Explainer: ಆಪರೇಷನ್‌ ಬ್ಲೂ ಸ್ಟಾರ್‌ ಎಂಬ ಚಂಡಮಾರುತಕ್ಕೆ ಈಗ 38 ವರ್ಷ! - Vistara News

EXPLAINER

Explainer: ಆಪರೇಷನ್‌ ಬ್ಲೂ ಸ್ಟಾರ್‌ ಎಂಬ ಚಂಡಮಾರುತಕ್ಕೆ ಈಗ 38 ವರ್ಷ!

38 ವರ್ಷಗಳೇ ಕಳೆದು ಹೋದವು. ಆದರೆ ರಕ್ತಸಿಕ್ತ ಖಲಿಸ್ತಾನ್‌ ಚಳವಳಿ, ಆಪರೇಷನ್‌ ಬ್ಲೂ ಸ್ಟಾರ್‌ ಭೂತಗಳು ಮತ್ತೆ ಮತ್ತೆ ವರ್ತಮಾನದ ರಾಜಕೀಯದಲ್ಲಿ ಹೆಡೆ ಎತ್ತುತ್ತಲೇ ಇವೆ.

VISTARANEWS.COM


on

operation blue star
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆಪರೇಷನ್‌ ಬ್ಲೂ ಸ್ಟಾರ್-‌ ಈ ಹೆಸರು ಕೇಳಿದರೆ ಇಂದಿಗೂ ಸಿಕ್ಖರು ಮಾತ್ರವಲ್ಲ ಇಡೀ ಭಾರತ ಒಮ್ಮೆ ಕಂಪಿಸುತ್ತದೆ. ಖಲಿಸ್ತಾನ್‌ ಚಳವಳಿ ಎಂಬ ಘೋರ ಉಗ್ರಗಾಮಿ ಚಳವಳಿಯ ಹುಟ್ಟು ಬೆಳವಣಿಗೆ, ಅಳಿವು, ಪುನರ್ಜನ್ಮ ಇವುಗಳೆಲ್ಲಾ ಈ ಆಪರೇಶನ್‌ ಜೊತೆ ತಳುಕು ಹಾಕಿಕೊಂಡಿವೆ. ಅದು ಭಾರತದ ಇತಿಹಾಸದಲ್ಲಿ ಒಂದು ಐತಿಹಾಸಿಕ ಘಟನೆ.

1984ರ ಜೂನ್‌ 3ರಿಂದ 8ರವರೆಗೆ ನಡೆದ ಈ ಆಪರೇಷನ್‌ಗೆ ಈಗ 38 ವರ್ಷ ತುಂಬಿದೆ. ಆಪರೇಷನ್‌ ಬ್ಲೂ ಸ್ಟಾರ್‌ ನಡೆಸಿದವರು ಯಾರು ಮತ್ತು ಯಾಕೆ? ಸಿಖ್‌ ಪ್ರತ್ಯೇಕತಾವಾದ ತಲೆಯೆತ್ತಿದ್ದು ಯಾಕೆ? ಭಯೋತ್ಪಾದಕರನ್ನು ಮಟ್ಟ ಹಾಕಲು ಆಪರೇಶನ್‌ ಬ್ಲೂ ಸ್ಟಾರ್‌ ಯಶಸ್ವಿಯಾಯಿತಾ ಅಥವಾ ಮತ್ತೆ ಪ್ರತ್ಯೇಕತಾವಾದ ತಲೆಯೆತ್ತಿದೆಯಾ? ಪ್ರಧಾನ ಮಂತ್ರಿಯ ಹತ್ಯೆ, ಸಿಕ್ಖರ ನರಮೇಧ ಇತ್ಯಾದಿಗಳಿಗೆ ಈ ಕಾರ್ಯಾಚರಣೆ ಕಾರಣ ಆದದ್ದು ಹೇಗೆ? ನಂತರ ಏನೇನಾಯ್ತು? ಬನ್ನಿ ಇಲ್ಲಿ ವಿವರವಾಗಿ ತಿಳಿಯೋಣ.

ಭಾರತ ಕಂಡ ದಿಟ್ಟ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರು ಆಪರೇಶನ್‌ ಬ್ಲೂಸ್ಟಾರ್‌ ನಡೆಸಲು ಕಾರಣವಾದದ್ದು ಖಲಿಸ್ತಾನ ಉಗ್ರವಾದಿಗಳು. ಜರ್ನೈಲ್‌ ಸಿಂಗ್‌ ಭಿಂದ್ರಾನ್‌ವಾಲೆ ಎಂಬ ಭಯೋತ್ಪಾದಕ ಸಿಕ್ಖರ ಪವಿತ್ರ ತಾಣವಾದ ಅಮೃತಸರದ ಸ್ವರ್ಣಮಂದಿರವನ್ನೇ ತನ್ನ ಭಯೋತ್ಪಾದಕ ಕಾರ್ಯಾಚರಣೆಗಳ ಕೇಂದ್ರವಾಗಿ ಮಾಡಿಕೊಂಡಾಗ, ಆತನನ್ನು ಮಟ್ಟಹಾಕಲು ಇಂದಿರಾ ಸೈನ್ಯವನ್ನೇ ಕಳಿಸಿ ಮಂದಿರಕ್ಕೆ ನುಗ್ಗಿಸಿದ್ದು ಈಗ ಇತಿಹಾಸ. ಈ ಕ್ರಮದಿಂದ ಆಧುನಿಕ ಭಾರತದ ಇತಿಹಾಸವೇ ಬದಲಾಯಿತು ಎಂದೂ ಹೇಳಬಹುದು.

ಈ ಕಾರ್ಯಾಚರಣೆಗೆ ಕಾರಣವಾದ ಖಲಿಸ್ತಾನ್‌ ಚಳವಳಿಯ ಬಗ್ಗೆ ಮೊದಲು ತಿಳಿಯೋಣ.

ಪಾಕಿಸ್ತಾನದ ಜೊತೆಗೇ ಹುಟ್ಟಿದ ಖಲಿಸ್ತಾನ್‌ ಚಳವಳಿ

1947ರ ಆಗಸ್ಟ್‌ ತಿಂಗಳಲ್ಲಿ ದೇಶಕ್ಕೆ ಸ್ವಾತಂತ್ರ್ಯ ದೊರೆಯಿತು. ಅದರ ಜೊತೆಗೇ ದೇಶವನ್ನು ಬ್ರಿಟಿಷರು ಎರಡಾಗಿ ಒಡೆದು ಹಾಕಿದರು. ಖಲಿಸ್ತಾನ್‌ ಚಳವಳಿಗೆ ಪರೋಕ್ಷ ಕಾರಣ ಮುಸ್ಲಿಂ ಲೀಗ್.‌ 1940ರಿಂದಲೇ ಮುಸ್ಲಿಂ ಲೀಗ್‌ ಮುಸ್ಲಿಮರಿಗಾಗಿ ಪ್ರತ್ಯೇಕ ಪಾಕಿಸ್ತಾನಕ್ಕೆ ಆಗ್ರಹಿಸತೊಡಗಿತ್ತು. ಆಗ ಸಿಖ್ಕರಲ್ಲಿ ಕೆಲವು ಪ್ರತ್ಯೇಕತಾವಾದಿಗಳು ಸೃಷ್ಟಿಯಾದರು. ತಮಗೂ ಪ್ರತ್ಯೇಕ ಖಲಿಸ್ತಾನ್‌ ಎಂಬ ರಾಷ್ಟ್ರ ಬೇಕು ಎಂದು ಆಗ್ರಹ ಶುರುಮಾಡಿದರು. ಈ ನಡುವೆ ಪಂಜಾಬಿ ಬಹುಸಂಖ್ಯಾತರಿಗಾಗಿ ಪ್ರತ್ಯೇಕ ರಾಜ್ಯ ನೀಡಬೇಕೆಂದು ಅಕಾಲಿ ದಳ ಪಂಜಾಬಿ ಸುಬಾ ಚಳವಳಿ ಆರಂಭಿಸಿತು. 1966ರಲ್ಲಿ ಪಂಜಾಬ್‌ ಅನ್ನು ವಿಭಜಿಸಿ ಹರಿಯಾಣ, ಹಿಮಾಚಲ ಪ್ರದೇಶ ಮತ್ತು ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢಗಳನ್ನು ಹೊಸದಾಗಿ ರಚಿಸಲಾಯಿತು. ಆಗ ಪಂಜಾಬ್‌ ಪ್ರತ್ಯೇಕತಾವಾದ ಜೋರಾಯಿತು.

1971ರಲ್ಲಿ ಪಂಜಾಬ್‌ನ ಮಾಜಿ ಹಣಕಾಸು ಸಚಿವ ಜಗ್ಜೀತ್‌ ಸಿಂಗ್‌ ಚೌಹಾಣ್‌ ಅಮೆರಿಕದ ಪತ್ರಿಕೆಯೊಂದರಲ್ಲಿ ಖಲಿಸ್ತಾನ್‌ ಸ್ಥಾಪನೆ ಬಗ್ಗೆ ಜಾಹೀರಾತು ನೀಡಿದರು. 1973ರಲ್ಲಿ ಅಕಾಲಿ ದಳ ಮತ್ತು ಇತರ ಸಿಖ್‌ ಗುಂಪುಗಳು ಆನಂದಪುರ ಸಾಹಿಬ್‌ ಗೊತ್ತುವಳಿ ಅಂಗೀಕರಿಸಿ, ಖಲಿಸ್ತಾನ್‌ ಚಳವಳಿ ಹುಟ್ಟುಹಾಕಿದರು.

ಇದನ್ನೂ ಓದಿ: Explainer: Spelling bee- 14 ವರ್ಷಗಳಿಂದ ಭಾರತೀಯರ ಗೆಲುವು, ಏನಿದರ ರಹಸ್ಯ?

ಭಿಂದ್ರಾನ್‌ವಾಲೆ ಎಂಬ ಬಿರುಗಾಳಿ

Bhindranwale

ಈ ಚಳವಳಿ ಹೆಚ್ಚು ಕಾವು ಪಡೆದುಕೊಂಡದ್ದು 1980ರ ದಶಕದಲ್ಲಿ. ಜರ್ನೈಲ್‌ ಸಿಂಗ್‌ ಭಿಂದ್ರನ್‌ವಾಲೆ ಎಂಬ ಉಗ್ರಗಾಮಿ ಲೀಡರ್‌ ಅಂತಾರಾಷ್ಟ್ರೀಯ ಗಮನ ಸೆಳೆಯುವಂತೆ ಬೆಳೆಯಲಾರಂಭಿಸಿದ್ದು ಅದೇ ದಶಕದಲ್ಲಿ. ಈತ ದಮದಮಿ ತಕ್ಸಲ್‌ ಎಂಬ ಪಂಗಡದ ಧಾರ್ಮಿಕ ನಾಯಕನಾಗಿದ್ದ. ಭಿಂದ್ರನ್‌ವಾಲೆ ಅಂದಿನ ಪಂಜಾಬ್‌ನ ಯುವಕರ ಮೇಲೆ ಭಾರಿ ಪ್ರಭಾವ ಬೀರಿದ್ದ. ತೀವ್ರವಾದಿ ಸಿಖ್‌ ಮತೀಯವಾದಿಯಾಗಿದ್ದ ಇವನು ಸಿಖ್‌ ಧರ್ಮದ ಕಟ್ಟರ್‌ ಪಂಥೀಯನಾಗಿದ್ದ. ಇವನು ಒಂದಷ್ಟು ತೀವ್ರವಾದಿ ಸಿಕ್ಖರನ್ನು ಜತೆಗೆ ಸೇರಿಸಿಕೊಂಡು ಅವರಿಗೆ ಕೆನಡಾ ಮುಂತಾದ ಕಡೆಗಳಿಂದ ಬಂದ ಹಣಕಾಸಿನ ನೆರವಿನ ಮೂಲಕ ಶಸ್ತ್ರಾಸ್ತ್ರ ಕೊಡಿಸಿದ. ಇವನಲ್ಲಿ ಭಾರತ ವಿರೋಧಿ ಗುಣಗಳನ್ನು ಕಂಡ ಪಾಕಿಸ್ತಾನ ಕೂಡ ಭಿಂದ್ರಾನ್‌ವಾಲೆಗೆ ಗಡಿಯಾಚೆಯಿಂದ ಚಹಾಯ ಮಾಡತೊಡಗಿತು.

ಭಿಂದ್ರನ್‌ವಾಲೆಯಿಂದಾಗಿ ಖಲಿಸ್ತಾನ್‌ ಚಳವಳಿಗೆ ಶಸ್ತ್ರಾಸ್ತ್ರ ಹೋರಾಟದ ಸ್ವರೂಪ ಬಂದಿತು. 1980ರ ಏಪ್ರಿಲ್‌ನಲ್ಲಿ ಇವನು ಸಹಚರರ ಜೊತೆಗೆ ಅಮೃತಸರದ ಹರ್ಮಿಂದಿರ್‌ ಸಾಹಿಬ್‌ಗೆ ನುಗ್ಗಿದ. ಭಾರತ ಸರಕಾರದ ವಿರುದ್ಧ ದಂಗೆ ಆರಂಭಿಸಲೆಂದು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ದೇವಾಲಯದೊಳಗೆ ಬಚ್ಚಿಟ್ಟಿದ್ದ. 1981ರಲ್ಲಿ ಇವನ ಸಹಚರರು ಭಿಂದ್ರನ್‌ವಾಲೆಯ ಕಟ್ಟಾ ಟೀಕಾಕಾರನಾಗಿದ್ದ ಕಾಂಗ್ರೆಸ್‌ ನಾಯಕ ಮತ್ತು ‘ಪಂಜಾಬ್‌ ಕೇಸರಿ’ ಪತ್ರಿಕೆಯ ಸಂಸ್ಥಾಪಕ ಲಾಲಾ ಜಗತ್‌ ನಾರಾಯಣ್‌ ಅವರನ್ನು ಕೊಂದುಹಾಕಿದರು. 1982ರಲ್ಲಿ ಆನಂದಪುರ ಸಾಹಿಬ್‌ ಗೊತ್ತುವಳಿ ಅನುಷ್ಠಾನಕ್ಕೆ ಸಂಬಂಧಿಸಿ ಭಿಂದ್ರನ್‌ವಾಲೆ ʼಧರ್ಮ ಯುದ್ಧ ಮೋರ್ಚಾʼ ಆರಂಭಿಸಿದ. ಸಾವಿರಾರು ಜನರು ಈ ಚಳವಳಿಗೆ ಧುಮುಕಿದರು.

ಉಪ ಪೊಲೀಸ್‌ ಮಹಾ ನಿರ್ದೇಶಕರ ಹತ್ಯೆ

1983ರ ಏಪ್ರಿಲ್‌ನಲ್ಲಿ ಪಂಜಾಬ್‌ನ ಡೆಪ್ಯೂಟಿ ಪೊಲೀಸ್‌ ಮಹಾನಿರ್ದೇಶಕರಾಗಿದ್ದ ಎ.ಎಸ್‌. ಅಟ್ವಾಲ್‌ ಅವರನ್ನು ಖಲಿಸ್ತಾನ್‌ ಉಗ್ರರು ಗುಂಡಿಕ್ಕಿ ಕೊಂದರು. ಅಕ್ಟೋಬರ್‌ನಲ್ಲಿ ಹಿಂದೂಗಳಿದ್ದ ಬಸ್‌ ಮೇಲೆ ದಾಳಿ ನಡೆಸಿ 6 ಮಂದಿಯನ್ನು ಕೊಂದು ಹಾಕಿದರು. ಚಳವಳಿಯನ್ನು ಹತ್ತಿಕ್ಕಲು ಕೇಂದ್ರ ಸರಕಾರ ಪಂಜಾಬ್‌ ಮೇಲೆ ರಾಷ್ಟ್ರಪತಿ ಆಡಳಿತ ಹೇರಿತು. 1984 ಫೆಬ್ರವರಿಯಲ್ಲಿ ಸಂವಿಧಾನದಲ್ಲಿ ಸಿಕ್ಖರಿಗೆ ಹಿಂದೂ ಎಂದು ಸಂಬೋಧಿಸಬಾರದು ಎಂದು ಆಗ್ರಹಿಸಿ ಅಕಾಲಿ ದಳ ಪ್ರತಿಭಟನೆ ಆರಂಭಿಸಿತು.

ಸ್ವರ್ಣಮಂದಿರವೇ ಅಡಗುದಾಣ

golden temple

1980ರಿಂದಲೇ ಭಿಂದ್ರನ್‌ವಾಲೆ ಸ್ವರ್ಣಮಂದಿರವನ್ನು ತನ್ನ ಅಡಗುದಾಣವನ್ನಾಗಿ ಮಾಡಿಕೊಂಡಿದ್ದ. ನೂರಾರು ಖಲಿಸ್ತಾನ್‌ ಉಗ್ರರು ಈ ತಾಣವನ್ನು ತಮ್ಮ ಕೇಂದ್ರವನ್ನಾಗಿ ಮಾಡಿಕೊಂಡಿದ್ದರು. ಹಿಂದೂಗಳ ವಿರುದ್ಧ, ಮುಸ್ಲಿಮರ ವಿರುದ್ಧ ಭಯೋತ್ಪಾದಕ ಕೃತ್ಯಗಳನ್ನು ನಡೆಸುತ್ತಿದ್ದರು. ಇದರ ವಿರುದ್ಧ ಪ್ರಜ್ಞಾವಂತ ಸಿಕ್ಖರು ಧ್ವನಿ ಎತ್ತಿದ್ದರು. ಆದರೆ ಖಲಿಸ್ತಾನ್‌ವಾದಿಗಳು ಈ ಮಾತನ್ನು ಕೇಳುವವರಾಗಿರಲಿಲ್ಲ. ಅವರು ತಮ್ಮ ಉಗ್ರವಾದವನ್ನು ಇನ್ನೂ ತೀವ್ರವಾಗಿಸಿದರು. ಸಿಖ್ಖರ ಅತ್ಯಂತ ಪವಿತ್ರ ಸ್ಥಳವಾದ ಸ್ವರ್ಣಮಂದಿರ ದೇಗುಲದ ಅಕಾಲ್‌ ತಖ್ತ್‌ ಸಂಕೀರ್ಣ ಪೂರ್ತಿ ಭಿಂದ್ರನ್‌ವಾಲೆಯ ಭದ್ರಕೋಟೆಯಾಗಿತ್ತು. ಇಲ್ಲಿ ಭಿಂದ್ರನ್‌ವಾಲೆ ಹಾಗೂ ಆತನ ಸಹಚರರು ಶಸ್ತ್ರಾಸ್ತ್ರಗಳೊಂದಿಗೆ ಆಶ್ರಯ ಪಡೆದಿದ್ದರು. ಆತ ಪಂಜಾಬಿನಾದ್ಯಂತ ಹಾವಳಿ ಎಬ್ಬಿಸುತ್ತಿದ್ದ. ಅಕ್ಷರಶಃ ಅಲ್ಲಿಂದಲೇ ತನ್ನದೇ ಆದ ಸರಕಾರವನ್ನು ನಡೆಸುತ್ತಿದ್ದ. ಅವನಿಗೆ ಪಾಕಿಸ್ತಾನದ ಕುಮ್ಮಕ್ಕು ಇತ್ತು. ಅವನನ್ನು ಹಾಗೇ ಬಿಟ್ಟಿದ್ದರೆ ಪಂಜಾಬ್‌ ಪ್ರತ್ಯೇಕ ರಾಷ್ಟ್ರ ಎಂದು ಕೆಲವೇ ದಿನಗಳಲ್ಲಿ ಘೋಷಿಸಿಕೊಂಡುಬಿಡುತ್ತಿದ್ದನೇನೋ? ಆಗ ಪಾಕಿಸ್ತಾನಕ್ಕೆ ಪಂಜಾಬ್‌ಗೆ ತನ್ನ ಸೈನ್ಯ ನುಗ್ಗಿಸುವುದು ಸುಲಭವಾಗುತ್ತಿತ್ತು. ಆತ ಭಾರತದ ಸಾರ್ವಭೌಮತ್ವಕ್ಕೆ ಸವಾಲಾಗಿದ್ದ. ಅವನನ್ನು ಹಿಮ್ಮೆಟ್ಟಿಸುವುದು ಸರಕಾರಕ್ಕೆ ತುರ್ತು ಅಗತ್ಯವಾಗಿತ್ತು. ಆತನನ್ನೂ ಚಳವಳಿಯನ್ನೂ ಒಂದೇ ಬಾರಿಗೆ ಮಟ್ಟ ಹಾಕೋಣ ಎಂದು ಆಗ ಪ್ರಧಾನಮಂತ್ರಿ ಆಗಿದ್ದ ಇಂದಿರಾ ಗಾಂಧಿ ನಿರ್ಧರಿಸಿದರು. ಆಗ ಆರಂಭವಾಯಿತು ಆಪರೇಷನ್‌ ಬ್ಲೂಸ್ಟಾರ್‌.

ಹಂತ ಹಂತವಾಗಿ ನಡೆದ ಆಪರೇಷನ್‌

ಆಪರೇಷನ್‌ ಬ್ಲೂ ಸ್ಟಾರ್‌ ಶುರುವಾದದ್ದು 1984ರ ಜೂನ್‌ 1ರಂದು. ಇದು ಹಂತ ಹಂತಗಳಲ್ಲಿ ನಡೆಯಿತು. ಆರಂಭವಾಗಿ ಪೂರ್ತಿಯಾಗಿ ಮುಕ್ತಾಯವಾಗಿದ್ದು ಜೂನ್‌ 10ಕ್ಕೆ. ಆಪರೇಷನ್‌ ಮುಖ್ಯವಾಗಿ ನಡೆದಿದ್ದು ಜೂನ್‌ 3ರಿಂದ 8ರವರೆಗೆ. ಇದರಲ್ಲಿ 2 ಭಾಗಗಳಿವೆ. ಮೊದಲನೆಯ ಭಾಗ ಆಪರೇಷನ್‌ ಮೆಟಲ್‌ನಲ್ಲಿ ಹರ್ಮಂದಿರ್‌ ಸಾಹಿಬ್‌ ಕಾಂಪ್ಲೆಕ್ಸ್‌ ಅನ್ನು ಭಾರತೀಯ ಮಿಲಿಟರಿ ಸುತ್ತುವರಿಯಿತು. ಇದರ ನಂತರ ನಡೆದ ಆಪರೇಷನ್‌ ಶಾಪ್‌ನಲ್ಲಿ ಪಂಜಾಬ್‌ನ ಗ್ರಾಮಾಂತರ ಪ್ರದೇಶಗಳಲ್ಲಿ ದಾಳಿ ನಡೆಸಿ ಬಂಡುಕೋರರನ್ನು ಸೆರೆ ಹಿಡಿಯಲಾಯಿತು. ಇದಾದ ಬಳಿಕ ಆಪರೇಷನ್‌ ವುಡ್‌ರೋಸ್‌ ನಡೆಯಿತು. ಪಂಜಾಬ್‌ ಪೂರ್ತಿ ನಡೆದ ಈ ಕಾರ್ಯಾಚರಣೆಯಲ್ಲಿ ಖಲಿಸ್ತಾನ್‌ ಸಹಾನುಭೂತಿ ಪರರನ್ನೂ ಬಂಧಿಸಲಾಯಿತು. ಕಾರ್ಯಾಚರಣೆಯ ಸಂದರ್ಭದಲ್ಲಿ ಏನಾಗುತ್ತಿದೆ ಎಂಬುದು ಹೊರಲೋಕಕ್ಕೆ ತಿಳಿಯದಂತೆ ಮಾಡಿತ್ತು ಇಂದಿರಾ ಸರ್ಕಾರ. ಪಂಜಾಬ್‌ನಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಲಾಯಿತು. ರಾಜ್ಯ ಪೂರ್ತಿ ಕರ್ಫ್ಯೂ ವಿಧಿಸಲಾಗಿತ್ತು. ಮುಖ್ಯ ಆಪರೇಷನ್‌ನಲ್ಲಿ ಭಾರತೀಯ ಸೈನ್ಯದ ಟ್ಯಾಂಕ್‌ಗಳು, ಹೆಲಿಕಾಪ್ಟರ್‌ಗಳು, ಶಸ್ತ್ರಸಜ್ಜಿತ ವಾಹನಗಳು ಮತ್ತು ಫಿರಂಗಿದಳ ಭಾಗವಹಿಸಿದವು. ಹಿಂದೆ ಎಂದೂ ಈ ಪ್ರಮಾಣದ ಬಲಪ್ರಯೋಗವನ್ನು ಯಾವುದೇ ಉಗ್ರರ ಮೇಲೆ ಯಾವ ಸರಕಾರವೂ ಮಾಡಿರಲಿಲ್ಲ, ಮುಂದೆಯೂ ಮಾಡಲಿಲ್ಲ. ಈ ಸಂದರ್ಭದಲ್ಲಿ ಘನಘೋರವಾದ ಗುಂಡಿನ ಕಾಳಗ ನಡೆಯಿತು. ಭಿಂದ್ರಾನ್‌ವಾಲೆಯನ್ನು ಶರಣಾಗಲು ಆಗ್ರಹಿಸಲಾಯಿತು. ಆದರೆ ಅವನು ಅದಕ್ಕೆ ಒಪ್ಪಲಿಲ್ಲ. ಗುಂಡಿನ ಕಾಳಗದಲ್ಲಿ ಭಿಂದ್ರಾನ್‌ವಾಲೆ ಮತ್ತು ಅವನ ಸಹಚರರೆಲ್ಲ ಸತ್ತುಹೋದರು.

ಇದನ್ನೂ ಓದಿ: Explainer: ಹಿಮಾಚಲದಲ್ಲಿ ಖಲಿಸ್ತಾನ್‌ ಹೆಜ್ಜೆ: ಏನಿದರ ಹಕೀಕತ್?‌

ಹಾಗಿದ್ದರೆ ಈ ಗುಂಡಿನ ಕಾಳಗದಲ್ಲಿ ಸತ್ತವರೆಷ್ಟು? ಸರಕಾರದ ಅಧಿಕೃತ ಅಂಕಿ ಅಂಶಗಳ ಪ್ರಕಾರ ಸತ್ತವರು 575 ಮಂದಿ. ಆದರೆ ಪ್ರತ್ಯಕ್ಷ ಸಾಕ್ಷಿಗಳ ಪ್ರಕಾರ ಸಾವಿರಾರು ಮಂದಿ ಸತ್ತುಹೋದರು. ಸ್ವರ್ಣಮಂದಿರದಲ್ಲಿ ರಕ್ತದ ಕೋಡಿ ಹರಿದಿತ್ತು. ಇವರಲ್ಲಿ ಉಗ್ರಗಾಮಿಗಳ ಜೊತೆಗೆ, ಸ್ವರ್ಣಮಂದಿರಕ್ಕೆ ಭೇಟಿ ನೀಡಿದ್ದ ಹಲವಾರು ಭಕ್ತಾದಿಗಳೂ ಕೂಡ ಇದ್ದರು. ಯಾಕೆಂದರೆ ಈ ಭಕ್ತಾದಿಗಳನ್ನು ಉಗ್ರಗಾಮಿಗಳು ಮಾನವ ಗುರಾಣಿಗಳ ಥರ ಬಳಸಿಕೊಂಡಿದ್ದರು. ಆದ್ದರಿಂದ ಮೊದಲ ಗುಂಡುಗಳು ಈ ಭಕ್ತರಿಗೇ ಬಿದ್ದವು. ಉಗ್ರರ ಶಸ್ತ್ರಾಸ್ತ್ರ ಸಾಮರ್ಥ್ಯವನ್ನು ಮಿಲಿಟರಿ ಕಡಿಮೆ ಅಂದಾಜು ಮಾಡಿತ್ತು. ಅವರ ಬಳಿಕ ಗ್ರೆನೇಡ್‌ ಲಾಂಚರ್‌ಗಳು ಮುಂತಾದ ಆಧುನಿಕ ಆಯುಧಗಳಿದ್ದವು. ಅವರೂ ಸಾಕಷ್ಟು ಪ್ರತಿದಾಳಿ ನಡೆಸಿದರು. ಮಿಲಿಟರಿಯನ್ನೂ ಸಾಕಷ್ಟು ಸಾವುನೋವು ಉಂಟಾಯಿತು. ಜಗತ್ತಿನಾದ್ಯಂತ ಈ ಕಾರ್ಯಾಚರಣೆಗೆ ಸಿಖ್‌ ಸಮುದಾಯ ಆಘಾತ ವ್ಯಕ್ತಪಡಿಸಿತು. ಸ್ವರ್ಣಮಂದಿರವನ್ನು ಇಂದಿರಾ ಗಾಂಧಿ ಸರ್ಕಾರ ಅಪವಿತ್ರಗೊಳಿಸಿದೆ ಎಂದು ಹೇಳಿತು.

ಪ್ರತೀಕಾರದ ಕಾಳ್ಗಿಚ್ಚು

Indira Gandhi

ಈ ಕಾರ್ಯಾಚರಣೆಯಿಂದಾಗಿ ಖಲಿಸ್ತಾನ ಚಳವಳಿಯೇನೋ ಕೆಲಕಾಲದ ಮಟ್ಟಿಗೆ ತಣ್ಣಗಾಯಿತು. ಯಾಕೆಂದರೆ ನರರಾಕ್ಷಸನಂತಿದ್ದ ಭಿಂದ್ರಾನ್‌ವಾಲೆ ಸತ್ತುಹೋಗಿದ್ದ. ಆದರೆ ಸಿಕ್ಖರಲ್ಲಿ ಪ್ರತೀಕಾರದ ಹೊಗೆ ಆಡತೊಡಗಿತ್ತು. ಕೆಲವು ಸಿಖ್‌ ಸೈನ್ಯಾಧಿಕಾರಿಗಳು ಕೂಡ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದರು. ಪ್ರಧಾನಿ ಇಂದಿರಾ ಅವರ ಅಂಗರಕ್ಷಕರ ಬಳಗದಲ್ಲಿ ಸಿಖ್‌ ಯೋಧರಿದ್ದರು. ಅವರನ್ನು ಅಲ್ಲಿಂದ ತೆಗೆಯಬೇಕು ಎಂದು ಗುಪ್ತಚರ ಇಲಾಖೆ ಹೇಳಿತು. ಆದರೆ ಹೀಗೆ ಮಾಡಿದರೆ ಸಿಕ್ಖರನ್ನು ಅವಮಾನ ಮಾಡಿದಂತಾಗುತ್ತದೆ ಎಂದು ಇಂದಿರಾ ಭಾವಿಸಿದರು. ಇದು ಮುಂದಿನ ದುರಂತಗಳಿಗೆ ಕಾರಣವಾಯಿತು.

1984ರ ಅಕ್ಟೋಬರ್‌ 31ರಂದು ಮನೆಯಿಂದ ಹೊರಗೆ ಬರುತ್ತಿದ್ದ ಇಂದಿರಾ ಗಾಂಧಿಯವರ ಮೇಲೆ ಅವರ ಅಂಗರಕ್ಷಕರಾದ ಸತ್ವಂತ್‌ ಸಿಂಗ್‌ ಹಾಗೂ ಬಿಯಾಂತ್‌ ಸಿಂಗ್‌ ಗುಂಡಿನ ಮಳೆ ಸುರಿಸಿದರು. ಇಂದಿರಾ ಅವರಿಗೆ 33 ಬಾರಿ ಗುಂಡು ಹೊಡೆಯಲಾಗಿತ್ತು. 23 ಗುಂಡುಗಳು ಅವರ ದೇಹವನ್ನು ಸೀಳಿ ಹೊರಗೆ ಬಂದರೆ, 7 ಗುಂಡುಗಳು ದೇಹದಲ್ಲೇ ಇದ್ದವು. ದೇಶ ಕಂಡ ದಿಟ್ಟ ಪ್ರಧಾನಿ, ಆಪರೇಷನ್‌ ಬ್ಲೂ ಸ್ಟಾರ್‌ ನಡೆದ ಕೆಲವೇ ತಿಂಗಳಲ್ಲಿ ಹತ್ಯೆಯಾಗಿದ್ದರು. ಕೊಲೆಗಾರರನ್ನೂ ಸ್ಥಳದಲ್ಲೇ ಸಾಯಿಸಲಾಯಿತು. ಈ ಕೃತ್ಯ, ದಿಲ್ಲಿಯಲ್ಲಿ ದೊಡ್ಡ ಸಂಖ್ಯೆಯಲ್ಲಿ ವಾಸಿಸುತ್ತಿದ್ದ ಅಮಾಯಕ ಸಿಕ್ಖರ ಮೇಲೆ ದುರಂತವನ್ನು ತಂದಿಟ್ಟಿತು. ಇಂದಿರಾ ಹತ್ಯೆಗೆ ಪ್ರತೀಕಾರವಾಗಿ 1981ರ ನವೆಂಬರ್‌ 1ರಿಂದ ಮೂರ್ನಾಲ್ಕು ದಿನಗಳ ಕಾಲ ದೆಹಲಿ ಸೇರಿದಂತೆ ದೇಶಾದ್ಯಂತ ಸಿಖ್ಖರ ಮಾರಣಹೋಮವೇ ನಡೆಯಿತು. ಆಗ 3000ಕ್ಕೂ ಹೆಚ್ಚು ಸಿಖ್ಖರ ಹತ್ಯೆಯಾಯಿತು ಎಂದು ಹೇಳಲಾಗುತ್ತದೆ. ಕಂಡ ಕಂಡಲ್ಲಿ ಸಿಖ್ಖರನ್ನು ಜೀವಂತವಾಗಿ ಸುಡಲಾಯಿತು. ದೆಹಲಿಯಲ್ಲಿ ಹೆಚ್ಚಿನ ಪ್ರಮಾಣದ ಸಿಖ್ಖರು ಸಾವಿಗೀಡಾದರು. ಈ ಗಲಭೆಯ ಕೈವಾಡ ವಹಿಸಿದ್ದ ಕೆಲವು ಕಾಂಗ್ರೆಸ್‌ ನಾಯಕರಿಗೆ ಎಷ್ಟೋ ವರ್ಷಗಳ ನಂತರ ಶಿಕ್ಷೆಯಾಯಿತು. ಕೆಲವರು ಖುಲಾಸೆಯಾದರು.

ಇಷ್ಟೆಲ್ಲ ಆದ ಬಳಿಕ ಖಲಿಸ್ತಾನ ಚಳವಳಿಯ ಚಟುವಟಿಕೆಗಳು ನಿಂತವೇ ಎಂದು ನೀವು ಕೇಳಬಹುದು. ಸ್ವಲ್ಪ ಕಾಲ ಅವು ತಣ್ಣಗಾದವು ನಿಜ. ಆದರೆ ಮತ್ತೆ ಪ್ರತ್ಯೇಕತಾವಾದ ತನ್ನ ಹೆಡೆಗಳನ್ನು ಎತ್ತಿ ಫೂತ್ಕರಿಸಿತು. 1985ರ ಜೂನ್‌ನಲ್ಲಿ ಕೆನಡಾದಿಂದ ಬಾಂಬೆಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನವನ್ನು ಸಿಖ್‌ ಬಂಡುಕೋರರು ಆಕಾಶದಲ್ಲೇ ಸ್ಫೋಟಿಸಿದರು. ಅದರಲ್ಲಿದ್ದ ಎಲ್ಲ 329 ಪ್ರಯಾಣಿಕರು ಸುಟ್ಟುಹೋದರು.

ಮತ್ತೆ ಹೆಡೆ ಎತ್ತುತ್ತಲೇ ಇರುವ ಸರ್ಪ

1985ರ ಜುಲೈಯಲ್ಲಿ ಪ್ರಧಾನಿ ರಾಜೀವ್‌ ಗಾಂಧಿ ಮತ್ತು ಮೃದು ಧೋರಣೆಯ ಅಕಾಲಿ ದಳದ ನಾಯಕ ಹರ್ಚರಣ್‌ ಸಿಂಗ್‌ ಲೊಂಗ್ವೊಲಾ ಅವರು ಪಂಜಾಬ್‌ ಒಪ್ಪಂದಕ್ಕೆ ಸಹಿ ಹಾಕಿದರು. ಈ ಒಪ್ಪಂದದ ಪ್ರಕಾರ, ಕೇಂದ್ರ ಸರ್ಕಾರ ಅಕಾಲಿಗಳ ಕೆಲವು ಬೇಡಿಕೆ ಈಡೇರಿಕೆಗೆ ಒಪ್ಪಿತು. ಇದಕ್ಕೆ ಬದಲಾಗಿ ರಾಜಕೀಯ ಪ್ರತಿಭಟನೆಯನ್ನು ಅಕಾಲಿ ದಳ ಹಿಂಪಡೆಯಿತು. ಆದರೆ ಪ್ರತ್ಯೇಕತಾವಾದಿ ಚಟುವಟಿಕೆಗಳು ಮುಂದುವರಿದವು. ಅದೇ ವರ್ಷ ಆಗಸ್ಟ್‌ನಲ್ಲಿ ಲೊಂಗೋವಾಲ್ ಅವರನ್ನು ಉಗ್ರರು ಹತ್ಯೆ ಮಾಡಿದರು. ಆಪರೇಷನ್‌ ಬ್ಲೂಸ್ಟಾರ್‌ ನಡೆದ ಸಮಯದಲ್ಲಿ ಸೇನಾ ಮುಖ್ಯಸ್ಥರಾಗಿದ್ದ ಜನರಲ್‌ ಎ.ಎಸ್‌.ವೈದ್ಯ ಅವರನ್ನು 1986ರ ಆಗಸ್ಟ್‌ನಲ್ಲಿ ಪುಣೆಯಲ್ಲಿ ಭಯೋತ್ಪಾದಕರು ಹತ್ಯೆ ಮಾಡಿದರು.

ಇಷ್ಟಾದರೂ ಖಲಿಸ್ತಾನಿ ಚಟುವಟಿಕೆಗಳೆಲ್ಲ ನಿಲ್ಲಲಿಲ್ಲ. ಇದಾದ ನಂತರ ಆಪರೇಷನ್‌ ಬ್ಲೂ ಸ್ಟಾರ್‌ ಅನ್ನೇ ಹೋಲುವ, ಆಪರೇಷನ್‌ ಬ್ಲ್ಯಾಕ್‌ ಥಂಡರ್‌ ಎಂಬ ಹೆಸರಿನ ಕಾರ್ಯಾಚರಣೆಗಳನ್ನೂ ಭಾರತ ಸರ್ಕಾರ ನಡೆಸಿತು. ಆಪರೇಷನ್‌ ಬ್ಲೂ ಸ್ಟಾರ್‌ ವೇಳೆ ಅಳಿದುಳಿದ ಖಲಿಸ್ತಾನ್ ಉಗ್ರರು ಮತ್ತೆ ತಮ್ಮ ಕಾರ್ಯಾಚರಣೆಗೆ ಸ್ವರ್ಣಮಂದಿರವನ್ನೇ ಬಳಸಿಕೊಳ್ಳಲಾರಂಭಿಸಿದರು. ಇವರನ್ನು ಮಟ್ಟಹಾಕಲು ‘ಆಪರೇಷನ್‌ ಬ್ಲ್ಯಾಕ್‌ ಥಂಡರ್‌’ ನಡೆಸಲಾಯಿತು. 1986 ಏಪ್ರಿಲ್‌ನಲ್ಲಿ ಹಾಗೂ 1988 ಮೇ ತಿಂಗಳಲ್ಲಿ ಎರಡು ಬಾರಿ ಈ ಆಪರೇಷನ್‌ಗಳು ನಡೆದವು. ಇದಕ್ಕೆ ರಾಷ್ಟ್ರೀಯ ಭದ್ರತಾ ದಳದ ʼಬ್ಲ್ಯಾಕ್‌ ಕ್ಯಾಟ್‌’ ಕಮಾಂಡೊ ಯೋಧರನ್ನು ಬಳಸಿಕೊಳ್ಳಲಾಯಿತು. ಎರಡೂ ಆಪರೇಷನ್‌ಗಳ ನೇತೃತ್ವವನ್ನು ಪಂಜಾಬ್‌ ಪೊಲೀಸ್‌ ಡಿಜಿಪಿ ಆಗಿದ್ದ ಕೆ.ಪಿ.ಎಸ್.‌ ಗಿಲ್‌ ವಹಿಸಿದರು. ಅಳಿದುಳಿದ ಬಂಡುಕೋರರನ್ನು ಈ ಕಾರ್ಯಾಚರಣೆಗಳು ಮಟ್ಟಹಾಕುವಲ್ಲಿ ಯಶಸ್ವಿಯಾದವು ಎಂದು ಭಾವಿಸಲಾಯಿತು.

ಸೈನ್ಯದ ಮೇಜರ್‌ ಜನರಲ್‌ ಆಗಿದ್ದ ಲೆಫ್ಟಿನೆಂಟ್‌ ಕರ್ನಲ್‌ ಕುಲ್ದೀಪ್‌ ಸಿಂಗ್‌ ಬ್ರಾರ್‌ ಮತ್ತು ಪಂಜಾಬ್‌ನ ಪೊಲೀಸ್‌ ಮುಖ್ಯಸ್ಥರಾಗಿದ್ದ, ನಂತರ ರೊಮೇನಿಯಾದಲ್ಲಿ ಭಾರತೀಯ ರಾಯಭಾರಿಯಾದ ಜ್ಯೂಲಿಯೊ ರೆಬೆರೊ ಅವರ ಮೇಲೂ ಹಲವು ಬಾರಿ ಹತ್ಯೆ ಯತ್ನಗಳು ನಡೆದವು. 1995ರ ಆಗಸ್ಟ್‌ನಲ್ಲಿ ಪಂಜಾಬ್‌ನ ಮುಖ್ಯಮಂತ್ರಿಯಾಗಿದ್ದ ಬಿಯಂತ್‌ ಸಿಂಗ್‌ ಅವರನ್ನು ಖಲಿಸ್ತಾನಿ ಪ್ರೇರಿತ ಉಗ್ರಗಾಮಿಯೊಬ್ಬ ಆತ್ಮಹತ್ಯಾ ದಾಳಿ ನಡೆಸಿ ಹತ್ಯೆ ಮಾಡಿದ. ಇದರ ನಂತರ ಖಲಿಸ್ತಾನ ಚಳವಳಿ ಬಹುತೇಕ ತಣ್ಣಗಾಗಿದೆ ಎಂದೇ ಭಾವಿಸಲಾಗಿತ್ತು. ಆದರೆ ಕೆನಡಾದಲ್ಲಿ ನೆಲೆಯೂರಿ ಕುಳಿತ ಕೆಲವು ಖಲಿಸ್ತಾನ್‌ ಸಹಾನುಭೂತಿಪರ ನಾಯಕರು, ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಲೇ ಇದ್ದಾರೆ. ಅದಕ್ಕೆ ಪಾಕಿಸ್ತಾನ ಕೂಡಾ ಕುಮ್ಮಕ್ಕು ಕೊಡುತ್ತಿದೆ. ಇತ್ತೀಚಿನ ಉದಾಹರಣೆ ಎಂದರೆ ಸಿಖ್‌ ರೈತರು ದಿಲ್ಲಿಯಲ್ಲಿ ನಡೆಸಿದ ರೈತಕಾಯಿದೆ ವಿರೋಧಿ ಪ್ರತಿಭಟನೆಗಳಲ್ಲಿ ಸೇರಿಕೊಂಡ ಖಲಿಸ್ತಾನ್‌ ಶಕ್ತಿಗಳು. ಗಣರಾಜ್ಯೋತ್ಸವ ದಿನದಂದು ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಖಲಿಸ್ತಾನ್ ಧ್ವಜ ಹಾಗೂ ಭಿಂದ್ರನ್‌ವಾಲೆ ಪೋಸ್ಟರ್‌ಗಳು ರಾರಾಜಿಸಿದವು. ಇತ್ತೀಚೆಗೆ ಹಿಮಾಚಲ ಪ್ರದೇಶದಲ್ಲಿ ಸಹ ಖಲಿಸ್ತಾನ್‌ ಚಟುವಟಿಕೆ ಕಂಡುಬಂದಿದೆ. ʼಸಿಖ್ಸ್‌ ಫಾರ್‌ ಜಸ್ಟಿಸ್‌ʼ ಎಂಬ ಸಂಘಟನೆಯ ನಾಯಕ ಗುರುಪತವಂತ್‌ ಸಿಂಗ್‌ ಪನ್ನು ಎಂಬಾತನ ಮೇಲೆ ಈ ಕುರಿತು ಕೇಸುಗಳು ದಾಖಲಾಗಿವೆ. ಈ ಸಂಘಟನೆಯನ್ನು ನಿಷೇಧಿಸಲಾಗಿದೆ.

ಖಲಿಸ್ತಾನ್‌ ಚಳವಳಿ ಸತ್ತಿದೆ ನಿಜ. ಆದರೆ ಪ್ರತ್ಯೇಕತಾವಾದಿ ಶಕ್ತಿಗಳು ಆಗಾಗ ತಲೆ ಎತ್ತುತ್ತಲೇ ಇವೆ. ಆಪರೇಶನ್‌ ಬ್ಲೂಸ್ಟಾರ್‌ ದೇಶದ ಇತಿಹಾಸವನ್ನೇ ರಕ್ತದಲ್ಲಿ ಅದ್ದಿ ತೆಗೆದ ಘಟನೆ. ಪ್ರತ್ಯೇಕತಾವಾದ ಹೇಗೆ ಬೆಳೆಯುತ್ತದೆ, ಹೇಗೆ ದುರಂತದಲ್ಲಿ ಕೊನೆಗೊಳ್ಳುತ್ತದೆ ಎಂಬುದಕ್ಕೆ ಸಾಕ್ಷಿಯಾಗಿ ಆ ದುರಂತಮಯ ಸನ್ನಿವೇಶಗಳು ಸಾಕ್ಷಿಯಾಗಿ ನಿಂತಿವೆ.

ಇದನ್ನೂ ಓದಿ: Vistara Explainer: ಇಸ್ಲಾಮಿಕ್ ದೇಶಗಳ ಅಧಿಕ ಪ್ರಸಂಗ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

EXPLAINER

Dubai Airport : ದುಬೈನಲ್ಲಿ ನಿರ್ಮಾಣವಾಗುತ್ತಿದೆ ವಿಶ್ವದ ಅತಿ ದೊಡ್ಡ ಏರ್​ಪೋರ್ಟ್​​; ಏನಿದರ ವಿಶೇಷತೆ? ಎಲ್ಲ ಮಾಹಿತಿ ಇಲ್ಲಿದೆ

Dubai Airport: ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಅತಿದೊಡ್ಡ ಸಾಮರ್ಥ್ಯವನ್ನು ಹೊಂದಿರುತ್ತದೆ, 2.6 ಕೋಟಿ ಪ್ರಯಾಣಿಕರಿಗೆ ಸೌಲಭ್ಯ ಕಲ್ಪಿಸಲಿದೆ. ಇದು ಪ್ರಸ್ತುತ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗಾತ್ರಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ.

VISTARANEWS.COM


on

Dubai Airport
Koo

ನವದೆಹಲಿ: 2.92 ಲಕ್ಷ ಕೋಟಿ ರೂಪಾಯಿ (35 ಬಿಲಿಯನ್ ಡಾಲರ್) ವೆಚ್ಚದಲ್ಲಿ 400 ಗೇಟ್ ಗಳು ಮತ್ತು ಐದು ಸಮಾನಾಂತರ ರನ್ ವೇಗಳಿರುವ ವಿಶ್ವದ ಅತ್ಯಂತ ದೊಡ್ಡ ಏರ್​ಪೋರ್ಟ್​​ ನಿರ್ಮಾಣ (Dubai Airport) ಮಾಡುವುದಾಗಿ ದುಬೈ ಆಡಳಿತ ಭಾನುವಾರ ಪ್ರಕಟಿಸಿದೆ. ಅದಕ್ಕೆ ಅಲ್ ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ ಎಂದು ಹೆಸರಿಡುವುದಾಗಿ ಹೇಳಿದೆ.

“ಇಂದು, ನಾವು ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಪ್ರಯಾಣಿಕರ ಟರ್ಮಿನಲ್​ಗಳ ವಿನ್ಯಾಸಗಳನ್ನು ಅನುಮೋದಿಸಿದ್ದೇವೆ. ದುಬೈ ಏವಿಯೇಷನ್ ಕಾರ್ಪೊರೇಷನ್​​ನ ಕಾರ್ಯತಂತ್ರದ ಭಾಗವಾಗಿ 128 ಬಿಲಿಯನ್ ಡಾಲರ್ ವೆಚ್ಚದಲ್ಲಿ ಕಟ್ಟಡದ ನಿರ್ಮಾಣವನ್ನು ಪ್ರಾರಂಭಿಸಿದ್ದೇವೆ” ಎಂದು ದುಬೈ ಆಡಳಿತಗಾರ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಪ್ರಕಟಿಸಿದ್ದಾರೆ.

“ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಅತಿದೊಡ್ಡ ಸಾಮರ್ಥ್ಯವನ್ನು ಹೊಂದಿರುತ್ತದೆ, 2.6 ಕೋಟಿ ಪ್ರಯಾಣಿಕರಿಗೆ ಸೌಲಭ್ಯ ಕಲ್ಪಿಸಲಿದೆ. ಇದು ಪ್ರಸ್ತುತ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗಾತ್ರಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ. ಮುಂಬರುವ ವರ್ಷಗಳಲ್ಲಿ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಎಲ್ಲಾ ಕಾರ್ಯಾಚರಣೆಗಳನ್ನು ಅದಕ್ಕೆ ವರ್ಗಾಯಿಸಲಾಗುವುದು” ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ.

ಈ ವಿಮಾನ ನಿಲ್ದಾಣ ವಿಶ್ವದ ಅತಿ ದೊಡ್ಡ ನಿಲ್ದಾಣವಾಗುವ ವೇಳೆ ಅಲ್ಲಿ ಇರಬಹುದಾದ ಕೆಲವೊಂದು ಸೌಲಭ್ಯಗಳು ಹಾಗೂ ಇನ್ನಿತರ ಮಾಹಿತಿಗಳ ಬಗ್ಗೆ ಕುತೂಹಲ ಸೃಷ್ಟಿಯಾಗಿದೆ. ಆ ಕುರಿತು ಇಲ್ಲಿದೆ ಸಂಕ್ಷಿಪ್ತ ವಿವರ ಇಲ್ಲಿದೆ.

ಸಾಮರ್ಥ್ಯ ಎಷ್ಟು?


ಅಲ್ ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಹೆಚ್ಚು ಸಾಮರ್ಥ್ಯ ಹೊಂದಿರುವ ವಿಮಾನ ನಿಲ್ದಾಣವಾಗಲಿದೆ. ವಾರ್ಷಿಕವಾಗಿ 2.6 ಕೋಟಿ (260 ಮಿಲಿಯನ್) ಪ್ರಯಾಣಿಕರು ಈ ವಿಮಾನದ ಮೂಲಕ ಪ್ರಯಾಣ ಮಾಡಲಿದ್ದಾರೆ.

ಗಾತ್ರ ಎಷ್ಟು?
ಇದು ಪ್ರಸ್ತುತ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ.

ಮೂಲಸೌಕರ್ಯ ಹೇಗಿರುತ್ತದೆ?

ವಿಮಾನಗಳ ಸುಗಮ ಕಾರ್ಯಾಚರಣೆಗೆ ಅನುಕೂಲವಾಗುವಂತೆ ವಿಮಾನ ನಿಲ್ದಾಣವು 400 ವಿಮಾನ ಗೇಟ್ ಗಳನ್ನು ಹೊಂದಿರುತ್ತದೆ. ಏಕಕಾಲಕ್ಕೆ ಇಲ್ಲಿ ಅಷ್ಟೊಂದು ವಿಮಾನಗಳು ಪ್ರವೇಶಿಸಬಹುದು.

ರನ್ ವೇಗಳು ಎಷ್ಟು?

ವಿಮಾನಗಳ ಸಂಚಾರವನ್ನು ಸಮರ್ಥವಾಗಿ ನಿರ್ವಹಿಸಲು ಇದು ಐದು ಸಮಾನಾಂತರ ರನ್ ವೇಗಳನ್ನು ಹೊಂದಿರುತ್ತದೆ. ಒಂದೇ ಬದಿಯಲ್ಲಿ ಅಷ್ಟೊಂದು ವಿಮಾನಗಳು ಏಕಕಾಲಕ್ಕೆ ಟೇಕ್​ಆಫ್​ ಅಥವಾ ಲ್ಯಾಂಡಿಂಗ್ ಆಗಬಹುದು.

ಹೊಸತೇನು?

ಈ ವಿಮಾನ ನಿಲ್ದಾಣದಲಲಿ ಹೊಸ ವಾಯುಯಾನ ತಂತ್ರಜ್ಞಾನಗಳನ್ನು ಪರಿಚಯಿಸಲಾಗುತ್ತದೆ ಎಂದು ಅವರು ಹೇಳದಿ್ದಾರೆ. ಇದು ವಾಯುಯಾನ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಎಂದು ಹೇಲಾಗಿದೆ.

ವೆಚ್ಚ ಎಷ್ಟು?

ಈ ಯೋಜನೆಗೆ ಸುಮಾರು 2.9 ಲಕ್ಷ ಕೋಟಿ ರೂ. ವೆಚ್ಚವಾಗಲಿದೆ.

ಮುಗಿಯುವುದು ಯಾವಾಗ?

ವರ್ಷಕ್ಕೆ 150 ಮಿಲಿಯನ್ ಪ್ರಯಾಣಿಕರಿಗೆ ಸ್ಥಳಾವಕಾಶ ಕಲ್ಪಿಸುವ ಸಾಮರ್ಥ್ಯವಿರುವ ಮೊದಲ ಹಂತವು 10 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ಮುಂದುವರಿದ ಭಾಗವು ಆ ಬಳಿಕ ಸಾಗಲಿದೆ.

ಇದನ್ನೂ ಓದಿ: Pro-Khalistan slogan : ಕೆನಡಾ ಪ್ರಧಾನಿ ಟ್ರುಡೊ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ!

ಲಾಜಿಸ್ಟಿಕ್ಸ್ ಮತ್ತು ವಾಯು ಸಾರಿಗೆ ಕ್ಷೇತ್ರಗಳಲ್ಲಿ ವಿಶ್ವದ ಪ್ರಮುಖ ಕಂಪನಿಗಳಿಗೆ ಆತಿಥ್ಯ ವಹಿಸುವ “ದುಬೈ ದಕ್ಷಿಣದ ವಿಮಾನ ನಿಲ್ದಾಣದ ಸುತ್ತಲೂ” ಅವರು ಇಡೀ ನಗರವನ್ನು ನಿರ್ಮಿಸುತ್ತಿದ್ದಾರೆ. ಒಂದು ಮಿಲಿಯನ್ ಜನರಿಗೆ ಉಳಿದುಕೊಳ್ಳುವುದಕ್ಕೂ ಅವಕಾಶ ಮಾಡಿಕೊಡುತ್ತೇವೆ ಎಂದು ಆಡಳಿತಗಾರ ಹೇಳಿದ್ದರೆ.

“ನಾವು ಭವಿಷ್ಯದ ಪೀಳಿಗೆಗಾಗಿ ಹೊಸ ಯೋಜನೆಯನ್ನು ನಿರ್ಮಿಸುತ್ತಿದ್ದೇವೆ ನಮ್ಮ ಮಕ್ಕಳು ಮತ್ತು ಅವರ ಮಕ್ಕಳಿಗೆ ನಿರಂತರ ಮತ್ತು ಸ್ಥಿರ ಅಭಿವೃದ್ಧಿಯನ್ನು ಖಾತ್ರಿಪಡಿಸುತ್ತಿದ್ದೇವೆ. ದುಬೈ ವಿಶ್ವದ ವಿಮಾನ ನಿಲ್ದಾಣ, ಅದರ ಬಂದರು, ಅದರ ನಗರ ಕೇಂದ್ರ ಮತ್ತು ಅದರ ಹೊಸ ಜಾಗತಿಕ ಕೇಂದ್ರವಾಗಲಿದೆ.

Continue Reading

Lok Sabha Election 2024

Lok Sabha Election 2024: ಜೈಲಿನಲ್ಲಿರುವ ಅಮೃತಪಾಲ್ ಚುನಾವಣೆಗೆ ಸ್ಪರ್ಧಿಸಬಹುದು, ಕೇಜ್ರಿವಾಲ್ ಮತ ಚಲಾಯಿಸುವಂತಿಲ್ಲ! ಏನಿದು ನಿಯಮ?

Lok Sabha Election 2024: ಜೈಲಿನಲ್ಲಿರುವ ಇಬ್ಬರು ಖೈದಿಗಳಲ್ಲಿ ಒಬ್ಬರಿಗೆ 2024ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ನೀಡಲಾಗುತ್ತಿಲ್ಲ. ಏನಿದು ಚುನಾವಣೆ ಆಯೋಗದ ನಿಯಮ? ಇಲ್ಲಿದೆ ವಿಸ್ತೃತ ವಿವರಣೆ.

VISTARANEWS.COM


on

By

Lok Sabha Election-2024
Koo

ನವದೆಹಲಿ: ಪ್ರಪಂಚದಾದ್ಯಂತ ಚುನಾವಣೆಗಳಲ್ಲಿ (election) ವಿರೋಧಾಭಾಸಗಳು ಎದುರಾಗುತ್ತವೆ. ಇದರಲ್ಲಿ ಭಾರತವೂ ಹೊರತಾಗಿಲ್ಲ. ಇದೀಗ ಜೈಲಿನಲ್ಲಿರುವ (jail) ಇಬ್ಬರು ಕೈದಿಗಳಲ್ಲಿ (locked up) ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಸಿಕ್ಕಿದ್ದರೆ, ಇನ್ನೊಬ್ಬರಿಗೆ ಮತದಾನ (voting) ಮಾಡಲೂ ಅವಕಾಶ ನೀಡಲಾಗಿಲ್ಲ.

2024ರ ಲೋಕಸಭಾ ಚುನಾವಣೆಯ (Lok Sabha Election‌ 2024) ವೇಳೆ ಭಾರತದಲ್ಲಿ (india) ಅಂತಹ ಒಂದು ವಿರೋಧಾಭಾಸ ಕಾಣಿಸಿಕೊಂಡಿದೆ. 2,300 ಕಿ.ಮೀ. ದೂರದಲ್ಲಿರುವ ಎರಡು ವಿಭಿನ್ನ ಜೈಲುಗಳಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಇವರಲ್ಲಿ ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ನೀಡಿದ್ದರೆ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ಸಿಕ್ಕಿಲ್ಲ.

ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಅಮೃತಪಾಲ್ ಸಿಂಗ್ (Amritpal Singh) ಅಸ್ಸಾಂನ ದಿಬ್ರುಗಢ್ ಜೈಲಿನಲ್ಲಿದ್ದರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ತಿಹಾರ್ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ: Lok Sabha Election 2024: ದೇಶ, ರಾಜ್ಯಕ್ಕೆ ಬಿಜೆಪಿಯಿಂದ ಖಾಲಿ ಚೊಂಬು ಕೊಟ್ಟಿದ್ದಾರೆ: ರಾಹುಲ್‌ ಗಾಂಧಿ

ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾನೂನು ಅನುಮತಿ ನೀಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಂತಹ ಲಕ್ಷಾಂತರ ವಿಚಾರಣಾಧೀನ ಕೈದಿಗಳು ಮತ ಚಲಾಯಿಸಲು ಅನುಮತಿ ನೀಡಲಾಗಿಲ್ಲ. ಯಾಕೆಂದರೆ ಭಾರತ ಕಾನೂನು ಪ್ರಕಾರ ಭಾರತದಲ್ಲಿ ಜನರು ಜೈಲಿನಲ್ಲಿ ಇದ್ದು ಚುನಾವಣೆಗೆ ಸ್ಪರ್ಧಿಸಬಹುದು. ಆದರೆ ಜೈಲಿನಿಂದ ಮತ ಚಲಾಯಿಸಲು ಸಾಧ್ಯವಿಲ್ಲ!


ಅಮೃತ್ ಪಾಲ್ ಸ್ಪರ್ಧೆ

2023ರ ಏಪ್ರಿಲ್ 23ರಿಂದ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರು ಪಂಜಾಬ್‌ನ ಖಾದೂರ್ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ದಿಬ್ರುಗಢ ಕೇಂದ್ರ ಕಾರಾಗೃಹದಲ್ಲಿ ಭಾಯಿ ಸಾಹೇಬ್ ಅಮೃತಪಾಲ್ ಅವರನ್ನು ನಾನು ಭೇಟಿ ಮಾಡಿದ್ದೇನೆ. ಖಾಲ್ಸಾ ಪಂಥ್‌ನ ಹಿತಾಸಕ್ತಿಯಿಂದ ಅವರು ಈ ಬಾರಿ ಸಂಸದರಾಗಲು ಖದೂರ್ ಸಾಹಿಬ್‌ನಿಂದ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ನಾನು ಅವರಿಗೆ ವಿನಂತಿಸಿದೆ ಎಂದು ಅಮೃತಪಾಲ್ ಅವರ ವಕೀಲ ರಾಜದೇವ್ ಸಿಂಗ್ ಖಾಲ್ಸಾ ಈ ಹಿಂದೆ ಹೇಳಿದ್ದು, ಭಾಯಿ ಸಾಹೇಬ್ ಒಪ್ಪಿದ್ದಾರೆ ಮತ್ತು ಅವರು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಅವರು ಹೇಳಿದರು.

ಬಂಧನಕ್ಕೆ ಒಳಗಾಗಿರುವುದು ಏಕೆ?

ಅಮೃತಪಾಲ್ ಸಿಂಗ್ ಅವರನ್ನು ಪಂಜಾಬ್‌ನ ಮೋಗಾ ಜಿಲ್ಲೆಯ ರೋಡ್ ಗ್ರಾಮದಲ್ಲಿ ವರ್ಷದ ಹಿಂದೆ ಬಂಧಿಸಲಾಗಿತ್ತು. ಅಮೃತ್‌ಪಾಲ್ ಸಿಂಗ್ ಅವರು ಬೆಂಬಲಿಗರೊಂದಿಗೆ ಬಂದೂಕು ಮತ್ತು ಕತ್ತಿಗಳನ್ನು ಹಿಡಿದುಕೊಂಡು ಅಮೃತಸರದ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದರಿಂದ ಅವರನ್ನು ಬಂಧಿಸಲಾಯಿತು. ಪ್ರತ್ಯೇಕತಾವಾದಿ ಈತ.

ಜೈಲಿನಿಂದ ಸ್ಪರ್ಧಿಸಿದವರು, ಗೆದ್ದವರಿವರು

1996 ರಲ್ಲಿ, ಡಾನ್- ಟರ್ನ್ಡ್ ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರು ಜೈಲಿನಲ್ಲಿದ್ದಾಗ ಬಿಎಸ್ಪಿ ಟಿಕೆಟ್‌ನಲ್ಲಿ ಉತ್ತರ ಪ್ರದೇಶದ ಮೌ ಅಸೆಂಬ್ಲಿ ಸ್ಥಾನಕ್ಕೆ ಸ್ಪರ್ಧಿಸಿದರು. ಕಳೆದ ತಿಂಗಳು ನಿಧನರಾದ ಅನ್ಸಾರಿ ಅವರು ಜೈಲಿನಿಂದಲೇ ಚುನಾವಣೆಯಲ್ಲಿ ಗೆದ್ದಿದ್ದರು.

2005ರಲ್ಲಿ ಸೆರೆವಾಸದಲ್ಲಿದ್ದ ಮುಖ್ತಾರ್ ಅನ್ಸಾರಿ ಅವರು ಜೈಲಿನಿಂದ 2007, 2012 ಮತ್ತು ಮತ್ತೆ 2017 ರಲ್ಲಿ ಒಟ್ಟು ಮೂರು ಬಾರಿ ಮೌ ಅಸೆಂಬ್ಲಿ ಸ್ಥಾನವನ್ನು ಗೆದ್ದರು.

ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ 1998ರ ಲೋಕಸಭೆ ಚುನಾವಣೆ ವೇಳೆ ಮೇವು ಹಗರಣದಲ್ಲಿ ಜೈಲು ಸೇರಿದ್ದರು. ಬಿಹಾರದ ಮಾಧೇಪುರ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿ ಜೈಲಿನಲ್ಲಿದ್ದೇ ಗೆದ್ದಿದ್ದರು.


ಕೇಜ್ರಿವಾಲ್ ಮತದಾನ ಸಾಧ್ಯವಿಲ್ಲ

ಅಪರಾಧಗಳ ಆರೋಪ ಹೊತ್ತಿರುವ ಜನರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರೂ, ಅಪರಾಧಿಗಳೆಂದು ಸಾಬೀತಾಗದ ವಿಚಾರಣಾಧೀನ ಕೈದಿಗಳು ತಮ್ಮ ಮತವನ್ನು ಚಲಾಯಿಸಲು ಸಾಧ್ಯವಿಲ್ಲ.

ತಪ್ಪಿತಸ್ಥರೆಂದು ಸಾಬೀತಾಗದವರಿಗೂ ಭಾರತದಲ್ಲಿ ಜೈಲುಗಳಿಂದ ಮತದಾನ ಮಾಡಲು ಯಾವುದೇ ಅವಕಾಶವಿಲ್ಲ. 2019 ರ ಪ್ರವೀಣ್ ಕುಮಾರ್ ಚೌಧರಿ ವಿರುದ್ಧ ಭಾರತ ಚುನಾವಣಾ ಆಯೋಗದ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಕೈದಿಗಳಿಗೆ ಮತದಾನದ ಹಕ್ಕನ್ನು ಹೊಂದಿಲ್ಲ ಎಂದು ಪುನರುಚ್ಚರಿಸಿದೆ.

ಮೇ 25ರಂದು ದೆಹಲಿ ಮತದಾನ ನಡೆಯಲಿದೆ. ಏಪ್ರಿಲ್ 29 ರಂದು ಸುಪ್ರೀಂ ಕೋರ್ಟ್‌ ನೀಡುವ ತೀರ್ಪಿನ ಮೇಲೆ ಕೇಜ್ರಿವಾಲ್ ಮತ ಚಲಾಯಿಸಬಹುದೇ ಅಥವಾ ಇಲ್ಲವೇ ಎಂಬುದು ನಿರ್ಧಾರವಾಗಲಿದೆ.

ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಕೇಜ್ರಿವಾಲ್, ಬಹು ಕಸ್ಟಡಿ ವಿಸ್ತರಣೆಗಳು ಮತ್ತು ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ಅನಂತರ ಅವರನ್ನು ನವದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಬಿಡುಗಡೆಯಾಗದೆ ಇದ್ದರೆ ಹೇಮಂತ್ ಸೊರೆನ್ ಗೂ ಅವಕಾಶ ಇಲ್ಲ

ಭಾರತದಲ್ಲಿ ಐದು ಲಕ್ಷಕ್ಕೂ ಹೆಚ್ಚು ವಿಚಾರಣಾಧೀನ ಕೈದಿಗಳಿದ್ದು, ಅವರಿಗೂ ಮತ ಚಲಾಯಿಸಲು ಸಾಧ್ಯವಿಲ್ಲ. ಅಂತೆಯೇ, ಭೂ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಆದೇಶಿಸದಿದ್ದರೆ ಮತದಾನ ಮಾಡಲಾಗುವುದಿಲ್ಲ.

ತನ್ನ ಬಂಧನವನ್ನು ಪ್ರಶ್ನಿಸಿ ಹೇಮಂತ್ ಸೊರೆನ್ ಬುಧವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಯಾಕೆ ಈ ತಾರತಮ್ಯ?

2021 ರ ರಾಷ್ಟ್ರೀಯ ಅಪರಾಧ ವರದಿಗಳ ಬ್ಯೂರೋ (NCRB) ವರದಿಯ ಪ್ರಕಾರ, ಭಾರತದಾದ್ಯಂತ ವಿವಿಧ ಜೈಲುಗಳಲ್ಲಿ ಒಟ್ಟು 5,54,034 ಕೈದಿಗಳನ್ನು ಬಂಧಿಸಲಾಗಿದೆ. ಅಮೃತಪಾಲ್ ಸಿಂಗ್ ಅವರಿಗೆ ಇನ್ನೂ ಶಿಕ್ಷೆಯಾಗದ ಕಾರಣ ಅವರು ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಶಿಕ್ಷೆಗೊಳಗಾದವರು ಕೂಡ ಜೈಲು ಶಿಕ್ಷೆ ಮುಗಿದ ಆರು ವರ್ಷಗಳ ಬಳಿಕ ಚುನಾವಣೆಗೆ ಸ್ಪರ್ಧಿಸಬಹುದು.

ಅಮೃತಪಾಲ್ ಸಿಂಗ್ ಅವರಂತಹ ಜೈಲಿನಲ್ಲಿರುವ ವ್ಯಕ್ತಿಗಳು ತಮ್ಮ ಪ್ರತಿನಿಧಿಯ ಸಹಾಯದಿಂದ ಜೈಲಿನಿಂದಲೇ ನಾಮಪತ್ರ ಸಲ್ಲಿಸಬಹುದು. ಒಂದು ವೇಳೆ ಜೈಲಿನಲ್ಲಿರುವ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದರೆ, ತಜ್ಞರ ಪ್ರಕಾರ ಜೈಲಿನೊಳಗೆ ಪ್ರಮಾಣ ವಚನ ಬೋಧಿಸಲು ಅವಕಾಶವಿಲ್ಲದ ಕಾರಣ, ಪ್ರಮಾಣ ವಚನ ಸ್ವೀಕರಿಸಲು ಜೈಲಿನಿಂದ ಬಿಡುಗಡೆ ಮಾಡಬಹುದು.

ಆದರೆ ಜೈಲಿನಲ್ಲಿರುವ ವ್ಯಕ್ತಿಯ ಪರವಾಗಿ ಬೇರೆಯವರು ಮತವನ್ನು ಚಲಾಯಿಸಲು ಸಾಧ್ಯವಿಲ್ಲ. ಪತಿ ಅರವಿಂದ್ ಕೇಜ್ರಿವಾಲ್ ಬಂಧನದ ಅ ನಂತರ ಗಮನ ಸೆಳೆದಿರುವ ಸುನೀತಾ ಕೇಜ್ರಿವಾಲ್, ಎಎಪಿ ಪರ ಪ್ರಚಾರ ಮಾಡಲಿದ್ದಾರೆ.

ಪ್ರಜಾಪ್ರತಿನಿಧಿ ಕಾಯಿದೆ 1951ರ ಸೆಕ್ಷನ್ 62 (5) ಪ್ರಕಾರ ಯಾವುದೇ ವ್ಯಕ್ತಿ ಪೊಲೀಸರ ಕಾನೂನುಬದ್ಧ ವಶದಲ್ಲಿದ್ದರೆ ಅಥವಾ ಜೈಲಿನಲ್ಲಿ ಬಂಧಿಯಾಗಿದ್ದಲ್ಲಿ ಯಾವುದೇ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ.

Continue Reading

ಆರೋಗ್ಯ

 Ayushman Bharat Yojana: ಆಪತ್ಕಾಲದಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Ayushman Bharat Yojana: ಆಯುಷ್ಮಾನ್ ಭಾರತ್ ಯೋಜನೆಯು ಭಾರತದಲ್ಲಿ ಸಾರ್ವತ್ರಿಕ ಆರೋಗ್ಯ ರಕ್ಷಣೆಯತ್ತ ಮಹತ್ವದ ಹೆಜ್ಜೆ. ದುರ್ಬಲ ಕುಟುಂಬಗಳಿಗೆ ಹೆಚ್ಚು ಅಗತ್ಯವಿರುವ ಆರ್ಥಿಕ ರಕ್ಷಣೆಯನ್ನು ನೀಡುತ್ತದೆ. ಇದರ ನೋಂದಣಿ ಪ್ರಕ್ರಿಯೆ ಹೇಗಿರುತ್ತದೆ, ಇದರಿಂದ ಸಿಗುವ ಪ್ರಯೋಜನಗಳ ಮಾಹಿತಿ ಇಲ್ಲಿದೆ.

VISTARANEWS.COM


on

By

Ayushman Bharat Yojana
Koo

ಲಕ್ಷಾಂತರ ಭಾರತೀಯರಿಗೆ (indian) ಆರೋಗ್ಯ (health) ಸೇವೆಯನ್ನು (service) ಹೆಚ್ಚು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವ ಗುರಿ ಹೊಂದಿರುವ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ (Ayushman Bharat Yojana) ಪ್ರಯೋಜನ ಪಡೆಯುವುದು ಇನ್ನೂ ಹಲವಾರು ಮಂದಿಗೆ ಸವಾಲಾಗಿ ಪರಿಣಮಿಸಿದೆ. 2018ರಲ್ಲಿ ಜಾರಿಯಾಗಿರುವ ಆಯುಷ್ಮಾನ್ ಯೋಜನೆ ಇನ್ನೂ ಹಲವು ಮಂದಿಗೆ ಸರಿಯಾಗಿ ಅರ್ಥವೇ ಆಗಿಲ್ಲ. ಇದರಿಂದ ಸಾಕಷ್ಟು ಪರಿಣಾಮಕಾರಿಯಾಗಿ ಎಲ್ಲರನ್ನು ತಲುಪುವುದು ಸಾಧ್ಯವಾಗಿಲ್ಲ. ಭಾರತದಂತಹ ವಿಶಾಲ ಮತ್ತು ವೈವಿಧ್ಯಮಯವಾದ ದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವುದು ಸವಾಲಾಗಿದೆ. ಇದನ್ನು ಗುರುತಿಸಿ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಿತು. ಆಯುಷ್ಮಾನ್ ಭಾರತ್ ಯೋಜನೆಯು ಏನನ್ನು ಒಳಗೊಳ್ಳುತ್ತದೆ, ಆಯುಷ್ಮಾನ್ ಕಾರ್ಡ್ ಸೇರಿದಂತೆ ಅದರ ಪ್ರಯೋಜನಗಳಿಗಾಗಿ ಹೇಗೆ ನೋಂದಾಯಿಸಿಕೊಳ್ಳುವುದು ಎಂಬುದರ ಮಾಹಿತಿ ಇಲ್ಲಿದೆ.


ಏನಿದು ಆಯುಷ್ಮಾನ್ ಭಾರತ್ ಯೋಜನೆ?

ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (PMJAY) ಎಂದು ಕರೆಯಲ್ಪಡುವ ಆಯುಷ್ಮಾನ್ ಭಾರತ್ ಯೋಜನೆಯು ಭಾರತ ಸರ್ಕಾರವು ಪರಿಚಯಿಸಿದ ಪ್ರಮುಖ ಆರೋಗ್ಯ ಯೋಜನೆಯಾಗಿದೆ. ದುರಂತದ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಆರ್ಥಿಕ ರಕ್ಷಣೆ ನೀಡುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ, ಅರ್ಹ ಫಲಾನುಭವಿಗಳು ನಿಗದಿತ ಆಸ್ಪತ್ರೆಗಳಲ್ಲಿ ನಿರ್ದಿಷ್ಟ ಮೊತ್ತದವರೆಗೆ ನಗದು ರಹಿತ ಆರೋಗ್ಯ ಸೇವೆಗಳನ್ನು ಪಡೆಯಬಹುದು.

ಇದನ್ನೂ ಓದಿ: ORS: ಒಆರ್‌ಎಸ್‌ ಜೀವಜಲ; ಯಾರು, ಎಷ್ಟು ಪ್ರಮಾಣದಲ್ಲಿ ಸೇವಿಸಬಹುದು?

ನೋಂದಣಿ ಹೇಗೆ?

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಾಯಿಸಲು ಮೊದಲು ಅದರ ಬಗ್ಗೆ ತಿಳಿದುಕೊಳ್ಳಿ.

ಅರ್ಹತೆಯನ್ನು ಪರಿಶೀಲಿಸಿ

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಣಿ ನಡೆಸುವ ಮೊದಲು ಆಯುಷ್ಮಾನ್ ಭಾರತ್ ಯೋಜನೆ ಪಡೆಯುವ ಅರ್ಹತೆ ನಿಮಗಿದೆಯೇ ಎಂಬುದನ್ನು ತಿಳಿದುಕೊಳ್ಳಿ. ಇದು ಪ್ರಾಥಮಿಕವಾಗಿ ಸಾಮಾಜಿಕ ಆರ್ಥಿಕ ಅಂಶಗಳು ಮತ್ತು ಮನೆಯ ಆದಾಯವನ್ನು ಆಧರಿಸಿರುತ್ತದೆ.


ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರ

ಆಯುಷ್ಮಾನ್ ಭಾರತ್ ಯೋಜನೆಗಾಗಿ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸಲು ಸಾಮಾನ್ಯ ಸೇವಾ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ. ನಿಮ್ಮ ಪ್ರದೇಶದಲ್ಲಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರಗಳನ್ನು ಪತ್ತೆ ಮಾಡಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಲ್ಲಿಗೆ ಭೇಟಿ ಮಾಡಿ.

ಅಗತ್ಯ ದಾಖಲೆಗಳನ್ನು ಒದಗಿಸಿ

ನೋಂದಣಿ ಪ್ರಕ್ರಿಯೆಯಲ್ಲಿ ನಿಮ್ಮ ಅರ್ಹತೆಯನ್ನು ಸ್ಥಾಪಿಸಲು ನೀವು ಕೆಲವು ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಇವುಗಳು ಗುರುತಿನ ಪುರಾವೆ, ವಿಳಾಸ ಪುರಾವೆ ಮತ್ತು ಆದಾಯ ಪ್ರಮಾಣಪತ್ರವನ್ನು ಒಳಗೊಂಡಿರುತ್ತದೆ.

ಸಂಪೂರ್ಣ ನೋಂದಣಿ ಅರ್ಜಿ

ಒದಗಿಸಿದ ಮಾಹಿತಿಯ ನಿಖರತೆ ಮತ್ತು ಸಂಪೂರ್ಣತೆಯನ್ನು ಖಚಿತಪಡಿಸಿಕೊಳ್ಳಲು ಸಾಮಾನ್ಯ ಸೇವಾ ಕೇಂದ್ರದಲ್ಲಿ ಒದಗಿಸಲಾದ ನೋಂದಣಿ ಫಾರ್ಮ್ ಅನ್ನು ಭರ್ತಿ ಮಾಡಿ. ನಿಮ್ಮ ಕುಟುಂಬದ ಸದಸ್ಯರು, ಆದಾಯ ಮತ್ತು ಇತರ ಸಂಬಂಧಿತ ಮಾಹಿತಿಯ ಕುರಿತು ವಿವರಗಳನ್ನು ಒದಗಿಸಿ.

ಪರಿಶೀಲನೆ ಪ್ರಕ್ರಿಯೆ

ನೋಂದಣಿ ಫಾರ್ಮ್ ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಅನಂತರ ಅಧಿಕಾರಿಗಳು ಆಯುಷ್ಮಾನ್ ಭಾರತ್ ಯೋಜನೆಗೆ ನಿಮ್ಮ ಅರ್ಹತೆಯನ್ನು ಪರಿಶೀಲಿಸುತ್ತಾರೆ. ಈ ಪರಿಶೀಲನಾ ಪ್ರಕ್ರಿಯೆಯು ಸರ್ಕಾರಿ ಡೇಟಾಬೇಸ್‌ಗಳೊಂದಿಗೆ ಒದಗಿಸಲಾದ ಮಾಹಿತಿಯನ್ನು ಕ್ರಾಸ್-ಚೆಕ್ ಮಾಡುವುದನ್ನು ಒಳಗೊಂಡಿರುತ್ತದೆ.

ಆಯುಷ್ಮಾನ್ ಕಾರ್ಡ್ ಸ್ವೀಕರಿಸಿ

ಅರ್ಹತೆಯ ಯಶಸ್ವಿ ಪರಿಶೀಲನೆಯ ಅನಂತರ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಹೊಂದಿರುವ ಆಯುಷ್ಮಾನ್ ಕಾರ್ಡ್ ಅನ್ನು ನಿಮಗೆ ನೀಡಲಾಗುತ್ತದೆ. ಈ ಕಾರ್ಡ್ ಯೋಜನೆಯಲ್ಲಿ ನಿಮ್ಮ ದಾಖಲಾತಿಗೆ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಎಂಪನೆಲ್ಡ್ ಆಸ್ಪತ್ರೆಗಳಲ್ಲಿ ನಗದು ರಹಿತ ಆರೋಗ್ಯ ಸೇವೆಗಳನ್ನು ಪ್ರವೇಶಿಸಲು ಅನುಮತಿ ನೀಡುತ್ತದೆ.

doctor

ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳಿ

ಆಯುಷ್ಮಾನ್ ಕಾರ್ಡ್‌ನೊಂದಿಗೆ ನೀವು ಇದೀಗ ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಯಾವುದೇ ಎಂಪನೆಲ್ ಮಾಡಲಾದ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳನ್ನು ಪಡೆಯಬಹುದು. ನಗದು ರಹಿತ ಚಿಕಿತ್ಸಾ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಿಮ್ಮ ಕಾರ್ಡ್ ಅನ್ನು ಆಸ್ಪತ್ರೆಯ ಸ್ವಾಗತ ವಿಭಾಗದಲ್ಲಿ ನೀಡಿ.

ಪ್ರಯೋಜನಗಳು ಏನೇನು?

ಆಯುಷ್ಮಾನ್ ಕಾರ್ಡ್‌ ಹೊಂದಿರುವುದರಿಂದ ಪ್ರಮುಖ ಪ್ರಯೋಜನಗಳು ಇಂತಿವೆ.

ದುರ್ಬಲ ಕುಟುಂಬಗಳಿಗೆ ರಕ್ಷಣೆ

ಆಯುಷ್ಮಾನ್ ಭಾರತ್ ಯೋಜನೆಯು ಭಾರತದಾದ್ಯಂತ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹೆಚ್ಚಿನ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕ ರಕ್ಷಣೆ ನೀಡುತ್ತದೆ.

ನಗದು ರಹಿತ ಚಿಕಿತ್ಸೆ

ಯೋಜನೆಯ ಫಲಾನುಭವಿಗಳು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿ ನಿಗದಿತ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದು.

ವ್ಯಾಪಕ ಆಸ್ಪತ್ರೆ ನೆಟ್‌ವರ್ಕ್

ಅಯುಷ್ಮಾನ್ ಯೋಜನೆಯು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳನ್ನು ಒಳಗೊಂಡಂತೆ ನಿಗದಿತ ಆಸ್ಪತ್ರೆಗಳ ವ್ಯಾಪಕ ಜಾಲವನ್ನು ಹೊಂದಿದೆ. ಇದು ದೇಶದಾದ್ಯಂತ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಪಡೆಯಲು ಸಹಕರಿಸುತ್ತದೆ.

Ayushman Card

ಆಯುಷ್ಮಾನ್ ಕಾರ್ಡಗೆ ಅಗತ್ಯವಿರುವ ದಾಖಲೆಗಳು

1. ನಿವಾಸದ ಗುರುತು ಪತ್ರ
2. ವಯಸ್ಸು ಮತ್ತು ಗುರುತಿನ ಪುರಾವೆ- ಉದಾಹರಣೆಗೆ ಆಧಾರ್ ಕಾರ್ಡ್ ಅಥವಾ ಪ್ಯಾನ್ ಕಾರ್ಡ್
3. ಜಾತಿ ಪ್ರಮಾಣಪತ್ರ
4. ಸಂಪರ್ಕ ಮಾಹಿತಿ- ಮೊಬೈಲ್ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ
5. ಆದಾಯ ಪ್ರಮಾಣ ಪತ್ರ
6. ಪ್ರಸ್ತುತ ಕುಟುಂಬದ ಸ್ಥಿತಿಯನ್ನು ಸೂಚಿಸುವ ದಾಖಲೆಗಳು

Continue Reading

ವಾಣಿಜ್ಯ

Donkey milk: ಕತ್ತೆ ಹಾಲು ಲೀಟರ್‌ಗೆ 7000 ರೂ! ಈ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌?

Donkey milk: ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ. ಗುಜರಾತ್‌ನಲ್ಲಿ ಧೀರೇನ್ ಸೋಲಂಕಿ ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇಷ್ಟಕ್ಕೂ ಈ ಕತ್ತೆ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌? ಇದರ ಹಿನ್ನೆಲೆ ಏನು? ಇಲ್ಲಿದೆ ಕುತೂಹಲಕರ ಮಾಹಿತಿ.

VISTARANEWS.COM


on

By

donkey milk
Koo

ಹಾಲು (milk) ಮಾರಾಟ ಮಾಡಿ ತಿಂಗಳಿಗೊಂದು ಎಷ್ಟು ಆದಾಯ ಗಳಿಸಬಹುದು? ಅಬ್ಬಬ್ಬಾ ಎಂದರೆ 10 ಸಾವಿರ ರೂ. ಗಡಿ ದಾಟಿದರೆ ಬಹುದೊಡ್ಡದು. ಆದರೆ ಇಲ್ಲೊಬ್ಬರು ಹಾಲು ಮಾರಾಟದಿಂದಲೇ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಆದರೆ ಇವರು ಮಾರುತ್ತಿರುವ ಹಾಲು ಹಸುವಿನದಲ್ಲ (cow) ಕತ್ತೆಯದ್ದು (Donkey milk).

ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ (white gold). ಗುಜರಾತ್‌ನಲ್ಲಿ (gujarat) ಧೀರೇನ್ ಸೋಲಂಕಿ ( Dhiren Solanki) ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.

ಪಟಾನ್ ಜಿಲ್ಲೆಯಲ್ಲಿ 42 ಕತ್ತೆಗಳಿರುವ ಫಾರ್ಮ್ ಹೊಂದಿರುವ ಧೀರೇನ್ ಸೋಲಂಕಿ, ದಕ್ಷಿಣ ಪ್ರದೇಶಗಳಲ್ಲಿನ ಗ್ರಾಹಕರಿಗೆ ಬೆಲೆಬಾಳುವ ಹಾಲನ್ನು ಮಾರಾಟ ಮಾಡುವ ಮೂಲಕ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ.

ಇದನ್ನೂ ಓದಿ: Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

ಸುಮಾರು ಎಂಟು ತಿಂಗಳ ಹಿಂದೆ ಕೇವಲ 20 ಕತ್ತೆಗಳೊಂದಿಗೆ 22 ಲಕ್ಷ ರೂ.ಗಳ ಆರಂಭಿಕ ಹೂಡಿಕೆ ಮಾಡಿರುವ ಸೋಲಂಕಿ ಈಗ ಕೋಟ್ಯಂತರ ಮೌಲ್ಯದ ಹಾಲು ವ್ಯಾಪಾರ ನಡೆಸುತ್ತಿದ್ದಾರೆ.

ಪ್ರಾರಂಭದಲ್ಲಿ ಸವಾಲು

ಗುಜರಾತ್‌ ನಲ್ಲಿ ಕತ್ತೆ ಹಾಲಿಗೆ ಹೆಚ್ಚು ಬೇಡಿಕೆ ಇಲ್ಲದ ಕಾರಣ ಪ್ರಾರಂಭಿಸಿದ ಐದು ತಿಂಗಳು ಸೋಲಂಕಿ ಅವರು ತುಂಬಾ ಕಷ್ಟ ಪಟ್ಟಿದ್ದರು. ಅದರ ಅನಂತರ ಅವರು ದಕ್ಷಿಣ ಭಾರತದಲ್ಲಿ ಕತ್ತೆ ಹಾಲಿನ ಹೆಚ್ಚಿನ ಅಗತ್ಯತೆ ಇರುವಲ್ಲಿ ತಮ್ಮ ವ್ಯಾಪ್ತಿಯನ್ನು ಬೆಳೆಸುವ ನಿರ್ಧಾರವನ್ನು ಮಾಡಿದರು.

ಪ್ರಸ್ತುತ ಅವರು ಕತ್ತೆ ಹಾಲನ್ನು ಹೆಚ್ಚಾಗಿ ಕರ್ನಾಟಕ ಮತ್ತು ಕೇರಳ ರಾಜ್ಯಗಳಿಗೆ ಒದಗಿಸುತ್ತಿದ್ದಾರೆ. ಅವರ ಕೆಲವು ಗ್ರಾಹಕರು ಕತ್ತೆಗಳ ಹಾಲನ್ನು ಬಳಸುವ ಸೌಂದರ್ಯವರ್ಧಕ ಸಂಸ್ಥೆಗಳಾಗಿವೆ.


ಲೀಟರ್‌ಗೆ 5ರಿಂದ 7 ಸಾವಿರ ರೂ.

ಸೋಲಂಕಿ ಪ್ರಕಾರ ಕತ್ತೆ ಹಾಲು ಮಾರುಕಟ್ಟೆಯಲ್ಲಿ ಪ್ರತಿ ಲೀಟರ್‌ಗೆ 5,000 ರಿಂದ 7,000 ರೂ. ಗೆ ಮಾರಾಟವಾಗುತ್ತಿದೆ. ಹಸುವಿನ ಹಾಲಿಗೆ ಹೋಲಿಸಿದರೆ ಲೀಟರ್‌ಗೆ 65 ರೂ. ಗೆ ಮಾರಾಟವಾಗುತ್ತದೆ. ಹಾಲಿನ ತಾಜಾತನವನ್ನು ಕಾಪಾಡಲು ರೆಫ್ರಿಜರೇಟರ್‌ಗಳಲ್ಲಿ ಇರಿಸಲಾಗುತ್ತದೆ.

ದುಬಾರಿಯಾಗಲು ಕಾರಣ

ಕತ್ತೆಯ ಹಾಲಿನ ಬಗ್ಗೆ ಜನಪ್ರಿಯತೆ ಈಗಷ್ಟೇ ಬೆಳೆಯುತ್ತಿದೆ. ಬಹುತೇಕ ಫಾರ್ಮ್‌ಗಳು ಚಿಕ್ಕದಾಗಿದ್ದು, ಐದರಿಂದ 30 ಹಾಲು ಕರೆಯುವ ಕತ್ತೆಗಳನ್ನು ಒಳಗೊಂಡಿರುತ್ತದೆ. ಪ್ರತಿ ದಿನವೂ ಸರಿಸುಮಾರು ನಾಲ್ಕು ಕಪ್ ಅಂದರೆ ಒಂದು ಲೀಟರ್ ಹಾಲನ್ನು ಮಾತ್ರ ಉತ್ಪಾದಿಸಲಾಗುತ್ತದೆ. ಹೀಗಾಗಿ ಹಾಲು ಸ್ವಲ್ಪ ದುಬಾರಿಯಾಗಿದೆ ಮತ್ತು ಪಡೆಯುವುದು ಕಷ್ಟವಾಗುತ್ತದೆ.

ಕತ್ತೆ ಹಾಲಿನ ಪ್ರಯೋಜನಗಳು

ಕತ್ತೆ ಹಾಲಿನ ಬಳಕೆ ಸುಮಾರು 10 ಸಾವಿರ ವರ್ಷಗಳಿಂದಲೂ ಇದೆ. ಅದರ ಪೌಷ್ಟಿಕಾಂಶ ದಿಂದಾಗಿ ಸೌಂದರ್ಯವರ್ಧಕಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಹಲವಾರು ಆರೋಗ್ಯ ಪ್ರಯೋಜನಗಳಿಂದಾಗಿ ಇದು ಇತ್ತೀಚಿನ ದಿನಗಳಲ್ಲಿ ಇದಕ್ಕೆ ಮತ್ತೆ ಬೇಡಿಕೆ ಹೆಚ್ಚಾಗುತ್ತಿದೆ.

ಕತ್ತೆ ಹಾಲಿನ ಇತಿಹಾಸ

ಹಿಂದಿನ ಕಾಲದಲ್ಲಿ ಶಿಶುಗಳ ಆಹಾರಕ್ಕಾಗಿ ಕತ್ತೆ ಹಾಲನ್ನು ಬಳಸುವುದು ಸಾಮಾನ್ಯವಾಗಿತ್ತು. ಈಜಿಪ್ಟಿನ ರಾಣಿ ಕ್ಲಿಯೋಪಾತ್ರ ಕೂಡ ಅದನ್ನು ಇಷ್ಟಪಟ್ಟಿದ್ದಳು. ಅವಳು ತನ್ನ ಚರ್ಮದ ಕಾಂತಿಯನ್ನು ಕಾಪಾಡಿಕೊಳ್ಳಲು ಕತ್ತೆ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದಳು. ದಂತಕಥೆಯ ಪ್ರಕಾರ ಅವಳಿಗೆ ನಿತ್ಯ ಅಗತ್ಯವಾದ ಹಾಲು ಒದಗಿಸಲು ಸುಮಾರು 700 ಕತ್ತೆಗಳು ಬೇಕಾಗಿದ್ದವು ಎನ್ನಲಾಗುತ್ತದೆ.

ಕತ್ತೆ ಹಾಲು ಮುಖದ ಚರ್ಮದಿಂದ ಸುಕ್ಕುಗಳನ್ನು ನಿವಾರಿಸುತ್ತದೆ. ಚರ್ಮವನ್ನು ಮೃದು ಮತ್ತು ಬಿಳಿಯನ್ನಾಗಿ ಮಾಡುತ್ತದೆ ಎಂದು ನಂಬಲಾಗಿದೆ. ರೋಮನ್ ಚಕ್ರವರ್ತಿ ನೀರೋನ ಹೆಂಡತಿ ಪೊಪ್ಪಿಯಾ ಸ್ನಾನಕ್ಕೂ ಸಹ ಕತ್ತೆ ಬಳಸುತ್ತಿದ್ದಳು. ಈ ಕಾರಣಕ್ಕಾಗಿ, ಅವಳು ಪ್ರಯಾಣ ಮಾಡುವಾಗ ಕತ್ತೆಗಳ ಹಿಂಡುಗಳನ್ನು ಜೊತೆಗೆ ಕೊಂಡೊಯ್ಯುತ್ತಿದ್ದಳು.

ಕತ್ತೆ ಹಾಲಿನ ವಿಶೇಷತೆ

ಕತ್ತೆ ಹಾಲು ಹಸುವಿನ ಹಾಲು ಮತ್ತು ಮಾನವ ಎದೆ ಹಾಲು ಹಲವಾರು ಪೌಷ್ಟಿಕಾಂಶಗಳನ್ನು ಹೊಂದಿದೆ. ಪ್ರೋಟೀನ್ ಜೊತೆಗೆ ಇದು ಜೀವಸತ್ವ, ವಿಶೇಷವಾಗಿ ವಿಟಮಿನ್ ಡಿ ಮತ್ತು ಖನಿಜಗಳನ್ನು ಒಳಗೊಂಡಿರುತ್ತದೆ. ಕತ್ತೆ ಹಾಲು ಕಡಿಮೆ ಕೊಬ್ಬು ಮತ್ತು ಕ್ಯಾಲೋರಿಗಳನ್ನು ಹೊಂದಿದ್ದು, ಇವುಗಳಲ್ಲಿ ಹೆಚ್ಚಿನವು ಕಾರ್ಬೋಹೈಡ್ರೇಟ್‌ಗಳಿಂದ ಲ್ಯಾಕ್ಟೋಸ್ ಹಾಲಿನಲ್ಲಿರುವ ಸಕ್ಕರೆಯ ರೂಪದಲ್ಲಿರುತ್ತದೆ.

ಹಸುವಿನ ಹಾಲಿನ ಪ್ರೋಟೀನ್ ಅಲರ್ಜಿಯನ್ನು ಹೊಂದಿರುವ ಅನೇಕ ಜನರು ಕತ್ತೆ ಹಾಲನ್ನು ಅದರ ಕಡಿಮೆ ಕ್ಯಾಸೀನ್ ಮಟ್ಟದಿಂದ ಸೇವಿಸಬಹುದು. ಏಕೆಂದರೆ ಕತ್ತೆ ಹಾಲು ಅಲರ್ಜಿಯ ಪ್ರತಿಕ್ರಿಯೆಯನ್ನು ಉಂಟುಮಾಡುವುದಿಲ್ಲ.


ಕತ್ತೆ ಹಾಲಿನಲ್ಲಿ ಲ್ಯಾಕ್ಟೋಸ್, ಕ್ಯಾಲ್ಸಿಯಂ ಅನ್ನು ಒಳಗೊಂಡಿದ್ದು, ಬಲವಾದ ಮೂಳೆಗಳಿಗೆ ಅಗತ್ಯವಾದ ಖನಿಜಾಂಶವನ್ನು ಇದು ಒಳಗೊಂಡಿದೆ.

2010ರ ಪ್ರಯೋಗಾಲಯದ ಅಧ್ಯಯನದ ಪ್ರಕಾರ ಕತ್ತೆ ಹಾಲು ಸೈಟೊಕಿನ್‌ಗಳ ಬಿಡುಗಡೆಯನ್ನು ಹೆಚ್ಚಿಸುತ್ತದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುವ ಪ್ರೋಟೀನ್‌ಗಳಾಗಿವೆ. ಹಾಲು ನೈಟ್ರಿಕ್ ಆಕ್ಸೈಡ್ ಅನ್ನು ಉತ್ಪಾದಿಸಲು ಜೀವಕೋಶಗಳಿಗೆ ಕಾರಣವಾಗುತ್ತದೆ. ಇದು ರಕ್ತನಾಳಗಳನ್ನು ಹಿಗ್ಗಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಿ ರಕ್ತದ ಹರಿವನ್ನು ಸುಧಾರಿಸುತ್ತದೆ.

Continue Reading
Advertisement
World Laughter Day
ಆರೋಗ್ಯ14 mins ago

World Laughter Day 2024: ಇಂದು ವಿಶ್ವ ನಗುವಿನ ದಿನ; ನಗುನಗುತ ಬಾಳೋಣ

Dina Bhavishya
ಭವಿಷ್ಯ14 mins ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

HD Revanna
ಕರ್ನಾಟಕ5 hours ago

HD Revanna: ಛೇ, ಎಂಥ ಸ್ಥಿತಿ ಬಂತಪ್ಪ; ಎಸ್‌ಐಟಿ ಸೆಲ್‌ನಲ್ಲಿ ಗಳಗಳನೆ ಅತ್ತ ಎಚ್‌.ಡಿ.ರೇವಣ್ಣ

Road Accident
ಕರ್ನಾಟಕ5 hours ago

Road Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

Virat kohli
ಪ್ರಮುಖ ಸುದ್ದಿ5 hours ago

IPL 2024 : ಟೀಕೆಗಳಿಗೆ ಪ್ರತಿಕ್ರಿಯಿಸುವುದು ಯಾಕೆ? ಕೊಹ್ಲಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗವಾಸ್ಕರ್​

IPL 2024
ಕ್ರೀಡೆ6 hours ago

IPL 2024 : ಅತಿ ವೇಗದ ಬೌಲರ್​ ಮಯಾಂಕ್ ಐಪಿಎಲ್​ನಿಂದ ಔಟ್​​

HD Revanna
ಕರ್ನಾಟಕ6 hours ago

HD Revanna: ಎಸ್‌ಐಟಿ ಸೆಲ್‌ನಲ್ಲೇ ‘ಮೊದಲ ರಾತ್ರಿ’ ಕಳೆಯಲಿರುವ ರೇವಣ್ಣ; ಬೆಳಗ್ಗೆ ಜಡ್ಜ್‌ ಎದುರು ಹಾಜರ್!

IPL 2024
ಕ್ರೀಡೆ6 hours ago

IPL 2024 : ಅಭಿಮಾನಿಗಳಿಗೆ ಸತಾಯಿಸಿ ಖುಷಿ ಕೊಟ್ಟ ಆರ್​ಸಿಬಿ, ಗುಜರಾತ್​ ವಿರುದ್ಧ 4 ವಿಕೆಟ್​ ಜಯ

Dingaleshwar Swamiji
ಕರ್ನಾಟಕ6 hours ago

Dingaleshwar Swamiji: ದ್ವೇಷ ಭಾಷಣ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್

Virat kohli
ಕ್ರೀಡೆ6 hours ago

Virat kohli : ಸಿಕ್ಸರ್ ಹೊಡೆದು ಕಿಂಗ್​ ಥರ ಪೋಸ್​​ ಕೊಟ್ಟ ಕೊಹ್ಲಿ, ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ15 mins ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌