Lok Sabha Election Result 2024: ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರು; ದೇಶದ ಚುಕ್ಕಾಣಿ ಹಿಡಿಯೋರು ಯಾರು? - Vistara News

ದೇಶ

Lok Sabha Election Result 2024: ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರು; ದೇಶದ ಚುಕ್ಕಾಣಿ ಹಿಡಿಯೋರು ಯಾರು?

Lok Sabha Election Result 2024: ಇಂದು ಬೆಳಗ್ಗೆ 8 ಗಂಟೆಯಿಂದಲೇ ಮತಎಣಿಕೆ ಆರಂಭವಾಗಿದೆ. ಮತಎಣಿಕೆ ಕೇಂದ್ರಗಳಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. ಒಟ್ಟು 543 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, 272 ಮ್ಯಾಜಿಕ್‌ ನಂಬರ್‌ ಆಗಿದೆ. ನರೇಂದ್ರ ಮೋದಿ ಹ್ಯಾಟ್ರಿಕ್‌ ಬಾರಿಸುವರೋ ಇಲ್ಲವೇ ಇಂಡಿಯಾ ಒಕ್ಕೂಟ ಮುನ್ನಡೆ ಪಡೆಯುವುದೋ ಎಂಬ ಚರ್ಚೆ, ನಿರೀಕ್ಷೆ, ಕುತೂಹಲ ಹೆಚ್ಚಾಗಿದೆ.

VISTARANEWS.COM


on

Lok Sabha Election Result
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕಳೆದ ಕೆಲ ತಿಂಗಳಿಂದ ದೇಶಾದ್ಯಂತ ತೀವ್ರ ಚರ್ಚೆ, ಕುತೂಹಲ, ರಾಜಕಾರಣಿಗಳ ಅಬ್ಬರದ ಪ್ರಚಾರ, ವಾದ, ವಾಗ್ವಾದ, ವಿವಾದಗಳಿಗೆ ಕಾರಣವಾಗಿದ್ದ ಲೋಕಸಭೆ ಚುನಾವಣೆಯು (Lok Sabha Election 2024) ನಿರ್ಣಾಯಕ ಘಟ್ಟಕ್ಕೆ ತಲುಪಿದೆ. ಮಂಗಳವಾರ ಲೋಕಸಭೆ ಚುನಾವಣೆ ಫಲಿತಾಂಶ (Lok Sabha Election Result 2024) ಪ್ರಕಟವಾಗಲಿದ್ದು, ದೇಶದ ಭವಿಷ್ಯಕ್ಕೆ ಇದು ದಿಕ್ಸೂಚಿ ಎನಿಸಲಿದೆ. ಸಹಜವಾಗಿಯೇ ರಾಜಕಾರಣಿಗಳು, ಅಭ್ಯರ್ಥಿಗಳ ಜತೆಗೆ ದೇಶದ ನಾಗರಿಕರ ಕುತೂಹಲವೂ ಜಾಸ್ತಿಯಾಗಿದೆ.

ಮಂಗಳವಾರ ಬೆಳಗ್ಗೆ 8 ಗಂಟೆಯಿಂದಲೇ ಮತಎಣಿಕೆ ಆರಂಭವಾಗಿದೆ. ಮತಎಣಿಕೆ ಕೇಂದ್ರಗಳಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. ಒಟ್ಟು 543 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, 272 ಮ್ಯಾಜಿಕ್‌ ನಂಬರ್‌ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಹ್ಯಾಟ್ರಿಕ್‌ ಬಾರಿಸುವ ಉತ್ಸಾಹದಲ್ಲಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವೇ ಗೆಲುವು ಸಾಧಿಸಲಿದೆ ಎಂಬುದಾಗಿ ಬಹುತೇಕ ಮತಗಟ್ಟೆ ಸಮೀಕ್ಷೆಗಳು ತಿಳಿಸಿವೆ.

ಬಿಜೆಪಿಗೆ ಒಲಿಯುವುದೇ ಗೆಲುವು?

ನರೇಂದ್ರ ಮೋದಿ ಅವರ ಅಲೆ, ಕಳೆದ 10 ವರ್ಷಗಳ ಅಭಿವೃದ್ಧಿ ಕೆಲಸಗಳು, ರಾಮಮಂದಿರ, 370ನೇ ವಿಧಿ ರದ್ದು ಸೇರಿ ಹಲವು ಪ್ರಮುಖ ತೀರ್ಮಾನಗಳನ್ನು ಮುಂದಿಟ್ಟುಕೊಂಡು ಬಿಜೆಪಿಯು ಚುನಾವಣೆ ಎದುರಿಸಿದೆ. ಅದರಲ್ಲೂ, ಮೋದಿ ಅವರು 200ಕ್ಕೂ ಅಧಿಕ ಸಮಾವೇಶಗಳ ಮೂಲಕ ದೇಶದ ಮೂಲೆ ಮೂಲೆಯಲ್ಲಿ ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. ಬಿಜೆಪಿ ನಾಯಕರು, ಕಾರ್ಯಕರ್ತರು ಕೂಡ ಇದಕ್ಕೆ ಶ್ರಮಿಸಿದ್ದಾರೆ. ಹಾಗಾಗಿ, ಬಿಜೆಪಿಯು ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಹಿಡಿಯು ಕನಸು ಕಾಣುತ್ತಿದೆ.

ಕುತೂಹಲ ಘಟ್ಟದಲ್ಲಿ ಇಂಡಿಯಾ ಒಕ್ಕೂಟ

ಬಿಜೆಪಿಯನ್ನು ಶತಾಯ ಗತಾಯ ಸೋಲಿಸಬೇಕು ಎಂಬ ಕಾರಣಕ್ಕಾಗಿಯೇ ಕಾಂಗ್ರೆಸ್‌ ಮುಂದಾಳತ್ವದಲ್ಲಿ ಇಂಡಿಯಾ ಒಕ್ಕೂಟವನ್ನು ರಚಿಸಿ, ಪ್ರತಿಪಕ್ಷಗಳು ಒಗ್ಗೂಡಿ ಚುನಾವಣೆ ಎದುರಿಸಿವೆ. ಮತಗಟ್ಟೆ ಸಮೀಕ್ಷೆಗಳ ವರದಿಗಳ ಆಚೆಯೂ ಅಚ್ಚರಿಯ ಫಲಿತಾಂಶವನ್ನು ಇಂಡಿಯಾ ಒಕ್ಕೂಟದ ಪಕ್ಷಗಳು ನಿರೀಕ್ಷಿಸುತ್ತಿವೆ. ಹಾಗೊಂದು ವೇಳೆ, ಮತಗಟ್ಟೆ ಸಮೀಕ್ಷೆಗಳು ಉಲ್ಟಾ ಹೊಡೆದರೆ, ಇಂಡಿಯಾ ಮೈತ್ರಿಕೂಟವು ಮುನ್ನಡೆ ಸಾಧಿಸಲಿದೆ.

ಸಮೀಕ್ಷೆಗಳು ಹೇಳಿರುವುದೇನು?

ಎಲ್ಲ ಸಮೀಕ್ಷಾ ವರದಿಗಳನ್ನು ವಿಶ್ಲೇಷಿಸಿದಾಗ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಒಟ್ಟು 543 ಕ್ಷೇತ್ರಗಳ ಪೈಕಿ 355-380 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ 2019ರ ಲೋಕಸಭೆ ಚುನಾವಣೆ ಫಲಿತಾಂಶವೇ ಮರುಕಳಿಸಲಿದೆ ಎಂದು ಹೇಳಲಾಗುತ್ತಿದೆ. 2019ರಲ್ಲಿ ಎನ್‌ಡಿಎ ಮೈತ್ರಿಕೂಟವು 353 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿಯೊಂದೇ 303 ಕ್ಷೇತ್ರಗಳಲ್ಲಿ ಜಯ ಕಂಡಿತ್ತು.

Kharage or Rahul may be pm candidate for India bloc Sasy Shashi Shashi Tharoor

200 ಸಮೀಪವೂ ಬಾರದ ಇಂಡಿಯಾ ಒಕ್ಕೂಟ

ಕಾಂಗ್ರೆಸ್‌ ಸೇರಿ ಹಲವು ಪಕ್ಷಗಳು ಒಗ್ಗೂಡಿ ರಚಿಸಿರುವ ಇಂಡಿಯಾ ಒಕ್ಕೂಟವು ಪ್ರಸಕ್ತ ಸಾರ್ವತ್ರಿಕ ಚುನಾವಣೆಯಲ್ಲಿ 125-165 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬುದು ಮತಗಟ್ಟೆ ಸಮೀಕ್ಷೆಗಳ ಒಟ್ಟು ಸಾರವಾಗಿದೆ. ಇದರೊಂದಿಗೆ ಇಂಡಿಯಾ ಒಕ್ಕೂಟವು ಮ್ಯಾಜಿಕ್‌ ನಂಬರ್‌ (272) ಬಿಡಿ, 200 ಕ್ಷೇತ್ರಗಳನ್ನೂ ತಲುಪುವುದಿಲ್ಲ ಎಂದು ಸಮೀಕ್ಷೆಗಳು ತಿಳಿಸಿವೆ. ಇದರೊಂದಿಗೆ ಕಾಂಗ್ರೆಸ್‌ ಸೇರಿ ಪ್ರತಿಪಕ್ಷಗಳಿಗೆ ಸತತ ಮೂರನೇ ಬಾರಿಯೂ ಹಿನ್ನಡೆಯಾಗುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ.

ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಲಾಭ

ದಕ್ಷಿಣ ಭಾರತದಲ್ಲಿ, ಅದರಲ್ಲೂ ಕೇರಳ ಹಾಗೂ ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆಯಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. ಬಹುತೇಕ ಸಮೀಕ್ಷೆಗಳು ತಮಿಳುನಾಡಿನಲ್ಲಿ ಬಿಜೆಪಿ 1-3 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಅಂದಾಜಿಸಿವೆ. ಕಾಂಗ್ರೆಸ್ 8-11, ಬಿಜೆಪಿ 36-39 ಮತ್ತು ಇತರರು 0-2 ಸ್ಥಾನಗಳನ್ನು ಪಡೆಯಲಿವೆ. ಬಹು ಕಟ್ಟರ್ ಪ್ರಾಂತೀಯವಾದಿ ಮತದಾರರು ಇರುವ ತಮಿಳುನಾಡಿನಲ್ಲಿ ಖಾತೆ ತೆರೆಯುವುದು ಬಿಜೆಪಿಗೆ ಸುಲಭ ಮಾತಲ್ಲ. ಹೀಗಾಗಿ ಈ ಸಲ ಗೆದ್ದರೆ ಅದೊಂದು ಐತಿಹಾಸಿಕ ಸಾಧನೆಯಾಗಲಿದೆ.

ಎನ್​ಡಿಎ ಕೇರಳದಲ್ಲಿ ಒಂದರಿಂದ ಮೂರು ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಖಾತೆಯನ್ನು ತೆರೆಯಲು ಸಜ್ಜಾಗಿದೆ ಎಂಬುದಾಗಿ ಸಮೀಕ್ಷೆಗಳು ಅಂದಾಜಿಸಿವೆ. ಕೇರಳದ 20 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆದಿದ್ದು, 2019ರಲ್ಲಿ ಶೇ.77.84ರಷ್ಟಿದ್ದ ಮತದಾನ ಪ್ರಮಾಣ ಈ ಬಾರಿ ಶೇ.70.35ಕ್ಕೆ ಕುಸಿದಿತ್ತು.

ಇದನ್ನೂ ಓದಿ: Stock Market: ಮತ್ತೊಮ್ಮೆ ಮೋದಿ ಸರ್ಕಾರದ ನಿರೀಕ್ಷೆ; ಸೆನ್ಸೆಕ್ಸ್ 2,600 ಪಾಯಿಂಟ್ಸ್‌ ಏರಿಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

DK Shivakumar: ರಾಜ್ಯಕ್ಕೊಂದು ಗಿಫ್ಟ್‌ ಸಿಟಿಗೆ ಪ್ರಧಾನಿ ಮುಂದೆ ಬೇಡಿಕೆ: ಡಿಸಿಎಂ ಡಿ‌.ಕೆ.ಶಿವಕುಮಾರ್

ಗುಜರಾತಿನಲ್ಲಿ ಇರುವಂತೆ ಕರ್ನಾಟಕಕ್ಕೂ ಗಿಫ್ಟ್ ಸಿಟಿ ಅವಕಾಶ ಮಾಡಿಕೊಡಬೇಕು ಎಂದು ಮನವಿ ಸಲ್ಲಿಸಲಾಯಿತು. ದೇಶದಲ್ಲಿ ಒಂದು ಕಡೆ ಮಾತ್ರ ಮಾಡಲು ಅವಕಾಶವಿದೆ. ಇದರ ಬಗ್ಗೆ ಆಲೋಚನೆ ಮಾಡಲಾಗುವುದು ಎಂದು ಪ್ರಧಾನಿಯವರು ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Shivakumar) ತಿಳಿಸಿದರು.

VISTARANEWS.COM


on

narendra modi dk shivakumar siddaramaiah
Koo

ಬೆಂಗಳೂರು: ರಾಜ್ಯಕ್ಕೆ ಒಂದು ಗಿಫ್ಟ್‌ ಸಿಟಿ (GIFT City) ಮಾದರಿಯ ಹಬ್‌ ನೀಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರಲ್ಲಿ ಮನವಿ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DCM DK Shivakumar) ಅವರು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಬಳಿಕ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

ಗುಜರಾತಿನಲ್ಲಿ ಇರುವಂತೆ ಕರ್ನಾಟಕಕ್ಕೂ ಗಿಫ್ಟ್ ಸಿಟಿ ಅವಕಾಶ ಮಾಡಿಕೊಡಬೇಕು ಎಂದು ಮನವಿ ಸಲ್ಲಿಸಲಾಯಿತು. ದೇಶದಲ್ಲಿ ಒಂದು ಕಡೆ ಮಾತ್ರ ಮಾಡಲು ಅವಕಾಶವಿದೆ. ಇದರ ಬಗ್ಗೆ ಆಲೋಚನೆ ಮಾಡಲಾಗುವುದು ಎಂದು ಪ್ರಧಾನಿಯವರು ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು. ಕರ್ನಾಟಕದ ತೆರಿಗೆ ಪಾವತಿಗೆ ಅನುಗುಣವಾಗಿ ಅನುದಾನ ನೀಡಬೇಕೆಂಬ ಬೇಡಿಕೆಯನ್ನು ಕೂಲಂಕುಷವಾಗಿ ಪರಿಶೀಲಿಸುವ ಭರವಸೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದಾರೆ ಎಂದರು.

ಅತ್ಯಂತ ಸೌಹಾರ್ದಯುತ ಭೇಟಿ ಇದಾಗಿತ್ತು. ಸುಮಾರು 40 ನಿಮಿಷಗಳ ಕಾಲ ನಾನು, ಸಿಎಂ ಸಿದ್ದರಾಮಯ್ಯ (CM Siddaramaiah) ಅವರು, ಸಚಿವರಾದ ಪರಮೇಶ್ವರ, ಮಹದೇವಪ್ಪ ಅವರು ಪ್ರಧಾನಿ ಮೋದಿ ಅವರ ಜೊತೆ ಚರ್ಚೆ ನಡೆಸಿದೆವು. ರಾಜ್ಯದ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು. ಭದ್ರಾ ಮೇಲ್ದಂಡೆ, ಮೇಕೆದಾಟು, ಮಹದಾಯಿ, ಬೆಂಗಳೂರಿನ ಮೆಟ್ರೋ, ಪೆರಿಫೆರಲ್ ರಿಂಗ್ ರಸ್ತೆ, ಟನಲ್ ರಸ್ತೆ ಸೇರಿದಂತೆ ರಾಜ್ಯದಲ್ಲಿ ಬಾಕಿ ಇರುವ ಯೋಜನೆಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಯಿತು ಎಂದು ಡಿಕೆಶಿ ನುಡಿದರು.

ಬೆಂಗಳೂರಿನ ಅಭಿವೃದ್ಧಿಗಾಗಿ ಮನವಿ

ಬೆಂಗಳೂರಿನ ಜಲಸಂಪನ್ಮೂಲ, ನಗರಾಭಿವೃದ್ಧಿ, ಫೆರಿಫೆರಲ್ ರಿಂಗ್ ರಸ್ತೆ, ಮೆಟ್ರೋ ಬಗ್ಗೆ ಪ್ರಸ್ತಾಪ ಮಾಡಿದ್ದೇವೆ. ಇನ್ನೊಮ್ಮೆ ಕೆಲವು ಮಾಹಿತಿಗಳ ಜತೆ ಬನ್ನಿ ಎಂದು ತಿಳಿಸಿದ್ದಾರೆ‌. ಮಂತ್ರಿಗಳು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಲಾಗುವುದು. ಒಟ್ಟಾರೆ ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ನಾವೆಲ್ಲಾ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ, ನೀವು ಅವಕಾಶ ಕೊಡಿ ಎಂದು ಮನವಿ ಮಾಡಿದ್ದೇವೆ ಎಂದರು.

ಜುಲೈ 3ರ ನಂತರ ರಾಹುಲ್ ಗಾಂಧಿ ಭೇಟಿ

ರಾಹುಲ್ ಗಾಂಧಿ (Rahul Gandhi) ಅವರ ಭೇಟಿಯ ಬಗ್ಗೆ ಕೇಳಿದಾಗ “ಶನಿವಾರ ಸಂಜೆ ದೆಹಲಿಗೆ ಬಂದ ಕಾರಣ ಭೇಟಿ ಸಾಧ್ಯವಾಗಲಿಲ್ಲ. ಸಂಸತ್ ಅಧಿವೇಶನ ಮುಗಿದ ನಂತರ ಜುಲೈ 3 ರ ನಂತರ ಭೇಟಿ ಮಾಡಿ ಅನೇಕ ವಿಚಾರಗಳ ಬಗ್ಗೆ ಅವರ ಜತೆ ಚರ್ಚೆ ನಡೆಸಲಾಗುವುದು. ಶನಿವಾರ ಮಧ್ಯಾಹ್ನ ಕರ್ನಾಟಕದ ನಾಯಕರ ಭೇಟಿಗೆ ಸಮಯ ನಿಗದಿ ಆಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಭೇಟಿಯಾಗಲು ಆಗಲಿಲ್ಲ” ಎಂದು ತಿಳಿಸಿದರು.

ಇದನ್ನೂ ಓದಿ: Gujarat GIFT City: ಗುಜರಾತ್‌ನ ಗಿಫ್ಟ್‌ ಸಿಟಿಯಲ್ಲಿ ಮದ್ಯ ಸೇವನೆಗೆ ಅವಕಾಶ!

Continue Reading

ಪ್ರಮುಖ ಸುದ್ದಿ

T20 World Cup Final: ವಿಮಾನ ನಿಲ್ದಾಣದಲ್ಲೂ ಸಿದ್ದರಾಮಯ್ಯಗೆ ವಿಶ್ವಕಪ್‌ ಕ್ರಿಕೆಟ್‌ ಧ್ಯಾನ!

T20 World Cup Final: ವೈರಲ್‌ ಆಗಿರುವ ವಿಡಿಯೋದಲ್ಲಿ, ಟ್ಯಾಬ್‌ ಒಂದರಲ್ಲಿ ಸಿದ್ದರಾಮಯ್ಯ ಅವರು ಟಿ20 ವಿಶ್ವಕಪ್‌ನ ಭಾರತ- ದಕ್ಷಿಣ ಆಫ್ರಿಕ ನಡುವಿನ ಫೈನಲ್‌ ಪಂದ್ಯಾಟವನ್ನು ವೀಕ್ಷಿಸುತ್ತಿರುವುದನ್ನು ಕಾಣಬಹುದಾಗಿದೆ. ವಿಶೇಷ ವಿಮಾನ ಲ್ಯಾಂಡ್‌ ಆಗಿದ್ದರೂ, ವಿಮಾನದ ಮೆಟ್ಟಿಲು ಏರುವ ಮುನ್ನ ಅವರು ನಿಂತುಕೊಂಡೇ ಪಂದ್ಯ ವೀಕ್ಷಿಸಿದರು.

VISTARANEWS.COM


on

cm siddaramaiah T20 World Cup Final
Koo

ಹೊಸದಿಲ್ಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಮರಳುವ ತರಾತುರಿಯ ನಡುವೆಯೂ ಕೆಲವು ಕ್ಷಣ ಬಿಡುವು ಮಾಡಿಕೊಂಡು ವಿಮಾನ ನಿಲ್ದಾಣದಲ್ಲಿ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯಾಟವನ್ನು (T20 World Cup Final) ವೀಕ್ಷಿಸಿದರು.

ವೈರಲ್‌ ಆಗಿರುವ ವಿಡಿಯೋದಲ್ಲಿ, ಟ್ಯಾಬ್‌ ಒಂದರಲ್ಲಿ ಸಿದ್ದರಾಮಯ್ಯ ಅವರು ಟಿ20 ವಿಶ್ವಕಪ್‌ನ ಭಾರತ- ದಕ್ಷಿಣ ಆಫ್ರಿಕ ನಡುವಿನ ಫೈನಲ್‌ ಪಂದ್ಯಾಟವನ್ನು ವೀಕ್ಷಿಸುತ್ತಿರುವುದನ್ನು ಕಾಣಬಹುದಾಗಿದೆ. ವಿಶೇಷ ವಿಮಾನ ಲ್ಯಾಂಡ್‌ ಆಗಿದ್ದರೂ, ವಿಮಾನದ ಮೆಟ್ಟಿಲು ಏರುವ ಮುನ್ನ ಅವರು ನಿಂತುಕೊಂಡೇ ಪಂದ್ಯ ವೀಕ್ಷಿಸಿದರು.

ಬಾರ್ಬಡೋಸ್‌ನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ ಪಂದ್ಯಾವಳಿಯ ಫೈನಲ್‌ ಪಂದ್ಯದಲ್ಲಿ ಭಾರತ (India Team) ಹಾಗೂ ದಕ್ಷಿಣ ಆಫ್ರಿಕ (South Africa) ತಂಡಗಳು ಮುಖಾಮುಖಯಾಗಿವೆ. ಭಾರತ ಟೀಮ್‌ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದ್ದು, ದಕ್ಷಿಣ ಆಫ್ರಿಕಕ್ಕೆ ಪಂದ್ಯ ಗೆಲ್ಲಲು 177 ರನ್‌ಗಳ ಟಾರ್ಗೆಟ್‌ ನೀಡಿದೆ. ಈ ನಡುವೆ ಭಾರತ 7 ವಿಕೆಟ್‌ಗಳು ಕಳೆದುಕೊಂಡಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ. ಇದರಲ್ಲಿ ಬೆಂಗಳೂರು ನಗರಕ್ಕೆ ಕುಡಿಯುವ ನೀರು (Drinking Water) ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು (Mekedatu project) ಅಣೆಕಟ್ಟು ಯೋಜನೆ ಪ್ರಮುಖವಾಗಿದ್ದು, 9000 ಕೋಟಿ ರೂ.ಗಳ ಡಿಪಿಆರ್‌ಗೆ ಕೇಂದ್ರ ಜಲ ಆಯೋಗದಿಂದ (Central water commission) ಅನುಮೋದನೆ ಬಾಕಿ ಇದೆ. ಈ ಯೋಜನೆಗೆ ಪ್ರಧಾನಿಗಳು ಖುದ್ದಾಗಿ ಆಸಕ್ತಿ ವಹಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ ಹಾಗೂ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಜನರ ಬಹುದಿನಗಳ ಕನಸಿನ ಯೋಜನೆಯಾದ ಮಹಾದಾಯಿ ಯೋಜನೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದಿದ್ದಾರೆ.

ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆಗೆ 60 ಕಿ.ಮೀ ಸುರಂಗ ಮಾರ್ಗಕ್ಕೆ 3000 ಕೋಟಿ ವೆಚ್ಚವಾಗಲಿದ್ದು, ಯೋಜನೆಯಿಂದ ಹಲವಾರು ಲಾಭಗಳಿವೆ. ಈ ಸುರಂಗ ಮಾರ್ಗ ರಾಷ್ಟ್ರೀಯ ಹೆದ್ದಾರಿ 7 ನ್ನು ರಾ.ಹೆ.4 ಕ್ಕೆ ಸಂಪರ್ಕಿಸುವುದರಿಂದ ಕರ್ನಾಟಕ ಸರ್ಕಾರ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದೊಂದಿಗೆ ಕೈಗೊಳ್ಳಬಹುದಾಗಿದ್ದು, ಕೇಂದ್ರ ಬಜೆಟ್ ಮೂಲಕ ರಾಜ್ಯ ಸರ್ಕಾರ ಹಾಗೂ ಎನ್.ಹೆಚ್.ಎ.ಐ ಗೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಡಾ ಜಿ ಪರಮೇಶ್ವರ, ಎಚ್ ಸಿ ಮಹದೇವಪ್ಪ ಅವರನ್ನು ಒಳಗೊಂಡ ಕರ್ನಾಟಕ ಸರಕಾರದ ನಿಯೋಗವು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶನಿವಾರ ರಾತ್ರಿ ಭೇಟಿ ಮಾಡಿ ಕರ್ನಾಟಕದಲ್ಲಿ ಆಗಬೇಕಾದ ಅಭಿವೃದ್ಧಿ ಕೆಲಸಗಳ ಬಗ್ಗೆ ಮನವಿ ಸಲ್ಲಿಸಿದರು.

ಇದನ್ನೂ ಓದಿ: Siddaramaiah: ಮೇಕೆದಾಟು ಕೂಡಲೇ ಕ್ಲಿಯರ್‌ ಮಾಡಿ: ಪ್ರಧಾನಿ ಮೋದಿ ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Continue Reading

ಪ್ರಮುಖ ಸುದ್ದಿ

Siddaramaiah: ಮೇಕೆದಾಟು ಕೂಡಲೇ ಕ್ಲಿಯರ್‌ ಮಾಡಿ: ಪ್ರಧಾನಿ ಮೋದಿ ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

CM Siddaramaiah: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ ಹಾಗೂ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿದ್ದಾರೆ.

VISTARANEWS.COM


on

CM Siddaramaiah pm narendra modi
ಫೈಲ್‌ ಚಿತ್ರ
Koo

ಹೊಸದಿಲ್ಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ. ಇದರಲ್ಲಿ ಬೆಂಗಳೂರು ನಗರಕ್ಕೆ ಕುಡಿಯುವ ನೀರು (Drinking Water) ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು (Mekedatu project) ಅಣೆಕಟ್ಟು ಯೋಜನೆ ಪ್ರಮುಖವಾಗಿದ್ದು, 9000 ಕೋಟಿ ರೂ.ಗಳ ಡಿಪಿಆರ್‌ಗೆ ಕೇಂದ್ರ ಜಲ ಆಯೋಗದಿಂದ (Central water commission) ಅನುಮೋದನೆ ಬಾಕಿ ಇದೆ. ಈ ಯೋಜನೆಗೆ ಪ್ರಧಾನಿಗಳು ಖುದ್ದಾಗಿ ಆಸಕ್ತಿ ವಹಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ ಹಾಗೂ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಜನರ ಬಹುದಿನಗಳ ಕನಸಿನ ಯೋಜನೆಯಾದ ಮಹಾದಾಯಿ ಯೋಜನೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಯೋಜನೆಗಳು

ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆಗೆ 60 ಕಿ.ಮೀ ಸುರಂಗ ಮಾರ್ಗಕ್ಕೆ 3000 ಕೋಟಿ ವೆಚ್ಚವಾಗಲಿದ್ದು, ಯೋಜನೆಯಿಂದ ಹಲವಾರು ಲಾಭಗಳಿವೆ. ಈ ಸುರಂಗ ಮಾರ್ಗ ರಾಷ್ಟ್ರೀಯ ಹೆದ್ದಾರಿ 7 ನ್ನು ರಾ.ಹೆ.4 ಕ್ಕೆ ಸಂಪರ್ಕಿಸುವುದರಿಂದ ಕರ್ನಾಟಕ ಸರ್ಕಾರ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದೊಂದಿಗೆ ಕೈಗೊಳ್ಳಬಹುದಾಗಿದ್ದು, ಕೇಂದ್ರ ಬಜೆಟ್ ಮೂಲಕ ರಾಜ್ಯ ಸರ್ಕಾರ ಹಾಗೂ ಎನ್.ಹೆಚ್.ಎ.ಐ ಗೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.

ಸಾರ್ವಜನಿಕ ಸಾರಿಗೆಗೆ ಬೇಡಿಕೆ ಹೆಚ್ಚಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3ನೇ ಹಂತದ 44.65 ಕಿಮೀ ಗಲನ್ನು 15611 ಕೋಟಿಗಳ ವೆಚ್ಚದ ಡಿಪಿಆರ್‌ ಅನ್ನೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು ಕೇಂದ್ರ ಸಚಿವ ಸಂಪುಟದ ಅನುಮೋದನೆ ಬಾಕಿ ಇದೆ. ಆದಷ್ಟು ಶೀಘ್ರವಾಗಿ ಅನುಮೋದನೆ ನೀಡುವಂತೆ ಕೋರಿದ್ದಾರೆ.

73.04 ಕಿ.ಮೀ ಉದ್ದದ ಅಷ್ಟಪಥ ಪೆರಿಫೆರಲ್ ರಿಂಗ್ ರೋಡನ್ನು ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಅನುಮೋದಿಸಿದೆ. ಕೇಂದ್ರ ಬಜೆಟ್‌ನಲ್ಲಿ ಅಗತ್ಯ ಅನುದಾನವನ್ನು ಮೀಸಲಿಡುವಂತೆ ಮುಖ್ಯಮಂತ್ರಿಗಳು ಪತ್ರದಲ್ಲಿ ಕೋರಿದ್ದಾರೆ.

15ನೇ ಹಣಕಾಸು ಆಯೋಗವು 2021-26 ರ ಅವಧಿಗೆ ಕೆರೆಗಳ ಅಭಿವೃದ್ಧಿ ಹಾಗೂ ಪೇರಿಫೆರಲ್ ರಿಂಗ್ ರೋಡ್‌ಗಾಗಿ ಶಿಫಾರಸ್ಸು ಮಾಡಿರುವ 6000 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ ಅವರು ಮನವಿ ಮಾಡಿದ್ದಾರೆ.

ಬಿಬಿಎಂಪಿ ವತಿಯಿಂದ ಘನ ತ್ಯಾಜ್ಯ ನಿರ್ವಹಣೆಗಾಗಿ 3200 ಕೋಟಿ ಅಂದಾಜು ಮೊತ್ತದ ಯೋಜನೆ ಕೈಗೊಳ್ಳುತ್ತಿದ್ದು, ಯೋಜನೆಯ ಶೇ.30% ಅಂದರೆ 960 ಕೋಟಿ ರೂ.ಗಳನ್ನು ಸ್ವಚ್ಛ ಭಾರತ ಅಭಿಯಾನ 2.0ದಡಿ ಕಾರ್ಯಸಾಧ್ಯತಾ ಅಂತರ ನಿಧಿ ಒದಗಿಸಲು ಕೋರಲಾಗಿದೆ.

ಕಲ್ಯಾಣ ಕರ್ನಾಟಕದ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 3000 ಕೋಟಿ ರೂ.ಗಳ ಅನುದಾನವನ್ನು ಬಜೆಟ್ ನಲ್ಲಿ ಮೀಸಲಿರಿಸಿದ್ದು ಕೇಂದ್ರ ಸರ್ಕಾರವು ತನ್ನ 2024-25 ರ ಬಜೆಟ್ ನಲ್ಲಿ ಅನುರೂಪದ ಅನುದಾನವನ್ನು ಒದಗಿಸಲು ಹಾಗೂ ಕೇಂದ್ರ ಸರ್ಕಾರದ ಅಭಿವೃದ್ಧಿ ಆಕಾಂಕ್ಷಿ ಜಿಲ್ಲಾ ಕಾರ್ಯಕ್ರಮದಡಿ ಒದಗಿಸುವ ಅನುದಾನವನ್ನು ಹೆಚ್ಚಿಸಲು ಮತ್ತು ಹೊಸ ಕಾರ್ಯಕ್ರಮಗಳನ್ನು ಯೋಜನೆಯಲ್ಲಿ ಸೇರ್ಪಡೆಗೊಳಿಸಲು ಅನುಕೂಲವಾಗುವಂತೆ ಧನಸಹಾಯ ನೀಡಲು ಕೋರಲಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ (AIIMS) ನ್ನೂ ಘೋಷಿಸುವಂತೆ ಮುಖ್ಯಮಂತ್ರಿಗಳು ತಮ್ಮ ಮನವಿ ಪತ್ರದಲ್ಲಿ ಕೋರಿದ್ದಾರೆ. 15ನೇ ಹಣಕಾಸು ಆಯೋಗವು 2020-21ರಲ್ಲಿ ಶಿಫಾರಸ್ಸು ಮಾಡಿದ್ದ 5495 ಕೋಟಿಗಳ ನಿರ್ದಿಷ್ಟ ಅನುದಾನವನ್ನು ಕೇಂದ್ರ ಹಣಕಾಸು ಸಚಿವಾಲಯ ಒಪ್ಪಿಲ್ಲ. ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ದೊಡ್ಡ ಮೊತ್ತದ ಪಾಲು ದೊರಕಲಿಲ್ಲವಾದ್ದರಿಂದ ಈ ಶಿಫಾರಸ್ಸನ್ನು ಒಪ್ಪಿ ಅನುದಾನವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಕೋರಿದ್ದಾರೆ.

ಇದನ್ನೂ ಓದಿ: Siddaramaiah: ಅಮಿತ್‌ ಶಾ-ಸಿದ್ದರಾಮಯ್ಯ ಭೇಟಿ; ರಾಜ್ಯದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಒತ್ತಾಯ

Continue Reading

ದೇಶ

Lalu Prasad Yadav: “ಇಂದಿರಾ ಗಾಂಧಿ ನಮ್ಮನ್ನು ಜೈಲಿಗಟ್ಟಿದರು, ಆದರೆ…” ಎಮರ್ಜೆನ್ಸಿ ಬಗ್ಗೆ ಲಾಲೂ ಹೇಳಿದ್ದೇನು?

Lalu Prasad Yadav:ತುರ್ತು ಪರಿಸ್ಥಿತಿ ಹೇರಿಕೆಯಾದ ಸಂದರ್ಭದಲ್ಲಿ ತಾವು ಎದುರಿಸಿದ ಕರಾಳ ದಿನಗಳನ್ನು ಲಾಲು ಪ್ರಸಾದ್ ಯಾದವ್ ನೆನಪಿಸಿಕೊಂಡಿದ್ದು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಅನೇಕ ನಾಯಕರನ್ನು ಜೈಲು ಕಂಬಿಯ ಹಿಂದೆ ಹಾಕಿದ್ದರು. ಆದರೆ ಎಂದಿಗೂ ಅವರನ್ನು ನಿಂದಿಸಿರಲಿಲ್ಲ ಎಂದು ಲಾಲು ಹೇಳಿದ್ದಾರೆ.

VISTARANEWS.COM


on

Indira Gandhi's Emergency
Koo

ಹೊಸದಿಲ್ಲಿ: ಕಳೆದ ಕೆಲವು ದಿನಗಳಿಂದ ತುರ್ತು ಪರಿಸ್ಥಿತಿ(Emergency) ಹೇರಿಕೆಯ ವಿಚಾರವನ್ನಿಟ್ಟುಕೊಂಡು ಆಡಳಿತ ಪಕ್ಷ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇದೆ. ಇದು ಸಾಲದೆನ್ನುವಂತೆ ಸ್ಪೀಕರ್‌ ಓಂ ಬಿರ್ಲಾ(Om birla), ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu) ಕೂಡ ಎಮರ್ಜೆನ್ಸಿ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿದ್ದರು. ಇದೀಗ ಇದೇ ವಿಚಾರವನ್ನಿಟ್ಟುಕೊಂಡು ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್(Lalu Prasad Yadav) ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ತುರ್ತು ಪರಿಸ್ಥಿತಿ ಹೇರಿಕೆಯಾದ ಸಂದರ್ಭದಲ್ಲಿ ತಾವು ಎದುರಿಸಿದ ಕರಾಳ ದಿನಗಳನ್ನು ಲಾಲು ಪ್ರಸಾದ್ ಯಾದವ್ ನೆನಪಿಸಿಕೊಂಡಿದ್ದು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಅನೇಕ ನಾಯಕರನ್ನು ಜೈಲು ಕಂಬಿಯ ಹಿಂದೆ ಹಾಕಿದ್ದರು. ಆದರೆ ಎಂದಿಗೂ ಅವರನ್ನು ನಿಂದಿಸಿರಲಿಲ್ಲ ಎಂದು ಲಾಲು ಹೇಳಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಲಾಲೂ, ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿ ವಿರುದ್ಧದ ಚಳವಳಿಯನ್ನು ಮುಂದುವರಿಸಲು ಜಯಪ್ರಕಾಶ್ ನಾರಾಯಣ್ ರಚಿಸಿದ್ದ ಸಮಿತಿಯಲ್ಲಿ ನಾನು ಸಂಚಾಲಕನಾಗಿದ್ದೆ. ನನ್ನನ್ನು 15 ತಿಂಗಳ ಕಾಲ ಭದ್ರತಾ ನಿರ್ವಹಣಾ ಕಾಯ್ದೆ (ಮಿಸಾ) ಅಡಿ ಜೈಲಿನಲ್ಲಿ ಇರಿಸಲಾಗಿತ್ತು ಎಂದರು.

ಇದೇ ವೇಳೆ ಅವರು ಬಿಜೆಪಿ ಮುಖಂಡರ ವಿರುದ್ಧ ಕಿಡಿ ಕಾರಿದ್ದು, ಇಂದು ಎಮರ್ಜೆನ್ಸಿ ಕುರಿತು ಮಾತನಾಡುತ್ತಿರುವ ಬಿಜೆಪಿ ಸಚಿವರ ಬಗ್ಗೆ ನನಗೆ ಹಾಗೂ ನನ್ನ ಸಹೋದ್ಯೋಗಿಗಳಿಗೆ ಗೊತ್ತೇ ಇರಲಿಲ್ಲ. ಮೋದಿ, ಜೆಪಿ ನಡ್ಡಾ ಹಾಗೂ ಇಂದು ಸ್ವಾತಂತ್ರ್ಯದ ಮೌಲ್ಯಗಳ ಬಗ್ಗೆ ನಮಗೆ ಉಪದೇಶ ನೀಡುತ್ತಿರುವ ಪ್ರಧಾನಿಯ ಇತರೆ ಸಚಿವ ಸಹೋದ್ಯೋಗಿಗಳ ಹೆಸರನ್ನೇ ನಾವು ಕೇಳಿರಲಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

ಇಂದಿರಾ ಗಾಂಧಿ ನಮ್ಮನ್ನು ಕಂಬಿಗಳ ಹಿಂದೆ ಇರಿಸಿದ್ದು ಎಷ್ಟು ನಿಜವೂ ಅವರು ನಮ್ಮನ್ನು ನಿಂದಿಸಿರಲಿಲ್ಲ ಎಂಬುದು ಕೂಡ ಅಷ್ಟೇ ಸತ್ಯ. ಅವರಾಗಲೀ ಅಥವಾ ಅವರ ಸಚಿವರಾಗಲೀ ನಮ್ಮನ್ನು ದೇಶ ದ್ರೋಹಿಗಳು ಅಥವಾ ದೇಶಪ್ರೇಮಿಗಳಲ್ಲ ಎಂದು ಕರೆದಿರಲಿಲ್ಲ. ನಮ್ಮ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಆದರ್ಶಕ್ಕೆ ಧಕ್ಕೆ ತರುವ ವಿಧ್ವಂಸಕ ಕೃತ್ಯಗಳಿಗೆ ಅವಕಾಶ ನೀಡಿರಲಿಲ್ಲ. 1975 ನಮ್ಮ ಪ್ರಜಾಪ್ರಭುತ್ವಕ್ಕೆ ಒಂದು ಕಪ್ಪು ಚುಕ್ಕೆ ಹೌದು. ಹಾಗಂದ ಮಾತ್ರಕ್ಕೆ ವಿರೋಧ ಪಕ್ಷದವರನ್ನು ಅಗೌರವದಿಂದ ನಡೆಸಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಕಟುವಾಗಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:Prajwal Revanna Case: ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌; ಬಂಧಿಸದಂತೆ ಹೈಕೋರ್ಟ್ ಆದೇಶ

Continue Reading
Advertisement
Suryakumar Yadav
ಪ್ರಮುಖ ಸುದ್ದಿ17 mins ago

Suryakumar Yadav : ಭಾರತ ಕ್ರಿಕೆಟ್ ಇತಿಹಾಸದಲ್ಲಿ ಅದ್ಬುತ ಕ್ಯಾಚ್ ಹಿಡಿದ ಸೂರ್ಯಕುಮಾರ್​; ವಿಶ್ವ ಕಪ್​ ಗೆಲ್ಲಲು ಭಾರತಕ್ಕೆ ನೆರವಾಗಿದ್ದೂ ಇದೇ ಕ್ಯಾಚ್​​

Dina Bhvishya
ಭವಿಷ್ಯ17 mins ago

Dina Bhavishya : ಈ ರಾಶಿಯವರು ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವಿರಿ ಈ ದಿನ ಎಚ್ಚರಿಕೆ ಇರಲಿ

Rohit Sharma
ಪ್ರಮುಖ ಸುದ್ದಿ3 hours ago

Rohit Sharma : ಕೊಹ್ಲಿ ಹಾದಿ ತುಳಿದ ರೋಹಿತ್​, ಟಿ20 ಐ ಕ್ರಿಕೆಟ್​​ಗೆ ವಿದಾಯ ಹೇಳಿದ ಟೀಮ್ ಇಂಡಿಯಾ ನಾಯಕ

Virat Kohli
ಪ್ರಮುಖ ಸುದ್ದಿ5 hours ago

Virat Kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ ವಿರಾಟ್​​ ಕೊಹ್ಲಿ

T20 World Cup
ಪ್ರಮುಖ ಸುದ್ದಿ6 hours ago

T20 World Cup 2024 : 13 ವರ್ಷಗಳ ಕಾಯುವಿಕೆ ಅಂತ್ಯ, ಕೊನೆಗೂ ವಿಶ್ವ ಕಪ್​ ಗೆದ್ದ ಭಾರತ

Progress review meeting at Karwar ZP office
ಉತ್ತರ ಕನ್ನಡ6 hours ago

Uttara Kannada News: ಕೂಸಿನ ಮನೆ ಯೋಜನೆ ಯಶಸ್ವಿಗೊಳಿಸಿ: ಉಮಾ ಮಹಾದೇವನ್

Tupolev fighter jet INS Chapel warship open for public viewing
ಉತ್ತರ ಕನ್ನಡ6 hours ago

Uttara Kannada News: ಟುಪಲೇವ್ ಯುದ್ಧ ವಿಮಾನ, ಐ.ಎನ್.ಎಸ್.ಚಾಪೆಲ್ ಯುದ್ಧನೌಕೆ ಸಾರ್ವಜನಿಕ ವೀಕ್ಷಣೆಗೆ ಮುಕ್ತ

narendra modi dk shivakumar siddaramaiah
ಪ್ರಮುಖ ಸುದ್ದಿ6 hours ago

DK Shivakumar: ರಾಜ್ಯಕ್ಕೊಂದು ಗಿಫ್ಟ್‌ ಸಿಟಿಗೆ ಪ್ರಧಾನಿ ಮುಂದೆ ಬೇಡಿಕೆ: ಡಿಸಿಎಂ ಡಿ‌.ಕೆ.ಶಿವಕುಮಾರ್

T20 World Cup
ಪ್ರಮುಖ ಸುದ್ದಿ7 hours ago

T20 World Cup : ಘರ್ಜಿಸಿದ ಕಿಂಗ್ ಕೊಹ್ಲಿ, 176 ರನ್ ಬಾರಿಸಿದ ಭಾರತ, ಇದು ವಿಶ್ವ ಕಪ್​ ಫೈನಲ್​ನಲ್ಲಿ ಗರಿಷ್ಠ ಸ್ಕೋರ್​

cm siddaramaiah T20 World Cup Final
ಪ್ರಮುಖ ಸುದ್ದಿ7 hours ago

T20 World Cup Final: ವಿಮಾನ ನಿಲ್ದಾಣದಲ್ಲೂ ಸಿದ್ದರಾಮಯ್ಯಗೆ ವಿಶ್ವಕಪ್‌ ಕ್ರಿಕೆಟ್‌ ಧ್ಯಾನ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ12 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ18 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ1 day ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌