Site icon Vistara News

Hijab Row: ಹಿಜಾಬ್‌ ನಿಷೇಧದ ಬೆನ್ನಲ್ಲೇ ಜೀನ್ಸ್‌, ಟೀ-ಶರ್ಟ್‌ ಬ್ಯಾನ್‌- ಪ್ರಕಟಣೆ ಹೊರಡಿಸಿದ ಮುಂಬೈ ಕಾಲೇಜು

Hijab Row

ಮುಂಬೈ: ಹಿಜಾಬ್‌ ನಿಷೇಧ(Hijab Row)ದ ಬೆನ್ನಲ್ಲೇ ಮುಂಬೈ ಕಾಲೇಜು(Mumbai College) ಇದೀಗ ವಿದ್ಯಾರ್ಥಿಗಳು ಟೋರ್ನ್‌ ಜೀನ್ಸ್‌ ಮತ್ತು ಟೀ-ಶರ್ಟ್‌ ಧರಿಸುವುದನ್ನು ಬ್ಯಾನ್‌ ಮಾಡಿದ್ದು, ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿದೆ. ಚೆಂಬೂರ್‌ ಟ್ರಾಮ್ಬೇ ಎಜುಕೇಶನ್‌ ಸೊಸೈಟಿಯ ಎನ್‌ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಾಲೇಜಿನ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದ್ದು, ಕಾಲೇಜು ಕ್ಯಾಂಪಸ್‌ನಲ್ಲಿ ವಸ್ತ್ರಸಂಹಿತೆಯನ್ನು ತಪ್ಪದೇ ಪಾಲಿಸುವಂತೆ ಆದೇಶಿಸಿದೆ.

ವಿದ್ಯಾರ್ಥಿಗಳು ಔಪಚಾರಿಕ ಮತ್ತು ಯೋಗ್ಯವಾದ ಉಡುಗೆಯನ್ನು ಧರಿಸಬೇಕು. ಅವರು ಶರ್ಟ್‌-ಪ್ಯಾಂಟ್‌ ಧರಿಸಬಹುದು. ಹುಡುಗಿಯರು ಭಾರತೀಯ ಹಾಗೂ ಮಾರ್ಡನ್‌ ಡ್ರೆಸ್‌ ಧರಿಸಬಹುದು. ಆದರೆ ಆದರೆ ಒಂದು ಧರ್ಮ, ಜಾತಿಯನ್ನು ಪ್ರತಿನಿಧಿಸುವಂತಹ ಬಟ್ಟೆಯನ್ನು ಧರಿಸುವಂತಿಲ್ಲ. ಆದರೆ ಜೀನ್ಸ್‌, ಟಿ ಶರ್ಟ್‌, ಅಸಭ್ಯ ರೀತಿಯ ಉಡುಗೆಗಳನ್ನು ಧರಿಸಲು ಅವಕಾಶ ಇಲ್ಲ. ಹಿಜಾಬ್‌, ಬುರ್ಖಾ, ನಖಾಬ್, ಶಾಲು, ಟೋಪಿಗಳನ್ನು ತೆಗೆದೇ ಕ್ಯಾಂಪಸ್‌ ಒಳಗೆ ಬರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕದಂತೆ ಮಹಾರಾಷ್ಟ್ರದಲ್ಲೂ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್‌, ಬುರ್ಖಾ ಧರಿಸುವ ಕುರಿತು ವಿವಾದ (Hijab Row) ಭುಗಿಲೆದ್ದಿದೆ. ಇದರ ಬೆನ್ನಲ್ಲೇ, ಚೆಂಬುರ್‌ ಟ್ರೋಂಬೆ ಎಜುಕೇಷನ್‌ ಸೊಸೈಟಿಯ ಎನ್‌.ಜಿ.ಆಚಾರ್ಯ ಹಾಗೂ ಕೆ.ಕೆ. ಮರಾಠೆ ಕಾಲೇಜು ಹಿಜಾಬ್‌, ಬುರ್ಖಾ ನಿಷೇಧಿಸಿದ (Hijab Ban) ಮುಂಬೈ ಮೂಲದ ಕಾಲೇಜಿನ ಆದೇಶವನ್ನು ಬಾಂಬೆ ಹೈಕೋರ್ಟ್‌ (Bombay High Court) ಎತ್ತಿಹಿಡಿದಿತ್ತು. ಕಾಲೇಜಿನಲ್ಲಿ ಹಿಜಾಬ್‌, ಬುರ್ಖಾ ನಿಷೇಧಿಸಿದ ಕಾಲೇಜಿನ ಆಡಳಿತ ಮಂಡಳಿ ತೀರ್ಮಾನದ ವಿಷಯದಲ್ಲಿ ಮಧ್ಯಪ್ರವೇಶ ಇಲ್ಲ ಎಂಬುದಾಗಿ ಬಾಂಬೆ ಹೈಕೋರ್ಟ್‌ ಖಡಾಖಂಡಿತವಾಗಿ ಹೇಳಿತ್ತು.

ಮುಂಬೈನಲ್ಲಿರುವ ಚೆಂಬುರ್‌ ಟ್ರೋಂಬೆ ಎಜುಕೇಷನ್‌ ಸೊಸೈಟಿಯ ಎನ್‌.ಜಿ.ಆಚಾರ್ಯ ಹಾಗೂ ಕೆ.ಕೆ. ಮರಾಠೆ ಕಾಲೇಜಿನಲ್ಲಿ ಇತ್ತೀಚೆಗೆ ವಸ್ತ್ರಸಂಹಿತೆ ಜಾರಿಗೆ ತರಲಾಗಿದ್ದು, ಕಾಲೇಜು ಆವರಣದಲ್ಲಿ ಹಿಜಾಬ್‌, ನಕಾಬ್‌, ಬುರ್ಖಾ, ಶಾಲು, ಟೋಪಿ, ಬ್ಯಾಡ್ಜ್‌ಗಳನ್ನು ಧರಿಸಿಕೊಂಡು ಬರುವಂತಿಲ್ಲ ಎಂದು ಆದೇಶ ಹೊರಡಿಸಿದೆ. ಆದರೆ, ಕಾಲೇಜಿನಲ್ಲಿ ಪದವಿಯ ದ್ವಿತೀಯ ಹಾಗೂ ಅಂತಿಮ ವರ್ಷದ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ 9 ವಿದ್ಯಾರ್ಥಿನಿಯರು ಕಾಲೇಜಿನ ಆದೇಶ ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋಗಿದ್ದರು.

ವಿದ್ಯಾರ್ಥಿಗಳ ಪರ ಹಿರಿಯ ವಕೀಲ ಅಲ್ತಾಫ್‌ ಖಾನ್‌ ವಾದ ಮಂಡಿಸಿದರು. “ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸುವುದು ಅವರ ಆಯ್ಕೆ ಹಾಗೂ ವೈಯಕ್ತಿಕ ವಿಚಾರವಾಗಿದೆ. ಹೀಗೆ, ಹಿಜಾಬ್‌ ಧರಿಸುವುದನ್ನು ನಿಷೇಧಿಸುವ ಮೂಲಕ ಕಾಲೇಜಿನ ಆಡಳಿತ ಮಂಡಳಿಯು ಕಾನೂನುಬಾಹಿರ, ನಿರಂಕುಶ ಹಾಗೂ ಹಟಮಾರಿತನದ ನಿರ್ಧಾರ ತೆಗೆದುಕೊಂಡಿದೆ. ಇಸ್ಲಾಂನಲ್ಲಿ ಹಿಜಾಬ್‌ ಧರಿಸುವುದು ಅತ್ಯವಶ್ಯಕವಾಗಿದೆ. ಈ ಕುರಿತು ಕುರಾನ್‌ನಲ್ಲಿ ಕೂಡ ಉಲ್ಲೇಖಿಸಲಾಗಿದೆ” ಎಂದು ಕುರಾನ್‌ನ ಹಲವು ಅಧ್ಯಾಯಗಳನ್ನು ಕೋರ್ಟ್‌ಗೆ ನೀಡಿದರು.

ಕಾಲೇಜು ಆಡಳಿತ ಮಂಡಳಿ ಪರ ಅನಿಲ್‌ ಅತುರ್ಕರ್‌ ವಾದ ಮಂಡಿಸಿದರು. “ಕಾಲೇಜಿನಲ್ಲಿ ಯಾವುದೇ ಧರ್ಮ, ಜಾತಿ ಹಾಗೂ ಸಮುದಾಯಗಳನ್ನು ಗಮನದಲ್ಲಿಟ್ಟುಕೊಂಡು ವಸ್ತ್ರಸಂಹಿತೆ ತಂದಿಲ್ಲ. ಎಲ್ಲ ತೀರ್ಮಾನಗಳನ್ನು ಸಮಾನ ವಸ್ತ್ರಸಂಹಿತೆ ಜಾರಿಯಲ್ಲಿರಲಿ ಎಂದು ತೆಗೆದುಕೊಳ್ಳಲಾಗಿದೆ. ಇಸ್ಲಾಂ ವಿರೋಧಿಯಾಗಿ, ಯಾವುದೇ ಧರ್ಮದ ವಿರೋಧಿಯಾಗಿ ಈ ತೀರ್ಮಾನ ತೆಗೆದುಕೊಂಡಿಲ್ಲ” ಎಂದು ಹೇಳಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳಾದ ಎ.ಎಸ್.ಚಂದುರ್ಕರ್‌ ಹಾಗೂ ರಾಜೇಶ್‌ ಪಾಟೀಲ್‌ ಅವರಿದ್ದ ಪೀಠವು, ಕಾಲೇಜು ಆಡಳಿತ ಮಂಡಳಿಯ ತೀರ್ಮಾನದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ತಿಳಿಸಿತು.

ಇದನ್ನೂ ಓದಿ:Stampedes in India: ದೇಶದಲ್ಲಿ ಈ ಹಿಂದೆಯೂ ನಡೆದಿವೆ ಭಾರೀ ಕಾಲ್ತುಳಿತ ದುರಂತ; ಇಲ್ಲಿದೆ ಲಿಸ್ಟ್‌

Exit mobile version