ಶಾಲಾ ಶಿಕ್ಷಕಿಯಿಂದ ರಾಷ್ಟ್ರಪತಿ ತನಕ ದ್ರೌಪದಿ ಮುರ್ಮು ಸಾಧನೆಯ ಜೈತ್ರಯಾತ್ರೆ - Vistara News

ದೇಶ

ಶಾಲಾ ಶಿಕ್ಷಕಿಯಿಂದ ರಾಷ್ಟ್ರಪತಿ ತನಕ ದ್ರೌಪದಿ ಮುರ್ಮು ಸಾಧನೆಯ ಜೈತ್ರಯಾತ್ರೆ

ಒಡಿಶಾದ ಬುಡಕಟ್ಟು ಸಮುದಾಯದ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ದ್ರೌಪದಿ ಮುರ್ಮು, 15ನೇ ರಾಷ್ಟ್ರಪತಿ ಹುದ್ದೆಯನ್ನು ವಹಿಸಲಿರುವ ಬುಡಕಟ್ಟು ಸಮುದಾಯದ ಮೊದಲ ಮಹಿಳೆಯಾಗಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

VISTARANEWS.COM


on

draupadi murmu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತದ 15ನೇ ರಾಷ್ಟ್ರಪತಿಯಾಗಿ ಅಧಿಕಾರ ವಹಿಸಲಿರುವ ಬುಡಕಟ್ಟು ಸಮುದಾಯದ ಮೊದಲ ಮಹಿಳೆ ಎಂಬ ಐತಿಹಾಸಿಕ ಸಾಧನೆಗೆ ದ್ರೌಪದಿ ಮುರ್ಮು ಅವರು ಪಾತ್ರರಾಗಿದ್ದಾರೆ. ಒಡಿಶಾದಲ್ಲಿ ಹಿಂದುಳಿದ ಆದಿವಾಸಿ/ ಬುಡಕಟ್ಟು ಸಮುದಾಯದ ಸಾಮಾನ್ಯ ಕುಟುಂಬದಲ್ಲಿ ಜನಿಸಿ, ಕಷ್ಟಕಾರ್ಪಣ್ಯಗಳ ನಡುವೆ ಧೃತಿಗೆಡದೆ ಓದನ್ನು ಮುಂದುವರಿಸಿ ಶಾಲಾ ಶಿಕ್ಷಕಿಯಾಗಿದ್ದ ಅವರು ಬಳಿಕ ಅಲ್ಲಿಗೇ ಸೀಮಿತರಾಗಲಿಲ್ಲ. ರಾಜಕೀಯ ಕ್ಷೇತ್ರವನ್ನು ಪ್ರವೇಶಿಸಿ, ಕೌನ್ಸಿಲರ್‌, ಶಾಸಕಿ, ಸಚಿವೆ, ರಾಜ್ಯಪಾಲೆ ಮತ್ತು ಇದೀಗ ರಾಷ್ಟ್ರಪತಿ ಹುದ್ದೆಯ ತನಕ ಸಾಗಿ ಬಂದ ಹಾದಿ ಎಲ್ಲರಿಗೂ ಆದರ್ಶಪ್ರಾಯ. ಮುಖ್ಯವಾಗಿ ಮಹಿಳೆಯರಿಗೆ ಹಾಗೂ ಬುಡಕಟ್ಟು ಸಮುದಾಯದ ಜನತೆಗೆ ವಿಶೇಷ ಪ್ರೇರಣೆ ನೀಡಬಲ್ಲ ದ್ರೌಪದಿ ಮುರ್ಮು ಅವರ ಹಿನ್ನೆಲೆ, ಕುಟುಂಬ, ಬಾಲ್ಯ, ಶಿಕ್ಷಣ, ವೃತ್ತಿ, ರಾಜಕೀಯ, ಸಾಮಾಜಿಕ ಕ್ಷೇತ್ರದ ಸಾಧನೆಯ ವಿಹಂಗಮ ನೋಟ ಇಲ್ಲಿದೆ.

ಒಡಿಶಾದ ಮಯೂರ್‌ ಭಂಜ್‌ನಲ್ಲಿ ಜನನ

1958ರಲ್ಲಿ ಜನಿಸಿದ ಮುರ್ಮು ಅವರಿಗೆ ಈಗ 64 ವರ್ಷ. ಒಡಿಶಾದ ಮಯೂರ್‌ಭಂಜ್‌ ಎಂಬಲ್ಲಿನ ಬುಡಕಟ್ಟು ಸಮುದಾಯದಲ್ಲಿ ಜನಿಸಿದರು. ಬಿಎ ವರೆಗೂ ಶಿಕ್ಷಣ ಪಡೆದಿದ್ದು, ರಾಜಕಾರಣ ಸೇರುವ ಮುನ್ನ ಶಾಲಾ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ತಂದೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿದ್ದರು. ಹಿಂದುಳಿದ ಜಿಲ್ಲೆಯ ಬಡ ಕುಟುಂಬದಲ್ಲಿ ಜನಿಸಿದ ದ್ರೌಪದಿ ಮುರ್ಮು ಅವರ ಬಾಲ್ಯದ ಕಾಲ ಸವಾಲುಗಳಿಂದ ಹೊರತಾಗಿರಲಿಲ್ಲ. ಎಲ್ಲ ಅಡೆತಡೆಗಳನ್ನು ಅವರು ದಿಟ್ಟತನದಿಂದ ಎದುರಿಸಿದರು. ಮಯೂರ್‌ ಭಂಜ್‌, ಒಡಿಶಾ ರಾಜಧಾನಿ ಭುವನೇಶ್ವರದಿಂದ ೨೮೭ ಕಿ.ಮೀ ದೂರದಲ್ಲಿದೆ.

ರಾಜಕೀಯ ಜೀವನದ ಆರಂಭಿಕ ಘಟ್ಟ: 1997ರಲ್ಲಿ ಬಿಜೆಪಿಗೆ ಸೇರ್ಪಡೆಯಾದ ದ್ರೌಪದಿ ಮುರ್ಮು ಅವರು ಅದೇ ವರ್ಷ ರಾಯ್‌ರಂಗ್‌ಪುರದಲ್ಲಿ ಕೌನ್ಸಿಲರ್‌ ಆಗಿ ಆಯ್ಕೆಯಾದರು. ಬಳಿಕ ಅವರು ಹಿಂತಿರುಗಿ ನೋಡಿದ್ದೇ ಇಲ್ಲ. ಒಡಿಶಾ ರಾಜಕಾರಣದಲ್ಲಿ ಸಾಧನೆಯ ಒಂದೊಂದೇ ಮೆಟ್ಟಿಲೇರಿದರು. 2000ದಲ್ಲಿ ರಾಯ್‌ರಂಗ್‌ಪುರ ಕ್ಷೇತ್ರದ ಶಾಸಕಿಯಾಗಿ ಆಯ್ಕೆಯಾದರು. ಬಿಜೆಪಿ ಮತ್ತು ಬಿಜು ಜನತಾದಳ ಮೈತ್ರಿಕೂಟದ ಸರ್ಕಾರದಲ್ಲಿ, ಸಿಎಂ ನವೀನ್‌ ಕುಮಾರ್‌ ಪಾಟ್ನಾಯಕ್‌ ಅವರ ಸಚಿವ ಸಂಪುಟದಲ್ಲಿ ಸಾರಿಗೆ, ವಾಣಿಜ್ಯ, ಮೀನುಗಾರಿಕೆ ಸಚಿವರಾಗಿ ಕಾರ್ಯ ನಿರ್ವಹಿಸಿದರು. 2004ರಲ್ಲಿ ಮತ್ತೆ ಶಾಸಕಿಯಾಗಿ ಆರಿಸಿ ಬಂದರು. 2006ರಲ್ಲಿ ಬಿಜೆಪಿ ಪರಿಶಿಷ್ಟ ಪಂಗಡ ಮೋರ್ಛಾದ ಅಧ್ಯಕ್ಷೆಯಾದರು. ೨೦೦೭ರಲ್ಲಿ ಒಡಿಶಾ ಅಸೆಂಬ್ಲಿಯಿಂದ ಉತ್ತಮ ಶಾಸಕರಿಗೆ ನೀಡುವ ನೀಲಕಂಠ ಪ್ರಶಸ್ತಿಯ ಗೌರವಕ್ಕೆ ಪಾತ್ರರಾಗಿದ್ದರು. ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಶಿಕ್ಷಕಿಯಾಗಿದ್ದ ದ್ರೌಪದಿ ಮುರ್ಮು

” ನನ್ನ ಅಮ್ಮ ಭಾರಿ ಶಿಸ್ತಿನ ಅಮ್ಮ ಮತ್ತು ಟೀಚರ್‌. ಪ್ರಾಥಮಿಕ ಶಾಲೆಯಲ್ಲಿ ನನಗೂ ಟೀಚರ್‌ ಆಗಿದ್ದರು. ಆಗ ನನಗೆ ಡಬಲ್‌ ಪ್ರೆಷರ್‌. ಒಂದು ಕಡೆ ಮಗಳಾಗಿ, ಇನ್ನೊಂದು ಕಡೆ ವಿದ್ಯಾರ್ಥಿನಿಯಾಗಿ. ಅಮ್ಮ ಆಗಾಗ ಮೊದಲೇ ಹೇಳದೆ ಪರೀಕ್ಷೆ ಮಾಡಿಬಿಡೋರು. ಆಗ ನಮ್ಮ ಕ್ಲಾಸಿನ ಮಕ್ಕಳಿಗೆಲ್ಲ ನನ್ನ ಮೇಲೆ ಸಿಟ್ಟು ಬರ್ತಾ ಇತ್ತುʼʼ ಎಂದು ಬಾಲ್ಯದ ನೆನಪುಗಳನ್ನು ಹರವಿಡುತ್ತಾರೆ ಮಗಳು ಇತಿಶ್ರೀ ಮುರ್ಮು.

ದ್ರೌಪದಿ ಮುರ್ಮು ಅವರು ರಾಯ್‌ ರಂಗಾಪುರದಲ್ಲಿ ಮಗಳು ಇತಿಶ್ರೀ ಮತ್ತು ಸಹೋದರ ತಾರಿಣಿ ಸೇನ್‌ ಅವರ ಜತೆ ವಾಸಿಸುತ್ತಿದ್ದಾರೆ. ಇತಿಶ್ರೀ ಅವರು ಭುವನೇಶ್ವರದ ಯುಕೊ ಬ್ಯಾಂಕ್‌ನಲ್ಲಿ ಮ್ಯಾನೇಜರ್‌. ದ್ರೌಪದಿ ಮುರ್ಮು ಅವರು ಬ್ಯಾಂಕ್‌ ಉದ್ಯೋಗಿಯಾಗಿದ್ದ ಶ್ಯಾಮ್‌ಚರಣ್‌ ಮುರ್ಮು ಎಂಬವರನ್ನು ಮದುವೆಯಾಗಿದ್ದು, ಅವರೀಗ ಬದುಕಿಲ್ಲ. ಅವರಿಗೆ ಇತಿಶ್ರೀ ಮುರ್ಮು ಎಂಬ ಮಗಳಿದ್ದಾರೆ. ಇನ್ನಿಬ್ಬರು ಗಂಡುಮಕ್ಕಳು ೨೦೦೯ ಮತ್ತು ೨೦೧೨ರ ಅವಧಿಯಲ್ಲಿ ಮೃತಪಟ್ಟಿದ್ದಾರೆ.

ಜಾರ್ಖಂಡ್‌ನ ಮೊದಲ ಮಹಿಳಾ ರಾಜ್ಯಪಾಲೆ

2015ರಲ್ಲಿ ಮುರ್ಮು ಅವರನ್ನು ಜಾರ್ಖಂಡ್‌ನ ರಾಜ್ಯಪಾಲರನ್ನಾಗಿ ಆಯ್ಕೆ ಮಾಡಲಾಯಿತು. ನರೇಂದ್ರ ಮೋದಿ ಹಾಗೂ ಅಟಲ್‌ ಬಿಹಾರಿ ವಾಜಪೇಯಿ ಅವರು ಇವರ ನೆಚ್ಚಿನ ರಾಜಕೀಯ ನಾಯಕರು. ರಾಜ್ಯಪಾಲೆಯಾಗಿದ್ದಾಗ ಬುಡಕಟ್ಟು ಜನರಿಗೆ ಅವರ ನೆಲದ ವಾಣಿಜ್ಯ ಬಳಕೆಗೆ ಅನುಮತಿ ನೀಡಲು ಜಾರ್ಖಂಡ್‌ ಅಸೆಂಬ್ಲಿಯಲ್ಲಿ ಅಂಗೀಕೃತವಾಗಿದ್ದ ವಿಧೇಯಕವನ್ನು ದ್ರೌಪದಿ ಮುರ್ಮು ಅವರು ಒಪ್ಪಿರಲಿಲ್ಲ. ಇದರಿಂದ ಬುಡಕಟ್ಟು ಸಮುದಾಯಕ್ಕೆ ಒಳಿತಾಗುವ ಬಗ್ಗೆ ವಿವರಣೆಯನ್ನು ಸರ್ಕಾರದಿಂದ ನಿರೀಕ್ಷಿಸಿದ್ದರು..

ರಾಷ್ಟ್ರಪತಿ ಹುದ್ದೆಗೆ ಬಿಜೆಪಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರ ಹೆಸರು ಈ ಹಿಂದೆಯೂ ಕೇಳಿ ಬಂದಿತ್ತು. ಈ ಬಾರಿ ಈಶಾನ್ಯ ಭಾರತದ ಹಿನ್ನೆಲೆ, ಬುಡಕಟ್ಟು ಹಾಗೂ ಮಹಿಳಾ ಹಿನ್ನೆಲೆ- ಇವೆಲ್ಲವೂ ಮುರ್ಮು ಅವರಿಗೆ ಪೂರಕವಾಗಿ ಒದಗಿಬಂದಿದೆ.

ಸಂತಾಲ್‌ ಬುಡಕಟ್ಟು ಸಮುದಾಯ

ಒಡಿಶಾದ ಸಂತಾಲ್‌ ಬುಡಕಟ್ಟು ಸಮುದಾಯದಿಂದ ಬಂದವರು ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು. ಇವರಿಗೆ ವಿಶಿಷ್ಟ ಸಾಂಸ್ಕೃತಿಕ ಹಿನ್ನೆಲೆಯಿದೆ.

ಸಂತಾಲ್ ಎಂದರೆ ಅಕ್ಷರಶಃ ಶಾಂತ, ಶಾಂತಿಯುತ ಎಂದರ್ಥ. ಸಂತ ಎಂದರೆ ಶಾಂತ ಮತ್ತು ಅಲಾ ಎಂದರೆ ಮನುಷ್ಯ. ಸಂತಾಲ್‌ ಬುಡಕಟ್ಟಿನ ಮಂದಿ ಬಳಸುವ ಭಾಷೆ ಸಂತಾಲಿ. ಸಂತಾಲರು ಭಾರತದಲ್ಲಿ ಭಾರತದಲ್ಲಿ ಮೂರನೇ ಅತಿ ದೊಡ್ಡ ಪರಿಶಿಷ್ಟ ಬುಡಕಟ್ಟು ಸಮುದಾಯ. ಮೊದಲಿನ ಎರಡು ಸಮುದಾಯಗಳು ಕ್ರಮವಾಗಿ ಗೊಂಡರು ಹಾಗೂ ಭಿಲ್ಲರು. ಸಂತಾಲರ ಸಮುದಾಯ ಹೆಚ್ಚಾಗಿ ಒಡಿಶಾ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಹಂಚಿಹೋಗಿವೆ. ದ್ರೌಪದಿ ಮುರ್ಮು ಅವರ ತವರು ಜಿಲ್ಲೆ ಮಯೂರ್‌ಭಂಜ್, ಸಂತಾಲರು ಹೆಚ್ಚು ದಟ್ಟವಾಗಿರುವ ಜಿಲ್ಲೆಗಳಲ್ಲಿ ಒಂದು. ಸಂತಾಲರು ಮೂಲತಃ ಅಲೆಮಾರಿ ಜನಾಂಗ. ಮುಂದೆ ಛೋಟಾನಾಗ್ಪುರ ಪ್ರಸ್ತಭೂಮಿಯಲ್ಲಿ ನೆಲೆನಿಂತರು. 18ನೇ ಶತಮಾನದ ಬಳಿಕ ಬಿಹಾರ, ಒಡಿಶಾ, ಪ.ಬಂಗಾಳಗಳಿಗೆ ಹಬ್ಬಿದರು.

ಈಶಾನ್ಯ ಭಾರತದ ಬುಡಕಟ್ಟು ಸಮುದಾಯಗಳಲ್ಲಿ ಸಾಕ್ಷರತೆಯ ಪ್ರಮಾಣ ತುಂಬಾ ಕಡಿಮೆ. ಆದರೆ ಸಂತಾಲರು ಹೆಚ್ಚಿನ ಸಾಕ್ಷರತೆ ಹೊಂದಿದ್ದಾರೆ. 1960ರಿಂದ ನಡೆಯುತ್ತಿರುವ ಶಿಕ್ಷಣ ಜಾಗೃತಿಯ ಕಾರಣದಿಂದ ಸಮುದಾಯದ ಅನೇಕರು ಶಿಕ್ಷಣ ಪಡೆದು ಭಾರತೀಯ ಸಮಾಜದ ಕೆನೆಪದರ ಪ್ರವೇಶಿಸಿದ್ದಾರೆ. ಉದಾಹರಣೆಗೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಂತಾಲರು. ಪ್ರಸ್ತುತ ಮಹಾಲೇಖಪಾಲ (ಕಂಟ್ರೋಲರ್ ಮತ್ತು ಆಡಿಟರ್ ಜನರಲ್) ಆಗಿರುವ ಗಿರ್ಶ್‌ ಚಂದ್ರ ಮುರ್ಮು ಅವರು ಸಂತಾಲ್.‌ ಪ್ರಸ್ತುತ ಕೇಂದ್ರ ಜಲಶಕ್ತಿ ಸಚಿವ ಬಿಸೇಶ್ವರ ತುಡು ಅವರು ಕೂಡ ಇದೇ ಸಮುದಾಯ ಹಾಗೂ ಮಯೂರ್‌ಭಂಜ್ ಜಿಲ್ಲೆಯವರು. ಈ ಹಿನ್ನೆಲೆಯಲ್ಲಿ ಕೆಲವು ಸುದ್ದಿ ವರದಿಗಳು ಪ್ರಸ್ತುತ ಕಾಲವನ್ನು “ಸಂತಾಲ್‌ ಸಮುದಾಯದ ಸುವರ್ಣ ಯುಗʼ ಎಂದು ಕರೆದಿವೆ.

ಅವರ ಸಾಮಾಜಿಕ ಉನ್ನತಿಯ ಹೊರತಾಗಿಯೂ, ಸಂತಾಲರು ಸಾಮಾನ್ಯವಾಗಿ ತಮ್ಮ ಸಾಂಸ್ಕೃತಿಕ ಬೇರುಗಳೊಂದಿಗೆ ನಂಟು ಹೊಂದಿದ್ದಾರೆ. ಇವರು ಪ್ರಕೃತಿ ಆರಾಧಕರು. ಜಹೆರ್ ಎಂದು ಕರೆಯಲಾಗುವ ಪವಿತ್ರ ತೋಪುಗಳಲ್ಲಿ ನಮನ ಸಲ್ಲಿಸುವುದನ್ನು ಕಾಣಬಹುದು. ಅವರ ಸಾಂಪ್ರದಾಯಿಕ ಉಡುಗೆಯೆಂದರೆ ಪುರುಷರಿಗೆ ಧೋತಿ ಮತ್ತು ಗಮುಚ್ಚ. ಮಹಿಳೆಯರಿಗೆ ಸಾಮಾನ್ಯವಾಗಿ ನೀಲಿ ಮತ್ತು ಹಸಿರು ಸೀರೆ. ಇವರು ಸಾಮಾನ್ಯವಾಗಿ ಹಚ್ಚೆಗಳನ್ನು ಹಾಕುತ್ತಾರೆ.

ಸಂತಾಲ್ ಸಮಾಜದಲ್ಲಿ ವಿಚ್ಛೇದನ ನಿಷೇಧವಲ್ಲ. ದಂಪತಿಯಲ್ಲಿ ಯಾರು ಬೇಕಾದರೂ ವಿಚ್ಛೇದನ ಕೇಳಬಹುದು. ಹೆಂಡತಿ ಮಾಟಗಾತಿಯಾಗಿದ್ದರೆ, ಪದೇ ಪದೆ ತವರುಮನೆಗೆ ಹೋಗುತ್ತಿದ್ದರೆ, ಮಾತು ಕೇಳದಿದ್ದರೆ ಗಂಡ ವಿಚ್ಛೇದನ ಕೇಳಬಹುದು. ಹೆಂಡತಿ ತನ್ನನ್ನು ಗಂಡ ಸಾಕುವುದಿಲ್ಲ ಎನಿಸಿದರೆ, ಬೇರೊಬ್ಬನನ್ನು ಮದುವೆಯಾಗಬೇಕು ಎನಿಸಿದರೆ ವಿಚ್ಛೇದನ ಕೇಳಬಹುದು. ಅಂಥ ಸಂದರ್ಭದಲ್ಲಿ ಆಕೆಯನ್ನು ಮದುವೆಯಾಗುವ ಪುರುಷ ಹಳೆಯ ಗಂಡನಿಗೆ ಪರಿಹಾರ ಕೊಡಬೇಕಾಗುತ್ತದೆ.

ರಾಜಕೀಯವಾಗಿ ಅಜಾತಶತ್ರು ದ್ರೌಪದಿ ಮುರ್ಮು

ದ್ರೌಪದಿ ಮುರ್ಮು ಅವರನ್ನು ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದು ಇತ್ತೀಚಿನ ದಿನಗಳಲ್ಲಿ ಬಿಜೆಪಿಯ ಅತ್ಯುತ್ತಮ ಕಾರ್ಯತಂತ್ರ ಎನ್ನಬಹುದು. ಬಿಜೆಪಿಯ ಮಾಸ್ಟರ್‌ ಸ್ಟ್ರೋಕ್‌ ಎಂದೇ ವ್ಯಾಖ್ಯಾನಿಸಲಾಗುತ್ತಿದೆ. ಇದಕ್ಕೆ ಹಲವಾರು ಕಾರಣಗಳಿವೆ. ಕಳೆದ ಬಾರಿ ರಾಮನಾಥ್‌ ಕೋವಿಂದ್‌ ಅವರನ್ನು ರಾಷ್ಟ್ರಪತಿಯಾಗಿ ತಂದು ಒಂದು ರಾಜಕೀಯ ಸಂದೇಶವನ್ನು ಬಿಜೆಪಿ ದೇಶಕ್ಕೆ ನೀಡಿತ್ತು. ಈ ಸಲದ್ದೂ ಅಂಥದೇ ಇನ್ನೊಂದು ಸಂದೇಶ. ಕಳೆದ ಬಾರಿ ಅದು ದಲಿತರನ್ನು ಸೆಳೆದಿದ್ದರೆ, ಈ ಬಾರಿ ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರನ್ನು ಏಕಕಾಲಕ್ಕೆ ಸೆಳೆಯುವಂತಿದೆ. ಹೀಗಾಗಿ ಎನ್‌ಡಿಎಯಲ್ಲಿ ಇರದ ರಾಜಕೀಯ ಪಕ್ಷಗಳೂ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಿವೆ. ಲೋಕಸಭೆಯಲ್ಲಿ ೨೭ ಸ್ಥಾನಗಳು ಬುಡಕಟ್ಟು ಸಮುದಾಯಕ್ಕೆ ಮೀಸಲಾಗಿವೆ. ೨೦2೪ರ ಲೋಕಸಭೆ ಚುನಾವಣೆಯಲ್ಲಿ ಇದು ಗಣನೀಯ ಪ್ರಭಾವವನ್ನೇ ಬೀರಬಹುದು. ದ್ರೌಪದಿ ಮುರ್ಮು ಅವರು ರಾಜಕೀಯವಾಗಿ ಯಾವುದೇ ಶತ್ರುಗಳಿಲ್ಲದ ವ್ಯಕ್ತಿ. ಪ್ರತಿಪಕ್ಷಗಳಿಗೂ ಇವರನ್ನು ವಿರೋಧಿಸಲು ಕಾರಣಗಳಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರವಾಸ

Dwarka Tour: ದ್ವಾರಕೆಗೆ ಹೋದಾಗ ಏನೇನು ನೋಡಬಹುದು?

ನಿರ್ದಿಷ್ಟ ಯೋಜನೆ ಮತ್ತು ಸ್ಥಳೀಯ ವಿಚಾರಗಳನ್ನು ತಿಳಿದುಕೊಳ್ಳುವ ಮೂಲಕ ಕಡಿಮೆ ಬಜೆಟ್‌ನಲ್ಲಿ ಸಂಪೂರ್ಣ ದ್ವಾರಕವನ್ನು ಸುತ್ತಾಡಲು (Dwarka Tour) ಸಾಧ್ಯವಿದೆ. ಪುರಾತನ ದೇವಾಲಯ, ಸುಂದರವಾದ ಕಡಲತೀರಗಳೊಂದಿಗೆ ಅತ್ಯಾಕರ್ಷಕ ತಾಣದಲ್ಲಿ ಸುಂದರವಾದ ಪ್ರವಾಸ ಅನುಭವವನ್ನು ನಮ್ಮದಾಗಿಸಬಹುದು.

VISTARANEWS.COM


on

By

Dwarka Tour
Koo

ದ್ವಾರಕಾ ಹೆಸರು ಕೇಳಿದಾಕ್ಷಣವೇ ಮನಸ್ಸು ಪ್ರಫುಲ್ಲವಾಗುತ್ತದೆ. ಹಿಂದೂಗಳಿಗೆ ಅಯೋಧ್ಯೆ (ayodhya) ರಾಮ ಮಂದಿರದಷ್ಟೇ (ram mandir) ಪವಿತ್ರವಾದ ಮತ್ತೊಂದು ಕ್ಷೇತ್ರ ದ್ವಾರಕಾ (Dwarka Tour). ಭಾರತದ ಪಶ್ಚಿಮ ಕರಾವಳಿಯ ಗುಜರಾತ್ (gujarat) ರಾಜ್ಯದಲ್ಲಿರುವ ದ್ವಾರಕಾ ಆಳವಾದ ಆಧ್ಯಾತ್ಮಿಕ, ಐತಿಹಾಸಿಕ ಮತ್ತು ನೈಸರ್ಗಿಕ ಸೌಂದರ್ಯಗಳನ್ನು ಹೊಂದಿರುವ ಪಟ್ಟಣವಾಗಿದೆ. ಬಜೆಟ್ ಸ್ನೇಹಿ (Budget Friendly) ಪ್ರವಾಸ ಮಾಡುವ ಯೋಚನೆ ಇದ್ದರೆ ದ್ವಾರಕವನ್ನು ಅನ್ವೇಷಿಸಬಹುದು.

ದ್ವಾರಕಾದ ಪ್ರಾಚೀನ ದೇವಾಲಯಗಳು, ಸುಂದರ ಕಡಲತೀರಗಳು ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುತ್ತದೆ. ಇದು ದೂರದೂರುಗಳಿಂದ ಪ್ರವಾಸಿಗರನ್ನು ಹಾಗೂ ಯಾತ್ರಿಕರನ್ನು ತನ್ನತ್ತ ಚುಂಬಕದಂತೆ ಸೆಳೆಯುತ್ತದೆ. ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಕೃಷ್ಣನ ನಗರಿಯಲ್ಲಿ ಪ್ರವಾಸಿಗರು ಬಜೆಟ್ ಸ್ನೇಹಿಯಾಗಿ ಸುತ್ತಾಡ ಬಹುದಾದ ಹಲವಾರು ಪ್ರದೇಶಗಳಿವೆ.


ಪ್ರಾಚೀನ ದೇವಾಲಯಗಳು

ದ್ವಾರಕಾವು ಚಾರ್ ಧಾಮ್ ತೀರ್ಥಯಾತ್ರಾ ಸ್ಥಳಗಳಲ್ಲಿ ಮತ್ತು ಶ್ರೀಕೃಷ್ಣನ ಪ್ರಾಚೀನ ಸಾಮ್ರಾಜ್ಯದಲ್ಲಿ ಸ್ಥಾನ ಪಡೆದಿರುವುದರಿಂದ ಅದು ಆಧ್ಯಾತ್ಮಿಕ ನೆಲೆಯಾಗಿದೆ. ಬಜೆಟ್ ಸ್ನೇಹಿ ಪ್ರಯಾಣ ಮಾಡಲು ಶ್ರೀಕೃಷ್ಣ ಸಮರ್ಪಿತ ದ್ವಾರಕಾಧೀಶ ದೇವಾಲಯ ಅಥವಾ ನಾಗೇಶ್ವರ ಜ್ಯೋತಿರ್ಲಿಂಗ ದೇವಾಲಯದಂತಹ ಪ್ರಸಿದ್ಧ ದೇವಾಲಯಗಳಿಗೆ ಭೇಟಿ ನೀಡಬಹುದು. ಇದು ಹನ್ನೆರಡು ಪವಿತ್ರ ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದ್ದು, ಭಕ್ತರು ಮತ್ತು ಸಂದರ್ಶಕರಿಗೆ ಉಚಿತ ಪ್ರವೇಶವನ್ನು ಕಲ್ಪಿಸುತ್ತದೆ. ಯಾವುದೇ ವೆಚ್ಚವಿಲ್ಲದೆ ಇಲ್ಲಿ ದೈವಿಕ ವಾತಾವರಣವನ್ನು ಅನುಭವಿಸಬಹುದು. ಇದಲ್ಲದೇ ಪವಿತ್ರ ಸ್ಥಳಗಳಾದ ರುಕ್ಮಿಣಿ ದೇವಿ ದೇವಸ್ಥಾನ, ಗೋಮತಿ ಘಾಟ್ ಮತ್ತು ಹಿಂದೂ ಪುರಾಣಗಳಲ್ಲಿ ಗಮನಾರ್ಹವಾದ ಬೆಟ್ ದ್ವಾರಕಾ ದ್ವೀಪಕ್ಕೆ ಭೇಟಿ ನೀಡಬಹುದು. ಇದು ಎಲ್ಲರಿಗೂ ಮುಕ್ತವಾಗಿದೆ.


ರಮಣೀಯ ಕಡಲತೀರಗಳು

ದ್ವಾರಕಾವು ಪ್ರಾಚೀನ ಕಡಲತೀರಗಳು ಮತ್ತು ಕರಾವಳಿ ಪ್ರದೇಶಗಳನ್ನು ಹೊಂದಿದೆ. ವಿವಿಧ ಮನರಂಜನಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು, ವಿಶ್ರಾಂತಿ ಪಡೆಯಲು ಜೊತೆಗೆ ಅರೇಬಿಯನ್ ಸಮುದ್ರದ ಸ್ಪಷ್ಟ ನೋಟವನ್ನು ಕಾಣಲು, ವಿಹಂಗಮ ಸೂರ್ಯಾಸ್ತ, ಒಂಟೆ ಸವಾರಿ, ಬೀಚ್ ಪಿಕ್ನಿಕ್‌ಗಳನ್ನು ಇಲ್ಲಿ ಆನಂದಿಸಬಹುದು. ಇದರೊಂದಿಗೆ ಬೀಟ್ ದ್ವಾರಕಾ ಬೀಚ್, ಗೋಪಿ ತಲವ್ ಮತ್ತು ಓಖಾ-ಮಧಿ ಬೀಚ್ ನಲ್ಲಿ ಶಾಂತಿಯುತ ಪರಿಸರದಲ್ಲಿ ಈಜು, ಸೂರ್ಯನ ಸ್ನಾನ ಮತ್ತು ಪಕ್ಷಿ ವೀಕ್ಷಣೆಯನ್ನು ನಡೆಸಬಹುದು.

ಸ್ಥಳೀಯ ಸಂಸ್ಕೃತಿ

ವರ್ಷದುದ್ದಕ್ಕೂ ದ್ವಾರಕಾದಲ್ಲಿ ವಿವಿಧ ಸಾಂಸ್ಕೃತಿಕ ಹಬ್ಬಗಳು ಮತ್ತು ಕಾರ್ಯಕ್ರಮಗಳು ನಡೆಯುತ್ತವೆ. ಇದು ಪ್ರಯಾಣಿಕರಿಗೆ ಸ್ಥಳೀಯ ಸಂಪ್ರದಾಯಗಳು ಮತ್ತು ಪದ್ಧತಿಗಳ ಒಳನೋಟವನ್ನು ತೋರಿಸುತ್ತದೆ. ಪಟ್ಟಣದಲ್ಲಿ ವರ್ಣರಂಜಿತ ಮೆರವಣಿಗೆ, ಸಾಂಸ್ಕೃತಿಕ ಪ್ರದರ್ಶನ ಮತ್ತು ಧಾರ್ಮಿಕ ಆಚರಣೆಗಳನ್ನು ಆನಂದಿಸಬಹುದು. ಜನ್ಮಾಷ್ಟಮಿ, ದೀಪಾವಳಿ ಮತ್ತು ಹೋಳಿ ಹಬ್ಬಗಳು ಇಲ್ಲಿ ಅತ್ಯಂತ ವೈಭವದಿಂದ ನಡೆಯುತ್ತದೆ. ಅಲ್ಲದೆ, ಗರ್ಬಾ ಮತ್ತು ದಾಂಡಿಯಾ ರಾಸ್ ನೃತ್ಯಗಳು, ಸಾಂಪ್ರದಾಯಿಕ ಸಂಗೀತ ಕಛೇರಿಗಳು ಮತ್ತು ಪಟ್ಟಣದ ವಿವಿಧ ಸ್ಥಳಗಳಲ್ಲಿ ನಡೆಯುವ ಜಾನಪದ ಕಲಾ ಪ್ರದರ್ಶನಗಳನ್ನು ವೀಕ್ಷಿಸಲು ತಪ್ಪಿಸಿಕೊಳ್ಳಬೇಡಿ. ಇದು ದ್ವಾರಕೆಯ ಸಂಸ್ಕೃತಿಯ ರೋಮಾಂಚಕ ಅನುಭವವನ್ನು ಕೊಡುತ್ತದೆ.


ಗುಜರಾತಿ ಖಾದ್ಯ

ದ್ವಾರಕಾ ಪ್ರವಾಸವು ಅಲ್ಲಿನ ಗುಜರಾತಿ ಖಾದ್ಯಗಳನ್ನು ಸವಿಯದೇ ಪೂರ್ಣಗೊಳ್ಳುವುದಿಲ್ಲ. ಸ್ಥಳೀಯ ತಿನಿಸುಗಳು ಅಥವಾ ಆಹಾರ ಮಳಿಗೆಗಳಿಗೆ ಭೇಟಿ ನೀಡಿ ಅಲ್ಲಿ ಧೋಕ್ಲಾ, ಖಾಂಡ್ವಿ ಅಥವಾ ಥೇಪ್ಲಾ ಮೊದಲಾದ ಭಕ್ಷ್ಯಗಳನ್ನು ಸವಿಯಬಹುದು. ಇದರೊಂದಿಗೆ ಪಟ್ಟಣದಲ್ಲಿ ಖಿಚು, ಫಫ್ಡಾ, ಜಲೇಬಿ-ಫಫ್ಡಾ ಸೇರಿದಂತೆ ಕೆಲವು ಪ್ರಸಿದ್ಧ ಭಕ್ಷ್ಯಗಳು ಕೈಗೆಟುಕುವ ದರದಲ್ಲಿ ಲಭ್ಯವಾಗುತ್ತದೆ.

ಇದನ್ನೂ ಓದಿ: Summer Tour: ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

ಕೈಗೆಟುಕುವ ದರದಲ್ಲಿ ವಸತಿ

ದ್ವಾರಕಾದಲ್ಲಿ ಬಜೆಟ್‌ಗೆ ಅನುಗುಣವಾದ ಅತಿಥಿ ಗೃಹಗಳು, ವಸತಿಗೃಹಗಳು ಮತ್ತು ಹೊಟೇಲ್ ಗಳು ಲಭ್ಯವಿದೆ. ಸಮಂಜಸವಾದ ದರದಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ಸ್ವಚ್ಛ ಕೊಠಡಿಗಳನ್ನು ಒದಗಿಸುವ ಬಜೆಟ್ ಸ್ನೇಹಿ ಹೊಟೇಲ್‌ಗಳಲ್ಲಿ ಉಳಿಯಬಹುದು.

ಇದರೊಂದಿಗೆ ದ್ವಾರಕಾದಲ್ಲಿನ ಹಲವಾರು ಅತಿಥಿಗೃಹಗಳು ಮತ್ತು ಬಜೆಟ್ ಸ್ನೇಹಿ ಹೊಟೇಲ್ ಗಳು ರಿಯಾಯಿತಿ ದರದಲ್ಲಿ ಹತ್ತಿರದ ಆಕರ್ಷಣೆಗಳಿಗೆ ವಸತಿ, ಊಟ ಮತ್ತು ಸಾರಿಗೆಯನ್ನು ಒಳಗೊಂಡಿರುವ ಪ್ಯಾಕೇಜ್ ಡೀಲ್‌ಗಳನ್ನು ಒದಗಿಸುತ್ತದೆ. ಹೆಚ್ಚು ಖರ್ಚು ಮಾಡದೇ ಇದರ ಪ್ರಯೋಜನವನ್ನು ಪಡೆಯಬಹುದು.

Continue Reading

ದೇಶ

Narendra Modi: 75 ವರ್ಷ ದಾಟಿದರೂ ಮೋದಿ ಪ್ರಧಾನಿ ಸ್ಥಾನದಲ್ಲಿರುತ್ತಾರಾ? ಅಮಿತ್‌ ಶಾ ಹೇಳಿದ್ದಿಷ್ಟು

Narendra Modi: ನರೇಂದ್ರ ಮೋದಿ ಅವರಿಗೆ 2025ರಲ್ಲಿ 75 ವರ್ಷ ತುಂಬುತ್ತದೆ. ಅದಾದ ಬಳಿಕ ಅವರು ಪ್ರಧಾನಿ ಸ್ಥಾನದಲ್ಲಿ ಇರಲ್ಲ ಎಂದು ಅರವಿಂದ್‌ ಕೇಜ್ರಿವಾಲ್‌ ಅವರು ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ಅಮಿತ್‌ ಶಾ (Amit Shah), “ನರೇಂದ್ರ ಮೋದಿ ಅವರು ಮೂರನೇ ಅವಧಿಯನ್ನು ಪೂರ್ಣಗೊಳಿಸುತ್ತಾರೆ” ಎಂದಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಇದನ್ನೇ ಹೇಳಿದ್ದಾರೆ.

VISTARANEWS.COM


on

Narendra Modi
Koo

ಹೈದರಾಬಾದ್: ಅಬಕಾರಿ ನೀತಿ ಜಾರಿ ಹಗರಣದಲ್ಲಿ ಜೈಲುಪಾಲಾಗಿ, ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿ ಹೊರಬರುತ್ತಲೇ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi), ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ನರೇಂದ್ರ ಮೋದಿ ಅವರಿಗೆ 2025ರಲ್ಲಿ 75 ವರ್ಷ ತುಂಬುತ್ತದೆ. ಅದಾದ ಬಳಿಕ ಅವರು ಪ್ರಧಾನಿ ಸ್ಥಾನದಲ್ಲಿ ಇರಲ್ಲ” ಎಂದು ಹೇಳಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಅಮಿತ್‌ ಶಾ (Amit Shah), “ನರೇಂದ್ರ ಮೋದಿ ಅವರು ಮೂರನೇ ಅವಧಿಯನ್ನು ಪೂರ್ಣಗೊಳಿಸುತ್ತಾರೆ” ಎಂದಿದ್ದಾರೆ.

“ಅರವಿಂದ್‌ ಕೇಜ್ರಿವಾಲ್‌ ಅವರಿಗೆ ನಾನೊಂದು ವಿಷಯ ತಿಳಿಸುತ್ತೇನೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗುತ್ತಾರೆ ಹಾಗೂ ಮೂರನೇ ಅವಧಿಯನ್ನು ಅವರು ಪೂರ್ಣಗೊಳಿಸುತ್ತಾರೆ. ಇಂಡಿಯಾ ಒಕ್ಕೂಟವೂ ಅಷ್ಟೇ, ಮೋದಿ ಅವರಿಗೆ 75 ವರ್ಷ ತುಂಬುತ್ತದೆ ಎಂಬ ಖುಷಿ ಬೇಡ. 75 ವರ್ಷ ದಾಟಿದ ನಂತರ ಎಲ್ಲೂ ಪ್ರಧಾನಿಯಾಗಬಾರದು ಎಂಬ ನಿಯಮಗಳು ಬಿಜೆಪಿ ಸಂವಿಧಾನದಲ್ಲಿ ಪ್ರಸ್ತಾಪಿಸಿಲ್ಲ. ಹಾಗಾಗಿ, ಮೋದಿ ಅವರು ಮೂರನೇ ಅವಧಿಯನ್ನು ಪೂರ್ಣಗೊಳಿಸುವುದು ನಿಶ್ಚಿತ” ಎಂದು ಹೈದರಾಬಾದ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‌ನಡ್ಡಾ ಕೂಡ ಪ್ರತಿಕ್ರಿಯೆ

ಅರವಿಂದ್‌ ಕೇಜ್ರಿವಾಲ್‌ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. “ನರೇಂದ್ರ ಮೋದಿ ಅವರನ್ನು ಸೋಲಿಸಲಾಗದವರು ಈಗ ವಯಸ್ಸಿನ ವಿಚಾರ ಮುನ್ನೆಲೆಗೆ ತಂದಿದ್ದಾರೆ. ಆದರೆ, ಪ್ರಧಾನಿಯಾಗಿ ಮುಂದುವರಿಯಲು ವಯಸ್ಸಿನ ಮಿತಿ ಕುರಿತು ಬಿಜೆಪಿ ಸಂವಿಧಾನದಲ್ಲಿ ಉಲ್ಲೇಖವಾಗಿಲ್ಲ. ನರೇಂದ್ರ ಮೋದಿ ಅವರೇ ನಮ್ಮ ನಾಯಕ ಹಾಗೂ ಭವಿಷ್ಯದಲ್ಲೂ ಅವರೇ ನಾಯಕರಾಗಿ ಇರಲಿದ್ದಾರೆ” ಎಂದಿದ್ದಾರೆ.

ಕೇಜ್ರಿವಾಲ್‌ ನಡೆಸಿದ ವಾಗ್ದಾಳಿ ಹೀಗಿತ್ತು…

ಜೈಲಿನಿಂದ ಬಿಡುಗಡೆಯಾದ ಬಳಿಕ ಮೊದಲ ಸುದ್ದಿಗೋಷ್ಠಿ ನಡೆಸಿದ ಕೇಜ್ರಿವಾಲ್‌, ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ಆರೋಪ ಮಾಡಿದರು. “ನರೇಂದ್ರ ಮೋದಿ ಅವರಿಗೆ ಬೇರೆಯವರು ಬೆಳೆಯುವುದು ಇಷ್ಟವಿಲ್ಲ. ದೇಶಕ್ಕೆ ಒಬ್ಬನೇ ನಾಯಕ ಬೇಕು, ಅದು ಅವರೇ ಆಗಿರಬೇಕು. ಈಗಾಗಲೇ ಎಲ್‌.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ, ಶಿವರಾಜ್‌ ಸಿಂಗ್‌ ಚೌಹಾಣ್‌, ವಸುಂಧರಾ ರಾಜೆ, ಮನೋಹರ ಲಾಲ್‌ ಖಟ್ಟರ್‌, ರಮಣ್‌ ಸಿಂಗ್‌ ಸೇರಿ ಹಲವು ನಾಯಕರ ರಾಜಕೀಯ ಜೀವನವನ್ನು ಮೋದಿ ಕೊನೆಗೊಳಿಸಿದ್ದಾರೆ. ಶೀಘ್ರದಲ್ಲೇ, ಯೋಗಿ ಆದಿತ್ಯನಾಥ್‌ ಅವರ ರಾಜಕೀಯ ಜೀವನವನ್ನೂ ಇವರು ಕೊನೆಗಾಣಿಸಲಿದ್ದಾರೆ” ಎಂದು ದೂರಿದರು.

“ನರೇಂದ್ರ ಮೋದಿ ಅವರೇನಾದರೂ ಮತ್ತೆ ಪ್ರಧಾನಿಯಾದರೆ, ಅಧಿಕಾರ ವಹಿಸಿಕೊಂಡ ಎರಡೇ ತಿಂಗಳಿಗೆ ಯೋಗಿ ಆದಿತ್ಯನಾಥ್‌ ಅವರ ಬದಲಿಗೆ ಬೇರೆಯವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಲಿದ್ದಾರೆ. ಆದರೆ, ನಮ್ಮ ದೇಶದ ಇತಿಹಾಸವೇ ಬೇರೆ ಇದೆ. ದೇಶದಲ್ಲಿ ಇದುವರೆಗೆ ಯಾರೆಲ್ಲ ಸರ್ವಾಧಿಕಾರ ಮಾಡಲು ಹೊರಟಿದ್ದರೋ, ಅವರನ್ನೆಲ್ಲ ಜನ ಮನೆಗೆ ಕಳುಹಿಸಿದ್ದಾರೆ. ಈಗ ಮತ್ತೆ ಸರ್ವಾಧಿಕಾರಿಗಳು ಪ್ರಜಾಪ್ರಭುತ್ವವನ್ನು ಕೊನೆಗಾಣಿಸಲು ಯತ್ನಿಸುತ್ತಿದ್ದಾರೆ. ಆದರೆ, ದೇಶದ 140 ಕೋಟಿ ಜನ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕು ಎಂಬುದೇ ನನ್ನ ಮನವಿಯಾಗಿದೆ” ಎಂದರು.

ಇದನ್ನೂ ಓದಿ: ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

Continue Reading

ದೇಶ

Lok Sabha Election: 3ನೇ ಹಂತದಲ್ಲಿ 65% ಮತದಾನ; ಕರ್ನಾಟಕದಲ್ಲಿ ಶೇ.71.84ರಷ್ಟು ಹಕ್ಕು ಚಲಾವಣೆ

Lok Sabha Election: ಮೂರನೇ ಹಂತದಲ್ಲಿ ಅಸ್ಸಾಂನಲ್ಲಿ ಅತಿ ಹೆಚ್ಚು ಮತದಾನ ದಾಖಲಾಗಿದೆ. ಅಸ್ಸಾಂನಲ್ಲಿ ಶೇ.85.45, ಗೋವಾದಲ್ಲಿ ಶೇ.76.06, ಉತ್ತರ ಪ್ರದೇಶ ಶೇ.57.55 ಹಾಗೂ ಬಿಹಾರದಲ್ಲಿ ಶೇ.59.15ರಷ್ಟು ಮತದಾನ ದಾಖಲಾಗಿದೆ. ಕರ್ನಾಟಕದ 14 ಸೇರಿ ಒಟ್ಟು 93 ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು. ಕರ್ನಾಟಕದಲ್ಲಿ ಶೇ.71.84ರಷ್ಟು ಮತದಾನ ದಾಖಲಾಗಿದೆ.

VISTARANEWS.COM


on

Lok Sabha Election
Koo

ನವದೆಹಲಿ: ಕರ್ನಾಟಕ ಸೇರಿ ದೇಶದ 11 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಮೂರನೇ ಹಂತದ ಮತದಾನವು ಮೇ 7ರಂದು ನಡೆದಿದ್ದು, ಮತದಾನ ಪ್ರಮಾಣದ (Voter Turnout) ಕುರಿತು ಚುನಾವಣೆ ಆಯೋಗವು ನಿಖರ ಮಾಹಿತಿ ಒದಗಿಸಿದೆ. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿದೆ. ಕರ್ನಾಟಕದಲ್ಲಿ ಶೇ.71.84ರಷ್ಟು ಮತದಾನ ದಾಖಲಾಗಿದೆ ಎಂಬುದಾಗಿ ಚುನಾವಣೆ ಆಯೋಗವು (Election Commission) ಮಾಹಿತಿ ನೀಡಿದೆ.

ಅಸ್ಸಾಂನಲ್ಲಿ ಅತಿ ಹೆಚ್ಚು ಮತದಾನ

ಮೂರನೇ ಹಂತದಲ್ಲಿ ಅಸ್ಸಾಂನಲ್ಲಿ ಅತಿ ಹೆಚ್ಚು ಮತದಾನ ದಾಖಲಾಗಿದೆ. ಅಸ್ಸಾಂನಲ್ಲಿ ಶೇ.85.45, ಗೋವಾದಲ್ಲಿ ಶೇ.76.06, ಉತ್ತರ ಪ್ರದೇಶ ಶೇ.57.55 ಹಾಗೂ ಬಿಹಾರದಲ್ಲಿ ಶೇ.59.15ರಷ್ಟು ಮತದಾನ ದಾಖಲಾಗಿದೆ. ಕರ್ನಾಟಕದ 14 ಸೇರಿ ಒಟ್ಟು 93 ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು. ಪಶ್ಚಿಮ ಬಂಗಾಳ ಹೊರತುಪಡಿಸಿ ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿಯೇ ಮತದಾನ ನಡೆದಿತ್ತು.

ರಾಜ್ಯವಾರು ಮತದಾನ ಪ್ರಮಾಣ

ದೇಶದ ಹಲವೆಡೆ ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಇದು ಕೂಡ 2019ರ ಲೋಕಸಭೆ ಚುನಾವಣೆಗಿಂತ ಕಡಿಮೆ ಪ್ರಮಾಣದ ಮತದಾನವಾಗಿದೆ ಎಂದು ತಿಳಿದುಬಂದಿದೆ. ಏಪ್ರಿಲ್‌ 19ರಿಂದ ಲೋಕಸಭೆ ಚುನಾವಣೆ ಆರಂಭವಾಗಿದ್ದು, ಇದುವರೆಗೆ ಮೂರು ಹಂತಗಳ ಮತದಾನ ಮುಕ್ತಾಯವಾಗಿದೆ. ಜೂನ್‌ 1ರಂದು ಕೊನೆಯ ಹಂತದ ಮತದಾನ ನಡೆಯಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕದಲ್ಲಿ ಜಿಲ್ಲಾವಾರು ಮತದಾನ ಪ್ರಮಾಣ

ಮೇ 13ರಂದು 4ನೇ ಹಂತದ ಮತದಾನ

ಮೇ 13ರಂದು ನಾಲ್ಕನೇ ಹಂತದ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. 10 ರಾಜ್ಯಗಳ 96 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ನಾಲ್ಕನೇ ಹಂತದಲ್ಲಿ ಆಂಧ್ರಪ್ರದೇಶದ 25, ಬಿಹಾರ 5, ಜಮ್ಮು-ಕಾಶ್ಮೀರ 1, ಜಾರ್ಖಂಡ್ 4, ಮಧ್ಯಪ್ರದೇಶ 8, ಮಹಾರಾಷ್ಟ್ರ 11, ಒಡಿಶಾ 4, ತೆಲಂಗಾಣ 17, ಉತ್ತರ ಪ್ರದೇಶ 13 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮೇ 13 ರಂದು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯೂ ನಡೆಯಲಿದೆ. ಆಂಧ್ರಪ್ರದೇಶದ 175 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

Continue Reading

ದೇಶ

ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್‌ ಕೇಜ್ರಿವಾಲ್‌ ಅವರು ಸುದ್ದಿಗೋಷ್ಠಿ ನಡೆಸಿದರು. ಇದೇ ವೇಳೆ ಅವರು ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ನರೇಂದ್ರ ಮೋದಿ ಅವರೇನಾದರೂ ಮತ್ತೆ ಪ್ರಧಾನಿಯಾದರೆ, ಅಧಿಕಾರ ವಹಿಸಿಕೊಂಡ ಎರಡೇ ತಿಂಗಳಿಗೆ ಯೋಗಿ ಆದಿತ್ಯನಾಥ್‌ ಅವರ ಬದಲಿಗೆ ಬೇರೆಯವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಲಿದ್ದಾರೆ ಎಂದು ಆರೋಪಿಸಿದರು.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ (Delhi Excise Policy Case) ಜೈಲು ಪಾಲಾಗಿ, ಮಧ್ಯಂತರ ಜಾಮೀನು ಪಡೆದು ಹೊರಬಂದಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ನರೇಂದ್ರ ಮೋದಿ (Narendra Modi) ವಿರುದ್ಧ ವಾಗ್ದಾಳಿ ನಡೆಸಿದರು. “ಒಂದು ದೇಶ, ಒಬ್ಬ ನಾಯಕ ಎಂಬುದು ನರೇಂದ್ರ ಮೋದಿ ಅವರ ಮಿಷನ್‌ ಆಗಿದೆ. ಅವರೇನಾದರೂ ಮತ್ತೆ ಪ್ರಧಾನಿಯಾದರೆ, ಉತ್ತರ ಪ್ರದೇಶದ ಮುಖ್ಯಮಂತ್ರಿಯನ್ನು ಬದಲಿಸಲಿದ್ದಾರೆ” ಎಂದು ಜೈಲಿನಿಂದ ಬಿಡುಗಡೆಯಾದ ಬಳಿಕ ನಡೆಸಿದ ಮೊದಲ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

“ನರೇಂದ್ರ ಮೋದಿ ಅವರಿಗೆ ಬೇರೆಯವರು ಬೆಳೆಯುವುದು ಇಷ್ಟವಿಲ್ಲ. ದೇಶಕ್ಕೆ ಒಬ್ಬನೇ ನಾಯಕ ಬೇಕು, ಅದು ಅವರೇ ಆಗಿರಬೇಕು. ಈಗಾಗಲೇ ಎಲ್‌.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ, ಶಿವರಾಜ್‌ ಸಿಂಗ್‌ ಚೌಹಾಣ್‌, ವಸುಂಧರಾ ರಾಜೆ, ಮನೋಹರ ಲಾಲ್‌ ಖಟ್ಟರ್‌, ರಮಣ್‌ ಸಿಂಗ್‌ ಸೇರಿ ಹಲವು ನಾಯಕರ ರಾಜಕೀಯ ಜೀವನವನ್ನು ಮೋದಿ ಕೊನೆಗೊಳಿಸಿದ್ದಾರೆ. ಶೀಘ್ರದಲ್ಲೇ, ಯೋಗಿ ಆದಿತ್ಯನಾಥ್‌ ಅವರ ರಾಜಕೀಯ ಜೀವನವನ್ನೂ ಇವರು ಕೊನೆಗಾಣಿಸಲಿದ್ದಾರೆ” ಎಂದು ದೂರಿದರು.

“ನರೇಂದ್ರ ಮೋದಿ ಅವರೇನಾದರೂ ಮತ್ತೆ ಪ್ರಧಾನಿಯಾದರೆ, ಅಧಿಕಾರ ವಹಿಸಿಕೊಂಡ ಎರಡೇ ತಿಂಗಳಿಗೆ ಯೋಗಿ ಆದಿತ್ಯನಾಥ್‌ ಅವರ ಬದಲಿಗೆ ಬೇರೆಯವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಲಿದ್ದಾರೆ. ಆದರೆ, ನಮ್ಮ ದೇಶದ ಇತಿಹಾಸವೇ ಬೇರೆ ಇದೆ. ದೇಶದಲ್ಲಿ ಇದುವರೆಗೆ ಯಾರೆಲ್ಲ ಸರ್ವಾಧಿಕಾರ ಮಾಡಲು ಹೊರಟಿದ್ದರೋ, ಅವರನ್ನೆಲ್ಲ ಜನ ಮನೆಗೆ ಕಳುಹಿಸಿದ್ದಾರೆ. ಈಗ ಮತ್ತೆ ಸರ್ವಾಧಿಕಾರಿಗಳು ಪ್ರಜಾಪ್ರಭುತ್ವವನ್ನು ಕೊನೆಗಾಣಿಸಲು ಯತ್ನಿಸುತ್ತಿದ್ದಾರೆ. ಆದರೆ, ದೇಶದ 140 ಕೋಟಿ ಜನ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕು ಎಂಬುದೇ ನನ್ನ ಮನವಿಯಾಗಿದೆ” ಎಂದರು.

“ನಾನು ಮಾತ್ರವಲ್ಲ ಪ್ರತಿಪಕ್ಷಗಳ ಇನ್ನೂ ಹಲವು ನಾಯಕರನ್ನು ಅವರು ಜೈಲಿಗೆ ಕಳುಹಿಸಲಿದ್ದಾರೆ. ಆ ಮೂಲಕ ಅವರ ರಾಜಕೀಯ ಜೀವನವನ್ನು ಅಂತ್ಯಗೊಳಿಸಲಿದ್ದಾರೆ. ಈಗಾಗಲೇ ನಮ್ಮ ಪಕ್ಷದ ಸಚಿವರು, ಜಾರ್ಖಂಡ್‌ ಮುಖ್ಯಮಂತ್ರಿಯಾಗಿದ್ದ ಹೇಮಂತ್‌ ಸೊರೇನ್‌, ಟಿಎಂಸಿ ಸಚಿವರನ್ನು ಜೈಲಿಗೆ ಕಳುಹಿಸಲಾಗಿದೆ. ಹಾಗೇನಾದರೂ ಬಿಜೆಪಿಯೇ ಮತ್ತೆ ಗೆದ್ದರೆ, ಮಮತಾ ಬ್ಯಾನರ್ಜಿ, ಎಂ.ಕೆ.ಸ್ಟಾಲಿನ್‌, ಆರ್‌ಜೆಡಿಯ ತೇಜಸ್ವಿ ಯಾದವ್‌, ಕೇರಳ ಸಿಎಂ ಪಿಣರಾಯಿ ವಿಜಯನ್‌ ಸೇರಿ ಇನ್ನೂ ಹಲವರು ಜೈಲು ಸೇರಲಿದ್ದಾರೆ. ಕೆಲವರ ರಾಜಕೀಯ ಜೀವನ ಅಂತ್ಯಗೊಳಿಸಲು ತಮ್ಮದೇ ಪಕ್ಷದ ನಾಯಕರನ್ನು ಕೂಡ ಜೈಲಿಗೆ ಕಳುಹಿಸಲಿದ್ದಾರೆ” ಎಂದು ಗಂಭೀರ ಆರೋಪ ಮಾಡಿದರು.

ಇದನ್ನೂ ಓದಿ: Arvind Kejriwal: ಜೈಲಿನಿಂದ ಬಂದ ಕೇಜ್ರಿವಾಲ್‌ಗೆ ಆರತಿ ಬೆಳಗಿ, ಹೂ ಹಾರ ಹಾಕಿ ಸ್ವಾಗತಿಸಿದ ತಾಯಿ! ವಿಡಿಯೊ ನೋಡಿ

Continue Reading
Advertisement
ಬೆಂಗಳೂರು17 mins ago

LuLu Fashion Week 2024: ಲುಲು ಫ್ಯಾಷನ್ ವೀಕ್ 2024; ಕಲರ್ ಫುಲ್ ಬಟ್ಟೆ ತೊಟ್ಟು ಕಂಗೊಳಿಸಿದ ನಾರಿಮಣಿಗಳು

IPL 2024
ಕ್ರಿಕೆಟ್18 mins ago

IPL 2024 : ಗುಜರಾತ್​ ತಂಡ ಸೇರಿದ ಗುರ್ನೂರ್ ಬ್ರಾರ್; ಎಲ್ಲಿಯ ಆಟಗಾರ ಇವರು?

Devarajegowda
ಕರ್ನಾಟಕ2 hours ago

ಮಹಿಳೆಗೆ ಲೈಂಗಿಕ ದೌರ್ಜನ್ಯ ಕೇಸ್;‌ ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

Murder Case
ಕರ್ನಾಟಕ2 hours ago

Murder Case: ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ; ಬಾಲಕಿಯ ಅಪಹರಿಸಿ ಕತ್ತು ಕೊಯ್ದ ಕಿರಾತಕರು

Richard Hansen
ಕರ್ನಾಟಕ2 hours ago

Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

Legislative Council Election
ಕರ್ನಾಟಕ2 hours ago

ವಿಧಾನ ಪರಿಷತ್ ಚುನಾವಣೆ; 5 ಕ್ಷೇತ್ರ ಬಿಜೆಪಿಗೆ, 1 ಕ್ಷೇತ್ರ ಜೆಡಿಎಸ್‌ಗೆ; ಕಮಲ ಪಾಳಯದ ಪಟ್ಟಿ ಇಲ್ಲಿದೆ

Rain News
ಮಳೆ3 hours ago

Rain News: ಮಳೆ ಆರ್ಭಟ: ಸಿಡಿಲು ಬಡಿದು ಇಬ್ಬರ ಸಾವು, ಮತ್ತಿಬ್ಬರಿಗೆ ಗಾಯ; ನೆಲಕಚ್ಚಿದ ಬಾಳೆ ತೋಟ

ICMR Dietary Guidelines
ಆರೋಗ್ಯ3 hours ago

ICMR Dietary Guidelines: ನಿಮ್ಮ ಆರೋಗ್ಯ ಚೆನ್ನಾಗಿರಬೇಕೆ? ತಜ್ಞ ಸಮಿತಿಯ ಈ ಆಹಾರ ಸಲಹೆ ಪಾಲಿಸಿ

Dwarka Tour
ಪ್ರವಾಸ3 hours ago

Dwarka Tour: ದ್ವಾರಕೆಗೆ ಹೋದಾಗ ಏನೇನು ನೋಡಬಹುದು?

Narendra Modi
ದೇಶ3 hours ago

Narendra Modi: 75 ವರ್ಷ ದಾಟಿದರೂ ಮೋದಿ ಪ್ರಧಾನಿ ಸ್ಥಾನದಲ್ಲಿರುತ್ತಾರಾ? ಅಮಿತ್‌ ಶಾ ಹೇಳಿದ್ದಿಷ್ಟು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru News
ಬೆಂಗಳೂರು7 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ18 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ1 day ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

ಟ್ರೆಂಡಿಂಗ್‌