Ram Mandir : ಇಲ್ಲಿದೆ ನೋಡಿ ಬಾಲ ರಾಮನ ಕಣ್ಣಿಗೆ ಜೀವಕಳೆ ನೀಡಿದ್ದ ಬಂಗಾರದ ಉಳಿ, ಬೆಳ್ಳಿ ಸುತ್ತಿಗೆಯ ಚಿತ್ರ - Vistara News

ದೇಶ

Ram Mandir : ಇಲ್ಲಿದೆ ನೋಡಿ ಬಾಲ ರಾಮನ ಕಣ್ಣಿಗೆ ಜೀವಕಳೆ ನೀಡಿದ್ದ ಬಂಗಾರದ ಉಳಿ, ಬೆಳ್ಳಿ ಸುತ್ತಿಗೆಯ ಚಿತ್ರ

Ram Mandir : ನೇತ್ರೋನ್ಮಿಲನ ಹೇಗೆ ಮಾಡಿದೆವು ಎಂಬುವ ಮಾಹಿತಿಯನ್ನು ಅರುಣ್ ಯೋಗಿರಾಜ್ ಅವರು ಈ ಹಿಂದೆಯೇ ಬಹಿರಂಗ ಮಾಡಿದ್ದರು. ಇದೀಗ ಚಿತ್ರವನ್ನು ಬಿಡುಗಡೆ ಮಾಡಿದ್ದಾರೆ.

VISTARANEWS.COM


on

Ram lalla
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಜನವರಿ 22ರಂದು ಅಯೋಧ್ಯೆಯ ಸುಂದರ ದೇಗುಲದಲ್ಲಿ (Ram Mandir) ಪ್ರಾಣ ಪ್ರತಿಷ್ಠಾಪನೆ ಗೊಂಡಿರುವ ರಾಮ ಲಲ್ಲಾನ ಮೂರ್ತಿಯ (Ram lalla) ಕಣ್ಣನ್ನು ನೋಡಿ ಮನಸೋಲದವರು ಯಾರೂ ಇಲ್ಲ. ಅತ್ಯಾಕರ್ಷಕವಾಗಿದ್ದ ನೇತ್ರಗಳಲ್ಲಿ ಬಾಲ ರಾಮ ಮುಗ್ಧ ನೋಟವಿತ್ತು. ಮಿರುಗುವ ಅಕ್ಷಿಗಳು ಭಕ್ತರಿಗೆ ಅಭಯ ನೀಡುವಂತಿತ್ತು. ಕೋಟ್ಯಂತರ ರಾಮ ಭಕ್ತರು ರಾಮ ವಿಗ್ರಹ (Rama statue) ಹಾಗೂ ಮನಮೋಹಕ ಕಣ್ಣಗಳನ್ನು ನೋಡಿ ಪುನೀತರಾಗಿದ್ದರು. ಇಷ್ಟೆಲ್ಲ ಅಂದದ ಮೂರ್ತಿಯನ್ನು ಕೆತ್ತಿದವರು ಮೈಸೂರಿನ ಅರುಣ್​ ಯೋಗಿರಾಜ್ (Arun Yogiraj) ಎಂಬುದು ಕರ್ನಾಟಕದ ಮಂದಿಗೆ ಹೆಮ್ಮೆಯ ವಿಚಾರ.

ಅಯೋಧ್ಯೆಯಿಂದ ವಾಪಸ್​ ಬಂದ ಅರುಣ್​ ಯೋಗಿರಾಜ್ ಅವರು ಹಲವಾರು ಸಂದರ್ಶನಗಳಲ್ಲಿ ಅದರ ಕೆತ್ತನೆ ಕಾರ್ಯದ ಕುತೂಹಲಕಾರಿ ಸಂಗತಿಗಳನ್ನು ವಿವರಿಸಿದ್ದರು. ಪ್ರಮುಖವಾಗಿ ಕಣ್ಣುಗಳಿಗೆ ಹೊಳಪು ನೀಡಲು ಚಿನ್ನದ ಉಳಿ ಹಾಗೂ ಬೆಳ್ಳಿಯ ಸುತ್ತಿಗೆಯಿಂದ ಕೆತ್ತಲಾಗಿದೆ ಎಂದು ಹೇಳಿದ್ದರು. ಇದೀಗ ಅವರು ರಾಮನ ಕಣ್ಣಿಗೆ ಜೀವ ಕಳೆ ನೀಡಿರುವ ಉಳಿ, ಸುತ್ತಿಗೆಯ ಫೋಟೋವನ್ನು ಬಹಿರಂಗ ಮಾಡಿದ್ದಾರೆ. ಆ ಚಿತ್ರ ನೋಡಿದ ಜನರು ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆಯ ರಾಮ್ ಲಲ್ಲಾನ ದೈವಿಕ ಕಣ್ಣುಗಳನ್ನು (ನೇತ್ರೋನ್ಮಿಲನ) ಕೆತ್ತಿದ ಈ ಬೆಳ್ಳಿಯ ಸುತ್ತಿಗೆಯನ್ನು ಚಿನ್ನದ ಉಳಿಯೊಂದಿಗೆ ಹಂಚಿಕೊಳ್ಳಲು ಚಿಂತಿಸಿದೆ ಎಂದು ಅವರು ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ.

ಅರುಣ್ ಯೋಗಿರಾಜ್ ಅವರ ಟ್ವೀಟ್ ಇಲ್ಲಿದೆ

ರಾಮನ ಕಣ್ಣುಗಳಿಗೆ ಅಷ್ಟೊಂದು ಹೊಳಪು ಹೇಗೆ ನೀಡಲಾಗಿತ್ತು ಎಂಬ ಕುತೂಹಲ ಪ್ರಾಣ ಪ್ರತಿಷ್ಠಾಪನೆ ದಿನದಿಂದಲೇ ಜನರಿಗೆ ಮೂಡಿತ್ತು. ಸುದ್ದಿ ವಾಹಿನಿಗಳಿಗೆ ಮಾಹಿತಿ ನೀಡಿದ ಸಂದರ್ಭದಲ್ಲಿ ಅವರು ಚಿನ್ನದ ಉಳಿ ಹಾಗೂ ಬೆಳ್ಳಿಯ ಸುತ್ತಿಗೆಯ ಕುರಿತು ಹೇಳಿದ್ದರು. ಅದರ ಕೌತುಕವನ್ನು ಅವರೀಗ ತಣಿಸಿದ್ದಾರೆ.

ಬಾಲರಾಮನ ಮೂರ್ತಿಯ ಸೌಂದರ್ಯದ ರಹಸ್ಯ ಇಲ್ಲಿದೆ

ರಾಮ್‌ ಲಲ್ಲಾನ ಈ ಸುಂದರ ಮತ್ತು ದೈವಿಕವಾದ ಮಂದಹಾಸಭರಿತ ಮುಖ, ಕರುಣೆ ಹಾಗೂ ಲಾಸ್ಯ ತುಂಬಿದ ಕಣ್ಣುಗಳ ರಹಸ್ಯವೇನು? ಈ ಮುದ್ದು ಮುಖ ಐದು ವರ್ಷದ ಮುಗ್ಧ ಬಾಲಕನ ಮುಖದಂತೆ ಕಾಣುತ್ತಿರುವುದರ ಹಿಂದಿನ ನಿಗೂಢತೆ ಏನು? ಈ ರಹಸ್ಯವನ್ನು ಅರುಣ ಯೋಗಿರಾಜ್‌ (Arun Yogiraj) ಅವರ ಪತ್ನಿ ಬಿಡಿಸಿಟ್ಟಿದ್ದಾರೆ.

ಇದನ್ನೂ ಓದಿ : Ram Mandir: 11 ದಿನದಲ್ಲಿ ರಾಮಮಂದಿರಕ್ಕೆ 25 ಲಕ್ಷ ಜನ ಭೇಟಿ; ದೇಣಿಗೆ ಸಂಗ್ರಹ ಎಷ್ಟು?

“ಇದು ಅವರ (ಅರುಣ್)‌ ಕೈಯಲ್ಲಿರುವ ಮ್ಯಾಜಿಕ್. ಮೊದಲು ಮೂರ್ತಿ ಹೇಗಿರಬೇಕು ಎಂಬುದರ ಕುರಿತು ನಮಗೆ ತಿಳಿಸಲಾಯಿತು. ಉಳಿದದ್ದೆಲ್ಲ ಅವರ ಕಲ್ಪನೆ” ಎಂದಿದ್ದಾರೆ ಅರುಣ ಪತ್ನಿ ವಿಜೇತಾ. ಈ ಕೆಲಸಕ್ಕೆ ತೊಡಗಿದಂದಿನಿಂದ ಅರುಣ್‌ ಯೋಗಿರಾಜ್‌, ಮಕ್ಕಳನ್ನು ಸತತವಾಗಿ ಗಮನಿಸಲು ಆರಂಭಿಸಿದರಂತೆ. ಅದಕ್ಕಾಗಿ ಪುಟ್ಟ ಮಕ್ಕಳಿರುವ ಶಾಲೆಗಳಿಗೆ ಹೋಗಿ ಕುಳಿತು, ಮಕ್ಕಳ ಮುಖ, ಚಲನವಲಗಳನ್ನು ನೋಡುತ್ತಾ ಅಭ್ಯಸಿಸಿದರಂತೆ!

ಅರುಣ್ ಯೋಗಿರಾಜ್, ಜಿ.ಎಲ್ ಭಟ್ ಮತ್ತು ಸತ್ಯನಾರಾಯಣ ಪಾಂಡೆ ಅವರಿಗೆ ದೇವಾಲಯದ ಟ್ರಸ್ಟ್ ಕೆಲವು ಮಾನದಂಡಗಳನ್ನು ನೀಡಿ ಮೂರ್ತಿ ರಚಿಸುವ ಹೊಣೆ ನೀಡಿತ್ತು. ನಗುತ್ತಿರುವ ಮುಖ, ದೈವಿಕ ನೋಟ, 5 ವರ್ಷದ ಸ್ವರೂಪ, ರಾಜಕುಮಾರ/ಯುವರಾಜನ ನೋಟ ಇರಬೇಕು ಎಂಬುದು ಮಾನದಂಡಗಳಾಗಿದ್ದವು. ಶಿಲ್ಪಕಲೆಯ ಮೊದಲ ಹಂತವೆಂದರೆ ಅದನ್ನು ಕಾಗದದ ಮೇಲೆ ಚಿತ್ರಿಸುವುದು.

ಚಿತ್ರ ಸಮರ್ಪಕವೆನಿಸಿದ ಬಳಿಕ ಅದನ್ನು ಶಿಲ್ಪಕ್ಕೆ ಇಳಿಸಲು ಅರುಣ್‌ ಯೋಗಿರಾಜ್‌ ಮುಂದಾದರು. ಶಿಲ್ಪ ಪ್ರಪಂಚದ ಪವಿತ್ರ ಗ್ರಂಥವಾದ ಶಿಲ್ಪಶಾಸ್ತ್ರದ ಪ್ರಕಾರ ಮುಖದ ವೈಶಿಷ್ಟ್ಯಗಳ (ಕಣ್ಣು, ಮೂಗು, ಗಲ್ಲದ, ತುಟಿಗಳು, ಕೆನ್ನೆಗಳು, ಇತ್ಯಾದಿ) ಅನುಪಾತವನ್ನು ರೂಪಿಸಲಾಗುತ್ತದೆ. ಶಿಲ್ಪಶಾಸ್ತ್ರವು ಶಿಲ್ಪಕಲೆ, ಚಿತ್ರಕಲೆ, ದೇವಾಲಯದ ವಾಸ್ತುಶಿಲ್ಪ, ಪ್ರತಿಮಾಶಾಸ್ತ್ರ ಮತ್ತು ಪಟ್ಟಣ ಯೋಜನೆ ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳನ್ನು ಒಳಗೊಂಡಿದೆ.

“ಯೋಗಿರಾಜ್ ಮುಖ ಮತ್ತು ದೇಹದ ವೈಶಿಷ್ಟ್ಯಗಳನ್ನು ಅಧ್ಯಯನ ಮಾಡಲು ಶಿಲ್ಪಶಾಸ್ತ್ರದ ಜೊತೆಗೆ ಮಾನವ ಅಂಗರಚನಾಶಾಸ್ತ್ರದ ಪುಸ್ತಕಗಳನ್ನೂ ಓದುತ್ತಿದ್ದರು. ಇದು ಮೂರ್ತಿಯನ್ನು ತುಂಬಾ ನೈಜವಾಗಿ ಕಾಣುವಂತೆ ಮಾಡಿದ ಪ್ರಮುಖ ಅಂಶ. ಅರುಣ್‌ ಪುಟ್ಟ ಮಕ್ಕಳನ್ನು ನೋಡಲು ಶಾಲೆಗಳಿಗೆ ಹೋಗುತ್ತಿದ್ದರು. ಮಕ್ಕಳು ಹೇಗೆ ನಗುತ್ತಾರೆ ಎಂಬುದನ್ನು ಆಳವಾಗಿ ಸಂಶೋಧಿಸಿದರು ಮತ್ತು ಗಮನಿಸಿದರು” ಎಂದು ವಿಜೇತಾ ಹೇಳುತ್ತಾರೆ.

“ರಾಮನ ವಿಗ್ರಹದ ಮುಖದ ಆಕಾರವು ದುಂಡಾಗಿರುತ್ತದೆ. ಇದನ್ನು ದಕ್ಷಿಣ ಭಾರತದ ಶಿಲ್ಪಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಹೋಲಿಸಿದರೆ, ಉತ್ತರದ ಶಿಲ್ಪಗಳು ಹಲವಾರು ತೀಕ್ಷ್ಣವಾದ ವೈಶಿಷ್ಟ್ಯಗಳನ್ನು ಹೊಂದಿವೆ. ಒಡಿಶಾ ಮತ್ತು ಬಂಗಾಳದ ಕೆಲವು ಶಿಲ್ಪಗಳು ಅಂತಹ ದುಂಡಗಿನ ಮುಖಗಳನ್ನು ಹೊಂದಿವೆ” ಎಂದು ದೆಹಲಿಯ ಡಾ.ಬಿ.ಆರ್.ಅಂಬೇಡ್ಕರ್ ವಿಶ್ವವಿದ್ಯಾನಿಲಯದ ಹೆರಿಟೇಜ್ ರಿಸರ್ಚ್ ಅಂಡ್ ಮ್ಯಾನೇಜ್‌ಮೆಂಟ್ ಸ್ಕೂಲ್‌ನ ಅಧ್ಯಾಪಕರಾದ ಶೈಲೇಂದ್ರ ಕುಮಾರ್ ಹೇಳುತ್ತಾರೆ.

“ರಾಮ್ ಲಲ್ಲಾನ ಸೌಂದರ್ಯವನ್ನು ನೋಡುವುದನ್ನು ನಿಲ್ಲಿಸಲು ಸಾಧ್ಯವಿಲ್ಲ. ಮುಂಗುರುಳುಗಳು, ಉಬ್ಬಿದ ಕೆನ್ನೆಗಳು, ಅತೀಂದ್ರಿಯ ನಗು ಮತ್ತು ದೈವಿಕ ಸೆಳೆತ ಅದರಲ್ಲಿದೆ” ಎಂದು ಎಕ್ಸ್‌ನಲ್ಲಿ ಇತಿಹಾಸಕಾರ ಮತ್ತು ಲೇಖಕ ವಿಕ್ರಂ ಸಂಪತ್ ಪೋಸ್ಟ್‌ ಮಾಡಿದ್ದಾರೆ.

51 ಇಂಚು ಎತ್ತರವೇ ಯಾಕೆ?

ರಾಮ್ ಲಲ್ಲಾ ವಿಗ್ರಹದ 51 ಇಂಚಿನ ಎತ್ತರವನ್ನು ಕೂಡ ವೈಜ್ಞಾನಿಕವಾಗಿ ಆಯ್ಕೆ ಮಾಡಲಾಗಿದೆ. “ಈ ಎತ್ತರದಲ್ಲಿ ಪ್ರತಿ ವರ್ಷ ರಾಮನವಮಿ ದಿನದಂದು ಮಧ್ಯಾಹ್ನ ಸೂರ್ಯನ ಕಿರಣಗಳು ರಾಮಲಲ್ಲಾನ ಹಣೆಯ ಮೇಲೆ ಬೀಳುತ್ತವೆ. ಇದು ಅಯೋಧ್ಯೆಯ ರಾಮಮಂದಿರದ ವಿಶಿಷ್ಟ ಲಕ್ಷಣ. ಪ್ರತಿ ವರ್ಷವೂ ಈ ದಿನದಂದು ಸೂರ್ಯನ ಕಿರಣಗಳು ರಾಮಲಲ್ಲಾನ ಮುಖವನ್ನು ಬೆಳಗಿಸುತ್ತವೆ” ಎಂದು ವಿಜೇತಾ ಹೇಳುತ್ತಾರೆ.

ಕೃಷ್ಣಶಿಲೆಯೇ ಯಾಕೆ?

ವಿಗ್ರಹವನ್ನು ಕೆತ್ತಲು ಕೃಷ್ಣಶಿಲೆಯನ್ನೇ ಬಳಸಿರುವುದು ಅದರ ರಾಸಾಯನಿಕ ಸಂಯೋಜನೆಗಾಗಿ. ಕೃಷ್ಣಶಿಲೆಯು ಆಮ್ಲ, ಶಾಖ ಮತ್ತು ಪ್ರತಿಕೂಲ ಹವಾಮಾನಕ್ಕೆ ಪ್ರತಿಕ್ರಿಯಿಸುವುದಿಲ್ಲ. ಹಾಲನ್ನು ಬಳಸಿ ಅಭಿಷೇಕವನ್ನು ಮಾಡಿದಾಗ, ಕಲ್ಲು ಹಾಲಿನ ಅಂಶಗಳಿಗೆ ಪ್ರತಿಕ್ರಿಯಿಸುವುದಿಲ್ಲ. ಆದ್ದರಿಂದ ಅಭಿಷೇಕ ಮಾಡಿದ ಹಾಲನ್ನು ಯಾವುದೇ ಅತಂಕವಿಲ್ಲದೆ ಪ್ರಸಾದವಾಗಿ ಸೇವಿಸಬಹುದು. ಕೃಷ್ಣಶಿಲೆಯು 1000 ವರ್ಷಗಳಿಗೂ ಹೆಚ್ಚು ಕಾಲ ಉಳಿಯುತ್ತದೆ.

“ಶಿಲ್ಪವನ್ನು ಕೆತ್ತಲು ಆಯ್ಕೆಯಾದ ನಾನು ಭೂಮಿಯ ಮೇಲಿನ ಅತ್ಯಂತ ಅದೃಷ್ಟಶಾಲಿ ವ್ಯಕ್ತಿ ಎಂದು ಭಾವಿಸುತ್ತೇನೆ” ಎಂದು ಅರುಣ್‌ ಯೋಗಿರಾಜ್‌ ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

H-1B ವೀಸಾ ಶುಲ್ಕಕ್ಕೆ ಕೋರ್ಟ್ ಬ್ರೇಕ್: ಟ್ರಂಪ್ ಸರ್ಕಾರದ ಆದೇಶ ಅಸಿಂಧು, ಭಾರತೀಯರು ನಿರಾಳ

VISTARANEWS.COM


on

H-1B ವೀಸಾ ಶುಲ್ಕಕ್ಕೆ ಕೋರ್ಟ್ ಬ್ರೇಕ್

ವಾಷಿಂಗ್ಟನ್: ಅಮೆರಿಕದಲ್ಲಿ H-1B ವೀಸಾ ಹೊಂದಿರುವ ವಿದೇಶಿ ಉದ್ಯೋಗಿಗಳಿಗೆ ಹೆಚ್ಚುವರಿ ಶುಲ್ಕ ವಿಧಿಸುವ ಟ್ರಂಪ್ ಆಡಳಿತದ ನಿರ್ಧಾರಕ್ಕೆ ಕೋರ್ಟ್‌ ಬ್ರೇಕ್‌ ಹಾಕಿದೆ. ಫೆಡರಲ್ ನ್ಯಾಯಾಧೀಶ ಲಿಯೋ ಸೊರೊಕಿನ್ ಮಹತ್ವದ ತೀರ್ಪು ನೀಡಿದ್ದು, H-1Bಯ ವೀಸಾ ಅರ್ಜಿಗಳ ಮೇಲೆ ವಿಧಿಸಲಾಗಿದ್ದ ಹೆಚ್ಚುವರಿ ಶುಲ್ಕವನ್ನು ಅಸಿಂಧು ಎಂದು ಘೋಷಿಸಿದ್ದಾರೆ.

ಈ ತೀರ್ಪಿನಿಂದ ಅಮೆರಿಕದಲ್ಲಿ ಕೆಲಸ ಮಾಡುತ್ತಿರುವ ಸಾವಿರಾರು ಭಾರತೀಯ ಐಟಿ ಉದ್ಯೋಗಿಗಳಿಗೆ ಉದ್ಯೋಗಿಗಳು ನಿರಾಳರಾಗುವಂತೆ ಮಾಡಿದೆ. ವಿದೇಶಿ ಪರಿಣತ ಉದ್ಯೋಗಿಗಳನ್ನು ಅವಲಂಬಿಸಿರುವ ಅಮೆರಿಕದ ಕಂಪನಿಗಳು ಹಾಗೂ ವಿಶ್ವವಿದ್ಯಾಲಯಗಳಿಗೂ ಇದು ಅನುಕೂಲಕರ ಬೆಳವಣಿಗೆಯಾಗಿದೆ.

ಡೊನಾಲ್ಡ್ ಟ್ರಂಪ್ ಸರ್ಕಾರ, ಸ್ಥಳೀಯ ಅಮೆರಿಕನ್ನರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಲಸೆ ನೀತಿಗಳನ್ನು ಕಠಿಣಗೊಳಿಸಲಾಗಿತ್ತು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ, ಟ್ರಂಪ್‌ ಹೊಸ H-1Bಯ ವೀಸಾ ಅರ್ಜಿಗಳಿಗೆ ಒಂದು ಲಕ್ಷ ಡಾಲರ್‌ ಶುಲ್ಕವನ್ನು ಪಾವತಿಸುವ ಘೋಷಣೆಗೆ ಸಹಿ ಹಾಕಿದ್ದರು.

ಆದರೆ ನ್ಯಾಯಾಲಯವು ಸರ್ಕಾರದ ಈ ಕ್ರಮವು ಕಾನೂನುಬದ್ಧ ಅಧಿಕಾರದ ವ್ಯಾಪ್ತಿಯನ್ನು ಮೀರಿ ಜಾರಿಗೊಳಿಸಲಾಗಿದೆ ಎಂದು ಅಭಿಪ್ರಾಯಪಟ್ಟಿದ್ದು, ಶುಲ್ಕ ವಿಧಿಸುವ ನಿಯಮವನ್ನು ರದ್ದುಗೊಳಿಸಿದೆ. ಇದರಿಂದ ವಿದೇಶಿ ಪರಿಣತ ಉದ್ಯೋಗಿಗಳನ್ನು ನೇಮಿಸಿಕೊಳ್ಳುವ ಸಂಸ್ಥೆಗಳಿಗೆ ಆರ್ಥಿಕ ಭಾರ ಕಡಿಮೆಯಾಗುವ ಸಾಧ್ಯತೆ ಇದೆ.

ಇದೇ ವೇಳೆ, ಟ್ರಂಪ್ ಆಡಳಿತದ ವಲಸೆ ನೀತಿಗೆ ಇದು ಪ್ರಮುಖ ಹಿನ್ನಡೆಯಾಗಿ ಪರಿಗಣಿಸಲಾಗುತ್ತಿದೆ. ಸರ್ಕಾರವು ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸುತ್ತಿರುವುದಾಗಿ ವರದಿಯಾಗಿದೆ.

ನ್ಯಾಯಾಲಯದ ತೀರ್ಪನ್ನು ಅಮೆರಿಕದಲ್ಲಿರುವ ಭಾರತೀಯ ಮೂಲದ ಉದ್ಯೋಗಿಗಳು ಹಾಗೂ ಉದ್ಯಮ ವಲಯ ಸ್ವಾಗತಿಸಿದ್ದು, H-1B ವೀಸಾ ವ್ಯವಸ್ಥೆಯ ಮೇಲಿನ ಅನಿಶ್ಚಿತತೆ ಕಡಿಮೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

Also Read: ಆಗಸ್ಟ್ 15ಕ್ಕೆ ಪಿಂಕ್ ಲೈನ್ ಮೆಟ್ರೋ ಸಂಚಾರ ಆರಂಭ? ದಕ್ಷಿಣ ಬೆಂಗಳೂರಿಗೆ ಸಂಚಾರ ದಟ್ಟಣೆಯಿಂದ ಮುಕ್ತಿ ನಿರೀಕ್ಷೆ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ದೆಹಲಿಗೆ ತೆರಳಲಿರುವ ಸಿಎಂ ಡಿ.ಕೆ. ಶಿವಕುಮಾರ್ : ಕ್ಯಾಬಿನೆಟ್‌ ವಿಸ್ತರಣೆಗೆ ಸಿಗುತ್ತಾ ಸಮ್ಮತಿ

VISTARANEWS.COM


on

ಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಡಿ.ಕೆ. ಶಿವಕುಮಾರ್ ಹೈಕಮಾಂಡ್ ಭೇಟಿಗೆ ಸಜ್ಜು

ಸಿಎಂ ಡಿ.ಕೆ. ಶಿವಕುಮಾರ್ ಅವರು ನಾಳೆಯಿಂದ ಎರಡು ದಿನಗಳ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಬೆಳಗ್ಗೆ ದೆಹಲಿಗೆ ತೆರಳಲಿರುವ ಸಿಎಂ, ಜೂನ್ 11ರಂದು ನಡೆಯಲಿರುವ ರಾಷ್ಟ್ರೀಯ ನೀತಿ ಆಯೋಗದ ಆಡಳಿತ ಮಂಡಳಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ.

ದೆಹಲಿ ಪ್ರವಾಸದ ವೇಳೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿರುವ ಮುಖ್ಯಮಂತ್ರಿ, ರಾಜ್ಯದ ರಾಜಕೀಯ ಬೆಳವಣಿಗೆಗಳು ಹಾಗೂ ಸಚಿವ ಸಂಪುಟ ವಿಸ್ತರಣೆ ಕುರಿತು ಮಹತ್ವದ ಚರ್ಚೆ ನಡೆಸುವ ಸಾಧ್ಯತೆ ಇದೆ. ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ವಿಚಾರಕ್ಕೆ ವೇಗ ಸಿಗುವ ನಿರೀಕ್ಷೆಯಿದೆ.

Also Read: ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ – ಡಿಕೆಶಿ

🟦 Facebook : https://www.facebook.com/vistaranews
❤️ Instagram : https://www.instagram.com/vistaranew

Continue Reading

Latest

ಇಂಡಿ ಒಕ್ಕೂಟದ ಸಭೆಗೆ ಆರಂಭದಲ್ಲೇ ಹಿನ್ನಡೆ: ಡಿಎಂಕೆ, ಆಪ್ ಗೈರು; ದೆಹಲಿಯಲ್ಲಿ ಮಹತ್ವದ ಚರ್ಚೆ

VISTARANEWS.COM


on

ಇಂಡಿ ಒಕ್ಕೂಟ

ದೆಹಲಿ:

ಇಂಡಿ ಒಕ್ಕೂಟ

ಸಾಲು ಸಾಲು ಚುನಾವಣಾ ಸೋಲುಗಳ ಬಳಿಕ ಪ್ರತಿಪಕ್ಷಗಳ ಇಂಡಿ (INDIA) ಮೈತ್ರಿಕೂಟದ ಮಹತ್ವದ ಸಭೆ ದೆಹಲಿಯಲ್ಲಿ ಆರಂಭವಾಗಲಿದೆ. ದೆಹಲಿಯಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ ಇಂಡಿ ಒಕ್ಕೂಟದ ಒಟ್ಟು 23 ಪಕ್ಷಗಳು ಭಾಗವಹಿಸುವ ಸಾಧ್ಯತೆ ಇದೆ.

ಈ ಸಭೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಗಮಿಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಹೋರಾಟದ ರೂಪುರೇಷೆ ಸಿದ್ಧಪಡಿಸುವುದು ಹಾಗೂ ಮುಂದಿನ ರಾಜಕೀಯ ತಂತ್ರಗಳನ್ನು ಚರ್ಚಿಸುವುದು ಸಭೆಯ ಪ್ರಮುಖ ಅಜೆಂಡಾ ಆಗಿದೆ.

ಸಭೆ ಆರಂಭಕ್ಕೂ ಮುನ್ನವೇ ಹಿನ್ನಡೆ ಎದುರಾಗಿದೆ. ಡಿಎಂಕೆ ಸಭೆಯನ್ನು ಬಹಿಷ್ಕರಿಸಿದ್ದು, ಆಮ್ ಆದ್ಮಿ ಪಕ್ಷ ಕೂಡ ದೂರ ಉಳಿದಿದೆ. ಇದರಿಂದ ಮೈತ್ರಿಕೂಟದ ಒಳಗಿನ ಭಿನ್ನಾಭಿಪ್ರಾಯಗಳು ಮತ್ತೆ ಚರ್ಚೆಗೆ ಗ್ರಾಸವಾಗಿವೆ.

ವಿಜಯ್ ನೇತೃತ್ವದ ಟಿವಿಕೆ ಪಕ್ಷ ಸಭೆಗೆ ತನ್ನ ಪ್ರತಿನಿಧಿಯನ್ನು ಕಳುಹಿಸಿದ್ದು ಗಮನ ಸೆಳೆದಿದೆ. ಪ್ರತಿಪಕ್ಷಗಳ ನಡುವೆ ಮತ್ತೊಮ್ಮೆ ಒಗ್ಗಟ್ಟು ಮೂಡಿಸಲು ಈ ಸಭೆ ಮಹತ್ವ ಪಡೆದುಕೊಂಡಿದೆ.

ಸಭೆಗೆ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ಪ್ರಮುಖ ನಾಯಕರು ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಒಗ್ಗಟ್ಟಾಗಿ ಹೋರಾಟ ಮಾಡಲು ರಣತಂತ್ರ ರೂಪಿಸುವ ನಿಟ್ಟಿನಲ್ಲಿ ನಾಯಕರು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಇಂಡಿ ಒಕ್ಕೂಟದ ಭವಿಷ್ಯದ ದಿಕ್ಕು ಹಾಗೂ ಮುಂದಿನ ರಾಜಕೀಯ ನಡೆಗಳ ಬಗ್ಗೆ ಈ ಸಭೆಯಲ್ಲಿ ಮಹತ್ವದ ನಿರ್ಧಾರಗಳು ಹೊರಬೀಳುವ ನಿರೀಕ್ಷೆ ಇದೆ.

Also Read: ಸಿಇಟಿ ಫಲಿತಾಂಶ ಪ್ರಕಟ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ಬಿಜೆಪಿಗೆ ರಾಜೀನಾಮೆ ಬಳಿಕ ಹೊಸ ರಾಜಕೀಯ ಚಳವಳಿ ಘೋಷಿಸಿದ ಅಣ್ಣಾಮಲೈ; ತಮಿಳುನಾಡಿನಲ್ಲಿ ಏಕಾಂಗಿ ಹೋರಾಟದ ನಿರ್ಧಾರ

VISTARANEWS.COM


on

ಬಿಜೆಪಿಗೆ ರಾಜೀನಾಮೆ ನೀಡಿದ ಬಳಿಕ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ತಮ್ಮ ಮುಂದಿನ ರಾಜಕೀಯ ಹೆಜ್ಜೆ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ. ತಮಿಳುನಾಡಿನಲ್ಲಿ ಹೊಸ ರಾಜಕೀಯ ಚಳವಳಿಯನ್ನು ಆರಂಭಿಸುವುದಾಗಿ ಘೋಷಿಸಿರುವ ಅವರು, ಮುಂದಿನ ದಿನಗಳಲ್ಲಿ ಜನರೊಂದಿಗೆ ನೇರವಾಗಿ ಹೆಜ್ಜೆ ಹಾಕಲು ತೀರ್ಮಾನಿಸಿರುವುದಾಗಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಣ್ಣಾಮಲೈ, “ಬಿಜೆಪಿಗೆ ನಾನು ಯಾವುದೇ ಸಮಸ್ಯೆಯಾಗಲು ಬಯಸುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಹಿರಿಯ ನಾಯಕರ ಬಗ್ಗೆ ನನಗೆ ಅಪಾರ ಗೌರವವಿದೆ” ಎಂದು ಹೇಳಿದರು.

“ನನ್ನ ರಾಜೀನಾಮೆ ನಿರ್ಧಾರವನ್ನು 2025ರ ಡಿಸೆಂಬರ್‌ನಲ್ಲಿಯೇ ಪಕ್ಷದ ವರಿಷ್ಠರಿಗೆ ತಿಳಿಸಿದ್ದೆ. ಕಳೆದ 18 ತಿಂಗಳಿಂದ ಪಕ್ಷದೊಳಗೆ ಕೆಲವು ಭಿನ್ನಾಭಿಪ್ರಾಯಗಳು ಇದ್ದವು. ಆದರೆ ಯಾವುದೇ ಗದ್ದಲವಿಲ್ಲದೆ ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ್ದೇನೆ” ಎಂದು ಅವರು ಸ್ಪಷ್ಟಪಡಿಸಿದರು.

ತಮಿಳುನಾಡಿನ ಹಿತಾಸಕ್ತಿಗಳ ಬಗ್ಗೆ ಮಾತನಾಡಿದ ಅಣ್ಣಾಮಲೈ, “ತಮಿಳುನಾಡಿನ ಅಸ್ಮಿತೆಯನ್ನು ನಾನು ಎಂದಿಗೂ ಬಿಟ್ಟುಕೊಟ್ಟಿಲ್ಲ. ಈ ಮಣ್ಣು, ನೀರು ಮತ್ತು ರಾಜ್ಯದ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಟ ನಡೆಸಿದ್ದೇನೆ. ನಾನು ಹೆಮ್ಮೆಯ ಭಾರತೀಯ ಹಾಗೂ ಸಾಂಪ್ರದಾಯಿಕ ತಮಿಳಿಗ” ಎಂದರು.

“ತಮಿಳುನಾಡಿನ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ. ಮೇಕೆದಾಟು ಅಣೆಕಟ್ಟು ಯೋಜನೆ ಸೇರಿದಂತೆ ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ಹಲವು ವಿಷಯಗಳಲ್ಲಿ ತಮಿಳುನಾಡಿನ ಪರವಾಗಿ ನಿಲುವು ತಾಳಿದ್ದೇನೆ. ಟಂಗ್‌ಸ್ಟನ್, ಮೀಥೇನ್ ಹಾಗೂ ಹೈಡ್ರೋಕಾರ್ಬನ್ ಯೋಜನೆಗಳ ವಿರುದ್ಧವೂ ಹೋರಾಟ ನಡೆಸಿದ್ದೇನೆ” ಎಂದು ಹೇಳಿದರು.

ಮುಂದಿನ ರಾಜಕೀಯ ಯೋಜನೆ ಕುರಿತು ಮಾತನಾಡಿದ ಅವರು, “ತಮಿಳುನಾಡಿನಲ್ಲಿ ಹೊಸ ರಾಜಕೀಯ ಚಳವಳಿಗೆ ಅಧಿಕೃತ ಚಾಲನೆ ನೀಡುತ್ತಿದ್ದೇನೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸಲಿದೆ. ಜನರ ಆಶಯಗಳನ್ನು ಪ್ರತಿಬಿಂಬಿಸುವ ಪರ್ಯಾಯ ರಾಜಕೀಯ ಶಕ್ತಿಯನ್ನು ಕಟ್ಟುವ ಗುರಿ ಹೊಂದಿದ್ದೇವೆ” ಎಂದು ಘೋಷಿಸಿದರು.

Continue Reading
Advertisement
ನೀಟ್ 2026 ಪರೀಕ್ಷೆ
Latest9 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: NEET ಪರೀಕ್ಷೆಗೆ ಹೆಚ್ಚುವರಿ ಸಮಯ

ಜೋಸೆಫ್‌ ವಿಜಯ್‌
Latest11 hours ago

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

Latest1 day ago

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ನರೇಂದ್ರ ಮೋದಿ
Latest1 day ago

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

ರಾಜ್ಯಸಭೆ ಟಿಕೆಟ್‌
ಪ್ರಮುಖ ಸುದ್ದಿ2 days ago

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

ನರೇಂದ್ರ ಮೋದಿ
Latest2 days ago

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

ಆರೆಂಜ್ ಅಲರ್ಟ್‌
Latest2 days ago

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಮೀನಾಕ್ಷಿ ನಟರಾಜನ್
Latest2 days ago

ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

Latest3 days ago

‘ದೇವೇಗೌಡರ ಮೇಲಿನ ಕಾಂಗ್ರೆಸ್ ಅನುಕಂಪ ಕೇವಲ ನಾಟಕ!’: ಮೈತ್ರಿ ಬಿರುಕಿನ ಯತ್ನಕ್ಕೆ HDK ತಿರುಗೇಟು

Latest3 days ago

H-1B ವೀಸಾ ಶುಲ್ಕಕ್ಕೆ ಕೋರ್ಟ್ ಬ್ರೇಕ್: ಟ್ರಂಪ್ ಸರ್ಕಾರದ ಆದೇಶ ಅಸಿಂಧು, ಭಾರತೀಯರು ನಿರಾಳ

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌