ಯಮುನಾ ನದಿ ನೀರು ನಗರದೊಳಗೆ ನುಗ್ಗಲು ಬಿಜೆಪಿ ಪಿತೂರಿಯೇ ಕಾರಣ; ಆಮ್​ ಆದ್ಮಿ ಪಕ್ಷದ ಆರೋಪ - Vistara News

ದೇಶ

ಯಮುನಾ ನದಿ ನೀರು ನಗರದೊಳಗೆ ನುಗ್ಗಲು ಬಿಜೆಪಿ ಪಿತೂರಿಯೇ ಕಾರಣ; ಆಮ್​ ಆದ್ಮಿ ಪಕ್ಷದ ಆರೋಪ

ದೆಹಲಿಯಲ್ಲಿ ಬಿದ್ದ ವಿಪರೀತ ಮಳೆಗೆ ಸಂಪೂರ್ಣ ಅವ್ಯವಸ್ಥೆ ಉಂಟಾಗಿ, ಯಮುನಾ ನದಿ ಅಪಾಯದ ಮಟ್ಟವನ್ನೂ ಮೀರಿ ಹರಿದಿದೆ.

VISTARANEWS.COM


on

Delhi Floods
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೆಹಲಿಯಲ್ಲಿ ಯಮುನೆ ಮುನಿಸಿಕೊಂಡು (Yamuna River Flood), ಊರ ಬಾಗಿಲಿಗೆ ಬಂದಿದ್ದಾಳೆ. ಎಲ್ಲೆಲ್ಲೂ ಯಮುನಾ ನದಿ ನೀರಿನ ಪ್ರವಾಹ. ದೆಹಲಿಯ ಪ್ರವಾಹ (Delhi Flood) ಪರಿಸ್ಥಿತಿ ನಿಭಾಯಿಸಲು ಅಲ್ಲಿನ ಆಡಳಿತಕ್ಕೆ ಭಾರತೀಯ ಸೇನೆ ಸಹಾಯ ಮಾಡುತ್ತಿದೆ. ಅಪಾಯದ ಸ್ಥಳದಿಂದ ಜನರನ್ನು ಸ್ಥಳಾಂತರ ಮಾಡಲಾಗುತ್ತಿದೆ. ನುಗ್ಗುತ್ತಿರುವ ನೀರನ್ನು ನಿಯಂತ್ರಿಸಲು ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಮತ್ತು ಇತರ ಜನಪ್ರತಿನಿಧಿಗಳು ರಸ್ತೆಗೆ ಇಳಿದು, ಮಳೆ-ಪ್ರವಾಹದ ಪರಿಸ್ಥಿತಿಯನ್ನು ಪರಿಶೀಲನೆ ಮಾಡುತ್ತಿದ್ದಾರೆ. ಜತೆಗೆ ಯಮುನಾ ನದಿ (Yamuna River) ಪ್ರವಾಹಕ್ಕೆ ರಾಜಕೀಯ ಲೇಪನವನ್ನೂ ಬಳಿಯಲಾಗುತ್ತಿದೆ.

ಈ ಸಲ ದೆಹಲಿಯಲ್ಲಿ ಬಿದ್ದ ವಿಪರೀತ ಮಳೆಗೆ ಸಂಪೂರ್ಣ ಅವ್ಯವಸ್ಥೆ ಉಂಟಾಗಿ, ಯಮುನಾ ನದಿ ಅಪಾಯದ ಮಟ್ಟವನ್ನೂ ಮೀರಿ ಹರಿದಿದೆ. ಗರಿಷ್ಠ 208.66 ಮೀಟರ್​​ಗೆ ಇದರ ಹರಿವಿನ ಮಟ್ಟ ಹೋಗಿತ್ತು. ಹೀಗಾಗಿ ನೀನು ನಗರದೊಳಗೆ ನುಗ್ಗಿತ್ತು. ಆದರೆ ಇದು ಬಿಜೆಪಿ ಪಿತೂರಿ ಎಂದು ಆಮ್​ ಆದ್ಮಿ ಪಕ್ಷ (AAP) ಈಗ ಆರೋಪ ಮಾಡುತ್ತಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೆಹಲಿ ಕೃಷಿ ಮತ್ತು ಆಹಾರ ನಿಯಂತ್ರಣ ಸಚಿವ ಸೌರಭ್ ಭಾರದ್ವಾಜ್​ ‘ದೆಹಲಿ ನಗರವನ್ನು ಮುಳುಗಿಸಲು ಬಿಜೆಪಿ ಪಿತೂರಿ ಮಾಡಿದೆ ಎಂದಿದ್ದಾರೆ.

‘ಹರ್ಯಾಣದ ಯಮುನಾ ನಗರ ಜಿಲ್ಲೆಯಲ್ಲಿ ಯಮುನಾ ನದಿಗೆ ಕಟ್ಟಲಾದ ಹತ್ನಿಕುಂಡ್​ ಅಣೆಕಟ್ಟೆಯಿಂದ ಹೆಚ್ಚಿನ ನೀರನ್ನು ರಾಷ್ಟ್ರರಾಜಧಾನಿಯೆಡೆಗೆ ಬಿಡಲಾಗಿದೆ. ಇದನ್ನು ಕೇಂದ್ರ ಬಿಜೆಪಿ ಸರ್ಕಾರ, ಹರ್ಯಾಣ ಸರ್ಕಾರದ ಮೂಲಕ ಮಾಡಿಸಿದೆ. ಹೀಗೆ ಅಗತ್ಯಕ್ಕಿಂತಲೂ ಹೆಚ್ಚಿನ ನೀರನ್ನು ದೆಹಲಿಯ ಕಡೆಗೆ ಹರಿಸುವ ಮೂಲಕ, ನಗರವನ್ನು ಮುಳುಗಿಸುವ ಸಂಚು ನಡೆದಿದೆ’ ಎಂದು ಸಚಿವ ಸೌರಭ್​ ಭಾರದ್ವಾಜ್​ ಆರೋಪಿಸಿದ್ದಾರೆ.

ಇದನ್ನೂ ಓದಿ: Rain News: ದೆಹಲಿಯಲ್ಲಿ ಯಮುನೆ ಅಬ್ಬರ; ಕೇಜ್ರಿವಾಲ್‌ ನಿವಾಸದ ಬಳಿಯೇ ಪ್ರವಾಹ, ನೀರು ನುಗ್ಗುವ ಸಾಧ್ಯತೆ

‘ಹತ್ನಿಕುಂಡ್​ ಅಣೆಕಟ್ಟಿನಿಂದ ಹೆಚ್ಚುವರಿ ನೀರನ್ನು ಕೇವಲ ದೆಹಲಿಯ ಕಡೆಗೆ ಮಾತ್ರ ಬಿಡಲಾಗುತ್ತಿದೆ. ಅದನ್ನು ಹರ್ಯಾಣದ ಪಶ್ಚಿಬ ಕಾಲುವೆಗಾಗಲೀ, ಉತ್ತರ ಪ್ರದೇಶದಲ್ಲಿರುವ ಪೂರ್ವ ಕಾಲುವೆಗಾಗಲೀ ಬಿಡುತ್ತಿಲ್ಲ. ಯಮುನಾ ನದಿಯ ನೀರನ್ನು ದೆಹಲಿಗೆ ಬಿಡುವ ಮೂಲಕ ಇಲ್ಲಿನ ಸುಪ್ರೀಂಕೋರ್ಟ್ ಸೇರಿ, ಪ್ರಮುಖ ಸಂಸ್ಥೆಗಳನ್ನು ನೀರಿನಲ್ಲಿ ಮುಳುಗಿಸುವ ಪಿತೂರಿಯನ್ನು ಬಿಜೆಪಿ ಮಾಡುತ್ತಿದೆ’ ಎಂದು ಆಮ್ ಆದ್ಮಿ ಪಕ್ಷದ ಸಚಿವರ ಆರೋಪವಾಗಿದೆ. ಆಪ್​ ನಾಯಕ ಸೋಮನಾಥ್ ಭಾರ್ತಿ, ದೆಹಲಿ ಲೋಕೋಪಯೋಗಿ ಇಲಾಖೆ ಸಚಿವೆ ಅತಿಶಿ ಕೂಡ ಇದನ್ನೇ ಹೇಳಿದ್ದಾರೆ.

ತಿರುಗೇಟು ಕೊಟ್ಟ ಬಿಜೆಪಿ

ಆಮ್​ ಆದ್ಮಿ ಪಕ್ಷದ ಆರೋಪಕ್ಕೆ ಬಿಜೆಪಿ ತಿರುಗೇಟು ಕೊಟ್ಟಿದೆ. ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್​ದೇವಾ ಅವರು ಕಟುವಾಗಿ ಪ್ರತಿಕ್ರಿಯೆ ನೀಡಿ ‘ದೆಹಲಿಯಲ್ಲಿ ಕೊರೊನಾ ಸಾಂಕ್ರಾಮಿಕ ಹೆಚ್ಚಾದಾಗಲೂ ದೆಹಲಿ ಸರ್ಕಾರ ಇತರ ರಾಜ್ಯಗಳನ್ನು ದೂಷಿಸಿತ್ತು. ಈಗಲೂ ಕೂಡ ಅದನ್ನೇ ಮಾಡುತ್ತ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ. ಆಡಳಿತ ವಿಫಲತೆಯನ್ನು ಮರೆಮಾಚುತ್ತಿದೆ’ ಎಂದು ಹೇಳಿದ್ದಾರೆ. ಹರ್ಯಾಣ ಕೃಷಿ ಸಚಿವ ಜೈ ಪ್ರಕಾಶ್ ದಲಾಲ್​ ಅವರೂ ಕೂಡ ಇದಕ್ಕೆ ಧ್ವನಿಗೂಡಿಸಿದ್ದಾರೆ. ಹತ್ನಿಕುಂಡ್​ ಜಲಾಶಯದಿಂದ ಹೆಚ್ಚುವರಿ ನೀರು ಬಿಟ್ಟಾಗ ಅದು ಮೊದಲು ದೆಹಲಿ, ಆಗ್ರಾ, ಅಲಹಾಬಾದ್​ ಮೂಲಕ ಹಾದುಹೋಗಿ, ಸಮುದ್ರಕ್ಕೆ ಸೇರುತ್ತದೆ. ಇದರಲ್ಲಿ ಪಿತೂರಿ ಏನು ಬಂತೆಂದು ಪ್ರಶ್ನಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Nijjar Killing: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣದ ಮೂವರ ಬಂಧನ; ಭಾರತದ ಪ್ರತಿಕ್ರಿಯೆ ಏನು?

Nijjar Killing:ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಕೊಲೆ ಪ್ರಕರಣದಲ್ಲಿ ಭಾರತದ ಕೈವಾಡ ಇದೆ ಎಂಬ ಕೆನಡಾ ಆರೋಪಕ್ಕೆ ಭಾರತ ತಿರುಗೇಟು ನೀಡಿದೆ. ಕೆನಡಾ ಆರೋಪಕ್ಕೆ ತಿರುಗೇಟು ಕೊಟ್ಟಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈ ಶಂಕರ್‌ , ಜಸ್ಟಿನ್‌ ಟ್ರೂಡೋ ಸರ್ಕಾರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ಇಲ್ಲದೇ ಭಾರತದ ವಿರುದ್ಧ ಆರೋಪ ಮಾಡುವ ಮೂಲಕ ಗೌರವಕ್ಕೆ ಚ್ಯುತಿ ತರುವ ಪ್ರಯತ್ನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Nijjar Killing
Koo

ನವದೆಹಲಿ: ಖಲಿಸ್ತಾನಿ ಉಗ್ರ (Khalistani Terrorist) ಹರ್ದೀಪ್‌ ಸಿಂಗ್‌ ನಿಜ್ಜರ್‌ ಕೊಲೆ(Nijjar Killing) ಪ್ರಕರಣದಲ್ಲಿ ಭಾರತದ ಕೈವಾಡ ಇದೆ ಎಂಬ ಕೆನಡಾ(Canada) ಆರೋಪಕ್ಕೆ ಭಾರತ ತಿರುಗೇಟು ನೀಡಿದೆ. ಕೆನಡಾ ಆರೋಪಕ್ಕೆ ತಿರುಗೇಟು ಕೊಟ್ಟಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈ ಶಂಕರ್‌(Jai Shankar), ಜಸ್ಟಿನ್‌ ಟ್ರೂಡೋ ಸರ್ಕಾರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ಇಲ್ಲದೇ ಭಾರತದ ವಿರುದ್ಧ ಆರೋಪ ಮಾಡುವ ಮೂಲಕ ಗೌರವಕ್ಕೆ ಚ್ಯುತಿ ತರುವ ಪ್ರಯತ್ನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕೆನಡಾ ಆರೋಪಕ್ಕೆ ತಿರುಗೇಟು ನೀಡಿದ ಜೈಶಂಕರ್‌, ನಿಜ್ಜರ್‌ ಕೊಲೆಗೂ ಭಾರತಕ್ಕೂ ಯಾವುದೇ ಸಂಬಂಧ ಇಲ್ಲ. ಕೆನಡಾದಲ್ಲಿ ಆಂತರಿಕ ಅಲ್ಪ ಸಂಖ್ಯಾತರ ವೋಟ್‌ ಪಡೆಯಲು ನಿಜ್ಜರ್‌ ಕೊಲೆ ಪ್ರಕರಣವನ್ನು ಬಳಸಿಕೊಳ್ಳುತ್ತಿದೆ. ಖಲಿಸ್ತಾನದ ಜೊತೆ ಲಿಂಕ್‌ ಇರುವ ಡೆಮಾಕ್ರಟಿಕ್‌ ಪಕ್ಷದ ಸಹಾಯದೊಂದಿಎಗೆ ಟ್ರೂಡೋ ಸರ್ಕಾರ ನಡೆಸುತ್ತಿದ್ದಾರೆ. ಹೀಗಾಗಿ ಸಿಖ್‌ ಅಲ್ಪ ಸಂಖ್ಯಾತರನ್ನು ಓಲೈಸುವ ನಿಟ್ಟಿನಲ್ಲಿ ಕೆನಡಾ ಸರ್ಕಾರ ಇಂತಹ ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಭಾರತ ಈ ಹಿಂದೆಯೇ ಉಗ್ರ ಚಟುಟಿಕೆಯಲ್ಲಿ ಭಾಗಿಯಾಗಿರುವ 25 ವ್ಯಕ್ತಿಗಳನ್ನು ಗಡಿಪಾರು ಮಾಡುವಂತೆ ಕೆನಡಾ ಸರ್ಕಾರಕ್ಕೆ ಭಾರತ ಮನವಿ ಮಾಡಿತ್ತು. ಆದರೆ ಟ್ರೂಡೋ ಸರ್ಕಾರ ಯಾವುದೇ ರೀತಿಯ ಸ್ಪಂದನೆ ನೀಡಿರಲಿಲ್ಲ. ಈಗ ಈ ವಿಚಾರದಲ್ಲಿ ಡ್ರಾಮಾ ಮಾಡುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.

ಕಳೆದ ವರ್ಷ ಕೆನಡಾದ ಬ್ರಿಟೀಷ್‌ ಕೊಲಂಬಿಯಾದಲ್ಲಿ ಹರ್ದೀಪ್‌ ಸಿಂಗ್‌ನನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಹಿಂದೆ ಮೂವರು ಹಂತಕರನ್ನುಕೆನಡಾ ಪೊಲೀಸರು ಅರೆಸ್ಟ್‌ ಮಾಡಿದ್ದರು. ಬಂಧಿತರನ್ನು ಕರಣ್‌ ಪ್ರಿತ್‌ ಸಿಂಗ್(28) ಕಮಲ್‌ ಪ್ರಿತ್‌ ಸಿಂಗ್‌(22) ಮತ್ತು ಕರಣ್‌ ಬ್ರಾರ್‌(22) ಎಂದು ಗುರುತಿಸಲಾಗಿದೆ. ಅಲ್ಲದೇ ಪೊಲೀಸರು ಮೂವರು ಹಂತಕರ ಫೊಟೋವನ್ನೂ ಕೂಡ ರಿಲೀಸ್‌ ಮಾಡಿದ್ದರು. ಆರೋಪಿಗಳ ವಿರುದ್ಧ ಕೊಲೆಗೆ ಸಂಚು ಮತ್ತು ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಕೋರ್ಟ್‌ಗೆ ಎಲ್ಲಾ ದಾಖಲೆಗಳನ್ನು ಸಲ್ಲಿಸಲಾಗಿದೆ.

ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಭಾರತೀಯ ಮೂಲದ ಮೂವರನ್ನು ಅರೆಸ್ಟ್‌ ಮಾಡಿರುವ ಬೆನ್ನಲ್ಲೇ ಕೆನಡಾ ಮತ್ತೆ ಭಾರತದತ್ತ ಬೊಟ್ಟು ಮಾಡಿ ತೋರಿಸಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಕೆನಡಾ ಸಂಸದ ಜಗ್ಮಿತ್‌ ಸಿಂಗ್‌, ಪ್ರಕರಣದಲ್ಲಿ ಭಾರತದ ಕೈವಾಡವಿರುವುದು ಸಾಬೀತಾಗಿದೆ. ಕೆನಡಾದಂತಹ ಪೂಜ್ಯನೀಯ ಸ್ಥಳದಲ್ಲಿ ಕೆನಡಾ ಪ್ರಜೆಯನ್ನು ಕೊಲ್ಲಲು ಭಾರತ ಹಂತಕರನ್ನು ನೇಮಿಸಿದೆ ಎಂದು ಆರೋಪಿಸಿದ್ದರು.

2023ರ ಜೂನ್‌ 18ರಂದು ಕೆನಡಾದಲ್ಲಿ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಗೀಡಾಗಿದ್ದ. ಇದರ ಹಿಂದೆ ಭಾರತದ ಏಜೆಂಟರ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಆರೋಪ ಕೂಡ ಮಾಡಿದ್ದರು. ಹೀಗೆ, ಕೆನಡಾವನ್ನು ಭಾರತದ ವಿರುದ್ಧ ಎತ್ತಿಕಟ್ಟಲು ಪಾಕಿಸ್ತಾನದ ಐಎಸ್‌ಐ ಇಂತಹ ಕುತಂತ್ರ ಮಾಡಿದೆ. ಆದರೆ, ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ಆರೋಪವನ್ನು ತಿರಸ್ಕರಿಸುವ ಭಾರತ, ಆರೋಪಗಳಿಗೆ ಸಾಕ್ಷ್ಯ ಕೊಡಿ ಎಂದು ತಿರುಗೇಟು ನೀಡಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಈಗ ಭಾರತ ಹಾಗೂ ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಶುರುವಾಗಿದೆ.

ಇದನ್ನೂ ಓದಿ:HD Revanna: ಅಶ್ಲೀಲ ವಿಡಿಯೊ ಪ್ರಕರಣ: ದೂರು ನೀಡಲು ಮುಂದೆ ಬಂದ ಮೂವರು ಸಂತ್ರಸ್ತೆಯರು; ರೇವಣ್ಣ, ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ?

“ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಕುರಿತು ನಾನು ಭಾರತದ ಜತೆ ಮಾತನಾಡಿದ್ದೇನೆ. ಆದರೆ, ಆತನ ಹತ್ಯೆಯ ಕುರಿತು ಭಾರತಕ್ಕೆ ತುಂಬ ವಾರಗಳ ಹಿಂದೆಯೇ ನಂಬಲರ್ಹ ಆರೋಪಗಳ ಕುರಿತು ಮಾಹಿತಿಯನ್ನು ಒದಗಿಸಲಾಗಿದೆ. ತುಂಬ ಗಂಭೀರವಾದ ವಿಚಾರದ ಕುರಿತು ಭಾರತ ಹಾಗೂ ಕೆನಡಾ ಒಗ್ಗೂಡಿ ಕಾರ್ಯನಿರ್ವಹಿಸುವ ಕುರಿತು ಕೂಡ ಮನವರಿಕೆ ಮಾಡಲಾಗಿದೆ. ಗಂಭೀರ ಹತ್ಯೆಯ ವಿಚಾರದಲ್ಲಿ ಭಾರತವು ನಮ್ಮ ಜತೆ ಕೈಗೂಡಿಸುತ್ತದೆ ಎಂಬ ಆಶಾಭಾವನೆಯಲ್ಲಿ ಇದ್ದೇವೆ” ಎಂದು ಜಸ್ಟಿನ್‌ ಟ್ರುಡೋ ಹೇಳಿದ್ದರು. ಆದರೆ, ಭಾರತ ಮಾತ್ರ ಸರಿಯಾದ ಸಾಕ್ಷ್ಯ ಕೊಡಿ ಎಂದು ಹೇಳಿದೆ.

Continue Reading

ರಾಜಕೀಯ

Kangana Ranaut: ತೇಜಸ್ವಿ ಸೂರ್ಯ ಗೂಂಡಾಗಿರಿ ಮಾಡ್ತಾನೆ ಎಂದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್! ವಿಡಿಯೊ ನೋಡಿ

Kangana Ranaut: ಮಂಡಿ ಕ್ಷೇತ್ರದಲ್ಲಿ ಆಯೋಜಿಸಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ಆರಂಭಿಸಿದ ಕಂಗನಾ ರಾಣಾವತ್‌, ತೇಜಸ್ವಿ ಯಾದವ್‌ ಅವರು ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಹೇಳಲು ಹೊರಟಿದ್ದರು. ತೇಜಸ್ವಿ ಯದವ್‌ ಬದಲು ತೇಜಸ್ವಿ ಸೂರ್ಯ ಎಂದು ಹೇಳಿದ ಕಂಗನಾ, ಪ್ರತಿಪಕ್ಷ ನಾಯಕರಿಗೆ ಏನಾಗಿದೆ? ಒಬ್ಬರು ಚಂದ್ರನ ಮೇಲೆ ಆಲೂಗಡ್ಡೆ ಬೆಳೆಯುವ ಬಗ್ಗೆ ಮಾತನಾಡುತ್ತಾರೆ. ಅತ್ತ ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಹೇಳಿದ್ದರು.

VISTARANEWS.COM


on

Kangana Ranaut
Koo

ಹಿಮಾಚಲ ಪ್ರದೇಶ: ಲೋಕಸಭೆ ಚುನಾವಣೆ(Kangana Ranaut) ದೇಶದಲ್ಲಿ ದಿನೇ ದಿನೇ ರಂಗೇರಿದೆ. ಅಬ್ಬರದ ಪ್ರಚಾರ, ಪರ ವಿರೋಧ ವಾಗ್ದಾಳಿ ನಡೆಸಿದ್ದಾರೆ. ಎದುರಾಳಿ ನಾಯಕರನ್ನು ಟೀಕಿಸುವ ಭರದಲ್ಲಿ ಕೆಲವೊಮ್ಮೆ ತಮ್ಮದೇ ಪಕ್ಷಕ್ಕೆ ಮುಜುಗರ ತಂದಿರುವ ಘಟನೆಗಳೂ ನಡೆಯುತ್ತಿರುತ್ತವೆ. ಇದೀಗ ಅಂತಹದ್ದೇ ಒಂದು ಹೇಳಿಕೆ ಮೂಲಕ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಅಭ್ಯರ್ಥಿ ಕಂಗನಾ ರಾಣಾವತ್‌ ಆಭಾಸಕ್ಕೀಡಾಗಿದ್ದಾರೆ. ಪ್ರಚಾರ ಕಾರ್ಯಕ್ರದಲ್ಲಿ ಮಾತನಾಡಿದ ಅವರು, ಬಿಹಾರದ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್‌(Tejaswi Yadav) ಅವರನ್ನು ಟೀಕಿಸುವ ಭರದಲ್ಲಿ ತಮ್ಮದೇ ಪಕ್ಷ ಬಿಜೆಪಿ ಮುಖಂಡ, ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿತೇಜಸ್ವಿ ಸೂರ್ಯ(Tejaswi Surya) ಹೆಸರು ಪ್ರಸ್ತಾಪಿಸಿ ಮುಜುಗರಕ್ಕೀಡಾಗಿದ್ದಾರೆ. ಇದೀಗ ಈ ವಿಡಿಯೋ ವೈರಲ್‌(Viral Video) ಆಗಿದ್ದು, ಖುದ್ದು, ತೇಜಸ್ವಿ ಯಾದವ್‌ ಅವರೇ ಈ ವಿಡಿಯೋಗೆ ರಿಯಾಕ್ಟ್‌ ಮಾಡಿದ್ದಾರೆ.

ಕಂಗನಾ ಹೇಳಿದ್ದೇನು?

ಮಂಡಿ ಕ್ಷೇತ್ರದಲ್ಲಿ ಆಯೋಜಿಸಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ಆರಂಭಿಸಿದ ಕಂಗನಾ ರಾಣಾವತ್‌, ತೇಜಸ್ವಿ ಯಾದವ್‌ ಅವರು ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಹೇಳಲು ಹೊರಟಿದ್ದರು. ತೇಜಸ್ವಿ ಯದವ್‌ ಬದಲು ತೇಜಸ್ವಿ ಸೂರ್ಯ ಎಂದು ಹೇಳಿದ ಕಂಗನಾ, ಪ್ರತಿಪಕ್ಷ ನಾಯಕರಿಗೆ ಏನಾಗಿದೆ? ಒಬ್ಬರು ಚಂದ್ರನ ಮೇಲೆ ಆಲೂಗಡ್ಡೆ ಬೆಳೆಯುವ ಬಗ್ಗೆ ಮಾತನಾಡುತ್ತಾರೆ. ಅತ್ತ ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಹೇಳಿದ್ದರು.

ಏ.9ರಂದು ನವರಾತ್ರಿಯ ದಿನ ತೇಜಸ್ವಿ ಯಾದವ್‌ ಮೀನು ತಿನ್ನುವ ಫೋಟೋವನ್ನು ಶೇರ್‌ ಮಾಡಿಕೊಂಡು ಭಾರೀ ಟೀಕೆಗೆ ಗುರಿಯಾಗಿದ್ದರು. ಇದೇ ವಿಚಾರದ ಬಗ್ಗೆ ಪ್ರಸ್ತಾಪಿಸಿದ ಕಂಗನಾ, ರಾಹುಲ್‌, ಅಖಿಲೇಶ್‌ ಯಾದವ್‌ ಮತ್ತು ತೇಜಸ್ವಿ ಯಾದವ್‌ ವಿರುದ್ಧ ವಾಗ್ದಾಳಿ ನಡೆಸಿದರು. ಸಂಪೂರ್ಣವಾಗಿ ಹಾಳಾದ ರಾಜಕುಮಾರರನ್ನು ಹೊಂದಿರುವ ಪಕ್ಷಗಳಿವೆ. ಅಲ್ಲಿ ಚಂದ್ರನ ಮೇಲೆ ಆಲೂಗೆಡ್ಡೆ ಬೆಳೆಯುವ ರಾಹುಲ್‌ ಗಾಂಧಿ, ಗೂಂಡಾಗಿರಿ ಮಾಡುವ ಮತ್ತು ಮೀನು ತಿನ್ನುವ ತೇಜಸ್ವಿ ಸೂರ್ಯ ಮತ್ತು ಅಸಂಬದ್ದ ಹೇಳಿಕೆ ನೀಡುವ ಅಖಿಲೇಶ್‌ ಯಾದವ್‌ ಇದ್ದಾರೆ. ನಮ್ಮ ದೇಶದ ಸಂಸ್ಕೃತಿ, ಪರಂಪರೆ ಮತ್ತು ಭಾಷೆಯನ್ನು ಅರ್ಥ ಮಾಡಿಕೊಳ್ಳದಿರುವ ಇಂತಹ ನಾಯಕರು ಹೇಗೆ ತಾನೇ ದೇಶವನ್ನು ನಡೆಸಬಲ್ಲರು ಎಂದು ಅವರು ವ್ಯಂಗ್ಯವಾಡಿರುವ ವಿಡಿಯೋ ವೈರಲ್‌ ಆಗಿದೆ.

ಇದನ್ನೂ ಓದಿ:Prajwal Revanna Case: ದುಬೈ ವಿಮಾನದಲ್ಲೂ ರಾಜ್ಯಕ್ಕೆ ಬಾರದ ಸಂಸದ ಪ್ರಜ್ವಲ್ ರೇವಣ್ಣ

ಟಾಂಗ್‌ ಕೊಟ್ಟ ತೇಜಸ್ವಿ ಯಾದವ್‌

ಕಂಗನಾ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್‌ ಪ್ರತಿಕ್ರಿಯಿಸಿದ್ದು, ರಾರು ಈ ಮಹಿಳೆ ಎಂದು ಟಾಂಗ್‌ ಕೊಟ್ಟಿದ್ದಾರೆ. ಅವರು ಈ ವಿಡಿಯೋವನ್ನು ತನ್ನ ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್‌ ಮಾಡಿ ಯಾರು ಈ ಮಹಿಳೆ ಎಂದು ಟ್ವೀಟ್‌ ಮಾಡಿದ್ದಾರೆ. ಇನ್ನು ಜೂ.1ರಂದು ಹಿಮಾಚಲಪ್ರದೇಶದಲ್ಲಿ ಕೊನೆಯ ಹಂತದಲ್ಲಿ ಮತದಾನ ನಡೆಯಲಿದ್ದು, ಕಂಗನಾ ವಿರುದ್ಧ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್‌ ಪುತ್ರ ವಿಕ್ರಮಾದಿತ್ಯ ಸಿಂಗ್‌ ಕಾಂಗ್ರೆಸ್‌ನಿಂದ ಕಣಕ್ಕಿಳಿದ್ದಾರೆ.

Continue Reading

ದೇಶ

Terrorist Attack: ಪೂಂಚ್​​ನಲ್ಲಿ ಭಯೋತ್ಪಾದಕರ ದಾಳಿ; ಓರ್ವ ಯೋಧ ಹುತಾತ್ಮ, ಐವರ ಸ್ಥಿತಿ ಗಂಭೀರ

Terrorist Attack:ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ಭಾರತೀಯ ವಾಯುಪಡೆ ಯ ಬೆಂಗಾವಲು ಪಡೆಯ ಎರಡು ವಾಹನಗಳ ಮೇಲೆ ಭಯೋತ್ಪಾದಕರು ನಡೆಸಿದ ಭಾರಿ ಗುಂಡಿನ ದಾಳಿಯಲ್ಲಿ ಓರ್ವ ಸೈನಿಕ ಹುತಾತ್ಮರಾಗಿದ್ದು, ಐವರು ಗಂಭೀರವಾಗಿ ಗಾಯಗೊಂಡಿದಾರೆ. ಗಾಯಗೊಂಡಿರು ಯೋಧರು ಜೀವಣ್ಮರಣ ಹೋರಾಟ ನಡೆಸುತ್ತಿದ್ದು, ಅವರನ್ನು ಉದಾಮ್‌ಪುರ ಆಸ್ಪತ್ರೆಗೆ ರವಾನಿಸಲಾಗಿದೆ

VISTARANEWS.COM


on

Terrorist attack
Koo

ನವದೆಹಲಿ: ಜಮ್ಮು ಮತ್ತು ಕಾಶ್ಮೀರ(Jammu-Kashmir)ದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ಭಾರತೀಯ ವಾಯುಪಡೆ(IAF)ಯ ಬೆಂಗಾವಲು ಪಡೆಯ ಎರಡು ವಾಹನಗಳ ಮೇಲೆ ಭಯೋತ್ಪಾದಕರು ನಡೆಸಿದ (Terrorist Attack) ಭಾರಿ ಗುಂಡಿನ ದಾಳಿಯಲ್ಲಿ ಓರ್ವ ಸೈನಿಕ ಹುತಾತ್ಮರಾಗಿದ್ದು, ಐವರು ಗಂಭೀರವಾಗಿ ಗಾಯಗೊಂಡಿದಾರೆ. ಗಾಯಗೊಂಡಿರು ಯೋಧರು ಜೀವಣ್ಮರಣ ಹೋರಾಟ ನಡೆಸುತ್ತಿದ್ದು, ಅವರನ್ನು ಉದಾಮ್‌ಪುರ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನಿನ್ನೆ ಸಂಜೆ 6ಗಂಟೆ ಹೊತ್ತಿಗೆ ಜರಾನ್ವಲಿಯಿಂದ ವಾಯುನೆಲೆಗೆ ವಾಪಾಸಾಗುತ್ತಿದ್ದ ವೇಳೆ ಈ ದಾಳಿ ನಡೆದಿದ್ದು, ಈ ಬಗ್ಗೆ ಭಾರತೀಯ ವಾಯುಪಡೆ Xನಲ್ಲಿ ಅಧಿಕೃತ ಮಾಹಿತಿ ನೀಡಿದೆ. ಇನ್ನು AK ರೈಫಲ್ಸ್‌ ಹೊಂದಿದ್ದ ಉಗ್ರರು ಪಕ್ಕದಲ್ಲಿದ್ದ ಕಾಡಿಗೆ ಓಡಿ ಹೋಗಿರುವ ಸಾಧ್ಯತೆ ಹೆಚ್ಚಿದೆ. ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಈ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ಪ್ರಾರಂಭಿಸಿದೆ. ಶಹಸಿತಾರ್ ಬಳಿಯ ಸಾಮಾನ್ಯ ಪ್ರದೇಶದ ವಾಯುನೆಲೆಯೊಳಗೆ ವಾಹನಗಳನ್ನು ಸುರಕ್ಷಿತಗೊಳಿಸಲಾಗಿದೆ. ಈ ಬಗ್ಗೆ ಮತ್ತಷ್ಟು ತನಿಖೆ ಮುಂದುವರೆದಿದೆ ಎಂದು ಟ್ವೀಟ್‌ ಮಾಡಿದೆ.

ಇನ್ನು ಪೂಚ್‌ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿರುವ ಬಗ್ಗೆ ಶುಕ್ರವಾರವೇ ಸೇನೆಗೆ ಖಚಿತ ಮಾಹಿತಿ ಸಿಕ್ಕಿತ್ತು. ಈ ನಿಟ್ಟಿನಲ್ಲಿ ಅರೆ ಸೈನಿಕ ಪಡೆ ಮತ್ತು ಪೊಲೀಸರು ಅವರ ಪತ್ತೆಗೆ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಅಷ್ಟರಲ್ಲಿ ಈ ದುರ್ಘಟನೆ ಸಂಭವಿಸಿದೆ. ಇನ್ನು ಈ ಆಪರೇಶನ್‌ನಲ್ಲಿ ಇದುವರೆಗೆ ಯಾರೂ ಅರೆಸ್ಟ್‌ ಆಗಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇನ್ನು‌ ಪೂಂಚ್‌ ಪ್ರದೇಶ ಅನಂತ್‌ನಾಗ್‌ – ರಜೌರಿ ಲೋಕಸಭಾ ಕ್ಷೇತ್ರಕ್ಕೆ ಒಳಪಡುತ್ತಿದ್ದು, ಇಲ್ಲಿ ಮೇ 25ರಂದು ಚುನಾವಣೆ ನಡೆಯಲಿದೆ. ಹೀಗಾಗಿ ಭದ್ರತೆ ಮತ್ತಷ್ಟು ಹೆಚ್ಚಿಸಲಾಗಿದೆ.

ಎರಡು ವಾರದ ಹಿಂದೆ ಜಮ್ಮು-ಕಾಶ್ಮೀರ (Jammu and Kashmir)ದಲ್ಲಿ ಗುಂಡಿನ ಸದ್ದು ಮೊಳಗಿತ್ತು . ಭಯೋತ್ಪಾದಕನ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. (Terrorist Attack). ಜಮ್ಮು-ಕಾಶ್ಮೀರದ ರಾಜೌರಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಗುಂಡಿನ ದಾಳಿಗೆ ಸರ್ಕಾರಿ ನೌಕರ ಮೊಹಮ್ಮದ್ ರಜಾಕ್ ಬಲಿಯಾಗಿದ್ದರು. ರಾಜೌರಿಯ ಶದ್ರಾ ಶರೀಫ್ ಪ್ರದೇಶದ ಮಸೀದಿಯಿಂದ ಹೊರಬಂದ ಕೂಡಲೇ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು.

ಇದನ್ನೂ ಓದಿ: Prajwal Revanna Case: ಕುಮಾರಸ್ವಾಮಿಯನ್ನು ಭೇಟಿಯಾಗಲು ಒಪ್ಪದ ಅಮಿತ್ ಶಾ; ಹೋಟೆಲ್‌ಗೆ ಬಂದು ವಾಪಸ್ ಹೋದ ಎಚ್ ಡಿ ಕೆ

40 ವರ್ಷದ ಮೊಹಮ್ಮದ್ ರಜಾಕ್ ಸಮಾಜ ಕಲ್ಯಾಣ ಇಲಾಖೆಯ ಉದ್ಯೋಗಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ. ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಭಯೋತ್ಪಾದಕರನ್ನು ಪತ್ತೆ ಹಚ್ಚಲು ಕ್ರಮ ಕೈಗೊಂಡಿದ್ದಾರೆ. ಶೋಧ ಕಾರ್ಯಾಚರಣೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಮೃತ ರಝಾಕ್ ಅವರ ಸಹೋದರ ಪ್ರಾದೇಶಿಕ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Paytm : ಪೇಟಿಎಂ ಸಿಒಒ ಭವೇಶ್ ಗುಪ್ತಾ ಏಕಾಏಕಿ ರಾಜೀನಾಮೆ

Paytm: ಪೇಟಿಎಂ ಮನಿ ಮುಖ್ಯಸ್ಥರಾಗಿದ್ದ ವರುಣ್ ಶ್ರೀಧರ್ ಅವರನ್ನು ಮ್ಯೂಚುವಲ್ ಫಂಡ್ ಮತ್ತು ಇತರ ಸಂಪತ್ತು ನಿರ್ವಹಣಾ ಉತ್ಪನ್ನಗಳ ವಿತರಣೆಯಲ್ಲಿ ವ್ಯವಹರಿಸುವ ಪೇಟಿಎಂ ಸರ್ವೀಸಸ್ ನ ಸಿಇಒ ಆಗಿ ಕಂಪನಿಯು ವರ್ಗಾಯಿಸಿದೆ.

VISTARANEWS.COM


on

Paytm
Koo

ನವದೆಹಲಿ: ಪೇಟಿಎಂನ (Paytm) ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ಕಂಪನಿಗೆ ರಾಜೀನಾಮೆ ನೀಡಿದ್ದಾರೆ ಎಂದು ಕಂಪನಿಯ ಅಧಿಕೃತ ಹೇಳಿಕೆ ಶನಿವಾರ ತಿಳಿಸಿದೆ. ನಾಯಕತ್ವ ಬದಲಾವಣೆಯ ಭಾಗವಾಗಿ, ಫಿನ್ಟೆಕ್ ಸಂಸ್ಥೆ ಪೇಟಿಎಂ ರಾಕೇಶ್ ಸಿಂಗ್ ಅವರನ್ನು ಪೇಟಿಎಂ ಮನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಿದೆ.

ಪೇಟಿಎಂ ಮನಿ ಮುಖ್ಯಸ್ಥರಾಗಿದ್ದ ವರುಣ್ ಶ್ರೀಧರ್ ಅವರನ್ನು ಮ್ಯೂಚುವಲ್ ಫಂಡ್ ಮತ್ತು ಇತರ ಸಂಪತ್ತು ನಿರ್ವಹಣಾ ಉತ್ಪನ್ನಗಳ ವಿತರಣೆಯಲ್ಲಿ ವ್ಯವಹರಿಸುವ ಪೇಟಿಎಂ ಸರ್ವೀಸಸ್ ನ ಸಿಇಒ ಆಗಿ ವರ್ಗಾಯಿಸಲಾಗಿದೆ.

ಪಾವತಿ ಮತ್ತು ಸಾಲ ನೀಡುವ ವ್ಯವಹಾರಗಳ ಮೇಲ್ವಿಚಾರಣೆ ನಡೆಸುತ್ತಿದ್ದ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ವೈಯಕ್ತಿಕ ಕಾರಣಗಳಿಂದಾಗಿ ವೃತ್ತಿ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಅವರು ಸಲಹಾ ಪಾತ್ರಕ್ಕೆ ಪರಿವರ್ತನೆಗೊಳ್ಳಲಿದ್ದು ವರ್ಷದ ಅಂತ್ಯದವರೆಗೆ ಪೇಟಿಎಂನ ಬೆಳವಣಿಗೆಯ ಉಪಕ್ರಮಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Lok Sabha Election : ಚುನಾವಣೆ ಖರ್ಚಿಗೆ ಹಣ ಕೊಡದ್ದಕ್ಕೆ ಟಿಕೆಟ್​ ವಾಪಸ್​ ಕೊಟ್ಟ ಕಾಂಗ್ರೆಸ್​ ಅಭ್ಯರ್ಥಿ!

ಕಂಪನಿಯ ನಿರ್ದೇಶಕರ ಮಂಡಳಿಯು ಮೇ 04, 2024 ರಂದು ನಡೆದ ಸಭೆಯಲ್ಲಿ ಕಂಪನಿಯ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ಮೇ 04, 2024 ರ ಪತ್ರದ ಮೂಲಕ ಸಲ್ಲಿಸಿದ ರಾಜೀನಾಮೆಯನ್ನು ಪುರಸ್ಕರಿಸಿದೆ. ಮೇ 31, 2024 ರಂದು ವ್ಯವಹಾರದ ಸಮಯ ಮುಗಿಯುವುದರಿಂದ ಅವರನ್ನು ಕಂಪನಿಯ ಸೇವೆಗಳಿಂದ ಮುಕ್ತಗೊಳಿಸಲಾಗುವುದು ಎಂದು ಪೇಟಿಎಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಪೇಟಿಎಂ ಸ್ಥಾಪಕ ಮತ್ತು ಸಿಇಒ ವಿಜಯ್ ಶೇಖರ್ ಶರ್ಮಾ ಈ ಕುರತು ಪ್ರತಿಕ್ರಿಯಿಸಿ, ಭವೇಶ್ ಅವರ ಕೊಡುಗೆಗಳಿಗಾಗಿ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಪಾವತಿಗಳು ಮತ್ತು ಸಾಲ ನೀಡುವಿಕೆಯ ಮೇಲೆ ನಮ್ಮ ಗಮನವು ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಮತ್ತು ನಮ್ಮ ಯೋಜನೆಗಳನ್ನು ಕಾರ್ಯಗತಗೊಳಿಸಲು ನಮ್ಮ ಪ್ರತಿಯೊಂದು ವ್ಯವಹಾರಗಳಲ್ಲಿ ನಾವು ಹೊಂದಿರುವ ಅನುಭವಿ ನಾಯಕರೊಂದಿಗೆ ನಾನು ಕೆಲಸ ಮುಂದುವರಿಸಲಿದ್ದೇವೆ ಎಂದು ಹೇಳಿದರು.

Continue Reading
Advertisement
Prajwal Revanna Case Prajwal likely to arrive in Bengaluru today SIT decides to arrest him at airport
ಕ್ರೈಂ3 mins ago

Prajwal Revanna Case: ವಿದೇಶದಿಂದ ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್‌ ರೇವಣ್ಣ ಆಗಮನ? ಬಂದ ಕೂಡಲೇ ಅರೆಸ್ಟ್!

viral news
ಕ್ರೀಡೆ19 mins ago

Viral News: ಎಐ ತಂತ್ರಜ್ಞಾನದ ಮೂಲಕ ತಂಡ ಆಯ್ಕೆ ಮಾಡಿ ಟಿ20 ಸರಣಿ ಗೆದ್ದ ಇಂಗ್ಲೆಂಡ್​ ಮಹಿಳಾ ತಂಡ

Kareena Kapoor appointed Unicef India National Ambassador
ಸಿನಿಮಾ20 mins ago

Kareena Kapoor: ʻಯುನಿಸೆಫ್ ಇಂಡಿಯಾʼಗೆ ರಾಯಭಾರಿಯಾದ ಕರೀನಾ ಕಪೂರ್

Accident News Drowned in water
ವಿಜಯಪುರ32 mins ago

Accident News: ಸೆಕೆ ಎಂದು ಕೆರೆಗೆ ಜಿಗಿದ ವ್ಯಕ್ತಿ ಸಾವು; ವಿದ್ಯುತ್‌ ತಂತಿ ತುಳಿದು ಪ್ರಾಣಬಿಟ್ಟ ರೈತ

Sunidhi Chauhan audience member throws bottle at her
ಬಾಲಿವುಡ್45 mins ago

Sunidhi Chauhan: ಗಾಯಕಿ ಸುನಿಧಿ ಚೌಹಾಣ್ ಮೇಲೆ ಬಾಟಲಿ ಎಸೆತ: ವಿಡಿಯೊ ವೈರಲ್‌!

Vijay Sankeshwar
Lok Sabha Election 202446 mins ago

Vijay Sankeshwar: 2014ರಲ್ಲಿ ಮೋದಿ ಕೈಗೆ ಮೌನಿ ಬಾಬಾ ಖಾಲಿ ಚೊಂಬು ಕೊಟ್ಟಿದ್ದರು; ಉದ್ಯಮಿ ವಿಜಯ ಸಂಕೇಶ್ವರ ವಾಗ್ದಾಳಿ

Gold Rate
ಕರ್ನಾಟಕ1 hour ago

Gold Rate Today: ಯಥಾಸ್ಥಿತಿ ಕಾಪಾಡಿಕೊಂಡ ಚಿನ್ನ- ಬೆಳ್ಳಿಯ ದರ; 22, 24 ಕ್ಯಾರಟ್‌ ದರಗಳು ಇಲ್ಲಿವೆ

Virat- Anushka
ಕ್ರೀಡೆ1 hour ago

Virat- Anushka: ಕೊಹ್ಲಿ ಮಾಡಿದ ರನೌಟ್​ ಕಂಡು ಆಶ್ಚರ್ಯ ಚಕಿತರಾದ ಅನುಷ್ಕಾ

Jyotika Trolled For Claiming Online Private Voting
ಕಾಲಿವುಡ್1 hour ago

Jyotika Trolled: ಆನ್​ಲೈನ್​ ಮೂಲಕ ವೋಟ್ ಮಾಡಿದ್ದಾರಂತೆ ಜ್ಯೋತಿಕಾ! ಟ್ರೋಲ್‌ ಆದ ಸೂರ್ಯ ಪತ್ನಿ!

Prajwal Revanna Case
ಕರ್ನಾಟಕ1 hour ago

Prajwal Revanna Case: ಹಾಸನ ಸಂಸದರ ನಿವಾಸವನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌