Fact-Check: ಡೋಂಟ್ ವರಿ, ನಿಮ್ಮ ಚೈಲ್ಡ್ ಹುಡ್ ಫ್ರೆಂಡ್ 'ರೆನಾಲ್ಡ್ಸ್ ಪೆನ್' ಭಾರತ ಬಿಟ್ಟು ಹೋಗಲ್ಲ! - Vistara News

Fact Check

Fact-Check: ಡೋಂಟ್ ವರಿ, ನಿಮ್ಮ ಚೈಲ್ಡ್ ಹುಡ್ ಫ್ರೆಂಡ್ ‘ರೆನಾಲ್ಡ್ಸ್ ಪೆನ್’ ಭಾರತ ಬಿಟ್ಟು ಹೋಗಲ್ಲ!

Fact-Check: ಭಾರತದ ಶಾಲಾ ಮಕ್ಕಳ ಅಚ್ಚುಮೆಚ್ಚಿನ ಪೆನ್ ರೆನಾಲ್ಡ್ಸ್ ಪೆನ್ ಭಾರತೀಯ ಮಾರುಕಟ್ಟೆಯನ್ನು ತೊರೆಯಲಿದೆ ಎಂದು ಸುದ್ದಿಯಾಗಿತ್ತು. ಆದರೆ, ಇದು ಅಸಲಿ ಸುದ್ದಿಯೇ?

VISTARANEWS.COM


on

Reynolds Pen
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: 90ರ ದಶಕದ ಮಕ್ಕಳಿಗೆ ರೆನಾಲ್ಡ್ಸ್ ಪೆನ್ (Reynolds Pen) ಮೇಲಿನ ಮೋಹ ಎಂಥದ್ದು ಎಂಬುದನ್ನು ಯಾರೂ ಅರಿಯಲಾರರು. ಅಂದಿನ ಶಾಲೆಗೆ ಹೋಗುವ ಪ್ರತಿಯೊಬ್ಬ ಮಕ್ಕಳ ಕೈಯಲ್ಲಿ ರೆನಾಲ್ಡ್ಸ್ ಪೆನ್ ಇರಲೇಬೇಕಿತ್ತು. ಅದೊಂದು ರೀತಿಯ ಹೆಮ್ಮೆ. ಆದರೆ, ರೆನಾಲ್ಡ್ಸ್ ಪೆನ್ ಇನ್ನು ಮುಂದೆ ಭಾರತದಲ್ಲಿ (Indian Market) ಸಿಗುವುದಿಲ್ಲ! ಈ ಕಾಡ್ಗಿಚ್ಚಿನಂತೆ ಹಬ್ಬಿ ಬಹಳಷ್ಟು ಜನರು ತಮ್ಮ ಬಾಲ್ಯದ ದಿನಗಳಿಗೆ ಜಾರಿದರು. ಪೆನ್‌ನೊಂದಿಗಿನ ತಮ್ಮ ನೆನಪುಗಳನ್ನು ಮೆಲುಕು ಹಾಕಿದರು. ಆದರೆ, ಈಗ ಗೊತ್ತಾಗಿರುವ ಮಾಹಿತಿಯ ಪ್ರಕಾರ, ರೆನಾಲ್ಡ್ಸ್ ಪೆನ್ ಭಾರತೀಯ ಮಾರುಕಟ್ಟೆಯನ್ನು ತೊರೆಯುವುದಿಲ್ಲ! ಹೌದು, ಕಂಪನಿಯ ಸ್ವತಃ ಈ ರೀತಿಯ ಹೇಳಿಕೆಯನ್ನು ನೀಡಿ, ತಪ್ಪು ವರದಿಯಾಗಿದೆ ಎಂದು ಹೇಳಿದೆ(Fact-Check).

ಸುದ್ದಿ ಹರಡಿದ್ದು ಹೇಗೆ?

ನ್ಯೂ ಇಂಡಿಯಾ ಎಕ್ಸ್‌ಪ್ರೆಸ್ ದಿನ ಪತ್ರಿಕೆಯು ಗುಡ್ ಬೈ ರೆನಾಲ್ಡ್ಸ್ ಎವರೀಬಡೀಸ್ ಚಾಲ್ಡ್‌ಹುಡ್ ಫ್ರೆಂಡ್ ಎಂಬ ಶೀರ್ಷಿಕೆಯಡಿ ವರದಿಯನ್ನು ಪ್ರಕಟಿಸಿತ್ತು. ಈ ವರದಿಯನ್ನು ಎಕ್ಸ್ ವೇದಿಕೆಯಲ್ಲಿ ಷೇರ್ ಆಗಿತ್ತು. ಈ ಸುದ್ದಿ ವ್ಯಾಪಕವಾಗಿ ಹರಡಿ, ರೆನಾಲ್ಡ್ಸ್ ಪೆನ್ ಇನ್ನು ಮುಂದೆ ಭಾರತದಲ್ಲಿ ಸಿಗುವುದಿಲ್ಲ ಎಂಬ ಮಾಹಿತಿಯೂ ಎಲ್ಲಡೆ ಹರಡಿತು. ಕೆಲವರು ರೆನಾಲ್ಡ್ಸ್ ಕಂಪನಿಯು ಸಂಪೂರ್ಣವಾಗಿ ಭಾರತೀಯ ಮಾರುಕಟ್ಟೆಯನ್ನು ತೊರೆಯಲಿದೆ ಎಂಬ ಸುದ್ದಿಯನ್ನು ಹರಡಿದರು.

ಹಾಗಿದ್ದರೆ ರೆನಾಲ್ಡ್ಸ್ ಪೆನ್ ಇನ್ನು ಇರುವುದಿಲ್ಲವೇ?

ರೆನಾಲ್ಡ್ಸ್ ಪೆನ್ ಭಾರತೀಯ ಮಾರುಕಟ್ಟೆಯನ್ನು ತೊರೆಯಲಿದೆ ಎಂಬ ಮಾಹಿತಿ ಜೋರಾಗಿ ಸದ್ದು ಮಾಡುತ್ತಿರುವಂತೆ ಕಂಪನಿಯೇ ಸ್ವತಃ ಹೇಳಿಕೆಯನ್ನು ನೀಡಬೇಕಾದ ಪ್ರಮೇಯ ಉದ್ಬವವಾಯಿತು. ರೆನಾಲ್ಡ್ಸ್ ಪೆನ್ ಭಾರತೀಯ ಮಾರುಕಟ್ಟೆಯನ್ನು ತೊರೆಯಲಿದೆ ಎಂಬ ಸುದ್ದಿ ಸಂಪೂರ್ಣ ತಪ್ಪು ಮಾಹಿತಿಯಿಂದ ಕೂಡಿದೆ ಎಂದು ಸ್ವತಃ ರೆನಾಲ್ಡ್ಸ್ ಕಂಪನಿಯೇ ಹೇಳಿಕೆಯನ್ನು ನೀಡಿದೆ.

ಈ ಸುದ್ದಿಯನ್ನೂ ಓದಿ: Fact Check Unit: ಪೊಲೀಸರಿಂದಲೇ ಫ್ಯಾಕ್ಟ್ ಚೆಕ್ ಯುನಿಟ್, ಇನ್ನು ಫೇಕ್ ನ್ಯೂಸ್‌ ಹರಡಿದ್ರೆ ಹುಷಾರ್!

ರೆನಾಲ್ಡ್ಸ್ ಕಂಪನಿ ಹೇಳಿದ್ದೇನು?

ರೆನಾಲ್ಡ್ಸ್ ಪೆನ್ ಕುರಿತು ಇತ್ತೀಚೆಗೆ ಅನೇಕ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳಲ್ಲಿನ ಮಾಹಿತಿಯು ತಪ್ಪಾಗಿದೆ. ಭಾರತದಲ್ಲಿ ಸುಮಾರು 45 ವರ್ಷಗಳ ಪರಂಪರೆಯನ್ನು ಹೊಂದಿರುವ ರೆನಾಲ್ಡ್ಸ್ ಗುಣಮಟ್ಟು ಮತ್ತು ಹೊಸತನಕ್ಕೆ ತನ್ನ ಪ್ರಥಮ ಆದ್ಯತೆಯನ್ನು ನೀಡಿದೆ. ಭಾರತದಲ್ಲಿ ರೈಟಿಂಗ್ ಬಿಸಿನೆಸ್ ವಿಸ್ತರಣೆ ಮಾಡುವುದಕ್ಕೆ ನಾವು ಭವಿಷ್ಯವನ್ನು ಹೊಂದಿದ್ದೇವೆ. ಹಾಗಾಗಿ, ಸರಿಯಾದ ಮಾಹಿತಿಗಾಗಿ ನಮ್ಮ ಜಾಲತಾಣ ಮತ್ತು ಸೋಷಿಯಲ್ ಮೀಡಿಯಾಗಳಲ್ಲಿನ ನಮ್ಮ ಖಾತೆಗಳನ್ನು ಪರಿಶೀಲಿಸುವಂತೆ ಕೇಳಿಕೊಳ್ಳುತ್ತೇವೆ. ನೀವು ನಮ್ಮಲ್ಲಿ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದೇ ನಮ್ಮ ಆದ್ಯತೆಯಾಗಿದೆ. ನೀವು ತೋರಿದ ಬೆಂಬಲಕ್ಕೆ ಸದಾ ಚಿರಋಣಿ ಎಂದು ರೆನಾಲ್ಡ್ಸ್ ಇಂಡಿಯಾ ಮ್ಯಾನೇಜ್‌ಮೆಂಟ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Fact Check : ಕರ್ನಾಟಕದವರು ಪಾಪಿಗಳು ಅಂಥ ಹೇಳಿದ್ರಾ ಮೋದಿ; ಕಾಂಗ್ರೆಸ್ ಮಾಡಿದ ಪೋಸ್ಟ್​ ಸುಳ್ಳಾ? ಇಲ್ಲಿದೆ ನಿಜಾಂಶ

ಕ್ಲಿಪ್​ನಲ್ಲಿ ಪ್ರಧಾನಿ ಮೋದಿ ಹಿಂದಿಯಲ್ಲಿ ಹೇಳುತ್ತಿರುವುದು ಈ ರೀತಿ ಕೇಳಿಸುತ್ತದೆ, “ಚುನಾವಣೆಯಲ್ಲಿ ಮಾಡಿದ ಪಾಪಗಳಿಗಾಗಿ ನೀವು ಕರ್ನಾಟಕದ ಜನರನ್ನು ಶಿಕ್ಷಿಸಬೇಕು. ಮುಂಬರುವ ವರ್ಷಗಳಲ್ಲಿ ಮೋದಿ ನಿಮಗೆ ಗ್ಯಾರಂಟಿ ನೀಡುತ್ತಾರೆ. ಈ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಓಡಾಡಿದೆ. “ಕನ್ನಡಿಗರು ಬಿಜೆಪಿಗೆ ಮತ ಹಾಕುತ್ತಾರೆ. ಆದರೆ ಮೋದಿ ಮಾತ್ರ ಕನ್ನಡಿಗರನ್ನು ಪಾಪಿಗಳು ಎಂದು ಕರೆಯುತ್ತಾರೆ, ಎಂದು ಉಲ್ಲೇಖಿಸಲಾಗಿದೆ.

VISTARANEWS.COM


on

Fact check
Koo

ನವದೆಹಲಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸುಳ್ಳುಗಳ ಭರಾಟೆ ಜೋರಾಗಿದೆ. ಡೀಪ್​ಫೇಕ್​ ಸೇರಿದಂತೆ ಎಡಿಟಿಂಗ್​ ತಾಂತ್ರಿಕತೆ ಮಿತಿಮೀರಿ ಅಭಿವೃದ್ಧಿಯಾಗಿರುವ ಕಾರಣ ಸತ್ಯ ಯಾವುದು ಸುಳ್ಳು ಯಾವುದು ಎಂದು ಒಂದೇ ನೋಟಕ್ಕೆ ತಿಳಿದುಕೊಳ್ಳುವುದು ಕೂಡ ಕಷ್ಟವಾಗಿದೆ. ಇದೇ ಮಾದರಿಯಲ್ಲಿ ರೀತಿ ಪ್ರಧಾನಿ ಮೋದಿ (Narendra Modi) ಕರ್ನಾಟಕದ ಜನತೆಯನ್ನು ಪಾಪಿಗಳು ಎಂದು ಕರೆದಿದ್ದಾರೆ ಎಂಬ ವಿಡಿಯೊವೊಂದು ವೈರಲ್​ ಆಗಿದೆ. ಪ್ರಧಾನಿ ಆ ರೀತಿ ಹೇಳಿದ್ದಾರೆ ಎಂಬುದಾಗಿ ಕೇರಳ ಕಾಂಗ್ರೆಸ್​ ಸೇರಿದಂತೆ ಪ್ರತಿಪಕ್ಷಗಳ ಹಲವರ ಎಕ್ಸ್​ ಹ್ಯಾಂಡಲ್​ನಲ್ಲಿ ವಿಡಿಯೊ ಶೇರ್​ ಆಗಿದೆ. ಹಾಗಾದರೆ ಮೋದಿ ಕನ್ನಡದ ಮಂದಿಯನ್ನು ಪಾಪಿಗಳು ಅಂಥ ಹೇಳಿದ್ದು ಹೌದಾ? ಕಾಂಗ್ರೆಸ್​ ಪೋಸ್ಟ್​ ಮಾಡಿದ ವಿಡಿಯೊದ ಸಾಚಾತನವೇನು (Fact Check) ಎಂಬುದನ್ನು ಗಮನಿಸೋಣ.

2024 ರ ಲೋಕಸಭಾ ಚುನಾವಣೆಯ (Lok Sabha Election) ಪ್ರಚಾರದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 29, 2024 ರಂದು ದಾವಣಗೆರೆ ಮತ್ತು ಬೆಳಗಾವಿಯಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಿದ್ದರು. ಈ ಸಭೆಗಳಲ್ಲಿ ಅವರು ಮಾಡಿದ ಭಾಷಣದ ಕ್ಲಿಪ್​ಗಳೇ ಚರ್ಚೆಯ ವಿಷಯವಾಗಿರುವುದು. ಹಿಂದಿನ ಚುನಾವಣೆಯಲ್ಲಿ ಮತದಾನ ಮಾಡಿದ ಕರ್ನಾಟಕದ ಜನ ಪಾಪಿಗಳು. ಅವರನ್ನು ಶಿಕ್ಷಿಸಬೇಕು ಎಂದು ಹೇಳಿದ್ದಾರೆ ಎನ್ನಲಾದ ವಿಡಿಯೊ ವೈರಲ್​ ಆಗಿದೆ.

ಪ್ರತ್ಯೇಕ ಮಾಡಿ ಹಂಚಲಾದ ವಿಡಿಯೊದಲ್ಲಿ ಪ್ರಧಾನಿ ಮೋದಿ ಹಿಂದಿಯಲ್ಲಿ ಹೇಳುತ್ತಿರುವುದು ಈ ರೀತಿ ಕೇಳಿಸುತ್ತದೆ; “ಚುನಾವಣೆಯಲ್ಲಿ ಮಾಡಿದ ಪಾಪಗಳಿಗಾಗಿ ನೀವು ಈ ಕರ್ನಾಟಕದ ಜನರನ್ನು ಶಿಕ್ಷಿಸಬೇಕು. ಮುಂಬರುವ ವರ್ಷಗಳಲ್ಲಿ ಮೋದಿ ನಿಮಗೆ ಗ್ಯಾರಂಟಿ ಕೊಡುತ್ತಾರೆ. ಇದನ್ನೇ ಎತ್ತಿಕೊಂಡು “ಕನ್ನಡಿಗರು ಬಿಜೆಪಿಗೆ ಮತ ಹಾಕುತ್ತಾರೆ. ಆದರೆ ಮೋದಿ ಮಾತ್ರ ಕನ್ನಡಿಗರನ್ನು ಪಾಪಿಗಳು ಎಂದು ಕರೆಯುತ್ತಾರೆ, ಎಂದು ಉಲ್ಲೇಖಿಸಿ ಪ್ರತಿಪಕ್ಷಗಳು ಪೋಸ್ಟ್​ಹಾಕಿಕೊಂಡಿವೆ.

ಕೇರಳ ಕಾಂಗ್ರೆಸ್​ನ ಅಧಿಕೃತ ಎಕ್ಸ್ ಖಾತೆಯಲ್ಲೂ ಇದನ್ನು ಪೋಸ್ಟ್ ಮಾಡಲಾಗಿದೆ “ಮೋದಿ ಸರ್ವಸ್ಸ ಕಳೆದುಕೊಂಡಿದ್ದಾರೆ. ಅವರು ತಮ್ಮ ಸ್ವಯಂ ಗೋಲ್ ಹೊಡೆಯುತ್ತಿದ್ದಾರೆ. ಅವರು ಈಗ ಕರ್ನಾಟಕದ ಜನರನ್ನು ಪಾಪಿಗಳು ಎಂದು ಕರೆದಿದ್ದಾರೆ. ಇಂತಹ ಅವಮಾನಗಳಿಗೆ ಕರ್ನಾಟಕದ ಜನರು ಕಪಾಳಮೋಕ್ಷ ಮಾಡದೇ ಬಿಡುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ನಿರ್ನಾಮವಾಗಲಿದೆ’ ಎಂದು ಬರೆದುಕೊಂಡಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯ ಎಐಸಿಸಿ (ಅಖಿಲ ಭಾರತ ಕಾಂಗ್ರೆಸ್ ಸಮಿತಿ) ಸಂಯೋಜಕ ಗೌರವ್ ಪಾಂಧಿ ಅವರು ಈ ವೀಡಿಯೊಗೆ “ಕರ್ನಾಟಕದ ಜನರು ಬಿಜೆಪಿ ವಿರುದ್ಧ ಮತ ಚಲಾಯಿಸಿದ ಮಾತ್ರಕ್ಕೆ, ಅವರು ಪಾಪಿಗಳು ಎಂದು ಪ್ರಧಾನಿ ಮೋದಿ ಭಾವಿಸುತ್ತಾರೆ.” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Manish Sisodia : ಕೇಜ್ರಿವಾಲ್ ಜತೆಗಾರ ಮನೀಶ್ ಸಿಸೊಡಿಯಾ ಮತ್ತಷ್ಟು ದಿನ ಜೈಲಿನಲ್ಲೇ; ಜಾಮೀನು ಅರ್ಜಿ ವಜಾ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, “ಪ್ರಧಾನಿ ಮೋದಿ ಅವರ ಈ ಹೇಳಿಕೆ ವಿಧಾನಸಭಾ ಚುನಾವಣೆಯಲ್ಲಿನ ಸೋಲಿನ ಹತಾಶೆಯೇ? ಲೋಕಸಭಾ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಯನ್ನು ತಿರಸ್ಕರಿಸುತ್ತಿದ್ದಾರೆ ಎಂಬ ಭಯವೇ? ಎಂದು ಟ್ವೀಟ್​ ಮಾಡಿದ್ದಾರೆ.

ವಾಸ್ತವಾಂಶಗಳು ಯಾವುವು?

ಪ್ರಧಾನಿ ಮೋದಿ ಅವರ ಅಧಿಕೃತ ಯೂಟ್ಯೂಬ್​ ಪೇಜ್​ನಲ್ಲಿ ಭಾಷಣ ನೇರ ಪ್ರಸಾರ ವಿಡಿಯೊ ಹಂಚಿಕೊಳ್ಳಲಾಗಿದೆ. ವೀಡಿಯೊದಲ್ಲಿ ಸುಮಾರು 29:00 ರಿಂದ 31:04 ನಿಮಿಷ ತನಕ ಪಿಎಂ ಮೋದಿ ಅವರು ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ಟೀಕಿಸುತ್ತಾರೆ. ಬಿಜೆಪಿ ಆಡಳಿತದಲ್ಲಿ ಭಾರತೀಯ ರೈತರು ಅನುಭವಿಸಿದ ವಿವಿಧ ಪ್ರಯೋಜನಗಳ ಬಗ್ಗೆ ಮಾತನಾಡಿದ ಮೋದಿ “ಕಾಂಗ್ರೆಸ್ ಇಲ್ಲಿನ ರೈತರಿಗೆ ಮಾಡಿದ ದ್ರೋಹವು ದೊಡ್ಡ ಪಾಪ” ಎಂದು ಹೇಳುತ್ತಾರೆ. ‘ಇಲ್ಲಿ’ ಎಂಬುದು ಕರ್ನಾಟಕ ಎಂಬರ್ಥವಾಗಿದೆ.

“ಬಿಜೆಪಿ ಅಧಿಕಾರದಲ್ಲಿದ್ದಾಗ ರೈತರ ಖಾತೆಗಳಿಗೆ 10,000 ರೂ.ಗಳನ್ನು ಜಮಾ ಮಾಡಲಾಗುತ್ತಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ₹ 4,000 ನೀಡುವುದನ್ನು ನಿಲ್ಲಿಸಿತು. ಅವರು ತಮ್ಮ ಮತವನ್ನು ಪಡೆಯುವಲ್ಲಿ ಯಶಸ್ವಿಯಾದ ನಂತರ, ಅವರು ರೈತರು ಮತ್ತು ಅವರ ಕೆಲಸದ ಬಗ್ಗೆ ಕಾಳಜಿ ವಹಿಸುವುದನ್ನು ನಿಲ್ಲಿಸಿದರು. ಉಳಿದ 6,000 ರೂ.ಗಳನ್ನು ಮೋದಿ ಸರ್ಕಾರ ಕಳುಹಿಸುತ್ತದೆ. ಅದನ್ನು ರೈತರು ಪಡೆಯುತ್ತಾರೆ. ಅವರು ಇಲ್ಲಿ ನೀಡಿದ ಹಣದ ಒಂದು ಭಾಗವನ್ನು ಕಡಿತಗೊಳಿಸಿದರು.” ಎಂದು ಟೀಕಿಸಿದ್ದಾರೆ.

ಮುಂದುವರಿದ ಅವರು “ಈ ಚುನಾವಣೆಯಲ್ಲಿ ಅವರು ಮಾಡಿದ ಪಾಪಗಳಿಗಾಗಿ ನೀವು ಈ ಕರ್ನಾಟಕದ ಜನರು ಶಿಕ್ಷಿಸಬೇಕು. ದೆಹಲಿಯಿಂದ ಕಳುಹಿಸಿದ ಎಲ್ಲವೂ ಮುಂದಿನ ವರ್ಷಗಳಲ್ಲಿ ಮುಂದುವರಿಯುತ್ತದೆ ಎಂಬುದು ಮೋದಿಯ ಭರವಸೆ ” ಎಂದು ಅವರು ಹೇಳಿದ್ದಾರೆ. 31:00ರ ನಿಮಿಷದ ನಂತರ ನೋಡಿದಾಗ ಇದು ಕರ್ನಾಟಕ ಸರ್ಕಾರದ ವಿರುದ್ಧದ ಟೀಕೆ ಎಂಬುದು ಖಾತರಿಯಾಗುತ್ತದೆ.

ಪ್ರಧಾನಿ ಮೋದಿಯವರ ವೆಬೆ್​ಸೈಟ್​ನಲ್ಲಿ ಲಭ್ಯವಿರುವ ಭಾಷಣದ ಟ್ರಾನ್​ಸ್ಕ್ರಿಪ್ಟ್​​ ಈ ಮಾಹಿತಿಯನ್ನು ದೃಢಪಡಿಸುತ್ತದೆ. “ಈ ಚುನಾವಣೆಯಲ್ಲಿ ಮಾಡಿದ ಪಾಪಗಳಿಗಾಗಿ ಈ ಕಾಂಗ್ರೆಸ್ ನಾಯಕರಿಗೆ ಶಿಕ್ಷೆಯಾಗಬೇಕು” ಎಂದು ಅಲ್ಲಿ ಬರೆಯಲಾಗಿದೆ.

ಬೆಳಗಾವಿಯಲ್ಲಿ ಪ್ರಧಾನಿ ಮೋದಿಯವರ ಭಾಷಣದ ಈ ಕ್ಲಿಪ್ ಅನ್ನು ಆಯ್ದು ಎಡಿಟ್ ಮಾಡಲಾಗಿದೆ ಮತ್ತು ಹಿಂದೆ ಮುಂದೆ ಏನೂ ಇಲ್ಲದೆ ಪ್ರಸಾರ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿತ್ತಿದೆ. ಪಿಎಂ ಮೋದಿ ನಿಖರವಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರ ಎಂಬುದಾಗಿ ಹೇಳಿದ್ದರೂ ಕರ್ನಾಟಕದ ಜನರು ಎಂದು ತಪ್ಪುದಾರಿಗೆಳೆಯುವ ವ್ಯಾಖ್ಯಾನ ಮಾಡಲಾಗಿದೆ ಎಂದು ಬಿಜೆಪಿ ಹೇಳಿದೆ.

Continue Reading

ವೈರಲ್ ನ್ಯೂಸ್

Fact Check: ಓವೈಸಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಮಹಿಳೆ ಅಲ್ಲವೆ?

Fact Check: ತಾವು ಮಹಿಳೆಯೇ ಅಲ್ಲ ಎಂದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಹೈದರಾಬಾದ್ ನ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ತಾವು ಮಹಿಳೆಯೇ ಅಲ್ಲ ಎಂದು ಹೇಳಿರುವುದು ನಿಜವೇ, ಅವರು ಯಾಕೆ ಹಾಗೆ ಹೇಳಿದರು. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋದ ನಿಜಾಂಶ ಏನು? ಇಲ್ಲಿದೆ ಸಂಪೂರ್ಣ ವಿವರ.

VISTARANEWS.COM


on

By

Viral Video
Koo

ಹೈದರಾಬಾದ್: ಭಾರತೀಯ ಜನತಾ ಪಕ್ಷದ (BJP) ಹೈದರಾಬಾದ್ ನ (Hyderabad) ಅಭ್ಯರ್ಥಿ ಮಾಧವಿ ಲತಾ (Madhavi Latha) ಅವರು ತಾವು ಮಹಿಳೆಯೇ ಅಲ್ಲ ಎಂದು ಹೇಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗಿದ್ದು, ಇದನ್ನು ನೋಡಿರುವ ನೆಟ್ಟಿಗರು (Fact Check) ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾಧವಿ ಲತಾ ಅವರು “ನಾನು ಮಹಿಳೆ ಅಲ್ಲ” ಎಂದು ಹೇಳುವ ವಿಡಿಯೋವನ್ನು ಕತ್ತರಿಸಿ ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದೆ. ಹೈದರಾಬಾದ್‌ನ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಮಹಿಳೆ ಅಲ್ಲ ಎಂದು ಸುಳ್ಳು ಪ್ರಚಾರವನ್ನೂ ಮಾಡಲಾಗುತ್ತಿದೆ. ಇದರ ಮೂಲ ಸಂದರ್ಶನದಲ್ಲಿ ಲತಾ ಅವರು ತಾನು ಕೇವಲ ಮಹಿಳೆಯಲ್ಲ ಆದರೆ ಶಕ್ತಿ ಎಂದು ಹೇಳಿದ್ದರು.

ಓವೈಸಿ ವಿರುದ್ಧ ಕಣಕ್ಕೆ

ತೆಲಂಗಾಣದ ಹೈದರಾಬಾದ್‌ನಲ್ಲಿ ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನ ಹಾಲಿ ಸಂಸದ ಅಸಾದುದ್ದೀನ್ ಓವೈಸಿ ವಿರುದ್ಧ ಬಿಜೆಪಿಯಿಂದ ಕಣಕ್ಕೆ ಇಳಿದಿರುವ ನಟಿ ಲತಾ ಅವರು ಇತ್ತೀಚೆಗೆ ಪ್ರಚಾರ ಕಾರ್ಯಕ್ರಮವೊಂದರಲ್ಲಿ 221 ಕೋಟಿ ರೂ. ಮೌಲ್ಯದ ಕುಟುಂಬದ ಆಸ್ತಿಯನ್ನು ಘೋಷಿಸಿದ ನಂತರ ಹೈದರಾಬಾದ್ ಕ್ಷೇತ್ರದ ಶ್ರೀಮಂತ ಅಭ್ಯರ್ಥಿಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ: Viral News: ಸಿಂಗಾಪುರ ಏರ್‌ಲೈನ್ಸ್‌ ಪೈಲಟ್‌ ಅಂತಾ ಹೇಳ್ಕೊಂಡು ಪೋಸ್‌ ಕೊಡ್ತಿದ್ದವ ಲಾಕ್‌!

ವಿಡಿಯೋದಲ್ಲಿ ಏನಿದೆ?

ಈಗ ವೈರಲ್ ಆಗಿರುವ ವಿಡಿಯೋದಲ್ಲಿ ಲತಾ ಅವರು ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದು, ಮಹಿಳೆಯಾಗಿ ಪರಿಸ್ಥಿತಿಯನ್ನು ನಿಭಾಯಿಸುವ ಬಗ್ಗೆ ವರದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ, “ನಾನು ಮಹಿಳೆ ಅಲ್ಲ, ದಯವಿಟ್ಟು ನನ್ನನ್ನು ಮಹಿಳೆ ಎಂದು ಕರೆಯಬೇಡಿ”’ ಎಂದು ನೇರವಾಗಿ ಹೇಳಿದ್ದಾರೆ. ಆದರೆ ಮುಂದೆ ಅವರು, ನಾನು ಮಹಿಳೆ ಅಲ್ಲ, ಕೇವಲ ಮಹಿಳೆ ಅಲ್ಲ, ಮಹಾ ಶಕ್ತಿ ಎಂದು ಮಾಧವಿ ಲತಾ ಹೇಳಿದ್ದರು. ಆದರೆ ಈ ಭಾಗ ತೋರಿಸದೆ ತಾವು ಮಹಿಳೆ ಅಲ್ಲ ಎಂದ ದೃಶ್ಯವನ್ನಷ್ಟೇ ಕಟ್ ಮಾಡಿ ಶೇರ್ ಮಾಡಲಾಗುತ್ತದೆ.

ಈ ಕುರಿತು ಹಲವಾರು ಮಂದಿ ನೆಟ್ಟಿಗರು ಕಾಮೆಂಟ್ ಮಾಡಿದ್ದು, ಹಾಗಾದರೆ ಹೈದರಾಬಾದ್ ಬಿಜೆಪಿ ಅಭ್ಯರ್ಥಿ ಮಹಿಳೆ ಅಲ್ಲವೇ, ಮುಖ ನೋಡುವಾಗ ಮಹಿಳೆಯಂತೆ ಕಾಣುತ್ತಾರೆ, ಹಾಗಾದರೆ ಅವರು ಮಂಗಳಮುಖಿಯೇ… ಹೀಗೆ ಹಲವು ರೀತಿಯಲ್ಲಿ ಕಾಮೆಂಟ್ ಗಳನ್ನು ಮಾಡಿದ್ದಾರೆ.


ಸತ್ಯ ಏನು?

ಲತಾ ಅವರು ಮಹಿಳೆ ಅಲ್ಲ ಎಂದು ನೀಡಿರುವ ಹೇಳಿಕೆಯನ್ನು ಕತ್ತರಿಸಿ ಹಂಚಿಕೊಳ್ಳಲಾಗಿದೆ ಎಂದು ಬೂಮ್ ಕಂಡುಹಿಡಿದಿದೆ. ‘ನ್ಯೂಸ್ ನೇಷನ್’ ಎಂಬ ಹಿಂದಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಲತಾ ಅವರು, ಓವೈಸಿ ವಿರುದ್ಧ ಸ್ಪರ್ಧಿಸುತ್ತಿರುವ ವಿಚಾರವಾಗಿ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ್ದಾರೆ. ಅಲ್ಲದೇ ತಾವು ಬಿಜೆಪಿ ಸೇರಿದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಕುರಿತಾದ ಹಲವಾರು ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾರೆ.

ಹೈದರಾಬಾದ್‌ನ ಹಳೆಯ ನಗರ ಭಾಗದ ಕೆಲವು ಪ್ರದೇಶಗಳಿಗೆ ಭೇಟಿ ನೀಡಿಲ್ಲ ಎಂದಿರುವ ಅವರು, ನಗರದ ಅತಿದೊಡ್ಡ ಕೊಳೆಗೇರಿ ವಸಾಹತುಗಳಲ್ಲಿ ಒಂದಾದ ತಾಲಾಬ್ ಕಟ್ಟಾ ಮುಂತಾದವುಗಳ ಬಗ್ಗೆ ವರದಿಗಾರ ಪ್ರಶ್ನೆಗಳಿಗೆ ಉತ್ತರಿಸಿದರು. ಒಬ್ಬ ಮಹಿಳೆಯಾಗಿ ನೀವು ಆ ಪರಿಸ್ಥಿತಿಯನ್ನು ಹೇಗೆ ಎದುರಿಸಲು ಯೋಜಿಸುತ್ತೀರಿ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸಿಟ್ಟಾದ ಸ್ವರದಲ್ಲಿ ನಾನು ಮಹಿಳೆ ಅಲ್ಲ, ನಾನು ಶಕ್ತಿ. ನೀವು ಅದನ್ನು ಮೊದಲು ಸ್ಪಷ್ಟಪಡಿಸಬೇಕು. ನನ್ನನ್ನು ಮಹಿಳೆ ಎಂದು ಪದೇ ಪದೇ ಕರೆಯಬೇಡಿ. ನೀವು ನನ್ನನ್ನು ದುರ್ಬಲ ಎಂದು ಪರಿಗಣಿಸುವಂತೆ ತೋರುತ್ತಿದೆ ಎಂದು ಹೇಳಿದ್ದಾರೆ.

ಇದಾದ ನಂತರ ಲತಾ ಕ್ಯಾಮೆರಾದತ್ತ ತಿರುಗಿ, ನೇರವಾಗಿ ವೀಕ್ಷಕರನ್ನು ಉದ್ದೇಶಿಸಿ, ನಾನು ಒಬ್ಬ ಮಹಿಳೆ ಅಲ್ಲ, ತನ್ನ ಸಹೋದರ ಸಹೋದರಿಯರ ಶಕ್ತಿಯಿಂದ ಇಲ್ಲಿರುವ ಶಕ್ತಿ ಸ್ವತಃ ನಾನು. ಅವರ ಶಕ್ತಿಯಿಂದಾಗಿ ನಾನು ಉಳಿದಿದ್ದೇನೆ ಎಂದು ತಿಳಿಸಿದ್ದಾರೆ.

ಶಕ್ತಿ ಎಂಬ ಪದವನ್ನು ಹಿಂದೂ ಧರ್ಮದಲ್ಲಿ ವಿವಿಧ ರೂಪಗಳಲ್ಲಿ ಪೂಜಿಸುವ ದೈವಿಕ ಸ್ತ್ರೀಲಿಂಗ ಶಕ್ತಿಯನ್ನು ಉಲ್ಲೇಖಿಸಲು ಇದನ್ನು ಬಳಸಲಾಗುತ್ತದೆ. ವೈರಲ್ ಆಗಿರುವ ವಿಡಿಯೋದಲ್ಲಿ ಲತಾ ಅವರ ಹೇಳಿಕೆಯನ್ನು ಕತ್ತರಿಸಿ ಹಾಕಲಾಗಿದೆ.

Continue Reading

Fact Check

Fact Check: ಬೈಕ್ ಕದ್ದು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರೆ ಪಂಜಾಬ್ ಸಿಎಂ ಭಗವಂತ್ ಮಾನ್?

Viral news: ಹತ್ತು ವರ್ಷಗಳ ಹಿಂದೆ ಬೈಕ್ ದರೋಡೆ ಪ್ರಕರಣದಲ್ಲಿ ಮಾನ್ ಅವರು ಬಂಧನಕ್ಕೊಳಗಾದ ಛಾಯಾ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದು ನಿಜವೇ ?

VISTARANEWS.COM


on

By

Viral news
Koo

ಪಂಜಾಬ್: ನಿರಂತರ ಒಂದಲ್ಲ ಒಂದು (Fact Check) ಕಾರಣದಿಂದ ಸುದ್ದಿಯಲ್ಲಿರುವ ಹೊಸದಾಗಿ ಚುನಾಯಿತರಾದ ಪಂಜಾಬ್ (Punjab) ಮುಖ್ಯಮಂತ್ರಿ (Chief Minister) ಭಗವಂತ್ ಮಾನ್ (Bhagwant Mann) ಅವರನ್ನು ಈ ಹಿಂದೆ ಬೈಕ್ ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಧನಕ್ಕೆ ಒಳಪಡಿಸಲಾಗಿತ್ತು ಎನ್ನುವ ಫೋಟೋ ಸಹಿತ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral news) ಆಗಿದೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ವಿವಾದಗಳಿಗೆ ಹೊಸದೇನಲ್ಲ. ರಾಜ್ಯದ ಅತ್ಯುನ್ನತ ಹುದ್ದೆಗೇರಿದ ಬಳಿಕ ಅವರ ಕುರಿತು ಜನರು ತಮ್ಮ ಅಭಿಪ್ರಾಯಗಳನ್ನು ಮತ್ತು ಹಳೆಯ ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದನ್ನು ಸಾಕಷ್ಟು ಮಂದಿ ವೀಕ್ಷಿಸುತ್ತಿದ್ದಾರೆ.

ಇದೀಗ ಸುಮಾರು ಒಂದು ದಶಕದ ಹಿಂದೆ ಬೈಕ್ ದರೋಡೆ ಪ್ರಕರಣದಲ್ಲಿ ಮಾನ್ ಬಂಧನಕ್ಕೊಳಗಾದ ಛಾಯಾ ಚಿತ್ರ ಎಂದು ಹೇಳುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾನ್ ಅವರು ಇತರ ಮೂವರೊಂದಿಗೆ ನೆಲದ ಮೇಲೆ ಕುಳಿತಿರುವ ಈ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಮಂದಿ ವೀಕ್ಷಿಸಿದ್ದಾರೆ.

ಇದನ್ನೂ ಓದಿ: Video Viral: ಜಲ ತರಂಗ್‌ನಲ್ಲಿ ಮಹಿಳೆ ನುಡಿಸಿದ ಐಗಿರಿ ನಂದಿನಿ ವಿಡಿಯೋ ವೈರಲ್

ಈ ಫೋಟೋ ದ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಿದ ನ್ಯೂಸ್‌ಚೆಕರ್ ಇದು ಸುಳ್ಳೆಂದು ತಿಳಿಸಿದೆ. ಆದರೂ ಈ ಚಿತ್ರವನ್ನು ಟ್ವಿಟರ್‌ನಲ್ಲಿ ಸಾಕಷ್ಟು ಮಂದಿ ವೀಕ್ಷಿಸುತ್ತಿದ್ದಾರೆ ಮತ್ತು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಭಗವಂತ್ ಮಾನ್ ಅವರು 2022ರ ಮಾರ್ಚ್ 16ರಂದು ಪಂಜಾಬ್ ನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಮಾಜಿ ಶಾಸಕರಿಗೆ ಪಿಂಚಣಿ ಪಾವತಿ, ಶಿಕ್ಷಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಅವರ ಸರ್ಕಾರದ ‘ದೊಡ್ಡ’ ನಿರ್ಧಾರಗಳಿಗಾಗಿ ಅವರು ನಿರಂತರ ಸುದ್ದಿಯಲ್ಲಿದ್ದಾರೆ.


ಮಾನ್ ಅವರನ್ನು ಪಂಜಾಬ್‌ನಲ್ಲಿ ಎಎಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದಾಗಿನಿಂದ ಹಾಸ್ಯನಟ-ರಾಜಕಾರಣಿ ಮಾನ್ ಅವರನ್ನು ಪದೇ ಪದೇ ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಮಾಡಲಾಗುತ್ತಿದೆ. ಪಂಜಾಬ್ ಸಿಎಂ ಬಗೆಗಿನ ಹಲವಾರು ಸುಳ್ಳು ಮಾಹಿತಿಗಳನ್ನು ನ್ಯೂಸ್‌ಕೆಕರ್ ತನಿಖೆ ನಡೆಸಿದೆ.

ಇದೀಗ ವೈರಲ್ ಆಗಿರುವ ಚಿತ್ರದ ಹುಡುಕಾಟ ನಡೆಸಿದಾಗ ಪಂಜಾಬಿ ಗಾಯಕ ಮತ್ತು ನಟ ಕರಮ್‌ಜಿತ್ ಅನ್ಮೋಲ್ ಅವರು ಮ್ಯಾಚ್ 18ರಂದು ಫೇಸ್‌ಬುಕ್ ನಲ್ಲಿ ಮಾಡಿರುವ ಪೋಸ್ಟ್ ಸಿಕ್ಕಿದೆ. ಅದರಲ್ಲಿ ಅವರು ಭಗವಂತ್ ಮಾನ್ ಮತ್ತು ಮಂಜಿತ್ ಸಿಧು ಅವರೊಂದಿಗೆ ಹೋಳಿ ನೆನಪುಗಳು ಎಂಬ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಬೈಕ್ ಕಳ್ಳತನ ಪ್ರಕರಣದಲ್ಲಿ ಮಾನ್ ಬಂಧನ ಎಂಬಂತೆ ಬಿಂಬಿಸಿರುವ ಈ ಚಿತ್ರ ದ ಹೇಳಿಕೆಯನ್ನು ಮಂಜಿತ್ ಸಿಧು ಅವರು ತಳ್ಳಿಹಾಕಿದ್ದಾರೆ. ಇದು ನಕಲಿ ಸುದ್ದಿ ಎಂದು ಹೇಳಿದ್ದಾರೆ.


ಈ ಚಿತ್ರವನ್ನು 1994 ಅಥವಾ 1995 ರಲ್ಲಿ ಕೆನಡಾದ ಗಾಯಕ ಹರ್ಭಜನ್ ಮಾನ್ ಭಾರತಕ್ಕೆ ಬಂದಾಗ ಪಟಿಯಾಲದಲ್ಲಿ ತೆಗೆದಿದ್ದಾರೆ. ಹೋಳಿ ಹಬ್ಬದಂದು ಹರ್ಭಜನ್ ಮಾನ್ ಅವರ ಮನೆಯ ಟೆರೇಸ್‌ನಲ್ಲಿ ಚಿತ್ರ ತೆಗೆಯಲಾಗಿದೆ. ಭಗವಂತ್ ಮಾನ್, ಕರಮ್ಜಿತ್ ಅನ್ಮೋಲ್ ಮತ್ತು ಹರ್ಭಜನ್ ಮಾನ್ ಕೂಡ ಅಲ್ಲಿ ಹಾಜರಿದ್ದರು. ಭಗವಂತ್ ಮಾನ್ ಮತ್ತು ನಾನು ಕಾಲೇಜು ದಿನಗಳಿಂದಲೂ ಸ್ನೇಹಿತರಾಗಿದ್ದೇವೆ ಎಂದು ಸಿಧು ತಿಳಿಸಿದ್ದಾರೆ.

ಈ ಕುರಿತು ಮತ್ತಷ್ಟು ಸ್ಪಷ್ಟಿಕರಣಕ್ಕಾಗಿ ಮಾನ್ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ ಅನ್ನು ಪರಿಶೀಲಿಸಲಾಗಿದೆ. ಆದರೆ ಯಾವುದೇ ಅಪರಾಧ ಪ್ರಕರಣದಲ್ಲಿ ಅವರು ಭಾಗಿಯಾಗಿರುವ ಬಗ್ಗೆ ಅದರಲ್ಲಿ ಯಾವುದೇ ಉಲ್ಲೇಖವಿಲ್ಲ ಎಂದು ತಿಳಿದು ಬಂದಿದೆ.

Continue Reading

ವೈರಲ್ ನ್ಯೂಸ್

Viral news: ಚುನಾವಣೆಗೆ ಮೊದಲೇ 19 ಲಕ್ಷ ಇವಿಎಂ ಕಾಣೆಯಾಗಿದ್ದು ನಿಜವೇ? ಏನಿದರ ಅಸಲಿಯತ್ತು ?

Viral news: ಲೋಕಸಭೆ ಚುನಾವಣೆಗೂ ಮುನ್ನ 1.9 ಮಿಲಿಯನ್ ಇವಿಎಂಗಳನ್ನು ಕಳವು ಮಾಡಲಾಗಿದೆ ಎನ್ನುವ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕಳವಾಗಿರುವ ಇವಿಎಂ ಗಳು ಎಲ್ಲಿ ಹೋಗಿವೆ ? ಈ ಸುದ್ದಿ ಎಲ್ಲಿಂದ ಬಂತು ಗೊತ್ತೇ ?

VISTARANEWS.COM


on

By

Viral news
Koo

ನವದೆಹಲಿ: ಲೋಕಸಭಾ ಚುನಾವಣೆ- 2024ರ (Lok sabha election-2024) ಮೊದಲ ಹಂತದ ಮತದಾನ ಪ್ರಕ್ರಿಯೆಗಳು ಶುಕ್ರವಾರ ದೇಶದ ವಿವಿಧ ಭಾಗಗಳಲ್ಲಿ ನಡೆದಿದೆ. ಮತದಾನ ಪ್ರಾರಂಭಕ್ಕೂ ಮೊದಲು 1.9 ಮಿಲಿಯನ್ ಎಲೆಕ್ಟ್ರಾನಿಕ್ ಮತಯಂತ್ರಗಳು (EVM) ಕಾಣೆಯಾಗಿವೆ ಎನ್ನುವ ಕುರಿತು ಸಾಮಾಜಿಕ ಜಾಲತಾಣದಲ್ಲಿ (social media) ಸಂದೇಶ ಹರಡಿದ್ದು (viral news) ಇದು ಸುಳ್ಳು ಎಂದು ತಿಳಿದು ಬಂದಿದೆ.

ಏಪ್ರಿಲ್ 19ರಂದು 2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಾರಂಭವಾಗುವ ಮೊದಲು ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರಲು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯನ್ನು ಹಂಚಿಕೊಳ್ಳಲಾಗಿತ್ತು. ಇದರಲ್ಲಿ 1.9 ಮಿಲಿಯನ್ ಎಲೆಕ್ಟ್ರಾನಿಕ್ ಮತಯಂತ್ರಗಳು ಕಾಣೆಯಾಗಿದೆ ಎಂದು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅನೇಕ ಬಳಕೆದಾರರು ಹೇಳಿಕೊಂಡಿದ್ದರು.

ಈ ಕುರಿತು ತನಿಖೆ ನಡೆಸಿದ ವಿಶ್ವಸ್ ನ್ಯೂಸ್ ಈ ಹೇಳಿಕೆ ಸುಳ್ಳು ಎಂದು ಪತ್ತೆ ಹಚ್ಚಿದೆ. ಚುನಾವಣಾ ಆಯೋಗವೂ ಕೂಡ ಇದೊಂದು ನಕಲಿ ಸುದ್ದಿ ಎಂದು ಹೇಳಿದೆ. ಈ ವರ್ಷದ ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್ ಕೂಡ ಇವಿಎಂ ನಾಪತ್ತೆಯಾಗಿರುವ ಆರೋಪಗಳನ್ನು ತಳ್ಳಿಹಾಕಿತ್ತು.

ಇದನ್ನೂ ಓದಿ: Viral Video: 7 ಮಕ್ಕಳನ್ನು ದೇವರು ಕೊಟ್ಟಿದ್ದಾದರೆ ಬಡತನಕ್ಕೆ ಮೋದಿ ಹೇಗೆ ಕಾರಣ? ಮುಸ್ಲಿಂ ಮಹಿಳೆಗೆ ತರಾಟೆ!


ಸುಳ್ಳು ಸುದ್ದಿ

ಸಾಮಾಜಿಕ ಮಾಧ್ಯಮ ಬಳಕೆದಾರ ನಿಹಾಲ್ ಸಿಂಗ್ ನಿಗಮ್ ಅವರು, 1.9 ಮಿಲಿಯನ್ ಇವಿಎಂ ಯಂತ್ರಗಳನ್ನು ಕಳವು ಮಾಡಲಾಗಿದೆ ಮತ್ತು ಈ ಬಗ್ಗೆ ಯಾವುದೇ ಕುರುಹು ಕಂಡು ಬಂದಿಲ್ಲ ಎನ್ನುವ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಅಂದಿನಿಂದ ಈ ಪೋಸ್ಟ್ ಭಾರೀ ವೈರಲ್ ಆಗಿದೆ. ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಲವಾರು ಬಳಕೆದಾರರು ಇದನ್ನು ಹಂಚಿಕೊಂಡಿದ್ದಾರೆ.


ತನಿಖೆಯಲ್ಲೇನಿದೆ?

ದಿ ಎಕನಾಮಿಕ್ ಟೈಮ್ಸ್ ನ ಮಾರ್ಚ್ 15 ವರದಿಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರಲು 2016 ಮತ್ತು 2019 ರ ನಡುವೆ ಚುನಾವಣಾ ಆಯೋಗದ ಮೇಲ್ವಿಚಾರಣೆಯಲ್ಲಿ 1.9 ಮಿಲಿಯನ್ ಇವಿಎಂಗಳು ನಾಪತ್ತೆಯಾಗಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಶುಕ್ರವಾರ ಅರ್ಜಿಯನ್ನು ವಜಾಗೊಳಿಸಿತ್ತು. 1.9 ಮಿಲಿಯನ್ ಇವಿಎಂಗಳು ಕಾಣೆಯಾಗಿದೆ ಎಂದು ಐಎನ್‌ಸಿ ಹೇಳಿರುವುದು ಸಂಪೂರ್ಣವಾಗಿ ಆಧಾರ ರಹಿತವಾಗಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

2019ರಲ್ಲಿಯೂ ನಾಪತ್ತೆಯಾದ ಇವಿಎಂಗಳ ವರದಿಗಳು ಬಂದಿದ್ದವು. ಫ್ರಂಟ್‌ಲೈನ್ ಮತ್ತು ಟಿವಿ9 ಭಾರತ ವರ್ಷ್ ಈ ಕುರಿತು ವರದಿಗಳನ್ನು ಪ್ರಕಟಿಸಿತ್ತು. ಇದನ್ನೂಚುನಾವಣಾ ಆಯೋಗವು ಆಧಾರ ರಹಿತ ಎಂದು ಹೇಳಿ ಟ್ವಿಟ್ ಮಾಡಿದೆ.

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿರುವ FAQ ವಿಭಾಗದಲ್ಲಿಯೂ ಈ ಸಮಸ್ಯೆಯನ್ನು ಉಲ್ಲೇಖಿಸಲಾಗಿದೆ. ವೈರಲ್ ಹಕ್ಕು ಕುರಿತು ಚುನಾವಣಾ ಆಯೋಗದ ಅಧಿಕಾರಿಗಳನ್ನು ಸಂಪರ್ಕಿಸಿರುವ ವಿಶ್ವಸ್ ನ್ಯೂಸ್ ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಷಯದ ಕುರಿತು ಸ್ಪಷ್ಟೀಕರಣವನ್ನು ನೀಡಲಾಗಿದೆ ಎಂದು ತಿಳಿಸಿರುವುದಾಗಿ ತಿಳಿದು ಬಂದಿದೆ.

Continue Reading
Advertisement
IPL 2024
ಕ್ರೀಡೆ5 mins ago

IPL 2024: ಹ್ಯಾಟ್ರಿಕ್​ ಗೆಲುವು ಸಾಧಿಸಿದ ಆರ್​ಸಿಬಿಯ ಪ್ಲೇ ಆಫ್ ಲೆಕ್ಕಾಚಾರ ಹೇಗಿದೆ?

HD Revanna
ಕರ್ನಾಟಕ21 mins ago

HD Revanna: ಎಚ್‌.ಡಿ.ರೇವಣ್ಣ ಮುಂದಿನ ಕಾನೂನು ಹೋರಾಟ ಯಾವ ರೀತಿ ಇರಲಿದೆ? ಇಲ್ಲಿದೆ ಮಾಹಿತಿ

Shreyas Talpade hints his heart attack side effect of Covid vaccine
ಬಾಲಿವುಡ್27 mins ago

Shreyas Talpade: ಶ್ರೇಯಸ್‌ ತಲ್ಪಾಡೆ ಹೃದಯಾಘಾತಕ್ಕೆ ಕೋವಿಡ್ ವ್ಯಾಕ್ಸಿನ್‌ ಕಾರಣವಂತೆ! ನಟ ಹೇಳಿದ್ದೇನು?

IPL 2024 Points Table
ಕ್ರಿಕೆಟ್35 mins ago

IPL 2024 Points Table: 7ನೇ ಸ್ಥಾನಕ್ಕೇರಿದ ಆರ್​ಸಿಬಿ; ಮುಂಬೈಗೆ ಕೊನೆಯ ಸ್ಥಾನ

Blood Pressure
ಆರೋಗ್ಯ37 mins ago

Blood Pressure: ರಕ್ತದೊತ್ತಡ ನಿಯಂತ್ರಿಸಲು ಈ ಆಹಾರಗಳು ಸೂಕ್ತ

Prajwal Revanna Case
ಕರ್ನಾಟಕ38 mins ago

Prajwal Revanna Case: ದುಬೈ ವಿಮಾನದಲ್ಲೂ ರಾಜ್ಯಕ್ಕೆ ಬಾರದ ಸಂಸದ ಪ್ರಜ್ವಲ್ ರೇವಣ್ಣ

Tips To Prevent Curd
ಆಹಾರ/ಅಡುಗೆ49 mins ago

Tips To Prevent Curd: ಮೊಸರು ಹುಳಿಯಾಗದೇ ಇರಲು ಈ ಟಿಪ್ಸ್ ಪಾಲಿಸಿ

Terrorist attack
ದೇಶ1 hour ago

Terrorist Attack: ಪೂಂಚ್​​ನಲ್ಲಿ ಭಯೋತ್ಪಾದಕರ ದಾಳಿ; ಓರ್ವ ಯೋಧ ಹುತಾತ್ಮ, ಐವರ ಸ್ಥಿತಿ ಗಂಭೀರ

HD Revanna
ಕರ್ನಾಟಕ1 hour ago

HD Revanna: ತಡರಾತ್ರಿವರೆಗೂ ರೇವಣ್ಣರನ್ನು ವಿಚಾರಣೆ ನಡೆಸಿದ ಎಸ್‌ಐಟಿ ಅಧಿಕಾರಿಗಳು

Prawal Revanna Case
ಕರ್ನಾಟಕ2 hours ago

Prajwal Revanna Case: ಕುಮಾರಸ್ವಾಮಿಯನ್ನು ಭೇಟಿಯಾಗಲು ಒಪ್ಪದ ಅಮಿತ್ ಶಾ; ಹೋಟೆಲ್‌ಗೆ ಬಂದು ವಾಪಸ್ ಹೋದ ಎಚ್ ಡಿ ಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌