India Bloc Meeting: ಇಂಡಿಯಾ ಕೂಟದ ಸಭೆಯಲ್ಲಿ 'ಕೈ' ಮಾಜಿ ನಾಯಕ ಕಪಿಲ್ ಸಿಬಲ್ ಪ್ರತ್ಯಕ್ಷ, ಕಾಂಗ್ರೆಸ್ ಆಕ್ಷೇಪ - Vistara News

ದೇಶ

India Bloc Meeting: ಇಂಡಿಯಾ ಕೂಟದ ಸಭೆಯಲ್ಲಿ ‘ಕೈ’ ಮಾಜಿ ನಾಯಕ ಕಪಿಲ್ ಸಿಬಲ್ ಪ್ರತ್ಯಕ್ಷ, ಕಾಂಗ್ರೆಸ್ ಆಕ್ಷೇಪ

INDIA Bloc Meeting: 2024ರ ಲೋಕಸಭೆ ಚುನಾವಣೆಯನ್ನು ಎದುರಿಸಲು ಪ್ರಮುಖ ಪ್ರತಿಪಕ್ಷಗಳು ಸೇರಿ ಇಂಡಿಯಾ ಹೆಸರಿನಡಿ ಕೂಟವನ್ನು ರಚಿಸಿಕೊಂಡಿದ್ದು, ಮುಂಬೈನಲ್ಲಿ ಮೂರನೇ ಸಭೆ ನಡೆಯಿತು.

VISTARANEWS.COM


on

Kapil Sibal In India bloc Meeting
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ, ಮಹಾರಾಷ್ಟ್ರ: ಪ್ರತಿಪಕ್ಷಗಳ (Opposition Parties) ಇಂಡಿಯಾ ಕೂಟದ ಮೂರನೇ ಸಭೆಯ (INDIA Bloc Meeting) ಎರಡನೇ ದಿನವಾದ ಶುಕ್ರವಾರ, ಕಾಂಗ್ರೆಸ್‌ನ ಮಾಜಿ ನಾಯಕ ಕಪಿಲ್ ಸಿಬಲ್ (Ex Congress Leader Kapil Sibal) ಅವರು ಕಾಣಿಸಿಕೊಂಡು ಕೆಲವು ಕಾಲ ಗೊಂದಲಕ್ಕೆ ಕಾರಣರಾದರು. ಕಪಿಲ್ ಸಿಬಲ್ ಅವರಿಗೆ ಸಭೆಯಲ್ಲಿ ಪಾಲ್ಗೊಳ್ಳಲು ಅಧಿಕೃತ ಆಹ್ವಾನ ಇರಲಿಲ್ಲ. ಹಾಗಿದ್ದೂ ಅವರು ದಿಢೀರ್‌ನೇ ಸಭೆಯಲ್ಲಿ ಪಾಲ್ಗೊಂಡಿದ್ದು ಕಾಂಗ್ರೆಸ್‌ನ (Congress Party) ಅವರ ಮಾಜಿ ಸಹೋದ್ಯೋಗಿಗಳಿಗೆ ಇರಸು ಮುರಸು ಉಂಟಾಯಿತು ಎಂದು ತಿಳಿದು ಬಂದಿದೆ.

ಹಿರಿಯ ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್ ಅವರು ವಿರೋಧ ಪಕ್ಷದ ನಾಯಕರ ಫೋಟೋ ಶೂಟ್ ಮೊದಲು ಮಹಾರಾಷ್ಟ್ರದ ಮಾಜಿ ಸಚಿವ ಉದ್ಧವ್ ಠಾಕ್ರೆ ಅವರಿಗೆ ಸಿಬಲ್ ಅವರ ಉಪಸ್ಥಿತಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಶಿವಸೇನೆಯ ಉದ್ಧವ್ ಠಾಕ್ರೆ ಬಣವೇ ಮುಂಬೈನಲ್ಲಿ ಪ್ರತಿಪಕ್ಷಗಳ ಈ ಮೂರನೇ ಸಭೆಯನ್ನು ಆಯೋಜಿಸಿದೆ.

ಈ ಸುದ್ದಿಯನ್ನೂ ಓದಿ: INDIA Bloc Meeting: ಚುನಾವಣೆಯಲ್ಲಿ ಸಾಧ್ಯವಾದಷ್ಟು ಒಂದಾಗಿ ಸ್ಪರ್ಧೆ! ಇಂಡಿಯಾ ಕೂಟ ನಿರ್ಣಯ

ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಮತ್ತು ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸುವ ಪ್ರಯತ್ನ ಮಾಡಿದರು. ಮುಂದಿನ ವರ್ಷದ ಚುನಾವಣೆಗೆ ಮುಂಚಿತವಾಗಿ ಎಲ್ಲಾ ವಿರೋಧ ರಾಜಕಾರಣಿಗಳನ್ನು ಒಗ್ಗೂಡಿಸುವ ಗುರಿಯನ್ನು ಹೊಂದಿರುವ ಸಭೆಯಲ್ಲಿ ಸಿಬಲ್ ಅವರ ಉಪಸ್ಥಿತಿಯನ್ನು ಒಪ್ಪಿಕೊಳ್ಳುವಂತೆ ವೇಣುಗೋಪಾಲ್ ಮನವೊಲಿಸಿದರು. ಸಿಬಲ್ ಉಪಸ್ಥಿತಿಯ ಬಗ್ಗೆ ತಮಗೇನೂ ಆಕ್ಷೇಪ ಇಲ್ಲ ಎಂದು ರಾಹುಲ್ ಗಾಂಧಿ ಕೂಡ ಹೇಳಿದ್ದರಿಂದ ಪ್ರತಿಪಕ್ಷಗಳ ನಾಯಕರ ಸಾಲಿನಲ್ಲಿ ಸಿಬಲ್ ಕೂಡ ಫೋಟೋಗೆ ಪೋಸ್ ನೀಡಿದರು.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

NEET UG 2024: ನೀಟ್‌ ಅಕ್ರಮ ಮೇಲ್ನೋಟಕ್ಕೆ ಸಾಬೀತು ಎಂದ ಸುಪ್ರೀಂ; ಎನ್‌ಟಿಎ, ಸಿಬಿಐಗೆ ಖಡಕ್ ಸೂಚನೆ!

NEET UG 2024: ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮ ಸೇರಿ ಹಲವು ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ನೀಟ್ ಯುಜಿ 2024 (NEET-UG 2024)ರ ಕೌನ್ಸೆಲಿಂಗ್ ಅನ್ನು ಮುಂದಿನ ಸೂಚನೆಯವರೆಗೆ ಮುಂದೂಡಲಾಗಿದೆ. ಇದರಿಂದ ಜುಲೈ 6 ಪ್ರಾರಂಭವಾಗಬೇಕಿದ್ದ ನೀಟ್ ಯುಜಿ ಅಖಿಲ ಭಾರತ ಕೋಟಾ (AIQ) ಸೀಟು ಕೌನ್ಸೆಲಿಂಗ್ ವಿಳಂಬವಾಗಿದೆ. ಇದರ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಿದ್ದು, ಅಕ್ರಮ ನಡೆದಿರುವುದು ಢಾಳಾಗಿದೆ ಎಂದು ತಿಳಿಸಿದೆ.

VISTARANEWS.COM


on

NEET UG 2024
Koo

ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG 2024) ಅಕ್ರಮ ನಡೆದಿದ್ದು, ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂಬುದಾಗಿ ಸಲ್ಲಿಕೆಯಾದ ಹಲವು ಅರ್ಜಿಗಳ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯವು (Supreme Court), ಜುಲೈ 11ಕ್ಕೆ ವಿಚಾರಣೆ ಮುಂದೂಡಿದೆ. ಜುಲೈ 11ರಂದು ಅಂತಿಮ ವಿಚಾರಣೆ ನಡೆಯಲಿದ್ದು, ಅಂದಿನ ತೀರ್ಪು ಮಹತ್ವ ಪಡೆದಿದೆ.

ಹಾಗೆಯೇ, ನೀಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ ಹಾಗೂ ಪರೀಕ್ಷೆಯ ಪಾವಿತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ಸಿಜೆಐ ಚಂದ್ರಚೂಡ್‌ ಅವರಿದ್ದ ನ್ಯಾಯಪೀಠವು ತಿಳಿಸಿತು. ಹಾಗೆಯೇ, ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮದ ಕುರಿತಂತೆ ಮಹತ್ವದ ಮಾಹಿತಿ ನೀಡಬೇಕು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ನೀಟ್‌ ಮೂರು ನಿರ್ದೇಶನಗಳನ್ನು ನೀಡಿದೆ. ಹಾಗೆಯೇ, ತನಿಖೆಯ ವರದಿ ನೀಡಬೇಕು ಎಂಬುದಾಗಿ ಸಿಬಿಐಗೂ ಸುಪ್ರೀಂ ಕೋರ್ಟ್‌ ಸೂಚಿಸಿದೆ.

ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ನಿರ್ದೇಶನಗಳು

  1. ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಯಾವಾಗ ಎಂಬುದರ ಮಾಹಿತಿ ಕೊಡಿ
  2. ಯಾವ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿವೆ ಎಂಬುದರ ಮಾಹಿತಿ ಪ್ರತ್ಯೇಕವಾಗಿ ಇರಲಿ
  3. ಪ್ರಶ್ನೆಪತ್ರಿಕೆ ಸೋರಿಕೆಯಾದ ದಿನ ಹಾಗೂ ಪರೀಕ್ಷೆ ನಡೆದ ದಿನದ ನಡುವೆ ಎಷ್ಟು ಸಮಯದ ಅಂತರವಿತ್ತು ಎಂಬುದರ ಮಾಹಿತಿ ಕೊಡಿ

ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ ಹೇಳಿದ್ದಿಷ್ಟು…

  1. ನೀಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ
  2. ಅಕ್ರಮ ನಡೆದಿರುವುದು ನೋಡಿದರೆ ನೀಟ್‌ ಪರೀಕ್ಷೆಯ ಘನತೆ, ಮೌಲ್ಯಕ್ಕೆ ಧಕ್ಕೆಯಾಗಿದೆ
  3. ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ನಮಗೆ ಎನ್‌ಟಿಎ ಹಾಗೂ ಸಿಬಿಐ ನಿಖರ ಮಾಹಿತಿ ನೀಡಬೇಕು
  4. ಹಾಗೊಂದು ವೇಳೆ, ಅಕ್ರಮ ಎಸಗಿದವರು ಯಾರೆಂಬುದು ಗೊತ್ತಾಗದಿದ್ದರೆ ಮರು ಪರೀಕ್ಷೆ ನಿಶ್ಚಿತ

ಏನಿದು ಪ್ರಕರಣ?

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ಇದನ್ನೂ ಓದಿ: NEET PG 2024: ನೀಟ್-ಪಿಜಿ ಪರೀಕ್ಷೆಯ ದಿನಾಂಕ ಪ್ರಕಟ; ಆ. 11ರಂದು ನಡೆಯಲಿದೆ ಟೆಸ್ಟ್‌

Continue Reading

ಪ್ರಮುಖ ಸುದ್ದಿ

Sandeshkhali case : ಸಿಬಿಐ ತನಿಖೆ ವಿರುದ್ಧದ ಅರ್ಜಿ ವಜಾ; ಸುಪ್ರೀಂ ಕೋರ್ಟ್‌‌ನಲ್ಲಿ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಹಿನ್ನಡೆ

Sandeshkhali case: ಏಪ್ರಿಲ್ 29 ರಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕೆಲವು ಖಾಸಗಿ ವ್ಯಕ್ತಿಗಳ ಹಿತಾಸಕ್ತಿಯನ್ನು ರಕ್ಷಿಸಲು ರಾಜ್ಯವು ಏಕೆ ಅರ್ಜಿದಾರರಾಗಿ ಬರಬೇಕು ಎಂದು ಪಶ್ಚಿಮ ಬಂಗಾಳ ಸರ್ಕಾರವನ್ನು ಕೇಳಿತು. ಕಲ್ಕತ್ತಾ ಹೈಕೋರ್ಟ್​​ನ ಆದೇಶವು ಪೊಲೀಸ್ ಪಡೆ ಸೇರಿದಂತೆ ಇಡೀ ರಾಜ್ಯ ಯಂತ್ರದ ನೈತಿಕ ಸ್ಥೈರ್ಯ ಕುಗ್ಗಿಸಿದೆ ಎಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್​​ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿತ್ತು.

VISTARANEWS.COM


on

Supreme Court
Koo

ನವದೆಹಲಿ: ಪಶ್ಚಿಮ ಬಂಗಾಳದ ಸಂದೇಶ್​ಖಾಲಿಯಲ್ಲಿ (Sandeshkhali case) ಭೂ ಕಬಳಿಕೆ ಮತ್ತು ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ಸಿಬಿಐ ತನಿಖೆಗೆ ನಿರ್ದೇಶಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶದ ವಿರುದ್ಧ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಯಾರನ್ನಾದರೂ ರಕ್ಷಿಸಲು ರಾಜ್ಯವು ಏಕೆ ಆಸಕ್ತಿ ವಹಿಸಬೇಕು?” ಎಂದು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ನ್ಯಾಯಪೀಠ ಪ್ರಶ್ನಿಸಿದೆ. ವಿಚಾರಣೆಯ ಕೊನೆಯ ದಿನಾಂಕದಂದು, ಸುಪ್ರೀಂ ಕೋರ್ಟ್ ಈ ನಿರ್ದಿಷ್ಟ ಪ್ರಶ್ನೆಯನ್ನು ಕೇಳಿದ ನಂತರ ವಿಚಾರಣೆ ಮುಂದೂಡಬೇಕೆಂದು ಪಶ್ಚಿಮ ಬಂಗಾಳ ಸರ್ಕಾರದ ಪರ ವಕೀಲರು ಹೇಳಿದರು.

ಈ ವೇಳೆ “ಧನ್ಯವಾದಗಳು. ಅರ್ಜಿಯನ್ನು ವಜಾಗೊಳಿಸಲಾಗಿದೆ” ಎಂದು ನ್ಯಾಯಪೀಠ ಹೇಳಿತು. ಕಲ್ಕತ್ತಾ ಹೈಕೋರ್ಟ್​​ ಏಪ್ರಿಲ್ 10 ರಂದು ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.

ಏಪ್ರಿಲ್ 29 ರಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕೆಲವು ಖಾಸಗಿ ವ್ಯಕ್ತಿಗಳ ಹಿತಾಸಕ್ತಿಯನ್ನು ರಕ್ಷಿಸಲು ರಾಜ್ಯವು ಏಕೆ ಅರ್ಜಿದಾರರಾಗಿ ಬರಬೇಕು ಎಂದು ಪಶ್ಚಿಮ ಬಂಗಾಳ ಸರ್ಕಾರವನ್ನು ಕೇಳಿತು. ಕಲ್ಕತ್ತಾ ಹೈಕೋರ್ಟ್​​ನ ಆದೇಶವು ಪೊಲೀಸ್ ಪಡೆ ಸೇರಿದಂತೆ ಇಡೀ ರಾಜ್ಯ ಯಂತ್ರದ ನೈತಿಕ ಸ್ಥೈರ್ಯ ಕುಗ್ಗಿಸಿದೆ ಎಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್​​ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿತ್ತು.

ಸಂದೇಶ್​ಖಾಲಿಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣದ ತನಿಖೆಯನ್ನು ಸಿಬಿಐ ಈಗಾಗಲೇ ನಡೆಸುತ್ತಿದೆ ಮತ್ತು ಜನವರಿ 5 ರಂದು ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಮೂರು ಎಫ್ಐಆರ್​ಗಳನ್ನು ದಾಖಲಿಸಲಾಗಿದೆ.

ಕಲ್ಕತ್ತಾ ಹೈಕೋರ್ಟ್, ಕಂದಾಯ ದಾಖಲೆಗಳ ಸಮಗ್ರ ಪರಿಶೀಲನೆ ಮತ್ತು ಪರಿವರ್ತಿಸಲಾಗಿದೆ ಎಂದು ಹೇಳಲಾದ ಭೂಮಿಯ ಭೌತಿಕ ತಪಾಸಣೆ ನಡೆಸಿದೆ. ಬಳಿಕ ಕೃಷಿ ಭೂಮಿಯನ್ನು ಮೀನು ಸಾಕಣೆಗಾಗಿ ಜಲಮೂಲಗಳಾಗಿ ಅಕ್ರಮವಾಗಿ ಪರಿವರ್ತಿಸಲಾಗಿದೆ ಎಂಬ ಆರೋಪದ ಬಗ್ಗೆ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ನಿರ್ದೇಶನ ನೀಡಿತು.

ಇದನ್ನೂ ಓದಿ: Chennai Police commissioner : ಬಿಎಸ್‌‌ಪಿ ರಾಜ್ಯಾಧ್ಯಕ್ಷನ ಹತ್ಯೆ ಎಫೆಕ್ಟ್; ಚೆನ್ನೈ ಪೊಲೀಸ್ ಕಮಿಷನರ್ ಎತ್ತಂಗಡಿ

ಸಂದೇಶ್​ಖಾಲಿಯಲ್ಲಿ ಮಹಿಳೆಯರ ವಿರುದ್ಧದ ದೌರ್ಜನ್ಯಗಳು ಮತ್ತು ಭೂ ಕಬಳಿಕೆ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಮತ್ತು ಮುಂದಿನ ವಿಚಾರಣೆಯ ದಿನಾಂಕದಂದು ಸಮಗ್ರ ವರದಿಯನ್ನು ಸಲ್ಲಿಸುವಂತೆ ಹೈಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿತ್ತು.

ಏನಿದು ಸಂದೇಶ್ಖಾಲಿ ಪ್ರಕರಣ?

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್​ಖಾಲಿ ಎಂಬ ಹಳ್ಳಿಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತ್ತು ಆ ಪಕ್ಷದ ಪ್ರಭಾವಿ ಶೇಖ್ ಶಹಜಹಾನ್ ವಿರುದ್ಧ ಗ್ರಾಮಸ್ಥರು, ಹೆಚ್ಚಾಗಿ ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಅಲ್ಲಿ ರಾಜಕೀಯ ಬಿರುಗಾಳಿ ಎದ್ದಿತ್ತು. ನಂತರ ಅವರನ್ನು ಬಂಧಿಸಲಾಯಿತು. ಸಂದೇಶ್​ಖಾಲಿ ವಿಚಾರವಾಗಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಎರಡೂ ಪರಸ್ಪರರ ವಿರುದ್ಧ ಆರೋಪಗಳನ್ನು ಮಾಡುತ್ತಿವೆ. ಪಶ್ಚಿಮ ಬಂಗಾಳದ ಉತ್ತರ ದಿನಾಜ್ಪುರದಲ್ಲಿ ರಾಜಕೀಯ ಪಕ್ಷಕ್ಕೆ ಸಂಬಂಧಿಸಿದ ಜನರ ಗುಂಪು ದಂಪತಿಯನ್ನು ಸಾರ್ವಜನಿಕವಾಗಿ ಥಳಿಸಿದ ವಿಷಯದ ಬಗ್ಗೆಯೂ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದರು.

Continue Reading

ಪ್ರಮುಖ ಸುದ್ದಿ

Chennai Police commissioner : ಬಿಎಸ್‌‌ಪಿ ರಾಜ್ಯಾಧ್ಯಕ್ಷನ ಹತ್ಯೆ ಎಫೆಕ್ಟ್; ಚೆನ್ನೈ ಪೊಲೀಸ್ ಕಮಿಷನರ್ ಎತ್ತಂಗಡಿ

Chennai Police commissioner

VISTARANEWS.COM


on

Chennai Police commissioner
Koo

ಚೆನ್ನೈ: ತಮಿಳುನಾಡಿನ ಬಿಎಸ್​ಪಿ ಪಕ್ಷದ ಮುಖ್ಯಸ್ಥ ಕೆ. ಆರ್ಮ್​ಸ್ಟ್ರಾಂಗ್ ಅವರನ್ನು ಬರ್ಬರ ಕೊನೆಯಾದ ಕೆಲವೇ ದಿನಗಳ ಬಳಿಕ ತಮಿಳುನಾಡು ಸರ್ಕಾರ, ಗ್ರೇಟರ್ ಚೆನ್ನೈ ಪೊಲೀಸ್ ಆಯುಕ್ತ (Chennai Police commissioner) ಸಂದೀಪ್ ರಾಯ್ ರಾಥೋಡ್ ಅವರನ್ನು ವರ್ಗಾವಣೆ ಮಾಡಿದೆ. ಸಂದೀಪ್ ರಾಯ್ ರಾಥೋಡ್ ಅವರ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿ ಎ.ಅರುಣ್ ಅವರನ್ನು ಸೋಮವಾರ ನೇಮಿಸಲಾಗಿದೆ.

ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ.ಅಮುದಾ ಹೊರಡಿಸಿದ ಆದೇಶದ ಪ್ರಕಾರ, ಐಪಿಎಸ್ ಸಂದೀಪ್ ರೈ ರಾಥೋಡ್ ಅವರನ್ನು ಹುದ್ದೆಯಿಂದ ಇಳಿಸುವ ಮೂಲಕ ಎ.ಅರುಣ್ ಅವರನ್ನು ಗ್ರೇಟರ್ ಚೆನ್ನೈನ ಎಡಿಜಿಪಿ / ಪೊಲೀಸ್ ಆಯುಕ್ತರನ್ನಾಗಿ ನೇಮಿಸಲಾಗಿದೆ. ಪ್ರಸ್ತುತ ಐಪಿಎಸ್ ರಾಜೀವ್ ಕುಮಾರ್ ನೇತೃತ್ವದ ಚೆನ್ನೈನ ಪೊಲೀಸ್ ತರಬೇತಿ ಕಾಲೇಜಿನ ಡಿಜಿಪಿಯಾಗಿ ಅವರನ್ನು ನೇಮಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹಿರಿಯ ಐಪಿಎಸ್ ಅಧಿಕಾರಿ, ಎಡಿಜಿಪಿ ಡೇವಿಡ್ಸನ್ ದೇವಸಿರ್ವಥ ಅವರನ್ನು ಈಗ ಅರುಣ್ ಅವರ ಬದಲಿಗೆ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿಯಾಗಿ ನೇಮಿಸಲಾಗಿದೆ. ಗೃಹ ಇಲಾಖೆಯ ನೇತೃತ್ವವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ವಹಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಚೆನ್ನೈನಲ್ಲಿ ಕೊಲೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂಬ ರಾಥೋಡ್ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು/

ಆರ್ಮ್​ಸ್ಟ್ರಾಂಗ್​ ಅವರನ್ನು ಅವರ ಬೆಂಬಲಿಗರಂತೆ ಸೋಗು ಹಾಕಿಕೊಂಡು ಬಂದ ಆರು ದುಷ್ಕರ್ಮಿಗಳು ಶುಕ್ರವಾರ ಕೊಚ್ಚಿ ಕೊಲೆ ಮಾಡಿದ್ದರು. ಅಪರಾಧ ಮಾಡಿದ ನಂತರ ದಾಳಿಕೋರರು ಬೈಕ್ ಗಳಲ್ಲಿ ಸ್ಥಳದಿಂದ ಪರಾರಿಯಾಗಿದ್ದರು. ಕೊಲೆಯ ತನಿಖೆ ನಡೆಸುತ್ತಿರುವ ಪೊಲೀಸರು ಅಪರಾಧಕ್ಕೆ ಸಂಬಂಧಿಸಿದಂತೆ ಈವರೆಗೆ ಹನ್ನೊಂದು ಜನರನ್ನು ಬಂಧಿಸಿದ್ದಾರೆ. ಆರ್ಮ್​​ಸ್ಟ್ರಾಂಗ್ ಸೂಚನೆಯ ಮೇರೆಗೆ ಒಂದು ವರ್ಷದ ಹಿಂದೆ ಹತ್ಯೆಗೀಡಾದ ದರೋಡೆಕೋರ ಆರ್ಕಾಟ್ ಸುರೇಶ್ ಹತ್ಯೆಗೆ ಸಂಬಂಧಿಸಿದ ಸೇಡಿನ ಕೊಲೆಯಾಗಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Indecent Behaviour: ಕಾಲೇಜು ಯುವತಿಯವರಿಗೆ ಮರ್ಮಾಂಗ ತೋರಿಸಿ ಎಸ್ಕೇಪ್‌ ಆಗಿದ್ದವ ಪೊಲೀಸ್‌ ವಶಕ್ಕೆ

ಹತ್ಯೆಗೀಡಾದ ಬಿಎಸ್ಪಿ ನಾಯಕನಿಗೆ ಅಂತಿಮ ನಮನ ಸಲ್ಲಿಸಲು ಚೆನ್ನೈಗೆ ಭೇಟಿ ನೀಡಿದ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ಹತ್ಯೆಯ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಅಪರಾಧದ ಹಿಂದಿನ ನಿಜವಾದ ಅಪರಾಧಿಗಳನ್ನು ತಮಿಳುನಾಡು ಪೊಲೀಸರು ಬಂಧಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ.

“ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸಲು ನಾನು ರಾಜ್ಯ ಸರ್ಕಾರವನ್ನು, ವಿಶೇಷವಾಗಿ ಮುಖ್ಯಮಂತ್ರಿಯನ್ನು ಒತ್ತಾಯಿಸುತ್ತೇನೆ. ದುರ್ಬಲ ವರ್ಗಗಳು ಸುರಕ್ಷಿತವಾಗಿರಬೇಕು. ಸರ್ಕಾರ ಗಂಭೀರವಾಗಿದ್ದರೆ ಆರೋಪಿಗಳನ್ನು ಬಂಧಿಸಬಹುದಿತ್ತು. ಹಾಗೆ ಆಗದ ಕಾರಣ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ನಾವು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Menstrual Leave: ಋತುಸ್ರಾವದ ರಜೆ ಬಗ್ಗೆ ಮಾದರಿ ನೀತಿ ರೂಪಿಸಲು ಸರ್ಕಾರಕ್ಕೆ ಸುಪ್ರೀಂ ಕೋರ್ಟ್​​​ ನಿರ್ದೇಶನ

Menstrual Leave: ವೇತನ ಸಹಿ ಋತುಸ್ರಾವದ ರಜೆ ನೀಡಲು ನಿರ್ದೇಶಿಸುವಂತೆ ಕೋರ್ಟ್​ಗೆ ಮನವಿ ಸಲ್ಲಿಸಿದ ಅರ್ಜಿದಾರರು ಮತ್ತು ವಕೀಲ ಶೈಲೇಂದ್ರ ತ್ರಿಪಾಠಿ ಅವರ ಪರವಾಗಿ ಹಾಜರಾದ ವಕೀಲ ರಾಕೇಶ್ ಖನ್ನಾ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರನ್ನು ಸಂಪರ್ಕಿಸಲು ನ್ಯಾಯಪೀಠ ಸಲಹೆ ನೀಡಿತು.

VISTARANEWS.COM


on

Koo

ನವದೆಹಲಿ: ರಾಜ್ಯ ಸರ್ಕಾರ ಮತ್ತು ಇತರ ಪಾಲುದಾರರ ಜತೆ ಮಾಲೋಚನೆ ನಡೆಸಿ ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ರಜೆ ನೀಡುವ (Menstrual Leave) ಕುರಿತು ಮಾದರಿ ನೀತಿ ರೂಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು ಈ ನಿರ್ದೇಶನ ಕೊಟ್ಟಿದೆ. ಇದು ಸರ್ಕಾರದ ನೀತಿಗೆ ಸಂಬಂಧಿಸಿದ್ದು ಹಾಗೂ ನ್ಯಾಯಾಲಯಗಳು ಪರಿಶೀಲಿಸಬೇಕಾದ ವಿಷಯವಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ವೇತನ ಸಹಿ ಋತುಸ್ರಾವದ ರಜೆ ನೀಡಲು ನಿರ್ದೇಶಿಸುವಂತೆ ಕೋರ್ಟ್​ಗೆ ಮನವಿ ಸಲ್ಲಿಸಿದ ಅರ್ಜಿದಾರರು ಮತ್ತು ವಕೀಲ ಶೈಲೇಂದ್ರ ತ್ರಿಪಾಠಿ ಅವರ ಪರವಾಗಿ ಹಾಜರಾದ ವಕೀಲ ರಾಕೇಶ್ ಖನ್ನಾ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರನ್ನು ಸಂಪರ್ಕಿಸಲು ನ್ಯಾಯಪೀಠ ಸಲಹೆ ನೀಡಿತು.

ಇದನ್ನೂ ಓದಿ: Rain Affected areas: ಮಳೆ ಸಂತ್ರಸ್ತ ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಿ: ಡಿಸಿಗಳಿಗೆ ಸಿಎಂ ಸೂಚನೆ

ನೀತಿ ನಿರೂಪಣೆ ಮಟ್ಟದಲ್ಲಿ ಈ ವಿಷಯವನ್ನು ಪರಿಶೀಲಿಸಬೇಕಾಗಿದೆ. ಸಂಬಂಧಪಟ್ಟ ಎಲ್ಲರ ಜತೆ ಸಮಾಲೋಚಿಸಿದ ನಂತರ ನಿರ್ಧಾರ ತೆಗೆದುಕೊಳ್ಳಬೇಕು ಮತ್ತು ಮಾದರಿ ನೀತಿಯನ್ನು ರೂಪಿಸಬಹುದೇ ಎಂದು ಪರಿಶೀಲಿಸಲು ಕೇಂದ್ರ ಸರ್ಕಾರದ ಕಾರ್ಯದರ್ಶಿಯನ್ನು ವಿನಂತಿಸುತ್ತೇವೆ ಎಂದು ಕೋರ್ಟ್​ ಹೇಳಿದೆ. ಇದೇ ವೇಳೆ ಕೋರ್ಟ್​​ ಈ ನಿಟ್ಟಿನಲ್ಲಿ ರಾಜ್ಯಗಳು ಯಾವುದೇ ಕ್ರಮಗಳನ್ನು ತೆಗೆದುಕೊಂಡರೆ ಕೇಂದ್ರದ ಸಮಾಲೋಚನಾ ಪ್ರಕ್ರಿಯೆಯು ಅಡ್ಡಿಯಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈಗಾಗಲೇ ಮುಟ್ಟಿನ ರಜೆ ನೀಡುವ ಕಂಪನಿಗಳ ಪಟ್ಟಿ ಇಲ್ಲಿದೆ

ಭಾರತದಲ್ಲಿ ಹಲವಾರು ಕಂಪನಿಗಳು ತಮ್ಮ ಮಹಿಳಾ ಉದ್ಯೋಗಿಗಳನ್ನು ಬೆಂಬಲಿಸಲು ಮುಟ್ಟಿನ ರಜೆ ನೀತಿಗಳನ್ನು ಜಾರಿಗೆ ತಂದಿವೆ. ಕೆಲವು ಜನಪ್ರಿಯ ಕಂಪನಿಗಳ ಹೆಸರನ್ನು ಇಲ್ಲಿ ನೀಡಲಾಗಿದೆ.

ಜೊಮ್ಯಾಟೊ: ಋತುಚಕ್ರದ ಸಮಸ್ಯೆಯನ್ನು ಕಡಿಮೆ ಮಹಿಳಾ ಮತ್ತು ತೃತೀಯ ಲಿಂಗಿ ಉದ್ಯೋಗಿಗಳಿಗೆ ವಾರ್ಷಿಕವಾಗಿ 10 ದಿನಗಳವರೆಗೆ ವೇತನ ಸಹಿತ ಅವಧಿಯ ರಜೆಯನ್ನು ನೀಡುತ್ತದೆ.

ಬೈಜೂಸ್: ಮಹಿಳಾ ಉದ್ಯೋಗಿಗಳನ್ನು ಬೆಂಬಲಿಸಲು ಮುಟ್ಟಿನ ರಜೆಯನ್ನು ಒದಗಿಸುತ್ತದೆ.

ಸ್ವಿಗ್ಗಿ: ಉತ್ತಮ ಕೆಲಸದ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಇತ್ತೀಚೆಗೆ ಇದೇ ರೀತಿಯ ನೀತಿಯನ್ನು ಪರಿಚಯಿಸಿತ್ತು.

ಮ್ಯಾ್ಗ್​ಸ್ಟರ್​:ಈ ಡಿಜಿಟಲ್ ನಿಯತಕಾಲಿಕ ವೇದಿಕೆ ವೇತನ ಸಹಿತ ರಜೆ ನೀಡುತ್ತದೆ.

ಓರಿಯಂಟ್ ಎಲೆಕ್ಟ್ರಿಕ್: ಈ ಕಂಪನಿಯೂ ಇತ್ತೀಚೆಗೆ ಸಂಬಳ ಸಮೇತ ಮುಟ್ಟಿನ ರಜೆ ಕೊಟ್ಟಿದೆ.

ಕಲ್ಚರ್ ಮೆಷಿನ್: ಮಹಿಳಾ ಉದ್ಯೋಗಿಗಳಿಗೆ ತಮ್ಮ ಋತುಚಕ್ರದ ಮೊದಲ ದಿನದಂದು ಒಂದು ದಿನ ರಜೆ ತೆಗೆದುಕೊಳ್ಳಲು ಅನುವು ಮಾಡಿದೆ.

ಗೋಜೂಪ್ ಆನ್ಲೈನ್ ಪ್ರೈವೇಟ್ ಲಿಮಿಟೆಡ್: ಮುಟ್ಟಿನ ಮೊದಲ ದಿನದಂದು ವೇತನ ಸಹಿತ ರಜೆ ಮತ್ತು ಮನೆಯಿಂದ ಕೆಲಸ ಮಾಡುವ ಆಯ್ಕೆ ಡಿಜಿಟಲ್ ಮಾಧ್ಯಮ ಕಂಪನಿ ನೀಡಿದೆ.

ಐವಿಪನನ್: ವರ್ಷಕ್ಕೆ 12 ದಿನಗಳ ಅವಧಿಯ ಮುಟ್ಟಿನ ರಜೆಯನ್ನು ಒದಗಿಸುವ ಡಿಜಿಟಲ್ ಮಾರ್ಕೆಟಿಂಗ್ ಕಂಪನಿ ಇದಾಗಿದೆ.

ಇಂಡಸ್ಟ್ರಿಎಆರ್ ಸಿ: ಮಹಿಳೆಯರಿಗೆ ಒಂದು ಅಥವಾ ಎರಡು ದಿನ ರಜೆ ತೆಗೆದುಕೊಳ್ಳಲು ಅನುಮತಿ ನೀಡುತ್ತದೆ. ಆದರೆ ನಂತರ ರಜೆಯನ್ನು ಸರಿದೂಗಿಸಬೇಕು.

Continue Reading
Advertisement
NEET UG 2024
ದೇಶ38 seconds ago

NEET UG 2024: ನೀಟ್‌ ಅಕ್ರಮ ಮೇಲ್ನೋಟಕ್ಕೆ ಸಾಬೀತು ಎಂದ ಸುಪ್ರೀಂ; ಎನ್‌ಟಿಎ, ಸಿಬಿಐಗೆ ಖಡಕ್ ಸೂಚನೆ!

OPS News
ಕರ್ನಾಟಕ1 min ago

OPS News: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ಅರ್ಹರಿಗೆ ಒಪಿಎಸ್‌, ಪ್ರಸ್ತಾವನೆ ಸಲ್ಲಿಕೆಗೆ ಆದೇಶ

ಕ್ರೀಡೆ10 mins ago

Paris 2024 Olympics Athletics: ವಿಶ್ವ ರ್‍ಯಾಂಕಿಂಗ್‌ ಆಧಾರದಲ್ಲಿ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಜೆಸ್ವಿನ್‌, ಅಂಕಿತಾ ಧ್ಯಾನಿ

First Night Video
Latest14 mins ago

First Night Video: ಫಸ್ಟ್‌ ನೈಟ್‌ ವಿಡಿಯೊ ಹಂಚಿಕೊಂಡ ನವ ದಂಪತಿ! ಇನ್ನೇನು ಬಾಕಿ ಉಳಿದಿದೆ ಎಂದ ನೆಟ್ಟಿಗರು!

Ragging case in Bengaluru
ಬೆಂಗಳೂರು18 mins ago

Ragging Case : ಬೆಂಗಳೂರಲ್ಲಿ ನಿಲ್ಲದ ವ್ಹೀಲಿಂಗ್‌ ಆ್ಯಂಡ್‌ ರ‍್ಯಾಗಿಂಗ್‌ ಹಾವಳಿ; ಮಹಿಳೆ ಹಿಂದೆ ಬಿದ್ದ ಪೋಲಿ ಹುಡುಗರು

Supreme Court
ಪ್ರಮುಖ ಸುದ್ದಿ19 mins ago

Sandeshkhali case : ಸಿಬಿಐ ತನಿಖೆ ವಿರುದ್ಧದ ಅರ್ಜಿ ವಜಾ; ಸುಪ್ರೀಂ ಕೋರ್ಟ್‌‌ನಲ್ಲಿ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಹಿನ್ನಡೆ

Kiccha Sudeep Call Boss To Only Two Persons
ಸ್ಯಾಂಡಲ್ ವುಡ್25 mins ago

Kiccha Sudeep: ಇಬ್ಬರಿಗೆ ಮಾತ್ರ ʻಬಾಸ್‌ʼ ಎಂದು ಕರೆಯುವೆ ಎಂದ ಕಿಚ್ಚ; ಯಾರವರು?

France Election
ಪ್ರಮುಖ ಸುದ್ದಿ46 mins ago

France Election: ಫ್ರಾನ್ಸ್ ಚುನಾವಣೆ: ಎಡ ಪಕ್ಷಗಳ ಒಕ್ಕೂಟದ ಮೇಲುಗೈ; ಅತಂತ್ರ ಫಲಿತಾಂಶ

Chennai Police commissioner
ಪ್ರಮುಖ ಸುದ್ದಿ49 mins ago

Chennai Police commissioner : ಬಿಎಸ್‌‌ಪಿ ರಾಜ್ಯಾಧ್ಯಕ್ಷನ ಹತ್ಯೆ ಎಫೆಕ್ಟ್; ಚೆನ್ನೈ ಪೊಲೀಸ್ ಕಮಿಷನರ್ ಎತ್ತಂಗಡಿ

Rohit Sharma
ಕ್ರೀಡೆ50 mins ago

Rohit Sharma: ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಕುಟುಂಬದ ಜತೆ ವಿದೇಶ ಪ್ರವಾಸ ಕೈಗೊಂಡ ರೋಹಿತ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain Effect
ಮಳೆ51 mins ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ4 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು5 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ20 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ23 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ23 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

ಟ್ರೆಂಡಿಂಗ್‌