Telangana Exit Poll: ತೆಲಂಗಾಣದಲ್ಲಿ ಕೆಸಿಆರ್‌ಗೆ ಟ್ರಬಲ್, ಕಾಂಗ್ರೆಸ್‌ಗೆ ಪವರ್! - Vistara News

ದೇಶ

Telangana Exit Poll: ತೆಲಂಗಾಣದಲ್ಲಿ ಕೆಸಿಆರ್‌ಗೆ ಟ್ರಬಲ್, ಕಾಂಗ್ರೆಸ್‌ಗೆ ಪವರ್!

VISTARANEWS.COM


on

Exit Poll indicates BRS party may lose power and Congress will gain it
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 2014ರಲ್ಲಿ ಅಖಂಡ ಆಂಧ್ರ ಪ್ರದೇಶ ವಿಭಜನೆಯಾಗಿ ತೆಲಂಗಾಣ(Telangana Assembly Election) ಹೊಸ ರಾಜ್ಯವಾಗಿ ಉದಯಿಸಿತು. ಅಂದಿನಿಂದ ಇಂದಿಗೂ ಅಂದರೆ, ಸುಮಾರು ಹತ್ತು ವರ್ಷಗಳ ಅವಧಿಗೆ ಭಾರತ್ ರಾಷ್ಟ್ರ ಸಮಿತಿ-ಬಿಆರ್‌ಎಸ್ (ಈ ಹಿಂದೆ ತೆಲಂಗಾಣ ರಾಷ್ಟ್ರ ಸಮಿತಿ- ಟಿಆರ್‌ಎಸ್) ಅಧಿಕಾರದಲ್ಲಿದೆ. ತೆಲಂಗಾಣ ಪ್ರತ್ಯೇಕ ರಾಜ್ಯ ಹೋರಾಟದ ನೇತಾರ ಕೆ ಚಂದ್ರಶೇಖರ್ ರಾವ್ (KC Chandrashekhar Rao) ಅವರು ಜನಪ್ರಿಯ ಮುಖ್ಯಮಂತ್ರಿಯಾಗಿದ್ದು, ಜನಮಾನಸದಲ್ಲಿದ್ದಾರೆ. ಆದರೆ, 2023ರ ಚುನಾವಣೆಯಲ್ಲಿ ಅವರಿಗೆ ಆಘಾತ ಕಾದಿದೆ ಎಂದು ಬಹುತೇಕ ಮತಗಟ್ಟೆ ಸಮೀಕ್ಷೆಗಳು(Telangana Exit Poll) ಭವಿಷ್ಯ ನುಡಿದಿವೆ. ಮತ್ತೊಂದೆಡೆ, ಸಂಪೂರ್ಣವಾಗಿ ನೆಲ ಕಚ್ಚಿದ್ದ ಕಾಂಗ್ರೆಸ್ ಪಕ್ಷ (Congress Party) ಪುಟಿದೇಳುವ ಭರವಸೆಯನ್ನು ಸಮೀಕ್ಷೆಯಲ್ಲಿ ಕಾಣಬಹುದು(Exit Polls Result 2023).

ತೆಲಂಗಾಣವು ಒಟ್ಟು 119 ಸ್ಥಾನಗಳನ್ನು ಹೊಂದಿದ್ದು, ಬಹುಮತ ಪಡೆಯಲು 60 ಸ್ಥಾನಗಳನ್ನು ಗೆಲ್ಲಬೇಕು. ಈ ಹಿಂದಿನ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ್ದ ಬಿಆರ್‌ಎಸ್‌ಗೆ ಈ ಭಾರಿ ಸೋಲು ಎಂದು ಬಹಳಷ್ಟು ಸಮೀಕ್ಷೆಗಳು ಹೇಳುತ್ತಿವೆ. ಮುಖ್ಯಮಂತ್ರಿ ಕೆಸಿಆರ್‌ ಈಗಲೂ ಜನಪ್ರಿಯ ನಾಯಕ. ಅವರ ಬಗ್ಗೆ ಜನರಲ್ಲಿ ಯಾವುದೇ ಅಸಮಾಧಾನವಿಲ್ಲ. ಆದರೆ, ಬಿಆರ್‌ಎಸ್‌ನ ಬಹುತೇಕ ಶಾಸಕರಿಗೆ ಆಡಳಿತ ವಿರೋಧಿ ಅಲೆ ಇದೆ. ಹಾಗಿದ್ದೂ, ಕೆಸಿಆರ್ ಹಾಲಿ ಶಾಸಕರಿಗೆ ಮಣೆ ಹಾಕಿರುವುದು ಉರುಳಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

ಅಸಲಿಗೆ, ಬಹುತೇಕ ಸಮೀಕ್ಷೆಗಳು ಕಾಂಗ್ರೆಸ್ ಅಚ್ಚರಿಯ ಗೆಲುವಿನ ಭವಷ್ಯ ನುಡಿದಿವೆ. ಬಹುಶಃ ಕರ್ನಾಟಕದ ರಿಸಲ್ಟ್ ತೆಲಂಗಾಣದಲ್ಲೂ ಪ್ರಭಾವ ಬೀರಿರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಜತೆಗೆ, ಕಾಂಗ್ರೆಸ್ ಘೋಷಿಸಿರುವ 6 ಗ್ಯಾರಂಟಿಗಳು ತೆಲಂಗಾಣ ಮತದಾರರನ್ನು ಸೆಳೆಯುವ ಸಾಧ್ಯತೆಗಳನ್ನು ಸಮೀಕ್ಷೆಗಳು ತಿಳಿಸಿವೆ. ಆದರೆ, ಅಂತಿಮವಾಗಿ ಮತದಾರ ಯಾರಿಗೆ ಒಲಿದಿದ್ದಾನೆ ಎಂಬುದನ್ನು ಕಾದು ನೋಡಬೇಕು. ಡಿಸೆಂಬರ್ 3ರಂದು ರಿಸಲ್ಟ್ ಪ್ರಕಟವಾಗಲಿದೆ.

ಎಕ್ಸಿಟ್ ಪೋಲ್‌ಗಳು ಹೇಳೋದೇನು

ಸಿಎನ್​​ಎನ್​ ಸಮೀಕ್ಷೆ: ಕಾಂಗ್ರೆಸ್: 56, ಬಿಆರ್​ಎಸ್​: 48, ಬಿಜೆಪಿ: 10: ಎಐಎಂಐಎಂ: 5
ಜನ್ ಕಿ ಬಾತ್ : ಕಾಂಗ್ರೆಸ್: 48-64, ಬಿಆರ್​ಎಸ್​: 40-55, ಬಿಜೆಪಿ: 7-13, ಎಐಎಂಐಎಂ: 4-7 ಸ್ಥಾನ
ಇಂಡಿಯಾ ಟಿವಿ- ಸಿಎನ್ಎಕ್ಸ್ ಬಿಆರ್​ಎಸ್​ 31-47, ಕಾಂಗ್ರೆಸ್: 63-79, ಬಿಜೆಪಿ 2-4,ಎಐಎಂಐಎಂ 5-7
ಜನ್ ಕಿ ಬಾತ್ ಬಿಆರ್​ಎಸ್​ 40-55, ಕಾಂಗ್ರೆಸ್ 48-64,ಬಿಜೆಪಿ 7-13,ಎಐಎಂಐಎಂ 4-7
ರಿಪಬ್ಲಿಕ್ ಟಿವಿ- ಮ್ಯಾಟ್ರಿಜ್​- ಆರ್​ಎಸ್​ 46-56.ಕಾಂಗ್ರೆಸ್ 58-68, ಬಿಜೆಪಿ 4-9,ಎಐಎಂಐಎಂ 5-7
ಟಿವಿ 9 ಭಾರತ್ ವರ್ಷ್ – ಪೋಲ್ಸ್ಟ್ರಾಟ್ ಬಿಆರ್​ಎಸ್​48-58,ಕಾಂಗ್ರೆಸ್ 49-59,ಬಿಜೆಪಿ 5-10,ಎಐಎಂಐಎಂ 6-8

ಛತ್ತೀಸ್‌ಗಢದಲ್ಲಿ ಅಧಿಕಾರ ಉಳಿಸಿಕೊಂಡ ಕಾಂಗ್ರೆಸ್, ಬಿಜೆಪಿಗೆ ನಿರಾಸೆ

ಉತ್ತರ ಭಾರತದ ಹಿಂದಿ ಬೆಲ್ಟ್‌ನ ಪ್ರಮುಖ ರಾಜ್ಯವಾಗಿರುವ ಛತ್ತೀಸ್‌ಗಢ ರಾಜ್ಯದಲ್ಲಿ (Chhattisgarh Assembly Election) ಕಾಂಗ್ರೆಸ್ ಪಕ್ಷವು (Congress Party) ಅಧಿಕಾರ ಉಳಿಸಿಕೊಂಡರೆ, ಭಾರತೀಯ ಜನತಾ ಪಾರ್ಟಿಗೆ (BJP Party) ನಿರಾಸೆಗೆ ಕಾದಿದೆ ಎಂಬುದು ಚುನಾವಣೋತ್ತರ ಸಮೀಕ್ಷೆಗಳ ಒಟ್ಟಾರೆ ಸಾರಾಂಶ. ಬಹುತೇಕ ಎಕ್ಸಿಟ್ ಪೋಲ್‌ಗಳು ಭಾರತೀಯ ಜನತಾ ಪಾರ್ಟಿಗಿಂತ ಆಡಳಿತಾರೂಢ ಕಾಂಗ್ರೆಸ್ ಮುಂದಿದೆ ಎಂಬುದನ್ನು ಸೂಚಿಸಿವೆ(Exit Polls Result 2023).

ಛತ್ತೀಸ್‌ಗಢ ವಿಧಾನಸಭೆಯ ಎಲ್ಲಾ 90 ಸದಸ್ಯರನ್ನು ಆಯ್ಕೆ ಮಾಡಲು ನವೆಂಬರ್ 7 ಮತ್ತು ನವೆಂಬರ್ 17 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ. ವಿಧಾನಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ 48 ಸ್ಥಾನಗಳನ್ನು ಹೊಂದಿದ್ದರೆ, ಬಿಜೆಪಿ 15 ಸ್ಥಾನಗಳನ್ನು ಹೊಂದಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಯನ್ನು ಉತ್ತಮ ಅಂತರದಿಂದ ಸೋಲಿಸಿ 3 ಚುನಾವಣೆಗಳ ನಂತರ ಅಧಿಕಾರಕ್ಕೆ ಬಂದಿತು.

ಈಗಿನ ಎಕ್ಸಿಟ್ ಪೋಲ್‌ಗಳ ಪ್ರಕಾರ, ಕಾಂಗ್ರೆಸ್ ಅಧಿಕಾರ ಉಳಿಸಿಕೊಳ್ಳಲಿದೆ. ಕಾಂಗ್ರೆಸ್ ಪಕ್ಷದ ನಾಯಕ, ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಚುನಾವಣೆಯ ನೇತೃತ್ವವನ್ನು ವಹಿಸಿಕೊಂಡಿದ್ದರು. ಛತ್ತೀಸ್‌ಗಢದಲ್ಲೂ ಉಚಿತ ಕೊಡುಗೆಗಳು ಪರಿಣಾಮ ಬೀರಿರುವ ಸಾಧ್ಯತೆಗಳಿವೆ.

2023 ರ ವಿಧಾನಸಭಾ ಚುನಾವಣೆಯಲ್ಲಿ, 18,833 ಮತಗಟ್ಟೆಗಳಲ್ಲಿ 81,41,624 ಪುರುಷರು, 81,72,171 ಮಹಿಳೆಯರು ಮತ್ತು 684 ತೃತೀಯ ಲಿಂಗಿಗಳು ಸೇರಿದಂತೆ 1,63,14,479 ಮತದಾರರು ಮತ ಚಲಾಯಿಸಿದದರು. ಕಾಂಗ್ರೆಸ್ ನ ಪ್ರಮುಖ ಅಭ್ಯರ್ಥಿಗಳಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಉಪಮುಖ್ಯಮಂತ್ರಿ ಟಿ.ಎಸ್.ಸಿಂಗ್ ದೇವ್ ಮತ್ತು ವಿಧಾನಸಭಾ ಸ್ಪೀಕರ್ ಚರಣ್ ದಾಸ್ ಮಹಂತ್ ಸೇರಿದ್ದಾರೆ.

ಎಕ್ಸಿಟ್ ಪೋಲ್‌ಗಳು ಹೇಳೋದೇನು?
ಎಬಿಪಿ ನ್ಯೂಸ್-ಸಿ ವೋಟರ್: ಬಿಜೆಪಿ 36-48, ಕಾಂಗ್ರೆಸ್​ 41-53, ಬಿಎಸ್​ಪಿ 0, ಇತರ 0-4
ದೈನಿಕ್ ಭಾಸ್ಕರ್: ಬಿಜೆಪಿ 35-45, ಕಾಂಗ್ರೆಸ್​ 46-55, ಬಿಎಸ್​ಪಿ 0, ಇತರ 0-10
ಇಂಡಿಯಾ ಟುಡೇ- ಆಕ್ಸಿಸ್ ಮೈ ಇಂಡಿಯಾ: ಬಿಜೆಪಿ 36-46,ಕಾಂಗ್ರೆಸ್​ 40-50, ಬಿಎಸ್​ಪಿ 0,ಇತರ 1-5
ಇಂಡಿಯಾ ಟಿವಿ- ಸಿಎನ್ಎಕ್ಸ್: ಬಿಜೆಪಿ 30-40,ಕಾಂಗ್ರೆಸ್​ 46-56,ಬಿಎಸ್​ಪಿ 0,ಇತರ 3-5
ಜನ್ ಕಿ ಬಾತ್: ಬಿಜೆಪಿ 34-45,ಕಾಂಗ್ರೆಸ್​ 42-53,ಬಿಎಸ್​ಪಿ 0,ಇತರ 3
ನ್ಯೂಸ್ 24-ಟುಡೇಸ್ ಚಾಣಕ್ಯ: ಬಿಜೆಪಿ 33.ಕಾಂಗ್ರೆಸ್​ 57, ಬಿಎಸ್​ಪಿ 0,ಇತರ 0
ರಿಪಬ್ಲಿಕ್ ಟಿವಿ- ಮ್ಯಾಟ್ರಿಜ್: ಬಿಜೆಪಿ 34-42, ಕಾಂಗ್ರೆಸ್​ 44-52,ಬಿಎಸ್​ಪಿ 0,ಇತರ 00-02
ಟೈಮ್ಸ್ ನೌ-ಇಟಿಜಿ: ಬಿಜೆಪಿ 32-40, ಕಾಂಗ್ರೆಸ್​ 48-56,ಬಿಎಸ್​ಪಿ 0,ಇತರ 2-4
ಟಿವಿ 9 ಭಾರತ್ ವರ್ಷ್ – ಪೋಲ್ಸ್ಟ್ರಾಟ್: ಬಿಜೆಪಿ 35-45,ಕಾಂಗ್ರೆಸ್​ 40-50,ಬಿಎಸ್​ಪಿ 0,ಇತರ 0-3
ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆಯ ಪ್ರಕಾರ, ಕನಿಷ್ಠ 31% ಮತದಾರರು ಕಾಂಗ್ರೆಸ್​ನ ಭೂಪೇಶ್ ಬಘೇಲ್ ಅವರನ್ನು ಆಯ್ಕೆ ಮಾಡಿದರೆ, 21% ಬಿಜೆಪಿಯ ರಮಣ್ ಸಿಂಗ್ ರಾಜ್ಯದ ಮುಖ್ಯಮಂತ್ರಿಯಾಗಬೇಕೆಂದು ಬಯಸಿದ್ದಾರೆ.

ರಾಜಸ್ಥಾನದಲ್ಲಿ ಹಿಸ್ಟರಿ ರಿಪೀಟ್! ಬಿಜೆಪಿಗೆ ಅಧಿಕಾರ, ಕಾಂಗ್ರೆಸ್‌ಗೆ ತಿರಸ್ಕಾರ!

200 ಕ್ಷೇತ್ರಗಳನ್ನು ಹೊಂದಿರುವ ರಾಜಸ್ಥಾನದಲ್ಲಿ (Rajasthan Exit Poll) ಅಧಿಕಾರಕ್ಕೆ ಏರಲು 100 ಕ್ಷೇತ್ರಗಳನ್ನು ಗೆಲ್ಲಬೇಕು. ರಾಜಸ್ಥಾನದ ವಿಷಯದಲ್ಲಿ ರಾಜಕಾರಣ ಬೇರೆಯದ್ದೇ ರೀತಿಯಲ್ಲಿ ನಡೆಯುತ್ತಿದೆ. ಇಲ್ಲಿ ಒಂದು ಅವಧಿಗೆ ಆಯ್ಕೆಯಾದವರು ಮತ್ತೊಂದು ಅವಧಿಗೆ ಆಯ್ಕೆಯಾಗುವುದಿಲ್ಲ. ಹಾಗಾಗಿ, ಈಗ ಪ್ರಕಟವಾಗಿರುವ ಎಕ್ಸಿಟ್‌ ಪೋಲ್‌ಗಳು ಕೂಡ ಇದೇ ಟ್ರೆಂಡ್ ಊಹಿಸಿವೆ. ಕಾಂಗ್ರೆಸ್ ಪಕ್ಷಕ್ಕೆ (Congress Party) ಅಧಿಕಾರ ನಷ್ಟವಾಗಲಿದ್ದು, ಭಾರತೀಯ ಜನತಾ ಪಾರ್ಟಿ ಲಾಭವಾಗಲಿದೆ(BJP Party). ಬಹುತೇಕ ಎಕ್ಸಿಟ್ ಪೋಲ್‌ಗಳು ಇದೇ ಟ್ರೆಂಡ್ ಅನ್ನು ಗಮನಿಸಿವೆ(Exit Polls Result 2023).

ಬಹುತೇಕ ಚುನಾವಣೋತ್ಸ ಸಮೀಕ್ಷೆಗಳು ಭಾರತೀಯ ಜನತಾ ಪಾರ್ಟಿಗೆ ಅಧಿಕಾರವನ್ನು ನೀಡಿವೆ. ಆಡಳಿತಾರೂಢ ಕಾಂಗ್ರೆಸ್ ಅಧಿಕಾರ ವಂಚಿತವಾಗಲಿದೆ. ಇಟಿಜಿ ಸಮೀಕ್ಷೆಯ ಪ್ರಕಾರ, ಕಾಂಗ್ರೆಸ್: 56-72; ಬಿಜೆಪಿ: 108-128; ಇತರರು: 13-21 ಸ್ಥಾನಗಳನ್ನು ಗೆಲ್ಲಲಿದ್ದರೆ, ಪಿಎಂಎಆರ್​ಕ್ಯೂ ಪ್ರಕಾರ, ಕಾಂಗ್ರೆಸ್: 69-81 ಬಿಜೆಪಿ: 105-125; ಇತರರು: 5-15 ಹಾಗೂ ಟಿವಿ 9 ಭಾರತ್ ವರ್ಷ್​ -ಪೋಲ್ಸ್ಟ್ರಾಟ್ ಸಮೀಕ್ಷೆಯು ಬಿಜೆಪಿ 100-110 ಕಾಂಗ್ರೆಸ್ +: 90-110; ಇತರರು: 05-15 ಸ್ಥಾನಗಳನ್ನು ಗೆಲ್ಲಲಿದ್ದಾರೆಂದು ಹೇಳಿದೆ.

ಅದೇ ರೀತಿ ಜನ್ ಕಿ ಬಾತ್ ಸಮೀಕ್ಷೆಯು ಬಿಜೆಪಿ: 100-122 ಕಾಂಗ್ರೆಸ್: 62-85 ಇತರರು: 14-15 , ಸಿಎನ್​ಎನ್​​ 18 ಸಮೀಕ್ಷೆಯು, ಬಿಜೆಪಿ: 111, ಕಾಂಗ್ರೆಸ್: 74 ,ಇತರೆ: 14 ಹಾಗೂ ಸಟ್ಟಾ ಬಜಾರ್ ಬಿಜೆಪಿ- 115, ಕಾಂಗ್ರೆಸ್- 68 ಕ್ಷೇತ್ರಗಳನ್ನು ಗೆಲ್ಲಲಿದೆ ಎಂದು ಹೇಳಿದೆ.

ಬಹುತೇಕ ಸಮೀಕ್ಷೆಗಳ ಪ್ರಕಾರ ಈ ಬಾರಿ ಮತ್ತೆ ಭಾರತೀಯ ಜನತಾ ಪಾರ್ಟಿ ಅಧಿಕಾರ ಪಡೆಯುವುದು ಖಚಿತ. ಆಡಳಿತಾರೂಢ ಕಾಂಗ್ರೆಸ್ ಸೋಲಲಿದೆ. ಹಾಲಿ ಸಿಎಂ ಅಶೋಕ್ ಗೆಹ್ಲೋಟ್ ಅವರು ಮರಳಿ ಅಧಿಕಾರ ಪಡೆಯುವುದಕ್ಕಾಗಿ ಸಾಕಷ್ಟು ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. ಉಚಿತ ಕೊಡುಗೆಗಳು ಜನರನ್ನು ಸೆಳೆದಿದ್ದರೂ, ಕಾಂಗ್ರೆಸ್ ಪಕ್ಷದ ಬಹುತೇಕ ಶಾಸಕರ ವಿರುದ್ಧದ ಆಡಳಿತ ವಿರೋಧಿ ಅಲೆ ಕೆಲಸ ಮಾಡಿರುವುದನ್ನು ಸಮೀಕ್ಷೆಗಳು ಗಮನಿಸಿವೆ. ಹಾಗಾಗಿ, ಗೆಹ್ಲೋಟ್ ಅವರ ಬಗ್ಗೆ ಒಳ್ಳೆಯ ಭಾವನೆ ಇದ್ದರೂ, ಅದನ್ನು ಬಹುಮತವಾಗಿ ಪರಿವರ್ತಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂಬುದನ್ನು ಸಮೀಕ್ಷೆಗಳಲ್ಲಿ ಗಮನಿಸಬಹುದು.

199 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 5,25,38,105 ಮತದಾರರಲ್ಲಿ 1,88,27,294 ಮಹಿಳೆಯರು, 2,03,83,757 ಪುರುಷರು ಮತ್ತು 348 ತೃತೀಯ ಲಿಂಗಿ ಮತದಾರರು ಸೇರಿದಂತೆ 3,92,11,399 ಮತದಾರರು ಮತ ಚಲಾಯಿಸಿದ್ದಾರೆ. ಶಿಕ್ಷಣ, ಮಹಿಳಾ ಸುರಕ್ಷತೆ ರಾಜಸ್ಥಾನ ಚುನಾವಣೆಯ ಪ್ರಮುಖ ಕಾರ್ಯಸೂಚಿಗಳಾಗಿದ್ದವು.

‘ಕೈ’ನತ್ತ ವಾಲುತ್ತಿದ್ದ ಮತದಾರರನ್ನು ಸೆಳೆದ ಬಿಜೆಪಿ! ಎಕ್ಸಿಟ್ ಪೋಲ್ ಹೇಳೋದೇನು?

230 ಕ್ಷೇತ್ರಗಳನ್ನು ಹೊಂದಿರುವ ಮಧ್ಯ ಪ್ರದೇಶದಲ್ಲಿ (Madhya Pradesh Election) ಅಧಿಕಾರಕ್ಕೇರಲು 116 ಸ್ಥಾನ ಗೆಲ್ಲಬೇಕು. ಆದರೆ, ಈಗ ಪ್ರಕಟವಾಗಿರುವ ಮತಗಟ್ಟೆ ಸಮೀಕ್ಷೆಗಳ ಪ್ರಕಾರ(Exit Polls Result 2023) ಫೋಟೋ ಫಿನಿಷ್ (Photo Finish) ಆಗುವ ಸಾಧ್ಯತೆಗಳಿವೆ. ಚುನಾವಣೆ ಘೋಷಣೆ ಮುನ್ನ ಕಾಂಗ್ರೆಸ್ (Congress Party) ಎಲ್ಲ ರೀತಿಯಿಂದಲೂ ಮುಂದಿತ್ತು. ಆದರೆ, ಕೊನೆ ಗಳಿಗೆಯಲ್ಲಿ ಭಾರತೀ ಜನತಾ ಪಾರ್ಟಿ (BJP Party) ಪ್ರಕಟಿಸಿದ ಕೆಲವು ಯೋಜನೆಗಳು ಆಚೆ ಹೋಗುತ್ತಿದ್ದ ಮತದಾರರನ್ನು ಸೆಳೆಯಲು ಯಶಸ್ವಿಯಾಗಿದೆ ಎಂಬುದು ವೇದ್ಯವಾಗುತ್ತಿದೆ(MP Exit Poll).

ದೈನಿಕ್ ಭಾಸ್ಕರ್ ಎಕ್ಸಿಕ್ಟ ಪೋಲ್ ಪ್ರಕಾರ, ಬಿಜೆಪಿ 95ರಿಂದ 115 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್‌ಗೆ 105ರಿಂದ 120 ದೊರೆಯಲಿವೆ. ಜನ್ ಕಿ ಬಾತ್ ಸಮೀಕ್ಷೆ ಪ್ರಕಾರ, ಕಾಂಗ್ರೆಸ್ 102ರಿಂದ 125 ಮತ್ತು ಬಿಜೆಪಿ100ರಿಂದ 123 ಹಾಗೂ ರಿಪಬ್ಲಿಕ್ ಟಿವಿಯ ಪ್ರಕಾರ, ಕಾಂಗ್ರೆಸ್ 97ರಿಂದ 107 ಮತ್ತು ಬಿಜೆಪಿ 118ರಿಂದ 130 ಸ್ಥಾನಗಳನ್ನು ಗೆಲ್ಲಲಿದೆ. ಟಿವಿ9 ಭರತವರ್ಷದ ಎಕ್ಸಿಟ್ ಪೋಲ್ ಪ್ರಕಾರ, ಬಿಜೆಪಿ 106ರಿಂದ 116 ಮತ್ತು ಕಾಂಗ್ರೆಸ್ 111ರಿಂದ 117ಕ್ಷೇತ್ರಗಳನ್ನು ಗೆಲ್ಲಲಿದೆ.

ಈವರೆಗೆ ಪ್ರಕಟವಾಗಿರುವ ಎಕ್ಸಿಟ್‌ ಪೋಲ್ಸ್, ಕಾಂಗ್ರೆಸ್ ಮತ್ತು ಬಿಜೆಪಿಯ ಮಧ್ಯೆ ತುರುಸಿನ ಸ್ಪರ್ಧೆಯನ್ನು ನಿರೀಕ್ಷಿಸಿವೆ. 15 ವರ್ಷಕ್ಕೂ ಹೆಚ್ಚು ಅವಧಿಗೆ ಅಧಿಕಾರದಲ್ಲಿರುವ ಭಾರತೀಯ ಜನತಾ ಪಾರ್ಟಿಗೆ ಈ ಬಾರಿ ಆಡಳಿತ ವಿರೋಧಿ ಅಲೆ ತಟ್ಟಿರುವ ಸಂಗತಿ ವ್ಯಕ್ತವಾಗಿದೆ. ಹಾಗಂತ, ಬಿಜೆಪಿಯ ವಿರುದ್ಧ ಮತದಾರರು ಸಂಪೂರ್ಣ ತಿರಾಸ್ಕಾರವನ್ನು ತೋರಿಲ್ಲ ಎಂಬುದು ಗೊತ್ತಾಗುತ್ತದೆ. ಮತದಾರರು ಗೊಂದಲದಲ್ಲಿರುವುದು ಪಕ್ಕಾ ಆಗಿದೆ. ಹಾಗಾಗಿ, ಭಾನುವಾರ ಫಲಿತಾಂಶದ ದಿನ ಒಂಚೂರು ಅಚ್ಚರಿಯನ್ನು ನಿರೀಕ್ಷಿಸಬಹುದಾಗಿದೆ.

ಮಧ್ಯ ಪ್ರದೇಶದಲ್ಲಿ ದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಈ ಬಾರಿ ತುಸು ಹಿನ್ನಡೆಗೆ ಸರಿಸಿದ್ದು, ಕೂಡ ಪ್ರಭಾವ ಬೀರಿರುವ ಸಾಧ್ಯತೆ ಇದೆ. ಚುನಾವಣೆ ನಡೆಯುವ ಆರು ತಿಂಗಳ ಮುಂಚೆ ಮತದಾರರು ಸಂಪೂರ್ಣ ಒಲವು ಕಾಂಗ್ರೆಸ್ ಪರವಾಗಿತ್ತು ಎನ್ನಲಾಗಿದೆ. ಕೊನೆ ಗಳಿಗೆಯಲ್ಲಿ ಎಂಪಿ ಸಿಎಂ ಪ್ರಕಟಿಸಿದ ಉಚಿತ ಕೊಡುಗೆಗಳು ಮತದಾರರನ್ನು ಬಿಜೆಪಿಯತ್ತ ಎಳೆದು ತಂದಿರುವ ಸಾಧ್ಯತೆ ಇದೆ. ಅದರಲ್ಲೂ ಮಹಿಳಾ ಮತದಾರರನ್ನು ಸೆಳೆಯಲು ಕಾರಣವಾಗಿದ್ದೇ, ಫೋಟೋ ಫಿನಿಶ್ ಫಲಿತಾಂಶಕ್ಕೆ ಕಾರಣವಾಗಬಹುದು.

ಈ ಸುದ್ದಿಯನ್ನೂ ಓದಿ: Exit Polls Result 2023: ಬಿಜೆಪಿಗೆ ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣದಲ್ಲಿ ಕೈ ಮೇಲುಗೈ; ಎಂಪಿಯಲ್ಲಿ ಟೈಟ್ ಫೈಟ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವಾಣಿಜ್ಯ

Rekha Jhunjhunwala: ಷೇರು ಮಾರುಕಟ್ಟೆಯಲ್ಲಿ ರೇಖಾ ಜುಂಜುನ್‌ವಾಲಾಗೆ 805 ಕೋಟಿ ರೂ. ನಷ್ಟ; ಕಾರಣವೇನು?

Rekha Jhunjhunwala: ದೇಶದ ಖ್ಯಾತ ಹೂಡಿಕೆದಾರ, ಉದ್ಯಮಿ ರಾಕೇಶ್‌ ಜುಂಜುನ್‌ವಾಲಾ ಅವರ ಪತ್ನಿ ರೇಖಾ ಜುಂಜುನ್‌ವಾಲಾ ಅವರು ಟೈಟಾನ್ ಕಂಪನಿಯಲ್ಲಿ ಹೂಡಿಕೆ ಮಾಡಿದ್ದರಿಂದ 800 ಕೋಟಿ ರೂ.ಗಿಂತ ಹೆಚ್ಚು ನಷ್ಟ ಅನುಭವಿಸಿದ್ದಾರೆ. ಟೈಟಾನ್‌ ನಾಲ್ಕನೇ ತ್ರೈಮಾಸಿಕದ ಫಲಿತಾಂಶಗಳನ್ನು ಬಹಿರಂಗಪಟಿಸಿದ ನಂತರ ಕಂಪನಿಯ ಷೇರು ಇಂದು (ಮೇ 6) ಶೇ. 5ಕ್ಕಿಂತ ಹೆಚ್ಚು ಕುಸಿದಿದೆ. ಇಂದಿನ ವಹಿವಾಟಿನಲ್ಲಿ ಟೈಟಾನ್‌ನ ಮಾರುಕಟ್ಟೆ ಮೌಲ್ಯ 3,13,868 ಕೋಟಿ ರೂ.ಗಳಿಂದ ಕೆಳಗಿಳಿದು 2,98,815 ಕೋಟಿ ರೂ.ಗೆ ತಲುಪಿದೆ. ಈ ಕಾರಣದಿಂದಾಗಿ ರೇಖಾ ಜುಂಜುನ್ವಾಲಾ ಅವರ ಹೂಡಿಕೆ ಮೌಲ್ಯವು 805 ಕೋಟಿ ರೂ.ಗಳಷ್ಟು ಕಡಿಮೆಯಾಗಿದೆ.

VISTARANEWS.COM


on

Rekha Jhunjhunwala
Koo

ಮುಂಬೈ: ದೇಶದ ಖ್ಯಾತ ಹೂಡಿಕೆದಾರ, ಉದ್ಯಮಿ ರಾಕೇಶ್‌ ಜುಂಜುನ್‌ವಾಲಾ (Rakesh Jhunjhunwala) ಅವರ ಪತ್ನಿ ರೇಖಾ ಜುಂಜುನ್‌ವಾಲಾ (Rekha Jhunjhunwala) ಅವರು ಟೈಟಾನ್ ಕಂಪನಿಯಲ್ಲಿ ಹೂಡಿಕೆ ಮಾಡಿದ್ದರಿಂದ 800 ಕೋಟಿ ರೂ.ಗಿಂತ ಹೆಚ್ಚು ನಷ್ಟ ಅನುಭವಿಸಿದ್ದಾರೆ. ಟೈಟಾನ್‌ ನಾಲ್ಕನೇ ತ್ರೈಮಾಸಿಕದ ಫಲಿತಾಂಶಗಳನ್ನು ಬಹಿರಂಗಪಟಿಸಿದ ನಂತರ ಕಂಪನಿಯ ಷೇರು ಇಂದು (ಮೇ 6) ಶೇ. 5ಕ್ಕಿಂತ ಹೆಚ್ಚು ಕುಸಿದಿದೆ. 

ರೇಖಾ ಜುಂಜುನ್ವಾಲಾ ಅವರು 2024ರ ಮಾರ್ಚ್ 31ರ ವೇಳೆಗೆ ಟಾಟಾ ಗ್ರೂಪ್ ಸಂಸ್ಥೆಯಲ್ಲಿ ಶೇಕಡಾ 5.35ರಷ್ಟು ಪಾಲನ್ನು ಹೊಂದಿದ್ದರು. ಅಂದರೆ ಇದರ ಮೌಲ್ಯ 16,792 ಕೋಟಿ ರೂ. ಇಂದಿನ ವಹಿವಾಟಿನಲ್ಲಿ ಟೈಟಾನ್‌ನ ಮಾರುಕಟ್ಟೆ ಮೌಲ್ಯ 3,13,868 ಕೋಟಿ ರೂ.ಗಳಿಂದ ಕೆಳಗಿಳಿದು 2,98,815 ಕೋಟಿ ರೂ.ಗೆ ತಲುಪಿದೆ. ಈ ಕಾರಣದಿಂದಾಗಿ ರೇಖಾ ಜುಂಜುನ್ವಾಲಾ ಅವರ ಹೂಡಿಕೆ ಮೌಲ್ಯವು 805 ಕೋಟಿ ರೂ.ಗಳಷ್ಟು ಕಡಿಮೆಯಾಗಿ 15,986 ಕೋಟಿ ರೂ.ಗೆ ತಲುಪಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಗಳಲ್ಲಿನ ಚಂಚಲತೆ ಮತ್ತು ಸ್ಪರ್ಧಾತ್ಮಕ ತೀವ್ರತೆಯು ಟೈಟಾನ್‌ನ ಲಾಭಾಂಶದ ಮೇಲೆ ಪರಿಣಾಮ ಬೀರುತ್ತದೆ ಬೀರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಯಾರು ಈ ರೇಖಾ ಜುಂಜುನ್‌ವಾಲಾ?

ರಾಕೇಶ್‌ ಜುಂಜುನ್‌ವಾಲಾ ಅವರು ದೇಶದ ಖ್ಯಾತ ಹೂಡಿಕೆದಾರರು. ಷೇರು ಮಾರುಕಟ್ಟೆಯ ಬಿಗ್‌ ಬುಲ್‌, ಭಾರತದ ವಾರೆನ್‌ ಬಫೆಟ್‌ ಎಂದೇ ಖ್ಯಾತಿಯಾಗಿದ್ದ ಅವರು 2022ರಲ್ಲಿ ನಿಧನರಾದರು. ಆದಾಯ ತೆರಿಗೆ ಇಲಾಖೆಯ ಅಧಿಕಾರಿಯೊಬ್ಬರ ಮಗನಾಗಿದ್ದ ಜುಂಜುನ್‌ವಾಲಾ ಅವರು ಕೇವಲ 5 ಸಾವಿರ ರೂ. ಹೂಡಿಕೆಯಿಂದ ಷೇರು ವ್ಯವಹಾರವನ್ನು ಆರಂಭಿಸಿ, ಅಂತಿಮವಾಗಿ ಷೇರು ಪೇಟೆಯ ಸರದಾರರಾಗಿ 5.8 ಶತಕೋಟಿ ಡಾಲರ್‌ (ಸುಮಾರು 45 ಸಾವಿರ ಕೋಟಿ ರೂ.) ಸಂಪತ್ತಿಗೆ ಒಡೆಯರಾಗಿದ್ದರು. ಸದ್ಯ, ರೇಖಾ ಜುಂಜುನ್‌ವಾಲಾ ಅವರ ಆಸ್ತಿ ಮೌಲ್ಯ 58 ಸಾವಿರ ಕೋಟಿ ರೂ. ಆಗಿದೆ ಎಂದು ತಿಳಿದುಬಂದಿದೆ.

2023ರ ಡಿಸೆಂಬರ್‌ ಕ್ವಾರ್ಟರ್‌ನಲ್ಲಿ ರೇಖಾ ಜುಂಜುನ್‌ವಾಲಾ 26 ಕಂಪನಿಗಳಲ್ಲಿ ಷೇರುಗಳನ್ನು ಹೊಂದಿದ್ದು, ಇದರ ಮೌಲ್ಯ 4.9 ಬಿಲಿಯನ್ ಡಾಲರ್‌ನಷ್ಟಿತ್ತು. ಆದ್ರೆ ಇದರಲ್ಲಿ 13 ಕಂಪನಿಗಳು ಮಾತ್ರ ರೇಖಾ ಜುಂಜುನ್‌ವಾಲಾ ಎಷ್ಟು ಷೇರುಗಳನ್ನು ಹೊಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಿವೆ. ಆದರೆ ಮಾರ್ಚ್‌ ಕ್ವಾರ್ಟರ್‌ನಲ್ಲಿ ಇದರಲ್ಲಿ ಐದು ಕಂಪನಿಗಳ ಸ್ಟಾಕ್‌ಗಳನ್ನು ರೇಖಾ ಮಾರಾಟ ಮಾಡಿದ್ದರು.

ಟಾಟಾ ಮೋಟಾರ್ಸ್, ಇಂಡಿಯನ್ ಹೋಟೆಲ್ಸ್, ಟೈಟಾನ್, ನಜಾರಾ ಟೆಕ್ ಮತ್ತು ಡೆಲ್ಟಾ ಕಾರ್ಪ್‌ನಂತಹ ದೊಡ್ಡ ಕಂಪನಿಗಳಲ್ಲಿ ರೇಖಾ ಅವರು ಷೇರುಗಳನ್ನು ಹೊಂದಿದ್ದಾರೆ. ಜತೆಗೆ ಮಾರ್ಚ್‌ ಕ್ವಾರ್ಟರ್‌ನಲ್ಲಿ ತಮ್ಮ ಪೋರ್ಟ್‌ಫೊಲಿಯೊಗೆ ಕೆಎಂ ಶುಗರ್‌ ಮಿಲ್ಸ್‌ ಲಿಮಿಟೆಡ್‌ ಸ್ಟಾಕ್‌ ಸೇರಿಸಿದ್ದರು. ಈ ಕಂಪನಿಯಲ್ಲಿ ರೇಖಾ ಸುಮಾರು 5 ಲಕ್ಷ ಷೇರುಗಳನ್ನು ಅಥವಾ ಶೇಕಡಾ 0.54ರಷ್ಟು ಮೌಲ್ಯವನ್ನು ಹೊಂದಿದ್ದಾರೆ. ಇವರು ಹೂಡಿಕೆ ಮಾಡುವ ಹೆಚ್ಚಿನ ಕಂಪನಿಗಳು ಮಲ್ಟಿಬ್ಯಾಗರ್ಸ್ ರಿಟರ್ನ್‌ ನೀಡುತ್ತವೆ.

ಇದನ್ನೂ ಓದಿ: ಸಮುದ್ರ ಕಾಣಲ್ಲ ಎಂದು 118 ಕೋಟಿ ರೂ.ಗೆ ಎದುರಿನ ಮನೆ ಖರೀದಿಸಿದ ರೇಖಾ ಜುಂಜುನ್‌ವಾಲಾ!

Continue Reading

ಶಿಕ್ಷಣ

CISCE Results 2024: ಸಿಐಎಸ್‌ಸಿಇಯ 10 & 12ನೇ ತರಗತಿಯ ಫಲಿತಾಂಶ ಪ್ರಕಟ; ಹೀಗೆ ಪರಿಶೀಲಿಸಿ

CISCE Results 2024: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ 10ನೇ ತರಗತಿಯ ಐಸಿಎಸ್ಇ ಮತ್ತು 12ನೇ ತರಗತಿ ಐಎಸ್‌ಸಿ ಫಲಿತಾಂಶವನ್ನು ಪ್ರಕಟಿಸಿದೆ. ಪ್ರಕಟಿಸಿದೆ. ಈ ಸಿಐಎಸ್‌ಸಿ 10 ಮತ್ತು 12ನೇ ತರಗತಿ ಫಲಿತಾಂಶಗಳನ್ನು ಸಿಐಎಸ್‌ಸಿ ಅಧಿಕೃತ ವೆಬ್‌ಸೈಟ್‌ನಲ್ಲಿ cisce.org. ಮತ್ತು results.cisce.org.ನಲ್ಲಿ ವೀಕ್ಷಿಸಬಹುದು.

VISTARANEWS.COM


on

ICSE Results 202
Koo

ನವದೆಹಲಿ: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (CISCE) 10ನೇ ತರಗತಿಯ ಐಸಿಎಸ್ಇ (ICSE) ಮತ್ತು 12ನೇ ತರಗತಿ ಐಎಸ್‌ಸಿ (ISC) ಫಲಿತಾಂಶವನ್ನು ಇಂದು (ಮೇ 6) ಬೆಳಿಗ್ಗೆ ಪ್ರಕಟಿಸಿದೆ. ಈ ಸಿಐಎಸ್‌ಸಿ 10 ಮತ್ತು 12ನೇ ತರಗತಿ ಫಲಿತಾಂಶಗಳನ್ನು ಸಿಐಎಸ್‌ಸಿ ಅಧಿಕೃತ ವೆಬ್‌ಸೈಟ್‌ನಲ್ಲಿ cisce.org. ಮತ್ತು results.cisce.org.ನಲ್ಲಿ ವೀಕ್ಷಿಸಬಹುದು.

ಈ ವರ್ಷ ಸುಮಾರು 2.5 ವಿದ್ಯಾರ್ಥಿಗಳು ಸಿಐಎಸ್‌ಸಿಇಯ 10 ಮತ್ತು 12ನೇ ತರಗತಿಯ ಪರೀಕ್ಷೆ ಬರೆದಿದ್ದರು. 10ನೇ ತರಗತಿ ಪರೀಕ್ಷೆ 2024ರ ಫೆಬ್ರವರಿ 21ರಂದು ಆರಂಭವಾಗಿ ಮಾರ್ಚ್‌ 28ರಂದು ಮುಕ್ತಾಯವಾಗಿತ್ತು. ಇನ್ನು 12ನೇ ತರಗತಿ ಪರೀಕ್ಷೆ 2024ರ ಫೆಬ್ರವರಿ 12ರಂದು ಆರಂಭವಾಗಿ ಏಪ್ರಿಲ್‌ 4ರಂದು ಮುಗಿದಿತ್ತು. ಪ್ರಶ್ನೆ ಪತ್ರಿಕೆಯನ್ನು ಓದಲು ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ ನೀಡಲಾಗಿತ್ತು.

ಫಲಿತಾಂಶ ವೀಕ್ಷಿಸುವ ವಿಧಾನ

  • ಸಿಐಎಸ್‌ಸಿಇಯ ಅದಿಕೃತ ವೆಬ್‌ಸೈಟ್‌ results.cisce.org.ಗೆ ಭೇಟಿ ನೀಡಿ.
  • ಅಥವಾ ಇಲ್ಲಿ ಕ್ಲಿಕ್‌ ಮಾಡಿ.
  • ಈಗ ತೆರೆದುಕೊಳ್ಳುವ ಪುಟದ ಮೇಲ್ಭಾಗದಲ್ಲಿ ಕಾಣಿಸುವ Course ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ICSE ಅಥವಾ ISC ಪೈಕಿ ಒಂದನ್ನು ಆರಿಸಿ.
  • ಕೋರ್ಸ್‌ ಕೋಡ್‌, ಅಭ್ಯರ್ಥಿಯ ಯುಐಡಿ (UID), ಇಂಡಕ್ಸ್‌ ನಂಬರ್‌ ಮತ್ತು ಕ್ಯಾಪ್ಚಾವನ್ನು ನಮೂದಿಸಿ.
  • Show Results ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ಫಲಿತಾಂಶವನ್ನು ಡೌನ್‌ಲೋಡ್‌ ಮಾಡಿ ಮತ್ತು ಪ್ರಿಂಟ್‌ ಔಟ್‌ ತೆಗೆದಿಡಿ.

ಸಿಐಎಸ್‌ಸಿಇ ಈ ಬಾರಿ ಹೊಸ ಸೌಲಭ್ಯವನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳು ತಮ್ಮ ಐಸಿಎಸ್ಇ ಮತ್ತು ಐಎಸ್‌ಸಿ ಫಲಿತಾಂಶಗಳ ಮರು ಪರಿಶೀಲನೆ ಮತ್ತು ಮರು ಮೌಲ್ಯಮಾಪನವನ್ನು ಕೋರಲು ಅನುವು ಮಾಡಿಕೊಟ್ಟಿದೆ. ಮರುಪರಿಶೀಲನೆಗೆ ಪ್ರತಿ ಪತ್ರಿಕೆಗೆ 1,000 ರೂ. ಮರು ಮೌಲ್ಯಮಾಪನಕ್ಕೆ 1,500 ರೂ. ಶುಲ್ಕ ನಿಗದಿ ಪಡಿಸಲಾಗಿದೆ. ಫಲಿತಾಂಶ ಘೋಷಣೆಯ ನಂತರ ಈ ಆಯ್ಕೆಯು ಪರಿಷತ್ತಿನ ವೆಬ್‌ಸೈಟ್‌ನಲ್ಲಿ ಲಭ್ಯವಿರಲಿದೆ. ಇದಲ್ಲದೆ ಐಸಿಎಸ್ಇ ಮತ್ತು ಐಎಸ್‌ಸಿ ಕಂಪಾರ್ಟ್‌ಮೆಂಟ್‌ ಪರೀಕ್ಷೆಗಳನ್ನು ನಿಲ್ಲಿಸಲು ಸಿಐಎಸ್‌ಇ ನಿರ್ಧರಿಸಿದೆ. ಬದಲಾಗಿ ವಿದ್ಯಾರ್ಥಿಗಳಿಗೆ ಎರಡು ವಿಷಯಗಳಲ್ಲಿ ಸುಧಾರಣಾ ಪರೀಕ್ಷೆಗಳಿಗೆ ಕುಳಿತುಕೊಳ್ಳಲು ಅವಕಾಶ ನೀಡಿದೆ.

ಫಲಿತಾಂಶದ ವಿವರ

10ನೇ ತರಗತಿ

  • ಪರೀಕ್ಷೆ ಬರೆದ ವಿದ್ಯಾರ್ಥಿಗಳ ಸಂಖ್ಯೆ: 2,43,617
  • ತೇರ್ಗಡೆಯಾದವರು: 2,42,328
  • ಪಾಸ್‌ ಆದ ಶೇಕಡಾವಾರು: 99.47%

12ನೇ ತರಗತಿ

  • ಪರೀಕ್ಷೆ ಬರೆದ ವಿದ್ಯಾರ್ಥಿಗಳ ಸಂಖ್ಯೆ: 99,901
  • ತೇರ್ಗಡೆಯಾದವರು: 98,088
  • ಪಾಸ್‌ ಆದ ಶೇಕಡಾವಾರು: 98.19%

ಕೆಸೆಟ್‌- 2023ರ ತಾತ್ಕಾಲಿಕ ಅಂಕಪಟ್ಟಿ ಪ್ರಕಟ

ಕೆಸೆಟ್‌ ಪರೀಕ್ಷೆ- 2023ರ ತಾತ್ಕಾಲಿಕ ಸ್ಕೋರ್‌ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ʼಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ – ಕೆಸೆಟ್‌ʼ (KSET – Karnataka State Eligibility Test) ಇದರ 2023ನೇ ಸಾಲಿನ ಪರೀಕ್ಷೆಯನ್ನು ಕಳೆದ ಜನವರಿ ತಿಂಗಳಲ್ಲಿ ನಡೆಸಲಾಗಿತ್ತು. ಪರೀಕ್ಷೆಗೆ ಬರೆದವರು ಈಗ ತಮ್ಮ ತಾತ್ಕಾಲಿಕ ಸ್ಕೋರ್‌ ಪಟ್ಟಿಯನ್ನು ಚೆಕ್‌ ಮಾಡಿಕೊಳ್ಳಬಹುದು.

ಪ್ರಸ್ತುತ ಕೆಇಎ ಬಿಡುಗಡೆ ಮಾಡಿರುವ ಕೆಸೆಟ್‌ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ವಿವರವಾದ ಮಾಹಿತಿಗಳೊಂದಿಗೆ ಸಲ್ಲಿಸಲು ಮೇ 10, 2024 ರವರೆಗೆ ಅವಕಾಶ ನೀಡಿದೆ. ಆಕ್ಷೇಪಣೆಯನ್ನು ಇಮೇಲ್‌ ವಿಳಾಸ -keakset2023@gmail.com ಗೆ ಕಳುಹಿಸಬಹುದು.

ಇದನ್ನೂ ಓದಿ: Best Courses After SSLC: ವಿಜ್ಞಾನ, ವಾಣಿಜ್ಯ, ಕಲೆ; ಎಸ್ ಎಸ್ ಎಲ್ ಸಿ ನಂತರ ಮುಂದೇನು?

Continue Reading

ಪ್ರವಾಸ

Kanyakumari Tour: ತುಂಬಾ ದುಬಾರಿ ಏನಿಲ್ಲ, ನೀವೂ ಮಾಡಬಹುದು ಕನ್ಯಾಕುಮಾರಿ ಪ್ರವಾಸ

ಪ್ರವಾಸದ ಯೋಜನೆ ಕೆಲವೊಮ್ಮೆ ಜೇಬಿಗೆ ಕತ್ತರಿ ಹಾಕುತ್ತದೆ ಎನ್ನುವ ಭಯವಿರುತ್ತದೆ. ಆದರೆ ಕನ್ಯಾಕುಮಾರಿಗೆ ಪ್ರವಾಸ (Kanyakumari Tour) ಹೊರಡುವ ಯೋಜನೆ ಮಾಡಿದರೆ ಇಲ್ಲಿ ಜೇಬಿಗೆ ಭಾರವಾಗದ ಹಲವು ತಾಣಗಳಿವೆ. ಆದರೆ ಸ್ವಲ್ಪ ಬುದ್ದಿವಂತಿಕೆ ತೋರಬೇಕು ಅಷ್ಟೇ. ಕನ್ಯಾಕುಮಾರಿಯ ಪ್ರಮುಖ ಸ್ಥಳಗಳ ಪರಿಚಯ ಇಲ್ಲಿದೆ.

VISTARANEWS.COM


on

By

Kanyakumari Tour
Koo

ನೈಸರ್ಗಿಕ ಸೌಂದರ್ಯಕ್ಕೆ ಹೆಸರುವಾಸಿಯಾಗಿರುವ ಕನ್ಯಾಕುಮಾರಿಗೆ ಪ್ರವಾಸ (Kanyakumari Tour) ಹೊರಡುವ ಯೋಚನೆಯಲ್ಲಿದ್ದರೆ ಇಲ್ಲಿನ ಕೆಲವೊಂದು ಸಂಗತಿಗಳನ್ನು ಮಿಸ್ ಮಾಡಿಕೊಳ್ಳದಿರಿ. ಅತ್ಯದ್ಭುತ ನೈಸರ್ಗಿಕ ಸೌಂದರ್ಯ ಮತ್ತು ಆಧ್ಯಾತ್ಮಿಕ ಮಹತ್ವ ಎರಡಕ್ಕೂ ಹೆಸರುವಾಸಿಯಾಗಿರುವ ಕನ್ಯಾಕುಮಾರಿಗೆ ಜೀವನದಲ್ಲೊಮ್ಮೆಯಾದರೂ ಭೇಟಿ ನೀಡಲೇಬೇಕು.


ಕನ್ಯಾಕುಮಾರಿ ನಗರವು ಐಷಾರಾಮಿ ಹಾಟ್‌ಸ್ಪಾಟ್ ಎಂಬ ಖ್ಯಾತಿಯನ್ನು ಪಡೆದಿದ್ದರೂ ಇಲ್ಲಿ ನಿಮ್ಮ ಬಜೆಟ್ ಮೀರದ ಹಾಗೆ ಪ್ರವಾಸ ಮಾಡಲು ಹಲವು ಆಯ್ಕೆಗಳನ್ನೂ ನೀಡುತ್ತದೆ. ಕೆಲವು ಯೋಜನೆ ಮತ್ತು ಸ್ಥಳೀಯರ ಸಲಹೆ ಪಡೆದರೆ ಬಜೆಟ್ ಮೀರದ ಹಾಗೆ ಪ್ರವಾಸವನ್ನೂ ಪೂರ್ಣಗೊಳಿಸಬಹುದು. ಜೀವನದಲ್ಲಿ ಅತ್ಯಂತ ಸುಂದರ ಅನುಭವವನ್ನು ತಮ್ಮದಾಗಿಸಿಕೊಳ್ಳಬಹುದು.

ಸೂರ್ಯೋದಯ – ಸೂರ್ಯಾಸ್ತ

ಕನ್ಯಾಕುಮಾರಿಗೆ ಭೇಟಿ ನೀಡುವ ಅವಕಾಶ ಸಿಕ್ಕಾಗ ಇಲ್ಲಿನ ಸೂರ್ಯೋದಯ, ಸೂರ್ಯಾಸ್ತವನ್ನು ವೀಕ್ಷಿಸುವ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ. ಅರಬ್ಬಿ ಸಮುದ್ರ (Arabian Sea), ಬಂಗಾಳ ಕೊಲ್ಲಿ (Bay of Bengal) ಮತ್ತು ಹಿಂದೂ ಮಹಾಸಾಗರದ (Indian Ocean) ಭೇಟಿಯ ಸ್ಥಳದಲ್ಲಿ ಅತ್ಯಂತ ಸುಂದರವಾದ ಸೂರ್ಯೋದಯ ಮತ್ತು ಸೂರ್ಯಾಸ್ತವನ್ನು ಕಣ್ತುಂಬಿ ಕೊಳ್ಳಬಹದು. ಇದಕ್ಕಾಗಿ ಯಾವುದೇ ಹಣವನ್ನು ಖರ್ಚು ಮಾಡುವ ಅಗತ್ಯವಿಲ್ಲ; ತೀರದ ಪಕ್ಕದಲ್ಲಿ ಕುಳಿತುಕೊಂಡು ಪ್ರಕೃತಿಯ ಸೌಂದರ್ಯವನ್ನು ಕಣ್ತುಂಬಿ ಕೊಳ್ಳಬಹುದು.

ಐಕಾನಿಕ್ ಹೆಗ್ಗುರುತು

ಕನ್ಯಾಕುಮಾರಿಯು ಶ್ರೀಮಂತ ಸಂಸ್ಕೃತಿ ಮತ್ತು ಇತಿಹಾಸವನ್ನು ಪ್ರದರ್ಶಿಸುವ ಅನೇಕ ಪ್ರಸಿದ್ಧ ತಾಣಗಳನ್ನು ಹೊಂದಿದೆ. ಹೆಚ್ಚಿನ ಸ್ಥಳಗಳು ಕಡಿಮೆ ಪ್ರವೇಶ ಶುಲ್ಕವನ್ನು ಹೊಂದಿವೆ ಅಥವಾ ಉಚಿತ ಪ್ರವೇಶವನ್ನು ನೀಡುತ್ತವೆ.
ಹಿಂದೂ ಸಂತ ಸ್ವಾಮಿ ವಿವೇಕಾನಂದರ ಗೌರವಾರ್ಥವಾಗಿ ನಿರ್ಮಿಸಲಾದ ವಿವೇಕಾನಂದ ರಾಕ್ ಮೆಮೋರಿಯಲ್‌ ಗೆ ಹೋಗಲು ದೋಣಿಯಲ್ಲಿ ತೆರಳಬೇಕು. ಈಲ್ಲಿ ಅದ್ಭುತವಾದ ನೋಟಗಳಲ್ಲದೆ, ಧ್ಯಾನ ಮಂದಿರಕ್ಕೂ ಭೇಟಿ ನೀಡಬಹುದು.

ಪ್ರಾಚೀನ ತಮಿಳು ಕವಿ ತಿರುವಳ್ಳುವರ್ ಅವರನ್ನು ಗೌರವಿಸುವ ತಿರುವಳ್ಳುವರ್ ಪ್ರತಿಮೆ ಕನ್ಯಾಕುಮಾರಿ ಕರಾವಳಿಯ ಹೊರವಲಯದಲ್ಲಿದೆ. ಈ ಬೃಹತ್ ರಚನೆಯು ನಿಮ್ಮ ಬಜೆಟ್ ಅನ್ನು ಮೀರಿಸುವುದಿಲ್ಲ. ಅಲ್ಲದೇ ಅತ್ಯಂತ ಸುಂದರ ದೃಶ್ಯಾವಳಿಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ನೀಡುತ್ತದೆ.


ಪ್ರಕೃತಿಯ ನಡುವೆ ಸುಂದರ ಸಮಯ

ಕನ್ಯಾಕುಮಾರಿಯಲ್ಲಿ ಸುಂದರವಾದ ಪ್ರಕೃತಿಕ ತಾಣಗಳಿಗೆ ಕೊರತೆಯಿಲ್ಲ, ಆದ್ದರಿಂದ ಪ್ರಕೃತಿ ಪ್ರಿಯರು ಇಲ್ಲಿ ಉತ್ತಮ ಸಮಯವನ್ನು ಕಳೆಯಬಹುದು. ಈ ಪ್ರದೇಶವು ಸುಂದರವಾದ ಕಡಲತೀರಗಳಿಂದ ಹಿಡಿದು ಸೊಂಪಾದ ಭೂದೃಶ್ಯಗಳವರೆಗೆ ಎಲ್ಲವನ್ನೂ ನೀಡುತ್ತದೆ.

ಕನ್ಯಾಕುಮಾರಿ ಬೀಚ್ ನಲ್ಲಿ ಸೂರ್ಯನ ಸ್ನಾನ ಅಥವಾ ಸಮುದ್ರದಲ್ಲಿ ಈಜಲು ಕೆಲವು ಗಂಟೆಗಳ ಕಾಲ ಕಳೆಯಬಹುದು. ವಿವೇಕಾನಂದ ರಾಕ್ ಸ್ಮಾರಕ ಮತ್ತು ತಿರುವಳ್ಳುವರ್ ಪ್ರತಿಮೆಯನ್ನು ನೋಡುತ್ತಾ ಧ್ಯಾನ ಮಗ್ನರಾಗಿ ಕುಳಿತುಕೊಳ್ಳಬಹುದು. ಕನ್ಯಾಕುಮಾರಿಯಿಂದ ಸುಮಾರು 13 ಕಿಲೋಮೀಟರ್ ದೂರದಲ್ಲಿರುವ ಸುಚಿಂದ್ರಂ ದೇವಸ್ಥಾನದ ಕೊಳ ಪ್ರಶಾಂತ ವಾತಾವರಣದ ಮಧ್ಯ ಇದೆ. ಪುರಾತನ ದೇವಾಲಯಗಳಿಂದ ಆವೃತವಾಗಿದೆ. ಇದು ಸುಮ್ಮನೆ ನಡಿಗೆ, ಧ್ಯಾನಕ್ಕಾಗಿ ಸೂಕ್ತ ಅವಕಾಶವನ್ನು ಕಲ್ಪಿಸುತ್ತದೆ.

ವೈಭವದ ಸಾಂಸ್ಕೃತಿಕ ಪರಂಪರೆ

ಕನ್ಯಾಕುಮಾರಿ ನಗರವು ಶ್ರೀಮಂತ ಇತಿಹಾಸ ಮತ್ತು ಸಂಸ್ಕೃತಿಯ ಒಳನೋಟವನ್ನು ನೀಡುತ್ತದೆ. ಕನ್ಯಾಕುಮಾರಿ ಅಮ್ಮನ್ ದೇವಸ್ಥಾನಕ್ಕೆ ದೇಶದ ವಿವಿಧ ಭಾಗಗಳಿಂದ ಯಾತ್ರಿಕರನ್ನು ಆಹ್ವಾನಿಸುತ್ತದೆ. ದೇವಾಲಯದ ಎತ್ತರದ ಗೋಪುರ, ಸಂಕೀರ್ಣವಾದ ಕೆತ್ತಿದ ಕಂಬಗಳು ಈ ಪ್ರದೇಶದಲ್ಲಿ ಅನುಸರಿಸುವ ಸಂಪ್ರದಾಯಗಳು, ಆಚರಣೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತದೆ.


ಇದನ್ನೂ ಓದಿ: Porbandar Tour: ಪೋರ್ ಬಂದರಿನಲ್ಲಿ ನೋಡಲೇಬೇಕಾದ ಅದ್ಭುತ ಸ್ಥಳಗಳಿವು

ಸ್ಥಳೀಯ ಖಾದ್ಯ ರುಚಿ

ಬಜೆಟ್ ಸ್ನೇಹಿ ಕರಕುಶಲ ವಸ್ತುಗಳು, ಸಾಂಪ್ರದಾಯಿಕ ಕಲಾಕೃತಿಗಳನ್ನು ಇಲ್ಲಿ ಖರೀದಿ ಮಾಡಬಹುದು, ಜೊತೆಗೆ ಸ್ಥಳೀಯ ತಿನಿಸುಗಳು, ಸಮುದ್ರಾಹಾರ ತಿಂಡಿಗಳು, ಬಾಳೆಹಣ್ಣು ಚಿಪ್ಸ್, ತೆಂಗಿನಕಾಯಿ ಸಿಹಿತಿಂಡಿಗಳು ಕೈಗೆಟಕುವ ದರದಲ್ಲಿ ಲಭ್ಯವಾಗುತ್ತದೆ.

Continue Reading

ದೇಶ

Bomb Threat: ದೆಹಲಿ ಬಳಿಕ ಇದೀಗ ಅಹಮದಾಬಾದ್​ನ ಶಾಲೆಗಳಿಗೂ ಬಾಂಬ್​ ಬೆದರಿಕೆ

Bomb Threat: ಗುಜರಾತ್‌ನ ಅಹಮದಾಬಾದ್‌ನ ಹಲವು ಶಾಲೆಗಳಿಗೆ ಸೋಮವಾರ (ಮೇ 6) ಬೆದರಿಕೆ ಇ ಮೇಲ್‌ ಬೆದರಿಕೆ ಬಂದಿದೆ. ಹೀಗಾಗಿ ಪೊಲೀಸರು ತ್ವರಿತ ತಪಾಸಣೆಗೆ ಮುಂದಾಗಿದ್ದಾರೆ. ಶಾಲೆಗಳ ಆವರಣದಲ್ಲಿ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಎನ್ನಲಾಗಿದೆ. ಅದಾಗ್ಯೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಕೆಲವು ದಿನಗಳ ಹಿಂದೆ ದೆಹಲಿ- ಎನ್‌ಸಿಆರ್ (Delhi NCR) ಪ್ರದೇಶದ ಕನಿಷ್ಠ 12 ಪ್ರತಿಷ್ಠಿತ ಶಾಲೆಗಳಿಗೆ (Schools) ಇಮೇಲ್‌ ಮೂಲಕ ಬಾಂಬ್ ಬೆದರಿಕೆ ಕರೆ (Bomb Threat) ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಗುಜರಾತ್‌ನಲ್ಲಿ ಈ ಘಟನೆ ನಡೆದಿರುವುದು ಆತಂಕ ಹೆಚ್ಚಿಸಿದೆ.

VISTARANEWS.COM


on

Bomb Threat
Koo

ಗಾಂಧಿನಗರ: ಕೆಲವು ದಿನಗಳ ಹಿಂದೆ ದೆಹಲಿ- ಎನ್‌ಸಿಆರ್ (Delhi NCR) ಪ್ರದೇಶದ ಕನಿಷ್ಠ 12 ಪ್ರತಿಷ್ಠಿತ ಶಾಲೆಗಳಿಗೆ (Schools) ಇಮೇಲ್‌ ಮೂಲಕ ಬಾಂಬ್ ಬೆದರಿಕೆ ಕರೆ (Bomb Threat) ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಗುಜರಾತ್‌ನ ಅಹಮದಾಬಾದ್‌ನ ಹಲವು ಶಾಲೆಗಳಿಗೆ ಸೋಮವಾರ (ಮೇ 6) ಬೆದರಿಕೆ ಇ ಮೇಲ್‌ ಬೆದರಿಕೆ ಬಂದಿದೆ. ಹೀಗಾಗಿ ಪೊಲೀಸರು ತ್ವರಿತ ತಪಾಸಣೆಗೆ ಮುಂದಾಗಿದ್ದಾರೆ. ಶಾಲೆಗಳ ಆವರಣದಲ್ಲಿ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಎನ್ನಲಾಗಿದೆ. ಅದಾಗ್ಯೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಕಳೆದ ವಾರ ದೆಹಲಿ-ಎನ್‌ಸಿಆರ್‌ನ ಶಾಲೆಗೆ ಬಂದ ಬಾಂಬ್ ಬೆದರಿಕೆಯ ಇ ಮೇಲ್‌ನ ಮೂಲವಾದ ರಷ್ಯಾದ ಡೊಮೇನ್ mail.ruನಿಂದಲೇ ಈ ಬೆದರಿಕೆಯನ್ನೂ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ಪೊಲೀಸ್ ಮತ್ತು ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ (Bomb Detection and Disposal Squad) ತಂಡಗಳು ಶಾಲೆಗಳಲ್ಲಿ ವ್ಯಾಪಕ ಶೋಧ ನಡೆಸಿವೆ. ಸದ್ಯ ಈ ಬಗ್ಗೆ ತನಿಖೆ ಕೈಗೆತ್ತಿಕೊಳ್ಳಲಾಗಿದೆ.

ದೆಹಲಿ ಶಾಲೆಗಳಿಗೆ ಬೆದರಿಕೆ

ಮೇ 1ರಂದು ದೆಹಲಿ- ಎನ್‌ಸಿಆರ್ ಪ್ರದೇಶದ ಕನಿಷ್ಠ 12 ಪ್ರತಿಷ್ಠಿತ ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿತ್ತು. ಕೂಡಲೇ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿತ್ತು. ಬಾಂಬ್ ಬೆದರಿಕೆ ಇ ಮೇಲ್ ಸ್ವೀಕರಿಸಿದ ಶಾಲೆಗಳೆಂದರೆ – ಚಾಣಕ್ಯಪುರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಸ್ಕೃತಿ ಶಾಲೆ, ಪೂರ್ವ ದೆಹಲಿಯ ಮಯೂರ್ ವಿಹಾರ್, ದ್ವಾರಕಾ ಜಿಲ್ಲೆಯ ಡಿಪಿಎಸ್ ಶಾಲೆ, ದಕ್ಷಿಣದ ಬಸಂತ್ ಕುಂಜ್ ಪ್ರದೇಶದಲ್ಲಿರುವ ಡಿಎವಿ ಶಾಲೆ, ಅಮಿಟಿ ಸ್ಕೂಲ್, ಸಾಕೇತ್, ನವದೆಹಲಿಯ ಸಂಸ್ಕೃತಿ ಶಾಲೆ ಮುಂತಾದವು. ಸಂಸ್ಕೃತಿಯು ದೆಹಲಿಯ ಅತ್ಯಂತ ಉನ್ನತ ಮಟ್ಟದ ಶಾಲೆಗಳಲ್ಲಿ ಒಂದು.

ಇದನ್ನೂ ಓದಿ: Bomb Threat: ದೆಹಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮಾಡಿದವ 16 ವರ್ಷದ ಪೋರ?

ಬಾಂಬ್‌ ದಾಳಿ ಕುರಿತ ಬೆದರಿಕೆ ಇ ಮೇಲ್‌ಗಳು ರವಾನೆಯಾಗುತ್ತಲೇ ಪೊಲೀಸರು ಎಚ್ಚೆತ್ತುಕೊಂಡರು. ಕೂಲಂಕಷ ತನಿಖೆ, ಪರಿಶೀಲನೆ ನಡೆಸಿದ ಪೊಲೀಸರು, ಇದೊಂದು ಹುಸಿ ಬಾಂಬ್‌ ಬೆದರಿಕೆ ಎಂಬುದಾಗಿ ಎಕ್ಸ್‌ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿ ಪೋಷಕರು, ಶಾಲೆಗಳ ಆಡಳಿತ ಮಂಡಳಿಯು ನಿಟ್ಟುಸಿರು ಬಿಡುವಂತೆ ಮಾಡಿದ್ದರು.

ಚೆಂಡೆಂದು ಭಾವಿಸಿ ಬಾಂಬ್‌ ಜತೆ ಮಕ್ಕಳ ಆಟ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನಕ್ಕೆ ಒಂದು ದಿನ ಇರುವಾಗಲೇ ಪಶ್ಚಿಮ ಬಂಗಾಳದಲ್ಲಿ ಬಾಂಬ್‌ ಸ್ಫೋಟಗೊಂಡಿದೆ. ಹೂಗ್ಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಮಗುವೊಂದು ಮೃತಪಟ್ಟಿದ್ದು, ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಪಾಂಡುವಾ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕಚ್ಚಾ ಬಾಂಬ್‌ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ ಎನ್ನಲಾಗಿದೆ. ಇನ್ನು ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಮಕ್ಕಳು ಆಕಸ್ಮಿಕವಾಗಿ ಕಚ್ಚಾ ಬಾಂಬ್‌ ಅನ್ನು ಚೆಂಡು ಎಂದು ಭಾವಿಸಿ ಎತ್ತಿಕೊಂಡಿದ್ದಾರೆ. ಆಗ ಅದು ಸ್ಫೋಟಗೊಂಡಿದೆ. ಘಟನೆಯಲ್ಲಿ ಪುಟ್ಟ ಕಂದಮ್ಮ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಗಾಯಗೊಂಡ ಇಬ್ಬರಲ್ಲಿ ಒಬ್ಬ ತನ್ನ ಬಲಗೈಯನ್ನೇ ಕಳೆದುಕೊಂಡಿದ್ದಾನೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಇನ್ನು ಈ ಕಚ್ಚಾ ಬಾಂಬ್‌ ಎಲ್ಲಿಂದ ಬಂತು? ಯಾರು ಎಸೆದರು ಎಂಬುದು ತನಿಖೆಯಲ್ಲಿ ತಿಳಿಯಬೇಕಾಗಿದೆ.

Continue Reading
Advertisement
assault case in bengaluru
ಬೆಂಗಳೂರು47 mins ago

Assault Case : ವಿಕೋಪಕ್ಕೆ ತಿರುಗಿದ ಜಗಳ; ಕಪಾಳಮೋಕ್ಷಕ್ಕೆ ವ್ಯಕ್ತಿ ಬಲಿ

Prajwal Revanna Case site inspection by SIT team in HD Revanna Basavanagudi residence
ಕ್ರೈಂ58 mins ago

Prajwal Revanna Case: ಪ್ರಜ್ವಲ್‌ ಅತ್ಯಾಚಾರ ಕೇಸ್‌; ಎಚ್‌.ಡಿ. ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು: ವಕೀಲರ ಅಸಮಾಧಾನ

No Diet Day 2024
ಆರೋಗ್ಯ1 hour ago

No Diet Day 2024: ಇಂದು ಡಯೆಟ್‌ ರಹಿತ ದಿನ ಆಚರಿಸುವುದೇಕೆ?

pakistan team
ಕ್ರೀಡೆ1 hour ago

Pakistan Cricket: ಟಿ20 ವಿಶ್ವಕಪ್​ ಗೆದ್ದರೆ ಪಾಕ್​ ಆಟಗಾರರಿಗೆ ಸಿಗಲಿದೆ ಭಾರೀ ಬಹುಮಾನ ಮೊತ್ತ

Gold Rate Today
ಕರ್ನಾಟಕ1 hour ago

Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಚಿನ್ನದ ಬೆಲೆ ಇಂದು ಹೀಗಿವೆ; ತುಸುವೇ ಏರಿಕೆ

Puttakkana makkalu sahana dead
ಕಿರುತೆರೆ1 hour ago

Puttakkana Makkalu: ಸಹನಾಳ ಸಾವಿನ ಸುದ್ದಿ ಕೇಳಿ ಮುಗಿಲುಮುಟ್ಟಿತು ಪುಟ್ಟಕ್ಕನ ಆಕ್ರಂದನ

Rekha Jhunjhunwala
ವಾಣಿಜ್ಯ1 hour ago

Rekha Jhunjhunwala: ಷೇರು ಮಾರುಕಟ್ಟೆಯಲ್ಲಿ ರೇಖಾ ಜುಂಜುನ್‌ವಾಲಾಗೆ 805 ಕೋಟಿ ರೂ. ನಷ್ಟ; ಕಾರಣವೇನು?

viral news
ಕ್ರಿಕೆಟ್2 hours ago

Viral News: ಕ್ರಿಕೆಟ್‌ ಆಡುವಾಗ ಖಾಸಗಿ ಭಾಗಕ್ಕೆ ಚೆಂಡು ಬಡಿದು ಬಾಲಕ ದಾರುಣ ಸಾವು; ವಿಡಿಯೊ ಇದೆ

Sunita Williams
ವಿದೇಶ2 hours ago

Sunita Williams: 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸುನೀತಾ ವಿಲಿಯಮ್ಸ್‌ ಸಜ್ಜು

Namma Metro
ಬೆಂಗಳೂರು2 hours ago

Namma Metro : ದೆಹಲಿ ನಂತರ ನಮ್ಮ ಮೆಟ್ರೋದಲ್ಲೂ ಯುವಕ-ಯುವತಿಯ ಡಿಂಗ್‌ ಡಾಂಗ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ11 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ20 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ22 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ22 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌