Bilkis Bano Case | ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿದ್ದಕ್ಕೆ ನ್ಯಾಯಾಂಗವನ್ನು ದೂರದಿರಿ ಎಂದ ಜಸ್ಟಿಸ್ ಮೃದುಲಾ - Vistara News

ದೇಶ

Bilkis Bano Case | ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿದ್ದಕ್ಕೆ ನ್ಯಾಯಾಂಗವನ್ನು ದೂರದಿರಿ ಎಂದ ಜಸ್ಟಿಸ್ ಮೃದುಲಾ

ಬಿಲ್ಕಿಸ್‌ ಬಾನೊ (Bilkis Bano Case) ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದವರನ್ನು ಗುಜರಾತ್‌ ಸರಕಾರ ಬಿಡುಗಡೆ ಮಾಡಿದರೂ ಸಾರ್ವಜನಿಕರು ನ್ಯಾಯಾಂಗವನ್ನು ದೂರುತ್ತಿರುವುದಕ್ಕೆ ಜಸ್ಟಿಸ್‌ ಮೃದುಲಾ ಭಟ್ಕರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Bilkis Bano Case
ಬಿಲ್ಕಿಸ್‌ ಬಾನೊ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಬಿಲ್ಕಿಸ್‌ ಬಾನೊ (Bilkis Bano Case) ಮೇಲೆ ಸಾಮೂಹಿಕವಾಗಿ ಅತ್ಯಾಚಾರಗೈದ ಅಪರಾಧಿಗಳನ್ನು ಗುಜರಾತ್‌ ಸರಕಾರ ಬಿಡುಗಡೆ ಮಾಡಿರುವುದಕ್ಕೆ ಸಾರ್ವಜನಿಕರು ನ್ಯಾಯಾಂಗ ವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದಕ್ಕೆ ಅತ್ಯಾಚಾರಿಗಳಿಗೆ ವಿಧಿಸಿದ ಶಿಕ್ಷೆಯನ್ನು ಎತ್ತಿಹಿಡಿದ ಪೀಠದ ಸದಸ್ಯೆಯಾಗಿದ್ದ, ಬಾಂಬೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಮೃದುಲಾ ಭಟ್ಕರ್‌ (Justice Mridula Bhatkar) ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಸರಕಾರ ತೆಗೆದುಕೊಂಡಿರುವ ನಿರ್ಧಾರಕ್ಕೆ ನ್ಯಾಯಾಂಗವನ್ನು ದೂಷಿಸದಿರಿ” ಎಂದಿದ್ದಾರೆ.

“ಬಿಲ್ಕಿಸ್‌ ಬಾನೊ ಪ್ರಕರಣದಲ್ಲಿ ಜನರು ನ್ಯಾಯಾಂಗವನ್ನು ಏಕೆ ದೂಷಿಸುತ್ತಿದ್ದಾರೆ ಎಂಬುದೇ ತಿಳಿಯುತ್ತಿಲ್ಲ. ಸೆಷನ್ಸ್‌ ನ್ಯಾಯಾಲಯದಿಂದ ಹಿಡಿದು, ಸುಪ್ರೀಂ ಕೋರ್ಟ್‌ವರೆಗೆ ನ್ಯಾಯಾಲಯಗಳು ಜನರಿಗೆ ನ್ಯಾಯವನ್ನೇ ನೀಡುತ್ತಿವೆ. ಹೀಗಿದ್ದರೂ ಜನ ನ್ಯಾಯಾಂಗವನ್ನು ದೂರುತ್ತಿದ್ದಾರೆ. ಸರಕಾರ ತೆಗೆದುಕೊಂಡಿರುವ ನಿರ್ಧಾರಕ್ಕೆ ನ್ಯಾಯಾಲಯಗಳು ಹೇಗೆ ಹೊಣೆಯಾಗುತ್ತವೆ” ಎಂದು ಪ್ರಶ್ನಿಸಿದ್ದಾರೆ.

೨೦೦೨ರ ಗೋಧ್ರಾ ಹತ್ಯಾಕಾಂಡದ ವೇಳೆ ಬಿಲ್ಕಿಸ್‌ ಬಾನೊ ಮೇಲೆ ಅತ್ಯಾಚಾರಗೈದವರನ್ನು ಕಳೆದ ಆಗಸ್ಟ್‌ ೧೫ರಂದು ಗುಜರಾತ್‌ ಸರಕಾರವು ಬಿಡುಗಡೆ ಮಾಡಿದೆ. ೧೧ ಅತ್ಯಾಚಾರಿಗಳಿಗೆ ಅಧೀನ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ೨೦೧೬ರಲ್ಲಿ ನಿತ್ಯ ವಿಚಾರಣೆಗೆ ಕೈಗೆತ್ತಿಕೊಂಡಿತ್ತು.

ಇದೇ ನ್ಯಾಯಪೀಠದಲ್ಲಿ ಜಸ್ಟಿಸ್‌ಗಳಾದ ವಿಜಯಾ ತಾಹಿಲ್‌ರಮಣಿ ಹಾಗೂ ಮೃದುಲಾ ಭಟ್ಕರ್‌ ಇದ್ದರು. ೨೦೧೭ರಲ್ಲಿ ಇದೇ ನ್ಯಾಯಪೀಠವು ಅಧೀನ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿತ್ತು. ಬಾಂಬೆ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲೂ ಅರ್ಜಿ ಸಲ್ಲಿಕೆಯಾಗಿತ್ತು. ಆದರೆ, ಸರ್ವೋಚ್ಚ ನ್ಯಾಯಾಲಯವು ಅರ್ಜಿಯನ್ನು ನಿರಾಕರಿಸಿತ್ತು.

ಇದನ್ನೂ ಓದಿ | Bilkis Bano Case | ಅತ್ಯಾಚಾರ ಆರೋಪಿಗಳೆಲ್ಲ ಬ್ರಾಹ್ಮಣರು, ಒಳ್ಳೇ ಸಂಸ್ಕಾರವಿದೆ ಎಂದ ಬಿಜೆಪಿ ಶಾಸಕ !

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Kangana Ranaut : ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್​ ಬಳಿ ಇರುವ ಆಸ್ತಿ ಎಷ್ಟು? ಇಲ್ಲಿದೆ ಎಲ್ಲ ಮಾಹಿತಿ

Kangana Ranaut: ಕಂಗನಾ ಚಂಡೀಗಢದಲ್ಲಿ ನಾಲ್ಕು ವಾಣಿಜ್ಯ ಸಂಕೀರ್ಣಗಳು, ಮುಂಬೈನಲ್ಲಿ ವಾಣಿಜ್ಯ ಆಸ್ತಿ ಮತ್ತು ಮನಾಲಿಯಲ್ಲಿ ವಾಣಿಜ್ಯ ಕಟ್ಟಡ ಸೇರಿದಂತೆ ದೇಶಾದ್ಯಂತ ವಿವಿಧ ಆಸ್ತಿಗಳನ್ನು ಹೊಂದಿದ್ದಾರೆ. ಅವರು ಮುಂಬೈನಲ್ಲಿ 16 ಕೋಟಿ ರೂ ಮೌಲ್ಯದ ಮೂರು ಫ್ಲ್ಯಾಟ್ ಗಳನ್ನು ಮತ್ತು ಮನಾಲಿಯಲ್ಲಿ 15 ಕೋಟಿ ರೂ ಮೌಲ್ಯದ ಬಂಗಲೆಯನ್ನು ಹೊಂದಿದ್ದಾರೆ.

VISTARANEWS.COM


on

Kangana Ranaut
Koo

ಬೆಂಗಳೂರು: ಬಾಲಿವುಡ್ ನಟಿ ಮತ್ತು ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಲೋಕಸಭಾ (Lok Sabha Election) ಅಭ್ಯರ್ಥಿ ಕಂಗನಾ ರಣಾವತ್​ (Kangana Ranaut) ಮೇ 14 ರಂದು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ತಮ್ಮ ಚುನಾವಣಾ ಅಫಿಡವಿಟ್ ನಲ್ಲಿ 91 ಕೋಟಿ ರೂ.ಗಳ ಆಸ್ತಿಯನ್ನು ಘೋಷಿಸಿದ್ದಾರೆ. ಅವರ ಆಸ್ತಿಯಲ್ಲಿ 28.7 ಕೋಟಿ ರೂ.ಗಳ ಚರಾಸ್ತಿ ಮತ್ತು 62.9 ಕೋಟಿ ರೂ.ಗಳ ಸ್ಥಿರಾಸ್ತಿ ಸೇರಿವೆ. ಅವರ ಬಳಿ 5 ಕೋಟಿ ಮೌಲ್ಯದ 6.7 ಕೆಜಿ ಚಿನ್ನ, 50 ಲಕ್ಷ ಮೌಲ್ಯದ 60 ಕೆಜಿ ಬೆಳ್ಳಿ, 3 ಕೋಟಿ ಮೌಲ್ಯದ 14 ಕ್ಯಾರೆಟ್ ವಜ್ರದ ಆಭರಣಗಳಿವೆ. 2 ಲಕ್ಷ ನಗದು ಮತ್ತು ಸುಮಾರು 1.35 ಕೋಟಿ ರೂ.ಗಳ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರುವುದಾಗಿ ನಟಿ ಹಾಗೂ ರಾಜಕಾರಣಿ ಘೋಷಿಸಿದ್ದಾರೆ.

ಕಂಗನಾ ಚಂಡೀಗಢದಲ್ಲಿ ನಾಲ್ಕು ವಾಣಿಜ್ಯ ಸಂಕೀರ್ಣಗಳು, ಮುಂಬೈನಲ್ಲಿ ವಾಣಿಜ್ಯ ಆಸ್ತಿ ಮತ್ತು ಮನಾಲಿಯಲ್ಲಿ ವಾಣಿಜ್ಯ ಕಟ್ಟಡ ಸೇರಿದಂತೆ ದೇಶಾದ್ಯಂತ ವಿವಿಧ ಆಸ್ತಿಗಳನ್ನು ಹೊಂದಿದ್ದಾರೆ. ಅವರು ಮುಂಬೈನಲ್ಲಿ 16 ಕೋಟಿ ರೂ ಮೌಲ್ಯದ ಮೂರು ಫ್ಲ್ಯಾಟ್ ಗಳನ್ನು ಮತ್ತು ಮನಾಲಿಯಲ್ಲಿ 15 ಕೋಟಿ ರೂ ಮೌಲ್ಯದ ಬಂಗಲೆಯನ್ನು ಹೊಂದಿದ್ದಾರೆ.

ಕ್ವೀನ್ ಸಿನಿಮಾದ ನಟಿ ಮೂರು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. 98 ಲಕ್ಷ ರೂ ಮೌಲ್ಯದ ಬಿಎಂಡಬ್ಲ್ಯು, 58 ಲಕ್ಷ ರೂ ಮೌಲ್ಯದ ಮರ್ಸಿಡಿಸ್ ಬೆಂಜ್ ಮತ್ತು 3.91 ಕೋಟಿ ರೂ ಮೌಲ್ಯದ ಮರ್ಸಿಡಿಸ್ ಮೇಬ್ಯಾಕ್ ಅವರಲ್ಲಿದೆ. ಇದಲ್ಲದೆ, ಅವರು 53,000 ರೂ.ಗಳ ಮೌಲ್ಯದ ವೆಸ್ಪಾ ಸ್ಕೂಟರ್ ಅನ್ನು ಹೊಂದಿದ್ದಾರೆ. ಅಫಿಡವಿಟ್ ಪ್ರಕಾರ, ಅವರು 2 ಲಕ್ಷ ರೂ ನಗದು ಮತ್ತು 1.35 ಕೋಟಿ ರೂ.ಗಳ ಬ್ಯಾಂಕ್ ಬ್ಯಾಲೆನ್ಸ್ ಹೊಂದಿದ್ದಾರೆ, 17 ಕೋಟಿ ರೂ.ಗಳ ಸಾಲವಿದೆ.

ಇದನ್ನೂ ಓದಿ: Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

2022-23ರ ಆರ್ಥಿಕ ವರ್ಷದಲ್ಲಿ ಅವರ ಆದಾಯ 4 ಕೋಟಿ ರೂ.ಗಳಾಗಿದ್ದರೆ, ಹಿಂದಿನ ವರ್ಷ ಅವರು 12.3 ಕೋಟಿ ರೂಪಾಯಿ ಸಂಪಾದಿಸಿದ್ದಾರೆ. ಕಂಗನಾ ರಣಾವತ್ ಅವರ ಅಫಿಡವಿಟ್ ಪ್ರಕಾರ, ಅವರ ಹೆಸರಿನಲ್ಲಿ 50 ಜೀವ ವಿಮಾ ನಿಗಮ (ಎಲ್ಐಸಿ) ಪಾಲಿಸಿಗಳಿವೆ. ಅವರು ಎಂಟು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಚಂಡೀಗಢದ ಖಾಸಗಿ ಶಾಲೆಯಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರುವುದು ತನ್ನ ಅತ್ಯುನ್ನತ ಶೈಕ್ಷಣಿಕ ಅರ್ಹತೆ ಎಂದು ಅವರು ಘೋಷಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Bank Loan Fraud : 34,000 ಕೋಟಿ ರೂ. ಬ್ಯಾಂಕ್​​ ವಂಚನೆ, ಡಿಎಚ್​​ಎಫ್ಎಲ್​​​ ಮಾಜಿ ನಿರ್ದೇಶಕನ ಬಂಧನ

Bank Loan Fraud: ಧೀರಜ್ ವಾಧ್ವಾನ್ ಅವರನ್ನು ಚಿಕಿತ್ಸೆಗಾಗಿ ಲೀಲಾವತಿ ಆಸ್ಪತ್ರೆಗೆ ದಾಖಲಿಸಿದ್ದರಿಂದ ವೈದ್ಯಕೀಯ ಆಧಾರದ ಮೇಲೆ ಬಾಂಬೆ ಹೈಕೋರ್ಟ್​​ನಿಂದ ಪ್ರತ್ಯೇಕ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದಿದ್ದರು. ಬಾಂಬೆ ಹೈಕೋರ್ಟ್ ಈ ವರ್ಷದ ಮೇ 2 ರಂದು ಆ ಪ್ರಕರಣದಲ್ಲಿ ಜಾಮೀನನ್ನು ಕ್ರಮಬದ್ಧಗೊಳಿಸಿತ್ತು. ಸಿಬಿಐ ಬಂಧನದಿಂದ ಅವರ ರಕ್ಷಣೆಯನ್ನು ಒಂದು ವಾರ ವಿಸ್ತರಿಸಿತ್ತು. ರಕ್ಷಣಾ ಅವಧಿ ಮುಗಿದ ನಂತರ ಸಿಬಿಐ ವಾಧ್ವಾನ್ ಅವರನ್ನು ಬಂಧಿಸಲಾಗಿದೆ.

VISTARANEWS.COM


on

Bank Loan Fraud
Koo

ನವದೆಹಲಿ: 17 ಸದಸ್ಯರ ಬ್ಯಾಂಕ್ ಒಕ್ಕೂಟಕ್ಕೆ 34,000 ಕೋಟಿ ರೂ. ವಂಚನೆ ಮಾಡಿದ (Bank Loan Fraud) ಆರೋಪದ ಮೇಲೆ ಡಿಎಚ್ಎಫ್ಎಲ್ ಮಾಜಿ ನಿರ್ದೇಶಕ ಧೀರಜ್ ವಾಧ್ವಾನ್ ಅವರನ್ನು ಸಿಬಿಐ ಮಂಗಳವಾರ ಬಂಧಿಸಿದೆ ಸೋಮವಾರ ರಾತ್ರಿ ಮುಂಬೈನಲ್ಲಿ ವಶಕ್ಕೆ ಪಡೆದ ವಾಧ್ವಾನ್ ಅವರನ್ನು ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅದು ಅವರನ್ನು ಮಂಗಳವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಡಿಎಚ್ಎಫ್ಎಲ್​​ನ ಮಾಜಿ ನಿರ್ದೇಶಕ ಮತ್ತು ಅವರ ಸಹೋದರ ಕಪಿಲ್ ಅವರನ್ನು ಈ ಹಿಂದೆ ಜುಲೈ 19, 2022 ರಂದು ಬಂಧಿಸಲಾಗಿತ್ತು. ಅಕ್ಟೋಬರ್ 15, 2022 ರಂದು ಕಪಿಲ್ ಮತ್ತು ಧೀರಜ್ ಸೇರಿದಂತೆ 75 ಸಂಸ್ಥೆಗಳ ವಿರುದ್ಧ ಸಿಬಿಐ ಚಾರ್ಜ್​ಶೀಟ್​ ಸಲ್ಲಿಸಲಾಗಿತ್ತು. ತನಿಖೆ ಅಪೂರ್ಣವಾಗಿದೆ ಮತ್ತು ಸಲ್ಲಿಸಲಾದ ಚಾರ್ಜ್​ಶೀಟ್​ನಲ್ಲಿ ತೊಡಕುಗಳಿಗೆ ಎಂಬ ಆಧಾರದ ಮೇಲೆ ಅವರಿಗೆ ಡಿಸೆಂಬರ್ 3, 2022 ರಂದು ವಿಶೇಷ ನ್ಯಾಯಾಲಯದಿಂದ “ಶಾಸನಬದ್ಧ” ಜಾಮೀನು ನೀಡಿತ್ತು. ಈ ಆದೇಶವನ್ನು ದೆಹಲಿ ಹೈಕೋರ್ಟ್ ಕೂಡ ಎತ್ತಿಹಿಡಿದಿದೆ.

ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ವಿಶೇಷ ನ್ಯಾಯಾಲಯ ಮತ್ತು ಹೈಕೋರ್ಟ್ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮತ್ತು ಇತ್ಯರ್ಥಪಡಿಸಿದ ಕಾನೂನು ಸ್ಥಾನವನ್ನು ನಿರ್ಲಕ್ಷಿಸುವಲ್ಲಿ “ಕಾನೂನಿನ ಗಂಭೀರ ತಪ್ಪು ಮಾಡಿದೆ” ಎಂದು ಉಲ್ಲೇಖಿಸಿ ಜಾಮೀನು ಆದೇಶಗಳನ್ನು ಸರ್ವೋಚ್ಛ ರದ್ದುಗೊಳಿಸಿತು.

ಏತನ್ಮಧ್ಯೆ, ಧೀರಜ್ ವಾಧ್ವಾನ್ ಅವರನ್ನು ಚಿಕಿತ್ಸೆಗಾಗಿ ಲೀಲಾವತಿ ಆಸ್ಪತ್ರೆಗೆ ದಾಖಲಿಸಿದ್ದರಿಂದ ವೈದ್ಯಕೀಯ ಆಧಾರದ ಮೇಲೆ ಬಾಂಬೆ ಹೈಕೋರ್ಟ್​​ನಿಂದ ಪ್ರತ್ಯೇಕ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದಿದ್ದರು. ಬಾಂಬೆ ಹೈಕೋರ್ಟ್ ಈ ವರ್ಷದ ಮೇ 2 ರಂದು ಆ ಪ್ರಕರಣದಲ್ಲಿ ಜಾಮೀನನ್ನು ಕ್ರಮಬದ್ಧಗೊಳಿಸಿತ್ತು. ಸಿಬಿಐ ಬಂಧನದಿಂದ ಅವರ ರಕ್ಷಣೆಯನ್ನು ಒಂದು ವಾರ ವಿಸ್ತರಿಸಿತ್ತು. ರಕ್ಷಣಾ ಅವಧಿ ಮುಗಿದ ನಂತರ ಸಿಬಿಐ ವಾಧ್ವಾನ್ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಧೀರಜ್ ವಾಧ್ವಾನ್ ಮತ್ತು ಅವರ ಸಹೋದರ ಕಪಿಲ್ ವಾಧ್ವಾನ್ ಮತ್ತು ಅಜಯ್ ನವಂದರ್ ಈ ಆರೋಪಿಗಳಾಗಿದ್ದಾರೆ.

ಸಾಲ ವಾಪಸ್​ ಕೊಡದ ಡಿಎಚ್​ಎಲ್​ಎಫ್​

2010 ಮತ್ತು 2018 ರ ನಡುವೆ ಡಿಎಚ್ಎಫ್ಎಲ್​ಗೆ 42,871 ಕೋಟಿ ರೂ.ಗಳ ಸಾಲ ನೀಡಿದ್ದ 17 ಸದಸ್ಯರ ಸಾಲದಾತ ಒಕ್ಕೂಟದ ಮುಂಚೂಣಿ ಸಂಸ್ಥೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೀಡಿದ ದೂರಿನ ಮೇರೆಗೆ ಸಿಬಿಐ ವಾಧ್ವಾನ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿತ್ತು.

ಕಪಿಲ್ ಮತ್ತು ಧೀರಜ್ ವಾಧ್ವಾನ್ ಇತರರೊಂದಿಗೆ ಕ್ರಿಮಿನಲ್ ಪಿತೂರಿ ಮಾಡಿದ್ದು ಸತ್ಯ ಮರೆ ಮಾಚಲಾಗಿದೆ ಎಂದು ಹೇಳಲಾಗಿದೆ. ಕ್ರಿಮಿನಲ್ ನಂಬಿಕೆ ಉಲ್ಲಂಘನೆ ಮಾಡಿದ್ದಾರೆ ಮತ್ತು 2019 ರ ಮೇ ತಿಂಗಳಿನಿಂದ ಸಾಲ ಮರುಪಾವತಿಯಲ್ಲಿ ವಿಫಲರಾಗುವ ಮೂಲಕ ಒಕ್ಕೂಟಕ್ಕೆ 34,615 ಕೋಟಿ ರೂ.ಗಳನ್ನು ವಂಚಿಸಲಾಗಿದೆ. ಅಲ್ಲದೆ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಸಿಬಿಐ ತನ್ನ ಚಾರ್ಜ್​ಶೀಟ್​ನಲ್ಲಿ ಆರೋಪಿಸಿದೆ.

Continue Reading

ಪ್ರಮುಖ ಸುದ್ದಿ

Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ದೆಹಲಿಯ ಅವರ ಮನೆಯಲ್ಲಿ ಕಾಯುತ್ತಿದ್ದಾಗ ಕೇಜ್ರಿವಾಲ್ ಅವರ ಸಹಾಯಕ ಸ್ವಾತಿ ಮಲಿವಾಲ್ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಒಪ್ಪಿಕೊಂಡಿದ್ದಾರೆ.

VISTARANEWS.COM


on

Swati Maliwal
Koo

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಿಎಂ ನಿವಾಸದೊಳಗೆ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಹಿಳಾ ಆಯೋಗದ ಮಾಜಿ ಮುಖ್ಯಸ್ಥೆ ಸ್ವಾತಿ ಮಾಲಿವಾಲ್ (Swati Maliwal ) ಅರೋಪಿಸಿದ ಮರುದಿನ ಆಮ್ ಆದ್ಮಿ ಪಕ್ಷ (ಎಎಪಿ) ಮಂಗಳವಾರ ಈ ಮಾಹಿತಿಯನ್ನು ಒಪ್ಪಿಕೊಂಡಿದೆ. ಎಎಪಿ ಮುಖ್ಯಸ್ಥರ ಸಹಾಯಕ ತಪ್ಪು ಮಾಡಿರುವುದು ಸತ್ಯ ಕೇಜ್ರಿವಾಲ್ ಅವರು ಈ ವಿಷಯವನ್ನು ಗಮನಿಸಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಎಎಪಿ ಹೇಳಿದೆ.

ಹಿರಿಯ ಎಎಪಿ ನಾಯಕಿ ಮತ್ತು ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಸೋಮವಾರ ಬೆಳಿಗ್ಗೆ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ ತೆರಳಿ ಅರವಿಂದ್ ಕೇಜ್ರಿವಾಲ್ ಅವರ ವೈಯಕ್ತಿಕ ಸಹಾಯಕ ಬಿಭವ್ ಕುಮಾರ್ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಆದರೆ, ಅವರು ಅಧಿಕೃತ ದೂರು ದಾಖಲಿಸಿರಲಿಲ್ಲ. ಈ ಮುಜುಗರದ ವಿವಾದದ ಬಗ್ಗೆ ಸ್ವಾತಿ ಮಲಿವಾಲ್ ಅಥವಾ ಆಮ್ ಆದ್ಮಿ ಪಕ್ಷ (ಎಎಪಿ) ಸೋಮವಾರ ಪ್ರತಿಕ್ರಿಯಿಸಲಿಲ್ಲ.

ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ದೆಹಲಿಯ ಅವರ ಮನೆಯಲ್ಲಿ ಕಾಯುತ್ತಿದ್ದಾಗ ಕೇಜ್ರಿವಾಲ್ ಅವರ ಸಹಾಯಕ ಸ್ವಾತಿ ಮಾಲಿವಾಲ್ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಒಪ್ಪಿಕೊಂಡಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರ ಡ್ರಾಯಿಂಗ್ ರೂಂನಲ್ಲಿ ಈ ಘಟನೆ ನಡೆದಿದೆ ಎಂದು ಸಂಜಯ್ ಸಿಂಗ್ ಹೇಳಿದ್ದಾರೆ. “ನಿನ್ನೆ, ಖಂಡನೀಯ ಘಟನೆ ನಡೆದಿದೆ. ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಸ್ವಾತಿ ಮಾಲಿವಾಲ್ ಅವರ ನಿವಾಸಕ್ಕೆ ಹೋಗಿದ್ದರು. ಡ್ರಾಯಿಂಗ್ ರೂಮ್​ನಲ್ಲಿ ಅವರಿಗೆ ಕಾಯುತ್ತಿದ್ದಾಗ, ಬಿಭವ್ ಕುಮಾರ್ ಅವರಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಸಿಎಂ ಈ ವಿಷಯವನ್ನು ಅರಿತುಕೊಂಡಿದ್ದಾರೆ ಮತ್ತು ಅವರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಸಂಜಯ್​ ಸಿಂಗ್​ ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: Narendra Modi: ಹತ್ತು ವರ್ಷ ಪ್ರಧಾನಿಯಾಗಿರುವ ನರೇಂದ್ರ ಮೋದಿ ಆಸ್ತಿ ಎಷ್ಟಿದೆ? ಪ್ರಮಾಣಪತ್ರದಲ್ಲಿದೆ ಮಾಹಿತಿ

ದೆಹಲಿ ಮಹಿಳಾ ಆಯೋಗದ ಮಾಜಿ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಬೆಳಿಗ್ಗೆ 9.34 ಕ್ಕೆ ಪಿಸಿಆರ್ ಸಂಖ್ಯೆಗೆ ಕರೆ ಮಾಡಿ ಬಿಭವ್ ಕುಮಾರ್ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿ ಮಾಡಿದ್ದಾರೆ ಎಂದು ದೆಹಲಿ ಪೊಲೀಸರು ಸೋಮವಾರ ತಿಳಿಸಿದ್ದರು.

ದೂರು ದಾಖಲಿಸದ ಸ್ವಾತಿ

ಸೋಮವಾರ ಬೆಳಿಗ್ಗೆ 10 ಗಂಟೆಗೆ ಪೊಲೀಸ್ ಠಾಣೆಗೆ ಬಂದ ಸ್ವಾತಿ ಅವರು ಐದು ನಿಮಿಷಗಳ ನಂತರ ಔಪಚಾರಿಕ ದೂರು ದಾಖಲಿಸದೆ ಹೊರಟುಹೋಗಿದ್ದರು. ಹಲ್ಲೆ ಪ್ರಕರಣಗಳಲ್ಲಿ ವೈದ್ಯಕೀಯ ಪರೀಕ್ಷೆ ಕಡ್ಡಾಯ ಎಂದು ಹೇಳಿದ ನಂತರ ಅವರು ಹೊರಟುಹೋದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಎಎಪಿ ಮತ್ತು ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದ್ದು. ಕೇಜ್ರಿವಾಲ್ ಅವರ ಮನೆಯನ್ನು ‘ಬಾಕ್ಸಿಂಗ್ ರಿಂಗ್’ ಎಂದು ಕರೆದಿದೆ. ದೆಹಲಿಯ ಮಾಜಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೂ ಅವರ ಮನೆಯಲ್ಲಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದೆ

Continue Reading

ಪ್ರಮುಖ ಸುದ್ದಿ

Narendra Modi: ಹತ್ತು ವರ್ಷ ಪ್ರಧಾನಿಯಾಗಿರುವ ನರೇಂದ್ರ ಮೋದಿ ಆಸ್ತಿ ಎಷ್ಟಿದೆ? ಪ್ರಮಾಣಪತ್ರದಲ್ಲಿದೆ ಮಾಹಿತಿ

Narendra Modi: ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರಗಳಲ್ಲಿ ಪ್ರಧಾನಿ 9.12 ಲಕ್ಷ ರೂ.ಗಳನ್ನು ಹೂಡಿಕೆ ಮಾಡಿದ್ದಾರೆ ಮತ್ತು 2.68 ಲಕ್ಷ ಮೌಲ್ಯದ ನಾಲ್ಕು ಚಿನ್ನದ ಉಂಗುರಗಳನ್ನು ಹೊಂದಿದ್ದಾರೆ. ಅವರ ಆದಾಯವು 2018-19ರಲ್ಲಿ 11.14 ಲಕ್ಷ ರೂ.ಗಳಿಂದ 2022-23ರಲ್ಲಿ 23.56 ಲಕ್ಷ ರೂ.ಗೆ ಏರಿದೆ.

VISTARANEWS.COM


on

Narendra Modi
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ ವಾರಾಣಸಿ ಲೋಕ ಸಭಾ ಕ್ಷೇತ್ರದಲ್ಲಿ ಮೂರನೇ ಬಾರಿ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಸಲ್ಲಿಸಿದ್ದ ಅಫಿಡವಿಟ್​ನಲ್ಲಿ ಅವರು ತಮ್ಮ ಆಸ್ತಿ ವಿವರಗಳನ್ನು ನೀಡಿದ್ದಾರೆ. ಅದರ ಪ್ರಕಾರ ಅವರು ಒಟ್ಟು 3 ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ. ಎರಡು ಬಾರಿ ಪ್ರಧಾನಿ ಆಗಿರುವ ಬಳಿಕವೂ ಅವರು ಯಾವುದೇ ಭೂಮಿ, ಮನೆ ಅಥವಾ ಕಾರುಗಳನ್ನು ಹೊಂದಿಲ್ಲ. ಅವರು ತಮ್ಮ ಉಳಿಕೆಯ ಎಲ್ಲ ಮಾಹಿತಿಗಳನ್ನು ಚುನಾವಣಾ ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ.

ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಮಂಗಳವಾರ ನಾಮಪತ್ರ ಸಲ್ಲಿಸಿದ್ದು, ಅಫಿಡವಿಟ್​ನಲ್ಲಿ ಅವರು ಒಟ್ಟು 3.02 ಕೋಟಿ ರೂ.ಗಳ ಆಸ್ತಿ ಪ್ರಕಟಿಸಿದ್ದಾರೆ. ಅದರಲ್ಲಿ ಬಹುಪಾಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿದೆ. ಅಂದರೆ 2.86 ಕೋಟಿ ರೂ.ಗಳ ಸ್ಥಿರ ಠೇವಣಿ ಇಟ್ಟಿದ್ದಾರೆ. (Fixed Deposit) ಅವರ ಕೈಯಲ್ಲಿ ಒಟ್ಟು ₹ 52,920 ನಗದು ಗಾಂಧಿನಗರ ಮತ್ತು ವಾರಣಾಸಿಯ ಎರಡು ಬ್ಯಾಂಕ್ ಖಾತೆಗಳಲ್ಲಿ ಉಳಿದ ₹ 80,304 ಉಳಿಕೆಯಿದೆ.

ಪ್ರಧಾನಿ ಮೋದಿಯ ನಾಮಪತ್ರದ ​ ವಿವರ ಇಲ್ಲಿದೆ

ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರಗಳಲ್ಲಿ ಪ್ರಧಾನಿ 9.12 ಲಕ್ಷ ರೂ.ಗಳನ್ನು ಹೂಡಿಕೆ ಮಾಡಿದ್ದಾರೆ ಮತ್ತು 2.68 ಲಕ್ಷ ಮೌಲ್ಯದ ನಾಲ್ಕು ಚಿನ್ನದ ಉಂಗುರಗಳನ್ನು ಹೊಂದಿದ್ದಾರೆ. ಅವರ ಒಟ್ಟು ಆದಾಯ 2018-19ರಲ್ಲಿ ಇದ್ದ 11.14 ಲಕ್ಷ ರೂ.ಗಳಿಂದ 2022-23ರಲ್ಲಿ 23.56 ಲಕ್ಷ ರೂಪಾಯಿಗೆ ಏರಿದೆ.

ಶೈಕ್ಷಣಿಕ ಅರ್ಹತೆ

ಪ್ರಧಾನಿ ಮೋದಿ 1978 ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಬ್ಯಾಚುಲರ್ ಆಫ್ ಆರ್ಟ್ಸ್ ಮತ್ತು 1983ರಲ್ಲಿ ಗುಜರಾತ್ ವಿಶ್ವವಿದ್ಯಾಲಯದಿಂದ ಮಾಸ್ಟರ್ ಆಫ್ ಆರ್ಟ್ಸ್ ಪೂರ್ಣಗೊಳಿಸಿದ್ದೇನೆ ಎಂದು ಪ್ರಧಾನಿ ಘೋಷಿಸಿದ್ದಾರೆ. ಅವರ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

ಮೂರನೇ ಬಾರಿಗೆ ಸಂಸದರಾಗಿ ಆಯ್ಕೆಯಾಗುತ್ತಿರುವ ವಾರಾಣಸಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, “ನಾನು ಭಾವಪರವಶನಾಗಿದ್ದೇನೆ. ನಿಮ್ಮ ಪ್ರೀತಿಯ ನೆರಳಿನಲ್ಲಿ 10 ವರ್ಷಗಳು ಹೇಗೆ ಕಳೆದವು ಎಂದು ನನಗೆ ತಿಳಿದಿರಲಿಲ್ಲ. ‘ಆಜ್ ಮಾ ಗಂಗಾ ನೆ ಮುಜೆ ಗಾಡ್ ಲೇ ಲಿಯಾ ಹೈ’ (ಇಂದು, ತಾಯಿ ಗಂಗಾ ನನ್ನನ್ನು ದತ್ತು ತೆಗೆದುಕೊಂಡಿದ್ದಾಳೆ) ಎಂದು ಹೇಳಿದ್ದಾರೆ. ವಾರಣಾಸಿಯಲ್ಲಿ ಜೂನ್ 1 ರಂದು ಏಳನೇ ಹಂತದ ಮತದಾನ ನಡೆಯಲಿದೆ.

ನಾಮಪತ್ರ ಸಲ್ಲಿಕೆ ವೇಳೆ ಪಿಎಂ ಮೋದಿ ಪಕ್ಕದಲ್ಲಿ ಕುಳಿತಿದ್ದ ಸಾಧು ಯಾರು?

ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಮಂಗಳವಾರ ವಾರಾಣಾಸಿ ಲೋಕಸಭೆ ಕ್ಷೇತ್ರದಿಂದ ನಾಮಪತ್ರ (Narendra Modi nomination) ಸಲ್ಲಿಸಿದರು. ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅವರ ಜೊತೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಸೇರಿದಂತೆ ಇನ್ನೂ ಹಲವರಿದ್ದರು. ಆದರೆ ಮುಖ್ಯವಾಗಿ ಒಂದು ಮುಖ ಎಲ್ಲರ ಗಮನ ಸೆಳೆಯಿತು. ಅದು ಮೋದಿಯವರ ಪಕ್ಕದಲ್ಲಿಯೇ ಕುಳಿತಿದ್ದ, ಗಡ್ಡಧಾರಿ ಸಾಧು. ಮೋದಿ ಹಾಗೂ ಈ ವ್ಯಕ್ತಿ ಆತ್ಮೀಯವಾಗಿ ಮಾತನಾಡಿಕೊಳ್ಳುತ್ತಿದ್ದುದು ಕ್ಯಾಮೆರಾದಲ್ಲಿ ಸೆರೆಯಾಯಿತು.

ಹಾಗಾದರೆ ಅವರು ಯಾರು? ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ಸಲ್ಲಿಸಿದ ನಾಮಪತ್ರವನ್ನು ಅನುಮೋದಿಸಿದ ನಾಲ್ವರಲ್ಲಿ ಈ ಸಾಧುವೂ ಒಬ್ಬರು. ಅವರ ಹೆಸರು ಪಂಡಿತ ಗಣೇಶ್ವರ ಶಾಸ್ತ್ರಿ (Pandit Ganeshwar Shastri). ಇತರ ಮೂವರೆಂದರೆ ಬೈಜನಾಥ್ ಪಟೇಲ್, ಲಾಲ್‌ಚಂದ್ ಕುಶ್ವಾಹಾ ಮತ್ತು ಸಂಜಯ್ ಸೋಂಕರ್.

ಯಾರು ಈ ಗಣೇಶ್ವರ ಶಾಸ್ತ್ರಿ? ಇವರು ಇತ್ತೀಚೆಗೆ ನಡೆದ ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪ್ರಮುಖ ಪಾತ್ರ ವಹಿಸಿದ ಪ್ರಸಿದ್ಧ ವಿದ್ವಾಂಸರು. ವಿದ್ವಾಂಸ ರಾಜೇಶ್ವರ ಶಾಸ್ತ್ರಿಯವರ ಎರಡನೇ ಮಗ. ವಿದ್ವಾನ್‌ ಗಣೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ನೆಲೆಸಿದ್ದು, ಧರ್ಮ ಪ್ರಚಾರ ಮತ್ತು ಬೋಧನೆಗೆ ಜೀವನವನ್ನು ಸಮರ್ಪಿಸಿಕೊಂಡಿದ್ದಾರೆ. ಅವರು ಸಾಂಗ್ವೇದ ವಿದ್ಯಾಲಯದಲ್ಲಿ ಗೀರ್ವಾಣವಾಗ್‌ವರ್ಧಿನಿ ಸಭೆಯ ನಿರ್ಧಾರಗಳನ್ನು ಶ್ರದ್ಧೆಯಿಂದ ಅನುಸರಿಸುತ್ತಾರೆ ಮತ್ತು ಜ್ಯೋತಿಷ್ಯ, ಆಯುರ್ವೇದ ಮತ್ತು ಆಚರಣೆಗಳಲ್ಲಿ ತಮ್ಮ ಪರಿಣತಿಯ ಮೂಲಕ ಜನರಿಗೆ ಸಹಾಯ ಮಾಡುತ್ತಿರುತ್ತಾರೆ.

ಜನವರಿ 22ರಂದು ನಡೆದ ಅಯೋಧ್ಯೆ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭವು ಪಂಡಿತ ಗಣೇಶ್ವರ ಶಾಸ್ತ್ರಿ ದ್ರಾವಿಡ ಅವರು ನಿರ್ಧರಿಸಿದ 84 ಸೆಕೆಂಡುಗಳ ಕಾಲ ಶುಭ ಮುಹೂರ್ತದಲ್ಲಿ ನಡೆದಿತ್ತು. ಈ ಸಮಯವನ್ನು ರಾಮ ಮಂದಿರದ ಅಡಿಪಾಯ ಹಾಕಲು ಸಹ ಬಳಸಲಾಗಿತ್ತು. ಇದು ಈ ಮಂದಿರ ಯೋಜನೆಯಲ್ಲಿ ಈ ವಿದ್ವಾಂಸರು ಎಷ್ಟು ಆಳವಾಗಿ ತೊಡಗಿಕೊಂಡಿದ್ದಾರೆ ಎಂಬುದನ್ನು ಎತ್ತಿ ತೋರಿಸುತ್ತದೆ.

ಗಣೇಶ್ವರ ಶಾಸ್ತ್ರಿ ಅವರ ಪೂರ್ವಜರು ಗಂಗಾನದಿಯ ದಡದ ಕಾಶಿಯ ರಾಮಘಾಟ್ ಪ್ರದೇಶದಲ್ಲಿ ನೆಲೆಸಿದ್ದಾರೆ. ಗಣೇಶ್ವರ ಶಾಸ್ತ್ರಿ ಹುಟ್ಟಿದ್ದು ಇಲ್ಲೇ. ಇವರ ಕುಟುಂಬ ದಕ್ಷಿಣ ಭಾರತದಿಂದ ಬಂದು ಕಾಶಿಯಲ್ಲಿ ನೆಲೆಸಿದೆ. ಅವರ ಹಿರಿಯ ಸಹೋದರ, ಗೌರವಾನ್ವಿತ ವಿದ್ವಾಂಸರಾದ ಪಂಡಿತ ವಿಶ್ವೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ವಾಸಿಸುತ್ತಿದ್ದಾರೆ. ಶೈಕ್ಷಣಿಕ ಶ್ರೇಷ್ಠತೆ ಈ ಕುಟುಂಬದ ಪರಂಪರೆಯಾಗಿದೆ.

ಮೋದಿ ನಾಮಪತ್ರ ಅನುಮೋದಿಸಿದ ಇನ್ನು ಮೂವರೆಂದರೆ ಬೈಜನಾಥ್ ಪಟೇಲ್, ಹಿರಿಯ RSS ಸ್ವಯಂಸೇವಕ, OBC ಸಮುದಾಯಕ್ಕೆ ಸೇರಿದವರು. ಲಾಲ್‌ಚಂದ್ ಕುಶ್ವಾಹಾ, ಇವರು ಕೂಡ ಒಬಿಸಿ ಸಮುದಾಯದವರು. ಸಂಜಯ್ ಸೋಂಕರ್, ಇವರು ದಲಿತ ಸಮುದಾಯದಿಂದ ಬಂದವರು

Continue Reading
Advertisement
Health Tips in Kannada
ಆರೋಗ್ಯ3 mins ago

Health Tips in Kannada: ಕುತ್ತಿಗೆ ನೋವಿನಿಂದ ಬಳಲುತ್ತಿದ್ದೀರಾ? ಈ ಸಂಗತಿ ತಿಳಿದುಕೊಂಡಿರಿ

Mango Juice Benefits
ಆರೋಗ್ಯ1 hour ago

Mango Juice Benefits: ತಾಜಾ ಮಾವಿನ ರಸ ಕುಡಿಯುವುದರಿಂದ ಎಷ್ಟೊಂದು ಪ್ರಯೋಜನ ಇದೆ ನೋಡಿ…

Karnataka Weather Forecast
ಉಡುಪಿ1 hour ago

Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Dina Bhavishya
ಭವಿಷ್ಯ2 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

SSLC Result
ಪ್ರಮುಖ ಸುದ್ದಿ7 hours ago

ವಿಸ್ತಾರ ಸಂಪಾದಕೀಯ: ರಾಜ್ಯ ಪ್ರಾಥಮಿಕ- ಪ್ರೌಢಶಾಲಾ ಶಿಕ್ಷಣದ ಪರಿಸ್ಥಿತಿ ಸರಿಹೋಗುವುದೆಂದು?

Kangana Ranaut
ಪ್ರಮುಖ ಸುದ್ದಿ7 hours ago

Kangana Ranaut : ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್​ ಬಳಿ ಇರುವ ಆಸ್ತಿ ಎಷ್ಟು? ಇಲ್ಲಿದೆ ಎಲ್ಲ ಮಾಹಿತಿ

heavy wind and rain damaged tree and electricity poles In Jholada Gudde village
ಶಿವಮೊಗ್ಗ7 hours ago

Karnataka Weather: ಭಾರೀ ಗಾಳಿ ಮಳೆಗೆ ಧರೆಗುರುಳಿದ ಬೃಹತ್‌ ಮರ, ವಿದ್ಯುತ್‌ ಕಂಬ

ಪ್ರಮುಖ ಸುದ್ದಿ7 hours ago

SSLC Result 2024: ಎಸ್‌ಎಸ್‌ಎಲ್‌ಸಿ ಸಾಧಕರನ್ನು ಸನ್ಮಾನಿಸಿ, ಪ್ರೋತ್ಸಾಹ ಧನ ಘೋಷಿಸಿದ ಸಿಎಂ, ಡಿಸಿಎಂ

IPL 2024
ಕ್ರಿಕೆಟ್7 hours ago

IPL 2024 : ಲಕ್ನೊ ವಿರುದ್ಧ 19 ರನ್ ವಿಜಯ, ಗೆಲುವಿನೊಂದಿಗೆ ಐಪಿಎಲ್​ ಅಭಿಯಾನ ಮುಗಿಸಿದ ಡೆಲ್ಲಿ

Team India
ಪ್ರಮುಖ ಸುದ್ದಿ8 hours ago

Team India : ದ್ರಾವಿಡ್​ ಬಳಿಕ ಇವರೇ ಆಗ್ತಾರೆ ಭಾರತ ತಂಡದ ಕೋಚ್​​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

Prajwal Revanna Case
ಕರ್ನಾಟಕ10 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

HD Revanna Released first reaction after release will be acquitted of all charges
ರಾಜಕೀಯ12 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202414 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202418 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ18 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು19 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌