Site icon Vistara News

Gyanvapi Case: ಜ್ಞಾನವಾಪಿ ಮಸೀದಿ ಸಮೀಕ್ಷೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆಗೆ ಕೋರ್ಟ್‌ ಅಸ್ತು

Gyanvapi Mosque

Gyanvapi Case: ASI seeks 15 day extension to submit scientific Survey report

ಲಖನೌ: ಉತ್ತರ ಪ್ರದೇಶದ ಕಾಶಿ ವಿಶ್ವನಾಥ ದೇವಾಲಯದ ಬಳಿ ಇರುವ ಜ್ಞಾನವಾಪಿ (Gyanvapi Case) ಮಸೀದಿಯಲ್ಲಿ ಪತ್ತೆಯಾದ ಶಿವಲಿಂಗದ ವೈಜ್ಞಾನಿಕ ಪರೀಕ್ಷೆ (ಕಾರ್ಬನ್‌ ಡೇಟಿಂಗ್)‌ಗೆ ಅಲಹಾಬಾದ್‌ ಹೈಕೋರ್ಟ್‌ ನಿರ್ದೇಶನ ನೀಡಿದ ಬೆನ್ನಲ್ಲೇ, ಜ್ಞಾನವಾಪಿ ಮಸೀದಿಯ ಭೂ ವಿಸ್ತೀರ್ಣದ ಸಮೀಕ್ಷೆ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆಗೆ ವಾರಾಣಸಿ ನ್ಯಾಯಾಲಯ ಸಮ್ಮತಿ ಸೂಚಿಸಿದೆ.

ಜ್ಞಾನವಾಪಿ ಮಸೀದಿಯ ಇಡೀ ಆವರಣದ ಸಮೀಕ್ಷೆ ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಗೆ (ASI) ನಿರ್ದೇಶನ ನೀಡಬೇಕು ಎಂದು ನಾಲ್ವರು ಹಿಂದು ಮಹಿಳೆಯರು ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಹಾಗೆಯೇ, ಯಾವುದೇ ಆಕ್ಷೇಪಣೆಗಳು ಇದ್ದರೆ ಮೇ 19ರೊಳಗೆ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಉತ್ತರ ಪ್ರದೇಶ ಸರ್ಕಾರ ಹಾಗೂ ಮಸೀದಿ ಉಸ್ತುವಾರಿ ವಹಿಸಿಕೊಂಡಿರುವ ಅಂಜುಮನ್‌ ಇಂತೇಜಾಮಿಯಾಗೆ ಸೂಚಿಸಿದೆ. ಮೇ 22ರಂದು ವಿಚಾರಣೆ ನಡೆಸುವುದಾಗಿಯೂ ತಿಳಿಸಿದೆ.

ಈಗಾಗಲೇ ಜ್ಞಾನವಾಪಿ ಮಸೀದಿಯ ವಿಡಿಯೊ ಸಮೀಕ್ಷೆ ಮುಗಿದಿದೆ. ಇದೇ ವೇಳೆ, ಮಸೀದಿ ಆವರಣದಲ್ಲಿರುವ ಬಾವಿಯಲ್ಲಿ ಶಿವಲಿಂಗ ಪತ್ತೆಯಾಗಿದೆ. ಶಿವಲಿಂಗದ ಕಾಲಾವಧಿ ಪತ್ತೆಗಾಗಿ ಕಾರ್ಬನ್‌ ಡೇಟಿಂಗ್‌ ಪರೀಕ್ಷೆ ನಡೆಸಲು ಅಲಹಾಬಾದ್‌ ಹೈಕೋರ್ಟ್‌ ಈಗಾಗಲೇ ನಿರ್ದೇಶಿಸಿದೆ. ಇದರ ಬೆನ್ನಲ್ಲೇ, ವಾರಾಣಸಿ ನ್ಯಾಯಾಲಯವು ಹಿಂದುಗಳ ಅರ್ಜಿಯ ವಿಚಾರಣೆಗೆ ಸಮ್ಮತಿ ಸೂಚಿಸಿದೆ.

ಇದನ್ನೂ ಓದಿ: Gyanvapi Mosque Case | ಹಿಂದೂಗಳ ಅರ್ಜಿ ಪ್ರಶ್ನಿಸಿ ಜ್ಞಾನವಾಪಿ ಮಸೀದಿ ಸಮಿತಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ವಾರಾಣಸಿ ಕೋರ್ಟ್‌

ವಿಡಿಯೊ ಸರ್ವೇ ವೇಳೆ ಪತ್ತೆಯಾದ ಶಿವಲಿಂಗಕ್ಕೆ ಯಾವುದೇ ಹಾನಿಯಾಗದಂತೆ ವೈಜ್ಞಾನಿಕ ಪರೀಕ್ಷೆ ನಡೆಸಬೇಕು ಎಂದು ಅಲಹಾಬಾದ್‌ ಹೈಕೋರ್ಟ್‌ ನಿರ್ದೇಶನ ನೀಡಿದೆ. ಜ್ಞಾನವಾಪಿ ಮಸೀದಿಯು ದೇವಾಲಯಕ್ಕೆ ಅಂಟಿಕೊಂಡಂತಿರುವ ಕಾರಣ, ಅದು ಮೊದಲು ದೇವಾಲಯವೇ ಆಗಿತ್ತು. ದೇವಾಲಯ ಕೆಡವಿ ಮಸೀದಿ ನಿರ್ಮಿಸಲಾಗಿದೆ. ಹಾಗಾಗಿ, ಇಡೀ ಮಸೀದಿಯ ಸಮೀಕ್ಷೆಯಾಗಬೇಕು ಎಂದು ಅರ್ಜಿ ಸಲ್ಲಿಸಲಾಗಿತ್ತು.

Exit mobile version