Heart Failure: ಹೃದಯಾಘಾತ, ಪೆಪ್ಪರ್‌ಫ್ರೈನ ಸಹ ಸಂಸ್ಥಾಪಕ ಅಂಬರೀಶ್ ಮೂರ್ತಿ ನಿಧನ - Vistara News

ದೇಶ

Heart Failure: ಹೃದಯಾಘಾತ, ಪೆಪ್ಪರ್‌ಫ್ರೈನ ಸಹ ಸಂಸ್ಥಾಪಕ ಅಂಬರೀಶ್ ಮೂರ್ತಿ ನಿಧನ

2012ರಲ್ಲಿ ಪೆಪ್ಪರ್‌ಫ್ರೈ (pepperfry) ಸ್ಥಾಪಿಸಿದ ಬಳಿಕ ಅದನ್ನು ಯಶಸ್ವೀ ಉದ್ಯಮವಾಗಿ ಮಾರುಕಟ್ಟೆಯಲ್ಲಿ ಎತ್ತರಕ್ಕೆ ಏರಿಸಿದವರು ಅಂಬರೀಶ್‌ ಮೂರ್ತಿ.

VISTARANEWS.COM


on

ambreeshmurty
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇ- ಕಾಮರ್ಸ್‌ ಮಳಿಗೆ ಪೆಪ್ಪರ್‌ಫ್ರೈನ (pepperfry) ಸಹ-ಸಂಸ್ಥಾಪಕ ಅಂಬರೀಶ್ ಮೂರ್ತಿ (Ambareesh Murty) ಅವರು ಹೃದಯಾಘಾತದಿಂದ (heart failure) ಲೇಹ್‌ನಲ್ಲಿ ನಿಧನರಾಗಿದ್ದಾರೆ.

ಈ ವಿಚಾರವನ್ನು ಸಹ-ಸಂಸ್ಥಾಪಕ ಆಶಿಶ್ ಶಾ ಮಂಗಳವಾರ ತಿಳಿಸಿದ್ದಾರೆ. “ನನ್ನ ಸ್ನೇಹಿತ, ಮಾರ್ಗದರ್ಶಕ, ಸಹೋದರ, ಆತ್ಮೀಯ ಗೆಳೆಯ ಅಂಬರೀಶ್ ಮೂರ್ತಿ ಇನ್ನಿಲ್ಲ ಎಂದು ತಿಳಿಸಲು ತುಂಬಾ ದುಃಖವಾಗುತ್ತಿದೆ. ನಿನ್ನೆ ರಾತ್ರಿ ಲೇಹ್‌ನಲ್ಲಿ ಹೃದಯಾಘಾತದಿಂದ ಅವರನ್ನು ಕಳೆದುಕೊಂಡೆ. ಅವರ ಕುಟುಂಬ ಮತ್ತು ನಿಕಟವರ್ತಿಗಳಿಗೆ ಇದನ್ನು ಸಹಿಸಲು ಶಕ್ತಿ ದೊರೆಯುವಂತೆ ಪ್ರಾರ್ಥಿಸಿ” ಎಂದು ಆಶಿಶ್ ಶಾ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಪೆಪ್ಪರ್‌ಫ್ರೈ, ಪೀಠೋಪಕರಣಗಳು ಮತ್ತು ಗೃಹಾಲಂಕಾರ ಸಾಧನಗಳ ಇ- ಕಾಮರ್ಸ್‌ (E-commerce) ಮಳಿಗೆ. 2012ರಲ್ಲಿ, ಅಂಬರೀಶ್ ಮೂರ್ತಿ ಮತ್ತು ಆಶಿಶ್ ಷಾ ಇಬ್ಬರು ಸೇರಿ ಪೆಪ್ಪರ್‌ಫ್ರೈ ಅನ್ನು ಸ್ಥಾಪಿಸಿದ್ದರು. ಕಳೆದ ಒಂದು ದಶಕದಲ್ಲಿ, ಪೆಪ್ಪರ್‌ಫ್ರೈ ಆನ್‌ಲೈನ್ ವರ್ಚುವಲ್ ಕ್ಯಾಟಲಾಗ್, ಆಂತರಿಕ ಪೂರೈಕೆ ಸರಪಳಿ ಮತ್ತು 100ಕ್ಕೂ ಹೆಚ್ಚು ಭಾರತೀಯ ನಗರಗಳಲ್ಲಿ ವ್ಯಾಪಕವಾಗಿ ಹರಡಿದೆ.

ದೆಹಲಿಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ಎಂಜಿನಿಯರಿಂಗ್ (B.E.) ಮತ್ತು ಕಲ್ಕತ್ತಾದ ಪ್ರತಿಷ್ಠಿತ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಿಂದ ಮಾಸ್ಟರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ (MBA) ಪದವಿ ಪಡೆದಿದ್ದರು ಅಂಬರೀಶ್‌. ತಮ್ಮ ವೃತ್ತಿಜೀವನವನ್ನು ಕ್ಯಾಡ್‌ಬರಿಯ ಮಾರಾಟ ಮತ್ತು ಮಾರ್ಕೆಟಿಂಗ್‌ ವಿಭಾಗದಿಂದ ಆರಂಭಿಸಿದ್ದರು.

ನಂತರ ಪ್ರುಡೆನ್ಶಿಯಲ್‌ನೊಂದಿಗೆ ಮಾರ್ಕೆಟಿಂಗ್ ಮತ್ತು ಗ್ರಾಹಕ ಸೇವೆಯ VP ಆಗಿ ಕೆಲಸ ಮಾಡಿದರು. ನಂತರ ಇಬೇ ಇಂಡಿಯಾದ ಫಿಲಿಪೈನ್ಸ್ ಮತ್ತು ಮಲೇಷ್ಯಾದ ಕಂಟ್ರಿ ಮ್ಯಾನೇಜರ್‌ ಆಗಿ ಸೇವೆ ಸಲ್ಲಿಸಿದರು. ಅವರು ಲೆವಿ ಸ್ಟ್ರಾಸ್ ಇಂಡಿಯಾದ ಬ್ರ್ಯಾಂಡ್ ನಾಯಕರಾಗಿ ಉತ್ಪನ್ನ ಅಭಿವೃದ್ಧಿ, ಮಾರ್ಕೆಟಿಂಗ್ ತಂತ್ರಗಳ ಹೊಣೆ ಹೊತ್ತಿದ್ದರು. ಬ್ರಿಟಾನಿಯಾ ಇಂಡಸ್ಟ್ರೀಸ್‌ನಲ್ಲಿ ಮಾರ್ಕೆಟಿಂಗ್ ಮ್ಯಾನೇಜರ್ ಆಗಿ ಮಹತ್ವದ ಹೊಣೆ ನಿರ್ವಹಿಸಿದ್ದರು.

ಇಂಟರ್ನೆಟ್ ಮತ್ತು ಮೊಬೈಲ್ ಅಸೋಸಿಯೇಷನ್ ​​ಆಫ್ ಇಂಡಿಯಾದ (IAMAI) ಉಪಾಧ್ಯಕ್ಷ ಸ್ಥಾನವನ್ನು ಸಹ ನಿರ್ವಹಿಸಿದ ಅವರು 2012ರಲ್ಲಿ ಪೆಪ್ಪರ್‌ಫ್ರೈ ಸ್ಥಾಪಿಸಿದ ಬಳಿಕ ಅದನ್ನು ಯಶಸ್ವೀ ಉದ್ಯಮವಾಗಿ ಮಾರುಕಟ್ಟೆಯಲ್ಲಿ ಸ್ಥಾಪಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Election : ಮತದಾನ ಪ್ರಮಾಣ ಕುಸಿತ; ಬಿಜೆಪಿಯ ಹೃದಯೊಳಗೆ ಢವ ಢವ!

Lok Sabah Election: ಮುಂದಿನ ಐದು ಹಂತಗಳಲ್ಲಿ ಕಡಿಮೆ ಮತದಾನದ ಪ್ರವೃತ್ತಿ ಮುಂದುವರಿಯದಂತೆ ನೋಡಿಕೊಳ್ಳುವಂತೆ ಪಕ್ಷದ ವರಿಷ್ಠರು ರಾಜ್ಯ ಉಸ್ತುವಾರಿಗಳಿಗೆ ಸೂಚನೆ ನೀಡಿದ್ದಾರೆ. ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ 543 ಸ್ಥಾನಗಳಲ್ಲಿ 400 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಒಟ್ಟು ಚಲಾವಣೆಯಾದ ಮತಗಳಲ್ಲಿ 50% ಅನ್ನು ಗೆಲ್ಲುವ ಗುರಿಯೂ ಇದೆ.

VISTARANEWS.COM


on

Lok sabaha election
Koo

ನವದೆಹಲಿ: ಲೋಕಸಭಾ ಚುನಾವಣೆಯ (Lok Sabha Election) ಮೊದಲ ಎರಡು ಹಂತಗಳಲ್ಲಿ ಮತದಾನದ ಪ್ರಮಾಣವು ಕುಸಿದಿರುವುದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿಗೆ) ಆತಂಕಕಾರಿ ಬೆಳವಣಿಗೆಯಾಗಿದೆ. ಮತದಾರರ ನಿರಾಸಕ್ತಿಯ ಹಿನ್ನೆಲೆಯಲ್ಲಿ ಪಕ್ಷದ ಬಾಹುಳ್ಯವನ್ನು ದ್ವಿಗುಣಗೊಳಿಸಲು ಮತ್ತು ಅದರ ಮತ ಹಂಚಿಕೆ ಕಡಿಮೆಯಾಗದಂತೆ ನೋಡಿಕೊಳ್ಳಲು ತನ್ನ ಕಾರ್ಯಕರ್ತರಿಗೆ ಸೂಚನೆ ನೀಡಿದೆ.

ಹಿರಿಯ ನಾಯಕರ ಪ್ರಕಾರ ಬಿಹಾರ, ಮಧ್ಯಪ್ರದೇಶ ಮತ್ತು ರಾಜಸ್ಥಾನದಂತಹ ರಾಜ್ಯಗಳಲ್ಲಿನ ಮತದಾನದ ಪ್ರಮಾಣವು ಕೇಂದ್ರ ನಾಯಕತ್ವವು ರಾಜ್ಯ ಘಟಕಗಳ ಸಾಮರ್ಥ್ಯವನ್ನು ಪ್ರಶ್ನಿಸಿದೆ. ಚುನಾವಣೆಯ ಮೇಲ್ವಿಚಾರಣೆ ನಡೆಸುತ್ತಿರುವ ರಾಜ್ಯ ಉಸ್ತುವಾರಿಗಳಿಂದ ವಿವರ ವಿವರಣೆಯನ್ನು ಕೋರಿದೆ. ಆದರೆ ಕಡಿಮೆ ಮತದಾನ ಆಡಳಿತ ಪಕ್ಷದ ಬಗ್ಗೆ ಕೋಪ ಅಥವಾ ನಿರಾಸಕ್ತಿಯ ಸೂಚಕವಾಗಿ ಎಂದು ಹೇಳಲಾಗುವುದಿಲ್ಲ ಎಂಬ ಉತ್ತರವನ್ನು ಕೇಂದ್ರದ ನಾಯಕರು ಪಡೆದುಕೊಂಡಿದ್ದಾರೆ.

ಕಡಿಮೆ ಮತದಾನವು ಪ್ರತಿಪಕ್ಷಗಳು ಮತ್ತು ಅದರ ನಾಯಕತ್ವದ ಕೊರತೆಯ ಪ್ರತಿಫಲ ಎನ್ನಲಾಗಿದೆ. ಭ್ರಮ ನಿರಸನಗೊಂಡಿರುವ ಮತದಾರರು ಮತ ಚಲಾಯಿಸಲು ಹೊರಬರುತ್ತಿಲ್ಲ ಎಂದು ಬಿಜೆಪಿ ನಾಯಕರು ವಾದಿಸಿದ್ದಾರೆ.

ಈ ಹೇಳಿಕೆ ಹೊರತಾಗಿಯೂ, ಮುಂದಿನ ಐದು ಹಂತಗಳಲ್ಲಿ ಕಡಿಮೆ ಮತದಾನದ ಪ್ರವೃತ್ತಿ ಮುಂದುವರಿಯದಂತೆ ನೋಡಿಕೊಳ್ಳುವಂತೆ ಪಕ್ಷದ ವರಿಷ್ಠರು ರಾಜ್ಯ ಉಸ್ತುವಾರಿಗಳಿಗೆ ಸೂಚನೆ ನೀಡಿದ್ದಾರೆ. ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ 543 ಸ್ಥಾನಗಳಲ್ಲಿ 400 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಒಟ್ಟು ಚಲಾವಣೆಯಾದ ಮತಗಳಲ್ಲಿ 50% ಅನ್ನು ಗೆಲ್ಲುವ ಗುರಿಯೂ ಇದೆ.

ವಾರಾಂತ್ಯ ಕಾರಣವೇ?

ವಾರಾಂತ್ಯದಲ್ಲಿ ಮತದಾನದ ದಿನವನ್ನು ನಿಗದಿಪಡಿಸಿದ್ದರಿಂದ ಹೀಗಾಗಿದೆ ಎಂದೂ ಹೇಳಲಾಗುತ್ತಿದೆ. ಬೇಸಿಗೆಯ ತಾಪ ಹಾಗೂ ನಗರ ಮತದಾರರ ಉದಾಸಿನ ಪ್ರವೃತ್ತಿಯೂ ಇದಕ್ಕೆ ಕಾರಣ ಎನ್ನಲಾಗಿದೆ. ಆದರೆ ಮೋದಿಯನ್ನೇ ನೆಚ್ಚಿಕೊಂಡಿರುವುದು ಕೂಡ ಪ್ರಭಾವ ಬೀರಿದೆ ಎನ್ನಲಾಗಿದೆ. “ಕೆಲವು ಪ್ರದೇಶಗಳಲ್ಲಿ ಸಂಸದರು ಮತ್ತು ಶಾಸಕರು ನಿರೀಕ್ಷೆಯಂತೆ ಪ್ರಚಾರ ಮಾಡಲಿಲ್ಲ. ಮೇಲಿನಿಂದ ಉತ್ಸಾಹದ ಕೊರತೆಯು ನಮ್ಮ ಚುನಾವಣಾ ಪ್ರಚಾರದ ಪ್ರಮುಖ ಕೇಂದ್ರಗಳಾಗಿರುವ ಬೂತ್ ಕಾರ್ಯಕರ್ತರ ಮೇಲೆ ಪರಿಣಾಮ ಬೀರಿದೆ. ಈ ಸಮಸ್ಯೆಯನ್ನು ಪರಿಹರಿಸಲಾಗುತ್ತಿದೆ ಎಂದು ಮಧ್ಯಪ್ರದೇಶದ ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: Pralhad Joshi : ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್​ನಿಂದ ನಾಟಕ; ಪ್ರಲ್ಹಾದ್ ಜೋಶಿ ಲೇವಡಿ

ಎರಡನೇ ಹಂತದಲ್ಲಿ ಶೇ.63.5ರಷ್ಟು ಮತದಾನವಾಗಿದ್ದರೆ ಮಧ್ಯಪ್ರದೇಶದಲ್ಲಿ 2019ರಲ್ಲಿ ಶೇ.67.7ರಷ್ಟು ಮತದಾನಕ್ಕೆ ಹೋಲಿಸಿದರೆ ಮಧ್ಯ ಪ್ರದೇಶದಲ್ಲಿ ಈ ಬಾರಿ ಶೇ.58.3ರಷ್ಟು ಮತದಾನವಾಗಿದೆ. 2019ರಲ್ಲಿ 62.8% ರಿಂದ 58.99% ರಷ್ಟು ಮತದಾನವಾಗಿದೆ ಮತ್ತು ಬಿಹಾರದಲ್ಲಿ ಮತದಾನವು 2019 ರಲ್ಲಿ 62.93% ರಿಂದ 58.5% ಕ್ಕೆ ಇಳಿದಿದೆ.

ರಾಜಸ್ಥಾನದ ಎಲ್ಲಾ 25 ಸ್ಥಾನಗಳ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ಮತದಾನವು 61.60% ಆಗಿದ್ದು, ಇದು 2019 ರಲ್ಲಿ ದಾಖಲಾದ 66.07% ಕ್ಕಿಂತ ಕಡಿಮೆ.

ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಏಪ್ರಿಲ್ 19 ರಂದು ನಡೆದ ಮೊದಲ ಹಂತದ ಮತದಾನದ ಕೊನೆಯಲ್ಲಿ 102 ಲೋಕಸಭಾ ಸ್ಥಾನಗಳಲ್ಲಿ 65.5% ರಷ್ಟು ಮತದಾನವಾಗಿತ್ತು. ಇದು 2019 ರಲ್ಲಿ ಇದೇ ಹಂತದಲ್ಲಿ ದಾಖಲಾದ 69.9% ಕ್ಕೆ ಹೋಲಿಸಿದರೆ ಕಡಿಮೆ. ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ, ಈ ಕುಸಿತವು ಇಬ್ಬರು ಹೊಸ ಮುಖ್ಯಮಂತ್ರಿಗಳಾದ ಭಜನ್ ಲಾಲ್ ಶರ್ಮಾ ಮತ್ತು ಮನೋಜ್ ಯಾದವ್ ಅವರ ನಾಯಕತ್ವದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದೂ ಹೇಳಲಾಗಿದೆ.

Continue Reading

ದೇಶ

Lok Sabha Election 2024: ಅಮೇಥಿ, ರಾಯ್‌ಬರೇಲಿಗೆ ರಾಹುಲ್‌, ಪ್ರಿಯಾಂಕಾ ಫಿಕ್ಸ್‌? ಖರ್ಗೆ ನಿರ್ಧಾರ ಫೈನಲ್‌

Lok Sabha Election 2024: ಅಮೇಥಿ ಕ್ಷೇತ್ರದಿಂದ ರಾಹುಲ್‌ ಗಾಂಧಿ ಮತ್ತು ರಾಯ್‌ ಬರೇಲಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿಯನ್ನು ಕಣಕ್ಕಿಳಿಸುವಂತೆ ಕೇಂದ್ರೀಯ ಕಾಂಗ್ರೆಸ್‌ ಎಲೆಕ್ಷನ್‌ ಸಮಿತಿ(CEC) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮನವಿ ಮಾಡಿದೆ.

VISTARANEWS.COM


on

Priyanka Gandhi Rahul Gandhi
Koo

ನವದೆಹಲಿ: ಲೋಕಸಭೆ ಚುನಾವಣೆ(Lok Sabha Election 2024) ಯ ಎರಡನೇ ಹಂತದ ಮತದಾನ ಮುಕ್ತಾಯಗೊಂಡರೂ ಅಮೇಥಿ (Amethi) ಮತ್ತು ರಾಯ್‌ಬರೇಲಿ (Raebareli) ಯಲ್ಲಿ ತನ್ನ ಅಭ್ಯರ್ಥಿಯನ್ನು ಘೋಷಿಸದೇ ಕಾಂಗ್ರೆಸ್‌ ಇನ್ನೂ ಗುಟ್ಟಾಗಿಯೇ ಇಟ್ಟಿದೆ. ಈ ಎರಡೂ ಕ್ಷೇತ್ರಗಳಲ್ಲಿ ಗಾಂಧಿ ಕುಟುಂಬದ ಕುಡಿಗಳನ್ನೇ ಕಣಕ್ಕಿಳಿಸಬೇಕೆಂದು ಬಹುತೇಕ ಎಲ್ಲಾ ಕಾಂಗ್ರೆಸ್‌ ಮುಖಂಡರ ಆಶಯವಾಗಿದೆ. ಇದಕ್ಕೆ ಪೂರಕ ಎಂಬಂತೆ ಅಮೇಥಿ ಕ್ಷೇತ್ರದಿಂದ ರಾಹುಲ್‌ ಗಾಂಧಿ(Rahul Gadhi) ಮತ್ತು ರಾಯ್‌ ಬರೇಲಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ(Priyanka Gandhi)ಯನ್ನು ಕಣಕ್ಕಿಳಿಸುವಂತೆ ಕೇಂದ್ರೀಯ ಕಾಂಗ್ರೆಸ್‌ ಎಲೆಕ್ಷನ್‌ ಸಮಿತಿ(CEC) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ಮತ್ತು ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ(Sona Gandhi)ಗೆ ಮನವಿ ಮಾಡಿದೆ. ಈ ಬಗ್ಗೆ ತಮ್ಮ ಮನವಿಯನ್ನು ಸಲ್ಲಿಸಿರುವ CEC ಸದಸ್ಯರು ಅಂತಿಮ ನಿರ್ಧಾರವನ್ನು ಮಲ್ಲಿಕಾರ್ಜುನ ಖರ್ಗೆಗೆ ಬಿಟ್ಟಿದ್ದಾರೆ.

2019ರವರೆಗೆ ಕಾಂಗ್ರೆಸ್‌ನ ಭದ್ರಕೋಟೆಯಂತಿದ್ದ ಅಮೇಥಿ ಮತ್ತು ರಾಯ್‌ ಬರೇಲಿ ಮೇಲೆ ಇಡೀ ದೇಶದ ಚಿತ್ತವೇ ನೆಟ್ಟಿದೆ. 2019ರಲ್ಲಿ ಬಿಜೆಪಿ ನಾಯಕಿ ಸ್ಮೃತಿ ಇರಾನಿ ರಾಹುಲ್‌ ಗಾಂಧಿಯವರನ್ನು ಸೋಲಿಸುವ ಮೂಲಕ ಕಾಂಗ್ರೆಸ್‌ ಮೊದಲ ಬಾರಿಗೆ ಅಮೇಥಿಯಲ್ಲಿ ಕಳೆದುಕೊಂಡಿತ್ತು. ಇನ್ನು ಸೋನಿಯಾ ಗಾಂಧಿಯವರು ರಾಜ್ಯಸಭೆಗೆ ಆಯ್ಕೆಯಾದ ನಂತರ ಅವರು ರಾಯ್‌ಬರೇಲಿಯನ್ನು ತೊರೆದಿದ್ದರು. ಇದಾದ ಬಳಿಕ ಪ್ರಿಯಾಂಕಾ ಗಾಂಧಿ ವಾಧ್ರಾ ರಾಯ್‌ ಬರೇಲಿ ಕ್ಷೇತ್ರದಿಂದ ಕಣಕ್ಕಿಳಿಯುವ ಮೂಲಕ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಬಹಳ ಕೇಳಿ ಬಂದಿತ್ತು. ಇದೀಗ ಮತ್ತೆ ಈ ಎರಡು ಕ್ಷೇತ್ರಗಳ ಅಭ್ಯರ್ಥಿಗಳನ್ನು ಕಾಂಗ್ರೆಸ್‌ ಇನ್ನೂ ಗುಟ್ಟಾಗಿ ಇಡುವ ಮೂಲಕ ಭಾರೀ ಕುತೂಹಲ ಮೂಡಿಸಿದೆ.

ಅಮೇಥಿಯಲ್ಲಿ ಸ್ಪರ್ಧಿಸುವ ಬಗ್ಗೆ ಸ್ವತಃ ರಾಹುಲ್‌ ಗಾಂಧಿಯೇ ಒಲವು ತೋರಿದ್ದು, ಪಕ್ಷ ಬಯಸಿದ್ದಲ್ಲಿ ಅಮೇಥಿಯಿಂದ ಸ್ಪರ್ಧಿಸುವುದಾಗಿ ಹೇಳಿದ್ದರು. ಈಗಾಗಲೇ ಕೇರಳದ ವಯನಾಡಿನಲ್ಲಿ ಕಣಕ್ಕಿಳಿದಿರುವ ರಾಹುಲ್‌ ಗಾಂಧಿ ಈ ಬಾರಿಯೂ ಎರಡನೇ ಕ್ಷೇತ್ರದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಮತ್ತೊಂದೆಡೆ ಈ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದು, ಎರಡೂ ಕೇತ್ರಗಳ ಅಭ್ಯರ್ಥಿ ಘೋಷಣೆಗೆ ಇನ್ನೂ ಸಮಯ ಇದೆ. ಜನರಿಂದ ಯಾವ ಅಭ್ಯರ್ಥಿಯ ಹೆಸರು ಕೇಳಿ ಬರುತ್ತದೋ ಅಂಥವರಿಗೆ ಸೀಟ್‌ ಕೊಡಲಾಗುತ್ತದೆ. ಶೀಘ್ರದಲ್ಲೇ ಅಭ್ಯರ್ಥಿ ಘೋಷಣೆ ಆಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:School Teacher: ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಶಿಕ್ಷಕಿ ಪುಂಡಾಟ; ನೆರೆಮನೆಯವರ ಮೇಲೂ ಹಲ್ಲೆ

ಕಾಂಗ್ರೆಸ್‌ ಮುಖಂಡರ ಕ್ಷೇತ್ರ ಬದಲಾವಣೆ ಬಗ್ಗೆ ಬಿಜೆಪಿ ಆಗಾಗ ವ್ಯಂಗ್ಯ ಆಡುತ್ತಿದೆ. ಈ ಬಗ್ಗೆ ಟಾಂಗ್‌ ಕೊಟ್ಟ ಖರ್ಗೆ, ನಮ್ಮನ್ನು ಹಾಸ್ಯ ಮಾಡುವ ಬಿಜೆಪಿಗರು ಮೊದಲು ಅಟಲ್‌ ಬಿಹಾರಿ ವಾಜಪೇಯಿ ಮತ್ತು ಎಲ್‌.ಕೆ.ಆಡ್ವಾಣಿ ಅದೆಷ್ಟು ಬಾರಿ ಕ್ಷೇತ್ರ ಬದಲಾಯಿಸಿ ಚುನಾವಣೆ ಸ್ಪರ್ಧಿಸಿದ್ದಾರೆ ಎಂಬುದನ್ನು ಲೆಕ್ಕ ಹಾಕಲಿ. ವಯನಾಡಿನ ಜನರು ತಮ್ಮ ಕ್ಷೇತ್ರದಲ್ಲೇ ರಾಹುಲ್‌ ಗಾಂಧಿ ಸ್ಪರ್ಧಿಸಬೇಕೆಂದು ಬಯಸಿದ್ದರು. ಹೀಗಾಗಿ ಅವರು ಅಲ್ಲಿಗೆ ಹೋಗಿದ್ದಾರೆ. ನಾಯಕನಾದವನು ಜನರ ಆಶಯಕ್ಕೆ ಅನುಗುಣವಾಗಿ ನಡೆಯಬೇಕು ಎಂದು ತಿರುಗೇಟು ಕೊಟ್ಟರು.

Continue Reading

ಪ್ರಮುಖ ಸುದ್ದಿ

Gold Rate : ಏರುಗತಿಯಲ್ಲಿದೆ ಬಂಗಾರದ ಬೆಲೆ; ಇನ್ನೂ ಏರುವ ಮೊದಲು ಖರೀದಿ ಸೂಕ್ತ

Gold Rate: ಭಾನುವಾರ ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,685ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,480 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ಅನುಕ್ರಮವಾಗಿ ₹66,850 ಮತ್ತು ₹6,68,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,293 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,344 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72, 930 ಮತ್ತು ₹7,20,300 ವೆಚ್ಚವಾಗಲಿದೆ.

VISTARANEWS.COM


on

Gold Rate
Koo

ಬೆಂಗಳೂರು: ಬಂಗಾರದ ಬೆಲೆ (Gold Rate) ದಿನದಿಂದ ದಿನಕ್ಕೆ ಏರುತ್ತಲೇ ಸಾಗುತ್ತಿದೆ. ಭಾನುವಾರವೂ ಶನಿವಾರದ ದರವೇ ಮುಂದುವರಿದಿದೆ. ರಾಜ್ಯದಲ್ಲಿ ಶನಿವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಗ್ರಾಮ್​ಗೆ ಕ್ರ ಮವಾಗಿ ₹20 ಹಾಗೂ ₹22 ಏರಿಕೆಯಾಗಿತ್ತು. ಅದೇ ಬೆಲೆ ಭಾನುವಾರವೂ ಮುಂದುವರಿದಿದೆ.

ಭಾನುವಾರ ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,685ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,480 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ಅನುಕ್ರಮವಾಗಿ ₹66,850 ಮತ್ತು ₹6,68,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,293 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,344 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72, 930 ಮತ್ತು ₹7,20,300 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹83.50, ಎಂಟು ಗ್ರಾಂ ₹840 ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,400 ಮತ್ತು 1 ಕಿಲೋಗ್ರಾಂಗೆ ₹84,00 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,00073,080
ಮುಂಬಯಿ66,85072,930
ಬೆಂಗಳೂರು66,850₹72,930
ಚೆನ್ನೈ67,70072,760

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

Continue Reading

ದೇಶ

School Teacher: ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಶಿಕ್ಷಕಿ ಪುಂಡಾಟ; ನೆರೆಮನೆಯವರ ಮೇಲೂ ಹಲ್ಲೆ

School teacher: ಸರ್ಕಾರಿ ಶಾಲೆ ಶಿಕ್ಷಕಿಯೊಬ್ಬಳು ನೆರೆಮನೆಯವರ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಕಿಟಕಿ ಗ್ಲಾಸ್‌ ಒಡೆದಿರುವ ಘಟನೆ ಉತ್ತರಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. ಈ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

VISTARANEWS.COM


on

Koo

ಉತ್ತರಪ್ರದೇಶ: ಸರ್ಕಾರಿ ಶಾಲೆ ಶಿಕ್ಷಕಿಯೊಬ್ಬಳು(School teacher) ನೆರೆಮನೆಯವರ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಕಿಟಕಿ ಗ್ಲಾಸ್‌ ಒಡೆದಿರುವ ಘಟನೆ ಉತ್ತರಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. ಈ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದೆ. ಪಾರುಲ್‌ ಶರ್ಮಾ (Parul Sharma) ಎಂಬ ಶಿಕ್ಷಕಿ ಬೆಳಗ್ಗೆ 3 ಗಂಟೆ ಸುಮಾರಿಗೆ ಪ್ರಿಯಾ ಗೋಯಲ್‌ ಎಂಬಾಕೆಯ ಮನೆಯ ಕಾಂಪೌಂಡ್‌ ಒಳಗೆ ನುಗ್ಗಿ ತಾನು ತಂದಿದ್ದ ಬ್ಯಾಗ್‌ನಿಂದ ಇಟ್ಟಿಗೆ, ಕಲ್ಲುಗಳಿಂದ ಕಾರಿನ ವಿಂಡೋ ಗ್ಲಾಸ್‌ (Window glass) ಜಖಂಗೊಳಿಸಿದ್ದಾಳೆ. ಆಕ್ರೋಶದಿಂದ ಕಾರಿನ ಮೇಲೆ ಕಲ್ಲು ಎತ್ತಿ ಹಾಕುತ್ತಿರುವುದನ್ನು ವೈರಲ್‌ ಆಗಿರುವ ವಿಡಿಯೋದಲ್ಲಿ ಕಾಣಬಹುದಾಗಿದೆ. ಆಕೆ ಪಾರ್ಕಿಂಗ್‌ನಲ್ಲಿ ನಿಲ್ಲಿಸಲಾಗಿದ್ದ ಎಲ್ಲಾ ವಾಹನಗಳ ವಿಂಡೋ ಗ್ಲಾಸ್‌ಗಳನ್ನು ಪುಡಿಗಟ್ಟಿದ್ದಾಳೆ.

ಆಕೆಯ ಕೃತ್ಯ ಎಸಗುತ್ತಿದ್ದ ವೇಳೆ ಸದ್ದು ಕೇಳಿ ಎಚ್ಚರಗೊಂಡ ಪ್ರಿಯಾ ಗೋಯಲ್‌ ಹಾಗೂ ಆಕೆಯ ಕುಟುಂಬಸ್ಥರು ಪಾರುಲ್‌ಳನ್ನು ತಡೆಯಲು ಮುಂದಾಗಿದ್ದಾರೆ. ಆದರೂ ಅದನ್ನೂ ಲೆಕ್ಕಿಸದ ಪಾರುಲ್‌ ಪದೇ ಪದೇ ಕಲ್ಲಿನಿಂದ ಕಾರಿನ ಗ್ಲಾಸ್‌ ಪುಡಿ ಪುಡಿ ಮಾಡುತ್ತಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ಮತ್ತೊಂದು ವಿಡಿಯೋ ಕ್ಲಿಪಿಂಗ್‌ನಲ್ಲಿ ಆಕೆಗೆ ತಾಯಿಯೂ ಜೊತೆಗಿರುವುದನ್ನು ಕಾಣಬಹುದಾಗಿದೆ. ಅಷ್ಟೇ ಅಲ್ಲದೇ ಪಾರುಲ್‌ ಮನೆಯ ಬಾಗಿಲು ಒಡೆಯಲು ಕೂಡ ಯತ್ನಿಸಿದ್ದಾಳೆ.

ಇದನ್ನೂ ಓದಿ: Lok Sabha election 2024: ದಿಲ್ಲಿಯಲ್ಲಿ ಆಪ್‌-ಕಾಂಗ್ರೆಸ್‌ ಮೈತ್ರಿಯಲ್ಲಿ ಒಡಕು; ರಾಜ್ಯಾಧ್ಯಕ್ಷ ರಾಜೀನಾಮೆ

ಇದೀಗ ಪಾರುಲ್‌ ಕೃತ್ಯದ ವಿರುದ್ಧ ಪ್ರಿಯಾ ಗೋಯಲ್‌ ಪೊಲೀಸರಿಗೆ ದೂರು ನೀಡಿದ್ದು, ಕಾರಿನ ಗ್ಲಾಸ್‌ ಪುಡಿ ಮಾಡಿರುವ ಪಾರುಲ್‌ ಮನೆಯ ಗೇಟ್‌ ಲಾಕ್‌ ಒಡೆದು ತಮ್ಮ ಮೂರು ವರ್ಷದ ಮಗು ಸೇರಿದಂತೆ ಇತರೆ ಕುಟುಂಬಸ್ಥರ ಮೇಲೆ ದಾಳಿ ನಡೆಸಿದ್ದಾಳೆ. ಘಟನೆಯಲ್ಲಿ ಮಗು ಗಾಯಗೊಂಡಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಘಟನೆಗೆ ಸೂಕ್ತ ಕಾರಣ ಏನೆಂಬುದರ ಬಗ್ಗೆ ತನಿಖೆ ನಡೆಸುತ್ತಿದೆ. ಮೇಲ್ನೋಟಕ್ಕೆ ಎರಡೂ ಕುಟುಂಬಗಳು ಹಲವು ದಿನಗಳಿಂದ ವೈಷಮ್ಯ ಹೊಂದಿದ್ದು, ಅದರ ಪರಿಣಾಮವಾಗಿಯೇ ಈ ಕೃತ್ಯ ನಡೆಸಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹಿರಿಯ ಪೊಲೀಸ್‌ ಅಧಿಕಾರಿ ಶಂಕರ್‌ ಪ್ರಸಾದ್‌ ಮಾಹಿತಿ ಪ್ರಕಾರ ಸದ್ಯ ಬುಲಂದ್‌ಶೆಹರ್‌ನಲ್ಲಿ ಈ ವಿಡಿಯೋ ಬಹಳ ವೈರಲ್‌ ಆಗುತ್ತಿದ್ದು, ಪಾರುಲ್‌ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಕೆ ವಿರುದ್ಧ ಅತಿಕ್ರಮಣ, ಆಸ್ತಿ-ಪಾಸ್ತಿ ನಾಶ ಮತ್ತು ಹಲ್ಲೆ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚೆಗೆ ಲಕ್ನೋದ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯೊಬ್ಬರು ಶಾಲೆಯಲ್ಲೇ ಫೇಶಿಯಲ್‌ ಮಾಡಿಕೊಳ್ಳುತ್ತಿದ್ದ ವಿಡಿಯೋ ಭಾರೀ ವೈರಲ್‌ ಆಗಿತ್ತು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌ ಆಗ್ತಿದ್ದಂತೆ ವಿದ್ಯಾರ್ಥಿಗಳು ಪೋಷಕರು, ಜನಸಾಮಾನ್ಯರಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ವಿದ್ಯಾರ್ಥಿಗಳಿಗೆ ಊಟ ತಯಾರಿಸುವ ಕೋಣೆಯಲ್ಲಿ ಫೇಶಿಯಲ್ ಮಾಡಿಕೊಳ್ಳುತ್ತಿರುವುದನ್ನು ಕಂಡು ಸಹಾಯಕ ಶಿಕ್ಷಕಿ ವಿಡಿಯೊ ಮಾಡಿದ್ದರು. ಇದರಿಂದ ಕೋಪಗೊಂಡ ಮುಖ್ಯ ಶಿಕ್ಷಕಿ ಅವರನ್ನು ಹಿಗ್ಗಾಮುಗ್ಗಾ  ಥಳಿಸಿ, ಆಕೆಯ ಕೈಯನ್ನು ಕಚ್ಚಿ ಗಾಯಗೊಳಿಸಿದ್ದರು.

Continue Reading
Advertisement
Lok sabaha election
ದೇಶ33 seconds ago

Lok Sabha Election : ಮತದಾನ ಪ್ರಮಾಣ ಕುಸಿತ; ಬಿಜೆಪಿಯ ಹೃದಯೊಳಗೆ ಢವ ಢವ!

PM Narendra Modi Live in Sirsi campaign meeting here
Lok Sabha Election 20244 mins ago

PM Narendra Modi Live : ಪ್ರಧಾನಿ ಮೋದಿಯ ಶಿರಸಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Samantha Ruth Prabhu shocking secrets
ಟಾಲಿವುಡ್7 mins ago

Samantha Ruth Prabhu: ಸಮಂತಾಗೆ ಜನುಮ ದಿನದ ಸಂಭ್ರಮ! ಈ ನಟಿಯ ಸೀಕ್ರೆಟ್‌ ಸಂಗತಿಗಳಿವು!

PM Narendra Modi Cm Siddaramaiah many questions to PM Modi Challenge for answer
Lok Sabha Election 202430 mins ago

PM Narendra Modi: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಕೇಳಿದ 10 ಪ್ರಶ್ನೆ; ಉತ್ತರಕ್ಕಾಗಿ ಸವಾಲು!

Priyanka Gandhi Rahul Gandhi
ದೇಶ52 mins ago

Lok Sabha Election 2024: ಅಮೇಥಿ, ರಾಯ್‌ಬರೇಲಿಗೆ ರಾಹುಲ್‌, ಪ್ರಿಯಾಂಕಾ ಫಿಕ್ಸ್‌? ಖರ್ಗೆ ನಿರ್ಧಾರ ಫೈನಲ್‌

Ranbir Kapoor stunned as photographer abuses in front of him
ಬಾಲಿವುಡ್59 mins ago

Ranbir Kapoor: ರಣಬೀರ್​ ಕಪೂರ್‌ಗೆ​ ಅಶ್ಲೀಲವಾಗಿ ಬೈಯ್ದ್ರಾ ಫೋಟೋಗ್ರಾಫರ್‌? ವಿಡಿಯೊದಲ್ಲಿ ಏನಿದೆ?

pralhad Joshi
ಪ್ರಮುಖ ಸುದ್ದಿ59 mins ago

Pralhad Joshi : ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್​ನಿಂದ ನಾಟಕ; ಪ್ರಲ್ಹಾದ್ ಜೋಶಿ ಲೇವಡಿ

If Congress comes to power all your assets will belong to Government says PM Narendra Modi
Lok Sabha Election 20241 hour ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Gold Rate
ಪ್ರಮುಖ ಸುದ್ದಿ2 hours ago

Gold Rate : ಏರುಗತಿಯಲ್ಲಿದೆ ಬಂಗಾರದ ಬೆಲೆ; ಇನ್ನೂ ಏರುವ ಮೊದಲು ಖರೀದಿ ಸೂಕ್ತ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

If Congress comes to power all your assets will belong to Government says PM Narendra Modi
Lok Sabha Election 20241 hour ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ4 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ9 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202421 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

ಟ್ರೆಂಡಿಂಗ್‌