ಮನೇಲಿ ಅಡುಗೆ ಮಾಡಿಕೊಂಡಿರಿ ಎಂದು ಸುಪ್ರಿಯಾ ಸುಲೆಗೆ ಹೇಳಿ ವಿವಾದ ಸೃಷ್ಟಿಸಿದ ಬಿಜೆಪಿ ನಾಯಕ

ದೇಶ

ಮನೇಲಿ ಅಡುಗೆ ಮಾಡಿಕೊಂಡಿರಿ ಎಂದು ಸುಪ್ರಿಯಾ ಸುಲೆಗೆ ಹೇಳಿ ವಿವಾದ ಸೃಷ್ಟಿಸಿದ ಬಿಜೆಪಿ ನಾಯಕ

ತಮ್ಮ ಮಾತಿಗೆ ವಿರೋಧ ಹೆಚ್ಚುತ್ತಿದ್ದಂತೆ ಅದನ್ನು ಸರಿಪಡಿಸಿಕೊಳ್ಳುವ ಪ್ರಯತ್ನವನ್ನೂ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್‌ ಪಾಟೀಲ್‌( Maharashtra BJP chief Chandrakant Patil) ಮಾಡಿದ್ದಾರೆ.

VISTARANEWS.COM


on

Supriya Sule
ಚಂದ್ರಕಾಂತ್‌ ಪಾಟೀಲ್‌ ಮತ್ತು ಸುಪ್ರಿಯಾ ಸುಲೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್‌ ಪಾಟೀಲ್‌ (Maharashtra BJP chief Chandrakant Patil) ನಾಲಿಗೆ ಹರಿಬಿಟ್ಟು ವಿವಾದ ಸೃಷ್ಟಿಸಿಕೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಮುಂಬೈನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಾತನಾಡಿದ ಪಾಟೀಲ್‌, ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆಯವರನ್ನು ಉದ್ದೇಶಿಸಿ ʼನಿಮಗೆ ರಾಜಕೀಯ ಅರ್ಥವಾಗದೆ ಇದ್ದರೆ, ಮನೆಗೆ ಹೋಗಿ ಅಡುಗೆ ಮಾಡಿಕೊಂಡಿರಿʼ ಎಂದು ಹೇಳಿದ್ದಾರೆ. ಇದು ಲಿಂಗ ತಾರತಮ್ಯವನ್ನು ಪ್ರತಿನಿಧಿಸುವ ಮಾತು ಎಂದು ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

ಮಧ್ಯಪ್ರದೇಶದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಲು ಸುಪ್ರೀಂಕೋರ್ಟ್‌ ಒಪ್ಪಿಗೆ ನೀಡಿದೆ. ಅದಾದ ಬೆನ್ನಲ್ಲೇ ಶರದ್‌ ಪವಾತ್‌ ಪುತ್ರಿ ಸುಪ್ರಿಯಾ ಸುಲೆ ಹೇಳಿಕೆಯೊಂದನ್ನು ನೀಡಿದ್ದರು. ಮಹಾರಾಷ್ಟ್ರದಲ್ಲಿಯೂ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಒಬಿಸಿಗೆ ಮೀಸಲಾತಿ ನೀಡಬೇಕು ಎಂದು ಬಿಜೆಪಿ ಹೋರಾಟ ಮಾಡುತ್ತಿದೆ. ನಾನು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ರನ್ನು ಇತ್ತೀಚೆಗೆ ದೆಹಲಿಯಲ್ಲಿ ಭೇಟಿಯಾದಾಗ ಈ ಬಗ್ಗೆ ಕೇಳಿದೆ. ಮೀಸಲಾತಿ ನೀಡಲು ಸುಪ್ರೀಂಕೋರ್ಟ್‌ ಒಪ್ಪಿಗೆ ಪಡೆಯಲು ನೀವು ಏನು ಮಾಡಿದಿರಿ ಎಂದು ಪ್ರಶ್ನಿಸಿದೆ. ಆದರೆ ಅವರೇನೂ ಉತ್ತರಿಸಲೇ ಇಲ್ಲ ಎಂದಿದ್ದರು.

ಇದನ್ನೂ ಓದಿ: ಪೆಟ್ರೋಲ್‌ ವ್ಯಾಟ್‌ ತಾನೇ ಕಡಿತಗೊಳಿಸಿದ್ದಾಗಿ ಯಾಮಾರಿಸಿತೇ ಮಹಾರಾಷ್ಟ್ರ ಸರಕಾರ?

ಸುಪ್ರಿಯಾ ಈ ಹೇಳಿಕೆ ನೀಡಿದ್ದರ ಬಗ್ಗೆ ಬಿಜೆಪಿ ಅಧ್ಯಕ್ಷ ಅಸಮಾಧಾನ ವ್ಯಕ್ತಪಡಿಸಿದ್ದರು. ʼನೀವ್ಯಾಕೆ ಇನ್ನೂ ರಾಜಕೀಯದಲ್ಲಿದ್ದೀರಿ. ಮನೆಗೆ ಹೋಗಿ ಅಡುಗೆ ಮಾಡಿಕೊಂಡಿರಿ. ನೀವು ದೆಹಲಿಗಾದರೂ ಹೋಗಿ, ಸ್ಮಶಾನಕ್ಕಾದರೂ ಹೋಗಿ. ಒಬಿಸಿ ಕೋಟಾದಡಿ ಮೀಸಲಾತಿ ಕೊಡಿ ಎಂಬ ನಮ್ಮ ಬೇಡಿಕೆಯನ್ನು ಮೊದಲು ಈಡೇರಿಸಿ ಎಂದು ಹೇಳಿದ್ದರು. ಅದರ ಬೆನ್ನಲ್ಲೇ ಎನ್‌ಸಿಪಿ ನಾಯಕರು ಪಾಟೀಲ್‌ ವಿರುದ್ಧ ಕಿಡಿ ಕಾರಿದ್ದರು. ನೀವು ಮೊದಲು ಮನೆಗೆ ಹೋಗಿ ಪತ್ನಿ ಜತೆ ಚಪಾತಿ ಲಟ್ಟಿಸಿ ಎಂದು ಹೇಳಿದ್ದರು. ಸುಪ್ರಿಯಾ ಸುಲೆಯ ಕಸಿನ್‌, ಎನ್‌ಸಿಪಿ ನಾಯಕ ಅಜಿತ್‌ ಪವಾರ್‌ ಪ್ರತಿಕ್ರಿಯೆ ನೀಡಿ, ನನ್ನ ಸಹೋದರಿಯ ಬಗ್ಗೆ ಇಂಥ ಮಾತುಗಳನ್ನಾಡಲು ಬಿಜೆಪಿ ನಾಯಕನಿಗೆ ಹಕ್ಕು ಕೊಟ್ಟಿದ್ದು ಯಾರು? ಎಂದು ಪ್ರಶ್ನಿಸಿದ್ದರು.

ತಮ್ಮ ಮಾತಿಗೆ ವಿರೋಧ ಹೆಚ್ಚುತ್ತಿದ್ದಂತೆ ಅದನ್ನು ಸರಿಪಡಿಸಿಕೊಳ್ಳುವ ಪ್ರಯತ್ನವನ್ನೂ ಚಂದ್ರಕಾಂತ್‌ ಪಾಟೀಲ್‌ ಮಾಡಿದ್ದರು. ನಾನು ಮಹಿಳೆಯರಿಗೆ ಗೌರವ ನೀಡುತ್ತೇನೆ. ಸುಪ್ರಿಯಾ ಅವರ ಬಗ್ಗೆಯೂ ನನಗೆ ಅಪಾರ ಗೌರವ ಇದೆ. ಸುಪ್ರಿಯಾ ಹಳ್ಳಿ ಪ್ರದೇಶಗಳಿಗೆ ಹೋಗಿ ಅಲ್ಲಿನ ಜನಜೀವನ ಅರ್ಥ ಮಾಡಿಕೊಳ್ಳಬೇಕು ಎಂಬುದು ನನ್ನ ಮಾತಿನ ಆಶಯವಾಗಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗದಾಧಾರಿ V/S ಘಂಟಾಧಾರಿ ಹಿಂದುತ್ವ: ಬಿಜೆಪಿ ವಿರುದ್ಧ ಹರಿಹಾಯ್ದ ಮಹಾರಾಷ್ಟ್ರ CM ಠಾಕ್ರೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Election 2024: ಬಿಜೆಪಿಯ 400+ ಲೆಕ್ಕಾಚಾರ ಉಲ್ಟಾ? ಚುನಾವಣೆ ಹೊತ್ತಲ್ಲೇ ಪಕ್ಷಕ್ಕೆ ಬಿಗ್‌ ಶಾಕ್‌!

Lok Sabha Election 2024:ಈಗಾಗಲೇ ಮೊದಲ ನಾಲ್ಕು ಹಂತಗಳಲ್ಲಿ ಒಟ್ಟು 379 ಕ್ಷೇತ್ರಗಳಲ್ಲಿ ಅಂದರೆ ಶೇ.70ರಷ್ಟು ಕ್ಷೇತ್ರಗಳಲ್ಲಿ ಚುನಾವಣೆ ಪೂರ್ಣಗೊಂಡಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಮತದಾನದ ಪ್ರಮಾಣದಲ್ಲೂ ಸ್ವಲ್ಪ ಇಳಿಕೆ ಆಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ತಾನು ಈ ಹಿಂದೆ ನೀಡಿದ್ದ ವರದಿಯನ್ನು ಮರು ಪರಿಷ್ಕರಣೆ ಮಾಡಿರುವ ಪಲೋಡಿ ಸಟ್ಟಾ ಬಜಾರ್‌, ಬಿಜೆಪಿ 2019ರ ಚುನಾವಣೆಗಿಂತಲೂ ಕಡಿಮೆ ಅಂದರೆ 303 ಸ್ಥಾನಗಳಿಗಿಂತಲೂ ಕಡಿಮೆ ಸ್ಥಾನಗಳನ್ನು ಗಳಿಸಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

VISTARANEWS.COM


on

Lok Sabha Election 2024
Koo

ನವದೆಹಲಿ: ಲೋಕಸಭಾ ಚುನಾವಣೆಯ(Lok Sabha Election 2024) ನಾಲ್ಕನೇ ಹಂತದ ಮತದಾನ ಪೂರ್ಣಗೊಂಡಿದ್ದು, ಈಗಿನಿಂದಲೇ ಸೋಲು ಗೆಲವಿನ ಲೆಕ್ಕಾಚಾರ ಒಂದೆಡೆಯಾದರೆ ಬಿಜೆಪಿ(BJP)ಯ 400 ಸ್ಥಾನಗಳ ಟಾರ್ಗೆಟ್‌ ಬಗೆಗಿನ ಚರ್ಚೆ ಮತ್ತೊಂದೆಡೆ. ಇದರ ನಡುವೆ ನಿಖರ ಚುನಾವಣಾ ಫಲಿತಾಂಶ(Election Result)ದ ಬಗ್ಗೆ ನಿಖರವಾದ ಸಮೀಕ್ಷೆ ವರದಿಗೆ ಖ್ಯಾತಿ ಪಡೆದಿರುವ ಪಲೋಡಿ ಸಟ್ಟಾ ಬಜಾರ್‌(Phalodi Satta Bazar) ಫಲಿತಾಂಶದ ಬಗ್ಗೆ ವರದಿಯೊಂದನ್ನು ನೀಡಿದೆ. ಈ ಬಾರಿ 400ಕ್ಕೂ ಅಧಿಕ ಸೀಟ್‌ ಪಡೆಯುವ ನಿರೀಕ್ಷೆಯಲ್ಲಿರುವ ಬಿಜೆಪಿಗೆ ಈ ವರದಿ ಶಾಕ್‌ ನೀಡಿದೆ. ಈ ವರದಿ ಬಿಜೆಪಿಯ ಎಲ್ಲಾ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದೆ.

ಈಗಾಗಲೇ ಮೊದಲ ನಾಲ್ಕು ಹಂತಗಳಲ್ಲಿ ಒಟ್ಟು 379 ಕ್ಷೇತ್ರಗಳಲ್ಲಿ ಅಂದರೆ ಶೇ.70ರಷ್ಟು ಕ್ಷೇತ್ರಗಳಲ್ಲಿ ಚುನಾವಣೆ ಪೂರ್ಣಗೊಂಡಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಮತದಾನದ ಪ್ರಮಾಣದಲ್ಲೂ ಸ್ವಲ್ಪ ಇಳಿಕೆ ಆಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ತಾನು ಈ ಹಿಂದೆ ನೀಡಿದ್ದ ವರದಿಯನ್ನು ಮರು ಪರಿಷ್ಕರಣೆ ಮಾಡಿರುವ ಪಲೋಡಿ ಸಟ್ಟಾ ಬಜಾರ್‌, ಬಿಜೆಪಿ 2019ರ ಚುನಾವಣೆಗಿಂತಲೂ ಕಡಿಮೆ ಅಂದರೆ 303 ಸ್ಥಾನಗಳಿಗಿಂತಲೂ ಕಡಿಮೆ ಸ್ಥಾನಗಳನ್ನು ಗಳಿಸಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

ನಾಲ್ಕನೇ ಹಂತದ ಮತದಾನ ನಡೆಯುವ ಮುನ್ನ ಪಲೋಡಿ ಸಟ್ಟಾ ಬಜಾರ್‌ ಫಲಿತಾಂಶದ ಸಮೀಕ್ಷೆ ವರದಿಯೊಂದನ್ನು ನೀಡಿತ್ತು. ಅದರಲ್ಲಿ ಈ ಬಾರಿ ಬಿಜೆಪಿ 307-310 ಸ್ಥಾನಗಳನ್ನು ಗಳಿಸಲಿದೆ ಎಂಬುದು ತಿಳಿದುಬಂದಿತ್ತು. ಆದರೆ ಈಗ ಹೊಸದಾಗಿ ಒಂದು ವರದಿ ನೀಡಿದ್ದು, ಈ ಬಾರಿ ಬಿಜೆಪಿ ಕೇವಲ 296-300 ಸ್ಥಾನಗಳನ್ನು ಹಾಗೂ ಎನ್‌ಡಿಎ 329 to 332 ಸ್ಥಾನಗಳನ್ನು ಪಡೆಯಲಿದೆ ಎಂದು ಹೇಳಿದೆ. ಇನ್ನು ಕಾಂಗ್ರೆಸ್‌ 58 ರಿಂದ 62 ಸ್ಥಾನಗಳನ್ನು ಗೆಲ್ಲಲಿದೆ ಎಂದು ವರದಿಯಲ್ಲಿ ತಿಳಿದುಬಂದಿದೆ. ಇನ್ನುಳಿದ 164 ಕ್ಷೇತ್ರಗಳಲ್ಲಿ ಮೇ 20, ಮೇ 25 ಮತ್ತು ಜೂ. 1 ರಂದು ಮತದಾನ ನಡೆಯಲಿದೆ.

ರಾಜ್ಯಗಳಲ್ಲಿ ಗೆಲುವಿನ ಲೆಕ್ಕಾಚಾರ ಹೇಗಿದೆ?

ಪಲೋಡಿ ಸಟ್ಟಾ ಬಜಾರ್‌ ನೀಡಿರುವ ವರದಿ ಪ್ರಕಾರ, ಗುಜರಾತ್‌ನ ಎಲ್ಲಾ 26 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವ ಸಾಧಿಸಿದರೆ, ಮಧ್ಯಪ್ರದೇಶದ 29 ಕ್ಷೇತ್ರಗಳಲ್ಲಿ 27-28 ಸ್ಥಾನಗಳನ್ನು ಗಿಟ್ಟಿಸಿಕೊಳ್ಳುವುದು ಖಚಿತವಾಗಿದೆ. ರಾಜಸ್ಥಾನದಲ್ಲಿ 25 ಸ್ಥಾನಗಳಲ್ಲಿ ಈ ಬಾರಿ 18-20 ಸ್ಥಾನಗಳನ್ನು ಮಾತ್ರ ಬಿಜೆಪಿ ಗೆಲ್ಲಬಹುದಾಗಿದೆ. ಒಡಿಶಾದ 21 ಸ್ಥಾನಗಳಲ್ಲಿ, ಬಿಜೆಪಿ 11-12 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ .

ಪಂಜಾಬ್‌ನಲ್ಲಿ ಪಕ್ಷವು ಯಾವುದೇ ಪ್ರಮುಖ ಬದಲಾವಣೆಯನ್ನು ಕಾಣುವ ಸಾಧ್ಯತೆಯಿಲ್ಲ, ರಾಜ್ಯದಲ್ಲಿ 2-3 ಸ್ಥಾನಗಳನ್ನು ಗೆಲ್ಲುವ ನಿರೀಕ್ಷಿ ಇದೆ. 2019ರ ಚುನಾವಣೆಯಲ್ಲಿ ಬಿಜೆಪಿ 2 ಸ್ಥಾನಗಳನ್ನು ಗೆದ್ದಿತ್ತು. ಕಳೆದ ಬಾರಿ 1೦ಸ್ಥಾನಗಳನ್ನು ಗೆದ್ದುಕೊಂಡಿದ್ದ ನೆರೆಯ ಹರಿಯಾಣದಲ್ಲಿ, ಪಕ್ಷಕ್ಕೆ 5-6 ಸ್ಥಾನಗಳು ಮಾತ್ರ ದೊರೆಯಲಿದೆ. ತೆಲಂಗಾಣದಲ್ಲಿ ಬಿಜೆಪಿಗೆ 5-6 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ. ಹಿಮಾಚಲ ಪ್ರದೇಶದಲ್ಲಿ ಪಕ್ಷವು ತನ್ನ ಪ್ರಾಬಲ್ಯವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ, ಕ್ಲೀನ್ ಸ್ವೀಪ್ ಆಗುವ ಸಾಧ್ಯತೆ ಇದೆ. ಪಕ್ಷ ಉತ್ತರಾಖಂಡದಲ್ಲಿ 5 ಸ್ಥಾನ ಬಿಜೆಪಿ ಬಿಜೆಪಿ ಪಾಲಾಗಾಲಿದೆ.

ಇದನ್ನೂ ಓದಿ: Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಛತ್ತೀಸ್‌ಗಢದ 11 ಸ್ಥಾನಗಳಲ್ಲಿ ಪಕ್ಷವು 10-11 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. 2019ರ ಚುನಾವಣೆಯಲ್ಲಿ 9 ಸ್ಥಾನಗಳನ್ನು ಗೆದ್ದಿತ್ತು. ಪಕ್ಷವು ದೆಹಲಿಯಲ್ಲಿ 6-7 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ – ಅದು 2019 ರಲ್ಲಿಯೂ ಎಲ್ಲಾ 7 ಸ್ಥಾನಗಳನ್ನು ಗೆದ್ದಿತ್ತು. ಸಟ್ಟಾ ಬಜಾರ್ ಪ್ರಕಾರ ತಮಿಳುನಾಡಿನಲ್ಲಿ ಪಕ್ಷವು 3-4 ಸ್ಥಾನಗಳೊಂದಿಗೆ ಕೆಲವು ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದೆ. ಫಲೋಡಿ ಸತ್ತಾ ಬಜಾರ್ ಪ್ರಕಾರ, ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ತನ್ನ ಸಂಖ್ಯೆಯನ್ನು ಸುಧಾರಿಸುವ ಸಾಧ್ಯತೆಯಿದೆ, ಅದರ ಅಂದಾಜಿನ ಪ್ರಕಾರ 42 ಸ್ಥಾನಗಳಲ್ಲಿ 21-22 ಸ್ಥಾನಗಳನ್ನು ಗೆಲ್ಲಬಹುದೆಂದು ಸೂಚಿಸುತ್ತದೆ.

Continue Reading

ದೇಶ

ವೈದ್ಯರ ಸಲಹೆಯಂತೆ 5 ದಿನದ ಹಸುಳೆಯನ್ನು ಬಿಸಿಲಿನಲ್ಲಿ ಮಲಗಿಸಿದರು; ಬೆಂದು ಕರಟಿಹೋಯ್ತು ಕಂದಮ್ಮನ ಜೀವ

Medical Negligence: 5 ದಿನಗಳ ಹೆಣ್ಣು ಮಗುವೊಂದು ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೈನ್‌ಪುರಿಯ ಆಸ್ಪತ್ರೆಯೊಂದರ ವೈದ್ಯರ ಸಲಹೆಯಂತೆ ನವಜಾತ ಶಿಶುವನ್ನು ತುಂಬಾ ಹೊತ್ತು ಸೂರ್ಯನ ಬಿಸಿಲು ತಾಕುವಂತೆ ತೆರೆದ ಸ್ಥಳದಲ್ಲಿ ಇರಿಸಲಾಗಿತ್ತು. ಇದರಿಂದ ಮಗು ಮೃತಪಟ್ಟಿದ್ದು, ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ತಲೆ ಮರೆಸಿಕೊಂಡಿದ್ದಾರೆ. ಸದ್ಯ ವೈದ್ಯರ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

VISTARANEWS.COM


on

Medical Negligence
Koo

ಲಕ್ನೋ: ಇತ್ತೀಚೆಗೆ ವೈದ್ಯರ ನಿರ್ಲಕ್ಷ್ಯದಿಂದ ತೊಂದರೆ ಅನುಭವಿಸುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ (Medical Negligence). ಇದಕ್ಕೆ ತಾಜಾ ಉದಾಹರಣೆ ಇದು. 5 ದಿನಗಳ ಹೆಣ್ಣು ಮಗುವೊಂದು ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೈನ್‌ಪುರಿಯ ಆಸ್ಪತ್ರೆಯೊಂದರ ವೈದ್ಯರ ಸಲಹೆಯಂತೆ ನವಜಾತ ಶಿಶುವನ್ನು ತುಂಬಾ ಹೊತ್ತು ಸೂರ್ಯನ ಬಿಸಿಲು ತಾಕುವಂತೆ ತೆರೆದ ಸ್ಥಳದಲ್ಲಿ ಇರಿಸಲಾಗಿತ್ತು. ಇದರಿಂದ ಮಗು ಮೃತಪಟ್ಟಿದ್ದು, ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ತಲೆ ಮರೆಸಿಕೊಂಡಿದ್ದಾರೆ (Viral News).

ಈ ಹೃದಯ ವಿದ್ರಾವಕ ಘಟನೆ ಮೈನ್‌ಪುರಿಯ ಘಿರೊರ್‌ ಥಾನಾ ಪ್ರದೇಶದಲ್ಲಿ ನಡೆದಿದೆ. ಭುಗೈ ಎಂಬ ಹಳ್ಳಿಯ ರಿತಾ ಎನ್ನುವ ಮಹಿಳೆ ಇತ್ತೀಚೆಗೆ ಮೈನ್‌ಪುರಿಯ ರಾಧಾರಮಣ್‌ ರಸ್ತೆಯಲ್ಲಿರುವ ಸಾಯಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಸಿಸೇರಿಯನ್‌ ಮೂಲಕ ಈ ಮಗು ಜನಿಸಿತ್ತು. ಜನಿಸುವಾಗಲೇ ಮಗುವಿಗೆ ಕೆಲ ಆರೋಗ್ಯ ಸಮಸ್ಯೆಗಳಿದ್ದವು. ಇದಕ್ಕೆ ವೈದ್ಯರು ಪ್ರತಿ ದಿನ ಅರ್ಧ ಗಂಟೆ ಮಗುವನ್ನು ಬಿಸಿಲಿನಲ್ಲಿ ಇರಿಸುವಂತೆ ಮನೆಯವರಿಗೆ ಸಲಹೆ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.

ಬಿಸಿಲಿನ ತಾಪಕ್ಕೆ ಅಸುನೀಗಿದ ಹಸುಳೆ

ವೈದ್ಯರ ಸಲಹೆಯಂತೆ ಮಗುವಿನ ಮನೆಯವರು 5 ದಿನಗಳ ಹಸುಳೆಯನ್ನು ಆಸ್ಪತ್ರೆಯ ಟೆರೇಸ್‌ಗೆ ಒಯ್ದು ಬಿಸಿಲಿನಲ್ಲಿ ಮಲಗಿಸಿದ್ದರು. ಬೆಳಗ್ಗೆ ಸುಮಾರು 11.30ಕ್ಕೆ ಟೆರೇಸ್‌ನಲ್ಲಿ ಇರಿಸಿ ಅರ್ಧ ಗಂಟೆ ಆದ ಮೇಲೆ ಮಗುವನ್ನು ವಾರ್ಡ್‌ಗೆ ಕರೆದೊಯ್ದಿದ್ದರು. ಇದಾಗಿ ಕೆಲ ಹೊತ್ತಿನಲ್ಲೇ ಮಗು ಮೃತಪಟ್ಟಿತ್ತು ಎಂದು ಮೂಲಗಳು ತಿಳಿಸಿವೆ.

ಹೇಳಿ ಕೇಳಿ ಇದು ಬಿರು ಬೇಸಗೆ ಕಾಲ. ಇತ್ತೀಚೆಗಂತೂ ಉಷ್ಣಾಂಶ ವಿಪರೀತ ಎನ್ನುವಷ್ಟು ಏರಿಕೆಯಾಗಿದೆ. ಹೀಗಾಗಿ ಅತಿಯಾದ ತಾಪಮಾನ ತಾಳಲಾರದೆ ಮಗು ಅಸುನೀಗಿದೆ. ಅಲ್ಲದೆ ಈ ಪ್ರದೇಶದಲ್ಲಿ ಉಷ್ಣಾಂಶ 42 ಡಿಗ್ರಿ ಸೆಲ್ಶಿಯಸ್‌ ದಾಖಲಾಗಿತ್ತು. ವಯಸ್ಕರಿಗೇ ಈ ಬಿಸಿಲಿನ ಝಳವನ್ನು ತಾಳಲು ಸಾಧ್ಯವಾಗುತ್ತಿಲ್ಲ. ಇನ್ನು 5 ದಿನಗಳ ಹಸುಳೆ ಹೇಗೆ ತಡೆದುಕೊಳ್ಳುತ್ತದೆ ಎಂದು ಮನೆಯವರು ಪ್ರಶ್ನಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ತಮ್ಮ ಮಗುವಿನ ಸಾವಿಗೆ ನೇರ ಹೊಣೆ ಎಂದು ಆರೋಪಿಸಿದ್ದಾರೆ.

ಪ್ರತಿಭಟನೆ

ಪ್ರತಿದಿನ ಅರ್ಧ ಗಂಟೆ ಬಿಸಿಲಿನಲ್ಲಿ ಇರುವಂತೆ ವೈದ್ಯರು ಸಲಹೆ ನೀಡಿದ್ದರಿಂದಲೇ ಮಗು ಅಸುನೀಗಿದೆ ಎಂದಿರುವ ಕುಟುಂಬಸ್ಥರು ಆಸ್ಪತ್ರೆಯ ಆಡಳಿತದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಜತೆಗೆ ಆಸ್ಪತ್ರೆಯ ಆಡಳಿತದ ವಿರುದ್ಧ ದೂರು ದಾಖಲಿಸಿದ್ದಾರೆ. ಇತ್ತ ಮಗು ಮೃತಪಡುತ್ತಿದ್ದಂತೆ ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿ ತಲೆ ಮರೆಸಿಕೊಂಡಿದ್ದಾರೆ. ಸಿಎಂಒ ಆದೇಶದ ಮೇರೆಗೆ ಸದ್ಯ ಆಸ್ಪತ್ರೆಯನ್ನು ಸೀಲ್ ಮಾಡಲಾಗಿದೆ ಮತ್ತು ವೈದ್ಯರ ವಿರುದ್ಧ ತನಿಖೆಯನ್ನು ಪ್ರಾರಂಭಿಸಲಾಗಿದೆ.

ಇದನ್ನೂ ಓದಿ: Medical Negligence : ವೈದ್ಯರ ನಿರ್ಲಕ್ಷ್ಯಕ್ಕೆ 4 ತಿಂಗಳ ಮಗು ಬಲಿ? ಆಕ್ಸಿಜನ್‌ ಹಾಕಿದ 10 ನಿಮಿಷಕ್ಕೆ ಮೃತ್ಯು!

ಕೇರಳದಲ್ಲಿ ಮತ್ತೊಂದು ಪ್ರಕರಣ

ಇತ್ತ ಕೇರಳದಲ್ಲಿಯೂ ವೈದ್ಯರು ಎಡವಟ್ಟು ಮಾಡಿಕೊಂಡಿದ್ದಾರೆ. ಕೋಝಿಕ್ಕೋಡ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿನ ಡಾಕ್ಟರ್‌ ಮಗುವಿನ ಕೈ ಬೆರಳಿನ ಬದಲು ನಾಲಿಗೆಯ ಶಸ್ತ್ರಚಿಕಿತ್ಸೆಯ ಮಾಡಿದ್ದಾರೆ. ವೈದ್ಯರ ನಿರ್ಲಕ್ಷ್ಯಕ್ಕೆ ಪೋಷಕರು ಅಸಮಾಧಾನ ಹೊರ ಹಾಕುತ್ತಿದ್ದಂತೆ ವೈದ್ಯರು ಬಂದು ತಪ್ಪಿಗೆ ಕ್ಷಮೆ ಯಾಚಿಸಿದ್ದು, ಮತ್ತೆ ಮಗುವನ್ನು ಕರೆದುಕೊಂಡು ಹೋಗಿ ಬೆರಳಿನ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಮಗುವಿನ ಕೈಯಲ್ಲಿರುವ ಆರನೇ ಬೆರಳನ್ನು ತೆಗೆಯಲು ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದರು. ಸದ್ಯ ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

Continue Reading

ದೇಶ

Kapil Sibal: ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಕಪಿಲ್‌ ಸಿಬಲ್‌ ಆಯ್ಕೆ

Kapil Sibal: ಕಪಿಲ್‌ ಸಿಬಲ್‌ ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಅವರು ಅಭಿನಂದನೆ ಸಲ್ಲಿಸಿದ್ದಾರೆ. “ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಕಪಿಲ್‌ ಸಿಬಲ್‌ ಅವರು ಆಯ್ಕೆಯಾಗಿದ್ದಾರೆ. ಇದು ಉದಾರವಾದಿಗಳು, ಜಾತ್ಯತೀತವಾದಿಗಳು, ಪ್ರಜಾಪ್ರಭುತ್ವವಾದಿಗಳು ಹಾಗೂ ಪ್ರಗತಿಪರರಿಗೆ ಸಿಕ್ಕ ದೊಡ್ಡ ಗೆಲುವಾಗಿದೆ” ಎಂದು ಪೋಸ್ಟ್‌ ಮಾಡಿದ್ದಾರೆ.

VISTARANEWS.COM


on

Kapil Sibal
Koo

ನವದೆಹಲಿ: ಸುಪ್ರೀಂ ಕೋರ್ಟ್‌ ಹಿರಿಯ ವಕೀಲ, ಕೇಂದ್ರದ ಮಾಜಿ ಸಚಿವರೂ ಆದ ಕಪಿಲ್‌ ಸಿಬಲ್‌ (Kapil Sibal) ಅವರು ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ (Supreme Court Bar Association) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ಗೆ ಗುರುವಾರ (ಮೇ 16) ಚುನಾವಣೆ ನಡೆದಿದ್ದು, ಕಪಿಲ್‌ ಸಿಬಲ್‌ ಅವರು ಪ್ರದೀಪ್‌ ರೈ ವಿರುದ್ಧ ಗೆಲುವು ಸಾಧಿಸುವ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮೇ 8ರಂದು ಚುನಾವಣೆಗೆ ಸ್ಪರ್ಧಿಸುವುದಾಗಿ ಕಪಿಲ್‌ ಸಿಬಲ್‌ ಘೋಷಣೆ ಮಾಡಿದ್ದರು.

ಕಪಿಲ್‌ ಸಿಬಲ್‌ ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಅವರು ಅಭಿನಂದನೆ ಸಲ್ಲಿಸಿದ್ದಾರೆ. “ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಕಪಿಲ್‌ ಸಿಬಲ್‌ ಅವರು ಆಯ್ಕೆಯಾಗಿದ್ದಾರೆ. ಇದು ಉದಾರವಾದಿಗಳು, ಜಾತ್ಯತೀತವಾದಿಗಳು, ಪ್ರಜಾಪ್ರಭುತ್ವವಾದಿಗಳು ಹಾಗೂ ಪ್ರಗತಿಪರರಿಗೆ ಸಿಕ್ಕ ದೊಡ್ಡ ಗೆಲುವಾಗಿದೆ. ದೇಶದಲ್ಲಿ ಬದಲಾವಣೆಯಾಗುತ್ತಿದೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ. ಮುಂದಿನ ದಿನಗಳಲ್ಲಿ ದೇಶದ ಪ್ರಧಾನಿಯೂ ಬದಲಾಗಲಿದ್ದಾರೆ” ಎಂದು ನರೇಂದ್ರ ಮೋದಿ ಅವರಿಗೆ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ.

ಕಪಿಲ್‌ ಸಿಬಲ್‌ ಹಿನ್ನೆಲೆ ಏನು?

ದೇಶದ ಪ್ರಮುಖ ವಕೀಲರಲ್ಲಿ ಕಪಿಲ್‌ ಸಿಬಲ್‌ ಅವರು ಒಬ್ಬರಾಗಿದ್ದಾರೆ. ಪಂಜಾಬ್‌ನ ಜಲಂಧರ್‌ನವರಾದ ಕಪಿಲ್‌ ಸಿಬಲ್‌ ಅವರು ಹಾರ್ವರ್ಡ್‌ ಲಾ ಸ್ಕೂಲ್‌ನಲ್ಲಿ ಪದವಿ ಪಡೆದು, ವಕೀಲಿಕೆ ಆರಂಭಿಸಿದರು. 1983ರಲ್ಲಿ ಇವರು ಹಿರಿಯ ವಕೀಲ ಎಂಬ ಖ್ಯಾತಿ ಗಳಿಸಿದರು. ಇವರು 1989ರಿಂದ 1990ರವರೆಗೆ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಆಗಿದ್ದರು. ಇವರು 1995ರಿಂದ 2002ರ ಅವಧಿಯಲ್ಲಿ ಮೂರು ಬಾರಿ ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು.

ಕಾಂಗ್ರೆಸ್ ನಾಯಕರೂ ಆಗಿರುವ ಕಪಿಲ್‌ ಸಿಬಲ್‌ ಅವರು ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿದ್ದಾಗ ಸಚಿವರೂ ಆಗಿದ್ದರು. ರಾಜ್ಯಸಭೆ ಸದಸ್ಯರಾಗಿ, 2004ರಲ್ಲಿ ಚಾಂದಿನಿ ಚೌಕ್‌ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸ್ಮೃತಿ ಇರಾನಿ ಅವರನ್ನು ಸೋಲಿಸಿದ್ದರು. ಇದುವರೆಗೆ ಹಿರಿಯ ವಕೀಲ ಆದಿಶ್‌ ಅಗರ್ವಾಲ ಅವರು ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿದ್ದರು. ಈಗ ಕಪಿಲ್‌ ಸಿಬಲ್‌ ಅವರು ಮತ್ತೆ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ: Ujjivan Small Finance Bank : ಉಜ್ಜೀವನ್ ಸ್ಮಾಲ್ ಫೈನಾನ್ಸ್ ಸಿಇಒ ಆಗಿ ಸಂಜೀವ್ ನೌಟಿಯಾಲ್ ನೇಮಕ

Continue Reading

ಕರ್ನಾಟಕ

Cauvery Dispute: ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ; ತಮಿಳುನಾಡಿಗೆ CWRC ಚಾಟಿ

Cauvery Dispute: ಫೆಬ್ರವರಿಯಿಂದ ಮೇವರೆಗೆ ಕರ್ನಾಟಕವು ಪ್ರತಿ ತಿಂಗಳು 2.50 ಟಿಎಂಸಿಯಂತೆ ಪರಿಸರ ಹರಿವನ್ನು ನಿರಂತರವಾಗಿ ಬಿಡುಗಡೆ ಮಾಡಬೇಕು ಎಂದು ಕಳೆದ ಫೆಬ್ರವರಿಯಲ್ಲಿಯೇ ತಮಿಳುನಾಡು ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ವಾದ ಮಂಡಿಸಿತ್ತು. ಸುಪ್ರೀಂ ಕೋರ್ಟ್‌ ಆದೇಶದಂತೆ ಮಾರ್ಚ್‌ ಹಾಗೂ ಏಪ್ರಿಲ್‌ನಲ್ಲಿ ಕರ್ನಾಟಕವು ತಮಿಳುನಾಡಿಗೆ ನೀರು ಬಿಟ್ಟಿತ್ತು.

VISTARANEWS.COM


on

cauvery dispute
Koo

ನವದೆಹಲಿ: ಕರ್ನಾಟಕದಲ್ಲಿ ಬರಗಾಲವಿದ್ದರೂ ಕಾವೇರಿ ನದಿ ನೀರು (Cauvery Dispute) ವಿಚಾರದಲ್ಲಿ ಮೊಂಡಾಟ ಪ್ರದರ್ಶಿಸುತ್ತಿದ್ದ ತಮಿಳುನಾಡಿಗೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಸಮಿತಿ ಸಭೆಯಲ್ಲಿ ಭಾರಿ ಮುಖಭಂಗವಾಗಿದೆ. ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ತಮಿಳುನಾಡಿನ ವಾದವನ್ನು ಒಪ್ಪದ ಸಿಡಬ್ಲ್ಯೂಆರ್‌ಸಿಯು ಕರ್ನಾಟಕದಿಂದ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಇದರಿಂದಾಗಿ, ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ಭಾರಿ ಮುಖಭಂಗವಾಗಿದೆ.

ತಮಿಳುನಾಡಿಗೆ ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ ಎಂದು 2023-24ನೇ ಜಲವರ್ಷದ ಅಂತಿಮ ಸಭೆಯಲ್ಲಿ ಸಿಡಬ್ಲ್ಯೂಆರ್‌ಸಿ ಖಡಕ್‌ ಆದೇಶ ನೀಡಿದೆ. “ಕರ್ನಾಟಕದಲ್ಲಿ ತೀವ್ರ ಬರಗಾಲ ಇರುವುದರಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ. ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯಿಂದ ನೈಸರ್ಗಿಕವಾಗಿ ನದಿ ಸೇರುವ ನೀರನ್ನು ಬಳಸಿಕೊಳ್ಳಿ” ಎಂಬುದಾಗಿ ತಮಿಳುನಾಡಿಗೆ ಸೂಚನೆ ನೀಡಿದೆ. ಮೇ 21ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆ ನಡೆಯಲಿದ್ದು, ಅಲ್ಲೂ ತಮಿಳುನಾಡು ತನ್ನ ಮೊಂಡುವಾದ ಮುಂದಿಡಲಿದೆ ಎಂದು ಹೇಳಲಾಗುತ್ತಿದೆ.

Cauvery water CWRC order

ಫೆಬ್ರವರಿಯಿಂದ ಮೇವರೆಗೆ ಕರ್ನಾಟಕವು ಪ್ರತಿ ತಿಂಗಳು 2.50 ಟಿಎಂಸಿಯಂತೆ ಪರಿಸರ ಹರಿವನ್ನು ನಿರಂತರವಾಗಿ ಬಿಡುಗಡೆ ಮಾಡಬೇಕು ಎಂದು ಕಳೆದ ಫೆಬ್ರವರಿಯಲ್ಲಿಯೇ ತಮಿಳುನಾಡು ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ವಾದ ಮಂಡಿಸಿತ್ತು. ಸುಪ್ರೀಂ ಕೋರ್ಟ್‌ ಆದೇಶದಂತೆ ಮಾರ್ಚ್‌ ಹಾಗೂ ಏಪ್ರಿಲ್‌ನಲ್ಲಿ ಕರ್ನಾಟಕವು ತಮಿಳುನಾಡಿಗೆ ನೀರು ಬಿಟ್ಟಿತ್ತು. ಆದರೆ, ಮೇ ಅಂತ್ಯದವರೆಗೂ ನೀರು ಬಿಡಬೇಕು ಎಂಬುದು ತಮಿಳುನಾಡಿನ ವಾದವಾಗಿತ್ತು. ಇದನ್ನು ಸಿಡಬ್ಲ್ಯೂಆರ್‌ಸಿ ನಿರಾಕರಿಸಿದೆ.

ಕರ್ನಾಟಕದಲ್ಲಿ ಕೆಲ ದಿನಗಳಿಂದ ಮಳೆ ಬರುತ್ತಿದೆ. ಇಷ್ಟಾದರೂ ಅಣೆಕಟ್ಟುಗಳು ತುಂಬಿಲ್ಲ. ರಾಜ್ಯದ 200ಕ್ಕೂ ಅಧಿಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಮೇ 31 ದೇಶವನ್ನು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿರುವುದು ರೈತರ ಪಾಲಿಗೆ ಸಿಹಿ ಸುದ್ದಿಯೇ ಆಗಿದೆ. ಮೇ 27ರಿಂದ ಜೂನ್‌ 4ರ ಅವಧಿಯಲ್ಲಿ ಯಾವಾಗ ಬೇಕಾದರೂ ನೈಋತ್ಯ ಮುಂಗಾರು ಪ್ರವೇಶಿಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರತಿ ವರ್ಷ ಜೂನ್‌ 1ರಂದು ಮುಂಗಾರು ಮಳೆಯು ಕೇರಳವನ್ನು ಪ್ರವೇಶಿಸಿ, ದೇಶಾದ್ಯಂತ ವ್ಯಾಪಿಸುವುದು ವಾಡಿಕೆಯಾಗಿದೆ. ಆದರೆ, ಹವಾಮಾನ ಇಲಾಖೆಯು ಈ ಬಾರಿ ಒಂದು ದಿನ ಮೊದಲೇ ಪ್ರವೇಶಿಸಲಿದೆ ಎಂದು ತಿಳಿಸಿದೆ. ಸೆಪ್ಟೆಂಬರ್‌ನಲ್ಲಿ ಮುಂಗಾರು ಮಳೆ ಅಂತ್ಯವಾಗಲಿದೆ.

ಇದನ್ನೂ ಓದಿ: HD Kumaraswamy: ಜನರ ಕಣ್ಣಿಗೆ ಮಣ್ಣೆರಚಬೇಡಿ; ಮಂಡ್ಯಕ್ಕೆ ಕಾವೇರಿ ಗ್ಯಾರಂಟಿ ಕೊಡಿ: ಕಾಂಗ್ರೆಸ್‌ಗೆ ಎಚ್‌ಡಿಕೆ ಸವಾಲು

Continue Reading
Advertisement
Cannes 2024 Aishwarya Rai turns lady in black in Falguni
ಸಿನಿಮಾ7 seconds ago

Cannes 2024: ಬ್ಯಾಂಡೇಜ್​ ಸುತ್ತಿಕೊಂಡೇ ರೆಡ್​ ಕಾರ್ಪೆಟ್ ಮೇಲೆ ಪೋಸ್‌ ಕೊಟ್ಟ ​ಐಶ್ವರ್ಯಾ ರೈ!

These foods are really what our body needs in summer
ಆರೋಗ್ಯ23 mins ago

Health Tips in Kannada: ಬೇಸಿಗೆಯಲ್ಲಿ ನಿಜಕ್ಕೂ ನಮ್ಮ ದೇಹಕ್ಕೆ ಬೇಕಾಗಿರುವುದು ಈ ಆಹಾರಗಳು

Lok Sabha Election 2024
ದೇಶ33 mins ago

Lok Sabha Election 2024: ಬಿಜೆಪಿಯ 400+ ಲೆಕ್ಕಾಚಾರ ಉಲ್ಟಾ? ಚುನಾವಣೆ ಹೊತ್ತಲ್ಲೇ ಪಕ್ಷಕ್ಕೆ ಬಿಗ್‌ ಶಾಕ್‌!

Medical Negligence
ದೇಶ35 mins ago

ವೈದ್ಯರ ಸಲಹೆಯಂತೆ 5 ದಿನದ ಹಸುಳೆಯನ್ನು ಬಿಸಿಲಿನಲ್ಲಿ ಮಲಗಿಸಿದರು; ಬೆಂದು ಕರಟಿಹೋಯ್ತು ಕಂದಮ್ಮನ ಜೀವ

anjali murder case girish
ಕ್ರೈಂ47 mins ago

Anjali Murder Case: ಅಂಜಲಿ ಹಂತಕನಿಗೆ ಸಾರ್ವಜನಿಕರಿಂದ ಗೂಸಾ, ಬಂಧನ

techie wife udr case
ಕ್ರೈಂ1 hour ago

UDR Case: ಟೆಕ್ಕಿ ಪತ್ನಿಯ ಅನುಮಾನಾಸ್ಪದ ಸಾವು

Karnataka weather Forecast
ಮಳೆ2 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

World Hypertension Day Today is Global Blood Pressure Day
ಆರೋಗ್ಯ4 hours ago

World Hypertension Day: ಇಂದು ಜಾಗತಿಕ ರಕ್ತದೊತ್ತಡ ದಿನ; ಈ ಸಮಸ್ಯೆಯ ಅರಿವು ನಿಮಗೆಷ್ಟಿದೆ?

Pakistan
ಸಂಪಾದಕೀಯ9 hours ago

ವಿಸ್ತಾರ ಸಂಪಾದಕೀಯ: ಒಪ್ಪಿಕೊಂಡರೆ ಸಾಲದು, ಪಾಕ್‌ ತನ್ನನ್ನು ಸರಿಪಡಿಸಿಕೊಳ್ಳಲಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ16 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ18 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು22 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌