Gyanvapi Mosque Survey: ಜ್ಞಾನವಾಪಿ ಮಸೀದಿ ಸರ್ವೆ ವರದಿ ನ್ಯಾಯಾಲಯಕ್ಕೆ ಸಲ್ಲಿಕೆ - Vistara News

ದೇಶ

Gyanvapi Mosque Survey: ಜ್ಞಾನವಾಪಿ ಮಸೀದಿ ಸರ್ವೆ ವರದಿ ನ್ಯಾಯಾಲಯಕ್ಕೆ ಸಲ್ಲಿಕೆ

ಮೊದಲೇ ಅಸ್ತಿತ್ವದಲ್ಲಿದ್ದ ಹಿಂದೂ ದೇವಾಲಯದ ಅವಶೇಷಗಳ ಮೇಲೆ ಜ್ಞಾನವಾಪಿ ಮಸೀದಿಯನ್ನು ನಿರ್ಮಿಸಲಾಗಿದೆಯೇ ಎಂದು ಪರಿಶೀಲಿಸಲು ಸಮೀಕ್ಷೆಯನ್ನು (Gyanvapi Mosque Survey) ನಡೆಸಲಾಗಿತ್ತು.

VISTARANEWS.COM


on

Gyanvapi mosque survey
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ವಾರಾಣಸಿಯ ವಿವಾದಿತ ಜ್ಞಾನವಾಪಿ ಮಸೀದಿ ಸಮೀಕ್ಷೆ (Gyanvapi Mosque Survey) ವರದಿಯನ್ನು ಉತ್ತರ ಪ್ರದೇಶದ ವಾರಾಣಸಿಯ ಜಿಲ್ಲಾ ನ್ಯಾಯಾಲಯಕ್ಕೆ ಸೋಮವಾರ ಸಲ್ಲಿಸಲಾಗಿದೆ.

ಸಂಪೂರ್ಣವಾಗಿ ಮೊಹರು ಮಾಡಿದ ದಾಖಲೆಯನ್ನು ಭಾರತೀಯ ಪುರಾತತ್ವ ಇಲಾಖೆಯು (Archaeological Survey of India) ನ್ಯಾಯಾಲಯಕ್ಕೆ ಸಲ್ಲಿಸಿದೆ. ಇದನ್ನು ಸಾರ್ವಜನಿಕಗೊಳಿಸಲಾಗುತ್ತದೆಯೇ, ಅಥವಾ ಹಿಂದೂ ಮತ್ತು ಮುಸ್ಲಿಂ ಅರ್ಜಿದಾರರೊಂದಿಗೆ ಹಂಚಿಕೊಳ್ಳಲಾಗುತ್ತದೆಯೋ ಎಂಬುದು ಸ್ಪಷ್ಟವಾಗಿಲ್ಲ. ಈ ಕುರಿತ ಮುಂದಿನ ವಿಚಾರಣೆಯನ್ನು ಗುರುವಾರಕ್ಕೆ ನಿಗದಿಪಡಿಸಲಾಗಿದೆ.

ASI ತನ್ನ ಸಂಶೋಧನೆಗಳನ್ನು ಸಲ್ಲಿಸಲು ನಿಗದಿಪಡಿಸಿದ ಸಮಯಕ್ಕಿಂತ ಆರು ಅವಧಿ ವಿಸ್ತರಣೆಗಳನ್ನು ತೆಗೆದುಕೊಂಡಿದೆ. ಅಧ್ಯಯನ ಮತ್ತು ವಿಶ್ಲೇಷಣೆ ಮಾಡಬೇಕಾದ ಅಪಾರ ಪ್ರಮಾಣದ ಡೇಟಾವನ್ನು ಉಲ್ಲೇಖಿಸಿದೆ. ನವೆಂಬರ್ 2ರಂದು ಸಮೀಕ್ಷೆಯನ್ನು ಮುಗಿಸಿದ್ದೇನೆ ಎಂದು ತಿಳಿಸಿದೆ. ಆದರೆ ಸಮೀಕ್ಷೆಯ ಸಮಯದಲ್ಲಿ ಬಳಸಿದ ಉಪಕರಣಗಳ ವಿವರಗಳನ್ನು ಸಲ್ಲಿಸುವುದು ಸೇರಿದಂತೆ ವರದಿಯನ್ನು ಸಮಗ್ರವಾಗಿ ಮಂಡಿಸಲು ಹೆಚ್ಚಿನ ಸಮಯವನ್ನು ಕೇಳಿದೆ.

ಕೆಲವು ಮೊಹರು ಮಾಡಿದ ವಿಭಾಗಗಳನ್ನು ಹೊರತುಪಡಿಸಿ ಜ್ಞಾನವಾಪಿ ಮಸೀದಿ ಆವರಣದ ಸಮೀಕ್ಷೆಯು ಆಗಸ್ಟ್‌ನಲ್ಲಿ ಪ್ರಾರಂಭವಾಯಿತು. 17ನೇ ಶತಮಾನದ ಮಸೀದಿಯನ್ನು ಮೊದಲೇ ಅಸ್ತಿತ್ವದಲ್ಲಿದ್ದ ಹಿಂದೂ ದೇವಾಲಯದ ಅವಶೇಗಳ ಮೇಲೆ ನಿರ್ಮಿಸಲಾಗಿದೆಯೇ ಎಂದು ಪರಿಶೀಲಿಸಲು ಸಮೀಕ್ಷೆಯನ್ನು ಉದ್ದೇಶಿಸಲಾಗಿತ್ತು. ವಾರಣಾಸಿ ನ್ಯಾಯಾಲಯ ಮಸೀದಿ ಒಳಭಾಗದಲ್ಲಿ ಉತ್ಖನನಕ್ಕೆ ಅವಕಾಶ ನೀಡಿತ್ತು.

ವಾರಣಾಸಿ ನ್ಯಾಯಾಲಯದ ಆದೇಶವನ್ನು ಅಲಹಾಬಾದ್ ಹೈಕೋರ್ಟ್ ಎತ್ತಿ ಹಿಡಿದ ನಂತರ ಸಮೀಕ್ಷೆ ಆರಂಭವಾಗಿದೆ. ನ್ಯಾಯದ ಹಿತದೃಷ್ಟಿಯಿಂದ ಸಮೀಕ್ಷೆ ಅಗತ್ಯವಾಗಿದೆ ಮತ್ತು ವಿವಾದದಲ್ಲಿ ಎರಡೂ ಕಡೆಯವರಿಗೆ ಲಾಭವಾಗಲಿದೆ ಎಂದು ಹೈಕೋರ್ಟ್ ಹೇಳಿತ್ತು.

ನಂತರ ಜ್ಞಾನವಾಪಿ ಮಸೀದಿ ಸಮಿತಿಯು ಹೈಕೋರ್ಟ್‌ನ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ (Supreme court) ಅರ್ಜಿ ಸಲ್ಲಿಸಿತ್ತು. 354 ವರ್ಷಗಳಷ್ಟು ಹಳೆಯದಾದ ಮಸೀದಿ ಸಂಕೀರ್ಣದ ನೆಲಮಾಳಿಗೆ ಮತ್ತು ಇತರ ಸ್ಥಳಗಳಲ್ಲಿ ಅನುಮತಿಯಿಲ್ಲದೆ ಎಎಸ್‌ಐ ಅಗೆಯುತ್ತಿದೆ, ಅದು ಕುಸಿಯುವ ಅಪಾಯದಲ್ಲಿದೆ ಎಂದು ಮಸೀದಿ ಆಡಳಿತ ಸಮಿತಿಯು ಆಕ್ಷೇಪಿಸಿ ಸುಪ್ರೀಂ ಕೋರ್ಟಿಗೆ ಹೋಗಿತ್ತು. ಆಗಸ್ಟ್ 4ರಂದು ಸುಪ್ರೀಂ ಕೋರ್ಟ್‌ ಸಮೀಕ್ಷೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿತು. ಆದರೆ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠವು, ಹೆಚ್ಚಿನ ಹಾನಿಕಾರಕ ಉತ್ಖನನಗಳನ್ನು ನಡೆಸದಂತೆ ಎಎಸ್‌ಐಗೆ ನಿರ್ದೇಶನ ನೀಡಿತು.

ಇದನ್ನೂ ಓದಿ: Gyanvapi Case: ಜ್ಞಾನವಾಪಿ ಮಸೀದಿ ಸಮೀಕ್ಷಾ ವರದಿ ಸಲ್ಲಿಕೆಗೆ ಹೆಚ್ಚಿನ ಅವಧಿ ಕೇಳಿದ ಎಎಸ್‌ಐ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Siddaramaiah: ಮೇಕೆದಾಟು ಕೂಡಲೇ ಕ್ಲಿಯರ್‌ ಮಾಡಿ: ಪ್ರಧಾನಿ ಮೋದಿ ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

CM Siddaramaiah: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ ಹಾಗೂ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿದ್ದಾರೆ.

VISTARANEWS.COM


on

CM Siddaramaiah pm narendra modi
ಫೈಲ್‌ ಚಿತ್ರ
Koo

ಹೊಸದಿಲ್ಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ. ಇದರಲ್ಲಿ ಬೆಂಗಳೂರು ನಗರಕ್ಕೆ ಕುಡಿಯುವ ನೀರು (Drinking Water) ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು (Mekedatu project) ಅಣೆಕಟ್ಟು ಯೋಜನೆ ಪ್ರಮುಖವಾಗಿದ್ದು, 9000 ಕೋಟಿ ರೂ.ಗಳ ಡಿಪಿಆರ್‌ಗೆ ಕೇಂದ್ರ ಜಲ ಆಯೋಗದಿಂದ (Central water commission) ಅನುಮೋದನೆ ಬಾಕಿ ಇದೆ. ಈ ಯೋಜನೆಗೆ ಪ್ರಧಾನಿಗಳು ಖುದ್ದಾಗಿ ಆಸಕ್ತಿ ವಹಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ ಹಾಗೂ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಜನರ ಬಹುದಿನಗಳ ಕನಸಿನ ಯೋಜನೆಯಾದ ಮಹಾದಾಯಿ ಯೋಜನೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಯೋಜನೆಗಳು

ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆಗೆ 60 ಕಿ.ಮೀ ಸುರಂಗ ಮಾರ್ಗಕ್ಕೆ 3000 ಕೋಟಿ ವೆಚ್ಚವಾಗಲಿದ್ದು, ಯೋಜನೆಯಿಂದ ಹಲವಾರು ಲಾಭಗಳಿವೆ. ಈ ಸುರಂಗ ಮಾರ್ಗ ರಾಷ್ಟ್ರೀಯ ಹೆದ್ದಾರಿ 7 ನ್ನು ರಾ.ಹೆ.4 ಕ್ಕೆ ಸಂಪರ್ಕಿಸುವುದರಿಂದ ಕರ್ನಾಟಕ ಸರ್ಕಾರ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದೊಂದಿಗೆ ಕೈಗೊಳ್ಳಬಹುದಾಗಿದ್ದು, ಕೇಂದ್ರ ಬಜೆಟ್ ಮೂಲಕ ರಾಜ್ಯ ಸರ್ಕಾರ ಹಾಗೂ ಎನ್.ಹೆಚ್.ಎ.ಐ ಗೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.

ಸಾರ್ವಜನಿಕ ಸಾರಿಗೆಗೆ ಬೇಡಿಕೆ ಹೆಚ್ಚಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3ನೇ ಹಂತದ 44.65 ಕಿಮೀ ಗಲನ್ನು 15611 ಕೋಟಿಗಳ ವೆಚ್ಚದ ಡಿಪಿಆರ್‌ ಅನ್ನೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು ಕೇಂದ್ರ ಸಚಿವ ಸಂಪುಟದ ಅನುಮೋದನೆ ಬಾಕಿ ಇದೆ. ಆದಷ್ಟು ಶೀಘ್ರವಾಗಿ ಅನುಮೋದನೆ ನೀಡುವಂತೆ ಕೋರಿದ್ದಾರೆ.

73.04 ಕಿ.ಮೀ ಉದ್ದದ ಅಷ್ಟಪಥ ಪೆರಿಫೆರಲ್ ರಿಂಗ್ ರೋಡನ್ನು ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಅನುಮೋದಿಸಿದೆ. ಕೇಂದ್ರ ಬಜೆಟ್‌ನಲ್ಲಿ ಅಗತ್ಯ ಅನುದಾನವನ್ನು ಮೀಸಲಿಡುವಂತೆ ಮುಖ್ಯಮಂತ್ರಿಗಳು ಪತ್ರದಲ್ಲಿ ಕೋರಿದ್ದಾರೆ.

15ನೇ ಹಣಕಾಸು ಆಯೋಗವು 2021-26 ರ ಅವಧಿಗೆ ಕೆರೆಗಳ ಅಭಿವೃದ್ಧಿ ಹಾಗೂ ಪೇರಿಫೆರಲ್ ರಿಂಗ್ ರೋಡ್‌ಗಾಗಿ ಶಿಫಾರಸ್ಸು ಮಾಡಿರುವ 6000 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ ಅವರು ಮನವಿ ಮಾಡಿದ್ದಾರೆ.

ಬಿಬಿಎಂಪಿ ವತಿಯಿಂದ ಘನ ತ್ಯಾಜ್ಯ ನಿರ್ವಹಣೆಗಾಗಿ 3200 ಕೋಟಿ ಅಂದಾಜು ಮೊತ್ತದ ಯೋಜನೆ ಕೈಗೊಳ್ಳುತ್ತಿದ್ದು, ಯೋಜನೆಯ ಶೇ.30% ಅಂದರೆ 960 ಕೋಟಿ ರೂ.ಗಳನ್ನು ಸ್ವಚ್ಛ ಭಾರತ ಅಭಿಯಾನ 2.0ದಡಿ ಕಾರ್ಯಸಾಧ್ಯತಾ ಅಂತರ ನಿಧಿ ಒದಗಿಸಲು ಕೋರಲಾಗಿದೆ.

ಕಲ್ಯಾಣ ಕರ್ನಾಟಕದ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 3000 ಕೋಟಿ ರೂ.ಗಳ ಅನುದಾನವನ್ನು ಬಜೆಟ್ ನಲ್ಲಿ ಮೀಸಲಿರಿಸಿದ್ದು ಕೇಂದ್ರ ಸರ್ಕಾರವು ತನ್ನ 2024-25 ರ ಬಜೆಟ್ ನಲ್ಲಿ ಅನುರೂಪದ ಅನುದಾನವನ್ನು ಒದಗಿಸಲು ಹಾಗೂ ಕೇಂದ್ರ ಸರ್ಕಾರದ ಅಭಿವೃದ್ಧಿ ಆಕಾಂಕ್ಷಿ ಜಿಲ್ಲಾ ಕಾರ್ಯಕ್ರಮದಡಿ ಒದಗಿಸುವ ಅನುದಾನವನ್ನು ಹೆಚ್ಚಿಸಲು ಮತ್ತು ಹೊಸ ಕಾರ್ಯಕ್ರಮಗಳನ್ನು ಯೋಜನೆಯಲ್ಲಿ ಸೇರ್ಪಡೆಗೊಳಿಸಲು ಅನುಕೂಲವಾಗುವಂತೆ ಧನಸಹಾಯ ನೀಡಲು ಕೋರಲಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ (AIIMS) ನ್ನೂ ಘೋಷಿಸುವಂತೆ ಮುಖ್ಯಮಂತ್ರಿಗಳು ತಮ್ಮ ಮನವಿ ಪತ್ರದಲ್ಲಿ ಕೋರಿದ್ದಾರೆ. 15ನೇ ಹಣಕಾಸು ಆಯೋಗವು 2020-21ರಲ್ಲಿ ಶಿಫಾರಸ್ಸು ಮಾಡಿದ್ದ 5495 ಕೋಟಿಗಳ ನಿರ್ದಿಷ್ಟ ಅನುದಾನವನ್ನು ಕೇಂದ್ರ ಹಣಕಾಸು ಸಚಿವಾಲಯ ಒಪ್ಪಿಲ್ಲ. ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ದೊಡ್ಡ ಮೊತ್ತದ ಪಾಲು ದೊರಕಲಿಲ್ಲವಾದ್ದರಿಂದ ಈ ಶಿಫಾರಸ್ಸನ್ನು ಒಪ್ಪಿ ಅನುದಾನವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಕೋರಿದ್ದಾರೆ.

ಇದನ್ನೂ ಓದಿ: Siddaramaiah: ಅಮಿತ್‌ ಶಾ-ಸಿದ್ದರಾಮಯ್ಯ ಭೇಟಿ; ರಾಜ್ಯದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಒತ್ತಾಯ

Continue Reading

ದೇಶ

Lalu Prasad Yadav: “ಇಂದಿರಾ ಗಾಂಧಿ ನಮ್ಮನ್ನು ಜೈಲಿಗಟ್ಟಿದರು, ಆದರೆ…” ಎಮರ್ಜೆನ್ಸಿ ಬಗ್ಗೆ ಲಾಲೂ ಹೇಳಿದ್ದೇನು?

Lalu Prasad Yadav:ತುರ್ತು ಪರಿಸ್ಥಿತಿ ಹೇರಿಕೆಯಾದ ಸಂದರ್ಭದಲ್ಲಿ ತಾವು ಎದುರಿಸಿದ ಕರಾಳ ದಿನಗಳನ್ನು ಲಾಲು ಪ್ರಸಾದ್ ಯಾದವ್ ನೆನಪಿಸಿಕೊಂಡಿದ್ದು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಅನೇಕ ನಾಯಕರನ್ನು ಜೈಲು ಕಂಬಿಯ ಹಿಂದೆ ಹಾಕಿದ್ದರು. ಆದರೆ ಎಂದಿಗೂ ಅವರನ್ನು ನಿಂದಿಸಿರಲಿಲ್ಲ ಎಂದು ಲಾಲು ಹೇಳಿದ್ದಾರೆ.

VISTARANEWS.COM


on

Indira Gandhi's Emergency
Koo

ಹೊಸದಿಲ್ಲಿ: ಕಳೆದ ಕೆಲವು ದಿನಗಳಿಂದ ತುರ್ತು ಪರಿಸ್ಥಿತಿ(Emergency) ಹೇರಿಕೆಯ ವಿಚಾರವನ್ನಿಟ್ಟುಕೊಂಡು ಆಡಳಿತ ಪಕ್ಷ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇದೆ. ಇದು ಸಾಲದೆನ್ನುವಂತೆ ಸ್ಪೀಕರ್‌ ಓಂ ಬಿರ್ಲಾ(Om birla), ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu) ಕೂಡ ಎಮರ್ಜೆನ್ಸಿ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿದ್ದರು. ಇದೀಗ ಇದೇ ವಿಚಾರವನ್ನಿಟ್ಟುಕೊಂಡು ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್(Lalu Prasad Yadav) ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ತುರ್ತು ಪರಿಸ್ಥಿತಿ ಹೇರಿಕೆಯಾದ ಸಂದರ್ಭದಲ್ಲಿ ತಾವು ಎದುರಿಸಿದ ಕರಾಳ ದಿನಗಳನ್ನು ಲಾಲು ಪ್ರಸಾದ್ ಯಾದವ್ ನೆನಪಿಸಿಕೊಂಡಿದ್ದು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಅನೇಕ ನಾಯಕರನ್ನು ಜೈಲು ಕಂಬಿಯ ಹಿಂದೆ ಹಾಕಿದ್ದರು. ಆದರೆ ಎಂದಿಗೂ ಅವರನ್ನು ನಿಂದಿಸಿರಲಿಲ್ಲ ಎಂದು ಲಾಲು ಹೇಳಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಲಾಲೂ, ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿ ವಿರುದ್ಧದ ಚಳವಳಿಯನ್ನು ಮುಂದುವರಿಸಲು ಜಯಪ್ರಕಾಶ್ ನಾರಾಯಣ್ ರಚಿಸಿದ್ದ ಸಮಿತಿಯಲ್ಲಿ ನಾನು ಸಂಚಾಲಕನಾಗಿದ್ದೆ. ನನ್ನನ್ನು 15 ತಿಂಗಳ ಕಾಲ ಭದ್ರತಾ ನಿರ್ವಹಣಾ ಕಾಯ್ದೆ (ಮಿಸಾ) ಅಡಿ ಜೈಲಿನಲ್ಲಿ ಇರಿಸಲಾಗಿತ್ತು ಎಂದರು.

ಇದೇ ವೇಳೆ ಅವರು ಬಿಜೆಪಿ ಮುಖಂಡರ ವಿರುದ್ಧ ಕಿಡಿ ಕಾರಿದ್ದು, ಇಂದು ಎಮರ್ಜೆನ್ಸಿ ಕುರಿತು ಮಾತನಾಡುತ್ತಿರುವ ಬಿಜೆಪಿ ಸಚಿವರ ಬಗ್ಗೆ ನನಗೆ ಹಾಗೂ ನನ್ನ ಸಹೋದ್ಯೋಗಿಗಳಿಗೆ ಗೊತ್ತೇ ಇರಲಿಲ್ಲ. ಮೋದಿ, ಜೆಪಿ ನಡ್ಡಾ ಹಾಗೂ ಇಂದು ಸ್ವಾತಂತ್ರ್ಯದ ಮೌಲ್ಯಗಳ ಬಗ್ಗೆ ನಮಗೆ ಉಪದೇಶ ನೀಡುತ್ತಿರುವ ಪ್ರಧಾನಿಯ ಇತರೆ ಸಚಿವ ಸಹೋದ್ಯೋಗಿಗಳ ಹೆಸರನ್ನೇ ನಾವು ಕೇಳಿರಲಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

ಇಂದಿರಾ ಗಾಂಧಿ ನಮ್ಮನ್ನು ಕಂಬಿಗಳ ಹಿಂದೆ ಇರಿಸಿದ್ದು ಎಷ್ಟು ನಿಜವೂ ಅವರು ನಮ್ಮನ್ನು ನಿಂದಿಸಿರಲಿಲ್ಲ ಎಂಬುದು ಕೂಡ ಅಷ್ಟೇ ಸತ್ಯ. ಅವರಾಗಲೀ ಅಥವಾ ಅವರ ಸಚಿವರಾಗಲೀ ನಮ್ಮನ್ನು ದೇಶ ದ್ರೋಹಿಗಳು ಅಥವಾ ದೇಶಪ್ರೇಮಿಗಳಲ್ಲ ಎಂದು ಕರೆದಿರಲಿಲ್ಲ. ನಮ್ಮ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಆದರ್ಶಕ್ಕೆ ಧಕ್ಕೆ ತರುವ ವಿಧ್ವಂಸಕ ಕೃತ್ಯಗಳಿಗೆ ಅವಕಾಶ ನೀಡಿರಲಿಲ್ಲ. 1975 ನಮ್ಮ ಪ್ರಜಾಪ್ರಭುತ್ವಕ್ಕೆ ಒಂದು ಕಪ್ಪು ಚುಕ್ಕೆ ಹೌದು. ಹಾಗಂದ ಮಾತ್ರಕ್ಕೆ ವಿರೋಧ ಪಕ್ಷದವರನ್ನು ಅಗೌರವದಿಂದ ನಡೆಸಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಕಟುವಾಗಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:Prajwal Revanna Case: ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌; ಬಂಧಿಸದಂತೆ ಹೈಕೋರ್ಟ್ ಆದೇಶ

Continue Reading

ವಿದೇಶ

Maya Neelakantan: ಅಮೆರಿಕವನ್ನು ಹುಚ್ಚೆಬ್ಬಿಸಿದ 10 ವರ್ಷದ ಭಾರತೀಯ ಗಿಟಾರ್‌ ಬಾಲೆ ಮಾಯಾ ನೀಲಕಂಠನ್‌, ಯಾರೀಕೆ?

Maya Neelakantan: ಇದೀಗ ಅಮೆರಿಕಾದ ಹೊಸ ರಾಕ್ ಮ್ಯೂಸಿಕ್‌ ಡಾರ್ಲಿಂಗ್‌ ಆಗಿರುವ ಮಾಯಾ ನೀಲಕಂಠನ್‌ 10 ವರ್ಷದ ಗಿಟಾರ್ ಪ್ರತಿಭೆ. ರಾಕ್ ಸಂಗೀತದ ಅಸಾಧಾರಣ ಪ್ರತಿಭೆ ಮತ್ತು ಉತ್ಸಾಹವನ್ನು ಪ್ರದರ್ಶಿಸಿದ‌ ಮಾಯಾ, ಜಡ್ಜ್‌ಗಳ ಮನಗೆದ್ದರು.

VISTARANEWS.COM


on

maya neelakantan
Koo

ನ್ಯೂಯಾರ್ಕ್‌: ಭಾರತ (India) ಮೂಲದ 10 ವರ್ಷದ ಬಾಲಕಿ ಮಾಯಾ ನೀಲಕಂಠನ್ (Maya Neelakantan) ಇತ್ತೀಚೆಗೆ “ಅಮೆರಿಕಾಸ್ ಗಾಟ್ ಟ್ಯಾಲೆಂಟ್” (America’s got Talent) ಕಾರ್ಯಕ್ರಮದಲ್ಲಿ ತಮ್ಮ ಅಗಾಧ ಪ್ರತಿಭೆಯಿಂದ ನೋಡುಗರನ್ನು ಹುಚ್ಚೆಬ್ಬಿಸಿದರು. ಭಾರತೀಯ ಕ್ಲಾಸಿಕಲ್‌ (Classical) ಮತ್ತು ಪಾಪ್‌ ಫ್ಯೂಶನ್‌ (pop Fusion) ಮಾಡಿದ ನೋಟ್‌ ಅನ್ನು ಗಿಟಾರ್‌ನಲ್ಲಿ (Guitar) ನುಡಿಸಿ ಪ್ರೇಕ್ಷಕರಲ್ಲಿ ಪುಳಕ ಮೂಡಿಸಿದರು.

ಇದೀಗ ಅಮೆರಿಕಾದ ಹೊಸ ರಾಕ್ ಮ್ಯೂಸಿಕ್‌ ಡಾರ್ಲಿಂಗ್‌ ಆಗಿರುವ ಮಾಯಾ ನೀಲಕಂಠನ್‌ 10 ವರ್ಷದ ಗಿಟಾರ್ ಪ್ರತಿಭೆ. ರಾಕ್ ಸಂಗೀತದ ಅಸಾಧಾರಣ ಪ್ರತಿಭೆ ಮತ್ತು ಉತ್ಸಾಹವನ್ನು ಪ್ರದರ್ಶಿಸಿದ‌ ಮಾಯಾ, ಜಡ್ಜ್‌ಗಳ ಮನಗೆದ್ದರು. ತನ್ನ ಆಡಿಷನ್‌ಗಾಗಿ ಭಾರತದಿಂದ ಪ್ರಯಾಣಿಸಿದ ಮಾಯಾ, ಪಾಪಾ ರೋಚ್‌ನ “ಲಾಸ್ಟ್ ರೆಸಾರ್ಟ್” ಆಲ್ಬಂನ ನಿರೂಪಣೆಯೊಂದಿಗೆ ತೀರ್ಪುಗಾರರನ್ನು ಬೆರಗುಗೊಳಿಸಿದಳು. ಆತ್ಮವಿಶ್ವಾಸದಿಂದ ಗಿಟಾರ್ ನುಡಿಸಿ ರೋಮಾಂಚನಗೊಳಿಸಿದಳು.

ಮಾಯಾ ಕುಟುಂಬ ಜೊತೆಗಿದ್ದು ತೆರೆಮರೆಯಲ್ಲಿ ಅವಳನ್ನು ಹುರಿದುಂಬಿಸಿತು. ಮಾಯಾ ಕೌಶಲ್ಯ ತೀರ್ಪುಗಾರರಾದ ಸೈಮನ್ ಕೋವೆಲ್, ಸೋಫಿಯಾ ವೆರ್ಗರಾ, ಹೈಡಿ ಕ್ಲುಮ್ ಮತ್ತು ಹೋವೀ ಮ್ಯಾಂಡೆಲ್ ಅವರ ವಿಸ್ಮಯಕ್ಕೆ ಕಾರಣವಾಯಿತು. ಮಾಯಾ ತೀರ್ಪುಗಾರರು ಮತ್ತು ಪ್ರೇಕ್ಷಕರಿಂದ ಸಮಾನವಾಗಿ ಚಪ್ಪಾಳೆಗಳನ್ನು ಪಡೆದರು. ಈಗಾಗಲೇ ಎಲ್ಲಾ ಸೋಶಿಯಲ್‌ ಮೀಡಿಯಾ ವೇದಿಕೆಗಳಲ್ಲಿ ಮಾಯಾ ಗಿಟಾರ್‌ ನುಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ವೀಡಿಯೊ ಲಕ್ಷಾಂತರ ವೀಕ್ಷಣೆಗಳು ಮತ್ತು ಹಲವಾರು ಕಾಮೆಂಟ್‌ಗಳನ್ನು ಪಡೆದಿದೆ.

“ಭಾರತೀಯ ಉಡುಗೆ ಧರಿಸಿ ರಾಕ್ ಸಂಗೀತ ನುಡಿಸಿದ ನಿಮ್ಮ ಬಗ್ಗೆ ನಮಗೆ ತುಂಬಾ ಹೆಮ್ಮೆಯಾಗುತ್ತದೆ. ನೀವು ನಿಜವಾಗಿಯೂ ಆಶೀರ್ವದಿಸಲ್ಪಟ್ಟಿದ್ದೀರಿ. ಇಷ್ಟು ಚಿಕ್ಕ ವಯಸ್ಸಿನಲ್ಲಿ ನಿಮ್ಮ ಪ್ರತಿಭೆಗೆ ಯಾವುದೇ ಮಿತಿಯಿಲ್ಲ” ಎಂದು ಬಳಕೆದಾರರು ಕಾಮೆಂಟ್ ಮಾಡಿದ್ದಾರೆ.

ಟೂಲ್, ಮೆಟಾಲಿಕಾ ಮತ್ತು ಸ್ಲೇಯರ್ ಅವರ ಹಾಡುಗಳನ್ನು ಒಳಗೊಂಡಿರುವ ನೀಲಕಂಠನ್ ಅವರ ರಾಕ್ ಮತ್ತು ಗಿಟಾರ್‌ ನುಡಿಸುವಿಕೆಗಳು ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ಜನಪ್ರಿಯಗೊಳಿಸಿವೆ. 2022ರಲ್ಲಿ ಅವರು ಗಿಟಾರ್ ವಾದಕ ಆಡಮ್ ಜೋನ್ಸ್ ಅವರ “7ಎಂಪೆಸ್ಟ್” ನಿರೂಪಣೆಯೊಂದಿಗೆ ಪ್ರಭಾವಿಸಿದರು. ಮಾಯಾ ನೀಲಕಂಠನ್ ತನ್ನ ಇನ್ನೊಬ್ಬ ಗಿಟಾರ್‌ ಐಕಾನ್‌ ಗ್ಯಾರಿ ಹಾಲ್ಟ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಅವರಿಂದ ಉಡುಗೊರೆ ಪಡೆದಿದ್ದಾಳೆ. ತನ್ನ ಇನ್‌ಸ್ಟಾಗ್ರಾಮ್ ಪುಟದಲ್ಲಿ ಆಕೆ ಆತನನ್ನು ಭೇಟಿಯಾದ ವೀಡಿಯೊವನ್ನು ಪೋಸ್ಟ್ ಮಾಡಿದ್ದಾಳೆ. ಅವನ ಸಂಗ್ರಹದಿಂದ ಗಿಟಾರ್ ಅನ್ನು ಉಡುಗೊರೆಯಾಗಿ ಸ್ವೀಕರಿಸಿದಳು.

ಚಿಕ್ಕ ವಯಸ್ಸಿನಿಂದಲೇ ಸಂಗೀತದಲ್ಲಿ ಆಸಕ್ತಿಯನ್ನು ಬೆಳೆಸಿಕೊಂಡ ನೀಲಕಂಠನ್, ಥ್ರಾಶ್ ಮೆಟಲ್, ಟೂಲ್ ಹಾಡುಗಳು ಮತ್ತು ಭಾರತೀಯ ಶಾಸ್ತ್ರೀಯ ಕರ್ನಾಟಕ ಸಂಗೀತವನ್ನು ನುಡಿಸುತ್ತಾಳೆ. ಹಲವಾರು ಸಂದರ್ಭಗಳಲ್ಲಿ ನೇರ ಪ್ರದರ್ಶನ ನೀಡಿದ್ದಾಳೆ. ಕೇವಲ ಐದು ವರ್ಷದವಳಾಗಿದ್ದಾಗ ಆಕೆ ಆಟಿಕೆ ಗಿಟಾರ್ ನುಡಿಸುತ್ತಾ ಮನೆಯಲ್ಲಿ ನೃತ್ಯ ಮಾಡುತ್ತಿದ್ದಳಂತೆ. ಇದೇ ಆಸಕ್ತಿ ಆಕೆಯನ್ನು ನುರಿತ ಗಿಟಾರ್ ವಾದಕನಾಗಲು ಅವಳನ್ನು ಪ್ರೇರೇಪಿಸಿತು.

ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷರಾದ ಆನಂದ್ ಮಹೀಂದ್ರಾ ಅವರು ನೀಲಕಂಠನ್ ಅವರ ವೀಡಿಯೊವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಅವಳನ್ನು “ದೇವತೆಗಳ ಭೂಮಿಯಿಂದ ಬಂದ ರಾಕ್ ದೇವತೆ” ಎಂದು ಉಲ್ಲೇಖಿಸಿದ್ದಾರೆ. ಮಹೀಂದ್ರಾ ಗ್ರೂಪ್ ಪ್ರತಿ ವರ್ಷ ಮುಂಬೈನಲ್ಲಿ ಆಯೋಜಿಸುವ ಮಹೀಂದ್ರಾ ಬ್ಲೂಸ್ ಫೆಸ್ಟಿವಲ್‌ನಲ್ಲಿ ಈಕೆ ಕಾರ್ಯಕ್ರಮ ನೀಡಲು ಅರ್ಹಳು ಎಂದು ಮಹೀಂದ್ರಾ ಹೇಳಿದ್ದಾರೆ.

ಇದನ್ನೂ ಓದಿ: Viral Video: ಬಾಗಿಲ ಬಳಿ ಇದ್ದ ಆಹಾರ ಪ್ಯಾಕೆಟ್‌ ಕದ್ದೊಯ್ದ ಜೊಮ್ಯಾಟೊ ಡೆಲಿವರಿ ಬಾಯ್‌!

Continue Reading

ದೇಶ

Special Status: ಎನ್‌ಡಿಎಗೆ ಮೈತ್ರಿಗೆ ಮೊದಲ ಅಗ್ನಿ ಪರೀಕ್ಷೆ; ವಿಶೇಷ ಸ್ಥಾನಮಾನಕ್ಕೆ ಜೆಡಿಯು ನಿರ್ಣಯ

Special Status: ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷದ ಮುಖಂಡರು ಬಿಹಾರದ ಆರ್ಥಿಕ ಮತ್ತು ಅಭಿವೃದ್ಧಿ ಕೊರತೆಗಳನ್ನು ಉಲ್ಲೇಖಿಸಿದ್ದು, ವಿಶೇಷ ಸ್ಥಾನಮಾನ ನೀಡಬೇಕು ಎಂಬ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸುವ ಅಗತ್ಯವನ್ನು ಪ್ರತಿಪಾದಿಸಿದೆ. ಬಿಹಾರ ಸಂಪುಟದಲ್ಲಿ ಕಳೆದ ವರ್ಷ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂಬಂಧ ನಿರ್ಣಯ ಅಂಗೀಕರಿಸಲಾಗಿತ್ತು.

VISTARANEWS.COM


on

Special Status
Koo

ಪಾಟ್ನಾ: ಈ ಬಾರಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ(NDA Government) ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಜೆಡಿಯು(JDU) ಇದೀಗ ಕೇಂದ್ರ ಸರ್ಕಾರದ ಎದುರು ತನ್ನ ದಶಕದ ಬೇಡಿಕೆಯನ್ನಿಡಲು ಶತ ಪ್ರಯತ್ನ ಮಾಡುತ್ತಿದೆ. ಇದರ ಭಾಗವಾಗಿ ಇಂದು ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ದಶಕದ ಬೇಡಿಕೆಯಾಗಿರುವ ಬಿಹಾರಕ್ಕೆ ವಿಶೇಷ ಸ್ಥಾನಮಾನದ(Special Status) ನಿರ್ಣಯವನ್ನು ಅಂಗೀಕಾರ ಮಾಡಲಾಗಿದೆ.

ಸಭೆಯಲ್ಲಿ, ರಾಜ್ಯಸಭಾ ಸದಸ್ಯ ಸಂಜಯ್ ಝಾ ಅವರನ್ನು ಜೆಡಿಯುನ ಹೊಸ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಯಿತು. ಅಲ್ಲದೆ ಜೆಡಿಯು ಎನ್‌ಡಿಎನಲ್ಲಿಯೇ ಉಳಿಯಲು ನಿರ್ಧರಿಸಲಾಯಿತು. NEET-UG ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದ್ದು, ಪೇಪರ್ ಸೋರಿಕೆ ತಡೆಯಲು ಕಠಿಣ ಕಾನೂನುಗಳನ್ನು ಜಾರಿಗೆ ತರಬೇಕು ಎಂಬ ಬೇಡಿಕೆಯನ್ನು ಜೆಡಿಯು ನಾಯಕರು ಮುಂದಿಟ್ಟರು.

ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷದ ಮುಖಂಡರು ಬಿಹಾರದ ಆರ್ಥಿಕ ಮತ್ತು ಅಭಿವೃದ್ಧಿ ಕೊರತೆಗಳನ್ನು ಉಲ್ಲೇಖಿಸಿದ್ದು, ವಿಶೇಷ ಸ್ಥಾನಮಾನ ನೀಡಬೇಕು ಎಂಬ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸುವ ಅಗತ್ಯವನ್ನು ಪ್ರತಿಪಾದಿಸಿದೆ. ಬಿಹಾರ ಸಂಪುಟದಲ್ಲಿ ಕಳೆದ ವರ್ಷ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂಬಂಧ ನಿರ್ಣಯ ಅಂಗೀಕರಿಸಲಾಗಿತ್ತು.

ಕಾರ್ಯಾಧ್ಯಕ್ಷರಾಗಿ ನೇಮಕವಾದ ನಂತರ ಮಾತನಾಡಿರುವ ಝಾ, ಪ್ರಧಾನಿ ನರೇಂದ್ರ ಮೋದಿ ಯಾವಾಗಲೂ ಬಿಹಾರದತ್ತ ಹೆಚ್ಚು ಗಮನ ಹರಿಸುತ್ತಾರೆ. ರಾಜ್ಯಕ್ಕೆ ವಿಶೇಷ ವರ್ಗದ ಸ್ಥಾನಮಾನ ಅಥವಾ ಪ್ಯಾಕೇಜ್‌ಗಾಗಿ ಪಕ್ಷದ ಬೇಡಿಕೆಯನ್ನು ಈಡೇರಿಸುತ್ತಾರೆ ಎಂಬ ಭರವಸೆ ಇದೆ. ಜೆಡಿಯು ಯಾವಾಗಲೂ ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವುದಾಗಿ ಘೋಷಿಸಿದ್ದಾರೆ. ರಾಜ್ಯಸಭಾ ಸಂಸದ ಸಂಜಯ್‌ ಝಾ ಅವರನ್ನು ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ನಾವು ವಿಶೇಷ ಸ್ಥಾನಮಾನ ಮತ್ತು ಆರ್ಥಿಕ ಪ್ಯಾಕೇಜ್‌ಗಾಗಿ ಹೋರಾಟ ಮುಂದುವರಿಸುತ್ತೇವೆ ಎಂದಿದ್ದಾರೆ.

ಬಿಜೆಪಿ ಕಗ್ಗಂಟು

ಜೆಡಿಯುನ ಈ ಬೇಡಿಕೆ ಬಿಜೆಪಿಗೆ ಭಾರೀ ಕಗ್ಗಂಟಾಗಿ ಪರಿಣಮಿಸಲಿದೆ. ಒಂದು ವೇಳೆ ಬಿಹಾರದ ಈ ಬೇಡಿಕೆಯನ್ನು ಈಡೇರಿಸಿದರೂ, ಮತ್ತೊಂದೆಡೆ ಎನ್‌ಡಿಎಗೆ ಅನಿವಾರ್ಯವಾಗಿರುವ ಆಂಧ್ರ ಪ್ರದೇಶದ ತೆಲುಗು ದೇಶಂ ಪಕ್ಷದ ಬೆಂಬಲ ಉಳಿಸಿಕೊಳ್ಳಲು ಅದರ ಬೇಡಿಕೆಯನ್ನು ಕೂಡ ಈಡೇರಿಸಬೇಕಾಗುತ್ತದೆ. ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಕೂಡ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಬೇಕು ಎಂಬ ಬೇಡಿಕೆಯನ್ನು ಇರಿಸಿದ್ದಾರೆ.

ಬಿಹಾರ ಸರ್ಕಾರ ಕಳೆದ ವರ್ಷ ಮೀಸಲಾತಿ ಪ್ರಮಾಣವನ್ನು ಶೇ. 50ರಿಂದ ಶೇ. 65ಕ್ಕೆ ಹೆಚ್ಚಿಸಿತ್ತು. ಸರ್ಕಾರದ ಈ ಆದೇಶವನ್ನು ಪಾಟ್ನಾ ಹೈಕೋರ್ಟ್ (Patna High Court)​ ರದ್ದುಗೊಳಿಸಿದೆ. ರಾಜ್ಯವ್ಯಾಪಿ ಜಾತಿ ಸಮೀಕ್ಷೆ ನಡೆಸಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಪ್ರಮಾಣವನ್ನು ಕಳೆದ ವರ್ಷ ಹೆಚ್ಚಿಸಲಾಗಿತ್ತು. ರಾಜ್ಯ ಸರ್ಕಾರದ ಈ ಕ್ರಮವು ಸುಪ್ರೀಂ ಕೋರ್ಟ್ ಆದೇಶಿಸಿದ ಮೀಸಲಾತಿಯ ಶೇ. 50 ರ ಮಿತಿಯನ್ನು ಮೀರಿದೆ. ಹೀಗಾಗಿ ಪಾಟ್ನಾ ಹೈಕೋರ್ಟ್‌ ಇದನ್ನು ಸಂವಿಧಾನ ಬಾಹಿರ ಎಂದು ಕರೆದಿದೆ.

2023ರ ನವೆಂಬರ್‌ನಲ್ಲಿ ನಿತೀಶ್ ಕುಮಾರ್ ನೇತೃತ್ವ ಸರ್ಕಾರ ಜಾರಿಗೆ ತಂದ ಕಾನೂನನ್ನು ವಿರೋಧಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ನೇತೃತ್ವದ ವಿಭಾಗೀಯ ಪೀಠ ಈ ಆದೇಶವನ್ನು ಹೊರಡಿಸಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಬಿಹಾರ ವಿಧಾನಸಭೆ ಮೀಸಲಾತಿ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಿದ ಕೆಲವು ದಿನಗಳ ನಂತರ, ನಿತೀಶ್ ಕುಮಾರ್ ಸರ್ಕಾರವು ರಾಜ್ಯ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ಮಿತಿಯನ್ನು ಶೇ. 50ರಿಂದ ಶೇ. 65 ಕ್ಕ ಹೆಚ್ಚಿಸಲು ಗೆಜೆಟ್ ಅಧಿಸೂಚನೆಗಳನ್ನು ಹೊರಡಿಸಿತ್ತು.

ಇದನ್ನೂ ಓದಿ: Bulldozer: ‌ಉತ್ತರ ಪ್ರದೇಶದಲ್ಲಿ ಮತ್ತೆ ಬುಲ್ಡೋಜರ್‌ ಸದ್ದು; ರಸ್ತೆಯಲ್ಲಿ ಗುಂಡು ಹಾರಿಸಿದವರ ಹೋಟೆಲ್ ಧ್ವಂಸ!

Continue Reading
Advertisement
Hardik Pandya
ಪ್ರಮುಖ ಸುದ್ದಿ19 mins ago

Hardik Pandya : ಕಪಿಲ್​ ದೇವ್​ ರೀತಿ ಮೀಸೆ ಬಿಟ್ಟುಕೊಂಡು ಫೈನಲ್ ಪಂದ್ಯ ಆಡಲು ಬಂದ ಹಾರ್ದಿಕ್ ಪಾಂಡ್ಯ

CM Siddaramaiah pm narendra modi
ಪ್ರಮುಖ ಸುದ್ದಿ21 mins ago

Siddaramaiah: ಮೇಕೆದಾಟು ಕೂಡಲೇ ಕ್ಲಿಯರ್‌ ಮಾಡಿ: ಪ್ರಧಾನಿ ಮೋದಿ ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Indira Gandhi's Emergency
ದೇಶ25 mins ago

Lalu Prasad Yadav: “ಇಂದಿರಾ ಗಾಂಧಿ ನಮ್ಮನ್ನು ಜೈಲಿಗಟ್ಟಿದರು, ಆದರೆ…” ಎಮರ್ಜೆನ್ಸಿ ಬಗ್ಗೆ ಲಾಲೂ ಹೇಳಿದ್ದೇನು?

IPS officers promoted
ಪ್ರಮುಖ ಸುದ್ದಿ47 mins ago

IPS officers promoted: ಡಿಜಿಪಿಯಾಗಿ ಮಾಲಿನಿ ಕೃಷ್ಣಮೂರ್ತಿ, ಪ್ರಣಬ್ ಮೊಹಂತಿಗೆ ಮುಂಬಡ್ತಿ

maya neelakantan
ವಿದೇಶ1 hour ago

Maya Neelakantan: ಅಮೆರಿಕವನ್ನು ಹುಚ್ಚೆಬ್ಬಿಸಿದ 10 ವರ್ಷದ ಭಾರತೀಯ ಗಿಟಾರ್‌ ಬಾಲೆ ಮಾಯಾ ನೀಲಕಂಠನ್‌, ಯಾರೀಕೆ?

Back Benchers film in the Censor
ಕರ್ನಾಟಕ1 hour ago

Kannada New Movie: ಸೆನ್ಸಾರ್ ಅಂಗಳದಲ್ಲಿ ‘ಬ್ಯಾಕ್ ಬೆಂಚರ್ಸ್’ ಸಿನಿಮಾ!

Producer who gifted an expensive car to the director of Radhika Kumaraswamy starrer Ajagrata
ಕರ್ನಾಟಕ1 hour ago

Kannada New Movie: ರಾಧಿಕಾ ಕುಮಾರಸ್ವಾಮಿ ಅಭಿನಯದ ‘ಅಜಾಗ್ರತ’ ಸಿನಿಮಾ ಡೈರೆಕ್ಟರ್‌ಗೆ ನಿರ್ಮಾಪಕರಿಂದ ದುಬಾರಿ ಕಾರ್‌ ಗಿಫ್ಟ್‌!

T20 World Cup final
ಕ್ರಿಕೆಟ್2 hours ago

T20 World Cup Final : ಟಾಸ್​ ಗೆದ್ದವರು ಮ್ಯಾಚ್​ ಗೆಲ್ತಾರೆ; ವಿಶ್ವ ಕಪ್​ ಫೈನಲ್ ಪಂದ್ಯದ ಇತಿಹಾಸ ಹೀಗಿದೆ

Weight Loss Tips
ಆಹಾರ/ಅಡುಗೆ2 hours ago

Weight Loss Tips: ಕಪ್ಪು ಬಣ್ಣದ ಆಹಾರಗಳಿಂದ ತೂಕ ಇಳಿಸಿ!

T20 World Cup 2024
ಪ್ರಮುಖ ಸುದ್ದಿ2 hours ago

T20 World Cup 2024 : ಫೈನಲ್ ಪಂದ್ಯ ಆರಂಭಕ್ಕೆ ಮೊದಲೇ ವಿಜೇತರನ್ನು ಘೋಷಿಸಿದ ಟಾಮ್ ಮೂಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ5 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ11 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ1 day ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌