ದೇಶ
Rahul Gandhi: ರಾಹುಲ್ ನಿವಾಸದಲ್ಲಿ ಹೈಡ್ರಾಮಾ, ಪೊಲೀಸರಿಗೆ ಮಾಹಿತಿ ನೀಡಲು ಸಮಯ ಕೇಳಿದ ರಾಗಾ
Rahul Gandhi: ರಾಹುಲ್ ಗಾಂಧಿ ಅವರು ಶ್ರೀನಗರದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದ ವೇಳೆ, ದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರಗಳ ಬಗ್ಗೆ ಪ್ರಸ್ತಾಪಿಸಿದ್ದರು. ಅದರ ಕುರಿತು ಮಾಹಿತಿ ಪಡೆಯಲು ಪೊಲೀಸರು ರಾಹುಲ್ ಗಾಂಧಿ ನಿವಾಸಕ್ಕೆ ತೆರಳಿದ್ದರು.
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ನಿವಾಸದಲ್ಲಿ ಹೈಡ್ರಾಮಾ ನಡೆದಿದೆ. ದೇಶದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ, ಅತ್ಯಾಚಾರಕ್ಕೀಡಾದ ಮಹಿಳೆಯರ ಜತೆ ನಾನು ಮಾತನಾಡಿದೆ ಎಂಬುದಾಗಿ ರಾಹುಲ್ ಗಾಂಧಿ ಅವರು ಶ್ರೀನಗರದಲ್ಲಿ ಮಾಡಿದ ಭಾಷಣದ ಹಿನ್ನೆಲೆಯಲ್ಲಿ ಮಾಹಿತಿ ಪಡೆಯಲು ಪೊಲೀಸರು ರಾಹುಲ್ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಆದರೆ, ಇದೇ ವೇಳೆ, ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದು ಹೈಡ್ರಾಮಾಕ್ಕೆ ಕಾರಣವಾಯಿತು.
ಮಾರ್ಚ್ 16ರಂದು ಪೊಲೀಸರು ನೋಟಿಸ್ ನೀಡಿದಂತೆ ಭಾನುವಾರ (ಮಾರ್ಚ್ 19) ದೆಹಲಿಯ 12 ತುಘಲಕ್ ಲೇನ್ನಲ್ಲಿರುವ ರಾಹುಲ್ ಗಾಂಧಿ ನಿವಾಸಕ್ಕೆ ಪೊಲೀಸರು ಭೇಟಿ ನೀಡಿದರು. ಆದರೆ, ರಾಹುಲ್ ಗಾಂಧಿ ಅವರು ತಮ್ಮ ಲೋಕಸಭೆ ಕ್ಷೇತ್ರವಾದ ವಯನಾಡ್ಗೆ ತೆರಳಿದ ಕಾರಣ ಪೊಲೀಸರ ಜತೆ ಮಾತನಾಡಲು ಆಗಲಿಲ್ಲ. ಆದಾಗ್ಯೂ, ಮಾಹಿತಿ ಒದಗಿಸಲು ಒಂದಷ್ಟು ಸಮಯ ಬೇಕು ಎಂಬುದಾಗಿ ಪೊಲೀಸರಿಗೆ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ. ಇದಾದ ಬಳಿಕ ಪೊಲೀಸರು ಮತ್ತೊಂದು ನೋಟಿಸ್ ನೀಡಿ, ಅಲ್ಲಿಂದ ತೆರಳಿದ್ದಾರೆ. ಆದರೆ, ಯಾವ ದಿನ ರಾಹುಲ್ ಗಾಂಧಿ ಅವರಿಂದ ಮಾಹಿತಿ ಪಡೆಯಲಾಗುತ್ತದೆ ಎಂಬುದರ ಕುರಿತು ತೀರ್ಮಾನ ಆಗಿಲ್ಲ.
ಕಾಂಗ್ರೆಸ್ ನಾಯಕರ ಪ್ರತಿಭಟನೆ
ರಾಹುಲ್ ಗಾಂಧಿ ನಿವಾಸಕ್ಕೆ ಪೊಲೀಸರು ಆಗಮಿಸುತ್ತಲೇ ಕಾಂಗ್ರೆಸ್ ನಾಯಕರು ನಿವಾಸಕ್ಕೆ ತೆರಳಿ ಪ್ರತಿಭಟನೆ ನಡೆಸಿದರು. ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ರಾಜ್ಯಸಭೆ ಸದಸ್ಯರಾದ ಜೈರಾಮ್ ರಮೇಶ್, ಅಭಿಷೇಕ್ ಮನು ಸಿಂಘ್ವಿ ಸೇರಿ ಹಲವರು ರಾಹುಲ್ ನಿವಾಸದ ಬಳಿ ಪ್ರತಿಭಟನೆ ನಡೆಸಿದರು. “ನರೇಂದ್ರ ಮೋದಿ ಅವರಿಗೆ ಭೀತಿಯುಂಟಾಗಿದೆ. ಹಾಗಾಗಿ, ರಾಹುಲ್ ಗಾಂಧಿ ನಿವಾಸಕ್ಕೆ ಪೊಲೀಸರನ್ನು ಕಳುಹಿಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು. ಗಲಾಟೆ ಹೆಚ್ಚಾದ ಕಾರಣ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನಾಯಕರನ್ನು ಬಂಧಿಸಿ, ಬಳಿಕ ಬಿಡುಗಡೆ ಮಾಡಿದರು.
ಕಾಂಗ್ರೆಸ್ ನಾಯಕರ ಬಂಧನ
ಏನಿದು ಪ್ರಕರಣ?
ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯ ಸಮಾರೋಪವನ್ನು ಶ್ರೀನಗರದಲ್ಲಿ ಆಯೋಜಿಸಿದ್ದರು. ಇದೇ ವೇಳೆ ಮಾತನಾಡುತ್ತ, “ದೇಶದಲ್ಲಿ ಈಗಲೂ ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯುತ್ತಿವೆ. ನಾನು ಭಾರತ್ ಜೋಡೋ ಯಾತ್ರೆ ಕೈಗೊಳ್ಳುವ ವೇಳೆ ಒಂದಷ್ಟು ಮಹಿಳೆಯರ ಜತೆ ನಾನು ಮಾತನಾಡಿದೆ. ಇವರಲ್ಲೇ ಕೆಲವು ಜನ ನಾವು ಕೂಡ ಅತ್ಯಾಚಾರ ಸಂತ್ರಸ್ತೆಯರು ಎಂಬುದಾಗಿ ಹೇಳಿದ್ದರು. ಇದರಿಂದ ನನ್ನ ಮನಸ್ಸಿಗೆ ಖೇದವಾಯಿತು” ಎಂಬುದಾಗಿ ಹೇಳಿದ್ದರು.
ರಾಹುಲ್ ಗಾಂಧಿ ಅವರು ಭಾಷಣವನ್ನು ಆಧರಿಸಿ ಅವರ ನಿವಾಸಕ್ಕೆ ಪೊಲೀಸರು ತೆರಳಿದ್ದಾರೆ. ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಅತ್ಯಾಚಾರ ಸಂತ್ರಸ್ತೆಯರ ಕುರಿತು ಮಾಹಿತಿ ಕೊಡಿ, ಅವರಿಗೆ ನ್ಯಾಯ ಒದಗಿಸಲಾಗುವುದು ಎಂದು ಪೊಲೀಸರು ಕಾಂಗ್ರೆಸ್ ನಾಯಕನಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: Viral Video: ಖರ್ಗೆ ಬೆನ್ನಿಗೆ ಕೈ ಒರೆಸಿದ ರಾಹುಲ್ ಗಾಂಧಿ, ಟಿಶ್ಯು ಪೇಪರ್ ರೀತಿ ಬಳಕೆ ಎಂದು ಟೀಕಿಸಿದ ಬಿಜೆಪಿ
ದೇಶ
ಏ.1ರಂದು ಜೈಲಿಂದ ಬಿಡುಗಡೆಯಾಗಲಿದ್ದಾರೆ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು; ಪತ್ನಿ ಟ್ವೀಟ್ ಬೆನ್ನಲ್ಲೇ ಸಿಧು ಟ್ವೀಟ್
ಪಂಜಾಬ್ ಕಾಂಗ್ರೆಸ್ನ ಅಧ್ಯಕ್ಷರಾಗಿದ್ದ ನವಜೋತ್ ಸಿಂಗ್ ಸಿಧು ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್ನಲ್ಲಿ ಕಾಂಗ್ರೆಸ್ ಸೋತ ಬಳಿಕ, ಅಂದರೆ 2022ರ ಮಾರ್ಚ್ ತಿಂಗಳಲ್ಲಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮೇ ತಿಂಗಳಲ್ಲಿ ಶಿಕ್ಷೆಯಾಗಿತ್ತು.
1988ರ ರಸ್ತೆ ಜಗಳ ಪ್ರಕರಣದಲ್ಲಿ ಸುಪ್ರೀಂಕೋರ್ಟ್ನಿಂದ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿ, ಪಟಿಯಾಲಾ ಜೈಲಿನಲ್ಲಿರುವ ಮಾಜಿ ಕ್ರಿಕೆಟರ್, ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ನಾಳೆ (ಏಪ್ರಿಲ್ 1) ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಈ ಬಗ್ಗೆ ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ಮಾಡಿದ್ದಾರೆ. ‘ಸರ್ದಾರ್ ನವಜೋತ್ ಸಿಂಗ್ ಸಿಧು ಅವರು (ತಮ್ಮನ್ನು ತಾವು ಹೀಗೆ ಉಲ್ಲೇಖಿಸಿಕೊಂಡಿದ್ದಾರೆ) ನಾಳೆ ಜೈಲಿನಿಂದ ಬಿಡುಗಡೆಯಾಗುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೇ ಮಾಹಿತಿ ಕೊಟ್ಟಿದ್ದಾರೆ’ ಎಂದು ಸಿಧು ಬರೆದುಕೊಂಡಿದ್ದಾರೆ. ನವಜೋತ್ ಸಿಂಗ್ ಸಿಧು ಬಿಡುಗಡೆಯನ್ನು ಅವರ ಪರ ವಕೀಲರಾದ ಎಚ್ಪಿಎಸ್ ವರ್ಮಾ ಕೂಡ ದೃಢಪಡಿಸಿದ್ದಾರೆ.
ಪಂಜಾಬ್ ಕಾಂಗ್ರೆಸ್ನ ಅಧ್ಯಕ್ಷರಾಗಿದ್ದ ನವಜೋತ್ ಸಿಂಗ್ ಸಿಧು ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್ನಲ್ಲಿ ಕಾಂಗ್ರೆಸ್ ಸೋತ ಬಳಿಕ, ಅಂದರೆ 2022ರ ಮಾರ್ಚ್ ತಿಂಗಳಲ್ಲಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷಕ್ಕೆ ನನ್ನ ಸೇವೆಯನ್ನು ಮುಂದುವರಿಸುತ್ತೇನೆ, ಆದರೆ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಯುತ್ತಿದ್ದೇನೆ ಎಂದು ಸೋನಿಯಾ ಗಾಂಧಿಯವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದರು. ಅದಾಗಿ ಎರಡು ತಿಂಗಳ ನಂತರ ಅಂದರೆ ಮೇ ತಿಂಗಳಲ್ಲಿ ಸುಪ್ರೀಂಕೋರ್ಟ್ನಿಂದ ಶಿಕ್ಷೆಯಾಗಿತ್ತು.
ಏನಿದು ರಸ್ತೆ ರಗಳೆ?
1988ರ ಡಿಸೆಂಬರ್ನಲ್ಲಿ ಪಟಿಯಾಲಾದ ಪಾರ್ಕಿಂಗ್ ಸ್ಥಳವೊಂದರಲ್ಲಿ ನವಜೋತ್ ಸಿಂಗ್ ಸಿಧು ಮತ್ತು ಅವರ ಸಹಚರ ರೂಪಿಂದರ್ ಸಿಂಗ್ ಸಂಧು ಸೇರಿ, ಹಿರಿಯ ನಾಗರಿಕ ಗುರ್ನಾಮ್ ಸಿಂಗ್ರಿಗೆ ಬೈದಿದ್ದಲ್ಲದೆ, ಅವರನ್ನು ಕಾರಿನಿಂದ ಕೆಳಗೆ ಇಳಿದು ತಲೆಗೆ ಹೊಡೆದಿದ್ದರು. ಅದಾದ ಕೆಲವು ದಿನಗಳಲ್ಲಿ ಗುರ್ನಾಮ್ ಸಿಂಗ್ ಮೃತಪಟ್ಟಿದ್ದರು. ಬಳಿಕ ಗುರ್ನಾಮ್ ಸಿಂಗ್ ಕುಟುಂಬದವರು ಕೋರ್ಟ್ ಮೆಟ್ಟಿಲೇರಿದ್ದರು. ಮೊದಲು ಸೆಷನ್ಸ್ ಕೋರ್ಟ್ಗೆ ಸಲ್ಲಿಕೆಯಾಗಿದ್ದ ಅರ್ಜಿ, ಯಾವುದೇ ಸೂಕ್ತ ದಾಖಲೆಯಿಲ್ಲ ಎಂಬ ಕಾರಣಕ್ಕೆ ವಜಾಗೊಂಡಿತ್ತು. ನಂತರ ಕುಟುಂಬದವರು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಇದೊಂದು ಶಿಕ್ಷಾರ್ಹ ನರಹತ್ಯೆ ಎಂದು ತೀರ್ಪುಕೊಟ್ಟಿದ್ದಲ್ಲದೆ, ಸಿಧುಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.
ಹೈಕೋರ್ಟ್ ತೀರ್ಪಿನ ವಿರುದ್ಧ ನವಜೋತ್ ಸಿಂಗ್ ಸಿಧು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. 2018ರಲ್ಲಿ ತೀರ್ಪು ನೀಡಿದ್ದ ಸರ್ವೋಚ್ಛ ನ್ಯಾಯಾಲಯ, ಗುರ್ನಾಮ್ ಸಿಂಗ್ ಮೃತಪಟ್ಟಿದ್ದು ಸಿಧು ನೀಡಿದ ಏಟಿನಿಂದಲೇ ಎಂಬುದಕ್ಕೆ ಸಾಕ್ಷಿಯಿಲ್ಲ ಎಂದು ಹೇಳಿ ಸಿಧು ವಿರುದ್ಧ ದಾಖಲಾಗಿದ್ದ ನರಹತ್ಯೆ ಕೇಸ್ನ್ನು ಖುಲಾಸೆಗೊಳಿಸಿತ್ತು. ಆದರೆ ಹಿರಿಯ ನಾಗರಿಕರ ಮೇಲೆ ಹಲ್ಲೆ ಮಾಡಿದ್ದು ತಪ್ಪು ಎಂದು ಹೇಳಿ, ಒಂದು ಸಾವಿರ ರೂಪಾಯಿ ದಂಡ ವಿಧಿಸಿತ್ತು. ಆದರೆ ಸುಪ್ರೀಂಕೋರ್ಟ್ನ ಈ ತೀರ್ಪು ತೃಪ್ತಿ ತಂದಿಲ್ಲವೆಂದು ಗುರ್ನಾಮ್ ಕುಟುಂಬ ಮತ್ತೆ ಸುಪ್ರೀಂಕೋರ್ಟ್ಗೇ ಮೇಲ್ಮನವಿ ಸಲ್ಲಿಸಿತ್ತು. ಅದರ ಆದೇಶ 2022ರ ಮೇ 19ರಂದು ಹೊರಬಿದ್ದಿತ್ತು. ಸಿಧುಗೆ ಜೈಲಾಗಿತ್ತು.
ಪತ್ನಿಗೆ ಕ್ಯಾನ್ಸರ್
ವಾರದ ಹಿಂದೆ ನವಜೋತ್ ಸಿಂಗ್ ಸಿಧು ಪತ್ನಿ ನವಜೋತ್ ಕೌರ್ ಟ್ವೀಟ್ ಮಾಡಿ, ತಮಗೆ ಸ್ತನ ಕ್ಯಾನ್ಸರ್ ಇರುವುದಾಗಿ ಪತ್ತೆಯಾಗಿದೆ. ಈ ಹೊತ್ತಲ್ಲಿ ಪತಿ ನವಜೋತ್ ಸಿಂಗ್ ಸಿಧು ತುಂಬ ನೆನಪಾಗುತ್ತಾರೆ ಎಂದು ಭಾವನಾತ್ಮಕವಾಗಿ ಹೇಳಿದ್ದರು. ನಾನು ನಿಮಗಾಗಿ ಕಾಯುತ್ತಲೇ ಇದ್ದೇನೆ. ಆದರೆ, ಸತ್ಯ ಯಾವಾಗಲೂ ತುಂಬ ಪ್ರಬಲವಾಗಿರುತ್ತದೆ. ಹಾಗಾಗಿ ನಿಮಗೆ ಅಷ್ಟೊಂದು ಅಗ್ನಿಪರೀಕ್ಷೆಗಳು ಎದುರಾಗಿವೆ. ಅಷ್ಟಕ್ಕೂ ಇದು ಕಲಿಯುಗ. ಆದರೆ, ನಾವು ಯಾರನ್ನೂ ದೂರುವಂತಿಲ್ಲ. ಏಕೆಂದರೆ, ಇದು ದೇವರ ಆಟ ಎಂದಿದ್ದರು. ಪತ್ನಿಯ ಈ ಭಾವನಾತ್ಮಕ ಟ್ವೀಟ್ ಬೆನ್ನಲ್ಲೇ, ನವಜೋತ್ ಸಿಂಗ್ ಸಿಧು ಬಿಡುಗಡೆಯ ಸುದ್ದಿಯೂ ಹೊರಬಿದ್ದಿದೆ.
ಆರೋಗ್ಯ
New Virus: ಕೊರೊನಾ ಬೆನ್ನಲ್ಲೇ ಪತ್ತೆಯಾಯ್ತು ಮತ್ತೊಂಡು ಡೆಡ್ಲಿ ವೈರಸ್! ಭಾರತದಲ್ಲೇ ಮೊದಲ ಕೇಸ್!
ಕೊರೊನಾ ಸೋಂಕಿನ ಬೆನ್ನಲ್ಲೇ ಮತ್ತೊಂದು ಸೋಂಕಿನ (New Virus) ಸುದ್ದಿ ಎಲ್ಲೆಡೆ ಹರಿದಾಡಿದೆ. ಸಿಲ್ವರ್ ಲೀಫ್ ಡಿಸೀಸ್ ಹೆಸರಿನ ಕಾಯಿಲೆ ಭಾರತದಲ್ಲಿ ಮೊದಲನೆಯದಾಗಿ ಪತ್ತೆಯಾಗಿರುವುದಾಗಿ ವರದಿಯಾಗಿದೆ.
ನವದೆಹಲಿ: ಕೊರೊನಾ ಸೋಂಕು ವಿಶ್ವಾದ್ಯಂತ ಭಾರೀ ತಲ್ಲಣವನ್ನೇ ಉಂಟುಮಾಡಿತ್ತು. ಲಕ್ಷಾಂತರ ಜೀವಗಳು ಈ ಸೋಂಕಿನಿಂದಾಗಿ ಸಾವನ್ನಪ್ಪಿವೆ. ಅದರ ಬೆನ್ನಲ್ಲೇ ಇದೀಗ ಮತ್ತೊಂದು ವೈರಸ್ (New Virus) ಬಂದಿರುವ ಬಗ್ಗೆ ಸುದ್ದಿ ಹರಿದಾಡಲಾರಂಭಿಸಿದೆ. ಅದರಲ್ಲೂ ಭಾರತದಲ್ಲಿಯೇ ಮೊದಲನೆಯದಾಗಿ ಸೋಂಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಇದನ್ನೂ ಓದಿ: Covid-19 Cases: ಕೊರೊನಾ ಸೋಂಕಿನ ಕೇಸ್ನಲ್ಲಿ 24ಗಂಟೆಯಲ್ಲಿ ಶೇ.40 ಏರಿಕೆ; ಇಂದು 3ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲು
ಹೌದು. ಭಾರತದಲ್ಲಿ ಸಸ್ಯಗಳಿಗೆ ಹೆಚ್ಚಾಗಿ ಕಾಡುವ ರೋಗವೆಂದರೆ ಅದು ಸಿಲ್ವರ್ ಲೀಫ್ ರೋಗ. ಈ ರೋಗದ ವೈರಸ್ ಇದೀಗ ಮಾನವನ ದೇಹಕ್ಕೂ ಹೊಗ್ಗಿರುವುದಾಗಿ ವರದಿಯಾಗಿದೆ. ಭಾರತದ ರೈತನೊಬ್ಬನಿಗೆ ಈ ಸೋಂಕು ತಗುಲಿದ್ದು, ಆತನಲ್ಲಿ ಜ್ವರ, ಕೆಮ್ಮುವಿನಂತಹ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ವರದಿಯಾಗಿದೆ. ಇದುವರೆಗೆ ಈ ಸೋಂಕು ಯಾವುದೇ ದೇಶದಲ್ಲಿಯೂ ಮನುಷ್ಯರಿಗೆ ಹಬ್ಬಿರಲಿಲ್ಲ. ಇದೇ ಮೊದಲನೇ ಬಾರಿಗೆ ಇಂತದ್ದೊಂದು ಪ್ರಕರಣ ವರದಿಯಾಗಿದೆ.
ಅಂದ ಹಾಗೆ ಈ ಸೋಂಕು ಯಾವಾಗ ರೈತನಿಗೆ ತಗುಲಿದ್ದು ಎನ್ನುವ ವಿಚಾರದಲ್ಲಿ ಸ್ಪಷ್ಟ ಮಾಹಿತಿಯಿಲ್ಲ. ಆದರೆ ಈ ಕುರಿತಾದ ವರದಿಯೊಂದು ʼಮೆಡಿಕಲ್ ಮೈಕೋಲಜಿ ಕೇಸ್ ರಿಪೋರ್ಟ್ಸ್ʼ ಜರ್ನಲ್ನಲ್ಲಿ ದಾಖಲಾಗಿದೆ.
ಇದನ್ನೂ ಓದಿ: Coronavirus: ಇಂದು 1800ಕ್ಕೂ ಅಧಿಕ ಕೊರೊನಾ ಕೇಸ್ಗಳು ಪತ್ತೆ; ಏಪ್ರಿಲ್ನಲ್ಲಿ 2 ದಿನ ಆಸ್ಪತ್ರೆಗಳಲ್ಲಿ ಅಣುಕು ಕಾರ್ಯಾಚರಣೆ
ಇತ್ತೀಚೆಗೆ ಅಮೆರಿಕದ ಆರೋಗ್ಯ ಅಧಿಕಾರಿಗಳು ವೈರಸ್ ಒಂದರ ಬಗ್ಗೆ ಎಚ್ಚರಿಕೆ ಕೊಟ್ಟಿದ್ದರು. ಕ್ಯಾಂಡಿಡಾ ಔರಿಸ್ ಫಂಗಸ್ ಹೆಸರಿನ ಸೋಂಕು ಇತ್ತೀಚಿನ ದಿನಗಳಲ್ಲಿ ಮೂರು ಪಟ್ಟು ಹೆಚ್ಚಾಗಿದೆ ಎಂದು ಅವರು ಹೇಳಿದ್ದರು. ಹಾಗೆಯೇ ಈ ಸೋಂಕಿಗೆ ತುತ್ತಾಗುವವರಲ್ಲಿ ಶೇ.60 ಮಂದಿ ಸಾವನ್ನಪ್ಪುವ ಸಾಧ್ಯತೆಯಿದೆ ಎಂದೂ ಅವರು ತಿಳಿಸಿದ್ದರು. ಅದರ ಬೆನ್ನಲ್ಲೇ ಇದೀಗ ಭಾರತದಲ್ಲಿ ಮತ್ತೊಂದು ಸೋಂಕಿನ ವಿಚಾರ ಸುದ್ದಿಯಾಗಿದೆ. ಇದರ ಬಗ್ಗೆ ಭಾರತೀಯ ಆರೋಗ್ಯ ಇಲಾಖೆಯಿಂದ ಯಾವುದೇ ಮಾಹಿತಿ ಸೋರಿಕೆಯಾಗಿಲ್ಲ.
ದೇಶ
ಒಂದೇ ಕುಟುಂಬದ 6 ಮಂದಿಯ ಪ್ರಾಣ ತೆಗೆದ ಸೊಳ್ಳೆ ಬತ್ತಿ; ಹಾಸಿಗೆ ಮೇಲೆ ಬಿದ್ದು ಭುಗಿಲೆದ್ದ ಹೊಗೆ, ಬೆಂಕಿ
ಮುಂಜಾನೆ ಹೊತ್ತಿಗೆ ಆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ನೆರೆಯವರು ಪೊಲೀಸರಿಗೆ ಕರೆ ಮಾಡಿದ್ದರು. ಅಲ್ಲಿಗೆ ಧಾವಿಸಿದ ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ.
ನವ ದೆಹಲಿ: ಸೊಳ್ಳೆಬತ್ತಿ ಹಾಸಿಗೆ (mosquito coil) ಮೇಲೆ ಬಿದ್ದು, ಅದರಿಂದ ಹೊಮ್ಮಿದ ವಿಷಪೂರಿತ ಹೊಗೆಯಿಂದ ಉಸಿರುಕಟ್ಟಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದಾರೆ. ಈ ಘಟನೆ ವರದಿಯಾಗಿದ್ದು ದೆಹಲಿಯ ಈಶಾನ್ಯ ಭಾಗದಲ್ಲಿರುವ (New Delhi) ಶಾಸ್ತ್ರಿಪಾರ್ಕ್ ಏರಿಯಾದಿಂದ. ಸೊಳ್ಳೆಯಿಂದ ಪಾರಾಗಲು ಈ ಮನೆಯಲ್ಲಿ ಸೊಳ್ಳೆ ಬತ್ತಿ ಹಾಕಿಕೊಂಡು ಎಲ್ಲರೂ ಮಲಗಿದ್ದರು. ರಾತ್ರಿ ಯಾವಾಗಲೋ ಆ ಬತ್ತಿ ಹಾಸಿಗೆ ಮೇಲೆ ಬಿದ್ದಿದೆ. ಸಾಮಾನ್ಯವಾಗಿ ಸೊಳ್ಳೆ ಬತ್ತಿಯ ಹೊಗೆಯೇ ಘಾಟಾಗಿ ಇರುತ್ತದೆ. ಅದು ಹಾಸಿಗೆ ಮೇಲೆ ಬಿದ್ದು, ಹಾಸಿಗೆಯ ಬಟ್ಟೆಯ ಹೊಗೆಯೂ ಜತೆಗೆ ಸೇರಿ, ಆರೂ ಮಂದಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಮುಂಜಾನೆ ಹೊತ್ತಿಗೆ ಆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ನೆರೆಯವರು ಪೊಲೀಸರಿಗೆ ಕರೆ ಮಾಡಿದ್ದರು. ಅಲ್ಲಿಗೆ ಧಾವಿಸಿದ ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ. ಈಶಾನ್ಯ ದೆಹಲಿ ಜಿಲ್ಲೆಯ ಡಿಸಿಪಿ ಜಾಯ್ ಟಿರ್ಕಿ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿ ‘ಮಚ್ಚಿ ಮಾರ್ಕೆಟ್ ಬಳಿಯಿರುವ ಮಾಜಾರ್ ವಾಲಾ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದಾಗಿ ಬೆಳಗ್ಗೆ ಹೊತ್ತಿಗೆ ಶಾಸ್ತ್ರಿಪಾರ್ಕ್ ಪೊಲೀಸ್ ಸ್ಟೇಶನ್ಗೆ ಕರೆಬಂತು. ಪೊಲೀಸರು ಮತ್ತು ಅಗ್ನಿಶಾಮಕದಳದ ಸಿಬ್ಬಂದಿ ತಕ್ಷಣವೇ ಅಲ್ಲಿಗೆ ತೆರಳಿದರು. ಮೃತದೇಹಗಳನ್ನೆಲ್ಲ ಜಗ್ ಪ್ರವೇಶ್ ಚಂದ್ರ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Family suicide : ಮಂಗಳೂರಿನ ಲಾಡ್ಜ್ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಮೃತರು ಮೈಸೂರಿನವರು
ಈ ಮನೆಯಲ್ಲಿ ಒಟ್ಟು ಒಂಭತ್ತು ಮಂದಿ ಇದ್ದರು. ಅದರಲ್ಲಿ ಮೂವರು ಅಪಾಯದಿಂದ ಪಾರಾಗಿದ್ದಾರೆ. ಆದರೆ ಅವರೂ ಕೂಡ ಎಚ್ಚರ ತಪ್ಪಿದ್ದರು. ಆ ಮೂವರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರಲ್ಲಿ ಒಬ್ಬರು ಪ್ರಾಥಮಿಕ ಚಿಕಿತ್ಸೆಗೇ ಚೇತರಿಸಿಕೊಂಡು, ಡಿಸ್ಚಾರ್ಜ್ ಆಗಿದ್ದಾರೆ. ಇನ್ನಿಬ್ಬರಿಗೆ ಸುಟ್ಟಗಾಯಗಳೂ ಆಗಿದ್ದು ಅವರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಜಾಯ್ ಟಿರ್ಕಿ ತಿಳಿಸಿದ್ದಾರೆ. ಮೃತಪಟ್ಟವರಲ್ಲಿ ಒಂದು ಮಗು, ನಾಲ್ವರು ಪುರುಷರು, ಒಬ್ಬಳು ಮಹಿಳೆ ಸೇರಿದ್ದಾರೆ.
ಕೋರ್ಟ್
Supreme Court: ದ್ವೇಷ ಭಾಷಣ ತಡೆಗೆ ಸರ್ಕಾರಕ್ಕೆ ಶಕ್ತಿ ಇಲ್ಲವೇ?: ಕೇಂದ್ರ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Supreme Court: ದ್ವೇಷ ಭಾಷಣ ತಡೆಗೆ ವ್ಯವಸ್ಥೆಯನ್ನು ರೂಪಿಸುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರ ವಿರುದ್ದ ಸುಪ್ರೀಂ ಕೋರ್ಟ್ ಗರಂ ಆಗಿದೆ. ಈ ವಿಷಯದಲ್ಲಿ ಸರ್ಕಾರವು ಶಕ್ತಿಹೀನವಾಗಿದೆ ಎಂದು ಆರೋಪಿಸಿದೆ.
ನವದೆಹಲಿ: ಕಾಲಮಿತಿಯೊಳಗೇ ದೇಶಾದ್ಯಂತ ದ್ವೇಷ ಭಾಷಣವನ್ನು ಹತ್ತಿಕ್ಕಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಈ ವಿಷಯದಲ್ಲಿ ಸರ್ಕಾರವು ಶಕ್ತಿಹೀನವಾಗಿದೆ(State is Impotent) ಎಂದು ಸುಪ್ರೀಂ ಕೋರ್ಟ್ (Supreme Court) ನ್ಯಾಯಮೂರ್ತಿ ಕೆ ಎಂ ಜೋಸೆಫ್ ಅಭಿಪ್ರಾಯಪಟ್ಟಿದ್ದಾರೆ. ರ್ಯಾಲಿಗಳಲ್ಲಿ ದ್ವೇಷದ ಭಾಷಣಗಳ ವಿರುದ್ಧ ಕ್ರಮಕೈಗೊಳ್ಳಲು ವಿಫಲವಾದ ಆರೋಪದ ಮೇಲೆ ಮಹಾರಾಷ್ಟ್ರದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಜಸ್ಟೀಸ್ ಜೋಸಫ್ ಅವರು, ಈ ವಿಷಯದಲ್ಲಿ ಮೌನವಾಗಿರುವುದಾದರೆ ನಮಗೆ ಸರ್ಕಾರವೇಕೆ ಬೇಕು ಎಂದು ಪ್ರಶ್ನಿಸಿದರು.
ಭಾತೃತ್ವ ಮತ್ತು ಸಹಿಷ್ಣುತೆಯ ಮಹತ್ವದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಜಸ್ಟೀಸ್ ಜೋಸೆಫ್,
ಪ್ರತಿದಿನ ನೀವು ನ್ಯಾಯಾಲಯದಲ್ಲಿ ಕುಳಿತುಕೊಳ್ಳುತ್ತೀರಿ ಮತ್ತು ಸುತ್ತಮುತ್ತಲಿನ ಪ್ರತಿಯೊಬ್ಬರೂ ನಿಮ್ಮ ಬಗ್ಗೆ ಕೆಟ್ಟದ್ದನ್ನು ಹೇಳುತ್ತಾರೆಂದು ಭಾವಿಸೋಣ, ಮನುಷ್ಯನಿಗೆ ಅತ್ಯಂತ ಮುಖ್ಯವಾದ ವಿಷಯವೆಂದರೆ ಘನತೆ. ನಿತ್ಯವೂ ಅದನ್ನು ಹಾಳುಮಾಡುತ್ತಿದ್ದರೆ, ಪಾಕಿಸ್ತಾನಕ್ಕೆ ಹೋಗು ಎಂಬಂತೆ ಕೆಲವು ಹೇಳಿಕೆಗಳನ್ನು ನೀಡಲಾಗುತ್ತಿದೆ. ಈ ವ್ಯಕ್ತಿಗಳು ನಿಜವಾಗಿಯೂ ಈ ದೇಶವನ್ನು ಆರಿಸಿಕೊಂಡರು. ಅವರು ನಮ್ಮ ಸಹೋದರ ಮತ್ತು ಸಹೋದರಿಯರಂತೆ. ಒಂದೊಮ್ಮೆ ನಾವು ಸೂಪರ್ ಪವರ್ ಆಗಲು ಬಯಸಿದರೆ, ಮೊದಲು ದೇಶದಲ್ಲಿ ಕಾನೂನು ಅನುಷ್ಠಾನ ನಡೆಯಬೇಕು ಎಂದು ಅವರು ಹೇಳಿದರು.
ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮಹ್ತಾ ಅವರು, ಅರ್ಜಿದಾರರು ಈ ಪ್ರಕರಣದಲ್ಲಿ ಸೆಲೆಕ್ಟಿವ್ ಆಗಿ ನಡೆದುಕೊಳ್ಳುತ್ತಿದ್ದಾರೆಂದು ಆರೋಪಿಸಿದರು. ಅರ್ಜಿದಾರರಾಗಿರುವ ವ್ಯಕ್ತಿ ತನ್ನ ಸ್ವಂತ ರಾಜ್ಯದ (ಕೇರಳ) ನ್ಯಾಯಾಲಯದ ಮುಂದೆ ನಿದರ್ಶನಗಳನ್ನು ಕೋರುತ್ತಿಲ್ಲ ಎಂದು ಹೇಳಿದರು. ಮಹಾರಾಷ್ಟ್ರದಲ್ಲಿ ಮಾತ್ರ ದ್ವೇಷ ಭಾಷಣಗಳ ಪ್ರಕರಣಗಳನ್ನು ಪರಿಗಣಿಸಬಾರದು. ಆದರೆ ಕೇರಳ ಮತ್ತು ತಮಿಳುನಾಡಿನಂತಹ ರಾಜ್ಯಗಳಲ್ಲಿ ಇದೇ ರೀತಿಯ ನಿದರ್ಶನಗಳನ್ನು ನೋಡಬೇಕು ಎಂಬ ಸಂಗತಿಯನ್ನು ಕೋರ್ಟ್ ಗಮನಕ್ಕೆ ತರಲಾಯಿತು.
ಇದನ್ನೂ ಓದಿ: Supreme Court: ದ್ವೇಷ ಭಾಷಣದ ಆರೋಪ, ಹಿಂದೂ ಜನ್ ಆಕ್ರೋಶ್ ಸಭೆ ಚಿತ್ರೀಕರಿಸಲು ಕೋರ್ಟ್ ಸೂಚನೆ
ಕೇರಳದಲ್ಲಿ ಹಿಂದೂಗಳ ವಿರುದ್ಧ ದ್ವೇಷ ಭಾಷಣಗಳನ್ನು ಮಾಡಲಾಗುತ್ತಿದೆ ಎಂದು ಸಂಗತಿಯನ್ನು ಹೈಲೈಟ್ ಮಾಡಿದ ತುಷಾರ್ ಮಹ್ತಾ ಅವರು, ನ್ಯಾಯಾಲಯವು ಈ ಬಗ್ಗೆ ಯಾಕೆ ಸ್ವಯಂ ಆಗಿ ಪ್ರಕರಣವನ್ನು ಕೈಗೆತ್ತಿಕೊಳ್ಳಲಿಲ್ಲ ಎಂದು ಪ್ರಶ್ನಿಸಿದರು. ಫೆಬ್ರವರಿ 5 ರಂದು ಮುಂಬೈನಲ್ಲಿ ಹಿಂದೂ ಜನ ಆಕ್ರೋಶ್ ಸಭಾ ಆಯೋಜಿಸಿದ್ದ ಕಾರ್ಯಕ್ರಮವನ್ನು ವಿಡಿಯೋಗ್ರಾಫ್ ಮಾಡಿ ವರದಿ ಸಲ್ಲಿಸುವಂತೆ ಫೆಬ್ರವರಿ ಮೊದಲ ವಾರದಲ್ಲಿ ಸುಪ್ರೀಂ ಕೋರ್ಟ್ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.
-
ಸುವಚನ10 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ7 hours ago
Chenab Bridge | ಐಫೆಲ್ ಟವರ್ಗಿಂತಲೂ ಎತ್ತರದ ರೈಲ್ವೇ ಸೇತುವೆ ಜಮ್ಮು ಕಾಶ್ಮೀರದಲ್ಲಿ ಲೋಕಾರ್ಪಣೆಗೆ ಸಿದ್ಧ
-
ಪ್ರಮುಖ ಸುದ್ದಿ16 hours ago
ವಿಸ್ತಾರ ಸಂಪಾದಕೀಯ: ಹಿಂದಿ ಬಗ್ಗೆ ಪೂರ್ವಗ್ರಹ ಬೇಡ, ಹಾಗಂತ ಹೇರಿಕೆ ಸಲ್ಲದು
-
ಕರ್ನಾಟಕ8 hours ago
SSLC Exam 2023: ಇಂದಿನಿಂದ SSLC ಎಕ್ಸಾಂ; ಪರೀಕ್ಷೆ ಬರೆಯಲಿರುವ 8.42 ಲಕ್ಷ ವಿದ್ಯಾರ್ಥಿಗಳು
-
ಕ್ರಿಕೆಟ್23 hours ago
IPL 2023: ಗುಜರಾತ್ vs ಚೆನ್ನೈ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
-
ವೈರಲ್ ನ್ಯೂಸ್23 hours ago
Viral Video: ಇದು ರೋಲ್ಸ್ ರಾಯ್ಸ್ ಆಫ್ ಆಟೋ; ಒಂದು ಬಟನ್ ಪ್ರೆಸ್ ಮಾಡಿದ್ರೆ ಸಾಕು ಮೇಲ್ಭಾಗ ತೆರೆದುಕೊಳ್ಳತ್ತೆ!
-
ಕರ್ನಾಟಕ19 hours ago
ವಿಸ್ತಾರ Special: ಬಿಜೆಪಿ ಇತಿಹಾಸದಲ್ಲೇ ಮೊದಲ ಪ್ರಯತ್ನ ಇದು: ಅಭ್ಯರ್ಥಿ ಆಯ್ಕೆಗೆ ಶುಕ್ರವಾರ ನಡೆಯಲಿದೆ ಆಂತರಿಕ ಚುನಾವಣೆ
-
ಕ್ರಿಕೆಟ್20 hours ago
IPL 203 : ಐಪಿಎಲ್ 16ನೇ ಆವೃತ್ತಿಯ ವೇಳಾಪಟ್ಟಿ ಇಲ್ಲಿದೆ