Republic Day 2023: ಅಹಮದಾಬಾದ್ ಕಲಾವಿದನ ಕಾಗದದ ಕಲಾಕೃತಿ ಗೂಗಲ್‌ ಪುಟದಲ್ಲಿ ಡೂಡಲ್! - Vistara News

ಗಣರಾಜ್ಯೋತ್ಸವ

Republic Day 2023: ಅಹಮದಾಬಾದ್ ಕಲಾವಿದನ ಕಾಗದದ ಕಲಾಕೃತಿ ಗೂಗಲ್‌ ಪುಟದಲ್ಲಿ ಡೂಡಲ್!

ಭಾರತದ ವೈವಿಧ್ಯತೆಯನ್ನು ಬಿಂಬಿಸುವ ಕಾಗದದ ಕಲಾಕೃತಿಯನ್ನು ಗೂಗಲ್ ಈ ಬಾರಿ ಗಣರಾಜ್ಯೋತ್ಸವಕ್ಕೆ (Republic Day 2023) ಡೂಡಲ್ ಆಗಿ ಬಳಸಿಕೊಂಡಿದ್ದು, ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

VISTARANEWS.COM


on

Google celebrates Republic Day 2023 with doodle by Ahmedabad-based artist
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಅಹಮದಾಬಾದ್ ಮೂಲದ ಕಲಾವಿದ ಪಾರ್ಥ ಕೋಟೆಕರ್ ವಿನ್ಯಾಸ ಮಾಡಿರುವ ಡೂಡಲ್‌ ಅನ್ನು ತನ್ನ ಹೋಮ್‌ಪೇಜ್‌ನಲ್ಲಿ ಪ್ರದರ್ಶಿಸುವ ಮೂಲಕ ಗೂಗಲ್, 74ನೇ ಗಣರಾಜ್ಯೋತ್ಸವನ್ನು (Republic Day 2023) ಆಚರಿಸಿದೆ. ಈ ಡೂಡಲ್ ಕೈಯಿಂದ ಕತ್ತರಿಸಿದ ಸಂಕೀರ್ಣವಾಗಿರುವ ಕಾಗದ ಕಲಾಕೃತಿಯಾಗಿದ್ದು, ಹಿನ್ನೆಲೆಯಲ್ಲಿ ಭವ್ಯವಾದ ರಾಷ್ಟ್ರಪತಿ ಭವವನ್ನು ಚಿತ್ರಿಸಲಾಗಿದ್ದು, ಭಾರೀ ಮೆಚ್ಚುಗೆ ಪಡೆದುಕೊಂಡಿದೆ.

ಸಂಕೀರ್ಣವಾಗಿರುವ ಈ ಕಾಗದದ ಡೂಡಲ್‌ನಲ್ಲಿ ರಾಷ್ಟ್ರಪತಿ ಭವನ ಮಾತ್ರವಲ್ಲದೇ, ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಪರೇಡ್‌ನ ಅನೇಕ ಸಂಗತಿಗಳನ್ನು ಪ್ರದರ್ಶಿಸುವ ಪ್ರಯತ್ನ ಮಾಡಲಾಗಿದೆ. ಐಕಾನಿಕ್ ಎನಿಸಿರುವ ಇಂಡಿಯಾ ಗೇಟ್, ಸಿಆರ್‌ಪಿಎಫ್ ಯೋಧರ ಪರೇಡ್ ಮತ್ತು ಮೋಟಾರ್‌ಸೈಕಲ್ ರೈಡರ್ಸ್‌ ಕವಾಯತು ಇರುವುದನ್ನು ಕಾಣಬಹುದಾಗಿದೆ.

ಇದನ್ನೂ ಓದಿ : Republic Day 2023 : ಗಣರಾಜ್ಯೋತ್ಸವ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ಗೂಗಲ್‌ ಡೂಡಲ್‌ಗೆ ನನ್ನ ಚಿತ್ರ ಆಯ್ಕೆಯಾಗಿದ್ದು ನಾನು ನಂಬುವುದಕ್ಕೆ ಆಗಲಿಲ್ಲ. ಹಾಗಾಗಿ, ಇಮೇಲ್ ಅನ್ನು ಹಲವು ಬಾರಿ ಓದಿದ್ದೇನೆ. ಪುನಃ ಪುನಃ ಓದಿದ್ದೇನೆ. ಇಂಥ ಅವಕಾಶ ಸಿಗುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ. ಭಾರತದ ವೈವಿಧ್ಯತೆಯನ್ನು ಒಂದೇ ಕಲಾಕೃತಿಯಲ್ಲಿ ಪ್ರಸ್ತುತಪಡಿಸಲು ಮುಂದಾದೆ ಎಂದು ಪಾರ್ಥ ಕೋಟೆಕರ್ ಅವರು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಗಣರಾಜ್ಯೋತ್ಸವ

Republic Day: ಮಾಲ್ಡೀವ್ಸ್ ಮತ್ತು ಭಾರತದ್ದು ಶತಮಾನಗಳ ದೋಸ್ತಿ! ಮಾಲ್ಡೀವ್ಸ್ ಅಧ್ಯಕ್ಷನಿಗೆ ಬಂತಾ ಬುದ್ಧಿ?

Republic Day: ಪ್ರಧಾನಿ ಮೋದಿ ವಿರುದ್ಧ ಮಾಲ್ಡೀವ್ಸ್‌ ಸಚಿವರು ನಿಂದನಾತ್ಮಕ ಭಾಷೆ ಬಳಸಿದ ಹಿನ್ನೆಲೆಯಲ್ಲಿ ಭಾರತ ಮತ್ತು ಮಾಲ್ಡೀವ್ಸ್ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಯಾಗಿದೆ.

VISTARANEWS.COM


on

Maldives Election
Koo

ನವದೆಹಲಿ: ಭಾರತ ವಿರೋಧಿ(Anti India), ಚೀನಾ ಸ್ನೇಹಿತ (Friend of China) ಅಧ್ಯಕ್ಷ ಎಂದು ಗುರುತಿಸಿಕೊಂಡಿರುವ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜು (Maldives President Mohamed Muizzu)ಅವರು ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಶುಭಾಶಯ ಕೋರಿದ್ದಾರೆ. ಮಾಲ್ಡೀವ್ಸ್ ಮತ್ತು ಭಾರತದ್ದು ಶತಮಾನಗಳ ಸ್ನೇಹ (Centuries of Friendship) ಎಂದು ಹೇಳಿದ್ದಾರೆ. ಪರಸ್ಪರ ಗೌರವ ಮತ್ತು ರಕ್ತಸಂಬಂಧದ ಆಳವಾದ ಅರ್ಥದಲ್ಲಿ ಸ್ಥಾಪಿಸಲಾದ ಎರಡು ರಾಷ್ಟ್ರಗಳ ನಡುವಿನ ಶತಮಾನಗಳ ಹಳೆಯ ಸ್ನೇಹ ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ(Republic Day).

ಭಾರತದ 75 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿ ಮೊಹಮ್ಮದ್ ಮುಯಿಜ್ಜು ಅವರು ಭಾರತದ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗಳಿಗೆ ಶುಭಾಶಯಗಳನ್ನು ಕಳುಹಿಸಿದ್ದಾರೆ. ಅಧ್ಯಕ್ಷ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತ್ಯೇಕ ಸಂದೇಶಗಳಲ್ಲಿ, ಅಧ್ಯಕ್ಷ ಮುಯಿಝು ಅವರು ಭಾರತದ 75 ನೇ ಗಣರಾಜ್ಯೋತ್ಸವವನ್ನು ಸ್ಮರಿಸಿದ್ದಾರೆ ಮತ್ತು ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ ಎಂದು ಮಾಲ್ಡೀವ್ಸ್ ಅಧ್ಯಕ್ಷ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಅಧ್ಯಕ್ಷ ಮುಯಿಜು ಅವರು ಸರ್ಕಾರ ಮತ್ತು ಮಾಲ್ಡೀವ್ಸ್ ಜನರಿಂದ ಭಾರತದ ಜನರಿಗೆ ಶುಭ ಹಾರೈಸಿದರು. ಅವರು ಶತಮಾನಗಳ ಸ್ನೇಹ, ಪರಸ್ಪರ ಗೌರವ ಮತ್ತು ರಕ್ತಸಂಬಂಧದ ಆಳವಾದ ಪ್ರಜ್ಞೆಯಿಂದ ಪೋಷಿಸಿದ ಮಾಲ್ಡೀವ್ಸ್-ಭಾರತದ ಬಾಂಧವ್ಯವನ್ನು ಒತ್ತಿಹೇಳಿದರು. ಮುಂಬರುವ ವರ್ಷಗಳಲ್ಲಿ ಭಾರತ ಸರ್ಕಾರ ಮತ್ತು ಜನರಿಗೆ ನಿರಂತರ ಶಾಂತಿ, ಪ್ರಗತಿ ಮತ್ತು ಸಮೃದ್ಧಿಯ ದೊರೆಯಲಿದೆ ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, ಗಣರಾಜ್ಯೋತ್ಸವದ ಸಂದರ್ಭದಲ್ಲಿ ಭಾರತದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಮತ್ತು ಭಾರತದ ಸ್ನೇಹಪರ ಜನರಿಗೆ ಹಾರ್ದಿಕ ಶುಭಾಶಯಗಳು. ಮುಂದಿನ ವರ್ಷಗಳಲ್ಲಿ ಮಾಲ್ಡೀವ್ಸ್ ಮತ್ತು ಭಾರತದ ನಡುವಿನ ಸ್ನೇಹ ಮತ್ತು ಸಹಕಾರದ ನಿಕಟ ಬಂಧಗಳು ಪ್ರವರ್ಧಮಾನಕ್ಕೆ ಬರುತ್ತವೆ ಎಂದು ನನಗೆ ವಿಶ್ವಾಸವಿದೆ ಎಂದು ಜಮೀರ್ ಹೇಳಿದ್ದಾರೆ.

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿ, ಇದೊಂದು ಅತ್ಯುತ್ತಮ ಪ್ರವಾಸಿತಾಣವಾಗಲಿದೆ ಎಂದು ಹೇಳಿದ್ದರು. ಈ ಹೇಳಿಕೆ ಕುರಿತು ಮಾಲ್ಡೀವ್ಸ್ ಕೆಲವು ಸಚಿವರು ಮೋದಿ ಅವರು ವಿರುದ್ಧ ನಿಂದನಾತ್ಮಕ ಭಾಷೆ ಬಳಸಿ ಟೀಕಿಸಿದ್ದರು. ಇದರಿಂದಾಗಿ ಮಾಲ್ಡೀವ್ಸ್ ಮತ್ತು ಭಾರತದ ನಡುವೆ ರಾಜತಾಂತ್ರಿಕ ಸಂಘರ್ಷ ಏರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಮಾಲ್ಡೀವ್ಸ್‌ನ ಈ ಶತಮಾನದ ದೋಸ್ತಿ ಎಂಬ ಹೇಳಿಕೆ ಮಹತ್ವದ ಪಡೆದುಕೊಂಡಿದೆ.

ಈ ಸುದ್ದಿಯನ್ನೂ ಓದಿ: ಭಾರತದ ವಿಮಾನ ಬಳಸಲು ಮಾಲ್ಡೀವ್ಸ್‌ ಅಧ್ಯಕ್ಷ ನಕಾರ; 13 ವರ್ಷದ ಬಾಲಕ ಸಾವು

Continue Reading

ವಿಜಯನಗರ

Vijayanagara News: ಕೊಟ್ಟೂರಿನಲ್ಲಿ 75ನೇ ಗಣರಾಜ್ಯೋತ್ಸವ ದಿನ ಆಚರಣೆ

Vijayanagara News: ಕೊಟ್ಟೂರು ಪಟ್ಟಣದ ಶ್ರೀ ಕೊಟ್ಟೂರೇಶ್ವರ ಮಹಾವಿದ್ಯಾಲಯದಲ್ಲಿ ಶುಕ್ರವಾರ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.

VISTARANEWS.COM


on

75th Republic Day celebrations in Kottur
ಕೊಟ್ಟೂರು ಪಟ್ಟಣದ ಶ್ರೀ ಕೊಟ್ಟೂರೇಶ್ವರ ಮಹಾವಿದ್ಯಾಲಯದಲ್ಲಿ ಶುಕ್ರವಾರ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
Koo

ಕೊಟ್ಟೂರು: ಪಟ್ಟಣದ ಶ್ರೀ ಕೊಟ್ಟೂರೇಶ್ವರ ಮಹಾವಿದ್ಯಾಲಯದಲ್ಲಿ ಶುಕ್ರವಾರ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು (75th Republic Day) ಆಚರಿಸಲಾಯಿತು.

ಗಣರಾಜ್ಯೋತ್ಸವದ ಅಂಗವಾಗಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಂ. ರವಿಕುಮಾರ್‌, ಧ್ವಜಾರೋಹಣ ನೆರವೇರಿಸಿ, ಬಳಿಕ ಮಾತನಾಡಿದರು.

ಇದನ್ನೂ ಓದಿ: Karnataka Weather: ಕಡಿಮೆ ಆಯಿತೇ ಚಳಿ? ಯಾವ ಜಿಲ್ಲೆಯಲ್ಲಿ ಹೇಗಿದೆ ವಾತಾವರಣ?

ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಸಿದ್ದರಾಮ ಕಲ್ಮಠ, ಸದಸ್ಯರಾದ ಕೆ.ಬಿ. ಮಲ್ಲಿಕಾರ್ಜುನ್, ಅಡಿಕೆ ಮಂಜುನಾಥಯ್ಯ, ಡಿ.ಎಸ್. ಶಿವಮೂರ್ತಿ, ಪಿಯು ಕಾಲೇಜಿನ ಪ್ರಾಚಾರ್ಯ ಎಂ.ಎಚ್. ಪ್ರಶಾಂತ್ ಕುಮಾರ್, ಹಿರಿಯ ಉಪನ್ಯಾಸಕರಾದ ಡಿ. ರವೀಂದ್ರ ಗೌಡ, ಕೃಷ್ಣಪ್ಪ, ಜೆ.ಬಿ. ಸಿದ್ದನಗೌಡ, ಪೃಥ್ವಿರಾಜ್, ಡಾ. ಶಿವಕುಮಾರ್, ವಿಜಯಲಕ್ಷ್ಮಿ ಸಜ್ಜನ್, ಬಸವರಾಜ ಬಣಕಾರ್ ಉಮೇಶ್ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕುಮಾರಿ ಚೈತ್ರ ಪ್ರಾರ್ಥಿಸಿದರು. ಕೆ.ಎಂ. ಪ್ರಭಾಕರ್ ನಿರೂಪಿಸಿದರು.

Continue Reading

ವಿಜಯನಗರ

Vijayanagara News: ಕೂಡ್ಲಿಗಿಯಲ್ಲಿ 75ನೇ ಗಣರಾಜ್ಯೋತ್ಸವ ದಿನ ಆಚರಣೆ

Vijayanagara News: ಕೂಡ್ಲಿಗಿ ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಏರ್ಪಡಿಸಿದ್ದ 75ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ತಹಸೀಲ್ದಾರ್ ಎಂ. ರೇಣುಕಾ ಧ್ವಜಾರೋಹಣ ನಡೆಸಿದರು.

VISTARANEWS.COM


on

75th Republic Day celebration in Kudligi
ಕೂಡ್ಲಿಗಿ ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ನಡೆದ 75ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ತಹಸೀಲ್ದಾರ್ ಎಂ. ರೇಣುಕಾ ಧ್ವಜಾರೋಹಣ ನಡೆಸಿದರು.
Koo

ಕೂಡ್ಲಿಗಿ: ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ಶುಕ್ರವಾರ ತಾಲೂಕು ಆಡಳಿತದಿಂದ ಏರ್ಪಡಿಸಿದ್ದ 75ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ (75th Republic Day) ತಹಸೀಲ್ದಾರ್ ಎಂ. ರೇಣುಕಾ ಧ್ವಜಾರೋಹಣ ನೆರವೇರಿಸಿದರು.

ಗಣರಾಜ್ಯೋತ್ಸವದಲ್ಲಿ ಧ್ವಜಾವಂದನೆ ಸ್ವೀಕರಿಸಿ ಮಾತನಾಡಿದ ಕೂಡ್ಲಿಗಿ ಶಾಸಕ ಡಾ.ಎನ್.ಟಿ. ಶ್ರೀನಿವಾಸ್, ಭಾರತದ ಇತಿಹಾಸದಲ್ಲೇ ಗಣರಾಜ್ಯೋತ್ಸವ ದಿನ ಮಹತ್ವದ ದಿನವಾಗಿದೆ ಎಂದು ತಿಳಿಸಿದರು.

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಈಗಾಗಲೇ ಸುಮಾರು 400 ಕೋಟಿ ಅನುದಾನವನ್ನು ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಸಮ್ಮತಿ ನೀಡಿದೆ. ಶಿಕ್ಷಣ, ಆರೋಗ್ಯ ಸೇರಿದಂತೆ ಜನರಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ಈಗಾಗಲೇ ಕ್ಷೇತ್ರದ ಕಟ್ಟಕಡೆಯ ಹಳ್ಳಿಗೂ ಭೇಟಿ ನೀಡಿ ಸಮಸ್ಯೆಗಳನ್ನು ಅರಿತಿದ್ದು,ಅವರಿಗೆ ಅವಶ್ಯವಾದ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: Karnataka Weather: ಕಡಿಮೆ ಆಯಿತೇ ಚಳಿ? ಯಾವ ಜಿಲ್ಲೆಯಲ್ಲಿ ಹೇಗಿದೆ ವಾತಾವರಣ?

ತುಂಗಭದ್ರಾ ನದಿಯಿಂದ ಪಾವಗಡಕ್ಕೆ ಕುಡಿಯುವ ನೀರಿನ ಬಹುಗ್ರಾಮ ಯೋಜನೆಯಿಂದ ಕೂಡ್ಲಿಗಿ ಪಟ್ಟಣ ಕೈಬಿಡಲಾಗಿತ್ತು, ಅದನ್ನ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಪಟ್ಟಣಕ್ಕೂ ಕುಡಿಯುವ ನೀರು ಒದಗಿಸಲು ಸುಮಾರು 68 ಕೋಟಿ ಅನುದಾನ ಈಗಾಗಲೇ ಬಿಡುಗಡೆ ಮಾಡಿ ಟೆಂಡರ್ ಮುಗಿದಿದೆ, ಶ್ರೀಘ್ರದಲ್ಲಿ ಕಾಮಾಗಾರಿ ಆರಂಭವಾಗಲಿದೆ ಎಂದರು.

ಇದೇ ಸಂಧರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ಶಾಸಕರು ಸನ್ಮಾನಿಸಿದರು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಇದನ್ನೂ ಓದಿ: Tea And Coffee With Meals: ಊಟ ತಿಂಡಿ ಜೊತೆಜೊತೆಗೆ ಚಹಾ ಕಾಫಿ ಹೀರುವ ಅಭ್ಯಾಸ ಒಳ್ಳೆಯದೇ, ಕೆಟ್ಟದ್ದೇ?

ಈ ವೇಳೆ ತಾಪಂ ಇಒ ವೈ. ರವಿಕುಮಾರ್, ಡಿವೈಎಸ್ಪಿ ಮಲ್ಲೇಶಪ್ಪ ಮಲ್ಲಾಪೂರ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಪಿ.ಶಿವರಾಜ್, ಪಪಂ ಸದಸ್ಯರಾದ ಕಾವಲಿ ಶಿವಪ್ಪನಾಯಕ, ಪಿ.ಚಂದ್ರು, ಸಚಿನ್ ಕುಮಾರ್, ಕೆ.ಈಶಪ್ಪ, ಸಿರಬಿ ಮಂಜುನಾಥ, ಲಕ್ಷ್ಮೀದೇವಿ, ಚೌಡಮ್ಮ, ಸರಸ್ವತಿ, ರೇಣುಕಾ ದುರುಗೇಶ್, ಲೀಲಾವತಿ ಪ್ರಭಾಕರ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಇತರರು ಇದ್ದರು.

Continue Reading

ಉತ್ತರ ಕನ್ನಡ

Uttara Kannada News: ಯಲ್ಲಾಪುರದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ

Uttara Kannada News: ಯಲ್ಲಾಪುರ ತಾಲೂಕಿನ ಕಾಳಮ್ಮ ನಗರದಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣವನ್ನು ತಹಸೀಲ್ದಾರ್‌ ಗುರುರಾಜ್‌ ಎಂ. ನೆರವೇರಿಸಿದರು.

VISTARANEWS.COM


on

75th Republic Day celebration in Yallapur
ಯಲ್ಲಾಪುರ ತಾಲೂಕಿನ ಕಾಳಮ್ಮ ನಗರದಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ 75ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು.
Koo

ಯಲ್ಲಾಪುರ: ತಾಲೂಕಿನ ಕಾಳಮ್ಮ ನಗರದಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ (75th Republic Day) ಅಂಗವಾಗಿ ಧ್ವಜಾರೋಹಣವನ್ನು ತಹಸೀಲ್ದಾರ್‌ ಗುರುರಾಜ್‌ ಎಂ. ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಶಿವರಾಮ ಹೆಬ್ಬಾರ್‌, ನಮ್ಮದು ಸಂಪೂರ್ಣ ವಿಶ್ವದಲ್ಲಿ ಅತ್ಯಂತ ಅಗ್ರಮಾನ್ಯದಲ್ಲಿರುವ ದೇಶವಾಗಿದೆ. ನಮ್ಮ ನೆಲ, ಜಲ, ಸಂಸ್ಕೃತಿಯನ್ನು ಗೌರವಿಸುವಂತ ಸಂಸ್ಕಾರ ನಮ್ಮ ದೇಶದ ಮಣ್ಣಿನ ಗುಣವಾಗಿದೆ. ಡಾ. ಬಿ.ಆರ್‌. ಅಂಬೇಡ್ಕರ್‌, ಮಹಾತ್ಮ ಗಾಂಧೀಜಿ ಅವರಂತಹ ಮಹನೀಯರ ಆದರ್ಶಗಳು ನಮಗೆ ಪ್ರೇರಣೆಯಾಗಲಿ ಎಂದು ತಿಳಿಸಿದರು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ತಹಸೀಲ್ದಾರ್‌ ಗುರುರಾಜ್‌ ಎಂ., ಜಗತ್ತಿನ ಅತ್ಯುನ್ನತ ಸಂವಿಧಾನವನ್ನು ನಮ್ಮ ದೇಶ ಹೊಂದಿದೆ. ಅನೇಕ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ, ಶ್ರೇಷ್ಠ ಗುಣಗಳನ್ನು ಅಳವಡಿಸಿ ನಮ್ಮ ಸಂವಿಧಾನವನ್ನು ರೂಪಿಸಿದ ಡಾ. ಅಂಬೇಡ್ಕರ್‌ ಅವರನ್ನು ನಾವೆಲ್ಲ ಇಂದು ನೆನೆಯಲೇಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Padma Shri: ಭತ್ತದ ತಳಿಯ ಸಂರಕ್ಷನನ್ನು ಅರಸಿ ಬಂತು ಪದ್ಮಶ್ರೀ ಗೌರವ

ಇದೇ ಸಂದರ್ಭದಲ್ಲಿ ತಾನ್‌ಸೇನ್‌ ಪ್ರಶಸ್ತಿ ಪುರಸ್ಕೃತ ಪಂಡಿತ್‌ ಗಣಪತಿ ಭಟ್‌ ಹಾಸಣಗಿ, ಗ್ರಾಮೀಣ ಭಾಗದಲ್ಲಿ ಸೇವೆಗಾಗಿ ಡಾ. ನಾಗರಾಜ್ ಬಿ.ಎಚ್‌. ಹಾಗೂ ನಾಟಿ ವೈದ್ಯ ನಾರಾಯಣ ಹೆಗಡೆ ಗವೇಗುಳಿ ಅವರಿಗೆ ನಾಗರಿಕ ಸನ್ಮಾನ ನೀಡಿ ಗೌರವಿಸಲಾಯಿತು. ಅಂತೆಯೇ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟು ಶ್ರೀದೇವಿ ಗಂಗಾ ನಾಯಕ ಹಾಗೂ ವಿಶೇಷ ಚೇತನರ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಜಯಶ್ರೀ ಮಂಜುನಾಥ ಮೈಲಾರ ಅವರನ್ನು ಸನ್ಮಾನಿಸಲಾಯಿತು. ಇದೇ ವೇಳೆ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಾಂಕೇತಿಕವಾಗಿ ಲ್ಯಾಪ್‌ಟಾಪ್ ವಿತರಣೆ ಮಾಡಲಾಯಿತು.

ನಂತರ ನಡೆದ ಆಕರ್ಷಕ ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.

ವೇದಿಕೆಯಲ್ಲಿ ಪಂಚಾಯತ್‌ ರಾಜ್‌ ವಿಕೇಂದ್ರೀಕರಣ ಸಮಿತಿ ಉಪಾಧ್ಯಕ್ಷ ಪ್ರಮೋದ್ ಹೆಗಡೆ, ಸಿಪಿಐ ರಂಗನಾಥ ನೀಲಮ್ಮನವರ್, ಪಟ್ಟಣ ಪಂಚಾಯಿತಿ ಸದಸ್ಯರಾದ ಸುನಂದಾ ದಾಸ್ ಹಾಗೂ ಜ್ಯೋತಿ ನಾಯ್ಕ, ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Sachin Tendulkar: ಸಫಾರಿ ವೇಳೆ ಮೂರನೇ ತಲೆ ಮಾರಿನ ಹುಲಿಯನ್ನು ತೋರಿಸಿದ ಸಚಿನ್​ ತೆಂಡೂಲ್ಕರ್​

ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್. ಹೆಗಡೆ ಸ್ವಾಗತಿಸಿದರು. ಸಂಜೀವ್ ಕುಮಾರ್ ಹೊಸ್ಕೇರಿ ನಿರ್ವಹಿಸಿದರು. ಶಿಕ್ಷಣ ಸಂಯೋಜಕ ಸಂತೋಷ ಜಿಗಳೂರು ವಂದಿಸಿದರು.

Continue Reading
Advertisement
IPL 2024
ಪ್ರಮುಖ ಸುದ್ದಿ5 mins ago

IPL 2024 : ಐಪಿಎಲ್ ಸ್ಟೇಡಿಯಮ್​ಗಳ ಗಾತ್ರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಆರ್​ ಅಶ್ವಿನ್​

Farooq Abdullah
ದೇಶ13 mins ago

ಪಿಒಕೆ ನಮ್ಮದು ಎಂದಿದ್ದಕ್ಕೆ ಪಾಕ್ ಬಳೆ ತೊಟ್ಟಿಲ್ಲ ಎಂದ ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ!‌ ಇವರ ಬೆಂಬಲ ಯಾರಿಗೆ?

Champions Trophy
Latest27 mins ago

Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

Fire Accident
ಕರ್ನಾಟಕ1 hour ago

Fire Accident: ಬೆಂಗಳೂರಿನ ಎಂ.ಜಿ. ರಸ್ತೆಯ ಆಪ್ಟಿಕಲ್ಸ್‌ ಮಳಿಗೆಯಲ್ಲಿ ಬೆಂಕಿ ಅವಘಡ

IPL 2024
ಕ್ರೀಡೆ1 hour ago

IPL 2024 : ಧೋನಿಯನ್ನು ಬೌಲ್ಡ್​ ಮಾಡಿ ಸಂಭ್ರಮಿಸದ ಹರ್ಷಲ್​ ಪಟೇಲ್​; ಕಾರಣ ನೀಡಿದ ಬೌಲರ್​

Al Jazeera
ಪ್ರಮುಖ ಸುದ್ದಿ2 hours ago

Al Jazeera: ಹಮಾಸ್‌ ಉಗ್ರರ ಪರ ನಿಲುವು; ಇಸ್ರೇಲ್‌ನಲ್ಲಿ ಅಲ್‌ಜಜೀರಾ ಚಾನೆಲ್‌ ಬಂದ್‌ ಮಾಡಿದ ನೆತನ್ಯಾಹು!

Pralhad Joshi
ಕರ್ನಾಟಕ2 hours ago

Pralhad Joshi: ಕಾಂಗ್ರೆಸ್‌ನಿಂದ ಮೋದಿ ಎಂಬ ಆಕಾಶಕ್ಕೆ ಉಗುಳೋ ಕೃತ್ಯ: ಪ್ರಲ್ಹಾದ್ ಜೋಶಿ

Bernard Hill
Latest2 hours ago

Titanic Movie : ಟೈಟಾನಿಕ್​, ಗಾಂಧಿ ಸಿನಿಮಾದ ನಟ ಬರ್ನಾರ್ಡ್ ಹಿಲ್ ನಿಧನ

IPL 2024
Latest2 hours ago

IPL 2024 : ಸಿಎಸ್​ಕೆ ತಂಡದ ಸಮಸ್ಯೆಗಳನ್ನು ಬಹಿರಂಗಪಡಿಸಿದ ನಾಯಕ ಋತುರಾಜ್​

Air India
ದೇಶ2 hours ago

Air India: ವಿಮಾನ ಪ್ರಯಾಣಿಕರೇ ಗಮನಿಸಿ, ಚೆಕ್-ಇನ್ ಬ್ಯಾಗೇಜ್ ಭಾರದ ಮಿತಿ ಇಳಿಕೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ5 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ5 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ18 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

ಟ್ರೆಂಡಿಂಗ್‌