Devendra Fadnavis: ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಸಾಧನೆ; ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಫಡ್ನವೀಸ್ - Vistara News

ದೇಶ

Devendra Fadnavis: ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಸಾಧನೆ; ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಫಡ್ನವೀಸ್

Devendra Fadnavis: ದೇವೇಂದ್ರ ಫಡ್ನವೀಸ್‌ ಅವರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ. “ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಇನ್ನಷ್ಟು ಬಲಿಷ್ಠವಾಗಲು ನಾನು ಸಂಘಟನೆ ಮಟ್ಟದಲ್ಲಿ ಕೆಲಸ ಮಾಡಲು ಇಚ್ಛಿಸತ್ತೇನೆ. ಪಕ್ಷದ ಸಂಘಟನೆಗೆ ನನ್ನ ಆದ್ಯತೆ ಇರಲಿದೆ. ಪೂರ್ಣಪ್ರಮಾಣದಲ್ಲಿ ಪಕ್ಷ ಸಂಘಟನೆ ಮಾಡುತ್ತೇನೆ. ಹಾಗಾಗಿ, ಉಪ ಮುಖ್ಯಮಂತ್ರಿ ಹುದ್ದೆಯಿಂದ ನಿಯುಕ್ತಿಗೊಳಿಸಿ ಎಂಬುದಾಗಿ ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡುತ್ತೇನೆ” ಎಂಬುದಾಗಿ ತಿಳಿಸಿದ್ದಾರೆ.

VISTARANEWS.COM


on

Devendra Fadnavis
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮುಂಬೈ: ಮಹಾರಾಷ್ಟ್ರದಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ (Lok Sabha Election Result 2024) ಬಿಜೆಪಿಯು ಕಳಪೆ ಪ್ರದರ್ಶನ ತೋರಿರುವ ಕಾರಣ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ (Devendra Fadnavis) ಅವರು ಹಿನ್ನಡೆಯ ಹೊಣೆ ಹೊತ್ತು ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮಹಾರಾಷ್ಟ್ರದ (Maharashtra) ಒಟ್ಟು 48 ಕ್ಷೇತ್ರಗಳಲ್ಲಿ ಬಿಜೆಪಿಯು ಕೇವಲ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಕಾರಣ ಉಪ ಮುಖ್ಯಮಂತ್ರಿ ಜವಾಬ್ದಾರಿಯಿಂದ ನಿಯುಕ್ತಿಗೊಳಿಸಿ ಎಂಬುದಾಗಿ ದೇವೇಂದ್ರ ಫಡ್ನವೀಸ್‌ ಅವರು ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.

ದೇವೇಂದ್ರ ಫಡ್ನವೀಸ್‌ ಅವರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ. “ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಇನ್ನಷ್ಟು ಬಲಿಷ್ಠವಾಗಲು ನಾನು ಸಂಘಟನೆ ಮಟ್ಟದಲ್ಲಿ ಕೆಲಸ ಮಾಡಲು ಇಚ್ಛಿಸತ್ತೇನೆ. ಪಕ್ಷದ ಸಂಘಟನೆಗೆ ನನ್ನ ಆದ್ಯತೆ ಇರಲಿದೆ. ಪೂರ್ಣಪ್ರಮಾಣದಲ್ಲಿ ಪಕ್ಷ ಸಂಘಟನೆ ಮಾಡುತ್ತೇನೆ. ಹಾಗಾಗಿ, ಉಪ ಮುಖ್ಯಮಂತ್ರಿ ಹುದ್ದೆಯಿಂದ ನಿಯುಕ್ತಿಗೊಳಿಸಿ ಎಂಬುದಾಗಿ ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡುತ್ತೇನೆ” ಎಂಬುದಾಗಿ ತಿಳಿಸಿದ್ದಾರೆ.

2019ರ ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿಯು ಒಟ್ಟು 48 ಕ್ಷೇತ್ರಗಳ ಪೈಕಿ 23 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ, ಬಿಜೆಪಿಯು ಈ ಬಾರಿ 9 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಕಾಂಗ್ರೆಸ್‌, ಶಿವಸೇನೆ (ಉದ್ಧವ್‌ ಠಾಕ್ರೆ ಬಣ) ಹಾಗೂ ಎನ್‌ಸಿಪಿ (ಶರದ್‌ ಪವಾರ್)‌ ಅವರ ಮಹಾ ವಿಕಾಸ್‌ ಅಘಾಡಿಯು ಈ ಬಾರಿ 30 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಅದರಲ್ಲೂ, ಕಳೆದ ಬಾರಿ 1 ಕ್ಷೇತ್ರ ಗೆದ್ದಿದ್ದ ಕಾಂಗ್ರೆಸ್‌ ಈ ಬಾರಿ 13 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ ನೇತೃತ್ವದ ಎನ್‌ಡಿಎಯು ರಾಜ್ಯದಲ್ಲಿ 17 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ನರೇಂದ್ರ ಮೋದಿ ರಾಜೀನಾಮೆ

ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಸಲ್ಲಿಸಿದರು. ರಾಷ್ಟ್ರಪತಿಗಳು ರಾಜೀನಾಮೆ ಅಂಗೀಕರಿಸಿದ್ದಾರೆ. 17ನೇ ಲೋಕಸಭೆ ವಿಸರ್ಜನೆಯ ಆಗಬೇಕಿರುವ ಹಿನ್ನೆಲೆಯಲ್ಲಿ ಅವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ದೊಡ್ಡ ಪಕ್ಷವಾಗಿ ಹೊಮ್ಮಿರುವ ಎನ್‌ಡಿಎ ಸರಕಾರ ರಚನೆಯ ಹಕ್ಕು ಮಂಡಿಸಬೇಕಿದೆ. ಮಿತ್ರಪಕ್ಷಗಳ ಜತೆಗೆ ಸಮಾಲೋಚನೆಯ ಬಳಿಕ ಮೋದಿಯವರು ರಾಷ್ಟ್ರಪತಿಗಳ ಮುಂದೆ ಹಕ್ಕು ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಮೋದಿಯವರು ಉಸ್ತುವಾರಿ ಪ್ರಧಾನಿಯಾಗಿ ಮುಂದುವರಿಯಲಿದ್ದು, ಜೂನ್‌ 8ರಂದು ನೂತನ ಸರಕಾರದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ರಾಷ್ಟ್ರಪತಿಗಳು ನೂತನ ಪ್ರಧಾನಿ ಹಾಗೂ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಇದನ್ನೂ ಓದಿ: PM Narendra Modi: ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

VISTARANEWS.COM


on

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ದೀದಿ ಭದ್ರಕೋಟೆಯನ್ನು ಧೂಳೀಪಟಗೈದು ಅಧಿಕಾರಕ್ಕೇರಿದ ಸುವೇಂದು ಅಧಿಕಾರಿ ಮುಖ್ಯಮಂತ್ರಿ ಪಟ್ಟಕ್ಕೇರುತ್ತಿದ್ದಂತೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಆರೋಗ್ಯವಂತ ಜಾನುವಾರುಗಳ ಹತ್ಯೆ ಮಾಡಿದರೆ ಶಿಕ್ಷೆ ನೀಡಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಪಶುವೈದ್ಯರು ನೀಡುವ ಫಿಟ್‌ನೆಸ್‌‍ ಪ್ರಮಾಣಪತ್ರವಿಲ್ಲದೆ ಹಸು, ಹೋರಿ, ಎಮ್ಮೆ ಮತ್ತು ಕರು ಸೇರಿ ಯಾವುದೇ ಪ್ರಾಣಿಯನ್ನು ಹತ್ಯೆ ಮಾಡುವಂತಿಲ್ಲ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಹಸು 14 ವರ್ಷ ಮೇಲ್ಪಟ್ಟಿದ್ದು, ಕೆಲಸ ಮಾಡಲು ಅಥವಾ ಸಂತಾನೋತ್ಪತ್ತಿ ಮಾಡಲು ಯೋಗ್ಯವಿಲ್ಲದಿದ್ದರೆ ಅಥವಾ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿದ್ದು, ಶಾಶ್ವತವಾಗಿ ಗುಣಪಡಿಸಲು ಸಾಧ್ಯವಾಗದಿದ್ದರೆ ಮಾತ್ರ ಸ್ಥಳೀಯ ನಾಗರಿಕ ಅಧಿಕಾರಿಗಳು ಅಥವಾ ಪಶುವೈದ್ಯರು ಜಂಟಿಯಾಗಿ ಪ್ರಮಾಣ ಪತ್ರವನ್ನು ನೀಡಬಹುದಾಗಿದೆ.
ನಿಯಮಗಳನ್ನು ಜಾರಿಗೊಳಿಸಲು ಅಧಿಕಾರಿಗಳು ನಡೆಸುವ ಯಾವುದೇ ಪರಿಶೀಲನೆಯನ್ನು ವ್ಯಕ್ತಿಗಳು ತಡೆಯುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಯಾವುದೇ ರೀತಿಯ ಕಾನೂನು ಉಲ್ಲಂಘನೆಗಳಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 1 ಸಾವಿರ ರೂಪಾಯಿವರೆಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Continue Reading

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading

Latest

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

VISTARANEWS.COM


on

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಇಂದು ಈ ಕುರಿತು ಅಧಿಕೃತ ಘೋಷಣೆ ಮಾಡಿದೆ. ವಿ.ಡಿ. ಸತೀಶನ್‌ ಜೊತೆಗೆ ಕೆ.ಸಿ.ವೇಣುಗೋಪಾಲ್‌, ರಮೇಶ್‌ ಚೆನ್ನಿತಲ ಅವರು ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿದ್ದರು.
ಮೇ 4 ರಂದು ಕೇರಳಂ ವಿಧಾನಸಭಾ ಚುನಾವಣಾ ಫಲಿತಾಂಶ ಘೋಷಣೆಯಾದ್ರೂ ಸಿಎಂ ಸ್ಥಾನಕ್ಕೆ ಭಾರಿ ಪೈಪೋಟಿ ಇದ್ದ ಕಾರಣ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿತ್ತು.
ಇದೀಗ ಕೇರಳ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರ ಹೆಸರು ಘೋಷಣೆಯಾಗ್ತಿದ್ದಂತೆ ಅವರ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ವಿ.ಡಿ.ಸತೀಶನ್‌ ಪರವೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದೇ ಪರವೂರು ವಿಧಾನಸಭಾ ಕ್ಷೇತ್ರದಿಂದ ಸತೀಶನ್‌ 6 ಬಾರಿ ಗೆಲುವು ಸಾಧಿಸಿದ್ದಾರೆ. 2021 ರಲ್ಲಿ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

Continue Reading

Latest

ನೀಟ್‌ ಪರೀಕ್ಷೆ ರದ್ದು: ಕೇಂದ್ರ ಸರ್ಕಾರವೇ ಹೊಣೆ- ಡಾ.ಎಂ.ಸಿ.ಸುಧಾಕರ್‌

VISTARANEWS.COM


on

ನೀಟ್ ಪರೀಕ್ಷೆ ರದ್ದು ವಿಚಾರದಲ್ಲಿ ಕೇಂದ್ರ ಸರ್ಕಾರವೇ ಹೊಣೆ ಹೊರಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್‌ ಕಿಡಿಕಾರಿದ್ದಾರೆ.

ಶ್ರಮವಹಿಸಿ ವಿದ್ಯಾರ್ಥಿಗಳು ಬರೆದಿದ್ದ ನೀಟ್‌ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ. ಇದರ ಸಂಪೂರ್ಣ ಹೊರೆಯನ್ನು ನೇರವಾಗಿ ಕೇಂದ್ರ ಸರ್ಕಾರ ಹೊರಬೇಕು ಎಂದಿದ್ದಾರೆ.
ವಿದ್ಯಾರ್ಥಿಗಳು ಕಷ್ಟಪಟ್ಟು ಪರೀಕ್ಷೆ ಬರೆದಿದ್ದು, ಅವರ ಬಾಳಲ್ಲಿ ಯಾರೂ ಚೆಲ್ಲಾಟವಾಡಬಾರದು. ನೀಟ್‌ ಪರೀಕ್ಷೆ ವೈಫಲ್ಯದ ಕುರಿತು ಬಿಜೆಪಿ ನಾಯಕರು ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.
ಎನ್‌ಟಿಎ ಸಾಕಷ್ಟು ಬಾರಿ ನೀಟ್‌ ಪರೀಕ್ಷೆ ನಡೆಸಲು ವಿಫಲವಾಗಿದ್ದು, ಅಯಾ ರಾಜ್ಯಗಳಿಗೆ ವೈದ್ಯಕೀಯ ಪ್ರವೇಶ ಪರೀಕ್ಷೆ ‌ನಡೆಸಲು ಅವಕಾಶ ‌ಮಾಡಿಕೊಡಬೇಕು. ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರ ಭವಿಷ್ಯದ ಜೊತೆ ಚೆಲ್ಲಾಟವಾಡಬಾರದು. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರು, ಸಂಸದ ತೇಜಸ್ವಿ ಸೂರ್ಯ ಈ ಬಗ್ಗೆ ಮಾತನಾಡಬೇಕು. ಜೊತೆಗೆ, ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಸಚಿವ ಸುಧಾಕರ್ ಆಗ್ರಹಿಸಿದ್ದಾರೆ.

Continue Reading
Advertisement
Latest17 hours ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest18 hours ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ18 hours ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest19 hours ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest21 hours ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest23 hours ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest2 days ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

ಅವಿಭಾಗೀಕೃತ2 days ago

ಬೆಂಗಳೂರಿಗೆ ʼಆರನೇ ಗ್ಯಾರಂಟಿʼ – ʼನನ್ನ ಖಾತೆ ನನ್ನ ಹಕ್ಕುʼ

ಪ್ರಮುಖ ಸುದ್ದಿ2 days ago

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

ಸಿನಿಮಾ2 days ago

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌