Rahul Gandhi: ರಾಹುಲ್‌ ಗಾಂಧಿಯನ್ನು ಬಂಧಿಸಿದರೆ ಬಿಜೆಪಿ ಶವಪೆಟ್ಟಿಗೆ ಸೇರೋದು ಖಚಿತ; ಸಿಂಘ್ವಿ ಎಚ್ಚರಿಕೆ - Vistara News

ದೇಶ

Rahul Gandhi: ರಾಹುಲ್‌ ಗಾಂಧಿಯನ್ನು ಬಂಧಿಸಿದರೆ ಬಿಜೆಪಿ ಶವಪೆಟ್ಟಿಗೆ ಸೇರೋದು ಖಚಿತ; ಸಿಂಘ್ವಿ ಎಚ್ಚರಿಕೆ

Rahul Gandhi: ರಾಹುಲ್‌ ಗಾಂಧಿ ಅವರನ್ನು ಇ.ಡಿ ಬಂಧಿಸುವುದು ಬಿಡಿ, ಬಂಧಿಸುವ ಕುರಿತು ಯೋಚನೆ ಮಾಡಿದರೂ ದೇಶದ ಜನ ಬಿಜೆಪಿಯ ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆಯಲಿದ್ದಾರೆ ಎಂದು ಅಭಿಷೇಕ್‌ ಮನು ಸಿಂಘ್ವಿ ಹೇಳಿದ್ದಾರೆ. ನನ್ನನ್ನು ಬಂಧಿಸಲು ಇ.ಡಿ ಸಿದ್ಧತೆ ನಡೆಸಿದೆ ಎಂದು ರಾಹುಲ್‌ ಗಾಂಧಿ ಅವರು ಆಗಸ್ಟ್‌ 2ರಂದು ಕಳವಳ ವ್ಯಕ್ತಪಡಿಸಿದ್ದರು.

VISTARANEWS.COM


on

Rahul Gandhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ‘ನನ್ನನ್ನು ಬಂಧಿಸಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ED) ಸಜ್ಜಾಗಿ ನಿಂತಿದ್ದಾರೆ’ ಎಂಬುದಾಗಿ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಆತಂಕ ವ್ಯಕ್ತಪಡಿಸಿದ್ದಾರೆ. ಸಂಸತ್‌ನಲ್ಲಿ ಮಾಡಿದ ಚಕ್ರವ್ಯೂಹದ ಹೇಳಿಕೆಯ ಬಳಿಕ ನನ್ನನ್ನು ಬಂಧಿಸಲು ಸಿದ್ಧತೆ ನಡೆಸಿದೆ ಎಂಬುದಾಗಿ ರಾಹುಲ್‌ ಗಾಂಧಿ ಪೋಸ್ಟ್ ಮಾಡಿದ್ದರು. ಇದಕ್ಕೆ ಕಾಂಗ್ರೆಸ್‌ ಹಿರಿಯ ನಾಯಕ ಅಭಿಷೇಕ್‌ ಮನು ಸಿಂಘ್ವಿ (Abhishek Manu Singhvi) ಪ್ರತಿಕ್ರಿಯಿಸಿದ್ದು, “ರಾಹುಲ್‌ ಗಾಂಧಿ ಅವರನ್ನು ಬಂಧಿಸಿದರೆ ಬಿಜೆಪಿಯು ಶವಪೆಟ್ಟಿಗೆ ಸೇರುತ್ತದೆ” ಎಂದು ಪೋಸ್ಟ್‌ ಮಾಡಿದ್ದಾರೆ.

“ರಾಹುಲ್‌ ಗಾಂಧಿ ಅವರನ್ನು ಇ.ಡಿ ಬಂಧಿಸುವುದು ಬಿಡಿ, ಬಂಧಿಸುವ ಕುರಿತು ಯೋಚನೆ ಮಾಡಿದರೂ ದೇಶದ ಜನ ಬಿಜೆಪಿಯ ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆಯಲಿದ್ದಾರೆ. ರಾಹುಲ್‌ ಗಾಂಧಿ ಅವರನ್ನು ಬಂಧಿಸುವ ಕುರಿತು ಯೋಚನೆಯನ್ನೂ ಮಾಡದಿರಿ. ಎಂದಿಗೂ ಯೋಚನೆ ಮಾಡದಿರಿ” ಎಂದು ಅಭಿಷೇಕ್‌ ಮನು ಸಿಂಘ್ವಿ ಎಚ್ಚರಿಸಿದ್ದಾರೆ. “ನಾನು ಸಂಸತ್‌ನಲ್ಲಿ ಚಕ್ರವ್ಯೂಹದ ಕುರಿತು ಭಾಷಣ ಮಾಡಿದ ಬಳಿಕ ಇ.ಡಿ ನನ್ನನ್ನು ಬಂಧಿಸಲು ಸಿದ್ಧತೆ ನಡೆಸುತ್ತಿದೆ. ಇ.ಡಿಯ ಮೂಲಗಳೇ ಇದರ ಕುರಿತು ಮಾಹಿತಿ ನೀಡಿವೆ” ಎಂದು ರಾಹುಲ್‌ ಗಾಂಧಿ ಪೋಸ್ಟ್‌ ಮಾಡಿದ್ದರು.

ಸಂಸತ್‌ನಲ್ಲಿ ರಾಹುಲ್‌ ಗಾಂಧಿ ಏನು ಹೇಳಿದ್ದರು.

ಸಂಸತ್‌ನಲ್ಲಿ ಜುಲೈ 29ರಂದು ರಾಹುಲ್‌ ಗಾಂಧಿ ಅವರು ಕೇಂದ್ರದ ವಿರುದ್ಧ ಹರಿಹಾಯ್ದಿದ್ದರು. ದೇಶದ ಜನರ ಸುತ್ತ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹೆಣೆದ ಚಕ್ರವ್ಯೂಹವನ್ನು ನಾವು ಭೇದಿಸುತ್ತೇವೆ. ಚಕ್ರವ್ಯೂಹವನ್ನು ನಮಗೆ ಭೇದಿಸುವುದು ಗೊತ್ತಿದೆ. ಯಾವ ಜಾತಿಗಣತಿ ಎಂದರೆ ನೀವು (ಬಿಜೆಪಿ) ಹೆದರುತ್ತೀರೋ, ಅದೇ ಜಾತಿಗಣತಿಯನ್ನು ಇದೇ ಸದನದಲ್ಲಿ ನಾವು ಮಂಡಿಸುತ್ತೇವೆ. ನಿಮಗೆ ಇಷ್ಟ ಇದೆಯೋ ಇಲ್ಲವೋ, ನಾವು ಇದೇ ಸದನದಲ್ಲಿ ಜಾತಿಗಣತಿಯನ್ನು ಮಂಡಿಸುತ್ತೇವೆ. ದೇಶದ ಜನ ಅರ್ಜುನನ ರೀತಿ ಚಕ್ರವ್ಯೂಹವನ್ನು ಭೇದಿಸಲಿದ್ದಾರೆ ಎಂದು ರಾಹುಲ್‌ ಗಾಂಧಿ ಹೇಳಿದ್ದರು.

“21ನೇ ಶತಮಾನದಲ್ಲೂ ಚಕ್ರವ್ಯೂಹವನ್ನು ರಚಿಸಲಾಗಿದೆ ಹಾಗೂ ಅದು ಕಮಲದ ಆಕಾರದಲ್ಲಿದೆ. ಆ ಚಕ್ರವ್ಯೂಹದ ಚಿಹ್ನೆಯನ್ನು ನರೇಂದ್ರ ಮೋದಿ ಅವರು ಎದೆಯ ಮೇಲೆ ಧರಿಸಿಕೊಂಡು ತಿರುಗಾಡುತ್ತಿದ್ದಾರೆ. ಅಭಿಮನ್ಯುವಿಗೆ ಏನಾಯಿತೋ, ಅದರಂತೆ ಭಾರತದ ಜನರನ್ನು ಆ ಚಕ್ರವ್ಯೂಹದಲ್ಲಿ ಸಿಲುಕಿಸಲಾಗಿದೆ. ಯುವಕರು, ರೈತರು, ಮಹಿಳೆಯರು, ಸಣ್ಣ ಹಾಗೂ ಮಧ್ಯಮ ಶ್ರೇಣಿ ಉದ್ಯಮಿಗಳು ಈಗ ಆ ಚಕ್ರವ್ಯೂಹದಲ್ಲಿ ಸಿಲುಕಿದ್ದಾರೆ” ಎಂದು ರಾಹುಲ್‌ ಗಾಂಧಿ ಕುಹಕವಾಡಿದ್ದರು.

ಇದನ್ನೂ ಓದಿ: Wayanad Landslide: ಇಲ್ಲಿಗೇಕೆ ಬಂದ್ರಿ? ಕಾರ್ಯಾಚರಣೆಗೆ ಅಡ್ಡಿ ಮಾಡೋಕಾ?- ರಾಹುಲ್‌ ಗಾಂಧಿ ಮೇಲೆ ಕೂಗಾಡಿದ ವ್ಯಕ್ತಿ-ವಿಡಿಯೋ ಇದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Indian Currency: 2000 ರೂ. ನೋಟು ತಯಾರಿಸಲು 4 ರೂ. ಖರ್ಚು; 10 ರೂ. ನೋಟಿಗೆ 9.60 ರೂ. ವೆಚ್ಚ!

ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವಿವಿಧ ಮುಖಬೆಲೆಯ ನೋಟುಗಳನ್ನು (Indian Currency) ಮುದ್ರಿಸುತ್ತದೆ. ಎಲ್ಲ ನೋಟುಗಳ ಮುದ್ರಣ ವೆಚ್ಚ ಒಂದೇ ರೀತಿ ಇರುವುದಿಲ್ಲ. ಅವುಗಳ ಮೌಲ್ಯಕ್ಕೆ ಅನುಗುಣವಾಗಿ ಬದಲಾಗುತ್ತದೆ. ಈಗಾಗಲೇ ಚಲಾವಣೆಯಿಂದ ಹೊರತೆಗೆದಿರುವ 2,000 ರೂಪಾಯಿ ನೋಟಿನ ಮುದ್ರಣಕ್ಕೆ 2018 ರಲ್ಲಿ 4.18 ರೂಪಾಯಿ ವೆಚ್ಚವಾಗುತ್ತಿತ್ತು. ಬಳಿಕ ಅದು 3.53 ರೂಪಾಯಿಗೆ ಇಳಿಕೆಯಾಗಿತ್ತು. ಈ ಕುರಿತ ಕುತೂಹಲಕರ ಮಾಹಿತಿ ಇಲ್ಲಿದೆ.

VISTARANEWS.COM


on

By

Indian Currency
Koo

ವಿವಿಧ ನಾಣ್ಯ, ಮುಖಬೆಲೆಯ ನೋಟುಗಳನ್ನು (Indian Currency) ಮುದ್ರಿಸುವ ಭಾರತೀಯ ರಿಸರ್ವ್ ಬ್ಯಾಂಕ್‌ಗೆ (Reserve Bank of India) ಇವುಗಳನ್ನು ಮುದ್ರಿಸಲು ಎಷ್ಟು ಖರ್ಚಾಗುತ್ತದೆ (Printing costs) ಎಂಬುದು ತಿಳಿದರೆ ಆಶ್ಚರ್ಯವಾಗಬಹುದು. ಕೆಲವು ನೋಟುಗಳ ಮುದ್ರಣ ವೆಚ್ಚ ತುಂಬಾ ದುಬಾರಿಯಾಗಿದೆ. ನೋಟ್ ಬ್ಯಾನ್ ಆದ ಬಳಿಕ ಈ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಲೇ ಇದೆ.

ಭಾರತೀಯ ರಿಸರ್ವ್ ಬ್ಯಾಂಕ್ 2024ರ ಮೇ ತಿಂಗಳಲ್ಲಿ 2,000 ರೂ. ಮುಖ ಬೆಲೆಯ ನೋಟುಗಳನ್ನು ತೆಗೆದು ಹಾಕಿತ್ತು. ಇದರ ವಾಪಸಾತಿಗೆ ಅಕ್ಟೋಬರ್ 7ರವರೆಗೆ ಹೊಸ ಗಡುವು ವಿಧಿಸಿದೆ. ಅಂದರೆ ಅಲ್ಲಿಯವರೆಗೆ ಮಾತ್ರ 2,000 ರೂ.ನ ನೋಟುಗಳು ಕಾನೂನು ಮೂಲಕ ಮಾನ್ಯವಾಗಿರುತ್ತವೆ. ಆದರೆ ಚಲಾವಣೆ ಮಾಡಲಾಗುವುದಿಲ್ಲ.

ಯಾವುದಕ್ಕೆ ಎಷ್ಟು ವೆಚ್ಚ?

ಆರ್‌ಬಿಐ ಮುದ್ರಿಸುವ ವಿವಿಧ ಮುಖಬೆಲೆಯ ನೋಟುಗಳ ಮುದ್ರಣ ವೆಚ್ಚವು ಒಂದೇ ರೀತಿ ಇರುವುದಿಲ್ಲ. 2,000 ರೂಪಾಯಿ ಒಂದು ನೋಟು ಮುದ್ರಣಕ್ಕೆ ಸರಿಸುಮಾರು 4 ರೂಪಾಯಿ ವೆಚ್ಚವಾಗುತ್ತದೆ. 2018ರಲ್ಲಿ 2,000 ರೂಪಾಯಿ ನೋಟಿನ ಮುದ್ರಣದ ವೆಚ್ಚ 4.18 ರೂಪಾಯಿ ಆಗಿದ್ದು, ಅನಂತರ ಅದು 3.53 ರೂಪಾಯಿಗೆ ಇಳಿಕೆಯಾಯಿತು.

ಕುತೂಹಲಕಾರಿ ವಿಷಯವೆಂದರೆ ಅತ್ಯಧಿಕ ಮುದ್ರಣ ವೆಚ್ಚವಾಗುವುದು 10 ರೂ. ನೋಟುಗಳಿಗೆ ಎಂದರೆ ಆಶ್ಚರ್ಯವಾಗಬಹುದು. 10 ರೂಪಾಯಿಯ 1,000 ನೋಟುಗಳನ್ನು ಮುದ್ರಿಸಲು 960 ರೂ. ವೆಚ್ಚವಾಗುತ್ತದೆ. ನೋಟಿನ ಮುದ್ರಣದ ವೆಚ್ಚವು ಅದರ ಮುಖಬೆಲೆಯನ್ನೂ ಮೀರುವಂತಿದೆ. ಅಂದರೆ ಹತ್ತು ರೂಪಾಯಿಯ ಒಂದು ನೋಟಿಗೆ 9.60 ರೂ. ವೆಚ್ಚವಾಗುತ್ತದೆ!

100 ರೂ. ಗಳ 1,000 ನೋಟುಗಳನ್ನು ಮುದ್ರಿಸಲು 1,770 ರೂ., 200 ರೂ. ಗಳ 1,000 ನೋಟುಗಳನ್ನು ಮುದ್ರಿಸಲು 2,370 ರೂ., 500 ರೂ.ಗಳ 1,000 ನೋಟುಗಳನ್ನು ಮುದ್ರಿಸಲು 2,290 ರೂ. ಖರ್ಚಾಗುತ್ತದೆ. 2,000 ರೂಪಾಯಿಗಳ 1000 ನೋಟುಗಳನ್ನು ಮುದ್ರಿಸುವ ವೆಚ್ಚವು ಈ ಕೆಲವು ಮುಖಬೆಲೆಗಳಿಗೆ ಹೋಲಿಸಿದರೆ ಕಡಿಮೆಯಾಗಿದೆ.

Indian Currency
Indian Currency


ಚಲಾವಣೆಯಲ್ಲಿದ್ದ 2,000 ರೂ. ನೋಟುಗಳು

ಆರ್‌ಬಿಐ ಪ್ರಕಾರ ಮೇ 19ರವರೆಗೆ ಚಲಾವಣೆಯಲ್ಲಿದ್ದ 2,000 ರೂಪಾಯಿಗಳ ನೋಟುಗಳ ಒಟ್ಟು ಮೌಲ್ಯ 3.56 ಲಕ್ಷ ಕೋಟಿ ರೂಪಾಯಿ. ಇವುಗಳಲ್ಲಿ 3.42 ಲಕ್ಷ ಕೋಟಿ ರೂಪಾಯಿಗಳು ಬ್ಯಾಂಕ್‌ಗಳಿಗೆ ಮರಳಿದ್ದು ಸೆಪ್ಟೆಂಬರ್ 29 ರ ಹೊತ್ತಿಗೆ ಕೇವಲ 0.14 ಲಕ್ಷ ಕೋಟಿ ಚಲಾವಣೆಯಲ್ಲಿ ಉಳಿದಿದೆ. ಈ ನೋಟುಗಳನ್ನು ಠೇವಣಿ ಮಾಡಲು ಅಥವಾ ವಿನಿಮಯ ಮಾಡಿಕೊಳ್ಳಲು ಆರಂಭಿಕ ಗಡುವು ಸೆಪ್ಟೆಂಬರ್ 30 ಆಗಿತ್ತು.

2023ರ ಮೇ 19ರಂತೆ ಚಲಾವಣೆಯಲ್ಲಿರುವ 2,000 ರೂಪಾಯಿಗಳ ಬ್ಯಾಂಕ್‌ನೋಟುಗಳಲ್ಲಿ ಶೇ. 96ರಷ್ಟನ್ನು ಹಿಂತಿರುಗಿಸಲಾಗಿದೆ. ಹೆಚ್ಚುವರಿಯಾಗಿ, ಅಕ್ಟೋಬರ್ 8 ರಿಂದ ಬ್ಯಾಂಕ್ ಶಾಖೆಗಳಲ್ಲಿ 2,000 ರೂ. ಬ್ಯಾಂಕ್ ನೋಟುಗಳನ್ನು ಠೇವಣಿ ಮಾಡುವ ಅಥವಾ ಬದಲಾಯಿಸುವ ಪ್ರಕ್ರಿಯೆಯನ್ನು ನಿಲ್ಲಿಸಲಾಗುವುದು ಎಂದು ಆರ್ ಬಿಐ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: World Bank: ಅಮೆರಿಕದ ತಲಾ ಆದಾಯದ ಕಾಲು ಭಾಗ ತಲುಪಲು ಭಾರತಕ್ಕೆ 75 ವರ್ಷ ಬೇಕು: ವಿಶ್ವ ಬ್ಯಾಂಕ್‌

2,000 ರೂಪಾಯಿಗಳ ನೋಟುಗಳನ್ನು 19 ಆರ್‌ಬಿಐ ಇಶ್ಯೂ ಆಫೀಸ್‌ಗಳಲ್ಲಿ ವಿನಿಮಯ ಮಾಡಿಕೊಳ್ಳಬಹುದು ಎಂದು ಆರ್‌ಬಿಐ ಸ್ಪಷ್ಟಪಡಿಸಿದೆ. ಒಂದು ಬಾರಿಗೆ 20,000 ರೂ. ಅನ್ನು ವಿನಿಮಯ ಮಾಡಿಕೊಳ್ಳಲು ಅವಕಾಶವಿದೆ. ಅಲ್ಲದೇ ಆರ್‌ಬಿಐ ಇಶ್ಯೂ ಆಫೀಸ್‌ಗಳಲ್ಲಿ 2,000 ರೂ ಬ್ಯಾಂಕ್‌ನೋಟುಗಳನ್ನು ತಮ್ಮ ಭಾರತೀಯ ಬ್ಯಾಂಕ್ ಖಾತೆಗಳಿಗೆ ಯಾವುದೇ ಮೊತ್ತಕ್ಕೆ ಜಮಾ ಮಾಡಬಹುದು. ಹೆಚ್ಚುವರಿಯಾಗಿ, ದೇಶದೊಳಗೆ ಇರುವ ವ್ಯಕ್ತಿಗಳು ಅಥವಾ ಘಟಕಗಳು ಭಾರತದಲ್ಲಿನ ತಮ್ಮ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲು 19 ಆರ್‌ಬಿಐ ಇಶ್ಯೂ ಕಚೇರಿಗಳಿಗೆ ಯಾವುದಾದರೂ ಇಂಡಿಯಾ ಪೋಸ್ಟ್ ಮೂಲಕ 2,000 ರೂ . ಬ್ಯಾಂಕ್ ನೋಟುಗಳನ್ನು ಕಳುಹಿಸುವ ಆಯ್ಕೆಯನ್ನು ಹೊಂದಿವೆ.

Continue Reading

ವೈರಲ್ ನ್ಯೂಸ್

ಮದುವೆಯಾದ ಮೇಲೂ ಪತ್ನಿಗೆ ಹಳೇ ಲವ್ವರ್‌ ಮೇಲೆ ಮೋಹ; ಆತನೊಂದಿಗೇ ಮದುವೆ ಮಾಡಿಸಿದ ಪತಿ!

ಚಂದನ್‌ ಹಾಗೂ ಖುಷ್ಬೂ ಬಾಲ್ಯದಿಂದಲೂ ಸ್ನೇಹಿತರಾಗಿದ್ದರು. ಸ್ನೇಹಿತರಾದ ಕೆಲವೇ ವರ್ಷಗಳಲ್ಲಿ ಅವರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಪರಿಸ್ಥಿತಿಯ ಒತ್ತಡಕ್ಕೋ, ಮನೆಯವರ ಒತ್ತಾಯಕ್ಕೋ ಮಣಿದಿದ್ದ ಖುಷ್ಬೂ, ರಾಜೇಶ್‌ ಕುಮಾರ್‌ನನ್ನು ಮದುವೆಯಾಗಿದ್ದಳು. ಆದರೂ, ಮಾಜಿ ಪ್ರೇಮಿಯನ್ನು ಖುಷ್ಬೂ ಮರೆತಿರಲಿಲ್ಲ.

VISTARANEWS.COM


on

Marriage
Koo

ಪಟನಾ: ಮದುವೆಯಾದ ಮೇಲೆ ಹೆಂಡತಿ ಮೇಲೆ ಸುಖಾಸುಮ್ಮನೆ ಅನುಮಾನ ಪಡುವವರಿದ್ದಾರೆ. ಹಾಗೊಂದು, ವೇಳೆ ಹೆಂಡತಿಗೆ ಮದುವೆಯಾದ ಮೇಲೂ ಬೇರೆಯವರೊಂದಿಗೆ ಸಂಬಂಧ ಇಟ್ಟುಕೊಂಡರೆ ಆಕೆಯ ಮೇಲೆ ಹಲ್ಲೆ ನಡೆಸುವ, ಕೆಲವೊಮ್ಮೆ ಕೊಲೆಯನ್ನೂ ಮಾಡುವ ಪ್ರಕರಣಗಳು ಸುದ್ದಿಯಾಗುತ್ತಲೇ ಇರುತ್ತವೆ. ಆದರೆ, ಬಿಹಾರದಲ್ಲೊಬ್ಬ (Bihar) 26 ವರ್ಷದ ವ್ಯಕ್ತಿಯು ಮದುವೆಯಾದ ಬಳಿಕ ಹೆಂಡತಿಯನ್ನು ಆಕೆಯ ಮಾಜಿ ಪ್ರಿಯತಮನೊಂದಿಗೆ ಮದುವೆ ಮಾಡಿಸಿದ್ದಾನೆ. ಈ ಸುದ್ದಿ ಈಗ ವೈರಲ್‌ (Viral News) ಆಗಿದೆ.

ಬಿಹಾರದ ರಾಮನಗರ ಗ್ರಾಮದ ನಿವಾಸಿಯಾದ ರಾಜೇಶ್‌ ಕುಮಾರ್‌ ಎಂಬಾತನೇ ಹೆಂಡತಿಯನ್ನು ಆಕೆಯ ಮಾಜಿ ಪ್ರಿಯತನಮ ಜತೆ ಜೀವನ ಸಾಗಿಸಿಲು ಅವಕಾಶ ಮಾಡಿಕೊಟ್ಟಿದ್ದಾನೆ. ಕೆಲ ದಿನಗಳ ಹಿಂದಷ್ಟೇ ರಾಜೇಶ್‌ ಕುಮಾರ್‌ ಮನೆಯಲ್ಲಿ ಇಲ್ಲದಿದ್ದಾಗ ಆತನ ಪತ್ನಿ ಖುಷ್ಬೂ (22) ಮಾಜಿ ಪ್ರಿಯತಮ ಚಂದನ್‌ನನ್ನು (24) ಮನೆಗೆ ಕರೆಸಿದ್ದಳು. ಇಬ್ಬರೂ ಮನೆಯಲ್ಲಿ ಸರಸವಾಡುತ್ತಿದ್ದಾಗಲೇ ರಾಜೇಶ್‌ ಕುಮಾರ್‌ ಮನೆಗೆ ಬಂದಿದ್ದಾನೆ. ಆಗ ಇಬ್ಬರ ಪ್ರೇಮಪುರಾಣ ಬಯಲಾಗಿದೆ.

ಪತ್ನಿಯು ತನಗೆ ಮೋಸ ಮಾಡಿದಳು, ಅಕ್ರಮ ಸಂಬಂಧ ಹೊಂದಿದಳು ಎಂದು ಗಲಾಟೆ ಮಾಡದ, ಚಂದನ್‌ ಮೇಲೆ ಹಲ್ಲೆ ನಡೆಸದ, ಕೋಪದ ಕೈಗೆ ಬುದ್ಧಿ ಕೊಡದ ರಾಜೇಶ್‌ ಕುಮಾರ್‌, ಖುಷ್ಬೂ ಹಾಗೂ ಚಂದನ್‌ರ ಮದುವೆ ಮಾಡಿಸಿದ್ದಾರೆ. ಇಡೀ ಗ್ರಾಮದ ಜನರನ್ನು ಕರೆಸಿ, ಅವರನ್ನು ಸ್ಥಳೀಯ ದೇವಾಲಯಕ್ಕೆ ಕರೆದುಕೊಂಡು ಹೋಗಿ, ಇಬ್ಬರಿಗೂ ಮದುವೆ ಮಾಡಿಸಿದ್ದಾರೆ. ಮದುವೆ ಮಾಡಿಸಿದ ಬಳಿಕ ಅವರಿಗೆ ಶುಭ ಹಾರೈಸಿ, ಬೀಳ್ಕೊಟ್ಟಿದ್ದಾರೆ.

ಚಂದನ್‌ ಹಾಗೂ ಖುಷ್ಬೂ ಬಾಲ್ಯದಿಂದಲೂ ಸ್ನೇಹಿತರಾಗಿದ್ದರು. ಸ್ನೇಹಿತರಾದ ಕೆಲವೇ ವರ್ಷಗಳಲ್ಲಿ ಅವರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಪರಿಸ್ಥಿತಿಯ ಒತ್ತಡಕ್ಕೋ, ಮನೆಯವರ ಒತ್ತಾಯಕ್ಕೋ ಮಣಿದಿದ್ದ ಖುಷ್ಬೂ, ರಾಜೇಶ್‌ ಕುಮಾರ್‌ನನ್ನು ಮದುವೆಯಾಗಿದ್ದರು. ಆದರೆ, ಮದುವೆಯಾದ ಬಳಿಕವೂ ಚಂದನ್‌ ಜತೆ ಖುಷ್ಬೂ ಸಂಪರ್ಕದಲ್ಲಿದ್ದಳು. ರಾಜೇಶ್‌ ಕುಮಾರ್‌ ಇಲ್ಲದಿದ್ದಾಗ ಚಂದನ್‌ ಮನೆಗೆ ಬರುತ್ತಿದ್ದ ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ ಪತ್ನಿಯ ಸಂಬಂಧದ ಬಳಿಕವೂ ಗಲಾಟೆ, ಜಗಳ ಮಾಡಿಕೊಳ್ಳದ ರಾಜೇಶ್‌, ಆಕೆಯನ್ನು ಬೀಳ್ಕೊಟ್ಟಿರುವ ಸಮಾಧಾನದ ಗುಣಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪತ್ನಿ ಇದ್ದರೂ ಮಹಿಳಾ ಇನ್ಸ್‌ಪೆಕ್ಟರ್‌ ಜತೆ ವ್ಯಕ್ತಿ ಸರಸ; ರೆಡ್‌ ಹ್ಯಾಂಡ್‌ ಆಗಿ ಹಿಡಿದ ಪತ್ನಿ ಮಾಡಿದ್ದೇನು? Video ಇದೆ

Continue Reading

ಸಿನಿಮಾ

Cable vs Ott: ಒಟಿಟಿ ಪೈಪೋಟಿ; ಕೇಬಲ್‌ ಟಿವಿ ವೀಕ್ಷಕರ ಸಂಖ್ಯೆ 12 ಕೋಟಿಯಿಂದ 9 ಕೋಟಿಗೆ ಇಳಿಕೆ!

Cable vs Ott: ದೇಶದಲ್ಲಿ ಟಿವಿ ಹೊಂದಿರುವವರ ಸಂಖ್ಯೆ 2018ರಲ್ಲಿ 197 ಮಿಲಿಯನ್‌ ಇತ್ತು. 2022ರಲ್ಲಿ ಈ ಸಂಖ್ಯೆ 210 ಮಿಲಿಯನ್‌ಗೆ (21 ಕೋಟಿ) ಏರಿದೆ ಎಂದು ದೆಹಲಿಯ ಸ್ಥಳೀಯ ಕೇಬಲ್ ಆಪರೇಟರ್ ಅಸೋಸಿಯೇಷನ್ ತಿಳಿಸಿದೆ. ಆದರೆ ಕೇಬಲ್ ಟಿವಿ ಸೇವೆಗಳನ್ನು ಬಳಸುವ ಮನೆಗಳ ಸಂಖ್ಯೆ 2018ರಲ್ಲಿ 120 ಮಿಲಿಯನ್‌ (12 ಕೋಟಿ) ಇದ್ದಿದ್ದು 2020ರಲ್ಲಿ 90 ಮಿಲಿಯನ್‌ಗೆ (9 ಕೋಟಿ) ಇಳಿದಿದೆ ಮತ್ತು ಈ ಸಂಖ್ಯೆಗಳು ಕುಸಿಯುತ್ತಲೇ ಇದೆ. ಒಟಿಟಿ ಪ್ಲಾಟ್‌ಫಾರ್ಮ್‌ಗಳಾದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್, ಜಿಯೋ ಟಿವಿ ಏರ್ ಲೀನಿಯರ್ ಕಂಟೆಂಟ್‌ಗಳು ಗ್ರಾಹಕರು, ವಿಶೇಷವಾಗಿ ಗೃಹಿಣಿಯರು, ವಿದ್ಯಾರ್ಥಿಗಳು ಮತ್ತು ಯುವಕರನ್ನು ಒಟಿಟಿ ಕಡೆಗೆ ಸೆಳೆಯುತ್ತಿದೆ. ಇದು ಕೇಬಲ್ ಟಿವಿ ಉದ್ಯಮವನ್ನು ಕೊಲ್ಲುತ್ತಿದೆ ಎಂದು ಕೇಬಲ್ ಆಪರೇಟರ್‌ಗಳ ಸಂಸ್ಥೆ ದೂರಿದೆ.

VISTARANEWS.COM


on

By

Cable Operators
Koo

ಉದ್ಯಮಿ ಮುಕೇಶ್ ಅಂಬಾನಿ (Businessman Mukesh Ambani) ಒಡೆತನದ ಜಿಯೋ ಟಿವಿ (Jio TV) ಒಟಿಟಿ ಪ್ಲ್ಯಾಟ್ ಫಾರ್ಮ್‌ನಿಂದಾಗಿ (OTT platform) ತಮ್ಮ ವ್ಯವಹಾರದ (Cable vs Ott) ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿದೆ. ಹೀಗಾಗಿ ಜಿಯೋ ಟಿವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೆಹಲಿ ಮೂಲದ ಕೇಬಲ್ ಆಪರೇಟರ್‌ಗಳ ಸಂಸ್ಥೆಯು (Cable Operators) ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾಗೆ (TRAI) ಮನವಿ ಸಲ್ಲಿಸಿದೆ.

ಕೇಬಲ್ ಟಿವಿ ಉದ್ಯಮದಲ್ಲಿ ಉಂಟಾದ ಉದ್ಯೋಗ ಕಡಿತ ಮತ್ತು ಭಾರೀ ಆರ್ಥಿಕ ನಷ್ಟಕ್ಕೆ ಇದೂ ಕಾರಣ ಎಂದು ಹೇಳಿರುವ ಕೇಬಲ್ ಆಪರೇಟರ್‌ಗಳ ಸಂಸ್ಥೆಯು ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾದ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಜಿಯೋ ಟಿವಿ ತನ್ನ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಲೈವ್ ಮತ್ತು ಇತರ ವಿಷಯವನ್ನು ಪ್ರಸಾರ ಮಾಡುವ ಮೂಲಕ ನಿಯಮಗಳನ್ನು ಉಲ್ಲಂಘಿಸುತ್ತಿದೆ ಎಂದು ದೆಹಲಿಯ ಎಲ್ಲಾ ಸ್ಥಳೀಯ ಕೇಬಲ್ ಆಪರೇಟರ್ ಅಸೋಸಿಯೇಷನ್ ​​(ALCOA) ಆರೋಪಿಸಿದೆ.

1995ರ ಕೇಬಲ್ ಕಾಯಿದೆಯನ್ನು ಉಲ್ಲೇಖಿಸಿರುವ ದೆಹಲಿಯ ಎಲ್ಲಾ ಸ್ಥಳೀಯ ಕೇಬಲ್ ಆಪರೇಟರ್ ಅಸೋಸಿಯೇಷನ್, ಕೇವಲ ಮಲ್ಟಿ-ಸಿಸ್ಟಮ್ ಆಪರೇಟರ್‌ಗಳು (MSOs), ಹೆಡೆಂಡ್ ಇನ್ ದಿ ಸ್ಕೈ (HITS) ಆಪರೇಟರ್‌ಗಳು, ಡೈರೆಕ್ಟ್- ಟು- ಹೋಮ್ (DTH) ಪ್ಲೇಯರ್‌ಗಳು ಮತ್ತು ಐಪಿಟಿವಿ ಪೂರೈಕೆದಾರರಿಗೆ ಮಾತ್ರ ಲೈವ್ ವಿಷಯವನ್ನು ಪ್ರಸಾರ ಮಾಡಲು ಅನುಮತಿಸಬೇಕು. ಆದರೆ ಜಿಯೋ ಲೈವ್ ವಿಷಯವನ್ನು ಸ್ಟ್ರೀಮಿಂಗ್ ಮಾಡುವ ಮೂಲಕ ಟಿವಿ ನಿಯಮಗಳನ್ನು ಉಲ್ಲಂಘಿಸುತ್ತಿದೆ.

Cable Operators
Cable Operators


ಟಿವಿ ಹೊಂದಿರುವವರ ಸಂಖ್ಯೆ 2018ರಲ್ಲಿ 197 ಮಿಲಿಯನ್‌ ಇತ್ತು. 2022ರಲ್ಲಿ ಈ ಸಂಖ್ಯೆ 210 ಮಿಲಿಯನ್‌ಗೆ (21 ಕೋಟಿ) ಏರಿದೆ ಎಂದು ದೆಹಲಿಯ ಸ್ಥಳೀಯ ಕೇಬಲ್ ಆಪರೇಟರ್ ಅಸೋಸಿಯೇಷನ್ ತಿಳಿಸಿದೆ. ಆದರೆ ಕೇಬಲ್ ಟಿವಿ ಸೇವೆಗಳನ್ನು ಬಳಸುವ ಮನೆಗಳ ಸಂಖ್ಯೆ 2018ರಲ್ಲಿ 120 ಮಿಲಿಯನ್‌ (12 ಕೋಟಿ) ಇದ್ದಿದ್ದು 2020ರಲ್ಲಿ 90 ಮಿಲಿಯನ್‌ಗೆ (9 ಕೋಟಿ) ಇಳಿದಿದೆ ಮತ್ತು ಈ ಸಂಖ್ಯೆಗಳು ಕುಸಿಯುತ್ತಲೇ ಇದೆ. ಒಟಿಟಿ ಪ್ಲಾಟ್‌ಫಾರ್ಮ್‌ಗಳಾದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್, ಜಿಯೋ ಟಿವಿ ಏರ್ ಲೀನಿಯರ್ ಕಂಟೆಂಟ್‌ಗಳು ಗ್ರಾಹಕರು, ವಿಶೇಷವಾಗಿ ಗೃಹಿಣಿಯರು, ವಿದ್ಯಾರ್ಥಿಗಳು ಮತ್ತು ಯುವಕರನ್ನು ಒಟಿಟಿ ಕಡೆಗೆ ಸೆಳೆಯುತ್ತಿದೆ. ಇದು ಕೇಬಲ್ ಟಿವಿ ಉದ್ಯಮವನ್ನು ಕೊಲ್ಲುತ್ತಿದೆ ಎಂದು ಕೇಬಲ್ ಆಪರೇಟರ್‌ಗಳ ಸಂಸ್ಥೆ ದೂರಿದೆ.

ಜಿಯೋ ಟಿವಿ ತನ್ನ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಶ್ರೀಲಂಕಾ ಕ್ರಿಕೆಟ್ ಪಂದ್ಯಗಳನ್ನು ಉಚಿತವಾಗಿ ಸ್ಟ್ರೀಮ್ ಮಾಡುವುದರಿಂದ ಕೇಬಲ್ ಆಪರೇಟರ್‌ಗಳಿಗೆ ಸಮಸ್ಯೆಯಾಗಿದೆ. ಕೇಬಲ್ ಟಿವಿ ಉದ್ಯಮವು ಟೆನ್ ಸ್ಪೋರ್ಟ್ಸ್ ಲೈವ್ ಕಂಟೆಂಟ್‌ಗೆ 19 ರೂ. ಜೊತೆಗೆ ಜಿಎಸ್‌ಟಿಯನ್ನು ಪಾವತಿಸುತ್ತಿದೆ. ಜಿಯೋ ಟಿವಿ ಒಟಿಟಿ ಇದನ್ನು ಗ್ರಾಹಕರಿಗೆ ಉಚಿತವಾಗಿ ನೀಡುತ್ತಿದೆ ಎಂದು ಕೇಬಲ್ ಆಪರೇಟರ್‌ಗಳು ತಿಳಿಸಿದ್ದಾರೆ.

ಇದನ್ನೂ ಓದಿ: Jio Games: ಜಿಯೋಗೇಮ್ಸ್‌ನಲ್ಲಿ ಗೂಗಲ್‌ನ ಗೇಮ್‌ಸ್ನ್ಯಾಕ್ಸ್‌ ಗೇಮ್ಸ್‌ ಲಭ್ಯ

ಇದು ಅನ್ಯಾಯದ ಸ್ಪರ್ಧೆಯಾಗಿದೆ. ಇದು ಭಾರತೀಯ ಕೇಬಲ್ ಟಿವಿ ಉದ್ಯಮವನ್ನು ನಾಶಪಡಿಸುತ್ತದೆ. ಬ್ರಾಡ್‌ಕಾಸ್ಟರ್ ಲೈವ್ ಭಾರತ ವಿರುದ್ಧ ಶ್ರೀಲಂಕಾ ಸರಣಿ ವಿಷಯವನ್ನು ಜಿಯೋ ಟಿವಿಗೆ ಹೇಗೆ ಒದಗಿಸುತ್ತಿದೆ ಎಂದು ಕೇಬಲ್‌ ಒಕ್ಕೂಟದವರು ಪ್ರಶ್ನಿಸಿದ್ದಾರೆ.

Continue Reading

ವೈರಲ್ ನ್ಯೂಸ್

Viral Video: ಉ.ಪ್ರ ಪೊಲೀಸರ ʼಟ್ರೀಟ್‌‌ಮೆಂಟ್ʼ ಹೇಗಿತ್ತು ನೋಡಿ! ಹೆಣ್ಣು ಮಕ್ಕಳನ್ನು ಚುಡಾಯಿಸುತ್ತಿದ್ದ ಪುಂಡರು

ಕೋಚಿಂಗ್ ಸೆಂಟರ್ ಹೊರಗೆ ಹೆಣ್ಣು ಮಕ್ಕಳನ್ನು ಚುಡಾಯಿಸುತ್ತಿದ್ದ ಮೂವರು ದುಷ್ಕರ್ಮಿಗಳಿಗೆ ಉತ್ತರ ಪ್ರದೇಶದ ಪೊಲೀಸರು ಸರಿಯಾಗಿ ಬುದ್ಧಿ ಕಳಿಸಿದ ಘಟನೆ ನಡೆದಿದೆ. ಕೋಚಿಂಗ್ ಸೆಂಟರ್ ನ ಹೊರಗೆ ಮೂವರು ದುಷ್ಕರ್ಮಿಗಳು ಹುಡುಗಿಯರಿಗೆ ಕಿರುಕುಳ ನೀಡುತ್ತಿರುವುದು, ಪೋಲೀಸರ ಟ್ರೀಟ್ ಮೆಂಟ್ ಬಳಿಕ ಆರೋಪಿಗಳಿಗೆ ನಡೆದಾಡಲೂ ಆಗುತ್ತಿಲ್ಲ ಎನ್ನುವ ದೃಶ್ಯವಾಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ.

VISTARANEWS.COM


on

By

Viral Video
Koo

ಮುಜಾಫರ್‌ನಗರ: ಕೋಚಿಂಗ್ ಸೆಂಟರ್‌ನ (coaching institute) ಹೊರಗೆ ಹೆಣ್ಣು ಮಕ್ಕಳನ್ನು ಚುಡಾಯಿಸುತ್ತಿದ್ದ ದುಷ್ಕರ್ಮಿಗಳಿಗೆ ಪೊಲೀಸರು ಸರಿಯಾಗಿ ಬುದ್ಧಿ ಕಳಿಸಿದ ಘಟನೆ ಉತ್ತರ ಪ್ರದೇಶದ (uttarpradesh) ಮುಜಾಫರ್‌ನಗರದಲ್ಲಿ (Muzaffarnagar) ನಡೆದಿದೆ. ಕೋಚಿಂಗ್ ಸೆಂಟರ್ ನ ಹೊರಗೆ ಮೂವರು ದುಷ್ಕರ್ಮಿಗಳು ಹುಡುಗಿಯರಿಗೆ ಕಿರುಕುಳ ನೀಡುತ್ತಿರುವುದು ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದ್ದು, ಇದರ ವಿಡಿಯೋ (Viral Video) ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಮುಜಾಫರ್‌ನಗರದ ಗಾಂಧಿ ಕಾಲೋನಿಯಲ್ಲಿ ಕೋಚಿಂಗ್ ಸೆಂಟರ್‌ಗಳ ಸಂಖ್ಯೆ ಹೆಚ್ಚಾಗಿದೆ. ಇದು ಶಿಕ್ಷಣ ಕೇಂದ್ರವಾಗಿ ಮಾರ್ಪಟ್ಟಿದೆ. ಈ ಪ್ರದೇಶದಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ಪೊಲೀಸರು ಸುತ್ತುಮುತ್ತ ಗಸ್ತು ತಿರುಗುತ್ತಾರೆ. ಕಳೆದ ಕೆಲ ದಿನಗಳಿಂದ ಕನ್ವರ್ ಯಾತ್ರೆಯಲ್ಲಿ ಪೊಲೀಸರು ನಿರತರಾಗಿದ್ದರು. ಈ ಪರಿಸ್ಥಿತಿಯ ಲಾಭ ಪಡೆದ ಕೆಲವು ದುಷ್ಕರ್ಮಿಗಳು ಕೋಚಿಂಗ್ ಸೆಂಟರ್ ಹೊರಗೆ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೂರನೇ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಗಾಂಧಿ ಕಾಲೋನಿಯಲ್ಲಿ ಮೂವರು ಮುಸುಕುಧಾರಿಗಳು ಬೈಕ್‌ನಲ್ಲಿ ಆಗಮಿಸಿ ಮೋಹನ್ ಭಾಟಿಯಾ ಎಂಬವರ ಕೋಚಿಂಗ್ ಸೆಂಟರ್‌ನ ಹೊರಗೆ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಲು ಪ್ರಾರಂಭಿಸಿದ್ದರು. ದುಷ್ಕರ್ಮಿಯೊಬ್ಬನನ್ನು ವಿದ್ಯಾರ್ಥಿನಿ ಅವಮಾನಿಸಿದ್ದಾಳೆ ಎಂದು ಆರೋಪಿಸಿ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಲೇ ಇದ್ದರು. ಅವರನ್ನು ಅವಮಾನಿಸುವಂಥ ಯಾವುದೇ ಕೆಲಸ ಮಾಡಿಲ್ಲ ಎಂದು ವಿದ್ಯಾರ್ಥಿನಿ ಮತ್ತೆ ಮತ್ತೆ ಹೇಳಿದ್ದಳು.

ಕ್ಷಮೆ ಕೇಳದಿದ್ದರೆ ಗುಂಡು ಹಾರಿಸುವುದಾಗಿಯೂ ಪುಂಡರು ಬೆದರಿಕೆ ಹಾಕಿದ್ದರು. ಈ ದಾರಿಯಲ್ಲಿ ಸಾಕಷ್ಟು ಮಂದಿ ಹಾದುಹೋಗುತ್ತಿದ್ದರೂ ಯಾರೂ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ ದುಷ್ಕರ್ಮಿಗಳನ್ನು ತಡೆಯಲಿಲ್ಲ. ಕೊನೆಗೆ ವಿದ್ಯಾರ್ಥಿನಿ ಕ್ಷಮೆ ಕೇಳಿದ್ದರಿಂದ ದುಷ್ಕರ್ಮಿಗಳು ಸ್ಥಳದಿಂದ ಹೋಗಿದ್ದರು. ಇಡೀ ಘಟನೆ ಕೋಚಿಂಗ್ ಸೆಂಟರ್‌ನ ಹೊರಗೆ ಅಳವಡಿಸಲಾಗಿದ್ದ ಸಿಸಿಟಿವಿ ಕೆಮೆರಾದಲ್ಲಿ ಸೆರೆಯಾಗಿತ್ತು. ವಿದ್ಯಾರ್ಥಿನಿ ತನ್ನ ತಂದೆ ಮತ್ತು ಸಹೋದರನನ್ನು ಕರೆಸಿ ಘಟನೆಯ ಬಗ್ಗೆ ಸಂಪೂರ್ಣವಾಗಿ ತಿಳಿಸಿದ್ದಳು.


ಇದನ್ನೂ ಓದಿ: Abu Salem: ಮುಂಬೈ ಸ್ಫೋಟದ ಪ್ರಮುಖ ಆರೋಪಿ, ಭೂಗತ ಪಾತಕಿ ಅಬು ಸಲೇಂನನ್ನು ಮನ್ಮಾಡ್‌ಗೆ ರೈಲಿನಲ್ಲಿ ಕರೆತಂದ ಪೊಲೀಸರು

ಅವರು ದುಷ್ಕರ್ಮಿಗಳನ್ನು ಹುಡುಕಲು ಪ್ರಾರಂಭಿಸಿದರು ಮತ್ತು ಗಾಂಧಿ ಕಾಲೋನಿಯಲ್ಲಿ ಪತ್ತೆ ಹಚ್ಚಿ ಅವರನ್ನು ಹಿಡಿಯಲು ಹೋದಾಗ ಅವರು ಬೈಕ್‌ ಬಿಟ್ಟು ಪರಾರಿಯಾಗಿದ್ದರು. ಬಳಿಕ ಅವರು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೈಕ್ ವಶಪಡಿಸಿಕೊಂಡು ಬೈಕ್ ವಿವರ ಹಾಗೂ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಶೋಭಿತ್ ಶರ್ಮಾ ಮತ್ತು ಉಜ್ವಲ್ ಕುಮಾರ್ ಎಂದು ಗುರುತಿಸಲಾಗಿದೆ. ಮೂರನೇ ಆರೋಪಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ. ಇಬ್ಬರು ಆರೋಪಿಗಳಿಗೆ ಪೊಲೀಸರು ಸ್ಟೇಷನ್‌ನಲ್ಲಿ ಸಖತ್‌ ʼಉಪಚಾರʼ ಮಾಡಿದ್ದಾರೆ. ಪೊಲೀಸ್‌ ಟ್ರೀಟ್‌ಮೆಂಟ್‌ಗೆ ಒಳಗಾಗಿರುವ ಆರೋಪಿಗಳು ಈಗ ನಡೆಯಲಾರದ ಸ್ಥಿತಿಯಲ್ಲಿ ಗೋಳಿಡುತ್ತಿದ್ದಾರೆ!

Continue Reading
Advertisement
ಕರ್ನಾಟಕ7 mins ago

‌MB Patil: ಕುಮಾರಸ್ವಾಮಿಯದು ಅವಕಾಶವಾದಿ ಮೈತ್ರಿ ಎಂದ ಎಂ.ಬಿ. ಪಾಟೀಲ್

Lovlina Borgohain
ಕ್ರೀಡೆ37 mins ago

Lovlina Borgohain : ಲವ್ಲಿನಾ ಬೊರ್ಗೊಹೈನ್​​ಗೆ ಸೋಲು; ಒಲಿಂಪಿಕ್ಸ್​​ನಲ್ಲಿ ಭಾರತದ ಬಾಕ್ಸಿಂಗ್ ಅಭಿಯಾನ ಅಂತ್ಯ

Bangladesh
ವಿದೇಶ45 mins ago

Bangladesh: ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ಹಿಂಸಾಚಾರ; 32 ಜನ ಸಾವು

Road Accident
ವಿಜಯಪುರ45 mins ago

Road Accident : ಅಮಾವಾಸ್ಯೆಗೆಂದು ದೇವಸ್ಥಾನಕ್ಕೆ ತೆರಳುತ್ತಿದ್ದ ಬೈಕ್‌ ಸವಾರ ಅಪಘಾತಕ್ಕೆ ಬಲಿ

Indian Currency
ವಾಣಿಜ್ಯ49 mins ago

Indian Currency: 2000 ರೂ. ನೋಟು ತಯಾರಿಸಲು 4 ರೂ. ಖರ್ಚು; 10 ರೂ. ನೋಟಿಗೆ 9.60 ರೂ. ವೆಚ್ಚ!

Pralhad Joshi
ಕರ್ನಾಟಕ51 mins ago

Pralhad Joshi: ರಾಜ್ಯದಲ್ಲಿ ಟೆಂಡರ್ ರೀತಿ ಅಧಿಕಾರಿಗಳ ವರ್ಗಾವಣೆ ದಂಧೆ: ಪ್ರಲ್ಹಾದ್‌ ಜೋಶಿ ಆರೋಪ

Parul Chaudhary
ಕ್ರೀಡೆ57 mins ago

Parul Chaudhary : ಸ್ಟೀಪಲ್​ ಚೇಸ್​​ ಫೈನಲ್​ಗೆ ಅರ್ಹತೆ ಪಡೆಯಲು ಪಾರುಲ್ ಚೌಧರಿ ವಿಫಲ

Karnataka Weather Forecast
ಮಳೆ1 hour ago

Karnataka Weather : ನಿರಂತರ ಮಳೆಗೆ ಸೋರುತ್ತಿದೆ ಸರಕಾರಿ ಶಾಲೆ ಕಟ್ಟಡ; ಮುಂದಿನ ವಾರ ಹೇಗಿರಲಿದೆ ಅಬ್ಬರ

Priyanka Goswami
ಪ್ರಮುಖ ಸುದ್ದಿ1 hour ago

Priyanka Goswami : ರೀಲ್ಸ್​ ಮಾಡೋದಲ್ಲ, ಸ್ಪರ್ಧೆಯಲ್ಲಿ ಓಡಿ ಪದಕ ಗೆಲ್ಲು; ಪ್ರಿಯಾಂಕ ಗೋಸ್ವಾಮಿಗೆ ನೆಟ್ಟಿಗರ ತಪರಾಕಿ

Health tips for Over 40 supplimnt
ಆರೋಗ್ಯ2 hours ago

Health tips for Over 40: ನಿಮಗೆ 40 ದಾಟಿತೇ? ಹಾಗಾದರೆ ಈ ಸಪ್ಲಿಮೆಂಟ್‌ಗಳು ನಿಮಗೆ ಬೇಕಾಗಬಹುದು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ5 hours ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 day ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌