Dawood Ibrahim: ಮೋಸ್ಟ್ ವಾಂಟೆಡ್ ದಾವೂದ್ ಇಬ್ರಾಹಿಂ; ಭಾರತದಲ್ಲಿ ಈತನ ಪಾತಕ ಕೃತ್ಯಗಳೇನು? - Vistara News

ದೇಶ

Dawood Ibrahim: ಮೋಸ್ಟ್ ವಾಂಟೆಡ್ ದಾವೂದ್ ಇಬ್ರಾಹಿಂ; ಭಾರತದಲ್ಲಿ ಈತನ ಪಾತಕ ಕೃತ್ಯಗಳೇನು?

Dawood Ibrahim: ಭಾರತದ ಪಾಲಿನ ರಿಯಲ್‌ ಖಳನಾಗಿ ಬೆಳೆದ ದಾವೂದ್‌ ಇಬ್ರಾಹಿಂ ಪಾಕಿಸ್ತಾನದಲ್ಲಿ ಆಸ್ಪತ್ರೆಗೆ ಸೇರಿದ್ದಾನೆ ಎನ್ನಲಾಗಿದೆ. ಆತ ನಡೆಸಿದ ಘೋರ ಕೃತ್ಯಗಳ ವಿವರ ಇಲ್ಲಿದೆ.

VISTARANEWS.COM


on

davood
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತಕ್ಕೆ ಹಲವು ಅಪರಾಧಗಳ ಮೂಲಕ ಕಂಟಕವಾಗಿದ್ದ, ಭಾರತದ ತನಿಖಾ ಸಂಸ್ಥೆಗಳಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು (Dawood Ibrahim) ಪಾಕಿಸ್ತಾನದ ಕರಾಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಸುದ್ದಿ ಸಂಚಲನ ಮೂಡಿಸಿದೆ. ವಿಷಪ್ರಸಾನಕ್ಕೊಳಗಾಗಿರುವ ಆತನ ಪರಿಸ್ಥಿತಿ ಚಿಂತಾಜನಕ ಎನ್ನಲಾಗುತ್ತಿದೆ. ದಾವೂದ್ ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದು, ಭಾರತ ಮತ್ತು ಅಮೆರಿಕ ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿವೆ. ಇಂಟರ್‌ಪೋಲ್‌ನ ರೆಡ್ ನೋಟಿಸ್ ಪಟ್ಟಿಯಲ್ಲಿಯೂ ಆತನ ಹೆಸರಿದ್ದು, ದಾವೂದ್‌ ತಲೆಗೆ 25 ಮಿಲಿಯನ್ ಅಮೆರಿಕನ್ ಡಾಲರ್ ಬಹುಮಾನ ಘೋಷಿಸಲಾಗಿದೆ.

ದಾವೂದ್ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ (ISI) ಮತ್ತು ಭಯೋತ್ಪಾದಕ ಗುಂಪು ಲಷ್ಕರ್-ಎ-ತಯ್ಬಾ (Lashkar-e-Taiba)ದೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾನೆ ಎಂದು ಹೇಳಲಾಗಿದೆ. ಅಲ್ಲದೆ ಅನೇಕ ನಕಲಿ ಪಾಸ್‌ಪೋರ್ಟ್‌ ಹೊಂದಿದ್ದಾನೆ ಮತ್ತು ಪದೇಪದೆ ತನ್ನ ವಾಸಸ್ಥಳವನ್ನು ಬದಲಾಯಿಸುತ್ತಾನೆ ಎಂದು ಊಹಿಸಲಾಗಿದೆ. ಈತ ಪಾಕಿಸ್ತಾನದ ಕರಾಚಿಯಲ್ಲಿ ಶೇಖ್ ದಾವೂದ್ ಹಸನ್ ಎಂಬ ಹೆಸರಿನಲ್ಲಿ ವಾಸಿಸುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ.

1993ರ ಮುಂಬೈ ಸ್ಫೋಟದಿಂದ ಹಿಡಿದು 2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣ ಸೇರಿದಂತೆ ಹಲವು ಘೋರ ಅಪರಾಧಗಳ ಮಾಸ್ಟರ್ ಮೈಂಡ್ ಈತ. ಅಂತಾರಾಷ್ಟ್ರೀಯ ಮಾದಕವಸ್ತು ಕಳ್ಳ ಸಾಗಣೆ, ನಕಲಿ ಮತ್ತು ಶಸ್ತ್ರಾಸ್ತ್ರ ಕಳ್ಳಸಾಗಣೆಯಲ್ಲೂ ಭಾಗಿಯಾಗಿದ್ದ. ದಾವೂದ್ ನಡೆಸಿದ ಅಪರಾಧಗಳ ಪಟ್ಟಿ ಇಲ್ಲಿದೆ.

1993ರ ಮುಂಬೈ ಸ್ಫೋಟ

ಭಾರತದ ಅತೀ ದೊಡ್ಡ ದುರಂತಗಳಲ್ಲಿ 1993ರ ಮುಂಬೈ ಸ್ಫೋಟವೂ ಒಂದು. ಈ ಪ್ರಕರಣದಲ್ಲಿ 257ಕ್ಕೂ ಹೆಚ್ಚು ಮಂದಿ ಮೃತಪಟ್ಟು, 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಇದರ ಪ್ರಮುಖ ಆರೋಪಿ ದಾವೂದ್ ಇಬ್ರಾಹಿಂ. ಆತ ಮತ್ತು ಆತನ ಸಹಚರರು ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತಯ್ಬಾದ ಸಹಾಯದಿಂದ ಸ್ಫೋಟಗಳನ್ನು ನಡೆಸಿದ್ದರು. ಅವರು ಅಪರಾಧಿಗಳಿಗೆ ಸ್ಫೋಟಕಗಳು, ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದು ಮಾತ್ರವಲ್ಲ ತರಬೇತಿಯನ್ನೂ ಒದಗಿಸಿದ್ದರು. ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್‌, ಏರ್ ಇಂಡಿಯಾ ಕಟ್ಟಡ ಮತ್ತು ಶಿವಸೇನೆ ಪ್ರಧಾನ ಕಚೇರಿ ಸೇರಿದಂತೆ ಮುಂಬೈಯ 12 ಸ್ಥಳಗಳನ್ನು ಗುರಿಯಾಗಿಸಿಕೊಂಡು ಈ ಸ್ಫೋಟಗಳು ನಡೆದಿದ್ದವು. ಸ್ಫೋಟದ ನಂತರ ದಾವೂದ್ ಇಬ್ರಾಹಿಂ ದುಬೈಗೆ ಪಲಾಯನ ಮಾಡಿ ನಂತರ ಪಾಕಿಸ್ತಾನಕ್ಕೆ ತೆರಳಿದ್ದ. ಆತನನ್ನು ಹಸ್ತಾಂತರಿಸುವಂತೆ ಭಾರತ ಪದೇಪದೇ ಪಾಕಿಸ್ತಾನವನ್ನು ಒತ್ತಾಯಿಸಿದೆ. ಆದರೆ ಪಾಕಿಸ್ತಾನವು ತನ್ನಲ್ಲಿ ಆತ ಇರುವುದನ್ನು ನಿರಾಕರಿಸುತ್ತಲೇ ಬಂದಿದೆ.

2008ರ ಮುಂಬೈ ದಾಳಿ

2008ರಲ್ಲಿ ನಡೆದ ನಡೆದ ಮುಂಬೈ ದಾಳಿಯಲ್ಲಿ 166 ಜನರು ಸಾವಿಗೀಡಾಗಿ 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಇದರ ಹಿಂದೆಯೂ ದಾವೂದ್‌ನ ಕೈವಾಡದ ಶಂಕೆ ವ್ಯಕ್ತವಾಗಿದೆ. ಲಷ್ಕರ್-ಎ-ತಯ್ಬಾದ 10 ಉಗ್ರರು ಸಮುದ್ರದ ಮೂಲಕ ಮುಂಬೈಗೆ ಬಂದು ತಾಜ್ ಮಹಲ್ ಹೋಟೆಲ್, ಒಬೆರಾಯ್ ಟ್ರೈಡೆಂಟ್ ಹೋಟೆಲ್, ಛತ್ರಪತಿ ಶಿವಾಜಿ ಟರ್ಮಿನಸ್ ಮತ್ತು ನಾರಿಮನ್ ಹೌಸ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು. ವರದಿಗಳ ಪ್ರಕಾರ ದಾವೂದ್ ಇಬ್ರಾಹಿಂ ದಾಳಿಕೋರರಿಗೆ ಆರ್ಥಿಕ ಬೆಂಬಲವನ್ನು ಒದಗಿಸಿದ್ದ ಎನ್ನಲಾಗಿದೆ.

2010ರ ಪುಣೆಯ ಜರ್ಮನ್‌ ಬೇಕರಿ ಸ್ಫೋಟ

2010ರ ಪುಣೆ ಜರ್ಮನ್ ಬೇಕರಿ ಸ್ಫೋಟದಲ್ಲಿ 17 ಮಂದಿ ಮೃತಪಟ್ಟು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಪುಣೆಯ ಕೋರೆಗಾಂವ್ ಪಾರ್ಕ್ ಪ್ರದೇಶದ ಜನಪ್ರಿಯ ಜರ್ಮನ್ ಬೇಕರಿಯಲ್ಲಿ ಈ ಸ್ಫೋಟ ಸಂಭವಿಸಿತ್ತು. ಇದು ವಿದೇಶಿಯರು ಮತ್ತು ಪ್ರವಾಸಿಗರು ಆಗಾಗ ಭೇಟಿ ನೀಡುವ ಸ್ಥಳವಾಗಿದ್ದರಿಂದ ಇಲ್ಲೇ ಸ್ಫೋಟ ನಡೆಸಲಾಗಿತ್ತು. ಮೊಬೈಲ್ ಫೋನ್‌ನಿಂದ ಆಪರೇಟ್‌ ಮಾಡಿ ಬಾಂಬ್‌ ಸ್ಫೋಟಗೊಳ್ಳುವಂತೆ ಮಾಡಲಾಗಿತ್ತು. ದಾವೂದ್ ಇಬ್ರಾಹಿಂ ಮತ್ತು ಲಷ್ಕರ್-ಎ-ತಯ್ಬಾದೊಂದಿಗೆ ನಂಟು ಹೊಂದಿರುವ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್ ಈ ಸ್ಫೋಟದ ಹೊಣೆ ಹೊತ್ತುಕೊಂಡಿತ್ತು. ದಾವೂದ್ ಇಬ್ರಾಹಿಂ ಸ್ಫೋಟಕಗಳು ಮತ್ತು ಮೊಬೈಲ್ ಫೋನ್ ಅನ್ನು ಒದಗಿಸಿದ್ದ ಎಂದು ಮೂಲಗಳು ತಿಳಿಸಿವೆ.

2013ರ ಐಪಿಎಲ್‌ ಸ್ಪಾಟ್‌ ಫಿಕ್ಸಿಂಗ್‌

ಭಾರತೀಯ ಕ್ರಿಕೆಟ್ ಜಗತ್ತನ್ನು ಬೆಚ್ಚಿಬೀಳಿಸಿದ 2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲೂ ದಾವೂದ್ ಇಬ್ರಾಹಿಂನ ಛಾಯೆ ಕಂಡು ಬಂದಿದೆ. ರಾಜಸ್ಥಾನ್ ರಾಯಲ್ಸ್, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ಆಧಾರದಲ್ಲಿ ಫಿಕ್ಸಿಂಗ್ ಮಾಡಲಾಗಿತ್ತು. ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರ ಛೋಟಾ ಶಕೀಲ್‌ಗಾಗಿ ಕೆಲಸ ಮಾಡುತ್ತಿದ್ದ ಬುಕ್ಕಿಗಳು ಮತ್ತು ಫಿಕ್ಸರ್‌ಗಳೊಂದಿಗೆ ಆಟಗಾರರು ಸಂಪರ್ಕದಲ್ಲಿದ್ದರು ಎಂದು ಆರೋಪ ಕೇಳಿ ಬಂದಿತ್ತು. ದಾವೂದ್ ಇಬ್ರಾಹಿಂ ಮತ್ತು ಛೋಟಾ ಶಕೀಲ್ ಬೆಟ್ಟಿಂಗ್ ದಂಧೆಯನ್ನು ನಿಯಂತ್ರಿಸುತ್ತಿದ್ದರು ಮತ್ತು ಅಕ್ರಮ ಜೂಜಾಟದಿಂದ ಭಾರಿ ಲಾಭ ಗಳಿಸಿದ್ದರು ಎಂದು ಆರೋಪಿಸಲಾಗಿದೆ. ಅವರು ಆಟಗಾರರು ಮತ್ತು ತಂಡದ ಮಾಲಕರಿಗೆ ಬೆದರಿಕೆ ಒಡ್ಡಿದ್ದರು ಎನ್ನುವ ಆರೋಪವೂ ಇದೆ.

ಇತರ ಪ್ರಕರಣಗಳು ಏನೇನು?

ಈ ಪ್ರಮುಖ ಪ್ರಕರಣಗಳಲ್ಲದೆ, ದಾವೂದ್ ಇಬ್ರಾಹಿಂ ಕೊಲೆ, ಸುಲಿಗೆ, ಅಪಹರಣ ಮತ್ತು ಕಳ್ಳಸಾಗಣೆ ಸೇರಿದಂತೆ ಇನ್ನೂ ಹಲವಾರು ಅಪರಾಧಗಳಲ್ಲಿ ಭಾರತಕ್ಕೆ ಬೇಕಾಗಿದ್ದಾನೆ. 2011ರಲ್ಲಿ ಪತ್ರಕರ್ತ ಜ್ಯೋತಿರ್ಮಯ್ ಡೇ ಅವರನ್ನು ದಾವೂದ್ ಇಬ್ರಾಹಿಂನ ಹಿಂಬಾಲಕರು ಹತ್ಯೆ ಮಾಡಿದ್ದರು. 1997ರಲ್ಲಿ ದಾವೂದ್ ಇಬ್ರಾಹಿಂನ ಕಡೆಯವರು ಸುಲಿಗೆ ಹಣ ನೀಡಲು ನಿರಾಕರಿಸಿದ್ದಕ್ಕಾಗಿ ಸಂಗೀತ ಉದ್ಯಮಿ ಗುಲ್ಶನ್ ಕುಮಾರ್ ಅವರನ್ನು ಹತ್ಯೆ ಮಾಡಿದ್ದರು. 2000ನೇ ಇಸವಿಯಲ್ಲಿ ಉದ್ಯಮಿ ಪರೀಕ್ಷಿತ್ ಠಕ್ಕರ್ ಅವರನ್ನು ದಾವೂದ್ ಇಬ್ರಾಹಿಂ ಗ್ಯಾಂಗ್ ಅಪಹರಿಸಿ ಹತ್ಯೆ ಮಾಡಿತ್ತು. ಹೀಗೆ ದಾವೂದ್‌ ಇಬ್ರಾಹಿಂ ಭಾರತದ ಪಾಲಿಗೆ ಮಗ್ಗುಲ ಮುಳ್ಳಾಗಿ ಬೆಳೆದಿದ್ದಾನೆ.

ಇದನ್ನೂ ಓದಿ: Dawood Ibrahim: ದಾವೂದ್‌ ಇಬ್ರಾಹಿಂಗೆ ವಿಷಪ್ರಾಶನ? ಆಸ್ಪತ್ರೆಗೆ ದಾಖಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Fire Accident: ಬಿಜೆಪಿ ಕಚೇರಿಯಲ್ಲಿ ಭಾರಿ ಅಗ್ನಿ ಅವಘಡ; ಅಗ್ನಿಶಾಮಕ ಸಿಬ್ಬಂದಿ ದೌಡು

Fire Accident: ಪಂಡಿತ್‌ ಪಂತ್‌ ಮಾರ್ಗದಲ್ಲಿ ದೆಹಲಿ ಬಿಜೆಪಿ ಘಟಕದ ಕಚೇರಿ ಇದೆ. ಸಂಜೆ 4.25ರ ಸುಮಾರಿಗೆ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಅಗ್ನಿ ದುರಂತ ಸಂಭವಿಸುತ್ತಲೇ ಕಚೇರಿಯಲ್ಲಿದ್ದವರು ಓಡಿ ಹೊರಬಂದರು ಎಂದು ಹೇಳಲಾಗುತ್ತಿದೆ.

VISTARANEWS.COM


on

Fire Accident
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿ (Delhi BJP Office) ಅಗ್ನಿ ಅವಘಡ (Fire Accident) ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಯು ಸ್ಥಳಕ್ಕೆ ಧಾವಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯು ಅಗ್ನಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಅಗ್ನಿ ದುರಂತ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. ಸದ್ಯ, ಮೂರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಸುತ್ತಮುತ್ತಲೂ ಹೊಗೆ ಆವರಿಸಿದ ಕಾರಣ ಜನರಿಗೆ ಆತಂಕ ಎದುರಾಗಿದೆ ಎಂದು ತಿಳಿದುಬಂದಿದೆ.

ಪಂಡಿತ್‌ ಪಂತ್‌ ಮಾರ್ಗದಲ್ಲಿ ದೆಹಲಿ ಬಿಜೆಪಿ ಘಟಕದ ಕಚೇರಿ ಇದೆ. ಸಂಜೆ 4.25ರ ಸುಮಾರಿಗೆ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಅಗ್ನಿ ದುರಂತ ಸಂಭವಿಸುತ್ತಲೇ ಕಚೇರಿಯಲ್ಲಿದ್ದವರು ಓಡಿ ಹೊರಬಂದರು ಎಂದು ಹೇಳಲಾಗುತ್ತಿದೆ. ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್‌, ಯಾರಿಗೂ ತೊಂದರೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಪ್ರಕರಣದ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

ಕೆಲ ತಿಂಗಳ ಹಿಂದೆ ಮಧ್ಯಪ್ರದೇಶ ವಿಧಾನಸೌಧದ ಸಚಿವಾಲಯದ ಕಟ್ಟಡದಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿತ್ತು. ಭೋಪಾಲ್‌ನ ಅರೇರಾ ಹಿಲ್‌ನಲ್ಲಿರುವ ವಲ್ಲಭ ಭವನ ರಾಜ್ಯ ಸಚಿವಾಲಯದ ಕಟ್ಟಡದಲ್ಲಿ (State Secretariat) ಏಕಾಏಕಿ ಅಗ್ನಿ ದುರಂತ ಸಂಭವಿಸಿದ್ದು, ಸುಮಾರು 10-15 ಅಗ್ನಿ ಶಾಮಕ ದಳದ ವಾಹನಗಳು ಬೆಂಕಿಯನ್ನು ನಂದಿಸಿದ್ದವು. ಅಗ್ನಿಯ ಕೆನ್ನಾಲಗೆಗೆ ಹಲವು ಕಡತಗಳು ಭಸ್ಮವಾಗಿವೆ ಎಂದು ತಿಳಿದುಬಂದಿತ್ತು.

ಕೆಲವು ದಿನಗಳ ಹಿಂದೆ ದೆಹಲಿಯ ಅಲಿಪುರ್ ಪ್ರದೇಶದಲ್ಲಿರುವ ಬಣ್ಣದ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಬೆಂಕಿ ಆಕಸ್ಮಿಕದಲ್ಲಿ 11 ಜನರು ಮೃತಪಟ್ಟಿದ್ದರು ಮತ್ತು ನಾಲ್ವರು ಗಾಯಗೊಂಡಿದ್ದರು. ಅಗ್ನಿಶಾಮಕ ದಳದ ಪ್ರಕಾರ ಎರಡು ಬಣ್ಣ ಮತ್ತು ರಾಸಾಯನಿಕ ಗೋದಾಮುಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಇದನ್ನೂ ಓದಿ: Fire Tragedy: ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ; 6 ಮಂದಿ ಸಾವು

Continue Reading

ವೈರಲ್ ನ್ಯೂಸ್

Viral News: ಶ್ವಾನದ ಜತೆ ವಾಕಿಂಗ್‌ ಹೋಗುತ್ತಿದ್ದ ವ್ಯಕ್ತಿಯ ವೇಳೆ ಹಲ್ಲೆ; ಶಾಕಿಂಗ್‌ ವಿಡಿಯೊ ಇಲ್ಲಿದೆ

Viral News: ಸಾಕು ನಾಯಿಯನ್ನು ವಾಕಿಂಗ್‌ ಕರೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಸ್ಥಳೀಯರು ಹಲ್ಲೆ ನಡೆಸಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಜತೆಗೆ ವ್ಯಕ್ತಿಯನ್ನು ರಕ್ಷಿಸಲು ಬಂದ ಮನೆಯವರಿಗೂ ಹೊಡೆತ ಬಿದ್ದಿದೆ. ಸದ್ಯ ಈ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ಈ ವಿಡಿಯೊ ವೈರಲ್‌ ಆಗಿದೆ. ಹೈದರಾಬಾದ್‌ನ ರಹಮತ್‌ನಗರದಲ್ಲಿ ಈ ಘಟನೆ ನಡೆದಿದೆ. ಸಾರ್ವಜನಿಕರ ಗುಂಪು ದೊಣ್ಣೆ ತೆಗೆದುಕೊಂಡು ಹಲ್ಲೆ ನಡೆಸುವ ದೃಶ್ಯ ನೋಡಿ ನೆಟ್ಟಿಗರು ಶಾಕ್‌ಗೆ ಒಳಗಾಗಿದ್ದಾರೆ.

VISTARANEWS.COM


on

Viral News
Koo

ಹೈದರಾಬಾದ್‌: ಇತ್ತೀಚಿನ ದಿನಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದೆ. ನಾಯಿ ದಾಳಿಯಿಂದ ಮಕ್ಕಳು ಬಲಿಯಾಗಿರುವ ಘಟನೆಯೂ ಅಲ್ಲಲ್ಲಿ ವರದಿಯಾಗುತ್ತಿದೆ. ಇದರಿಂದ ಸಾರ್ವಜನಿಕರಲ್ಲಿ ಭೀತಿ ಹೆಚ್ಚಾಗುತ್ತಿದೆ. ಹೀಗಾಗಿ ರಸ್ತೆಯಲ್ಲಿ ಓಡಾಡುವಾಗ ನಾಯಿ ಕಂಡರೆ ಬೆಚ್ಚಿ ಬೀಳುವಂತಾಗಿದೆ. ಈ ಮಧ್ಯೆ ಸಾಕು ನಾಯಿಯನ್ನು ವಾಕಿಂಗ್‌ ಕರೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಸ್ಥಳೀಯರು ಹಲ್ಲೆ ನಡೆಸಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಜತೆಗೆ ವ್ಯಕ್ತಿಯನ್ನು ರಕ್ಷಿಸಲು ಬಂದ ಮನೆಯವರಿಗೂ ಹೊಡೆತ ಬಿದ್ದಿದೆ. ಸದ್ಯ ಈ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ಈ ವಿಡಿಯೊ ವೈರಲ್‌ ಆಗಿದೆ (Viral News).

ಹೈದರಾಬಾದ್‌ನ ರಹಮತ್‌ನಗರದಲ್ಲಿ ಈ ಘಟನೆ ನಡೆದಿದೆ. ಸಾರ್ವಜನಿಕರ ಗುಂಪು ದೊಣ್ಣೆ ತೆಗೆದುಕೊಂಡು ಹಲ್ಲೆ ನಡೆಸುವ ದೃಶ್ಯ ನೋಡಿ ನೆಟ್ಟಿಗರು ಶಾಕ್‌ಗೆ ಒಳಗಾಗಿದ್ದಾರೆ. ಸದ್ಯ ಹಲ್ಲೆ ನಡೆಸಿದ ಆರೋಪದ ಮೇಲೆ ಪೊಲೀಸರು ವಿವಿಧ ಸೆಕ್ಷನ್‌ ಅಡಿ ಐವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮೇ 8ರಂದು ಮಧು, ಆತನ ಸಹೋದರ ಶ್ರೀನಾಥ್‌ ಮತ್ತು ಆತನ ಸ್ನೇಹಿತ ತಮ್ಮ ನೆಚ್ಚಿನ ಸಾಕು ನಾಯಿ ಸೈಬೇರಿಯನ್‌ ಹಸ್ಕಿ ಜತೆ ವಾಕಿಂಗ್‌ ಹೊರಟಿದ್ದರು. ಈ ವೇಳೆ ನಾಯಿ ತಮ್ಮ ಮೇಲೆ ದಾಳಿ ನಡೆಸಿದೆ ಎಂದು ನೆರೆಮನೆಯ ಧನಂಜಯ್‌ ಮತ್ತು ಆತನ ಮನೆಯವರು ಆರೋಪಿಸಿದ್ದಾರೆ. ಈ ವೇಳೆ ಮಾತಿನ ಚಕಮಕಿ ನಡೆದು ಎರಡೂ ಕಡೆಯವರು ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದಾರೆ.

ಘಟನೆ ವಿವರ

ಶ್ರೀನಾಥ್ ಅವರು ತಮ್ಮ ನಾಯಿಯನ್ನು ಕರೆದುಕೊಂಡು ವಾಕಿಂಗ್‌ ಹೋಗಿದ್ದರು. ಇದೇ ಸಮಯದಲ್ಲಿ ಧನಂಜಯ್ ಮತ್ತು ಆತನ ಇಬ್ಬರು ಸ್ನೇಹಿತರೂ ಆ ರಸ್ತೆಯಲ್ಲಿ ಓಡಾಡುತ್ತಿದ್ದರು. ಈ ವೇಳೆ ಶ್ರೀನಾಥ್ ನಾಯಿಯ ಹಗ್ಗವನ್ನು ಬಿಗಿಯಾಗಿ ಹಿಡಿದಿರುವುದು ಕಂಡು ಬಂದಿದೆ. ಜತೆಗೆ ನಾಯಿ ಧನಂಜಯ್‌ ಮೇಲೆ ದಾಳಿ ನಡೆಸಲು ಮುಂದಾಗಿರುವುದೂ ವಿಡಿಯೊದಲ್ಲಿ ಸೆರೆಯಾಗಿದೆ. ಬಳಿಕ ಆತ ಅಲ್ಲಿಂದ ಆಚೆ ಬರುತ್ತಾನೆ. ಸ್ವಲ್ಪ ಹೊತ್ತಿನಲ್ಲಿ ಧನಂಜಯ್‌ ಮತ್ತು ಇತರರು ದೊಣ್ಣೆ ಹಿಡಿದುಕೊಂಡು ಶ್ರೀನಾಥ್‌ ಬಳಿಗೆ ಬರುತ್ತಾರೆ. ನಂತರ ಹಲ್ಲೆ ನಡೆಸುತ್ತಾರೆ. ಶ್ರೀನಾಥ್‌ ನೆಲದ ಮೇಲೆ ಬಿದ್ದಾಗಲೂ ಸುಮ್ಮನಾಗದ ಧನಂಜಯ್‌ ಮತ್ತು ತಂಡ ಮತ್ತೂ ಹೊಡೆಯುತ್ತಾರೆ. ಇದೇ ವೇಳೆ ಶ್ರೀನಾಥ್‌ ಮನೆಯವರು ಆತನ ನೆರವಿಗೆ ಧಾವಿಸುತ್ತಾರೆ. ಧಾವಿಸಿ ಬಂದ ಶ್ರೀನಾಥ್‌ ಕುಟುಂಬದ ಮಹಿಳೆಗೂ ಹೊಡೆತ ಬೀಳುತ್ತದೆ.

ಸ್ವಲ್ಪ ಹೊತ್ತೆನಲ್ಲೇ ನೆರೆಹೊರೆಯವರೆಲ್ಲ ಗುಂಪುಗೂಡುತ್ತಾರೆ. ಬಳಿಕ ಹಲ್ಲೆ ನಡೆಸುತ್ತಿದ್ದವರು ಸ್ಥಳದಿಂದ ಪರಾರಿಯಾಗುತ್ತಾರೆ. ಗಾಯಗೊಂಡ ಶ್ರೀನಾಥ್‌ ಮತ್ತು ಆತನ ಮನೆಯವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ದಾಳಿಗೊಳಗಾದ ನಾಯಿಗೂ ಚಿಕಿತ್ಸೆ ನೀಡಲಾಗಿದೆ. ದೂರುಗಳ ಆಧಾರದ ಮೇಲೆ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಈ ಘಟನೆ ನೆಟ್ಟಿಗರ ಗಮನ ಸೆಳೆದಿದ್ದು ತೀವ್ರ ಚರ್ಚೆ ಹುಟ್ಟು ಹಾಕಿದೆ.

ಇದನ್ನೂ ಓದಿ: Viral News: ಪಿಟ್‌ಬುಲ್‌ ದಾಳಿಯಿಂದ ಬಾಲಕನ್ನು ರಕ್ಷಿಸಿದ ಬೀದಿ ನಾಯಿಗಳು; ವಿಡಿಯೊ ಇಲ್ಲಿದೆ

Continue Reading

ದೇಶ

PM Narendra Modi:”ಅಬ್ಬಾ.. ಎಂಥಾ ಮೇಕಪ್!”- ಮತ್ತೆ ಗಮನ ಸೆಳೆದ ಮೋದಿ; ವಿಡಿಯೋ ವೈರಲ್‌

PM Narendra Modi: ಜೌನ್‌ಪುರದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾಗ ಸಭೆಯಲ್ಲಿದ್ದ ಮೋದಿ ಹಾಗೂ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್‌ ಅವರ ವೇಷ ತೊಟ್ಟಿದ್ದ ಇಬ್ಬರು ಬಾಲಕರನ್ನು ಗುರುತಿಸಿದ ಪ್ರಧಾನಿ ನರೇಂದ್ರ ಮೋದಿ, ʼʼಯೇ ಕ್ಯಾ ಬಡಿಯಾ ಮೇಕ್‌ ಅಪ್‌ ಕಿಯಾ ಹೇ(ಅಬ್ಬಾ ಎಂಥಾ ಮೇಕಪ್‌ ಮಾಡಿದ್ದೀರಿ)” ಎಂದು ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ಗಮನ ಸೆಳೆದಿದ್ದಾರೆ.

VISTARANEWS.COM


on

PM Narendra Modi
Koo

ಉತ್ತರಪ್ರದೇಶ: ಪ್ರಧಾನಿ ನರೇಂದ್ರ ಮೋದಿ(PM Narendra Modi) ತಮ್ಮ ಚುನಾವಣಾ ಪ್ರಚಾರ(Lok Sabha Elction 2024)ದ ವೇಳೆ, ರ್ಯಾಲಿಗಳಲ್ಲಿ ಅದೆಷ್ಟು ಅಬ್ಬರದ ಭಾಷಣದಲ್ಲಿ ತೊಡಗಿದ್ದರೂ ಎದುರಿಗೆ ನೆರೆದಿರುವ ಜನರ ಮೇಲೆ ಪ್ರತ್ಯೇಕ ಗಮನ ಇದ್ದೇ ಇರುತ್ತದೆ. ಕೆಲವೊಮ್ಮೆ ಸಭಿಕರ ನಡುವೆ ಏನಾದರೂ ವಿಚಾರಗಳು ಕಂಡು ಬಂದಲ್ಲಿ ತಕ್ಷಣ ಅಲ್ಲೇ ಅದಕ್ಕೆ ಪ್ರತಿಕ್ರಿಯಿಸಿ ಗಮನ ಸೆಳೆದದ್ದೂ ಇದೆ. ಇದೀಗ ಮತ್ತೆ ಅಂತಹದ್ದೇ ಒಂದು ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಜೌನ್‌ಪುರದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾಗ ಸಭೆಯಲ್ಲಿದ್ದ ಮೋದಿ ಹಾಗೂ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್‌ ಅವರ ವೇಷ ತೊಟ್ಟಿದ್ದ ಇಬ್ಬರು ಬಾಲಕರನ್ನು ಗುರುತಿಸಿದ ಪ್ರಧಾನಿ ನರೇಂದ್ರ ಮೋದಿ, ʼʼಯೇ ಕ್ಯಾ ಬಡಿಯಾ ಮೇಕ್‌ ಅಪ್‌ ಕಿಯಾ ಹೇ(ಅಬ್ಬಾ ಎಂಥಾ ಮೇಕಪ್‌ ಮಾಡಿದ್ದೀರಿ)” ಎಂದು ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ಗಮನ ಸೆಳೆದಿದ್ದಾರೆ.

ಬಿಜೆಪಿ ಅಭ್ಯರ್ಥಿಗಳಾದ ಕೃಪಾ ಶಂಕರ್‌ ಸಿಂಗ್‌ ಮತ್ತು ಬಿಪಿ ಸರೋಜ್‌ ಪರ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಮುಂದಿನ ಐದು ವರ್ಷಗಳಲ್ಲಿ ಸಿಎಂ ಯೋಗಿ ಅವರ ಸಹಕಾರದೊಂದಿಗೆ ಇದೀ ಪೂರ್ವಾಂಚಲ ಪ್ರದೇಶದಲ್ಲಿ ಬದಲಾವಣೆ ಗಾಳಿ ಬೀಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ. ಈ ವೇಳೆ ಅವರು ಸಭೆಯ ನಡುವೆ ವಿಶೇಷ ಉಡುಗೆ ತೊಡುಗೆಯಲ್ಲಿ ಮಿಂಚುತ್ತಿದ್ದ ಇಬ್ಬರು ಬಾಲಕರನ್ನು ಗಮನಿಸಿ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಜಾರಿ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿಯನ್ನು ಶ್ಲಾಘಿಸಿದ ಮೋದಿ, “ನೀವು ಸಮಾಜವಾದಿ ಪಾರ್ಟಿಯ ʼಗೂಂಡಾರಾಜ್’ನ ಹಳೆಯ ದಿನಗಳನ್ನು ನೋಡಿದ್ದೀರಿ. ಯೋಗಿಜಿ ನನ್ನ ʼಸ್ವಚ್ಛತಾ ಅಭಿಯಾನ’ವನ್ನು ಸರಿಯಾಗಿ ಜಾರಿಗೆ ತಂದಿದ್ದಾರೆ. ಉತ್ತರ ಪ್ರದೇಶದಲ್ಲಿ ಇದ್ದ ಗ್ಯಾಂಗ್‌ಗಳು, ಗಲಭೆಕೋರರು, ಮಾಫಿಯಾಗಳು, ಅಪಹರಣಕಾರರು ಮತ್ತು ಸುಲಿಗೆಕೋರರ ವಿರುದ್ಧ ಕಠಿಣ ಕ್ರಮ ಜರುಗಿಸಿದ್ದಾರೆ” ಎಂದಿದ್ದಾರೆ.

“ಹತ್ತು ವರ್ಷಗಳ ಹಿಂದೆ ಇಲ್ಲಿ ಜನರು ದೇವರ ಭರವಸೆಯಲ್ಲಿ ಬದುಕುತ್ತಿದ್ದರು. ಕೆಲವು ಕಡೆ ಬಾಂಬ್ ದಾಳಿ, ಕೆಲವು ಕಡೆ ಸ್ಲೀಪರ್ ಸೆಲ್, ಕೆಲವು ಕಡೆ ಕೋಮು ಘರ್ಷಣೆ, ಇನ್ನು ಕೆಲವು ಕಡೆ ಭಯೋತ್ಪಾದನೆಯಿಂದ ಸಂಕಷ್ಟ ಪರಿಸ್ಥಿತಿ ಇತ್ತು. ಸಾವಿರಾರು ತಾಯಂದಿರು ತಮ್ಮ ಮಕ್ಕಳನ್ನು ಕಳೆದುಕೊಂಡರು. ಈ ಹಿಂದಿನ ಸರ್ಕಾರಗಳು ಅಂತಹ ದುಷ್ಟರಿಗೆ ಸಹಕಾರ ನೀಡುತ್ತಿದ್ದವು” ಎಂದರು ಮೋದಿ.

“ಈಗಲೂ ನಿಮ್ಮ ಮೀಸಲಾತಿಯನ್ನು ಕಿತ್ತು ಸಮುದಾಯವೊಂದಕ್ಕೆ ನೀಡಲು ಆ ಪಕ್ಷಗಳು ಚಿಂತಿಸಿವೆ. ಬಜೆಟ್ 15% ಅಲ್ಪಸಂಖ್ಯಾತರ ಹೆಸರಿನಲ್ಲಿ ಹೋಗುತ್ತಿದೆ. 70 ವರ್ಷಗಳಿಂದ ಹಿಂದೂ ಮುಸ್ಲಿಂ ರಾಜಕೀಯ ಮಾಡಿವೆ. ನಾವು ಒಂದಾಗಿ ಹೋಗಬೇಕು, ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು” ಎಂದರು ನುಡಿದರು.

ಇದನ್ನೂ ಓದಿ:Lok Sabha Election 2024: ನಾಲ್ಕು ಹಂತಗಳ ಮತದಾನ ಅಂತ್ಯ; ಕಾಂಗ್ರೆಸ್ ಆಂತರಿಕ ವರದಿಯಲ್ಲೇನಿದೆ?

“ಸಿಎಎ ಅಡಿಯಲ್ಲಿ ನಿರಾಶ್ರಿತರಿಗೆ ಪೌರತ್ವ ನೀಡುವ ಕೆಲಸ ಈಗಾಗಲೇ ಪ್ರಾರಂಭವಾಗಿದೆ. ಇವರು ದೇಶದಲ್ಲಿ ನಿರಾಶ್ರಿತರಾಗಿ ದೀರ್ಘಕಾಲ ವಾಸಿಸಿದ್ದಾರೆ. ಇವರು ಧರ್ಮದ ಆಧಾರದ ಮೇಲೆ ಮಾಡಿದ ದೇಶ ವಿಭಜನೆಗೆ ಬಲಿಯಾದವರು. ಆದರೆ ವಿರೋಧ ಪಕ್ಷಗಳಾದ ಎಸ್‌ಪಿ ಮತ್ತು ಕಾಂಗ್ರೆಸ್ ಕಾನೂನಿನ ಬಗ್ಗೆ ತಪ್ಪು ಮಾಹಿತಿಯನ್ನು ಹರಡುವ ಮೂಲಕ ಗಲಭೆಗಳನ್ನು ಪ್ರಚೋದಿಸುತ್ತಿವೆ. ಈ ನಿರಾಶ್ರಿತರನ್ನು ಕಾಂಗ್ರೆಸ್ ನಿರ್ಲಕ್ಷಿಸಿದೆ. ಅವರು ಉತ್ತರ ಪ್ರದೇಶ ಮತ್ತು ಇಡೀ ದೇಶದಲ್ಲಿ ಗಲಭೆಯನ್ನು ಸೃಷ್ಟಿಸಲು ಪ್ರಯತ್ನಿಸಿದರು” ಎಂದು ಮೋದಿ ಆರೋಪಿಸಿದರು.

Continue Reading

ದೇಶ

Sita Temple: ಬಿಜೆಪಿಯಿಂದ ಶೀಘ್ರವೇ ಸೀತೆಗಾಗಿ ಮಂದಿರ ನಿರ್ಮಾಣ; ಅಮಿತ್‌ ಶಾ ಮಹತ್ವದ ಘೋಷಣೆ

Sita Temple: ವೋಟ್‌ ಬ್ಯಾಂಕ್‌ ರಾಜಕೀಯಕ್ಕೆ ಬಿಜೆಪಿಯು ಹೆದರುವುದಿಲ್ಲ. ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ರಾಮಲಲ್ಲಾನಿಗಾಗಿ ರಾಮಮಂದಿರ ನಿರ್ಮಾಣ ಮಾಡಿದ್ದಾರೆ. ರಾಮನ ಜನ್ಮಭೂಮಿಯಲ್ಲಿ ಮಂದಿರ ನಿರ್ಮಿಸಲಾಗಿದೆ. ಇನ್ನು, ಸೀತೆಯ ಜನ್ಮಸ್ಥಳದಲ್ಲಿ ಸೀತೆಗಾಗಿ ಮಂದಿರ ನಿರ್ಮಾಣ ಮಾಡುವ ಅವಶ್ಯಕತೆ ಇದೆ. ಇದನ್ನು ಮೋದಿ ಸಾಕಾರಗೊಳಿಸಲಿದ್ದಾರೆ ಎಂದು ಅಮಿತ್‌ ಶಾ ಹೇಳಿದ್ದಾರೆ.

VISTARANEWS.COM


on

Sita Temple
Koo

ಪಟನಾ: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ರಾಮಮಂದಿರ (Ram Mandir) ನಿರ್ಮಾಣ ಮಾಡಲಾಗಿದ್ದು, ಕಳೆದ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಲೋಕಾರ್ಪಣೆ ಮಾಡಿದ್ದಾರೆ. ಕೋಟ್ಯಂತರ ಜನ ರಾಮಮಂದಿರಕ್ಕೆ ತೆರಳಿ ಶ್ರೀರಾಮನ ದರ್ಶನ ಪಡೆದಿದ್ದಾರೆ. ಇದರ ಬೆನ್ನಲ್ಲೇ, “ಬಿಹಾರದ ಸೀತಾಮಡಿಯಲ್ಲಿ (Sitamarhi) ಬಿಜೆಪಿಯು ಸೀತೆಗಾಗಿ ಮಂದಿರ (Sita Temple) ನಿರ್ಮಿಸಲಾಗುವುದು” ಎಂದು ಕೇಂದ್ರ ಸಚಿವ ಅಮಿತ್‌ ಶಾ (Amit Shah) ಘೋಷಣೆ ಮಾಡಿದ್ದಾರೆ.

“ವೋಟ್‌ ಬ್ಯಾಂಕ್‌ ರಾಜಕೀಯಕ್ಕೆ ಬಿಜೆಪಿಯು ಹೆದರುವುದಿಲ್ಲ. ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ರಾಮಲಲ್ಲಾನಿಗಾಗಿ ರಾಮಮಂದಿರ ನಿರ್ಮಾಣ ಮಾಡಿದ್ದಾರೆ. ರಾಮನ ಜನ್ಮಭೂಮಿಯಲ್ಲಿ ಮಂದಿರ ನಿರ್ಮಿಸಲಾಗಿದೆ. ಇನ್ನು, ಸೀತೆಯ ಜನ್ಮಸ್ಥಳದಲ್ಲಿ ಸೀತೆಗಾಗಿ ಮಂದಿರ ನಿರ್ಮಾಣ ಮಾಡುವ ಅವಶ್ಯಕತೆ ಇದೆ. ರಾಮಮಂದಿರ ನಿರ್ಮಾಣ ಮಾಡಲು ಅಧಿಕಾರದಲ್ಲಿದ್ದವರು ದೂರದಲ್ಲೇ ಉಳಿದರು. ಆದರೆ, ಮೋದಿ ಅವರ ಕಾಲದಲ್ಲಿ ರಾಮಮಂದಿರ ನಿರ್ಮಾಣ ಮಾಡಲಾಯಿತು. ಈಗ ಸೀತೆಗಾಗಿ ಯಾರಾದರೂ ರಾಮಮಂದಿರ ನಿರ್ಮಾಣ ಮಾಡಿದರೆ, ಅದು ನರೇಂದ್ರ ಮೋದಿ ಅವರು ಮಾತ್ರ” ಎಂದು ಬಿಹಾರದ ಸೀತಾಮಡಿಯಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಅಮಿತ್ ಶಾ ಹೇಳಿದ್ದಾರೆ.

ಸಮಾವೇಶದಲ್ಲಿ ಕಾಂಗ್ರೆಸ್‌ ಹಾಗೂ ಆರ್‌ಜೆಡಿ ವಿರುದ್ಧ ಅಮಿತ್‌ ಶಾ ವಾಗ್ದಾಳಿ ನಡೆಸಿದರು. “ಲಾಲು ಪ್ರಸಾದ್ ಯಾದವ್‌ ಅವರು ಪವರ್‌ ಪಾಲಿಟಿಕ್ಸ್‌ನಿಂದಾಗಿ ಕಾಂಗ್ರೆಸ್‌ ಜತೆ ಸಂಖ್ಯ ಬೆಳೆಸಿದರು. ಲಾಲು ಪ್ರಸಾದ್‌ ಯಾದವ್‌ ಅವರು ತಮ್ಮ ಪುತ್ರನನ್ನು ಸಿಎಂ ಮಾಡಬೇಕು ಎಂಬ ಏಕಮಾತ್ರ ಉದ್ದೇಶದಿಂದ ಅವರು ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡರು” ಎಂದು ಟೀಕಿಸಿದರು.

ಹಿಂದು ಗ್ರಂಥಗಳ ಪ್ರಕಾರ, ರಾಜ ಜನಕನು ಸೀತಾಮಡಿಯ ಜಮೀನೊಂದರಲ್ಲಿ ಉಳುಮೆ ಮಾಡುವಾಗ ಮಡಿಕೆಯೊಂದರಿಂದ ಭಗವಾನ್‌ ರಾಮನ ಪತ್ನಿ ಸೀತೆ ಉದ್ಭವಿಸಿದರು ಎಂದು ಹೇಳಲಾಗುತ್ತಿದೆ. ಹಾಗಾಗಿ, ಸೀತಾಮಡಿಯನ್ನು ಪವಿತ್ರ ಸ್ಥಾನ ಎಂದೇ ಹೇಳಲಾಗುತ್ತಿದೆ. ಸೀತಾಮಡಿಯು ಲೋಕಸಭೆ ಕ್ಷೇತ್ರವೂ ಆಗಿದೆ.

ಕೆಲ ದಿನಗಳ ಹಿಂದಷ್ಟೇ ರಾಮಮಂದಿರ ಕುರಿತು ನರೇಂದ್ರ ಮೋದಿ ಮಾತನಾಡಿದ್ದರು. “ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 400 ಕ್ಷೇತ್ರಗಳಲ್ಲಿ ಗೆಲ್ಲಿಸಿ ಎಂಬುದಾಗಿ ನಾನು ನಿಮ್ಮಲ್ಲಿ ಮನವಿ ಮಾಡಲು ಹಲವು ಕಾರಣಗಳಿವೆ. ನೀವು ಬಹುಮತ ನೀಡಿದ ಕಾರಣಕ್ಕಾಗಿಯೇ ನಾವು 370ನೇ ವಿಧಿಯನ್ನು ರದ್ದುಗೊಳಿಸಿದೆವು. ಹಾಗಾಗಿ, ಕಾಂಗ್ರೆಸ್‌ 370ನೇ ವಿಧಿಯನ್ನು ಮತ್ತೆ ಜಾರಿಗೆ ತರಬಾರದು, ಅಯೋಧ್ಯೆಯ ರಾಮಮಂದಿರಕ್ಕೆ ಬಾಬ್ರಿ ಮಸೀದಿ ಬೀಗ ಜಡಿಯಬಾರದು, ನಮ್ಮ ದೇಶದ ದ್ವೀಪಗಳನ್ನು ಬೇರೆ ದೇಶಗಳಿಗೆ ನೀಡಬಾರದು, ಒಬಿಸಿ ಮೀಸಲಾತಿಯನ್ನು ಕಿತ್ತು ಧರ್ಮದ ಆಧಾರದ ಮೇಲೆ ಅಲ್ಪಸಂಖ್ಯಾತರಿಗೆ ನೀಡಬಾರದು ಎಂಬ ಕಾರಣಕ್ಕಾಗಿ ಬಿಜೆಪಿಗೆ ಬಹುಮತ ನೀಡಿ” ಎಂಬುದಾಗಿ ಮನವಿ ಮಾಡಿದ್ದರು.

ಇದನ್ನೂ ಓದಿ: PM Modi: ರಾಮಮಂದಿರಕ್ಕೆ ಕಾಂಗ್ರೆಸ್‌ ಬೀಗ ಹಾಕಬಾರದು ಎಂದರೆ ನಮಗೆ 400 ಸೀಟು ಕೊಡಿ ಎಂದ ಮೋದಿ

Continue Reading
Advertisement
HD Revanna case Revanna gets interim bail in Holenarasipura sexual assault case
ಕರ್ನಾಟಕ14 mins ago

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು; ಆದರೂ ಮುಗಿದಿಲ್ಲ ಟೆನ್ಶನ್‌!

Murder case in Belgavi
ಬೆಳಗಾವಿ16 mins ago

Murder Case : ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ

Sunil Chhetri
ಕ್ರೀಡೆ42 mins ago

Sunil Chhetri: ಭಾರತದ ಕಾಲ್ಚೆಂಡಿನ ಮಾಂತ್ರಿಕ ಸುನೀಲ್ ಚೆಟ್ರಿ ಸಾಧನೆಯೇ ರೋಚಕ

Fire Accident
ದೇಶ43 mins ago

Fire Accident: ಬಿಜೆಪಿ ಕಚೇರಿಯಲ್ಲಿ ಭಾರಿ ಅಗ್ನಿ ಅವಘಡ; ಅಗ್ನಿಶಾಮಕ ಸಿಬ್ಬಂದಿ ದೌಡು

XVU300
ಆಟೋಮೊಬೈಲ್45 mins ago

Mahindra XUV 3XO : ಮಹೀಂದ್ರಾದ ವಿಶೇಷ ದಾಖಲೆ; 60 ನಿಮಿಷದಲ್ಲಿ 50 ಸಾವಿರ ಕಾರು ಬುಕಿಂಗ್​!

Namrata Gowda Holiday Look in Red Ruffle Layered Maxi Dress
ಫ್ಯಾಷನ್50 mins ago

Namratha Gowda: ರೆಡ್‌ ರಫಲ್‌ ಲೇಯರ್‌ ಮ್ಯಾಕ್ಸಿ ಡ್ರೆಸ್‌ನಲ್ಲಿ ನಟಿ ನಮ್ರತಾ ಗೌಡ ಹಾಲಿಡೇ ಲುಕ್‌!

Viral News
ವೈರಲ್ ನ್ಯೂಸ್50 mins ago

Viral News: ಶ್ವಾನದ ಜತೆ ವಾಕಿಂಗ್‌ ಹೋಗುತ್ತಿದ್ದ ವ್ಯಕ್ತಿಯ ವೇಳೆ ಹಲ್ಲೆ; ಶಾಕಿಂಗ್‌ ವಿಡಿಯೊ ಇಲ್ಲಿದೆ

Karnataka Weather Forecast
ಮಳೆ1 hour ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

BMW X3 xDrive20d
ಪ್ರಮುಖ ಸುದ್ದಿ1 hour ago

BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

Most costly medicine
ಆರೋಗ್ಯ1 hour ago

Most Costly Medicine: ಒಂದೇ ಒಂದು ಡೋಸ್ ಗೆ 17 ಕೋಟಿ ರೂ! ಈ ಔಷಧ ಏಕೆ ಇಷ್ಟೊಂದು ದುಬಾರಿ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ1 hour ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು7 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌