Shraddha Murder Case | ಶ್ರದ್ಧಾ ವಾಳ್ಕರ್​ ಹತ್ಯೆ ಕೇಸ್​​ ಸಿಬಿಐಗೆ ವರ್ಗಾಯಿಸಲು ಸಾಧ್ಯವಿಲ್ಲ ಎಂದ ದೆಹಲಿ ಹೈಕೋರ್ಟ್​ - Vistara News

ದಿಲ್ಲಿ ಮರ್ಡರ್

Shraddha Murder Case | ಶ್ರದ್ಧಾ ವಾಳ್ಕರ್​ ಹತ್ಯೆ ಕೇಸ್​​ ಸಿಬಿಐಗೆ ವರ್ಗಾಯಿಸಲು ಸಾಧ್ಯವಿಲ್ಲ ಎಂದ ದೆಹಲಿ ಹೈಕೋರ್ಟ್​

ತನಿಖೆಗೆ ಅತಿಮುಖ್ಯವಾಗಿ ಅಗತ್ಯವಿರುವ ತಲೆಯ ಭಾಗ ಸಿಗುತ್ತಿದ್ದಂತೆ ಈ ಕೇಸ್​​ನ್ನು ಸಿಬಿಐ ತನಿಖೆಗೆ ವರ್ಗಾಯಿಸಬೇಕು ಎಂದು ಮನವಿ ಮಾಡಿ, ವಕೀಲರೊಬ್ಬರು ದೆಹಲಿ ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಆದರೆ ಈ ಅರ್ಜಿ ಪ್ರಚಾರಕ್ಕಾಗಿ ಸಲ್ಲಿಕೆಯಾಗಿದ್ದು ಎಂದು ಕೋರ್ಟ್​ ಪರಿಗಣಿಸಿದೆ(Shraddha Murder Case).

VISTARANEWS.COM


on

Shraddha Walkar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಇಡೀ ದೇಶವನ್ನು ನಡುಗಿಸಿದ ದೆಹಲಿ ಶ್ರದ್ಧಾ ವಾಳ್ಕರ್​ ಹತ್ಯೆ (Shraddha Murder Case) ಪ್ರಕರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸಬೇಕು ಎಂದು ದೆಹಲಿ ಹೈಕೋರ್ಟ್​ಗೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಂಡಿದೆ. ಶ್ರದ್ಧಾ ವಾಳ್ಕರ್​ ಮತ್ತು ಅಫ್ತಾಬ್​ ಪೂನಾವಾಲಾ ಲಿವ್​ ಇನ್​ ರಿಲೇಶನ್​ಶಿಪ್​​ನಲ್ಲಿ ಇದ್ದರು. ಆದರೆ ಅದೇ ಅಫ್ತಾಬ್​ ಕೈಯಲ್ಲೇ ಶ್ರದ್ಧಾ ವಾಳ್ಕರ್​ ಭಯಾನಕವಾಗಿ ಕೊಲೆಯಾಗಿದ್ದಾಳೆ. ಅಫ್ತಾಬ್​ ಆಕೆಯ ದೇಹವನ್ನು 35 ತುಂಡುಗಳನ್ನಾಗಿ ಕತ್ತರಿಸಿ, ತನ್ನ ಅಪಾರ್ಟ್​ಮೆಂಟ್​​ ಸಮೀಪವೇ ಇದ್ದ ಮೆಹ್ರೌಲಿ ಅರಣ್ಯದ ವಿವಿಧೆಡೆ ಎಸೆದಿದ್ದ. ಈಗ ಪೊಲೀಸರು ಒಂದು ಕಡೆಯಿಂದ ತನಿಖೆ, ಪರಿಶೀಲನೆ ಪ್ರಾರಂಭ ಮಾಡಿ ಶ್ರದ್ಧಾ ದೇಹದ ಪೀಸ್​ಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ನಿನ್ನೆಯಷ್ಟೇ ಆಕೆಯ ತಲೆ ಬುರುಡೆ ಭಾಗ ಪತ್ತೆಯಾಗಿತ್ತು.

ತನಿಖೆಗೆ ಅತಿಮುಖ್ಯವಾಗಿ ಅಗತ್ಯವಿರುವ ತಲೆಯ ಭಾಗ ಸಿಗುತ್ತಿದ್ದಂತೆ ಈ ಕೇಸ್​​ನ್ನು ಸಿಬಿಐ ತನಿಖೆಗೆ ವರ್ಗಾಯಿಸಬೇಕು ಎಂದು ಮನವಿ ಮಾಡಿ, ವಕೀಲರೊಬ್ಬರು ದೆಹಲಿ ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ವಿಚಾರಣೆ ನಡೆಸಲು ಹೈಕೋರ್ಟ್​ ಒಪ್ಪಲಿಲ್ಲ. ‘ಈಗಾಗಲೇ ಪೊಲೀಸರು ಸರಿಯಾದ ಮಾರ್ಗದಲ್ಲಿ ತನಿಖೆ ನಡೆಸುತ್ತಿದ್ದಾರೆ. ಈ ಮಧ್ಯೆ ಇಂಥ ಅರ್ಜಿ ಯಾಕೆ’ ಎಂದು ಪ್ರಶ್ನಿಸಿರುವ ಹೈಕೋರ್ಟ್​ ‘ಇದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲ. ಪ್ರಚಾರದ ಉದ್ದೇಶದಿಂದ ಸಲ್ಲಿಕೆಯಾದ ಪ್ರಚಾರ ಹಿತಾಸಕ್ತಿ ಅರ್ಜಿ’ ಎಂದು ಹೇಳಿದೆ. ಅರ್ಜಿ ಸಲ್ಲಿಕೆ ಮಾಡಿದವರಿಗೆ ದಂಡ ವಿಧಿಸಿ, ವಜಾಗೊಳಿಸಿದೆ.

ಹಾಗೇ ಇನ್ನೊಂದೆಡೆ ಆರೋಪಿ ಅಫ್ತಾಬ್​​ಗೆ ಆತನ ಕುಟುಂಬಸ್ಥರನ್ನು ಭೇಟಿ ಮಾಡಲು ದೆಹಲಿ ಹೈಕೋರ್ಟ್ ಅವಕಾಶ ನೀಡಿದೆ. ಜೈಲು ಪಾಲಾಗಿರುವ ಅಫ್ತಾಬ್​, ತನ್ನ ಮನೆಯವರನ್ನು ಭೇಟಿಯಾಗಲು ಅವಕಾಶ ಮಾಡಿಕೊಡುವಂತೆ ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದ. ಅದಕ್ಕೆ ಹೈಕೋರ್ಟ್​ ಅಸ್ತು ಎಂದಿದೆ.

ಇದನ್ನೂ ಓದಿ: Shraddha Murder Case | ಮೆಹ್ರೌಲಿ ಅರಣ್ಯದಲ್ಲಿ ಶ್ರದ್ಧಾಳ ತಲೆ ಬುರುಡೆಯ ಭಾಗಗಳು ಪತ್ತೆ!, ಸಿಬಿಐ ತನಿಖೆಗೆ ಮನವಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದಿಲ್ಲಿ ಮರ್ಡರ್

Murder: ಕಪಾಟಿನಲ್ಲಿತ್ತು ಯುವತಿಯ ಶವ; ಲಿವ್ ಇನ್‌ ಸಂಬಂಧದಲ್ಲಿದ್ದ ಗೆಳೆಯ ನಾಪತ್ತೆ!

Murder: ಮಗಳ ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಆತಂಕಗೊಂಡ ತಂದೆ ಆಕೆಯನ್ನು ಹುಡುಕಿಕೊಂಡು ಆಕೆ ವಾಸವಿದ್ದ ದೆಹಲಿಯ ದ್ವಾರಕಾ ಪ್ರದೇಶದಲ್ಲಿದ್ದ ಅಪಾರ್ಟ್ ಮೆಂಟ್ ಗೆ ಬಂದಾಗ ಮನೆಯ ಕಪಾಟಿನಲ್ಲಿ ಮಗಳ ಶವ ಪತ್ತೆಯಾಗಿದೆ. ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಆಕೆಯ ಸಂಗಾತಿ ನಾಪತ್ತೆಯಾಗಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ.

VISTARANEWS.COM


on

By

Murder
Koo

ಹೊಸದಿಲ್ಲಿ: ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ (Leave in relationship) ಯುವತಿಯೊಬ್ಬಳು ಶವವಾಗಿ (Murder) ಮನೆಯ ಕಪಾಟಿನಲ್ಲಿ ಪತ್ತೆಯಾಗಿರುವ ಘಟನೆ ಹೊಸದಿಲ್ಲಿಯ (delhi) ದ್ವಾರಕಾದಲ್ಲಿ (dwaraka) ನಡೆದಿದೆ.

ದ್ವಾರಕಾದ ದಾಬ್ರಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ವಾಸವಾಗಿದ್ದ ರುಖ್ಸರ್ ರಜಪೂತ್ (26) ಕೊಲೆಯಾದ ಯುವತಿ. ಗೆಳೆಯ ವಿಪಾಲ್ ಟೈಲರ್ ಆಕೆಯನ್ನು ಕೊಂದಿರಬಹುದು ಎಂದು ಶಂಕಿಸಲಾಗಿದೆ.

ಮೀರತ್‌ನಲ್ಲಿ ವಾಸವಾಗಿರುವ ರುಖ್ಸರ್ ರಜಪೂತ್ ಳ ತಂದೆ ಮಗಳನ್ನು ಹುಡುಕಿಕೊಂಡು ಬುಧವಾರ ರಾತ್ರಿ ಬಂದಾಗ ಆಕೆ ಕೊಲೆಯಾಗಿರುವ ವಿಷಯ ಬೆಳಕಿಗೆ ಬಂದಿದೆ.

ಇದನ್ನೂ ಓದಿ: Assault Case : ಆಫೀಸ್‌ನಲ್ಲಿ ಟಾರ್ಚರ್‌ ಕೊಟ್ಟ ಮೇಲಾಧಿಕಾರಿಗೆ ಸುಪಾರಿ ಕೊಟ್ಟು ಹೊಡೆಸಿದ್ರು ಸಿಬ್ಬಂದಿ!

ಒಂದೂವರೆ ವರ್ಷಗಳ ಹಿಂದೆ ಭೇಟಿ

ರಜಪೂತ್ ಗುಜರಾತ್‌ನಲ್ಲಿ ಕರಕುಶಲ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಳು. ಒಂದೂವರೆ ವರ್ಷಗಳ ಹಿಂದೆ ಅಲ್ಲಿ ಆಕೆ ವಿಪಾಲ್‌ನನ್ನು ಭೇಟಿಯಾಗಿದ್ದಳು. ದೆಹಲಿಗೆ ಬಂದ ಬಳಿಕ ಅವರಿಬ್ಬರೂ ಒಟ್ಟಿಗೆ ವಾಸಿಸುತ್ತಿರುವ ವಿಷಯ ಆಕೆಯ ತಂದೆ ಮುಸ್ತಾಕಿನ್ ಮತ್ತು ಅವರ ಕುಟುಂಬಕ್ಕೆ ತಿಳಿದಿತ್ತು.

ತಂದೆಗೆ ಕೊನೆಯ ಕರೆ

ರುಖ್ಸರ್ ರಜಪೂತ್ ಬುಧವಾರ ಮಧ್ಯಾಹ್ನ ತಂದೆ ಮೊಹಮ್ಮದ್ ಮುಸ್ತಾಕಿನ್ ಅವರಿಗೆ ಕರೆ ಮಾಡಿದ್ದರು. ಆಗ ಆಕೆ ತುಂಬಾ ಅಸಮಾಧಾನದಿಂದ ಇದ್ದಿದ್ದು ಕಂಡು ಬಂದಿತ್ತು. ಸಂಜೆ ವೇಳೆಗೆ ಆಕೆಯ ಫೋನ್ ಸ್ವಿಚ್ ಆಫ್ ಆಗಿತ್ತು. ಹೀಗಾಗಿ ಆತಂಕದಿಂದ ಮುಸ್ತಾಕಿನ್ ಅವರು ರಾತ್ರಿಯೇ ರುಖ್ಸಾರ್‌ನನ್ನು ಹುಡುಕಿಕೊಂಡು ತಮ್ಮ ಸಂಬಂಧಿಕರೊಂದಿಗೆ ದೆಹಲಿಗೆ ಬಂದಿದ್ದರು.

ಅವರು ರಜಪೂತ್ ವಾಸವಿದ್ದ ಅಪಾರ್ಟ್ ಮೆಂಟ್ ಗೆ ಬಂದಾಗ ಮನೆಗೆ ಹೊರಗಿನಿಂದ ಬೀಗ ಹಾಕಲಾಗಿತ್ತು. ಅವರು ಬೀಗ ಎಲ್ಲಿ ಇಡುತ್ತಾರೆ ಎಂಬುದು ತಿಳಿದಿದ್ದ ಮುಸ್ತಾಕಿನ್ ಮನೆಯ ಬೀಗ ತೆರೆದು ಒಳಗೆ ಬಂದು ಹುಡುಕಿದಾಗ ಕಪಾಟಿನಲ್ಲಿ ರಜಪೂತ್ ಅವರ ಶವ ಪತ್ತೆಯಾಗಿದೆ. ಕೂಡಲೇ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ದೇಹದ 15ಕ್ಕೂ ಹೆಚ್ಚು ಕಡೆ ಗಾಯ

ರುಖ್ಸರ್ ರಜಪೂತ್ ನ ಮುಖದ ಮೇಲೆ ಆಳವಾದ ಗಾಯಗಳು ಸೇರಿ ದೇಹದಾದ್ಯಂತ 15ಕ್ಕೂ ಹೆಚ್ಚು ಗಾಯಗಳಿದ್ದವು. ಮೇಲ್ನೋಟಕ್ಕೆ, ಮಹಿಳೆಯನ್ನು ಕತ್ತು ಹಿಸುಕಿ ಕೊಂದು ಹಾಕಲಾಗಿದೆ ಎಂದು ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗೆಳೆಯ ನಾಪತ್ತೆ

ರುಖ್ಸರ್ ರಜಪೂತ್ ನ ಗೆಳೆಯ ವಿಪಾಲ್ ಟೈಲರ್ ನಾಪತ್ತೆಯಾಗಿರುವುದರಿಂದ ಆತನೇ ಪ್ರಮುಖ ಆರೋಪಿಯಾಗಿರಬಹುದು ಎಂದು ಶಂಕಿಸಲಾಗಿದೆ. ವಿಪಾಲ್ ಟೈಲರ್ ಎಂಬಾತನೊಂದಿಗೆ ಸುಮಾರು ಒಂದೂವರೆ ತಿಂಗಳಿನಿಂದ ಈ ಅಪಾರ್ಟ್ ಮೆಂಟ್ ನಲ್ಲಿ ರುಖ್ಸರ್ ರಜಪೂತ್ ವಾಸವಾಗಿದ್ದಳು. ರುಖ್ಸರ್ ರಜಪೂತ್ ಮದುವೆಯಾಗಿರುವುದಾಗಿ ಹೇಳಲಾಗಿದ್ದು, ಈ ಕುರಿತು ಯಾವುದೇ ದಾಖಲೆಗಳು ಪತ್ತೆಯಾಗಿಲ್ಲ ಎಂದು ಪೊಲೀಸ್ ಉಪ ಆಯುಕ್ತ (ದ್ವಾರಕಾ) ಅಂಕಿತ್ ಸಿಂಗ್ ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆಗೆ ಶಿಕ್ಷೆ) ಅಡಿಯಲ್ಲಿ ದಾಬ್ರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿದ್ದು, ತನಿಖೆಯನ್ನು ಕೈಗೆತ್ತಿಕೊಳ್ಳಲಾಗಿದ ಎಂದು ಸಿಂಗ್ ಹೇಳಿದರು.

ಮುಸ್ತಾಕಿಮ್ ಹೇಳಿಕೆಯನ್ನು ಆಧರಿಸಿ ಕೊಲೆ ಪ್ರಕರಣವನ್ನು ದಾಖಲಿಸಿರುವ ಪೊಲೀಸರು ಆರೋಪಿಗಾಗಿ ಪತ್ತೆ ಹಚ್ಚಲು ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ ಮತ್ತು ತನಿಖೆಗಾಗಿ ಹಲವಾರು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ದಿಲ್ಲಿ ಮರ್ಡರ್

ಶ್ರದ್ಧಾ ವಾಳ್ಕರ್​ ಹತ್ಯೆ ಪ್ರಕರಣದಲ್ಲಿ ಸಿದ್ಧವಾಯ್ತು 3000 ಪುಟಗಳ ಕರಡು ಆರೋಪ ಪಟ್ಟಿ; ಕಾನೂನು ತಜ್ಞರಿಂದ ಪರಿಶೀಲನೆ

ಅಫ್ತಾಬ್​ ಮೇ ತಿಂಗಳಲ್ಲಿಯೇ ಶ್ರದ್ಧಾಳನ್ನು ಕೊಂದಿದ್ದರೂ ಅದು ಗೊತ್ತಾಗದಂತೆ ಭಾರಿ ನಾಟಕವಾಡಿದ್ದ. ತಿಂಗಳುಗಳ ಕಾಲ ಆಕೆಯ ಸೋಷಿಯಲ್​ ಮೀಡಿಯಾವನ್ನು ಆತನೇ ಹ್ಯಾಂಡಲ್​ ಮಾಡುವ ಮೂಲಕ, ಆಕೆ ಬದುಕಿದ್ದಾಳೆ ಎಂದು ಬಿಂಬಿಸಿದ್ದ.

VISTARANEWS.COM


on

draft chargesheet of Shraddha Walkar murder case Ready By Delhi Police
ಅಫ್ತಾಬ್​ ಮತ್ತು ಶ್ರದ್ಧಾ ವಾಳ್ಕರ್​
Koo

ನವ ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ಶ್ರದ್ಧಾ ವಾಳ್ಕರ್ (Shraddha Walkar)​ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿ ಪೊಲೀಸರು ಸುಮಾರು 3000 ಪುಟಗಳ ಕರಡು ಚಾರ್ಜ್​ಶೀಟ್​ ಸಿದ್ಧಪಡಿಸಿ ಇಟ್ಟಿದ್ದಾರೆ. ವಿಧಿವಿಜ್ಞಾನ ವರದಿಗಳು ಮತ್ತು ಎಲೆಕ್ಟ್ರಾನಿಕ್ ಪುರಾವೆಗಳು ಅಂದರೆ ಇಮೇಲ್​, ಮೊಬೈಲ್ ಫೋಟೋಗ್ರಾಫ್​, ಹಣ ವರ್ಗಾವಣೆ ದಾಖಲೆಗಳನ್ನು ಒಳಗೊಂಡಂತೆ ಸುಮಾರು 100 ಸಾಕ್ಷಿಗಳನ್ನು ಈ ಚಾರ್ಜ್​​ಶೀಟ್​​ನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಈ ಕರಡು ದಾಖಲೆಯನ್ನು ಕಾನೂನು ತಜ್ಞರು ಪರಿಶೀಲನೆ ನಡೆಸುತ್ತಿದ್ದು, ಶೀಘ್ರದಲ್ಲೇ ಅಂತಿಮ ಆರೋಪ ಪಟ್ಟಿ ಸಿದ್ಧವಾಗಲಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ದೆಹಲಿಯಲ್ಲಿ 2022ರ ಮೇ ತಿಂಗಳಲ್ಲಿ ನಡೆದಿದ್ದ ಶ್ರದ್ಧಾ ವಾಳ್ಕರ್​ ಭೀಕರ ಹತ್ಯೆ ಪ್ರಕರಣ ಇತ್ತೀಚೆಗಷ್ಟೇ ಬೆಳಕಿಗೆ ಬಂದಿದೆ. ಕೊಲೆ ಮಾಡಿದ ಆರೋಪಿ ಅಫ್ತಾಬ್​ ಪೂನಾವಾಲಾ ಸದ್ಯ ನ್ಯಾಯಾಂಗ ಬಂಧನದಲ್ಲಿಯೇ ಇದ್ದಾನೆ. ಈತ ತನ್ನ ಲಿವ್​ ಇನ್​ ಸಂಗಾತಿ ಶ್ರದ್ಧಾಳನ್ನು ಉಸಿರುಗಟ್ಟಿಸಿ ಕೊಂದು, ಆಕೆಯ ಶವವನ್ನು 35ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿದ್ದ. ಬಳಿಕ 300 ಲೀಟರ್​ ಸಾಮರ್ಥ್ಯದ ಫ್ರಿಜ್​ ಖರೀದಿಸಿ ಆ ಶವದ ತುಂಡುಗಳನ್ನು ಅದರಲ್ಲಿ ಇಟ್ಟಿದ್ದ. ನಂತರ ತಮ್ಮ ಅಪಾರ್ಟ್​ಮೆಂಟ್​ ಸಮೀಪವೇ ಇದ್ದಿದ್ದ ಮೆಹ್ರೌಲಿ ಅರಣ್ಯದ ಹಲವು ಭಾಗಗಳಲ್ಲಿ ಅವುಗಳನ್ನು ಎಸೆದಿದ್ದ. ಮೆಹ್ರೌಲಿ ಅರಣ್ಯವನ್ನು ಜಾಲಾಡಿದಾಗ ಹಲವು ಮೂಳೆಗಳು ಪತ್ತೆಯಾಗಿದ್ದು, ಅವೆಲ್ಲ ಶ್ರದ್ಧಾಳದ್ದೇ ಎಂದೂ ಡಿಎನ್​ಎ ಪರೀಕ್ಷೆಯಲ್ಲಿ.

ಇದನ್ನೂ ಓದಿ: Shraddha Murder Case | ಶ್ರದ್ಧಾ ವಾಳ್ಕರ್​ ಹತ್ಯೆ ಕೇಸ್​​ ಸಿಬಿಐಗೆ ವರ್ಗಾಯಿಸಲು ಸಾಧ್ಯವಿಲ್ಲ ಎಂದ ದೆಹಲಿ ಹೈಕೋರ್ಟ್​

ಅಫ್ತಾಬ್​ ಮೇ ತಿಂಗಳಲ್ಲಿಯೇ ಶ್ರದ್ಧಾಳನ್ನು ಕೊಂದಿದ್ದರೂ ಅದು ಗೊತ್ತಾಗದಂತೆ ಭಾರಿ ನಾಟಕವಾಡಿದ್ದ. ತಿಂಗಳುಗಳ ಕಾಲ ಆಕೆಯ ಸೋಷಿಯಲ್​ ಮೀಡಿಯಾವನ್ನು ಆತನೇ ಹ್ಯಾಂಡಲ್​ ಮಾಡುವ ಮೂಲಕ, ಆಕೆ ಬದುಕಿದ್ದಾಳೆ ಎಂಬುದನ್ನು ಬಿಂಬಿಸಲು ಹೋಗಿದ್ದ. ಶ್ರದ್ಧಾ ತಂದೆ-ತಾಯಿಯಿಂದ ದೂರವಾಗಿದ್ದರೂ, ಕೆಲವು ಸಂಬಂಧಿಕರೊಂದಿಗೆ ಸಂಪರ್ಕದಲ್ಲಿದ್ದಳು. ಆದರೆ ಬರುಬರುತ್ತ ಆಕೆ ಸಂಪರ್ಕಕ್ಕೆ ಸಿಗದಂತಾದಾಗ ಶ್ರದ್ಧಾಳ ತಂದೆಯ ಸ್ನೇಹಿತರೊಬ್ಬರು ಅನುಮಾನ ವ್ಯಕ್ತಪಡಿಸಿದ್ದರು. ಆಕೆಯ ತಂದೆಗೆ ಈ ವಿಚಾರವನ್ನು ಹೇಳಿದ್ದರು. ಅದರ ಬೆನ್ನಲ್ಲೇ ಶ್ರದ್ಧಾಳ ಅಪ್ಪ ದೂರು ದಾಖಲು ಮಾಡಿದ್ದರು. ತನಿಖೆ ನಡೆಸಿದಾಗ ಆಕೆ ಕೊಲೆಯಾಗಿದ್ದು ಗೊತ್ತಾಗಿದೆ. ನವೆಂಬರ್​ 12ರಂದು ಅಫ್ತಾಬ್​ ಅರೆಸ್ಟ್​ ಆಗಿದ್ದಾನೆ ಮತ್ತು ಕೊಲೆಯನ್ನು ತಾನೇ ಮಾಡಿದ್ದಾಗಿಯೂ ಒಪ್ಪಿಕೊಂಡಿದ್ದಾನೆ.

Continue Reading

ಕ್ರೈಂ

Shraddha Murder Case | ಶ್ರದ್ಧಾಳ ದೇಹ ಕತ್ತರಿಸಲು ಅಫ್ತಾಬ್​ ಬಳಸಿದ್ದು ಯಾವ ಆಯುಧ?-ಕೊನೆಗೂ ಬಯಲಾಯ್ತು ಸತ್ಯ!

ಪೊಲೀಸರು ಈಗಾಗಲೇ ಅರಣ್ಯ ಪ್ರದೇಶಗಳಲ್ಲಿ ಹುಡುಕಾಟ ನಡೆಸಿ, ಕೆಲವು ಎಲುಬುಗಳನ್ನು ವಶಪಡಿಸಿಕೊಂಡಿದ್ದರು. ಅದು ಶ್ರದ್ಧಾದೇ ಎಂಬುದು ಡಿಎನ್​​ಎ ಟೆಸ್ಟ್​​ನಲ್ಲಿ ಸಾಬೀತಾಗಿತ್ತು.

VISTARANEWS.COM


on

Shraddha Murder Case
Koo

ನವ ದೆಹಲಿ: ಲಿವ್​ ಇನ್​ ಸಂಗಾತಿಯಿಂದ ಬರ್ಬರವಾಗಿ ಹತ್ಯೆಗೀಡಾದ ಶ್ರದ್ಧಾ ವಾಳ್ಕರ್​​ ಕೇಸ್​ ತನಿಖೆ ಮುಂದುವರಿದೆ. ಆರೋಪಿ ಅಫ್ತಾಬ್​ ಪೂನಾವಾಲಾ ಸದ್ಯ ದೆಹಲಿಯ ತಿಹಾರ್​ ಜೈಲಿನಲ್ಲಿದ್ದು, ಮತ್ತೊಂದೆಡೆ ಅವನ ವಿಚಾರಣೆಯೂ ನಡೆಯುತ್ತಿದೆ. ಅಫ್ತಾಬ್ ಮತ್ತು ಶ್ರದ್ಧಾ ಬೇರೆ ಧರ್ಮದವರು. ಮನೆಯವರ ವಿರೋಧದ ನಡುವೆಯೂ ಶ್ರದ್ಧಾ ಅಫ್ತಾಬ್​ ಜತೆ ಬದುಕುತ್ತಿದ್ದಳು. ಕಳೆದ ಮೇ ತಿಂಗಳಲ್ಲಿ ಅಫ್ತಾಬ್​ ಆಕೆಯನ್ನು ಕೊಂದು, 35 ತುಂಡುಗಳಾಗಿ ಕತ್ತರಿಸಿ, ಅವುಗಳನ್ನೆಲ್ಲ ಫ್ರಿಜ್​​ನಲ್ಲಿಟ್ಟುಕೊಂಡಿದ್ದ. ಬಳಿಕ ತಮ್ಮ ಅಪಾರ್ಟ್​​ಮೆಂಟ್​​ಗೆ ಸಮೀಪದಲ್ಲೇ ಇರುವ ಮೆಹ್ರೌಲಿ ಅರಣ್ಯದಲ್ಲಿ ಎಸೆದಿದ್ದ. ಗುರುಗ್ರಾಮದ ಬಳಿಯ ಅರಣ್ಯದಲ್ಲೂ ಕೆಲವು ತುಂಡುಗಳನ್ನು ಎಸೆದಿದ್ದ.

ಪೊಲೀಸರು ಈಗಾಗಲೇ ಅರಣ್ಯ ಪ್ರದೇಶಗಳಲ್ಲಿ ಹುಡುಕಾಟ ನಡೆಸಿ, ಕೆಲವು ಎಲುಬುಗಳನ್ನು ವಶಪಡಿಸಿಕೊಂಡಿದ್ದರು. ಅದು ಶ್ರದ್ಧಾದೇ ಎಂಬುದು ಡಿಎನ್​​ಎ ಟೆಸ್ಟ್​​ನಲ್ಲಿ ಸಾಬೀತಾಗಿತ್ತು. ಅಫ್ತಾಬ್​ ಶ್ರದ್ಧಾಳ ದೇಹವನ್ನು ಯಾವ ಆಯುಧದಿಂದ ಕತ್ತರಿಸಿದ್ದಾನೆ ಎಂಬುದನ್ನು ಪತ್ತೆ ಹಚ್ಚುವ ಸಲುವಾಗಿ ಆ ಮೂಳೆಗಳನ್ನು ಇನ್ನಷ್ಟು ಹೆಚ್ಚಿನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರ ವರದಿ ಈಗ ಹೊರಬಿದ್ದಿದೆ. ಅಫ್ತಾಬ್​ ಪೂನಾವಾಲಾ ತನ್ನ ಲಿವ್​ ಇನ್​ ಸಂಗಾತಿ ಶ್ರದ್ಧಾಳನ್ನು ಕೊಂದು, ಬಳಿಕ ಗರಗಸದಲ್ಲಿ ಆಕೆಯ ದೇಹವನ್ನು ತುಂಡರಿಸಿದ್ದಾನೆ ಎಂಬುದು ಗೊತ್ತಾಗಿದೆ.

ಅಫ್ತಾಬ್​ ಪೂನಾವಾಲಾ ಅಪಾರ್ಟ್​ಮೆಂಟ್​​ನಿಂದ ಪೊಲೀಸರು ಹಲವು ಬಗೆಯ ಮಾರಕಾಸ್ತ್ರಗಳನ್ನು ಈಗಾಗಲೇ ವಶಪಡಿಸಿಕೊಂಡಿದ್ದಾರೆ. ಆದರೆ ಅದರಲ್ಲಿ ಶ್ರದ್ಧಾಳನ್ನು ತುಂಡರಿಸಲು ಆತ ಯಾವ ಆಯುಧ ಬಳಸಿದ್ದ ಗೊತ್ತಾಗಿರಲಿಲ್ಲ. ಅಫ್ತಾಬ್​ ಮಂಪರು ಪರೀಕ್ಷೆ ವೇಳೆ, ತಾನು ಚೀನಿ ಕ್ಲೀವರ್ (ಮಾಂಸವನ್ನು ಕತ್ತರಿಸಲು ಬಳಸುವ ದೊಡ್ಡ ಚಾಕು) ಬಳಸಿದ್ದಾಗಿ ಹೇಳಿಕೊಂಡಿದ್ದಾನೆ ಎಂಬ ವರದಿ ಬಂದಿದ್ದರೂ, ಅದು ಸ್ಪಷ್ಟವಾಗಿರಲಿಲ್ಲ.

ಇದನ್ನೂ ಓದಿ: Shraddha Murder Case| ಹೌದು ನಾನೇ ಶ್ರದ್ಧಾಳ ಕೊಲೆ ಮಾಡಿದೆ; ಮಂಪರು ಪರೀಕ್ಷೆಯಲ್ಲೂ ಅದೇ ಉತ್ತರ ಕೊಟ್ಟ ಅಫ್ತಾಬ್​

Continue Reading

ದಿಲ್ಲಿ ಮರ್ಡರ್

Shraddha Walkar | ತನ್ನ ಕುಟುಂಬದ ಸದಸ್ಯರ ಭೇಟಿಗೆ ನಿರಾಕರಿಸುತ್ತಿರುವ ಶ್ರದ್ಧಾ ಕೊಲೆ ಆರೋಪಿ ಅಫ್ತಾಬ್

ಶ್ರದ್ಧಾ ವಾಳ್ಕರ್ (Shraddha Walkar) ಕೊಲೆ ಆರೋಪಿ, 28 ವರ್ಷದ ಅಫ್ತಾಬ್ ಪೂನಾವಾಲ ನವೆಂಬರ್ 26ರಿಂದ ದಿಲ್ಲಿಯ ತಿಹಾರ್ ಜೈಲಿನಲ್ಲಿದ್ದಾನೆ.

VISTARANEWS.COM


on

Aaftab used Chinese knife To Cut Shraddha Body
Koo

ನವದೆಹಲಿ: ತನ್ನ ಲಿವ್-ಇನ್ ಸಂಗಾತಿ ಶ್ರದ್ಧಾ ವಾಳ್ಕರಳನ್ನು (Shraddha Walkar) ತುಂಡು ತುಂಡಾಗಿ ಕತ್ತರಿಸಿ ಭಯಾನಕವಾಗಿ ಕೊಲೆ ಮಾಡಿದ್ದ ಆರೋಪಿ ಅಫ್ತಾಬ್ ಪೂನಾವಾಲ (Aftab Poonawala) ಈಗ ದಿಲ್ಲಿಯ ತಿಹಾರ್ ಜೈಲಿನಲ್ಲಿದ್ದಾನೆ. ಆತನನ್ನು ಭೇಟಿಯಾಗಲು ಬಂದ ತನ್ನ ಕುಟುಂಬದ ಸದಸ್ಯರನ್ನು ಭೇಟಿಯಾಗಲು ನಿರಾಕರಿಸುತ್ತಿದ್ದಾನೆಂದು ತಿಳಿದು ಬಂದಿದೆ.

28 ವರ್ಷದ ಅಫ್ತಾಬ್‌ ನವೆಂಬರ್ 26ರಿಂದ ತಿಹಾರ್ ಜೈಲಿನಲ್ಲಿದ್ದಾನೆ. ಆತ ತನ್ನನ್ನು ಯಾರು ಭೇಟಿ ಮಾಡಬೇಕೆಂಬ ಕುರಿತು ಮಾಹಿತಿಯನ್ನು ಜೈಲು ಅಧಿಕಾರಿಗಳಿಗೆ ಇನ್ನಷ್ಟೇ ನೀಡಬೇಕಿದೆ. ನಿಯಮಗಳ ಪ್ರಕಾರ, ಜೈಲಿನಲ್ಲಿರುವ ವ್ಯಕ್ತಿ ವಾರಕ್ಕೆ ಎರಡು ಸಾರಿ, ತನ್ನ ಕುಟುಂಬದವರನ್ನು ಭೇಟಿ ಮಾಡಲು ಅವಕಾಶವಿದೆ.

ಸದ್ಯ ಜೈಲಿನಲ್ಲಿ ತನ್ನ ಪಾಡಿಗೆ ತಾನು ಇರುತ್ತಿರುವ ಆರೋಪಿ ಪೂನಾವಾಲ ಈ ವಾರದ ಬಳಿಕ, ಯಾರನ್ನೋ ಭೇಟಿಯಾಗುವ ಬಗ್ಗೆ ಸಹ ಕೈದಿಗಳ ಜತೆಗೆ ಮಾತನಾಡಿಕೊಂಡಿದ್ದಾನೆಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಆತ ಇದವರೆಗೂ ಯಾರನ್ನು ಭೇಟಿ ಮಾಡಬೇಕೆಂಬ ಮಾಹಿತಿಯನ್ನು ಹಂಚಿಕೊಂಡಿಲ್ಲ. ಜತೆಗೆ, ತನ್ನ ಕುಟುಂಬದ ಸದಸ್ಯರನ್ನು ಭೇಟಿಯಾಗಲೂ ಮುಂದಾಗುತ್ತಿಲ್ಲ.

ಇದನ್ನೂ ಓದಿ | Shraddha Murder Case | ಶ್ರದ್ಧಾ ವಾಳ್ಕರ್​ ಹತ್ಯೆ ಕೇಸ್​​ ಸಿಬಿಐಗೆ ವರ್ಗಾಯಿಸಲು ಸಾಧ್ಯವಿಲ್ಲ ಎಂದ ದೆಹಲಿ ಹೈಕೋರ್ಟ್​

Continue Reading
Advertisement
IPL 2024
ಪ್ರಮುಖ ಸುದ್ದಿ2 hours ago

IPL 2024 : ಮುಂಬೈ ವಿರುದ್ಧ 18 ರನ್ ಜಯ, ಪ್ಲೇಆಫ್​ ಪ್ರವೇಶಿಸಿದ ಕೆಕೆಆರ್​ ತಂಡ

car catches fire
ಕ್ರೈಂ3 hours ago

Car Catches Fire: ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ

jay Shah
ಪ್ರಮುಖ ಸುದ್ದಿ4 hours ago

Jay Shah : ದೇಶಿಯ ಕ್ರಿಕೆಟ್​ನಲ್ಲಿ ಭಾರೀ ಬದಲಾವಣೆಗಳ ಸೂಚನೆ ನೀಡಿದ ಜಯ್​ ಶಾ

ಬೆಂಗಳೂರು4 hours ago

Child Actor Master OM: ಓದಿಗೂ ಸೈ, ಮಾಡೆಲಿಂಗ್‌ಗೂ ಸೈ ಈ ಸೂಪರ್‌ ಟೀನ್‌ ಮಾಡೆಲ್‌ ಮಾಸ್ಟರ್‌ ಓಂ!

ಬೆಂಗಳೂರು4 hours ago

LuLu Fashion Week 2024: ಲುಲು ಫ್ಯಾಷನ್ ವೀಕ್ 2024; ಕಲರ್ ಫುಲ್ ಬಟ್ಟೆ ತೊಟ್ಟು ಕಂಗೊಳಿಸಿದ ನಾರಿಮಣಿಗಳು

IPL 2024
ಕ್ರಿಕೆಟ್4 hours ago

IPL 2024 : ಗುಜರಾತ್​ ತಂಡ ಸೇರಿದ ಗುರ್ನೂರ್ ಬ್ರಾರ್; ಎಲ್ಲಿಯ ಆಟಗಾರ ಇವರು?

Devarajegowda
ಕರ್ನಾಟಕ6 hours ago

ಮಹಿಳೆಗೆ ಲೈಂಗಿಕ ದೌರ್ಜನ್ಯ ಕೇಸ್;‌ ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

Murder Case
ಕರ್ನಾಟಕ6 hours ago

Murder Case: ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ; ಬಾಲಕಿಯ ಅಪಹರಿಸಿ ಕತ್ತು ಕೊಯ್ದ ಕಿರಾತಕರು

Richard Hansen
ಕರ್ನಾಟಕ7 hours ago

Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

Legislative Council Election
ಕರ್ನಾಟಕ7 hours ago

ವಿಧಾನ ಪರಿಷತ್ ಚುನಾವಣೆ; 5 ಕ್ಷೇತ್ರ ಬಿಜೆಪಿಗೆ, 1 ಕ್ಷೇತ್ರ ಜೆಡಿಎಸ್‌ಗೆ; ಕಮಲ ಪಾಳಯದ ಪಟ್ಟಿ ಇಲ್ಲಿದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru News
ಬೆಂಗಳೂರು12 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ22 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ3 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

ಟ್ರೆಂಡಿಂಗ್‌