ಜಿಮೇಲ್ ಓಪನ್ ಆಗ್ಲಿಲ್ಲ, ಅದ್ಕೆ ಜೈಲಿನಿಂದ ಬಿಡಲಿಲ್ಲ! ಹೈಕೋರ್ಟ್ ಬೇಲ್ ನೀಡಿದ್ರೂ 3 ವರ್ಷ ಜೈಲಿನಲ್ಲೇ ಉಳಿದ ಯುವಕ! - Vistara News

ದೇಶ

ಜಿಮೇಲ್ ಓಪನ್ ಆಗ್ಲಿಲ್ಲ, ಅದ್ಕೆ ಜೈಲಿನಿಂದ ಬಿಡಲಿಲ್ಲ! ಹೈಕೋರ್ಟ್ ಬೇಲ್ ನೀಡಿದ್ರೂ 3 ವರ್ಷ ಜೈಲಿನಲ್ಲೇ ಉಳಿದ ಯುವಕ!

Gujarat High Court: ಗುಜರಾತ್ ಹೈಕೋರ್ಟ್ ಜಾಮೀನು ನೀಡಿದರೂ ಜೈಲು ಅಧಿಕಾರಿಗಳು ಆರೋಪಿಯನ್ನು ಮೂರು ವರ್ಷಗಳ ಕಾಲ ಜೈಲಿನಲ್ಲಿ ಉಳಿಸಿಕೊಂಡಿದ್ದೇಕೆ?

VISTARANEWS.COM


on

Gujarat High Court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹಮದಾಬಾದ್: ಜಾಮೀನು ನೀಡಿದರೂ 3 ವರ್ಷಗಳಿಂದ ಜೈಲಿನಿಂದ ಬಿಡುಗಡೆಯಾಗದ 27 ವರ್ಷದ ಯುವಕನಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಗುಜರಾತ್ ಹೈಕೋರ್ಟ್(Gujarat High Court), ಗುಜರಾತ್ ರಾಜ್ಯ ಸರ್ಕಾರಕ್ಕೆ (Gujarat State Government) ಬುಧವಾರ ಆದೇಶಿಸಿದೆ. 2020ರಲ್ಲಿ ಗುಜರಾತ್ ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ, ಜೈಲು ಅಧಿಕಾರಿಗಳ (Jail Officials) ನಿರ್ಲಕ್ಷ್ಯದಿಂದಾಗಿ ಯುವಕ ಆಲ್ಮೋಸ್ಟ್ 3 ವರ್ಷಗಳವರೆಗೆ ಜೈಲಿನಲ್ಲಿ ಕೊಳೆಯುವಂತಾಯಿತು. ಅಲ್ಲದೇ, ಜೈಲು ಅಧಿಕಾರಿಗಳು ಕೊಟ್ಟಿರುವ ಕಾರಣ ಕೂಡ ವಿಚಿತ್ರವಾಗಿದೆ. ಜಿಮೇಲ್ ತೆರೆಯಲು (Gmail) ಸಾಧ್ಯವಾಗದ್ದಕ್ಕೆ ಜೈಲಿನಿಂದ ಬಿಡುಗಡೆ ಸಾಧ್ಯವಾಗಿಲ್ಲ ಎಂದು ಸಬೂಬು ಹೇಳಿರುವುದು ಅಪಹಾಸ್ಯಕ್ಕೆ ಕಾರಣವಾಗಿದೆ.

ಜಾಮೀನು ಆದೇಶವನ್ನು 2020ರ ಸೆಪ್ಟೆಂಬರ್ 29ರಂದು ನೀಡಲಾಯಿತು. ಆದರೆ ನಿನ್ನೆ, 2023ರ ಸೆಪ್ಟೆಂಬರ್ 21ರಂದು ಅಂತಿಮವಾಗಿ ಅಪರಾಧಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ನ್ಯಾಯಮೂರ್ತಿಗಳಾದ ಎಎಸ್ ಸುಪೇಹಿಯಾ ಮತ್ತು ಎಂಆರ್ ಮೆಂಗ್ಡೆ ಅವರ ಪೀಠವು 35 ಪುಟಗಳ ಆದೇಶದಲ್ಲಿ ತಿಳಿಸಿದೆ. ಕಾರಾಗೃಹ ಅನುಭವಿಸುತ್ತಿದ್ದ 27 ವರ್ಷದ ಚಂದನ್‌ಜಿ ಠಾಕೂರ್ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿ ಪೀಠವು ಈ ಆದೇಶವನ್ನು ನೀಡಿದೆ.

ಜೈಲು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹೈಕೋರ್ಟ್ ಆದೇಶದ ಹೊರತಾಗಿಯೂ ಜೈಲಿನಲ್ಲಿಯೇ ಉಳಿದಿರುವ ಅರ್ಜಿದಾರರ ದುರವಸ್ಥೆಯನ್ನು ಪರಿಗಣಿಸಿ, ಸುಮಾರು ಮೂರು ವರ್ಷಗಳ ಕಾಲ ಅಕ್ರಮವಾಗಿ ಜೈಲಿನಲ್ಲಿದ್ದಕ್ಕಾಗಿ ಪರಿಹಾರವನ್ನು ನೀಡಲು ನಾವು ಒಲವು ತೋರಿದ್ದೇವೆ. ಅರ್ಜಿದಾರರನ್ನು ಸಾಮಾನ್ಯ ಜಾಮೀನಿನ ಮೇಲೆ ಬಿಡುಗಡೆ ಮಾಡುವ ಈ ನ್ಯಾಯಾಲಯವು ಸೆಪ್ಟೆಂಬರ್ 2020 ರ ಜಾಮೀನು ಆದೇಶದ ಬಗ್ಗೆ ಹೈಕೋರ್ಟ್‌ನ ನೋಂದಾವಣೆ ಜೈಲು ಅಧಿಕಾರಿಗಳಿಗೆ ಸ್ಪಷ್ಟವಾಗಿ ತಿಳಿಸಿದೆ. ಜೈಲು ಅಧಿಕಾರಿಗಳಿಗೆ ಆದೇಶದ ಇ-ಮೇಲ್ ಬಂದಿಲ್ಲ ಎಂಬುದು ನಿಜವಲ್ಲ.ಅವರು ಇ-ಮೇಲ್ ಸ್ವೀಕರಿಸಿದ್ದರೂ, ಅಟ್ಯಾಚ್‌ಮೆಂಟ್ ಓಪನ್ ಮಾಡಲು ಸಾಧ್ಯವಾಗಿಲ್ಲ ಎಂದು ಕೋರ್ಟ್ ಹೇಳಿದೆ.

ಈ ಸುದ್ದಿಯನ್ನೂ ಓದಿ: Congress Guarantee : ಗೃಹಲಕ್ಷ್ಮಿ, ಗೃಹಜ್ಯೋತಿ ಜಾಹೀರಾತಿನಲ್ಲಿ ಸಿಎಂ, ಡಿಸಿಎಂ ಫೋಟೊ ಬಳಕೆ ಪ್ರಶ್ನಿಸಿದ ಅರ್ಜಿ ವಜಾ

ಜಾಮೀನು ಆದೇಶವನ್ನು ಒಳಗೊಂಡಿರುವ ಇಮೇಲ್ ಅನ್ನು ಮೆಹ್ಸಾನಾದ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಕಳುಹಿಸಲಾಗಿತ್ತು. ಆದರೆ ಆದೇಶದ ಸರಿಯಾದ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ನ್ಯಾಯಾಲಯವು ಯಾವುದೇ ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಂಡಿಲ್ಲ. ದುರದೃಷ್ಟವಶಾತ್, ನಿನ್ನೆಯವರೆಗೆ ಈ ವಿಷಯದ ಬಗ್ಗೆ ಯಾರೂ ತಲೆಯೇ ಕೆಡಿಸಿಕೊಂಡಿಲ್ಲ. ಆದ್ದರಿಂದ, ನ್ಯಾಯದ ಹಿತದೃಷ್ಟಿಯಿಂದ ಮತ್ತು ಜೈಲು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಅರ್ಜಿದಾರರು ಜೈಲಿನಲ್ಲಿ ಉಳಿಯುಂತಾಯಿತು. ಹಾಗಾಗಿ ಅವರಿಗೆ 1 ಲಕ್ಷ ರೂ. ಪರಿಹಾರವನ್ನು ನೀಡುವಂತೆ ರಾಜ್ಯಕ್ಕೆ ನಿರ್ದೇಶಿಸುತ್ತಿದ್ದೇವೆ. ಲಕ್ಷ. 14 ದಿನಗಳ ಅವಧಿಯೊಳಗೆ ಪಾವತಿಸಬೇಕು ಎಂದು ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ. ಜೈಲು ದಾಖಲೆಗಳ ಪ್ರಕಾರ, ಅರ್ಜಿದಾರರು ಈಗಾಗಲೇ ಐದು ವರ್ಷಗಳಿಗಿಂತ ಹೆಚ್ಚು ಅವಧಿಯನ್ನು ಜೈಲಿನಲ್ಲಿ ಕಳೆದಿದ್ದಾರೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Narendra Modi: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಯುವ ಜನತೆಗೆ ಕರೆ ನೀಡಿದ ಪ್ರಧಾನಿ ಮೋದಿ

Narendra Modi: ಲೋಕಸಭಾ ಚುನಾವಣೆಯ 7ನೇ ಮತ್ತು ಅಂತಿಮ ಹಂತದ ಮತದಾನ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಮತದಾರರಿಗೆ ವಿಶೇಷವಾಗಿ ಯುವ ಜನತೆ ಮತ್ತು ಮಹಿಳೆಯರಿಗೆ ಸಂದೇಶ ನೀಡಿ, ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ತೆರಳಿ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election)ಯ 7ನೇ ಮತ್ತು ಅಂತಿಮ ಹಂತದ ಮತದಾನ ನಡೆಯುತ್ತಿದೆ. ದೇಶದ 57 ಕ್ಷೇತ್ರಗಳಲ್ಲಿ ಇಂದು (ಜೂನ್‌ 1) ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಮತದಾರರಿಗೆ ವಿಶೇಷವಾಗಿ ಯುವ ಜನತೆ ಮತ್ತು ಮಹಿಳೆಯರಿಗೆ ಸಂದೇಶ ನೀಡಿ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋದಿ, ʼʼಇಂದು 2024ರ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಆಯೋಜಿಸಲಾಗಿದೆ. 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 57 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾಯಿಸಿ. ಯುವ ಮತ್ತು ಮಹಿಳಾ ಮತದಾರರು ದಾಖಲೆ ಸಂಖ್ಯೆಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸುತ್ತಾರೆ ಎನ್ನುವ ಭರವಸೆ ಇದೆ. ಎಲ್ಲರೂ ಒಟ್ಟಾಗಿ, ನಮ್ಮ ಪ್ರಜಾಪ್ರಭುತ್ವವನ್ನು ಇನ್ನಷ್ಟು ಬಲಪಡಿಸೋಣʼʼ ಎಂದು ಬರೆದುಕೊಂಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೂಡ ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಕರೆ ನೀಡಿದ್ದಾರೆ. “ದೇಶ ಮತ್ತು ಉತ್ತರ ಪ್ರದೇಶದಲ್ಲಿ ಹೆದ್ದಾರಿಗಳು, ವಿಮಾನ ನಿಲ್ದಾಣಗಳು, ಹೈಸ್ಪೀಡ್ ರೈಲುಗಳು ಮತ್ತು ಇಂಟರ್‌ನೆಟ್‌ ಜಾಲವನ್ನು ನಿರ್ಮಿಸುವ ಪ್ರಾಮಾಣಿಕ ಸರ್ಕಾರವನ್ನು ಆಯ್ಕೆ ಮಾಡಲು ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ಎಲ್ಲ ಮತದಾರರು ವಿಶೇಷವಾಗಿ ಯುವಕರಿಗೆ ಮನವಿ ಮಾಡುತ್ತೇನೆ. ಪ್ರತಿಯೊಬ್ಬ ಬಡ ವ್ಯಕ್ತಿಗೆ ಮನೆ, ಅನಿಲ ಮತ್ತು ಉಚಿತ ಚಿಕಿತ್ಸೆಯನ್ನು ಒದಗಿಸುವ ವಿಶ್ವಾಸಾರ್ಹ ಸರ್ಕಾರವು ಭಾರತ ಮತ್ತು ಉತ್ತರ ಪ್ರದೇಶದ ಚಿತ್ರಣವನ್ನೇ ಬದಲಾಯಿಸಬಹುದು” ಎಂದು ಶಾ ಹೇಳಿದ್ದಾರೆ.

ʼಇಂಡಿಯಾʼ ಒಕ್ಕೂಟಕ್ಕೆ ಅನುಕೂಲ ಎಂದ ಖರ್ಗೆ

ಇತ್ತ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಬಾರಿಯ ಚುನಾವಣೆ ಪ್ರತಿಪಕ್ಷಗಳ ʼಇಂಡಿಯಾʼ ಮೈತ್ರಿಕೂಟಕ್ಕೆ ಅನುಕೂಲವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಇಂದು ಕೊನೆಯ ಹಂತದ ಮತದಾನ. ಸಂವಿಧಾನವನ್ನು ರಕ್ಷಿಸಲು ವೋಟು ಮಾಡಿ. ʼಇಂಡಿಯಾʼ ಮೈತ್ರಿಕೂಟ ಸರ್ವಾಧಿಕಾರಿ ಶಕ್ತಿಯ ವಿರುದ್ಧ ಹೋರಾಟ ನಡೆಸುತ್ತಿದೆ. ಆರು ಹಂತಗಳ ಮತದಾನದಲ್ಲಿಯೂ ನಾವು ಜಯ ಗಳಿಸಬೇಕೆಂದು ಮತದಾರರು ಬಯಸಿದ್ದಾರೆ. ಈ ಹಂತದಲ್ಲಿಯೂ ಕೈ ಹಿಡಿಯಲಿದ್ದಾರೆ. ಮೊದಲ ಬಾರಿ ಹಕ್ಕು ಚಲಾಯಿಸಲಿರುವ ಯುವ ಮತದಾರರ ಹೆಗಲ ಮೇಲೆ ಬಹು ದೊಡ್ಡ ಜವಾಬ್ದಾರಿ ಇದೆ. ಅವರನ್ನು ನಾನು ಸ್ವಾಗತಿಸುತ್ತೇನೆ. ಬದಲಾವಣೆಗಾಗಿ ಪ್ರತಿಯೊಬ್ಬರೂ ತಮ್ಮ ಹಕ್ಕನ್ನು ಚಲಾಯಿಸಿʼʼ ಎಂದು ಖರ್ಗೆ ಕರೆ ನೀಡಿದ್ದಾರೆ.

ಇದನ್ನೂ ಓದಿ: Modi Meditation: ಮೋದಿ ಮಾಡ್ತಿರೋದು ‘ಧ್ಯಾನ’ ಅಲ್ಲ ‘ಡ್ರಾಮಾ’ ಎಂದ ಮಲ್ಲಿಕಾರ್ಜುನ ಖರ್ಗೆ!

ಉತ್ತರ ಪ್ರದೇಶದ 13 ಲೋಕಸಭೆ ಕ್ಷೇತ್ರಗಳು, ಪಂಜಾಬ್‌ 13, ಪಶ್ಚಿಮ ಬಂಗಾಳ 9, ಬಿಹಾರ 8, ಒಡಿಶಾ 6, ಹಿಮಾಚಲ ಪ್ರದೇಶ 4, ಜಾರ್ಖಂಡ್‌ 3 ಹಾಗೂ ಚಂಡೀಗಢದ 1 ಲೋಕಸಭೆ ಕ್ಷೇತ್ರದಲ್ಲಿ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಸಂಜೆ 6 ಗಂಟೆವರೆಗೆ ಜನ ಹಕ್ಕು ಚಲಾಯಿಸಬಹುದಾಗಿದ್ದು, ಶಾಂತಿಯುತ ಹಾಗೂ ಪಾರದರ್ಶಕ ಚುನಾವಣೆಗಾಗಿ ಆಯೋಗವು ಬಿಗಿ ಬಂದೋಬಸ್ತ್‌ ಸೇರಿ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವರ ಭವಿಷ್ಯವು ಮತಯಂತ್ರಗಳಲ್ಲಿ ಭದ್ರವಾಗಲಿದೆ.

Continue Reading

Lok Sabha Election 2024

OpenAI: ಇಸ್ರೇಲ್‌ನ ಸಂಸ್ಥೆಯಿಂದ ಬಿಜೆಪಿ ವಿರುದ್ಧ ಪ್ರಚಾರ; ಶಾಕಿಂಗ್‌ ಮಾಹಿತಿ ಹಂಚಿಕೊಂಡ ಓಪನ್ಎಐ

OpenAI: ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನ ಇಂದು (ಜೂನ್‌ 1) ನಡೆಯುತ್ತಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ. ಚುನಾವಣೆಯ ಮೇಲೆ ಪ್ರಭಾವ ಬೀರಲು ಇಸ್ರೇಲ್‌ ಸಂಸ್ಥೆ ಕೃತಕ ಬುದ್ಧಿಮತ್ತೆ (AI) ಮಾದರಿಗಳನ್ನು ಬಳಸಲು ಪ್ರಯತ್ನಿಸಿದೆ ಎಂದು ಓಪನ್ಎಐ ಹೇಳಿದೆ. ಈ ಬಗ್ಗೆ ಬಿಜೆಪಿ ತೀವ್ರ ಕಳವಳ ವ್ಯಕ್ತಪಡಿಸಿದೆ.

VISTARANEWS.COM


on

OpenAI
Koo

ನವದೆಹಲಿ: ಸುಮಾರು ಎರಡು ತಿಂಗಳ ಕಾಲ ನಡೆದ ಲೋಕಸಭಾ ಚುನಾವಣೆ (Lok Sabha Election)ಯ ಕೊನೆಯ ಹಂತದ ಮತದಾನ ಇಂದು (ಜೂನ್‌ 1) ನಡೆಯುತ್ತಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ. ಚುನಾವಣೆಯ ಮೇಲೆ ಪ್ರಭಾವ ಬೀರಲು ಇಸ್ರೇಲ್‌ ಸಂಸ್ಥೆ ಕೃತಕ ಬುದ್ಧಿಮತ್ತೆ (AI) ಮಾದರಿಗಳನ್ನು ಬಳಸಲು ಪ್ರಯತ್ನಿಸಿದೆ ಎಂದು ಚಾಟ್‌ಜಿಪಿಟಿ (ChatGPT)ಯ ಓಪನ್ಎಐ (OpenAI) ಹೇಳಿದೆ.

ಇಸ್ರೇಲ್‌ ಮೂಲದ ಸಂಸ್ಥೆಯಾದ STOIC ಅಭಿಯಾನ ನಡೆಸಿ ಬಿಜೆಪಿ ವಿರೋಧಿ ಚಟುವಟಿಕೆ ನಡೆಸಲು ಪ್ರಯತ್ನಿಸಿ, ವಿಫಲವಾಗಿದೆ ಎನ್ನಲಾಗಿದೆ. ಆಡಳಿತಾರೂಢ ಬಿಜೆಪಿಯನ್ನು ಟೀಕಿಸುವ ಮತ್ತು ಕಾಂಗ್ರೆಸ್ ಅನ್ನು ಶ್ಲಾಘಿಸುವ ಕಮೆಂಟ್‌, ಲೇಖನ, ಸಾಮಾಜಿಕ ಮಾಧ್ಯಮ ಪ್ರೊಫೈಲ್‌ಗಳನ್ನು ರಚಿಸುವಂತಹ ಕಾರ್ಯಗಳಿಗಾಗಿ ಓಪನ್ಎಐಯ ಶಕ್ತಿಯುತ ಭಾಷಾ ಮಾದರಿಗಳನ್ನು ಬಳಸಿಕೊಳ್ಳಲು ಪ್ರಯತ್ನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಓಪನ್‌ಎಐ ಹೇಳಿದ್ದೇನು?

“ಮೇಯಲ್ಲಿ STOIC ನೆಟ್‌ವರ್ಕ್‌ ಭಾರತದ ಆಡಳಿತಾರೂಢ ಬಿಜೆಪಿಯನ್ನು ಟೀಕಿಸುವ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಪಕ್ಷವನ್ನು ಶ್ಲಾಘಿಸುವ ಕಮೆಂಟ್‌ಗಳನ್ನು ರಚಿಸಲು ಪ್ರಾರಂಭಿಸಿತು. ಚುನಾವಣೆಯ ಮೇಲೆ ಪರಿಣಾಮ ಬೀರಬಹುದಾದ ಇಂತಹ ಕೆಲವು ಚಟುವಟಿಕೆಗಳನ್ನು ನಾವು ತಡೆದಿದ್ದೇವೆʼʼ ಎಂದು ಓಪನ್‌ಎಐ ಹೇಳಿದೆ. ʼʼಸಾಮಾಜಿಕ ಜಾಲತಾಣಗಳಾದ ಎಕ್ಸ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌, ವೆಬ್‌ಸೈಟ್‌ ಮತ್ತು ಯೂಟ್ಯೂಬ್‌ನಲ್ಲಿ ಪ್ರಭಾವ ಬೀರಲು ಯತ್ನಿಸುತ್ತಿದ್ದ ಇಸ್ರೇಲ್‌ನಿಂದ ಕಾರ್ಯನಿರ್ವಹಿಸುವ ಖಾತೆಗಳ ಸಮೂಹವನ್ನು ನಿಷೇಧಿಸಲಾಗಿದೆʼʼ ಎಂದೂ ವಿವರಿಸಿದೆ.

ʼʼಈ ಅಭಿಯಾನವನ್ನು ಕೆನಡಾ, ಅಮೆರಿಕ ಮತ್ತು ಇಸ್ರೇಲ್‌ನಲ್ಲಿರುವವರನ್ನು ಗುರಿಯಾಗಿಸಿ ಆರಂಭಿಸಲಾಗಿತ್ತು. ಇದಕ್ಕಾಗಿ ಸಂದೇಶಗಳಲ್ಲಿ ಇಂಗ್ಲಿಷ್‌ ಮತ್ತು ಹಿಬ್ರೂ ಭಾಷೆಗಳನ್ನು ಬಳಸಲಾಗುತ್ತಿತ್ತು. ಬಳಿಕ ಮೇಯಲ್ಲಿ ಭಾರತೀಯರನ್ನು ತಲುಪುವ ಉದ್ದೇಶದಿಂಧ ಇಂಗ್ಲಿಷ್‌ನಲ್ಲಿ ಕಮೆಂಟ್‌ ರಚಿಸಲಾಗಿತ್ತುʼʼ ಎಂದು ಓಪನ್‌ಎಐ ತಿಳಿಸಿದೆ.

ಅಪಾಯಕಾರಿ ಬೆದರಿಕೆ ಎಂದ ಬಿಜೆಪಿ

ಈ ಬೆಳವಣಿಗೆ ಬಗ್ಗೆ ಬಿಜೆಪಿ ಆತಂಕ ವ್ಯಕ್ತಪಡಿಸಿದೆ. ಇದು ಅಪಾಯಕಾರಿ ಬೆದಿಕೆ ಎಂದು ಹೇಳಿದೆ. ಈ ಬಗ್ಗೆ ಮಾತನಾಡಿರುವ ಸಚಿವ ರಾಜೀವ್ ಚಂದ್ರಶೇಖರ್, ʼʼಇದು ನಮ್ಮ ಪ್ರಜಾಪ್ರಭುತ್ವಕ್ಕೆ ಅತ್ಯಂತ ಅಪಾಯಕಾಯಾದ ಬೆದರಿಕೆ. ಭಾರತ ಮತ್ತು ಹೊರಗಿನ ಪಟ್ಟಭದ್ರ ಹಿತಾಸಕ್ತಿಗಳು ಬಿಜೆಪಿ ವಿರುದ್ಧ ಕಾರ್ಯನಿರ್ವಹಿಸುತ್ತಿವೆ ಎನ್ನುವುದು ಇದರಿಂದ ಸ್ಪಷ್ವಾಗುತ್ತದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡಬೇಕಾಗಿದೆ ಮತ್ತು ಸತ್ಯವನ್ನು ಬಹಿರಂಗಪಡಿಸಬೇಕಾಗಿದೆ” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಇಂಟರ್‌ನೆಟ್‌ ಮೂಲಕ ನಮ್ಮ ಮಾದರಿಗಳನ್ನು ಬಳಸಿ ವಂಚನೆಯಲ್ಲಿ ತೊಡಗಿದ್ದ ಇಂತಹ ಸುಮಾರು ಐದು ರಹಸ್ಯ ಕಾರ್ಯಾಚರಣೆಗಳನ್ನು ಕಳೆದ ಮೂರು ತಿಂಗಳಲ್ಲಿ ಗುರುತಿಸಲಾಗಿದೆ ಎಂದು ಓಪನ್ಎಐ ಹೇಳಿದೆ. 2015ರಲ್ಲಿ ಸ್ಥಾಪಿಸಲಾದ ಕೃತಕ ಬುದ್ಧಿಮತ್ತೆ ಸಂಶೋಧನಾ ಸಂಸ್ಥೆಯೇ ಓಪನ್ಎಐ.

ಇದನ್ನೂ ಓದಿ: Lok Sabha Election: ಇಂದು ಕೊನೇ ಹಂತದ ಮತದಾನ; ಸಂಜೆ ಎಕ್ಸಿಟ್‌ ಪೋಲ್, ಇಂದೇ ತಿಳಿಯಲಿದೆ ಭವಿಷ್ಯ!

2024ರ ಲೋಕಸಭೆ ಚುನಾವಣೆಯ 7ನೇ ಮತ್ತು ಅಂತಿಮ ಹಂತದ ಮತದಾನ ಇಂದು (ಜೂನ್ 1) ಆರಂಭವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಾಲಿವುಡ್‌ ನಟಿ ಕಂಗನಾ ರಾಣಾವತ್‌, ಚರಣ್‌ಜೀತ್‌ ಸಿಂಗ್‌ ಚನ್ನಿ, ಅನುರಾಗ್ ಠಾಕೂರ್, ಅಭಿಷೇಕ್ ಬ್ಯಾನರ್ಜಿ, ಮೀಸಾ ಭಾರ್ತಿ ಮತ್ತಿತರರ ಪ್ರಮುಖ ನಾಯಕರ ಭವಿಷ್ಯವನ್ನು ಮತದಾರರು ಇಂದು ನಿರ್ಧರಿಸಲಿದ್ದಾರೆ.

Continue Reading

ಪ್ರಮುಖ ಸುದ್ದಿ

Shatru Bhairavi Yaga: ಶತ್ರು ಭೈರವಿ ಯಾಗ ನಡೆದಿಲ್ಲ, ಪ್ರಾಣಿಬಲಿಯೂ ಇಲ್ಲ: ಕೇರಳ ಸರಕಾರದಿಂದಲೇ ತನಿಖೆ, ಸ್ಪಷ್ಟನೆ

Shatru Bhairavi Yaga: ಕೇರಳ ರಾಜ್ಯ ಗುಪ್ತಚರ ಹಾಗೂ ಪೊಲೀಸ್ ಇಲಾಖೆ (Kerala police) ಈ ಕುರಿತು ವಿಶೇಷ ತನಿಖಾ ತಂಡ (SIT) ರಚಿಸಿದ್ದು, ಅದರ ಮೂಲಕ ತನಿಖೆ ನಡೆಸಲಾಗಿದೆ. ಕೇರಳ ರಾಜ್ಯದ ಕಣ್ಣೂರು, ತಳಿಪರಂಬ ಭಾಗದಲ್ಲಿ ಓಡಾಡಿ ಕೇರಳ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ.

VISTARANEWS.COM


on

shatru bhairavi yaga
ತಳಿಪರಂಬ ಶ್ರೀ ರಾಜರಾಜೇಶ್ವರ ದೇವಾಲಯ
Koo

ಮಂಗಳೂರು: ʼತಮ್ಮನ್ನು ಮುಗಿಸಲು ಕೇರಳದಲ್ಲಿ ಶತ್ರು ಭೈರವಿ ಯಾಗ (Shatru Bhairavi Yaga) ನಡೆದಿದೆʼ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ನೀಡಿದ್ದ ಹೇಳಿಕೆ ಕೇರಳದಲ್ಲಿ (Kerala) ಸಂಚಲನ ಸೃಷ್ಟಿಸಿದ್ದು, ಈ ಬಗ್ಗೆ ಅಲ್ಲಿನ ಸರ್ಕಾರ ತನಿಖೆ ನಡೆಸಿದೆ. ಅಂಥ ಯಾವುದೇ ಯಾಗ ನಡೆದಿಲ್ಲ, ಪ್ರಾಣಿ ಬಲಿ (animal sacrifice) ನೀಡಲಾಗಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಕೇರಳ ರಾಜ್ಯ ಗುಪ್ತಚರ ಹಾಗೂ ಪೊಲೀಸ್ ಇಲಾಖೆ (Kerala police) ಈ ಕುರಿತು ವಿಶೇಷ ತನಿಖಾ ತಂಡ (SIT) ರಚಿಸಿದ್ದು, ಅದರ ಮೂಲಕ ತನಿಖೆ ನಡೆಸಲಾಗಿದೆ. ಕೇರಳ ರಾಜ್ಯದ ಕಣ್ಣೂರು, ತಳಿಪರಂಬ ಭಾಗದಲ್ಲಿ ಓಡಾಡಿ ಕೇರಳ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. ಪ್ರಾಣಿ ಬಲಿ ಕೊಟ್ಟು ಶತ್ರು ಭೈರವಿ ಯಾಗ ನಡೆದಿದೆಯಾ ಎಂದು ತನಿಖೆ ನಡೆಸಿ ಸಮಗ್ರ ಮಾಹಿತಿ ಸಂಗ್ರಹಿಸಿ ಕೇರಳ ಡಿಜಿಪಿಗೆ ವಿಶೇಷ ತನಿಖಾ ತಂಡ ವರದಿ ಸಲ್ಲಿಸಿದೆ.

ತಳಿಪರಂಬ ಶ್ರೀ ರಾಜರಾಜೇಶ್ವರಿ ದೇವರು

ತಳಿಪರಂಬ, ರಾಜರಾಜೇಶ್ವರಂ ಹಾಗೂ ಕಣ್ಣೂರು ಸುತ್ತಮುತ್ತ ಪ್ರದೇಶದಲ್ಲಿ ತನಿಖೆ ನಡೆಸಿದ ಕೇರಳ ಟೀಂ, ಅಂಥ ಯಾವುದೇ ಪ್ರಾಣಿ ಬಲಿ ಯಾಗ ನಡೆದಿಲ್ಲ ಎಂದು ಕೇರಳ ಡಿಜಿಪಿಗೆ ವರದಿ ಸಲ್ಲಿಸಿದೆ. ಈ ನಡುವೆ ಕರ್ನಾಟಕ ಪೊಲೀಸ್ ವಿಶೇಷ ತಂಡದಿಂದಲೂ ಗುಪ್ತವಾಗಿ ಮಾಹಿತಿ ಸಂಗ್ರಹ ನಡೆದಿದೆ. ಆದರೆ ಯಾರ ತನಿಖೆಯಲ್ಲೂ ಯಾಗದ ಕುರಿತು ಸುಳಿವು ದೊರೆತಿಲ್ಲ.

ಕೇರಳ ಸಚಿವರಿಂದಲೂ ಸ್ಪಷ್ಟನೆ

ಕೇರಳದ ದೇವಸ್ವಂ ಬೋರ್ಡ್ ಸಚಿವ ರಾಧಾಕೃಷ್ಣನ್ ಅವರೂ ಡಿಕೆ ಶಿವಕುಮಾರ್ ಆರೋಪವನ್ನು ನಿರಾಕರಿಸಿದ್ದಾರೆ. ನಮ್ಮ ರಾಜ್ಯದ ಯಾವುದೇ ದೇವಸ್ಥಾನಗಳಲ್ಲೂ ಪ್ರಾಣಿ ಬಲಿ ನಡೆಯಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ದೇವಳ ಆಡಳಿತ ಮಂಡಳಿ ನಿರಾಕರಣೆ

“ದೇವಸ್ವಂ ಬೋರ್ಡ್ ಅಧೀನದಲ್ಲಿರುವ ಯಾವುದೇ ದೇವಾಲಯಗಳಲ್ಲಿ ಪ್ರಾಣಿ ಬಲಿಯನ್ನು ಒಳಗೊಂಡ ಯಾವುದೇ ಪೂಜೆ ಅಥವಾ ನೈವೇದ್ಯಗಳು ನಡೆಯುವುದಿಲ್ಲ. ಕೇರಳದ ಮಲಬಾರ್ ದೇವಸ್ವಂ ಬೋರ್ಡ್ ಅಧೀನದಲ್ಲಿರುವ ರಾಜರಾಜೇಶ್ವರಂ ದೇವಸ್ಥಾನದ ಹೆಸರಿನ ಬಗ್ಗೆ ದೃಶ್ಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಅಸತ್ಯ ಮತ್ತು ದುರದೃಷ್ಟಕರ” ಎಂದು ಅಧಿಕೃತ ಪತ್ರಿಕಾ ಹೇಳಿಕೆ‌ ಮೂಲಕ ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

ದೇವಾಲಯ ಆಡಳಿತ ಮಂಡಳಿ ಸ್ಪಷ್ಟನೆ

“ಶ್ರೀ ರಾಜರಾಜೇಶ್ವರಿ ದೇವಸ್ಥಾನವು ಕೇರಳದ ಅತ್ಯಂತ ಹಳೆಯ ಮತ್ತು ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದೆ. ಕಣ್ಣೂರು ತಳಿಪರಂಬ ಶ್ರೀ ರಾಜರಾಜೇಶ್ವರಂ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಅಂತಹ ಯಾವುದೇ ಪೂಜೆ ಅಥವಾ ಶತ್ರು ಭೈರವಿ ಯಾಗವನ್ನು ನಡೆಸಲಾಗುವುದಿಲ್ಲ. ಮಲಬಾರ್ ದೇವಸ್ವಂ ಬೋರ್ಡ್ ಅಧೀನದಲ್ಲಿರುವ ಯಾವುದೇ ದೇವಾಲಯಗಳಲ್ಲಿ ಪ್ರಾಣಿ ಬಲಿಯನ್ನು ಒಳಗೊಂಡ ಯಾವುದೇ ಪೂಜೆ ಅಥವಾ ನೈವೇದ್ಯಗಳಿಲ್ಲ. ದೇವಾಲಯದ ಹಿತಾಸಕ್ತಿಗಳ ವಿರುದ್ಧದ ಪ್ರಚಾರಗಳನ್ನು ಸಂಪೂರ್ಣವಾಗಿ ತಿರಸ್ಕರಿಸಲಾಗಿದೆ” ಎಂದು ಪತ್ರಿಕಾ ಹೇಳಿಕೆ ಮೂಲಕ ತಳಿಪರಂಬ ಶ್ರೀ ರಾಜರಾಜೇಶ್ವರಂ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹೇಳಿಕೆ ನೀಡಿದ್ದಾರೆ.

ಡಿಕೆಶಿ ಆರೋಪ ಏನಿತ್ತು?

ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ತಳಿಪರಂಬ ಶ್ರೀ ರಾಜರಾಜೇಶ್ವರಂ ದೇವಸ್ಥಾನದಲ್ಲಿ ಸಿಎಂ ಹಾಗೂ ನನ್ನ ವಿರುದ್ಧ ಶತ್ರು ಭೈರವಿ ಯಾಗ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿಕೆಶಿ ಮೊನ್ನೆ ಹೇಳಿದ್ದರು. “ಇದು ಶತ್ರು ಸಂಹಾರಕ್ಕಾಗಿ ಮಾಡುತ್ತಿರುವ ಶತ್ರು ಭೈರವಿ ಯಾಗವಾಗಿದ್ದು, ಇದನ್ನು ಮಾಡಿಸುತ್ತಿರುವವರು ಯಾರೆಂದು ಗೊತ್ತಿದೆ. ರಾಜಕೀಯ ವೈರಿಗಳು ಮಾಡಿಸುತ್ತಿದ್ದಾರೆ. ಯಾಗದಲ್ಲಿ ಮೇಕೆ, ಹಂದಿ, ಕುರಿ, ಹೀಗೆ ಪಂಚಬಲಿ ಕೊಟ್ಟಿದ್ದಾರೆ. ಅಘೋರಿಗಳು ಇದರಲ್ಲಿ ಪಾಲ್ಗೊಂಡಿದ್ದಾರೆ. ಕೇರಳದ ರಾಜರಾಜೇಶ್ವರಿ ದೇವಸ್ಥಾನದ ಆಸುಪಾಸು ಚೆಕ್ ಮಾಡಿ, ನಿಮಗೇ ಗೊತ್ತಾಗುತ್ತೆ. ಇದರಲ್ಲಿ ಭಾಗವಹಿಸಿದವರೇ ನನಗೆ ಮಾಹಿತಿ ನೀಡಿದ್ದಾರೆ” ಎಂದು ಡಿಕೆಶಿ ಆರೋಪಿಸಿದ್ದರು.

ಇದನ್ನೂ ಓದಿ: ಮಾರಣ ಶತ್ರು ಭೈರವಿ ಯಾಗ ಎದುರಿಸಲು ರಕ್ಷಣಾಕವಚ ಮಾಡಿಸಿದ ಡಿಕೆಶಿ! ಹೀಗಿರುತ್ತೆ ನೋಡಿ ಯಾಗ

Continue Reading

Lok Sabha Election 2024

Lok Sabha Election: ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದಿರುವ 6 ಅಭ್ಯರ್ಥಿಗಳ ಸಾಮರ್ಥ್ಯ ಎಷ್ಟಿದೆ?

Lok Sabha Election: ಲೋಕಸಭೆ ಚುನಾವಣೆಯ 7ನೇ ಮತ್ತು ಅಂತಿಮ ಹಂತದ ಮತದಾನ ಇಂದು (ಜೂನ್ 1) ಆರಂಭವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿ ಹಲವು ಮುಖಂಡರು ಏಳನೇ ಹಂತದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ವಾರಾಣಸಿ ಕ್ಷೇತ್ರದಿಂದ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ಇವರ ವಿರುದ್ಧ ಕಾಂಗ್ರೆಸ್‌ನ ಅಜಯ್‌ ರೈ ಸೇರಿ 6 ಮಂದಿ ಸ್ಪರ್ಧಿಸುತ್ತಿದ್ದಾರೆ. ಅವರ ವಿವರ ಇಲ್ಲಿದೆ.

VISTARANEWS.COM


on

Lok Sabha Election
Koo

ನವದೆಹಲಿ: 2024ರ ಲೋಕಸಭೆ ಚುನಾವಣೆಯ (Lok Sabha Election) 7ನೇ ಮತ್ತು ಅಂತಿಮ ಹಂತದ ಮತದಾನ ಇಂದು (ಜೂನ್ 1) ಆರಂಭವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಸೇರಿ ಹಲವು ಮುಖಂಡರು ಏಳನೇ ಹಂತದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ವಾರಾಣಸಿ ಕ್ಷೇತ್ರದಿಂದ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. 2014ರಿಂದ ಅವರು ಇಲ್ಲಿಂದ ಸ್ಪರ್ಧಿಸುತ್ತಿದ್ದು, ಸದ್ಯ ಈ ಕಣ ದೇಶದ ಗಮನ ಸೆಳೆದಿದೆ.

ಮೋದಿ ವಿರುದ್ಧ ಈ ಬಾರಿ ಆರು ಮಂದಿ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್‌ ಅಜಯ್ ರೈ ಅವರನ್ನು ಮೂರನೇ ಬಾರಿಗೆ ಕಣಕ್ಕಿಳಿಸಿದೆ. ಇನ್ನು ಯುಗ ತುಳಸಿ ಪಾರ್ಟಿಯಿಂದ ಕೋಳಿಶೆಟ್ಟಿ ಶಿವಕುಮಾರ್, ಬಹುಜನ ಸಮಾಜ ಪಕ್ಷದಿಂದ ಅಥೆರ್‌ ಜಮಾಲ್‌ ಲಾರಿ, ಗಗನ್‌ ಪ್ರಕಾಶ್‌ ಯಾದವ್‌ (ಅಪ್ನಾ ದಳ, ಕಮರೇವಾಡಿ), ಸ್ವತಂತ್ರವಾಗಿ ದಿನೇಶ್‌ ಕುಮಾರ್‌ ಯಾದವ್‌ ಮತ್ತು ಸಂಜಯ್‌ ಕುಮಾರ್‌ ತಿವಾರಿ ಪ್ರಧಾನಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಅವರ ಕುರಿತಾದ ವಿವರ ಇಲ್ಲಿದೆ.

ಅಜಯ್‌ ರೈ

53 ವರ್ಷದ ಕಾಂಗ್ರೆಸ್‌ ನಾಯಕ ಅಜಯ್‌ ರೈ ಸತತ ಮೂರನೇ ಬಾರಿ ಮೋದಿ ವಿರುದ್ಧ ತೊಡೆ ತಟ್ಟಿದ್ದಾರೆ. ಇವರು 2014 ಮತ್ತು 2019ರಲ್ಲಿ ಪ್ರಧಾನಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಅಜಯ್‌ ರೈ ವಿರುದ್ಧ ಸುಮಾರು 18 ಪ್ರಕರಣಗಳು ದಾಖಲಾಗಿವೆ. ಇವರು ಆರಂಭದಲ್ಲಿ ಆರ್‌ಎಸ್‌ಎಸ್‌, ಎಬಿವಿಪಿ ಮತ್ತು ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು. 1996, 2002 ಮತ್ತು 2007ರಲ್ಲಿ ಇವರು ಬಿಜೆಪಿಯಿಂದ ಉತ್ತರ ಪ್ರದೇಶದ ವಿಧಾನ ಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. 2009ರಲ್ಲಿ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದರು. ಅಜಯ್‌ ರೈ 6.66 ಲಕ್ಷ ರೂ.ಗಳ ಚರಾಸ್ತಿ ಮತ್ತು 1.25 ಕೋಟಿ ರೂ.ಗಳ ಸ್ಥಿರಾಸ್ತಿಯನ್ನು ಹೊಂದಿದ್ದಾರೆ. ಇವರನ್ನು ಕಳೆದ ಆಗಸ್ಟ್‌ನಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

ಅಥೆರ್‌ ಜಮಾಲ್‌ ಲಾರಿ

ಬಿಎಸ್‌ಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ 70 ವರ್ಷದ ಅಥೆರ್‌ ಜಮಾಲ್‌ ಲಾರಿ ವಿರುದ್ಧವೂ ಪ್ರಕರಣವಿದೆ. ಅವರ ಹೆಸರಿನಲ್ಲಿ 1 ಪ್ರಕರಣ ದಾಖಲಾಗಿದೆ.

ಕೋಳಿಶೆಟ್ಟಿ ಶಿವಕುಮಾರ್‌

46 ವರ್ಷದ ಕೋಳಿಶೆಟ್ಟಿ ಶಿವಕುಮಾರ್‌ ಹೈದರಾಬಾದ್‌ ಮೂಲದವರು. ಈ ಹಿಂದೆ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಬೇಕೆಂದು ಪ್ರತಿಭಟನೆ ನಡೆಸಿದ್ದರು. ಇವರು ಈ ಮೊದಲು ತಿರುಮಲ ತಿರುಪತಿ ದೇವಸ್ಥಾನಂ ಮೋರ್ಡ್‌ ಸದಸ್ಯರಾಗಿದ್ದರು.

ಗಗನ್‌ ಪ್ರಕಾಶ್‌ ಯಾದವ್‌

ಅಪ್ನಾ ದಳದಿಂದ ಕಣಕ್ಕಿಳಿದಿರುವ 39 ವರ್ಷದ ಗಗನ್‌ ಪ್ರಕಾಶ್‌ ಯಾದವ್‌ ಅವರ ಹೆಸರಿನಲ್ಲಿ 5 ಪ್ರಕರಣ ದಾಖಲಾಗಿದೆ. ಈ ಹಿಂದೆ ಇವರು ಸಮಾಜವಾದಿ ಪಾರ್ಟಿಯಲ್ಲಿದ್ದರು.

ದಿನೇಶ್‌ ಕುಮಾರ್‌ ಯಾದವ್‌

ಸತಂತ್ರ ಅಭ್ಯರ್ಥಿ ದಿನೇಶ್‌ ಕುಮಾರ್‌ ಯಾದವ್‌ ಈ ಹಿಂದೆ ಬಿಜೆಪಿಯಲ್ಲಿದ್ದರು. ಇವರ ವಿರುದ್ಧ ಯಾವುದೇ ಕೇಸ್‌ಗಳಿಲ್ಲ.

ಸಂಜಯ್‌ ಕುಮಾರ್‌ ತಿವಾರಿ

ಇನ್ನೊಬ್ಬ ಸ್ವತಂತ್ರ ಅಭ್ಯರ್ಥಿ ಇವರು. ಇವರು ದೆಹಲಿ ಮೂಲದ ಸಾಮಾಜಿಕ ಕಾರ್ಯಕರ್ತರು. ಇವರು ಗಾಂಧಿ ತತ್ವದ ಪ್ರತಿಪಾದಕರು.

ದಾಖಲೆಯ ಗೆಲುವು ಕಂಡಿದ್ದ ಮೋದಿ

ಮೋದಿ ಈ ಹಿಂದೆ ಎರಡು ಬಾರಿಯೂ ವಾರಾಣಸಿ ಕ್ಷೇತ್ರದಲ್ಲಿ ದಾಖಲೆಯ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. 2014ರ ಚುನಾವಣೆಯಲ್ಲಿ ಮೋದಿ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸ್ಪರ್ಧಿಸಿದ್ದರು. ಆಗ ಮೋದಿ 3.37 ಲಕ್ಷ ಮತಗಳ ಅಂತರಿಂದ ಗೆದ್ದಿದ್ದರು. ಇನ್ನು 2019ರಲ್ಲಿ ಮೋದಿ ಅವರು ಎಸ್‌ಪಿ-ಬಿಎಸ್‌ಪಿ ಅಭ್ಯರ್ಥಿ ಶಾಲಿನಿ ಯಾದವ್‌ ಅವರನ್ನು 4.80 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದರು.

Continue Reading
Advertisement
Nandamuri Balakrishna touch actress anjali back
ಟಾಲಿವುಡ್4 mins ago

Nandamuri Balakrishna: ನಟಿ ಅಂಜಲಿಯ ಹಿಂಭಾಗ ಟಚ್ ಮಾಡಿದ್ರಾ ಬಾಲಯ್ಯ?

Shubman Gill
ಕ್ರೀಡೆ6 mins ago

Shubman Gill: ಕಿರುತೆರೆ​ ನಟಿಯೊಂದಿಗೆ ಶುಭಮನ್​ ಗಿಲ್ ಮದುವೆ?; ಸ್ವತಃ ಸ್ಪಷ್ಟನೆ ನೀಡಿದ ನಟಿ

Narendra Modi
Lok Sabha Election 202410 mins ago

Narendra Modi: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಯುವ ಜನತೆಗೆ ಕರೆ ನೀಡಿದ ಪ್ರಧಾನಿ ಮೋದಿ

Murder Case in tumkur
ತುಮಕೂರು13 mins ago

Murder case : ಸ್ನೇಹಿತರೇ ದುಷ್ಮನ್‌ಗಳು; ಕಂಠಪೂರ್ತಿ ಕುಡಿಸಿ ಗೆಳೆಯನ ತಲೆ ಮೇಲೆ‌ ಕಲ್ಲು ಎತ್ತಿಹಾಕಿ ಕೊಲೆ

OpenAI
Lok Sabha Election 202442 mins ago

OpenAI: ಇಸ್ರೇಲ್‌ನ ಸಂಸ್ಥೆಯಿಂದ ಬಿಜೆಪಿ ವಿರುದ್ಧ ಪ್ರಚಾರ; ಶಾಕಿಂಗ್‌ ಮಾಹಿತಿ ಹಂಚಿಕೊಂಡ ಓಪನ್ಎಐ

Murder Case in Mysuru
ಕ್ರೈಂ44 mins ago

Murder case : ಜಸ್ಟ್‌ ಗುರಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ; ಸಾವಿನ ಕೊನೆ ಕ್ಷಣ ಸೆರೆ

Ambati Rayudu
ಕ್ರೀಡೆ44 mins ago

Ambati Rayudu: ಸ್ಟಾಂಡರ್ಡ್​ ಕಮ್ಮಿ ಮಾಡಿದರೆ ಉತ್ತಮ ಎಂದು ಕೊಹ್ಲಿಯ ಕಾಲೆಳೆದ ರಾಯುಡು

cm Siddaramaiah And DK Shivakumar
ಪ್ರಮುಖ ಸುದ್ದಿ48 mins ago

CM Siddaramaiah: ಸಿಎಂ, ಡಿಸಿಎಂ ಕೂಡ ಇಂದು ಕೋರ್ಟ್‌ ಕಟಕಟೆಯಲ್ಲಿ! ಏನಿದು ಕೇಸ್?‌

Cannes Film Festival Ukrainian model Sawa Pontyjska assault by security guard
ಸಿನಿಮಾ51 mins ago

Cannes Film Festival:  ಮಾಡೆಲ್‌ನನ್ನು ಒರಟಾಗಿ ಹೊರ ದಬ್ಬಿದ ಕಾನ್‌ ಚಲನಚಿತ್ರೋತ್ಸವ ಸಂಘಟಕರು; ವಿಡಿಯೊ ವೈರಲ್‌!

shatru bhairavi yaga
ಪ್ರಮುಖ ಸುದ್ದಿ1 hour ago

Shatru Bhairavi Yaga: ಶತ್ರು ಭೈರವಿ ಯಾಗ ನಡೆದಿಲ್ಲ, ಪ್ರಾಣಿಬಲಿಯೂ ಇಲ್ಲ: ಕೇರಳ ಸರಕಾರದಿಂದಲೇ ತನಿಖೆ, ಸ್ಪಷ್ಟನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌