ ಅಡ್ಡ ಪರಿಣಾಮದ ರಿಸ್ಕ್‌ ಅತ್ಯಧಿಕವಾಗಿರುತ್ತದೆ. ಆದರೆ ಎರಡನೇ ಡೋಸ್‌ನೊಂದಿಗೆ ಕಡಿಮೆಯಾಗುತ್ತದೆ; ಮೂರನೆಯದರೊಂದಿಗೆ ಮತ್ತೂ ಕಡಿಮೆಯಾಗುತ್ತದೆ. ಅಡ್ಡ ಪರಿಣಾಮ ಸಂಭವಿಸುವುದಾದಲ್ಲಿ, ಲಸಿಕೆ ಪಡೆದ ಎರಡು ಮೂರು ತಿಂಗಳೊಳಗೆ ಕಾಣಿಸಿಕೊಳ್ಳುತ್ತದೆ” ಎಂದು ಗಂಗಾಖೇಡ್ಕರ್ ತಿಳಿಸಿದ್ದಾರೆ. ಆದರೆ, ಭಾರತದಲ್ಲಿ ಮೂರು ಹಂತಗಳ ಲಸಿಕೆ ಅಭಿಯಾನ ವರ್ಷಗಳ ಹಿಂದೆಯೇ ಮುಗಿದಿದ್ದು, ಅಡ್ಡ ಪರಿಣಾಮಗಳ ಪ್ರಕರಣಗಳು ಅತ್ಯಂತ ವಿರಳವಾಗಿ ವರದಿಯಾಗಿವೆ.

ಬ್ರಿಟನ್‌ನ ಮಾಧ್ಯಮ ವರದಿಗಳು ಉಲ್ಲೇಖಿಸಿರುವ ನ್ಯಾಯಾಲಯದ ದಾಖಲೆಗಳ ಪ್ರಕಾರ, ತನ್ನ ಕೋವಿಡ್ ಲಸಿಕೆ ಅಪರೂಪವಾಗಿ ರಕ್ತ ಹೆಪ್ಪುಗಟ್ಟುವಿಕೆಯನ್ನು ಒಳಗೊಂಡ ಅಡ್ಡ ಪರಿಣಾಮಕ್ಕೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿದೆ. ಈ ಲಸಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಸಹ ಉತ್ಪಾದಿಸಿದೆ. ಇದನ್ನು ಕೋವಿಶೀಲ್ಡ್ ಎಂದು ಕರೆಯಲಾಗುತ್ತದೆ. ಭಾರತೀಯ ಜನಸಂಖ್ಯೆಯ ಕನಿಷ್ಠ 90 ಪ್ರತಿಶತದಷ್ಟು ಜನರು ಈ ಲಸಿಕೆಯನ್ನು ಪಡೆದಿದ್ದಾರೆ. ಭಾರತದಲ್ಲಿ ಸುಮಾರು 175 ಕೋಟಿ ಕೋವಿಶೀಲ್ಡ್‌ ಲಸಿಕೆ ಡೋಸ್‌ ನೀಡಲಾಗಿದೆ.

ಕಂಪನಿಯು ನ್ಯಾಯಾಲಯದಲ್ಲಿ ಒಪ್ಪಿಕೊಂಡಂತೆ, ಥ್ರಂಬೋಸಿಸ್ ವಿಥ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂಬ ಅಪರೂಪದ ಅಡ್ಡ ಪರಿಣಾಮದ ಸಾಧ್ಯತೆ ಲಸಿಕೆಗೆ ಇದೆ. ಯುರೋಪ್‌ನಲ್ಲಿ ವ್ಯಾಕ್ಸಿನೇಷನ್ ಅಭಿಯಾನ ಪ್ರಾರಂಭವಾದ ತಿಂಗಳೊಳಗೆ ಕೆಲವು ಇಂಥ ಪ್ರಕರಣಗಳು ಬೆಳಕಿಗೆ ಬಂದವು. ಕೆಲವು ದೇಶಗಳು ಅಸ್ಟ್ರಾಜೆನೆಕಾ ಲಸಿಕೆಯ ಬಳಕೆಯನ್ನು ಸ್ವಲ್ಪ ಸಮಯದವರೆಗೆ ನಿಲ್ಲಿಸಿದವು.

ʼವ್ಯಾಕ್ಸಿನೇಶನ್‌ ಬಳಿಕದ ಪ್ರತಿಕೂಲ ಘಟನೆಗಳ ಕುರಿತು ಸರ್ಕಾರಿ ಸಮಿತಿʼಯು (AEFI) ದೇಶದಲ್ಲಿ TTSನ ಕನಿಷ್ಠ 36 ಪ್ರಕರಣಗಳನ್ನು ಪರಿಶೀಲಿಸಿದೆ. 2021ರಲ್ಲಿ ದೇಶದಲ್ಲಿ ಕೋವಿಡ್-19 ಲಸಿಕೆ ಹಾಕಿದ ಮೊದಲ ವರ್ಷ 18 ಸಾವುಗಳನ್ನು ದೃಢಪಡಿಸಿದೆ. ಆದರೆ ಇದು ಭಾರತೀಯ ಕಾನೂನಿನ ವ್ಯಾಪ್ತಿಯಲ್ಲಿ ಬರುತ್ತಿದ್ದು, ಬ್ರಿಟನ್‌ನ ನ್ಯಾಯಾಲಯದಲ್ಲಿ ಆಗಿರುವ ವಾದವನ್ನು ಮಂಡಿಸಿ ನ್ಯಾಯ ಪಡೆಯಲು ಸಾಧ್ಯವಿಲ್ಲ.

ಐರೋಪ್ಯ ರಾಷ್ಟ್ರಗಳಲ್ಲಿ ಸಾಂಕ್ರಾಮಿಕ ರೋಗದ ವಿರುದ್ಧ ಲಸಿಕೆ ಹಾಕಲು ಆರಂಭಿಸಿದ ಅವಧಿಯಲ್ಲಿ TTS ವರದಿಯಾಗಿದೆ. ಆದರೆ ಭಾರತದಲ್ಲಿ ಇದು ಬಹಳ ಅಪರೂಪ ಎಂದು ತಜ್ಞರು ಹೇಳುತ್ತಾರೆ. “ಟಿಟಿಎಸ್ ಬಹಳ ಅಪರೂಪದ ಅಡ್ಡ ಪರಿಣಾಮ. ಯುರೋಪಿಯನ್ನರಿಗೆ ಹೋಲಿಸಿದರೆ ಭಾರತೀಯರು ಮತ್ತು ದಕ್ಷಿಣ ಏಷ್ಯಾದವರಲ್ಲಿ ಇನ್ನೂ ಅಪರೂಪ. ವ್ಯಾಕ್ಸಿನೇಷನ್ ಜೀವಗಳನ್ನು ಉಳಿಸಿದೆ. ಅದರ ಪ್ರಯೋಜನಕ್ಕೆ ಹೋಲಿಸಿದರೆ ಅಪಾಯಗಳನ್ನು ಕ್ಷುಲ್ಲಕ” ಎಂದು ತಜ್ಞರು ವಿವರಿಸಿದ್ದಾರೆ.

ಅಡ್ಡ ಪರಿಣಾಮದ ರಿಸ್ಕ್‌ ಮೊದಲ ವ್ಯಾಕ್ಸಿನೇಷನ್ ನಂತರದ ಮೊದಲ ಕೆಲವು ವಾರಗಳಲ್ಲಿ ಮಾತ್ರ ಹೆಚ್ಚು. ಹೆಚ್ಚಿನ ಭಾರತೀಯರು ಈಗಾಗಲೇ ಮೂರು ಡೋಸ್‌ ಪಡೆದಿದ್ದಾರೆ. ಇದಾಗಿ ಬಹಳ ಸಮಯ ಸಂದಿದೆ. “ನಾವೆಲ್ಲರೂ ಲಸಿಕೆಯನ್ನು ಬಹಳ ಹಿಂದೆಯೇ ಯಶಸ್ವಿಯಾಗಿ ಪಡೆದಿದ್ದೇವೆ” ಎಂದು ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್‌ನ ಗ್ಲೋಬಲ್ ಹೆಲ್ತ್‌ನ ನಿರ್ದೇಶಕ ಡಾ ಗಗನ್‌ದೀಪ್ ಕಾಂಗ್ ಹೇಳಿದ್ದಾರೆ.

“ಜನರು ಈಗ ಪ್ರತಿಕ್ರಿಯಿಸುತ್ತಿರುವುದು ಆಶ್ಚರ್ಯಕರವಾಗಿದೆ. ವ್ಯಾಕ್ಸಿನೇಷನ್ ಅಭಿಯಾನ ನಡೆಯುತ್ತಿದ್ದಾಗಲೂ ಸೈಡ್‌ ಎಫೆಕ್ಟ್‌ಗಳನ್ನು ಉತ್ತಮವಾಗಿ ದಾಖಲಿಸಲಾಗಿದೆ ಮತ್ತು ವೈಜ್ಞಾನಿಕವಾಗಿ ಸ್ವೀಕರಿಸಲಾಗಿದೆ. ಸಾಂಕ್ರಾಮಿಕ ರೋಗ ಉತ್ತುಂಗದಲ್ಲಿದ್ದಾಗ ಲಸಿಕೆಯ ಪ್ರಯೋಜನವು ಅಪಾಯವನ್ನು ಮೀರಿಸಿತ್ತು” ಎಂದು ಅಶೋಕ ವಿಶ್ವವಿದ್ಯಾಲಯದ ತ್ರಿವೇದಿ ಸ್ಕೂಲ್ ಆಫ್ ಬಯೋಸೈನ್ಸ್‌ನ ಬಯೋಸೈನ್ಸ್ ಮತ್ತು ಆರೋಗ್ಯ ಸಂಶೋಧನೆಯ ಡೀನ್ ಡಾ. ಅನುರಾಗ್ ಅಗರ್ವಾಲ್ ಹೇಳುತ್ತಾರೆ.

ಲ್ಯಾನ್ಸೆಟ್ ಗ್ಲೋಬಲ್ ಹೆಲ್ತ್‌ನಲ್ಲಿನ 2022ರ ಅಧ್ಯಯನದ ಪ್ರಕಾರ ಅಸ್ಟ್ರಾಜೆನೆಕಾ ಮೊದಲ ಡೋಸ್ ಸ್ವೀಕರಿಸಿದ ಪ್ರತಿ ಹತ್ತು ಲಕ್ಷ ಜನರಲ್ಲಿ 8.1 ಟಿಟಿಎಸ್ ಪ್ರಕರಣಗಳು ಕಂಡುಬಂದಿವೆ. ಎರಡನೇ ಡೋಸ್ ಸ್ವೀಕರಿಸಿದ ಪ್ರತಿ ಹತ್ತು ಲಕ್ಷ ಮಂದಿಯಲ್ಲಿ 2.3 ಟಿಟಿಎಸ್ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಭೌಗೋಳಿಕ ವ್ಯತ್ಯಾಸವಿದೆ. ಹೆಚ್ಚಿನ ಪ್ರಕರಣಗಳು ನಾರ್ಡಿಕ್ ದೇಶಗಳಿಂದ (ನಾರ್ವೆ ಇತ್ಯಾದಿ- ಹತ್ತು ಲಕ್ಷಕ್ಕೆ 17.6) ವರದಿಯಾಗಿವೆ. ಏಷ್ಯಾದ ದೇಶಗಳಲ್ಲಿ ಅತಿ ಕಡಿಮೆ (ಪ್ರತಿ ಹತ್ತು ಲಕ್ಷಕ್ಕೆ 0.2).

ಈಗ ಲಸಿಕೆ ತೆಗೆದುಕೊಳ್ಳಬೇಕೇ?

ಈಗ ಹೆಚ್ಚಿನ ಜನರಲ್ಲಿ ಕೊರೊನಾ ರೋಗನಿರೋಧಕ ಶಕ್ತಿಯಿದ್ದು, ಲಸಿಕೆಯ ಅಗತ್ಯವಿಲ್ಲ ಎಂದು ಡಾ. ಅಗರ್ವಾಲ್ ಹೇಳುತ್ತಾರೆ. “ವೈರಸ್ ಸಂಚರಿಸುತ್ತಿದ್ದರೂ ಈಗ ಭಾರತೀಯರಲ್ಲಿ ಪ್ರತಿಕಾಯ ಮಟ್ಟ ತುಂಬಾ ಹೆಚ್ಚಿವೆ. ಒಮಿಕ್ರಾನ್‌ನಂತಹ ರೂಪಾಂತರಿಗಳಿಂದ ರಕ್ಷಿಸಬಹುದಾದ ಹೊಸ ಲಸಿಕೆಗಳನ್ನು ತೆಗೆದುಕೊಳ್ಳಬೇಕು” ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: Covishield Vaccine: ಕೋವಿಡ್‌ ಲಸಿಕೆಯಿಂದ ಬರುತ್ತೆ ರಕ್ತ ಹೆಪ್ಪುಗಟ್ಟೋ ಕಾಯಿಲೆ! ವಿವರ ನಿಮಗೆ ತಿಳಿದಿರಲಿ

Continue Reading

ಕೋರ್ಟ್

Padarayanapura Riots : ಪಾದರಾಯನಪುರ ಗಲಭೆ; ಪ್ರಕರಣ ರದ್ದತಿಗೆ ಹೈಕೋರ್ಟ್‌ ಕೊಟ್ಟ ಕಾರಣಗಳೇನು

Padarayanapura Riots : ಕೋವಿಡ್‌ ನಿಯಮಗಳನ್ನು ಉಲ್ಲಂಘಿಸಿದವರನ್ನು ವಶಕ್ಕೆ ಪಡೆಯಲು ಹೋದ ಅಧಿಕಾರಿಗಳನ್ನೇ ಅಟ್ಟಾಡಿಸಿದ ಪಾದರಾಯನಪುರ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಎಲ್ಲ ಕೇಸುಗಳನ್ನು ಹೈಕೋರ್ಟ್‌ ರದ್ದುಪಡಿಸಿದೆ.

VISTARANEWS.COM


on

Padarayanapura Violence
Koo

ಬೆಂಗಳೂರು : 2020ರಲ್ಲಿ ಕೋವಿಡ್-19 ಲಾಕ್ ಡೌನ್ (Covid 19 Lock down) ಸಂದರ್ಭ ಬೆಂಗಳೂರಿನ (Bangalore News) ಪಾದರಾಯನಪುರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ (Padarayanapura Riots) ಸಂಬಂಧಿಸಿ 375 ಮಂದಿ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್ (Karnataka High Court) ರದ್ದುಗೊಳಿಸಿದೆ. ಆವತ್ತು ಕೋವಿಡ್‌ ನಿಯಮಾವಳಿಗಳನ್ನು ಉಲ್ಲಂಘಿಸಿ (Violation of Covid 19 Rules) ಓಡಾಡುತ್ತಿದ್ದ 51 ಮಂದಿಯನ್ನು ಅಧಿಕಾರಿಗಳು ವಶಕ್ಕೆ ಪಡೆಯಲು ಹೋದಾಗ ದೊಡ್ಡ ಹಿಂಸಾಚಾರವೇ ನಡೆದಿತ್ತು.

ಸಾಕ್ಷಿಗಳ ಹೇಳಿಕೆಗಳನ್ನು ಒಂದೇ ರೀತಿಯಲ್ಲಿ ದಾಖಲಿಸಲಾಗಿದೆ. ಪೊಲೀಸರು 120ಕ್ಕೂ ಅಧಿಕ ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದರೂ ಸಹ ಗಲಭೆ ನಡೆದಿದೆ ಎನ್ನಲಾದ ಸಮಯದಲ್ಲಿ ಯಾವುದೇ ಆಸ್ತಿ ಪಾಸ್ತಿ ನಷ್ಟವಾಗಿಲ್ಲ, ಪೊಲೀಸರು ಯಾವುದೇ ವಸ್ತು ವಶಪಡಿಸಿಕೊಂಡಿಲ್ಲ. ಹೀಗಾಗಿ ಅಕ್ರಮವಾಗಿ ಗುಂಪುಗೂಡಿ ಬಿಬಿಎಂಪಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಎನ್ನಲಾದ ಆರೋಪದಡಿ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣಗಳನ್ನು ನ್ಯಾಯಾಲಯವು ರದ್ದುಪಡಿಸಿದೆ. ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ನವಾಜ್ ಪಾಷಾ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳನ್ನು  ಮಾನ್ಯ ಮಾಡಿ ಈ ಆದೇಶ ಹೊರಡಿಸಿದೆ.

Padarayanapura Riots : ಪಾದರಾಯನಪುರದಲ್ಲಿ ಅಂದು ಏನಾಗಿತ್ತು?

2020ರ ಏ.19ರಂದು ಸಂಜೆಯ ಸಮಯ ಬಿಬಿಎಂಪಿ ಅಧಿಕಾರಿಗಳು ಕೋವಿಡ್ ಸೋಂಕು ತಗುಲಿದ್ದ 51 ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲು ಹೋಗಿದ್ದರು. ಆಗ ಅಲ್ಲಿದ್ದ ಕೆಲವರು ಕೈಯಲ್ಲಿ ಚಾಕು, ದೊಣ್ಣೆ, ರಾಡ್ ಹಿಡಿದುಕೊಂಡು ಆಶಾ ಕಾರ್ಯಕರ್ತರು, ವೈದ್ಯಾಧಿಕಾರಿಗಳು, ಪಾಲಿಕೆ ಅಧಿಕಾರಿಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದರು. ಆರೋಪಿಗಳು ಚೇರು, ಟೇಬಲ್‌ಗಳನ್ನು ಒಡೆದು ಟೆಂಟ್ ಕಿತ್ತು ಹಾಕಿ ಅಕ್ಕ ಪಕ್ಕದ ರಸ್ತೆಗಳಲ್ಲಿ ಸಾರ್ವಜನಿಕ ಆಸ್ತಿಗಳಿಗೆ ಹಾನಿಯುಂಟು ಮಾಡಿದ್ದರು.

ಈ ಸಂಬಂಧ ಪ್ರಕರಣಗಳನ್ನು ದಾಖಲಿಸಿ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ವಿಚಾರಣಾ ನ್ಯಾಯಾಲಯವು ವಿಚಾರಣೆ ನಡೆಸುತ್ತಿತ್ತು. ಈ ನಡುವೆ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿ ಪ್ರಕರಣ ರದ್ದುಪಡಿಸಲು ಕೋರಿದ್ದರು.

Padarayanapura Violence1

ಪ್ರಾಸಿಕ್ಯೂಷನ್‌ ಮತ್ತು ಪೊಲೀಸರು ದಾಖಲಿಸಿಕೊಂಡಿದ್ದ ದೂರೇನು?

ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ್ದ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್ ಜಗದೀಶ್ ಅವರು “2020ರ ಏಪ್ರಿಲ್‌ 19ರಂದು ಸಂಜೆ ಸಮಯದಲ್ಲಿ ಬಿಬಿಎಂಪಿ ಅಧಿಕಾರಿಗಳು ಕೋವಿಡ್ ಸೋಂಕು ತಗುಲಿದ್ದ 58 ಮಂದಿಯನ್ನು ವಶಕ್ಕೆ ತೆಗೆದಕೊಳ್ಳಲು ಪಾದರಾಯನಪುರದಲ್ಲಿ ಹೋಗಿದ್ದಾಗ ಅಲ್ಲಿ ಅಕ್ರಮವಾಗಿ ಗುಂಪು ಗೂಡಿದ್ದವರು ಕೈಯಲ್ಲಿ ಚಾಕು, ದೊಣ್ಣೆ ಮತ್ತು ರಾಡ್‌ಗಳನ್ನು ಹಿಡಿದುಕೊಂಡು ಆಶಾ ಕಾರ್ಯಕರ್ತರು, ವೈದ್ಯಾಕಾರಿಗಳು ಹಾಗೂ ಬಿಬಿಎಂಪಿ ಅಕಾರಿಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದರು” ಎಂದು ವಾದಿಸಿದ್ದರು. ಅಲ್ಲದೇ, “ಆರೋಪಿಗಳು ಖುರ್ಚಿ, ಟೇಬಲ್‌ಗಳನ್ನು ಒಡೆದು ಟೆಂಟ್ ಕಿತ್ತು ಹಾಕಿ ಅಕ್ಕ ಪಕ್ಕದ ರಸ್ತೆಗಳಲ್ಲಿ ಸಾರ್ವಜನಿಕ ಆಸ್ತಿಗಳಿಗೆ ಹಾನಿಯುಂಟು ಮಾಡಿದ್ದರು. ಹೀಗಾಗಿ, ಪ್ರಕರಣ ದಾಖಲಿಸಲಾಗಿತ್ತು” ಎಂದು ತಿಳಿಸಿದ್ದರು.

ಅರ್ಜಿದಾರರ ವಾದ ಏನಾಗಿತ್ತು?

ಅರ್ಜಿದಾರರು, ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ. ತಮ್ಮ ಮನೆ ಬೇರೆ ಕಡೆಯಿವೆ. ನಿಜವಾದ ಆರೋಪಿಗಳನ್ನು ಗುರುತಿಸದೆ ಪೊಲೀಸರು ಸಿಕ್ಕ ಸಿಕ್ಕವರ ಮೇಲೆ ಕೇಸ್ ಹಾಕಿದ್ದಾರೆ. ಪಾಲಿಕೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಬಂದಾಗ ಅವರಲ್ಲಿ ಸೋಂಕಿ ತರ ಪಟ್ಟಿಯೇ ಇರಲಿಲ್ಲ. ಗಲಭೆ ನಡೆದಿದೆ ಎಂದು ಹೇಳಿದ್ದರೂ ಯಾರಿಗೂ ಗಾಯವಾಗಿಲ್ಲ. ಹಾಗಾಗಿ, ಪ್ರಕರಣ ರದ್ದುಗೊಳಿಸಬೇಕು ಎಂದು ಕೋರಿದ್ದರು.

ಇದನ್ನೂ ಓದಿ : Ban on dogs : ಅಪಾಯಕಾರಿ ನಾಯಿ ತಳಿಗಳಿಗೆ ಕೇಂದ್ರ ನಿಷೇಧ ; ಕರ್ನಾಟಕದಲ್ಲಿ ತಡೆ

ಹೈಕೋರ್ಟ್‌ ಗಮನಿಸಿದ ತಾಂತ್ರಿಕ ಸಮಸ್ಯೆಗಳೇನು?

  1. ಐಪಿಸಿ ಸೆಕ್ಷನ್‌ 172ರಿಂದ 188ರವರೆಗೆ ಮತ್ತು ವಿಪತ್ತು ನಿರ್ವಹಣಾ ಕಾಯಿದೆ ವಿವಿಧ ಸೆಕ್ಷನ್‌ ಉಲ್ಲಂಘಿಸಲಾಗಿದೆ ಎಂದು ಹೇಳಲಾಗಿದೆ. ಆದರೆ ಸಕ್ಷಮ ಪ್ರಾಧಿಕಾರ ದೂರು ದಾಖಲಿಸಿಲ್ಲ.
  2. ಬಿಬಿಎಂಪಿ ಅಧಿಕಾರಿಗಳು ಪಾದರಾಯನಪುರಕ್ಕೆ ಸೀಲ್ ಡೌನ್ ಮಾಡಲು ಹೋದಾಗ 51 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು ಎಂದು ಹೇಳುತ್ತಾರೆ. ಆದರೆ, ಯಾರಿಗೆ ಸೋಂಕು ತಗುಲಿತ್ತು ಎಂಬ ಬಗ್ಗೆ ಯಾವುದೇ ವಿವರಗಳನ್ನು ಆರೋಪ ಪಟ್ಟಿಯಲ್ಲಿ ದಾಖಲಿಸಿಲ್ಲ.
  3. ಬಿಬಿಎಂಪಿ ಅಧಿಕಾರಿಗಳು ಆ ಪ್ರದೇಶವನ್ನು ಸೀಲ್ ಡೌನ್ ಮಾಡಲು ಮುಂದಾದಾಗ ಅಲ್ಲಿನ ಜನರು ಹಾಲು, ತರಕಾರಿ ಮತ್ತಿತರ ಅಗತ್ಯ ವಸ್ತುಗಳನ್ನು ತರಲು ತೊಂದರೆ ಆಗಬಹುದು ಎಂದು ಪ್ರತಿರೋಧ ಮಾಡಿರಬಹುದು, ಆಗ ಒಂದು ರೀತಿಯ ಬಿಗುವಿನ ವಾತಾವರಣ ನಿರ್ಮಾಣವಾಗಿರಬಹುದು.
  4. ಮ್ಯಾಜಿಸ್ಟ್ರೇಟ್ ಐಪಿಸಿ ಸೆಕ್ಷನ್ 188ರ ಅಡಿ ಸಂಜ್ಞೆ ತೆಗೆದುಕೊಳ್ಳಲು ನಿರ್ಬಂಧವಿದೆ. ಆದರೂ ಸಂಜ್ಞೆ ತೆಗೆದುಕೊಂಡು ಮುಂದುವರಿದಿರುವುದು ಸರಿಯಲ್ಲ.
Continue Reading
Advertisement
Viral Video
ವೈರಲ್ ನ್ಯೂಸ್27 mins ago

Viral Video: ಮೆಕ್ಕಾದಲ್ಲಿ ಬುರ್ಖಾಧಾರಿ ಮಹಿಳೆಯ ಡ್ಯಾನ್ಸ್! ಮುಸ್ಲಿಂ ಸಮುದಾಯದ ಆಕ್ರೋಶ

gold rate today bipasha
ಚಿನ್ನದ ದರ33 mins ago

Gold Rate Today: ರಾಜಧಾನಿಯಲ್ಲಿ ಏರಿಳಿಯದ ಬಂಗಾರದ ಬೆಲೆ; ಇಂದಿನ ದರಗಳು ಹೀಗಿವೆ

IND vs PAK
ಕ್ರೀಡೆ43 mins ago

IND vs PAK : ಸೂಪರ್ ಫ್ಯಾನ್​​; ಟೀಮ್​ ಇಂಡಿಯಾ ಜೆರ್ಸಿ ಧರಿಸಿ ಭಾರತವನ್ನು ಬೆಂಬಲಿಸಿದ ಮೈಕ್ರೋಸಾಫ್ಟ್​​ ಸಿಇಒ ಸತ್ಯ ನಾದೆಳ್ಳಾ

karnataka Rain
ಬೆಳಗಾವಿ44 mins ago

Karnataka Rain : ಬೆಳಗಾವಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ಯುವಕ ಸಾವು

Nandamuri Balakrishna BB4 new film announced
ಟಾಲಿವುಡ್57 mins ago

Nandamuri Balakrishna: ಇಂದು ತೆಲುಗು ಸೂಪರ್‌ಸ್ಟಾರ್ ಬಾಲಯ್ಯ ಬರ್ತ್‌ಡೇ; ಹೊಸ ಸಿನಿಮಾ ಅನೌನ್ಸ್‌!

IND VS PAK
ಕ್ರೀಡೆ1 hour ago

IND vs PAK : ಪಾಕಿಸ್ತಾನವನ್ನು ಭಾರತ ಸೋಲಿಸಿದ ನಂತರ ತಮಾಷೆಯ ಪೋಸ್ಟ್​​ ಮಾಡಿದ ಡೆಲ್ಲಿ ಪೊಲೀಸರು

HSRP Number Plate
ಬೆಂಗಳೂರು1 hour ago

HSRP Number Plate: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿಗೆ ಡೆಡ್‌ಲೈನ್‌! ಇನ್ನೂ ಎರಡೇ ದಿನ ಬಾಕಿ

Narendra Modi And stock market news
ಪ್ರಮುಖ ಸುದ್ದಿ1 hour ago

Stock Market News: ಮೋದಿ ಪ್ರಮಾಣ ವಚನದ ಬಳಿಕ ಷೇರು ಮಾರುಕಟ್ಟೆ ಜಿಗಿತ; ಸೆನ್ಸೆಕ್ಸ್‌ ಹೊಸ ದಾಖಲೆ

Anirudh Jatkar again rise on voice jote joteyali serial issue
ಸ್ಯಾಂಡಲ್ ವುಡ್1 hour ago

Anirudh Jatkar: ʻಜೊತೆ ಜೊತೆಯಲಿ’ ಧಾರಾವಾಹಿಯ ವಿವಾದದ ಬಗ್ಗೆ ಬೇಸರ ಹೊರ ಹಾಕಿದ ಅನಿರುದ್ಧ್!

NEET UG
ಪ್ರೇಮಿಗಳ ದಿನಾಚರಣೆ2 hours ago

NEET UG : ನೀಟ್-ಯುಜಿ ಫಲಿತಾಂಶ ಹಿಂಪಡೆಯಲು ಕೋರಿ ಸುಪ್ರೀಂ ಕೋರ್ಟ್​​ಗೆ ಅರ್ಜಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌