Gujarat Election | ಗುಜರಾತ್‌ನಲ್ಲಿ ಇಂದು ಮೊದಲ ಹಂತದ ಮತದಾನ, ಹೇಗಿದೆ ಚುನಾವಣೆ ಹವಾಮಾನ? - Vistara News

ದೇಶ

Gujarat Election | ಗುಜರಾತ್‌ನಲ್ಲಿ ಇಂದು ಮೊದಲ ಹಂತದ ಮತದಾನ, ಹೇಗಿದೆ ಚುನಾವಣೆ ಹವಾಮಾನ?

ದೇಶದ ಗಮನ ಸೆಳೆದಿರುವ ಗುಜರಾತ್‌ ವಿಧಾನಸಭೆ ಚುನಾವಣೆಯ (Gujarat Election) ಮೊದಲ ಹಂತದ ಮತದಾನ ಗುರುವಾರ ನಡೆಯಲಿದೆ. ಇದಕ್ಕಾಗಿ ಚುನಾವಣೆ ಆಯೋಗವು ಸಕಲ ಸಿದ್ಧತೆ ಕೈಗೊಂಡಿದೆ.

VISTARANEWS.COM


on

Gujarat Election Result
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಾಂಧಿನಗರ: ದೇಶದ ಗಮನ ಸೆಳೆದಿರುವ, ೨೦೨೪ರ ಲೋಕಸಭೆ ಚುನಾವಣೆ ದೃಷ್ಟಿಯಿಂದ ಪ್ರಾಮುಖ್ಯತೆ ಪಡೆದಿರುವ, ಪ್ರತಿಷ್ಠೆಯ ಕಣವೂ ಆಗಿರುವ ಗುಜರಾತ್‌ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ (Gujarat Election) ಗುರುವಾರ (ಡಿಸೆಂಬರ್‌ ೧) ನಡೆಯಲಿದೆ. ಬಿಜೆಪಿ, ಕಾಂಗ್ರೆಸ್‌ ಹಾಗೂ ಆಮ್‌ ಆದ್ಮಿ ಪಕ್ಷವು ಗೆಲುವಿಗೆ ಇನ್ನಿಲ್ಲದ ಕಸರತ್ತು ನಡೆಸಿದ್ದು, ಮೊದಲ ಹಂತದ ಮತದಾನದ ಮೇಲೆ ಎಲ್ಲರ ಗಮನ ಇದೆ.

ಹಾಗಾದರೆ, ಮೊದಲ ಹಂತದಲ್ಲಿ ಎಷ್ಟು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ? ಯಾವ ಪ್ರಮುಖ ಅಭ್ಯರ್ಥಿಗಳು ಕಣದಲ್ಲಿದ್ದಾರೆ? ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ? ಚುನಾವಣೆ ಸಮೀಕ್ಷೆಗಳು ಏನು ಹೇಳುತ್ತವೆ? ಯಾವ ಪಕ್ಷಗಳ ಬಲಾಬಲ ಹೇಗಿದೆ ಎಂಬುದರ ಮಾಹಿತಿ ಇಲ್ಲಿದೆ.

೮೯ ಕ್ಷೇತ್ರಗಳಲ್ಲಿ ಮತದಾನ
ಮೊದಲ ಹಂತದಲ್ಲಿ ಗುಜರಾತ್‌ನ ೮೯ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಗುಜರಾತ್‌ ಹಾಗೂ ಕಛ್-ಸೌರಾಷ್ಟ್ರ ಪ್ರದೇಶದ ೧೯ ಜಿಲ್ಲೆಗಳಲ್ಲಿ ಮತದಾನ ನಡೆಯಲಿದ್ದು, ೭೮೮ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ೮೯ ಕ್ಷೇತ್ರಗಳಲ್ಲಿ ೧೪ ಕ್ಷೇತ್ರಗಳು ಎಸ್‌ಟಿಗೆ ಹಾಗೂ ೭ ಕ್ಷೇತ್ರ ದಲಿತರಿಗೆ ಮೀಸಲಾಗಿವೆ. ಮೊದಲ ಹಂತದಲ್ಲಿ ಸುಮಾರು ೨.೩೯ ಕೋಟಿ ಮತದಾರರು ಹಕ್ಕು ಚಲಾವಣೆ ಮಾಡಲಿದ್ದಾರೆ. ಬೆಳಗ್ಗೆ ೮ರಿಂದ ಸಂಜೆ ೫.೩೦ರವರೆಗೆ ಮತದಾನ ನಡೆಯಲಿದ್ದು, ಪ್ರತಿಯೊಂದು ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಒಟ್ಟು ಕ್ಷೇತ್ರಗಳು: ೧೮೨, ಮ್ಯಾಜಿಕ್‌ ನಂಬರ್‌: ೯೨, ಮೊದಲ ಹಂತದಲ್ಲಿ ೮೯ ಕ್ಷೇತ್ರಗಳಲ್ಲಿ ಮತದಾನ

ಬಿಜೆಪಿ ಬಲ ಏನು?

ಭೂಪೇಂದ್ರ ಪಟೇಲ್

ಗುಜರಾತ್‌ನಲ್ಲಿ ಬಿಜೆಪಿಯು ಕಳೆದ ೨೭ ವರ್ಷಗಳಿಂದ ಅಧಿಕಾರ ಅನುಭವಿಸುತ್ತಿದೆ. ಪ್ರತಿ ಬಾರಿ ಚುನಾವಣೆ ನಡೆದಾಗ ಆಡಳಿತ ವಿರೋಧಿ ಅಲೆ ಇದೆ ಎಂದು ಹೇಳಲಾಗುತ್ತದೆಯಾದರೂ ಫಲಿತಾಂಶ ಮಾತ್ರ ಬಿಜೆಪಿ ಪರವಾಗಿಯೇ ಇರುತ್ತದೆ. ಅಷ್ಟರಮಟ್ಟಿಗೆ ಗುಜರಾತ್‌ ಕಮಲ ಪಾಳಯದ ಭದ್ರಕೋಟೆಯಾಗಿದೆ. ಈಗ ದಾಖಲೆಯ ಏಳನೇ ಅವಧಿ ಮೇಲೆ ಕಣ್ಣಿಟ್ಟಿರುವ ಬಿಜೆಪಿಯು ಹಲವಾರು ತಂತ್ರ ಹೆಣೆದಿದೆ. ಪಟೇಲರು ಸೇರಿ ಮೇಲ್ವರ್ಗದವರ ಮತಗಳು ಬಿಜೆಪಿಗೆ ಸುಲಭವಾಗಿ ದಕ್ಕಿದರೂ, ತಳ ಸಮುದಾಯದವರನ್ನೂ ಸೆಳೆಯಲು ಯತ್ನಿಸಿದೆ. ಆದರೆ, ಕಳೆದ ಬಾರಿ ಕಾಂಗ್ರೆಸ್‌ ಒಂದೇ ಬಿಜೆಪಿಗೆ ಸ್ಪರ್ಧಿಯಾಗಿತ್ತು. ಆದರೆ, ಈ ಬಾರಿ ಕಾಂಗ್ರೆಸ್‌ ಜತೆ ಆಪ್‌ ಸಹ ಸ್ಪರ್ಧೆಯೊಡ್ಡಿದೆ. ಆದರೆ, ಮೋದಿ ಅಲೆ, ಅಮಿತ್‌ ಶಾ ತಂತ್ರವು ಎರಡೂ ಪಕ್ಷಗಳಿಗೆ ಸವಾಲಾಗುವುದರಲ್ಲಿ ಎರಡು ಮಾತಿಲ್ಲ.

ಬಿಜೆಪಿ ಪ್ರಮುಖ ಅಭ್ಯರ್ಥಿಗಳು: ಭೂಪೇಂದ್ರ ಪಟೇಲ್‌, ಹಾರ್ದಿಕ್‌ ಪಟೇಲ್‌, ಹರ್ಷ್‌ ಸಂಘವಿ

ಕಾಂಗ್ರೆಸ್‌ ಲೆಕ್ಕಾಚಾರ ಏನು?

ಜಗದೀಶ್‌ ಠಾಕೂರ್

ಕಳೆದ ೨೭ ವರ್ಷಗಳಿಂದ ಕಾಂಗ್ರೆಸ್‌ಗೆ ಗುಜರಾತ್‌ ಗಗನ ಕುಸುಮವೇ ಆಗಿದೆ. ಆದರೆ, ಈ ಬಾರಿ ಬಿಜೆಪಿಗೆ ಸ್ಪರ್ಧೆಯೊಡ್ಡಲು ಕಾಂಗ್ರೆಸ್‌ ಹಲವು ಲೆಕ್ಕಾಚಾರ ಹೆಣೆದಿದೆ. ಜಿಗ್ನೇಶ್‌ ಮೇವಾನಿ ಸೇರಿ ಹಲವರಿಗೆ ಟಿಕೆಟ್‌ ನೀಡುವ ಮೂಲಕ ತಂತ್ರ ಹೂಡಿದೆ. ಕಳೆದ ಬಾರಿಯಂತೆ ಈ ಬಾರಿಯೂ ತೀವ್ರ ಸ್ಪರ್ಧೆಯೊಡ್ಡುವ ಸಾಧ್ಯತೆ ಹೆಚ್ಚಿದೆ. ಆದರೆ, ಕಾಂಗ್ರೆಸ್‌ಗೆ ಅಬ್ಬರದ ಪ್ರಚಾರದ ಕೊರತೆ ಇದೆ. ರಾಹುಲ್‌ ಗಾಂಧಿ ಅವರು ಕೇವಲ ಎರಡು ರ‍್ಯಾಲಿ ನಡೆಸಿದ್ದಾರೆ. ಭಾರತ್‌ ಜೋಡೋ ಯಶಸ್ಸನ್ನು ಗುಜರಾತ್‌ನಲ್ಲಿ ಸಕಾರಾತ್ಮಕವಾಗಿ ಬಳಸಿಕೊಳ್ಳುವಲ್ಲಿ, ಆಡಳಿತ ವಿರೋಧಿ ಅಲೆಯನ್ನು ಮತ್ತಷ್ಟು ಹೆಚ್ಚಿಸುವಲ್ಲಿ ಕಾಂಗ್ರೆಸ್‌ ಎಡವಿದೆ. ಇಷ್ಟೆಲ್ಲ ನಕಾರಾತ್ಮಕ ಅಂಶಗಳನ್ನು ಇಟ್ಟುಕೊಂಡು ಹೇಗೆ ಪ್ರಬಲ ಸ್ಪರ್ಧೆಯೊಡ್ಡುತ್ತದೆ ಎಂಬುದನ್ನು ಫಲಿತಾಂಶವೇ ನಿರ್ಧರಿಸಲಿದೆ.

ಕಾಂಗ್ರೆಸ್‌ ಪ್ರಮುಖ ಅಭ್ಯರ್ಥಿಗಳು: ಜಗದೀಶ್ ಠಾಕೂರ್‌, ಮಹೇಂದ್ರ ಸಿಂಗ್‌ ವಘೇಲಾ, ಭರತ್‌ ಸೋಲಂಕಿ

ಮ್ಯಾಜಿಕ್‌ ಮಾಡುವುದೇ ಆಪ್‌?

ಇಸುಧಾನ್ ಗಢವಿ

ಪಂಜಾಬ್‌ನಲ್ಲಿ ಆಡಳಿತ ವಿರೋಧಿ ಅಲೆಯನ್ನು ಸದ್ಬಳಕೆ ಮಾಡಿಕೊಂಡು ಅಧಿಕಾರ ಹಿಡಿದ ಆಮ್‌ ಆದ್ಮಿ ಪಕ್ಷಕ್ಕೆ ಗುಜರಾತ್‌ ಗಾದಿ ಮೇಲೆ ಹೆಚ್ಚಿನ ಗಮನವಿದೆ. ಹಾಗಾಗಿಯೇ, ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‌ ಅವರು ಗುಜರಾತ್‌ನಲ್ಲಿ ಹೆಚ್ಚು ಸಭೆ, ರ‍್ಯಾಲಿಗಳನ್ನು ನಡೆಸಿ ಜನರ ಮನವೊಲಿಸಲು ಯತ್ನಿಸಿದ್ದಾರೆ. ಆದರೆ, ಬಿಜೆಪಿ ಪರ ಅಲೆ, ಕಾಂಗ್ರೆಸ್‌ ಪ್ರಾಬಲ್ಯವನ್ನೂ ಮೀರಿ ಮತದಾರರು ಆಪ್‌ಗೆ ಬೆಂಬಲಿಸಿದರೆ ಅದು ಮ್ಯಾಜಿಕ್‌ ಆಗಲಿದೆ. ಇದುವರೆಗೆ ನಡೆದ ಸಮೀಕ್ಷೆಗಳ ಪ್ರಕಾರ ಒಂದು ಸಮೀಕ್ಷೆಯೂ ಆಪ್‌ ಪರವಾಗಿಲ್ಲ. ಬಿಜೆಪಿಯೇ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಸಮೀಕ್ಷೆಗಳು ತಿಳಿಸಿವೆ. ಮುಖ್ಯಮಂತ್ರಿ ಅಭ್ಯರ್ಥಿ ಇಸುಧಾನ್‌ ಗಢವಿ ಹೊರತಾಗಿ ಪ್ರಬಲ ನಾಯಕರ ನಾಯಕರ ಕೊರತೆಯೂ ಆಪ್‌ಗಿದೆ.

ಆಪ್‌ ಪ್ರಮುಖ ಅಭ್ಯರ್ಥಿಗಳು: ಇಸುಧಾನ್‌ ಗಢವಿ, ಗೋಪಾಲ್‌ ಇಟಾಲಿಯಾ, ಕೈಲಾಶ್‌ ಗಡ್ವಿ

ಇದನ್ನೂ ಓದಿ | Gujarat Election 2022 | ಗುಜರಾತ್‌ನಲ್ಲಿ ಉತ್ತರ-ದಕ್ಷಿಣದ ಬಿಜೆಪಿ ಕಾರ್ಯಕರ್ತೆಯರು ಒಂದಾಗಿ ಪ್ರಚಾರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Terrorist attack: ʼಮಗನ ಬರ್ತ್‌ ಡೇ ಪಾರ್ಟಿಗೆ ಪ್ಲ್ಯಾನ್‌ ಮಾಡಿದ್ದ, ಆದರೆ ಈಗ…ʼ ಕಣ್ಣೀರಿಟ್ಟ ಹುತಾತ್ಮ ಯೋಧನ ಕುಟುಂಬ

Terrorist attack: ಮಗನ ಹುಟ್ಟುಹಬ್ಬಕ್ಕೆಂದು ಜೂ.7ರಂದು ವಾಪಾಸಾಗುತ್ತಾರೆಂದು ಆಸೆಯಿಂದ ಕಾಯುತ್ತಿದ್ದ ಪಹಾದೆ ಅವರ ಸಾವು ಕುಟುಂಬಕ್ಕೆ ಆಘಾತವನ್ನುಂಟು ಮಾಡಿದೆ. ಈ ಕುರಿತು ಅವರು ಸೋದರ ಸಂಬಂಧಿ ಪ್ರತಿಕ್ರಿಯಿಸಿದ್ದು, ಇಡೀ ಕುಟುಂಬ ಪದಾದೆ ಅವರ ಬರುವಿಕೆಗೆ ಕಾಯುತ್ತಿತ್ತು. ಆದರೆ ಅವರು ಹುತಾತ್ಮರಾಗಿರುವ ಸುದ್ದಿ ಕೇಳಿ ಇಡೀ ಕುಟುಂಬ ಆಘಾತದಲ್ಲಿದೆ. ಇಂದು ಪದಾದೆ ಅವರ ಪಾರ್ಥೀವ ಶರೀರ ಸ್ವಗ್ರಾಮಕ್ಕೆ ತರಲಾಗುತ್ತಿದ್ದು, ಅಲ್ಲೇ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ತಿಳಿಸಿದರು.

VISTARANEWS.COM


on

Terrorist Attack
Koo

ಮಧ್ಯಪ್ರದೇಶ: ಜಮ್ಮು-ಕಾಶ್ಮೀರ(Jammu and Kashmir)ದ ಪೂಂಚ್‌ನಲ್ಲಿ ನಡೆದ ಉಗ್ರರ ದಾಳಿ(Terrorist attack)ಯಲ್ಲಿ ಹುತಾತ್ಮರಾದ ಭಾರತೀಯ ವಾಯುಪಡೆ(IAF)ಯ ಅಧಿಕಾರಿ ವಿಕ್ಕಿ ಪಹಾದೆ(Vikky Pahade) ಮುಂದಿನ ತಿಂಗಳು ತಮ್ಮ ಐದು ವರ್ಷದ ಮಗನ ಹುಟ್ಟುಹಬ್ಬ ಆಚರಣೆಗೆ ಸಕಲ ಸಿದ್ದತೆ ಮಾಡಿದ್ದರಂತೆ. ಮಧ್ಯಪ್ರದೇಶದ ಚಿಂದ್‌ವಾರ ಜಿಲ್ಲೆಯ ಪಹಾದೆ ಉದಾಮ್‌ಪುರದ ಕಮಾಂಡೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಇವರ ಜೊತೆ ನಾಲ್ವರು IAF ಯೋಧರು ಗಂಭೀರವಾಗಿ ಗಾಯಗೊಂಡಿದ್ದರು.

ಮಗನ ಹುಟ್ಟುಹಬ್ಬಕ್ಕೆಂದು ಜೂ.7ರಂದು ವಾಪಾಸಾಗುತ್ತಾರೆಂದು ಆಸೆಯಿಂದ ಕಾಯುತ್ತಿದ್ದ ಪಹಾದೆ ಅವರ ಸಾವು ಕುಟುಂಬಕ್ಕೆ ಆಘಾತವನ್ನುಂಟು ಮಾಡಿದೆ. ಈ ಕುರಿತು ಅವರು ಸೋದರ ಸಂಬಂಧಿ ಪ್ರತಿಕ್ರಿಯಿಸಿದ್ದು, ಇಡೀ ಕುಟುಂಬ ಪದಾದೆ ಅವರ ಬರುವಿಕೆಗೆ ಕಾಯುತ್ತಿತ್ತು. ಆದರೆ ಅವರು ಹುತಾತ್ಮರಾಗಿರುವ ಸುದ್ದಿ ಕೇಳಿ ಇಡೀ ಕುಟುಂಬ ಆಘಾತದಲ್ಲಿದೆ. ಇಂದು ಪದಾದೆ ಅವರ ಪಾರ್ಥೀವ ಶರೀರ ಸ್ವಗ್ರಾಮಕ್ಕೆ ತರಲಾಗುತ್ತಿದ್ದು, ಅಲ್ಲೇ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ತಿಳಿಸಿದರು.

ಪಹಾದೆ ಅವರು 2011ರಲ್ಲಿ ತಂದೆ ಆಸೆಯಂತೆ ವಾಯುಸೇನೆಗೆ ಸೇರಿದ್ದರು. ತನ್ನ ಚಿಕ್ಕ ವಯಸ್ಸಿನಲ್ಲೇ ತಂದೆಯನ್ನು ಕಳೆದುಕೊಂಡಿದ್ದ ಪಹಾದೆ ಸಹೋದರನ ಸಹಾಯದಿಂದ ವಿದ್ಯಾಭ್ಯಾಸ ಮುಗಿಸಿ ಕಷ್ಟಪಟ್ಟು ವಾಯುಸೇಗೆ ನೇಮಕಗೊಂಡಿದ್ದ. ನಾವು ಕೆಲವು ವರ್ಷಗಳಿಂದ ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದೆವು. ಆದರೆ ಇದೀಗ ಪಹಾದೆ ವಿಧಿವಶರಾಗಿರುವುದು ಇಡೀ ಕುಟುಂಬಕ್ಕೆ ಬಹುದೊಡ್ಡ ಶಾಕ್‌. ಈ ಸಂದರ್ಭದಲ್ಲಿ ಸರ್ಕಾರದ ಬೆಂಬಲ ನಮಗೆ ಅತ್ಯಗತ್ಯ. ದೇಶಕ್ಕಾಗಿ ತನ್ನ ಪ್ರಾಣವನ್ನೇ ಅರ್ಪಿಸಿದ ನಮ್ಮ ಸಹೋದರನ ಬಗ್ಗೆ ನಮಗೆ ಹೆಮ್ಮೆ ಇದೆ. ಅವರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಸಹಾಯ ಸಿಗಲೆಂದು ಬಯಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Terrorist Attack: “ಉಗ್ರರ ದಾಳಿ ಬಿಜೆಪಿ ಚುನಾವಣಾ ಪೂರ್ವ ಸ್ಟಂಟ್‌”; ನಾಲಿಗೆ ಹರಿಬಿಟ್ಟ ಪ್ರತಿಪಕ್ಷದ ಇಬ್ಬರು ನಾಯಕರು

ಇನ್ನು ಘಟನೆ ಬಗ್ಗೆ IAF ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದು, ಪೂಂಚ್‌ ಸೆಕ್ಟರ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ನಮ್ಮ ವೀರ ಯೋಧ ವಿಕ್ಕಿ ಪಹಾದೆ ಹುತಾತ್ಮರಾಗಿದ್ದಾರೆ. ಅವರ ಶೌರ್ಯ, ಪರಾಕ್ರಮ ಮತ್ತು ಬಲಿದಾನಕ್ಕೆ ಸೆಲ್ಯೂಟ್‌ ಮಾಡುತ್ತೇವೆ. ಅವರ ಕುಟುಂಬದ ಜೊತೆ ನಾವಿದ್ದೇವೆ ಎಂದು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದೆ. ಪಹಾದೆ ಅವರ ಪಾರ್ಥೀವ ಶರೀರವನ್ನು IAF ವಿಮಾನದಲ್ಲಿ ನೆರೆಯ ಮಹಾರಾಷ್ಟ್ರದ ನಾಗ್ಪುರಕ್ಕೆ ಕರೆತರಲಾಗುತ್ತದೆ. ಅಲ್ಲಿಂದ ರಸ್ತೆ ಮೂಲಕ ಚಿಂದ್‌ವಾರಕ್ಕೆ ಕರೆ ತರಲಾಗುತ್ತದೆ. ಬಳಿಕ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಸಂಸ್ಕಾರ ನಡೆಸಲಾಗುತ್ತದೆ ಎಂದು ತಿಳಿಸಿದರು.

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ಭಾರತೀಯ ವಾಯುಪಡೆ(IAF)ಯ ಬೆಂಗಾವಲು ಪಡೆಯ ಎರಡು ವಾಹನಗಳ ಮೇಲೆ ಭಯೋತ್ಪಾದಕರು ನಡೆಸಿದ ಭಾರಿ ಗುಂಡಿನ ದಾಳಿಯಲ್ಲಿ ಪಹಾದೇ ಸೇರಿದಂತೆ ಐವರು ಐಎಎಫ್‌ ಯೋಧರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಕಮಾಂಡೋ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಹುತಾತ್ಮರಾಗಿದ್ದರು.

Continue Reading

ದೇಶ

Terrorist Attack: “ಉಗ್ರರ ದಾಳಿ ಬಿಜೆಪಿ ಚುನಾವಣಾ ಪೂರ್ವ ಸ್ಟಂಟ್‌”; ನಾಲಿಗೆ ಹರಿಬಿಟ್ಟ ಪ್ರತಿಪಕ್ಷದ ಇಬ್ಬರು ನಾಯಕರು

Terrorist Attack: ಪೂಂಚ್‌ನಲ್ಲಿ ನಡೆದ ದಾಳಿ ಬಗ್ಗೆ ಜಲಂಧರ್‌ ಕ್ಷೇತ್ರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದ ಚರಣ್‌ ಪ್ರಿತ್‌ ಸಿಂಗ್‌ ಚನ್ನಿ, ಚುನಾವಣೆ ಬಂದಾಗ ಬಿಜೆಪಿಯವರು ನಡೆಸುವ ಸ್ಟಂಟ್‌ ಇದು. ಇದು ಉದ್ದೇಶಪೂರ್ವವಾಗಿ ನಡೆಸುತ್ತಿರುವ ದಾಳಿ. ಬಿಜೆಪಿಯನ್ನು ಗೆಲ್ಲಿಸಲು ಮಾಡುತ್ತಿರುವ ಸ್ಟಂಟ್‌. ಇದರಲ್ಲಿ ಯಾವುದೇ ನಿಜಾಂಶ ಇಲ್ಲ. ಜನರ ಶವದ ಮೇಲೆ ಬಿಜೆಪಿ ಅಧಿಕಾರಕ್ಕೆ ಬರಲು ಬಿಜೆಪಿ ಯತ್ನಿಸುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮತ್ತೊಂದೆಡೆ ಬಿಹಾರದಲ್ಲಿ ಆರ್‌ಜೆಡಿ ಮುಖಂಡ ತೇಜ್‌ ಪ್ರತಾಪ್‌ ಯಾದವ್‌ ಕೂಡ ಇಂತಹದ್ದೇ ಹೇಳಿಕೆ ನೀಡಿದ್ದಾರೆ

VISTARANEWS.COM


on

Terrorist attack
Koo

ಚಂಡೀಗಡ: ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ಪೂಂಚ್‌ನಲ್ಲಿ ಎರಡು ದಿನಗಳ ಹಿಂದೆ ಭಾರತೀಯ ವಾಯುಪಡೆ(IAF) ಯೋಧರ ಮೇಲೆ ನಡೆದಿದ್ದ ಭಯೋತ್ಪಾದನಾ ದಾಳಿ(Terrorist Attack)ಯನ್ನು ಪ್ರತಿಪಕ್ಷದ ಇಬ್ಬರು ನಾಯಕರು ಇದೊಂದು ಬಿಜೆಪಿಯ ಚುನಾವಣಾ ಪೂರ್ವ ಸ್ಟಂಟ್‌(Poll Stunt) ಎಂದು ಕರೆಯುವ ಮೂಲಕ ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ. ಪಂಜಾಬ್‌ನ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ ಮುಖಂಡ ಚರಣ್‌ಪ್ರಿತ್‌ ಸಿಂಗ್‌ ಚನ್ನಿ(Charanprit Singh Channi) ಮತ್ತು ರಾಷ್ಟ್ರೀಯ ಜನತಾದಳದ ತೇಜ್‌ ಪ್ರತಾಪ್‌ ಯಾದವ್‌ ಈ ದಾಳಿ ಯನ್ನು 2019ರಲ್ಲಿ ನಡೆದಿದ್ದ ಪುಲ್ವಾಮಾ ಭಯೋತ್ಪಾದನಾ ದಾಳಿಯ ಜೊತೆ ಹೋಲಿಸಿ ಇದೊಂದು ಬಿಜೆಪಿ ನಡೆಸುತ್ತಿರುವ ಚುನಾವಣಾ ಪೂರ್ವ ಸ್ಟಂಟ್‌ ಆಗಿದ್ದು ಬಿಜೆಪಿ ಇದನ್ನು ತನ್ನ ಗೆಲುವಿಗಾಗಿ ಬಳಸಿಕೊಳ್ಳುತ್ತದೆ ಎಂದು ಟೀಕಿಸಿದ್ದಾರೆ.

ಪ್ರತಿಪಕ್ಷ ನಾಯಕರು ಹೇಳಿದ್ದೇನು?

ಪೂಂಚ್‌ನಲ್ಲಿ ನಡೆದ ದಾಳಿ ಬಗ್ಗೆ ಜಲಂಧರ್‌ ಕ್ಷೇತ್ರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದ ಚರಣ್‌ ಪ್ರಿತ್‌ ಸಿಂಗ್‌ ಚನ್ನಿ, ಚುನಾವಣೆ ಬಂದಾಗ ಬಿಜೆಪಿಯವರು ನಡೆಸುವ ಸ್ಟಂಟ್‌ ಇದು. ಇದು ಉದ್ದೇಶಪೂರ್ವವಾಗಿ ನಡೆಸುತ್ತಿರುವ ದಾಳಿ. ಬಿಜೆಪಿಯನ್ನು ಗೆಲ್ಲಿಸಲು ಮಾಡುತ್ತಿರುವ ಸ್ಟಂಟ್‌. ಇದರಲ್ಲಿ ಯಾವುದೇ ನಿಜಾಂಶ ಇಲ್ಲ. ಜನರ ಶವದ ಮೇಲೆ ಬಿಜೆಪಿ ಅಧಿಕಾರಕ್ಕೆ ಬರಲು ಬಿಜೆಪಿ ಯತ್ನಿಸುತ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮತ್ತೊಂದೆಡೆ ಬಿಹಾರದಲ್ಲಿ ಆರ್‌ಜೆಡಿ ಮುಖಂಡ ತೇಜ್‌ ಪ್ರತಾಪ್‌ ಯಾದವ್‌ ಕೂಡ ಇಂತಹದ್ದೇ ಹೇಳಿಕೆ ನೀಡಿದ್ದು, ಪುಲ್ವಾಮಾ ದಾಳಿಯಯನ್ನೂ ಬಿಜೆಪಿ ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದೆ. ಚುನಾವಣೆ ಬಂದಾಗಲೆಲ್ಲಾ ಭಯೋತ್ಪಾದನಾ ದಾಳಿ ನಡೆದೇ ನಡೆಯುತ್ತದೆ

ಬಿಜೆಪಿ ನಾಯಕರು ಕಿಡಿ

ಪ್ರತಿಪಕ್ಷ ನಾಯಕರ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಬಿಜೆಪಿ ಕೆಂಡಾಮಂಡಲವಾಗಿದ್ದು, ವಾಗ್ದಾಳಿ ನಡೆಸಿದೆ. ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಪ್ರತಿಕ್ರಿಯಿಸಿದ್ದು, ಇದು ಕಾಂಗ್ರೆಸ್‌ ಮತ್ತು ಅದರ ಜೊತೆಗಿರುವ ಪಕ್ಷಗಳ ಮನಸ್ಥಿತಿಯನ್ನು ತೋರಿಸುತ್ತಿದೆ. ಕಳೆದ 70 ವರ್ಷಗಳಲ್ಲಿ ಸೇನೆಯನ್ನು ಬಲಪಡಿಸುವ ಬದಲು ಅದರ ಬಲವನ್ನು ಕುಗ್ಗಿಸುವ ಕೆಲಸವನ್ನೇ ಕಾಂಗ್ರೆಸ್‌ ಮಾಡಿತ್ತು. ನಾವು ಕಳೆದ 10ವರ್ಷಗಳಲ್ಲಿ ಸೇನೆಗೆ ಬಲ ತುಂಬಿದ್ದೇವೆ. ಪುಲ್ವಾಮಾದ ಬಳಿಕ ನಾವು ಸರ್ಜಿಕಲ್‌ ಸ್ಟ್ರೈಕ್‌ ಮಾಡಿದ್ದೇವೆ. ಆದರೆ ಇವರು ಸಂಸತ್‌ ದಾಳಿಕೋರನ ಗಲ್ಲುಶಿಕ್ಷೆಯನ್ನು ತಪ್ಪಿಸಲು ಹಲವು ರೀತಿಯಲ್ಲಿ ಪ್ರಯತ್ನಿಸಿದವರು ಜನ ಇದನ್ನು ಎಂದಿಗೂ ಮರೆಯಲ್ಲ ಎಂದು ಟಾಂಗ್‌ ಕೊಟ್ಟಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ಭಾರತೀಯ ವಾಯುಪಡೆ(IAF)ಯ ಬೆಂಗಾವಲು ಪಡೆಯ ಎರಡು ವಾಹನಗಳ ಮೇಲೆ ಭಯೋತ್ಪಾದಕರು ನಡೆಸಿದ ಭಾರಿ ಗುಂಡಿನ ದಾಳಿಯಲ್ಲಿ ಓರ್ವ ಸೈನಿಕ ಹುತಾತ್ಮರಾಗಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದರು.

Continue Reading

ದೇಶ

Narendra Modi: ರಾಮಲಲ್ಲಾನಿಗೆ ಮೋದಿ ಸಾಷ್ಟಾಂಗ ನಮಸ್ಕಾರ; ಇಲ್ಲಿವೆ ಅಯೋಧ್ಯೆ ಭೇಟಿ Photos

Narendra Modi: Narendra Modi: ರಾಮಲಲ್ಲಾ ದರ್ಶನ ಪಡೆದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್‌ ಶೋ ಕೈಗೊಳ್ಳುತ್ತಿದ್ದಾರೆ. ಸುಗ್ರೀವ ಕೋಟೆಯಿಂದ ಪ್ರಾರಂಭವಾಗಿ ಲತಾ ಚೌಕ್‌ವರೆಗೆ ಮೋದಿ ರೋಡ್‌ ಶೋ ಕೈಗೊಂಡರು. ನರೇಂದ್ರ ಮೋದಿ ಅವರು ಸಾಗುವ ದಾರಿಯುದ್ದಕ್ಕೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಎಲ್ಲೆಡೆ ಜೈಶ್ರೀರಾಮ್‌ ಎಂಬ ಘೋಷಣೆಗಳು ಮೊಳಗಿದವು.

VISTARANEWS.COM


on

Narendra Modi
Koo

ಅಯೋಧ್ಯೆ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಅಬ್ಬರದ ಪ್ರಚಾರ, ದೇಶಾದ್ಯಂತ ಸಾಲು ರ‍್ಯಾಲಿಗಳ ಭರಾಟೆಯ ಮಧ್ಯೆಯೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಯೋಧ್ಯೆಗೆ ತೆರಳಿ, ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಕಳೆದ ಜನವರಿ 22ರಂದು ರಾಮಮಂದಿರದಲ್ಲಿ (Ram Mandir) ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿಸಿದ್ದ ನರೇಂದ್ರ ಮೋದಿ ಅವರೀಗ ಮತ್ತೆ ಅಯೋಧ್ಯೆಗೆ ತೆರಳಿ ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಇದೇ ವೇಳೆ ಅವರು ರಾಮಲಲ್ಲಾನಿಗೆ ವಿಶೇಷ ಪೂಜೆ ಸಲ್ಲಿಸುವ ಜತೆಗೆ ದೀರ್ಘದಂಡ ನಮಸ್ಕಾರ ಹಾಕಿದರು.

ಕಳೆದ ಜನವರಿ 22ರಂದು ನರೇಂದ್ರ ಮೋದಿ ಅವರು ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ಮಾಡಿದ ಬಳಿಕ ಮಾಡಿದ ಬಳಿಕ ರಾಮಮಂದಿರಕ್ಕೆ ಮೊದಲ ಬಾರಿ ಭೇಟಿ ನೀಡಿದರು.

ರಾಮನಗರಿ ಅಯೋಧ್ಯೆಯಲ್ಲಿ ಭರ್ಜರಿ ರೋಡ್‌ ಶೋ ಕೈಗೊಳ್ಳುವ ಮೊದಲು ಮೋದಿ ಅವರು ರಾಮಲಲ್ಲಾನಿಗೆ ಆರತಿ ಬೆಳಗಿ ಪ್ರಾರ್ಥನೆ ಸಲ್ಲಿಸಿದರು. ಮೋದಿ ಭೇಟಿ ಹಿನ್ನೆಲೆಯಲ್ಲಿ ರಾಮಮಂದಿರದ ಸುತ್ತ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿತ್ತು.

ಅಯೋಧ್ಯೆ ಭೇಟಿ ನೀಡುವ ಮೊದಲು ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ದೌರಾಹ್ರ ಲೋಕಸಭೆ ಕ್ಷೇತ್ರದಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಂಡರು.

ರಾಮಲಲ್ಲಾ ದರ್ಶನದ ಬಳಿಕ ಮೋದಿ ಅವರು ಅಯೋಧ್ಯೆಯಲ್ಲಿ ಸುಮಾರು ಎರಡು ಕಿಲೋಮೀಟರ್‌ವರೆಗೆ ರೋಡ್‌ ಶೋ ನಡೆಸಿದರು. ಮಾರ್ಗದುದ್ದಕ್ಕೂ ನೆರೆದಿದ್ದ ಜನ ಹೂಮಳೆ ಸುರಿಸಿ ಅಭಿಮಾನ ಮೆರೆದರು.

ರೋಡ್‌ ಶೋಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಕೂಡ ಸಾಥ್‌ ನೀಡಿದ್ದಾರೆ. ಇನ್ನು, ರೋಡ್‌ ಶೋ ಉದ್ದಕ್ಕೂ ಜನ ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದರು.

ಉತ್ತರ ಪ್ರದೇಶದಲ್ಲಿ ಮೂರನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, 10 ಲೋಕಸಭಾ ಕ್ಷೇತ್ರದಲ್ಲಿ ಮೇ 7 ಮತದಾನ ನಡೆಯಲಿದೆ. ಅಯೋಧ್ಯೆಯಲ್ಲಿ ಮೇ 20ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ: Narendra Modi: ಮತಬ್ಯಾಂಕ್‌ ಗುತ್ತಿಗೆದಾರರ ಸ್ನೇಹಕ್ಕೆ ಮುಸ್ಲಿಮರು ವಿದಾಯ; ಕಾಂಗ್ರೆಸ್‌ಗೆ ಮೋದಿ ಟಾಂಗ್!

Continue Reading

ದೇಶ

Narendra Modi: ಮತಬ್ಯಾಂಕ್‌ ಗುತ್ತಿಗೆದಾರರ ಸ್ನೇಹಕ್ಕೆ ಮುಸ್ಲಿಮರು ವಿದಾಯ; ಕಾಂಗ್ರೆಸ್‌ಗೆ ಮೋದಿ ಟಾಂಗ್!

Narendra Modi: ಉತ್ತರ ಪ್ರದೇಶದ ದೌರಾಹ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರ‍್ಯಾಲಿ ನಡೆಸಿದರು. ಇದೇ ವೇಳೆ ಮಾತನಾಡಿದ ಅವರು, “ದೇಶದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳು ಯಾವುದೇ ಜಾತಿ, ಧರ್ಮದ ತಾರತಮ್ಯ ಇಲ್ಲದೆ ಜನರಿಗೆ ತಲುಪುತ್ತಿವೆ. ಮುಸ್ಲಿಂ ಸಹೋದರ-ಸಹೋದರಿಯರು ಕೂಡ ನೋಡುತ್ತಿದ್ದಾರೆ. ಪಿಎಂ ಆವಾಸ್‌ ಯೋಜನೆ, ಉಜ್ವಲ ಯೋಜನೆ ಸೇರಿ ಎಲ್ಲ ಯೋಜನೆಗಳ ಸೌಲಭ್ಯಗಳು ಮುಸ್ಲಿಮರಿಗೂ ತಲುಪುತ್ತಿವೆ” ಎಂದು ತಿಳಿಸಿದರು.

VISTARANEWS.COM


on

Narendra Modi
Koo

ಲಖನೌ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ (ಮೇ 5) ಉತ್ತರ ಪ್ರದೇಶದಲ್ಲಿ (Uttar Pradesh) ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ದೌರಾಹ್ರದಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ಮಾತನಾಡಿದ ಮೋದಿ, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. ಅದರಲ್ಲೂ, “ಮುಸ್ಲಿಮರು ಈಗ ಮತಬ್ಯಾಂಕ್‌ನ ಗುತ್ತಿಗೆದಾರರಿಂದ ಪ್ರತ್ಯೇಕವಾಗಿದ್ದಾರೆ. ಅವರು ಅಭಿವೃದ್ಧಿಯ ಪರವಾಗಿದ್ದಾರೆ” ಎಂದು ಕಾಂಗ್ರೆಸ್‌ಗೆ ಮೋದಿ ಟಾಂಗ್‌ ಕೊಟ್ಟರು.

“ದೇಶದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳು ಯಾವುದೇ ಜಾತಿ, ಧರ್ಮದ ತಾರತಮ್ಯ ಇಲ್ಲದೆ ಜನರಿಗೆ ತಲುಪುತ್ತಿವೆ. ಮುಸ್ಲಿಂ ಸಹೋದರ-ಸಹೋದರಿಯರು ಕೂಡ ನೋಡುತ್ತಿದ್ದಾರೆ. ಪಿಎಂ ಆವಾಸ್‌ ಯೋಜನೆ, ಉಜ್ವಲ ಯೋಜನೆ ಸೇರಿ ಎಲ್ಲ ಯೋಜನೆಗಳ ಸೌಲಭ್ಯಗಳು ಮುಸ್ಲಿಮರಿಗೂ ತಲುಪುತ್ತಿವೆ. ಯಾವುದೇ ಭೇದ-ಭಾವ ಇಲ್ಲದೆ, ಪ್ರತಿಯೊಬ್ಬರಿಗೂ ಯೋಜನೆಗಳು ತಲುಪುತ್ತವೆ. ಹಾಗಾಗಿ, ಮುಸ್ಲಿಮರು ಕೂಡ ಮತಬ್ಯಾಂಕ್‌ನ ಗುತ್ತಿಗೆದಾರರ ಸಹವಾಸ ಬಿಟ್ಟಿದ್ದಾರೆ” ಎಂದು ಹೇಳಿದರು.

“ಮುಸ್ಲಿಮರನ್ನು ಕಾಂಗ್ರೆಸ್‌ ಸೇರಿ ಇಂಡಿಯಾ ಒಕ್ಕೂಟದ ಪಕ್ಷಗಳು ಮತಬ್ಯಾಂಕ್‌ಗಾಗಿ ಬಳಸಿಕೊಂಡವು. ಆದರೆ, ಈಗ ಮುಸ್ಲಿಮರು ಅಂತ ತುಷ್ಟೀಕರಣದ ಕುತಂತ್ರದಿಂದ ಹೊರಬಂದಿದ್ದಾರೆ. ಆದರೆ, ಕಾಂಗ್ರೆಸ್‌ ಸೇರಿ ಇಂಡಿಯಾ ಒಕ್ಕೂಟದ ಪಕ್ಷಗಳು ಮಾತ್ರ ಈಗಲೂ ಓಲೈಕೆಯಲ್ಲಿಯೇ ತೊಡಗಿವೆ. ಮುಸ್ಲಿಮರನ್ನು ಮತ ಬ್ಯಾಂಕ್‌ಗಾಗಿಯೇ ಬಳಸಿಕೊಳ್ಳಲು ಯತ್ನಿಸುತ್ತಿವೆ. ಇದೇ ಕಾರಣಕ್ಕಾಗಿಯೇ, ಮುಸ್ಲಿಂ ಲೀಗ್‌ನ ಪ್ರತಿರೂಪದಂತಿರುವ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿವೆ” ಎಂಬುದಾಗಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

“2014ಕ್ಕಿಂತ ಮೊದಲು ದೇಶದಲ್ಲಿ ತುಷ್ಟೀಕರಣದ ಆಡಳಿತ ನಡೆಯುತ್ತಿತ್ತು. ಉಗ್ರವಾದದ ವಿರುದ್ಧ ಕ್ರಮ ತೆಗೆದುಕೊಳ್ಳಲು ತನಿಖಾ ಸಂಸ್ಥೆಗಳಿಗೆ ಅಧಿಕಾರವೇ ಇರಲಿಲ್ಲ. ಇನ್ನು, ಸಮಾಜವಾದಿ ಪಕ್ಷವಂತೂ ಉಗ್ರರ ವಿರುದ್ಧದ ಪ್ರಕರಣಗಳನ್ನು ವಾಪಸ್‌ ಪಡೆಯುತ್ತಿತ್ತು. ಆದರೀಗ ಉಗ್ರರನ್ನು ಹೆಡೆಮುರಿ ಕಟ್ಟಲಾಗುತ್ತಿದೆ. ನನಗೆ ಕುಟುಂಬ ಇಲ್ಲ. ಆದರೆ, ದೇಶದ ಜನರೇ ನನ್ನ ಕುಟುಂಬ. ಜನರ ಏಳಿಗೆಗಾಗಿ, ವಿಕಸಿತ ಭಾರತದ ನಿರ್ಮಾಣಕ್ಕಾಗಿ ನಾನು ನಿರಂತರವಾಗಿ ಶ್ರಮಿಸುತ್ತೇನೆ” ಎಂದರು.

ಇದನ್ನೂ ಓದಿ: Pralhad Joshi: ಕಾಂಗ್ರೆಸ್‌ನಿಂದ ಮೋದಿ ಎಂಬ ಆಕಾಶಕ್ಕೆ ಉಗುಳೋ ಕೃತ್ಯ: ಪ್ರಲ್ಹಾದ್ ಜೋಶಿ

Continue Reading
Advertisement
Prajwal Revanna Case
ಕರ್ನಾಟಕ4 mins ago

Prajwal Revanna Case: ಎಚ್‌.ಡಿ.ರೇವಣ್ಣರಿಗೆ ಇಂದು ಜಾಮೀನು ಸಿಗುತ್ತಾ?

Sunil Narine
ಕ್ರೀಡೆ15 mins ago

Sunil Narine: ಅತ್ಯಧಿಕ ಸಿಕ್ಸರ್​ ಸಾಧಕರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಸುನೀಲ್​ ನರೈನ್

Ranjani Raghavan Starrer Sathyam Kannada Movie Gets UA Certificate
ಸ್ಯಾಂಡಲ್ ವುಡ್21 mins ago

Ranjani Raghavan: ರಂಜನಿ ರಾಘವನ್ ಸಿನಿಮಾದಲ್ಲಿ ಇರಲಿದೆ ಪಂಜುರ್ಲಿ ದೈವದ ಕಥೆ! ಬಿಡುಗಡೆ ಯಾವಾಗ?

Terrorist Attack
ದೇಶ26 mins ago

Terrorist attack: ʼಮಗನ ಬರ್ತ್‌ ಡೇ ಪಾರ್ಟಿಗೆ ಪ್ಲ್ಯಾನ್‌ ಮಾಡಿದ್ದ, ಆದರೆ ಈಗ…ʼ ಕಣ್ಣೀರಿಟ್ಟ ಹುತಾತ್ಮ ಯೋಧನ ಕುಟುಂಬ

Samantha Ruth Prabhu Fake Viral Nude Pic
ಟಾಲಿವುಡ್42 mins ago

Samantha Ruth Prabhu: ಬೆತ್ತಲೆ ಫೋಟೊ ಅಪ್​ಲೋಡ್ ಮಾಡಿದ್ರಾ ಸಮಂತಾ?

Dr.Nagareddy Patil
ಕರ್ನಾಟಕ42 mins ago

Dr.Nagareddy Patil: ಮಾಜಿ ಶಾಸಕ, ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

IPL 2024 Points Table
ಕ್ರೀಡೆ43 mins ago

IPL 2024 Points Table: ರಾಜಸ್ಥಾನ್​ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಕೆಕೆಆರ್​; ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Terrorist attack
ದೇಶ1 hour ago

Terrorist Attack: “ಉಗ್ರರ ದಾಳಿ ಬಿಜೆಪಿ ಚುನಾವಣಾ ಪೂರ್ವ ಸ್ಟಂಟ್‌”; ನಾಲಿಗೆ ಹರಿಬಿಟ್ಟ ಪ್ರತಿಪಕ್ಷದ ಇಬ್ಬರು ನಾಯಕರು

Prajwal Revanna Case
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

Cooking Oils
ಆರೋಗ್ಯ2 hours ago

Cooking Oils: ಈ 5 ಅಡುಗೆ ಎಣ್ಣೆಗಳು ನಮ್ಮ ಆರೋಗ್ಯಕ್ಕೆ ಅಪಾಯಕಾರಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ4 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ14 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ15 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ15 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌