Medicine Price: ಜನರಿಗೆ ಬಿಗ್‌ ರಿಲೀಫ್‌; 800 ಔಷಧಗಳ ಬೆಲೆ ಏರಿಕೆ ಇಲ್ಲ ಎಂದ ಕೇಂದ್ರ - Vistara News

ದೇಶ

Medicine Price: ಜನರಿಗೆ ಬಿಗ್‌ ರಿಲೀಫ್‌; 800 ಔಷಧಗಳ ಬೆಲೆ ಏರಿಕೆ ಇಲ್ಲ ಎಂದ ಕೇಂದ್ರ

Medicine Price: ಏಪ್ರಿಲ್‌ 1ರಿಂದಲೇ ದೇಶದಲ್ಲಿ ಸುಮಾರು 800 ಅಗತ್ಯ ಔಷಧಗಳ ಬೆಲೆ ಏರಿಕೆಯಾಗಿದೆ ಎಂಬ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ, ಮಾಧ್ಯಮಗಳಲ್ಲಿ ಮಾಹಿತಿ ಹರಿದಾಡಿತ್ತು. ಆದರೆ, ಕೇಂದ್ರ ಸರ್ಕಾರವು ಈ ವರದಿಗಳನ್ನು ಅಲ್ಲಗಳೆದಿದೆ. ಸುಮಾರು 782 ಔಷಧಗಳ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇದರಿಂದ ಜನ ನಿಟ್ಟುಸಿರು ಬಿಡುವಂತಾಗಿದೆ.

VISTARANEWS.COM


on

Medicine Price
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನವದೆಹಲಿ: ದೇಶದಲ್ಲಿ ಸುಮಾರು 800 ಅಗತ್ಯ ಔಷಧಗಳ ಬೆಲೆ (Medicine Price) ಏಪ್ರಿಲ್‌ 1ರಿಂದ ಏರಿಕೆಯಾಗಿದೆ. ಜನ ಸಾಮಾನ್ಯರಿಗೆ ಬೇಕಾಗಿರುವ ಔಷಧಗಳ ಬೆಲೆಯನ್ನು ಶೇ.10ರಿಂದ ಶೇ.12ರಷ್ಟು ಏರಿಕೆಯಾಗಿದೆ. ಇದರಿಂದ ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ತಾಗಿದೆ. ಅಡುಗೆ ಅನಿಲ ಸಿಲಿಂಡರ್‌, ಪೆಟ್ರೋಲ್‌, ಡೀಸೆಲ್‌ ಜತೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಔಷಧಗಳೂ ತುಟ್ಟಿಯಾಗಿರುವುದು ಜನರಿಗೆ ಭಾರಿ ಹೊಡೆತ ಬಿದ್ದಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಔಷಧಗಳ ಬೆಲೆ ಏರಿಕೆ ಕುರಿತು ಮಾಧ್ಯಮಗಳಲ್ಲೂ ವರದಿಯಾಗಿದೆ. ಆದರೆ, ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು (Central Government) ಮಹತ್ವದ ಸ್ಪಷ್ಟನೆ ನೀಡಿದ್ದು, ಔಷಧಗಳ ಬೆಲೆಯೇರಿಕೆಯಾಗಿಲ್ಲ ಎಂದು ತಿಳಿಸಿದೆ.

“ಏಪ್ರಿಲ್‌ 1ರಿಂದ 500ಕ್ಕೂ ಅಧಿಕ ಔಷಧಗಳ ಬೆಲೆಯಲ್ಲಿ ಶೇ.12ರಷ್ಟು ಬೆಲೆ ಏರಿಕೆಯಾಗಿದೆ ಎಂಬ ವದಂತಿಗಳು, ವರದಿಗಳು ಸತ್ಯಕ್ಕೆ ದೂರವಾಗಿವೆ. ಜನರ ಹಾದಿ ತಪ್ಪಿಸಲು ಇಂತಹ ವರದಿಗಳನ್ನು ಪಸರಿಸಲಾಗಿದೆ. ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರವು ಸಗಟು ಬೆಲೆ ಸೂಚ್ಯಂಕದ ಆಧಾರದ ಬೆಲೆ ಏರಿಕೆ ಮಾಡುತ್ತದೆ. ಆದರೆ, 782 ಔಷಧಗಳ ಬೆಲೆಯಲ್ಲಿ ಯಾವುದೇ ಏರಿಕೆಯಾಗಿಲ್ಲ. ಇನ್ನು ಸುಮಾರು 54 ಔಷಧಗಳ ಬೆಲೆಯು ಒಂದು ಪೈಸೆ ಮಾತ್ರ ಏರಿಕೆಯಾಗಿದೆ” ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ತಿಳಿಸಿದೆ.

ಅಗತ್ಯ ಔಷಧಗಳ ಪಟ್ಟಿಯಲ್ಲಿ ಪ್ಯಾರಸಿಟಮಾಲ್‌ನಂತಹ ಮಾತ್ರೆಗಳು, ಬ್ಯಾಕ್ಟೀರಿಯಾದ ಸೋಂಕುಗಳಿಗೆ ಚಿಕಿತ್ಸೆ ನೀಡಲು ಬಳಸುವ ಅಜಿಥ್ರೊಮೈಸಿನ್‌ನಂತಹ ಆ್ಯಂಟಿಬಯಾಟಿಕ್ಸ್‌, ರಕ್ತಹೀನತೆ ವಿರೋಧಿ ಔಷಧಗಳು, ಜೀವಸತ್ವಗಳು ಮತ್ತು ಖನಿಜಗಳು ಸೇರಿವೆ. ಜತೆಗೆ ಮಧ್ಯಮದಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗುವ ಕೋವಿಡ್ -19 ರೋಗಿಗಳ ಚಿಕಿತ್ಸೆಗೆ ಬಳಸುವ ಕೆಲವು ಔಷಧಗಳು ಮತ್ತು ಸ್ಟೀರಾಯ್ಡ್‌ಗಳ ಬೆಲೆ ಶೇ.12ರಷ್ಟು ಹೆಚ್ಚಾಗಿದೆ ಎಂಬ ಸುದ್ದಿ ಹರಿದಾಡಿತ್ತು.

ಅಗತ್ಯ ಔಷಧಿಗಳ ರಾಷ್ಟ್ರೀಯ ಪಟ್ಟಿ (National List of Essential Medicines)ಯ ಅಡಿಯಲ್ಲಿ ಬರುವ ಔಷಧಗಳ ಬೆಲೆಯಲ್ಲಿ .0055% ಹೆಚ್ಚಳಕ್ಕೆ ಸರ್ಕಾರ ಅನುಮತಿ ನೀಡಲು ಸಜ್ಜಾಗಿದೆ. ಕಳೆದ ವರ್ಷ ಮತ್ತು 2022ರಲ್ಲಿ ಈ ಔಷಧಗಳ ಬೆಲೆಗಳಲ್ಲಿ 12% ಮತ್ತು 10%ದಷ್ಟು ಭಾರಿ ಹೆಚ್ಚಳದ ನಂತರ ಮತ್ತೊಮ್ಮೆ ದರ ಹೆಚ್ಚಿಸಲಾಗುತ್ತಿದೆ. ನಿಗದಿತ ಔಷಧಗಳ ಬೆಲೆಗಳ ಬದಲಾವಣೆಯನ್ನು ವರ್ಷಕ್ಕೊಮ್ಮೆ ಅನುಮತಿಸಲಾಗುತ್ತದೆ ಎಂದು ಹೇಳಲಾಗಿತ್ತು.

ಇದನ್ನೂ ಓದಿ: Benefits Of Ginger: ಶುಂಠಿ ಘಾಟು, ಘಮಕ್ಕೆ ಮಾತ್ರವಲ್ಲ; ಔಷಧಕ್ಕೂ ಬೇಕು!

ಕೆಲ ವರ್ಷಗಳಲ್ಲಿ ಎಷ್ಟು ಏರಿಕೆ?

ಉತ್ಪಾದನಾ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಔಷಧ ತಯಾರಕರು ದರ ವೃದ್ಧಿಸಲು ಆಗ್ರಹಿಸುತ್ತಿದ್ದಾರೆ. ಉದ್ಯಮದ ತಜ್ಞರ ಪ್ರಕಾರ, ಕಳೆದ ಕೆಲವು ವರ್ಷಗಳಲ್ಲಿ ಕೆಲವು ಪ್ರಮುಖ ಔಷಧೀಯ ಪದಾರ್ಥಗಳ ಬೆಲೆಗಳು 15% ಮತ್ತು 130% ನಡುವೆ ಹೆಚ್ಚಾಗಿದೆ. ಜತೆಗೆ ಪ್ಯಾರಸಿಟಮಾಲ್ ಬೆಲೆ 130% ಮತ್ತು ಎಕ್ಸಿಪಿಯೆಂಟ್‌ಗಳ ಬೆಲೆ 18-262% ಹೆಚ್ಚಾಗಿದೆ. ಗ್ಲಿಸರಿನ್ ಮತ್ತು ಪ್ರೊಪಿಲೀನ್ ಗ್ಲೈಕಾಲ್, ಸಿರಪ್‌ಗಳು ಸೇರಿದಂತೆ ಪ್ರತಿ ಔಷಧ ತಯಾರಿಕೆಯಲ್ಲಿ ಬಳಸುವ ದ್ರಾವಕಗಳು ಕ್ರಮವಾಗಿ 263% ಮತ್ತು 83%ದಷ್ಟು ದುಬಾರಿಯಾಗಿವೆ. ಮಧ್ಯವರ್ತಿಗಳ ಬೆಲೆಗಳು ಸಹ 11% ಮತ್ತು 175% ನಡುವೆ ಹೆಚ್ಚಾಗಿದೆ. ಪೆನ್ಸಿಲಿನ್ ಜಿ 175% ದುಬಾರಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ದೆಹಲಿ ಏರ್‌ಪೋರ್ಟ್‌ನಲ್ಲಿ ಅಪಘಾತ: ಟೇಕಾಫ್ ಆಗುವಾಗ ಸ್ವಿಸ್ ಏರ್ ವಿಮಾನದ ಎಂಜಿನ್‌ನಲ್ಲಿ ಬೆಂಕಿ; ಆರು ಮಂದಿಗೆ ಗಾಯ!

VISTARANEWS.COM


on

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗಿನ ಜಾವ ಭೀಕರ ವಿಮಾನ ಅಪಘಾತವೊಂದು ಸಂಭವಿಸಿದೆ. ಸ್ವಿಟ್ಜರ್‌ಲ್ಯಾಂಡ್‌ನ ಜ್ಯೂರಿಚ್‌ಗೆ ಹಾರಲು ಸಿದ್ಧವಾಗಿದ್ದ ಸ್ವಿಸ್ ಏರ್ ವಿಮಾನ (LX147) ರನ್‌ವೇನಲ್ಲಿ ಟೇಕಾಫ್ ಆಗಲು ವೇಗವಾಗಿ ಚಲಿಸುತ್ತಿದ್ದಾಗ, ಅದರ ಒಂದು ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ದಿಢೀರ್ ಬೆಂಕಿ ಹೊತ್ತಿಕೊಂಡಿದೆ. ಬೆಳಗಿನ ಜಾವ 1.08ರ ಸುಮಾರಿಗೆ ಸಂಭವಿಸಿದ ಈ ಘಟನೆಯಿಂದ ವಿಮಾನದಲ್ಲಿದ್ದ 228 ಪ್ರಯಾಣಿಕರು ಮತ್ತು ನಾಲ್ವರು ಶಿಶುಗಳು ಸೇರಿದಂತೆ ಒಟ್ಟು 232 ಮಂದಿ ಕೆಲಕಾಲ ಆತಂಕದ ಸುಳಿಯಲ್ಲಿ ಸಿಲುಕಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪೈಲಟ್ ಸಮಯಪ್ರಜ್ಞೆ ಮೆರೆದು ಟೇಕಾಫ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದ್ದರಿಂದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.

ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಮುನ್ನೆಚ್ಚರಿಕೆ ಕ್ರಮವಾಗಿ ತುರ್ತು ನಿರ್ಗಮನ ಸ್ಲೈಡ್‌ಗಳನ್ನು (Emergency Slides) ಬಳಸಿ ಪ್ರಯಾಣಿಕರನ್ನು ಸ್ಥಳಾಂತರಿಸಲಾಯಿತು. ಈ ಅವಸರದ ಸ್ಥಳಾಂತರ ಪ್ರಕ್ರಿಯೆಯಲ್ಲಿ ಆರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ವಿಮಾನದ ಸಿಬ್ಬಂದಿ ವರ್ಗದವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ಸ್ಲೈಡ್‌ಗಳನ್ನು ಬಳಸಲು ಸಾಧ್ಯವಾಗದ ಕೆಲವು ಪ್ರಯಾಣಿಕರಿಗೆ ಪರ್ಯಾಯ ಮೆಟ್ಟಿಲುಗಳ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕೆಳಗಿಳಿಸಲಾಯಿತು.

ಘಟನೆಗೆ ಸಂಬಂಧಿಸಿದಂತೆ ಸ್ವಿಸ್ ಏರ್ ಸಂಸ್ಥೆಯು ಈಗಾಗಲೇ ತನಿಖಾ ಕಾರ್ಯಪಡೆಯನ್ನು ರಚಿಸಿದೆ. ವಿಮಾನಯಾನ ಸಂಸ್ಥೆಯ ತಾಂತ್ರಿಕ ತಜ್ಞರು ದೆಹಲಿಗೆ ಆಗಮಿಸಿ ವಿಮಾನದ ಎಂಜಿನ್ ವಿಫಲವಾಗಲು ನಿಖರ ಕಾರಣವೇನು ಎಂಬುದನ್ನು ಪರಿಶೀಲಿಸಲಿದ್ದಾರೆ. ಸದ್ಯ ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಪ್ರಯಾಣಿಕರಿಗೆ ಸ್ಥಳೀಯ ತಂಡಗಳು ನೆರವು ನೀಡುತ್ತಿದ್ದು, ಅವರಿಗೆ ಹೋಟೆಲ್ ವಸತಿ ಮತ್ತು ಮರು ಬುಕಿಂಗ್ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಪ್ರಯಾಣಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ ಎಂದು ತಿಳಿಸಿರುವ ಸಂಸ್ಥೆಯು, ಸ್ಥಳೀಯ ಅಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿರುವುದಾಗಿ ಸ್ಪಷ್ಟಪಡಿಸಿದೆ.

Continue Reading

Latest

ಅಂಬಾನಿ ಮನೆ ಅಡುಗೆಮನೆ ಮೆನು ಹೇಗಿರುತ್ತೆ ಗೊತ್ತಾ? ಪ್ರತಿದಿನ 4000 ರೊಟ್ಟಿ ತಯಾರಾಗುವುದರ ಹಿಂದಿನ ಅಸಲಿ ಕಾರಣವೇನು?

VISTARANEWS.COM


on

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಅವರ ನಿವಾಸ ‘ಆಂಟಿಲಿಯಾ’ ಕೇವಲ ಐಷಾರಾಮಿ ಜೀವನಕ್ಕೆ ಮಾತ್ರವಲ್ಲ, ಅಲ್ಲಿನ ಶಿಸ್ತುಬದ್ಧ ಆಹಾರ ಪದ್ಧತಿಗೂ ಹೆಸರುವಾಸಿ. ಅಂಬಾನಿ ಕುಟುಂಬದ ಸದಸ್ಯರು ಅಪ್ಪಟ ಸಸ್ಯಾಹಾರಿಗಳಾಗಿದ್ದು, ಅತ್ಯಂತ ಸಾತ್ವಿಕ ಹಾಗೂ ಪೌಷ್ಟಿಕ ಆಹಾರವನ್ನು ಸೇವಿಸುತ್ತಾರೆ. ಮುಖೇಶ್ ಅಂಬಾನಿ ಅವರ ದಿನಚರಿ ಬೆಳಿಗ್ಗೆ ಪಪ್ಪಾಯಿ ರಸ ಮತ್ತು ಇಡ್ಲಿ-ಸಾಂಬಾರ್‌ನೊಂದಿಗೆ ಆರಂಭವಾದರೆ, ನೀತಾ ಅಂಬಾನಿ ಅವರು ಹಣ್ಣುಗಳು ಹಾಗೂ ಡ್ರೈಫ್ರೂಟ್ಸ್ ಗೆ ಆದ್ಯತೆ ನೀಡುತ್ತಾರೆ. ಮಧ್ಯಾಹ್ನದ ಊಟದಲ್ಲಿ ಗುಜರಾತಿ ಶೈಲಿಯ ದಾಲ್, ಅನ್ನ, ರೊಟ್ಟಿ ಮತ್ತು ಸಲಾಡ್‌ಗಳಿದ್ದರೆ, ರಾತ್ರಿಯ ಭೋಜನದಲ್ಲಿ ಆರೋಗ್ಯಕ್ಕೆ ಪೂರಕವಾದ ರಾಗಿ ರೊಟ್ಟಿ ಮತ್ತು ಹಗುರವಾದ ತರಕಾರಿ ಖಾದ್ಯಗಳಿರುತ್ತವೆ.

ಆಂಟಿಲಿಯಾದಲ್ಲಿ ಪ್ರತಿದಿನ ಬರೋಬ್ಬರಿ 4,000 ರೊಟ್ಟಿಗಳು ತಯಾರಾಗುತ್ತವೆ ಎಂಬ ಸುದ್ದಿ ಕೇಳಲು ಅಚ್ಚರಿಯೆನಿಸಿದರೂ ಇದರ ಹಿಂದೆ ಒಂದು ಅಚ್ಚರಿಯ ಕಾರಣವಿದೆ. ಅಂಬಾನಿ ಕುಟುಂಬದ ಸದಸ್ಯರಿಗಾಗಿ ಮಾತ್ರವಲ್ಲದೆ, ಆ ಭವ್ಯ ಬಂಗಲೆಯಲ್ಲಿ ಹಗಲಿರುಳು ಕೆಲಸ ಮಾಡುವ ಸುಮಾರು 600ಕ್ಕೂ ಹೆಚ್ಚು ಸಿಬ್ಬಂದಿಗಳಿಗಾಗಿ ಈ ರೊಟ್ಟಿಗಳನ್ನು ತಯಾರಿಸಲಾಗುತ್ತದೆ. ಭದ್ರತಾ ಸಿಬ್ಬಂದಿ, ಚಾಲಕರು, ಅಡುಗೆಯವರು ಮತ್ತು ತಂತ್ರಜ್ಞರು ಸೇರಿದಂತೆ ಪ್ರತಿಯೊಬ್ಬರಿಗೂ ಮನೆಯ ಸದಸ್ಯರಂತೆಯೇ ಪೌಷ್ಟಿಕ ಮತ್ತು ರುಚಿಕರವಾದ ಊಟವನ್ನು ಇಲ್ಲಿ ನೀಡಲಾಗುತ್ತದೆ. ನೂರಾರು ರೊಟ್ಟಿಗಳನ್ನು ಕ್ಷಣಾರ್ಧದಲ್ಲಿ ತಯಾರಿಸುವ ಅತ್ಯಾಧುನಿಕ ಯಂತ್ರಗಳು ಅಲ್ಲಿವೆ, ಆದರೆ ರುಚಿ ಮತ್ತು ಗುಣಮಟ್ಟಕ್ಕೆ ಯಾವುದೇ ಕುಂದು ಬಾರದಂತೆ ಎಚ್ಚರಿಕೆ ವಹಿಸಲಾಗುತ್ತದೆ.

ಇನ್ನು ಈ ಬೃಹತ್ ಅಡುಗೆಮನೆಯನ್ನು ನಿರ್ವಹಿಸುವ ಅಡುಗೆಯವರ ಬಗ್ಗೆ ಹೇಳುವುದಾದರೆ, ಅವರ ಆಯ್ಕೆ ಪ್ರಕ್ರಿಯೆಯೇ ಒಂದು ರೋಚಕ ಕಥೆ. ದೇಶದ ಅತ್ಯುತ್ತಮ ಹೊಟೇಲ್‌ಗಳ ನುರಿತ ಅಡುಗೆಯವರನ್ನು ಇಲ್ಲಿ ನೇಮಿಸಿಕೊಳ್ಳಲಾಗುತ್ತಿದ್ದು, ಇವರ ಸಂಬಳ ಕೇಳಿದರೆ ಸಾಮಾನ್ಯರು ಬೆಚ್ಚಿಬೀಳುತ್ತಾರೆ. ವರದಿಗಳ ಪ್ರಕಾರ, ಇಲ್ಲಿನ ಮುಖ್ಯ ಅಡುಗೆಯವರು ತಿಂಗಳಿಗೆ ಲಕ್ಷಾಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಕೇವಲ ಹಣ ಮಾತ್ರವಲ್ಲದೆ, ಅವರಿಗೆ ವಿಮೆ ಮತ್ತು ಅವರ ಮಕ್ಕಳ ಶಿಕ್ಷಣಕ್ಕೂ ನೆರವು ನೀಡಲಾಗುತ್ತದೆ. ಹೀಗೆ ಅಂಬಾನಿ ಮನೆಯ ಅಡುಗೆಮನೆ ಕೇವಲ ಊಟ ತಯಾರಿಸುವ ಸ್ಥಳವಾಗಿರದೆ, ನೂರಾರು ಜನರಿಗೆ ಅನ್ನ ನೀಡುವ ಮತ್ತು ಅತ್ಯುತ್ತಮ ಕೆಲಸಗಾರರಿಗೆ ರಾಜಮರ್ಯಾದೆ ನೀಡುವ ತಾಣವಾಗಿದೆ.

Continue Reading

Latest

ಯುದ್ಧವಿರಾಮ ಅನಿರ್ದಿಷ್ಠಾವಧಿಗೆ ವಿಸ್ತರಣೆ: ಡೋನಾಲ್ಡ್ ಟ್ರಂಪ್‌ ಘೋಷಣೆ

VISTARANEWS.COM


on

Donald trump

ವಾಷಿಂಗ್ಟನ್‌: ಅಮೆರಿಕಾ-ಇಸ್ರೇಲ್‌- ಇರಾನ್‌ ನಡುವಿನ ಯುದ್ಧ ವಿರಾಮಕ್ಕೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಇವೆ. ಅಷ್ಟರೊಳಗೆ ಯುದ್ಧ ವಿರಾಮ ಅನಿರ್ದಿಷ್ಠಾವಧಿಗೆ ವಿಸ್ತರಣೆಯಾಗಿದೆ.


ಈ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ ನಲ್ಲಿ ಈ ವಿಷಯ ತಿಳಿಸಿರುವ ಅಮೆರಿಕಾ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಇರಾನ್‌ ನಾಯಕರು ಮತ್ತು ಅವರ ಪ್ರತಿನಿಧಿಗಳು ಏಕರೂಪದ ಪ್ರಸ್ತಾವನೆಯೊಂದಿಗೆ ಬರುವವರೆಗೆ ಯುದ್ಧ ವಿರಾಮ ಮುಂದುವರಿಸುತ್ತೇನೆ ಎಂದಿದ್ದಾರೆ.


ಶಾಂತಿ ಮಾತುಕತೆಯ ಮಧ್ಯಸ್ಥಿಕೆ ವಹಿಸಿರುವ ಪಾಕಿಸ್ತಾನ್‌ ಮನವಿಯನ್ನು ತಾನು ಒಪ್ಪಿಕೊಂಡಿರುವುದಾಗೆ ಟ್ರಂಪ್‌ ಸ್ಪಷ್ಟಪಡಿಸಿದ್ದಾರೆ. ಇರಾನ್‌ ಸರ್ಕಾರ ಗಂಭೀರವಾಗಿ ಹಾನಿಗೀಡಾಗಿದೆ. ಹೀಗಾಗಿ ಯುದ್ಧ ವಿರಾಮ ವಿಸ್ತರಿಸುತ್ತಿದ್ದೇನೆ ಹೊರತು ಇದು ಅನಿರಿಕ್ಷಿತವಲ್ಲ ಎಂದು ಹೇಳಿಕೊಂಡಿದ್ದಾರೆ.
ಕಳೆದ ಫೆ.28 ಅಮೆರಿಕಾ-ಇಸ್ರೇಲ್‌ ಜಂಟಿಯಾಗಿ ಇರಾನ್‌ ವಿರುದ್ಧ ಯುದ್ಧ ಆರಂಭಿಸಿದ್ದವು. ಈ ಹಿಂದೆ ಇರಾನ್‌ ನ ವಿದ್ಯುತ್‌ ಸ್ಥಾವರಗಳು, ಮತ್ತು ನಾಗರಿಕ ಮೂಲಸೌಕರ್ಯಗಳ ಮೇಲೆ ಬಾಂಬ್‌ ದಾಳಿ ನಡೆಸುವುದಾಗಿ ಟ್ರಂಪ್‌ ಗುಡುಗಿದ್ದರು. ಇದನ್ನು ಅಂತರ ರಾಷ್ಟ್ರೀಯ ಕಾನೂನಿನಲ್ಲಿ ಇದಕ್ಕೆ ಅವಕಾಶ ಇಲ್ಲ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಗೂ ಮತ್ತಿತರ ದೇಶಗಳ ಮುಖಂಡರು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

Continue Reading

Latest

ವೈರಲ್ ಬೆಡಗಿ ಕುಂಭಮೇಳದ ಮೋನಾಲಿಸಾ ಬಗ್ಗೆ ಬಿಗ್ ಅಪ್ಡೇಟ್: ಪತ್ನಿ ಗರ್ಭಿಣಿ ಎಂದು ಪೊಲೀಸರಿಗೆ ಪತಿ ಫರ್ಮಾನ್ ಮಾಹಿತಿ

VISTARANEWS.COM


on

ಕುಂಭಮೇಳದಲ್ಲಿ ರುದ್ರಾಕ್ಷಿ ಮಾರಾಟ ಮಾಡುತ್ತಿದ್ದ ಫೋಟೋ ವೈರಲ್ ಆಗುವ ಮೂಲಕ ರಾತ್ರೋರಾತ್ರಿ ಇಂಟರ್ನೆಟ್‌ ಸೆಲೆಬ್ರಿಟಿಯಾಗಿದ್ದ ಮೋನಾಲಿಸಾ ಭೋಸ್ಲೆ ಈಗ ಮತ್ತೊಂದು ದೊಡ್ಡ ವಿವಾದದ ಕೇಂದ್ರಬಿಂದುವಾಗಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಕೇರಳದ ದೇವಸ್ಥಾನವೊಂದರಲ್ಲಿ ಫರ್ಮಾನ್ ಖಾನ್ ಎಂಬಾತನನ್ನು ವಿವಾಹವಾಗಿದ್ದ ಮೋನಾಲಿಸಾ, ಅಂದಿನಿಂದಲೂ ಅಂತರಧರ್ಮೀಯ ವಿವಾಹ ಮತ್ತು ವಯಸ್ಸಿನ ಕಾರಣಕ್ಕೆ ಸುದ್ದಿಯಲ್ಲಿದ್ದರು. ಇದೀಗ ಆಕೆ ಗರ್ಭಿಣಿಯಾಗಿದ್ದಾರೆ ಎಂಬ ಸ್ಫೋಟಕ ಮಾಹಿತಿಯನ್ನು ಆಕೆಯ ಪತಿ ಫರ್ಮಾನ್ ಪೊಲೀಸರಿಗೆ ನೀಡಿದ್ದು, ಪ್ರಕರಣಕ್ಕೆ ಹೊಸ ತಿರುವು ಲಭಿಸಿದೆ.

ವಾಸ್ತವವಾಗಿ, ಈ ಮದುವೆಯನ್ನು ಮೋನಾಲಿಸಾ ಕುಟುಂಬದವರು ತೀವ್ರವಾಗಿ ವಿರೋಧಿಸಿದ್ದು, ಇದನ್ನು ‘ಲವ್ ಜಿಹಾದ್’ ಎಂದು ಆರೋಪಿಸಿದ್ದರು. ಅಷ್ಟೇ ಅಲ್ಲದೆ, ಮದುವೆಯ ಸಮಯದಲ್ಲಿ ಮೋನಾಲಿಸಾ ಅಪ್ರಾಪ್ತ ವಯಸ್ಕಳಾಗಿದ್ದರು ಎಂದು ಕುಟುಂಬದವರು ದೂರು ನೀಡಿದ್ದರು. ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ (NCST) ನಡೆಸಿದ ತನಿಖೆಯಲ್ಲಿ ಮೋನಾಲಿಸಾಗೆ ಕೇವಲ 16 ವರ್ಷ ಎಂದು ತಿಳಿದುಬಂದ ಹಿನ್ನೆಲೆಯಲ್ಲಿ, ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಗಂಭೀರ ಪ್ರಕರಣ ದಾಖಲಾಗಿದೆ. ಪ್ರಸ್ತುತ ಕೇರಳ ಹೈಕೋರ್ಟ್ ಫರ್ಮಾನ್ ಬಂಧನಕ್ಕೆ ಮೇ 20ರವರೆಗೆ ತಡೆಯಾಜ್ಞೆ ನೀಡಿದೆ.

ಇತ್ತೀಚೆಗೆ ಮಧ್ಯಪ್ರದೇಶ ಪೊಲೀಸರು ವಿಚಾರಣೆಗಾಗಿ ಮೋನಾಲಿಸಾರನ್ನು ಹಾಜರುಪಡಿಸುವಂತೆ ಸೂಚಿಸಿದಾಗ, ಆಕೆ ಗರ್ಭಿಣಿಯಾಗಿರುವ ಕಾರಣ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ಫರ್ಮಾನ್ ತಿಳಿಸಿದ್ದಾರೆ. ಈ ಹೇಳಿಕೆಯು ತನಿಖಾಧಿಕಾರಿಗಳಲ್ಲಿ ಕುತೂಹಲ ಮೂಡಿಸಿದ್ದು, ಫರ್ಮಾನ್ ನೀಡಿರುವ ಮಾಹಿತಿಯನ್ನು ಪೊಲೀಸರು ಈಗ ವೈದ್ಯಕೀಯ ವರದಿಗಳ ಮೂಲಕ ಪರಿಶೀಲಿಸುತ್ತಿದ್ದಾರೆ. ವೈದ್ಯಕೀಯ ತಪಾಸಣೆಯ ನಂತರವಷ್ಟೇ ಮುಂದಿನ ಕಾನೂನು ಕ್ರಮಗಳ ಬಗ್ಗೆ ಸ್ಪಷ್ಟತೆ ಸಿಗಲಿದ್ದು, ಈ ಹೈಪ್ರೊಫೈಲ್ ಪ್ರಕರಣವು ಈಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

Continue Reading
Advertisement
Latest2 hours ago

ಇತಿಹಾಸ ಬರೆಯಲು ಸಜ್ಜಾದ ರನ್ ಮಷೀನ್: ಐಪಿಎಲ್ ಕ್ರಿಕೆಟ್‌ನಲ್ಲಿ ಕೊಹ್ಲಿ ಹೊಸ ರೆಕಾರ್ಡ್‌

Latest2 hours ago

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ NIA ನ್ಯಾಯಾಲಯ

Latest3 hours ago

ಪಾಕಿಸ್ತಾನಕ್ಕೆ ಮತ್ತೊಂದು ಆರ್ಥಿಕ ಪೆಟ್ಟು: 3.5 ಬಿಲಿಯನ್ ಡಾಲರ್ ಸಾಲ ಮರುಪಾವತಿಗೆ ಯುಎಇ ಸೂಚನೆ

ಸಿನಿಮಾ3 hours ago

ಎಲೆಕ್ಷನ್ ಮುಗಿದರೂ ಮುಗಿಯದ ದಳಪತಿ ಆಸ್ತಿ ಸಂಘರ್ಷ: ಹೆಂಡತಿಗೆ ಕೊಟ್ಟ 12 ಕೋಟಿ ಸಾಲದ ರಹಸ್ಯವೇನು?

Latest4 hours ago

ಹರಿಹರ ಪೀಠದಲ್ಲಿ ಲೆಕ್ಕ ಸಮರ: ವಚನಾನಂದ ಶ್ರೀ, ಟ್ರಸ್ಟಿಗಳ ನಡುವೆ ಆರೋಪ-ಪ್ರತ್ಯಾರೋಪ.

Latest5 hours ago

RCB v/s GT ಪಂದ್ಯದ ವೇಳೆ ಭದ್ರತಾ ವೈಫಲ್ಯ: 240 ಸಿಸಿಟಿವಿಗಳನ್ನು ನಿಷ್ಕ್ರಿಯಗೊಳಿಸಿದ್ದೇಕೆ? ಹೊರಬಿತ್ತು ಶಾಕಿಂಗ್‌ ಸತ್ಯ!

Latest5 hours ago

ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ: ಮೇ 1ರಿಂದ ಬದಲಾಗಲಿವೆ ಎಲ್‌ಪಿಜಿ ನಿಯಮಗಳು

Latest7 hours ago

ಮೇನಲ್ಲಿ ನಡೆಯಲಿದೆ ಪ್ಯಾನ್-ಐಐಟಿ ಬೆಂಗಳೂರು ಸಮ್ಮಿಟ್-2026

ಕರ್ನಾಟಕ8 hours ago

ಡಿಕೆಶಿ ಪದೇ ಪದೇ ದೆಹಲಿಗೆ ಹೋಗುತ್ತಿರುವುದೇಕೆ? ಸತೀಶ್ ಜಾರಕಿಹೊಳಿ ನೀಡಿದ ಆ ಗೊಂದಲದ ಹೇಳಿಕೆಯಲ್ಲಿದೆಯೇ ದೊಡ್ಡ ಸುಳಿವು

Latest9 hours ago

ಇರಾನ್‌ನಿಂದ ಹೊಸ ಶಾಂತಿ ಸಂಧಾನ: ಹಾರ್ಮುಜ್ ಜಲಸಂಧಿ ಮುಕ್ತಗೊಳಿಸಲು ಅಮೆರಿಕಕ್ಕೆ ಷರತ್ತುಬದ್ಧ ಪ್ರಸ್ತಾವನೆ ಸಲ್ಲಿಕೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌