Independence Day 2023 : ಭಾರತದ ಹೆಮ್ಮೆಯಿದು ತ್ರಿವರ್ಣ; ನಮ್ಮ ಧ್ವಜದ ಕುರಿತ ಈ ಸಂಗತಿಗಳು ತಿಳಿದಿರಲಿ… - Vistara News

ದೇಶ

Independence Day 2023 : ಭಾರತದ ಹೆಮ್ಮೆಯಿದು ತ್ರಿವರ್ಣ; ನಮ್ಮ ಧ್ವಜದ ಕುರಿತ ಈ ಸಂಗತಿಗಳು ತಿಳಿದಿರಲಿ…

ತಂತ್ರ್ಯದ ಸಂಭ್ರಮದಲ್ಲಿ (Independence Day 2023) ಬಾವುಟ ಹಾರಿಸುವ ನಾವು ಹೆಮ್ಮೆಯ ತ್ರಿವರ್ಣ ಧ್ವಜದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡಿದ್ದರೆ ಉತ್ತಮ. ಅದಕ್ಕಾ

VISTARANEWS.COM


on

flag details
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆಗಸ್ಟ್‌ 15 ಹತ್ತಿರ ಬಂದೇ ಬಿಟ್ಟಿತು. ಬ್ರಿಟಿಷರ ವಸಾಹತಿನಿಂದ ನಮ್ಮ ದೇಶ ಸ್ವತಂತ್ರಗೊಂಡು 77 ವಸಂತಗಳು (Independence Day 2023) ತುಂಬುತ್ತಿದ್ದು, ದೇಶವಿಡೀ ಈ ಸಂಭ್ರಮದಲ್ಲಿದೆ. ಹಾಗೆಯೇ ಎಲ್ಲೆಡೆ ರಾಷ್ಟ್ರ ಧ್ವಜವನ್ನು ಮಾರಾಟ ಮಾಡಲಾಗುತ್ತಿದ್ದು, ಅವೆಲ್ಲವೂ ಆಗಸ್ಟ್‌ 15ರಂದು ಮುಗಿಲೆತ್ತರಕ್ಕೆ ಹಾರಿ, ಸ್ವತಂತ್ರ್ಯದ ಮಹತ್ವವನ್ನು ಸಾರಲಿದೆ. ಸ್ವಾತಂತ್ರ್ಯದ ಸಂಭ್ರಮದಲ್ಲಿ ಬಾವುಟ ಹಾರಿಸುವ ನಾವು ಹೆಮ್ಮೆಯ ತ್ರಿವರ್ಣ ಧ್ವಜದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡಿದ್ದರೆ ಉತ್ತಮ. ಅದಕ್ಕಾಗಿಯೇ ಈ ಲೇಖನ ನಿಮಗಾಗಿ.

ತ್ರಿವರ್ಣ ಧ್ವಜದ ಹಿನ್ನೆಲೆ

ಪ್ರಪಂಚದಲ್ಲಿನ ಪ್ರತಿಯೊಂದು ರಾಷ್ಟ್ರವೂ ತಮ್ಮದೇ ಆದ ರಾಷ್ಟ್ರ ಧ್ವಜವನ್ನು ಹೊಂದಿವೆ. ಈ ರಾಷ್ಟ್ರಧ್ವಜವೆನ್ನುವುದು ಸ್ವಾತಂತ್ರ್ಯದ ಸಂಕೇತ. 1947ರ ಆಗಸ್ಟ್‌ 15ರಂದು ಭಾರತವು ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆಯುವ ಕೆಲವು ದಿನಗಳ ಮೊದಲು ಅಂದರೆ 1947ರ ಜುಲೈ 22ರಂದು ನಡೆದ ಸಂವಿಧಾನ ಸಭೆಯಲ್ಲಿ ಭಾರತದ ರಾಷ್ಟ್ರೀಯ ಧ್ವಜವು ಅದರ ಪ್ರಸ್ತುತ ರೂಪದಲ್ಲಿ ಅಂಗೀಕಾರ ಮಾಡಲಾಯಿತು. ಸ್ವಾತಂತ್ರ್ಯ ಸಿಕ್ಕ ದಿನದಿಂದ 1950ರ ಜನವರಿ 26ರಂದು ಸಂವಿಧಾನ ರಚನೆ ಆಗುವವರೆಗೆ ತ್ರಿವರ್ಣ ಧ್ವಜವು ಭಾರತದ ಡೊಮಿನಿಯನ್‌ ಧ್ವಜವಾಗಿ ಕಾರ್ಯನಿರ್ವಹಿಸಿತು. ಅದಾದ ನಂತರ ಧ್ವಜವು ಗಣರಾಜ್ಯದ ಸಂಕೇತವಾಗಿ ಗುರುತಿಸಿಕೊಂಡಿತು.

ಇದನ್ನೂ ಓದಿ: Independence Day 2023: ಪ್ರತಿ ಮನೆಯಲ್ಲೂ ತಿರಂಗಾ ಹಾರಿಸಲು ಮೋದಿ ಕರೆ; ನೀವೂ ಫೋಟೊ ಕಳುಹಿಸಿ

ಧ್ವಜ ಹೇಗಿರಬೇಕು?

ಭಾರತೀಯ ಧ್ವಜಕ್ಕೆ ಅದರದ್ದೇ ಆದ ಮಹತ್ವವಿದೆ. ಧ್ವಜವು ಮೇಲ್ಭಾಗದಲ್ಲಿ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳಿ ಬಣ್ಣ ಮತ್ತು ಕೆಳಭಾಗದಲ್ಲಿ ಕಡು ಹಸಿರು ಬಣ್ಣದಲ್ಲಿರಬೇಕು. ಈ ಮೂರೂ ಬಣ್ಣಗಳು ಸಮಾನ ಪ್ರಮಾಣದಲ್ಲಿರಬೇಕು. ಬಿಳಿ ಬಣ್ಣದ ಮಧ್ಯದಲ್ಲಿ ಕಡು ನೀಲಿ ಬಣ್ಣದಲ್ಲಿ ಅಶೋಕ ಚಕ್ರವಿರಬೇಕು. ಚಕ್ರದಲ್ಲಿ ಸರಿಯಾಗಿ 24 ಕಡ್ಡಿಗಳು ಇರಬೇಕು. ಈ ಎಲ್ಲ ಗೆರೆಗಳ ನಡುವೆಯೂ ಸಮಾನ ಅಂತರವಿರಬೇಕು. ಧ್ವಜವು 2:3 ಅನುಪಾತದ ಅಗಲ, ಉದ್ದದಲ್ಲೇ ಹೊಂದಿರಬೇಕು.

ಬಣ್ಣಗಳ ಮಹತ್ವವೇನು?


ನಮ್ಮ ಧ್ವಜದಲ್ಲಿ ಕೇಸರಿ ಬಣ್ಣವು ದೇಶದ ಶಕ್ತಿ ಮತ್ತು ಧೈರ್ಯವನ್ನು ಸೂಚಿಸುತ್ತದೆ. ಬಿಳಿ ಬಣ್ಣವು ಶಾಂತಿ ಮತ್ತು ಸತ್ಯವನ್ನು ಸೂಚಿಸುತ್ತದೆ. ಹಾಗೆಯೇ ಹಸಿರು ಬಣ್ಣವು ಭೂಮಿಯ ಫಲವತ್ತತೆ, ಬೆಳವಣಿಗೆ ಮತ್ತು ಮಂಗಳಕರತೆಯನ್ನು ಸೂಚಿಸುತ್ತದೆ. ಮಧ್ಯದಲ್ಲಿರುವ ಚಕ್ರವು 3ನೇ ಶತಮಾನದ ಮೌರ್ಯ ಚಕ್ರವರ್ತಿ ಅಶೋಕ ಮಾಡಿದ ಸಾರನಾಥ ಸಿಂಹದಲ್ಲಿನ ಕಾನೂನಿನ ಚಕ್ರವನ್ನು ಸಂಕೇತಿಸುತ್ತದೆ.

ಇದನ್ನೂ ಓದಿ : Independence Day 2023 : ಆರೋಗ್ಯ – ಜೀವನೋಪಾಯ ನಡುವಿನ ಸಮತೋಲನವೇ ಸ್ವತಂತ್ರ ಬದುಕಿನ ಸೂತ್ರ

ಧ್ವಜ ಸಂಹಿತೆ ಹೇಗಿರಬೇಕು?

ಆಗಸ್ಟ್‌ 15 ಎಂದಾಕ್ಷಣ ಮನಸೋಇಚ್ಛೆ ಧ್ವಜ ಹಾರಿಸುವಂತಿಲ್ಲ. ಧ್ವಜ ಹಾರಿಸುವುದಕ್ಕೆಂದೇ ಧ್ವಜ ಸಂಹಿತೆಯನ್ನು ರಚಿಸಲಾಗಿದೆ. ಅದರ ಪ್ರಕಾರವೇ ಧ್ವಜವನ್ನು ಹಾರಿಸಬೇಕು. ಧ್ವಜ ಸಂಹಿತೆಯಲ್ಲಿರುವ ನಿಯಮಗಳು ಈ ಕೆಳಗಿನಂತಿವೆ.

  • ತ್ರಿವರ್ಣ ಧ್ವಜವನ್ನು ಯಾವುದಾದರೂ ಬಟ್ಟೆಯಿಂದ ಮಾಡುವಂತಿಲ್ಲ. ಕೈಯಿಂದ ನೇಯ್ದ ಅಥವಾ ಯಂತ್ರದಿಂದ ಮಾಡಿದ ಹತ್ತಿ, ಪಾಲಿಯಿಸ್ಟರ್‌, ಉಣ್ಣೆ, ರೇಷ್ಮೆ, ಖಾದಿ ಬಂಟಿಂಗ್‌ನಿಂದ ಮಾತ್ರ ಮಾಡಿರಬೇಕು.
  • ಧ್ವಜವನ್ನು ಶಿಕ್ಷಣ ಸಂಸ್ಥೆಗಳಲ್ಲಿ, ಕ್ರೀಡಾ ಶಿಬಿರಗಳಲ್ಲಿ, ಖಾಸಗಿ ಸಂಸ್ಥೆಗಳಲ್ಲಿ ಹಾರಿಸಬಹುದು.
  • ಸಾರ್ವಜನಿಕ, ಖಾಸಗಿ ಸಂಸ್ಥೆ ಅಥವಾ ಶಿಕ್ಷಣ ಸಂಸ್ಥೆಯ ಸದಸ್ಯರು ಎಲ್ಲಾ ದಿನಗಳು ಮತ್ತು ಸಂದರ್ಭಗಳಲ್ಲಿ ರಾಷ್ಟ್ರೀಯ ಧ್ವಜವನ್ನು ಹಾರಿಸಬಹುದು. ಆದರೆ ಹಾಗೆ ಧ್ವಜ ಹಾರಿಸುವಾಗ ರಾಷ್ಟ್ರಧ್ವಜದ ಘನತೆ ಮತ್ತು ಗೌರವಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುವುದು ಅವರ ಜವಾಬ್ದಾರಿ.
  • ಧ್ವಜವನ್ನು ಸಾಮುದಾಯಿಕ ಕೆಲಸಗಳಿಗೆ, ತೊಟ್ಟುಕೊಳ್ಳುವ ಬಟ್ಟೆಯಾಗಿ ಬಳಸುವಂತಿಲ್ಲ. ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಧ್ವಜವನ್ನು ಹಾರಿಸಬಹುದು . 2022ರಲ್ಲಿ ಈ ನಿಯಮಕ್ಕೆ ಸಡಿಲತೆ ನೀಡಲಾಗಿದ್ದು, ಸಾರ್ವಜನಿಕರು ತಮ್ಮ ಮನೆಗಳ ಮೇಲೆ ಹಗಲು ರಾತ್ರಿ ಧ್ವಜ ಹಾರಿಸಬಹುದು ಎಂದು ತಿಳಿಸಲಾಗಿದೆ.
  • ಧ್ವಜವನ್ನು ನೆಲಕ್ಕೆ ಸ್ಪರ್ಶಿಸಬಾರದು. ನೀರಿಗೆ ಬೀಳಿಸಬಾರದು. ಧ್ವಜ ಹಾಳಾಗದಂತೆ ನೋಡಿಕೊಳ್ಳಬೇಕು.
  • ಧ್ವಜವನ್ನು ಹಾರಿಸುವಾಗ ಯಾವಾಗಲೂ ಅದನ್ನು ಕ್ಷಿಪ್ರವಾಗಿ ಮೇಲಕ್ಕೆತ್ತಬೇಕು. ಅದನ್ನು ಇಳಿಸುವಾಗ ನಿಧಾನವಾಗಿ ಇಳಿಸಬೇಕು.

ಧಾರವಾಡದಲ್ಲಿದೆ ಧ್ವಜ ತಯಾರಿ ಕೇಂದ್ರ


ವಿಶೇಷವೆಂದರೆ ದೇಶದಲ್ಲಿ ಹಾರಿಸಲಾಗುವ ಖಾದಿ ತ್ರಿವರ್ಣ ಧ್ವಜಗಳನ್ನು ತಯಾರಿಸುವ ಹಕ್ಕು ನಮ್ಮ ಕರ್ನಾಟಕದ ಧಾರವಾಡ ಜಿಲ್ಲೆಯ ಗರಗ ಗ್ರಾಮಕ್ಕಿದೆ. ಇದೇ ರೀತಿಯಲ್ಲಿ ಉತ್ತರ ಕರ್ನಾಟಕದಾದ್ಯಂತ ಒಟ್ಟು 52 ಘಟಕಗಳನ್ನು ಮಾಡಿಕೊಂಡು ರಾಷ್ಟ್ರಧ್ವಜವನ್ನು ನಿರ್ಮಾಣ ಮಾಡಲಾಗುತ್ತಿದೆ. ಭಾರತದ ಸಂವಿಧಾನದಲ್ಲಿ ಉಲ್ಲೇಖದಂತೆ ಮತ್ತು ಭಾರತೀಯ ಸ್ಟಾಂಡರ್ಡ್ಸ್ ಬ್ಯೂರೋದ ನಿಯಮಗಳಿಗೆ ತಕ್ಕಂತೆ ರಾಷ್ಟ್ರಧ್ವಜವನ್ನು ಉತ್ಪಾದಿಸಬೇಕು. ಬ್ಯೂರೋದ ಮಾನದಂಡಕ್ಕೆ ತಕ್ಕಂತೆ ಇಲ್ಲದಿದ್ದರೆ ಉತ್ಪನ್ನವೇ ತಿರಸ್ಕೃತವಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Mamata Banerjee: ಹೆಲಿಕಾಪ್ಟರ್‌ ಏರುವಾಗ ಬಿದ್ದ ಮಮತಾ ಬ್ಯಾನರ್ಜಿ, ಗಾಯ

Mamata Banerjee: ಕಳೆದ ಆರು ವಾರಗಳಲ್ಲಿ ಮಮತಾ ಬ್ಯಾನರ್ಜಿ ಬಿದ್ದು ಗಾಯಗೊಂಡಿರುವುದು ಇದು ಎರಡನೇ ಬಾರಿ. ಮಾರ್ಚ್ 14ರಂದು, 69 ವರ್ಷದ ತೃಣಮೂಲ ಕಾಂಗ್ರೆಸ್ (Trinamool Congress) ಮುಖ್ಯಸ್ಥೆ ಮಮತಾ ಕೋಲ್ಕತ್ತಾದ ತಮ್ಮ ಕಾಲಿಘಾಟ್ ನಿವಾಸದೊಳಗೆ ಬಿದ್ದು ಹಣೆ ಮತ್ತು ಮೂಗಿನ ಮೇಲೆ ಗಂಭೀರವಾದ ಗಾಯ ಮಾಡಿಕೊಂಡಿದ್ದರು.

VISTARANEWS.COM


on

mamata banerjee helicopter
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (West Bengal chief minister Mamata Banerjee) ಅವರು ಶನಿವಾರ ದುರ್ಗಾಪುರದಲ್ಲಿ ಹೆಲಿಕಾಪ್ಟರ್ (Helicopter) ಏರುತ್ತಿದ್ದಾಗ ಜಾರಿ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಹೆಲಿಕಾಪ್ಟರ್‌ ಏರಿ ತಮ್ಮ ಆಸನದಲ್ಲಿ ಕುಳಿತುಕೊಳ್ಳಲು ಮುಂದಾದಾಗ ನಿಯಂತ್ರಣ (Imbalance) ಕಳೆದುಕೊಂಡು ಮಮತಾ ಬಿದ್ದುಬಿಟ್ಟರು. ಮುಖ್ಯಮಂತ್ರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅವರ ಭದ್ರತಾ ಸಿಬ್ಬಂದಿ (Security) ಸಹಾಯ ಮಾಡಿದ್ದಾರೆ ಎಂದು ವರದಿಯಾಗಿದೆ.

ನಂತರ ಮಮತಾ ತಮ್ಮ ಮುಂದಿನ ಪ್ರಯಾಣವನ್ನು ಅಸನ್ಸೋಲ್‌ಗೆ ಮುಂದುವರಿಸಿದೃು ಎಂದು ಗೊತ್ತಾಗಿದೆ. ಕಳೆದ ಆರು ವಾರಗಳಲ್ಲಿ ಮಮತಾ ಬ್ಯಾನರ್ಜಿ ಬಿದ್ದು ಗಾಯಗೊಂಡಿರುವುದು ಇದು ಎರಡನೇ ಬಾರಿ. ಮಾರ್ಚ್ 14ರಂದು, 69 ವರ್ಷದ ತೃಣಮೂಲ ಕಾಂಗ್ರೆಸ್ (Trinamool Congress) ಮುಖ್ಯಸ್ಥೆ ಮಮತಾ ಕೋಲ್ಕತ್ತಾದ ತಮ್ಮ ಕಾಲಿಘಾಟ್ ನಿವಾಸದೊಳಗೆ ಬಿದ್ದು ಹಣೆ ಮತ್ತು ಮೂಗಿನ ಮೇಲೆ ಗಂಭೀರವಾದ ಗಾಯ ಮಾಡಿಕೊಂಡಿದ್ದರು. ಮಮತಾ ಅವರನ್ನು ಹಲವು ಗಂಟೆಗಳ ಕಾಲ ಆಸ್ಪತ್ರೆಗೆ ಸೇರಿಸಬೇಕಾಗಿ ಬಂದಿತ್ತು.

ಬ್ಯಾನರ್ಜಿಯವರ ಸಹೋದರ ಕಾರ್ತಿಕ್ ಬ್ಯಾನರ್ಜಿ ಬಂಗಾಳಿ ಸುದ್ದಿ ವಾಹಿನಿಯೊಂದಕ್ಕೆ ಮಾತನಾಡುತ್ತಾ, ಟಿಎಂಸಿ ನಾಯಕಿಗೆ ʼಸೆರೆಬ್ರಲ್ ಕನ್ಕ್ಯುಶನ್ʼ ಇತ್ತು ಮತ್ತು ಆಕೆಯ ಹಣೆ ಮತ್ತು ಮೂಗಿನ ಮೇಲೆ ತೀಕ್ಷ್ಣವಾದ ಗಾಯವಾಗಿದೆ, ತೀವ್ರವಾಗಿ ರಕ್ತಸ್ರಾವವಾಗಿದೆ ಎಂದು ತಿಳಿಸಿದ್ದರು.

ಆಸ್ಪತ್ರೆಯ ನಿರ್ದೇಶಕ ಮಣಿಮೋಯ್ ಬಂಡೋಪಾಧ್ಯಾಯ ಅವರು, ಆರಂಭದಲ್ಲಿ “ಹಿಂದಿನಿಂದ ತಳ್ಳಿದಂಥ ಅನುಭವದಿಂದಾಗಿ ಅವರ ಮನೆಯಲ್ಲಿ ಬಿದ್ದಿದ್ದಾರೆ” ಎಂದು ಹೇಳಿದರೆಂದು ವರದಿಯಾಗಿತ್ತು. ಇದು ಂಮತಾ ಅವರ ಬೀಳುವಿಕೆಯ ಬಗ್ಗೆ ದೊಡ್ಡ ಪ್ರಮಾಣದ ಗೊಂದಲ ಮತ್ತು ಊಹಾಪೋಹಗಳನ್ನು ಹುಟ್ಟುಹಾಕಿತ್ತು.

ಬಂದೋಪಾಧ್ಯಾಯ ಅವರು ನಂತರ ಸ್ಪಷ್ಟನೆ ನೀಡಿದ್ದು, ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದರು. “ಸಿಎಂ ಮಮತಾ ಅವರ ದೇಹವು ಹಿಂದಿನಿಂದ ತಳ್ಳುವ ಸಂವೇದನೆಯನ್ನು ಅನುಭವಿಸಿದೆ. ಇದು ತಲೆ ತಿರುಗುವುದಕ್ಕೆ ಸಮನಾದುದು. ಚಿಕಿತ್ಸೆ ನೀಡುವುದು ನಮ್ಮ ಕೆಲಸ ಮತ್ತು ನಾವು ಅದನ್ನು ಮಾಡಿದ್ದೇವೆ. ನಾನು ಹೇಳಿದ್ದನ್ನು ತಪ್ಪಾಗಿ ಅರ್ಥೈಸಲಾಗಿದೆ” ಎಂದು ಬಂಡೋಪಾಧ್ಯಾಯ ಹೇಳಿದ್ದರು.

ಕಳೆದ ಬಾರಿ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಅಪಘಾತವೊಂದರಲ್ಲಿ ಕಾಲು ಫ್ರಾಕ್ಚರ್‌ ಆಗಿತ್ತು. ಆದರೆ ಮಮತಾ ಬ್ಯಾಂಡೇಜ್‌ ಧರಿಸಿದ ಕಾಲುಗಳ ಮೂಲಕವೇ ರಾಜ್ಯಾದ್ಯಂತ ಬಿರುಗಾಳಿಯಂತೆ ಓಡಾಡಿ ಪ್ರಚಾರ ನಡೆಸಿ ಅಧಿಕಾರಕ್ಕೆ ಮರಳಿದ್ದರು.

ಇದನ್ನೂ ಓದಿ: Trinamool Congress: ಮಮತಾ ಬ್ಯಾನರ್ಜಿಯನ್ನು ಅರೆಸ್ಟ್‌ ಮಾಡಿ; ಟಿಎಂಸಿ ಉಗ್ರ ಸಂಘಟನೆ ಎಂದು ಘೋಷಿಸಿ-ಬಿಜೆಪಿ ಆಗ್ರಹ

Continue Reading

ದೇಶ

Self harming: ಮದುವೆಯಲ್ಲಿ ಪತ್ನಿ ಡಾನ್ಸ್‌ ಮಾಡಿದಳೆಂದು ಬೇಸರಗೊಂಡ ಪತಿ ಆತ್ಮಹತ್ಯೆ

Self harming:ಮದುವೆ ಕಾರ್ಯಕ್ರಮದಲ್ಲಿ ಪತ್ನಿ ಡಾನ್ಸ್‌ ಮಾಡಿದಳೆಂದು ಬೇಸರಗೊಂಡ ಪತಿ ರೈಲ್ವೇ ಹಳಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬಿಹಾರದಲ್ಲಿ ನಡೆಸಿದೆ.

VISTARANEWS.COM


on

By

Koo

ಬಿಹಾರ: ಬಾವನ ಮದುವೆಯಲ್ಲಿ ಪತ್ನಿ ಡಾನ್ಸ್‌ ಮಾಡಿದಳೆಂದು ಬೇಸರಗೊಂಡ ವ್ಯಕ್ತಿಯೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ (Self harming)ಗೆ ಶರಣಾಗಿರುವ ಘಟನೆ ಬಿಹಾರ(Bihar)ದ ಬದಾರಿಯಾದಲ್ಲಿ ನಡೆದಿದೆ. ಬಹುಲಾ ಗ್ರಾಮದ ನಿವಾಸಿ 35 ವರ್ಷದ ಗೋಪಾಲ್‌ ಸಿಂಗ್‌ ರಸೂಲ್‌ಪುರ ಪೊಲೀಸ್‌ ಠಾಣೆ(Rasulpur police Station) ವ್ಯಾಪ್ತಿಯಲ್ಲಿ ಬರುವ ಮಹೇಂದ್ರ ನಾಥ್‌ ಹಾಲ್ಟರ್‌ ರೈಲು ನಿಲ್ದಾಣ(Mahendra Nath Halter Railway station)ದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಗೋಪಾಲ್‌ ಸಿಂಗ್‌ ಬೇನತ್‌ ಗ್ರಾಮದಲ್ಲಿ ತನ್ನ ಪತ್ನಿಯ ಸಹೋದರನ ಮದುವೆ ಸಮಾರಂಭಕ್ಕೆ ತೆರಳಿದ್ದ. ಈ ವೇಳೆ ಸಂಭ್ರಮದಲ್ಲಿ ಡಾನ್ಸ್‌ ಮಾಡುತ್ತಿದ್ದ ಪತ್ನಿಯನ್ನು ನೋಡಿ ಅಸಮಾಧಾನಗೊಂಡಿದ್ದ ಗೋಪಾಲ್‌ ಆಕೆಯನ್ನು ತಡೆದಿದ್ದಾನೆ.

ಕುಟುಂಬಸ್ಥರ ಮಾಹಿತಿ ಪ್ರಕಾರ ಗೋಪಾಲ್‌ ಡಾನ್ಸ್‌ ಮಾಡುತ್ತಿದ್ದ ತನ್ನ ಪತ್ನಿಯನ್ನು ಸುಮ್ಮನಿರುವಂತೆ ಸೂಚಿಸಿದ್ದ. ಆದರೆ ಆಕೆ ಮಾತ್ರ ಆತನ ಮಾತಿಗೆ ಒಪ್ಪಲಿಲ್ಲ. ಈ ವೇಳೆ ಇಬ್ಬರ ನಡುವೆ ಸಣ್ಣ ಜಗಳ ಆಗಿತ್ತು. ಅಷ್ಟೇ ಅಲ್ಲದೇ ಪತಿ ಪತ್ನಿಯರ ಜಗಳಕ್ಕೆ ಗೋಪಾಲ್‌ ಬಾವ ಕೂಡ ಎಂಟ್ರಿ ಕೊಟ್ಟಿದ್ದ. ಆಗ ಬಾವ-ಬಾಮೈದರ ನಡುವೆ ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿತ್ತು. ಇದರಿಂದ ತೀರ ಬೇಸರಗೊಂಡಿದ್ದ ಗೋಪಾಲ್‌, ರೈಲು ಬರುತ್ತಿದ್ದ ಸಮಯ ನೋಡಿಕೊಂಡು ಹಳಿಗೆ ಹಾರಿಗೆ ಪ್ರಾಣ ಬಿಟ್ಟಿದ್ದಾನೆ. ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರ ತಂಡ ಸ್ಥಳಕ್ಕೆ ದೌಡಾಯಿಸಿ ಗೋಪಾಲ್‌ ಮೃತದೇಹವನ್ನು ರೈಲಿನಡಿಯಿಂದ ಹೊರ ತೆಗೆದು ಕುಟುಂಬಸ್ಥರಿಗೆ ಮಾಹಿತಿ ನೀಡಿದರು.

ಮೃತನ ಕುಟುಂಬಸ್ಥರು ಹೇಳೋದೇನು?

ಗೋಪಾಲ ಸಿಂಗ್‌ ಕುಟುಂಬಸ್ಥರು ಹೇಳುವ ಪ್ರಕಾರ ಆತನಿಗೆ ಮೊದಲಿನಿಂದಲೂ ಮಾನಸಿಕ ಸಮಸ್ಯೆ ಇತ್ತು. ಇದಕ್ಕೂ ಮುನ್ನ ದಿಲ್ಲಿ ಸಾರಿಗೆ ಮತ್ತು ಎಲ್‌ಐಸಿಯಲ್ಲಿ ಕೆಲಸ ಮಾಡುತ್ತಿದ್ದು, ಪತ್ನಿ, 10 ವರ್ಷದ ಮಗಳು ಹಾಗೂ ಅಣ್ಣನ ಜೊತೆ ಬದುಕುತ್ತಿದ್ದ ಎನ್ನಲಾಗಿದೆ. ಒಟ್ಟಿನಲ್ಲಿ ಕುಳಿತು ಬಗೆಹರಿಸಬಹುದಾಗಿದ್ದ ಸಮಸ್ಯೆ ಒಬ್ಬ ವ್ಯಕ್ತಿ ಸಾವಿಯಲ್ಲಿ ಅಂತ್ಯವಾಗಿರುವ ಬಗ್ಗೆ ಕುಟುಂಬಸ್ಥರು ದುಃಖ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Mobile Blast: ಬೈಕ್‌ ಚಲಾಯಿಸುತ್ತಿದ್ದಾಗ ಮೊಬೈಲ್‌ ಸ್ಫೋಟ, ಡಿವೈಡರ್‌ಗೆ ಗುದ್ದಿ ಮಹಿಳೆ ಸಾವು

ಕೆಲವು ದಿನಗಳ ಹಿಂದೆಯಷ್ಟೇ ಆಂಧ್ರಪ್ರದೇಶದ ಮೂವರು ಯುವಕರು ರೈಲಿಗೆ ಸಿಲುಕಿ ಮೃತಪಟ್ಟಿದ್ದರು. ಬಳಿಕ ಅದು ಆತ್ಮಹತ್ಯೆ ಎಂಬ ಶಂಕೆ ವ್ಯಕ್ತವಾಗಿತ್ತು. ಮೃತರನ್ನು ಆಂಧ್ರಪ್ರದೇಶದ ಚಿತ್ತೂರು ಮೂಲದಶಶಿಕುಮಾರ್ (23), ಲೋಕೇಶ್ (25) ಎಂದು ಗುರುತಿಸಲಾಗಿತ್ತು. ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ರೈಲ್ವೆ ಟ್ರ್ಯಾಕ್‌ ಇರುವ ಕಾರಣ ರಾತ್ರಿಯಲ್ಲಿ ಯುವಕರು ಮೊಬೈಲ್ ಹಾಗೂ ಹೆಡ್‌ಫೋನ್‌ ಹಾಕಿಕೊಂಡು ಟ್ರ್ಯಾಕ್ ಮೇಲೆ ಕುಳಿತುಕೊಳ್ಳುತ್ತಾರೆ. ಪೊಲೀಸರು ಬಂದಾಗ ಇಲ್ಲಿಂದ ತೆರಳುತ್ತಾರೆ, ನಂತರ ಮತ್ತೆ ವಾಪಸ್ ಬಂದು ಇಲ್ಲೇ ಕೂರುತ್ತಾರೆ. ಹೀಗಾಗಿ ಆಕಸ್ಮಿಕವಾಗಿ ರೈಲು ಅವರ ಮೇಲೆ ಹರಿದಿರಬಹುದು ಎಂದು ತಿಳಿಸಿದ್ದರು.

Continue Reading

ಕ್ರೈಂ

Mobile Blast: ಬೈಕ್‌ ಚಲಾಯಿಸುತ್ತಿದ್ದಾಗ ಮೊಬೈಲ್‌ ಸ್ಫೋಟ, ಡಿವೈಡರ್‌ಗೆ ಗುದ್ದಿ ಮಹಿಳೆ ಸಾವು

Mobile Blast: ಬೈಕ್‌ ರಸ್ತೆಯಲ್ಲಿದ್ದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಮಹಿಳೆಯ ತಲೆಯ ಮೇಲೆ ಬೈಕ್ ಬಿದ್ದಿದ್ದು, ತೀವ್ರ ಗಾಯಗೊಂಡ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆಕೆ ಬದುಕುಳಿಯಲಿಲ್ಲ. ಅಪಘಾತದ ವೇಳೆ ಮಹಿಳೆ ಹೆಲ್ಮೆಟ್ ಧರಿಸಿರಲಿಲ್ಲ.

VISTARANEWS.COM


on

mobile blast woman death
Koo

ಕಾನ್ಪುರ: ಹೆಲ್ಮೆಟ್ (helmet) ಇಲ್ಲದೇ ಇಯರ್‌ಫೋನ್‌ (Earphone) ಹಾಕಿಕೊಂಡು ಸ್ಕೂಟರ್‌ ಚಲಾಯಿಸುತ್ತಿದ್ದ ಮಹಿಳೆಯೊಬ್ಬರು ಏಕಾಏಕಿ ಮೊಬೈಲ್‌ ಸ್ಫೋಟಗೊಂಡ (Mobile Blast) ಪರಿಣಾಮ ತಬ್ಬಿಬ್ಬಾಗಿ ಬೈಕ್‌ ಮೇಲಿನ ನಿಯಂತ್ರಣ ಕಳೆದುಕೊಂಡು (bike Accident) ಡಿವೈಡರ್‌ಗೆ ಗುದ್ದಿ ಮೃತ (woman death) ಪಟ್ಟಿದ್ದಾರೆ.

ಉತ್ತರ ಪ್ರದೇಶದ ಕಾನ್ಪುರದಲ್ಲಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ವೇಳೆ ಮಹಿಳೆಯೊಬ್ಬರ ಜೇಬಿನಲ್ಲಿದ್ದ ಮೊಬೈಲ್ ಫೋನ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಜೇಬಿನಲ್ಲಿದ್ದ ಮೊಬೈಲ್ ಫೋನ್ ಸ್ಫೋಟಗೊಂಡಿದ್ದರಿಂದ ತಬ್ಬಿಬ್ಬಾದ ಆಕೆ ಬೈಕ್ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾರೆ. ಬೈಕ್‌ ರಸ್ತೆಯಲ್ಲಿದ್ದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಮಹಿಳೆಯ ತಲೆಯ ಮೇಲೆ ಬೈಕ್ ಬಿದ್ದಿದ್ದು, ತೀವ್ರ ಗಾಯಗೊಂಡ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆಕೆ ಬದುಕುಳಿಯಲಿಲ್ಲ. ಅಪಘಾತದ ವೇಳೆ ಮಹಿಳೆ ಹೆಲ್ಮೆಟ್ ಧರಿಸಿರಲಿಲ್ಲ.

ಮಹಿಳೆ ನೆಲಕ್ಕುರುಳುತ್ತಿದ್ದಂತೆ ಸ್ಥಳದ ಸುತ್ತ ಜನ ಜಮಾಯಿಸಿದರು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಗಾಯಾಳು ಮಹಿಳೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅಪಘಾತದಲ್ಲಿ ಉಂಟಾದ ತೀವ್ರ ರಕ್ತಸ್ರಾವದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾರೆ.

ಬುಧವಾರ ಬೆಳಗ್ಗೆ 10 ಗಂಟೆಗೆ ಮಹಿಳೆ ತನ್ನ ಸ್ಕೂಟರ್‌ನಲ್ಲಿ ಕಾನ್ಪುರ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮೃತ ಮಹಿಳೆಯನ್ನು ಫರೂಕಾಬಾದ್ ಜಿಲ್ಲೆಯ ನೆಹ್ರಾರಿಯಾ ಗ್ರಾಮದ ನಿವಾಸಿ ಪೂಜಾ (28) ಎಂದು ಗುರುತಿಸಲಾಗಿದೆ. ಕಾನ್ಪುರ ರೈಲು ನಿಲ್ದಾಣದಿಂದ ಮುಂಬೈಗೆ ರೈಲು ಹಿಡಿಯಲು ಮಹಿಳೆ ತೆರಳುತ್ತಿದ್ದರು.

ಚೌಬೆಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮನ್ಪುರ್ ಗ್ರಾಮದ ಬಳಿ ಕಾನ್ಪುರ-ಅಲಿಘರ್ ಹೆದ್ದಾರಿಯಲ್ಲಿರುವ ಪೆಟ್ರೋಲ್ ಪಂಪ್‌ನ ಮುಂಭಾಗದಲ್ಲಿ ಈ ದುರಂತ ಘಟನೆ ಸಂಭವಿಸಿದೆ. ಮಹಿಳೆ ಹೆಲ್ಮೆಟ್ ಧರಿಸಿರಲಿಲ್ಲ ಮತ್ತು ಆಕೆಯ ಕಿವಿಯಲ್ಲಿ ಇಯರ್ ಫೋನ್ ಇತ್ತು. ಜೊತೆಗೆ ಆಕೆ ಸ್ಕೂಟರ್ ಅನ್ನು ವೇಗದಲ್ಲಿ ಓಡಿಸುತ್ತಿದ್ದರು ಎಂದು ಗೊತ್ತಾಗಿದೆ. ಘಟನೆ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. ಮಹಿಳೆಯ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ವಾಹನ ಚಲಾಯಿಸುವ ಸಂದರ್ಭದಲ್ಲಿ ಮೊಬೈಲ್‌ ಬಳಸದಂತೆ ಪದೇ ಪದೆ ಸೂಚನೆ ನೀಡುತ್ತಿದ್ದರೂ ಅದನ್ನು ಬಹಳ ಮಂದಿ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಇತ್ತೀಚೆಗೆ ದೇಶದಲ್ಲಿ ನಡೆಯುತ್ತಿರುವ ಅಪಘಾತಗಳಲ್ಲಿ ಶೇಕಡಾ ಇಪ್ಪತ್ತರಷ್ಟು ಮೊಬೈಲ್‌ ಕಾರಣದಿಂದ ಆಗುತ್ತಿವೆ ಎಂದು ವರದಿಗಳು ಸೂಚಿಸಿವೆ.

ಇದನ್ನೂ ಓದಿ: Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ ಆಂಬ್ಯುಲೆನ್ಸ್‌ ಚಾಲಕ; ಸರಣಿ ಅಪಘಾತಕ್ಕೆ ಕಾರುಗಳು ಜಖಂ, ಗರ್ಭಿಣಿ ಸೇಫ್

Continue Reading

ದೇಶ

MDH, Everest Spices: ಭಾರತದ 527 ಆಹಾರ ಪದಾರ್ಥಗಳಲ್ಲಿ ಕ್ಯಾನ್ಸರ್‌ಕಾರಕ ಕೆಮಿಕಲ್‌ ಪತ್ತೆ

MDH, Everest Spices: ಎಂಡಿಎಚ್, ಎವರೆಸ್ಟ್ ಮಸಾಲೆ ಸೇರಿದಂತೆ 527 ಜನಪ್ರಿಯ ಕಂಪನಿಗಳ ಆಹಾರ ಪದಾರ್ಥಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲೀನ್ ಆಕ್ಸೈಡ್ ಹೆಚ್ಚಿನ ಮಟ್ಟದಲ್ಲಿರುವುದನ್ನು ಯುರೋಪಿಯನ್ ಯೂನಿಯನ್ ಆಹಾರ ಸುರಕ್ಷತಾ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.

VISTARANEWS.COM


on

By

MDH, Everest Spices
Koo

ನವದೆಹಲಿ: ಎಂಡಿಎಚ್‌, ಎವರೆಸ್ಟ್‌ ಮಸಾಲೆ (MDH, Everest Spices) ಸೇರಿದಂತೆ ಭಾರತದ ಒಟ್ಟು 527 ಉತ್ಪನ್ನಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲಿನ್‌ ಆಕ್ಸೈಡ್‌ (Ethylene oxide) ಹೆಚ್ಚಿನ ಪ್ರಮಾಣದಲ್ಲಿದೆ ಎಂಬುದನ್ನು ಯುರೋಪಿಯನ್ ಯೂನಿಯನ್ ಆಹಾರ ಸುರಕ್ಷತಾ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಹೀಗಾಗಿ 572 ಉತ್ಪನ್ನಗಳ ಪೈಕಿ 87 ಉತ್ಪನ್ನಗಳ ರಫ್ತನ್ನು ಈಗಾಗಲೇ ಗಡಿಯಲ್ಲಿ ರದ್ದುಗೊಳಿಸಲಾಗಿದೆ. ಎಂಡಿಎಚ್, ಎವರೆಸ್ಟ್ ಮಸಾಲೆ ಸೇರಿದಂತೆ ಜನಪ್ರಿಯ ಕಂಪನಿಗಳ ಆಹಾರ ಪದಾರ್ಥಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲೀನ್ ಆಕ್ಸೈಡ್ ಹೆಚ್ಚಿನ ಮಟ್ಟದಲ್ಲಿರುವುದನ್ನು ಯುರೋಪಿಯನ್ ಯೂನಿಯನ್ ಆಹಾರ ಸುರಕ್ಷತಾ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಇದರ ಬೆನ್ನಲ್ಲೇ ಎರಡು ಕಂಪನಿಗಳ ಉತ್ಪನ್ನಗಳನ್ನು ಈಗಾಗಲೇ ಹಾಂಗ್ ಕಾಂಗ್ (Hong Kong) ಮತ್ತು ಸಿಂಗಾಪುರ (Singapore)ದಲ್ಲಿ ಸಂಪೂರ್ಣವಾಗಿ ಬ್ಯಾನ್‌ ಮಾಡಲಾಗಿದೆ.

ಇನ್ನು ಅಪಾಯಕಾರಿ ಕೆಮಿಕಲ್‌ಗಳು ಎಳ್ಳು ಬೀಜಗಳು, ಗಿಡಮೂಲಿಕೆಗಳು, ಮಸಾಲೆಗಳು ಮತ್ತು ಇತರ ಆಹಾರ ಪದಾರ್ಥಗಳಲ್ಲೂ ಕಂಡು ಬಂದಿವೆ. ಇನ್ನು ಎಥಿಲೀನ್ ಆಕ್ಸೈಡ್ ಅನ್ನು ಮೂಲತಃ ವೈದ್ಯಕೀಯ ಸಾಧನಗಳನ್ನು ಸ್ವಚ್ಛಗೊಳಿಸ ಬಳಸುವ ಕ್ರಿಮಿನಾಶಕವಾಗಿ ಬಳಸಲಾಗುತ್ತದೆ. ಈ ರಾಸಾಯನಿಕ ದೇಹಕ್ಕೆ ಸೇರಿದರೆ ಲಿಂಫೋಮಾ ಮತ್ತು ಲ್ಯುಕೇಮಿಯಾ ಸೇರಿದಂತೆ ವಿವಿಧ ಕ್ಯಾನ್ಸರ್‌ಗಳು ಬರು ಸಾಧ್ಯತೆ ಅತಿ ಹೆಚ್ಚಿದೆ.

ರಾಮಯ್ಯ ಅಡ್ವಾನ್ಸ್ಡ್ ಟೆಸ್ಟಿಂಗ್ ಲ್ಯಾಬ್ಸ್‌ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಜುಬಿನ್ ಜಾರ್ಜ್ ಜೋಸೆಫ್, ಎಥಿಲೀನ್ ಆಕ್ಸೈಡ್‌ನ ಉಪಉತ್ಪನ್ನವಾದ ಎಥಿಲೀನ್ ಗ್ಲೈಕೋಲ್‌ನಿಂದ ಉಂಟಾಗುವ ಅಪಾಯಗಳನ್ನು ಎತ್ತಿ ತೋರಿಸಿದ್ದರು. ಇದು ಈ ಹಿಂದೆ ಕೆಮ್ಮಿನ ಸಿರಪ್‌ಗಳಲ್ಲೂ ಪತ್ತೆಯಾಗಿತ್ತು. ಇದರಿಂದ ಆಫ್ರಿಕಾದಲ್ಲಿ ಸಾವಿಗೆ ಕಾರಣವಾಗಿತ್ತು.

ಸಿಂಗಾಪುರದಲ್ಲಿ ಭಾರತದ ಜನಪ್ರಿಯ ಉತ್ಪನ್ನವಾದ ಮಸಾಲೆ ತಯಾರಕ ಎಂಡಿಚ್‌ ಮತ್ತು ಎವರೆಸ್ಟ್‌ನ ಮಸಾಲಾ ಮಾರಾಟ ನಿಷೇಧಗೊಳಿಸಿದ ಬೆನ್ನಲ್ಲೇ, ಹಾಂಕಾಂಗ್‌ನಲ್ಲೂ ಭಾರತದ ಎಂಡಿಎಚ್‌ ಹಾಗೂ ಎವರೆಸ್ಟ್‌ ಮಸಾಲಾ ಪದಾರ್ಥಗಳ ಮಾರಾಟವನ್ನು ನಿಷೇಧಿಸಲಾಗಿತ್ತು. ಹಾಗಾಗಿ, ಜಾಗತಿಕವಾಗಿ ಭಾರತದ ಎರಡು ಮಸಾಲಾ ಬ್ರ್ಯಾಂಡ್‌ಗಳು ನಕಾರಾತ್ಮಕ ಕಾರಣಕ್ಕಾಗಿ ಸುದ್ದಿಯಾಗಿವೆ. ಇದರ ಪರಿಣಾಮ ಭಾರತದ ಉತ್ಪನ್ನಗಳ ಮೇಲೂ ಉಂಟಾಗಲಿದೆ ಎಂದು ಹೇಳಲಾಗುತ್ತಿದೆ.

ಭಾರತ ಸೇರಿ ಜಗತ್ತಿನೆಲ್ಲೆಡೆ ಖ್ಯಾತಿ ಗಳಿಸಿರುವ ಎಂಡಿಎಚ್‌ನ ಮೂರು ಮಸಾಲಾ ಪದಾರ್ಥಗಳು ಹಾಗೂ ಎವರೆಸ್ಟ್‌ನ ಒಂದು ಮಸಾಲಾ ಪದಾರ್ಥದಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ ಕಾರ್ಸಿನೋಜೆನಿಕ್‌ ರಾಸಾಯನಿಕ ಇರುವ ಕಾರಣ ಹಾಂಕಾಂಗ್‌ ಆಹಾರ ನಿಯಂತ್ರಣ ಪ್ರಾಧಿಕಾರವು ನಾಲ್ಕೂ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದೆ ಎಂದು ತಿಳಿದುಬಂದಿದೆ. ಎಂಡಿಎಚ್‌ನ ಕರಿ ಪೌಡರ್‌, ಮಿಕ್ಸ್ಡ್‌ ಮಸಾಲಾ ಪೌಡರ್‌ ಹಾಗೂ ಸಾಂಬಾರ್‌ ಮಸಾಲಾ ಮತ್ತು ಎವರೆಸ್ಟ್‌ನ ಫಿಶ್‌ ಕರಿ ಮಸಾಲಾವನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: Lok Sabha Election 2024: ಜೈಲಿನಲ್ಲಿರುವ ಅಮೃತಪಾಲ್ ಚುನಾವಣೆಗೆ ಸ್ಪರ್ಧಿಸಬಹುದು, ಕೇಜ್ರಿವಾಲ್ ಮತ ಚಲಾಯಿಸುವಂತಿಲ್ಲ! ಏನಿದು ನಿಯಮ?

ಎಂಡಿಎಚ್‌ನ ಮೂರು ಹಾಗೂ ಎವರೆಸ್ಟ್‌ನ ಒಂದು ಉತ್ಪನ್ನದ ಸ್ಯಾಂಪಲ್‌ ಪಡೆದು ಪರಿಶೀಲನೆ ನಡೆಸಲಾಗಿದೆ. ಇವುಗಳಲ್ಲಿ ಪೆಸ್ಟಿಸೈಡ್‌ ಎಥಿಲೀನ್‌ ಆಕ್ಸೈಡ್‌ ಪತ್ತೆಯಾಗಿದೆ. ಈ ಆಕ್ಸೈಡ್‌ ಮನುಷ್ಯನು ಸೇವಿಸಲು ಅಪಾಯಕಾರಿಯಾಗಿದೆ. ಕ್ಯಾನ್ಸರ್‌ ಕಾರಕ ಕಾರ್ಸಿನೋಜೆನಿಕ್‌ ರಾಸಾಯನಿಕವೂ ಪತ್ತೆಯಾಗಿತ್ತು. ಹಾಗಾಗಿ, ದೇಶದ ಮಾರಾಟಗಾರರಿಗೆ ಈ ಉತ್ಪನ್ನಗಳನ್ನು ಮಾರಾಟ ಮಾಡದಂತೆ, ಮಳಿಗೆಗಳಲ್ಲಿ ಇರಿಸದಂತೆ ಸೂಚಿಸಲಾಗಿದೆ ಎಂಬುದಾಗಿ ಹಾಂಕಾಂಗ್‌ನ ಸೆಂಟರ್‌ ಫಾರ್‌ ಫುಡ್‌ ಸೇಫ್ಟಿ ತಿಳಿಸಿದೆ. ಇವುಗಳನ್ನು ನಿಷೇಧಿಸಿ ಏಪ್ರಿಲ್‌ 5ರಂದೇ ಆದೇಶ ಹೊರಡಿಸಿದೆ.

Continue Reading
Advertisement
assault case in anekla
ಬೆಂಗಳೂರು ಗ್ರಾಮಾಂತರ9 mins ago

Assault Case : ಕುಡಿದ ನಶೆಯಲ್ಲಿ ಸ್ನೇಹಿತನಿಗೆ ಬೆಂಕಿ ಹಚ್ಚಿದ ಮಿತ್ರ ದ್ರೋಹಿಗಳು ಅರೆಸ್ಟ್‌

shilpa shetty visits shibaruru sri kodamanittaya
ಸಿನಿಮಾ9 mins ago

Shilpa Shetty: ಪೂಜಾ ಕಾರ್ಯಕ್ಕೆ ಕುಟುಂಬ ಸಮೇತರಾಗಿ ಮಂಗಳೂರಿಗೆ ಬಂದ ಶಿಲ್ಪಾ ಶೆಟ್ಟಿ

mamata banerjee helicopter
ಪ್ರಮುಖ ಸುದ್ದಿ13 mins ago

Mamata Banerjee: ಹೆಲಿಕಾಪ್ಟರ್‌ ಏರುವಾಗ ಬಿದ್ದ ಮಮತಾ ಬ್ಯಾನರ್ಜಿ, ಗಾಯ

ದೇಶ31 mins ago

Self harming: ಮದುವೆಯಲ್ಲಿ ಪತ್ನಿ ಡಾನ್ಸ್‌ ಮಾಡಿದಳೆಂದು ಬೇಸರಗೊಂಡ ಪತಿ ಆತ್ಮಹತ್ಯೆ

mobile blast woman death
ಕ್ರೈಂ60 mins ago

Mobile Blast: ಬೈಕ್‌ ಚಲಾಯಿಸುತ್ತಿದ್ದಾಗ ಮೊಬೈಲ್‌ ಸ್ಫೋಟ, ಡಿವೈಡರ್‌ಗೆ ಗುದ್ದಿ ಮಹಿಳೆ ಸಾವು

Randeep Surjewala
ಕರ್ನಾಟಕ1 hour ago

Randeep Surjewala: ಕನ್ನಡಿಗರ ತೆರಿಗೆ ಹಣದಲ್ಲಿ ಸುರ್ಜೇವಾಲಾ ಟ್ರಿಪ್;‌ ಕೆರಳಿ ಕೆಂಡವಾದ ಬಿಜೆಪಿ!

Murder case in dharwad
ಕ್ರೈಂ2 hours ago

Murder case: ಹೆಂಡ್ತಿ ಮೇಲೆ ಸಂಶಯ; ಕುಡಿದು ಬಂದು ಕೊಡಲಿಯಿಂದ ಕೊಚ್ಚಿ ಕೊಂದ

miss universe Buenos Aires
ವಿದೇಶ2 hours ago

Miss Universe Buenos Aires: ಈಕೆ ಬ್ಯೂನಸ್‌ ಐರಿಸ್‌ ವಿಶ್ವ ಸುಂದರಿ; ಇವಳ ವಯಸ್ಸು ನೀವೇ ಊಹಿಸಿ!

Gurucharan Singh Taarak Mehta Ka Ooltah Chashmah actor missing
ಕಿರುತೆರೆ2 hours ago

Gurucharan Singh: ‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ಖ್ಯಾತಿಯ ನಟ ನಿಗೂಢ ನಾಪತ್ತೆ

snake bite
ಬೆಂಗಳೂರು ಗ್ರಾಮಾಂತರ2 hours ago

Snake Bite: ತೋಟದ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಕಚ್ಚಿದ ಹಾವು; ಕ್ಷಣಾರ್ಧದಲ್ಲೆ ಹಾರಿಹೋಯ್ತು ಪ್ರಾಣ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

road Accident in kolar evm
ಕೋಲಾರ3 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ10 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

ಟ್ರೆಂಡಿಂಗ್‌