Disqualification Verdict: ಶಿಂಧೆ ಬಣವೇ ರಿಯಲ್ ಶಿವಸೇನೆ ಎಂದು ಸ್ಪೀಕರ್ ತೀರ್ಪು ಕೊಟ್ಟಿದ್ದೇಕೆ? - Vistara News

ದೇಶ

Disqualification Verdict: ಶಿಂಧೆ ಬಣವೇ ರಿಯಲ್ ಶಿವಸೇನೆ ಎಂದು ಸ್ಪೀಕರ್ ತೀರ್ಪು ಕೊಟ್ಟಿದ್ದೇಕೆ?

Disqualification Verdict: 1999ರ ಶಿವಸೇನೆಯ ಸಂವಿಧಾನದ ಪ್ರಕಾರ, ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ಏಕನಾಥ ಶಿಂಧೆ ಅವರನ್ನು ಕಿತ್ತು ಹಾಕುವ ಅಧಿಕಾರ ಉದ್ಧವ್ ಠಾಕ್ರೆ ಅವರಿಗೆ ಇರಲಿಲ್ಲ.

VISTARANEWS.COM


on

Disqualification Verdict, Why did speaker says faction of Eknath Shinde is real Shiv Sena
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮುಂಬೈ: ಕಳೆದ ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಬಾಕಿ ಉಳಿದಿದ್ದ ಶಿವಸೇನೆ (Factions of Shiv Sena) ಎರಡೂ ಬಣಗಳ ಶಾಸಕರ ಅನರ್ಹತೆಯ ಕುರಿತ ಅರ್ಜಿಗಳಿಗೆ (Disqualification Appeal) ಸಂಬಂಧಿಸಿದಂತೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ (Speaker Rahul Narvekar) ಅವರು ಬುಧವಾರ ತೀರ್ಪು ಪ್ರಕಟಿಸಿದ್ದಾರೆ. ಸಿಎಂ ಏಕನಾಥ ಶಿಂಧೆ ನೇತೃತ್ವದ ಬಣವೇ ನಿಜವಾದ ಶಿವಸೇನೆಯಾಗಿದೆ (Real Shiv Sena) ಮತ್ತು ಬಹುಮತವನ್ನು ಹೊಂದಿದೆ. ಹಾಗಾಗಿ, ಶಾಸಕರನ್ನು ಅನರ್ಹಗೊಳಿಸುವುದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ತಮ್ಮ ಈ ನಿರ್ಧಾರಕ್ಕೆ ಸ್ಪೀಕರ್ ಅವರು ಸುದೀರ್ಘ ವಿವರಣೆ ನೀಡಿದ್ದಾರೆ. ತಾವೇಕೆ, ಶಿಂಧೆ ಬಣವನ್ನು ರಿಯಲ್ ಶಿವಸೇನೆ ಎಂದು ಪರಿಗಣಿಸಿದೆ ಎಂಬುದಕ್ಕೆ ಕಾನೂನು ಬದ್ಧ ಅಂಶಗಳನ್ನು ಗುರುತಿಸಿದ್ದಾರೆ.

ಸಹಜವಾಗಿಯೇ, ಉದ್ದವ್ ಠಾಕ್ರೆ ಬಣವು ಸ್ಪೀಕರ್ ಅವರ ಆದೇಶವನ್ನು ತಿರಸ್ಕರಿಸಿದ್ದು, ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ಹೇಳಿದೆ. ಅಲ್ಲದೇ, ಇದು ಪ್ರಜಾಪ್ರಭುತ್ವದ ಕೊಲೆ ಮತ್ತು ಸ್ಪೀಕರ್ ಅವರು ಷಡ್ಯಂತ್ರ ನಡೆಸಿದ್ದಾರೆಂದು ಆರೋಪಿಸಿದೆ.

ಸ್ಪೀಕರ್ ನೀಡಿದ ಕಾರಣಗಳೇನು?

-ಪಕ್ಷದ ಸಂವಿಧಾನವು ನಿಜವಾದ ನಾಯಕ ಯಾರು ಎಂಬುದನ್ನು ತಿಳಿಸುತ್ತದೆ. ಹಾಗಾಗಿ, ಶಿವಸೇನೆಯ ಎರಡು ಬಣಗಳ ಪೈಕಿ ನಿಜವಾದ ಶಿವಸೇನೆ ಯಾವುದು ಎಂಬುದನ್ನು ನಿರ್ಧರಿಸಲು ಪಕ್ಷದ ಸಂವಿಧಾನವು ಸೂಕ್ತ ದಾಖಲೆಯಾಗಿದೆ.
-ಅವಿಭಜಿತ ಶಿವಸೇನೆಯ ಸಂವಿಧಾನವನ್ನು 2018ರಲ್ಲಿ ತಿದ್ದುಪಡಿ ಮಾಡಲಾಗಿದೆ. ಆದರೆ, ಅದು ಎಲ್ಲೂ ದಾಖಲಾಗಿಲ್ಲ. ಆದ್ದರಿಂದ ಭಾರತೀಯ ಚುನಾವಣಾ ಆಯೋಗದಲ್ಲಿರುವ ಶಿವಸೇನೆ ಪಕ್ಷದ 1999ರ ಸಂವಿಧಾನವನ್ನು ಪರಿಗಣಿಸಲಾಗಿದೆ. ಅಲ್ಲದೇ, 2018ರಲ್ಲಿ ಸಾಂಸ್ಥಿಕ ಚುನಾವಣೆಗಳೂ ನಡೆದಿರಲಿಲ್ಲ.
-2018ರ ಸಂವಿಧಾನದಲ್ಲಿ ನಾಯಕತ್ವ ರಚನೆಯಲ್ಲಿ ಪಕ್ಷ ಪ್ರಮುಖ್‌ನನ್ನು ಅತ್ಯುನ್ನತ ಅಧಿಕಾರಿ ಎಂದು ಉಲ್ಲೇಖಿಸಲಾಗಿದೆ. 2018ರ ನಾಯಕತ್ವ ರಚನೆಯು ಪಕ್ಷದ ಸಂವಿಧಾನಕ್ಕೆ ಅನುಗುಣವಾಗಿಲ್ಲ.
-ಆದರೆ, 1999ರ ಸಂವಿಧಾನ ಪ್ರಕಾರ ಪಕ್ಷದ ಅತ್ಯುನ್ನತ ಅಧಿಕಾರವನ್ನು, ಪಕ್ಷದ ಕಾರ್ಯಕಾರಿ ಮಂಡಳಿ ಹೊಂದಿದೆ ಹೊರತು ಪಕ್ಷ ಪ್ರಮುಖ್ ಅಲ್ಲ ಎಂದು ಸ್ಪೀಕರ್ ಅಭಿಪ್ರಾಯಪಟ್ಟಿದ್ದಾರೆ.
-ಪಕ್ಷದ ಸಂವಿಧಾನದ ಪ್ರಕಾರ, ಪಕ್ಷ ಪ್ರಮುಖ್‌ ಅವರಿಗೆ ಯಾವುದೇ ಅಪರಿಮಿತ ಅಧಿಕಾರಗಳಿಲ್ಲ. ಅವರು ರಾಷ್ಟ್ರೀಯ ಕಾರ್ಯಕಾರಿ ಮಂಡಳಿ ಜತೆ ಸಮಾಲೋಚಿಸಿ ನಿರ್ಧಾರ ಕೈಗೊಳ್ಳಬೇಕು.
-ಹಾಗಾಗಿ, ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ಉದ್ಧವ್ ಠಾಕ್ರೆ ಅವರನ್ನು ಕಿತ್ತು ಹಾಕುವ ಅಧಿಕಾರ ಉದ್ಧವ್ ಠಾಕ್ರೆ ಅವರಿಗೆ ಇಲ್ಲ. ಉದ್ಧವ್ ಅವರ ನಿರ್ಧಾರವು ಪಕ್ಷದ ನಿರ್ಧಾರವಲ್ಲ.
-ಪಕ್ಷವು ಹೋಳಾಗಿರುವಾಗ ಎರಡೂ ಕಡೆಯ ನಾಯಕರು ತಾವೇ ಮೂಲ ಪಕ್ಷವೆಂದು ಹೇಳಿಕೊಳ್ಳಬಹುದು. 2022ರ ಜೂನ್ ತಿಂಗಳಲ್ಲಿ ಪ್ರತಿಸ್ಪರ್ಧಿ ಬಣಗಳು ಹುಟ್ಟಿಕೊಂಡವು. ಶಿಂಧೆ ಗುಂಪು 54 ಶಾಸಕರಲ್ಲಿ 37 ಶಾಸಕರ ಬಹುಮತವನ್ನು ಹೊಂದಿತ್ತು ಎಂದು ಸ್ಪೀಕರ್ ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ.
-ಶಿಂಧೆ ಬಣವು ಬಿಜೆಪಿ ಪಕ್ಷದೊಂದಿಗೆ ಶಾಮೀಲಾಗಿ ವರ್ತಿಸಿದೆ ಎಂದು ಉದ್ಧವ್ ಬಣ ಹೇಳಿಕೊಂಡಿದೆ. ಆದರೆ ಉದ್ಧವ್ ಬಣವು ಈ ಆರೋಪಕ್ಕೆ ಯಾವುದೇ ಪುರಾವೆಗಳನ್ನು ಒದಗಿಸಿಲ್ಲವಾದ್ದರಿಂದ ಅದನ್ನು ಒಪ್ಪಿಕೊಳ್ಳಲಾಗುವುದಿಲ್ಲ.
-ಶಿಂಧೆ ಬಣವು ಯಾರ ಸಂಪರ್ಕಕ್ಕೂ ಸಿಗದಂತೆ ಅಜ್ಞಾತ ಸ್ಥಳಕ್ಕೆ ತೆರಳಿತು ಎಂದು ಉದ್ಧವ್ ಬಣವು ಆರೋಪಿಸಿದೆ. ಆದರೆ ಉದ್ಧವ್ ಬಣದ ಇಬ್ಬರು ನಾಯಕರು ಶಿಂಧೆ ಮತ್ತು ಇತರ ಶಾಸಕರನ್ನು ಗುವಾಹಟಿಯಲ್ಲಿ ಭೇಟಿಯಾಗಿದ್ದಾರೆ. ಹಾಗಾಗಿ, ಅಜ್ಞಾತರಾಗಿದ್ದರು ಎಂಬುದೇ ಅನರ್ಹತೆಗೆ ಕಾರಣವಾಗಲು ಸಾಧ್ಯವಿಲ್ಲ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನೂ ಓದಿ: Disqualification Verdict: ಸಿಎಂ ಶಿಂಧೆ ಬಣದ ಶಾಸಕರ ಅನರ್ಹತೆ ಇಲ್ಲ; ‘ಮಹಾ’ ಸ್ಪೀಕರ್ ತೀರ್ಪು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ತಮಿಳುನಾಡು: ಬಹುಮತ ಪಡೆಯಲು ದಳಪತಿ ಮುಂದಿರುವ ತಂತ್ರಗಳೇನು?

VISTARANEWS.COM


on

ವಿಜಯ್‌ ತಮಿಳುನಾಡಿನ ಮುಂದಿನ ಮುಖ್ಯಮಂತ್ರಿ. ಇದು ನಿಚ್ಚಳವಾಗುತ್ತಿದೆ. ಸರ್ಕಾರ ರಚನೆಗೆ ಈಗಾಗಲೇ ಟಿವಿಕೆ ಹಕ್ಕು ಮಂಡಿಸಿದೆ. ಎರಡು ವಾರಗಳಲ್ಲಿ ಬಹುಮತ ಸಾಬೀತು ಪಡಿಸುವುದಾಗಿಯೂ ಹೇಳಿದೆ. 234 ಸದಸ್ಯ ಬಲದ ತಮಿಳುನಾಡಿನ ಅಸೆಂಬ್ಲಿಯಲ್ಲಿ ಟಿವಿಕೆಗೆ ಸಿಕ್ಕಿದ್ದು 108 ಕ್ಷೇತ್ರ ಮಾತ್ರ. ಸರಳ ಬಹುಮತದ ನಂಬರ್‌ 118 ತಲುಪಲು ವಿಜಯ್‌ಗೆ ಇನ್ನೂ 10 ಶಾಸಕರು ಬೇಕು. ಬಹುಮತ ಸಾಬೀತು ಪಡಿಸುವುದಷ್ಟೇ ಅಲ್ಲ, ಭವಿಷ್ಯದಲ್ಲಿ ಸರ್ಕಾರವೂ ಸುಭದ್ರವಾಗಿರಬೇಕು. ಈ ನಿಟ್ಟಿನಲ್ಲಿ ನಟ ವಿಜಯ್‌ ಮುಂದಿರುವ ಆಯ್ಕೆಗಳೇನು?
1. ತಮಿಳುನಾಡಿನ ಸಣ್ಣ ಪಕ್ಷಗಳೊಂದಿಗೆ ಮೈತ್ರಿ:
ಹತ್ತು ಶಾಸಕರಿಗಾಗಿ ವಿಜಯ್‌ ತಮಿಳುನಾಡಿನ ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಬಹುದು. ಕಾಂಗ್ರೆಸ್‌ 5, ಪಿಎಂಕೆ 4, ಮುಸ್ಲಿಂ ಲೀಗ್‌ 2, ಸಿಪಿಐ 2, ವಿಸಿಕೆ 2, ಸಿಪಿಐಎಂ 2, ಡಿಎಂಡಿಕೆ 1, AMMKMNKZ 1 ಗೆದ್ದಿವೆ. ಈ ಎಲ್ಲಾ ಸಣ್ಣ ಪಕ್ಷಗಳನ್ನು ಸೇರಿಸಿದರೆ, ವಿಜಯ್‌ಗೆ 19 ಶಾಸಕರ ಬೆಂಬಲ ಸಿಗಲಿದೆ. ಕಾಂಗ್ರೆಸ್‌ ಈಗಾಗಲೇ ಟಿವಿಕೆಗೆ ಬೆಂಬಲದ ಮಾತುಗಳನ್ನಾಡಿದೆ.
೨. ಎಐಎಡಿಎಂಕೆ ಜೊತೆ ಮೈತ್ರಿ:
ಎಐಎಡಿಎಂಕೆ ಜೊತೆ ಟಿವಿಕೆ ಮೈತ್ರಿಯ ಸಾಧ್ಯತೆಯೂ ಎರಡನೇ ಆಯ್ಕೆ. ಬಿಜೆಪಿ ಹೊರತುಪಡಿಸಿ ಮೈತ್ರಿಗೆ ಟಿವಿಕೆ ಷರತ್ತು ಹಾಕಬಹುದು. ಎಐಎಡಿಎಂಕೆ 47 ಸ್ಥಾನಗಳನ್ನು ಗೆದ್ದಿದೆ. ಟಿವಿಕೆ-ಎಐಎಡಿಎಂಕೆ ಮೈತ್ರಿಯಾದರೆ ಸುಭದ್ರ ಸರ್ಕಾರ ನೀಡಬಹುದು.
೩. ಡಿಎಂಕೆ ಬಾಹ್ಯ ಬೆಂಬಲ ಸಾಧ್ಯತೆ
ಸಣ್ಣ ಪಕ್ಷಗಳೂ ಸಿಗಲಿಲ್ಲ. ಎಐಎಡಿಎಂಕೆ ಜೊತೆ ಮೈತ್ರಿ ಕುದುರಲಿಲ್ಲ ಎಂದಾದರೆ, ಡಿಎಂಕೆ ಬಾಹ್ಯ ಬೆಂಬಲ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಎಐಎಡಿಎಂಕೆಯನ್ನು ಅಧಿಕಾರದಿಂದ ದೂರ ಇಡಲು, ಡಿಎಂಕೆ ಈ ನಿರ್ಧಾರಕ್ಕೆ ಬಂದರೂ ಬರಬಹುದು ಎನ್ನಲಾಗುತ್ತಿದೆ. ಆದರೆ, ಡಿಎಂಕೆ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಲಿದೆ ಎಂದು ಈಗಾಗಲೇ ಸ್ಟಾಲಿನ್‌ ಹೇಳಿದ್ದಾರೆ.

Continue Reading

Latest

ಪಶ್ಚಿಮ ಬಂಗಾಳದಲ್ಲಿ ಕೇಸರಿ, ತಮಿಳುನಾಡಲ್ಲಿ ದಳಪತಿ, ಕೇರಳಂನಲ್ಲಿ ಕಾಂಗ್ರೆಸ್‌ ದರ್ಬಾರ್‌

VISTARANEWS.COM


on

ಪಂಚರಾಜ್ಯಗಳ ಫಲಿತಾಂಶ ಹೊರಬಿದ್ದಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಭರ್ಜರಿ ಗೆಲುವಿನ ನಗೆ ಬೀರಿದೆ. ತಮಿಳುನಾಡಿನಲ್ಲಿ ಟಿವಿಕೆ ಅಚ್ಚರಿ ಮೂಡಿಸಿದ್ದು, ಅಧಿಕಾರದ ಸನಿಹದಲ್ಲಿದೆ. ಕೇರಳಂ ಸೋಲಿನೊಂದಿಗೆ ಭಾರತದಲ್ಲಿ ಎಡರಂಗದ ಅಧಿಕಾರ ಕೊನೆಗೊಂಡಿದೆ. ಮಲೆಯಾಳಿಗಳ ರಾಜ್ಯದಲ್ಲಿ ಹತ್ತು ವರ್ಷಗಳ ಬಳಿಕ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಅಧಿಕಾರಕ್ಕೆ ಬಂದಿದೆ.
ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಮಮತಾ ಆಡಳಿತವನ್ನು ಬಿಜೆಪಿ ಕೊನೆಗಾಣಿಸಿದೆ. ಪಶ್ಚಿಮ ಬಂಗಾಳ ಗೆಲುವಿಗಾಗಿ ಹಠವಿಡಿದ ಬಿಜೆಪಿ ಕೊನೆಗೂ ಯಶ ಸಾಧಿಸಿದೆ. 294 ಸದಸ್ಯ ಬಲದ ಪಶ್ಚಿಮ ಬಂಗಾಳ ಅಸೆಂಬ್ಲಿಯಲ್ಲಿ, ಬಿಜೆಪಿ ಮೂರನೇ ಎರಡು ಭಾಗದಷ್ಟು ಸೀಟುಗಳನ್ನು ಗೆದ್ದಿದೆ. ಕಾಂಗ್ರೆಸ್‌, ಎಡರಂಗ ತಲಾ ಎರಡು ಸೀಟುಗಳಿಗೆ ತೃಪ್ತಿಪಡಬೇಕಾಗಿದೆ. ಇದು ಬಿಜೆಪಿಯ ಅತಿದೊಡ್ಡ ಗೆಲುವಾಗಿದೆ.
ನಟ ವಿಜಯ್‌ ಸುನಾಮಿಗೆ ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಕೊಚ್ಚಿ ಹೋಗಿದೆ. ಸ್ಟಾಲಿನ್‌, ಉದಯನಿಧಿ ಸ್ಟಾಲಿನ್‌ ಸೇರಿದಂತೆ ಘಟಾನುಘಟಿ ನಾಯಕರು ನೆಲಕಚ್ಚಿದ್ದಾರೆ. ನಟ ವಿಜಯ್‌ ನೇತೃತ್ವದ ಟಿವಿಕೆ ತನ್ನ ಚೊಚ್ಚಲ ಚುನಾವಣೆಯಲ್ಲೇ ಅಧಿಕಾರಕ್ಕೆ ಹತ್ತಿರದಲ್ಲಿದೆ. 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಟಿವಿಕೆ 108 ಕ್ಷೇತ್ರಗಳನ್ನು ಗೆದ್ದಿದೆ. ಡಿಎಂಕೆ 79 ಮತ್ತು ಎಐಎಡಿಎಂಕೆ 54 ಕಡೆ ಗೆಲುವು ದಾಖಲಿಸಿವೆ. ದ್ರಾವಿಡ ನಾಡಲ್ಲಿ ನಟ ವಿಜಯ್‌ ಇತಿಹಾಸ ಸೃಷ್ಟಿಸಿದ್ದಾರೆ.
ಇನ್ನು ಕೇರಳಂನಲ್ಲಿ ಆಡಳಿತ ವಿರೋಧಿ ಅಲೆಗೆ ಆಡಳಿತಾರೂಢ ಲೆಫ್ಟ್‌ ಡೆಮಾಕ್ರಾಟಿಕ್‌ ಫ್ರಂಟ್‌ ನೆಲಕಚ್ಚಿದೆ. ಕೇರಳಂ ಫಲಿತಾಂಶ ಮಾತ್ರ ಕಾಂಗ್ರೆಸ್‌ ಖುಷಿಗೆ ಕಾರಣವಾಗಿದೆ. 140 ಸದಸ್ಯ ಬಲದ ವಿಧಾನಸಭೆಯಲ್ಲಿ ಯುಡಿಎಫ್‌ 100 ಕ್ಷೇತ್ರಗಳನ್ನು ಗೆದ್ದಿದೆ. ಎಲ್‌ಡಿಎಫ್‌ 35ಕ್ಕೆ ಸ್ಥಾನಗಳಿಗೆ ಸೀಮಿತವಾಗಿದೆ. ಇದರೊಂದಿಗೆ ದೇಶದಲ್ಲಿ ಎಡರಂಗದ ಆಡಳಿತ ಅಂತ್ಯವಾಗಿದೆ.
ಅಸ್ಸಾಂನಲ್ಲಿ ಬಿಜೆಪಿ ಗೆಲುವಿನ ಹ್ಯಾಟ್ರಿಕ್‌ ಬಾರಿಸಿದೆ. ಹಿಮಂತ ಬಿಸ್ವ ಶರ್ಮಾ ನಾಯಕತ್ವದ ಮುಂದೆ ಗೌರವ್‌ ಗೊಗೊಯಿ ನೇತೃತ್ವದ ಕಾಂಗ್ರೆಸ್‌ ಹೀನಾಯವಾಗಿ ಸೋತಿದೆ. 126 ಸದಸ್ಯ ಬಲದ ಅಸ್ಸಾಂ ಅಸೆಂಬ್ಲಿಯಲ್ಲಿ ಬಿಜೆಪಿ 102 ಸ್ಥಾನಗಳಲ್ಲಿ ಜಯಭೇರಿ ದಾಖಲಿಸಿದೆ. ಕಾಂಗ್ರೆಸ್‌ 21 ಕ್ಷೇತ್ರಗಳನ್ನು ಗೆದ್ದುಕೊಂಡಿದೆ.
ಇನ್ನು ಪುದುಚೇರಿಯಲ್ಲಿ ಎನ್‌ಡಿಎ ಅಧಿಕಾರ ಉಳಿಸಿಕೊಂಡಿದೆ. 30 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಎನ್‌ಡಿಎ 18 ಸ್ಥಾನಗಳನ್ನು ಗೆದ್ದಿದೆ. ಡಿಎಂಕೆ ಮೈತ್ರಿಕೂಟ 7 ಹಾಗೂ ಟಿವಿಕೆಯ ಮೂವರು ಗೆಲುವಿನ ನಗೆ ಬೀರಿದ್ದಾರೆ.

Continue Reading

Latest

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

VISTARANEWS.COM


on

ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಪ್ರಚಂಡ ಜಯಭೇರಿ ಸಾಧ್ಯತೆ, ಪಶ್ಚಿಮ ಬಂಗಾಳದಲ್ಲಿ ದೀದಿಗೆ ಸಮಬಲದ ಟಕ್ಕರ್‌, ತಮಿಳುನಾಡು-ಕೇರಳಂನಲ್ಲಿ ವೋಟ್‌ ಶೇರ್‌ ಹೆಚ್ಚಳ – ಪಂಚ ರಾಜ್ಯಗಳ ಎಕ್ಸಿಟ್‌ ಪೋಲ್‌ನಲ್ಲಿ ಬಿಜೆಪಿ ಕುರಿತ ಈ ಸಮೀಕ್ಷೆ ನಿಜವಾದರೆ ಅದು ಮತ್ತೊಮ್ಮೆ ಮೋದಿ ಮ್ಯಾಜಿಕ್‌ ಎಂದೇ ಹೇಳಬಹುದು.
ಪಂಚ ರಾಜ್ಯಗಳ ಚುನಾವಣಾ ಸನ್ನಿವೇಶವೇ ಮೋದಿ ನೇತೃತ್ವದ ಬಿಜೆಪಿಗೆ ಒಂದು ಸವಾಲಾಗಿತ್ತು. ಮಧ್ಯಪ್ರಾಚ್ಯ ಯುದ್ಧದ ಪರಿಣಾಮಗಳು ಪ್ರಧಾನಿ ಮೋದಿಯವರಿಗೆ ಅತಿದೊಡ್ಡ ಸವಾಲು ಸೃಷ್ಟಿಸಿತ್ತು. ಏಕಾಏಕಿ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ, ಹೊಟೇಲು-ಇತರ ಉದ್ಯಮಗಳಿಗೆ ಕಮರ್ಶಿಯಲ್‌ ಗ್ಯಾಸ್‌ ಪೂರೈಕೆ ಬುಡಮೇಲು, ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ. ಇವೆಲ್ಲಾ ಚುನಾವಣೆಯ ಮುಖ್ಯ ವಿಷಯಗಳಾಗಿದ್ದವು. ಹರಿಯಾಣ, ಮಹಾರಾಷ್ಟ್ರ, ದೆಹಲಿ, ಬಿಹಾರ ಗೆಲುವಿನ ನಂತರ ಅಸ್ಸಾಂ, ಪುದುಚೇರಿ, ಮುಖ್ಯವಾಗಿ ಪಶ್ಚಿಮ ಬಂಗಾಳವನ್ನು ಗೆಲ್ಲಲ್ಲೇ ಬೇಕಾದ ಹಠಕ್ಕೆ ಬಿಜೆಪಿ ಬಿದ್ದಿತ್ತು. ಈ ಗೆಲುವಿಗೆ ಬಿಜೆಪಿ ಅವಲಂಬಿಸಿದ್ದು ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನು. ಸಂಕಷ್ಟದ ಕಾಲದಲ್ಲಿ ಮೋದಿ ಸರ್ಕಾರ ನಿರ್ವಹಿಸಿದ ರೀತಿ ಜನ ಮೆಚ್ಚುಗೆಗೆ ಪಾತ್ರವಾಗಿತ್ತು. ಗೃಹ ಬಳಕೆ ಗ್ಯಾಸ್‌ ಪೂರೈಕೆ ವ್ಯತ್ಯಯವಾಗಲು ಮೋದಿ ಸರ್ಕಾರ ಬಿಡಲಿಲ್ಲ. ಬಹುತೇಕ ದೇಶಗಳು ಪೆಟ್ರೋಲ್‌, ಡೀಸೆಲ್‌ ಬೆಲೆ ಶೇಕಡಾ 20ರಿಂದ 30 ರಷ್ಟು ಏರಿಕೆ ಮಾಡಿದರೂ, ಮೋದಿ ಸರ್ಕಾರ ಸಾಧಾರಣ ಪೆಟ್ರೋಲ್‌ ಡೀಸೆಲ್‌ ಬೆಲೆ ಏರಿಸಲಿಲ್ಲ. ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ನೇರ ಜನರ ಮೇಲೆ ಬೀಳಲು ಮೋದಿ ಸರ್ಕಾರ ಬಿಡಲಿಲ್ಲ.
ಪ.ಬಂಗಾಳ ಗೆದ್ದರೆ ಅತಿ ದೊಡ್ಡ ಸಾಧನೆ:
ದೀದಿ ನಾಡನ್ನು ಗೆಲ್ಲಲು ಬಿಜೆಪಿ ಕಳೆದ 15 ವರ್ಷಗಳಿಂದ ಶಕ್ತಿ ಮೀರಿ ಶ್ರಮಿಸುತ್ತಿದೆ. ಈ ಸಲ, ದೀದಿ ನಾಡಲ್ಲಿ ಮೋದಿ ಹವಾ ಸೃಷ್ಟಿಯಾಗಿದೆ ಎಂದೇ ಎಕ್ಸಿಟ್‌ ಪೋಲ್‌ಗಳು ಹೇಳುತ್ತಿವೆ. ಬಂಗಾಳವನ್ನು ಗೆದ್ದರೆ ಬಿಜೆಪಿಯ ದಿಗ್ವಿಜಯದ ಪಟ್ಟಿಯಲ್ಲೊಂದು ಮೈಲಿಗಲ್ಲು. ಮೋದಿ ಜನಪ್ರಿಯತೆ ಕಡಿಮೆಯಾಗಿಲ್ಲ, ಬದಲಿಗೆ ಇನ್ನಷ್ಟು ಗಟ್ಟಿಯಾಗುತ್ತಿದೆ ಎನ್ನುವುದರ ಸೂಚಕ.
ಇನ್ನು ಪುದುಚೇರಿ, ತಮಿಳುನಾಡು, ಕೇರಳಂನಲ್ಲೂ ಮೋದಿ ಜನಪ್ರಿಯತೆ ಇನ್ನಷ್ಟು ಹೆಚ್ಚಾಗಿರೋದು ಎಕ್ಸಿಟ್‌ ಪೋಲ್‌ ದತ್ತಾಂಶಗಳು ಹೇಳುತ್ತಿವೆ. ತಮಿಳುನಾಡು, ಕೇರಳಂನಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಸಾಧ್ಯತೆಗಳು ಇಲ್ಲದೇ ಹೋದರೂ ಕೂಡಾ, ಬಿಜೆಪಿಯ ಮತ ಪ್ರಮಾಣ ಏರಿಕೆಯಾಗಿದೆ ಎನ್ನುತ್ತಿವೆ ಸಮೀಕ್ಷೆಗಳು.
ಹಾಗೇ ನೋಡಿದರೆ, ಜಾಗತಿಕ ಮಟ್ಟದಲ್ಲಿ ಮೋದಿ ಅತಿ ಜನಪ್ರಿಯ ವ್ಯಕ್ತಿ. ಮಾರ್ಚ್‌ 2026ರ ಅವಧಿಯಲ್ಲಿ ಮೋದಿ ಅಪ್ರೂವಲ್‌ ರೇಟ್‌ ಶೇ 70ರಷ್ಟಿತ್ತು. ವಿಶ್ವದ ಜನಪ್ರಿಯ ನಾಯಕರ ಸಾಲಿನಲ್ಲಿ ಪ್ರಧಾನಿ ಮೋದಿಯೇ ಮೊದಲಿಗರಾಗಿದ್ದಾರೆ.

Continue Reading

Latest

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

VISTARANEWS.COM


on

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

ಪಶ್ಚಿಮ ಬಂಗಾಳದ ಫಾಲ್ಟಾ ವಿಧಾನಸಭಾ ಕ್ಷೇತ್ರದಲ್ಲಿ ಮತದಾನದ ವೇಳೆ ದೊಡ್ಡ ವಿವಾದ ಸೃಷ್ಟಿಯಾಗಿದೆ. ಹಲವಾರು ಮತಗಟ್ಟೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರದ (EVM) ಮೇಲಿರುವ ಬಿಜೆಪಿಯ ‘ಕಮಲ’ ಚಿಹ್ನೆಯ ಬಟನ್ ಅನ್ನು ಟೇಪ್‌ನಿಂದ ಮುಚ್ಚಲಾಗಿದೆ ಎಂದು ಬಿಜೆಪಿ ಮುಖಂಡ ಅಮಿತ್ ಮಾಳವೀಯ ವಿಡಿಯೋ ಸಹಿತ ಆರೋಪಿಸಿದ್ದಾರೆ. ಇದರಿಂದ ಮತದಾರರಿಗೆ ತೊಂದರೆಯಾಗಿದ್ದು, ಅಂತಹ ಮತಗಟ್ಟೆಗಳಲ್ಲಿ ಕೂಡಲೇ ಮರುಮತದಾನ ನಡೆಸಬೇಕು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಈ ಘಟನೆಯ ಬೆನ್ನಲ್ಲೇ ನಿರ್ಲಕ್ಷ್ಯ ತೋರಿದ ಐವರು ಪೊಲೀಸ್ ಅಧಿಕಾರಿಗಳನ್ನು ಆಯೋಗ ಅಮಾನತುಗೊಳಿಸಿದೆ.

ಇದೇ ವೇಳೆ, ಚುನಾವಣಾ ಅಧಿಕಾರಿ ಅಜಯ್ ಪಾಲ್ ಶರ್ಮಾ ಮತ್ತು ಟಿಎಂಸಿ ಅಭ್ಯರ್ಥಿ ಜಹಾಂಗೀರ್ ಖಾನ್ ನಡುವೆ ಭಾರಿ ಮಾತಿನ ಚಕಮಕಿ ನಡೆದಿದೆ. “ಮತದಾರರಿಗೆ ಬೆದರಿಕೆ ಹಾಕಿದರೆ ಅಳಬೇಡಿ, ಕಠಿಣ ಕ್ರಮ ಜರುಗಿಸುತ್ತೇವೆ” ಎಂದು ಅಧಿಕಾರಿ ಎಚ್ಚರಿಕೆ ನೀಡಿದರೆ, “ನೀವು ಸಿಂಗಮ್ ಆದರೆ ನಾನು ಪುಷ್ಪ, ಯಾವುದಕ್ಕೂ ಬಗ್ಗಲ್ಲ” ಎಂದು ಅಭ್ಯರ್ಥಿ ಸವಾಲು ಹಾಕಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಳಿಯ ಅಭಿಷೇಕ್ ಬ್ಯಾನರ್ಜಿ ಅವರ ಭದ್ರಕೋಟೆಯಾದ ಈ ಕ್ಷೇತ್ರದಲ್ಲಿ ಇಂತಹ ಅಕ್ರಮದ ಆರೋಪ ಕೇಳಿಬಂದಿರುವುದು ಭಾರಿ ಸಂಚಲನ ಮೂಡಿಸಿದೆ.

Continue Reading
Advertisement
Latest9 minutes ago

ತಮಿಳುನಾಡು: ಬಹುಮತ ಪಡೆಯಲು ದಳಪತಿ ಮುಂದಿರುವ ತಂತ್ರಗಳೇನು?

Latest20 hours ago

ಪಶ್ಚಿಮ ಬಂಗಾಳದಲ್ಲಿ ಕೇಸರಿ, ತಮಿಳುನಾಡಲ್ಲಿ ದಳಪತಿ, ಕೇರಳಂನಲ್ಲಿ ಕಾಂಗ್ರೆಸ್‌ ದರ್ಬಾರ್‌

Latest21 hours ago

ಕೇರಳಂ: ಯುಡಿಎಫ್‌ ಗೆಲುವಿನ ಹಿಂದಿನ ಏಳು ರಣತಂತ್ರ!

Latest21 hours ago

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

Latest22 hours ago

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

Latest24 hours ago

ದ್ರಾವಿಡ ನಾಡಲ್ಲಿ ʼದಳಪತಿʼ ಯುಗಾರಂಭ

Rakshit Shetty Richard Anthony Produce By Hombale
ಅವಿಭಾಗೀಕೃತ1 day ago

ಪಂಚರಾಜ್ಯ ವಿಧಾನಸಭಾ ಚುನಾವಣೆ , ಕರ್ನಾಟಕ ಉಪಚುನಾವಣೆ ಫಲಿತಾಂಶದ ಕ್ಷಣಕ್ಷಣದ ಅಪ್‌ಡೇಟ್‌

Latest2 days ago

‘ಟಾಕ್ಸಿಕ್’ ಸಿನಿಮಾದಲ್ಲಿ ಬೋಲ್ಡ್ ದೃಶ್ಯಕ್ಕೆ ಕತ್ತರಿ ಹಾಕಿ ಕಿಯಾರಾ ಅಡ್ವಾಣಿ ಮನವಿ?

Latest3 days ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest3 days ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌