OBC Reservation: ಬಿಜೆಪಿ ರಣತಂತ್ರ; ಗುಜರಾತ್‌ ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ಮೀಸಲಾತಿ 17% ಹೆಚ್ಚಳ - Vistara News

ದೇಶ

OBC Reservation: ಬಿಜೆಪಿ ರಣತಂತ್ರ; ಗುಜರಾತ್‌ ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ಮೀಸಲಾತಿ 17% ಹೆಚ್ಚಳ

OBC Reservation: ಗುಜರಾತ್ ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ಮೀಸಲಾತಿಯನ್ನು ಶೇ.10ರಿಂದ ಶೇ.27ಕ್ಕೆ ಏರಿಕೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಗುಜರಾತ್‌ ಸ್ಥಳೀಯ ಸಂಸ್ಥೆಗಳಲ್ಲಿ ಹೆಚ್ಚಿನ ಪ್ರಾಬಲ್ಯ ಸಾಧಿಸುವುದು ಬಿಜೆಪಿ ಗುರಿಯಾಗಿದೆ.

VISTARANEWS.COM


on

Chief Minister Bhupendra Patel
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಾಂಧಿನಗರ: ಗುಜರಾತ್‌ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಾಬಲ್ಯ ಮುಂದುವರಿಸಲು ಬಿಜೆಪಿ ಸರ್ಕಾರ ರಣತಂತ್ರ ರೂಪಿಸಿದೆ. ಇದಕ್ಕಾಗಿ ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿರುವ ಇತರೆ ಹಿಂದುಳಿದ ವರ್ಗಗಳ (OBC Reservation) ಮೀಸಲಾತಿಯನ್ನು ಶೇ.17ರಷ್ಟು ಏರಿಕೆ ಮಾಡಿದೆ. ಇದರೊಂದಿಗೆ ಗುಜರಾತ್‌ (Gujarat) ಸ್ಥಳೀಯ ಸಂಸ್ಥೆಗಳಲ್ಲಿರುವ ಒಬಿಸಿ ಮೀಸಲಾತಿಯು ಶೇ.10ರಿಂದ ಶೇ.27ಕ್ಕೆ ಏರಿಕೆಯಾದಂತಾಗಿದೆ.

“ಜಸ್ಟಿಸ್‌ ಝಾವೇರಿ ಆಯೋಗದ ವರದಿ ಆಧರಿಸಿ ಗುಜರಾತ್‌ ಸರ್ಕಾರವು ಪಂಚಾಯಿತಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ಮೀಸಲಾತಿಯನ್ನು ಶೇ.27ಕ್ಕೆ ಏರಿಕೆ ಮಾಡಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ. ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಮೀಸಲಾತಿ ಏರಿಕೆ ಕುರಿತು ವಿಧೇಯಕ ಮಂಡಿಸಲಾಗುವುದು” ಎಂದು ಗುಜರಾತ್‌ ಸಚಿವ ರಿಷಿಕೇಶ್‌ ಪಟೇಲ್‌ ಮಾಹಿತಿ ನೀಡಿದ್ದಾರೆ.

ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ಸಮುದಾಯದ ಮೀಸಲಾತಿ ಕುರಿತು ಅಧ್ಯಯನ ನಡೆಸಲು ಗುಜರಾತ್‌ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಕೆ.ಎಸ್.ಝಾವೇರಿ ಆಯೋಗವನ್ನು ಸರ್ಕಾರ ರಚಿಸಿತ್ತು. ಈ ಆಯೋಗದ ವರದಿ ಅನ್ವಯ ಮೀಸಲಾತಿ ಹೆಚ್ಚಳ ಮಾಡಲು ಸರ್ಕಾರ ತೀರ್ಮಾನಿಸಿದೆ. ಗುಜರಾತ್‌ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪರಿಶಿಷ್ಟ ಜಾತಿ ಸಮುದಾಯಕ್ಕೆ ನೀಡಿರುವ ಶೇ.14, ಪರಿಶಿಷ್ಟ ಪಂಗಡಕ್ಕೆ ನೀಡಿರುವ ಶೇ.7ರಷ್ಟು ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಇದನ್ನೂ ಓದಿ: OBC Reservation: ಚುನಾವಣೆಗೆ ಮಾಸ್ಟರ್‌ ಸ್ಟ್ರೋಕ್‌; ಒಬಿಸಿಗೆ ಹೆಚ್ಚುವರಿ ಮೀಸಲಾತಿ ಘೋಷಿಸಿದ ಕಾಂಗ್ರೆಸ್‌ ಸರ್ಕಾರ

ರಾಜಸ್ಥಾನದಲ್ಲಿ ಮೀಸಲಾತಿ ಹೆಚ್ಚಳ

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ರಾಜಸ್ಥಾನ ಸರ್ಕಾರವು ಇತರೆ ಇಂದುಳಿದ ವರ್ಗಗಳಲ್ಲಿಯೇ (OBC) ಅತಿ ಹೆಚ್ಚು ಹಿಂದುಳಿದವರಿಗೆ ಶೇ.6ರಷ್ಟು ಮೀಸಲಾತಿ ಘೋಷಿಸಿತ್ತು. “ಈಗಾಗಲೇ ರಾಜ್ಯದಲ್ಲಿ ಒಬಿಸಿಗೆ ಶೇ.21ರಷ್ಟು ಮೀಸಲಾತಿ ಇದೆ. ಈಗ ಹೆಚ್ಚುವರಿಯಾಗಿ ಶೇ.6ರಷ್ಟು ಮೀಸಲಾತಿ ನೀಡಲಾಗುತ್ತಿದೆ. ಇದು ಇತರೆ ಹಿಂದುಳಿದ ವರ್ಗಗಳಲ್ಲಿಯೇ ಅತಿ ಹೆಚ್ಚು ಹಿಂದುಳಿದವರಿಗೆ ಅನ್ವಯವಾಗಲಿದೆ. ಇದರಿಂದ ಅತಿ ಹೆಚ್ಚು ಹಿಂದುಳಿದವರ ಏಳಿಗೆಗೆ ಕಾರಣವಾಗಲಿದೆ. ಹಾಗಾಗಿ, ರಾಜ್ಯ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ” ಎಂದು ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ತಿಳಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಒವೈಸಿ ಪ್ರಕಾರ ಮುಸ್ಲಿಮರೇ ಹೆಚ್ಚು ಕಾಂಡೋಮ್ ಬಳಸುತ್ತಾರಂತೆ!

Lok Sabha Election 2024: ಧಾನ ಮಂತ್ರಿ ನರೇಂದ್ರ ಮೋದಿ ಅವರ ʼಮುಸ್ಲಿಮರು ಹೆಚ್ಚಿನ ಮಕ್ಕಳನ್ನು ಹೊಂದಿರುತ್ತಾರೆʼ ಎನ್ನುವ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ ಹೈದರಾಬಾದ್‌ನ ಸಂಸದ ಅಸಾದುದ್ದೀನ್ ಒವೈಸಿ, ಸಂಸದ ಅಸಾದುದ್ದೀನ್ ಒವೈಸಿ (Asaduddin Owaisi), ʼʼಮುಸ್ಲಿಂ ಸಮುದಾಯದ ಪುರುಷರು ಕಾಂಡೋಮ್ ಅನ್ನು ಹೆಚ್ಚು ಬಳಸುತ್ತಾರೆ ಮತ್ತು ಮಕ್ಕಳ ಅಂತರದಲ್ಲಿ ಉತ್ತಮ ದಾಖಲೆಯನ್ನು ಹೊಂದಿದ್ದಾರೆʼʼ ಎಂದು ಹೇಳಿದ್ದಾರೆ. “ಮುಸ್ಲಿಮರ ಫಲವತ್ತತೆ ದರ ಕುಸಿಯುತ್ತಿದೆ. ಆದರೆ ನರೇಂದ್ರ ಮೋದಿ ಅವರು ನಮ್ಮ ಹಿಂದೂ ಸಹೋದರರಲ್ಲಿ ಭಯವನ್ನು ಸೃಷ್ಟಿಸಲು ದ್ವೇಷ ಹರಡುತ್ತಿದ್ದಾರೆʼʼ ಎಂದು ಅವರು ಟೀಕಿಸಿದ್ದಾರೆ.

VISTARANEWS.COM


on

Lok Sabha Election 2024
Koo

ಹೈದರಾಬಾದ್‌: ಚುನಾವಣಾ ಕಣದಲ್ಲಿ (Lok Sabha Election 2024) ಪ್ರಮುಖ ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರ ʼಮುಸ್ಲಿಮರು ಹೆಚ್ಚಿನ ಮಕ್ಕಳನ್ನು ಹೊಂದಿರುತ್ತಾರೆʼ ಎನ್ನುವ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ ಹೈದರಾಬಾದ್‌ನ ಎಐಎಂಐಎಂ (AIMIM Hyderabad) ಸಂಸದ ಅಸಾದುದ್ದೀನ್ ಒವೈಸಿ (Asaduddin Owaisi), ʼʼಮುಸ್ಲಿಂ ಸಮುದಾಯದ ಪುರುಷರು ಕಾಂಡೋಮ್ ಅನ್ನು ಹೆಚ್ಚು ಬಳಸುತ್ತಾರೆ ಮತ್ತು ಮಕ್ಕಳ ಅಂತರದಲ್ಲಿ ಉತ್ತಮ ದಾಖಲೆಯನ್ನು ಹೊಂದಿದ್ದಾರೆʼʼ ಎಂದು ಹೇಳಿದ್ದಾರೆ.

ʼʼಮುಸ್ಲಿಮರು ಹೆಚ್ಚು ಮಕ್ಕಳನ್ನು ಪಡೆಯುತ್ತಾರೆ ಎಂದು ಮೋದಿ ಹೇಳುತ್ತಿದ್ದಾರೆ. ನರೇಂದ್ರ ಮೋದಿ ಅವರಿಗೆ ಆರು ಜನ ಸಹೋದರರಿದ್ದಾರೆ. ಅಮಿತ್ ಶಾ ಅವರಿಗೆ ಆರು ಸಹೋದರಿಯರು ಮತ್ತು ಆರ್‌ಎಸ್‌ಎಸ್‌ ಮುಖ್ಯಸ್ಥರಿಗೆ ಸುಮಾರು 10-12 ಸಹೋದರಿಯರು ಮತ್ತು ಸಹೋದರರು ಇದ್ದಾರೆ” ಎಂದು ಒವೈಸಿ ಟೀಕಿಸಿದ್ದಾರೆ.

“ಮುಸ್ಲಿಮರ ಫಲವತ್ತತೆ ದರ ಕುಸಿಯುತ್ತಿದೆ. ಆದರೆ ನರೇಂದ್ರ ಮೋದಿ ಅವರು ನಮ್ಮ ಹಿಂದೂ ಸಹೋದರರಲ್ಲಿ ಭಯವನ್ನು ಸೃಷ್ಟಿಸಲು ದ್ವೇಷ ಹರಡುತ್ತಿದ್ದಾರೆ. ಈ ದೇಶದಲ್ಲಿ ಮುಸ್ಲಿಮರು ಎಂದಿಗೂ ಬಹುಸಂಖ್ಯಾತರಾಗುವುದಿಲ್ಲ. ನರೇಂದ್ರ ಮೋದಿ, ಮುಸ್ಲಿಮರ ಬಗೆಗಿನ ಈ ಭಯವನ್ನು ನೀವು ಎಷ್ಟು ದಿನ ಮುಂದುವರಿಸುತ್ತೀರಿ?ʼʼ ಎಂದು ಚುನಾವಣಾ ರ‍್ಯಾಲಿಯಲ್ಲಿ ಓವೈಸಿ ಪ್ರಶ್ನಿಸಿದ್ದಾರೆ.

ʼನುಸುಳುಕೋರರುʼ ಎಂಬ ಪದ ಬಳಕೆಗೆ ಅವರು ಪ್ರಧಾನಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರು 17 ಕೋಟಿ ಭಾರತೀಯ ಮುಸ್ಲಿಮರನ್ನು ಗುಸ್ಪೆಟಿಯಾ (ಒಳನುಸುಳುಕೋರರು) ಎಂದು ಕರೆದಿದ್ದಾರೆ. ನೀವು ಗುಸ್ಪೆಟಿಯಾ ಆಗಿದ್ದೀರಾ?” ಎಂದು ಪ್ರಶ್ನಿಸಿದ ಅವರು, “ದಲಿತರು ಮತ್ತು ಮುಸ್ಲಿಮರ ವಿರುದ್ಧ ಪ್ರಧಾನಿ ಮೋದಿ ದ್ವೇಷ ಹರಡುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ಮಾಧವಿ ಲತಾ ವಿರುದ್ಧವೂ ವಾಗ್ದಾಳಿ

ಇದಕ್ಕೂ ಮುನ್ನ ಹೈದರಾಬಾದ್ ಬಿಜೆಪಿ ಲೋಕಸಭಾ ಅಭ್ಯರ್ಥಿ ಮಾಧವಿ ಲತಾ ವಿರುದ್ಧವೂ ಒವೈಸಿ ವಾಗ್ದಾಳಿ ನಡೆಸಿದ್ದಾರೆ. ʼʼಹೈದರಾಬಾದ್‌ನ ಓಲ್ಡ್ ಸಿಟಿಯ ಮಸೀದಿಯೊಂದರ ಮೇಲೆ ಬಾಣ ಹೂಡುವಂತೆ ಮಾಧವಿ ಲತಾ ಅವರು ಸನ್ನೆ ಮಾಡಿದ್ದಾರೆ. ಬಿಜೆಪಿಯ ಮೆರವಣಿಗೆಯ ವಿಡಿಯೊದಲ್ಲಿ ಇದು ಸ್ಪಷ್ಟವಾಗಿ ಕಂಡು ಬಂದಿದೆ. ಇದು ಮಸೀದಿಯ ಮೇಲೆ ಹೂಡಿದ ಬಾಣವಲ್ಲ, ಬದಲಾಗಿ ನಗರದಲ್ಲಿ ಶಾಂತಿಯನ್ನು ಹಾಳು ಮಾಡುವ ಉದ್ದೇಶಿತ ಪ್ರಯತ್ನ” ಎಂದು ಅವರು ಟೀಕಿಸಿದ್ದಾರೆ.

ಮೋದಿ ಹೇಳಿದ್ದೇನು?

ರಾಜಸ್ಥಾನದಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಮೋದಿ ʼʼದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಇದೆ ಎಂದು ಕಾಂಗ್ರೆಸ್ ಈ ಹಿಂದೆ ಹೇಳಿತ್ತು. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ದೇಶದ ಆಸ್ತಿಯನ್ನು ವಿತರಿಸುವುದಾಗಿ ಹೇಳಿದೆ. ಯಾರಿಗೆ? ಈ ಹಿಂದೆ, ಅವರ (ಕಾಂಗ್ರೆಸ್) ಸರ್ಕಾರ ಅಧಿಕಾರದಲ್ಲಿದ್ದಾಗ, ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಇದೆ ಎಂದು ಹೇಳಿದ್ದರು. ಇದರರ್ಥ ಅವರು ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ, ಒಳನುಸುಳುವವರಿಗೆ ವಿತರಿಸುತ್ತಾರೆ. ನೀವು ಕಷ್ಟಪಟ್ಟು ಸಂಪಾದಿಸಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಒಪ್ಪುತ್ತೀರಾ?” ಎಂದು ಮೋದಿ ಕೇಳಿದ್ದರು. ಜತೆಗೆ ದೇಶದ ಸಂಪನ್ಮೂಲಗಳ ಮೇಲೆ ಅಲ್ಪಸಂಖ್ಯಾತ ಸಮುದಾಯಕ್ಕೆ ಮೊದಲ ಹಕ್ಕು ಇದೆ ಎಂಬ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೇಳಿಕೆಯನ್ನೂ ಅವರು ಉಲ್ಲೇಖಿಸಿದ್ದರು. ಈ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಇದನ್ನೂ ಓದಿ: Narendra Modi : ಹೆಚ್ಚು ಮಕ್ಕಳಿದ್ದವರಿಗೆ ಕಾಂಗ್ರೆಸ್​ನಿಂದ ಸಂಪತ್ತು ವಿತರಣೆ; ಮೋದಿ ಹೇಳಿಕೆಗೆ ಕೈ ಪಕ್ಷದ ಆಕ್ಷೇಪ

Continue Reading

Lok Sabha Election 2024

Parliament Flashback: ಬಳ್ಳಾರಿಯಲ್ಲಿ ಸೋನಿಯಾ ಗಾಂಧಿ ಮತ್ತು ಸುಷ್ಮಾ ಸ್ವರಾಜ್‌ ಮಧ್ಯೆ ನಡೆದಿತ್ತು ಐತಿಹಾಸಿಕ ಕದನ!

Parliament Flashback: ಆಗಷ್ಟೇ ಸೋನಿಯಾ ಗಾಂಧಿ ಅವರನ್ನು ಕಾಂಗ್ರೆಸ್‌ ಅಧ್ಯಕ್ಷ ಪಟ್ಟಕ್ಕೆ ಏರಿಸಲಾಗಿತ್ತು. ಅವರನ್ನು ಲೋಕಸಭೆಗೆ ಕಳುಹಿಸುವ ತೀರ್ಮಾನವಾಗಿತ್ತು. ತಮ್ಮ ಪತಿ ರಾಜೀವ್‌ ಗಾಂಧಿ ಪ್ರತಿನಿಧಿಸುತ್ತಿದ್ದ ಉತ್ತರ ಪ್ರದೇಶದ ಅಮೇಠಿ ಲೋಕಸಭೆ ಕ್ಷೇತ್ರ ಸೋನಿಯಾ ಅವರ ಮೊದಲ ಆಯ್ಕೆಯಾಗಿತ್ತು. ಅಲ್ಲಿ ಅವರು ನಾಮಪತ್ರ ಸಲ್ಲಿಸಿದರು. ಆದರೆ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಅಮೇಠಿಯಲ್ಲಿ 1998ರ ಲೋಕಸಭೆ ಚುನಾವಣೆಯಲ್ಲಿ ಮೊಟ್ಟ ಮೊದಲ ಬಾರಿ ಕಾಂಗ್ರೆಸ್‌ಗೆ ಸೋಲಾಗಿತ್ತು. ಹಾಗಾಗಿ ಅಲ್ಲಿ ಸೋಲುವ ಭಯದಿಂದ ಬಳ್ಳಾರಿಗೆ ಬಂದು ಸ್ಪರ್ಧಿಸಿದ್ದರು.

VISTARANEWS.COM


on

Parliament Flashback
Koo

ಬೆಂಗಳೂರು: 1999ರ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿತ್ತು. ಇದಕ್ಕೆ ಕಾರಣ ಕಾಂಗ್ರೆಸ್‌ ವರಿಷ್ಠ ನಾಯಕಿ ಸೋನಿಯಾ ಗಾಂಧಿ (Sonia Gandhi) ಮತ್ತು ಬಿಜೆಪಿಯ ಫೈರ್‌ ಬ್ರಾಂಡ್‌ ನಾಯಕಿ, ದಿಲ್ಲಿಯ ಮುಖ್ಯಮಂತ್ರಿಯೂ ಆಗಿದ್ದ ಸುಷ್ಮಾ ಸ್ವರಾಜ್‌ (Sushma Swaraj) ನಡುವಿನ ಮುಖಾಮುಖಿ (Parliament Flashback).

ಆಗಷ್ಟೇ ಸೋನಿಯಾ ಗಾಂಧಿ ಅವರನ್ನು ಕಾಂಗ್ರೆಸ್‌ ಅಧ್ಯಕ್ಷ ಪಟ್ಟಕ್ಕೆ ಏರಿಸಲಾಗಿತ್ತು. ಅವರನ್ನು ಲೋಕಸಭೆಗೆ ಕಳುಹಿಸುವ ತೀರ್ಮಾನವಾಗಿತ್ತು. ತಮ್ಮ ಪತಿ ರಾಜೀವ್‌ ಗಾಂಧಿ ಪ್ರತಿನಿಧಿಸುತ್ತಿದ್ದ ಉತ್ತರ ಪ್ರದೇಶದ ಅಮೇಠಿ ಲೋಕಸಭೆ ಕ್ಷೇತ್ರ ಸೋನಿಯಾ ಅವರ ಮೊದಲ ಆಯ್ಕೆಯಾಗಿತ್ತು. ಅಲ್ಲಿ ಅವರು ನಾಮಪತ್ರ ಸಲ್ಲಿಸಿದರು. ಆದರೆ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಅಮೇಠಿಯಲ್ಲಿ 1998ರ ಲೋಕಸಭೆ ಚುನಾವಣೆಯಲ್ಲಿ ಮೊಟ್ಟ ಮೊದಲ ಬಾರಿ ಕಾಂಗ್ರೆಸ್‌ಗೆ ಸೋಲಾಗಿತ್ತು. ರಾಜೀವ್‌ ಗಾಂಧಿ ಅವರ ಪರಮಾಪ್ತರಾಗಿದ್ದ ಕ್ಯಾಪ್ಟನ್‌ ಸತೀಶ್‌ ಶರ್ಮಾ ಅವರನ್ನು ಬಿಜೆಪಿ ಅಭ್ಯರ್ಥಿ ಡಾ. ಸಂಜಯ್‌ ಸಿಂಗ್‌ ಸೋಲಿಸಿದ್ದರು. ಹಾಗಾಗಿ ಅಲ್ಲಿ ಸುಲಭವಾಗಿ ಗೆಲ್ಲುವ ವಿಶ್ವಾಸ ಸೋನಿಯಾಗಿರಲಿಲ್ಲ. ಹಾಗಾಗಿ ಸೋನಿಯಾ ಗಾಂಧಿ ಹಿತೈಷಿಗಳೆಲ್ಲ ಸೇರಿ ಲೆಕ್ಕಾಚಾರ ಹಾಕಿ ಆರಿಸಿದ ಮತ್ತೊಂದು ಕ್ಷೇತ್ರವೇ ಬಳ್ಳಾರಿ.

ಏಕೆಂದರೆ 1952ರಿಂದ 1999ರವರೆಗೆ ನಡೆದ 12 ಚುನಾವಣೆಗಳಲ್ಲೂ ಕಾಂಗ್ರೆಸ್‌ ಬಳ್ಳಾರಿಯಲ್ಲಿ ಜಯ ಸಾಧಿಸಿತ್ತು.
ಹೈದರಾಬಾದ್‌ನಿಂದ ವಿಶೇಷ ವಿಮಾನದಲ್ಲಿ ಬಳ್ಳಾರಿಗೆ ಬಂದ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಸಿದರು. ಸೋನಿಯಾ ನಾಮಪತ್ರದ ಬೆನ್ನಿಗೇ ಸುಷ್ಮಾ ಸ್ವರಾಜ್‌ ಅವರನ್ನು ಕಣಕ್ಕಿಳಿಸಿ ಕಾಂಗ್ರೆಸ್‌ಗೆ ಬಿಜೆಪಿ ನಡುಕ ಹುಟ್ಟಿಸಿತು. ಸೋನಿಯಾ ಗಾಂಧಿ ಮತ್ತು ಸುಷ್ಮಾ ಸ್ವರಾಜ್‌ ಅವರ ಚುನಾವಣಾ ಪ್ರಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿತು. ವಿದೇಶಿ ಸೊಸೆ ಮತ್ತು ಸ್ವದೇಶಿ ಮಗಳ ನಡುವಿನ ಸ್ಪರ್ಧೆ ಎಂದೇ ಮಾಧ್ಯಮಗಳು ಬಣ್ಣಿಸಿದವು. ಸುಷ್ಮಾ ಸ್ವರಾಜ್‌ ಅವರು ಕನ್ನಡದಲ್ಲೇ ಭಾಷಣ ಮಾಡಿ ಅಚ್ಚರಿ ಮೂಡಿಸಿದರು. ಕಾಂಗ್ರೆಸ್‌ ಮತ್ತು ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರು ಇಲ್ಲಿಗೆ ಬಂದು ಪ್ರಚಾರ ಮಾಡಿದರು. ಆದರೆ ಅಂತಿಮವಾಗಿ ಸೋನಿಯಾ ಗಾಂಧಿ ಅವರು 56,100 ಮತಗಳ ಅಂತರದಿಂದ ಗೆಲುವು ಸಾಧಿಸಿದರು.

ಅತ್ತ ಅಮೇಠಿಯಲ್ಲಿ ಸುಮಾರು 3 ಲಕ್ಷ ಮತಗಳ ಅಂತರದಿಂದ ಗೆದ್ದ ಸೋನಿಯಾ ಗಾಂಧಿ ಬಳ್ಳಾರಿ ಕ್ಷೇತ್ರ ತೊರೆದರು. ಸುಷ್ಮಾ ಸ್ವರಾಜ್‌ ಇಲ್ಲಿ ಸೋತರು. ಆದರೆ ಪ್ರತಿವರ್ಷ ವರ ಮಹಾಲಕ್ಷ್ಮೀ ಹಬ್ಬದ ದಿನ ಬಳ್ಳಾರಿಗೆ ಬಂದು ಪೂಜೆಯಲ್ಲಿ ಭಾಗಿಯಾಗುತ್ತಿದ್ದರು. ಅವರ ಸ್ಪರ್ಧೆ ಬಳ್ಳಾರಿಯಲ್ಲಿ ಬಿಜೆಪಿಯನ್ನು ಬಲಿಷ್ಠಗೊಳಿಸಿತು. ಮುಂದೆ 2004, 2009, 20014 ಮತ್ತು 20019ರ ಚುನಾವಣೆಯಲ್ಲಿ ಇಲ್ಲಿ ಬಿಜೆಪಿ ಜಯ ದಾಖಲಿಸಿದ್ದೇ ಇದಕ್ಕೆ ಸಾಕ್ಷಿ.

ಗುರುವಿಗೇ ಸೋಲಿನ ರುಚಿ ತೋರಿಸಿದ ಆಸ್ಕರ್‌ ಫೆರ್ನಾಂಡಿಸ್‌!

ಡಾ. ಟಿ.ಎ.ಪೈ ಅವರು ಖ್ಯಾತ ವೈದ್ಯ, ಶಿಕ್ಷಣ ತಜ್ಞ ಮತ್ತು ಅರ್ಥ ಶಾಸ್ತ್ರಜ್ಞರೆಂದು ಖ್ಯಾತಿ ಪಡೆದವರು. ಆಧುನಿಕ ಮಣಿಪಾಲದ ನಿರ್ಮಾತೃರು. ಇಂದು ಮಣಿಪಾಲ ಆರೋಗ್ಯ ಮತ್ತು ಶಿಕ್ಷಣದಲ್ಲಿ ವಿಶ್ವ ಪ್ರಸಿದ್ಧಿ ಪಡೆಯಲು ಡಾ. ಟಿ.ಎ. ಪೈ ಅವರೇ ಕಾರಣರು. ಇಂಥ ಶ್ರೇಯಸ್ಸಿನ ಪೈ ಅವರು 1977ರಲ್ಲಿ ಉಡುಪಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಪ್ರಚಂಡ ಜಯ ದಾಖಲಿಸಿದರು. ಆದರೆ ಇವರ ಬಗ್ಗೆ ವೈಯಕ್ತಿಕ ಕಾರಣಕ್ಕೆ ಮುನಿಸು ಹೊಂದಿದ್ದ ಇಂದಿರಾ ಗಾಂಧಿ ಅವರು 1980ರ ಚುನಾವಣೆಯಲ್ಲಿ ಟಿಕೆಟ್‌ ನಿರಾಕರಿಸಿದರು. ಅಷ್ಟೇ ಅಲ್ಲ ಇವರ ಶಿಷ್ಯರಾಗಿದ್ದ ಆಸ್ಕರ್‌ ಫೆರ್ನಾಂಡಿಸ್‌ ಅವರಿಗೆ ಟಿಕೆಟ್‌ ನೀಡಿ ಅಚ್ಚರಿ ಮೂಡಿಸಿದರು.

ಪುರಸಭೆ ಸದಸ್ಯರಾಗಿ ಉಡುಪಿಗೆ ಸೀಮಿತರಾಗಿ ಓಡಾಡಿಕೊಂಡಿದ್ದ, ಲೋಕಸಭೆಯ ಕನಸೂ ಕಾಣದಿದ್ದ ಯುವಕ ಆಸ್ಕರ್‌ ಫೆರ್ನಾಂಡಿಸ್‌ ರಾತ್ರಿ ಬೆಳಗಾಗುವಷ್ಟರಲ್ಲಿ ಫೇಮಸ್‌ ಆಗಿ ಬಿಟ್ಟರು. ಟಿ.ಎ. ಪೈ ಅವರು ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌ (ಯು) ಪಕ್ಷದಿಂದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಅಂದ ಹಾಗೆ ಈ ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌ (ಯು) ಎನ್ನುವುದು ಇಂದಿರಾ ಗಾಂಧಿ ಅವರ ವಿರುದ್ಧ ಬಂಡೆದ್ದು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ಸ್ಥಾಪಿಸಿದ ಪಕ್ಷವಾಗಿತ್ತು.

ಅಂದಿನ ಚುನಾವಣೆಯಲ್ಲಿ ಟಿ.ಎ.ಪೈ ಅವರು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟರು! ಜನತಾ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿ.ಎಸ್‌. ಆಚಾರ್ಯ ಎರಡನೇ ಸ್ಥಾನ ಪಡೆದರು. ಆಸ್ಕರ್‌ ಫೆರ್ನಾಂಡಿಸ್‌ ಸಂಸದರಾಗಿ ಆಯ್ಕೆಯಾದರು.
ಮುಂದಿನ 1984ರ ಚುನಾವಣೆಯಲ್ಲಿ ಆಸ್ಕರ್‌ ಫರ್ನಾಂಡಿಸ್‌ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನ್ಯಾ. ಕೆ.ಎಸ್‌. ಹೆಗ್ಡೆ ಅವರನ್ನೇ ಸೋಲಿಸಿದರು. ನ್ಯಾ. ಹೆಗ್ಡೆ ಅವರು 1977ರಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಜನತಾ ಪರಿವಾರದ ಅಭ್ಯರ್ಥಿಯಾಗಿ ಗೆದ್ದಿದ್ದರು. ಹೀಗೆ ಆಸ್ಕರ್‌ ಫರ್ನಾಂಡಿಸ್‌ ನಿರಂತರ ನಾಲ್ಕು ಬಾರಿ ಉಡುಪಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದರು.

ಇದನ್ನೂ ಓದಿ: Parliament Flashback: ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಿದ್ದ ಕಾಂಗ್ರೆಸ್‌ ಕಿರುಕುಳದಿಂದಾಗಿ ಪ್ರಧಾನಿ ಹುದ್ದೆ ತೊರೆದಿದ್ದ ದೇವೇಗೌಡರು!

ಆದರೆ 1998ರಲ್ಲಿ ಬಿಜೆಪಿಯ ಐ.ಎಂ. ಜಯರಾಂ ಶೆಟ್ಟಿ ಅವರೆದುರು ಆಸ್ಕರ್‌ ಫೆರ್ನಾಂಡಿಸ್‌ ಸೋತು ಹೋದರು. ಮತ್ತೆಂದೂ ಅವರು ಲೋಕಸಭೆಗೆ ಸ್ಪರ್ಧಿಸಲು ಹೋಗಲಿಲ್ಲ. ಬದಲಿಗೆ ನಾಲ್ಕು ಬಾರಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾದರು. ಇಂದಿರಾ ಗಾಂಧಿ, ರಾಜೀವ್‌ ಗಾಂಧಿ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಆಪ್ತರಾಗಿದ್ದ ಆಸ್ಕರ್‌, ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಪ್ರಮುಖ ಖಾತೆಯನ್ನು ನಿರ್ವಹಿಸಿದ್ದರು. 2021ರಲ್ಲಿ ಆಸ್ಕರ್‌ ಫೆರ್ನಾಂಡಿಸ್‌ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದರು.

Continue Reading

ದೇಶ

Drugs Smuggling: ಗುಜರಾತ್‌ನಲ್ಲಿ ಪಾಕ್‌ನ 14 ಜನರ ಬಂಧನ, 600 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ!

Drugs Smuggling: ಗುಜರಾತ್‌ ಕರಾವಳಿ ಪ್ರದೇಶದಲ್ಲಿ ಕರಾವಳಿ ರಕ್ಷಣಾ ಪಡೆ, ಭ್ರಷ್ಟಾಚಾರ ನಿಗ್ರಹ ದಳ (ATS) ಹಾಗೂ ಮಾದಕವಸ್ತು ನಿಯಂತ್ರಣ ಬ್ಯೂರೋ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಹಡಗನ್ನು ವಶಪಡಿಸಿಕೊಳ್ಳಲಾಗಿದೆ. 600 ಕೋಟಿ ರೂ. ಮೌಲ್ಯದ ಮಾದಕವಸ್ತುವನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

VISTARANEWS.COM


on

Drugs Smuggling
Koo

ಗಾಂಧಿನಗರ: ಗುಜರಾತ್‌ ಬಳಿಯ ಸಾಗರ ಪ್ರದೇಶದಲ್ಲಿ (Gujarat) ಮಹತ್ವದ ಕಾರ್ಯಾಚರಣೆಯೊಂದನ್ನು ನಡೆಸಲಾಗಿದ್ದು, ಪಾಕಿಸ್ತಾನದ ಹಡಗನ್ನು ತಡೆಯಲಾಗಿದೆ. ಹಡಗಿನಲ್ಲಿ 600 ಕೋಟಿ ರೂ. ಮೌಲ್ಯದ 14 ಕೆ.ಜಿ ಮಾದಕವಸ್ತು ಸಿಕ್ಕಿದ್ದು, ಅಕ್ರಮ ಸಾಗಣೆ ಹಿನ್ನೆಲೆಯಲ್ಲಿ ಪಾಕಿಸ್ತಾನದ (Pakistan) 14 ಜನರನ್ನು ಬಂಧಿಸಲಾಗಿದೆ. ಪಾಕಿಸ್ತಾನದಿಂದ ಭಾರತಕ್ಕೆ ಅಕ್ರಮವಾಗಿ ಮಾದಕವಸ್ತು ಸಾಗಣೆ (Drugs Smuggling) ಮಾಡಲಾಗುತ್ತಿರುವ ಕುರಿತು ನಿಖರ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ, ಡ್ರಗ್ಸ್‌ಅನ್ನು ವಶಪಡಿಸಿಕೊಳ್ಳಲಾಗಿದೆ.

ನಿಖರ ಮಾಹಿತಿ ಮೇರೆಗೆ ಕರಾವಳಿ ರಕ್ಷಣಾ ಪಡೆ, ಭ್ರಷ್ಟಾಚಾರ ನಿಗ್ರಹ ದಳ (ATS) ಹಾಗೂ ಮಾದಕವಸ್ತು ನಿಯಂತ್ರಣ ಬ್ಯೂರೋದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. “ಪಾಕಿಸ್ತಾನದ 14 ನಾಗರಿಕರನ್ನು ಬಂಧಿಸಲಾಗಿದ್ದು, ಮಾದಕವಸ್ತುವನ್ನು ಜಪ್ತಿ ಮಾಡಲಾಗಿದೆ. ಪ್ರಕರಣದ ಕುರಿತು ಇನ್ನಷ್ಟು ತನಿಖೆ ನಡೆಸಲಾಗುತ್ತಿದೆ” ಎಂಬುದಾಗಿ ಕರಾವಳಿ ರಕ್ಷಣಾ ಪಡೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

“ಮಾದಕವಸ್ತು ಸಾಗಣೆ ಮಾಡುತ್ತಿದ್ದ ಹಡಗನ್ನು ವಶಪಡಿಸಿಕೊಳ್ಳಲು ಅಧಿಕಾರಿಗಳು ಕರಾವಳಿ ರಕ್ಷಣಾ ಪಡೆಯ ಒಂದು ನೌಕೆ ಹಾಗೂ ವಿಮಾನವನ್ನು ಬಳಸಿಕೊಳ್ಳಲಾಗಿದೆ. ರಾಜರತನ್‌ ಎಂಬ ನೌಕೆಯ ಮೂಲಕ ಅಧಿಕಾರಿಗಳು ಬೆನ್ನತ್ತಿ ಪಾಕಿಸ್ತಾನದ ನೌಕೆಯನ್ನು ಹಿಡಿಯಲಾಗಿದೆ. ಗುಪ್ತಚರ ಮೂಲಗಳಿಂದ ನಿಖರ ಮಾಹಿತಿ ಮೇರೆಗೆ ಶಂಕಾಸ್ಪದ ಹಡಗನ್ನು ತಡೆದ, ಪರಿಶೀಲನೆ ನಡೆಸಿದಾಗ ಡ್ರಗ್ಸ್‌ ಜಾಲ ಬಯಲಾಗಿದೆ” ಎಂದು ತಿಳಿಸಿದ್ದಾರೆ.

ಎರಡು ತಿಂಗಳ ಹಿಂದಷ್ಟೇ ಗುಜರಾತ್‌ ಸಾಗರ ಪ್ರದೇಶದಲ್ಲಿ ಇರಾನ್‌ನಿಂದ ಸಾಗಿಸಲಾಗುತ್ತಿದ್ದ ಸುಮಾರು 3 ಸಾವಿರ ಕೆ.ಜಿ ಡ್ರಗ್ಸ್‌ಅನ್ನು ವಶಪಡಿಸಿಕೊಳ್ಳಲಾಗಿತ್ತು. ನೌಕಾಪಡೆಯ ಪ್ರಕಾರ 3,089 ಕಿಲೋಗ್ರಾಂಗಳಷ್ಟು ಚರಸ್, 158 ಕೆಜಿ ಮೆಥಾಂಫೆಟಮೈನ್ ಮತ್ತು 25 ಕೆಜಿ ಮಾರ್ಫಿನ್ ಅನ್ನು ಒಳಗೊಂಡಿರುವ ಈ ಮಾದಕವಸ್ತು ವಶಪಡಿಸಿಕೊಳ್ಳುವಿಕೆಯು ಇತ್ತೀಚಿನ ದಿನಗಳಲ್ಲಿ ಬೃಹತ್‌ ಪ್ರಮಾಣದ್ದಾಗಿದೆ. ಪೋರಬಂದರ್‌ನ ಬಂದರಿನಲ್ಲಿ ನಡೆಸಿದ ಕಾರ್ಯಾಚರಣೆಯ ನಂತರ ಐವರು ವಿದೇಶಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿತ್ತು.

ಫೆಬ್ರವರಿ 27ರಂದು ಬಂಧಿತ ದೋಣಿ, ಸಿಬ್ಬಂದಿ ಮತ್ತು ನಿಷಿದ್ಧ ಮಾದಕ ವಸ್ತುಗಳನ್ನು ಕಾನೂನು ಜಾರಿ ಸಂಸ್ಥೆಗಳಿಗೆ ಹಸ್ತಾಂತರಿಸಲಾಯಿತು. ಕಣ್ಗಾವಲು ಕಾರ್ಯಾಚರಣೆಯ ಸಮಯದಲ್ಲಿ P8I LRMR ವಿಮಾನವು ಮಾಹಿತಿ ಸಂಗ್ರಹಿಸಿದ್ದು, ನಂತರ ಪ್ರತಿಕ್ರಿಯೆಯಾಗಿ ಕಾರ್ಯಾಚರಣೆಯನ್ನು ನಡೆಸಲಾಯಿತು. ಅನುಮಾನಾಸ್ಪದ ದೋಣಿಯನ್ನು ಯಶಸ್ವಿಯಾಗಿ ಪ್ರತಿಬಂಧಿಸಿ ಸೆರೆಹಿಡಿಯಲಾಯಿತು.

ಇದನ್ನೂ ಓದಿ: Student Death: ಅಮೆರಿಕದಲ್ಲಿ ಡ್ರಗ್ಸ್‌ ಗ್ಯಾಂಗ್‌ನಿಂದ ಅಪಹೃತನಾದ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆ

Continue Reading

ದೇಶ

Trinmool Congress: ಟಿಎಂಸಿ ಕಾರ್ಯಕರ್ತನ ಭೀಕರ ಹತ್ಯೆ; ಬಿಜೆಪಿ ನಾಯಕಿ ಮೇಲೆ ಡೆಡ್ಲಿ ಅಟ್ಯಾಕ್‌!

Trinmool Congress:ಪಶ್ಚಿಮ ಬಂಗಾಳದ ರಾಜ್ಯ ರಾಜಧಾನಿ ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್‌ನ ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿದ್ದು, ಟಿಎಂಸಿಯ ಕಾರ್ಯಕರ್ತನ ಬರ್ಬರ ಕೊಲೆಯಾಗಿದೆ. ಪ್ರತ್ಯೇಕ ಘಟನೆಯಲ್ಲಿ ಬಿಜೆಪಿ ನಾಯಕಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

VISTARANEWS.COM


on

Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜ್ಯ ರಾಜಧಾನಿ ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್‌ (Trinmool Congress)ನ ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿದ್ದು, ಟಿಎಂಸಿ(TMC)ಯ ಕಾರ್ಯಕರ್ತನ ಬರ್ಬರ ಕೊಲೆಯಾಗಿದೆ. ಪ್ರತ್ಯೇಕ ಘಟನೆಯಲ್ಲಿ ಬಿಜೆಪಿ ನಾಯಕಿ(BJP Leader)ಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಬಾಗುಯಾಟಿ ಜಿಲ್ಲೆಯಲ್ಲಿ ಟಿಎಂಸಿಯ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿತು. ಈ ಘಟನೆಯಲ್ಲಿ ಪೋಟ್ಲಾ ಎಂದೇ ಜನಪ್ರಿಯತೆ ಪಡೆದಿದ್ದ ಟಿಎಂಸಿ ಕಾರ್ಯಕರ್ತ ಸಂಜೀವ್‌ ದಾಸ್‌(Sanjeev Das) ಹತ್ಯೆಯಾಗಿದ್ದಾರೆ.

ನಿನ್ನೆ ತಡರಾತ್ರಿ ಅರ್ಜುನ್‌ಪುರದ ಪಶ್ಚಿಮ್‌ಪುರ ಪ್ರದೇಶದಲ್ಲಿ ಟಿಎಂಸಿಯ ಒಂದು ಬಣ ಕರೆಂಟ್‌ ಕಟ್‌ ಮಾಡಿದ ವಿಚಾರಕ್ಕೆ ಜಗಳ ಶುರುವಾಗಿತ್ತು. ಎರಡೂ ತಂಡಗಳ ಜಗಳ ತಾರಕಕ್ಕೇರಿ ಮಾರಾಮಾರಿ ನಡೆದಿದೆ. ಪರಸ್ಪರ ದೊಣ್ಣೆ, ಕಲ್ಲಿನಿಂದ ಬಡಿದಾಟ ನಡೆದಿತ್ತು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಸಂಜೀವ್‌ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ದಾಖಲಾಗುವ ಮೊದಲೇ ಆತ ಕೊನೆಯುಸಿರೆಳೆದಿದ್ದ. ಇನ್ನು ಘಟನೆಗೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರ ಕಾಯ್ದೆಯಲ್ಲಿ ಒಟ್ಟು 11 ಕೇಸ್‌ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಲ್ಲೇಟು ಬಿದ್ದು ಕೆಳಗೆ ಬಿದ್ದಿದ್ದ ಸಂಜೀವ್‌ ಮೇಲೆ ದುಷ್ಕರ್ಮಿಗಳು ರಾಡ್‌ನಿಂದ ದಾಳಿ ನಡೆಸಿದ್ದರು ಎನ್ನಲಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 13 ಜನರ ವಿರುದ್ಧ ಕೇಸ್‌ ದಾಖಲಾಗಿದ್ದು, ಅವರನ್ನು ಅರೆಸ್ಟ್‌ ಮಾಡಲಾಗಿದೆ. ಘಟನೆ ಸಂಬಂಧ ತನಿಖೆ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಇನ್ನು ಸಂಜೀವ್‌ ದಾಸ್‌ ಹತ್ಯೆಗೆ ಖಂಡನೆ ವ್ಯಕ್ತಪಡಿಸಿರುವ ಅವರ ಕುಟುಂಬಸ್ಥರು ದುರ್ಘಟನೆಗೆ ಟಿಎಂಸಿಯನ್ನೇ ಹೊಣೆಯನ್ನಾಗಿದೆ.

ಬಿಜೆಪಿ ನಾಯಕಿ ಮೇಲೆ ಮಾರಣಾಂತಿಕ ಹಲ್ಲೆ

ಮತ್ತೊಂದೆಡೆ ದಕ್ಷಿಣ ಕೋಲ್ಕತಾದ ಆನಂದಪುರದಲ್ಲಿ ಬಿಜೆಪಿ ನಾಯಕಿ ಸರಸ್ವತಿ ಸರ್ಕಾರ್‌ ಮೇಲೆಯೂ ಮಾರಣಾಂತಿಕ ಹಲ್ಲೆ ನಡೆದಿದೆ. ಟಿಎಂಸಿ ಕಾರ್ಯಕರ್ತರು ಸರಸ್ವತಿ ಮೇಲೆ ಹರಿತವಾದ ಆಯುಧದಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಚುನಾವಣಾ ಬ್ಯಾನರ್‌ ಕಟ್ಟುವ ವಿಚಾರಕ್ಕೆ ಬಿಜೆಪಿ ಮತ್ತು ಟಿಎಂಸಿ ನಾಯಕರ ನಡುವೆ ಮಾರಾಮಾರಿ ನಡೆದಿದ್ದು, ಈ ವೇಳೆ ಆಕೆಯ ತಲೆಗೆ ಗಂಭೀರ ಗಾಯಗಳಾಗಿವೆ. ಆಕೆ ಪೊಲೀಸರಿಗೆ ದೂರು ನೀಡಿದ್ದಾರೆ. ಇನ್ನು ಈ ವಿಡಿಯೋವನ್ನು ಬಿಜೆಪಿ ಐಟಿ ಸೆಲ್‌ ನಿರ್ವಾಹಕ ಅಮಿತ್‌ ಮಾಳವಿಯಾ ಎಕ್ಸ್‌ನಲ್ಲಿ ಶೇರ್‌ ಮಾಡಿದ್ದು, ಪಶ್ಚಿಮ ಬಂಗಾಳದಲ್ಲಿ ಮಹಿಳೆಯರು ಸುರಕ್ಷಿತರಾಗಿಲ್ಲ. ಬಿಜೆಪಿ ಕಸ್ಬಾ ಮಂಡಲ ಅಧ್ಯಕ್ಷೆ ಸರಸ್ವತಿ ಸರ್ಕಾರ್‌ ಮೇಲೆ ಟಿಎಂಸಿ ಗೂಂಡಾಗಳು ಹಲ್ಲೆ ಮಾಡಿದ್ದಾರೆ. ಬಂಗಾಳದ ಜನತೆ ಇದಕ್ಕೆ ತಕ್ಕ ಪಾಠ ಕಲಿಸೇ ಕಲಿಸುತ್ತಾರೆ.

ಇದನ್ನೂ ಓದಿ:Amit Shah: ಬಿಜೆಪಿ ಗೆದ್ದರೆ ಮುಸ್ಲಿಮರ ಮೀಸಲಾತಿ ಒಬಿಸಿಗೆ; ಅಮಿತ್‌ ಶಾ ಘೋಷಣೆ

ಸರಸ್ವತಿ ಗಂಭೀರವಾಗಿ ಗಾಯಗೊಂಡು ಪೊಲೀಸ್‌ ಠಾಣೆಯಲ್ಲಿ ಕುಳಿತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಬ್ಯಾನರ್‌ ಕಟ್ಟುತಿದ್ದ ಬಿಜೆಪಿಯ ಇಬ್ಬರು ಕಾರ್ಯಕರ್ತರ ಮೇಲೆ ಗೂಂಡಾಗಳು ದಾಳಿ ಮಾಡಿದ್ದರು, ಅದನ್ನು ತಡೆಯಲು ಮುಂದಾದ ಸರಸ್ವತಿ ಮೇಲೆ ದಾಳಿ ನಡೆದಿದೆ. ಇನ್ನು ಟಿಎಂಸಿ ಗೂಂಡಾ ವರ್ತನೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.

 
    
  


  

   

Continue Reading
Advertisement
CET
ಕರ್ನಾಟಕ8 mins ago

CET 2024: ಸಿಇಟಿ ಮರು ಪರೀಕ್ಷೆಯೋ? ಗ್ರೇಸ್‌ ಮಾರ್ಕ್ಸ್‌ ಭಾಗ್ಯವೋ? ನಾಳೆ ನಿರ್ಧಾರ ಪ್ರಕಟ?

YAJAMANA PREMIER LEAGUE SEASON-3 (2)
ಕ್ರೀಡೆ29 mins ago

YAJAMANA PREMIER LEAGUE SEASON-3: ಈ ಬಾರಿ ಟಿ10 ಮಾದರಿಯಲ್ಲಿ ನಡೆಯಲಿದೆ ಯಜಮಾನ ಪ್ರೀಮಿಯರ್ ಲೀಗ್​

Lok Sabha Election 2024
Lok Sabha Election 202442 mins ago

Lok Sabha Election 2024: ಒವೈಸಿ ಪ್ರಕಾರ ಮುಸ್ಲಿಮರೇ ಹೆಚ್ಚು ಕಾಂಡೋಮ್ ಬಳಸುತ್ತಾರಂತೆ!

Virat Kohli
ಕ್ರಿಕೆಟ್52 mins ago

Virat Kohli: ಟೀಕೆಗಳಿಗೆ ಬಹಿರಂಗವಾಗಿಯೇ ತಿರುಗೇಟು ನೀಡಿದ ಕಿಂಗ್​ ಕೊಹ್ಲಿ​

Jatra Rathotsava Two killed and one serious after being hit by wheel of a chariot at Indi Kamarimath
ಕರ್ನಾಟಕ1 hour ago

Jatra Rathotsava: ಇಂಡಿಯ ಕಮರಿಮಠದ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ದುರ್ಮರಣ; ಮತ್ತೊಬ್ಬ ಗಂಭೀರ

Karnataka Weather
ಕರ್ನಾಟಕ1 hour ago

Karnataka Weather: ರಾಜ್ಯದಲ್ಲಿ ಮೇ 2ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಳ; ಆರೆಂಜ್‌ ಅಲರ್ಟ್‌ ಘೋಷಣೆ

Amrita Pandey
ಸಿನಿಮಾ1 hour ago

Amrita Pandey: ಭೋಜ್‌ಪುರಿ ಜನಪ್ರಿಯ ನಟಿ ಅಮೃತಾ ಪಾಂಡೆ ಆತ್ಮಹತ್ಯೆ; ಸಾವಿಗೆ ಮುನ್ನ ಬರೆದ ವಾಟ್ಸಾಪ್ ಸ್ಟೇಟಸ್‌ನಲ್ಲಿ ಏನಿದೆ?

PM Narendra Modi
ಕರ್ನಾಟಕ2 hours ago

PM Narendra Modi: ಪುಕ್ಕಲ ನಾಯಕ ದೇಶ ಆಳಬಲ್ಲನೇ? ರಾಹುಲ್‌ ಗಾಂಧಿಗೆ ಮೋದಿ ಟಾಂಗ್!

Narendra Modi
Lok Sabha Election 20242 hours ago

Narendra Modi: ನಿಮ್ಮ ಸೇವೆಗೆಂದೇ ಭಗವಂತ ನನ್ನನ್ನು ಈ ಭೂಮಿಗೆ ಕಳುಹಿಸಿದ್ದಾನೆ, ಈ ಜೀವ ದೇಶಕ್ಕಾಗಿ ಎಂದ ಮೋದಿ

RCB vs GT
ಕ್ರೀಡೆ2 hours ago

RCB vs GT: ವಿಲ್​ ಜ್ಯಾಕ್ಸ್ ಅಜೇಯ ಶತಕ; ಆರ್​ಸಿಬಿಗೆ 9 ವಿಕೆಟ್​ ಭರ್ಜರಿ ಗೆಲುವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20244 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20247 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20249 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20249 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ12 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ16 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌