Ram Mandir: ಬಾಹ್ಯಾಕಾಶದಿಂದ ರಾಮಮಂದಿರ ಕಂಡಿದ್ದು ಹೇಗೆ? ಇಸ್ರೋ ಫೋಟೊಗಳು ಇಲ್ಲಿವೆ - Vistara News

ದೇಶ

Ram Mandir: ಬಾಹ್ಯಾಕಾಶದಿಂದ ರಾಮಮಂದಿರ ಕಂಡಿದ್ದು ಹೇಗೆ? ಇಸ್ರೋ ಫೋಟೊಗಳು ಇಲ್ಲಿವೆ

Ram Mandir: ರಾಮಮಂದಿರದ ಫೋಟೊಗಳನ್ನು ಇಸ್ರೋ ಬಾಹ್ಯಾಕಾಶದಿಂದ ಸೆರೆ ಹಿಡಿದಿದೆ. ಇಸ್ರೋ ತೆಗೆದ ರಮಣೀಯ ಫೋಟೊಗಳು ಇಲ್ಲಿವೆ.

VISTARANEWS.COM


on

Ram Mandir Photo
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಯೋಧ್ಯೆ: ಐದು ಶತಮಾನಗಳ ರಾಮಮಂದಿರದ (Ram Mandir) ಕನಸು ನನಸಾಗುತ್ತಿರುವ ಕಾರಣ ಭಾರತ ಸೇರಿ ಜಗತ್ತಿನಾದ್ಯಂತ ಇರುವ ರಾಮನ ಭಕ್ತರು ರಾಮಲಲ್ಲಾನ (Ram Lalla) ಪ್ರಾಣ ಪ್ರತಿಷ್ಠಾಪನೆಗಾಗಿ (Pran Pratishtha) ಕಾಯುತ್ತಿದ್ದಾರೆ. ರಾಮಮಂದಿರ ಟ್ರಸ್ಟ್‌ ಕೂಡ ಮಂದಿರದ ಒಳಗಿನ ರಮಣೀಯ ಫೋಟೊಗಳನ್ನು ಹಂಚಿಕೊಂಡಿದೆ. ಇದರ ಬೆನ್ನಲ್ಲೇ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಕೂಡ ರಾಮಮಂದಿರದ ರೋಮಾಂಚನ ಕಾರಿ ಫೋಟೊಗಳನ್ನು ಬಾಹ್ಯಾಕಾಶದಿಂದ ತೆಗೆದು ಹಂಚಿಕೊಂಡಿದೆ. ಆ ಫೋಟೊಗಳು ಇಲ್ಲಿವೆ.

ರಾಮಮಂದಿರ ಒಳಾಂಗಣದ ಫೋಟೊಗಳು

ಇದನ್ನೂ ಓದಿ: Ram Mandir : ಪ್ರಾಣಪ್ರತಿಷ್ಠಾ ಸಮಾರಂಭಕ್ಕೂ ಮುನ್ನ ಸಿಂಗಾರಗೊಂಡಿರುವ ಮಂದಿರದ ಮನಮೋಹಕ ಚಿತ್ರಗಳು ಇಲ್ಲಿವೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Terror Attack: ಕಂದಮ್ಮನನ್ನೂ ಕೊಂದ ಉಗ್ರರು; ಎದೆಗೆ ಗುಂಡು ಬಿದ್ದರೂ ಪ್ರಯಾಣಿಕರನ್ನು ಉಳಿಸಲು ಯತ್ನಿಸಿದ್ದ ಚಾಲಕ

Terror Attack: ಪೋನಿ ಪ್ರದೇಶದ ತೇರ್ಯತ್ ಗ್ರಾಮದ ಮೂಲಕ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ ಚಾಲಕ ದಾಸನೂ ರಾಜ್‌ಬಾಗ್, ಭಯೋತ್ಪಾದಕರು ತನ್ನ ಮೇಲೆ ಬುಲೆಟ್‌ಗಳನ್ನು ಹಾರಿಸಿದಾಗ ಅಪಾರ ಧೈರ್ಯ ತಂದುಕೊಂಡು ಬಸ್ಸನ್ನು ವೇಗವಾಗಿ ಚಲಾಯಿಸಿ ಅಲ್ಲಿಂದ ಪಾರಾಗಲು ಯತ್ನಿಸಿದ.

VISTARANEWS.COM


on

reasi terror attack
Koo

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu & Kashmir) ರಿಯಾಸಿ ಜಿಲ್ಲೆಯಲ್ಲಿ ಭಾನುವಾರ ನಡೆದ ಭಯೋತ್ಪಾದಕರ ಗುಂಡಿನ ದಾಳಿಯ (Reasi terror Attack) ಸಂದರ್ಭದಲ್ಲಿ, ಪುಟ್ಟ ಕಂದಮ್ಮನೂ ಸೇರಿ 10 ಮಂದಿ ಸತ್ತಿದ್ದಾರೆ. ಕ್ರೂರಿ ಭಯೋತ್ಪಾದಕರು (Terrorists) ಪುಟ್ಟ ಮಗುವೆಂದೂ ನೋಡದೆ ಗುಂಡು ಹಾರಿಸಿ ಕೊಂದಿದ್ದಾರೆ. ಈ ನಡುವೆ, ಉಗ್ರರು ಮೈಕೈ ತುಂಬೆಲ್ಲಾ ಗುಂಡು (bullets) ಜಡಿದರೂ ಪ್ರಯಾಣಿಕರನ್ನು (tourists) ಉಳಿಸಲು ಚಾಲಕ (Bus driver) ಯತ್ನಿಸಿದ್ದಾನೆ ಎಂದು ಗೊತ್ತಾಗಿದೆ.

ಪೋನಿ ಪ್ರದೇಶದ ತೇರ್ಯತ್ ಗ್ರಾಮದ ಮೂಲಕ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ ಚಾಲಕ ದಾಸನೂ ರಾಜ್‌ಬಾಗ್, ಭಯೋತ್ಪಾದಕರು ತನ್ನ ಮೇಲೆ ಬುಲೆಟ್‌ಗಳನ್ನು ಹಾರಿಸಿದಾಗ ಅಪಾರ ಧೈರ್ಯ ತಂದುಕೊಂಡು ಬಸ್ಸನ್ನು ವೇಗವಾಗಿ ಚಲಾಯಿಸಿ ಅಲ್ಲಿಂದ ಪಾರಾಗಲು ಯತ್ನಿಸಿದ. ಆದರೆ ಮೈಗೆ ಗುಂಡು ಬಿದ್ದ ಪರಿಣಾಮ ಬಸ್ ನಿಯಂತ್ರಣ ತಪ್ಪಿ ರಸ್ತೆಯಿಂದ ಆಳವಾದ ಕಮರಿಗೆ ಬಿತ್ತು. ಘಟನೆಯಲ್ಲಿ ಚಾಲಕನೂ ಮೃತಪಟ್ಟಿದ್ದಾನೆ.

ಚಾಲಕ ಮತ್ತು ಕಂಡಕ್ಟರ್ ಸೇರಿದಂತೆ ಹತ್ತು ಮಂದಿ ಈ ದಾಳಿಯಲ್ಲಿ ಸಾವನ್ನಪ್ಪಿರುವುದು ದೃಢಪಟ್ಟಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಂಡವು ಸ್ಥಳಕ್ಕೆ ತಲುಪಿ ಪೊಲೀಸರಿಗೆ ಸಹಾಯ ಮಾಡುತ್ತಿದೆ. ಭಾನುವಾರದ ದಾಳಿಯ ನಂತರ ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಭಯೋತ್ಪಾದಕರನ್ನು ಹುಡುಕಲು ಭದ್ರತಾ ಪಡೆಗಳು ಡ್ರೋನ್‌ಗಳನ್ನು ಬಳಸುತ್ತಿವೆ.

ರಿಯಾಸಿ ದಾಳಿಯ ನಂತರ, ಭಾರತೀಯ ಸೇನೆಯ ಹತ್ತಿರದ ನೆಲೆಗಳಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಯಿತು. ಭದ್ರತಾ ಕ್ರಮಗಳನ್ನು ಬಲಪಡಿಸಲು ವಿವಿಧ ಸ್ಥಳಗಳಿಂದ ಪಡೆಗಳನ್ನು ಕಳುಹಿಸಲಾಗಿದೆ. ಸದ್ಯ ಉಗ್ರರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಭಾನುವಾರವೇ ತ್ವರಿತ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ವೈದ್ಯಕೀಯ ಸೌಲಭ್ಯಗಳಿಗೆ ತ್ವರಿತವಾಗಿ ಸಾಗಿಸಲಾಯಿತು. ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಭದ್ರತಾ ಪಡೆಗಳು ಸೇರಿದಂತೆ ಸ್ಥಳೀಯ ಅಧಿಕಾರಿಗಳು ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿದರು. ಪ್ರದೇಶವನ್ನು ಸುತ್ತುವರೆದು ತನಿಖೆ ಪ್ರಾರಂಭಿಸಿದರು.

“ಶಿವ್ ಖೋರಿಯಿಂದ ಕತ್ರಾಗೆ ಹೋಗುತ್ತಿದ್ದ ಪ್ರಯಾಣಿಕರ ಬಸ್‌ನ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಿಂದಾಗಿ ಬಸ್ ಚಾಲಕನ ಸಮತೋಲನ ತಪ್ಪಿ ಬಸ್ ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ 33 ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ. ಪ್ರಯಾಣಿಕರ ಗುರುತು ಇನ್ನೂ ದೃಢಪಟ್ಟಿಲ್ಲ. ಅವರು ಸ್ಥಳೀಯರಲ್ಲ. ಶಿವ ಖೋರಿ ದೇವಾಲಯವನ್ನು ಭದ್ರಪಡಿಸಲಾಗಿದೆ” ಎಂದು ರಿಯಾಸಿಯ ಎಸ್‌ಎಸ್‌ಪಿ ಮೋಹಿತಾ ಶರ್ಮಾ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಪರಿಸ್ಥಿತಿಯನ್ನು ಅವಲೋಕಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಅವರನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುವಂತೆ ಕೇಳಿಕೊಂಡಿದ್ದಾರೆ. “ರಿಯಾಸಿಯಲ್ಲಿ ಯಾತ್ರಾರ್ಥಿಗಳ ಮೇಲೆ ನಡೆದ ದಾಳಿಯ ಘಟನೆಯಿಂದ ಆಳವಾದ ನೋವಾಗಿದೆ. ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮತ್ತು ಡಿಜಿಪಿ ಜೊತೆ ಘಟನೆಯ ಬಗ್ಗೆ ವಿಚಾರಿಸಿದ್ದೇನೆ. ಈ ಭೀಕರ ದಾಳಿಯ ಅಪರಾಧಿಗಳನ್ನು ಬಿಡಲಾಗುವುದಿಲ್ಲ. ದಾಳಿಕೋರರು ಕಾನೂನಿನ ಕ್ರಮವನ್ನು ಎದುರಿಸಬೇಕಾಗುತ್ತದೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಕ್ಸ್‌ನಲ್ಲಿ ಹೇಳಿದ್ದಾರೆ.

“ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ” ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಎಲ್ಲಾ ಕುಟುಂಬಗಳಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಘಟನೆಯನ್ನು ‘ಹೇಡಿತನ’ ಎಂದು ಕರೆದಿರುವ ಅವರು, ಜಮ್ಮು ಮತ್ತು ಕಾಶ್ಮೀರದ ಆತಂಕಕಾರಿ ಭದ್ರತಾ ಪರಿಸ್ಥಿತಿಯ ನೈಜ ಚಿತ್ರಣವನ್ನು ಈ ಘಟನೆ ತೆರೆದಿಡುತ್ತದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: Terror Attack: ಕಾಶ್ಮೀರದಲ್ಲಿ ಹಿಂದೂ ಯಾತ್ರಿಗಳಿದ್ದ ಬಸ್‌ ಮೇಲೆ ಉಗ್ರರ ದಾಳಿ; 10 ಸಾವು

Continue Reading

ಪ್ರಮುಖ ಸುದ್ದಿ

PM Narendra Modi: ಇಂದು ಸಂಜೆ ನರೇಂದ್ರ ಮೋದಿ ಸಂಪುಟ ಮೊದಲ ಸಭೆ; ಏನು ಅಜೆಂಡಾ?

PM Narendra Modi: ಮೋದಿ 3.0 ಸರ್ಕಾರದ ಮೊದಲ ಸಂಪುಟ ಸಭೆ ಇದಾಗಿದೆ. ಇದೇ ಸಂದರ್ಭದಲ್ಲಿ ನೂತನ ಸಚಿವರಿಗೆ ಔತಣಕೂಟವನ್ನೂ ಮೋದಿ ಏರ್ಪಡಿಸಿದ್ದಾರೆ. ಇದೇ ಸಭೆಯಲ್ಲಿ ಖಾತೆ ಹಂಚಿಕೆ ಸಂಬಂಧ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಮಿತ್ರ ಪಕ್ಷಗಳು ನಿರ್ದಿಷ್ಟ ಖಾತೆಗೆ ಡಿಮ್ಯಾಂಡ್ ಮಾಡಿವೆ.

VISTARANEWS.COM


on

pm narendra Modi Cabinet
Koo

ಹೊಸದಿಲ್ಲಿ: ಇಂದು ಸಂಜೆ 5 ಗಂಟೆಗೆ ನರೇಂದ್ರ ಮೋದಿ (PM Narendra Modi) ಅವರ ಮೂರನೇ ಅವಧಿಯ ಸರ್ಕಾರದ (Modi 3.0) ಮೊದಲ ಸಂಪುಟ ಸಭೆ (Cabinet meeting) ನಡೆಯಲಿದೆ. ಪ್ರಧಾನಿಯವರ ಲೋಕ ಕಲ್ಯಾಣ ಮಾರ್ಗದ ನಿವಾಸದಲ್ಲಿ ಸಭೆ ಆಯೋಜನೆಗೊಂಡಿದೆ.

ನಿನ್ನೆ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗಿದೆ. ಪ್ರಧಾನಿಯಾಗಿ ಮೋದಿ ಇನ್ನಿತರ 72 ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರಿಂದ ಪ್ರಮಾಣ ವಚನ ಸ್ವೀಕರಿಸಿದವರಲ್ಲಿ ಕರ್ನಾಟಕದ ಐವರೂ ಸೇರಿದ್ದಾರೆ. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರೊಂದಿಗೆ ಇಂದು ಮೋದಿ ಸಭೆ ನಡೆಸಲಿದ್ದಾರೆ.

ಮೋದಿ 3.0 ಸರ್ಕಾರದ ಮೊದಲ ಸಂಪುಟ ಸಭೆ ಇದಾಗಿದೆ. ಇದೇ ಸಂದರ್ಭದಲ್ಲಿ ನೂತನ ಸಚಿವರಿಗೆ ಔತಣಕೂಟವನ್ನೂ ಮೋದಿ ಏರ್ಪಡಿಸಿದ್ದಾರೆ. ಇದೇ ಸಭೆಯಲ್ಲಿ ಖಾತೆ ಹಂಚಿಕೆ ಸಂಬಂಧ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಮಿತ್ರ ಪಕ್ಷಗಳು ನಿರ್ದಿಷ್ಟ ಖಾತೆಗೆ ಡಿಮ್ಯಾಂಡ್ ಮಾಡಿವೆ.

ಬಿಹಾರದ ನಿತೀಶ್‌ ಕುಮಾರ್‌ ಅವರು ಜೆಡಿಯುಗೆ ಕೃಷಿ ಖಾತೆ ನೀಡುವಂತೆ ಡಿಮ್ಯಾಂಡ್‌ ಮಾಡಿದ್ದಾರೆ. ಆದರೆ ಕರ್ನಾಟಕದ ಎಚ್‌.ಡಿ ಕುಮಾರಸ್ವಾಮಿ ಅವರೂ ಕೃಷಿ ಖಾತೆ ನೀಡಿದರೆ ನಿರ್ವಹಿಸಲು ತಾನು ಸಿದ್ಧ ಎಂಬ ಸಂದೇಶ ರವಾನಿಸಿದ್ದಾರೆ. ತೆಲುಗು ದೇಶಂನ ಚಂದ್ರಬಾಬು ನಾಯ್ಡು ಅವರೂ ಮಹತ್ವದ ಖಾತೆಗಳನ್ನು ಕೇಳಿದ್ದಾರೆ.

ಆದರೆ ಈಗ ಪ್ರಮಾಣ ವಚನ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ನೋಡಿದರೆ, ಕ್ಯಾಬಿನೆಟ್‌ ದರ್ಜೆಯ 11 ಸ್ಥಾನಗಳನ್ನು ಬಿಜೆಪಿ ತನ್ನ ಜೊತೆಗೇ ಇಟ್ಟುಕೊಂಡಿದೆ. ಟಿಡಿಪಿಗೆ 2, ಜೆಡಿಯುಗೆ 2, ಜೆಡಿಎಸ್‌, ಶಿವಸೇನೆ, ಎಲ್‌ಜೆಪಿ, ಆರ್‌ಎಲ್‌ಡಿ ಮುಂತಾದ ಪಕ್ಷಗಳಿಗೆ ತಲಾ ಒಂದೊಂದು ಸ್ಥಾನಗಳನ್ನು ನೀಡಿದೆ. ಈಗ ಯಾವ ಖಾತೆ ಯಾರಿಗೆ ಎಂಬ ನಿರ್ಣಯ ಇನ್ನು ಆಗಬೇಕಿದೆ. ಮಿತ್ರಪಕ್ಷಗಳು ಮಹತ್ವದ ಖಾತೆಗಾಗಿ ಪಟ್ಟು ಹಿಡಿಯುತ್ತವೆಯೇ ಅಥವಾ ಕೊಟ್ಟದ್ದಕ್ಕೆ ತೃಪ್ತವಾಗುತ್ತವೆಯೇ ಎಂದು ನೋಡಬೇಕಿದೆ.

“ಒಕ್ಕೂಟ ವ್ಯವಸ್ಥೆಯ ಆಶಯ…” ನೂತನ ಪ್ರಧಾನಿ ಮೋದಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನ ಮಂತ್ರಿಯಾಗಿ (Prime minister) ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ (Narendra Modi) ಅವರಿಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ (CM Siddaramaiah) ಸಾಮಾಜಿಕ ಜಾಲತಾಣ X ಖಾತೆ ಮೂಲಕ ಶುಭ ಕೋರಿದ್ದಾರೆ.

“3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ @narendramodi ಅವರಿಗೆ ಅಭಿನಂದನೆಗಳು. ಕರುನಾಡಿನ ಅಭಿವೃದ್ಧಿಯ ನಮ್ಮ ಸಂಕಲ್ಪಕ್ಕೆ ನಿಮ್ಮ ಸಹಕಾರ ಇರಲಿದೆ, ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಎತ್ತಿಹಿಡಿಯುತ್ತಾ ರಾಜ್ಯಗಳ ಹಿತಾಸಕ್ತಿಯನ್ನು ನೀವು ಗೌರವಿಸುತ್ತೀರೆಂದು ಭಾವಿಸಿದ್ದೇನೆ. ಸಂಪದ್ಭರಿತ ಕರ್ನಾಟಕದ ಮೂಲಕ ಸದೃಢ ಭಾರತ ನಿರ್ಮಾಣಕ್ಕಾಗಿ ನಿಮ್ಮ ಜೊತೆಯಾಗಿ ಶ್ರಮಿಸುವ ದಿನಗಳನ್ನು ಎದುರು ನೋಡುತ್ತಿದ್ದೇನೆ” ಎಂದು ಸಿದ್ದರಾಮಯ್ಯ ಹಾರೈಸಿದ್ದಾರೆ.

ಇದನ್ನೂ ಓದಿ: Narendra Modi: 3ನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣ; ಇಲ್ಲಿದೆ ಬಾಲ್ಯದಿಂದ ವಿಶ್ವನಾಯಕತನಕದ ಜೀವನ ಚಿತ್ರಣ

Continue Reading

ಸಿನಿಮಾ

Narendra Modi: ಪ್ರಧಾನಿ ಮೋದಿಗೆ ಸೆಲೆಬ್ರಿಟಿಗಳಿಂದ ಅಭಿನಂದನೆಗಳ ಮಹಾಪೂರ !

Narendra Modi: ಮೋದಿ ಅವರು ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಾಲಿವುಡ್ ಸೆಲೆಬ್ರಿಟಿಗಳಾದ ಶಾರುಖ್ ಖಾನ್, ಅಕ್ಷಯ್ ಕುಮಾರ್, ಕಂಗನಾ ರಣಾವತ್‌, ವಿಕ್ರಾಂತ್ ಮಾಸ್ಸೆ ಮತ್ತು ಇತರ ಸೆಲೆಬ್ರಿಟಿಗಳು ಇದ್ದರು. ನರೇಂದ್ರ ಮೋದಿ ಅವರ ಜತೆಗೆ ಹಲವು ಸಂಸದರು ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇಶದಲ್ಲಿ 10 ವರ್ಷಗಳ ಬಳಿಕ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದು, ಟಿಡಿಪಿ, ಜೆಡಿಯು, ಜೆಡಿಎಸ್‌ ಹಾಗೂ ಎಲ್‌ಜೆಪಿ ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

VISTARANEWS.COM


on

Narendra Modi Oath Ceremony Celebs Congratulate PM Modi
Koo

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಎನ್‌ಡಿಎ ಮೈತ್ರಿಕೂಟವು ಸ್ಪಷ್ಟ ಬಹುಮತ ಪಡೆದ ಬೆನ್ನಲ್ಲೇ ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ (Narendra Modi Oath) ಸ್ವೀಕರಿಸಿದ್ದಾರೆ. ದೆಹಲಿಯಲ್ಲಿರುವ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಪ್ರಮಾಣವಚನ ಬೋಧಿಸಿದಿರು. ಮೋದಿ ಅವರು ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಾಲಿವುಡ್ ಸೆಲೆಬ್ರಿಟಿಗಳಾದ ಶಾರುಖ್ ಖಾನ್, ಅಕ್ಷಯ್ ಕುಮಾರ್, ಕಂಗನಾ ರಣಾವತ್‌, ವಿಕ್ರಾಂತ್ ಮಾಸ್ಸೆ ಮತ್ತು ಇತರ ಸೆಲೆಬ್ರಿಟಿಗಳು ಇದ್ದರು. ಸೆಲೆಬ್ರಿಟಿಗಳು ಮೋದಿ ಅವರಿಗೆ ವಿಶ್‌ ಮಾಡಿದ್ದು ಹೀಗೆ.

“3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು… ಕೌಶಲ್ಯ, ಅಭಿವೃದ್ಧಿ, ಶಿಕ್ಷಣ ಮತ್ತು ದೇಶದ ಸುರಕ್ಷತೆಯ ಕಡೆಗಿನ ನಿಮ್ಮ ಬದ್ಧತೆಗೆ ನಾವು ಧನ್ಯರು’…”ಎಂದು ನಟ ರಿಷಬ್‌ ಶೆಟ್ಟಿ ಎಕ್ಸ್‌ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: PM Narendra Modi: “ಒಕ್ಕೂಟ ವ್ಯವಸ್ಥೆಯ ಆಶಯ…” ಪ್ರಧಾನಿ ಮೋದಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ನಟ ಅಜಯ್ ದೇವಗನ್ “ಪ್ರಧಾನಿ ನರೇಂದ್ರಮೋದಿ ಜಿ ಅವರ ಮರು ಆಯ್ಕೆಯಾಗಿದ್ದಕ್ಕೆ ಅಭಿನಂದನೆಗಳು! ಅವರ ಬುದ್ಧಿವಂತಿಕೆ ಮತ್ತು ಸಹಾನುಭೂತಿಯಿಂದ ಸಮೃದ್ಧಿ ಮತ್ತು ಶ್ರೇಷ್ಠತೆಯ ಕಡೆಗೆ ಭಾರತವನ್ನು ಮಾರ್ಗದರ್ಶನ ಮಾಡುವಲ್ಲಿ ನಿರಂತರ ಯಶಸ್ಸನ್ನು ಬಯಸುತ್ತೇವೆ, ”ಎಂದು ಬರೆದುಕೊಂಡಿದ್ದಾರೆ.


ರಾಜ್‌ಕುಮಾರ್ ರಾವ್ ಅವರು ಎಕ್ಸ್‌ನಲ್ಲಿ “ಈ ಐತಿಹಾಸಿಕ ಮೂರನೇ ಸತತ ಗೆಲುವಿಗಾಗಿ ನಮ್ಮ ಗೌರವಾನ್ವಿತ ಪ್ರಧಾನಿ ಮೋದಿ ಜೀ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ನಾಯಕತ್ವದಲ್ಲಿ ನಮ್ಮ ದೇಶವು ಅಭಿವೃದ್ಧಿಗೆ ಬರಲಿ. ದೇವರು ನಿಮ್ಮನ್ನು ಆಶೀರ್ವದಿಸಲಿ ಸರ್ʼʼಎಂದು ಬರೆದುಕೊಂಡಿದ್ದಾರೆ.


ಅನುಪಮ್ ಖೇರ್ ಹೀಗೆ ಬರೆದುಕೊಂಡಿದ್ದಾರೆ “ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೀ. ಇಂದು ನಿಮ್ಮನ್ನು ಭೇಟಿಯಾಗಲು ನನಗೆ ತುಂಬಾ ಸಂತೋಷವಾಗಿದೆ. ದೇಶವಾಸಿಗಳಿಗಾಗಿ ನೀವು ಹಗಲಿರುಳು ಮಾಡುತ್ತಿರುವ ಶ್ರಮ ಸ್ಪೂರ್ತಿದಾಯಕ! ನಿಮ್ಮ ರಕ್ಷಣೆಗಾಗಿ ನನ್ನ ತಾಯಿ ಕಳುಹಿಸಿದ ರುದ್ರಾಕ್ಷಿ ಮಾಲೆಯನ್ನು ನೀವು ಸ್ವೀಕರಿಸಿದ ಗೌರವವನ್ನು ನಾವು ಯಾವಾಗಲೂ ಸ್ಮರಿಸುತ್ತೇವೆ. ಜೈ ಹೋ. ಜೈ ಹಿಂದ್!” ಎಂದು ಬರೆದುಕೊಂಡಿದ್ದಾರೆ.

“ಹೃತ್ಪೂರ್ವಕ ಅಭಿನಂದನೆಗಳು ನಮ್ಮ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೀ ಅವರಿಗೆ. ವಸುಧೈವ ಕುಟುಂಬಕಮ್‌ನ ತತ್ತ್ವಚಿಂತನೆಗಳಲ್ಲಿ ಪ್ರೀತಿ ಮತ್ತು ದಯೆಯಿಂದಾಗಿ ನೀವು ಕರುಣೆಯಿಂದ ನಮ್ಮನ್ನು ಅದ್ಭುತವಾದ ಬೆಳವಣಿಗೆ, ಪ್ರಗತಿ, ಸಮೃದ್ಧಿಯ ಯುಗಕ್ಕೆ ಕೊಂಡೊಯ್ಯುತ್ತೀರಿ. ಮತ್ತು ಜಗತ್ತು ವಿಸ್ಮಯದಿಂದ ನೋಡುವ ವೈಭವಯುತ ರಾಷ್ಟ್ರವನ್ನಾಗಿ ಮಾಡುತ್ತೀರಿ ಎಂದು ನಮಗೆ ತಿಳಿದಿದೆ. ನಿಮಗೆ ದೇವರು ಒಳ್ಳೆಯ ಆರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಆರ್ ಮಾಧವನ್ ಬರೆದಿದ್ದಾರೆ.

ಇದನ್ನೂ ಓದಿ: Niveditha Gowda: ಚಂದನ್‌ ಶೆಟ್ಟಿ-ನಿವೇದಿತಾ ನಡುವಿನ ವಯಸ್ಸಿನ ಅಂತರವೆಷ್ಟು?

ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಸೆಲೆಬ್ರಿಟಿಗಳು ಭಾಗಿ

ಸಮಾರಂಭದಲ್ಲಿ ರಜನಿಕಾಂತ್ ಅವರು ಭಾಗಿಯಾಗಿದ್ದರು. ಚೆನ್ನೈನಿಂದ ದೆಹಲಿಗೆ ತೆರಳುತ್ತಿದ್ದಾಗ ಸುದ್ದಿಗಾರರೊಂದಿಗೆ ನಟ ಮಾತನಾಡಿ ʻʻನಾನು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದೇನೆ. ಇದು ಅತ್ಯಂತ ಐತಿಹಾಸಿಕ ಕಾರ್ಯಕ್ರಮ. ಸತತ ಮೂರನೇ ಅವಧಿಗೆ ಮೋದಿ ಅವರು ಅಧಿಕಾರ ಸ್ವೀಕರಿಸುತ್ತಿದ್ದಾರೆ. ನರೇಂದ್ರ ಮೋದಿಯವರ ದೊಡ್ಡ ಸಾಧನೆಯಾಗಿದೆ, ಅವರಿಗೆ ನನ್ನ ಹೃತ್ಪೂರ್ವಕ ನಮಸ್ಕಾರಗಳು. ಇದು ಪ್ರಜಾಪ್ರಭುತ್ವದ ಆರೋಗ್ಯಕರ ಸಂಕೇತವಾಗಿದೆʼʼಎಂದರು.ವಿಶೇಷವೆಂದರೆ ತಮಿಳುನಾಡಿನಲ್ಲಿ ಬಿಜೆಪಿಗೆ ಒಂದು ಸೀಟು ಸಹ ಬಂದಿಲ್ಲ.

ನರೇಂದ್ರ ಮೋದಿ ಅವರ ಜತೆಗೆ ಹಲವು ಸಂಸದರು ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇಶದಲ್ಲಿ 10 ವರ್ಷಗಳ ಬಳಿಕ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದು, ಟಿಡಿಪಿ, ಜೆಡಿಯು, ಜೆಡಿಎಸ್‌ ಹಾಗೂ ಎಲ್‌ಜೆಪಿ ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮದ ಲೈವ್‌ ವೀಕ್ಷಣೆಗೆ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಎಲ್‌ಇಡಿ ಪರದೆ, ಟಿವಿಗಳ ವ್ಯವಸ್ಥೆ ಮಾಡಿದ್ದರು. ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುತ್ತಲೇ ಭಾರತ್‌ ಮಾತಾ ಕೀ ಜೈ, ಮೋದಿ ಮೋದಿ ಎಂಬ ಘೋಷಣೆಗಳು ಮೊಳಗಿದವು.

Continue Reading

ಪ್ರಮುಖ ಸುದ್ದಿ

PM Narendra Modi: “ಒಕ್ಕೂಟ ವ್ಯವಸ್ಥೆಯ ಆಶಯ…” ಪ್ರಧಾನಿ ಮೋದಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ನೂತನ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಕ್ಕೂಟ ವ್ಯವಸ್ಥೆಯನ್ನು ನೆನಪಿಸುತ್ತಲೇ ಶುಭ ಕೋರಿದ್ದಾರೆ.

VISTARANEWS.COM


on

PM Narendra Modi and Siddaramaiah
Koo

ಬೆಂಗಳೂರು: ಪ್ರಧಾನ ಮಂತ್ರಿಯಾಗಿ (Prime minister) ಮೂರನೇ ಬಾರಿಗೆ ಪ್ರಮಾಣ ವಚನ (Oath) ಸ್ವೀಕರಿಸಿದ ನರೇಂದ್ರ ಮೋದಿ (Narendra Modi) ಅವರಿಗೆ ಕರ್ನಾಟಕ (Karnataka) ಸಿಎಂ ಸಿದ್ದರಾಮಯ್ಯ (CM Siddaramaiah) ಸಾಮಾಜಿಕ ಜಾಲತಾಣ X ಖಾತೆ ಮೂಲಕ ಶುಭ ಕೋರಿದ್ದಾರೆ.

“3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ @narendramodi ಅವರಿಗೆ ಅಭಿನಂದನೆಗಳು. ಕರುನಾಡಿನ ಅಭಿವೃದ್ಧಿಯ ನಮ್ಮ ಸಂಕಲ್ಪಕ್ಕೆ ನಿಮ್ಮ ಸಹಕಾರ ಇರಲಿದೆ, ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಎತ್ತಿಹಿಡಿಯುತ್ತಾ ರಾಜ್ಯಗಳ ಹಿತಾಸಕ್ತಿಯನ್ನು ನೀವು ಗೌರವಿಸುತ್ತೀರೆಂದು ಭಾವಿಸಿದ್ದೇನೆ. ಸಂಪದ್ಭರಿತ ಕರ್ನಾಟಕದ ಮೂಲಕ ಸದೃಢ ಭಾರತ ನಿರ್ಮಾಣಕ್ಕಾಗಿ ನಿಮ್ಮ ಜೊತೆಯಾಗಿ ಶ್ರಮಿಸುವ ದಿನಗಳನ್ನು ಎದುರು ನೋಡುತ್ತಿದ್ದೇನೆ” ಎಂದು ಸಿದ್ದರಾಮಯ್ಯ ಹಾರೈಸಿದ್ದಾರೆ.

ಬೆಂಗಳೂರು: ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ(NDA) ಅಧಿಕಾರಕ್ಕೆ ಬಂದಿದೆ. ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ (Narendra Modi) ಇಂದು (ಜೂನ್‌ 9) ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದು, ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇದಕ್ಕಾಗಿ ಸಿದ್ಧತೆ ಪೂರ್ಣಗೊಂಡಿದೆ. ಈ ಬಾರಿ ಬಿಜೆಪಿಗೆ ಜೆಡಿಎಸ್‌ ಕೂಡ ಬೆಂಬಲ ಸೂಚಿಸಿದ್ದು, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಚಿವರಾಗಿ ಆಯ್ಕೆಯಾಗಿದ್ದಾರೆ. ಆದರೆ ಅನಾರೋಗ್ಯ ಕಾರಣದಿಂದ ಮಾಜಿ ಪ್ರಧಾನ ಮಂತ್ರಿ ಎಚ್‌.ಡಿ.ದೇವೇಗೌಡ (HD Deve Gowda) ಅವರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅಭಿನಂದನೆ ತಿಳಿಸಿದ್ದಾರೆ.

ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ದೇವೇಗೌಡ ಅವರು ಅದನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ʼʼನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾನ ವಚನ ಸ್ವೀಕರಿಸುತ್ತಿದ್ದಾರೆ. ಈ ಐತಿಹಾಸಿಕ ಸಂದರ್ಭದಲ್ಲಿ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತಿದ್ದೇನೆ. ಅನಾರೋಗ್ಯದ ಕಾರಣದಿಂದ ನನಗೆ ಈ ಕಾರ್ಯಕ್ರಮದಲ್ಲಿ ಭಾವಹಿಸಲು ಸಾಧ್ಯವಾಗುತ್ತಿಲ್ಲ. ಆದರೆ ಖಂಡಿತವಾಗಿಯೂ ನಾನು ಟಿವಿಯಲ್ಲಿ ಲೈವ್‌ನಲ್ಲೇ ಕಾರ್ಯಕ್ರಮವನ್ನು ವೀಕ್ಷಿಸುತ್ತೇನೆ. ಕಾಂಗ್ರೆಸ್ ಏನೇ ಹೇಳಲಿ, ಭಾರತೀಯ ಪ್ರಜಾಪ್ರಭುತ್ವವು ದೃಢವಾಗಿದೆʼʼ ಎಂದು ದೇವೇಗೌಡ ಅವರು ಬರೆದುಕೊಂಡಿದ್ದಾರೆ.

ಬಿಜೆಪಿ ಗೆದ್ದಿದ್ದಕ್ಕೆ ತನ್ನ ಬೆರಳನ್ನೇ ಕತ್ತರಿಸಿ ದೇವಿಗೆ ಅರ್ಪಿಸಿದ ಮೋದಿ ‘ಭಕ್ತ’!

ರಾಯ್‌ಪುರ: ದೇಶದಲ್ಲಿ ನರೇಂದ್ರ ಮೋದಿ ಅವರನ್ನು ಬೆಂಬಲಿಸುವ, ಆರಾಧಿಸುವ, ಅವರ ಪರವಾಗಿ ವಾದ ಮಾಡುವ, ಸಮಯ ಬಂದರೆ ಜಗಳಕ್ಕೂ ನಿಲ್ಲುವ ‘ಭಕ್ತರು’ ಇದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಛತ್ತೀಸ್‌ಗಢದಲ್ಲಿ (Chhattisgarh) ನರೇಂದ್ರ ಮೋದಿ (Narendra Modi) ನೇತೃತ್ವದ ಎನ್‌ಡಿಎ ಮೈತ್ರಿಕೂಟ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ದೇವರಿಗೆ ತನ್ನ ಬೆರಳನ್ನೇ ಅರ್ಪಿಸಿದ್ದಾನೆ. ಆ ಮೂಲಕ ಆತ ಅಭಿಮಾನ ಮೆರೆದಿದ್ದಾನೆ.

ಹೌದು, ಛತ್ತೀಸ್‌ಗಢದ ಬಲರಾಮ್‌ಪುರದಲ್ಲಿ ದುರ್ಗೇಶ್‌ ಪಾಂಡೆ ಎಂಬ 30 ವರ್ಷದ ವ್ಯಕ್ತಿಯು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಬಹುಮತ ಪಡೆದ ಹಿನ್ನೆಲೆಯಲ್ಲಿ ದೇವಾಲಯ ತೆರಳಿ, ಕಾಳಿ ದೇವಿಗೆ ತನ್ನ ಬೆರಳನ್ನೇ ಅರ್ಪಿಸಿದ್ದಾನೆ. ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಜೂನ್‌ 4ರಂದೇ ಆತನು ಕಾಳಿ ದೇವಸ್ಥಾನಕ್ಕೆ ತೆರಳಿ, ತನ್ನ ಎಡಗೈ ಬೆರಳನ್ನು ಕತ್ತರಿಸಿ ದೇವತೆಗೆ ಅರ್ಪಿಸಿದ್ದಾನೆ. ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು 290 ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇದರ ಖುಷಿ ತಾಳದೆ ಆತ ಬೆರಳು ಕತ್ತರಿಸಿಕೊಳ್ಳುವ ಸಾಹಸಕ್ಕೆ ಕೈ ಹಾಕಿದ್ದಾನೆ ಎಂದು ತಿಳಿದುಬಂದಿದೆ.

ದೇವಸ್ಥಾನದಲ್ಲಿ ಬೆರಳು ಕತ್ತರಿಸಿಕೊಂಡ ಬಳಿಕ ವಿಪರೀತ ರಕ್ತಸ್ರಾವ ಉಂಟಾಗಿದೆ. ಇದರಿಂದ ಆತಂಕಕ್ಕೀಡಾದ ಕುಟುಂಬಸ್ಥರು ವ್ಯಕ್ತಿಯನ್ನು ಸಮಾರಿಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು ಕೂಡಲೇ ಅಂಬಿಕಾಪುರ ಮೆಡಿಕಲ್‌ ಕಾಲೇಜಿಗೆ ಹೋಗಿ ಎಂದು ಸೂಚಿಸಿದ್ದಾರೆ. ಅದರಂತೆ, ದುರ್ಗೇಶ್‌ ಪಾಂಡೆ ಅವರನ್ನು ಅಂಬಿಕಾಪುರ ಮೆಡಿಕಲ್‌ ಕಾಲೇಜಿಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ, ಶಸ್ತ್ರಚಿಕಿತ್ಸೆ ಮೂಲಕ ವೈದ್ಯರು ರಕ್ತಸ್ರಾವವನ್ನು ನಿಲ್ಲಿಸಿದ್ದಾರೆ. ಸದ್ಯ, ದುರ್ಗೇಶ್‌ ಪಾಂಡೆ ಅಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: Mamata Banerjee: 15 ದಿನಗಳಲ್ಲೇ ಮೋದಿ ಸರ್ಕಾರ ಪತನ; ಸ್ಫೋಟಕ ಭವಿಷ್ಯ ನುಡಿದ ಮಮತಾ ಬ್ಯಾನರ್ಜಿ!

Continue Reading
Advertisement
reasi terror attack
ಪ್ರಮುಖ ಸುದ್ದಿ8 seconds ago

Terror Attack: ಕಂದಮ್ಮನನ್ನೂ ಕೊಂದ ಉಗ್ರರು; ಎದೆಗೆ ಗುಂಡು ಬಿದ್ದರೂ ಪ್ರಯಾಣಿಕರನ್ನು ಉಳಿಸಲು ಯತ್ನಿಸಿದ್ದ ಚಾಲಕ

T20 World Cup
Latest15 mins ago

T20 World Cup : ಪಾಕಿಸ್ತಾನಕ್ಕೆ ಸಂಕಷ್ಟ ತಂದಿಟ್ಟ ಭಾರತ; ಸೂಪರ್ 8 ಹಂತ ಪ್ರವೇಶವೂ ಕಷ್ಟ!

Kangana Ranaut Looks Gorgeous In A White Saree
ಬಾಲಿವುಡ್16 mins ago

Kangana Ranaut: ಪ್ರಮಾಣ ವಚನ ಸಮಾರಂಭದಲ್ಲಿ ಬಿಳಿ ಸೀರೆಯಲ್ಲಿ ಮಿಂಚಿದ ಕಂಗನಾ!

IND vs PAK
ಪ್ರಮುಖ ಸುದ್ದಿ42 mins ago

IND vs PAK : ಪಾಕಿಸ್ತಾನದ ಬೌಲರ್​ ವಿರುದ್ಧ ವಿಶೇಷ ದಾಖಲೆ ಮಾಡಿದ ರೋಹಿತ್ ಶರ್ಮಾ

IND vs PAK
ಕ್ರೀಡೆ1 hour ago

IND vs PAK : ಭಾರತಕ್ಕೆ ಗೆಲುವಿನ ಚಾನ್ಸ್ ಕೇವಲ ಶೇ. 8, ಪಾಕ್ ಗೆ ಶೇ.92 ಇತ್ತು; ಆದರೆ…

Poonam Pandey making cake with ice cream with hot look
ಬಾಲಿವುಡ್1 hour ago

Poonam Pandey: ಪೂನಂ ಪಾಂಡೆಯ ರೆಸಿಪಿಗಿಂತ ಏಪ್ರನ್ ಮೇಲೆ ನೆಟ್ಟಿಗರ ಕಣ್ಣು; ರಸಿಕರ ಕಣ್ಣರಳಿಸಿದ ಹಾಟ್‌ ಬೆಡಗಿ!

Vastu Tips
ಧಾರ್ಮಿಕ1 hour ago

Vastu Tips: ನೆಮ್ಮದಿಯಿಂದ ನಿದ್ದೆ ಮಾಡಬೇಕೆ? ಈ ವಾಸ್ತು ನಿಯಮ ಪಾಲಿಸಿ

pm narendra Modi Cabinet
ಪ್ರಮುಖ ಸುದ್ದಿ1 hour ago

PM Narendra Modi: ಇಂದು ಸಂಜೆ ನರೇಂದ್ರ ಮೋದಿ ಸಂಪುಟ ಮೊದಲ ಸಭೆ; ಏನು ಅಜೆಂಡಾ?

Narendra Modi Oath Ceremony Celebs Congratulate PM Modi
ಸಿನಿಮಾ2 hours ago

Narendra Modi: ಪ್ರಧಾನಿ ಮೋದಿಗೆ ಸೆಲೆಬ್ರಿಟಿಗಳಿಂದ ಅಭಿನಂದನೆಗಳ ಮಹಾಪೂರ !

IND vs PAK
ಪ್ರಮುಖ ಸುದ್ದಿ2 hours ago

IND vs PAK : ಭಾರತ ಪರ ಬೆಟ್ಟಿಂಗ್ ಕಟ್ಟಿ 5.4 ಕೋಟಿ ರೂಪಾಯಿ ಗೆದ್ದ ಕೆನಡಾದ ರ್ಯಾಪರ್ ಡ್ರೇಕ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌