Crude Bomb: ಚೆಂಡೆಂದು ಭಾವಿಸಿ ಬಾಂಬ್‌ ಜೊತೆ ಮಕ್ಕಳ ಆಟ; ಪಶ್ಚಿಮ ಬಂಗಾಳದಲ್ಲಿ ಭಾರೀ ಸ್ಫೋಟ - Vistara News

ದೇಶ

Crude Bomb: ಚೆಂಡೆಂದು ಭಾವಿಸಿ ಬಾಂಬ್‌ ಜೊತೆ ಮಕ್ಕಳ ಆಟ; ಪಶ್ಚಿಮ ಬಂಗಾಳದಲ್ಲಿ ಭಾರೀ ಸ್ಫೋಟ

Crude Bomb:ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಮಕ್ಕಳು ಆಕಸ್ಮಿಕವಾಗಿ ಕಚ್ಚಾ ಬಾಂಬ್‌ ಅನ್ನು ಚೆಂಡು ಎಂದು ಭಾವಿಸಿ ಎತ್ತಿಕೊಂಡಿದ್ದಾರೆ. ಆಗ ಅದು ಸ್ಫೋಟಗೊಂಡಿದೆ. ಘಟನೆಯಲ್ಲಿ ಪುಟ್ಟ ಕಂದಮ್ಮ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಗಾಯಗೊಂಡ ಇಬ್ಬರಲ್ಲಿ ಒಬ್ಬ ತನ್ನ ಬಲಗೈಯನ್ನೇ ಕಳೆದುಕೊಂಡಿದ್ದಾನೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಇನ್ನು ಈ ಕಚ್ಚಾ ಬಾಂಬ್‌ ಎಲ್ಲಿಂದ ಬಂತು? ಯಾರು ಎಸೆದರು ಎಂಬುದು ತನಿಖೆಯಲ್ಲಿ ತಿಳಿಯಬೇಕಾಗಿದೆ.

VISTARANEWS.COM


on

Crude Bomb west bengal election results 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಪಶ್ಚಿಮ ಬಂಗಾಳ:ಲೋಕಸಭಾ ಚುನಾವಣೆ(Lok sabha Election 2024)ಯ ಮೂರನೇ ಹಂತದ ಮತದಾನಕ್ಕೆ ಒಂದು ದಿನ ಇರುವಾಗಲೇ ಪಶ್ಚಿಮ ಬಂಗಾಳ(West Bengal)ದಲ್ಲಿ ಬಾಂಬ್‌ ಸ್ಫೋಟಗೊಂಡಿದೆ. ಹೂಗ್ಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಮಗುವೊಂದು ಮೃತಪಟ್ಟಿದ್ದು, ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಪಾಂಡುವಾ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕಚ್ಚಾ ಬಾಂಬ್‌(Crude Bomb) ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ ಎನ್ನಲಾಗಿದೆ.

ಘಟನೆಯ ವಿವರ:

ಇನ್ನು ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಮಕ್ಕಳು ಆಕಸ್ಮಿಕವಾಗಿ ಕಚ್ಚಾ ಬಾಂಬ್‌ ಅನ್ನು ಚೆಂಡು ಎಂದು ಭಾವಿಸಿ ಎತ್ತಿಕೊಂಡಿದ್ದಾರೆ. ಆಗ ಅದು ಸ್ಫೋಟಗೊಂಡಿದೆ. ಘಟನೆಯಲ್ಲಿ ಪುಟ್ಟ ಕಂದಮ್ಮ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಗಾಯಗೊಂಡ ಇಬ್ಬರಲ್ಲಿ ಒಬ್ಬ ತನ್ನ ಬಲಗೈಯನ್ನೇ ಕಳೆದುಕೊಂಡಿದ್ದಾನೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಇನ್ನು ಈ ಕಚ್ಚಾ ಬಾಂಬ್‌ ಎಲ್ಲಿಂದ ಬಂತು? ಯಾರು ಎಸೆದರು ಎಂಬುದು ತನಿಖೆಯಲ್ಲಿ ತಿಳಿಯಬೇಕಾಗಿದೆ.

ಇನ್ನು ಲೋಕಸಭಾ ಚುನಾವಣೆ ಹಿನ್ನೆಲೆ ಟಿಎಂಸಿ ಸಂಸದ ಅಭಿಷೇಕ್‌ ಬ್ಯಾನರ್ಜಿ ಇಂದು ಇದೇ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ಕೈಗೊಳ್ಳಬೇಕಿತ್ತು. ಬೃಹತ್‌ ಸಾರ್ವಜನಿಕ ಸಭೆಯನ್ನೂ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಅದಕ್ಕೂ ಮುನ್ನ ಈ ಘಟನೆ ನಡೆದಿರುವುದು ಎಲ್ಲರಲ್ಲೂ ಆತಂಕ ಮೂಡಿಸಿದೆ. ಇನ್ನು ನಾಳೆ ನಡೆಯಲಿರುವ ಮೂರನೇ ಹಂತ ಚುನಾವಣೆಯಲ್ಲಿ ರಾಜ್ಯ ನಾಲ್ಕು ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಕಳೆದ ವಾರ ಪಶ್ಚಿಮ ಬಂಗಾಳದ ರಾಜ್ಯ ರಾಜಧಾನಿ ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್‌ (Trinmool Congress)ನ ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟು, ಟಿಎಂಸಿ(TMC)ಯ ಕಾರ್ಯಕರ್ತನನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಅರ್ಜುನ್‌ಪುರದ ಪಶ್ಚಿಮ್‌ಪುರ ಪ್ರದೇಶದಲ್ಲಿ ಟಿಎಂಸಿಯ ಒಂದು ಬಣ ಕರೆಂಟ್‌ ಕಟ್‌ ಮಾಡಿದ ವಿಚಾರಕ್ಕೆ ಜಗಳ ಶುರುವಾಗಿತ್ತು. ಎರಡೂ ತಂಡಗಳ ಜಗಳ ತಾರಕಕ್ಕೇರಿ ಮಾರಾಮಾರಿ ನಡೆದಿದೆ. ಪರಸ್ಪರ ದೊಣ್ಣೆ, ಕಲ್ಲಿನಿಂದ ಬಡಿದಾಟ ನಡೆದಿತ್ತು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಸಂಜೀವ್‌ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ದಾಖಲಾಗುವ ಮೊದಲೇ ಆತ ಕೊನೆಯುಸಿರೆಳೆದಿದ್ದ.

ಕಲ್ಲೇಟು ಬಿದ್ದು ಕೆಳಗೆ ಬಿದ್ದಿದ್ದ ಸಂಜೀವ್‌ ಮೇಲೆ ದುಷ್ಕರ್ಮಿಗಳು ರಾಡ್‌ನಿಂದ ದಾಳಿ ನಡೆಸಿದ್ದರು ಎನ್ನಲಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 13 ಜನರ ವಿರುದ್ಧ ಕೇಸ್‌ ದಾಖಲಾಗಿದ್ದು, ಅವರನ್ನು ಅರೆಸ್ಟ್‌ ಮಾಡಲಾಗಿದೆ. ಘಟನೆ ಸಂಬಂಧ ತನಿಖೆ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಇನ್ನು ಸಂಜೀವ್‌ ದಾಸ್‌ ಹತ್ಯೆಗೆ ಖಂಡನೆ ವ್ಯಕ್ತಪಡಿಸಿರುವ ಅವರ ಕುಟುಂಬಸ್ಥರು ದುರ್ಘಟನೆಗೆ ಟಿಎಂಸಿಯನ್ನೇ ಹೊಣೆಯನ್ನಾಗಿದೆ.

ಇದನ್ನೂ ಓದಿ:ED Raid: ಇಡಿ ಭರ್ಜರಿ ಬೇಟೆ; ಕಾಂಗ್ರೆಸ್‌ ಮುಖಂಡನ ಆಪ್ತ ಕಾರ್ಯದರ್ಶಿ ಮನೆಯಿಂದ 25 ಕೋಟಿ ರೂ. ವಶ

ಮತ್ತೊಂದೆಡೆ ಅದೇ ದಿನ ದಕ್ಷಿಣ ಕೋಲ್ಕತಾದ ಆನಂದಪುರದಲ್ಲಿ ಬಿಜೆಪಿ ನಾಯಕಿ ಸರಸ್ವತಿ ಸರ್ಕಾರ್‌ ಮೇಲೆಯೂ ಮಾರಣಾಂತಿಕ ಹಲ್ಲೆ ನಡೆದಿದೆ. ಟಿಎಂಸಿ ಕಾರ್ಯಕರ್ತರು ಸರಸ್ವತಿ ಮೇಲೆ ಹರಿತವಾದ ಆಯುಧದಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಚುನಾವಣಾ ಬ್ಯಾನರ್‌ ಕಟ್ಟುವ ವಿಚಾರಕ್ಕೆ ಬಿಜೆಪಿ ಮತ್ತು ಟಿಎಂಸಿ ನಾಯಕರ ನಡುವೆ ಮಾರಾಮಾರಿ ನಡೆದಿದ್ದು, ಈ ವೇಳೆ ಆಕೆಯ ತಲೆಗೆ ಗಂಭೀರ ಗಾಯಗಳಾಗಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಬಿಜೆಪಿಗೆ ರಾಜೀನಾಮೆ ಬಳಿಕ ಹೊಸ ರಾಜಕೀಯ ಚಳವಳಿ ಘೋಷಿಸಿದ ಅಣ್ಣಾಮಲೈ; ತಮಿಳುನಾಡಿನಲ್ಲಿ ಏಕಾಂಗಿ ಹೋರಾಟದ ನಿರ್ಧಾರ

VISTARANEWS.COM


on

ಬಿಜೆಪಿಗೆ ರಾಜೀನಾಮೆ ನೀಡಿದ ಬಳಿಕ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ತಮ್ಮ ಮುಂದಿನ ರಾಜಕೀಯ ಹೆಜ್ಜೆ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ. ತಮಿಳುನಾಡಿನಲ್ಲಿ ಹೊಸ ರಾಜಕೀಯ ಚಳವಳಿಯನ್ನು ಆರಂಭಿಸುವುದಾಗಿ ಘೋಷಿಸಿರುವ ಅವರು, ಮುಂದಿನ ದಿನಗಳಲ್ಲಿ ಜನರೊಂದಿಗೆ ನೇರವಾಗಿ ಹೆಜ್ಜೆ ಹಾಕಲು ತೀರ್ಮಾನಿಸಿರುವುದಾಗಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಣ್ಣಾಮಲೈ, “ಬಿಜೆಪಿಗೆ ನಾನು ಯಾವುದೇ ಸಮಸ್ಯೆಯಾಗಲು ಬಯಸುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಹಿರಿಯ ನಾಯಕರ ಬಗ್ಗೆ ನನಗೆ ಅಪಾರ ಗೌರವವಿದೆ” ಎಂದು ಹೇಳಿದರು.

“ನನ್ನ ರಾಜೀನಾಮೆ ನಿರ್ಧಾರವನ್ನು 2025ರ ಡಿಸೆಂಬರ್‌ನಲ್ಲಿಯೇ ಪಕ್ಷದ ವರಿಷ್ಠರಿಗೆ ತಿಳಿಸಿದ್ದೆ. ಕಳೆದ 18 ತಿಂಗಳಿಂದ ಪಕ್ಷದೊಳಗೆ ಕೆಲವು ಭಿನ್ನಾಭಿಪ್ರಾಯಗಳು ಇದ್ದವು. ಆದರೆ ಯಾವುದೇ ಗದ್ದಲವಿಲ್ಲದೆ ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ್ದೇನೆ” ಎಂದು ಅವರು ಸ್ಪಷ್ಟಪಡಿಸಿದರು.

ತಮಿಳುನಾಡಿನ ಹಿತಾಸಕ್ತಿಗಳ ಬಗ್ಗೆ ಮಾತನಾಡಿದ ಅಣ್ಣಾಮಲೈ, “ತಮಿಳುನಾಡಿನ ಅಸ್ಮಿತೆಯನ್ನು ನಾನು ಎಂದಿಗೂ ಬಿಟ್ಟುಕೊಟ್ಟಿಲ್ಲ. ಈ ಮಣ್ಣು, ನೀರು ಮತ್ತು ರಾಜ್ಯದ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಟ ನಡೆಸಿದ್ದೇನೆ. ನಾನು ಹೆಮ್ಮೆಯ ಭಾರತೀಯ ಹಾಗೂ ಸಾಂಪ್ರದಾಯಿಕ ತಮಿಳಿಗ” ಎಂದರು.

“ತಮಿಳುನಾಡಿನ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ. ಮೇಕೆದಾಟು ಅಣೆಕಟ್ಟು ಯೋಜನೆ ಸೇರಿದಂತೆ ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ಹಲವು ವಿಷಯಗಳಲ್ಲಿ ತಮಿಳುನಾಡಿನ ಪರವಾಗಿ ನಿಲುವು ತಾಳಿದ್ದೇನೆ. ಟಂಗ್‌ಸ್ಟನ್, ಮೀಥೇನ್ ಹಾಗೂ ಹೈಡ್ರೋಕಾರ್ಬನ್ ಯೋಜನೆಗಳ ವಿರುದ್ಧವೂ ಹೋರಾಟ ನಡೆಸಿದ್ದೇನೆ” ಎಂದು ಹೇಳಿದರು.

ಮುಂದಿನ ರಾಜಕೀಯ ಯೋಜನೆ ಕುರಿತು ಮಾತನಾಡಿದ ಅವರು, “ತಮಿಳುನಾಡಿನಲ್ಲಿ ಹೊಸ ರಾಜಕೀಯ ಚಳವಳಿಗೆ ಅಧಿಕೃತ ಚಾಲನೆ ನೀಡುತ್ತಿದ್ದೇನೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸಲಿದೆ. ಜನರ ಆಶಯಗಳನ್ನು ಪ್ರತಿಬಿಂಬಿಸುವ ಪರ್ಯಾಯ ರಾಜಕೀಯ ಶಕ್ತಿಯನ್ನು ಕಟ್ಟುವ ಗುರಿ ಹೊಂದಿದ್ದೇವೆ” ಎಂದು ಘೋಷಿಸಿದರು.

Continue Reading

Latest

ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

VISTARANEWS.COM


on

ರಾಜ್ಯದಲ್ಲಿ ರಾಜ್ಯಸಭಾ ಚುನಾವಣೆಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್‌ ಗಾಂಧಿ ಅವರೊಂದಿಗೆ ವಿಧಾನಸೌಧಕ್ಕೆ ಆಗಮಿಸಿ, ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಹಲವು ಹಿರಿಯ ನಾಯಕರು ಉಪಸ್ಥಿತರಿದ್ದರು.

ಜೂನ್ 18ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಮೊದಲ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಿದ್ದಾರೆ.

ಎರಡನೇ ಅಭ್ಯರ್ಥಿಯಾಗಿ ಪವನ್‌ ಖೇರಾ ಹಾಗೂ ಮೂರನೇ ಅಭ್ಯರ್ಥಿಯಾಗಿ ಮನ್ಸೂರ್‌ ಆಲಿ ಖಾನ್‌ ನಾಳೆ ಜೂನ್‌ 6 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

Continue Reading

Latest

ಕರ್ನಾಟಕದ 4 ಸೇರಿ ರಾಜ್ಯಸಭೆಯ 24 ಸ್ಥಾನಗಳಿಗೆ ಜೂನ್‌ 18ಕ್ಕೆ ಚುನಾವಣೆ

VISTARANEWS.COM


on

ಜೂನ್ ತಿಂಗಳಲ್ಲಿ ತೆರವಾಗಲಿರುವ ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಖಾಲಿಯಾಗಲಿರುವ 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18ರಂದು ಮತದಾನ ನಡೆಯಲಿದೆ.

ಜೂನ್ ತಿಂಗಳಲ್ಲಿ 26 ರಾಜ್ಯಸಭಾ ಸದಸ್ಯರು ನಿವೃತ್ತಿಯಾಗಲಿದ್ದು, ಅದರ ಪೈಕಿ 24 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಉಳಿದ ಸ್ಥಾನಗಳಿಗೆ ಪ್ರತ್ಯೇಕ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ.

ಕರ್ನಾಟಕದಲ್ಲೂ ರಾಜ್ಯಸಭೆಯ 4 ಸ್ಥಾನಗಳು ತೆರವಾಗಲಿದ್ದು, ಅವುಗಳಿಗೂ ಜೂನ್ 18ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಜೂನ್‌ 8 ಕೊನೆಯ ದಿನ. ನಾಮಪತ್ರ ವಾಪಸ್‌ಗೆ ಜೂನ್‌ 11 ಕಡೆಯ ದಿನ. ಜೂನ್‌ 18ರಂದು ಮತ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟಗೊಳ್ಳಲಿದೆ.

Continue Reading

Latest

ಪುಲ್ವಾಮ ದಾಳಿಯ ಮಾಸ್ಟರ್‌ಮೈಂಡ್‌ ಹತ್ಯೆ

VISTARANEWS.COM


on

2019ರ ಫೆಬ್ರವರಿ 14ರಂದು ನಡೆದ ಪುಲ್ವಾಮಾ ಭಯೋತ್ಪಾದಕ ದಾಳಿಯ ಮಾಸ್ಟರ್‌ಮೈಂಡ್‌ ಉಗ್ರ ಹಮ್ಜಾ ಬುರ್ಹಾನ್‌ನನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತ ಬಂದೂಕುಧಾರಿಗಳು ಹತ್ಯೆ ಮಾಡಿದ್ದಾರೆ.
ಉಗ್ರ ಹಮ್ಜಾ ಬುರ್ಹಾನ್, ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆ ಅಲ್-ಬದರ್ ಜೊತೆ ಸಂಪರ್ಕ ಹೊಂದಿದ್ದು, ಈತ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಘಟನೆಯ ಪ್ರಚಾರ ಹಾಗೂ ನೇಮಿಸುತ್ತಿದ್ದ ಎಂದು ವರದಿಯಾಗಿತ್ತು.

ಪುಲ್ವಾಮ ದಾಳಿ : 40ಕ್ಕೂ ಹೆಚ್ಚು ಯೋಧರು ಹುತಾತ್ಮ

2019ರ ಫೆಬ್ರವರಿ 14ರಂದು ಜೈಶ್-ಎ-ಮೊಹಮ್ಮದ್ ಸಂಘಟನೆ ನಡೆಸಿದ್ದ ಪುಲ್ವಾಮಾ ದಾಳಿಯು ಇಡೀ ಭಾರತವನ್ನೇ ನಡುಗಿಸಿತ್ತು. ಲೆಥೋರಾ ಬಳಿ ನಡೆದ ಸಿಆರ್‌ಪಿಎಫ್ ಯೋಧರ ವಾಹನಕ್ಕೆ ಸ್ಫೋಟಕ ತುಂಬಿದ ಕಾರು ಡಿಕ್ಕಿ ಹೊಡೆಸಿದ ಪರಿಣಾಮ 40ಕ್ಕೂ ಹೆಚ್ಚು ಸಿಆರ್‌ಪಿಎಫ್ ಯೋಧರು ಸ್ಥಳದಲ್ಲೇ ಹುತಾತ್ಮರಾಗಿದ್ದರು.

ಉಗ್ರ ಹಮ್ಜಾ ಬುರ್ಹಾನ್ ಹಿನ್ನೆಲೆ

ಪುಲ್ವಾಮಾದ ರತ್ನಿಪೋರಾ ಪ್ರದೇಶದ ಖಾರ್ಬತ್ಪೋರಾದಲ್ಲಿ ಜನಿಸಿದ ಉಗ್ರ ಹಮ್ಜಾ ಬುರ್ಹಾನ್, ಉನ್ನತ ಶಿಕ್ಷಣ ಪಡೆಯುವ ನೆಪದಲ್ಲಿ 2017 ರಲ್ಲಿ ಪಾಕಿಸ್ತಾನಕ್ಕೆ ತೆರಳಿದ್ದ. ಆದರೆ ಇವನು ನಿಷೇಧಿತ ಭಯೋತ್ಪಾದಕ ಸಂಘಟನೆ ಅಲ್-ಬದ್ರ್ ಸೇರಿ, ಅಲ್ಪ ಸಮಯದಲ್ಲೇ ಕಮಾಂಡರ್ ಹುದ್ದೆಗೆ ಏರಿದ್ದ. ಇದಾದ ನಂತರ ಕಾಶ್ಮೀರಕ್ಕೆ ಹಿಂತಿರುಗಿದ ಇವನು ಪಾಕ್‌ ಆಕ್ರಮಿಶಿ ಕಾಶ್ಮೀರದಲ್ಲಿ ಸ್ಥಳೀಯ ಯುವಕರನ್ನು ಪ್ರಚೋದಿಸುತ್ತಾ ಉಗ್ರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ .

ಇನ್ನು ಭಾರತದ ಕೇಂದ್ರ ಗೃಹ ಸಚಿವಾಲಯವು 2022ರಲ್ಲಿ ಹಮ್ಹಾ ಬುರ್ಹಾನ್‌ನ್ನು ಉಗ್ರ ಅಂತಾ ಘೋಷಿಸಿತ್ತು. ಪುಲ್ವಾಮಾ ದಾಳಿಯಲ್ಲಿ ಸಂಚು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆಂದು ಆರೋಪಿಸಲಾಗಿತ್ತು.

Continue Reading
Advertisement
Latest17 hours ago

ಟೀಮ್‌ ಇಂಡಿಯಾಗೆ ವೈಭವ್‌ ಸೂರ್ಯವಂಶಿ ಎಂಟ್ರಿ

Latest19 hours ago

ಸಿಇಟಿ ಫಲಿತಾಂಶ ಪ್ರಕಟ

ಅವಿಭಾಗೀಕೃತ20 hours ago

ರಾಮಲಿಂಗಾರೆಡ್ಡಿ ರಾಜೀನಾಮೆ ಕಗ್ಗಂಟಿಗೆ ತೆರೆ? ಸುರ್ಜೇವಾಲಾ ಮಾತುಕತೆ ಯಶಸ್ವಿ?

Latest2 days ago

ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ – ಡಿಕೆಶಿ

Latest2 days ago

ಬಿಜೆಪಿಗೆ ರಾಜೀನಾಮೆ ಬಳಿಕ ಹೊಸ ರಾಜಕೀಯ ಚಳವಳಿ ಘೋಷಿಸಿದ ಅಣ್ಣಾಮಲೈ; ತಮಿಳುನಾಡಿನಲ್ಲಿ ಏಕಾಂಗಿ ಹೋರಾಟದ ನಿರ್ಧಾರ

Latest2 days ago

ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

Latest2 days ago

ಖಾತೆ ಹಂಚಿಕೆ ಬಗ್ಗೆ ಮುನಿಯಪ್ಪ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಜೀನಾಮೆ ಚಿಂತನೆ?

Latest2 days ago

ರಾಮಲಿಂಗಾ ರೆಡ್ಡಿ ರಾಜೀನಾಮೆ ಕಾಂಗ್ರೆಸ್ ಒಳಜಗಳದ ಪರಿಣಾಮ: ವಿಜಯೇಂದ್ರ ವಾಗ್ದಾಳಿ

Latest2 days ago

ಅಣ್ಣಾಮಲೈ ರಾಜೀನಾಮೆ ಸ್ವೀಕಾರ : ಹೊಸ ಪಕ್ಷ ಘೋಷಣೆ ಕುರಿತು ಇಂದು ಮಹತ್ವದ ಸುದ್ದಿಗೋಷ್ಠಿ

Latest2 days ago

ರಾಜ್ಯಸಭಾ ಚುನಾವಣೆಗೆ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಲಿರುವ ಮಲ್ಲಿಕಾರ್ಜುನ ಖರ್ಗೆ

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌