Fact Check: ಸೌದಿ ಅರೇಬಿಯಾದಲ್ಲಿ ನರೇಂದ್ರ ಮೋದಿ ಚಿನ್ನದ ಪುತ್ಥಳಿ ಕೆತ್ತನೆ ಮಾಡಲಾಗಿದೆಯೇ? - Vistara News

Fact Check

Fact Check: ಸೌದಿ ಅರೇಬಿಯಾದಲ್ಲಿ ನರೇಂದ್ರ ಮೋದಿ ಚಿನ್ನದ ಪುತ್ಥಳಿ ಕೆತ್ತನೆ ಮಾಡಲಾಗಿದೆಯೇ?

Fact Check: ಪ್ರಧಾನಿ ನರೇಂದ್ರ ಮೋದಿ ಅವರ ಚಿನ್ನದ ಪುತ್ಥಳಿಯನ್ನು ಸೌದಿ ಅರೇಬಿಯಾದಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಆದರೆ, ಈ ಸುದ್ದಿ ಎಷ್ಟು ನಿಜ?

VISTARANEWS.COM


on

Narendra Modi Gold Bust
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಸಾಮಾಜಿಕ ಜಾಲತಾಣವು ಸಕಲ ಮಾಹಿತಿಯ ಕಣಜ ಆಗಿದೆ. ಎಲ್ಲರಿಗೂ ಈಗ ಸಾಮಾಜಿಕ ಜಾಲತಾಣಗಳು ಅವಿಭಾಜ್ಯವಾಗಿವೆ. ಸಮಾಜದ ಮೇಲೆ, ಸರ್ಕಾರದ ಮೇಲೆ ಪರಿಣಾಮ ಬೀರುವಷ್ಟು ಸಾಮಾಜಿಕ ಜಾಲತಾಣಗಳು ಪ್ರಬಲವಾಗಿವೆ. ಹಾಗೆಯೇ, ನಕಲಿ ಸುದ್ದಿಗಳ ಹರಡುವಿಕೆಯ ಫ್ಯಾಕ್ಟರಿಗಳಾಗಿಯೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳಲಾಗುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಸೌದಿ ಅರೇಬಿಯಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚಿನ್ನದ ಪುತ್ಥಳಿಯನ್ನು (Narendra Modi Gold Bust) ಕೆತ್ತಲಾಗಿದೆ ಎಂಬ ಸುದ್ದಿ ಹರಡಿದೆ. ಆದರೆ ಈ ಸುದ್ದಿ ವಾಸ್ತವಕ್ಕೆ ಹತ್ತಿರವಾಗಿಲ್ಲ ಎಂಬುದು ಮಹತ್ವದ (Fact Check) ಸಂಗತಿಯಾಗಿದೆ.

ಏನಿದು ವದಂತಿ?

ಸೌದಿ ಅರೇಬಿಯಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚಿನ್ನದ ಮೂರ್ತಿಯನ್ನು ಕೆತ್ತಲಾಗಿದೆ. ಇದು 156 ಗ್ರಾಂ ಇದೆ ಎಂಬ ಫೋಟೊ ಹಾಗೂ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗಿದೆ. ಕೆಲ ದಿನಗಳ ಹಿಂದಷ್ಟೇ ಸೌದಿ ಅರೇಬಿಯಾ ರಾಜ ಮೊಹಮ್ಮದ್‌ ಬಿನ್‌ ಸಲ್ಮಾನ್‌ ಅವರು ದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಗೆ ಬಂದು, ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಇದರ ಬೆನ್ನಲ್ಲೇ, ಭಾರತ ಹಾಗೂ ಸೌದಿ ಅರೇಬಿಯಾ ಸಂಬಂಧದ ಪ್ರತೀಕವಾಗಿ ಮೋದಿ ಚಿನ್ನದ ಪುತ್ಥಳಿ ಕೆತ್ತಲಾಗಿದೆ ಎಂಬ ವದಂತಿ ಹರಡಿಸಲಾಗಿದೆ.

ವಾಸ್ತವ ಏನು?

ಸೂರತ್​: 2022ರ ಡಿಸೆಂಬರ್​​ನಲ್ಲಿ ನಡೆದಿದ್ದ ಗುಜರಾತ್ ವಿಧಾನಸಭಾ​​ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ್ದಕ್ಕೆ ಫುಲ್​ ಖುಷಿಯಾದ ಸೂರತ್​​ನ ಆಭರಣ ವ್ಯಾಪಾರಿಯೊಬ್ಬರು, 18 ಕ್ಯಾರೆಟ್​ ಚಿನ್ನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪುತ್ಥಳಿಯನ್ನು ಕೆತ್ತನೆ ಮಾಡಿಸಿದ್ದಾರೆ. ಆದರೆ ಈ ವಿಡಿಯೊವನ್ನು ಸೌದಿ ಅರೇಬಿಯಾದಲ್ಲಿ ಮೋದಿ ಚಿನ್ನದ ಮೂರ್ತಿಯನ್ನು ಕೆತ್ತಲಾಗಿದೆ ಎಂದು ಸುಳ್ಳು ಹರಡಿಸಲಾಗಿದೆ ಎಂದು ಹಲವು ಮಾಧ್ಯಮ ಸಂಸ್ಥೆಗಳು ನಡೆಸಿದ ಫ್ಯಾಕ್ಟ್‌ಚೆಕ್‌ನಲ್ಲಿ ಗೊತ್ತಾಗಿದೆ.

8 ತಿಂಗಳ ಹಿಂದಿನ ವಿಡಿಯೊ

ಇದನ್ನೂ ಓದಿ: Fact Check: ಜಿ20 ಸಭೆಗೂ ಮುನ್ನ ಮೋದಿಯ ಬೃಹತ್‌ ಕಟೌಟ್‌ ಫೋಟೊ ವೈರಲ್;‌ ಈ ಸುದ್ದಿ ನಿಜವೇ?

ಸೂರತ್​ನ ಚಿನ್ನಾಭರಣ ಉದ್ಯಮಿಯಾದ, ರಾಧಿಕಾ ಚೈನ್ಸ್​​ನ ಮಾಲೀಕ ಬಸಂತ್​ ಬೋಹ್ರಾ ಎಂಬುವರು ಈಗ ಪ್ರಧಾನಿ ನರೇಂದ್ರ ಮೋದಿಯವರ ಚಿನ್ನದ ಪ್ರತಿಮೆ ಕೆತ್ತನೆ ಮಾಡಿಸಿ ಸುದ್ದಿಯಾಗಿದ್ದರು. ಗುಜರಾತ್​​ನ​​ 182 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 156 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಮಟ್ಟದ ಗೆಲವು ಸಾಧಿಸಿದೆ. ಹಾಗಾಗಿ ಈ ಪ್ರತಿಮೆಯನ್ನು ಕೂಡ 156 ಗ್ರಾಂಗಳಷ್ಟು ಚಿನ್ನದಲ್ಲಿಯೇ ನಿರ್ಮಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Fact Check : ಕರ್ನಾಟಕದವರು ಪಾಪಿಗಳು ಅಂಥ ಹೇಳಿದ್ರಾ ಮೋದಿ; ಕಾಂಗ್ರೆಸ್ ಮಾಡಿದ ಪೋಸ್ಟ್​ ಸುಳ್ಳಾ? ಇಲ್ಲಿದೆ ನಿಜಾಂಶ

ಕ್ಲಿಪ್​ನಲ್ಲಿ ಪ್ರಧಾನಿ ಮೋದಿ ಹಿಂದಿಯಲ್ಲಿ ಹೇಳುತ್ತಿರುವುದು ಈ ರೀತಿ ಕೇಳಿಸುತ್ತದೆ, “ಚುನಾವಣೆಯಲ್ಲಿ ಮಾಡಿದ ಪಾಪಗಳಿಗಾಗಿ ನೀವು ಕರ್ನಾಟಕದ ಜನರನ್ನು ಶಿಕ್ಷಿಸಬೇಕು. ಮುಂಬರುವ ವರ್ಷಗಳಲ್ಲಿ ಮೋದಿ ನಿಮಗೆ ಗ್ಯಾರಂಟಿ ನೀಡುತ್ತಾರೆ. ಈ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಓಡಾಡಿದೆ. “ಕನ್ನಡಿಗರು ಬಿಜೆಪಿಗೆ ಮತ ಹಾಕುತ್ತಾರೆ. ಆದರೆ ಮೋದಿ ಮಾತ್ರ ಕನ್ನಡಿಗರನ್ನು ಪಾಪಿಗಳು ಎಂದು ಕರೆಯುತ್ತಾರೆ, ಎಂದು ಉಲ್ಲೇಖಿಸಲಾಗಿದೆ.

VISTARANEWS.COM


on

Fact check
Koo

ನವದೆಹಲಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸುಳ್ಳುಗಳ ಭರಾಟೆ ಜೋರಾಗಿದೆ. ಡೀಪ್​ಫೇಕ್​ ಸೇರಿದಂತೆ ಎಡಿಟಿಂಗ್​ ತಾಂತ್ರಿಕತೆ ಮಿತಿಮೀರಿ ಅಭಿವೃದ್ಧಿಯಾಗಿರುವ ಕಾರಣ ಸತ್ಯ ಯಾವುದು ಸುಳ್ಳು ಯಾವುದು ಎಂದು ಒಂದೇ ನೋಟಕ್ಕೆ ತಿಳಿದುಕೊಳ್ಳುವುದು ಕೂಡ ಕಷ್ಟವಾಗಿದೆ. ಇದೇ ಮಾದರಿಯಲ್ಲಿ ರೀತಿ ಪ್ರಧಾನಿ ಮೋದಿ (Narendra Modi) ಕರ್ನಾಟಕದ ಜನತೆಯನ್ನು ಪಾಪಿಗಳು ಎಂದು ಕರೆದಿದ್ದಾರೆ ಎಂಬ ವಿಡಿಯೊವೊಂದು ವೈರಲ್​ ಆಗಿದೆ. ಪ್ರಧಾನಿ ಆ ರೀತಿ ಹೇಳಿದ್ದಾರೆ ಎಂಬುದಾಗಿ ಕೇರಳ ಕಾಂಗ್ರೆಸ್​ ಸೇರಿದಂತೆ ಪ್ರತಿಪಕ್ಷಗಳ ಹಲವರ ಎಕ್ಸ್​ ಹ್ಯಾಂಡಲ್​ನಲ್ಲಿ ವಿಡಿಯೊ ಶೇರ್​ ಆಗಿದೆ. ಹಾಗಾದರೆ ಮೋದಿ ಕನ್ನಡದ ಮಂದಿಯನ್ನು ಪಾಪಿಗಳು ಅಂಥ ಹೇಳಿದ್ದು ಹೌದಾ? ಕಾಂಗ್ರೆಸ್​ ಪೋಸ್ಟ್​ ಮಾಡಿದ ವಿಡಿಯೊದ ಸಾಚಾತನವೇನು (Fact Check) ಎಂಬುದನ್ನು ಗಮನಿಸೋಣ.

2024 ರ ಲೋಕಸಭಾ ಚುನಾವಣೆಯ (Lok Sabha Election) ಪ್ರಚಾರದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 29, 2024 ರಂದು ದಾವಣಗೆರೆ ಮತ್ತು ಬೆಳಗಾವಿಯಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಿದ್ದರು. ಈ ಸಭೆಗಳಲ್ಲಿ ಅವರು ಮಾಡಿದ ಭಾಷಣದ ಕ್ಲಿಪ್​ಗಳೇ ಚರ್ಚೆಯ ವಿಷಯವಾಗಿರುವುದು. ಹಿಂದಿನ ಚುನಾವಣೆಯಲ್ಲಿ ಮತದಾನ ಮಾಡಿದ ಕರ್ನಾಟಕದ ಜನ ಪಾಪಿಗಳು. ಅವರನ್ನು ಶಿಕ್ಷಿಸಬೇಕು ಎಂದು ಹೇಳಿದ್ದಾರೆ ಎನ್ನಲಾದ ವಿಡಿಯೊ ವೈರಲ್​ ಆಗಿದೆ.

ಪ್ರತ್ಯೇಕ ಮಾಡಿ ಹಂಚಲಾದ ವಿಡಿಯೊದಲ್ಲಿ ಪ್ರಧಾನಿ ಮೋದಿ ಹಿಂದಿಯಲ್ಲಿ ಹೇಳುತ್ತಿರುವುದು ಈ ರೀತಿ ಕೇಳಿಸುತ್ತದೆ; “ಚುನಾವಣೆಯಲ್ಲಿ ಮಾಡಿದ ಪಾಪಗಳಿಗಾಗಿ ನೀವು ಈ ಕರ್ನಾಟಕದ ಜನರನ್ನು ಶಿಕ್ಷಿಸಬೇಕು. ಮುಂಬರುವ ವರ್ಷಗಳಲ್ಲಿ ಮೋದಿ ನಿಮಗೆ ಗ್ಯಾರಂಟಿ ಕೊಡುತ್ತಾರೆ. ಇದನ್ನೇ ಎತ್ತಿಕೊಂಡು “ಕನ್ನಡಿಗರು ಬಿಜೆಪಿಗೆ ಮತ ಹಾಕುತ್ತಾರೆ. ಆದರೆ ಮೋದಿ ಮಾತ್ರ ಕನ್ನಡಿಗರನ್ನು ಪಾಪಿಗಳು ಎಂದು ಕರೆಯುತ್ತಾರೆ, ಎಂದು ಉಲ್ಲೇಖಿಸಿ ಪ್ರತಿಪಕ್ಷಗಳು ಪೋಸ್ಟ್​ಹಾಕಿಕೊಂಡಿವೆ.

ಕೇರಳ ಕಾಂಗ್ರೆಸ್​ನ ಅಧಿಕೃತ ಎಕ್ಸ್ ಖಾತೆಯಲ್ಲೂ ಇದನ್ನು ಪೋಸ್ಟ್ ಮಾಡಲಾಗಿದೆ “ಮೋದಿ ಸರ್ವಸ್ಸ ಕಳೆದುಕೊಂಡಿದ್ದಾರೆ. ಅವರು ತಮ್ಮ ಸ್ವಯಂ ಗೋಲ್ ಹೊಡೆಯುತ್ತಿದ್ದಾರೆ. ಅವರು ಈಗ ಕರ್ನಾಟಕದ ಜನರನ್ನು ಪಾಪಿಗಳು ಎಂದು ಕರೆದಿದ್ದಾರೆ. ಇಂತಹ ಅವಮಾನಗಳಿಗೆ ಕರ್ನಾಟಕದ ಜನರು ಕಪಾಳಮೋಕ್ಷ ಮಾಡದೇ ಬಿಡುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ನಿರ್ನಾಮವಾಗಲಿದೆ’ ಎಂದು ಬರೆದುಕೊಂಡಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯ ಎಐಸಿಸಿ (ಅಖಿಲ ಭಾರತ ಕಾಂಗ್ರೆಸ್ ಸಮಿತಿ) ಸಂಯೋಜಕ ಗೌರವ್ ಪಾಂಧಿ ಅವರು ಈ ವೀಡಿಯೊಗೆ “ಕರ್ನಾಟಕದ ಜನರು ಬಿಜೆಪಿ ವಿರುದ್ಧ ಮತ ಚಲಾಯಿಸಿದ ಮಾತ್ರಕ್ಕೆ, ಅವರು ಪಾಪಿಗಳು ಎಂದು ಪ್ರಧಾನಿ ಮೋದಿ ಭಾವಿಸುತ್ತಾರೆ.” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Manish Sisodia : ಕೇಜ್ರಿವಾಲ್ ಜತೆಗಾರ ಮನೀಶ್ ಸಿಸೊಡಿಯಾ ಮತ್ತಷ್ಟು ದಿನ ಜೈಲಿನಲ್ಲೇ; ಜಾಮೀನು ಅರ್ಜಿ ವಜಾ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, “ಪ್ರಧಾನಿ ಮೋದಿ ಅವರ ಈ ಹೇಳಿಕೆ ವಿಧಾನಸಭಾ ಚುನಾವಣೆಯಲ್ಲಿನ ಸೋಲಿನ ಹತಾಶೆಯೇ? ಲೋಕಸಭಾ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಯನ್ನು ತಿರಸ್ಕರಿಸುತ್ತಿದ್ದಾರೆ ಎಂಬ ಭಯವೇ? ಎಂದು ಟ್ವೀಟ್​ ಮಾಡಿದ್ದಾರೆ.

ವಾಸ್ತವಾಂಶಗಳು ಯಾವುವು?

ಪ್ರಧಾನಿ ಮೋದಿ ಅವರ ಅಧಿಕೃತ ಯೂಟ್ಯೂಬ್​ ಪೇಜ್​ನಲ್ಲಿ ಭಾಷಣ ನೇರ ಪ್ರಸಾರ ವಿಡಿಯೊ ಹಂಚಿಕೊಳ್ಳಲಾಗಿದೆ. ವೀಡಿಯೊದಲ್ಲಿ ಸುಮಾರು 29:00 ರಿಂದ 31:04 ನಿಮಿಷ ತನಕ ಪಿಎಂ ಮೋದಿ ಅವರು ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುತ್ತಾರೆ. ಬಿಜೆಪಿ ಆಡಳಿತದಲ್ಲಿ ಭಾರತೀಯ ರೈತರು ಅನುಭವಿಸಿದ ವಿವಿಧ ಪ್ರಯೋಜನಗಳ ಬಗ್ಗೆ ಮಾತನಾಡಿದ ಮೋದಿ “ಕಾಂಗ್ರೆಸ್ ಇಲ್ಲಿನ ರೈತರಿಗೆ ಮಾಡಿದ ದ್ರೋಹವು ದೊಡ್ಡ ಪಾಪ” ಎಂದು ಹೇಳುತ್ತಾರೆ. ‘ಇಲ್ಲಿ’ ಎಂಬುದು ಕರ್ನಾಟಕ ಎಂಬರ್ಥವಾಗಿದೆ.

“ಬಿಜೆಪಿ ಅಧಿಕಾರದಲ್ಲಿದ್ದಾಗ ರೈತರ ಖಾತೆಗಳಿಗೆ 10,000 ರೂ.ಗಳನ್ನು ಜಮಾ ಮಾಡಲಾಗುತ್ತಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ₹ 4,000 ನೀಡುವುದನ್ನು ನಿಲ್ಲಿಸಿತು. ಅವರು ತಮ್ಮ ಮತವನ್ನು ಪಡೆಯುವಲ್ಲಿ ಯಶಸ್ವಿಯಾದ ನಂತರ, ಅವರು ರೈತರು ಮತ್ತು ಅವರ ಕೆಲಸದ ಬಗ್ಗೆ ಕಾಳಜಿ ವಹಿಸುವುದನ್ನು ನಿಲ್ಲಿಸಿದರು. ಉಳಿದ 6,000 ರೂ.ಗಳನ್ನು ಮೋದಿ ಸರ್ಕಾರ ಕಳುಹಿಸುತ್ತದೆ. ಅದನ್ನು ರೈತರು ಪಡೆಯುತ್ತಾರೆ. ಅವರು ಇಲ್ಲಿ ನೀಡಿದ ಹಣದ ಒಂದು ಭಾಗವನ್ನು ಕಡಿತಗೊಳಿಸಿದರು.” ಎಂದು ಟೀಕಿಸಿದ್ದಾರೆ.

ಮುಂದುವರಿದ ಅವರು “ಈ ಚುನಾವಣೆಯಲ್ಲಿ ಅವರು ಮಾಡಿದ ಪಾಪಗಳಿಗಾಗಿ ನೀವು ಈ ಕರ್ನಾಟಕದ ಜನರು ಶಿಕ್ಷಿಸಬೇಕು. ದೆಹಲಿಯಿಂದ ಕಳುಹಿಸಿದ ಎಲ್ಲವೂ ಮುಂದಿನ ವರ್ಷಗಳಲ್ಲಿ ಮುಂದುವರಿಯುತ್ತದೆ ಎಂಬುದು ಮೋದಿಯ ಭರವಸೆ ” ಎಂದು ಅವರು ಹೇಳಿದ್ದಾರೆ. 31:00ರ ನಿಮಿಷದ ನಂತರ ನೋಡಿದಾಗ ಇದು ಕರ್ನಾಟಕ ಸರ್ಕಾರದ ವಿರುದ್ಧದ ಟೀಕೆ ಎಂಬುದು ಖಾತರಿಯಾಗುತ್ತದೆ.

ಪ್ರಧಾನಿ ಮೋದಿಯವರ ವೆಬೆ್​ಸೈಟ್​ನಲ್ಲಿ ಲಭ್ಯವಿರುವ ಭಾಷಣದ ಟ್ರಾನ್​ಸ್ಕ್ರಿಪ್ಟ್​​ ಈ ಮಾಹಿತಿಯನ್ನು ದೃಢಪಡಿಸುತ್ತದೆ. “ಈ ಚುನಾವಣೆಯಲ್ಲಿ ಮಾಡಿದ ಪಾಪಗಳಿಗಾಗಿ ಈ ಕಾಂಗ್ರೆಸ್ ನಾಯಕರಿಗೆ ಶಿಕ್ಷೆಯಾಗಬೇಕು” ಎಂದು ಅಲ್ಲಿ ಬರೆಯಲಾಗಿದೆ.

ಬೆಳಗಾವಿಯಲ್ಲಿ ಪ್ರಧಾನಿ ಮೋದಿಯವರ ಭಾಷಣದ ಈ ಕ್ಲಿಪ್ ಅನ್ನು ಆಯ್ದು ಎಡಿಟ್ ಮಾಡಲಾಗಿದೆ ಮತ್ತು ಹಿಂದೆ ಮುಂದೆ ಏನೂ ಇಲ್ಲದೆ ಪ್ರಸಾರ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿತ್ತಿದೆ. ಪಿಎಂ ಮೋದಿ ನಿಖರವಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರ ಎಂಬುದಾಗಿ ಹೇಳಿದ್ದರೂ ಕರ್ನಾಟಕದ ಜನರು ಎಂದು ತಪ್ಪುದಾರಿಗೆಳೆಯುವ ವ್ಯಾಖ್ಯಾನ ಮಾಡಲಾಗಿದೆ ಎಂದು ಬಿಜೆಪಿ ಹೇಳಿದೆ.

Continue Reading

ವೈರಲ್ ನ್ಯೂಸ್

Fact Check: ಓವೈಸಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಮಹಿಳೆ ಅಲ್ಲವೆ?

Fact Check: ತಾವು ಮಹಿಳೆಯೇ ಅಲ್ಲ ಎಂದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಹೈದರಾಬಾದ್ ನ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ತಾವು ಮಹಿಳೆಯೇ ಅಲ್ಲ ಎಂದು ಹೇಳಿರುವುದು ನಿಜವೇ, ಅವರು ಯಾಕೆ ಹಾಗೆ ಹೇಳಿದರು. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋದ ನಿಜಾಂಶ ಏನು? ಇಲ್ಲಿದೆ ಸಂಪೂರ್ಣ ವಿವರ.

VISTARANEWS.COM


on

By

Viral Video
Koo

ಹೈದರಾಬಾದ್: ಭಾರತೀಯ ಜನತಾ ಪಕ್ಷದ (BJP) ಹೈದರಾಬಾದ್ ನ (Hyderabad) ಅಭ್ಯರ್ಥಿ ಮಾಧವಿ ಲತಾ (Madhavi Latha) ಅವರು ತಾವು ಮಹಿಳೆಯೇ ಅಲ್ಲ ಎಂದು ಹೇಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗಿದ್ದು, ಇದನ್ನು ನೋಡಿರುವ ನೆಟ್ಟಿಗರು (Fact Check) ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾಧವಿ ಲತಾ ಅವರು “ನಾನು ಮಹಿಳೆ ಅಲ್ಲ” ಎಂದು ಹೇಳುವ ವಿಡಿಯೋವನ್ನು ಕತ್ತರಿಸಿ ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದೆ. ಹೈದರಾಬಾದ್‌ನ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಮಹಿಳೆ ಅಲ್ಲ ಎಂದು ಸುಳ್ಳು ಪ್ರಚಾರವನ್ನೂ ಮಾಡಲಾಗುತ್ತಿದೆ. ಇದರ ಮೂಲ ಸಂದರ್ಶನದಲ್ಲಿ ಲತಾ ಅವರು ತಾನು ಕೇವಲ ಮಹಿಳೆಯಲ್ಲ ಆದರೆ ಶಕ್ತಿ ಎಂದು ಹೇಳಿದ್ದರು.

ಓವೈಸಿ ವಿರುದ್ಧ ಕಣಕ್ಕೆ

ತೆಲಂಗಾಣದ ಹೈದರಾಬಾದ್‌ನಲ್ಲಿ ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನ ಹಾಲಿ ಸಂಸದ ಅಸಾದುದ್ದೀನ್ ಓವೈಸಿ ವಿರುದ್ಧ ಬಿಜೆಪಿಯಿಂದ ಕಣಕ್ಕೆ ಇಳಿದಿರುವ ನಟಿ ಲತಾ ಅವರು ಇತ್ತೀಚೆಗೆ ಪ್ರಚಾರ ಕಾರ್ಯಕ್ರಮವೊಂದರಲ್ಲಿ 221 ಕೋಟಿ ರೂ. ಮೌಲ್ಯದ ಕುಟುಂಬದ ಆಸ್ತಿಯನ್ನು ಘೋಷಿಸಿದ ನಂತರ ಹೈದರಾಬಾದ್ ಕ್ಷೇತ್ರದ ಶ್ರೀಮಂತ ಅಭ್ಯರ್ಥಿಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: Viral News: ಸಿಂಗಾಪುರ ಏರ್‌ಲೈನ್ಸ್‌ ಪೈಲಟ್‌ ಅಂತಾ ಹೇಳ್ಕೊಂಡು ಪೋಸ್‌ ಕೊಡ್ತಿದ್ದವ ಲಾಕ್‌!

ವಿಡಿಯೋದಲ್ಲಿ ಏನಿದೆ?

ಈಗ ವೈರಲ್ ಆಗಿರುವ ವಿಡಿಯೋದಲ್ಲಿ ಲತಾ ಅವರು ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದು, ಮಹಿಳೆಯಾಗಿ ಪರಿಸ್ಥಿತಿಯನ್ನು ನಿಭಾಯಿಸುವ ಬಗ್ಗೆ ವರದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ, “ನಾನು ಮಹಿಳೆ ಅಲ್ಲ, ದಯವಿಟ್ಟು ನನ್ನನ್ನು ಮಹಿಳೆ ಎಂದು ಕರೆಯಬೇಡಿ”’ ಎಂದು ನೇರವಾಗಿ ಹೇಳಿದ್ದಾರೆ. ಆದರೆ ಮುಂದೆ ಅವರು, ನಾನು ಮಹಿಳೆ ಅಲ್ಲ, ಕೇವಲ ಮಹಿಳೆ ಅಲ್ಲ, ಮಹಾ ಶಕ್ತಿ ಎಂದು ಮಾಧವಿ ಲತಾ ಹೇಳಿದ್ದರು. ಆದರೆ ಈ ಭಾಗ ತೋರಿಸದೆ ತಾವು ಮಹಿಳೆ ಅಲ್ಲ ಎಂದ ದೃಶ್ಯವನ್ನಷ್ಟೇ ಕಟ್ ಮಾಡಿ ಶೇರ್ ಮಾಡಲಾಗುತ್ತದೆ.

ಈ ಕುರಿತು ಹಲವಾರು ಮಂದಿ ನೆಟ್ಟಿಗರು ಕಾಮೆಂಟ್ ಮಾಡಿದ್ದು, ಹಾಗಾದರೆ ಹೈದರಾಬಾದ್ ಬಿಜೆಪಿ ಅಭ್ಯರ್ಥಿ ಮಹಿಳೆ ಅಲ್ಲವೇ, ಮುಖ ನೋಡುವಾಗ ಮಹಿಳೆಯಂತೆ ಕಾಣುತ್ತಾರೆ, ಹಾಗಾದರೆ ಅವರು ಮಂಗಳಮುಖಿಯೇ… ಹೀಗೆ ಹಲವು ರೀತಿಯಲ್ಲಿ ಕಾಮೆಂಟ್ ಗಳನ್ನು ಮಾಡಿದ್ದಾರೆ.


ಸತ್ಯ ಏನು?

ಲತಾ ಅವರು ಮಹಿಳೆ ಅಲ್ಲ ಎಂದು ನೀಡಿರುವ ಹೇಳಿಕೆಯನ್ನು ಕತ್ತರಿಸಿ ಹಂಚಿಕೊಳ್ಳಲಾಗಿದೆ ಎಂದು ಬೂಮ್ ಕಂಡುಹಿಡಿದಿದೆ. ‘ನ್ಯೂಸ್ ನೇಷನ್’ ಎಂಬ ಹಿಂದಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಲತಾ ಅವರು, ಓವೈಸಿ ವಿರುದ್ಧ ಸ್ಪರ್ಧಿಸುತ್ತಿರುವ ವಿಚಾರವಾಗಿ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ್ದಾರೆ. ಅಲ್ಲದೇ ತಾವು ಬಿಜೆಪಿ ಸೇರಿದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಕುರಿತಾದ ಹಲವಾರು ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾರೆ.

ಹೈದರಾಬಾದ್‌ನ ಹಳೆಯ ನಗರ ಭಾಗದ ಕೆಲವು ಪ್ರದೇಶಗಳಿಗೆ ಭೇಟಿ ನೀಡಿಲ್ಲ ಎಂದಿರುವ ಅವರು, ನಗರದ ಅತಿದೊಡ್ಡ ಕೊಳೆಗೇರಿ ವಸಾಹತುಗಳಲ್ಲಿ ಒಂದಾದ ತಾಲಾಬ್ ಕಟ್ಟಾ ಮುಂತಾದವುಗಳ ಬಗ್ಗೆ ವರದಿಗಾರ ಪ್ರಶ್ನೆಗಳಿಗೆ ಉತ್ತರಿಸಿದರು. ಒಬ್ಬ ಮಹಿಳೆಯಾಗಿ ನೀವು ಆ ಪರಿಸ್ಥಿತಿಯನ್ನು ಹೇಗೆ ಎದುರಿಸಲು ಯೋಜಿಸುತ್ತೀರಿ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸಿಟ್ಟಾದ ಸ್ವರದಲ್ಲಿ ನಾನು ಮಹಿಳೆ ಅಲ್ಲ, ನಾನು ಶಕ್ತಿ. ನೀವು ಅದನ್ನು ಮೊದಲು ಸ್ಪಷ್ಟಪಡಿಸಬೇಕು. ನನ್ನನ್ನು ಮಹಿಳೆ ಎಂದು ಪದೇ ಪದೇ ಕರೆಯಬೇಡಿ. ನೀವು ನನ್ನನ್ನು ದುರ್ಬಲ ಎಂದು ಪರಿಗಣಿಸುವಂತೆ ತೋರುತ್ತಿದೆ ಎಂದು ಹೇಳಿದ್ದಾರೆ.

ಇದಾದ ನಂತರ ಲತಾ ಕ್ಯಾಮೆರಾದತ್ತ ತಿರುಗಿ, ನೇರವಾಗಿ ವೀಕ್ಷಕರನ್ನು ಉದ್ದೇಶಿಸಿ, ನಾನು ಒಬ್ಬ ಮಹಿಳೆ ಅಲ್ಲ, ತನ್ನ ಸಹೋದರ ಸಹೋದರಿಯರ ಶಕ್ತಿಯಿಂದ ಇಲ್ಲಿರುವ ಶಕ್ತಿ ಸ್ವತಃ ನಾನು. ಅವರ ಶಕ್ತಿಯಿಂದಾಗಿ ನಾನು ಉಳಿದಿದ್ದೇನೆ ಎಂದು ತಿಳಿಸಿದ್ದಾರೆ.

ಶಕ್ತಿ ಎಂಬ ಪದವನ್ನು ಹಿಂದೂ ಧರ್ಮದಲ್ಲಿ ವಿವಿಧ ರೂಪಗಳಲ್ಲಿ ಪೂಜಿಸುವ ದೈವಿಕ ಸ್ತ್ರೀಲಿಂಗ ಶಕ್ತಿಯನ್ನು ಉಲ್ಲೇಖಿಸಲು ಇದನ್ನು ಬಳಸಲಾಗುತ್ತದೆ. ವೈರಲ್ ಆಗಿರುವ ವಿಡಿಯೋದಲ್ಲಿ ಲತಾ ಅವರ ಹೇಳಿಕೆಯನ್ನು ಕತ್ತರಿಸಿ ಹಾಕಲಾಗಿದೆ.

Continue Reading

Fact Check

Fact Check: ಬೈಕ್ ಕದ್ದು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರೆ ಪಂಜಾಬ್ ಸಿಎಂ ಭಗವಂತ್ ಮಾನ್?

Viral news: ಹತ್ತು ವರ್ಷಗಳ ಹಿಂದೆ ಬೈಕ್ ದರೋಡೆ ಪ್ರಕರಣದಲ್ಲಿ ಮಾನ್ ಅವರು ಬಂಧನಕ್ಕೊಳಗಾದ ಛಾಯಾ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದು ನಿಜವೇ ?

VISTARANEWS.COM


on

By

Viral news
Koo

ಪಂಜಾಬ್: ನಿರಂತರ ಒಂದಲ್ಲ ಒಂದು (Fact Check) ಕಾರಣದಿಂದ ಸುದ್ದಿಯಲ್ಲಿರುವ ಹೊಸದಾಗಿ ಚುನಾಯಿತರಾದ ಪಂಜಾಬ್ (Punjab) ಮುಖ್ಯಮಂತ್ರಿ (Chief Minister) ಭಗವಂತ್ ಮಾನ್ (Bhagwant Mann) ಅವರನ್ನು ಈ ಹಿಂದೆ ಬೈಕ್ ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಧನಕ್ಕೆ ಒಳಪಡಿಸಲಾಗಿತ್ತು ಎನ್ನುವ ಫೋಟೋ ಸಹಿತ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral news) ಆಗಿದೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ವಿವಾದಗಳಿಗೆ ಹೊಸದೇನಲ್ಲ. ರಾಜ್ಯದ ಅತ್ಯುನ್ನತ ಹುದ್ದೆಗೇರಿದ ಬಳಿಕ ಅವರ ಕುರಿತು ಜನರು ತಮ್ಮ ಅಭಿಪ್ರಾಯಗಳನ್ನು ಮತ್ತು ಹಳೆಯ ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದನ್ನು ಸಾಕಷ್ಟು ಮಂದಿ ವೀಕ್ಷಿಸುತ್ತಿದ್ದಾರೆ.

ಇದೀಗ ಸುಮಾರು ಒಂದು ದಶಕದ ಹಿಂದೆ ಬೈಕ್ ದರೋಡೆ ಪ್ರಕರಣದಲ್ಲಿ ಮಾನ್ ಬಂಧನಕ್ಕೊಳಗಾದ ಛಾಯಾ ಚಿತ್ರ ಎಂದು ಹೇಳುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾನ್ ಅವರು ಇತರ ಮೂವರೊಂದಿಗೆ ನೆಲದ ಮೇಲೆ ಕುಳಿತಿರುವ ಈ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಮಂದಿ ವೀಕ್ಷಿಸಿದ್ದಾರೆ.

ಇದನ್ನೂ ಓದಿ: Video Viral: ಜಲ ತರಂಗ್‌ನಲ್ಲಿ ಮಹಿಳೆ ನುಡಿಸಿದ ಐಗಿರಿ ನಂದಿನಿ ವಿಡಿಯೋ ವೈರಲ್

ಈ ಫೋಟೋ ದ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಿದ ನ್ಯೂಸ್‌ಚೆಕರ್ ಇದು ಸುಳ್ಳೆಂದು ತಿಳಿಸಿದೆ. ಆದರೂ ಈ ಚಿತ್ರವನ್ನು ಟ್ವಿಟರ್‌ನಲ್ಲಿ ಸಾಕಷ್ಟು ಮಂದಿ ವೀಕ್ಷಿಸುತ್ತಿದ್ದಾರೆ ಮತ್ತು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಭಗವಂತ್ ಮಾನ್ ಅವರು 2022ರ ಮಾರ್ಚ್ 16ರಂದು ಪಂಜಾಬ್ ನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಮಾಜಿ ಶಾಸಕರಿಗೆ ಪಿಂಚಣಿ ಪಾವತಿ, ಶಿಕ್ಷಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಅವರ ಸರ್ಕಾರದ ‘ದೊಡ್ಡ’ ನಿರ್ಧಾರಗಳಿಗಾಗಿ ಅವರು ನಿರಂತರ ಸುದ್ದಿಯಲ್ಲಿದ್ದಾರೆ.


ಮಾನ್ ಅವರನ್ನು ಪಂಜಾಬ್‌ನಲ್ಲಿ ಎಎಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದಾಗಿನಿಂದ ಹಾಸ್ಯನಟ-ರಾಜಕಾರಣಿ ಮಾನ್ ಅವರನ್ನು ಪದೇ ಪದೇ ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಮಾಡಲಾಗುತ್ತಿದೆ. ಪಂಜಾಬ್ ಸಿಎಂ ಬಗೆಗಿನ ಹಲವಾರು ಸುಳ್ಳು ಮಾಹಿತಿಗಳನ್ನು ನ್ಯೂಸ್‌ಕೆಕರ್ ತನಿಖೆ ನಡೆಸಿದೆ.

ಇದೀಗ ವೈರಲ್ ಆಗಿರುವ ಚಿತ್ರದ ಹುಡುಕಾಟ ನಡೆಸಿದಾಗ ಪಂಜಾಬಿ ಗಾಯಕ ಮತ್ತು ನಟ ಕರಮ್‌ಜಿತ್ ಅನ್ಮೋಲ್ ಅವರು ಮ್ಯಾಚ್ 18ರಂದು ಫೇಸ್‌ಬುಕ್ ನಲ್ಲಿ ಮಾಡಿರುವ ಪೋಸ್ಟ್ ಸಿಕ್ಕಿದೆ. ಅದರಲ್ಲಿ ಅವರು ಭಗವಂತ್ ಮಾನ್ ಮತ್ತು ಮಂಜಿತ್ ಸಿಧು ಅವರೊಂದಿಗೆ ಹೋಳಿ ನೆನಪುಗಳು ಎಂಬ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಬೈಕ್ ಕಳ್ಳತನ ಪ್ರಕರಣದಲ್ಲಿ ಮಾನ್ ಬಂಧನ ಎಂಬಂತೆ ಬಿಂಬಿಸಿರುವ ಈ ಚಿತ್ರ ದ ಹೇಳಿಕೆಯನ್ನು ಮಂಜಿತ್ ಸಿಧು ಅವರು ತಳ್ಳಿಹಾಕಿದ್ದಾರೆ. ಇದು ನಕಲಿ ಸುದ್ದಿ ಎಂದು ಹೇಳಿದ್ದಾರೆ.


ಈ ಚಿತ್ರವನ್ನು 1994 ಅಥವಾ 1995 ರಲ್ಲಿ ಕೆನಡಾದ ಗಾಯಕ ಹರ್ಭಜನ್ ಮಾನ್ ಭಾರತಕ್ಕೆ ಬಂದಾಗ ಪಟಿಯಾಲದಲ್ಲಿ ತೆಗೆದಿದ್ದಾರೆ. ಹೋಳಿ ಹಬ್ಬದಂದು ಹರ್ಭಜನ್ ಮಾನ್ ಅವರ ಮನೆಯ ಟೆರೇಸ್‌ನಲ್ಲಿ ಚಿತ್ರ ತೆಗೆಯಲಾಗಿದೆ. ಭಗವಂತ್ ಮಾನ್, ಕರಮ್ಜಿತ್ ಅನ್ಮೋಲ್ ಮತ್ತು ಹರ್ಭಜನ್ ಮಾನ್ ಕೂಡ ಅಲ್ಲಿ ಹಾಜರಿದ್ದರು. ಭಗವಂತ್ ಮಾನ್ ಮತ್ತು ನಾನು ಕಾಲೇಜು ದಿನಗಳಿಂದಲೂ ಸ್ನೇಹಿತರಾಗಿದ್ದೇವೆ ಎಂದು ಸಿಧು ತಿಳಿಸಿದ್ದಾರೆ.

ಈ ಕುರಿತು ಮತ್ತಷ್ಟು ಸ್ಪಷ್ಟಿಕರಣಕ್ಕಾಗಿ ಮಾನ್ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ ಅನ್ನು ಪರಿಶೀಲಿಸಲಾಗಿದೆ. ಆದರೆ ಯಾವುದೇ ಅಪರಾಧ ಪ್ರಕರಣದಲ್ಲಿ ಅವರು ಭಾಗಿಯಾಗಿರುವ ಬಗ್ಗೆ ಅದರಲ್ಲಿ ಯಾವುದೇ ಉಲ್ಲೇಖವಿಲ್ಲ ಎಂದು ತಿಳಿದು ಬಂದಿದೆ.

Continue Reading

ವೈರಲ್ ನ್ಯೂಸ್

Viral news: ಚುನಾವಣೆಗೆ ಮೊದಲೇ 19 ಲಕ್ಷ ಇವಿಎಂ ಕಾಣೆಯಾಗಿದ್ದು ನಿಜವೇ? ಏನಿದರ ಅಸಲಿಯತ್ತು ?

Viral news: ಲೋಕಸಭೆ ಚುನಾವಣೆಗೂ ಮುನ್ನ 1.9 ಮಿಲಿಯನ್ ಇವಿಎಂಗಳನ್ನು ಕಳವು ಮಾಡಲಾಗಿದೆ ಎನ್ನುವ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕಳವಾಗಿರುವ ಇವಿಎಂ ಗಳು ಎಲ್ಲಿ ಹೋಗಿವೆ ? ಈ ಸುದ್ದಿ ಎಲ್ಲಿಂದ ಬಂತು ಗೊತ್ತೇ ?

VISTARANEWS.COM


on

By

Viral news
Koo

ನವದೆಹಲಿ: ಲೋಕಸಭಾ ಚುನಾವಣೆ- 2024ರ (Lok sabha election-2024) ಮೊದಲ ಹಂತದ ಮತದಾನ ಪ್ರಕ್ರಿಯೆಗಳು ಶುಕ್ರವಾರ ದೇಶದ ವಿವಿಧ ಭಾಗಗಳಲ್ಲಿ ನಡೆದಿದೆ. ಮತದಾನ ಪ್ರಾರಂಭಕ್ಕೂ ಮೊದಲು 1.9 ಮಿಲಿಯನ್ ಎಲೆಕ್ಟ್ರಾನಿಕ್ ಮತಯಂತ್ರಗಳು (EVM) ಕಾಣೆಯಾಗಿವೆ ಎನ್ನುವ ಕುರಿತು ಸಾಮಾಜಿಕ ಜಾಲತಾಣದಲ್ಲಿ (social media) ಸಂದೇಶ ಹರಡಿದ್ದು (viral news) ಇದು ಸುಳ್ಳು ಎಂದು ತಿಳಿದು ಬಂದಿದೆ.

ಏಪ್ರಿಲ್ 19ರಂದು 2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಾರಂಭವಾಗುವ ಮೊದಲು ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರಲು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯನ್ನು ಹಂಚಿಕೊಳ್ಳಲಾಗಿತ್ತು. ಇದರಲ್ಲಿ 1.9 ಮಿಲಿಯನ್ ಎಲೆಕ್ಟ್ರಾನಿಕ್ ಮತಯಂತ್ರಗಳು ಕಾಣೆಯಾಗಿದೆ ಎಂದು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅನೇಕ ಬಳಕೆದಾರರು ಹೇಳಿಕೊಂಡಿದ್ದರು.

ಈ ಕುರಿತು ತನಿಖೆ ನಡೆಸಿದ ವಿಶ್ವಸ್ ನ್ಯೂಸ್ ಈ ಹೇಳಿಕೆ ಸುಳ್ಳು ಎಂದು ಪತ್ತೆ ಹಚ್ಚಿದೆ. ಚುನಾವಣಾ ಆಯೋಗವೂ ಕೂಡ ಇದೊಂದು ನಕಲಿ ಸುದ್ದಿ ಎಂದು ಹೇಳಿದೆ. ಈ ವರ್ಷದ ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್ ಕೂಡ ಇವಿಎಂ ನಾಪತ್ತೆಯಾಗಿರುವ ಆರೋಪಗಳನ್ನು ತಳ್ಳಿಹಾಕಿತ್ತು.

ಇದನ್ನೂ ಓದಿ: Viral Video: 7 ಮಕ್ಕಳನ್ನು ದೇವರು ಕೊಟ್ಟಿದ್ದಾದರೆ ಬಡತನಕ್ಕೆ ಮೋದಿ ಹೇಗೆ ಕಾರಣ? ಮುಸ್ಲಿಂ ಮಹಿಳೆಗೆ ತರಾಟೆ!


ಸುಳ್ಳು ಸುದ್ದಿ

ಸಾಮಾಜಿಕ ಮಾಧ್ಯಮ ಬಳಕೆದಾರ ನಿಹಾಲ್ ಸಿಂಗ್ ನಿಗಮ್ ಅವರು, 1.9 ಮಿಲಿಯನ್ ಇವಿಎಂ ಯಂತ್ರಗಳನ್ನು ಕಳವು ಮಾಡಲಾಗಿದೆ ಮತ್ತು ಈ ಬಗ್ಗೆ ಯಾವುದೇ ಕುರುಹು ಕಂಡು ಬಂದಿಲ್ಲ ಎನ್ನುವ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಅಂದಿನಿಂದ ಈ ಪೋಸ್ಟ್ ಭಾರೀ ವೈರಲ್ ಆಗಿದೆ. ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಲವಾರು ಬಳಕೆದಾರರು ಇದನ್ನು ಹಂಚಿಕೊಂಡಿದ್ದಾರೆ.


ತನಿಖೆಯಲ್ಲೇನಿದೆ?

ದಿ ಎಕನಾಮಿಕ್ ಟೈಮ್ಸ್ ನ ಮಾರ್ಚ್ 15 ವರದಿಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರಲು 2016 ಮತ್ತು 2019 ರ ನಡುವೆ ಚುನಾವಣಾ ಆಯೋಗದ ಮೇಲ್ವಿಚಾರಣೆಯಲ್ಲಿ 1.9 ಮಿಲಿಯನ್ ಇವಿಎಂಗಳು ನಾಪತ್ತೆಯಾಗಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಶುಕ್ರವಾರ ಅರ್ಜಿಯನ್ನು ವಜಾಗೊಳಿಸಿತ್ತು. 1.9 ಮಿಲಿಯನ್ ಇವಿಎಂಗಳು ಕಾಣೆಯಾಗಿದೆ ಎಂದು ಐಎನ್‌ಸಿ ಹೇಳಿರುವುದು ಸಂಪೂರ್ಣವಾಗಿ ಆಧಾರ ರಹಿತವಾಗಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

2019ರಲ್ಲಿಯೂ ನಾಪತ್ತೆಯಾದ ಇವಿಎಂಗಳ ವರದಿಗಳು ಬಂದಿದ್ದವು. ಫ್ರಂಟ್‌ಲೈನ್ ಮತ್ತು ಟಿವಿ9 ಭಾರತ ವರ್ಷ್ ಈ ಕುರಿತು ವರದಿಗಳನ್ನು ಪ್ರಕಟಿಸಿತ್ತು. ಇದನ್ನೂಚುನಾವಣಾ ಆಯೋಗವು ಆಧಾರ ರಹಿತ ಎಂದು ಹೇಳಿ ಟ್ವಿಟ್ ಮಾಡಿದೆ.

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿರುವ FAQ ವಿಭಾಗದಲ್ಲಿಯೂ ಈ ಸಮಸ್ಯೆಯನ್ನು ಉಲ್ಲೇಖಿಸಲಾಗಿದೆ. ವೈರಲ್ ಹಕ್ಕು ಕುರಿತು ಚುನಾವಣಾ ಆಯೋಗದ ಅಧಿಕಾರಿಗಳನ್ನು ಸಂಪರ್ಕಿಸಿರುವ ವಿಶ್ವಸ್ ನ್ಯೂಸ್ ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಷಯದ ಕುರಿತು ಸ್ಪಷ್ಟೀಕರಣವನ್ನು ನೀಡಲಾಗಿದೆ ಎಂದು ತಿಳಿಸಿರುವುದಾಗಿ ತಿಳಿದು ಬಂದಿದೆ.

Continue Reading
Advertisement
Bangalore Rain
ಕರ್ನಾಟಕ18 mins ago

Bangalore Rain: ಬೆಂಗಳೂರಲ್ಲಿ ವರುಣನ ಅಬ್ಬರ; ಅಂಡರ್ ಪಾಸ್‌ನಲ್ಲಿ ಸಿಲುಕಿದ ಬಸ್‌, 20 ಪ್ರಯಾಣಿಕರ ರಕ್ಷಣೆ

Kannada New Movie
ಸಿನಿಮಾ20 mins ago

Kannada New Movie: ಎಸ್. ನಾರಾಯಣ್ ನಿರ್ದೇಶನದ ಹೊಸ ಚಿತ್ರದಲ್ಲಿ ಒಂದಾದ ದುನಿಯಾ ವಿಜಯ್, ಶ್ರೇಯಸ್ ಮಂಜು

Koppal Lok Sabha Constituency
ಕೊಪ್ಪಳ23 mins ago

Koppal Lok Sabha Constituency: ಮಾಜಿ ಶಾಸಕರ ಪುತ್ರರ ನಡುವಿನ ಸ್ಪರ್ಧೆಯಲ್ಲಿ ಯಾರಾಗುವರು ಸಂಸದ?

kolar lok sabha constituency
ಪ್ರಮುಖ ಸುದ್ದಿ50 mins ago

Kolar lok sabha constituency : ಕೋಲಾರವನ್ನು ವಾಪಸ್​ ತನ್ನ ತೆಕ್ಕೆಗೆ ತೆಗೆದುಕೊಳ್ಳುವುದೇ ಕಾಂಗ್ರೆಸ್​

Money Guide
ಮನಿ-ಗೈಡ್51 mins ago

Money Guide: ಗೃಹಸಾಲದ ಕಂತು ಪೂರ್ತಿಯಾಯ್ತೆ? ನಿಲ್ಲಿ, ನಿಮ್ಮ ಜವಾಬ್ದಾರಿ ಇನ್ನೂ ಇದೆ!

mandya lok sabha constituency
ಪ್ರಮುಖ ಸುದ್ದಿ54 mins ago

Mandya Lok Sabha Constituency : ಜಿದ್ದಾಜಿದ್ದಿನ ಸ್ಪರ್ಧೆಯಲ್ಲಿ ಕುಮಾರಸ್ವಾಮಿಗೆ ಗೆಲುವು ಸಿಗುವುದೇ?

Bellary Lok Sabha Constituency
ಬಳ್ಳಾರಿ1 hour ago

Bellary Lok Sabha Constituency: ಶ್ರೀರಾಮುಲು vs ತುಕಾರಾಮ್;‌ ಗಣಿ ನಾಡಲ್ಲಿ ಯಾರು ಧಣಿ?

YouTube channels
ವೈರಲ್ ನ್ಯೂಸ್1 hour ago

YouTube channels: ಅತಿ ಹೆಚ್ಚು ಸಬ್‌ಸ್ಕ್ರೈಬರ್‌ಗಳನ್ನು ಹೊಂದಿರುವ ಟಾಪ್‌ 10 ಯುಟ್ಯೂಬ್‌ ಚಾನೆಲ್‌ಗಳಿವು!

Highest Paying Companies
ವಾಣಿಜ್ಯ2 hours ago

Highest Salary Paying Companies: ಎಂಜಿನಿಯರ್‌ಗಳಿಗೆ ಅತೀ ಹೆಚ್ಚು ಸಂಬಳ ಕೊಡುವ ಕಂಪನಿಗಳ ಪಟ್ಟಿ ಇಲ್ಲಿದೆ

Pro-Palestinian Protest
ಕರ್ನಾಟಕ2 hours ago

Pro-Palestinian Protest: ಬೆಂಗಳೂರಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ಪ್ರತಿಭಟನೆ; ಮಹಿಳೆಯರು ಸೇರಿ ಹಲವರು ವಶಕ್ಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ10 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 day ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌