Puja Khedkar: ಮಾಜಿ ಟ್ರೈನಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ಗೆ ಮತ್ತೊಂದು ಸಂಕಷ್ಟ; ಜಾಮೀನು ಅರ್ಜಿ ವಜಾ - Vistara News

ದೇಶ

Puja Khedkar: ಮಾಜಿ ಟ್ರೈನಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ಗೆ ಮತ್ತೊಂದು ಸಂಕಷ್ಟ; ಜಾಮೀನು ಅರ್ಜಿ ವಜಾ

Puja Khedkar: ನಕಲಿ ದಾಖಲೆ ಸೃಷ್ಟಿ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಕೇಡರ್‌ನ ಟ್ರೈನಿ ಐಎಎಸ್‌ ಅಧಿಕಾರಿಯಾಗಿದ್ದ ಪೂಜಾ ಖೇಡ್ಕರ್‌ ಅವರನ್ನು ಹುದ್ದೆಯಿಂದ ವಜಾಗೊಳಿಸಿದೆ. ಹಾಗೆಯೇ, ಭವಿಷ್ಯದಲ್ಲಿ ಯಾವುದೇ ಪರೀಕ್ಷೆಯನ್ನು ಬರೆಯುವುದರಿಂದ ಅವರನ್ನು ನಿಷೇಧಿಸಿ ಕೇಂದ್ರ ಲೋಕಸೇವಾ ಆಯೋಗವು ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ, ಅವರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನೂ ಕೋರ್ಟ್‌ ವಜಾಗೊಳಿಸಿದೆ.

VISTARANEWS.COM


on

Puja Khedkar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ನಕಲಿ ಅಂಗವಿಕಲ ಪ್ರಮಾಣಪತ್ರ, ನಕಲಿ ಗುರುತಿನ ದಾಖಲೆ, ತಂದೆ-ತಾಯಿ ಹೆಸರು ಬದಲಾಯಿಸಿ ನಕಲಿ ಸರ್ಟಿಫಿಕೇಟ್‌ ಸೃಷ್ಟಿ, ಒಬಿಸಿ ಎಂದು ಕೂಡ ಸುಳ್ಳು ದಾಖಲೆ (Fake Documents) ಸಲ್ಲಿಸಿ, ಐಎಎಸ್‌ ಪಾಸಾಗಿ, ಟ್ರೈನಿ ಅಧಿಕಾರಿಯಾಗಿದ್ದಾಗಲೇ ದರ್ಪ ತೋರಿಸಿದ ಮಹರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿಯಾಗಿದ್ದ ಪೂಜಾ ಖೇಡ್ಕರ್‌ (Puja Khedkar) ಅವರ ನೇಮಕವನ್ನು ಯುಪಿಎಸ್‌ಸಿಯು ಅನೂರ್ಜಿತಗೊಳಿಸಿದೆ. ಇದರ ಬೆನ್ನಲ್ಲೇ, ದೆಹಲಿ ನ್ಯಾಯಾಲಯ ಪೂಜಾ ಖೇಡ್ಕರ್‌ ಸಲ್ಲಿಸಿದ ನಿರೀಕ್ಷಣಾ ಜಾಮೀನು (Anticipatory Bail) ಅರ್ಜಿಯನ್ನು ನಿರಾಕರಿಸಿದೆ. ಇದು ಮಾಜಿ ಟ್ರೈನಿ ಅಧಿಕಾರಿಗೆ ಮತ್ತೊಂದು ಸಂಕಷ್ಟ ತಂದಿದೆ.

ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ದೇವೇಂದರ್‌ ಕುಮಾರ್‌ ಜಂಗಾಲ ಅವರು ನಿರೀಕ್ಷಣಾ ಅರ್ಜಿಯನ್ನು ವಜಾಗೊಳಿಸಿದರು. ಹಾಗೆಯೇ, “ಬೇರೆ ಅಭ್ಯರ್ಥಿಗಳು ಕೂಡ ಇದೇ ರೀತಿ ಮೀಸಲಾತಿಯ ಕುರಿತು ನಕಲಿ ದಾಖಲೆ ಸೃಷ್ಟಿಸಿದ್ದಾರೆಯೇ ಎಂಬುದನ್ನು ಪತ್ತೆಹಚ್ಚಬೇಕು. ವಯಸ್ಸು, ಜಾತಿ, ವಿಶೇಷ ಚೇತನ ಎಂಬುದಾಗಿ ನಕಲಿ ದಾಖಲೆ ಸೃಷ್ಟಿ ಸೇರಿ ಹಲವು ರೀತಿಯ ತಪಾಸಣೆ ಮಾಡಬೇಕು” ಎಂಬುದಾಗಿ ಪೊಲೀಸರಿಗೆ ಸೂಚನೆ ನೀಡಿದರು.

ನಕಲಿ ದಾಖಲೆ ಸೃಷ್ಟಿ ಸೇರಿ ಪೂಜಾ ಖೇಡ್ಕರ್‌ ವಿರುದ್ಧ ಹಲವು ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ತನಿಖೆಗಾಗಿ ಯುಪಿಎಸ್‌ಸಿಯು ಆಯೋಗ ಒಂದನ್ನು ರಚಿಸಿತ್ತು. ಆಯೋಗದ ವರದಿಯಲ್ಲಿ ಪೂಜಾ ಖೇಡ್ಕರ್‌ ತಪ್ಪೆಸಗಿದ್ದು, ನಕಲಿ ದಾಖಲೆ ಸೃಷ್ಟಿಸಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಯುಪಿಎಸ್‌ಸಿ ಕಠಿಣ ಕ್ರಮ ತೆಗೆದುಕೊಂಡಿದೆ. ಇವರನ್ನು ಸೇವೆಯಿಂದ ವಜಾಗೊಳಿಸುವ ಜತೆಗೆ ಯುಪಿಎಸ್‌ಸಿ ಕೈಗೊಳ್ಳುವ ಯಾವುದೇ ಪರೀಕ್ಷೆಯಲ್ಲಿ ಪಾಲ್ಗೊಳ್ಳದಂತೆ ನಿಷೇಧ ಹೇರಿದೆ.

ತಮ್ಮ ಖಾಸಗಿ ಕಾರಿಗೆ ‘ಕೆಂಪು ಗೂಟ’ ಅಳವಡಿಸಿದ್ದು ಸೇರಿ ಹಲವು ರೀತಿಯಲ್ಲಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು, ವರ್ಗಾವಣೆಯ ಶಿಕ್ಷೆ ಅನುಭವಿಸುತ್ತಿರುವ ಪೂಜಾ ಖೇಡ್ಕರ್‌ ಅವರು ನಕಲಿ ಜಾತಿ ಪ್ರಮಾಣಪತ್ರ, ವಿಶೇಷ ಚೇತನ ಎಂದು ಸುಳ್ಳು ದಾಖಲೆ ಸೃಷ್ಟಿ, ವಯಸ್ಸಿನ ಕುರಿತು ಕೂಡ ಫೇಕ್‌ ಡಾಕ್ಯುಮೆಂಟ್‌ ತಯಾರಿಸಿದ ಆರೋಪಗಳನ್ನೂ ಎದುರಿಸಿದ್ದರು. ಈಗ ಅವರ ವಿರುದ್ಧದ ಆರೋಪಗಲು ಸಾಬೀತಾದ ಹಿನ್ನೆಲೆಯಲ್ಲಿ ಯುಪಿಎಸ್‌ಸಿಯು ಮಹತ್ವದ ಕ್ರಮ ತೆಗೆದುಕೊಂಡಿದೆ.

Pooja Khedkar
Pooja Khedkar

ನಿಯಮಿತ ಅಧಿಕಾರವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಪುಣೆಯಿಂದ (ಅಸಿಸ್ಟಂಟ್‌ ಕಲೆಕ್ಟರ್)‌ ವಾಶಿಂಗೆ ವರ್ಗಾವಣೆಗೊಂಡಿದ್ದ 34 ವರ್ಷದ ಅಧಿಕಾರಿಯು, ಒಬಿಸಿ ಜಾತಿ ಪ್ರಮಾಣಪತ್ರ ಲಗತ್ತಿಸಿ ಯುಪಿಎಸ್‌ಸಿ ಪರೀಕ್ಷೆ ಬರೆದು ತೇರ್ಗಡೆ ಹೊಂದಿದ್ದರು. ಆದರೆ, ಅವರು ಒಬಿಸಿ ಜಾತಿ ಪ್ರಮಾಣಪತ್ರದ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಇನ್ನು ವಿಶೇಷ ಚೇತನ ಎಂಬುದಾಗಿಯೂ ಫೇಕ್‌ ಡಾಕ್ಯುಮೆಂಟ್‌ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಮೆಡಿಕಲ್‌ ಟೆಸ್ಟ್‌ ಪ್ರಕಾರ ಪೂಜಾ ಖೇಡ್ಕರ್‌ ಅವರು ಫಿಟ್‌ ಇದ್ದಾರೆ ಎಂದು ಹೇಳಲಾಗುತ್ತಿದೆ.‌ 2007ರಲ್ಲಿ ಅವರು ಎಂಬಿಬಿಎಸ್‌ಗೆ ಅರ್ಜಿ ಸಲ್ಲಿಸಿದಾಗ ದೈಹಿಕವಾಗಿ ಫಿಟ್‌ ಇರುವುದಾಗಿ ದಾಖಲೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು.

ವಯಸ್ಸಿನ ಕುರಿತೂ ಸುಳ್ಳು ದಾಖಲೆ

ಜಾತಿ, ವಿಶೇಷ ಚೇತನ ಪ್ರಮಾಣಪತ್ರದ ಜತೆಗೆ ಪೂಜಾ ಖೇಡ್ಕರ್‌ ಅವರು ವಯಸ್ಸಿನ ಕುರಿತು ಕೂಡ ಸುಳ್ಳು ದಾಖಲೆ ಸಲ್ಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 2020ರಿಂದ 2023ರ ಅವಧಿಯಲ್ಲಿ ಅವರು ಸಲ್ಲಿಸಿದ ದಾಖಲೆಗಳ ಪ್ರಕಾರ, ಮೂರು ವರ್ಷದಲ್ಲಿ ಅವರ ವಯಸ್ಸು ದಾಖಲೆಯಲ್ಲಿ ಒಂದೇ ವರ್ಷ ಹೆಚ್ಚಾಗಿದೆ. ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ವಯಸ್ಸಿನ ಮಿತಿ ಇರುವ ಕಾರಣ ಅವರು ವಯಸ್ಸಿನ ಕುರಿತು ಕೂಡ ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ತಿಳಿದುಬಂದಿತ್ತು. ಇದು ಈಗ ಭಾರಿ ಚರ್ಚೆಗೂ ಗ್ರಾಸವಾಗಿತ್ತು.

ಇದನ್ನೂ ಓದಿ: Puja Khedkar: ನಕಲಿ ದಾಖಲೆ ಸೃಷ್ಟಿ; ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ನೇಮಕ ರದ್ದು, ಪರೀಕ್ಷೆಯಿಂದಲೇ ಯುಪಿಎಸ್‌ಸಿ ಬ್ಯಾನ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತಂತ್ರಜ್ಞಾನ

Alternative to Whatsapp: ವಾಟ್ಸಾಪ್ ಸ್ಥಗಿತಗೊಂಡರೆ ಏನ್‌ ಮಾಡೋದು? ಇಲ್ಲಿದೆ ಪರ್ಯಾಯ ಆ್ಯಪ್‌ಗಳ ಪಟ್ಟಿ

ವಾಟ್ಸಾಪ್ ಭಾರತಕ್ಕೆ ಬಂದಾಗಿನಿಂದ ಜನರು ಪರಸ್ಪರ ಮಾಹಿತಿಯನ್ನು ಹಂಚಿಕೊಳ್ಳುವುದು ಸುಲಭವಾಗಿದೆ. ಪಠ್ಯ ಸಂದೇಶಗಳು, ಆಡಿಯೋ, ವಿಡಿಯೋ ಸೇರಿದಂತೆ ಹಲವು ವಿಷಯಗಳನ್ನು ಹಂಚಿಕೊಳ್ಳುವ ವೇದಿಕೆಯಾಗಿತ್ತು. ಈಗಾಗಲೇ ಹಲವಾರು ಬಾರಿ ಭಾರತದಲ್ಲಿ ವಾಟ್ಸಾಪ್ ನಿಷೇಧವಾಗುವ (Whatsapp Shutdown) ಬೆದರಿಕೆ ಹಾಕಲಾಗಿತ್ತು. ಒಂದು ವೇಳೆ ವಾಟ್ಸಾಪ್ ನಿಷೇಧಿಸಲ್ಪಟ್ಟರೆ ಭಾರತೀಯರಿಗೆ ಇರುವ ಮುಂದಿನ ಆಯ್ಕೆ ಏನು? ಎನ್ನುವ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Whatsapp Shutdown
Koo

ಹೊಸ ಐಟಿ ನಿಯಮಗಳು (New IT Rules) ಬಂದಾಗಿನಿಂದ ದೇಶದಲ್ಲಿ (Alternative to Whatsapp) ವಾಟ್ಸಾಪ್ ನಿಷೇಧವಾಗುವ (Whatsapp Shutdown) ಆತಂಕ ಎದುರಾಗಿದೆ. 53.58 ಕೋಟಿಗಿಂತಲೂ ಹೆಚ್ಚು ಭಾರತೀಯ ಗ್ರಾಹಕರು (Indian customers) ಬಳಸಲ್ಪಡುತ್ತಿರುವ ವಾಟ್ಸಾಪ್ (whatsapp) ಒಂದು ವೇಳೆ ನಿಷೇಧಿಸಲ್ಪಟ್ಟರೆ ಮುಂದೇನು ಎನ್ನುವ ಚಿಂತೆ ಹೆಚ್ಚಿನವರನ್ನು ಕಾಡಲಾರಂಭಿಸಿದೆ.

ವಾಟ್ಸಾಪ್ ಭಾರತಕ್ಕೆ ಬಂದಾಗಿನಿಂದ ಜನರು ಪರಸ್ಪರ ಮಾಹಿತಿಯನ್ನು ಹಂಚಿಕೊಳ್ಳುವುದು ಸುಲಭವಾಗಿದೆ. ಅದು ಪಠ್ಯ ಸಂದೇಶಗಳು ಅಥವಾ ಆಡಿಯೋ, ವಿಡಿಯೋ ಹೀಗೆ ಎಲ್ಲವನ್ನೂ ಸುಲಭವಾಗಿ ಹಂಚಿಕೊಳ್ಳಲು ವೇದಿಕೆಯನ್ನು ಸೃಷ್ಟಿಸಿತ್ತು. ಈಗಾಗಲೇ ಹಲವಾರು ಬಾರಿ ಭಾರತದಲ್ಲಿ ವಾಟ್ಸಾಪ್ ನಿಷೇಧವಾಗುವ ಬೆದರಿಕೆ ಹಾಕಲಾಗಿತ್ತು. ಒಂದು ವೇಳೆ ವಾಟ್ಸಾಪ್ ನಿಷೇಧಿಸಲ್ಪಟ್ಟರೆ ಭಾರತೀಯರಿಗೆ ಇರುವ ಮುಂದಿನ ಆಯ್ಕೆ ಏನು?

Whatsapp Shutdown
Whatsapp Shutdown


ವಾಟ್ಸಾಪ್ ದೇಶದಲ್ಲಿ ಸ್ಥಗಿತಗೊಂಡರೆ ಗ್ರಾಹಕರು ಉಳಿದ ಚಾಟಿಂಗ್ ಆಪ್‌ಗಳತ್ತ ಹೊರಳುವ ಸಾಧ್ಯತೆ ಇದೆ. ಭಾರತದಲ್ಲಿ ವಾಟ್ಸಾಪ್‌ಗೆ ಪರ್ಯಾಯವಾಗಿ ಹಲವು ಆಯ್ಕೆಗಳಿವೆ.

Whatsapp Shutdown
Whatsapp Shutdown


ಟೆಲಿಗ್ರಾಮ್

ಟೆಲಿಗ್ರಾಮ್ ವಾಟ್ಸಾಪ್‌ಗೆ ಪರ್ಯಾಯವಾಗಿರಬಹುದು. ಟೆಲಿಗ್ರಾಮ್ ಚಾಟಿಂಗ್, ಗ್ರೂಪ್ ಚಾಟ್, ಧ್ವನಿ, ವಿಡಿಯೋ ಕರೆಗಳು ಮತ್ತು ವಾಟ್ಸಾಪ್‌ನಂತೆಯೇ ಫೈಲ್ ಹಂಚಿಕೆಯಂತಹ ಹಲವಾರು ವೈಶಿಷ್ಟ್ಯಗಳನ್ನು ಹೊಂದಿದೆ. ಇದಲ್ಲದೆ ಟೆಲಿಗ್ರಾಮ್ ಚಾನೆಲ್ ಮೂಲಕ ಹೆಚ್ಚಿನ ಜನರನ್ನು ಸಂಪರ್ಕಿಸುವುದು ಸಾಧ್ಯವಿದೆ.

Whatsapp Shutdown
Whatsapp Shutdown


ಸಿಗ್ನಲ್

ಸಿಗ್ನಲ್ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು, ಇದು ಭಾರತದಲ್ಲಿ ನಿಧಾನವಾಗಿ ಜನಪ್ರಿಯವಾಗುತ್ತಿದೆ. ಇದು ವಾಟ್ಸಾಪ್ ನಂತೆಯೇ ಹಲವು ವೈಶಿಷ್ಟ್ಯಗಳನ್ನು ಗ್ರಾಹಕರಿಗೆ ನೀಡುತ್ತದೆ.

Whatsapp Shutdown
Whatsapp Shutdown


ಸ್ನ್ಯಾಪ್ ಚಾಟ್

ವಾಟ್ಸಾಪ್‌ಗೆ ಪರ್ಯಾಯವಾಗಿ ಸ್ನ್ಯಾಪ್ ಚಾಟ್ ಅನ್ನು ಅತ್ಯುತ್ತಮ ಆಯ್ಕೆಯಾಗಿ ಇರಿಸಬಹುದು. ಇದರ ಮೂಲಕ ಪರಸ್ಪರ ಚಿತ್ರಗಳು ಮತ್ತು ಫೈಲ್‌ಗಳನ್ನು ಹಂಚಿಕೊಳ್ಳಬಹುದು.


ಇದನ್ನೂ ಓದಿ: Whatsapp Shutdown: ಭಾರತದಲ್ಲಿ ಇನ್ಮುಂದೆ ಬಂದ್‌ ಆಗುತ್ತಾ ವಾಟ್ಸ್‌ಆ್ಯಪ್‌? ಕೇಂದ್ರ ಸರ್ಕಾರ ಹೇಳೋದೇನು?

ವಾಟ್ಸಾಪ್ ಸ್ಥಗಿತವಾದರೆ ಏನು ಸಮಸ್ಯೆ?

ಭಾರತದಲ್ಲಿ ವಾಟ್ಸಾಪ್ ತನ್ನ ಸೇವೆಯನ್ನು ಸ್ಥಗಿತಗೊಳಿಸಿದರೆ ಗ್ರಾಹಕರು ಮುಖ್ಯವಾಗಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಯಾಕೆಂದರೆ ಈ ಆಪ್ ಅನ್ನು ಸಾಕಷ್ಟು ಗ್ರಾಹಕರು ಹಲವಾರು ವರ್ಷಗಳಿಂದ ಬಳಸುತ್ತಿದ್ದಾರೆ. ಇದರಿಂದ ಬೇರೆ ಆಪ್ ಗೆ ಹೊಂದಿಕೊಳ್ಳಲು ಸಾಕಷ್ಟು ಕಾಲಾವಕಾಶ ಬೇಕಾಗಬಹುದು. ಆಗ ಕೆಲವೊಂದು ಸಮಸ್ಯೆಗಳು ಎದುರಾಗಬಹುದು. ಆದರೂ ಪರ್ಯಾಯ ಆಪ್‌ಗಳಿಗೆ ಜನ ಕ್ರಮೇಣ ಒಗ್ಗಿಕೊಳ್ಳಬಹುದು.

Continue Reading

ದೇಶ

Kerala Floods: ಕೇರಳದಲ್ಲಿ ಪ್ರವಾಹ; ಪ್ರಾಣವನ್ನೇ ಒತ್ತೆ ಇಟ್ಟು ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ದ ಪತಿ, Video ಇದೆ

Kerala Floods: ಇಡುಕ್ಕಿ ಜಿಲ್ಲೆಯಲ್ಲಿ ನದಿಯೊಂದು ಉಕ್ಕಿ ಹರಿಯುತ್ತಿದೆ. ಸೇತುವೆ ಮೇಲೆಯೂ ನೀರು ರಭಸವಾಗಿ ಹರಿಯುತ್ತಿದೆ. ಆದರೆ, ಗರ್ಭಿಣಿ ಪತ್ನಿಯನ್ನು ತುರ್ತಾಗಿ ಆಸ್ಪತ್ರೆಗೆ ಸೇರಿಸಬೇಕಾದ ಕಾರಣ ವ್ಯಕ್ತಿಯು ಪತ್ನಿಯನ್ನು ಕಾರಿನಲ್ಲಿ ಕೂರಿಸಿಕೊಂಡು ಇಡುಕ್ಕಿ ಆಸ್ಪತ್ರೆಯತ್ತ ಹೊರಟಿದ್ದಾರೆ. ಸೇತುವೆಯ ಮೇಲೆಯೂ ನೀರು ಹರಿಯುವುದನ್ನು ಕಂಡ ಅವರು ಆತಂಕಕ್ಕೀಡಾಗಿದ್ದಾರೆ. ಆದರೂ, ಪ್ರವಾಹವನ್ನು ಲೆಕ್ಕಿಸದೆ ಅವರು ಕಾರು ಚಲಾಯಿಸಿ, ಪತ್ನಿಯನ್ನು ಸುರಕ್ಷಿತವಾಗಿ ಆಸ್ಪತ್ರೆ ಸೇರಿಸಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Kerala Floods
Koo

ತಿರುವನಂತಪುರಂ: ದೇವರ ನಾಡು ಕೇರಳ ಈಗ ವರುಣನ (Kerala Floods) ಆರ್ಭಟಕ್ಕೆ ತತ್ತರಿಸಿ ಹೋಗಿದೆ. ವಯನಾಡಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹ ಮತ್ತು ಭೂಕುಸಿತ (Wayanad Floods) ಉಂಟಾಗಿದ್ದು, ಸಾವಿನ ಸಂಖ್ಯೆ 300 ಸಮೀಪಿಸಿದೆ. 200ಕ್ಕೂ ಅಧಿಕ ಜನ ನಾಪತ್ತೆಯಾಗಿದ್ದು, ಕಾರ್ಯಾಚರಣೆ ನಡೆಯುತ್ತಲೇ ಇದೆ. ಇನ್ನು, ವಯನಾಡು ಮಾತ್ರವಲ್ಲ, ಇಡುಕ್ಕಿ ಜಿಲ್ಲೆಯಲ್ಲೂ ಭಾರಿ ಮಳೆಯಾಗುತ್ತಿದ್ದು, ಪ್ರವಾಹದಿಂದ ಜನ ತತ್ತರಿಸಿ ಹೋಗಿದ್ದಾರೆ. ಇನ್ನು, ಇಡುಕ್ಕಿಯಲ್ಲಿ ವ್ಯಕ್ತಿಯೊಬ್ಬರು ಉಕ್ಕಿ ಹರಿಯುತ್ತಿರುವ ನದಿಯ ಸೇತುವೆ ಮೇಲೆಯೇ ಪ್ರಾಣವನ್ನೂ ಲೆಕ್ಕಿಸದೆ ಕಾರಿನಲ್ಲಿ ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ವಿಡಿಯೊ (Viral Video) ಈಗ ಭಾರಿ ವೈರಲ್‌ ಆಗಿದೆ.

ಹೌದು, ಇಡುಕ್ಕಿ ಜಿಲ್ಲೆಯಲ್ಲಿ ನದಿಯೊಂದು ಉಕ್ಕಿ ಹರಿಯುತ್ತಿದೆ. ಸೇತುವೆ ಮೇಲೆಯೂ ನೀರು ರಭಸವಾಗಿ ಹರಿಯುತ್ತಿದೆ. ಆದರೆ, ಗರ್ಭಿಣಿ ಪತ್ನಿಯನ್ನು ತುರ್ತಾಗಿ ಆಸ್ಪತ್ರೆಗೆ ಸೇರಿಸಬೇಕಾದ ಕಾರಣ ವ್ಯಕ್ತಿಯು ಪತ್ನಿಯನ್ನು ಕಾರಿನಲ್ಲಿ ಕೂರಿಸಿಕೊಂಡು ಇಡುಕ್ಕಿ ಆಸ್ಪತ್ರೆಯತ್ತ ಹೊರಟಿದ್ದಾರೆ. ಸೇತುವೆಯ ಮೇಲೆಯೂ ನೀರು ಹರಿಯುವುದನ್ನು ಕಂಡ ಅವರು ಆತಂಕಕ್ಕೀಡಾಗಿದ್ದಾರೆ.

ಪತ್ನಿಯನ್ನು ಆಸ್ಪತ್ರೆಗೆ ಸೇರಿಸಲೇಬೇಕಾದ ಕಾರಣ ಅವರು ರಭಸವಾಗಿ ಹರಿಯುತ್ತಿದ್ದ ನೀರನ್ನೂ ಲೆಕ್ಕಿಸದೆ, ವೇಗವಾಗಿ ಕಾರು ಚಲಾಯಿಸಿಕೊಂಡು ಹೋಗಿದ್ದಾರೆ. ಇಬ್ಬರೂ ಸುರಕ್ಷಿತವಾಗಿ ಇಡುಕ್ಕಿ ಆಸ್ಪತ್ರೆ ತಲುಪಿದ್ದಾರೆ. ವ್ಯಕ್ತಿಯ ಪತ್ನಿ ಈಗ ಆರೋಗ್ಯದಿಂದ ಇದ್ದಾರೆ ಎಂದು ತಿಳಿದುಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲ್‌ ಆಗುತ್ತಲೇ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪತ್ನಿಗಾಗಿ ಶೌರ್ಯತನ ಮೆರೆದ ಈತನೇ ನಿಜವಾದ ಪತಿ ಎಂದೆಲ್ಲ ಹೊಗಳಿದ್ದಾರೆ.

ವಯನಾಡಿಗೆ ರಾಹುಲ್‌ ಗಾಂಧಿ ಭೇಟಿ

ವಯನಾಡು ಜಿಲ್ಲೆಯ ಮೆಪ್ಪಾಡಿ ಹಾಗೂ ಚೂರಲ್‌ಮಲ ಪ್ರದೇಶಗಳ ಗ್ರಾಮಗಳು ಸಂಪೂರ್ಣವಾಗಿ ಮಸಣದಂತಾಗಿವೆ. ಈ ಪ್ರದೇಶಗಳಿಗೆ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಅವರು ಭೇಟಿ ನೀಡಿದ್ದಾರೆ. ಪ್ರವಾಹದಲ್ಲಿ ಕುಟುಂಬಸ್ಥರನ್ನು ಕಳೆದುಕೊಂಡಿರುವ, ನೀರಿನಲ್ಲಿ ಮನೆಗಳು ಕೊಚ್ಚಿ ಹೋಗಿ ನಿರಾಶ್ರಿತರಾಗಿರುವ ಸಂತ್ರಸ್ತರನ್ನು ಭೇಟಿಯಾದ ಅವರು, ಆತ್ಮಸ್ಥೈರ್ಯ ತುಂಬಿದರು. ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಹಾನಿಯ ವೀಕ್ಷಣೆ ಮಾಡಿದರು.

ವಯನಾಡು ಜಿಲ್ಲೆಯ ಹಲವೆಡೆ ಸಂಚರಿಸಿದ ಬಳಿಕ ರಾಹುಲ್‌ ಗಾಂಧಿ ಅವರು ಮಾಧ್ಯಮಗಳ ಜತೆ ಮಾತನಾಡಿದರು. “ವಯನಾಡು ಜನರ ಸ್ಥಿತಿಯನ್ನು ನೋಡಿದಾಗ ನನ್ನ ತಂದೆ ಸಾವಿನ ದಿನ, ಆ ದುಃಖವೇ ಆಯಿತು. ಜನರು ತಂದೆ, ತಾಯಿ ಜತೆಗೆ ಇಡೀ ಕುಟುಂಬವನ್ನೇ ಕಳೆದುಕೊಂಡಿದ್ದಾರೆ. ಇಡೀ ದೇಶದ ಗಮನವೇ ಈಗ ವಯನಾಡು ಮೇಲಿದೆ. ನಾವೆಲ್ಲರೂ ವಯನಾಡು ಪರವಾಗಿ ನಿಲ್ಲೋಣ. ಇದು ಕೇವಲ ವಯನಾಡಿನ ದುರಂತ ಅಲ್ಲ, ರಾಜ್ಯ ಹಾಗೂ ದೇಶದ ದುರಂತವಾಗಿದೆ” ಎಂದು ಭಾವುಕರಾಗಿ ಹೇಳಿದರು.

ಪ್ರಿಯಾಂಕಾ ವಾದ್ರಾ ಅವರು ಪರಿಹಾರ ಕೇಂದ್ರಗಳಿಗೂ ತೆರಳಿ, ಸಂತ್ರಸ್ತರ ಜತೆ ಮಾತನಾಡಿದರು. ಇದಾದ ಬಳಿಕ ಮಾತನಾಡಿದ ಅವರು, “ನಾವು ಜನರಿಗೆ ನಮ್ಮಿಂದ ಎಷ್ಟು ಸಾಧ್ಯವೋ ಅಷ್ಟು ನೆರವಾಗಲು ಬಂದಿದ್ದೇವೆ. ಪರಿಸ್ಥಿತಿ ತುಂಬ ಭೀಕರವಾಗಿದೆ” ಎಂದು ಹೇಳಿದರು. ಭಾರಿ ಮಳೆಯ ಬಳಿಕ ವಯನಾಡಿನ ಸುಮಾರು 80 ಸಾವಿರ ಚದರ ಮೀಟರ್‌ ಭೂಮಿಯು ಕುಸಿದಿದ್ದು, ಸುಮಾರು 8 ಕಿಲೋಮೀಟರ್‌ವರೆಗೆ ಅವಶೇಷವು ಹರಿದುಕೊಂಡು ಹೋಗಿದೆ. ಇದರಿಂದಾಗಿ ಸಾವಿನ ಸಂಖ್ಯೆ ದಿನೇದಿನೆ ಜಾಸ್ತಿಯಾಗುತ್ತಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Wayanad Landslide: ವಯನಾಡು ಸ್ಥಿತಿ ನೋಡಿ ತಂದೆ ಸಾವು ನೆನಪಾಯ್ತು ಎಂದ ರಾಹುಲ್‌ ಗಾಂಧಿ; ಸಾವಿನ ಸಂಖ್ಯೆ 300ರ ಸನಿಹ

Continue Reading

ದೇಶ

Wayanad Landslide: ವಯನಾಡು ಸ್ಥಿತಿ ನೋಡಿ ತಂದೆ ಸಾವು ನೆನಪಾಯ್ತು ಎಂದ ರಾಹುಲ್‌ ಗಾಂಧಿ; ಸಾವಿನ ಸಂಖ್ಯೆ 300ರ ಸನಿಹ

Wayanad Landslide: ಭಾರಿ ಮಳೆಯ ಬಳಿಕ ವಯನಾಡಿನ ಸುಮಾರು 80 ಸಾವಿರ ಚದರ ಮೀಟರ್‌ ಭೂಮಿಯು ಕುಸಿದಿದ್ದು, ಸುಮಾರು 8 ಕಿಲೋಮೀಟರ್‌ವರೆಗೆ ಅವಶೇಷವು ಹರಿದುಕೊಂಡು ಹೋಗಿದೆ. ಮೃತಪಟ್ಟವರ ಸಂಖ್ಯೆ ಈಗ 291ಕ್ಕೆ ಏರಿಕೆಯಾಗಿದ್ದು, ಇನ್ನೂ ಸುಮಾರು 200 ಜನ ನಾಪತ್ತೆಯಾಗಿದ್ದಾರೆ. ಮತ್ತೊಂದೆಡೆ ಸಂತ್ರಸ್ತರಿಗೆ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಸಾಂತ್ವನ ಹೇಳಿದರು.

VISTARANEWS.COM


on

Wayanad Landslide
Koo

ತಿರುವನಂತಪುರಂ: ಭಾರಿ ಮಳೆಯಿಂದ ಉಂಟಾದ ಪ್ರವಾಹ ಹಾಗೂ ಭೀಕರ ಭೂಕುಸಿತಕ್ಕೆ ಕೇರಳದ ವಯನಾಡು ಈಗ ಸೂತಕದ ಮನೆಯಂತಾಗಿದೆ. ಭೂಕುಸಿತದಲ್ಲಿ (Wayanad Landslide) ಮೃತಪಟ್ಟವರ ಸಂಖ್ಯೆ ಈಗ 291ಕ್ಕೆ ಏರಿಕೆಯಾಗಿದ್ದು, ಇನ್ನೂ ಸುಮಾರು 200 ಜನ ನಾಪತ್ತೆಯಾಗಿದ್ದು, ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನದಿಗಳಲ್ಲಿ, ಬೆಟ್ಟ ಕುಸಿತದ ಅವಶೇಷಗಳ ಅಡಿಯಲ್ಲಿ ಶವಗಳು ಸಿಗುತ್ತಿವೆ. ಇದರ ಮಧ್ಯೆಯೇ, ಕಾಂಗ್ರೆಸ್‌ ನಾಯಕರೂ ಆಗಿರುವ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ವಯನಾಡಿಗೆ ಭೇಟಿ ನೀಡಿದ್ದು, ಸಂತ್ರಸ್ತ ಕುಟುಂಬಗಳ ಜತೆ ಅವರು ಮಾತುಕತೆ ನಡೆಸಿದ್ದಾರೆ.

ವಯನಾಡು ಜಿಲ್ಲೆಯ ಮೆಪ್ಪಾಡಿ ಹಾಗೂ ಚೂರಲ್‌ಮಲ ಪ್ರದೇಶಗಳ ಗ್ರಾಮಗಳು ಸಂಪೂರ್ಣವಾಗಿ ಮಸಣದಂತಾಗಿವೆ. ಈ ಪ್ರದೇಶಗಳಿಗೆ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಅವರು ಭೇಟಿ ನೀಡಿದ್ದಾರೆ. ಪ್ರವಾಹದಲ್ಲಿ ಕುಟುಂಬಸ್ಥರನ್ನು ಕಳೆದುಕೊಂಡಿರುವ, ನೀರಿನಲ್ಲಿ ಮನೆಗಳು ಕೊಚ್ಚಿ ಹೋಗಿ ನಿರಾಶ್ರಿತರಾಗಿರುವ ಸಂತ್ರಸ್ತರನ್ನು ಭೇಟಿಯಾದ ಅವರು, ಆತ್ಮಸ್ಥೈರ್ಯ ತುಂಬಿದರು. ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಹಾನಿಯ ವೀಕ್ಷಣೆ ಮಾಡಿದರು.

ತಂದೆ ಸಾವು ನೆನಪಾಯ್ತು ಎಂದ ರಾಹುಲ್‌ ಗಾಂಧಿ

ವಯನಾಡು ಜಿಲ್ಲೆಯ ಹಲವೆಡೆ ಸಂಚರಿಸಿದ ಬಳಿಕ ರಾಹುಲ್‌ ಗಾಂಧಿ ಅವರು ಮಾಧ್ಯಮಗಳ ಜತೆ ಮಾತನಾಡಿದರು. “ವಯನಾಡು ಜನರ ಸ್ಥಿತಿಯನ್ನು ನೋಡಿದಾಗ ನನ್ನ ತಂದೆ ಸಾವಿನ ದಿನ, ಆ ದುಃಖವೇ ಆಯಿತು. ಜನರು ತಂದೆ, ತಾಯಿ ಜತೆಗೆ ಇಡೀ ಕುಟುಂಬವನ್ನೇ ಕಳೆದುಕೊಂಡಿದ್ದಾರೆ. ಇಡೀ ದೇಶದ ಗಮನವೇ ಈಗ ವಯನಾಡು ಮೇಲಿದೆ. ನಾವೆಲ್ಲರೂ ವಯನಾಡು ಪರವಾಗಿ ನಿಲ್ಲೋಣ. ಇದು ಕೇವಲ ವಯನಾಡಿನ ದುರಂತ ಅಲ್ಲ, ರಾಜ್ಯ ಹಾಗೂ ದೇಶದ ದುರಂತವಾಗಿದೆ” ಎಂದು ಭಾವುಕರಾಗಿ ಹೇಳಿದರು.

“ನಾವು ಇಲ್ಲಿನ ಪರಿಸ್ಥಿತಿಯನ್ನು ಅವಲೋಕನ ಮಾಡಲು, ಜನರ ಪರವಾಗಿ ನಿಲ್ಲಲು ಬಂದಿದ್ದೇವೆ. ಕುಟುಂಬಸ್ಥರು ಹಾಗೂ ಮನೆಗಳನ್ನು ಕಳೆದುಕೊಂಡವರ ದುಃಖವನ್ನು ನೋಡಲು ಬೇಸರವಾಗುತ್ತಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜನರಿಗೆ ಏನು ಹೇಳಬೇಕು, ಯಾವ ರೀತಿ ಸಾಂತ್ವನ ಹೇಳಬೇಕು ಎಂಬುದೇ ಗೊತ್ತಾಗುತ್ತಿಲ್ಲ. ಸರ್ಕಾರಗಳು ಈಗ ಜನರ ಪರವಾಗಿ ನಿಲ್ಲಬೇಕು. ಅವರ ರಕ್ಷಣೆ, ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಬೇಕು. ಜನರು ಅನುಭವಿಸುತ್ತಿರುವ ಕಷ್ಟವನ್ನು ಕಲ್ಪನೆ ಕೂಡ ಮಾಡಿಕೊಳ್ಳಲು ಆಗುತ್ತಿಲ್ಲ” ಎಂದರು.

ಪ್ರಿಯಾಂಕಾ ವಾದ್ರಾ ಅವರು ಪರಿಹಾರ ಕೇಂದ್ರಗಳಿಗೂ ತೆರಳಿ, ಸಂತ್ರಸ್ತರ ಜತೆ ಮಾತನಾಡಿದರು. ಇದಾದ ಬಳಿಕ ಮಾತನಾಡಿದ ಅವರು, “ನಾವು ಜನರಿಗೆ ನಮ್ಮಿಂದ ಎಷ್ಟು ಸಾಧ್ಯವೋ ಅಷ್ಟು ನೆರವಾಗಲು ಬಂದಿದ್ದೇವೆ. ಪರಿಸ್ಥಿತಿ ತುಂಬ ಭೀಕರವಾಗಿದೆ” ಎಂದು ಹೇಳಿದರು. ಭಾರಿ ಮಳೆಯ ಬಳಿಕ ವಯನಾಡಿನ ಸುಮಾರು 80 ಸಾವಿರ ಚದರ ಮೀಟರ್‌ ಭೂಮಿಯು ಕುಸಿದಿದ್ದು, ಸುಮಾರು 8 ಕಿಲೋಮೀಟರ್‌ವರೆಗೆ ಅವಶೇಷವು ಹರಿದುಕೊಂಡು ಹೋಗಿದೆ. ಇದರಿಂದಾಗಿ ಸಾವಿನ ಸಂಖ್ಯೆ ದಿನೇದಿನೆ ಜಾಸ್ತಿಯಾಗುತ್ತಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Wayanad Landslide: ವಯನಾಡು ಈಗ ಸಾವಿನ ಮನೆ: ಮೃತರ ಸಂಖ್ಯೆ 240, 160 ಶವ ಪತ್ತೆ, 220 ಜನ ಮಿಸ್ಸಿಂಗ್; ಭೀಕರ ಚಿತ್ರಣ ಇಲ್ಲಿದೆ

Continue Reading

ದೇಶ

Pralhad Joshi: ಕೇಂದ್ರ ಸರ್ಕಾರದಿಂದ 80 ಕೋಟಿ ಫಲಾನುಭವಿಗಳಿಗೆ ಉಚಿತ ಆಹಾರ ಧಾನ್ಯ; ಪ್ರಲ್ಹಾದ್‌ ಜೋಶಿ

Pralhad Joshi: ಕೇಂದ್ರ ಸರ್ಕಾರ ದೇಶದ 80 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಉಚಿತ ಆಹಾರ ಧಾನ್ಯ ವಿತರಿಸುತ್ತಿದೆ ಎಂದು ತಿಳಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ್‌ ಜೋಶಿ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಇನ್ನೂ 5 ವರ್ಷಗಳವರೆಗೆ ವಿಸ್ತರಿಸಿದ್ದು, ಇದರ ಬಜೆಟ್ 11.80 ಲಕ್ಷ ಕೋಟಿ ರೂಪಾಯಿಯನ್ನು ಕೇಂದ್ರ ಸರ್ಕಾರ ಭರಿಸಲಿದೆ ಎಂದು ಹೇಳಿದ್ದಾರೆ.

VISTARANEWS.COM


on

Central government to distribute free food grains to 80 crore beneficiaries of the country says Pralhad Joshi
Koo

ನವದೆಹಲಿ: ಕೇಂದ್ರ ಸರ್ಕಾರ ದೇಶದ 80 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಉಚಿತ ಆಹಾರ ಧಾನ್ಯ ವಿತರಿಸುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಹೇಳಿದರು.

ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, “ಒಂದು ರಾಷ್ಟ್ರ ಒಂದು ಪಡಿತರ ಚೀಟಿ” ಮತ್ತು “ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ” ಯಡಿ ಪ್ರತಿಯೊಬ್ಬರಿಗೂ ಆಹಾರ ಭದ್ರತೆ ಒದಗಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Pralhad Joshi: ಹಸಿರು ಜಲಜನಕ ಮಿಷನ್‌ಗೆ 19744 ಕೋಟಿ ರೂ. ಮೀಸಲು; ಪ್ರಲ್ಹಾದ್‌ ಜೋಶಿ

2019ರಲ್ಲಿ ಶುರುವಾದ “ಒಂದು ರಾಷ್ಟ್ರ ಒಂದು ಪಡಿತರ ಚೀಟಿ” ಯೋಜನೆಯಡಿ ಸುಮಾರು 145 ಕೋಟಿ ವಹಿವಾಟು ಕೈಗೊಳ್ಳಲಾಗಿದೆ ಎಂದು ತಿಳಿಸಿದ ಸಚಿವರು, ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಇನ್ನೂ 5 ವರ್ಷಗಳವರೆಗೆ ವಿಸ್ತರಿಸಿದ್ದು, ಇದರ ಬಜೆಟ್ 11.80 ಲಕ್ಷ ಕೋಟಿ ರೂಪಾಯಿಯನ್ನು ಕೇಂದ್ರ ಸರ್ಕಾರ ಭರಿಸಲಿದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ವಿವರಿಸಿದರು.

497 ಲಕ್ಷ ಮೆ. ಟನ್ ಆಹಾರ ಧಾನ್ಯ ವಿತರಣೆ

2023-24ರಲ್ಲಿ “ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ” ಯೋಜನೆಯಡಿ, ಸುಮಾರು 81.35 ಕೋಟಿ ಫಲಾನುಭವಿಗಳಿಗೆ 497 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ವಿತರಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Job Alert: ಎಲೆಕ್ಟ್ರಾನಿಕ್ಸ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಐಟಿಐ ಪಾಸಾದವರು ಅಪ್ಲೈ ಮಾಡಿ

ಎಥೆನಾಲ್ ಉತ್ಪಾದನೆ ವೃದ್ದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎಥೆನಾಲ್ ಉತ್ಪಾದನಾ ಸಾಮರ್ಥ್ಯ 1,589 ಕೋಟಿ ಲೀಟರ್‌ಗೆ ಏರಿದೆ. ಭಾರತದ ದೇಶೀಯ ಅಗತ್ಯಗಳನ್ನು ಪೂರೈಸಲು ಸಾಕಾಗುವಷ್ಟಿದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಇದೇ ವೇಳೆ ತಿಳಿಸಿದರು.

Continue Reading
Advertisement
Former minister B Sriramulu alleged that the Congress government is not interested in the construction of the Kampli bridge
ಬಳ್ಳಾರಿ6 mins ago

Ballari News: ಕಂಪ್ಲಿ ಸೇತುವೆ ನಿರ್ಮಿಸಲು ಆಸಕ್ತಿ ವಹಿಸದ ಕಾಂಗ್ರೆಸ್ ಸರ್ಕಾರ; ಶ್ರೀರಾಮುಲು ಆರೋಪ

Whatsapp Shutdown
ತಂತ್ರಜ್ಞಾನ10 mins ago

Alternative to Whatsapp: ವಾಟ್ಸಾಪ್ ಸ್ಥಗಿತಗೊಂಡರೆ ಏನ್‌ ಮಾಡೋದು? ಇಲ್ಲಿದೆ ಪರ್ಯಾಯ ಆ್ಯಪ್‌ಗಳ ಪಟ್ಟಿ

Kerala Floods
ದೇಶ58 mins ago

Kerala Floods: ಕೇರಳದಲ್ಲಿ ಪ್ರವಾಹ; ಪ್ರಾಣವನ್ನೇ ಒತ್ತೆ ಇಟ್ಟು ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ದ ಪತಿ, Video ಇದೆ

Paris Olympics 2024
ಪ್ರಮುಖ ಸುದ್ದಿ1 hour ago

Paris Olympics 2024 : ಒಲಿಂಪಿಕ್ಸ್​ನಲ್ಲಿ ವಿವಾದ; ಮಹಿಳೆ ವಿರುದ್ಧ ಸ್ಪರ್ಧಿಸಲು ಬಾಕ್ಸಿಂಗ್​ ಕಣಕ್ಕೆ ಇಳಿದ ಪುರುಷ!

vyasana mukta dinacharane programme in hosapete
ವಿಜಯನಗರ1 hour ago

Vijayanagara News: ಹೊಸಪೇಟೆಯಲ್ಲಿ ವ್ಯಸನ ಮುಕ್ತ ದಿನಾಚರಣೆ; ಜನ ಜಾಗೃತಿ

utthana vaarshika katha spardhe the last date for submission of the story is october 10
ಬೆಂಗಳೂರು1 hour ago

Utthana Katha Spardhe 2024: ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ; ಕಥೆ ತಲುಪಿಸಲು ಅ.10 ಕೊನೆಯ ದಿನ

World Breastfeeding Week
ಆರೋಗ್ಯ2 hours ago

World Breastfeeding Week: ವಿಶ್ವ ಸ್ತನ್ಯಪಾನ ಸಪ್ತಾಹ; ಹಾಲುಣಿಸಿದರೆ ಮಗುವಿಗೆ ಮಾತ್ರವಲ್ಲ, ತಾಯಿಗೂ ಲಾಭ!

Saree Fashion
ಫ್ಯಾಷನ್2 hours ago

Saree Fashion: ಕಂಟೆಂಪರರಿ ಪ್ರಿಂಟೆಡ್‌ ವಿನ್ಯಾಸದಲ್ಲೂ ಬಂತು ಆರ್ಗನ್ಜಾ ಸೀರೆ!

kotak bank smart watch
ವಾಣಿಜ್ಯ2 hours ago

kotak bank smart watch: ಮೊಬೈಲ್‌ ಬೇಕಿಲ್ಲ, ವಾಚ್‌ನಲ್ಲೇ ಆನ್‌ಲೈನ್‌ ಪೇಮೆಂಟ್‌! ಬಂದಿದೆ ಕೋಟಕ್-ಜಿಓಕ್ಯೂಐಐ ಸ್ಮಾರ್ಟ್ ವಾಚ್!

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಭಾರತದವರೇ ಆದ ಎಚ್​ಎಸ್​ ಪ್ರಣಯ್​ ಸೋಲಿಸಿ ಕ್ವಾರ್ಟರ್​​ ಫೈನಲ್ಸ್​ಗೇರಿದ ಲಕ್ಷ್ಯ ಸೇನ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ8 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ9 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ9 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌