Site icon Vistara News

Manish Sisodia: ಮನೀಶ್‌ ಸಿಸೋಡಿಯಾಗೆ ಮತ್ತೊಂದು ಸಂಕಷ್ಟ, ಹವಾಲ ಕೇಸ್‌ನಲ್ಲಿ ಬಂಧಿಸಿದ ಇ.ಡಿ

ED arrests former Delhi deputy CM Manish Sisodia in excise policy case

ಮನೀಷ್‌ ಸಿಸೋಡಿಯಾ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಹಗರಣದಲ್ಲಿ ಸಿಬಿಐ ಅಧಿಕಾರಿಗಳಿಂದ ಬಂಧನಕ್ಕೀಡಾಗಿ, ಮಾರ್ಚ್‌ 20ರವರೆಗೆ ಕಸ್ಟಡಿಯಲ್ಲಿರುವ ದೆಹಲಿ ಆಪ್‌ ನಾಯಕ ಮನೀಶ್‌ ಸಿಸೋಡಿಯಾ (Manish Sisodia:) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಬಕಾರಿ ನೀತಿ ಜಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ಇ.ಡಿ ಅಧಿಕಾರಿಗಳು ಸಿಸೋಡಿಯಾ ಅವರನ್ನು ಗುರುವಾರ ಬಂಧಿಸಿದ್ದಾರೆ.

ದೆಹಲಿಯ ತಿಹಾರ್‌ ಜೈಲಿನಲ್ಲಿ ಸತತ ಎರಡನೇ ದಿನವಾದ ಗುರುವಾರವೂ ಇ.ಡಿ ಅಧಿಕಾರಿಗಳು ಸಿಸೋಡಿಯಾ ಅವರನ್ನು ಎಂಟು ತಾಸು ವಿಚಾರಣೆ ನಡೆಸಿದರು. ಇದಾದ ಬಳಿಕ ಅವರನ್ನು ಬಂಧಿಸಿದರು. ಈ ಕುರಿತು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರೇ ಮಾಹಿತಿ ನೀಡಿದ್ದಾರೆ. ಜಾಮೀನು ಕೋರಿ ಮನೀಶ್‌ ಸಿಸೋಡಿಯಾ ಅವರು ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆಗೆ ಒಂದು ದಿನ ಮೊದಲೇ ಇ.ಡಿ ಅಧಿಕಾರಿಗಳು ಸಿಸೋಡಿಯಾ ಅವರನ್ನು ಬಂಧಿಸಿದ್ದಾರೆ.

“ಸಿಸೋಡಿಯಾ ಅವರನ್ನು ಮೊದಲು ಸಿಬಿಐ ಬಂಧಿಸಿತು. ಆದರೆ, ಸಿಬಿಐಗೆ ಯಾವುದೇ ಸಾಕ್ಷ್ಯ ಸಿಗಲಿಲ್ಲ. ದಾಳಿ ವೇಳೆ ಹಣ ಸಿಕ್ಕಿಲ್ಲ. ಶುಕ್ರವಾರ ಸಿಸೋಡಿಯಾ ಅವರ ಜಾಮೀನು ಅರ್ಜಿ ವಿಚಾರಣೆ ಇದೆ. ಶುಕ್ರವಾರವೇ ಅವರನ್ನು ಬಿಡುಗಡೆಗೊಳಿಸುವ ಸಾಧ್ಯತೆ ಇದೆ. ಹಾಗಾಗಿ, ಇ.ಡಿ ಅಧಿಕಾರಿಗಳು ಸಿಸೋಡಿಯಾ ಅವರನ್ನು ಬಂಧಿಸಿದ್ದಾರೆ. ಆದರೆ, ಜನ ಎಲ್ಲವನ್ನೂ ಗಮನಿಸತ್ತಿದ್ದಾರೆ. ತಕ್ಕ ಪಾಠ ಕಲಿಸಲಿದ್ದಾರೆ” ಎಂದು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: Delhi Liquor Scam: ದೆಹಲಿ ಅಬಕಾರಿ ನೀತಿ ಅಕ್ರಮ; ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾಗೆ ಮತ್ತೆ ಸಿಬಿಐ ಸಮನ್ಸ್​

Exit mobile version