ದೇಶ
News Anchor : ಭಾರತದ ಮೊಟ್ಟ ಮೊದಲ ಇಂಗ್ಲಿಷ್ ನ್ಯೂಸ್ ಮಹಿಳಾ ಆ್ಯಂಕರ್ ಇನ್ನಿಲ್ಲ
ಗೀತಾಂಜಲಿ ಅಯ್ಯರ್ 1971 ರಲ್ಲಿ ದೂರದರ್ಶನಕ್ಕೆ ಸೇರಿದ್ದರು. ತಮ್ಮ ಸಾಧನೆಗಾಗಿ ನಾಲ್ಕು ಬಾರಿ ಅತ್ಯುತ್ತಮ ನಿರೂಪಕಿ ಪ್ರಶಸ್ತಿಯನ್ನು ಪಡೆದರು.
ನವ ದೆಹಲಿ: ಭಾರತದ ಮೊಟ್ಟ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕಿ (News Anchor) ಗೀತಾಂಜಲಿ ಅಯ್ಯರ್ ಬುಧವಾರ ನಿಧನ ಹೊಂದಿದ್ದಾರೆ. ದೂರದರ್ಶನದಲ್ಲಿ ವಾರ್ತೆಗಳನ್ನು ಓದುವ ಮೂಲಕ ದೇಶದ ಮನೆಮನೆಗಳಿಗೆ ಪರಿಚಿತರಾಗಿದ್ದ ಅವರು ನಿಧನ ಹೊಂದಿರುವ ವಾರ್ತೆಯನ್ನು ಅವರ ಸಹೋದ್ಯೋಗಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಂಡಿದ್ದಾರೆ. ದೂರದರ್ಶನದಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ನಂತರದಲ್ಲಿ ಸ್ವಂತ ಉದ್ಯಮ ನಡೆಸುತ್ತಿದ್ದಾರೆ. ಗೀತಾಂಜಲಿ ಅವರು 1971ರಲ್ಲಿ ದೂರದರ್ಶನಕ್ಕೆ ಸೇರಿದ್ದರು. ನಿರೂಪಕಿಯಾಗಿ ಮಾಡಿದ ಅಪ್ರತಿಮ ಸಾಧನೆಗಾಗಿ ಅವರು ನಾಲ್ಕು ಬಾರಿ ಅತ್ಯುತ್ತಮ ನಿರೂಪಕಿ ಪ್ರಶಸ್ತಿಯನ್ನು ಪಡೆದಿದ್ದಾರೆ.
ಕೊಲ್ಕತ್ತಾದ ಲೊರೆಟೊ ಕಾಲೇಜಿನಿಂದ ಪದವಿ ಪಡೆದಿದ್ದ ಗೀತಾಂಜಲಿ ಅಯ್ಯರ್, ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾದಿಂದ ಡಿಪ್ಲೊಮಾ ಪಡೆದಿದ್ದಾರೆ. 1989ರಲ್ಲಿ ಅತ್ಯುತ್ತಮ ಮಹಿಳೆಯರಿಗಾಗಿ ನೀಡುವ ಇಂದಿರಾ ಗಾಂಧಿ ಪ್ರಿಯದರ್ಶಿನಿ ಪ್ರಶಸ್ತಿಯನ್ನು ಪಡೆದಿದ್ದಾರೆ.
When newsreaders had class. What a wonderful newsreader. Rest in Peace Gitanjali aiyar https://t.co/JJVjHy0AqW
— Tadiparthi Francis⚓ (@GentlemanOfMCC) June 7, 2023
ಆಲ್ ಇಂಡಿಯಾ ರೇಡಿಯೋದಲ್ಲಿ ಶುಕ್ರವಾರ ರಾತ್ರಿ ಇಂಗ್ಲಿಷ್ ಹಾಡಿನ ಕೋರಿಕೆಯ ಜನಪ್ರಿಯ ಕಾರ್ಯಕ್ರಮ ಎ ಡೇಟ್ ವಿತ್ ಯು ಕಾರ್ಯಕ್ರವನ್ನು ಅವರು ಪ್ರಸ್ತುತಪಡಿಸುತ್ತಿದ್ದರು. ಸುದ್ದಿ ಉದ್ಯಮದಲ್ಲಿ ದಶಕಗಳ ವೃತ್ತಿಜೀವನವನ್ನು ಹೊಂದಿದ್ದ ನಂತರ ಅವರು ಕಾರ್ಪೊರೇಟ್ ಸಂವಹನ, ಸರ್ಕಾರಿ ಸಂಪರ್ಕ ಮತ್ತು ಮಾರ್ಕೆಟಿಂಗ್ ಕ್ಷೇತ್ರಕ್ಕೆ ಕಾಲಿಟ್ಟಿದ್ದರು. ಅವರು ಭಾರತದ ವರ್ಲ್ಡ್ ವೈಡ್ ಫಂಡ್ ಸಂಸ್ಥೆಯ ಪ್ರಮುಖ ದಾನಿಗಳಲ್ಲಿ ಒಬ್ಬರಾಗಿದ್ದರು.
ಗಣ್ಯರ ಸಂತಾಪಗಳು
We fondly remember the days when Gitanjali Aiyar ji graced our TV screens, leaving an indelible mark on our news-watching experiences.
— Netta D'Souza (@dnetta) June 7, 2023
Saddened by her untimely demise, my heartfelt condolences to her loved ones. May she find eternal peace. 🙏 pic.twitter.com/ayVeUu2yB6
ಗೀತಾಂಜಲಿ ಅಯ್ಯರ್ ಅವರು ನಮ್ಮ ಟಿವಿ ಪರದೆಗಳನ್ನು ಅಲಂಕರಿಸಿದ ದಿನಗಳನ್ನು ನಾವು ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇವೆ. ಅವರು ಸುದ್ದಿ ನೋಡುವ ಅನುಭವಗಳ ಮೇಲೆ ಅಳಿಸಲಾಗದ ಛಾಪು ಮೂಡಿಸಿದವರು. ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಪ್ರೀತಿಪಾತ್ರರಿಗೆ ನನ್ನ ಸಂತಾಪಗಳು. ಅವರಿಗೆ ಚಿರಶಾಂತಿ ಸಿಗಲಿ ಎಂದು ಕಾಂಗ್ರೆಸ್ ನಾಯಕಿ ನೆಟ್ಟಾ ಡಿಸೋಜಾ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: Narendra Modi: ಅಮೆರಿಕ ಸಂಸತ್ನಲ್ಲಿ ಮೋದಿ ಭಾಷಣದ ಮೋಡಿ; ಆಹ್ವಾನ ಸ್ವೀಕರಿಸಿದ ಪ್ರಧಾನಿ
ಖ್ಯಾತ ಪತ್ರಕರ್ತೆ ಶೀಲಾ ಭಟ್, ಭಾರತದ ಅತ್ಯುತ್ತಮ ಟಿವಿ ನ್ಯೂಸ್ ರೀಡರ್ಗಳಲ್ಲಿ ಒಬ್ಬರಾದ ಗೀತಾಂಜಲಿ ಅಯ್ಯರ್ ಅವರು ಇಂದು ನಿಧನರಾದರು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ.
ದೇಶ
Money Guide: ಸಣ್ಣ ಉಳಿತಾಯದಿಂದ ದೊಡ್ಡ ಮೊತ್ತ! ಯಾವ ಸ್ಕೀಮ್ನಲ್ಲಿ ಬಡ್ಡಿ ಜಾಸ್ತಿ?
Money Guide: ಪಿಪಿಎಫ್, ಎಫ್ಡಿ, ಪೋಸ್ಟ್ ಆಫೀಸ್ ಠೇವಣಿಗಳ ನಡುವೆ ಹೆಚ್ಚು ಲಾಭ ತಂದು ಕೊಡುವ ಉಳಿತಾಯ ಯೋಜನೆಗಳಾವವು?
ಹಣ ಉಳಿತಾಯವೊಂದು ಕಲೆಗಾರಿಕೆ. ಈ ಕಲೆಯನ್ನು ಬಲ್ಲವರು ಹಣಕಾಸಿನ ಬಿಕ್ಕಟ್ಟು (Finance Crisis) ಎದುರಿಸುವುದು ಕಡಿಮೆ. ದುಡಿಮೆಯ ಜತೆಗೆ ಉಳಿತಾಯವನ್ನು ಮಾಡಿದರೆ(Saving with Income), ಮುಂದೊಂದು ದಿನ ಆ ಹಣ ನಮ್ಮ ನೆರವಿ ಬಂದೇ ಬರುತ್ತದೆ. ಇದಕ್ಕಾಗಿಯೇ ಬ್ಯಾಂಕುಗಳು(Banks), ಅಂಚೆ ಕಚೇರಿಗಳು (Post Office Savings) ಸೇರಿದಂತೆ ಅನೇಕ ಸಂಸ್ಥೆಗಳ ಸಣ್ಣ ಉಳಿತಾಯ ಯೋಜನೆಗಳನ್ನು ಹೊಂದಿರುತ್ತವೆ. ನಮಗೆ ಈ ಉಳಿತಾಯಗಳ ಬಗ್ಗೆ ಮಾಹಿತಿ ಇದ್ದರೆ, ಚಿಕ್ಕ ಮೊತ್ತವಾದರೂ ಸರಿ ಉಳಿತಾಯಕ್ಕೆ ಮುಂದಾಗಬೇಕು. ಹನಿ ಹನಿ ಗೂಡಿದರೆ ಹಳ್ಳ ಎನ್ನುವ ಹಾಗೆ, ಚಿಕ್ಕ ಮೊತ್ತವೇ ಮುಂದೊಂದು ದಿನ ದೊಡ್ಡ ಮೊತ್ತವಾಗಿ ಪರಿವರ್ತನೆಯಾಗುತ್ತದೆ. ಹಾಗಾಗಿ, ಸಣ್ಣ ಉಳಿತಾಯ ಯೋಜನೆಗಳು (Small Savings Schemes) ಪ್ರಮುಖ ಪಾತ್ರವನ್ನು ನಿರ್ವಹಣೆ ಮಾಡುತ್ತವೆ(Money Guide).
ಎಷ್ಟು ಬಡ್ಡಿ ದರ ಇದೆ?
ಸದ್ಯ ದೇಶದಲ್ಲಿ ಬಡ್ಡಿದರಗಳು ಅತ್ಯಧಿಕ ದರದಲ್ಲಿ ಚಾಲ್ತಿಯಲ್ಲಿರುವಾಗಲೂ, ಸ್ಥಿರ-ಆದಾಯ ಸಾಧನಗಳು ಆಕರ್ಷಕ ಹೂಡಿಕೆಯ ಮಾರ್ಗಗಳಾಗಿವೆ. ಇವುಗಳಲ್ಲಿ ಬ್ಯಾಂಕ್ ಸ್ಥಿರ ಠೇವಣಿಗಳು, ಪಿಪಿಎಫ್, ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರಗಳು, ಅಂಚೆ ಕಚೇರಿ ಠೇವಣಿಗಳು ಮತ್ತು ಹಿರಿಯ ನಾಗರಿಕರ ಉಳಿತಾಯ ಯೋಜನೆಗಳು ಸೇರಿವೆ. ಬಡ್ಡಿದರಗಳ ವಿಷಯಕ್ಕೆ ಬಂದಾಗ, ಹಿರಿಯ ನಾಗರಿಕರ ಉಳಿತಾಯ ಯೋಜನೆಯು ವಾರ್ಷಿಕವಾಗಿ ಶೇ.8.2, ಬ್ಯಾಂಕ್ ಎಫ್ಡಿಗಳು ಶೇ.7.75ರವರೆಗೆ ಬಡ್ಡಿಯನ್ನು ನೀಡುತ್ತವೆ. ಆದರೆ, ಅಂಚೆಕಚೇರಿ ಉಳಿತಾಯ ಠೇವಣಿಗಳು 7.5 ಶೇಕಡಾ ವಾರ್ಷಿಕ ಬಡ್ಡಿ ದರವನ್ನು ನೀಡುತ್ತಿವೆ. ಇನ್ನೂ ಪಿಎಫ್ಎಫ್ನಲ್ಲಿ ವಾರ್ಷಿಕ ಶೇ.7.1ರಷ್ಟು ಬಡ್ಡಿ ಇರುತ್ತದೆ ಎಂಬುದನ್ನು ಮರೆಯಬಾರದು.
ಎಚ್ಡಿಎಫ್ಸಿ, ಎಸ್ಬಿಐನಂಥ ಬೃಹತ್ ಬ್ಯಾಂಕುಗಳು ತಮ್ಮ ಎಫ್ಡಿಗಳ ಮೇಲೆ ಆಕರ್ಷಕ ಬಡ್ಡಿಯನ್ನು ಒದಗಿಸುತ್ತಿವೆ. ಠೇವಣಿಯ ಅವಧಿ ಮತ್ತು ಮೊತ್ತದ ಅನುಸಾರ ಎಚ್ಡಿಎಫ್ಸಿ ಬ್ಯಾಂಕ್ ಶೇ.7.75ವರೆಗೂ ಬಡ್ಡಿ ನೀಡುತ್ತದೆ. ಎಸ್ಬಿಐ ಕೂಡ ಎಫ್ಡಿಗಳ ಮೇಲೆ ಶೇ.7.50ವರೆಗೂ ಲಾಭ ನೀಡಲಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಕೂಡ ಹಿಂದೆ ಬಿದ್ದಿಲ್ಲ ಅದು ವಾರ್ಷಿಕ 7.75 ಪ್ರತಿಶತ ಬಡ್ಡಿಯನ್ನು ನೀಡುವುದಾಗಿ ಹೇಳಿದೆ.
ಯಾವವು ಸಣ್ಣ ಉಳಿತಾಯ ಯೋಜನೆಗಳು?
ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ಬಗ್ಗೆ ಮಾತನಾಡುವುದಾದರೆ, ಶೇ.4ರಿಂದ ಶೇ.8.2ವರೆಗೂ ಇದೆ. ಅಂಚೆ ಕಚೇರಿ ಸೇವಿಂಗ್ ಠೇವಣಿಗೆಳ ಮೇಲೆ ಗ್ರಾಹಕರಿಗೆ ಶೇ.4 ರಿಂದ ಹಾಗೂ ಹಿರಿಯ ನಾಗರಿಕರ ಸೇವಿಂಗ್ಸ್ ಸ್ಕೀಮ್ ಮೇಲೆ ಶೇ.8ರವರೆಗೂ ಬಡ್ಡಿ ದೊರೆಯುತ್ತದೆ.
ಸಣ್ಣ ಉಳಿತಾಯ ಯೋಜನೆಗಳೆಂದರೇನು?
ಸಣ್ಣ ಉಳಿತಾಯ ಯೋಜನೆಗಳು ಸಾರ್ವಜನಿಕರನ್ನು ನಿಯಮಿತವಾಗಿ ಉಳಿಸಲು ಪ್ರೋತ್ಸಾಹಿಸಲು ಸರ್ಕಾರದಿಂದ ನಿರ್ವಹಿಸಲಾಗುವ ಉಳಿತಾಯ ಸಾಧನಗಳಾಗಿವೆ. ಸಣ್ಣ ಉಳಿತಾಯ ಯೋಜನೆಗಳು ಮೂರು ವಿಭಾಗಗಳನ್ನು ಹೊಂದಿವೆ – ಉಳಿತಾಯ ಠೇವಣಿಗಳು, ಸಾಮಾಜಿಕ ಭದ್ರತಾ ಯೋಜನೆಗಳು ಮತ್ತು ಮಾಸಿಕ ಆದಾಯ ಯೋಜನೆಗಳು.
ಈ ಸಣ್ಣ ಉಳಿತಾಯ ಯೋಜನೆಗಳು 1ರಿಂದ 3 ವರ್ಷದವರೆಗಿನ ಠೇವಣಿಗಳು ಮತ್ತು 5 ವರ್ಷದವರೆಗಿನ ಮರುಕಳಿಸುವ ಠೇವಣಿಗಳನ್ನು ಒಳಗೊಂಡಿರುತ್ತವೆ. ಜತೆಗೆ, ನ್ಯಾಷನಲ್ ಸೇವಿಂಗ್ ಸರ್ಟಿಫಿಕೇಟ್, ಕಿಸಾನ್ ವಿಕಾಸ್ ಪತ್ರಗಳಂತ ಸರ್ಟಿಫಿಕೇಟ್ಗಳೂ ಇರತ್ತವೆ.
ಪಿಪಿಎಫ್, ಸುಕನ್ಯಾ ಸಮೃದ್ಧಿ ಖಾತೆ, ಹಿರಿಯ ನಾಕರಿಕ ಉಳಿತಾಯ ಯೋಜನೆ ಇತ್ಯಾದಿಗಳು ಸಾಮಾಜಿಗ ಭದ್ರತಾ ಯೋಜನೆಗಳ ಅಡಿಯಲ್ಲಿ ಬರುತ್ತವೆ. ಇನ್ನು, ಮಾಸಿಗ ಆದಾಯ ಯೋಜನೆಯಲ್ಲಿ ಮಾಸಿಕ ಆದಾಯ ಖಾತೆ ಸೇರ್ಪಡೆಯಾಗುತ್ತದೆ.
ಈ ಸುದ್ದಿಯನ್ನೂ ಓದಿ: Money Guide: ಇದು ಖುಷಿಯ ಸುದ್ದಿ… ಐದು ವರ್ಷದ ಆರ್ಡಿ ಖಾತೆ ಬಡ್ಡಿ ದರ ಶೇ.6.7ಕ್ಕೆ ಹೆಚ್ಚಳ!
ಯಾವ ಪ್ಲ್ಯಾನ್ನಲ್ಲಿ ಎಷ್ಟು ಬಡ್ಡಿ?
-1 ವರ್ಷದ ಅಂಚೆ ಕಚೇರಿ ಠೇವಣಿ; ಶೇ.6.9
-2 ವರ್ಷದ ಅಂಚೆ ಕಚೇರಿ ಠೇವಣಿ; ಶೇ.7.0
-3 ವರ್ಷದ ಅಂಚೆ ಕಚೇರಿ ಠೇವಣಿ; ಶೇ.7
-5 ವರ್ಷದ ಅಂಚೆ ಕಚೇರಿ ಠೇವಣಿ; ಶೇ.7.5
-5 ವರ್ಷದ ಆರ್ಡಿ ಖಾತೆ; ಶೇ.6.7
-ರಾಷ್ಟ್ರೀಯ ಸೇವಿಂಗ್ ಸರ್ಟಿಫಿಕೇಟ್; ಶೇ.6.5
-ಕಿಸಾನ್ ವಿಕಾಸ್ ಪತ್ರ; 7.5(115 ತಿಂಗಳಿಗೆ ಮೆಚ್ಯೂರ್ ಆಗುತ್ತದೆ)
-ಪಿಪಿಎಫ್;ಶೇ.7.1
-ಸುಕನ್ಯಾ ಸಮೃದ್ಧಿ ಖಾತೆ; ಶೇ.8
-ಹಿರಿಯ ನಾಗರಿಕರ ಸೇವಿಂಗ್; 8
-ಮಾಸಿಕ ಆದಾಯ ಖಾತೆ; ಶೇ.7.4
ದೇಶ
Maharashtra News: ಮಹಾರಾಷ್ಟ್ರದ ಮತ್ತೊಂದು ಆಸ್ಪತ್ರೆಯಲ್ಲಿ 10 ರೋಗಿಗಳು ಮೃತ! ತನಿಖೆಗೆ ಮುಂದಾದ ಸರ್ಕಾರ
Maharashtra News: ನಾಂದೇಡ್ ಆಸ್ಪತ್ರೆಯಲ್ಲಿ ರೋಗಿಗಳ ಮರಣ ಮೃದಂಗ ಬಾರಿಸುತ್ತಿರುವ ಮಧ್ಯೆಯೇ ಸಂಭಾಜಿನಗರದ ಮತ್ತೊಂದು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಸಾಯುತ್ತಿರುವ ಪ್ರಕರಣಗಳು ವರದಿಯಾಗಿವೆ.
ಮುಂಬೈ: ಕಳೆದ ಒಂದು ವಾರದಲ್ಲಿ ಮಹಾರಾಷ್ಟ್ರದ (Maharashtra) ಅನೇಕ ಸರ್ಕಾರಿ ಆಸ್ಪತ್ರೆಗಳಲ್ಲಿ (Government Hospital) ರೋಗಿಗಳ ಸಾವು ವರದಿಯಾಗುತ್ತಿರುವ ಬೆನ್ನಲ್ಲೇ ಸಂಭಾಜಿನಗರದ ಘಾಟಿ ಆಸ್ಪತ್ರೆಯಲ್ಲಿ (Ghati Hospital) 24 ಗಂಟೆಯಲ್ಲಿ 10ಕ್ಕಿಂತ ಹೆಚ್ಚು ರೋಗಿಗಳು ಮೃತಪಟ್ಟಿದ್ದಾರೆ. ಈ ಹಿಂದೆ ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ (Nanded Government hospital) 48 ಗಂಟೆಯಲ್ಲಿ ಶಿಶುಗಳು ಸೇರಿದಂತೆ 34 ರೋಗಿಗಳು ಮೃತಪಟ್ಟ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಮಹಾರಾಷ್ಟ್ರ ಸರ್ಕಾರವು, ತನಿಖೆಗೆ ಸಮಿತಿಯನ್ನು (Probe Committee) ರಚಿಸುವುದಾಗಿ ಘೋಷಣೆ ಮಾಡಿದೆ(Maharashtra News).
ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ ಜರಗುತ್ತಿರುವ ಘಟನೆಗಳು ಭಯಾನಕವಾಗಿವೆ. ಅದೇ ರೀತಿ ಘಾಟಿ ಆಸ್ಪತ್ರೆಯಲ್ಲಿ ರೋಗಿಗಳು ಸಾಯುತ್ತಿದ್ದಾರೆ ಎಂಬ ಮಾಹಿತಿ ಈಗ ಬಹಿರಂಗವಾಗಿದೆ. ಇಬ್ಬರು ಮಕ್ಕಳು ಸೇರಿದಂತೆ 8 ರೋಗಿಗಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ನಾಂದೇಡ್ ಆಸ್ಪತ್ರೆಯಲ್ಲಿ ಮತ್ತೆ 7 ರೋಗಿಗಳು ಮೃತಪಟ್ಟಿದ್ದಾರೆಂಬ ವರ್ತಮಾನವಿದೆ. ಇದೆಲ್ಲವೂ ಭಯಾನಕವಾಗಿದೆ ಎಂದು ಶಿವಸೇನೆಯ ನಾಯಕ ಆದಿತ್ಯ ಠಾಕ್ರೆ ಅವರು ಟ್ವೀಟ್ ಮಾಡಿದ್ದಾರೆ.
ನಾಂದೇಡ್ ಆಸ್ಪತ್ರೆಯಲ್ಲಿ ರೋಗಿಗಳ ಸರಣಿ ಸಾವು
ಮಹಾರಾಷ್ಟ್ರದ (Maharashtra) ನಾಂದೇಡ್ ಜಿಲ್ಲೆಯ (Nanded District) ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನದಲ್ಲಿ 12 ಶಿಶು (Newborns) ಸೇರಿ 24 ರೋಗಿಗಳು ಮೃತಪಟ್ಟ ಘಟನೆಯು ಮಹಾರಾಷ್ಟ್ರದಲ್ಲಿ ಭಾರೀ ಆಕ್ರೋಶಕ್ಕೆಕಾರಣವಾಗಿತ್ತು. ಇದರ ಬೆನ್ನಲ್ಲೇ ಮತ್ತೆ 7 ರೋಗಿಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಅವಘಡಕ್ಕೆ ಸರ್ಕಾರಿ ಆಸ್ಪತ್ರೆ ಎದುರಿಸುತ್ತಿರುವ ಸಿಬ್ಬಂದಿ ಹಾಗೂ ಔಷಧಗಳ ಕೊರತೆಯ ಕಾರಣ ಎಂದು ನಾಂದೇಡ್ ಶಂಕರ್ ರಾವ್ ಚವಾಣ್ ಸರ್ಕಾರಿ ಆಸ್ಪತ್ರೆಯ ಡೀನ್ ಹೇಳಿದ್ದಾರೆ(Shankarrao Chavan Government Hospital Dean). ಮೃತಪಟ್ಟ 12 ವಯಸ್ಕರ ಪೈಕಿ ಹೆಚ್ಚಿನವರು ಹಾವು ಕಡಿತಕ್ಕೊಳಗಾದವರಿದ್ದಾರೆ ಎಂದು ಅವರು ತಿಳಿಸಿದ್ದರು.
ಈ ಸುದ್ದಿಯನ್ನೂ ಓದಿ: Maharashtra: ಔಷಧ ಕೊರತೆ, ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಒಂದೇ ದಿನದಲ್ಲಿ 12 ಶಿಶುಗಳು ಸೇರಿ 24 ರೋಗಿಗಳ ಸಾವು!
ಕಳೆದ 24 ಗಂಟೆಗಳಲ್ಲಿ ಆರು ಗಂಡು ಮತ್ತು ಆರು ಹೆಣ್ಣು ಶಿಶುಗಳು ಸಾವನ್ನಪ್ಪಿವೆ. ಹನ್ನೆರಡು ವಯಸ್ಕರು ವಿವಿಧ ಕಾಯಿಲೆಗಳಿಂದ ಸಾವನ್ನಪ್ಪಿದ್ದಾರೆ, ಈ ಪೈಕಿ ಹೆಚ್ಚಿನವರು ಹಾವು ಕಡಿತದಿಂದ ಬಳಲುತ್ತಿದ್ದರು. ವಿವಿಧ ಸಿಬ್ಬಂದಿಯನ್ನು ವರ್ಗಾವಣೆ ಮಾಡಿದ್ದರಿಂದ ಆಸ್ಪತ್ರೆಯು ಸಮಸ್ಯೆಯನ್ನು ಎದುರಿಸುತ್ತಿದೆ ಎಂದು ಅವರು ಆಸ್ಪತ್ರೆಯ ಡೀನ್ ಹೇಳಿದ್ದರು.
ಈ ಆಸ್ಪತ್ರೆಯು ತೃತೀಯ ಹಂತದ ಆರೈಕೆ ಕೇಂದ್ರವಾಗಿದೆ. ಅಲ್ಲದೇ, 70ರಿಂದ 80 ಕಿ.ಮೀ ವ್ಯಾಪ್ತಿಯಲ್ಲಿನ ಏಕೈಕ ಸರ್ಕಾರಿ ಆಸ್ಪತ್ರೆಯಾಗಿದೆ. ಹಾಗಾಗಿ, ದೂರದ ಸ್ಥಳಗಳಿಂದ ರೋಗಿಗಳು ಈ ಆಸ್ಪತ್ರೆಗೆ ಆಗಮಿಸುತ್ತಾರೆ. ಹೀಗೆ, ರೋಗಿಗಳು ಸಂಖ್ಯೆ ಹೆಚ್ಚಳವಾದಾಗ ಅವರನ್ನು ಈ ಆಸ್ಪತ್ರೆಯಲ್ಲಿ ನಿರ್ವಹಣೆ ಮಾಡುವುದು ಕಷ್ಟ. ಆಗ ಸಮಸ್ಯೆಗಳು ಶುರುವಾಗುತ್ತವೆ ಎಂದು ಅವರು ತಿಳಿಸಿದ್ದಾರೆ. ಹಾಫ್ಕಿನ್ ಎಂಬ ಸಂಸ್ಥೆಯಿದ್ದು, ಇಲ್ಲಿಂದ ಔಷಧಿಗಳನ್ನು ಖರೀದಿಸಬೇಕು. ಆದರೆ ಈ ಸಂಸ್ಥೆಯಿಂದ ಔಷಧಗಳ ಖರೀದಿ ಸಾಧ್ಯವಾಗಿಲ್ಲ. ಆಗ ನಾವು ಸ್ಥಳೀಯವಾಗಿ ಔಷಧಗಳನ್ನು ಖರೀದಿಸಿ ರೋಗಿಗಳಿಗೆನೀಡಿದ್ದೇವೆ ಎಂದು ಡೀನ್ ಅವರು ತಿಳಿಸಿದ್ದರು.
ದೇಶ
Punjab Debt: 47,107 ಕೋಟಿ ರೂ. ಸಾಲದ ಪೈಕಿ ಅರ್ಧದಷ್ಟು ಬಡ್ಡಿ ಪಾವತಿಗೆ ಬಳಕೆ ಎಂದ ಪಂಜಾಬ್ ಸಿಎಂ
Punjab Debt: ಆಪ್ ಸರ್ಕಾರವು ಮಿತಿಮೀರಿ ಸಾಲ ಮಾಡುತ್ತಿದ್ದು, ಹಣದ ಬಳಕೆಯಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಂಡಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.
ನವದೆಹಲಿ: ಪಂಜಾಬ್ನಲ್ಲಿ (Punjab) ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಾರ್ಟಿ (Aam Aadmi Party Government) ಸರ್ಕಾರವು, ಕಳೆದ ಒಂದೂವರೆ ವರ್ಷದಲ್ಲಿ ಮಾಡಿದ ಸಾಲದ ಪೈಕಿ ಅರ್ಧದಷ್ಟು ಹಣವನ್ನು ಬಡ್ಡಿಯನ್ನು ನೀಡಲು ಬಳಸುತ್ತಿರುವುದಾಗಿ ಹೇಳಿದೆ(Interest Payment). ಪಂಜಾಬ್ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ (Punjab Governor) ಅವರು ಸಾಲದ ಮಾಹಿತಿಯನ್ನು ನೀಡುವಂತೆ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಕೋರಿದ್ದರು(CM Bhagwant Mann). ಇದಾದ ಮಾರನೇ ದಿನವಾಗಿ ಮೂರು ಪುಟಗಳ ಮಾಹಿತಿಯನ್ನು ನೀಡಿರುವ ಸಿಎಂ ಭಗವಂತ್ ಮಾನ್ ಅವರು, ಕಳೆದ ಒಂದೂವರೆ ವರ್ಷದಲ್ಲಿ ಪಂಜಾಬ್ ಸರ್ಕಾರವು 47,107.6 ಕೋಟಿ ರೂ. ಸಾಲ ಮಾಡಿದೆ. ಈ ಪೈಕಿ ಅರ್ಧದಷ್ಟು ಹಣವನ್ನು ಬಡ್ಡಿ ಪಾವತಿಸಲು ಬಳಸಲಾಗುತ್ತದೆ ಎಂದು ತಿಳಿಸಿದ್ದಾರೆ.
2022 ಏಪ್ರಿಲ್ 1ರಿಂದ 2023ರ ಆಗಸ್ಟ್ 31ರ ವರೆಗೆ ಪಂಜಾಬ್ ಸರ್ಕಾರವು 47,107 ಕೋಟಿ ರೂಪಾಯಿಯನ್ನು ಸಾಲ ಮಾಡಿದೆ. ಈ ಮೊತ್ತವು, ಮಾರುಕಟ್ಟೆ ಸಾಲ ಮಾತ್ರವಲ್ಲದೇ, ಭಾರತ ಸರ್ಕಾರದಿಂದ ಅನುಮತಿಸಲಾದ ಬಾಹ್ಯ ನೆರವಿನ ಯೋಜನೆಯ ಸಾಲಗಳು ಮತ್ತು ಬಂಡವಾಳ ಸ್ವತ್ತುಗಳ ಸೃಷ್ಟಿಗೆ ವಿಶೇಷ ನೆರವಿನ ಅಡಿಯಲ್ಲಿ ನಬಾರ್ಡ್ನಿಂದ ದೀರ್ಘಾವಧಿಯ ಸಾಲ ಕೂಡ ಸೇರಿದೆ. ಒಟ್ಟು ಸಾಲದ ಪೈಕಿ 32,447 ಕೋಟಿ ರೂಪಾಯಿ 2022-23ರ ಹಣಕಾಸು ವರ್ಷದಲ್ಲಿ ಸಾಲವನ್ನು ತೆಗೆದುಕೊಂಡಿದ್ದರೆ, 14,660 ಕೋಟಿ ರೂಪಾಯಿಯನ್ನು ಪ್ರಸಕ್ತ ಸಾಲಿನ ಏಪ್ರಿಲ್ 1 ಮತ್ತು ಆಗಸ್ಟ್ 31ರ ನಡುವೆ ಸಾಲ ಪಡೆಯಲಾಗಿದೆ. ಒಟ್ಟು ಸಾಲದ ಪೈಕಿ 27016 ಕೋಟಿ ರೂಪಾಯಿಯನ್ನು ಸರಕಾರಿ ಸಾಲದ ಬಡ್ಡಿ ಪಾವತಿಗಾಗಿ ಬಳಸಲಾಗುತ್ತಿದೆ ಎಂದು ರಾಜ್ಯಪಾಲರಿಗ ಬರೆದ ಪತ್ರದಲ್ಲಿ ಸಿಎಂ ಭಗವಂತ್ ಮಾನ್ ಅವರು ತಿಳಿಸಿದ್ದಾರೆ.
ಪಂಜಾಬ್ ರಾಜ್ಯಪಾಲ ಪುರೋಹಿತ್ ಅವರು ಸೆಪ್ಟೆಂಬರ್ 21ರಂದು ಪತ್ರ ಬರೆದು, ತನ್ನ ಅವಧಿಯಲ್ಲಿ ಆಪ್ ಮಾಡಿರುವ 50 ಸಾವಿರ ಕೋಟಿ ರೂ. ಸಾಲದ ಬಳಕೆಯ ಮಾಹಿತಿ ನೀಡುವಂತೆ ಕೋರಿದ್ದರು. ನಿಮ್ಮ ಆಡಳಿತದಲ್ಲಿ ಪಂಜಾಬ್ ಸಾಲದ ಮೊತ್ತವು 50 ಸಾವಿರ ಕೋಟಿ ರೂ.ಗೆ ಏರಿಕೆಯಾಗಿದೆ. ಈ ಬೃಹತ್ ಮೊತ್ತ ಸಾಲದ ಬಳಕೆಯ ವಿವರಗಳನ್ನು ನನಗೆ ಒದಗಿಸಬಹುದು. ಇದರಿಂದ ಹಣವನ್ನು ಸರಿಯಾಗಿ ಬಳಸಲಾಗಿದೆ ಎಂದು ನಾನು ಪ್ರಧಾನಿಗೆ ಮನವರಿಕೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದ್ದರು.
ಈ ಸುದ್ದಿಯನ್ನೂ ಓದಿ: Punjab CM | ದಿನಗೂಲಿ ಹೆಚ್ಚಳಕ್ಕೆ ಆಗ್ರಹಿಸಿ ಪಂಜಾಬ್ ಸಿಎಂ ಭಗವಂತ್ ಮಾನ್ ಮನೆಗೆ ದಲಿತ ಕೃಷಿ ಕಾರ್ಮಿಕರ ಮುತ್ತಿಗೆ
ಆಪ್ ಸರ್ಕಾರವು ಬೃಹತ್ ಮೊತ್ತದ ಹಣ ಬಳಕೆಯಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಂಡಿಲ್ಲ ಮತ್ತು ಬೇಜವಾಬ್ದಾರಿಯಾಗಿ ವೆಚ್ಚ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು. ವಿಶೇಷವಾಗಿ ಕಾಂಗ್ರೆಸ್ ಪಕ್ಷವು ಆಪ್ ವಿರುದ್ಧ ಟೀಕೆ ಮಾಡಿತ್ತು. 2021-22ರ ಮುಕ್ತಾಯದ ಹೊತ್ತಿಗೆ ಪಂಜಾಬ್ ಸರ್ಕಾರವು 2.82 ಕೋಟಿ ರೂ. ಸಾಲ ಮಾಡಿತ್ತು. ಆ ಸಾಲದ ಮೊತ್ತವು 2022-23ರ ಹೊತ್ತಿಗೆ 3.12 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ದೇಶದ ಅತಿ ಹೆಚ್ಚು ಸಾಲ ಮಾಡಿದ ರಾಜ್ಯಗಳ ಪಟ್ಟಿಯಲ್ಲಿ ಪಂಜಾಬ್ ಕೂಡ ಒಂದಾಗಿದೆ.
ದೇಶ
PM Narendra Modi: ಜಾತಿ ಗಣತಿಯಿಂದ ಹಿಂದೂಗಳಲ್ಲಿ ಒಡಕು ಮೂಡಿಸುತ್ತಿರುವ ಕಾಂಗ್ರೆಸ್: ಪ್ರಧಾನಿ ಮೋದಿ ವಾಗ್ದಾಳಿ
PM Narendra Modi: ವರ್ಷಾಂತ್ಯಕ್ಕೆ ವಿಧಾನಸಭೆ ಚುನಾವಣೆಯನ್ನು ಎದುರಿಸಲಿರುವ ಛತ್ತೀಸ್ಗಢದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ಜಗದಲ್ಪುರ, ಛತ್ತೀಸ್ಗಢ: ಜಾತಿ ಗಣತಿಯ (caste census) ಮೂಲಕ ಕಾಂಗ್ರೆಸ್ ಪಕ್ಷವು (Congress Party) ಹಿಂದೂಗಳಲ್ಲಿ ಒಡಕು ಮೂಡಿಸುತ್ತಿದೆ (Dividing Hindus) ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಹೇಳಿದ್ದಾರೆ. ವರ್ಷಾಂತ್ಯಕ್ಕೆ ವಿಧಾನಸಭೆ ಚುನಾವಣೆ(Chhattisgarh Assembly Election) ನಡೆಯಲಿರುವ ಛತ್ತೀಸ್ಗಢ ಜಗದಲ್ಪುರದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಭಾರತದ ಸಂಪನ್ಮೂಲಗಳ ಮೇಲಿನ ಹಕ್ಕನ್ನು ಬಡವರು ಹೊಂದಿದ್ದಾರೆ ಎಂದು ಹೇಳುವ ಮೂಲಕ ಕಾಂಗ್ರೆಸ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು. ನಿನ್ನೆ ರಾಜಸ್ಥಾನದಲ್ಲಿ ಮಾತನಾಡಿದ್ದ ಪ್ರಧಾನಿ ಅವರು, ಇದೇ ರೀತಿಯ ಹೇಳಿಕೆಯನ್ನು ನೀಡಿದ್ದರು. ಜಾತಿ ಗಣತಿಯ ಮೂಲಕ ಪ್ರತಿಪಕ್ಷಗಳು ದೇಶವನ್ನು ಒಡೆಯುವ ಸಂಚು ರೂಪಿಸಿವೆ ಎಂದು ಹೇಳಿದ್ದರು.
ಜನಸಂಖ್ಯೆ ಎಷ್ಟಿದೆಯೋ ಅಷ್ಟೇ ಹಕ್ಕು ಎಂಬ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಖಂಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಛತ್ತೀಸ್ಗಢದ ನೈಸರ್ಗಿಕ ಸಂಪನ್ಮೂಲಗಳನ್ನು ಲೂಟಿ ಮಾಡುವ ಇತಿಹಾಸವು ಕಾಂಗ್ರೆಸ್ ಪಕ್ಷಕ್ಕೆ ಇದೆ ಎಂದು ಹೇಳಿದರು. ದೇಶದ ಅತಿದೊಡ್ಡ ಜನಸಂಖ್ಯೆ ಎಂದರೆ ಬಡವರು ಮಾತ್ರ. ಅವರಿಗೆ ನಮ್ಮ ಸರ್ಕಾರ ಮೊದಲ ಆದ್ಯತೆ ನೀಡುತ್ತಿದೆ ಎಂದು ಹೇಳಿದರು.
ಈ ಹಿಂದೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಅಲ್ಪಸಂಖ್ಯಾತರದ್ದು ಎಂದು ಹೇಳಿದ್ದರು. ಈಗ ಕಾಂಗ್ರೆಸ್ ಪಕ್ಷವು ಹೆಚ್ಚು ಜನಸಂಖ್ಯೆಯನ್ನು ಹೊಂದಿದ ಸಮುದಾಯಕ್ಕೆ ಮೊದಲ ಹಕ್ಕು ಎಂದು ಹೇಳುತ್ತಿದೆ. ಹಾಗಾದರೆ, ಕಾಂಗ್ರೆಸ್ ಪಕ್ಷವು ಅಲ್ಪಸಂಖ್ಯಾತರ ಹಕ್ಕನ್ನು ಕಸಿದುಕೊಳ್ಳಲು ಹುನ್ನಾರ ನಡೆಸುತ್ತಿದೆಯೇ ಎಂದು ವ್ಯಂಗ್ಯವಾಗಿ ಕಾಂಗ್ರೆಸ್ ಪಕ್ಷಕ್ಕೆ ತಿವಿದರು.
ಈ ಸುದ್ದಿಯನ್ನೂ ಓದಿ: PM Narendra Modi: ಪ್ರಧಾನಿ ಮೋದಿ ಗಿಫ್ಟ್ ನಿಮಗೂ ಬೇಕಾ? ಹಾಗಾದ್ರೆ, ಆನ್ಲೈನ್ ಹರಾಜಿನಲ್ಲಿ ಭಾಗವಹಿಸಿ
ಕಾಂಗ್ರೆಸ್ ಪಕ್ಷವು ದೇಶವನ್ನು ನಾಶ ಮಾಡುವ ಪಣ ತೊಟ್ಟಂತೆ ಕಾಣುತ್ತಿದೆ. ಹಿಂದೂಗಳನ್ನು ವಿಭಜಿಸಿ, ಸಮಾಜದಲ್ಲಿ ತಾರತಮ್ಯವನ್ನು ಹೆಚ್ಚಿಸುವ ಪ್ರಯತ್ನವನ್ನು ಮಾಡುತ್ತಿದೆ. 70 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷವು, ಬಡತನವನ್ನು ಬಿಟ್ಟು ದೇಶಕ್ಕೆ ಬೇರೇನೂ ಕೊಟ್ಟಿಲ್ಲ ಎಂದು ಹೇಳಿದರು. ಕಾಂಗ್ರೆಸ್ ಪಕ್ಷವು ಈಗ ದೇಶವಿರೋಧಿಗಳ ಜತೆ ಸೇರಿಕೊಂಡಿದೆ. ದೇಶವನ್ನು ನಾಶ ಮಾಡಲು ಹೊರಟಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷವನ್ನು ಮೂಲ ಕಾಂಗ್ರೆಸ್ ಜನರು ನಡೆಸುತ್ತಿಲ್ಲ. ಇದನ್ನೆಲ್ಲ ನೋಡಿದ ಕಾಂಗ್ರೆಸ್ನ ಹಿರಿಯ ನಾಯಕರು ಕೇಳಲೂ ಇಲ್ಲ, ಮಾತನಾಡುವ ಧೈರ್ಯವೂ ಇಲ್ಲ ಎಂದು ಬಾಯಿ ಮುಚ್ಚಿಕೊಂಡು ಕುಳಿತಿದ್ದಾರೆ. ಈಗ ಕಾಂಗ್ರೆಸ್ ಅನ್ನು ಹೊರಗುತ್ತಿಗೆ ನೀಡಲಾಗಿದೆ ಎಂದು ಹೇಳಿದರು.
ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
-
ದೇಶ21 hours ago
Viral Video: ಫ್ರಿಡ್ಜ್ ಡೋರ್ ತೆಗೆಯಲು ಹೋದ 4 ವರ್ಷದ ಬಾಲಕಿಗೆ ಕರೆಂಟ್ ಶಾಕ್, ಸ್ಥಳದಲ್ಲೇ ಸಾವು
-
ಪ್ರಮುಖ ಸುದ್ದಿ16 hours ago
Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!
-
ಟಾಪ್ 10 ನ್ಯೂಸ್23 hours ago
VISTARA TOP 10 NEWS : ನಮಗೆ ರಕ್ಷಣೆ ಇಲ್ಲವೇ ಎಂದ ಹಿಂದೂಗಳು, ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ ಶಾಮನೂರು ಇತರ ದಿನದ ಪ್ರಮುಖ ಸುದ್ದಿಗಳು
-
ದೇಶ22 hours ago
K Annamalai: ಲೇಡಿ ರಿಪೋರ್ಟರ್ ಜತೆ ಅಣ್ಣಾಮಲೈ ಕಿರಿಕ್! ಆಕೆ ಕೇಳಿದ ಪ್ರಶ್ನೆಗೆ ರೇಗಿದ ಬಿಜೆಪಿ ನಾಯಕ
-
ಕ್ರಿಕೆಟ್24 hours ago
ICC World Cup 2023 : ಭಾರತದ ಮಾಜಿ ಆಟಗಾರ ಅಫಘಾನಿಸ್ತಾನ ತಂಡದ ಮೆಂಟರ್
-
ದೇಶ11 hours ago
Raid On NewsClick: ನ್ಯೂಸ್ಕ್ಲಿಕ್ನ 30 ಪತ್ರಕರ್ತರ ಮನೆಗಳ ಮೇಲೆ ಪೊಲೀಸರ ದಾಳಿ, ಏನಿದು ಕೇಸ್?
-
ಕಿರುತೆರೆ6 hours ago
BBK Season 10 : ಅಕ್ಟೋಬರ್ 8 ರಿಂದ ಬಿಗ್ ಬಾಸ್ ಆಟ; ಚಾರ್ಲಿ ಎಂಟ್ರಿ ಕನ್ಫರ್ಮ್, ಉಳಿದವರು ಯಾರು ?
-
ಕ್ರೈಂ12 hours ago
4 ವರ್ಷದಿಂದ ಇಬ್ಬರು ಪುತ್ರಿಯರ ಮೇಲೆಯೇ ಅತ್ಯಾಚಾರ ಎಸಗಿದ ಪಾಪಿಯ ಬಂಧನ; ಇವನೆಂಥಾ ತಂದೆ?