New Year 2024: ಇದು ಚುನಾವಣಾ ವರ್ಷ; ಮೋದಿ, ಬೈಡೆನ್‌ಗೆ ಸಿಗುತ್ತಾ ಮತ್ತೆ ಪವರ್? - Vistara News

ದೇಶ

New Year 2024: ಇದು ಚುನಾವಣಾ ವರ್ಷ; ಮೋದಿ, ಬೈಡೆನ್‌ಗೆ ಸಿಗುತ್ತಾ ಮತ್ತೆ ಪವರ್?

New Year 2024: ಈ ಹೊಸ ವರ್ಷವು ರಾಜಕೀಯ ದೃಷ್ಟಿಯಿಂದ ಮಹತ್ವದ್ದಾಗಿದೆ. ಭಾರತ, ರಷ್ಯಾ, ಅಮೆರಿಕ ಮತ್ತು ಪಾಕಿಸ್ತಾನಗಳಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ.

VISTARANEWS.COM


on

Elections battles in new year 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

2023ರ ವಿದಾಯಕ್ಕೆ (Year Ender) ದಿನಗಣನೆ ಶುರುವಾಗಿ. 2024 ಹೊಸ ವರ್ಷವನ್ನು (New Year 2024) ಸ್ವಾಗತಿಸಲು ಎಲ್ಲರೂ ಸಜ್ಜಾಗಿದ್ದಾರೆ. ಕಳೆದು ಹೋಗುತ್ತಿರುವ ವರ್ಷದಲ್ಲಿ ಏನೆಲ್ಲಾ ಆಯ್ತು ಎಂಬುದು ನಮ್ಮ ಮುಂದಿದೆ. ಹಾಗೆಯೇ ಹೊಸ ವರ್ಷದ ಒಡಲಲ್ಲಿ ಏನೆಲ್ಲ ಇದೆ ಎಂದು ಊಹೆ ಮಾಡಬಹುದು. ಚುನಾವಣೆಗಳ (elections) ವಿಷಯಕ್ಕೆ ಸಂಬಂಧಿಸಿದಂತೆ 2024ರ ಪ್ರಮುಖ ವರ್ಷವಾಗಲಿದೆ. ಯಾಕೆಂದರೆ, ಭಾರತದಲ್ಲಿ ಸಾರ್ವತ್ರಿಕ ಚುನಾವಣೆ (Lok Sabha Election) ನಡೆದರೆ, ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ (US President election) ನಡೆಯಲಿದೆ. ಹಾಗಾಗಿ, 2024 ವರ್ಷವನ್ನು ಚುನಾವಣೆಯ ವರ್ಷವೆಂದೂ ಕರೆದರೂ ತಪ್ಪಾಗಲ್ಲ. ಯಾವೆಲ್ಲ ಚುನಾವಣೆಗಳಿವೆ ಎದುರು ನೋಡೋಣ ಬನ್ನಿ.

ಚುನಾವಣೆಗಳ ಪರ್ವ ಈ ವರ್ಷ

ಭಾರತ ಮಾತ್ರವಲ್ಲದೇ ಜಾಗತಿಕವಾಗಿ 2024 ಚುನಾವಣೆಯ ದೃಷ್ಟಿಯಿಂದ ಮಹತ್ವದ ವರ್ಷವಾಗಿದೆ. ಭಾರತದಲ್ಲಿ ಲೋಕಸಭೆ ಅರ್ಥಾತ್ ಸಾರ್ವತ್ರಿಕ ಚುನಾವಣೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆದರೆ, ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ, ಸಿಕ್ಕಿಮ್, ಜಮ್ಮು ಮತ್ತು ಕಾಶ್ಮೀರ, ಹರ್ಯಾಣ, ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ವಿಧಾನಸಭೆಗಳಿಗೂ ಚುನಾವಣೆ ನಡೆಯಲಿದೆ. ಅಮೆರಿಕ, ಪಾಕಿಸ್ತಾನ ಮತ್ತು ರಷ್ಯಾದಲ್ಲೂ ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ.

ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೂರನೇ ಬಾರಿಗೆ ಅಧಿಕಾಕ್ಕೇರುವ ಪ್ರಯತ್ನ ಮಾಡುತ್ತಿದೆ. 2014ರಿಂದ ಸತತ ಅಧಿಕಾರದಲ್ಲಿರುವ ಮೋದಿ ಸರ್ಕಾರವು 2024ರ ಚುನಾವಣೆಯನ್ನು ಗೆಲ್ಲುವ ಅಪರಮಿತ ವಿಶ್ವಾಸವನ್ನು ಹೊಂದಿದೆ. ಬಿಜೆಪಿಯನ್ನು ಈ ಬಾರಿ ಸೋಲಿಸಬೇಕು ಎಂದು ಪಣತೊಟ್ಟಿರುವ ಪ್ರತಿ ಪಕ್ಷಗಳು ಇಂಡಿಯಾ ಕೂಟ ವೇದಿಕೆಯಡಿ ಒಂದಾಗಿವೆ. ಈ ಕೂಟದಲ್ಲಿ ಕಾಂಗ್ರೆಸ್, ಸಂಯುಕ್ತ ಜನತಾ ದಳ, ಶಿವಸೇನೆ (ಯುಬಿಟಿ), ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಸಮಾಜವಾದಿ ಪಕ್ಷ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಆಮ್ ಆದ್ಮಿ ಪಕ್ಷ ಮತ್ತು ರಾಷ್ಟ್ರೀಯ ಜನತಾ ದಳ ಸೇರಿ 26 ಪಕ್ಷಗಳಿವೆ. ಎನ್‌ಡಿಎ ಕೂಟದಲ್ಲೂ ಕೂಡ 25ಕ್ಕೂ ಅಧಿಕ ಪಕ್ಷಗಳಿವೆ.

ಪಾಕಿಸ್ತಾನದಲ್ಲೂ ಸಾರ್ವತ್ರಿಕ ಚುನಾವಣೆ

ನಮ್ಮ ನೆರೆಯ ಪಾಕಿಸ್ತಾನದಲ್ಲೂ ಸಾರ್ವತ್ರಿಕ ಚುನಾವಣೆ ನಡೆಯಲಿದೆ. 2024ರ ಫೆಬ್ರವರಿ 8 ಚುನಾವಣೆಗೆ ದಿನಾಂಕವನ್ನು ಫಿಕ್ಸ್ ಮಾಡಲಾಗಿದೆ. ಗೋಹಲ್ ಅಲಿ ಖಾನ್ ನೇತೃತ್ವದ ಪಿಟಿಐ, ನವಾಜ್ ಷರೀಫ್ ಅವರ ಪಿಎಂಎಲ್(ಎನ್), ಬಿಲಾವಲ್ ಭುಟ್ಟೋ ಜರ್ದಾರಿ ಅವರ ಪಿಪಿಪಿ ಈ ಚುನಾವಣೆಯಲ್ಲಿ ಸೆಣೆಸಾಡಲಿರುವ ಪ್ರಮುಖ ರಾಜಕೀಯ ಪಕ್ಷಗಳಾಗಿವೆ. ಈ ಹಿಂದೆ ಪ್ರಧಾನಿಯಾಗಿದ್ದ ಕ್ರಿಕೆಟಿಗ, ಪಿಟಿಐ ನಾಯಕ ಇಮ್ರಾನ್ ಖಾನ್ ಸದ್ಯ ಜೈಲಿನಲ್ಲಿದ್ದಾರೆ. ಅವರು ಜೈಲಿನಿಂದಲೇ ಚುನಾವಣೆಗೆ ಸ್ಪರ್ಧಿಸುವಾದಿಗ ಹೇಳಿದ್ದಾರೆ.

ಅಮೆರಿಕದ ಅಧ್ಯಕ್ಷೀಯ ಚುನಾವಣೆ

2024ರಲ್ಲಿ ಜಗತ್ತು ಎದುರು ನೋಡುತ್ತಿರುವ ಮತ್ತೊಂದು ಚುನಾವಣೆ- ಅಮೆರಿಕ ಅಧ್ಯಕ್ಷೀಯ ಚುನಾವಣೆ. ಆಡಳಿತಾರೂಢ ಡೆಮಾಕ್ರಟಿಕ್ ಮತ್ತು ರಿಪಬ್ಲಿಕನ್ ಪಕ್ಷದ ನಡುವೆ ತೀವ್ರ ಹಣಾಹಣಿ ನಡೆಯುವ ಸಾಧ್ಯತೆ. ಮತ್ತೊಮ್ಮೆ ಅಧ್ಯಕ್ಷ ಗಾದೆಗೇರುವ ಕನಸು ಕಾಣುತ್ತಿರುವ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಚುನಾವಣೆಗೆ ಸ್ಪರ್ಧಿಸಲು ಅವಕಾಶ ಸಿಗುವುದೇ ಡೌಟು. ಯಾಕೆಂದರೆ, ಅವರು ನಾನಾ ಕಾನೂನು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಒಂದೊಮ್ಮೆ, ತಮ್ಮ ಮುಂದಿರುವ ಎಲ್ಲ ಕಾನೂನು ಅಡ್ಡಿಗಳನ್ನು ಮೀರಿ, ಸ್ಪರ್ಧಿಸಿ ಗೆದ್ದರೆ ಇತಿಹಾಸ ಸೃಷ್ಟಿಯಾಗಲಿದೆ. ಸತತವಲ್ಲದ ಎರಡು ಅವಧಿಗೆ ಆಯ್ಕೆಯಾದ ಗ್ರೋವರ್ ಕ್ಲೀವ್‌ಲ್ಯಾಂಡ್‌ ಬಳಿಕ ಅಧ್ಯಕ್ಷರಾದ ಎಂಬ ಕೀರ್ತಿ ಡೋನಾಲ್ಡ್ ಟ್ರಂಪ್ ಅವರಿಗೆ ಸಲ್ಲಲಿದೆ.

ನಿರೀಕ್ಷೆಯಂತೆ, ಹಾಲಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರು ಎರಡನೇ ಅವಧಿಗೂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯನ್ನು ಎದುರಿಸಲಿದ್ದಾರೆ. ಹಾಗಾಗಿ, 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆ ಭಾರೀ ಕುತೂಹಲ ಕೆರಳಿಸಿದೆ.

ರಷ್ಯಾದಲ್ಲೂ ಚುನಾವಣೆ

ಉಕ್ರೇನ್‌ ಜತೆ ಯುದ್ಧದಲ್ಲಿ ನಿರತರಾಗಿರುವ ರಷ್ಯಾದಲ್ಲೂ ಚುನಾವಣೆ ನಡೆಯಲಿದೆ. ಆದರೆ, ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದನ್ನು ಈಗಲೇ ಊಹಿಸಬಹುದು. 1999ರಿಂದಲೂ ರಷ್ಯಾದ ಚುಕ್ಕಾಣಿಯನ್ನು ಹಿಡಿದಿರುವ ವ್ಲಾದಿಮಿರ್ ಪುಟಿನ್ ಅವರ ನಾಯಕತ್ವ ಈ ಚುನಾವಣೆಯಲ್ಲೂ ಮುಂದುವರಿಯಬಹುದು. ಪ್ರಧಾನಿಯಾಗುವ ಮೂಲಕ ಅಧಿಕಾರಕ್ಕೇರಿದ ಪುಟಿನ್ ಈಗ ಅಧ್ಯಕ್ಷರಾಗಿ ಎಲ್ಲ ಅಧಿಕಾರಗಳನ್ನು ತಮ್ಮ ಬಳಿಗೆ ಇಟ್ಟುಕೊಂಡಿದ್ದಾರೆ. ಹಾಗಾಗಿ, 2024ರ ಚುನಾವಣೆಯ ಫಲಿತಾಂಶದಲ್ಲಿ ಅಂಥ ವ್ಯತ್ಯಾಸಗಳೇನೂ ನಿರೀಕ್ಷೆ ಮಾಡುವ ಹಾಗಿಲ್ಲ.

ಈ ಸುದ್ದಿಯನ್ನೂ ಓದಿ: Year Ender 2023 : ಒಂದು ವರ್ಷದಲ್ಲಿ ಜಗತ್ತನ್ನು ಆಳಿದ 5 ಎಲೆಕ್ಟ್ರಿಕ್ ಕಾರುಗಳ ವಿವರ ಇಲ್ಲಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

Latest

Dog Bite : ಮಗುವಿಗೆ ಕಚ್ಚಿದ ನಾಯಿ; ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ದಂಪತಿಗೆ ಥಳಿತ, ಇಲ್ಲಿದೆ ವಿಡಿಯೊ

Dog Bite: ಮಾಧ್ಯಮಗಳ ವರದಿಗಳ ಪ್ರಕಾರ, ನಾಯಿಯ ಕಡಿತಕ್ಕೆ ಒಳಗಾಗ ಮಗು ಗಂಭೀರವಾಗಿ ಗಾಯಗೊಂಡಿದೆ. ಘಟನೆಯ ನಂತರ ನಿವಾಸಿಗಳೆಲ್ಲರೂ ಒಟ್ಟಿಗೆ ಜಮಾಯಿಸಿ ಆ ಸೊಸೈಟಿಯಲ್ಲಿ ವಾಸಿಸುವ ನಾಯಿಗಳಿಗೆ ಆಹಾರ ನೀಡುವವರ ವಿರುದ್ಧ ಪ್ರತಿಭಟಿಸಿದರು. ನಾಯಿಗೆ ಆಹಾರ ಹಾಕುವ ದಂಪತಿ ಸೇರಿ ಹಲವರ ಮೇಲೆ ದೂರು ದಾಖಲಿಸಿದ್ದಾರೆ.

VISTARANEWS.COM


on

Dog bite
Koo

ನವ ದೆಹಲಿ: ನೋಯ್ಡಾದ ಸೆಕ್ಟರ್ -70 ರ (Noida Society) ವಸತಿ ಸೊಸೈಟಿಯಲ್ಲಿ ಬಾಲಕನೊಬ್ಬನಿಗೆ ಬೀದಿ ನಾಯಿಯೊಂದು ಕಚ್ಚಿದ ಪರಿಣಾಮ (Dog Bite) ಕೆರಳಿ ಕೆಂಡವಾದ ಅಪಾರ್ಟ್​ಮೆಂಟ್ ನಿವಾಸಿಗಳು, ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ದಂಪತಿ ಮೇಲೆ ಹಲ್ಲೆ ನಡೆಸಿದ್ದಾರೆ ಈ ಘಟನೆಯ ವಿಡಿಯೊ ವೈರಲ್​ ಆಗಿದ್ದು ಪರ- ವಿರೋಧ ಚರ್ಚೆ ಜೋರಾಗಿ ನಡೆದಿದೆ. ಅದಕ್ಕಿಂತಲೂ ಹೆಚ್ಚಾಗಿ ಅಪಾರ್ಟ್​ಮೆಂಟ್​ ಒಳಗೆ ದೊಡ್ಡ ಸಂಖ್ಯೆಯಲ್ಲಿ ಜನರ ಏಕಾಏಕಿ ಜಮಾಯಿಸಿದ್ದು ಕಂಡು ಸಾಕಷ್ಟು ಜನರು ಇಂಥದ್ದು ನಡೆಯಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಮಾಧ್ಯಮಗಳ ವರದಿಗಳ ಪ್ರಕಾರ, ನಾಯಿಯ ಕಡಿತಕ್ಕೆ ಒಳಗಾಗ ಮಗು ಗಂಭೀರವಾಗಿ ಗಾಯಗೊಂಡಿದೆ. ಘಟನೆಯ ನಂತರ ನಿವಾಸಿಗಳೆಲ್ಲರೂ ಒಟ್ಟಿಗೆ ಜಮಾಯಿಸಿ ಆ ಸೊಸೈಟಿಯಲ್ಲಿ ವಾಸಿಸುವ ನಾಯಿಗಳಿಗೆ ಆಹಾರ ನೀಡುವವರ ವಿರುದ್ಧ ಪ್ರತಿಭಟಿಸಿದರು. ನಾಯಿಗೆ ಆಹಾರ ಹಾಕುವ ದಂಪತಿ ಸೇರಿ ಹಲವರ ಮೇಲೆ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Fireworks Blast : ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 8 ಮಂದಿಯ ದುರ್ಮರಣ

ಉದ್ರಿಕ್ತ ಗುಂಪು ಶುಭಂ ಮತ್ತು ಸಂಕಲಿತಾ ಎಂಬ ಹೆಸರಿನ ದಂಪತಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅವರು ಕೂಡ ಪೊಲೀಸ್​ ದೂರು ನೀಡಿದ್ದಾರೆ. ಇದೆ ವೇಳೆ ಪರಿಸ್ಥಿತಿ ನಿಯಂತ್ರಿಸಲು ಬಂದ ಪೊಲೀಸರನ್ನು ತಳ್ಳಿದ್ದಾರೆ ಎನ್ನಲಾಗಿದೆ. ಕರ್ತವ್ಯದಲ್ಲಿದ್ದ ಕಾನ್ಸ್​ಟೇಬಲ್​​ಗಳು ಈ ಬಗ್ಗೆ ದೂರು ನೀಡಿದ್ದಾರೆ. ಗಲಾಟೆ ವೇಳೆ ಕೆಲವರು ಸಿಸಿ ಟಿವಿ ಕ್ಯಾಮೆರಾಗಳನ್ನು ಆಫ್ ಮಾಡಲು ಸಹ ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ದಂಪತಿಯ ಆರೋಪ

ಗಲಾಟೆಯನ್ನು ರೆಕಾರ್ಡ್ ಮಾಡಲು ಮುಂದಾದಾಗ ಅವರಲ್ಲಿ ಒಬ್ಬರು ನನ್ನ ಹೆಂಡತಿಯ ಫೋನ್ ಕಸಿದುಕೊಳ್ಳಲು ಪ್ರಯತ್ನಿಸಿದರು. ಅಲ್ಲದೆ ಅವಳಿಗೆ ಗಾಯ ಮಾಡಿದ್ದಾರೆ ಎಂದು ಶುಭಮ್ ಹೇಳಿದ್ದಾರೆ. ನನ್ನನ್ನು ರಕ್ಷಿಸಲು ಬಂದ ತನ್ನ ಕೆಲವು ಸ್ನೇಹಿತರನ್ನೂ ಎಳೆದಾಡಿದ್ದಾರೆ. ಅದರ ದೃಶ್ಯಗಳನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಪೀಪಲ್ ಫಾರ್ ಅನಿಮಲ್ಸ್ (ಪಿಎಫ್ಎ) ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ, ಗುಂಪಿನ ವೀಡಿಯೊವನ್ನು ಹಂಚಿಕೊಂಡಿದೆ. “ನೋಯ್ಡಾದ ಸೆಕ್ಟರ್ 70 ರ ಪಾನ್ ಒಯಾಸಿಸ್​ನಲ್ಲಿ ಹಿಂಸಾತ್ಮಕ ಗುಂಪು ನಾಯಿಗಳಿಗೆ ಆಹಾರ ಮತ್ತು ಆರೈಕೆ ಮಾಡುವ ಯುವ ದಂಪತಿ ಮೇಲೆ ದಾಳಿ ಮಾಡಿ ಕಾನೂನು ಉಲ್ಲಂಘಿಸಿದೆ. ಪೊಲೀಸರನ್ನು ಸಹ ತಳ್ಳಲಾಗಿದೆ. ಗಲಭೆಕೋರರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಕೋರಿದೆ.

ನಾಯಿಗಳಿಗೆ ಸಂತಾನಶಕ್ತಿ ಹರಣ ಚಿಕಿತ್ಸೆ ಮಾಡಿಸಿ ಲಸಿಕೆ ಹಾಕಿದ ಆರೈಕೆದಾರಿಗೆ ಹಲ್ಲೆ ಮಾಡಲಾಗಿದೆ. ಅಶ್ಲೀಲವಾಗಿ ನಿಂದಿಸಲಾಗಿದೆ ಮತ್ತು ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಪ್ರಾಣಿ ಕಲ್ಯಾಣ ಸಂಸ್ಥೆ ಹೇಳಿದೆ.

Continue Reading

ಪ್ರಮುಖ ಸುದ್ದಿ

Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

Sensex Crash: ರಾಜಕೀಯ ಅನಿಶ್ಚಿತತೆಯಿಂದಾಗಿ ರಿಲಯನ್ಸ್ ಇಂಡಸ್ಟ್ರೀಸ್, ಎಲ್ &ಟಿ, ಎಚ್ಡಿಎಫ್ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಐಟಿಸಿ ಸೇರಿದಂತೆ ದೊಡ್ಡ ಸಂಸ್ಥೆಗಳ ಷೇರುಗಳು ವ್ಯಾಪಕ ಮಾರಾಟವನ್ನು ಕಂಡವು. ಈ ಪ್ರಮುಖ ಕಂಪನಿಗಳ ಸೂಚ್ಯಂಕದ ಕುಸಿತವು ಒಟ್ಟಾರೆ ಕುಸಿತ 80 ಪ್ರತಿಶತದಷ್ಟು ಪಾಲು ಹೊಂದಿದೆ. ಷೇರು ಮಾರುಕಟ್ಟೆಗಳ ಮೇಲೆ ಗಣನೀಯವಾಗಿ ಕೆಳಮುಖ ಒತ್ತಡ ಬೀರಿದೆ.

VISTARANEWS.COM


on

Sensex crash
Koo

ಮುಂಬಯಿ : ಎಫ್ ಐಐ ಹೊರಹರಿವು ಮತ್ತು ಯುಎಸ್ ಬಾಂಡ್ ಹೆಚ್ಚಳದ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆಗಳು ಗುರುವಾರ ತೀವ್ರ ಕುಸಿತ (Sensex Crash) ಕಂಡಿವೆ. ಬಿಎಸ್ಇ (BSE) ಸೆನ್ಸೆಕ್ಸ್ 1,132 ಪಾಯಿಂಟ್ಸ್ ಕುಸಿದು 72,334 ಕ್ಕೆ ತಲುಪಿದ್ದರೆ, ನಿಫ್ಟಿ 50 370 ಪಾಯಿಂಟ್ಸ್ ಕುಸಿದು 21,932 ಕ್ಕೆ ತಲುಪಿದೆ. ಬಿಎಸ್ಇ ಸೂಚ್ಯಂಕವು ಅಂತಿಮವಾಗಿ 1,062 ಪಾಯಿಂಟ್​​ ಅಂದರೆ ಶೇಕಡಾ 1.45 ರಷ್ಟು ಕುಸಿದು 72,404 ಕ್ಕೆ ಕೊನೆಗೊಂಡಿತು. ನಿಫ್ಟಿ 50 ಕೂಡ 345 ಪಾಯಿಂಟ್ ಅಂದರೆ ಶೇಕಡಾ 1.55 ರಷ್ಟು ಕುಸಿದು 21,958 ಕ್ಕೆ ತಲುಪಿದೆ.

ಮಾರುಕಟ್ಟೆಗಳಲ್ಲಿ, ಬಿಎಸ್ಇ ಮಿಡ್​ಕ್ಯಾಪ್​ ಸೂಚ್ಯಂಕವು ಶೇಕಡಾ 2 ರಷ್ಟು ಕುಸಿದರೆ, ಬಿಎಸ್ಇ ಸ್ಮಾಲ್ ಕ್ಯಾಪ್ ಸೂಚ್ಯಂಕವು ಶೇಕಡಾ 2.4 ರಷ್ಟು ಕುಸಿದಿದೆ. “ಮಾರುಕಟ್ಟೆಯ ಕುಸಿತಕ್ಕೆ ಮುಖ್ಯವಾಗಿ ಸಾರ್ವತ್ರಿಕ ಚುನಾವಣೆಗಳ ಸುತ್ತಲಿನ ಅನಿಶ್ಚಿತತೆ ಕಾರಣವಾಗಿದೆ. ಈ ಅನಿಶ್ಚಿತತೆಯು ಭಾರತದ ಚಂಚಲತೆಯ ಮಾಪಕವಾದ ಇಂಡಿಯಾ ವಿಐಎಕ್ಸ್ ಅನ್ನು ಗಮನಾರ್ಹವಾಗಿ ಹೆಚ್ಚಿಸಿದೆ. ಇದು 52 ವಾರಗಳ ಗರಿಷ್ಠ 19 ಕ್ಕೆ ತಲುಪಿದೆ, ಇದು ಮಾರುಕಟ್ಟೆ ಆತಂಕವನ್ನು ಸೂಚಿಸಿದೆ. ಲಾರ್ಜ್ ಕ್ಯಾಪ್ ಕಂಪನಿಗಳ ನಾಲ್ಕನೇ ತ್ರೈಮಾಸಿಕ ಗಳಿಕೆಯ ಇಳಿಕೆಯು ಹೂಡಿಕೆದಾರರ ನಿರಾಸಕ್ತಿಗೆ ಕಾರಣವಾಗಿದೆ ಎಂದು ಷೇರು ಮಾರುಕಟ್ಟೆ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ.

ರಾಜಕೀಯ ಅನಿಶ್ಚಿತತೆಯಿಂದಾಗಿ ರಿಲಯನ್ಸ್ ಇಂಡಸ್ಟ್ರೀಸ್, ಎಲ್ &ಟಿ, ಎಚ್ಡಿಎಫ್ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಐಟಿಸಿ ಸೇರಿದಂತೆ ದೊಡ್ಡ ಸಂಸ್ಥೆಗಳ ಷೇರುಗಳು ವ್ಯಾಪಕ ಮಾರಾಟವನ್ನು ಕಂಡವು. ಈ ಪ್ರಮುಖ ಕಂಪನಿಗಳ ಸೂಚ್ಯಂಕದ ಕುಸಿತವು ಒಟ್ಟಾರೆ ಕುಸಿತ 80 ಪ್ರತಿಶತದಷ್ಟು ಪಾಲು ಹೊಂದಿದೆ. ಷೇರು ಮಾರುಕಟ್ಟೆಗಳ ಮೇಲೆ ಗಣನೀಯವಾಗಿ ಕೆಳಮುಖ ಒತ್ತಡಕ್ಕೆ ಕಾರಣವಾಗಿದೆ.

ಇದನ್ನೂ ಓದಿ: Dietary Guidelines: ಭಾರತೀಯರ ಆಹಾರ ಹೇಗಿರಬೇಕು? ಐಸಿಎಂಆರ್ ಮಾರ್ಗಸೂಚಿ ಹೀಗಿದೆ

ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್ಐಐ) ಮೇ ತಿಂಗಳಾದ್ಯಂತ ತಮ್ಮ ಹೂಡಿಕೆಗಳನ್ನು ಸಕ್ರಿಯವಾಗಿ ಮಾರಾಟ ಮಾಡುತ್ತಿದ್ದಾರೆ. ಒಟ್ಟು ಮಾರಾಟ 15,863.14 ಕೋಟಿ ರೂ. ಆಗಿದ್ದು ಇದು ಕೂಡ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ. ಮೇ 8 ರಂದು ವಿದೇಶಿ ಹೂಡಿಕೆದಾರರು 6,669.10 ಕೋಟಿ ರೂ.ಗಳ ಈಕ್ವಿಟಿಗಳನ್ನು ಹಿಂತೆಗೆದುಕೊಂಡಿದ್ದಾರೆ. ವಿದೇಶಿ ಬಂಡವಾಳ ಹೂಡಿಕೆದಾರರು 2025ರ ಹಣಕಾಸು ವರ್ಷದಲ್ಲಿ ಇದುವರೆಗೆ 13,747 ಕೋಟಿ ರೂ.ಗಳ ಈಕ್ವಿಟಿಗಳನ್ನು ಹಿಂತೆಗೆದುಕೊಂಡಿದ್ದಾರೆ.

ದೇಶೀಯ ಸಾಂಸ್ಥಿಕ ಹೂಡಿಕೆದಾರರಿಂದ (ಡಿಐಐ) ಕಡಿಮೆ ಖರೀದಿ ಚಟುವಟಿಕೆಯು ಮಾರುಕಟ್ಟೆಯ ಚಂಚಲತೆಗೆ ಕಾರಣವಾಗಿದೆ ಎಂದು ವಿಶ್ಲೇಷಕರು ಹೇಳಿದ್ದಾರೆ. ಕಳೆದ ಒಂದು ತಿಂಗಳಲ್ಲಿ, ನಿಫ್ಟಿ ಶೇಕಡಾ 1.5 ರಷ್ಟು ಕುಸಿದರೆ, ಶಾಂಘೈ ಕಾಂಪೊಸಿಟ್ ಶೇಕಡಾ 2.62 ಮತ್ತು ಹ್ಯಾಂಗ್ ಸೆಂಗ್ ಶೇಕಡಾ 8.8 ರಷ್ಟು ಏರಿಕೆಯಾಗಿದೆ. ಚೀನಾ ಮತ್ತು ಹಾಂಗ್ ಕಾಂಗ್ ಮಾರುಕಟ್ಟೆಗಳು ಸುಮಾರು 10 ಪಿಇಗಳೊಂದಿಗೆ ಇಳಿಕೆ ಕಂಡಿದೆ ಎಂದು ಅಂಕಿ ಅಂಶಗಳು ತಿಳಿಸಿವೆ.

ಲೋಕ ಸಭಾ ಚುನಾವಣೆಯ ಆರಂಭಿಕ ಮೂರು ಹಂತಗಳಲ್ಲಿ ಕಂಡುಬಂದ ಕಡಿಮೆ ಮತದಾನವು ಮಾರುಕಟ್ಟೆಗಳ ಆತಂಕ ಹೆಚ್ಚಿಸಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

Continue Reading

ಪ್ರಮುಖ ಸುದ್ದಿ

Fireworks Blast : ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 8 ಮಂದಿಯ ದುರ್ಮರಣ

VISTARANEWS.COM


on

fireworks blast
Koo

ಶಿವಕಾಶಿ: ತಮಿಳುನಾಡಿನ ಶಿವಕಾಶಿ ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ (Fireworks Blast) 8 ಜನರು ಸಾವನ್ನಪ್ಪಿದ್ದಾರೆ. ಭಾರತದ ಪಟಾಕಿ ಕೇಂದ್ರ ಎಂದು ಕರೆಯಲ್ಪಡುವ ಶಿವಕಾಶಿ (Sivakashi) ಬಳಿಯ ಪಟಾಕಿ ಉತ್ಪಾದನಾ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಮೃತಪಟ್ಟಿರುವವರ ಜತೆ ಇನ್ನೂ ಹನ್ನೆರಡು ಮಂದಿ ಗಂಭೀರ ಪ್ರಮಾಣದ ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ ಎಂದು ಪೊಲೀಸರು ವರದಿ ಮಾಡಿದ್ದಾರೆ. ದುರ್ಘಟನೆ ನಡೆದ ಕಾರ್ಖಾನೆ ಲೈಸನ್ಸ್​ ಪಡೆದ ಕಾರ್ಖಾನೆಯಾಗಿದೆ.

ಸ್ಫೋಟದ ಹಿಂದಿನ ಕಾರಣವನ್ನು ಕಂಡುಹಿಡಿಯಲು ಪೊಲೀಸರೊಂದಿಗೆ ಸ್ಥಳೀಯ ತನಿಖಾ ಸಂಸ್ಥೆಗಳು ತನಿಖೆ ಪ್ರಾರಂಭಿಸಿವೆ. ದುರಂತ ಘಟನೆಗೆ ಕಾರಣವಾದ ಸಂಭಾವ್ಯ ಅಂಶಗಳ ಬಗ್ಗೆ ತನಿಖೆ ನಡೆಸುತ್ತಿವೆ. ಭಾರತದ ಪಟಾಕಿ ಉತ್ಪಾದನಾ ಕೇಂದ್ರವೆಂದು ಪ್ರಸಿದ್ಧವಾಗಿರುವ ಶಿವಕಾಶಿ ಭಾರತದಲ್ಲಿ ಅತಿ ಹೆಚ್ಚು ಪಟಾಕಿಗಳು ತಯಾರಿಸುವ ಕೇಂದ್ರವಾಗಿದೆ. ಇಲ್ಲಿ ಅದೇ ರೀತಿ ಸ್ಟೇಷನರಿ ವಸ್ತುಗಳ ಉತ್ಪಾದನೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಘಟನೆಯಿಂದಾಗಿಸ ಸ್ಥಳದಲ್ಲಿ ಆತಂಕ ಸೃಷ್ಟಿಯಾಗಿದೆ.

ಪೂಂಚ್‌ನಲ್ಲಿ ಸೇನೆ ಮೇಲೆ ದಾಳಿ ಮಾಡಿದ 3 ಉಗ್ರರ ಫೋಟೊ ರಿಲೀಸ್; ಹತ್ಯೆಗೆ ಪ್ಲಾನ್!

ಶ್ರೀನಗರ: ಜಮ್ಮು-ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿ ಮೇ 4ರಂದು ಭಾರತೀಯ ವಾಯುಪಡೆಯ ಬೆಂಗಾವಲು ಪಡೆಯ (Indian Air Force) ಎರಡು ವಾಹನಗಳ ಮೇಲೆ ದಾಳಿ ನಡೆಸಿದ ಉಗ್ರರ (Poonch Terrorists) ಫೋಟೊಗಳು, ಅವರ ಹೆಸರು ಬಹಿರಂಗವಾಗಿದೆ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಉಗ್ರರ ಫೋಟೊಗಳನ್ನು ಬಿಡುಗಡೆ ಮಾಡಲಾಗಿದ್ದು, ಭಾರತೀಯ ಸೇನೆಯು (Indian Army) ಇವರನ್ನು ಹೊಡೆದುರುಳಿಸಲು ಪ್ಲಾನ್‌ ರೂಪಿಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ವಾಯುಪಡೆ ವಾಹನಗಳ ಮೇಲೆ ದಾಳಿ ಮಾಡಿದ ಮೂವರನ್ನು ಇಲಿಯಾಸ್‌ (ಪಾಕಿಸ್ತಾನ ಸೇನೆಯ ಮಾಜಿ ಕಮಾಂಡೋ), ಲಷ್ಕರೆ ತಯ್ಬಾ ಕಮಾಂಡರ್‌ ಅಬು ಹಮ್ಜಾ ಹಾಗೂ ಹದೂನ್‌ ಎಂಬುದಾಗಿ ಗುರುತಿಸಲಾಗಿದೆ. ಇಲಿಯಾಸ್‌ನ ಕೋಡ್‌ ನೇಮ್‌ (ಗೌಪ್ಯ ಹೆಸರು) ಫೌಜಿ ಎಂಬುದಾಗಿದೆ ಎಂದು ಕೂಡ ತಿಳಿದುಬಂದಿದೆ. ಜೈಶೆ ಮೊಹಮ್ಮದ್‌ ಉಗ್ರ ಸಂಘಟನೆಯ ಪೀಪಲ್ಸ್‌ ಆ್ಯಂಟಿ-ಫ್ಯಾಸಿಸ್ಟ್‌ ಫ್ರಂಟ್‌ ಎಂಬ ಅಂಗಸಂಸ್ಥೆಯ ಪರವಾಗಿ ಉಗ್ರರು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೇ 4ರಂದು ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ವಾಯುಪಡೆಯ ಎರಡು ವಾಹನಗಳ ಮೇಲೆ ಭಯೋತ್ಪಾದಕರು ನಡೆಸಿದ ಭಾರಿ ಗುಂಡಿನ ದಾಳಿಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದರು. ಅಲ್ಲದೆ, ಐವರು ಗಂಭೀರವಾಗಿ ಗಾಯಗೊಂಡಿದ್ದರು. ಪೂಂಚ್‌ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿರುವ ಬಗ್ಗೆ ಮೊದಲೇ ಸೇನೆಗೆ ಖಚಿತ ಮಾಹಿತಿ ಸಿಕ್ಕಿತ್ತು. ಈ ನಿಟ್ಟಿನಲ್ಲಿ ಅರೆ ಸೈನಿಕ ಪಡೆ ಮತ್ತು ಪೊಲೀಸರು ಅವರ ಪತ್ತೆಗೆ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಅಷ್ಟರಲ್ಲಿ ಈ ದುರ್ಘಟನೆ ಸಂಭವಿಸಿತ್ತು.

ಸಿಸಿಟಿವಿ ದೃಶ್ಯಗಳು ಹಾಗೂ ಫೋಟೊಗಳನ್ನು ಪರಿಶೀಲನೆ ಮಾಡುತ್ತಿರುವ ಭಾರತೀಯ ಸೇನೆಯು ರಾಜೌರಿ ಹಾಗೂ ಪೂಂಚ್‌ನ ಅರಣ್ಯ ಪ್ರದೇಶದಲ್ಲಿ‌ ಮೂವರ ಹತ್ಯೆಗಾಗಿ ಬೃಹತ್ ಕಾರ್ಯಾಚರಣೆ ಕೈಗೊಳ್ಳಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಕೆಲವೆಡೆ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ ಎಂದು ಹೇಳಲಾಗುತ್ತಿದೆ. ಪೂಂಚ್‌ ದಾಳಿಯ ಬಳಿಕ ಕುಲ್ಗಾಮ್‌ನಲ್ಲಿ ಲಷ್ಕರೆ ತಯ್ಬಾದ ಮೂವರು ಉಗ್ರರನ್ನು ಹೊಡೆದುರುಳಿಸುವ ಮೂಲಕ ಯೋಧರು ಸೇಡು ತೀರಿಸಿಕೊಂಡಿದ್ದರು. ಮೇ 6ರಂದು ಕುಲ್ಗಾಮ್‌ನಲ್ಲಿ ಲಷ್ಕರೆ ತಯ್ಬಾ ಉಗ್ರ ಸಂಘಟನೆಯ ಕಮಾಂಡರ್‌, ಮೋಸ್ಟ್‌ ವಾಂಟೆಡ್‌ ಉಗ್ರ ಸೇರಿ ಒಟ್ಟು ಮೂವರು ಹತ್ಯೆಗೈದಿದ್ದರು.

Continue Reading

ಉದ್ಯೋಗ

Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಅಪ್ಲೈ ಮಾಡಿ

Job Alert: ಸರ್ಕಾರಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ ಗುಡ್‌ನ್ಯೂಸ್‌ ನೀಡಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ 506 ಅಸಿಸ್ಟಂಟ್‌ ಕಮಾಂಡೆಂಟ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮೇ 14. ಪದವಿ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ನವದೆಹಲಿ: ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (Central Armed Police Forces)ಗಳಲ್ಲಿನ ಅಸಿಸ್ಟಂಟ್‌ ಕಮಾಂಡೆಂಟ್‌ಗಳು (ಎ ಹುದ್ದೆಗಳು) ಹುದ್ದೆ ಇದಾಗಿದೆ. ಬಾರ್ಡರ್‌ ಸೆಕ್ಯುರಿಟಿ ಫೋರ್ಸ್‌ (BSF), ಸೆಂಟ್ರಲ್‌ ರಿಸರ್ವ್‌ ಪೊಲೀಸ್‌ ಫೋರ್ಸ್‌ (CRPF), ಸೆಂಟ್ರಲ್‌ ಇಂಡಸ್ಟ್ರೀಯಲ್‌ ಸೆಕ್ಯುರಿಟಿ ಫೋರ್ಸ್‌ (CISF), ಇಂಡೋ-ಟಿಬೆಟಿಯನ್ ಬಾರ್ಡರ್‌ ಪೋಲೀಸ್‌ (ITBP) ಮತ್ತು ಸಶಸ್ತ್ರ ಸೀಮಾ ಬಲ್‌ (SSB)ಗಳಲ್ಲಿ 506 ಹುದ್ದೆಗಳಿವೆ (UPSC CAPF Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು ಕೊನೆಯ ದಿನ ಮೇ 14 (Job Alert).

ಹುದ್ದೆಗಳ ವಿವರ

ಗಡಿ ಭದ್ರತಾ ಪಡೆ (ಬಿಎಸ್ಎಫ್)-186, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌)- 120, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)- 100, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)- 58, ಸಶಸ್ತ್ರ ಸೀಮಾ ಬಲ್ (ಎಸ್ಎಸ್‌ಬಿ)- 42 ಹುದ್ದೆಗಳಿವೆ. ಪುರುಷರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ ಮತ್ತು ವಯೋಮಿತಿ

ಅಭ್ಯರ್ಥಿಗಳು ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಕೆಯ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ, ಕೇಂದ್ರ ಸರ್ಕಾರಿ ನೌಕರ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಮಹಿಳಾ / ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಉಳಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 200 ರೂ. ಪಾವತಿಸಬೇಕು. ಲಿಖಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ (Physical Efficiency Test) ಅಥವಾ ದೈಹಿಕ ಮಾಪನ ಪರೀಕ್ಷೆ (Physical Measurement Test), ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆ ಆಗಸ್ಟ್‌ 4ರಂದು ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳು ಬೆಂಗಳೂರು ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬಹುದು.

UPSC CAPF Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • Registration ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಹೆಸರು ನೋಂದಾಯಿಸಿ. ಇದಕ್ಕಾಗಿ ನಿಮ್ಮ ಮೊಬೈಲ್‌ ನಂಬರ್‌, ಇ ಮೇಲ್‌ ಐಡಿ ನಮೂದಿಸಿ.
  • ಹೆಸರು ನೋಂದಾಯಿಸಿಕೊಂಡ ಬಳಿಕ ರಿಜಿಸ್ಟ್ರೇಷನ್‌ ನಂಬರ್‌ ಮತ್ತು ಪಾಸ್‌ವರ್ಡ್‌ ಬಳಿಸಿ ಲಾಗಿನ್‌ ಆಗಿ.
  • ವಿವರಗಳನ್ನು ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳು, ಸಹಿ ಮತ್ತು ಫೋಟೊವನ್ನು ನಿಗದಿತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ ಅಪ್ಲಿಕೇಷನ್‌ ಫಾರಂ ಸಲ್ಲಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಕೋರ್ಟ್‌ನಲ್ಲಿದೆ 41 ಹುದ್ದೆ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ

Continue Reading
Advertisement
Self Harming Guest lecturer hangs herself to death
ಕರ್ನಾಟಕ1 min ago

Self Harming: ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಸಾವು

karnataka weather Forecast
ಮಳೆ6 mins ago

Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

Dog bite
Latest15 mins ago

Dog Bite : ಮಗುವಿಗೆ ಕಚ್ಚಿದ ನಾಯಿ; ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ದಂಪತಿಗೆ ಥಳಿತ, ಇಲ್ಲಿದೆ ವಿಡಿಯೊ

Toxic Shawarma
ಆರೋಗ್ಯ40 mins ago

Toxic Shawarma: ಚಿಕನ್‌ ಶವರ್ಮಾ ತಿಂದರೆ ಸಾಯುತ್ತಾರೆಯೆ? ಏನು ಕಾರಣ?

Sensex crash
ಪ್ರಮುಖ ಸುದ್ದಿ43 mins ago

Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

Dietary Guidelines
ಆರೋಗ್ಯ50 mins ago

Dietary Guidelines: ಭಾರತೀಯರ ಆಹಾರ ಹೇಗಿರಬೇಕು? ಐಸಿಎಂಆರ್ ಮಾರ್ಗಸೂಚಿ ಹೀಗಿದೆ

Bananas mangoes crops and houses damaged due to heavy rain in Gangavathi
ಮಳೆ55 mins ago

Heavy Rain: ಗಂಗಾವತಿಯಲ್ಲಿ ಭಾರೀ ಬಿರುಗಾಳಿ ಮಳೆಗೆ ಬಾಳೆ, ಮಾವು, ಮನೆಗಳಿಗೆ ಹಾನಿ

New fashion Trend
ಫ್ಯಾಷನ್56 mins ago

New Fashion Trend: ಕ್ವೀನ್‌ ಲುಕ್‌ ನೀಡುವ ಡಿಸೈನರ್‌ ಪರ್ಲ್ ಶೈಲಿಯ ಹೆಡ್‌ಬ್ಯಾಂಡ್‌

Akshattadigi Amavasya Devotees darshan of Sri Guru Kottureswara Swamy
ವಿಜಯನಗರ56 mins ago

Vijayanagara News: ಅಕ್ಷತ್ತದಿಗಿ ಅಮವಾಸ್ಯೆ; ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ದರ್ಶನ ಪಡೆದ ಭಕ್ತರು

Opposition party leader R Ashok latest statement in bengaluru
ಬೆಂಗಳೂರು58 mins ago

R Ashok: ಶಾಂತಿಯ ತೋಟವನ್ನು ಹಾಳುಗೆಡವುತ್ತಿರುವುದು ಬಿಜೆಪಿಯಲ್ಲ, ಕಾಂಗ್ರೆಸ್‌: ಆರ್. ಅಶೋಕ್‌ ಆಕ್ರೋಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Result 2024 what is the reason for most of the students fail in SSLC
ಕರ್ನಾಟಕ5 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ6 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ6 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು6 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ7 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು8 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

ಟ್ರೆಂಡಿಂಗ್‌