Site icon Vistara News

Hemant Soren: ಜಾಮೀನು ಮಂಜೂರು; ಹೇಮಂತ್‌ ಸೊರೆನ್‌ಗೆ ಬಿಗ್‌ ರಿಲೀಫ್‌

Hemant Soren

ಜಾರ್ಖಂಡ್‌: ಅಕ್ರಮ ಹಣ ವರ್ಗಾವಣೆ(Money laundering Case) ಭೂ ವ್ಯವಹಾರ ಸೇರಿ ಹಲವು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳಿಂದ ಬಂಧಿತರಾಗಿರುವ ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ, ಜಾರ್ಖಂಡ್‌ ಮುಕ್ತಿ ಮೋರ್ಚಾ ಪಕ್ಷದ ಮುಖ್ಯಸ್ಥ ಹೇಮಂತ್‌ ಸೊರೆನ್‌ (Hemant Soren) ಜಾರ್ಖಂಡ್‌ ಹೈಕೋರ್ಟ್‌(Jharkhand High Court) ಜಾಮೀನು ನೀಡಿದೆ. ಜ.31ರಂದು ಸೊರೆನ್‌ ಅವರನ್ನು ಇಡಿ ಅರೆಸ್ಟ್‌ ಮಾಡಿದ್ದು, ಪ್ರಸ್ತುತ ಅವರು ಬಿರ್ಸಾ ಮುಂಡಾ ಸೆಂಟ್ರಲ್‌ ಜೈಲಿನಲ್ಲಿದ್ದಾರೆ.

ಈ ಕುರಿತು ಅವರ ಪರ ವಾದ ಮಂಡಿಸಿದ್ದ ಅರುಣಾಭ್‌ ಚೌಧರಿ ಪ್ರತಿಕ್ರಿಯಿಸಿದ್ದು, ಸೊರೇನ್‌ಗೆ ಜಾಮೀನು ಮಂಜೂರಾಗಿದೆ. ಮೇಲ್ನೋಟಕ್ಕೆ ಅವರು ಅಪರಾಧದಲ್ಲಿ ತಪ್ಪಿತಸ್ಥರಲ್ಲ ಮತ್ತು ಜಾಮೀನಿನ ಮೇಲೆ ಅರ್ಜಿದಾರರು ಅಪರಾಧ ಮಾಡುವ ಸಾಧ್ಯತೆಯಿಲ್ಲ ಎಂದು ನ್ಯಾಯಾಲಯ ಹೇಳಿದೆ ಅಂತಾ ಹೇಳಿದ್ದಾರೆ. ತಮ್ಮ ಬಂಧನವನ್ನು ಪ್ರಶ್ನಿಸಿ ಜೂ.13ರಂದು ಸೊರೆನ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ತೀರ್ಪನ್ನು ಕಾಯ್ದಿರಿಸಿತ್ತು.

ಅಕ್ರಮವಾಗಿ ಹಣ ವರ್ಗಾವಣೆ, ಭೂ ಅವ್ಯವಹಾರ ಪ್ರಕರಣ ಕೇಳಿಬಂದ ಹಿನ್ನೆಲೆಯಲ್ಲಿ ಇ.ಡಿ ಅಧಿಕಾರಿಗಳು ಹೇಮಂತ್‌ ಸೊರೆನ್‌ ಅವರಿಗೆ 9 ಬಾರಿ ಸಮನ್ಸ್‌ ಜಾರಿಗೊಳಿಸಿದ್ದರು. ಆದರೆ ಹೇಮಂತ್‌ ಸೊರೆನ್‌ ಅವರು ಪ್ರತಿ ಬಾರಿ ಸಮನ್ಸ್‌ ನೀಡಿದಾಗಲೂ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು. ಇ.ಡಿ ಅಧಿಕಾರಿಗಳು ಮನೆಗೆ ಲಗ್ಗೆ ಇಡುತ್ತಾರೆ ಎಂಬುದನ್ನು ಅರಿತಿದ್ದ ಅವರು ದೆಹಲಿಗೆ ತೆರಳಿ, ಗೌಪ್ಯ ಸ್ಥಳದಲ್ಲಿದ್ದರು. ಆದರೆ ಇ.ಡಿ ಅಧಿಕಾರಿಗಳು ಕೊನೆಗೂ ಹೇಮಂತ್‌ ಸೊರೆನ್‌ ಅವರನ್ನು ಈ ವರ್ಷದ ಜನವರಿ 31ರಂದು ಬಂಧಿಸಿದ್ದರು. ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಹೇಮಂತ್‌ ಸೊರೆನ್‌ ಅವರು ರಾಜೀನಾಮೆ ನೀಡಿದ್ದರು.

ಬಂಧನವನ್ನು ಪ್ರಶ್ನಿಸಿ ಹಾಗೂ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿತ್ತು. ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸುವ ಉದ್ದೇಶದಿಂದ ಹೇಮಂತ್‌ ಸೊರೆನ್‌ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠವು ಹೇಮಂತ್ ಸೊರೆನ್ ಅವರು ವಿಚಾರಣಾ ನ್ಯಾಯಾಲಯದ ಮುಂದೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ ಎಂಬ ಅಂಶವನ್ನು ಮರೆಮಾಚಿದ್ದಕ್ಕಾಗಿ ತರಾಟೆಗೆ ತೆಗೆದುಕೊಂಡಿತು. ನ್ಯಾಯಾಲಯ ಎಚ್ಚರಿಕೆ ನೀಡಿದ ನಂತರ ಸೊರೆನ್ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಜಾಮೀನು ಅರ್ಜಿಯನ್ನು ಹಿಂತೆಗೆದುಕೊಂಡರು. ಇದರಿಂದ ಸೊರೆನ್‌ ಅವರಿಗೆ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿತ್ತು.

ಇದನ್ನೂ ಓದಿ: Abhyas Trial: ದೇಶದ ಕ್ಷಿಪಣಿ ವ್ಯವಸ್ಥೆಗೆ ಬಲ ತುಂಬುವ ‘ಅಭ್ಯಾಸ್’‌ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿ

Exit mobile version