ತಮಿಳುನಾಡಿನಲ್ಲಿ ಹಿಂದಿ ಭಾಷಿಕ ವಲಸಿಗರ ಮೇಲೆ ಹಲ್ಲೆ ಮಾಡಲಾಗುತ್ತಿದೆ ಎಂದು ಟ್ವೀಟ್ ಮಾಡಿದ್ದ ಪತ್ರಕರ್ತ, ಬಿಜೆಪಿ ವಕ್ತಾರನ ವಿರುದ್ಧ ಎಫ್​ಐಆರ್​ - Vistara News

ದೇಶ

ತಮಿಳುನಾಡಿನಲ್ಲಿ ಹಿಂದಿ ಭಾಷಿಕ ವಲಸಿಗರ ಮೇಲೆ ಹಲ್ಲೆ ಮಾಡಲಾಗುತ್ತಿದೆ ಎಂದು ಟ್ವೀಟ್ ಮಾಡಿದ್ದ ಪತ್ರಕರ್ತ, ಬಿಜೆಪಿ ವಕ್ತಾರನ ವಿರುದ್ಧ ಎಫ್​ಐಆರ್​

ತಮಿಳುನಾಡಿನಲ್ಲಿ ಬಿಹಾರದ ವಲಸಿಗರ ಮೇಲೆ ಹಲ್ಲೆ ನಡೆದಿದೆ, 12 ಜನರನ್ನು ಕೊಲ್ಲಲಾಗಿದೆ ಎಂಬರ್ಥದ ವಿಡಿಯೊಗಳು ವೈರಲ್ ಆಗುತ್ತಿದ್ದಂತೆ ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್ ಕಳವಳ ವ್ಯಕ್ತಪಡಿಸಿದ್ದರು. ರಾಜ್ಯ ಸರ್ಕಾರದ ವತಿಯಿಂದ ನಾಲ್ವರನ್ನು ತಮಿಳುನಾಡಿಗೆ ಕಳಿಸುವುದಾಗಿ ಹೇಳಿದ್ದಾರೆ.

VISTARANEWS.COM


on

FIR Against BJP Leader and Journalist Over Bihar Migrant Workers tweet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ತಮಿಳುನಾಡಿಗೆ ಬಿಹಾರದಿಂದ ಆಗಮಿಸಿದ್ದ ಹಿಂದಿ ಮಾತನಾಡುವ ವಲಸಿಗರ (Bihar migrant workers) ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ, 12 ವಲಸಿಗರನ್ನು ಈಗಾಗಲೇ ನೇಣು ಬಿಗಿದು ಕೊಲ್ಲಲಾಗಿದೆ ಎಂಬಂಥ ಟ್ವೀಟ್ ಮಾಡಿಕೊಂಡು, ಕೆಲವು ವಿಡಿಯೊಗಳನ್ನು ಶೇರ್ ಮಾಡಿಕೊಂಡಿದ್ದ ಬಿಜೆಪಿ ವಕ್ತಾರ ಪ್ರಶಾಂತ್ ಪಟೇಲ್ ಉಮ್ರಾವ್ ಮತ್ತು ಮೊಹಮ್ಮದ್ ತನ್ವೀರ್ ಎಂಬ ಪತ್ರಕರ್ತನ ವಿರುದ್ಧ ತಮಿಳುನಾಡು ಪೊಲೀಸರು ಇಂದು ಎಫ್​ಐಆರ್ ದಾಖಲಿಸಿದ್ದಾರೆ. ಇದು ಅಕ್ಷರಶಃ ತಪ್ಪು ಮಾಹಿತಿ. ಯಾವುದೇ ವಲಸಿಗರನ್ನೂ ಇಲ್ಲಿ ಕೊಂದಿಲ್ಲ, ಹಲ್ಲೆಯನ್ನೂ ಮಾಡಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿದ ತಮಿಳುನಾಡು ಡಿಜಿಪಿ ಸಿ.ಶೈಲೇಂದ್ರ ಬಾಬು ಅವರು ‘ರಾಜ್ಯದಲ್ಲಿ ಇರುವ ಹಿಂದಿ ಮಾತನಾಡುವ ವಲಸಿಗರನ್ನು ಟಾರ್ಗೆಟ್ ಮಾಡಿ ಯಾವುದೇ ದಾಳಿ ನಡೆಸಲಾಗಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ವಿಡಿಯೋಗಳು, ವಲಸಿಗರ ಮೇಲಿನ ಹಲ್ಲೆಯ ವಿಡಿಯೊಗಳು ಅಲ್ಲ. ತಪ್ಪು ಮಾಹಿತಿಯನ್ನು ಪ್ರಸಾರ ಮಾಡಲಾಗುತ್ತಿದೆ’ ಎಂದು ಹೇಳಿದ್ದಾರೆ. ಹಾಗೇ, ಬಿಹಾರ ಪೊಲೀಸರೂ ಕೂಡ ಪ್ರತಿಕ್ರಿಯೆ ನೀಡಿ, ‘ತಮಿಳುನಾಡಿನಲ್ಲಿ ಹಿಂದಿ ಭಾಷಿಕ ವಲಸಿಗರ ಮೇಲೆ ಮಾರಣಾಂತಿಕ ಹಲ್ಲೆ ನಡೆಯುತ್ತಿದೆ ಎಂದು ತಪ್ಪಾದ ವಿಡಿಯೊಗಳನ್ನು ವೈರಲ್ ಮಾಡಲಾಗುತ್ತಿದೆ’ ಎಂದು ಹೇಳಿದ್ದಾರೆ. ಈಗ ಬಿಜೆಪಿ ವಕ್ತಾರ ಮತ್ತು ಪತ್ರಕರ್ತ ಇಬ್ಬರೂ ಮಾಡಿದ್ದ ಟ್ವೀಟ್​ಗಳು ಡಿಲೀಟ್ ಆಗಿವೆ, ತಪ್ಪು ಮಾಹಿತಿ ಹರಡುವ ಮೂಲಕ, ದ್ವೇಷ-ಅಪರಾಧಗಳಿಗೆ ಪ್ರಚೋದನೆ ನೀಡಿದ್ದ ಆರೋಪದಡಿ ಇಬ್ಬರ ಮೇಲೆಯೂ ಐಪಿಸಿ ಸೆಕ್ಷನ್​​ನ ವಿವಿಧ ಕಾಯ್ದೆಯಡಿ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿದ್ದ ತಮಿಳುನಾಡು ಮೂಲದ ವ್ಯಕ್ತಿಯನ್ನು ಶೂಟ್ ಮಾಡಿ ಕೊಂದ ಪೊಲೀಸ್​; ಕಳವಳಕಾರಿ ಎಂದ ರಾಯಭಾರಿ ಕಚೇರಿ

ತಮಿಳುನಾಡಿನಲ್ಲಿ ಬಿಹಾರದ ವಲಸಿಗರ ಮೇಲೆ ಹಲ್ಲೆ ನಡೆದಿದೆ, 12 ಜನರನ್ನು ಕೊಲ್ಲಲಾಗಿದೆ ಎಂಬರ್ಥದ ವಿಡಿಯೊಗಳು ವೈರಲ್ ಆಗುತ್ತಿದ್ದಂತೆ ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್ ಕಳವಳ ವ್ಯಕ್ತಪಡಿಸಿದ್ದರು. ಇದೀಗ ಆ ವಿಡಿಯೊಗಳು ತಪ್ಪು ಮಾಹಿತಿ ಬಿತ್ತರಿಸುತ್ತಿವೆ. ಯಾವುದೇ ವಲಸಿಗರ ಮೇಲೆಯೂ ಹಲ್ಲೆ ನಡೆದಿಲ್ಲ ಎಂದು ಗೊತ್ತಾಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ನಿತೀಶ್ ಕುಮಾರ್ ‘ನಮ್ಮ ರಾಜ್ಯ ಸರ್ಕಾರದ ವತಿಯಿಂದ ನಾಲ್ವರನ್ನು ತಮಿಳುನಾಡಿಗೆ ಕಳಿಸಿ, ಅಗತ್ಯ ಮಾಹಿತಿ ಪಡೆಯಲಾಗುವುದು’ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆಹಾರ/ಅಡುಗೆ

ವಿಸ್ತಾರ ಸಂಪಾದಕೀಯ: ಸಾರ್ವಜನಿಕ ಆಹಾರದಲ್ಲಿ ಆರೋಗ್ಯ ಕಾಳಜಿ ಪ್ರಮುಖವಾಗಿರಲಿ

ಬೀದಿ ಬದಿಯ ಆಹಾರ ತಿಂಡಿಗಳ ಸೇವನೆ ಯಾವಾಗಲೂ ರಿಸ್ಕ್‌ ಅಂಶದಿಂದ ಕೂಡಿರುವಂಥದು. ಇಲ್ಲಿ ಸ್ವಚ್ಛತೆಯ ಬಗ್ಗೆ ಖಾತ್ರಿಪಡಿಸಿಕೊಳ್ಳಲು ಸಾರ್ವಜನಿಕರಿಗೆ ಯಾವ ಅವಕಾಶವೂ ಇಲ್ಲ. ಸ್ಥಳೀಯಾಡಳಿತಗಳ ಬಳಿಯೂ ಯಾವುದೇ ಮಾನದಂಡ ಇರುವಂತಿಲ್ಲ. ರುಚಿಯಾಗಿದೆ ಎಂದು ಕಾಣಿಸುವ ಆಹಾರವೆಲ್ಲವೂ ಶುಚಿಯಾಗಿರಬೇಕಿಲ್ಲ. ಈ ಬಗ್ಗೆ ಜನ ಜಾಗೃತರಾಗುವುದು ಮುಖ್ಯ.

VISTARANEWS.COM


on

Steet Food
Koo

ಬೇಸಿಗೆಯ ಬಿಸಿಲಿನ ತೀವ್ರತೆ ಹಾಗೂ ನೀರಿನ ಲಭ್ಯತೆಯ ಕೊರತೆ ಹೆಚ್ಚಾಗುತ್ತಿರುವಂತೆ, ಬೀದಿ ಬದಿಯ ಆಹಾರ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ವಿತರಣೆಯಾಗುವ ಆಹಾರವನ್ನು ಸೇವಿಸಿ ಅಸ್ವಸ್ಥರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಮಂಡ್ಯದಲ್ಲಿ ನಡೆದ ದಾರುಣ ಘಟನೆಯೊಂದರಲ್ಲಿ, ಐಸ್ ಕ್ರೀಂ ತಿಂದು ಒಂದುವರೆ ವರ್ಷದ ಅವಳಿ ಮಕ್ಕಳು (Twin Children death) ಮೃತಪಟ್ಟಿದ್ದು, ತಾಯಿ ಅಸ್ವಸ್ಥಗೊಂಡಿದ್ದಾರೆ. ದಾವಣಗೆರೆಯಲ್ಲಿ ನಡೆಯುತ್ತಿದ್ದ ಎಕ್ಸಿಬಿಷನ್‌ನಲ್ಲಿ ಬಾಲಕನೊಬ್ಬ ಸ್ಮೋಕ್‌ ಬಿಸ್ಕೆಟ್‌ ತಿಂದು ಅಸ್ವಸ್ಥನಾಗಿದ್ದಾನೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕೊಡವತ್ತಿ ಕ್ರಾಸ್‌ನ ಗೊಲ್ಲರಹಟ್ಟಿಯಲ್ಲಿ ರಾಮನವಮಿಯಂದು ಪಾನಕ, ಮಜ್ಜಿಗೆ ಸೇವಿಸಿ ಒಂದೇ ಗ್ರಾಮದ 45 ಮಂದಿ ಅಸ್ವಸ್ಥರಾಗಿದ್ದಾರೆ. ಬುಧವಾರ ರಾಮನವಮಿ ಹಿನ್ನೆಲೆಯಲ್ಲಿ ಭಕ್ತರು ಮಜ್ಜಿಗೆ, ಪಾನಕವನ್ನು ಸೇವನೆ ಮಾಡಿದ್ದರು. ಇವರಿಗೆ ಮಧ್ಯರಾತ್ರಿಯಿಂದ ಹೊಟ್ಟೆನೋವು, ವಾಂತಿ- ಭೇದಿ ಶುರುವಾಗಿದೆ.

ಇಂಥ ಪ್ರಕರಣಗಳು ಹೆಚ್ಚುತ್ತಿವೆ; ಹೀಗಾಗಿಯೇ ಸ್ಥಳೀಯಾಡಳಿತಗಳು, ಸರ್ಕಾರದ ಜೊತೆಗೆ ಸಾರ್ವಜನಿಕರೂ ಎಚ್ಚರಿಕೆ ವಹಿಸಬೇಕಿದೆ. ಬೇಸಿಗೆಯಲ್ಲಿ ಸಹಜವಾಗಿಯೇ ಹೊರಗೆ ಓಡಾಡುವವರಿಗೆ ದಾಹ ಹೆಚ್ಚು. ಈ ಸಲವಂತೂ ಧಗೆ ಇನ್ನಷ್ಟು ಹೆಚ್ಚಿದೆ. ತಣ್ಣಗೆ ಏನಾದರೂ ಸಿಕ್ಕರೆ ಕುಡಿದುಬಿಡೋಣ ಎನಿಸುತ್ತದೆ. ರಾಮನವಮಿ ಕೂಡ ಕಡುಬೇಸಿಗೆಯಲ್ಲಿ ಬರುತ್ತದೆ. ಸಾರ್ವಜನಿಕವಾಗಿ ಪಾನಕ- ಪನಿವಾರ ವಿತರಣೆ ನಡೆಯುತ್ತದೆ. ಹೆಚ್ಚಿನ ಭಕ್ತರು ಸ್ವಚ್ಛತೆಯ ಕಾಳಜಿ ವಹಿಸುತ್ತಾರಾದರೂ, ಕೆಲವೆಡೆ ಪ್ರಮಾದವಶಾತ್‌ ಅವಘಡಗಳು ಸಂಭವಿಸುತ್ತವೆ. ಇದಕ್ಕಾಗಿಯೇ ಸಾರ್ವಜನಿಕವಾಗಿ ಆಹಾರ ಸೇವಿಸುವಾಗ, ಪಾನೀಯ ಸೇವಿಸುವಾಗ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಎಚ್ಚರ ವಹಿಸಬೇಕು. ವಿತರಕರು ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು.

ಇನ್ನು ಖಾಸಗಿ, ಬೀದಿ ಬದಿಯ ಆಹಾರ ತಿಂಡಿಗಳ ಸೇವನೆ ಯಾವಾಗಲೂ ರಿಸ್ಕ್‌ ಅಂಶದಿಂದ ಕೂಡಿರುವಂಥದು. ಇಲ್ಲಿ ಸ್ವಚ್ಛತೆಯ ಬಗ್ಗೆ ಖಾತ್ರಿಪಡಿಸಿಕೊಳ್ಳಲು ಸಾರ್ವಜನಿಕರಿಗೆ ಯಾವ ಅವಕಾಶವೂ ಇಲ್ಲ. ಸ್ಥಳೀಯಾಡಳಿತಗಳ ಬಳಿಯೂ ಯಾವುದೇ ಮಾನದಂಡ ಇರುವಂತಿಲ್ಲ. ರುಚಿಯಾಗಿದೆ ಎಂದು ಕಾಣಿಸುವ ಆಹಾರವೆಲ್ಲವೂ ಶುಚಿಯಾಗಿರಬೇಕಿಲ್ಲ. ಐಸ್‌ಕ್ರೀಮ್‌ನಂಥ ತಿಂಡಿತಿನಿಸುಗಳು ಸೇವಿಸುವಾಗ ಆಹಾ ಎನಿಸಿದರೂ, ಅದರ ಪರಿಣಾಮ ಆಮೇಲೆ ತಿಳಿಯುತ್ತದೆ. ತಣ್ಣಗೆ ಕೊರೆಯುವ ಐಸ್‌ಕ್ರೀಮ್‌ ಗಂಟಲಿನಲ್ಲಿ ಸೋಂಕು ಉಂಟುಮಾಡಬಲ್ಲದು. ಇದು ಎಲ್ಲ ಐಸ್‌ಕ್ರೀಮ್‌ಗಳಿಗೆ ಹೇಳಿದ ಮಾತಲ್ಲ. ಶುಚಿತ್ವ, ಶುದ್ಧತೆ, ಗ್ರಾಹಕರ ಆರೋಗ್ಯದ ಕಡೆಗೆ ಗಮನ ಕೊಡದ ಈಟರಿಗಳ ಬಗ್ಗೆ ಮಾತ್ರ ಈ ಮಾತನ್ನು ಹೇಳಬಹುದು.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಇರಾನ್ -‌ ಇಸ್ರೇಲ್ ಯುದ್ಧ ತಪ್ಪಿಸಲೇಬೇಕಿದೆ

ಹಾಗಾದರೆ ಸ್ಥಳೀಯಾಡಳಿತಗಳು ಸಾರ್ವಜನಿಕರ ಆರೋಗ್ಯ ಖಾತರಿಪಡಿಸಿಕೊಳ್ಳಲು ಏನು ಮಾಡಬಹುದು? ಬೀದಿ ಬದಿಯ ಈಟರಿಗಳಿಗೆ ದಿಡೀರ್‌ ದಾಳಿ ನಡೆಸಿ ಅಲ್ಲಿನ ಹೈಜೀನ್‌ ಅನ್ನು ಪರೀಕ್ಷಿಸುವುದು ಒಂದು ದಾರಿ. ಹೋಟೆಲ್‌ಗಳೂ ಈ ಹೈಜೀನ್‌ ಮಾನದಂಡಗಳನ್ನು ಅನುಸರಿಸಬೇಕು. ಸಾರ್ವಜನಿಕರೂ, ಸ್ವಚ್ಛತೆ ಕಾಪಾಡಿಕೊಳ್ಳದ ಸ್ಥಳಗಳಲ್ಲಿ ಆಹಾರ ಸೇವಿಸುವುದಿಲ್ಲ ಎಂಬ ನಿರ್ಣಯ ತೆಗೆದುಕೊಳ್ಳಬೇಕು. ಬೆಂಗಳೂರಿನಲ್ಲಿ ಕುಡಿಯುವ ನೀರಿನಿಂದ ಹಾಗೂ ಆಹಾರದಿಂದ ಬಂದ ಕಾಲರಾ ಕೂಡ ಕೆಲವರಲ್ಲಿ ಕಂಡುಬಂದಿದೆ. ಸೋಂಕುಗಳು ವ್ಯಾಪಕವಾಗಿರುವ ಕಾಲದಲ್ಲಿ, ಮನೆಯಲ್ಲಿ ಮಾಡಿಕೊಳ್ಳುವ ಆರೋಗ್ಯಕರ ಆಹಾರವೇ ಅತ್ಯುತ್ತಮ.

Continue Reading

ದೇಶ

Physical Abuse : ಸ್ಪೇನ್​ನ ಮಹಿಳೆ ಮೇಲೆ ಜಾರ್ಖಂಡ್​ನಲ್ಲಿ ಗ್ಯಾಂಗ್​ ರೇಪ್​; ತಿಂಗಳ ಬಳಿಕ ಪ್ರಕರಣ ಬಯಲು

Physical Abuse : ಅವರು ತಂಗಿದ್ದ ಕ್ಯಾಂಪ್​ನಲ್ಲಿ ನಡೆದ ಘಟನೆಯ ಭೀಕರತೆಯನ್ನು ವಿವರಿಸಲಾಗಿದೆ. ಸ್ಥಳವನ್ನು ವೀಡಿಯೊ ಬಹಿರಂಗಪಡಿಸಿದೆ. ದಂಪತಿ ಹಗಲು ಹೊತ್ತಿನಲ್ಲಿ ತಾವು ಭೇಟಿಯಾದ ವ್ಯಕ್ತಿಗಳೊಂದಿಗಿನ ನಡೆಸಿದ ಸಂಭಾಷಣೆಯನ್ನೂ ಬಹಿರಂಗ ಮಾಡಿದ್ದಾರೆ. ಅವರಲ್ಲಿ ಇಬ್ಬರು ಮಹಿಳೆಯನ್ನು ಅತ್ಯಾಚಾರ ಮಾಡಿದವರಾಗಿದ್ದಾರೆ.

VISTARANEWS.COM


on

Physical Abuse
Koo

ರಾಂಚಿ: ಜಾರ್ಖಂಡ್​ನ ದುಮ್ಕಾ ಜಿಲ್ಲೆಯಲ್ಲಿ ಸ್ಪೇನ್​ನಿಂದ ಬಂದಿದ್ದ ಪ್ರವಾಸಿ ಮಹಿಳೆಯೊಬ್ಬಳ ಮೇಲೆ ಏಳು ಜನರು ಸಾಮೂಹಿಕ ಅತ್ಯಾಚಾರ (Physical Abuse) ಎಸಗಿದ ಭಯಾನಕ ಘಟನೆ ನಡೆದಿದೆ. ಈ ಘಟನೆ ಮಾರ್ಚ್​ನಲ್ಲಿ ನಡೆದಿದೆ. ಮಹಿಳೆ ಹಾಗೂ ಆಕೆಯ ಪತಿ ಆಘಾತಕಾರಿ ಘಟನೆಗ ಮತ್ತು ನಂತರದ ವಿವರಗಳನ್ನು ದಾಖಲಿಸುವ ವೀಡಿಯೊವೊಂದನ್ನು ತಮ್ಮ ದೇಶಕ್ಕೆ ಮರಳಿದ ಬಳಿಕ ಬಿಡುಗಡೆ ಮಾಡಿದ್ದಾರೆ. ತಮ್ಮ ಯೂಟ್ಯೂಬ್ ಚಾನೆಲ್​ನಲ್ಲಿ ವಿವರ ನೀಡಿದ್ದು, ಭಾರತದಲ್ಲಿ ಆಗಿರುವ ಕಹಿಘಟನೆಯನ್ನು ವಿವರಿಸಿದ್ದಾರೆ.

ವಿಡಿಯೊದ ಆರಂಭದಲ್ಲಿ ದಂಪತಿ “ಈ ಸುದೀರ್ಘ ಅಧ್ಯಾಯದ ನಂತರ ನಾವು ಈ ಅಹಿತಕರ ಹಂತವನ್ನು ದಾಟಿದ್ದೇವೆ. ಮತ್ತೆ ನಮ್ಮ ಪ್ರವಾಸ ಆರಂಭಿಸುತ್ತೇವೆ. ಆದರೆ ನಮಗಿದು ಮರುಹುಟ್ಟು. ನಾವು ಇದುವರೆಗೆ ಪಡೆದ ಈ ವಿರಾಮಕ್ಕೆ ಕಾರಣವಿದೆ ಎಂದು ಹೇಳಿ ಭಾರತದಲ್ಲಿ ಆದ ಘಟನೆಗಳನ್ನು ವಿವರಿಸಿದ್ದಾರೆ. ಅಲ್ಲದೆ, ಇಂದಿನಿಂದ ನಾವು ವಾರಕ್ಕೊಮ್ಮೆ ನಮ್ಮ ವೀಡಿಯೊಗಳನ್ನು ಪೋಸ್ಟ್ ಮಾಡುವುದನ್ನು ಮುಂದುವರಿಸಲು ಪ್ರಯತ್ನಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಅವರಿಬ್ಬರೂ ಯೂಟ್ಯೂಬರ್​ಗಳಾಗಿದ್ದು ಬೈಕ್​ ಮೂಲಕ ಹಲವು ದೇಶಗಳನ್ನು ಸುತ್ತುತ್ತಿರುತ್ತಾರೆ.

ಅವರು ತಂಗಿದ್ದ ಕ್ಯಾಂಪ್​ನಲ್ಲಿ ನಡೆದ ಘಟನೆಯ ಭೀಕರತೆಯನ್ನು ವಿವರಿಸಲಾಗಿದೆ. ಸ್ಥಳದಲ್ಲಿದ್ದ ವೇಳೆ ಚಿತ್ರೀಕರಿಸಿದ ವೀಡಿಯೊ ಬಹಿರಂಗಪಡಿಸಿದ್ದಾರೆ. ದಂಪತಿ ಹಗಲು ಹೊತ್ತಿನಲ್ಲಿ ತಾವು ಭೇಟಿಯಾದ ವ್ಯಕ್ತಿಗಳೊಂದಿಗಿನ ನಡೆಸಿದ ಸಂಭಾಷಣೆಯನ್ನೂ ಬಹಿರಂಗ ಮಾಡಿದ್ದಾರೆ. ಅವರಲ್ಲಿ ಇಬ್ಬರು ಮಹಿಳೆಯನ್ನು ಅತ್ಯಾಚಾರ ಮಾಡಿದವರಾಗಿದ್ದಾರೆ.

ದಂಪತಿ ಅತ್ಯಾಚಾರ ಮಾಡಿದವರಲ್ಲಿ ಒಬ್ಬನ ಗುರುತನ್ನು ಬಹಿರಂಗಪಡಿಸಿದ್ದಾರೆ. ಮಹಿಳೆ ಕಡಲೆಕಾಯಿ ತಿನ್ನುತ್ತಿದ್ದಾಗ ಆ ವ್ಯಕ್ತಿ ಮಾತನಾಡಿಸಿದ್ದ. ಅಲ್ಲದೆ ಅವರ ಜತೆ ಅನುಚಿತವಾಗಿ ವರ್ತಿಸಿದ್ದ. ಬಳಿಕ ದಂಪತಿ ಆ ಪ್ರದೇಶವನ್ನು ತೊರೆದು ಕೆಲವು ಗಂಟೆಗಳ ನಂತರ ತಮ್ಮ ಕ್ಯಾಂಪ್​ಗೆ ಮರಳಿದ್ದರು. ಅವರು ತಂಗಿದ್ದ ಜಾಗ ನಿರ್ಜನವಾಗಿತ್ತು. ಆ ಬಳಿಕ ಅವರು ‘ತಮ್ಮ ಜೀವನದ ಭಯಾನಕ 3 ಗಂಟೆಗಳನ್ನು’ ನೆನಪಿಸಿಕೊಂಡಿದ್ದಾರೆ. “ರಾತ್ರಿ 8 ಗಂಟೆಗೆ ಪ್ರಾರಂಭವಾದ ತೊಂದರೆ ರಾತ್ರಿ 11 ಗಂಟೆಗೆ ಕೊನೆಗೊಂಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Moral policing : ನೈತಿಕ ಪೊಲೀಸ್​ಗಿರಿ; ಮುಸ್ಲಿಮರ ಗುಂಪಿನಿಂದ ಹಿಂದೂ ಯುವಕನ ಮೇಲೆ ಹಲ್ಲೆ

“ನಾನು ಏನು ಮಾಡಬೇಕೆಂದು ಆ ವೇಳೆ ನನಗೆ ತಿಳಿಯಲಿಲ್ಲ. ಪತ್ನಿ ಪೊದೆಯ ಮಧ್ಯೆ ಬಿದ್ದಿದ್ದಳು. ನಾನು ಎದ್ದು ಅವಳ ಬಳಿ ಓಡಿದೆ ಎಂದು ಪತಿ ವಿಡಿಯೊದಲ್ಲಿ ಹೇಳಿದ್ದಾರೆ. ನಂತರ ಇಬ್ಬರೂ ಆಸ್ಪತ್ರೆಗೆ ತೆರಳಿದೆವು ಏಳು ಜನರು ಅವಳ ಮೇಲೆ ಹಲವಾರು ಬಾರಿ ಅತ್ಯಾಚಾರ ಮಾಡಿದ್ದರು. ಅವರು ಅವಳನ್ನು ಹೊಡೆದಿದ್ದರು.. ಅವರು ನನಗೂ ಹೆಲ್ಮೆಟ್​ನಿಂದ ಹಲವು ಬಾರಿ ಹೊಡಿದಿದ್ದಾರೆ. ಕಲ್ಲುಗಳಿಂದ ಹಲ್ಲೆ ನಡೆಸಿದರು” ಎಂದು ಸಂತ್ರಸ್ತೆಯ ಪತಿ ಹೇಳಿದ್ದಾರೆ.

ನಂತರ ಅವರು ಪೊಲೀಸ್ ರಕ್ಷಣೆ ಪಡೆದು ಮೂರು ದಿನಗಳ ಕಾಲ ಇದ್ದರು. ನಾವು ಮುಂದುವರಿಯಲಿದ್ದೇವೆ, ವಿಧಿ ನಮಗೆ ಎರಡನೇ ಅವಕಾಶವನ್ನು ನೀಡಿದೆ. ನಾವು ಸಾವನ್ನು ಹತ್ತಿರದಿಂದ ನೋಡಿದ್ದೇವೆ ಎಂದು ಅವರು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜಾರ್ಖಂಡ್ ಪೊಲೀಸರು ಎಂಟು ಜನರನ್ನು ಬಂಧಿಸಿದ್ದಾರೆ. ಇದಲ್ಲದೆ, ಸಂತ್ರಸ್ತೆಯ ಪತಿಗೆ ಪೊಲೀಸರು 10 ಲಕ್ಷ ರೂ.ಗಳ ಪರಿಹಾರವನ್ನು ಸಹ ನೀಡಿದ್ದಾರೆ.

Continue Reading

ದೇಶ

Amanatullah Khan: ಆಪ್‌ಗೆ ಮತ್ತಷ್ಟು ಸಂಕಷ್ಟ; ಶಾಸಕ ಅಮಾನತುಲ್ಲಾ ಖಾನ್ ಅರೆಸ್ಟ್‌

Amanatullah Khan: ದೆಹಲಿ ಅಬಕಾರಿ ನೀತಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ಒಂದು ತಿಂಗಳೊಳಗೆ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಅರೆಸ್ಟ್‌ ಮಾಡಲಾಗಿದೆ. ದೆಹಲಿ ವಕ್ಫ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಶಾಸಕರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Amanatullah Khan
Koo

ನವದೆಹಲಿ: ದೆಹಲಿಯಲ್ಲಿ ಆಮ್‌ ಆದ್ಮಿ ಪಕ್ಷ (AAP)ಕ್ಕೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ದೆಹಲಿ ಅಬಕಾರಿ ನೀತಿ ಹಗರಣ (Delhi Liquor Scam)ದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಬಂಧಿಸಿದ ಒಂದು ತಿಂಗಳೊಳಗೆ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ (Amanatullah Khan) ಅವರನ್ನು ಜಾರಿ ನಿರ್ದೇಶನಾಲಯ (Enforcement Directorate) ವಶಕ್ಕೆ ತೆಗೆದುಕೊಂಡಿದೆ. ದೆಹಲಿ ವಕ್ಫ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ (Waqf Board-linked money laundering case) ಸಂಬಂಧಿಸಿದಂತೆ ಶಾಸಕರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಏನಿದು ಪ್ರಕರಣ?

ದೆಹಲಿ ವಕ್ಫ್ ಬೋರ್ಡ್ ಹಗರಣದಲ್ಲಿನ ಅಕ್ರಮ ಹಣ ವರ್ಗಾವಣೆ ಹಾಗೂ ಅಕ್ರಮ ನೇಮಕಾತಿ ಕುರಿತು ತನಿಖೆ ನಡೆಸುತ್ತಿರುವ ಇ.ಡಿ ಅಧಿಕಾರಿಗಳು ಇದೀಗ ಆಪ್ ನಾಯಕನನ್ನು ಬಂಧಿಸಿದೆ. ಸತತ 9 ಗಂಟೆಗಳ ಕಾಲ ವಿಚಾರಣೆ ನಡೆಸಿದ ಇ.ಡಿ ಅಧಿಕಾರಿಗಳು ಅಮಾನತುಲ್ಲಾ ಖಾನ್ ಅವರನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಂಧನಕ್ಕೂ ಮುನ್ನ ಖಾನ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿಡಿಯೊ ಸಂದೇಶವನ್ನು ಪೋಸ್ಟ್ ಮಾಡಿದ್ದು ಅದರಲ್ಲಿ, ʼʼಜೈಲಿನಲ್ಲಿರುವ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಸಾಕ್ಷಿ ಹೇಳಲು ಏಜೆನ್ಸಿ ಬಯಸಿದೆʼʼ ಎಂದು ಆರೋಪಿಸಿದ್ದಾರೆ.

ಈ ಹಿಂದೆ ಶಾಸಕರ ನಿವಾಸದ ಮೇಲೆ ದಾಳಿ ನಡೆಸಿದ್ದ ಇ.ಡಿ ದೆಹಲಿ ವಕ್ಫ್ ಮಂಡಳಿಯಲ್ಲಿ ಸಿಬ್ಬಂದಿಯನ್ನು ಅಕ್ರಮವಾಗಿ ನೇಮಕ ಮಾಡುವ ಮೂಲಕ ಖಾನ್ ಅಪಾರ ಪ್ರಮಾಣದ ಹಣವನ್ನು ನಗದು ರೂಪದಲ್ಲಿ ಗಳಿಸಿದ್ದಾರೆ ಮತ್ತು ತಮ್ಮ ಸಹವರ್ತಿಗಳ ಹೆಸರಿನಲ್ಲಿ ಸ್ಥಿರಾಸ್ತಿಗಳನ್ನು ಖರೀದಿಸಲು ಹೂಡಿಕೆ ಮಾಡಿದ್ದಾರೆ ಎಂದು ಹೇಳಿತ್ತು. ಇ.ಡಿ ಅಧಿಕಾರಿಗಳ ತನಿಖೆ ಚುರುಕುಗೊಳ್ಳುತ್ತಿದ್ದಂತೆ ಖಾನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಕುರಿತು ಮಧ್ಯಪ್ರವೇಶಿಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಬಳಿಕ ಇ.ಡಿ ಅಧಿಕಾರಿಗಳು ಖಾನ್ ಅವರ ವಿಚಾರಣೆ ನಡೆಸಿದ್ದರು. ಹಲವು ಗಂಟೆಗಳ ಕಾಲ ವಿಚಾರಣೆ ಮುಂದುವರಿದಿತ್ತು. ಕೊನೆಗೆ ಅಮಾನತುಲ್ಲಾ ಖಾನ್ ಅವರನ್ನು ಬಂಧಿಸಲಾಗಿದೆ.

ಅಮಾನತುಲ್ಲಾ ಖಾನ್‌ ಬಂಧನಕ್ಕೂ ಮುನ್ನ ಆಪ್‌ ಸಂಸದ ಸಂಜಯ್ ಸಿಂಗ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮೋದಿ ಸರ್ಕಾರ ಆಪರೇಷನ್ ಕಮಲದಲ್ಲಿ ಸಂಪೂರ್ಣವಾಗಿ ಭಾಗಿಯಾಗಿದೆ ಮತ್ತು ಸಚಿವರು ಮತ್ತು ಶಾಸಕರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ಅವರನ್ನು ಬಂಧಿಸಲಾಗುತ್ತಿದೆ ಎಂದು ಆರೋಪಿಸಿದ್ದರು. “ಅಮಾನತುಲ್ಲಾ ಖಾನ್‌ ವಿರುದ್ಧ ಆಧಾರರಹಿತ ಪ್ರಕರಣ ದಾಖಲಿಸುವ ಮೂಲಕ ಅವರನ್ನು ಬಂಧಿಸಲು ಇ.ಡಿ ಸಿದ್ಧತೆ ನಡೆಸುತ್ತಿದೆ. ಸರ್ವಾಧಿಕಾರ ಶೀಘ್ರದಲ್ಲೇ ಕೊನೆಗೊಳ್ಳುತ್ತದೆ. ನಾನು ಅವರ ಕುಟುಂಬವನ್ನು ಭೇಟಿಯಾಗಲಿದ್ದೇನೆ” ಎಂದು ಸಿಂಗ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದರು.

ಅಮಾನತುಲ್ಲಾ ಖಾನ್‌ ದೆಹಲಿ ವಕ್ಫ್ ಬೋರ್ಡ್ ಮುಖ್ಯಸ್ಥರಾಗಿದ್ದ ವೇಳೆ ಭಾರಿ ಹಗರಣ ನಡೆಸಿದ್ದಾರೆ ಎನ್ನುವ ಆರೋಪದಡಿಯಲ್ಲಿ ತನಿಖೆ ನಡೆಯುತ್ತಿದೆ. ಅಮಾನತುಲ್ಲಾ ಖಾನ್‌ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ಆಪ್ ಸಚಿವೆ ಆತೀಷಿ ಹಾಗೂ ನಾಯಕ ಸಂಜಯ್ ಸಿಂಗ್ ಅಮಾನತುಲ್ಲಾ ಖಾನ್‌ ಮನೆಗೆ ತೆರಳಿದ್ದಾರೆ.

ಇದನ್ನೂ ಓದಿ: Arvind Kejriwal : ಅಬಕಾರಿ ಲಂಚ ಪ್ರಕರಣದಲ್ಲಿ ಡೆಲ್ಲಿ ಸಿಎಂ ಅರವಿಂದ್​ ಕೇಜ್ರಿವಾಲ್ ಅರೆಸ್ಟ್​​

Continue Reading

ದೇಶ

Indian Railways: ಹಿರಿಯ ನಾಗರಿಕ ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ಲೋವರ್ ಬರ್ತ್ ಕಾಯ್ದಿರಿಸುವಿಕೆಗೆ ಹೊಸ ನಿಯಮ

Indian Railways: ಪ್ರಯಾಣಿಕರ ಮನ ಗೆದ್ದಿರುವ ಭಾರತೀಯ ರೈಲ್ವೆ ಹೊಸದೊಂದು ನಿಯಮ ಜಾರಿಗೊಳಿಸಿದೆ. ಇನ್ನು ಮುಂದೆ ಹಿರಿಯ ನಾಗರಿಕರು ಇನ್ನಷ್ಟು ಆರಾಮದಾಯಕವಾಗಿ ರೈಲ್ವೆ ಪ್ರಯಾಣ ನಡೆಸಬಹುದು. ಸಾಮಾನ್ಯವಾಗಿ ಹಿರಿಯ ನಾಗರಿಕರು ವಿವಿಧ ಕಾರಣಗಳಿಂದ ಲೋವರ್‌ ಬರ್ತ್‌ ಹೊಂದಲು ಬಯಸುತ್ತಾರೆ. ಹೀಗಾಗಿ ವಯಸ್ಸಾದ ಪ್ರಯಾಣಿಕರಿಗೆ ಕೆಳ ಬರ್ತ್‌ಗಳನ್ನು ಕಾಯ್ದಿರಿಸುವುದಕ್ಕೆ ಆದ್ಯತೆ ನೀಡುವ ಹೊಸ ನಿಯಮ ಜಾರಿಗೆ ತರಲಾಗಿದೆ.

VISTARANEWS.COM


on

Indian Railways
Koo

ನವದೆಹಲಿ: ದೇಶದಲ್ಲಿ ರೈಲು ಪ್ರಯಾಣ ಸುರಕ್ಷಿತ ಮತ್ತು ಹೆಚ್ಚು ಅನುಕೂಲ ಎಂದೇ ಪರಿಗಣಿಸಲಾಗುತ್ತದೆ. ದೂರ ಸಂಚಾರ ಇರಲಿ ಸಮೀಪದ ಗಮ್ಯವೇ ಇರಲಿ ಬಹುತೇಕರ ಮೊದಲ ಆಯ್ಕೆ ರೈಲು ಪ್ರಯಾಣವೇ ಆಗಿರುತ್ತದೆ. ಅದರಲ್ಲೂ ವಯಸ್ಸಾದವರಿಗೆ, ಆರೋಗ್ಯ ಸಮಸ್ಯೆ ಇರುವವರಿಗೆ ಇದು ಇನ್ನೂ ಅನೂಕೂಲ. ಇತ್ತೀಚಿನ ದಿನಗಳಲ್ಲಿ ರೈಲು ಸೇವೆಯೂ ಸಾಕಷ್ಟು ಸುಧಾರಣೆ ಕಂಡಿದ್ದು, ಪ್ರಯಾಣಿಕರಿಗೆ ಇನ್ನಷ್ಟು ಹತ್ತಿರವಾಗಿದೆ. ಈ ಮಧ್ಯೆ ಭಾರತೀಯ ರೈಲ್ವೆ (Indian Railways) ಹಿರಿಯ ನಾಗರಿಕರಿಗೆ ಗುಡ್‌ನ್ಯೂಸ್‌ ನೀಡಿದೆ. ಲೋವರ್ ಬರ್ತ್ ಕಾಯ್ದಿರಿಸುವಿಕೆ (Lower Berth Reservation)ಯ ನಿಯಮದಲ್ಲಿ ಬದಲಾವಣೆ ತಂದಿದೆ.

ಸಾಮಾನ್ಯವಾಗಿ ಹಿರಿಯ ನಾಗರಿಕರು ವಿವಿಧ ಕಾರಣಗಳಿಂದ ಲೋವರ್‌ ಬರ್ತ್‌ ಹೊಂದಲು ಬಯಸುತ್ತಾರೆ. ಒಂದು ವೇಳೆ ಅಪ್ಪರ್ ಬರ್ತ್ ಲಭ್ಯವಿದ್ದರೆ ಅದನ್ನು ಲೋವರ್‌ ಬರ್ತ್‌ಗೆ ಬದಲಾಯಿಸುವುದು ದೊಡ್ಡ ತಲೆನೋವಿನ ಸಂಗತಿ. ಆದರೆ ಇನ್ನು ಮುಂದೆ ಹಾಗಾಗುವುದಿಲ್ಲ. ವಯಸ್ಸಾದ ಪ್ರಯಾಣಿಕರಿಗೆ ಕೆಳ ಬರ್ತ್‌ಗಳನ್ನು ಕಾಯ್ದಿರಿಸುವುದಕ್ಕೆ ಆದ್ಯತೆ ನೀಡುವ ಹೊಸ ನಿಯಮ ಜಾರಿಗೆ ತರಲಾಗಿದೆ. ರೈಲು ಪ್ರಯಾಣದ ಸಮಯದಲ್ಲಿ ಹಿರಿಯ ನಾಗರಿಕರ ನಿರ್ದಿಷ್ಟ ಅಗತ್ಯಗಳನ್ನು ಪೂರೈಸಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ʼʼವೃದ್ಧರಿಗೆ, ವಯಸ್ಸಾದವರಿಗೆ ಅನುಕೂಲ ಒದಗಿಸಲು, ಅತ್ಯುತ್ತಮ ಪ್ರಯಾಣದ ಅನುಭವ ನೀಡಲು ಲೋವರ್ ಬರ್ತ್‌ಗಳನ್ನು ಕಾಯ್ದಿರಿಸುವ ಆಯ್ಕೆ ಪರಿಚಯಿಸಿದ್ದೇವೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲ ವರ್ಗದ ಪ್ರಯಾಣಿಕರ ಅಗತ್ಯಗಳನ್ನು ಪೂರೈಸಲು ರೈಲ್ವೆ ಇಲಾಖೆ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆʼʼ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಭಾರತೀಯ ರೈಲ್ವೆಯ ಪ್ರಕಟಣೆ ಪ್ರಕಾರ, ಪ್ರಯಾಣಿಕರು ಲೋವರ್ ಬರ್ತ್ ಹಂಚಿಕೆಯನ್ನು ಖಚಿತಪಡಿಸಿಕೊಳ್ಳಲು ಬುಕಿಂಗ್ ಸಮಯದಲ್ಲಿ ಲೋವರ್ ಬರ್ತ್ ಮೀಸಲಾತಿಯ ಆಯ್ಕೆಯನ್ನು ಆರಿಸಿಕೊಳ್ಳಬೇಕು. ಮೊದಲು ಬಂದವರಿಗೆ ಆದ್ಯತೆ ಆಧಾರದ ಮೇಲೆ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ. ಬೇಗ ಸೀಟು ಕಾಯ್ದಿರಿಸಿದವರಿಗೆ ಲೋವರ್ ಬರ್ತ್ ಸಿಗುತ್ತದೆ. ಲಭ್ಯತೆಯ ಆಧಾರದ ಮೇಲೆ ಸಾಮಾನ್ಯ ಕೋಟಾದಡಿ ಸೀಟುಗಳನ್ನು ಸ್ವಯಂಚಾಲಿತವಾಗಿ ನಿಗದಿಪಡಿಸಲಾಗಿದ್ದರೂ ಪ್ರಯಾಣಿಕರು ಲಭ್ಯವಿದ್ದರೆ ಲೋವರ್ ಬರ್ತ್‌ಗಾಗಿ ರೈಲು ಟಿಕೆಟ್ ಪರೀಕ್ಷಕರೊಂದಿಗೆ (TTE) ಮಾತುಕತೆ ನಡೆದಬಹುದಾಗಿದೆ.

ಇದನ್ನೂ ಓದಿ: Mantralaya Tour: ಮಂತ್ರಾಲಯಕ್ಕೆ ಒಂದೇ ದಿನದಲ್ಲಿ ಹೋಗಿ ಬರಬೇಕೆ? ಈ ರೈಲುಗಳಲ್ಲಿ ಹೊರಡಿ

ಈ ಹೊಸ ನಿಯಮದ ಅನುಷ್ಠಾನವು ಹಿರಿಯ ನಾಗರಿಕರ ಪ್ರಯಾಣದ ಅನುಭವವನ್ನು ಸುಧಾರಿಸಲಿದೆ ಎನ್ನುವ ನಿರೀಕ್ಷೆ ಇದೆ. ಆರೋಗ್ಯ ಸಮಸ್ಯೆ ಇರುವ ವೃದ್ಧ ಸಂಬಂಧಿಯೊಬ್ಬರು ಲೋವರ್ ಬರ್ತ್ ಬುಕ್ ಮಾಡಿದ್ದರೂ ಅವರಿಗೆ ಅಪ್ಪರ್‌ ಬರ್ತ್‌ಗಳ ಹಂಚಿಕೆ ಮಾಡಿರುವ ಬಗ್ಗೆ ವ್ಯಕ್ತಿಯೊಬ್ಬರು ಇತ್ತೀಚೆಗೆ ಸಾಮಾಜಿಕ ಜಾಲತಾಣ ಪ್ರಶ್ನಿಸಿದ್ದರು. ಇದು ವ್ಯಾಪಕ ಚರ್ಚೆಯನ್ನೇ ಹುಟ್ಟು ಹಾಕಿತ್ತು. ಹೀಗಾಗಿ ಈ ಹೊಸ ನಿಯಮ ಜಾರಿಗೆ ತರಲಾಗಿದೆ. ʼʼಭಾರತೀಯ ರೈಲ್ವೆ ತನ್ನ ಪ್ರಯಾಣಿಕರಿಗೆ ಅತ್ಯುತ್ತಮ ಸೇವೆಗಳನ್ನು ನೀಡಲು ಸದಾ ಸಿದ್ಧ. ಈ ರೀತಿಯ ಅಗತ್ಯ ಎಲ್ಲ ಕ್ರಮಗಳು ಕೈಗೊಳ್ಳಲಾಗುವುದುʼʼ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

Continue Reading
Advertisement
Dina bhavishya
ಭವಿಷ್ಯ14 mins ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Steet Food
ಆಹಾರ/ಅಡುಗೆ5 hours ago

ವಿಸ್ತಾರ ಸಂಪಾದಕೀಯ: ಸಾರ್ವಜನಿಕ ಆಹಾರದಲ್ಲಿ ಆರೋಗ್ಯ ಕಾಳಜಿ ಪ್ರಮುಖವಾಗಿರಲಿ

IPL 2024
ಪ್ರಮುಖ ಸುದ್ದಿ5 hours ago

IPL 2024 : ಪಂಜಾಬ್​ ತಂಡಕ್ಕೆ ವಿರೋಚಿತ 9 ರನ್ ಸೋಲು, ಜಯದ ಹಳಿಗೆ ಮರಳಿದ ಮುಂಬೈ

Physical Abuse
ದೇಶ6 hours ago

Physical Abuse : ಸ್ಪೇನ್​ನ ಮಹಿಳೆ ಮೇಲೆ ಜಾರ್ಖಂಡ್​ನಲ್ಲಿ ಗ್ಯಾಂಗ್​ ರೇಪ್​; ತಿಂಗಳ ಬಳಿಕ ಪ್ರಕರಣ ಬಯಲು

Amanatullah Khan
ದೇಶ6 hours ago

Amanatullah Khan: ಆಪ್‌ಗೆ ಮತ್ತಷ್ಟು ಸಂಕಷ್ಟ; ಶಾಸಕ ಅಮಾನತುಲ್ಲಾ ಖಾನ್ ಅರೆಸ್ಟ್‌

Moral policing
ಪ್ರಮುಖ ಸುದ್ದಿ6 hours ago

Moral policing : ನೈತಿಕ ಪೊಲೀಸ್​ಗಿರಿ; ಮುಸ್ಲಿಮರ ಗುಂಪಿನಿಂದ ಹಿಂದೂ ಯುವಕನ ಮೇಲೆ ಹಲ್ಲೆ

Rishab Shetty
ಸಿನಿಮಾ7 hours ago

Rishab Shetty: ರಿಷಬ್‌ ಮೀಟ್ಸ್‌ ಮೋಹನ್‌ಲಾಲ್‌; ʼಕಾಂತಾರʼ ಪ್ರೀಕ್ವೆಲ್​ನಲ್ಲಿ ಅಭಿನಯಿಸುತ್ತಾರಾ ಮಾಲಿವುಡ್‌ ಸೂಪರ್‌ ಸ್ಟಾರ್‌?

lok Sabha Election
ಪ್ರಮುಖ ಸುದ್ದಿ7 hours ago

Lok Sabha Election : ಕಾಂಗ್ರೆಸ್​​ಗೆ ಹಿನ್ನಡೆಯಾದರೆ ಸಿದ್ದರಾಮಯ್ಯ ಸ್ಥಾನಕ್ಕೆಕಂಟಕ​​​; ಚರ್ಚೆ ಹುಟ್ಟು ಹಾಕಿದ ಬೈರತಿ ಸುರೇಶ್​ ಹೇಳಿಕೆ

Hubli Murder Case
ಪ್ರಮುಖ ಸುದ್ದಿ7 hours ago

Hubli murder case : ನೇಹಾಳನ್ನು ಕೊಲ್ಲಲೆಂದೇ ಕಾಲೇಜಿಗೆ ಸಜ್ಜಾಗಿ ಬಂದಿದ್ದ ಶಿಕ್ಷಕರ ಪುತ್ರ ಫಯಾಜ್!

congress workers meeting in kudligi
ವಿಜಯನಗರ7 hours ago

Lok Sabha Election 2024: ಬಳ್ಳಾರಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಗೆಲ್ಲಿಸಲು ಸಂತೋಷ್‌ ಲಾಡ್‌ ಮನವಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ14 mins ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ7 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ1 week ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

ಟ್ರೆಂಡಿಂಗ್‌