ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ! ಬಿತ್ತು ಲೀತು ಗ್ರಾಮದಲ್ಲಿ 13 ಜನರ ಹೆಣ - Vistara News

ದೇಶ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ! ಬಿತ್ತು ಲೀತು ಗ್ರಾಮದಲ್ಲಿ 13 ಜನರ ಹೆಣ

Manipur Violence: ಈಶಾನ್ಯ ರಾಜ್ಯ ಮಣಿಪುರದಲ್ಲಿ ಮೇ 3ರಿಂದ ಎರಡು ಸಮುದಾಯಗಳ ಮಧ್ಯೆ ಹಿಂಸಾಚಾರ ನಡೆಯುತ್ತಿದ್ದು, ಈವರೆಗೆ ಕನಿಷ್ಠ 182 ಜನರು ಮೃತಪಟ್ಟಿದ್ದಾರೆ.

VISTARANEWS.COM


on

Fresh violence in Manipur and 13 people found dead in village
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಈಶಾನ್ಯ ರಾಜ್ಯ ಮಣಿಪುರದ (Manipur Violence) ತೆಂಗ್ನೌಪಾಲ್ ಜಿಲ್ಲೆಯಲ್ಲಿ (Tengnoupal district) ಸೋಮವಾರ ಮಧ್ಯಾಹ್ನ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು (Fresh violence), ಕನಿಷ್ಠ 13 ಜನರು ಮೃತಪಟ್ಟಿದ್ದಾರೆ. ತೆಂಗ್ನೌಪಾಲ್ ಜಿಲ್ಲೆಯ ಸೈಬೋಲ್ ಬಳಿಯ ಲೀತು ಗ್ರಾಮದಲ್ಲಿ ಮಧ್ಯಾಹ್ನದ ಸುಮಾರಿಗೆ ಎರಡು ಗುಂಪುಗಳ ಬಂಡುಕೋರರ ನಡುವೆ ಗುಂಡಿನ ಚಕಮಕಿ ನಡೆದಿದೆ (Encounter) ಎಂದು ಭದ್ರತಾ ಪಡೆಗಳ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂಸಾಚಾರ ನಡೆದ ಸ್ಥಳದಿಂದ ಭದ್ರತಾ ಪಡೆಗಳು ಕೇವಲ 10 ಕಿ.ಮೀ ದೂರದಲ್ಲಿದ್ದವು. ನಮ್ಮ ಪಡೆಗಳು ಸ್ಥಳಕ್ಕೆ ಆಗಮಿಸುವ ಹೊತ್ತಿಗೆ ಲೀತು ಗ್ರಾಮದಲ್ಲಿ 13 ಶವಗಳ ಬಿದ್ದಿದ್ದವು. ಆದರೆ, ಅಲ್ಲಿ ಯಾವುದೇ ಶಸ್ತ್ರಾಸ್ತ್ರಗಳು ಕಂಡ ಬರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತಪಟ್ಟವರೆಲ್ಲರೂ ಲೀತು ಗ್ರಾಮದಲ್ಲವರೆಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಅವರು ಬೇರೆ ಸ್ಥಳದಿಂದ ಬಂದು ಇಲ್ಲಿನ ಸ್ಥಳೀಯ ಪ್ರತ್ಯೇಕತಾ ಗುಂಪುಗಳ ಜತೆಗೆ ಸಂಘರ್ಷ ನಡೆಸಿರಬಹುದು. ಆಗ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮತ್ತೊಂದೆಡೆ, ಮೃತಪಟ್ಟವರ ಗುರುತು ಪತ್ತೆಯನ್ನು ಪೊಲೀಸರಲಾಗಲೀ, ಭದ್ರತಾ ಪಡೆಗಳಾಗಲೇ ಖಚಿತಪಡಿಸಿಲ್ಲ.

ಈಗಾಗಲೇ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಮತ್ತು ತನಿಖೆಯನ್ನು ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಣಿಪುರದಲ್ಲಿ ಮೈತೈ ಮತ್ತು ಕುಕಿ ಸಮುದಾಯಗಳ ನಡುವೆ ಮೇ 3ರಿಂದ ಸಂಘರ್ಷ ನಡೆಯುತ್ತಿದೆ. ಎರಡೂ ಸಮುದಾಯಗಳ ನಡುವಿನ ಸಂಘರ್ಷದಲ್ಲಿ ಇದವರೆಗೆ ಕನಿಷ್ಠ 182 ಜನರು ಮೃತಪಟ್ಟು, 50 ಸಾವಿರಕ್ಕೂ ಅಧಿಕ ಜನರು ನಿರ್ಗತಿಕರಾಗಿದ್ದಾರೆ.

ಹಿಂಸಾಚಾರಪೀಡಿತ ಮಣಿಪುರ ರಾಜ್ಯದ ಗಡಿ ಪ್ರದೇಶಗಳನ್ನು ಹೊರತುಪಡಿಸಿ ಕೆಲವು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಅಧಿಕಾರಿಗಳು ಭಾನುವಾರ ಮಾತ್ರ ಹಿಂತೆಗೆದುಕೊಂಡಿದ್ದಾರೆ. ಇದಾದ ಬೆನ್ನಲ್ಲೇ ಮತ್ತೆ ಗುಂಡಿನ ಚಕಮಕಿ ನಡೆದಿದೆ, ಹಿಂಸಾಚಾರ ಭುಗಿಲೆದ್ದಿದೆ.

ಹಿಂಸಾಚಾರಪೀಡಿತ ಕೆಲವು ಜಿಲ್ಲೆಗಳಲ್ಲಿನ ಪ್ರದೇಶಗಳು ಮೈತೈ ಅಥವಾ ಕುಕಿಗಳ ಪ್ರಾಬಲ್ಯವನ್ನು ಹೊಂದಿವೆ ಮತ್ತು ಕಳೆದ ಏಳು ತಿಂಗಳುಗಳಲ್ಲಿ ಹೆಚ್ಚಿನ ಹಿಂಸಾಚಾರ, ಗುಂಡಿನ ಚಕಮಕಿ, ಬೆಂಕಿ ಹಚ್ಚುವುದು ಮತ್ತು ಅಪಹರಣಗಳಿಗೆ ಈ ಪ್ರದೇಶವು ಸಾಕ್ಷಿಯಾಗಿದೆ. ಕೇಂದ್ರ ಮತ್ತು ಮಣಿಪುರ ಸರ್ಕಾರವು, ರಾಜ್ಯದ ಅತ್ಯಂತ ಹಳೆಯ ಉಗ್ರಗಾಮಿ ಸಂಘಟನೆಯಾದ ಯುನೈಟೆಡ್ ನ್ಯಾಶನಲ್ ಲಿಬರೇಶನ್ ಫೋರ್ಸ್ (ಯುಎನ್‌ಎಲ್‌ಎಫ್) ನೊಂದಿಗೆ ದಿಲ್ಲಿಯಲ್ಲಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ನಾಲ್ಕು ದಿನಗಳ ನಂತರ, ನಿಷೇಧವನ್ನು ಹಿಂತೆಗೆದುಕೊಳ್ಳಲಾಗಿದೆ.

ಈ ಸುದ್ದಿಯನ್ನೂ ಓದಿ: Manipur Violence: ಸರ್ಜಿಕಲ್ ಸ್ಟ್ರೈಕ್ ನೇತೃತ್ವ ವಹಿಸಿದ್ದ ಸೇನಾಧಿಕಾರಿಗೆ ಮಣಿಪುರ ಹಿಂಸಾಚಾರ ತಡೆಯುವ ಹೊಣೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ರೈಲು ಚಲಿಸುತ್ತಿರುವಾಗಲೇ ಹೇಗೆ ಮೊಬೈಲ್‌ ಎಗರಿಸುತ್ತಾರೆ ನೋಡಿ!

ಚಲಿಸುತ್ತಿರುವ ರೈಲಿನಲ್ಲಿದ್ದ ಪ್ರಯಾಣಿಕನ ಮೊಬೈಲ್ ಕಿತ್ತುಕೊಂಡು ಯುವಕನೊಬ್ಬ ಓಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು ಸಾಕಷ್ಟು ನೆಟ್ಟಿಗರು ಇದಕ್ಕೆ ಕಾಮೆಂಟ್ ಮಾಡಿದ್ದಾರೆ. ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ಹೇಗೆ ಎಚ್ಚರಿಕೆಯಿಂದ ಇರಬೇಕು ಎನ್ನುವುದನ್ನು ಈ ವಿಡಿಯೊ ಸಾರಿ ಹೇಳುತ್ತದೆ.

VISTARANEWS.COM


on

By

Viral Video
Koo

ನವದೆಹಲಿ: ಚಲಿಸುತ್ತಿರುವ ರೈಲಿನ (train) ಪಕ್ಕದಲ್ಲಿ ಸ್ಟೇಷನ್ ಪ್ಲಾಟ್‌ಫಾರ್ಮ್‌ನಲ್ಲಿ (Platform) ನಡೆದುಕೊಂಡು ಹೋಗುತ್ತಿದ್ದ ಯುವಕನೊಬ್ಬ ಪ್ರಯಾಣಿಕರ ಮೊಬೈಲ್ (mobile) ಕಿತ್ತುಕೊಂಡು ಹೋಗುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗಿದ್ದು, ಈ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿವೆ.

ಬಸ್, ರೈಲು ಅಥವಾ ಮೆಟ್ರೋದಲ್ಲಿ ಪ್ರಯಾಣಿಸುವಾಗ ಕಳ್ಳರ ಬಗ್ಗೆ ಎಚ್ಚರದಿಂದಿರಿ ಎಂದು ಕೆಲವರು ಹೇಳುವುದನ್ನು ನೋಡಿರಬೇಕು. ಜೇಬುಗಳ್ಳರ ಬಗ್ಗೆ ಎಚ್ಚರದಿಂದಿರಿ ಎಂಬ ಎಚ್ಚರಿಕೆಯನ್ನು ಸಾಮಾನ್ಯವಾಗಿ ಎಲ್ಲೆಡೆ ಪೋಸ್ಟ್ ಮಾಡಲಾಗುತ್ತದೆ ಅಥವಾ ಕೆಲವು ಸ್ಥಳಗಳಲ್ಲಿ ಪ್ರಕಟಿಸಲಾಗುತ್ತದೆ. ಎಷ್ಟೇ ಎಚ್ಚರಿಕೆ ವಹಿಸಿದ್ದರೂ ಕಳ್ಳರೂ ಬುದ್ದಿವಂತರಾಗಿದ್ದಾರೆ ಎಂಬುದನ್ನು ಅಲ್ಲಗಳೆಯುವಂತಿಲ್ಲ.

ಈ ದಿನಗಳಲ್ಲಿ ರೈಲ್ವೇ ಸಿಬ್ಬಂದಿ ಮತ್ತು ರೈಲ್ವೇ ರಕ್ಷಣಾ ಪಡೆ ಸಿಬ್ಬಂದಿ ಕೂಡ ರೈಲ್ವೇ ನಿಲ್ದಾಣಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಜಾಗರೂಕರಾಗಿದ್ದಾರೆ. ನಿಲ್ದಾಣಗಳಲ್ಲಿ ಮತ್ತು ರೈಲುಗಳ ಒಳಗೆ ಅಪರಾಧಗಳನ್ನು ತಡೆಯುವಲ್ಲಿ ಅವರು ಯಶಸ್ವಿಯಾಗಿದ್ದಾರೆ. ಆದರೆ ಹಲವು ಬಾರಿ ಅಪರಾಧಿಗಳು ಎಷ್ಟು ಜಾಣ್ಮೆಯಿಂದ ಅಪರಾಧ ಎಸಗುತ್ತಾರೆ ಎಂದರೆ ರೈಲ್ವೆ ಸಿಬ್ಬಂದಿಗೂ ಸುಳಿವು ಸಿಗುವುದಿಲ್ಲ.

ರೈಲು ನಿಲ್ದಾಣದಲ್ಲಿ ರೈಲು ನಿಲುಗಡೆಯಾದಾಗ ಫೋನ್‌ಗಳೊಂದಿಗೆ ಕಿಟಕಿಯ ಬಳಿ ಕುಳಿತುಕೊಳ್ಳಬೇಡಿ ಅಥವಾ ಚಾರ್ಜಿಂಗ್‌ನಲ್ಲಿ ಇರಿಸಬೇಡಿ ಎಂದು ಅಧಿಕಾರಿಗಳು ಯಾವಾಗಲೂ ಎಚ್ಚರಿಸುತ್ತಾರೆ. ಮಹಿಳೆಯರು ಆಭರಣಗಳನ್ನು ಧರಿಸಿದರೆ ಕಿಟಕಿಯ ಹತ್ತಿರ ಕುಳಿತುಕೊಳ್ಳಬಾರದು ಎಂದು ಹೇಳಲಾಗುತ್ತದೆ. ಕಳ್ಳರು ಇವುಗಳನ್ನು ಕಸಿದುಕೊಂಡು ಓಡಿ ಹೋಗುವುದೇ ಇದಕ್ಕೆ ಕಾರಣ.

ವೈರಲ್ ಆಗಿರುವ ಈ ವಿಡಿಯೋದಲ್ಲಿ ಕಿತ್ತಳೆ ಬಣ್ಣದ ಟೀ ಶರ್ಟ್ ಧರಿಸಿದ್ದ ಹುಡುಗನೊಬ್ಬ ಚಲಿಸುತ್ತಿರುವ ರೈಲಿನ ಪಕ್ಕದ ಪ್ಲಾಟ್‌ಫಾರ್ಮ್‌ನಲ್ಲಿ ನಿಧಾನವಾಗಿ ನಡೆದುಕೊಂಡು ಹೋಗುತ್ತಿದ್ದಾನೆ. ಎಲ್ಲವೂ ಸಾಮಾನ್ಯವಾಗಿದೆ ಎಂದು ಆ ಕ್ಷಣದಲ್ಲಿ ಭಾಸವಾದರೂ ಸ್ವಲ್ಪ ಸಮಯದ ಬಳಿಕ ಹುಡುಗ ಚಲಿಸುತ್ತಿರುವ ರೈಲಿನಿಂದ ಪ್ರಯಾಣಿಕನ ಫೋನ್ ಅನ್ನು ಇದ್ದಕ್ಕಿದ್ದಂತೆ ಕಿತ್ತುಕೊಂಡು ಓಡಿ ಹೋಗಿದ್ದಾನೆ.

ಈ ವಿಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮಂದಿ ಪ್ರತಿಕ್ರಿಯಿಸಿದ್ದಾರೆ. ಕೆಲವರು ಇಂತಹ ಪರಿಸ್ಥಿತಿಯಲ್ಲಿ ಏನನ್ನಾದರೂ ಮಾಡುವ ಬದಲು ವಿಡಿಯೋವನ್ನು ರೆಕಾರ್ಡ್ ಮಾಡಿರುವ ವ್ಯಕ್ತಿಯನ್ನು ದೂಷಿಸಿದ್ದಾರೆ.
ಇದರ ವಿಡಿಯೋವನ್ನು ಇನ್ ಸ್ಟಾ ಗ್ರಾಮ್ ನಲ್ಲಿ ಪೋಸ್ಟ್ ಮಾಡಲಾಗಿದ್ದು, ಇದರಲ್ಲಿ ಯುವಕನೊಬ್ಬ ಚಲಿಸುವ ರೈಲಿನಿಂದ ಪ್ರಯಾಣಿಕರ ಮೊಬೈಲ್ ಅನ್ನು ಕಸಿದುಕೊಳ್ಳುತ್ತಿರುವುದನ್ನು ನೋಡಬಹುದು.

ನಿಲ್ದಾಣದಿಂದ ರೈಲು ಪ್ರಾರಂಭವಾಗಿ ನಿಧಾನ ವೇಗದಲ್ಲಿ ಚಲಿಸುತ್ತಿರುವಾಗಲೇ ಯುವಕ ರೈಲಿನ ಪಕ್ಕದ ಪ್ಲಾಟ್‌ಫಾರ್ಮ್‌ನಲ್ಲಿ ನಡೆಯಲು ಪ್ರಾರಂಭಿಸುತ್ತಾನೆ. ರೈಲಿನ ವೇಗ ಹೆಚ್ಚಿದ ತಕ್ಷಣ ಕೈ ಒಳಗೆ ಹಾಕಿ ಪ್ರಯಾಣಿಕರೊಬ್ಬರ ಫೋನ್ ಕಿತ್ತುಕೊಂಡು ಓಡಿ ಹೋದ. ಈ ಘಟನೆ ಎಲ್ಲಿ ನಡೆದಿದೆ ಎಂಬುದು ತಿಳಿದುಬಂದಿಲ್ಲ. ಆದರೆ ಹ್ಯಾಶ್‌ಟ್ಯಾಗ್‌ಗಳಲ್ಲಿ ಬಳಕೆದಾರರು ಸತ್ನಾ ಮತ್ತು ರೇವಾ ಎಂದು ನಮೂದಿಸಿದ್ದಾರೆ.

ಅಂತರ್ಜಾಲದಲ್ಲಿ ವೈರಲ್ ಆಗಿರುವ ವಿಡಿಯೋವನ್ನು ಈ ವರೆಗೆ 4 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ವಿಡಿಯೋ ನೋಡಿದ ಕೆಲವರು ತಮ್ಮ ಪ್ರತಿಕ್ರಿಯೆಯನ್ನೂ ನೀಡಿದ್ದಾರೆ.


ವಿಡಿಯೋ ರೆಕಾರ್ಡ್ ಮಾಡುವ ವ್ಯಕ್ತಿಯನ್ನು ಹಲವರು ಪ್ರಶ್ನಿಸುತ್ತಿದ್ದು, ಯಾಕೆ ಸಹಾಯ ಮಾಡಲಿಲ್ಲ, ಕಳ್ಳನನ್ನು ಏಕೆ ಹಿಡಿಯಲಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: Virat Kohli: ಸಿಕ್ಸ್​ ಪ್ಯಾಕ್​ ತೋರಿಸಿ ಡ್ಯಾನ್ಸ್​ ಮಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

ಒಬ್ಬ ಬಳಕೆದಾರರು, ಹೊಸ ಭಯ ಅನ್ಲಾಕ್ ಆಗಿದೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಕ್ಯಾಮರಾಮನ್‌ನಿಗೂ ಕಳ್ಳತನದಲ್ಲಿ ಕೈ ಇದೆ ಎಂದು ತೋರುತ್ತಿದೆ ಎಂದಿದ್ದಾರೆ. ಮೂರನೆಯವ, ಬ್ರೂ ನನಗೆ ಅದೇ ಅನುಭವವಾಗಿತ್ತು ಮತ್ತು ಇದು ನನಗೆ ತುಂಬಾ ಆಘಾತಕಾರಿ ಕ್ಷಣವಾಗಿತ್ತು. ಆದರೆ ಕೊನೆಯಲ್ಲಿ ನಾನು ಪ್ಲಾಟ್‌ಫಾರ್ಮ್‌ನಲ್ಲಿ ಓಡುತ್ತಿರುವ ರೈಲಿನಿಂದ ಜಿಗಿದ ಕಾರಣ ನನ್ನ ಫೋನ್ ಅನ್ನು ಹಿಂತಿರುಗಿಸಿದ ಎಂದು ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Lok Sabha Election 2024 : ಸೂರ್ಯನ ತೇಜಸ್ಸು ಕಡಿಮೆ ಮಾಡಲು ಸೌಮ್ಯ ಹೋರಾಟ ಸಾಲುವುದೇ?

Lok Sabha Election 2024 :2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ತೇಜಸ್ವಿ ಸೂರ್ಯ ಕಾಂಗ್ರೆಸ್​​ನ ಬಿ.ಕೆ.ಹರಿಪ್ರಸಾದ್ ಅವರನ್ನು 3,31,192 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ 2019 ರಲ್ಲಿ ಬಿಜೆಪಿ 62.14% ಮತಗಳನ್ನು ಪಡೆದಿತ್ತು. ಈ ಕ್ಷೇತ್ರದಲ್ಲಿ ಮತ್ತೆ ಆಯ್ಕೆ ಬಯಸಿರುವ ತೇಜಸ್ವಿ ಸೂರ್ಯ ಅವರಿಗೆ ಮತ್ತೆ ಇದು ಸುಲಭ ತುತ್ತಾಗಲಿದೆ ಎಂದು ಅಂದಾಜಿಸಲಾಗಿದೆ.

VISTARANEWS.COM


on

lok Sabha Election
Koo

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರ ಕರ್ನಾಟಕದಲ್ಲಿ ಹೆಚ್ಚು ಗಮನ ಸೆಳೆಯುವ ಕ್ಷೇತ್ರ. ಬಿಬಿಎಂಪಿ (ಕೇಂದ್ರ), ಬಿಬಿಎಂಪಿ (ದಕ್ಷಿಣ) ಜಿಲ್ಲೆಗಳು ಈ ಕ್ಷೇತ್ರದ ವ್ಯಾಪ್ತಿಯಲ್ಲಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಚುನಾವಣೆಯ 2 ನೇ ಹಂತದಲ್ಲಿ ಏಪ್ರಿಲ್ 26, 2024 ರಂದು ಮತದಾನ ನಡೆದಿದೆ. ಹಾಲಿ ಸಂಸದರಾಗಿರುವ ತೇಜಸ್ವಿ ಸೂರ್ಯ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ ಈ ಕ್ಷೇತ್ರದಲ್ಲಿ ಪ್ರಮುಖವಾಗಿ ಕಣದಲ್ಲಿದ್ದಾರೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರವು ಗೋವಿಂದರಾಜನಗರ, ವಿಜಯನಗರ, ಚಿಕ್ಕಪೇಟೆ, ಬಸವನಗುಡಿ, ಪದ್ಮನಾಭನಗರ, ಬಿಟಿಎಂ ಲೇಔಟ್, ಜಯನಗರ ಮತ್ತು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರವು ಕರ್ನಾಟಕದಲ್ಲಿ ಬಿಜೆಪಿಯ ಭದ್ರಕೋಟೆಯಾಗಿದೆ. ಈ ಸ್ಥಾನದಿಂದ ಗೆದ್ದ ಕಾಂಗ್ರೆಸ್ ಪಕ್ಷದ ಇಬ್ಬರು ನಾಯಕರು ರಾಜ್ಯದ ಮುಖ್ಯಮಂತ್ರಿಗಳಾಗಿಯೂ ಸೇವೆ ಸಲ್ಲಿಸಿದ್ದಾರೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 2019 ರವರೆಗೆ ಒಟ್ಟು 17 ಚುನಾವಣೆಗಳು ನಡೆದಿದ್ದು, ಅದರಲ್ಲಿ ಕಾಂಗ್ರೆಸ್ ಪಕ್ಷವು ಆರು ಬಾರಿ ಗೆದ್ದಿದೆ. ಜನತಾ ಪಕ್ಷವು ಮೂರು ಬಾರಿ ಜಯಗಳಿಸಿತು. 1991ರಿಂದ ಸತತ 8 ಬಾರಿ ಬಿಜೆಪಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಈ ಕ್ಷೇತ್ರವು ಬಿಜೆಪಿಯ ಅನಂತ್ ಕುಮಾರ್ ಅವರ ಭದ್ರಕೋಟೆಯಾಗಿತ್ತು. ಅವರು ಸತತ ಆರು ಬಾರಿ ಗೆದ್ದಿದ್ದಾರೆ. ಈ ಕ್ಷೇತ್ರವು ಆರಂಭದಲ್ಲಿ ಮೈಸೂರು ರಾಜ್ಯದ ಭಾಗವಾಗಿತ್ತು ಆದರೆ 1977 ರ ನಂತರ ಕರ್ನಾಟಕದ ಭಾಗವಾಯಿತು. ಈ ಕ್ಷೇತ್ರವನ್ನು ಮೊದಲು ಬೆಂಗಳೂರು ಎಂದು ಕರೆಯಲಾಗುತ್ತಿತ್ತು. ಕರ್ನಾಟಕದ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಎಚ್ ಹನುಮಂತಪ್ಪ ಮತ್ತು ಆರ್ ಗುಂಡೂರಾವ್ ಈ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನಲ್ಲಿ ಗೆದ್ದಿದ್ದಾರೆ.

2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಯುವ ನಾಯಕ ತೇಜಸ್ವಿ ಸೂರ್ಯ ಅವರನ್ನು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ತೇಜಸ್ವಿ ಸೂರ್ಯ ಅವರು ಕಾಂಗ್ರೆಸ್ ನ ಬಿ.ಕೆ.ಹರಿಪ್ರಸಾದ್ ಅವರನ್ನು 3,31,192 ಮತಗಳ ಅಂತರದಿಂದ ಸೋಲಿಸಿದ್ದಾರೆ. ಸೂರ್ಯ 7,39,229 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನ ಬಿ.ಕೆ.ಹರಿಪ್ರಸಾದ್ 4,08,037 ಮತಗಳನ್ನು ಪಡೆದಿದ್ದರು.

2014 ರ ಸಾರ್ವತ್ರಿಕ ಚುನಾವಣೆಯಲ್ಲಿ, ಬಿಜೆಪಿ ಕಾಂಗ್ರೆಸ್ ಅನ್ನು ಗಮನಾರ್ಹ ಸಂಖ್ಯೆಯ ಮತಗಳಿಂದ ಸೋಲಿಸಿತು. 2014ರಲ್ಲಿ ಶೇ.55.75ರಷ್ಟು ಮತದಾನವಾಗಿತ್ತು. ಬಿಜೆಪಿಯ ಅನಂತ್ ಕುಮಾರ್ 6,33,816 ಮತಗಳನ್ನು ಪಡೆದಿದ್ದರು. ನಂದನ್ ನಿಲೇಕಣಿ 4,05,241 ಮತಗಳನ್ನು ಪಡೆದಿದ್ದರು. ಜೆಡಿಎಸ್ ನ ರುತ್ ಮನೋರೋಮಾ 25,677 ಮತಗಳನ್ನು ಪಡೆದಿದ್ದರು.

ಇದನ್ನೂ ಓದಿ: Lok Sabha Election: ಕಲಬುರಗಿ ಲೋಕಸಭೆ ಕ್ಷೇತ್ರ: ಖರ್ಗೆ ಅಳಿಯ Vs ಜಾಧವ್;‌ ಯಾರಿಗೆ ಗೆಲುವಿನ ಸಿಹಿ?

ಎಷ್ಟು ಮತದಾರರು ಇದ್ದಾರೆ

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಒಟ್ಟು 23. 17 ಲಕ್ಷ ಮತದಾರರಿದ್ದು, ಈ ಬಾರಿ ಶೇಕಡಾ 53.17 ಮತದಾನವಾಗಿದೆ. ಹಿಂದಿನ ಬಾರಿಗೆ ಹೋಲಿಕೆ ಮಾಡಿದರೆ ಈ ಬಾರಿ ಕಡಿಮೆ ಪ್ರಮಾಣದ ಮತದಾನವಾಗಿದೆ. ಆದಾಗ್ಯೂ ಯುವ ಹೆಚ್ಚು ಸ್ಥಳೀಯವಾಗಿ ಹೆಚ್ಚು ಪರಿಚಿತವಾಗಿರುವ ತೇಜಸ್ವಿ ಸೂರ್ಯ ಗೆಲ್ಲಬಹುದು ಎಂದು ರಾಜಕೀಯ ವಿಶ್ಲೇಷಕರು ಅಂದಾಜಿಸಿದ್ದಾರೆ.

ವ್ಯಾಪ್ತಿ

ಬೆಂಗಳೂರು ದಕ್ಷಿಣ ಲೋಕ ಸಭಾ ಕ್ಷೇತ್ರವು ಬೆಂಗಳೂರಿನ ಹೃದಯ ಭಾಗದ ಹಲವಾರು ಬಿಬಿಎಂಪಿ ವಾರ್ಡ್​ಗಳು ಮತ್ತು ಬೆಂಗಳೂರು ದಕ್ಷಿಣ ತಾಲೂಕಿನ ಬೊಮ್ಮನಹಳ್ಳಿ, ಆನೇಕಲ್ ತಾಲೂಕಿನ ಕೆಲವು ಭಾಗಗಳನ್ನು ಹೊಂದಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಇತರ ನಾಲ್ಕು ಲೋಕಸಭಾ ಕ್ಷೇತ್ರಗಳೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿದೆ. ಬೆಂಗಳೂರು ದಕ್ಷಿಣಕ್ಕೆ ಹೊಂದಿಕೊಂಡಿರುವ ಇತರ ಲೋಕಸಭಾ ಕ್ಷೇತ್ರಗಳು ಈ ರೀತಿ ಇವೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ.

Continue Reading

ದೇಶ

Jairam Ramesh: 150 ಡಿಸಿಗಳಿಗೆ ಅಮಿತ್‌ ಶಾ ಕರೆ; ಜೈರಾಮ್‌ ರಮೇಶ್‌ ಆರೋಪಕ್ಕೆ ಇಸಿ ಪ್ರತಿಕ್ರಿಯೆ- ಏನಿದು ವಿವಾದ?

Jairam Ramesh:ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದ ಜೈರಾಮ್‌ ಶಂಕರ್‌, ಚುನಾವಣೆ ಫಲಿತಾಂಶಕ್ಕೂ ಮುನ್ನ ಅಮಿತ್‌ ಶಾ, ಜಿಲ್ಲಾ ಮ್ಯಾಜಿಸ್ಟ್ರೇಟ್‌ ಅಥವಾ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ್ದಾರೆ. ಇದುವರೆಗೆ ಅವರು 150 ಡಿಸಿಗಳ ಜೊತೆ ಮಾತನಾಡಿ, ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಲು ಯತ್ನಿಸಿದ್ದಾರೆ. ಇದರಿಂದ ಗೆಲುವಿನ ಬಗ್ಗೆ ಬಿಜೆಪಿ ಎಷ್ಟು ಹತಾಶೆಯಾಗಿದೆ ಎಂಬುದು ಬಯಲಾಗಿದೆ. ಅಧಿಕಾರಿಗಳ ಮೇಲೆ ಮೋದಿ ಮತ್ತು ಶಾ ಬಣ ಬಹಳ ಒತ್ತಡ ಹೇರುತ್ತಿದೆ. ಮತ ಎಣಿಕೆ ಪ್ರಕ್ರಿಯೆಯಲ್ಲಿ ಭಾರೀ ಮಧ್ಯಪ್ರವೇಶ ನಡೆಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದರು.

VISTARANEWS.COM


on

Jairam Ramesh
Koo

ನವದೆಹಲಿ: ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ(Lok Sabha Election 2024) ಎಲ್ಲರ ಚಿತ್ತ ಫಲಿತಾಂಶದ ಇದೆ. ಇದರ ನಡುವೆ ರಾಜಕೀಯ ನಾಯಕರ ವಿವಾದಾತ್ಮಕ ಹೇಳಿಕೆ, ಆರೋಪ-ಪ್ರತ್ಯಾರೋಪಗಳಂತೂ ನಿಲ್ಲುತ್ತಲೇ ಇಲ್ಲ. ಇದೀಗ ಚುನಾವಣಾ ಫಲಿತಾಂಶ(Election Result)ದ ಮೇಲೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ(Amith Shah) ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುತ್ತಾರೆ ಎಂದು ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್‌ ಮುಖಂಡ ಜೈರಾಮ್‌ ರಮೇಶ್‌(Jairam Ramesh) ಪಚೀತಿಗೆ ಬಿದ್ದಿದ್ದಾರೆ. ಈ ಬಗ್ಗೆ ದಾಖಲೆ ಒದಗಿಸುವಂತೆ ಚುನಾವಣಾ ಆಯೋಗ(EC) ಕೇಳಿದೆ.

ಜೈರಾಮ್‌ ರಮೇಶ್‌ ಆರೋಪ?

ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದ ಜೈರಾಮ್‌ ಶಂಕರ್‌, ಚುನಾವಣೆ ಫಲಿತಾಂಶಕ್ಕೂ ಮುನ್ನ ಅಮಿತ್‌ ಶಾ, ಜಿಲ್ಲಾ ಮ್ಯಾಜಿಸ್ಟ್ರೇಟ್‌ ಅಥವಾ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ್ದಾರೆ. ಇದುವರೆಗೆ ಅವರು 150 ಡಿಸಿಗಳ ಜೊತೆ ಮಾತನಾಡಿ, ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಲು ಯತ್ನಿಸಿದ್ದಾರೆ. ಇದರಿಂದ ಗೆಲುವಿನ ಬಗ್ಗೆ ಬಿಜೆಪಿ ಎಷ್ಟು ಹತಾಶೆಯಾಗಿದೆ ಎಂಬುದು ಬಯಲಾಗಿದೆ. ಅಧಿಕಾರಿಗಳ ಮೇಲೆ ಮೋದಿ ಮತ್ತು ಶಾ ಬಣ ಬಹಳ ಒತ್ತಡ ಹೇರುತ್ತಿದೆ. ಮತ ಎಣಿಕೆ ಪ್ರಕ್ರಿಯೆಯಲ್ಲಿ ಭಾರೀ ಮಧ್ಯಪ್ರವೇಶ ನಡೆಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದರು.

EC ಪ್ರತಿಕ್ರಿಯೆ ಏನು?

ಜೈರಾಮ್‌ ರಮೇಶ್‌ ಹೇಳಿಕೆ ಎಲ್ಲೆಡೆ ವೈರಲ್‌ ಆಗುತ್ತಿದ್ದಂತೆ ಈ ವಿಚಾರವನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಅಲ್ಲದೇ ಈ ಬಗ್ಗೆ ದಾಖಲೆ ಸಮೇತ ಸಂಪೂರ್ಣ ಮಾಹಿತಿ ನೀಡುವಂತೆ ಸೂಚನೆ ನೀಡಿದೆ. ಇದುವರೆಗೆ ಯಾವುದೇ ಒಬ್ಬ ಜಿಲ್ಲಾಧಿಕಾರಿಯಾಗಲಿ ಅಥವಾ ಜಿಲ್ಲಾ ಮ್ಯಜಿಸ್ಟ್ರೇಟ್‌ ಆಗಲಿ ತಮ್ಮ ಮೇಲೆ ಒತ್ತಡ ಬರುತ್ತಿರುವ ಬಗ್ಗೆ ಯಾವುದೇ ಆರೋಪ ಮಾಡಿಲ್ಲ. ಮತ ಎಣಿಕೆ ಎಂಬುದು ಪ್ರಜಾಪ್ರಭುತ್ವ ವ್ಯವಸ್ಥೆಯ ಪವಿತ್ರ ಕಾರ್ಯ. ಜೈರಾಮ್‌ ರಮೇಶ್‌ರಂತಹ ಹಿರಿಯ ನಾಯಕರು ನೀಡುವಂ ಇಂತಹದ ಹೇಳಿಕೆಗಳಿಂದ ಮತ ಎಣಿಕೆ ಬಗ್ಗೆ ಜನರಲ್ಲಿ ಅನುಮಾನಗಳು ಮೂಡುತ್ತವೆ. ಹೀಗಾಗಿ ತಮ್ಮ ಆರೋಪಗಳಿಗೆ ಪುಷ್ಠಿ ನೀಡುವಂತಹ ದಾಖಲೆಗಳನ್ನು ತಕ್ಷಣ ಒದಗಿಸಿ ಎಂದು ಚುನಾವಣಾ ಆಯೋಗ ಆದೇಶಿಸಿದೆ.

ಇದನ್ನೋ ಓದಿ: CET Ranking : 3 ಸಾವಿರ ಅಭ್ಯರ್ಥಿಗಳಿಗೆ ಸಿಕ್ಕಿಲ್ಲ ಸಿಇಟಿ ರ‍್ಯಾಂಕ್‌! ಮುಂದೇನು ಮಾಡ್ಬೇಕು?

Continue Reading

ದೇಶ

Assembly Election Results 2024: ಸಿಕ್ಕಿಂ ಮತ್ತೆ ಎಸ್‌ಕೆಎಂ ತೆಕ್ಕೆಗೆ; 32 ಸ್ಥಾನಗಳ ಪೈಕಿ 31 ಕಡೆ ಗೆಲುವು

Assembly Election Results 2024: ಕುತೂಹಲ ಮೂಡುಸಿದ್ದ ಸಿಕ್ಕಿಂ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (SKM) 32 ಕ್ಷೇತ್ರಗಳ ಪೈಕಿ 31 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಆ ಮೂಲಕ ಎಸ್‌ಕೆಎಂ ಈ ಬಾರಿ ಪ್ರಚಂಡ ಗೆಲುವು ದಾಖಲಿಸಿದೆ. ಇನ್ನು ಒಂದು ಕಡೆ ಸಿಕ್ಕಿಂ ಡೆಮಾಕ್ರಾಟಿಕ್‌ ಫ್ರಂಟ್‌ (SDF) ಗೆಲುವು ಪಡೆದಿದೆ.

VISTARANEWS.COM


on

Assembly Election Results 2024
Koo

ನವದೆಹಲಿ: ಲೋಕಸಭೆ ಚುನಾವಣೆ(Lok Sabha Election 2024) ಜತೆಗೆ ದೇಶದ ಗಮನ ಸೆಳೆದಿದ್ದ ಅರುಣಾಚಲ ಪ್ರದೇಶ (Aruchal Pradesh) ಮತ್ತು ಸಿಕ್ಕಿಂ(Sikkim) ವಿಧಾನಸಭೆ ಚುನಾವಣೆ (Assembly Election Results 2024) ಫಲಿತಾಂಶ ಹೊರ ಬಿದ್ದಿದೆ. ಅರುಣಾಚಲ ಪ್ರದೇಶದಲ್ಲಿ 60 ಕ್ಷೇತ್ರಗಳ ಪೈಕಿ ಬಿಜೆಪಿ 42 ಸ್ಥಾನಗಳನ್ನು ಗೆದ್ದುಕೊಂಡಿದೆ. ಇತ್ತ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (SKM) 32 ಕ್ಷೇತ್ರಗಳ ಪೈಕಿ 31 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಆ ಮೂಲಕ ಎಸ್‌ಕೆಎಂ ಈ ಬಾರಿ ಪ್ರಚಂಡ ಗೆಲುವು ದಾಖಲಿಸಿದೆ. ಒಂದು ಕಡೆ ಸಿಕ್ಕಿಂ ಡೆಮಾಕ್ರಾಟಿಕ್‌ ಫ್ರಂಟ್‌ (SDF) ಗೆಲುವು ಪಡೆದಿದೆ. 2019ರ ಚುನಾವಣೆಯಲ್ಲಿ ಎಸ್‌ಕೆಎಂಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಬಿಜೆಪಿ ರಾಜ್ಯದ ಯಾವುದೇ ಸ್ಥಾನಗಳಲ್ಲಿ ಗೆಲುವು ಸಾಧಿಸಿಲ್ಲ.

ರಾಜ್ಯದಲ್ಲಿ ಅಧಿಕಾರ ಹಿಡಿಯಲು ಅಗತ್ಯವಾದ ಮ್ಯಾಜಿಕ್‌ ನಂಬರ್‌ 16. ಇನ್ನು ಎಸ್‌ಕೆಎಂನ ನಾಯಕ, ಹಾಲಿ ಮುಖ್ಯಮಂತ್ರಿ ಪ್ರೇಮ್‌ ಸಿಂಗ್‌ ತಮಾಂಗ್‌ ಪ್ರಚಂಡ ಗೆಲುವು ದಾಖಲಿಸಿದ್ದಾರೆ. ಅವರು ರೆನಾಕ್ ವಿಧಾನಸಭಾ ಕ್ಷೇತ್ರದಿಂದ ಸೋಮ್ ನಾಥ್ ಪೌಡ್ಯಾಲ್ ಅವರನ್ನು 7,000ಕ್ಕೂ ಹೆಚ್ಚು ಮತಗಳಿಂದ ಸೋಲಿಸಿದ್ದಾರೆ.

ರಾಜ್ಯಾದ್ಯಂತ ಎಸ್‌ಕೆಎಂ ಕಾರ್ಯಕರ್ತರ ಸಂಭ್ರಮಾಚರಣೆ ಆರಂಭವಾಗಿದೆ. ಪ್ರಚಂಡ ಗೆಲುವಿಗಾಗಿ ಪ್ರೇಮ್‌ ಸಿಂಗ್‌ ತಮಾಂಗ್‌ ಅವರು ಕಾರ್ಯಕರ್ತರನ್ನು ಅಭಿನಂದಿಸಿದ್ದಾರೆ. ʼʼಜನರ ಪ್ರೀತಿ ಮತ್ತು ವಿಶ್ವಾಸದಿಂದಾಗಿ ನಮ್ಮ ಸರ್ಕಾರ ಐದು ವರ್ಷಗಳಲ್ಲಿ ಯಶಸ್ವಿಯಾಗಿ ಆಡಳಿತ ನಡೆಸಿದೆ. ಈ ಗೆಲುವಿಗಾಗಿ ಪಕ್ಷದ ಕಾರ್ಯಕರ್ತರು ತುಂಬಾ ಶ್ರಮಿಸಿದ್ದಾರೆ. ಈಗ ಸಿಕ್ಕಿಂನ ಜನರಿಗೆ ನಮ್ಮ ಸೇವೆಯನ್ನು ನೀಡಲು ಮುಂದಿನ ಐದು ವರ್ಷಗಳು ಸಿಕ್ಕಿವೆ” ಎಂದು ಅವರು ಗ್ಯಾಂಗ್ಟಾಕ್‌ನ ಪಾಲ್ಜೋರ್ ಕ್ರೀಡಾಂಗಣದಲ್ಲಿ ನಡೆದ ಸಭೆಯಲ್ಲಿ ಹೇಳಿದರು.

2019ರಲ್ಲಿ ಎಸ್‌ಕೆಎಂ 17 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆ ಮೂಲಕ ಸತತ 25 ವರ್ಷಗಳ ಕಾಲ ರಾಜ್ಯವನ್ನು ಆಳಿದ್ದ ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ ಪಕ್ಷದಿಂದ ಅಧಿಕಾರ ಪಡೆದುಕೊಂಡಿತ್ತು. ಪ್ರೇಮ್ ಸಿಂಗ್ ತಮಾಂಗ್ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯುವ ನಿರೀಕ್ಷೆ ಇದೆ.

ಅರುಣಾಚಲ ಪ್ರದೇಶದಲ್ಲಿ ಬಿಜೆಪಿಗೆ ಪ್ರಚಂಡ ಬಹುಮತ

ಚುನಾವಣಾ ಆಯೋಗದ ಪ್ರಕಾರ ಅರುಣಾಚಲ ಪ್ರದೇಶದಲ್ಲಿ 60 ಕ್ಷೇತ್ರಗಳ ಪೈಕಿ 42 ಸ್ಥಾನಗಳನ್ನು ಬಿಜೆಪಿ ಪಡೆದುಕೊಂಡಿದೆ. 10 ಕ್ಷೇತ್ರಗಳಲ್ಲಿ ಬಿಜೆಪಿ ಅವಿರೋಧವಾಗಿ ಆಯ್ಕೆಯಾಗಿದೆ. ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಇಪಿ) ಎರಡು ಸ್ಥಾನಗಳನ್ನು ಗೆದ್ದು, ಒಂದರಲ್ಲಿ ಮುನ್ನಡೆ ಸಾಧಿಸಿದೆ. ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ (ಪಿಪಿಎ) ಎರಡು ಸ್ಥಾನಗಳನ್ನು ಗೆದ್ದಿದ್ದರೆ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಒಂದನ್ನು ಪಡೆದುಕೊಂಡು ಎರಡು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇಸಿಐ ಅಂಕಿಅಂಶಗಳ ಪ್ರಕಾರ ಸ್ವತಂತ್ರ ಅಭ್ಯರ್ಥಿಗಳು ಮೂರು ಸ್ಥಾನಗಳನ್ನು ಗೆದ್ದಿದ್ದಾರೆ.

ಮುಕ್ತೋ ಕ್ಷೇತ್ರದಲ್ಲಿ ಪೇಮಾ ಖಂಡು, ಬೊಮ್ಡಿಲದಲ್ಲಿ ಡೊಂಗ್ರು ಸಿಯೊಂಗ್ಜು, ಚೌಕಂನಲ್ಲಿ ಚೌನಾ ಮೇ ಹಯುಲಿಯಾಂಗ್‌ನಲ್ಲಿ ದಸಾಂಗ್ಲು ಪುಲ್, ಇಟಾನಗರದಲ್ಲಿ ಟೆಚಿ ಕಾಸೊ, ರೋಯಿಂಗ್‌ದಲ್ಲಿ ಮುಚ್ಚು ಮಿಥಿ, ಸಾಗಲೀ ಕ್ಷೇತ್ರದಲ್ಲಿ ರತು ಟೆಚಿ, ತಾಲಿ ಕ್ಷೇತ್ರದಲ್ಲಿ ಜಿಕ್ಕೆ ಟಾಕೊ, ತಾಲಿಹಾದಲ್ಲಿ ನ್ಯಾತೋ ದುಕಮ್ ಜಿರೋ, ಹಾಪೋಲಿ ಕ್ಷೇತ್ರದಲ್ಲಿ ಹಗೆ ಅಪ್ಪಾ ಅರುಣಾಚಲ ಪ್ರದೇಶದಲ್ಲಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ಇದನ್ನೂ ಓದಿ: West Bengal: ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ; ಗುಂಡಿಕ್ಕಿ ಕೊಂದು, ರುಂಡ ಕಡಿದು ಒಯ್ದ ದುಷ್ಕರ್ಮಿಗಳು

Continue Reading
Advertisement
Denim Tube Tops Fashion
ಫ್ಯಾಷನ್1 min ago

Denim Tube Tops Fashion: ಡೆನಿಮ್‌ನಲ್ಲೂ ಬಂತು ಟ್ಯೂಬ್‌ ಟಾಪ್ ಫ್ಯಾಷನ್‌!

Viral Video
ವೈರಲ್ ನ್ಯೂಸ್4 mins ago

Viral Video: ರೈಲು ಚಲಿಸುತ್ತಿರುವಾಗಲೇ ಹೇಗೆ ಮೊಬೈಲ್‌ ಎಗರಿಸುತ್ತಾರೆ ನೋಡಿ!

Kotee Movie in Davanagere Release event
ಸಿನಿಮಾ9 mins ago

Dolly Dhananjay: ದಾವಣಗೆರೆಯಲ್ಲಿ ‘ಕೋಟಿ’ ಅಬ್ಬರ; ಜೂನ್ 14ರಂದು ಸಿನಿಮಾ ತೆರೆಗೆ!

Paris Olympics 2024
ಕ್ರೀಡೆ9 mins ago

Paris Olympics 2024: ಕೊನೆಗೂ ಪ್ಯಾರಿಸ್​ ಒಲಿಂಪಿಕ್ಸ್​ ಟಿಕೆಟ್​ ಪಡೆದ ಬಾಕ್ಸರ್​ ಅಮಿತ್‌ ಪಂಘಲ್‌

Bidar Lok Sabha Constituency
ಬೀದರ್‌16 mins ago

Bidar Lok Sabha Constituency: ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಹಳೇ ಬೇರು Vs ಹೊಸ ಚಿಗುರು; ಖೂಬಾ, ಖಂಡ್ರೆ ಕದನದಲ್ಲಿ ಜಯ ಯಾರಿಗೆ?

ಕರ್ನಾಟಕ22 mins ago

MLC Election: ಪರಿಷತ್ ಚುನಾವಣೆ; ಯತೀಂದ್ರ ಸೇರಿ 8 ಅಭ್ಯರ್ಥಿಗಳ ಪಟ್ಟಿ ಘೋಷಿಸಿದ ಕಾಂಗ್ರೆಸ್‌

lok Sabha Election
ಪ್ರಮುಖ ಸುದ್ದಿ31 mins ago

Lok Sabha Election 2024 : ಸೂರ್ಯನ ತೇಜಸ್ಸು ಕಡಿಮೆ ಮಾಡಲು ಸೌಮ್ಯ ಹೋರಾಟ ಸಾಲುವುದೇ?

Kannada Upcoming Movies KD Martin Bheema Movies
ಸ್ಯಾಂಡಲ್ ವುಡ್49 mins ago

Kannada Upcoming Movies: ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಲು ಬರುತ್ತಿವೆ ಕನ್ನಡ ಸಿನಿಮಾಗಳು!

KMF T20 World Cup
ಕ್ರೀಡೆ52 mins ago

KMF T20 World Cup: ಟಿ20 ವಿಶ್ವಕಪ್​ನಲ್ಲಿ ‘ನಂದಿನಿ’ ಲಾಂಛನ; ಹರ್ಷ ವ್ಯಕ್ತಪಡಿಸಿದ ಕೆಎಂಎಫ್‌

Jairam Ramesh
ದೇಶ1 hour ago

Jairam Ramesh: 150 ಡಿಸಿಗಳಿಗೆ ಅಮಿತ್‌ ಶಾ ಕರೆ; ಜೈರಾಮ್‌ ರಮೇಶ್‌ ಆರೋಪಕ್ಕೆ ಇಸಿ ಪ್ರತಿಕ್ರಿಯೆ- ಏನಿದು ವಿವಾದ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ6 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 day ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌