Gold Smuggling: ಶಶಿ ತರೂರ್‌ ಪಿಎ ಅರೆಸ್ಟ್‌- ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್‌ ನಾಯಕನಿಗೆ ತೀವ್ರ ಮುಜುಗರ - Vistara News

ದೇಶ

Gold Smuggling: ಶಶಿ ತರೂರ್‌ ಪಿಎ ಅರೆಸ್ಟ್‌- ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್‌ ನಾಯಕನಿಗೆ ತೀವ್ರ ಮುಜುಗರ

Gold Smuggling:ಈ ಕುರಿತು ಕಸ್ಟಮ್ಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದು, ದುಬೈನಿಂದ ತಮ್ಮ ಸಹಾಯಕನ ಮೂಲಕ ಅಕ್ರಮವಾಗಿ ಚಿನ್ನವನ್ನು ಶಿವಕುಮಾರ್‌ ತರಿಸಿದ್ದರು. ಇದನ್ನು ಪಡೆಯುವ ವೇಳೆ ಕಸ್ಟಮ್ಸ್‌ ಅಧಿಕಾರಿಗಳು ಅವರನ್ನು ಅರೆಸ್ಟ್‌ ಮಾಡಿದ್ದಾರೆ. ಇನ್ನು 30ಲಕ್ಷ ರೂ.ಗೂ ಅಧಿಕ ಮೊತ್ತದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಈ ಬಗ್ಗೆ ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

VISTARANEWS.COM


on

Gold Smuggling
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಅಕ್ರಮ ಚಿನ್ನ ಸಾಗಾಟ(Gold Smuggling) ಮಾಡುತ್ತಿದ್ದ ಆರೋಪದ ಮೇಲೆ ಕಾಂಗ್ರೆಸ್‌ ಮುಖಂಡ ಶಶಿ ತರೂರ್‌(Shashi Tharoor) ಅವರ ಆಪ್ತ ಸಹಾಯಕನನ್ನು ಅರೆಸ್ಟ್‌ ಮಾಡಲಾಗಿದೆ. ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣ(IGI Airport)ದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಶಶಿ ತರೂರ್‌ ಅವರ ಪಿಎ ಶಿವ ಪ್ರಸಾದ್‌ ಅವರನ್ನು ವಶಕ್ಕೆ ಪಡೆಸಿದ್ದಾರೆ. ಶಿವ ಕುಮಾರ್‌ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಕಸ್ಟಮ್ಸ್‌ ಅಧಿಕಾರಿಗಳು ಟರ್ಮಿನಲ್‌ 3ರಲ್ಲಿ ಅವರನ್ನು ಪರಿಶೀಲನೆ ನಡೆಸಿ ಬಂಧಿಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಕಸ್ಟಮ್ಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದು, ದುಬೈನಿಂದ ತಮ್ಮ ಸಹಾಯಕನ ಮೂಲಕ ಅಕ್ರಮವಾಗಿ ಚಿನ್ನವನ್ನು ಶಿವಕುಮಾರ್‌ ತರಿಸಿದ್ದರು. ಇದನ್ನು ಪಡೆಯುವ ವೇಳೆ ಕಸ್ಟಮ್ಸ್‌ ಅಧಿಕಾರಿಗಳು ಅವರನ್ನು ಅರೆಸ್ಟ್‌ ಮಾಡಿದ್ದಾರೆ. ಇನ್ನು 30ಲಕ್ಷ ರೂ.ಗೂ ಅಧಿಕ ಮೊತ್ತದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಈ ಬಗ್ಗೆ ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಕುಮಾರ್‌ ದುಬೈನಿಂದ ದೆಹಲಿ ಏರ್‌ಪೋರ್ಟ್‌ಗೆ ಬಂದಿಳಿಯುತ್ತಿದ್ದಂತೆ ಕಸ್ಟಮ್ಸ್‌ ಆದಿಕಾರಿಗಳು ಅವರನ್ನು ವಿಚಾರಣೆಗೊಳಪಡಿಸಿದ್ದು, ಚಿನ್ನ ಎಲ್ಲಿಂದ ಬಂತು ಹೇಗೆ ಬಂದು ಎಂಬ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಆಗ ಕುಮಾರ್‌ ಅಧಿಕಾರಿಗಳ ಪ್ರಶ್ನೆಗೆ ಸಮಾಧಾನಕರ ಉತ್ತರ ನೀಡಿಲ್ಲ. ಹೀಗಾಗಿ ಅವರನ್ನು ಅರೆಸ್ಟ್‌ ಮಾಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಇನ್ನು ಕೆಲವು ದಿನಗಳ ಹಿಂದೆ ಭಾರತದಿಂದ ದುಬೈಗೆ ಕೋಟ್ಯಂತರ ರೂ ಮೌಲ್ಯದ ಚಿನ್ನವನ್ನು ಕಳ್ಳ ಸಾಗಾಣೆಮಾಡುತ್ತಿದ್ದ ಅಫ್ಘಾನಿಸ್ತಾನದ ರಾಜತಾಂತ್ರಿಕ(Afghan diplomat) ಅಧಿಕಾರಿಯೊಬ್ಬರು ಮುಂಬೈ ವಿಮಾನ ನಿಲ್ದಾಣದಲ್ಲಿ ಬಲೆಗೆ ಬಿದ್ದಿದ್ದರು. ಅಫ್ಘಾನಿಸ್ತಾನದ(Afghanistan) ಇಸ್ಲಾಮಿಕ್‌ ರಿಪಬ್ಲಿಕ್‌ನ ರಾಜತಾಂತ್ರಿಕ ಅಧಿಕಾರಿ ಜಾಕಿಯಾ ವಾರ್ದಕ್‌ ಅವರು ಬರೋಬ್ಬರಿ 18.6 ಕೋಟಿ ರೂ. ಮೌಲ್ಯದ 25 ಕೆ.ಜಿ. ಚಿನ್ನವನ್ನು ಕಳ್ಳ ಸಾಗಾಟ ಮಾಡುತ್ತಿದ್ದ ವೇಳೆ ಏರ್‌ಪೋರ್ಟ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದರು.

ಇದನ್ನೂ ಓದಿ:Delhi Temperature: ದೆಹಲಿಯಲ್ಲಿ 52 ಡಿಗ್ರಿ ಸೆಲ್ಸಿಯಸ್‌ ತಾಪಮಾನ; ದೇಶದಲ್ಲೇ ಇದುವರೆಗಿನ ಗರಿಷ್ಠ ಟೆಂಪರೇಚರ್!

ಇನ್ನು ಚುನಾವಣೆ ಸಂದರ್ಭದಲ್ಲೇ ತಮ್ಮ ಆಪ್ತ ಸಹಾಯಕನ ಬಂಧನ ಆಗಿರುವುದು ಶಶಿ ತರೂರ್‌ ಅವರಿಗೆ ಮುಜುಗರ ತಂದಿದೆ. ಶಶಿ ತರೂರ್‌ ಕೇರಳದ ತಿರುವನಂತಪುರಂ ಲೋಕಸಭಾ ಕ್ಷೇತ್ರದ ಹಾಲಿ ಸಂಸದನಾಗಿದ್ದು, ಈ ಬಾರಿ ಅವರಿಗೆ ಪೈಪೋಟಿ ನೀಡಲು ಬಿಜೆಪಿಯಿಂದ (bjp) ರಾಜೀವ್ ಚಂದ್ರಶೇಖರ್ (Rajeev Chandrasekhar ) ಮತ್ತು ಸಿಪಿಐ (cpi) ನಾಯಕ ಪನ್ನಯನ್ ರವೀಂದ್ರನ್ (Pannyan Raveendran) ಕಣಕ್ಕೆ ಇಳಿದಿದ್ದಾರೆ.
59 ವರ್ಷದ ಚಂದ್ರಶೇಖರ್ ಮತ್ತು 67 ವರ್ಷದ ತರೂರ್ ಇಬ್ಬರೂ ರಾಷ್ಟ್ರ ಮಟ್ಟದ ನಾಯಕರು. ಇವರಿಬ್ಬರೂ ತಮ್ಮದೇ ಆದ ಸಾಧನೆಗಳಿಂದ ಗುರುತಿಸಿಕೊಂಡಿದ್ದಾರೆ. ಇವರಿಗೆ ಪೈಪೋಟಿ ನೀಡಲು 78 ವರ್ಷದ ರವೀಂದ್ರನ್ ಸ್ಪರ್ಧೆಗೆ ಇಳಿದಿದ್ದು, ತಳಮಟ್ಟದ ನಾಯಕ ಎನ್ನುವ ಖ್ಯಾತಿ ಇವರಿಗೆ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

Edu Guide: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: IDFC FIRST ಬ್ಯಾಂಕ್‌ನಿಂದ 2 ಲಕ್ಷ ರೂ. ಸ್ಕಾಲರ್‌ಶಿಪ್‌; ಹೀಗೆ ಅಪ್ಲೈ ಮಾಡಿ

Edu Guide: ಎಂಬಿಎ ಓದುತ್ತಿರುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌. ಐಡಿಎಫ್‌ಸಿ ಫಸ್ಟ್‌ ಬ್ಯಾಂಕ್‌ ನೀಡುವ ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನಿಸಲಾಗಿದೆ. 2 ಲಕ್ಷ ರೂ. ನೀಡುವ ಸ್ಕಾಲರ್‌ಶಿಪ್‌ ಇದಾಗಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 31. ಅರ್ಜಿ ಸಲ್ಲಿಸುವ ವಿಧಾನ, ಯಾರೆಲ್ಲ ಅರ್ಹರು ಮುಂತಾದ ವಿವರ ಇಲ್ಲಿದೆ.

VISTARANEWS.COM


on

Edu Guide
Koo

ಬೆಂಗಳೂರು: ದೇಶದಲ್ಲಿ ಶಿಕ್ಷಣದ ಬಗ್ಗೆ ಜಾಗೃತಿ ಮೂಡುತ್ತಿದೆ. ನಗರ, ಗ್ರಾಮಾಂತರ ಪ್ರದೇಶಗಳಲ್ಲಿ ಸಾಕ್ಷರತೆ ಪ್ರಮಾಣ ಹೆಚ್ಚಾಗುತ್ತಿದೆ. ಅದಾಗ್ಯೂ ಉನ್ನತ ಶಿಕ್ಷಣ ಎನ್ನುವುದು ಇನ್ನೂ ಹಲವು ಕಡೆ ಗಗನ ಕುಸುಮ ಎನಿಸಿಕೊಂಡಿದೆ. ಅದರಲ್ಲಿಯೂ ಎಂಜಿನಿಯರಿಂಗ್‌, ಮೆಡಿಕಲ್‌, ಎಂಬಿಎಯಂತಹ ಉನ್ನತ ಶಿಕ್ಷಣದಲ್ಲಿದಲ್ಲಿನ ದುಬಾರಿ ಫೀಸ್‌ ಕಾರಣದಿಂದ ಹಣ ಹೊಂದಿಸಲು ಬಡ ಮತ್ತು ಮಧ್ಯಮ ವರ್ಗದ ಮಂದಿ ಇಂದಿಗೂ ಪರದಾಡುತ್ತಿದ್ದಾರೆ. ಇದೇ ಕಾರಣಕ್ಕೆ ಸರ್ಕಾರಗಳು ಮತ್ತು ಬ್ಯಾಂಕ್‌ನಂತಹ ಕೆಲವು ಖಾಸಗಿ ಸಂಸ್ಥೆಗಳು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ ನೀಡಲು ಮುಂದು ಬಂದಿವೆ (Scholarship For Students). ಈ ಪೈಕಿ ಐಡಿಎಫ್‌ಸಿ ಫಸ್ಟ್‌ ಬ್ಯಾಂಕ್‌ ನೀಡುವ ಸ್ಕಾಲರ್‌ಶಿಪ್‌ ಪ್ರಮುಖವಾದುದು (IDFC FIRST Bank MBA Scholarship 2024-26). ಬ್ಯಾಂಕ್‌ ಬಡ ಎಂಬಿಎ ವಿದ್ಯಾರ್ಥಿಗಳಿಗೆ 2 ವರ್ಷಕ್ಕೆ 2 ಲಕ್ಷ ರೂ. ಒದಗಿಸುತ್ತಿದೆ. ಇದಕ್ಕೆ ಯಾರೆಲ್ಲ ಅರ್ಹರು? ಅಪ್ಲೈ ಮಾಡುವುದು ಹೇಗೆ? ಮುಂತಾದ ವಿವರ ಇಲ್ಲಿದೆ (Edu Guide).

ಏನಿದು ಯೋಜನೆ?

ಐಡಿಎಫ್‌ಸಿ ಫಸ್ಟ್‌ ಬ್ಯಾಂಕ್‌ ಎಂಬಿಎ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು 2018ರಲ್ಲಿ ಪರಿಚಯಿಸಿದೆ. ಈ ಯೋಜನೆ ಮೂಲಕ ಅರ್ಹ ವಿದ್ಯಾರ್ಥಿಗಳ ಶಿಕ್ಷಣಕ್ಕೆ 2 ಲಕ್ಷ ರೂ. ನೆರವು ಒದಗಿಸಲಾಗುತ್ತದೆ. ಇದುವರೆಗೆ 152 ಕಾಲೇಜುಗಳ ಸುಮಾರು 1,154 ವಿದ್ಯಾರ್ಥಿಗಳು ಸ್ಕಾಲರ್‌ಶಿಪ್‌ ಪಡೆದುಕೊಂಡಿದ್ದಾರೆ.

ಯಾರೆಲ್ಲ ಅರ್ಹರು?

ಈ ಬಾರಿಯ ಸ್ಕಾಲರ್‌ಶಿಪ್‌ನ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅರ್ಹರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜುಲೈ 31. ಸ್ಕಾಲರ್‌ಶಿಪ್‌ಗೆ ಈ ಕೆಳಗಿನ ಅರ್ಹತೆ ಅಗತ್ಯ.

  • ಭಾರತೀಯ ನಾಗರಿಕರಾಗಿರಬೇಕು.
  • ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂ. ಅಥವಾ ಅದಕ್ಕಿಂತ ಕಡಿಮೆ ಇರಬೇಕು.
  • ಪಟ್ಟಿಯಲ್ಲಿ ಇರುವ ಕಾಲೇಜಿನಲ್ಲಿ ಪ್ರವೇಶ ಪಡೆದಿರಬೇಕು (ಕಾಲೇಜಿನ ಪಟ್ಟಿ ಕೆಳಗೆ ನೀಡಲಾಗಿದೆ).
  • 2 ವರ್ಷಗಳ ಪೂರ್ಣ ಅವಧಿಯ ಎಂಬಿಎ ಕೋರ್ಸ್‌ನ ಮೊದಲ ವರ್ಷದಲ್ಲಿರಬೇಕು.
  • ಆಧಾರ್‌ ನಂಬರ್‌ ಜತೆ ಲಿಂಕ್‌ ಆಗಿರುವ ಮೊಬೈಲ್‌ ನಂಬರ್‌ ಹೊಂದಿರಬೇಕು.

ಅಗತ್ಯ ದಾಖಲೆಗಳು

  • ಕಾಲೇಜಿಗೆ ಪ್ರವೇಶ ಪಡೆದಿರುವ ಪುರಾವೆ (ಕಾಲೇಜು ಹೆಸರು, ಅಡ್ಮಿಷನ್‌ ವರ್ಷ ಇತ್ಯಾದಿ ಮಾಹಿತಿ ಒಳಗೊಂಡಿರಬೇಕು).
  • ಶುಲ್ಕ ಪಾವತಿಯ ರಸೀದಿ.
  • ಪದವಿ ತರಗತಿಯ ಅಂಕಪಟ್ಟಿ ಮತ್ತು ಉತ್ತೀರ್ಣ ಪ್ರಮಾಣಪತ್ರದ ಪ್ರತಿ.
  • ಆದಾಯ ಪ್ರಮಾಣ ಪತ್ರ.

ಕಾಲೇಜಿನ ಪಟ್ಟಿ ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ (https://d2w7l1p59qkl0r.cloudfront.net/static/files/list-of-institutions-idfc-first-bank-mba-scholarship-2024-26.pdf)

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://www.buddy4study.com/page/idfc-first-bank-mba-scholarship#scholarships)
  • ಹೆಸರು ನೋಂದಾಯಿಸಿ.
  • ಈಗ IDFC FIRST Bank MBA Scholarship 2024-26 ಪುಟ ಕಾಣಿಸುತ್ತದೆ.
  • ವಿವರಗಳನ್ನು ಓದಿ ‘Apply Now’ ಬಟನ್‌ ಕ್ಲಿಕ್‌ ಮಾಡಿ.
  • ಆಧಾರ್‌ ನಂಬರ್‌ನೊಂದಿಗೆ ಲಿಂಕ್‌ ಆಗಿರುವ ಮೊಬೈಲ್‌ ನಂಬರ್‌ ನಮೂದಿಸಿ.
  • ಈಗ ಯುಆರ್‌ಎಲ್‌, ಯೂಸರ್‌ ಐಡಿ, ಮತ್ತು ಪಾಸ್‌ವರ್ಡ್‌ ಸ್ವೀಕರಿಸುತ್ತೀರಿ.
  • ಅದನ್ನು ಬಳಸಿ ಲಾಗಿನ್‌ ಆಗಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಓದಿ: Edu Guide: ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಸಿಗಲಿವೆ ಇವೆಲ್ಲ ಸ್ಕಾಲರ್‌ಶಿಪ್‌

Continue Reading

ಆರೋಗ್ಯ

Brain-Eating Amoeba: ಮೆದುಳು ತಿನ್ನುವ ಅಮೀಬಾಕ್ಕೆ ಮತ್ತೊಂದು ಬಲಿ; 2 ತಿಂಗಳ ಅಂತರದಲ್ಲಿ 3ನೇ ಪ್ರಕರಣ

Brain-Eating Amoeba: ಅಪರೂಪದ ಮೆದುಳು ತಿನ್ನುವ ಅಮೀಬಾ ಸೋಂಕಿಗೆ ಕೇರಳದಲ್ಲಿ ಮತ್ತೊಬ್ಬ ಬಾಲಕ ಬಲಿಯಾಗಿದ್ದಾನೆ. ಬುಧವಾರ ರಾತ್ರಿ ಮೃತಪಟ್ಟ ಕೇರಳದ ಕೋಝಿಕ್ಕೋಡ್‌ ಜಿಲ್ಲೆಯ 12 ವರ್ಷ ಬಾಲಕನಿಗೆ ಅಮೀಬಿಕ್ ಮೆನಿಂಗೊ ಎನ್ಸೆಫಾಲಿಟಿಸ್ (ಮೆದುಳು ತಿನ್ನುವ ಅಮೀಬಾ) ಸೋಂಕು ತಗುಲಿದ್ದು ದೃಧಪಟ್ಟಿದ್ದು, ಕಳೆದ ಎರಡು ತಿಂಗಳಲ್ಲಿ ಸಂಭವಿಸಿದ ಇಂತಹ ಮೂರನೇ ಸಾವಿನ ಪ್ರಕರಣ ಇದಾಗಿದೆ.

VISTARANEWS.COM


on

Brain-Eating Mmoeba
Koo

ತಿರುವನಂತಪುರಂ: ಅಪರೂಪದ ಮೆದುಳು ತಿನ್ನುವ ಅಮೀಬಾ (Brain-Eating Amoeba) ಸೋಂಕಿಗೆ ಮತ್ತೊಬ್ಬ ಬಾಲಕ ಬಲಿಯಾಗಿದ್ದಾನೆ. ಬುಧವಾರ ರಾತ್ರಿ ಮೃತಪಟ್ಟ ಕೇರಳದ ಕೋಝಿಕ್ಕೋಡ್‌ ಜಿಲ್ಲೆಯ 12 ವರ್ಷ ಬಾಲಕನಿಗೆ ಅಮೀಬಿಕ್ ಮೆನಿಂಗೊ ಎನ್ಸೆಫಾಲಿಟಿಸ್ (ಮೆದುಳು ತಿನ್ನುವ ಅಮೀಬಾ) ಸೋಂಕು ತಗುಲಿದ್ದು ದೃಧಪಟ್ಟಿದ್ದು, ಕಳೆದ ಎರಡು ತಿಂಗಳಲ್ಲಿ ಸಂಭವಿಸಿದ ಇಂತಹ ಮೂರನೇ ಸಾವಿನ ಪ್ರಕರಣ ಇದಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ಬಾಲಕನನ್ನು ಮೃದುಲ್‌ ಇ.ಪಿ. ಎಂದು ಗುರುತಿಸಲಾಗಿದೆ. ಕೋಝಿಕ್ಕೋಡ್‌ ಜಿಲ್ಲೆಯ ಫೆರೊಕೆ ಮೂಲದ ಈತನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 7ನೇ ತರಗತಿಯಲ್ಲಿ ಓದುತ್ತಿದ್ದ ಮೃದುಲ್‌ನಲ್ಲಿ ಕೆಲವು ದಿನಗಳ ಹಿಂದೆ ಸೋಂಕಿನ ಲಕ್ಷಣಗಳಾದ ತೀವ್ರ ತಲೆನೋವು, ವಾಕರಿಕೆ, ವಾಂತಿ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ಜೂನ್‌ 24ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕೊಳದಲ್ಲಿ ಸ್ನಾನ ಮಾಡಿದ ನಂತರ ಬಾಲಕನಿಗೆ ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ. ಕೊಳಗಳು ಮತ್ತು ಸರೋವರಗಳಂತಹ ಸಿಹಿನೀರಿನ ಮೂಲಗಳಲ್ಲಿ ಕಂಡುಬರುವ ಈ ಅಮೀಬಾ ಮೂಗಿನ ಮೂಲಕ ಶರೀರವನ್ನು ಸೇರಿ ಮಾರಣಾಂತಿಕವಾಗುತ್ತದೆ. ಇದು ಮೆದುಳಿನ ಜೀವಕೋಶಗಳನ್ನು ತಿನ್ನುವುದರಿಂದ ಇದನ್ನು ಮೆದುಳು ತಿನ್ನುವ ಅಮೀಬಾ ಎಂದೇ ಕರೆಯಲಾಗುತ್ತದೆ.

ಆರಂಭದಲ್ಲಿ ಮೃದುಲ್‌ನನ್ನು ಎರಡು ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಯಿತು ಮತ್ತು ನಂತರ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಆ್ಯಂಟಿ ಮೈಕ್ರೊಬಿಯಲ್ ಚಿಕಿತ್ಸೆ ನೀಡಲಾಯಿತು. ಆದಾಗ್ಯೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆ ಬಳಿಕ ರಾಮನಾಟುಕರ ಮುನ್ಸಿಪಾಲಿಟಿ ಮೃದುಲ್‌ ಸ್ನಾನ ಮಾಡಿದ್ದ ಕೊಳಕ್ಕೆ ಸಾರ್ವಜನಿಕರ ಪ್ರವೇಸವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಮೂರನೇ ಪ್ರಕರಣ

ಈ ಹಿಂದೆ ಜೂನ್ 25ರಂದು ಕಣ್ಣೂರು ಜಿಲ್ಲೆಯ 13 ವರ್ಷದ ಬಾಲಕಿ ಮತ್ತು ಮೇ 21ರಂದು ಮಲಪ್ಪುರಂನ 5 ವರ್ಷದ ಬಾಲಕಿ ಈ ಸೋಂಕಿಗೆ ಒಳಗಾಗಿ ಸಾವನ್ನಪ್ಪಿದ್ದರು. “ನಾವು ರಾಜ್ಯದಲ್ಲಿ ಸಂಭವಿಸಿದ ಈ ಮೂರು ಸಾವುಗಳನ್ನು ಕೂಲಂಕುಷವಾಗಿ ಅಧ್ಯಯನ ಮಾಡುತ್ತಿದ್ದೇವೆ. ಕಣ್ಗಾವಲು ತೀವ್ರಗೊಳಿಸಿದ್ದೇವೆ. ನಾವು ಮೃದುಲ್‌ನಂತೆ ಅದೇ ಕೊಳದಲ್ಲಿ ಸ್ನಾನ ಮಾಡಿದ ಇತರರನ್ನು ಪರೀಕ್ಷಿಸಿದ್ದೇವೆ. ಆದರೆ ಇಲ್ಲಿಯವರೆಗೆ ಯಾರಲ್ಲಿಯೂ ಸೋಂಕಿನ ಲಕ್ಷಣ ಕಂಡು ಬಂದಿಲ್ಲʼʼ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜನರು ಭಯಭೀತರಾಗುವ ಅಗತ್ಯವಿಲ್ಲ ಎಂದು ಆರೋಗ್ಯ ಅಧಿಕಾರಿ ಹೇಳಿದ್ದಾರೆ. “ಕೊಳಗಳು ಅಥವಾ ಸರೋವರಗಳಲ್ಲಿ ಸ್ನಾನ ಮಾಡುವುದನ್ನು ಸಂಪೂರ್ಣವಾಗಿ ತಪ್ಪಿಸುವ ಅಗತ್ಯವಿಲ್ಲ. ಏಕೆಂದರೆ ಇದು ಅತ್ಯಂತ ಅಪರೂಪದ ಸೋಂಕು. ಅಮೀಬಾ ಪ್ರಭೇದಗಳ ಉಪಸ್ಥಿತಿಯನ್ನು ಪರೀಕ್ಷಿಸಲು ನಾವು ವಿವಿಧ ಜಲ ಮೂಲಗಳ ಮಾದರಿಗಳನ್ನು ಪರೀಕ್ಷಿಸುತ್ತೇವೆ. ಮಳೆ ತೀವ್ರಗೊಳ್ಳುತ್ತಿದ್ದಂತೆ ಸೋಂಕುಗಳ ಹರಡುವ ಸಾಧ್ಯತೆ ಕಡಿಮೆಯಾಗುತ್ತದೆ” ಎಂದು ಅವರು ಧೈರ್ಯ ತುಂಬಿದ್ದಾರೆ.

ಇದನ್ನೂ ಓದಿ: Brain eating amoeba | ಮೆದುಳು ತಿನ್ನುವ ಅಮೀಬಾ! ಏನಿದು ವಿಚಿತ್ರ ಕಾಯಿಲೆ?

ಹೇಗೆ ಹರಡುತ್ತದೆ?

ಈ ರೋಗಾಣು ಇರುವ ನೀರಿನಲ್ಲಿ ಈಜುವುದು ಅಥವಾ ಇನ್ನಾವುದಾದರೂ ರೀತಿಯಿಂದ ಈ ನೀರು ಮೂಗಿನೊಳಗೆ ಹೋದರೆ, ಆ ವ್ಯಕ್ತಿಗೆ ಈ ಅಮೀಬಾ ಸೋಂಕು ತಗುಲುತ್ತದೆ. ತುಂಬ ದಿನದಿಂದ ಈಜುಕೊಳದ ನೀರು ಬದಲಿಸದೆ ಇದ್ದರೆ ಅಲ್ಲಿಯೂ ಈ ಅಮೀಬಾ ಇರಬಹುದು. ಅದರಲ್ಲೂ ಕಲುಷಿತ ನೀರಿನಲ್ಲಿ ಈ ಅಮೀಬಾ ಉತ್ಪತ್ತಿ ಪ್ರಮಾಣ ಹೆಚ್ಚು. ನೀರೊಳಗೆ ಮುಖ ಒಳಗೆ ಹಾಕಿ ಈಜಿದಾಗ, ಸರೋವರ, ಕೊಳ, ನದಿ ನೀರಿನಲ್ಲಿ ಮುಖ ಮುಳುಗಿಸಿದಾಗ, ಕಲುಷಿತ ನೀರಿನಲ್ಲಿ ತಲೆ ಸ್ನಾನ ಮಾಡಿದಾಗ ಈ ಅಮೀಬಾ ಮೂಗಿನ ಮೂಲಕ ಮೆದುಳು ಸೇರುವ ಸಾಧ್ಯತೆ ಹೆಚ್ಚು.

Continue Reading

ಉದ್ಯೋಗ

Job Alert: ಇಂಡಿಯನ್‌ ಹೈವೇ ಮ್ಯಾನೇಜ್‌ಮೆಂಟ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಇಂದೇ ಅಪ್ಲೈ ಮಾಡಿ

Job Alert: ಇಂಡಿಯನ್‌ ಹೈವೇ ಮ್ಯಾನೇಜ್‌ಮೆಂಟ್‌ ಕಂಪನಿ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.ಒಟ್ಟು 31 ಹುದ್ದೆ ಖಾಲಿ ಇದೆ. ಎಂಜಿನಿಯರ್‌ ಮತ್ತು ಆಫೀಸರ್‌ ಹುದ್ದೆ ಇದಾಗಿದ್ದು, ಪದವಿ, ಸಿಎ ಓದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್ 16. ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿ ಇಲ್ಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಪದವಿ ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಇಲ್ಲಿದೆ. ಇಂಡಿಯನ್‌ ಹೈವೇ ಮ್ಯಾನೇಜ್‌ಮೆಂಟ್‌ ಕಂಪನಿ ಲಿಮಿಟೆಡ್‌ (Indian Highway Management Company Limited) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (IHMCL Recruitment 2024). ಒಟ್ಟು 31 ಹುದ್ದೆ ಖಾಲಿ ಇದೆ. ಎಂಜಿನಿಯರ್‌ ಮತ್ತು ಆಫೀಸರ್‌ ಹುದ್ದೆ ಇದಾಗಿದ್ದು, ಪದವಿ, ಸಿಎ ಓದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್ 16 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಂಜಿನಿಯರ್‌ – 30 ಮತ್ತು ಆಫೀಸರ್‌ – 1 ಹುದ್ದೆ ಖಾಲಿ ಇದೆ. ಎಂಜಿನಿಯರ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಐಟಿ / ಸಿಎಸ್ / ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ಸ್ / ಎಲೆಕ್ಟ್ರಿಕಲ್ / ಇನ್‌ಸ್ಟ್ರುಮೆಂಟೇಶನ್ / ಡಾಟಾ ಸೈನ್ಸ್ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು. ಇನ್ನು ಸಿಎ, ಸಿಎಂಎ ವಿದ್ಯಾರ್ಹತೆ ಹೊಂದಿದವರು ಆಫೀಸರ್‌ ಹುದ್ದೆಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ

ಎಂಜಿನಿಯರಿಂಗ್‌ ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ. ಗರಿಷ್ಠ ವಯಸ್ಸು 30 ವರ್ಷ. ಆಫೀಸರ್‌ ಹುದ್ದೆಗೂ ಗರಿಷ್ಠ ವಯೋಮಿತಿ 30 ವರ್ಷ. ಮೀಸಲಾತಿಗೆ ಅನುಗುಣವಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಡಿ (ಎಸ್‌ಸಿ / ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಗೇಟ್‌ (GATE) ಅಂಕ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

ಮಾಸಿಕ ವೇತನ

ಆಯ್ಕೆಯಾದವರಿಗೆ 40,000 ರೂ. – 1,40,000 ರೂ. ಮಾಸಿಕ ವೇತನ ದೊರೆಯಲಿದೆ. ಉದ್ಯೋಗದ ಸ್ಥಳ: ಭಾರತಾದ್ಯಂತ.

IHMCL Recruitment 2024ರ ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://recruitment.ihmcl.co.in/panel/login.php)
  • ಅಗತ್ಯ ಮಾಹಿತಿ, ಇಮೇಲ್‌ ವಿಳಾಸ ನಮೂದಿಸಿ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಹೆಸರು, ವಿಳಾಸ, ಶೈಕ್ಷಣಿಕ ಮಾಹಿಸಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಫೋಟೊ ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ: ihmcl.co.inಕ್ಕೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಬ್ಯಾಂಕ್‌ ಆಫ್‌ ಬರೋಡಾದ 627 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ಟೈಮ್‌ ಟೇಬಲ್‌

Continue Reading

ಆಟೋಮೊಬೈಲ್

Bajaj Freedom 125: ವಿಶ್ವದ ಮೊದಲ ಸಿಎನ್‌ಜಿ ಬೈಕ್‌ ಬಜಾಜ್‌ ಫ್ರೀಡಂ 125 ಇಂದು ಬಿಡುಗಡೆ

Bajaj Freedom 125: ಬುದಿನಗಳ ಕಾಯುವಿಕೆ ಅಂತ್ಯವಾಗುವ ಸಮಯ ಬಂದಿದೆ. ವಿಶ್ವದ ಮೊದಲ ಸಿಎನ್‌ಜಿ ಬೈಕ್‌ ಎನ್ನುವ ಖ್ಯಾತಿಯ, ಭಾರತದ ಬಜಾಜ್‌ ಆಟೋ ಕಂಪನಿ ಆವಿಷ್ಕರಿಸಿರುವ ಫ್ರೀಡಂ 125 ಬೈಕ್‌ ಇಂದು (ಜುಲೈ 5) ಬಿಡುಗಡೆಯಾಗಲಿದೆ. ಈ ಹಿಂದೆ ಜೂನ್‌ 18ರಂದು ಬೈಕ್‌ ಬಿಡುಗಡೆಗೆ ಮಾಡುವುದಾಗಿ ಕಂಪನಿ ಘೋಷಿಸಿತ್ತು. ಬಳಿಕ ಕಾರಣಾಂತರಗಳಿಂದ ದಿನಾಂಕವನ್ನು ಮುಂದೂಡಲಾಗಿತ್ತು.

VISTARANEWS.COM


on

Bajaj Freedom 125
Koo

ಮುಂಬೈ: ವಿಶ್ವದ ಮೊದಲ ಸಿಎನ್‌ಜಿ ಬೈಕ್‌ (CNG Bike) ಎನ್ನುವ ಖ್ಯಾತಿಯ, ಭಾರತದ ಬಜಾಜ್‌ ಆಟೋ (Bajaj Auto) ಕಂಪನಿ ಆವಿಷ್ಕರಿಸಿರುವ ಫ್ರೀಡಂ 125 (Bajaj Freedom 125) ಬೈಕ್‌ ಇಂದು (ಜುಲೈ 5) ಬಿಡುಗಡೆಯಾಗಲಿದೆ. ಬಜಾಜ್‌ ಬ್ರೂಝರ್‌ ಎಂದೂ ಕರೆಯಲ್ಪಡುವ ಈ ಬೈಕ್‌ ಅನ್ನು ದ್ವಿಚಕ್ರ ವಾಹನ ವಲಯದಲ್ಲಿ ಒಂದು ಮೈಲಿಗಲ್ಲು ಎಂದೇ ಪರಿಗಣಿಸಲಾಗಿದೆ.

ಕಂಪನಿಯು ಮುಂಬೈಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿ ಬೈಕ್‌ ಬಿಡುಗಡೆ ಮಾಡಲಿದ್ದು, ಬಜಾಜ್‌ ಎಂ.ಡಿ. ರಾಜೀವ್‌ ಬಜಾಜ್‌ ಮತ್ತು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಈ ಹಿಂದೆ ಜೂನ್‌ 18ರಂದು ಬೈಕ್‌ ಬಿಡುಗಡೆಗೆ ಮಾಡುವುದಾಗಿ ಕಂಪನಿ ಘೋಷಿಸಿತ್ತು. ಬಳಿಕ ಕಾರಣಾಂತರಗಳಿಂದ ದಿನಾಂಕವನ್ನು ಮುಂದೂಡಲಾಗಿತ್ತು. ಇದೀಗ ಬೈಕ್‌ ಪ್ರಿಯರ ಹಲವು ದಿನಗಳ ಕಾಯುವಿಕೆ ಅಂತ್ಯವಾಗಲಿದೆ. ಈ ಮೂಲಕ ಬಜಾಜ್‌ ಆಟೋ ಸಾಂಪ್ರದಾಯಿಕ ಪೆಟ್ರೋಲ್ ಚಾಲಿತ ಬೈಕುಗಳಿಗೆ ಪರಿಸರ ಸ್ನೇಹಿ ಪರ್ಯಾಯವನ್ನು ಪರಿಚಯಿಸುತ್ತಿದ್ದು, ಬಹುದೊಡ್ಡ ಕ್ರಾಂತಿಯನ್ನುಂಟು ಮಾಡಲು ಸಜ್ಜಾಗಿದೆ.

ವೈಶಿಷ್ಟ್ಯ

ಮೊದಲೇ ಹೇಳಿದಂತೆ ಫ್ರೀಡಂ 125 ವಿಶ್ವದ ಮೊದಲ ಸಿಎನ್‌ಜಿ ಬೈಕ್‌ ಆಗಿದ್ದು, ಇದು ಪೆಟ್ರೋಲ್ ಮತ್ತು ಸಿಎನ್‌ಜಿ ಎರಡರಲ್ಲೂ ಕಾರ್ಯ ನಿರ್ವಹಿಸುತ್ತದೆ. ಈ ಬೈಕ್‌ನ ಉದ್ದಕ್ಕೂ ಸಿಎನ್‌ಜಿ ಟ್ಯಾಂಕ್ ಅನ್ನು ಅಳವಡಿಸಲಾಗಿದೆ. ಹಾಗೇ ಇದನ್ನು ನಿರ್ವಹಿಸುವ ವಿಶಿಷ್ಟವಾದ ಚಾಸಿಸ್ ಸೆಟಪ್ ಅನ್ನು ಬೈಕ್ ಹೊಂದಿದೆ. ಸಿಎನ್‌ಜಿ ಬೈಕ್‌ನ ಆಯಿಲ್ ಟ್ಯಾಂಕ್ ಚಿಕ್ಕದಾಗಿದ್ದರೂ, ಬೈಕ್‌ಗೆ ಹೆಚ್ಚುವರಿ ಮೈಲೇಜ್ ನೀಡುತ್ತದೆ. ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್‌ನೊಂದಿಗೆ ಜೋಡಿಸಲಾದ 125 ಸಿಸಿ ಎಂಜಿನ್‌ನೊಂದಿಗೆ ಈ ಬೈಕ್‌ ಬರುವ ನಿರೀಕ್ಷೆ ಇದೆ. ಅಲ್ಲದೇ ಈ ಬೈಕ್ ಅನ್ನು ನಗರ ಪ್ರದೇಶಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಎರಡೂ ಕಡೆ ಆರಾಮವಾಗಿ ಓಡಿಸಬಹುದು. ಈ ಬೈಕ್ ಕ್ಲಚ್ ಗಾರ್ಡ್, ಹ್ಯಾಂಡಲ್ ಬಾರ್ ಬ್ರೇಸ್ ಮತ್ತು ಸಂಪ್ ಗಾರ್ಡ್ ಅನ್ನು ಹೊಂದಿರುವುದರಿಂದ ಇದರಲ್ಲಿ ಕಳಪೆ ರಸ್ತೆಯಲ್ಲೂ ಕೂಡ ಆರಾಮವಾಗಿ ಸವಾರಿ ಮಾಡಬಹುದು.

ದರ ಎಷ್ಟು?

ಈ ಬೈಕ್ ಬೆಲೆ ಸುಮಾರು 90,000 ರೂ. ಆಗಿರುವ ನಿರೀಕ್ಷೆ ಇದೆ. ಬಜಾಜ್ ಫ್ರೀಡಂ 125 ಬೈಕ್ ಟಿವಿಎಸ್ ರೇಡಿಯನ್, ಹೋಂಡಾ ಸಿಬಿ ಶೈನ್, ಹೀರೋ ಹೆಚ್ ಎಫ್ 100, ಟಿವಿಎಸ್ ಸ್ಪೋರ್ಟ್, ಬಜಾಜ್ ಸಿಟಿ 110 ಮತ್ತು ಬಜಾಜ್ ಪ್ಲಾಟಿನಾಗಳಂತಹ ಇತರ ಮೋಟಾರ್ ಸೈಕಲ್‌ಗಳ ಎದುರು ಸ್ಪರ್ಧೆಗಿಳಿಯುವ ಸಾಧ್ಯತೆ ಇದೆ.

ಈಗಾಗಲೇ ಈ ಬೈಕ್‌ ಅನ್ನು ಬಿಗುಡೆಗೆ ಮುನ್ನವೇ ಹಲವು ಬಾರಿ ಸಾರ್ವಜನಿಕ ರಸ್ತೆಯಲ್ಲಿ ಓಡಿಸಲಾಗಿದೆ ಎಂದು ಕಂಪನಿ ತಿಳಿಸಿದೆ. ಅಲ್ಲದೆ ಸಿಎನ್‌ಜಿ ತಂತ್ರಜ್ಞಾನಕ್ಕೆ ಬಜಾಜ್ ಆಟೋ ಪ್ರವೇಶಿಸುತ್ತಿರುವುದು ಇದು ಹೊಸತೇನಲ್ಲ. ಕಂಪನಿಯು ಈಗಾಗಲೇ ತನ್ನ ಸಿಎನ್‌ಜಿ ಚಾಲಿತ ತ್ರಿಚಕ್ರ ವಾಹನಗಳೊಂದಿಗೆ ಯಶಸ್ಸನ್ನು ಸಾಧಿಸಿದೆ. ಇದು ಭಾರತೀಯ ಮಾರುಕಟ್ಟೆಯಲ್ಲಿ ಸುಮಾರು ಶೇ. 60ರಷ್ಟು ಪಾಲನ್ನು ಹೊಂದಿದೆ. ಬಜಾಜ್ ಫ್ರೀಡಂ 125 ಮೂಲಕ ಕಂಪನಿ ತನ್ನ ಯಶಸ್ಸನ್ನು ಪುನರಾವರ್ತಿಸುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: Tata Motors: ನೆಕ್ಸಾನ್, ಪಂಚ್‌ ಮೂಲಕ ಎಸ್‌ಯುವಿ ಮಾರುಕಟ್ಟೆಯಲ್ಲಿ ಮುನ್ನಡೆ ಸಾಧಿಸಿದ ಟಾಟಾ ಮೋಟಾರ್ಸ್

Continue Reading
Advertisement
Edu Guide
ಶಿಕ್ಷಣ7 mins ago

Edu Guide: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: IDFC FIRST ಬ್ಯಾಂಕ್‌ನಿಂದ 2 ಲಕ್ಷ ರೂ. ಸ್ಕಾಲರ್‌ಶಿಪ್‌; ಹೀಗೆ ಅಪ್ಲೈ ಮಾಡಿ

Prajwal Revanna case Three FIRs against Prajwal Wanted list in all three
ಕ್ರೈಂ10 mins ago

Prajwal Revanna Case: ಪ್ರಜ್ವಲ್‌ಗೆ ʼಆʼ ಸಾಮರ್ಥ್ಯ ಇದೆ: ವೈದ್ಯಕೀಯ ವರದಿ ರಿವೀಲ್

Biometric Attendance
ಬೆಂಗಳೂರು19 mins ago

Biometric Attendance: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ

Vinay Rajkumar wedding pictures swathishta krishnan have gone viral
ಸ್ಯಾಂಡಲ್ ವುಡ್19 mins ago

Vinay Rajkumar: ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟ್ರ ವಿನಯ್ ರಾಜ್ ಕುಮಾರ್? ದೊಡ್ಮನೆ ಫ್ಯಾನ್ಸ್‌ಗೆ ಶಾಕ್‌!

Elephant attack in Hassan and Chikmagalur
ಹಾಸನ22 mins ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Hina Khan mom weeps as actor cuts her hair
ಬಾಲಿವುಡ್43 mins ago

Hina Khan: ಕ್ಯಾನ್ಸರ್‌ನಿಂದ ಬಳಲುತ್ತಿರುವ ನಟಿ `ಹಿನಾ ಖಾನ್’ ತಬ್ಬಿ ಕಣ್ಣೀರಿಟ್ಟ ತಾಯಿ; ಕೂದಲಿಗೆ ಬಿತ್ತು ಕತ್ತರಿ!

Robbery Case
ಕ್ರೈಂ52 mins ago

Robbery Case : ರಾಯಚೂರಿನಲ್ಲಿ ಸ್ವಾಮೀಜಿ ತಲೆಗೆ ಗನ್ ಇಟ್ಟು ದರೋಡೆ!

Jay Shah
ಕ್ರೀಡೆ59 mins ago

Jay Shah: ಕೊಹ್ಲಿಯನ್ನೇ ದಿಟ್ಟಿಸಿ ನೋಡುತ್ತಾ ನಿಂತ ಜಯ್​ ಶಾ; ವಿಡಿಯೊ ವೈರಲ್​

hd kumaraswamy
ಪ್ರಮುಖ ಸುದ್ದಿ1 hour ago

HD Kumaraswamy: ಸಿಎಂ ಕುರ್ಚಿ ಮೇಲೆ ಟವಲ್‌ ಹಾಕಿದವರಿಂದಲೇ ಮುಡಾ ಹಗರಣ ಬಯಲು: ಎಚ್‌ಡಿಕೆ

Bigg Boss Telugu 8 Astrologer Venu Swamy A Contestant
ಟಾಲಿವುಡ್1 hour ago

Bigg Boss Telugu 8: ಬಿಗ್‌ ಬಾಸ್‌ ಮನೆಗೆ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಎಂಟ್ರಿ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Elephant attack in Hassan and Chikmagalur
ಹಾಸನ22 mins ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು2 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು2 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ6 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ19 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ20 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ21 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ23 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ23 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ1 day ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

ಟ್ರೆಂಡಿಂಗ್‌